Tag: ಬೇಡಿಕೆ

  • ಚಾಮುಂಡಿ ಬೆಟ್ಟ ಆಯ್ತು, ಈಗ ನಂಜನಗೂಡು ದೇವಾಲಯದಲ್ಲೂ ನೌಕರರ ಪ್ರತಿಭಟನೆ!

    ಚಾಮುಂಡಿ ಬೆಟ್ಟ ಆಯ್ತು, ಈಗ ನಂಜನಗೂಡು ದೇವಾಲಯದಲ್ಲೂ ನೌಕರರ ಪ್ರತಿಭಟನೆ!

    ಮೈಸೂರು: ಚಾಮುಂಡಿಬೆಟ್ಟದಲ್ಲಿ ಅರ್ಚಕರು ಹಾಗೂ ಸಿಬ್ಬಂದಿಯ ಪ್ರತಿಭಟನೆ ನಂತರ ನಂಜನಗೂಡಿನ ನಂಜುಡೇಶ್ವರ ದೇವಾಲಯದ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.

    ಸೋಮವಾರದಿಂದ ನಂಜನಗೂಡು ನಂಜುಡೇಶ್ವರ ದೇವಾಲಯದ ನೌಕರರು ಅನಿರ್ಧಿಷ್ಟಾವಧಿ ಧರಣಿ ಮಾಡಲು ನಿರ್ಧರಿಸಿದ್ದು, ಬೆಳಗ್ಗೆ 9 ಗಂಟೆಯಿಂದ ಆರಂಭವಾದ ಧರಣಿಯಲ್ಲಿ ದೇವಾಲಯದ 180 ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ಆರಂಭಿಸಿದ್ದಾರೆ. ಚಾಮುಂಡಿ ಬೆಟ್ಟದ ನೌಕರರಂತೆ ಇವರು ಪ್ರಮುಖ 7 ಬೇಡಿಕೆ ಈಡೇರಿಕೆಗೆ ಆಗ್ರಹಿಸಿದ್ದಾರೆ.

    ಪ್ರತಿಭಟನಾಕಾರರ ಬೇಡಿಕೆಗಳು:
    1. ಕಾರ್ಯಾರ್ಥ ನೇಮಕ ಮಾಡಿರುವ ನೌಕರರನ್ನು ಖಾಯಂಗೊಳಿಸಬೇಕು.
    2. ವೇತನ ಶ್ರೇಣಿ ಪಡೆಯುತ್ತಿರುವ ನೌಕರರಿಗೆ 6ನೇ ವೇತನ ಮಂಜೂರು ಮಾಡಿ ಕಾಲ ಕಾಲಕ್ಕೆ ಬರುವ ಭತ್ಯೆಯನ್ನು ಕೊಡಲು ಖಾಯಂ ಆದೇಶ ಮಾಡುವುದು.
    3. ಪ್ರತಿವರ್ಷ ಬೋನಸ್ ರೂಪದಲ್ಲಿ ಎಲ್ಲ ನೌಕರರಿಗೆ ಇಡೀ ತಿಂಗಳ ಪೂರ್ಣ ವೇತನ ಪಾವತಿಸಬೇಕು.
    4. ಸೇವಾವಧಿಗೂ ಮುನ್ನಾ ಅಕಾಲಿಕ ಮರಣ ಹೊಂದುವ ನೌಕರರ ಕುಟುಂಬದವರಿಗೆ ಅನುಕಂಪದ ಮೇಲೆ ಕೆಲಸ ನೀಡಬೇಕು.
    5. ನಿವೃತ್ತಿ ಬಳಿಕ ನೌಕರರಿಗೆ ಕೊಡುವ 35 ಸಾವಿರ ರೂ. ಹಣವನ್ನು 5 ಲಕ್ಷ ರೂ.ಗೆ ಏರಿಸಬೇಕು
    6. ನೌಕರರಿಗೆ ವೈದ್ಯಕೀಯ ಸೌಲಭ್ಯವನ್ನು ಒದಗಿಸಬೇಕು.
    7. ದೇವಾಲಯದ ಕಾರ್ಯನಿರ್ವಹಿಸುತ್ತಿರುವ ಅನುವಂಶೀಯ ನೌಕರರು ಮರಣ ಹೊಂದಿದಲ್ಲಿ ಧಾರ್ಮಿಕ ಕೈಂಕಾರ್ಯಗಳಿಗೆ ಅಡೆ ತಡೆ ಉಂಟಾಗದಂತೆ ಸದರಿ ಹುದ್ದೆಗೆ ತುರ್ತಾಗಿ ನೌಕರರನ್ನು ನಿಗದಿ ಪಡಿಸಬೇಕು.

    ಇಂದು ಬೆಳಗ್ಗೆ ದೇವಾಲಯದಲ್ಲಿ ನಂಜುಡೇಶ್ವರನಿಗೆ ಪೂಜಾ ವಿಧಿ ವಿಧಾನ ನಡೆದ ಬಳಿಕ ನೌಕರರು ಧರಣಿ ಆರಂಭಿಸಿದ್ದಾರೆ. ಅರ್ಚಕರು, ಸೇವಾ ಕೌಂಟರ್ ಸಿಬ್ಬಂದಿ, ಪ್ರಸಾದ ವಿತರಣಾ ಸಿಬ್ಬಂದಿ, ಸ್ವಚ್ಛತಾ ಸಿಬ್ಬಂದಿ ಸೇರಿದಂತೆ ದೇವಾಲಯದಲ್ಲಿ ಕೆಲಸ ಮಾಡುವ ಎಲ್ಲಾ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆಯಿಂದ ಭಕ್ತರಿಗೆ ಸೇವೆಗಳಲ್ಲಿ ತೊಡಕುಂಟಾಗುವ ಸಾಧ್ಯತೆ ಇದೆ. ವಿಶೇಷ ಪೂಜೆ, ಅರ್ಚನೆ ಹಾಗೂ ಇತರೆ ಸೇವೆಗಳು ಪ್ರತಿಭಟನೆ ಆರಂಭವಾದ ಬಳಿಕ ಭಕ್ತರಿಗೆ ಲಭ್ಯವಿರುವುದಿಲ್ಲ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

