Tag: ಬೇಡಿಕೆ

  • ಬೆಂಗ್ಳೂರಲ್ಲಿ ಪ್ರತಿಭಟನಾ ಕಾವು- ಸವಾರರಿಗೆ ತಟ್ಟಲಿದೆ ಟ್ರಾಫಿಕ್ ಸಮಸ್ಯೆ

    ಬೆಂಗ್ಳೂರಲ್ಲಿ ಪ್ರತಿಭಟನಾ ಕಾವು- ಸವಾರರಿಗೆ ತಟ್ಟಲಿದೆ ಟ್ರಾಫಿಕ್ ಸಮಸ್ಯೆ

    ಬೆಂಗಳೂರು: ಕನಿಷ್ಠ ವೇತನ, ಕಾಯಂ ನೌಕರಿ, ಪಿಂಚಣಿ ಸೌಲಭ್ಯ ಸೇರಿದಂತೆ ಹಲವು ಬೇಡಿಕೆಗಳನ್ನ ಮುಂದಿಟ್ಟುಕೊಂಡು ಬಿಸಿಯೂಟ ಕಾರ್ಯಕರ್ತರು ಇಂದು ಮತ್ತು ನಾಳೆ ಪ್ರತಿಭಟನೆ ಮಾಡಲು ಸಜ್ಜಾಗಿದ್ದಾರೆ.

    ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಿಸಿಯೂಟ ಕಾರ್ಯಕರ್ತರು ಆಗಮಿಸಿದ್ದಾರೆ. ಸಿಟಿ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ರ‍್ಯಾಲಿ ಮಾಡುವ ಮೂಲಕ ಪ್ರತಿಭಟನೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಪ್ರತಿಭಟನಾ ರ‍್ಯಾಲಿ ಹಿನ್ನೆಲೆಯಲ್ಲಿ ಸಿಟಿ ರೈಲ್ವೆ ನಿಲ್ದಾಣ ಮುಖ್ಯ ರಸ್ತೆ ಹಾಗೂ ನೃಪತುಂಗ ರೋಡ್ ಸಂಪೂರ್ಣವಾಗಿ ವಾಹನ ಸವಾರಕ್ಕೆ ಬಂದ್ ಆಗಲಿದೆ.

    ಏಕಕಾಲದಲ್ಲಿ ಸಾವಿರಾರು ಕೆಂಪು ಮಹಿಳೆಯರು ರಸ್ತೆಯಲ್ಲಿ ಮೆರವಣಿಗೆ ಮಾಡುವುದರಿಂದ ಮೆಜೆಸ್ಟಿಕ್, ಕೆಜಿ ರೋಡ್, ನೃಪತುಂಗ ರೋಡ್, ಶೇಷಾದ್ರಿ ರೋಡ್ ಸೇರಿದಂತೆ ಸುತ್ತಮುತ್ತಲಿನ ರೋಡ್‍ಗಳು ಜಾಮ್ ಆಗೋ ಸಾಧ್ಯತೆಗಳಿವೆ. ಇದರಿಂದ ವಾಹನ ಸವಾರರು ಬೇರೆ ಮಾರ್ಗ ಬಳಸುವುದು ಉತ್ತಮ.

  • ಗಮನಿಸಿ: ಎರಡು ದಿನ ಬ್ಯಾಂಕ್ ಸೇವೆ ಸಿಗಲ್ಲ!

    ಗಮನಿಸಿ: ಎರಡು ದಿನ ಬ್ಯಾಂಕ್ ಸೇವೆ ಸಿಗಲ್ಲ!

    ಬೆಂಗಳೂರು: ಜನವರಿ 31 ರಿಂದ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಬ್ಯಾಂಕ್ ಒಕ್ಕೂಟಗಳು ಕರೆ ನೀಡಿವೆ. ಹೀಗಾಗಿ ಜನವರಿ 31 ಹಾಗೂ ಫೆಬ್ರವರಿ 1 ರಂದು ಬ್ಯಾಂಕ್ ಸೇವೆ ಜನರಿಗೆ ಲಭ್ಯವಿರಲ್ಲ.

    ಒಂಬತ್ತು ಕಾರ್ಮಿಕ ಸಂಘಟನೆಗಳನ್ನು ಪ್ರತಿನಿಧಿಸುವ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಈ ಮುಷ್ಕರಕ್ಕೆ ಕರೆ ನೀಡಿದೆ. ವೇತನ ಪರಿಷ್ಕರಣೆ, ಐದು ದಿನ ಬ್ಯಾಂಕಿಂಗ್ ಸೇವೆ ಮತ್ತು ಹೊಸ ಪಿಂಚಣಿ ವ್ಯವಸ್ಥೆ ರದ್ದು ಸೇರಿದಂತೆ ಸುಮಾರು 12 ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.