    ಒಟ್ಟು 242 ಮಂದಿ ನೌಕರರಿರುವ ನಂಜನಗೂಡು ದೇವಾಲಯದಲ್ಲಿ ಸುಮಾರು 62 ಹುದ್ದೆಗಳು ಖಾಲಿಯಿದ್ದು, ಇನ್ನುಳಿದ 180 ಮಂದಿ ನೌಕರರು ಪ್ರತಿಭಟನೆ ಆರಂಭಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾಡದೇವತೆ ಚಾಮುಂಡಿಗೆ ಪೂಜೆ ಇಲ್ಲ – ಶುಕ್ರವಾರವೇ ಶಕ್ತಿ ದೇವತೆಯ ಸನ್ನಿಧಾನಕ್ಕೆ ಬೀಗ

    ನಾಡದೇವತೆ ಚಾಮುಂಡಿಗೆ ಪೂಜೆ ಇಲ್ಲ – ಶುಕ್ರವಾರವೇ ಶಕ್ತಿ ದೇವತೆಯ ಸನ್ನಿಧಾನಕ್ಕೆ ಬೀಗ

    ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಪ್ರತಿಭಟನೆ ಮುಂದುವರಿದಿದ್ದು, ಭಕ್ತರಿಗೆ ಪ್ರವೇಶವನ್ನು ನಿರ್ಬಂಧ ಮಾಡಲಾಗಿದೆ.

    ಅರ್ಚಕರು ಮತ್ತು ಸಿಬ್ಬಂದಿ ಅನಿರ್ದಾಷ್ಟವಧಿ ಮುಷ್ಕರ ನಡೆಸುತ್ತಿದ್ದಾರೆ. ದೇವಸ್ಥಾನದ ಸಿಬ್ಬಂದಿ ಭಕ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಜಗಳ ಬಿಡಿಸಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ. ಕೊನೆಗೂ ಪ್ರತಿಭಟನಾ ಸಿಬ್ಬಂದಿ ಬೇಡಿಕೆಗೆ ಮಣಿದ ಪೊಲೀಸರು ಹೊರಗಡೆಯಿಂದಲೇ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

    ಇಂದಿನಿಂದ ನೌಕರರು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದರು. ದೇವಾಲಯದ 183 ಮಂದಿ ಖಾಯಂ ನೌಕರರು ಹಾಗೂ 37 ಮಂದಿ ಗುತ್ತಿಗೆ ನೌಕರರು ಪ್ರತಿಭಟನೆ ಮಾಡುತ್ತಿದ್ದಾರೆ. ಗರ್ಭಗುಡಿಯ ಮುಂಭಾಗವೇ ಅರ್ಚಕರು ಧರಣಿ ಕುಳಿತು ಪ್ರತಿಭಟನೆ ಆರಂಭಿಸಿದ್ದು, ದೇವಾಲಯದ ಒಳಗೆ ಹೊರಗೆ ಎರಡು ಕಡೆ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಚಾಮುಂಡಿ ಬೆಟ್ಟದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಭಟನೆ ನಡೆಯುತ್ತಿದೆ.

    ಚಾಮುಂಡಿಬೆಟ್ಟದಲ್ಲಿ ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪೂಜೆ ಸಲ್ಲಿಸಿದ್ದ ಬಳಿಕ 8 ಗಂಟೆಯಿಂದ ಪೂಜೆ ಸ್ಥಗಿತಗೊಂಡಿದೆ. ಅಷ್ಟೇ ಅಲ್ಲದೇ ಗರ್ಭಗುಡಿಗೆ ಭಕ್ತರ ಪ್ರವೇಶವನ್ನು ನಿಷೇಧಿಸಿದ್ದರು. ಪರಿಣಾಮ ದೇವಾಲಯದ ಒಳಗೆ ಮಂಗಳಾರತಿ ನೀಡುವುದನ್ನು ಸ್ಥಗಿತಗೊಳಿಸಲಾಗಿತ್ತು. ಕುಂಕುಮ ವಿತರಣೆ ಮತ್ತು ತಿರ್ಥ ವಿತರಣೆಯೂ ಸ್ಥಗಿತಗೊಂಡಿದ್ದು, ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ದೇವರ ದರ್ಶನಕ್ಕೆ ಆಗಮಿಸಿದ್ದ ಭಕ್ತರು ಅರ್ಧದಿಂದಲೇ ದರ್ಶನ ಪಡೆದು ವಾಪಸ್ ಹೋಗುತ್ತಿದ್ದಾರೆ.

    ದೇವಾಲಯಗಳ ನೌಕರರ ಪ್ರಮುಖ 7 ಬೇಡಿಕೆ:
    1. ಶೇ.30ರಷ್ಟು ವೇತನ ಹೆಚ್ಚಳ ಹಾಗೂ ಹೆಚ್ಚುವರಿ ತುಟ್ಟಿಭತ್ಯೆ ಆದಾಗ ಮಂಜೂರು ಮಾಡಿಕೊಳ್ಳಲು ಖಾಯಂ ಆದೇಶ ನೀಡಬೇಕು.
    2. ವಾರ್ಷಿಕ ಬೋನಸ್ ಪಾವತಿಸದಿರುವ ಬಗ್ಗೆ ಹಾಗೂ ಪ್ರತಿ ವರ್ಷ ಒಂದು ತಿಂಗಳ ಪೂರ್ತಿ ವೇತನವನ್ನ ಪಾವತಿಸಲು ಖಾಯಂ ಆದೇಶ ನೀಡಬೇಕು.
    3. ತಾತ್ಕಾಲಿಕ ನೌಕರರನ್ನು ಖಾಯಂಗೊಳಿಸಲು ತುರ್ತಾಗಿ ಆದೇಶಿಸಬೇಕು.
    4. ಅನುಕಂಪದ ಆಧಾರದ ಮೇಲೆ ಮೃತಪಟ್ಟ ನೌಕರರ ಕುಟುಂಬಸ್ಥರಿಗೆ ರಾಜ್ಯದ ಎಲ್ಲಾ ಇಲಾಖೆಯಲ್ಲಿ ನೌಕರಿ ನೀಡಬೇಕು.
    5. ದೇವಾಲಯದ ನೌಕರರಿಗೆ ವೈದ್ಯಕೀಯ ಸೌಲಭ್ಯವನ್ನ ಮಂಜೂರು ಮಾಡಬೇಕು.
    6. ಮೃತ ದೇವಾಲಯದ ನೌಕರರುಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕು.
    7. ನೌಕರರ ತಿಂಗಳ ವೇತವನ್ನು ಬೆಟ್ಟದ ಶಾಖೆಯ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ ಬಟಾವಡೆ ಮಾಡಬೇಕು.

    https://www.youtube.com/watch?v=8gyZUeLcgbM

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಆರೋಪಿಯನ್ನೇ ಅಪಹರಿಸಿ 1.5 ಕೋಟಿ ರೂ. ಬೇಡಿಕೆ ಇಟ್ಟ ಖತರ್ನಾಕ್ ಪೊಲೀಸರು

    ಆರೋಪಿಯನ್ನೇ ಅಪಹರಿಸಿ 1.5 ಕೋಟಿ ರೂ. ಬೇಡಿಕೆ ಇಟ್ಟ ಖತರ್ನಾಕ್ ಪೊಲೀಸರು

    ನವದೆಹಲಿ: ವಂಚನೆ ಆರೋಪದ ಮೇಲೆ ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸಲು ಹೋದ ಪೊಲೀಸರೇ ಆತನನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟ ವಿಚಿತ್ರ ಪ್ರಕರಣವೊಂದು ದೆಹಲಿಯಲ್ಲಿ ಬುಧವಾರದಂದು ಬೆಳಕಿಗೆ ಬಂದಿದೆ.

    ನಗರದ ರಣಹೋಲಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌  ಸುಬೆ ಸಿಂಗ್, ಮುಖ್ಯ ಪೇದೆ ಇಂಧು ಪಾವಟ್, ಪೇದೆ ಅಜಯ್ ಕುಮಾರ್ ಅಪಹರಣ ಮಾಡಿದ ಪೊಲೀಸರು. ಚಂಡೀಗಢದಲ್ಲಿ ಆರು ಜನರ ಮೇಲೆ ವಂಚನೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದರು. ಆದರೆ ಪ್ರಧಾನ್ ಎಂಬ ಆರೋಪಿ ಪರಾರಿಯಾಗಿದ್ದನು.

    ದೆಹಲಿಯಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಪ್ರಧಾನ್‍ನನ್ನು ಪತ್ತೆ ಹಚ್ಚಿದ ರಣಹೋಲಾ ಠಾಣೆಯ ಮೂವರು ಪೊಲೀಸರು, ಆತನನ್ನು ಬಂಧಿಸುವ ಬದಲು ಅಪಹರಿಸಿ ಉತ್ತಮ್‍ನಗರದ ಮನೆಯೊಂದರಲ್ಲಿ ಕೂಡಿ ಹಾಕಿದ್ದರು. ಬಳಿಕ ಆರೋಪಿಯ ಪತ್ನಿಗೆ ಕರೆ ಮಾಡಿ 1.5 ಕೋಟಿ ರೂ. ಹಣವನ್ನು ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಹಣ ಕೊಡಲು ನಿರಾಕರಿಸಿದರೆ ಪ್ರಧಾನ್ ಮೇಲೆ ಈಗಾಗಲೇ ಇರುವ ವಂಚನೆ ಪ್ರಕರಣದ ಜೊತೆಗೆ ಸುಳ್ಳು ಕೇಸ್‍ಗಳನ್ನು ಹಾಕುವುದಾಗಿ ಬೆದರಿಸಿದ್ದಾರೆ.

    ಪೊಲೀಸರು ಆರೋಪಿಯನ್ನು ಅಪಹರಿಸಿರುವ ಮಾಹಿತಿ ಹಿರಿಯಾ ಪೊಲೀಸ್ ಅಧಿಕಾರಿಗಳಿಗೆ ತಿಳಿಯುತ್ತಿದ್ದಂತೆ ಅಪಹರಣದಲ್ಲಿ ಭಾಗಿಯಾಗಿದ್ದ ಮೂವರು ಪೊಲೀಸರನ್ನು ಕರ್ತವ್ಯದಿಂದ ವಜಾಗೊಳಿಸಿ ಬಂಧಿಸಿದ್ದಾರೆ.

    ಈ ಘಟನೆ ಕುರಿತು ದೆಹಲಿಯ ರಣಹೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಾವಿರಕ್ಕೂ ಹೆಚ್ಚು ಬಿಸಿಯೂಟ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ: ಬೇಡಿಕೆ ಏನು?

    ಸಾವಿರಕ್ಕೂ ಹೆಚ್ಚು ಬಿಸಿಯೂಟ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ: ಬೇಡಿಕೆ ಏನು?

    ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ಬಳಿ ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ಸೂಕ್ತ ಬೆಡ್ ಶೀಟ್, ಚಾಪೆ ಇಲ್ಲದೆ ಟಾರ್ಪಲ್ ಮತ್ತು ಮಣ್ಣಿನ ಮೇಲೆ ಮಲಗಿ ಚಳಿಗೆ ನಡುಗುತ್ತಾ ಕಾರ್ಯಕರ್ತೆಯರು ಪ್ರತಿಭಟಿಸುತ್ತಿದ್ದಾರೆ.