    ಒಂದು ವೇಳೆ ಕೇಂದ್ರ ಸರ್ಕಾರ ಸಕಾರತ್ಮಾಕವಾಗಿ ಸ್ಪಂದಿಸದೇ ಇದ್ದರೆ, ಏಪ್ರಿಲ್ 1 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವ ಎಚ್ಚರಿಕೆಯನ್ನು ಭಾರತೀಯ ಬ್ಯಾಂಕ್ ಅಸೋಸಿಯೇಷನ್ ಮುಖ್ಯಸ್ಥರು, ಹಣಕಾಸು ಸೇವಾ ಇಲಾಖೆಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಆಯೋಗದ ಮುಖ್ಯ ಆಯುಕ್ತರಿಗೆ ಪತ್ರದ ಮೂಲಕ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

  • ಚಳಿಗಾಲದಲ್ಲೂ ಹೆಚ್ಚಾಯ್ತು ಬೇಡಿಕೆ – ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಮೇಲೆ ಒತ್ತಡ

    ಚಳಿಗಾಲದಲ್ಲೂ ಹೆಚ್ಚಾಯ್ತು ಬೇಡಿಕೆ – ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಮೇಲೆ ಒತ್ತಡ

    ರಾಯಚೂರು: ಸಾಮಾನ್ಯವಾಗಿ ಚಳಿಗಾಲದಲ್ಲಿ ವಿದ್ಯುತ್ ಬೇಡಿಕೆ ಕಮ್ಮಿ ಇರುತ್ತದೆ. ಆದರೆ ಈ ವರ್ಷ ಬೇಡಿಕೆ ಅಧಿಕವಾಗಿದೆ. ಹೀಗಾಗಿ ರಾಜ್ಯದ ಶಾಖೊತ್ಪನ್ನ ವಿದ್ಯುತ್ ಕೇಂದ್ರಗಳ ಮೇಲೆ ಹೆಚ್ಚು ವಿದ್ಯುತ್ ಉತ್ಪಾದನೆಯ ಒತ್ತಡ ಬಿದ್ದಿದೆ.

    ರಾಜ್ಯಕ್ಕೆ ಶೇಕಡಾ 40 ರಷ್ಟು ವಿದ್ಯುತ್ ನೀಡುವ ಪ್ರಮುಖ ಶಾಖೋತ್ಪನ್ನ ವಿದ್ಯುತ್ ಕೇಂದ್ರ ರಾಯಚೂರಿನ ಆರ್.ಟಿ.ಪಿ.ಎಸ್ (ರಾಯಚೂರು ಥರ್ಮಲ್ ಪವರ್ ಸ್ಟೇಷನ್) ಮೇಲೆ ಹೆಚ್ಚಿನ ಒತ್ತಡವಿದೆ. ಹೀಗಾಗಿ ಆರ್.ಟಿ.ಪಿ.ಎಸ್ ನ 8 ಘಟಕಗಳಲ್ಲಿ 7 ಘಟಕಗಳು ನಿರಂತರವಾಗಿ ದಾಖಲೆ ಪ್ರಮಾಣದ ವಿದ್ಯುತ್ ಉತ್ಪಾದನೆಗೆ ಮುಂದಾಗಿವೆ. ಕೃಷಿ, ನೀರಾವರಿ ಪಂಪ್ ಸೆಟ್ ಸೇರಿದಂತೆ ಇನ್ನಿತರ ಕಾರಣಗಳಿಗೆ ಹೆಚ್ಚು ವಿದ್ಯುತ್ ಬಳಕೆಯಿರುವುದರಿಂದ ಬೇಡಿಕೆಯೂ ಹೆಚ್ಚಾಗಿದೆ. ಹೀಗಾಗಿ ಮಳೆಗಾಲ, ಚಳಿಗಾಲದಲ್ಲಿ ವಾರ್ಷಿಕ ನಿರ್ವಹಣೆಗೆ ಒಳಪಡಬೇಕಾದ ಘಟಕಗಳು ನಿರಂತರವಾಗಿ ವಿದ್ಯುತ್ ಉತ್ಪಾದಿಸುತ್ತಿವೆ.

    ಆರ್.ಟಿ.ಪಿ.ಎಸ್ ನ 8 ಘಟಕಗಳಿಗೆ ಒಟ್ಟು 1,ಸ720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮಥ್ರ್ಯವಿದ್ದು, ಈಗ 7 ಘಟಕಗಳಿಂದ 1,083 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. 1,700 ಮೆಗಾ ವ್ಯಾಟ್ ಸಾಮಥ್ರ್ಯದ ಬಳ್ಳಾರಿ ಬಿಟಿಪಿಎಸ್ ನಲ್ಲಿ 453 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ.

    ರಾಜ್ಯದಲ್ಲಿ ಒಟ್ಟು 8,323 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಕಳೆದ ಎರಡು ದಿನಗಳ ಹಿಂದೆ 10,121 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇತ್ತು. ಈ ವರ್ಷ ಉತ್ತಮ ಮಳೆಯಾಗಿದ್ದರಿಂದ ಈ ಚಳಿಗಾಲದಲ್ಲಿ ಬೇಡಿಕೆ ಕಡಿಮೆ ಇರುತ್ತದೆ ಎನ್ನಲಾಗಿತ್ತು. ಆದರೆ ಚಳಿಗಾಲದಲ್ಲಿಯೇ ಅಧಿಕ ಬೇಡಿಕೆ ಇದೆ. ರಾಜ್ಯದ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಿಗೆ ಸದ್ಯ ಕಲ್ಲಿದ್ದಲು ಕೊರತೆಯಿಲ್ಲದ ಕಾರಣ ನಿರಂತರ ವಿದ್ಯುತ್ ಉತ್ಪಾದನೆ ಯಾವ ತೊಡಕಿಲ್ಲದೆ ನಡೆದಿದೆ.

  • ತಗ್ಗಿದ ವಿದ್ಯುತ್ ಬೇಡಿಕೆ- ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಐದು ಘಟಕಗಳ ಕಾರ್ಯ ಸ್ಥಗಿತ

    ತಗ್ಗಿದ ವಿದ್ಯುತ್ ಬೇಡಿಕೆ- ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಐದು ಘಟಕಗಳ ಕಾರ್ಯ ಸ್ಥಗಿತ

    ರಾಯಚೂರು: ರಾಜ್ಯದಲ್ಲಿ ಭಾರೀ ಮಳೆ ಹಿನ್ನೆಲೆ ವಿದ್ಯುತ್ ಬೇಡಿಕೆಯಲ್ಲಿ ಇಳಿಕೆಯಾಗಿದ್ದು ರಾಯಚೂರಿನ ಶಕ್ತಿ ನಗರದಲ್ಲಿರುವ ಆರ್‍ ಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಐದು ಘಟಕಗಳು ಕಾರ್ಯ ಸ್ಥಗಿತಗೊಳಿಸಿವೆ.

    ವಿದ್ಯುತ್ ಕೇಂದ್ರದ ಒಟ್ಟು ಎಂಟು ಘಟಕಗಳಲ್ಲಿ ಐದು ಸ್ಥಗಿತವಾಗಿವೆ. ಬೇಡಿಕೆ ಇಳಿಕೆ ಹಿನ್ನೆಲೆ ವಿದ್ಯುತ್ ಉತ್ಪಾದನೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಮಾಡಲಾಗಿದೆ. 1,720 ಮೆಗಾ ವ್ಯಾಟ್ ಸಾಮರ್ಥ್ಯದ ಆರ್ ಟಿಪಿಎಸ್ ವಿದ್ಯುತ್ ಕೇಂದ್ರದಿಂದ ಕೇವಲ 399 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

    ಬಳ್ಳಾರಿಯ ಬಿಟಿಪಿಎಸ್ ಸಹ ವಿದ್ಯುತ್ ಉತ್ಪಾದನೆಯಲ್ಲಿ ಕಡಿತಗೊಳಿಸಿದ್ದು, 1,700 ಮೆಗಾ ವ್ಯಾಟ್ ಸಾಮರ್ಥ್ಯದ ಬಿಟಿಪಿಎಸ್ ಕೇವಲ 243 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದೆ. ಶರಾವತಿ, ನಾಗಜರಿ ಸೇರಿದಂತೆ ಜಲ ವಿದ್ಯುತ್ ಸ್ಥಾವರಗಳು ಹೆಚ್ಚು ಪ್ರಮಾಣದ ವಿದ್ಯುತ್ ಉತ್ಪಾದನೆ ಮಾಡುತ್ತಿರುವುದರಿಂದ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಮೇಲೆ ಒತ್ತಡ ಕಡಿಮೆಯಾಗಿದೆ. ರಾಜ್ಯದಲ್ಲಿ ಒಟ್ಟು 6,504 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆಯಿದ್ದು ಎಲ್ಲ ಮೂಲಗಳಿಂದ 6,503 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

  • ಯೂತ್‍ಗೆ ಏನಾದ್ರು ಮಾಡಿ ಅಪ್ಪಾ- ಸಚಿವ ಕೋಟ ಮಕ್ಕಳಿಂದ ಫಸ್ಟ್ ಬೇಡಿಕೆ

    ಯೂತ್‍ಗೆ ಏನಾದ್ರು ಮಾಡಿ ಅಪ್ಪಾ- ಸಚಿವ ಕೋಟ ಮಕ್ಕಳಿಂದ ಫಸ್ಟ್ ಬೇಡಿಕೆ

    ಉಡುಪಿ: ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಗೆ ಮಿನಿಸ್ಟರ್ ಪಟ್ಟ ಒಲಿದಿದ್ದು, ಇಂದು ಬೆಳಗ್ಗೆ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೆ ಮಿನಿಸ್ಟರ್ ಕೋಟ ಅವರ ಮಕ್ಕಳು ಅಪ್ಪನಲ್ಲಿ ಮೊದಲ ದಿನವೇ ತಮ್ಮ ಮೊದಲ ಬೇಡಿಕೆ ಒಟ್ಟಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಪತ್ನಿ ಶಾಂತ, ರಾತ್ರಿ 11.30ಕ್ಕೆ ಸಿಎಂ ಯಡಿಯೂರಪ್ಪ ಅವರು ಫೋನ್ ಮಾಡಿದ್ದರು. ಆಗ ನಮಗೆ ವಿಷಯ ಗೊತ್ತಾಗಿದೆ. ಕಳೆದ ಬಾರಿ ಮಾಡಿದಷ್ಟೇ ಕೆಲಸ ಈ ಬಾರಿಯೂ ಮಾಡಬೇಕು. ಕಷ್ಟದಲ್ಲಿರುವ ಜನರ ಸಮಸ್ಯೆ ಬಗೆಹರಿಸಿ, ಜನರ ಬೇಡಿಕೆ ಈಡೇರಿಸಲಿ ಎಂದು ಹಾರೈಸಿದರು.