    2,500 ರುಪಾಯಿ ಸಂಬಳವನ್ನು ಹೆಚ್ಚಳ ಮಾಡಬೇಕು, ತಮಿಳುನಾಡು ರೀತಿಯಲ್ಲಿ ಕರ್ನಾಟಕ ರಾಜ್ಯದ ಬಿಸಿಯೂಟ ಕಾರ್ಯಕರ್ತರಿಗೂ ಸಂಬಳ ನೀಡಬೇಕು ಹಾಗೂ ಬಿಸಿಯೂಟ ವ್ಯವಸ್ಥೆಯನ್ನು ಖಾಸಗೀಕರಣ ಗೊಳಿಸಬಾರದು ಎಂದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ.

    ಕಾರ್ಯಕರ್ತೆಯರ ಬೇಡಿಕೆಗಳೇನು..?
    * 2,500 ರೂ. ಸಂಬಳವನ್ನು ಹೆಚ್ಚಳ ಮಾಡಬೇಕು
    * ಕೆಲಸ ಖಾಯಂಗೊಳಿಸಬೇಕು.
    * ಇನ್ಶೂರೆನ್ಸ್, ಇಎಸ್‍ಐ ಪಿಎಫ್ ನೀಡಲು ಒತ್ತಾಯ.
    * ತಮಿಳುನಾಡು ರೀತಿಯಲ್ಲಿ ರಾಜ್ಯದ ಬಿಸಿಯೂಟ ಕಾರ್ಯಕರ್ತರಿಗೂ ಸಂಬಳ ನೀಡಬೇಕು.
    * ಬಿಸಿಯೂಟ ವ್ಯವಸ್ಥೆಯನ್ನು ಖಾಸಗೀಕರಣ ಗೊಳಿಸಬಾರದು.
    * ಇಸ್ಕಾನ್‍ಗೆ ನೀಡಬೇಕೆಂದಿರುವ ಗುತ್ತಿಗೆಯನ್ನು ರದ್ದುಗೊಳಿಸಬೇಕು.

    ಕಳೆದ ಬಾರಿ ನಾವು ಪ್ರತಿಭಟನೆ ನಡೆಸಿದಾಗ ಶಿಕ್ಷಣ ಸಚಿವ ತನ್ವೀರ್ ಸೇಠ್ ಸೇರಿ ವಿವಿಧ ನಾಯಕರು ಆಶ್ವಾಸನೆ ನೀಡಿದರೂ ಬೇಡಿಕೆ ಈಡೇರಿಸಿರಲಿಲ್ಲ. ಆಶ್ವಾಸನೆ ಕೊಟ್ಟು ಮೋಸ ಮಾಡಿರುವ ಎಲ್ಲಾ ಸರ್ಕಾರಗಳಿಗೆ ನಮ್ಮ ಧಿಕ್ಕಾರ, ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಪ್ರತಿಭಟನಾ ಧರಣಿ ಮುಂದುವರಿಯಲಿದೆ ಎಂದು ಬಿಸಿಯೂಟ ಕಾರ್ಯಕರ್ತೆಯರ ರಾಜ್ಯ ಸಂಘಟನೆಯ ನಾಯಕಿ ರುದ್ರಮ್ಮಬೆಳಲ್ಗೆರೆ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಮ್ಯಾಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ವಿಶೇಷ ಬೇಡಿಕೆಯಿಟ್ಟ ನಟಿ ರಾಗಿಣಿ

    ರಮ್ಯಾಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ವಿಶೇಷ ಬೇಡಿಕೆಯಿಟ್ಟ ನಟಿ ರಾಗಿಣಿ

    ಬೆಂಗಳೂರು: ಸ್ಯಾಂಡಲ್‍ವುಡ್ ಕ್ವೀನ್ ನಟಿ ರಮ್ಯಾ ಗುರುವಾರ ತಮ್ಮ 36ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ವೇಳೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ನಟಿ ರಮ್ಯಾಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ವಿಶೇಷ ಬೇಡಿಕೆಯಿಟ್ಟಿದ್ದಾರೆ.

    ರಾಗಿಣಿ ತಮ್ಮ ಟ್ವಿಟ್ಟರ್ ನಲ್ಲಿ “ಸುಂದರಿ ನಿನಗೆ ಹುಟ್ಟುಹಬ್ಬದ ಶುಭಾಶಯಗಳು. ಹೀಗೆ ಮಿಂಚುತ್ತಿರು ಹಾಗೂ ನಿನಗೆ ಇನ್ನಷ್ಟು ಧೈರ್ಯ ಸಿಗಲಿ” ಟ್ವೀಟ್ ಮಾಡಿದ್ದರು. ರಾಗಿಣಿ ಟ್ವೀಟ್‍ಗೆ, ಧನ್ಯವಾದಗಳು ಎಂದು ರಮ್ಯಾ ಪ್ರತಿಕ್ರಿಯಿಸಿದ್ದರು.

    ರಾಗಿಣಿ ಅವರು ಮತ್ತೆ ರಮ್ಯಾ ಅವರ ಟ್ವೀಟ್ ಅನ್ನು ರೀ-ಟ್ವೀಟ್ ಮಾಡಿ, “ನಮಗೆ ಡಿನ್ನರ್ ಹಾಗೂ ಪಾರ್ಟಿ ಕೊಡಿಸು. ಬೆಂಗಳೂರು ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದೆ” ಎಂದು ಬೇಡಿಕೆ ಇಟ್ಟಿದ್ದಾರೆ. ಆದರೆ ಈ ಟ್ವೀಟ್‍ಗೆ ರಮ್ಯಾ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