    ಮಕ್ಕಳಾದ ಶ್ರುತಿ ಮತ್ತು ಸ್ವಾತಿ ಖುಷಿ ವ್ಯಕ್ತಪಡಿಸಿದ್ದು, ಅಪ್ಪ ಯೂತ್‍ಗೆ ಏನಾದ್ರು ಮಾಡಬೇಕು. ಯುವಕರ ಶಿಕ್ಷಣಕ್ಕೆ ಸಹಾಯ ಆಗುವ ಕೆಲಸ ಮಾಡಲಿ. ಎಜುಕೇಶನ್‍ಗೆ ಸಂಬಂಧಪಟ್ಟ ಹಲವು ಕೆಲಸ ಮಾಡಲಿ ಎಂದು ಅಪ್ಪನಲ್ಲಿ ಬೇಡಿಕೆ ಇಟ್ಟಿದ್ದಾರೆ.

  • ರಾಂಧವನಿಗೆ ಪರಭಾಷೆಗಳಲ್ಲಿಯೂ ಬೇಡಿಕೆ!

    ರಾಂಧವನಿಗೆ ಪರಭಾಷೆಗಳಲ್ಲಿಯೂ ಬೇಡಿಕೆ!

    ಪೌರಾಣಿಕ ಹಾಗೂ ಆಧುನಿಕ ಕಥೆಗಳ ಮಹಾಸಂಗಮದ ಸುಳಿವಿನೊಂದಿಗೇ ಭರ್ಜರಿ ಟಾಕ್ ಕ್ರಿಯೇಟ್ ಮಾಡಿರೋ ಚಿತ್ರ ರಾಂಧವ. ಬಿಗ್ ಬಾಸ್ ಭುವನ್ ಪೊನ್ನಣ್ಣ ನಾಯಕನಾಗಿ ನಟಿಸಿರೋ ಈ ಚಿತ್ರ ಇದೇ ಆಗಸ್ಟ್ ಹದಿನೈದರಂದು ಬಿಡುಗಡೆಯಾಗುತ್ತಿದೆ. ಕನ್ನಡದ ಪ್ರೇಕ್ಷಕರಂತೂ ರಾಂಧವನ ಜೊತೆಗೇ ಸ್ವಾತಂತ್ರ್ಯದ ಸಂಭ್ರಮಾಚರಣೆ ಮಾಡಲು ನಿರ್ಧರಿಸಿದ್ದಾರೆ. ಇದೇ ಹೊತ್ತಿನಲ್ಲಿ ಪರಭಾಷೆಗಳಿಂದ ಡಬ್ಬಿಂಗ್ ಮತ್ತು ರೀಮೇಕ್ ಹಕ್ಕುಗಳಿಗಾಗಿ ಭಾರೀ ಬೇಡಿಕೆಯೂ ಶುರುವಾಗಿದೆ.

    ಕನ್ನಡದಲ್ಲಿ ಮಾತ್ರವಲ್ಲ, ಪರಭಾಷಾ ಚಿತ್ರರಂಗಗಳಲ್ಲಿಯೂ ಪೌರಾಣಿಕ ಕಥಾ ಹಂದರದ ಹತ್ತಿರ ಹೋಗೋ ಸಾಹಸ ಮಾಡುವವರು ಕಡಿಮೆ. ಆದರೆ ಅಂಥಾ ಚಿತ್ರಗಳಿಗಾಗಿ ಪ್ರೇಕ್ಷಕರು ಮಾತ್ರ ಸದಾ ಹಂಬಲಿಸುತ್ತಿರುತ್ತಾರೆ. ಈ ಕಾರಣದಿಂದಲೇ ರಾಂಧವ ಕನ್ನಡದ ಗಡಿ ದಾಟಿ ಬೇರೆ ಭಾಷೆಗಳಲ್ಲಿಯೂ ಹವಾ ಸೃಷ್ಟಿಸಿದೆ. ಈಗಾಗಲೇ ಇದರಲ್ಲಿ ಭುವನ್ ಪೊನ್ನಣ್ಣ ನಿರ್ವಹಿಸಿರೋ ಪಾತ್ರದ ಸುಳಿವು, ದೃಷ್ಯ ಶ್ರೀಮಂತಿಕೆ ಕಂಡು ಪರಭಾಷಾ ಚಿತ್ರರಂಗದ ಮಂದಿ ಬೆರಗಾಗಿದ್ದಾರೆ. ಬೇರೆ ಬೇರೆ ಬಾಷೆಗಳಿಂದ ನಿರ್ಮಾಪಕ ಸನತ್ ಕುಮಾರ್ ಅವರಿಗೆ ಕರೆಗಳು ಬರುತ್ತಿವೆ. ಆದರೆ ಸದ್ಯಕ್ಕವರು ಯಾವುದಕ್ಕೂ ಪ್ರತಿಕ್ರಿಯಿಸುತ್ತಿಲ್ಲ.

    ರಾಂಧವ ಕನ್ನಡದ ಹೆಮ್ಮೆಯ ಚಿತ್ರವಾಗಿ ದಾಖಲಾಗುತ್ತದೆಂಬ ಲಕ್ಷಣ ಆರಂಭದಿಂದಲೂ ಕಾಣಿಸುತ್ತಿದೆ. ಇದೀಗ ಪರಭಾಷೆಗಳಿಂದ ಕೇಳಿ ಬರುತ್ತಿರುವ ಡಬ್ಬಿಂಗ್ ಮತ್ತು ರೀಮೇಕ್ ರೈಟ್ಸ್ ಗಾಗಿನ ಬೇಡಿಕೆ ಅದನ್ನು ನಿಜವಾಗಿಸುವ ಲಕ್ಷಣದಂತೆಯೂ ಕಾಣಿಸುತ್ತಿದೆ. ರಾಂಧವನನ್ನು ಹೊಸಬರೇ ಸೇರಿ ರೂಪಿಸಿದ್ದರೂ ಅದರ ಛಾಯೆ ಈವರೆಗಿನ ಕೆಲಸ ಕಾರ್ಯಗಳಲ್ಲಿ ಎಲ್ಲಿಯೂ ಕಾಣಿಸಿಲ್ಲ. ಅದೆಷ್ಟೋ ವರ್ಷಗಳಿಂದ ಚಿತ್ರರಂಗದಲ್ಲಿ ಪಳಗಿದವರಂತೆಯೇ ಸುನಿಲ್ ಆಚಾರ್ಯ ಈ ಸಿನಿಮಾವನ್ನು ಕಟ್ಟಿ ಕೊಟ್ಟಿದ್ದಾರೆ. ಅಂತೂ ರೀಮೇಕ್ ಮತ್ತು ಡಬ್ಬಿಂಗ್ ರೈಟ್ಸ್ ಗಳು ದೊಡ್ಡ ಮೊತ್ತಕ್ಕೆ ಮಾರಾಟವಾಗೋ ಸಾಧ್ಯತೆಗಳಿವೆ.

  • ಸರ್ಕಾರ ಯಾವುದೇ ಇರಲಿ, ನಮ್ಮ ಬೇಡಿಕೆ ಪೂರೈಕೆ ಆಗ್ಬೇಕು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ

    ಸರ್ಕಾರ ಯಾವುದೇ ಇರಲಿ, ನಮ್ಮ ಬೇಡಿಕೆ ಪೂರೈಕೆ ಆಗ್ಬೇಕು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ

    ದಾವಣಗೆರೆ: ಸರ್ಕಾರ ಯಾವುದೇ ಇರಲಿ. ನಮ್ಮ ಬೇಡಿಕೆ ಎರಡು ತಿಂಗಳಲ್ಲಿ ಪೂರೈಕೆ ಆಗಬೇಕು ಎಂದು ಮತ್ತೆ ಸರ್ಕಾರದ ವಿರುದ್ಧ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಗುಡುಗಿದ್ದಾರೆ.

    ಇಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಮ್ಮ ಬೇಡಿಕೆಯನ್ನು ನೆರವೇರಿಸುವಲ್ಲಿ ವಿಳಂಬವಾದರೆ ನಮ್ಮ 15 ಶಾಸಕರು ಪಕ್ಷಾತೀತವಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

    ಕೆಲ ದಿನಗಳ ಹಿಂದೆ ಪರಿಶಿಷ್ಟ ಪಂಗಡಕ್ಕೆ ಈಗ ಇರುವ ಶೇ 3.5 ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರದ ಮಾದರಿಯಲ್ಲಿ ಶೇಕಡಾ 7.5ಕ್ಕೆ ಏರಿಸುವಂತೆ ಆಗ್ರಹಿಸಿ ಸ್ವಾಮೀಜಿ ಪಾದಯಾತ್ರೆ ಮಾಡಿದ್ದರು. ಅ ಸಮಯದಲ್ಲಿ ರಾಜ್ಯ ಸರ್ಕಾರ ಸ್ವಾಮೀಜಿ ಅವರ ಬಳಿ ಎರಡು ತಿಂಗಳು ಗಡುವು ಕೇಳಿತ್ತು. ಆದರೆ ಈಗ ಶಾಸಕರ ರಾಜೀನಾಮೆ ಇಂದ ಸರ್ಕಾರವೇ ಪತನವಾಗುತ್ತಿದೆ.