    ಸದ್ಯ ರಮ್ಯಾ ಅವರು ಸಿನಿಮಾದಿಂದ ದೂರ ಉಳಿದುಕೊಂಡು ರಾಜಕಾರಣದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. 2003ರಲ್ಲಿ ತೆರೆಕಂಡ ‘ಅಭಿ’ ಸಿನಿಮಾ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ನೀಡಿದ ರಮ್ಯಾ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ಸ್ಯಾಂಡಲ್‍ವುಡ್ ಕ್ವೀನ್ ಎಂಬ ಬಿರುದನ್ನು ಪಡೆದುಕೊಂಡಿದ್ದಾರೆ. ಬರೋಬ್ಬರಿ ಒಂದು ದಶಕ ರಮ್ಯಾ ಬೇಡಿಕೆಯ ನಟಿಯಾಗಿದ್ದರು. ರಾಜಕಾರಣದಲ್ಲಿ ಗುರುತಿಸಿಕೊಂಡ ಬಳಿಕ ಸಿನಿಮಾದಿಂದ ರಮ್ಯಾ ಅಂತರವನ್ನು ಕಾಯ್ದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಗಾಯಕ ವಿಜಯ್‍ಪ್ರಕಾಶ್ ಬಳಿ ಬೇಡಿಕೆಯಿಟ್ಟು ಭಾವುಕರಾದ ಸಿಎಂ

    ಗಾಯಕ ವಿಜಯ್‍ಪ್ರಕಾಶ್ ಬಳಿ ಬೇಡಿಕೆಯಿಟ್ಟು ಭಾವುಕರಾದ ಸಿಎಂ

    ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ‘ಯುವ ದಸರಾ’ದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಗಾಯಕರಾದ ವಿಜಯ್ ಪ್ರಕಾಶ್ ಅವರ ಬಳಿ ವಿಶೇಷ ಬೇಡಿಕೆಯಿಟ್ಟು ಭಾವುಕರಾಗಿದ್ದಾರೆ.

    ಯುವ ದಸರಾದಲ್ಲಿ ಗಾಯಕ ವಿಜಯ್ ಪ್ರಕಾಶ್ ಅವರ ರಸಮಂಜರಿ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮದಲ್ಲಿ ವಿಜಯ್ ಅವರು ಸೂಪರ್ ಹಿಟ್ ಹಾಡುಗಳನ್ನು ಹಾಡಿ ಅಭಿಮಾನಿ ಹಾಗೂ ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ ಅವರು ಕೂಡ ಭಾಗಿಯಾಗಿದರು.

    ಕುಮಾರಸ್ವಾಮಿ ಅವರು ಕಾರ್ಯಕ್ರಮದಲ್ಲಿ ವಿಜಯ್ ಅವರಿಗೆ ‘ಒಳಿತು ಮಾಡು ಮನುಸಾ, ನೀ ಇರೋದು ಮೂರು ದಿವಸ’ ಹಾಡನ್ನು ಹಾಡಲು ಒತ್ತಾಯಿಸಿದರು. ಸಿಎಂ ಒತ್ತಾಯಕ್ಕೆ ಮಣಿದು ವಿಜಯ್ ಸಿ. ಅಶ್ವಥ್ ಅವರ ಈ ಸೂಪರ್ ಹಿಟ್ ಹಾಡನ್ನು ಹಾಡಿ ಅವರನ್ನು ಸಂತೋಷಪಡಿಸಿದರು.

    ಈ ಹಾಡು ಮುಗಿಯುತ್ತಿದ್ದಂತೆ ಕುಮಾರಸ್ವಾಮಿ ಅವರು ಮತ್ತೊಮ್ಮೆ ಈ ಹಾಡನ್ನು ಹಾಡುವಂತೆ ವಿಜಯ್ ಪ್ರಕಾಶ್ ಅವರ ಬಳಿ ಮನವಿ ಮಾಡಿಕೊಂಡರು. ವಿಜಯ್ ಪ್ರಕಾಶ್ ಕೂಡ ಕುಮಾರಸ್ವಾಮಿ ಅವರಿಗಾಗಿ ಈ ಹಾಡನ್ನು ಮತ್ತೊಮ್ಮೆ ಹಾಡಿದರು.

    ವಿಜಯ್ ಪ್ರಕಾಶ್ ಈ ಹಾಡನ್ನು ಹಾಡುತ್ತಿದ್ದಂತೆ ಕುಮಾರಸ್ವಾಮಿ ಅವರು ಭಾವುಕರಾದರು. ಅಲ್ಲದೇ ಅವರ ಕಣ್ಣಿನ ಅಂಚಿನಲ್ಲಿ ಕಣ್ಣೀರು ಕೂಡ ಬಂತು. ಸದ್ಯ ಈ ಹಾಡು ಕುಮಾರಸ್ವಾಮಿ ಅವರ ನೆಚ್ಚಿನ ಹಾಡಾಗಿದ್ದು, ಯಾವುದೇ ಕಾರ್ಯಕ್ರಮಕ್ಕೆ ಹೋದರೂ ಸ್ವತಃ ಅವರೇ ಈ ಹಾಡಿಗೆ ಬೇಡಿಕೆಯಿಟ್ಟು ಹಾಡಿಸುತ್ತಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗೋಲ್ ಗುಂಬಜ್‍ನಷ್ಟೇ ಫೇಮಸ್ ಆಗಿದ್ದ ದ್ರಾಕ್ಷಿ ಬೆಳೆ ಈಗ ಕುಂಠಿತ

    ಗೋಲ್ ಗುಂಬಜ್‍ನಷ್ಟೇ ಫೇಮಸ್ ಆಗಿದ್ದ ದ್ರಾಕ್ಷಿ ಬೆಳೆ ಈಗ ಕುಂಠಿತ

    ವಿಜಯಪುರ: ಇಲ್ಲಿನ ಗೋಲ್ ಗುಂಬಜ್ ಎಷ್ಟು ಫೇಮಸ್ಸೋ ದ್ರಾಕ್ಷಿ ಬೆಳೆ ಕೂಡ ಅಷ್ಟೇ ಹೆಸರುವಾಸಿಯಾಗಿದೆ. ವಿಜಯಪುರದ ದ್ರಾಕ್ಷಿಗೆ ಯೂರೋಪ್ ಸೇರಿದಂತೆ ದೇಶದ ಹಲವೆಡೆ ಭಾರೀ ಬೇಡಿಕೆ ಇದೆ. ಆದರೆ ಇದೀಗ ದ್ರಾಕ್ಷಿ ಬೆಳೆ ಕುಂಠಿತವಾಗಿದೆ.