    ಈ ಸಮಯದಲ್ಲಿ ಸರ್ಕಾರ ಯಾವುದೇ ಇರಲಿ. ನಮ್ಮ ಬೇಡಿಕೆ ಪೂರೈಕೆ ಆಗಬೇಕು. ವಿಳಂಬವಾದರೆ ಮತ್ತೆ ಹೋರಾಟ ಮಾಡುತ್ತೇವೆ. ಇಲ್ಲದಿದ್ದರೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‍ನಲ್ಲಿ ಇರುವ ವಾಲ್ಮೀಕಿ ಸಮಾಜದ 15 ಜನ ಶಾಸಕರು ರಾಜೀನಾಮೆ ಕೊಡುವುದು ಶತಸಿದ್ಧ ಎಂದು ಎಚ್ಚರಿಕೆ ನೀಡಿದ್ದಾರೆ.

  • ಹೊಸತೊಡಕು ಆಚರಿಸಲು ಖುಷಿಯಲ್ಲಿದ್ದ ಜನರಿಗೆ ಶಾಕ್

    ಹೊಸತೊಡಕು ಆಚರಿಸಲು ಖುಷಿಯಲ್ಲಿದ್ದ ಜನರಿಗೆ ಶಾಕ್

    ಬೆಂಗಳೂರು/ಮಂಡ್ಯ: ಶನಿವಾರ, ಒಬ್ಬಟ್ಟು ತಿಂದು ಭರ್ಜರಿಯಾಗಿಯೇ ಯುಗಾದಿ ಹಬ್ಬ ಆಚರಿಸಿದ್ದ ಸಿಲಿಕಾನ್ ಸಿಟಿ ಜನರು ಇಂದು ಹೊಸತೊಡಕು ಆಚರಿಸಲು ಸಜ್ಜಾಗಿದ್ದಾರೆ. ಆದರೆ ಹಬ್ಬದ ಖುಷಿಯಲ್ಲಿದ್ದ ಜನರಿಗೆ ನಾನ್ ವೆಜ್ ಖಾದ್ಯಗಳ ಬೆಲೆ ಏರಿಕೆಯ ಕಹಿ ಅನುಭವವಾಗುತ್ತಿದೆ.

    ಇಂದು ಮಾರ್ಕೆಟ್ ಹೋಗಿ ಚಿಕನ್, ಮಟನ್ ರೇಟ್ ಕೇಳಿದರೆ ಜನರು ಶಾಕ್ ಆಗುತ್ತಾರೆ. ಏಕೆಂದರೆ ಚಿಕನ್ ಒಂದು ಕೆಜಿಗೆ 250 ರೂ. ಆಗಿದೆ. ಅಲ್ಲದೆ ಮಟನ್ ಒಂದು ಕೆಜಿಗೆ 550 ಆಗಿದೆ.

    ಹೀಗಾಗಿ ಮಟನ್ ಬಿರಿಯಾನಿ, ಚಿಕನ್ ಬಿರಿಯಾನಿ, ಚಿಲ್ಲಿ ಚಿಕನ್, ಪೆಪ್ಪರ್ ಚಿಕನ್, ಫಿಶ್ ಕರಿ, ಫಿಶ್ ಫ್ರೈ, ತಲೆ ಕಾಲ್ ಮಾಂಸ, ಕಾಲ್ ಸೂಪ್ ಹೇಗಪ್ಪಾ ಮಾಡುವುದು ಎಂದು ನಾನ್ ವೆಜ್ ಪ್ರಿಯರು ಯೋಚನೆ ಮಾಡತ್ತಿದ್ದರೆ, ಇತ್ತ ವ್ಯಾಪಾರಿಗಳು ಫುಲ್ ಖುಷಿಯಾಗಿದ್ದಾರೆ. ಇದನ್ನೂ ಓದಿ: ಯುಗಾದಿ ನೆಪದಲ್ಲಿ ಮತದಾರರಿಗೆ ಭರ್ಜರಿ ಗಿಫ್ಟ್-‘ಹೊಸತೊಡಕು’ ರೂಪದಲ್ಲಿ ಮಟನ್-ಚಿಕನ್ ಭಾಗ್ಯ!

    ಮಂಡ್ಯದಲ್ಲೂ ಇಂದು ಮಟನ್‍ಗೆ ಭಾರೀ ಬೇಡಿಕೆಯಾಗಿದೆ. ಯುಗಾದಿ ಹಬ್ಬದ ಮಾಂಸದಡುಗೆಗೆ ಮಂಡ್ಯದಲ್ಲಿ ಭರ್ಜರಿ ಬೇಡಿಕೆಯಿದೆ. ಇಷ್ಟು ದಿನ ಲೋಕಸಭಾ ಚುನಾವಣಾ ಕಾವಿನಿಂದ ರಂಗೇರಿದ್ದ ಮಂಡ್ಯ, ಶನಿವಾರ ಯುಗಾದಿ ಹಬ್ಬ ಮುಗಿಸಿ ಇಂದು ವರ್ಷ ತೊಡಕಿನ ಖುಷಿಯಲ್ಲಿ ಇದ್ದಾರೆ.