    ಐತಿಹಾಸಿಕ ಜಿಲ್ಲೆ, ಗುಮ್ಮಟಗಳ ಜಿಲ್ಲೆ, ಬರದ ನಾಡು ಎಂದು ವಿಜಯಪುರವನ್ನು ಅನೇಕ ಹೆಸರುಗಳಿಂದ ಕರೆಯುತ್ತಾರೆ. ಇದರ ಜೊತೆಗೆ ದ್ರಾಕ್ಷಿ ಕಣಜ ಎಂದು ಕರೆಯುತ್ತಾರೆ. ವಿಜಯಪುರದ ದ್ರಾಕ್ಷಿ ನಮ್ಮ ದೇಶದಲ್ಲೆಡೆ ಸೇರಿಂದಂತೆ ಯೂರೋಪ್, ಅಮೆರಿಕಾದಂತಹ ಹೊರ ದೇಶದವರೆಗೆ ರಫ್ತಾಗುತ್ತದೆ. ಒಣ ದ್ರಾಕ್ಷಿ ಕೂಡ ಪ್ರಪಂಚದ ಅನೇಕ ಕಡೆ ರಫ್ತಾಗುತ್ತದೆ. ಆದರೆ ಈಗ ಈ ದ್ರಾಕ್ಷಿಯ ಕಣಜದ ಹೆಸರು ಅಳಿಸಿ ಹೋಗುವ ಎಲ್ಲಾ ಲಕ್ಷಣಗಳು ಎದ್ದು ಕಾಣುತ್ತಿವೆ. ಆದಕ್ಕೆ ಪ್ರಮುಖ ಕಾರಣ ಪ್ರತಿ ವರ್ಷ ಕೈ ಕೊಡುತ್ತಿರುವ ದ್ರಾಕ್ಷಿ ಬೆಳೆ.

    ರಾಜ್ಯದಲ್ಲೇ ಅತೀ ಹೆಚ್ಚು ವಿಜಯಪುರ ಜಿಲ್ಲೆಯಲ್ಲಿ ಒಟ್ಟು 12 ಸಾವಿರ ಹೆಕ್ಟರ್ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತೆ. ರೈತರು ಏಪ್ರಿಲ್ ತಿಂಗಳಷ್ಟೊತ್ತಿಗೆ ಮಾಡಬೇಕಿದ್ದ ದಾಕ್ಷಿ ಕಟ್ಟಿಂಗ್ (ಚಾಟ್ನಿ) 25% ನಷ್ಟು ಮಾಡಿಲ್ಲ. ಆದ್ದರಿಂದ ಅಕ್ಟೊಬರ್ ತಿಂಗಳಲ್ಲಿ ನೀರಿಕ್ಷೆ ಮಾಡಿದಷ್ಟು ಫಸಲು ಬಂದಿಲ್ಲ. ಇದರಿಂದ ಇಳುವರಿಯಲ್ಲಿ ಇಳಿಮುಖವಾಗಿದ್ದು, ಈ ಬಾರಿ 30 ರಿಂದ 40% ಇಳುವರಿ ಕಡಿಮೆ ಬರುತ್ತೆ. ಇದಕ್ಕೆಲ್ಲ ಪ್ರಮುಖ ಕಾರಣ ವರುಣನ ಅವಕೃಪೆ, ಅಂತರ್ಜಲ ಕುಸಿತ, ಬೋರ್ ವೆಲ್ ನಲ್ಲಿ ನೀರಲ್ಲದ್ದು ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

    ಬರದ ನಾಡು ಖ್ಯಾತಿಯ ವಿಜಯಪುರ ಜಿಲ್ಲೆಯ ರೈತರು ನಿರಂತರ ವರುಣನ ಅವಕೃಪೆಯಿಂದ ತತ್ತರಿಸಿ ಹೋಗಿದ್ದಾರೆ. ಇದೇ ರೀತಿ ಮುಂದುವರಿದಲ್ಲಿ ದ್ರಾಕ್ಷಿಗೆ ಹೆಸರುವಾಸಿಯಾಗಿರುವ ವಿಜಯಪುರ ಜಿಲ್ಲೆಯಲ್ಲೇ ದ್ರಾಕ್ಷಿ ಸಿಗದಂತಾಗುತ್ತೆ. ಇದರಿಂದ ದ್ರಾಕ್ಷಿ ಬೆಳೆಗಾರರು ಆತಂಕಗೊಂಡಿದ್ದು, ಅಂತರ್ಜಲ ಹೆಚ್ಚಿಸುವಲ್ಲಿ ಸರ್ಕಾರ ಹೊಸ ಯೋಜನೆ ರೂಪಿಸಿ ದಿಟ್ಟ ಹೆಜ್ಜೆ ಇಡಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರೈತರ ಬೇಡಿಕೆಗಳಿಗೆ ಕೇಂದ್ರ ಅಸ್ತು: ದೆಹಲಿ ಚಲೋ ಶೀಘ್ರವೇ ಅಂತ್ಯ!

    ರೈತರ ಬೇಡಿಕೆಗಳಿಗೆ ಕೇಂದ್ರ ಅಸ್ತು: ದೆಹಲಿ ಚಲೋ ಶೀಘ್ರವೇ ಅಂತ್ಯ!

    ನವದೆಹಲಿ: ಸಾಲಮನ್ನಾ ಹಾಗೂ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ರೈತರು ನಡೆಸಿದ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಕೇಂದ್ರ ಬಗ್ಗಿದ್ದು, ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದೆ.