    ಹಬ್ಬಕ್ಕೆ ಮಾಂಸದಡುಗೆ ಮಾಡಲು ಮಂಡ್ಯದ ಎಲ್ಲ ಮಾಂಸದಂಗಡಿಗಳ ಮುಂದೆ ಜನರು ಕ್ಯೂ ನಿಂತಿದ್ದಾರೆ. ಜನರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನೂರಾರು ಜನ ನಿಂತು ಮಟನ್ ಖರೀದಿಸುತ್ತಿದ್ದಾರೆ. ಸದ್ಯ ಜನರು ಚುನಾವಣೆಯ ಯೋಚನೆ ಬಿಟ್ಟು ಮಾಂಸದಡುಗೆ ತಯಾರಿಯಲ್ಲಿ ಬ್ಯುಸಿ ಆಗಿದ್ದಾರೆ.

  • ವಿರೋಧಿಗಳ ನಾಶಕ್ಕೆ ಭಕ್ತರ ಬೇಡಿಕೆ – ಯಲಗೂರು ದೇಗುಲದ ಹುಂಡಿಯಲ್ಲಿತ್ತು ವಿಚಿತ್ರ ಪತ್ರ

    ವಿರೋಧಿಗಳ ನಾಶಕ್ಕೆ ಭಕ್ತರ ಬೇಡಿಕೆ – ಯಲಗೂರು ದೇಗುಲದ ಹುಂಡಿಯಲ್ಲಿತ್ತು ವಿಚಿತ್ರ ಪತ್ರ

    ವಿಜಯಪುರ: ದೇವರ ಹುಂಡಿಯಲ್ಲಿ ಹಣದ ಬದಲು ವಿರೋಧಿಗಳ ನಾಶಕ್ಕೆ ಭಕ್ತರು ಬೇಡಿಕೆ ಪತ್ರ ಹಾಕಿರುವ ವಿಚಿತ್ರ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರಿನಲ್ಲಿ ನಡೆದಿದೆ.

    ಶ್ರೀಕ್ಷೇತ್ರ ಯಲಗೂರ ದೇವಸ್ಥಾನದ ಕಾಣಿಕೆ ಹುಂಡಿಗಳಲ್ಲಿ ಚಿತ್ರವಿಚಿತ್ರ ಬೇಡಿಕೆಗಳನ್ನು ಬರೆದು ಭಕ್ತರು ಹಾಕಿದ್ದಾರೆ. ಹುಂಡಿ ತೆಗೆದು ಎಣಿಕೆ ಮಾಡುವ ವೇಳೆ ಪತ್ರ ಕಂಡು ಕಂದಾಯ ಅಧಿಕಾರಿಗಳು ಹಾಗೂ ದೇವಸ್ಥಾನ ಕಮಿಟಿ ಬೆಚ್ಚಿಬಿದ್ದಿದೆ. ಕಂದಾಯ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿ ಸೇರಿದಂತೆ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಮತ್ತು ಸದಸ್ಯರಿಂದ ಎಣಿಕೆ ಕಾರ್ಯ ನಡೆದಿದೆ.

    ಪತ್ರದಲ್ಲೇನಿದೆ..?
    ನನಗೆ ಗಂಡು ಮಗು ಹುಟ್ಟಲಿ ತಂದೆ. ನಿನ್ನ ಸನ್ನಿಧಿಗೆ ಬಂದು ಜವಳದ ಕಾರ್ಯ ಮಾಡುವೆನು ಎಂದು ಭಕ್ತರೊಬ್ಬರು ಪತ್ರ ಬರೆದ್ರೆ, ನಮಗೆ ಕೆಲವರು ಶತ್ರುಗಳಾಗಿ ಕಾಡುತ್ತಿದ್ದಾರೆ ಅವರಿಗೆ ಕಣಿಯಾಗಿ ಕಾಡಬೇಕಿದೆ. ಅವರು ನಮ್ಮ ತಂಟೆಗೆ ಬರಬಾರದು. ನಮ್ಮ ಕಟ್ಟೆ ಮೇಲೆ ಸಾಮಾನುಗಳನ್ನು ಇಡಬಾರದು. ಹನುಮಂತೇಶ ನೀನು ಅವರಿಗೆ ಕಾಡಬೇಕು ಬೇಡಿಕೆಯಿಟ್ಟು ಪತ್ರದಲ್ಲಿ ನಾಲ್ವರ ಹೆಸರನ್ನು ಉಲ್ಲೇಖಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗಮನಿಸಿ, ಎರಡು ದಿನ ಸ್ತಬ್ಧವಾಗಲಿದೆ ಕರುನಾಡು..!

    ಗಮನಿಸಿ, ಎರಡು ದಿನ ಸ್ತಬ್ಧವಾಗಲಿದೆ ಕರುನಾಡು..!

    ಬೆಂಗಳೂರು: ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ ವಿರೋಧಿಸಿ ಸಾರಿಗೆ ಇಲಾಖೆ ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಕೇಂದ್ರ ಸರ್ಕಾರದ ವಿರುದ್ಧ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆಕೊಟ್ಟಿದೆ.