    ಉತ್ತರಪ್ರದೇಶದ ರೈತರು ಹಾಗೂ ಭಾರತೀಯ ಕಿಸಾನ್ ಸಂಘ(ಬಿಕೆಯು)ದ ವತಿಯಿಂದ ಇಂದು ಹಮ್ಮಿಕೊಂಡಿದ್ದ ದೆಹಲಿ ಚಲೋ, ಹಿಂಸಾತ್ಮಕ ರೂಪ ಪಡೆದಕೊಂಡ ಬೆನ್ನಲ್ಲೇ ಕೇಂದ್ರ ಸರ್ಕಾರ ರೈತರ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಸಮ್ಮತಿ ಸೂಚಿಸಿದೆ.

    ಈಗಾಗಲೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಬಿಕೆಯುದ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಿದ್ದು, ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಕೇಂದ್ರ ಸಹಾಯಕ ಕೃಷಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಗೃಹ ಸಚಿವ ರಾಜನಾಥ್ ಸಿಂಗ್ ಬಿಕೆಯುದ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಮಾತುಕತೆಯ ವೇಳೆ ರೈತರ ಬಹು ಮುಖ್ಯ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಉತ್ತರ ಪ್ರದೇಶ ಸಚಿವರಾದ ಲಕ್ಷ್ಮೀ ನಾರಾಯಣ್, ಸುರೇಶ್ ರಾಣಾರ ಜೊತೆ ನಾನು ರೈತರನ್ನು ಭೇಟಿಯಾಗಲು ಹೋಗುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಏನಿದು ಪ್ರತಿಭಟನೆ?
    ಉತ್ತರ ಪ್ರದೇಶದ ಸುಮಾರು 70 ಸಾವಿರಕ್ಕೂ ಹೆಚ್ಚು ರೈತರು ಸಾಲಮನ್ನಾ ಹಾಗು 15 ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ದೆಹಲಿ ಚಲೋ ಪ್ರತಿಭಟನೆಯನ್ನು ಹರಿದ್ವಾರದಿಂದ ಹಮ್ಮಿಕೊಂಡಿದ್ದರು. ಘಾಜಿಯಾಪುರ ಮಾರ್ಗವಾಗಿ ದೆಹಲಿಗೆ ತೆರಳಿ ಪ್ರತಿಭಟನೆ ನಡೆಸಿದ್ದರು. ಆದರೆ ದೆಹಲಿ ಹಾಗೂ ಉತ್ತರ ಪ್ರದೇಶದ ಗಡಿಭಾಗ ಗಾಜೀಯಾಬಾದ್ ನಲ್ಲಿ ಬೃಹತ್ ಬ್ಯಾರಿಕೇಡ್‍ಗಳನ್ನು ಹಾಕುವ ಮೂಲಕ ಪೊಲೀಸರು ರೈತರ ಪ್ರತಿಭಟನೆಯನ್ನು ನಿಯಂತ್ರಿಸಿಲು ಯತ್ನಿಸಿದ್ದರು. ಆದರೆ ಸಾಗರೋಪಾದಿಯಲ್ಲಿ ಬಂದಿದ್ದ ಪ್ರತಿಭಟನಾಕಾರರು ಪೊಲೀಸರು ಹಾಕಿದ್ದ ಬ್ಯಾರಿಕೇಡ್‍ಗಳನ್ನು ತಮ್ಮ ಟ್ರ್ಯಾಕ್ಟರ್‍ಗಳ ಮೂಲಕ ಕೀಳಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಜಲಫಿರಂಗಿ ಹಾಗೂ ಅಶ್ರುವಾಯು ಪ್ರಯೋಗವನ್ನು ಮಾಡಿದ್ದಲ್ಲದೇ, ಲಾಠಿ ಚಾರ್ಜ್ ಕೂಡಾ ಮಾಡಿದ್ದರು. ಪ್ರತಿಭಟನೆಯು ಹಿಂಸಾತ್ಮಕ ರೂಪ ಪಡೆಯುವ ಮುನ್ಸೂಚನೆ ಅರಿತ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತುರ್ತು ಸಭೆ ಕರೆದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=d0tIKjItZL0

     

  • ಬಿಗ್‍ಬಾಸ್ ಶೋದಲ್ಲಿ ಟೆಕ್ಕಿಗಳಿಗೆ ಅವಕಾಶ ನೀಡಿ: ಅಭಿಮಾನಿಗಳ ಬೇಡಿಕೆ ಏನು?

    ಬಿಗ್‍ಬಾಸ್ ಶೋದಲ್ಲಿ ಟೆಕ್ಕಿಗಳಿಗೆ ಅವಕಾಶ ನೀಡಿ: ಅಭಿಮಾನಿಗಳ ಬೇಡಿಕೆ ಏನು?

    ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್’ ಕನ್ನಡ ಆರನೇ ಆವೃತ್ತಿಯ ಆರಂಭಕ್ಕೆ ದಿನಾಂಕ ನಿಗದಿಯಾಗಿದ್ದು, ಇದೇ ತಿಂಗಳು 21ಕ್ಕೆ ಗ್ರ್ಯಾಂಡ್ ಓಪನಿಂಗ್ ಆಗಲಿದೆ. ಆದರೆ ರಿಯಾಲಿಟಿ ಶೋ ಆರಂಭಕ್ಕೂ ಮುನ್ನಾ ಪ್ರೇಕ್ಷಕರು ಬಿಗ್‍ಬಾಸ್ ಗೆ ಬೇಡಿಕೆಯಿಟ್ಟಿದ್ದಾರೆ.

    ಖಾಸಗಿ ವಾಹಿಯೂ ಇತ್ತೀಚೆಗೆ ಬಿಗ್‍ಬಾಸ್ ನ ಪ್ರೋಮೋ ಒಂದನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿದೆ. ಈ ಪ್ರೋಮೋದಲ್ಲಿ ನಟ ಸುದೀಪ್ ಮಾತನಾಡಿದ್ದು, ಈ ಪ್ರೋಮೋ ನೋಡಿ ಪ್ರೇಕ್ಷಕರು ಕಮೆಂಟ್ ಗಳ ಮೂಲಕ ತಮ್ಮ ಅನಿಸಿಕೆ ಮತ್ತು ಬೇಡಿಕೆಗಳನ್ನು ತಿಳಿಸಿದ್ದಾರೆ.

    ಬಿಗ್‍ಬಾಸ್ ಶೋ ನಲ್ಲಿ ಮೊದಲ ಆವೃತ್ತಿಯಿಂದಲೂ ಐಟಿ ಉದ್ಯೋಗಿಗಳು ಸ್ಪರ್ಧಿಗಳಾಗಿ ಕಾಣಿಸಿಕೊಂಡಿಲ್ಲ. ಆದ್ದರಿಂದ ಈ ಬಾರಿಯಾದರೂ ಐಟಿ ಉದ್ಯೋಗಿಗೆ ಅವಕಾಶ ಕೊಡಿ ಎಂದು ಬಿಗ್‍ಬಾಸ್ ಬಳಿ ಟೆಕ್ಕಿಗಳು ಮನವಿ ಮಾಡಿಕೊಂಡಿದ್ದಾರೆ. ಅದರಲ್ಲೂ ಕನ್ನಡಿಗರಿಗೆ ಅವಕಾಶ ಕೊಡಿ ಎಂದು ಹೇಳಿದ್ದಾರೆ.

     

    ಸಾಮಾಜಿಕ ಜಾಲತಾಣಗಳಲ್ಲಿ ಹಾಡಿನ ಮೂಲಕ ಗುರುತಿಸಿಕೊಂಡಿರುವ ತುಳಸಿ ಪ್ರಸಾದ್ ಈ ಬಾರಿ ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ದರಿಂದ ದಯವಿಟ್ಟು ತುಳಸಿ ಪ್ರಸಾದ್ ಆಯ್ಕೆ ಮಾಡಬೇಡಿ. ಒಂದು ವೇಳೆ ಆಯ್ಕೆ ಮಾಡಿದರೆ `ಬಿಗ್‍ಬಾಸ್ ಬ್ಯಾನ್’ ಎಂದು ಒಂದು ಆಂದೋಲನ ಶುರುವಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಕೆಲವರು ಬಿಗ್ ಬಾಸ್ ಮನೆಯಲ್ಲಿ ಒಂದಲ್ಲ ಒಂದು ಲವ್ ಸ್ಟೋರಿ ಆಗುತ್ತಿದೆ. ಈ ಬಾರಿ ನಮಗೆ ಫೇಕ್ ಲವ್ ಸ್ಟೋರಿ ಬೇಡ. ಅದನ್ನು ನೋಡಲು ನಮಗೆ ಇಷ್ಟ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಈ ಸಲದ ಕನ್ನಡ ಬಿಗ್ ಬಾಸ್ ಮನೆಗೆ ಜನಸಾಮಾನ್ಯರ ಸಂಖ್ಯೆ ಎಷ್ಟು? ಸೆಲೆಬ್ರಿಟಿಗಳ ಸಂಖ್ಯೆ ಎಷ್ಟು? ಅದರಲ್ಲಿ ಹೆಣ್ಣು ಮಕ್ಕಳು ಎಷ್ಟು? ಗಂಡು ಮಕ್ಕಳು ಎಷ್ಟು? ಎಂದು ಪ್ರಶ್ನೆ ಕೇಳಿದ್ದಾರೆ.

    ತುಂಬಾ ಜನರು ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೋಗಲು ಇಷ್ಟಪಟ್ಟಿದ್ದು, ನಮ್ಮನ್ನು ಆಯ್ಕೆ ಮಾಡಿ ಬಿಗ್‍ಬಾಸ್ ಎಂದು ಕೇಳಿಕೊಂಡಿದ್ದಾರೆ. ಆಯ್ಕೆಯಾಗದಿರುವವರು ಅವರ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಬಿಗ್ ಬಾಸ್ ಎಂಬ ಶೀರ್ಷಿಕೆಯನ್ನು ಕನ್ನಡದಲ್ಲಿ ಬಳಸಿದ್ದಕ್ಕೆ ಕಲರ್ಸ್ ಕನ್ನಡ ವಾಹಿನಿಗೆ ಧನ್ಯವಾದಗಳನ್ನ ತಿಳಿಸಿದ್ದಾರೆ. ತುಂಬಾ ಜನರು ಸುದೀಪ್ ಅವರ ಅಭಿನಯವನ್ನು ಮೆಚ್ಚಿಕೊಂಡು ಕಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ನಾವು ಬಿಗ್‍ಬಾಸ್ ಶೋಗೆ ಕಾತುರದಿಂದ ಕಾಯುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಾಲಿಗಿಂತಲೂ ಗೋಮೂತ್ರಕ್ಕೆ ಹೆಚ್ಚಾಯ್ತು ಬೇಡಿಕೆ: 1 ಲೀಟರ್ ಗೆ 30 ರೂ.

    ಹಾಲಿಗಿಂತಲೂ ಗೋಮೂತ್ರಕ್ಕೆ ಹೆಚ್ಚಾಯ್ತು ಬೇಡಿಕೆ: 1 ಲೀಟರ್ ಗೆ 30 ರೂ.

    ಜೈಪುರ: ರಾಜಸ್ಥಾನದಲ್ಲಿ ಈಗ ಗೋಮೂತ್ರದ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಆದಾಯದ ಮೂಲವಾಗಿ ಪರಿವರ್ತನೆಯಾಗಿದೆ.

    ರಾಜಸ್ಥಾನದ ರೈತರು ಗಿರ್ ಮತ್ತು ತಾಪಾರ್ಕರ್ ಎಂಬ