    ಎಐಟಿಯುಸಿ, ಸಿಐಟಿಯು, ಐಎನ್‍ಟಿಯುಸಿ, ಎಲ್‍ಪಿಎಫ್ ಕಾರ್ಮಿಕ ಸಂಘಟನೆಗಳು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ಕೊಟ್ಟಿದ್ದು, 12 ಬೇಡಿಕೆ ಮುಂದಿಟ್ಟು ಕಾರ್ಮಿಕ ಸಂಘಟನೆಗಳು ಜನವರಿ 8 ಮತ್ತು 9 ರಂದು ಬೀದಿಗಿಳಿಯಲಿವೆ. ಬಿಎಂಟಿಸಿ ಹಾಗೂ ಕೆಎಸ್‍ಆರ್ ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಬಸ್‍ ಗಳು ಸ್ತಬ್ಧವಾಗಲಿದೆ ಅಂತ ಸಿಐಟಿಯು ಉಪಾಧ್ಯಕ್ಷ ಅನಂತ್ ಸುಬ್ಬರಾವ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಮಂಗಳವಾರ ಬೆಳಗ್ಗೆ ಆರು ಗಂಟೆಯಿಂದ ಬುಧವಾರ ಸಂಜೆ ಐದು ಗಂಟೆಯವರೆಗೂ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಯಲಿದ್ದು, ಈಗಾಗಲೇ ಮೋದಿ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವೂ ಬೆಂಬಲ ಕೊಟ್ಟಿದೆ ಎಂದು ತಿಳಿದುಬಂದಿದೆ.

    ಬಂದ್ ಯಾಕೆ?:
    ಮೋಟಾರು ವಾಹನ ತಿದ್ದುಪಡಿ ಮಸೂದೆ -2017ರನ್ನು ಹಿಂಪಡೆಯಲು, ಸಾರಿಗೆ ಉದ್ದಿಮೆಯನ್ನ ರಕ್ಷಿಸಲು ಮತ್ತು ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆಯನ್ನು ಜಾರಿಗೊಳಿಸಲು ಬಂದ್‍ಗೆ ಕರೆ ಮಾಡಲಾಗಿದೆ.

     ಮುಷ್ಕರ ದಿನ ಏನಿರಲ್ಲ:
    ಮಂಗಳವಾರ ಮತ್ತು ಬುಧವಾರ ಬಿಎಂಟಿಸಿ, ಕೆಎಸ್‍ಆರ್ ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಬಸ್ ಇರಲ್ಲ. ಆಟೋ ಸಂಘಟನೆಯಿಂದ ಬೆಂಬಲ ಇರುವುದರಿಂದ ಆಟೋ ಕೂಡ ಸಿಗಲ್ಲ. ಇತ್ತ ಓಲಾ ಮತ್ತು ಊಬರ್ ಕ್ಯಾಬ್‍ಗಳು ಸಿಗುವುದಿಲ್ಲ. ಮುಷ್ಕರದಲ್ಲಿ ಬ್ಯಾಂಕ್ ನೌಕರರು ಕೂಡ ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ ಬ್ಯಾಂಕ್ ಸೇವೆಯಲ್ಲೂ ವ್ಯತ್ಯಯವಾಗುವ ಸಾಧ್ಯತೆಗಳು ಇವೆ. ಎಪಿಎಂಸಿ ಲಾರಿ ಸಿಬ್ಬಂದಿ ಪಾಲ್ಗೊಳ್ಳುವುದರಿಂದ ಎಪಿಎಂಸಿ ಸ್ತಬ್ಧಗೊಳ್ಳುವ ಸಾಧ್ಯತೆ ಇದೆ.

    ಏನಿರುತ್ತೆ?:
    ಆಸ್ಪತ್ರೆಗಳು, ಮೆಡಿಕಲ್ ಶಾಪ್, ಅಂಗಡಿ ಮುಂಗಟ್ಟುಗಳು ಇರುತ್ತದೆ. ಜೊತೆಗೆ ಅಂಬುಲೆನ್ಸ್ ಸೇವೆ, ಮೆಟ್ರೋ ಮತ್ತು ರೈಲು ಸೇವೆ ಇರಲಿದೆ.

    50- 50 ಬೆಂಬಲ:
    ನಿರ್ಧಾರ ಪ್ರಕಟಿಸದ ಹೋಟೆಲ್ ಮಾಲೀಕರು ನೈತಿಕ ಬೆಂಬಲದ ಘೋಷಣೆ ಮಾಡಿದ್ದು, ಚಿತ್ರೋದ್ಯಮದ ನೈತಿಕ ಬೆಂಬಲ, ಚಿತ್ರ ಪ್ರದರ್ಶನ ಬಂದ್ ಮಾಡುವ ಬಗ್ಗೆ ಯಾವುದೇ ಫೋಷಣೆ ಮಾಡಿಲ್ಲ. ಇನ್ನೂ ಶಾಲಾ ಕಾಲೇಜುಗಳ ವಾಹನಗಳು ಸ್ತಬ್ಧವಾಗುವುದರಿಂದ ಆಯಾಯ ಜಿಲ್ಲಾಧಿಕಾರಿಗಳು ಶಾಲಾ -ಕಾಲೇಜು ಬಂದ್ ನಿರ್ಣಯ ಕೈಗೊಳ್ಳಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv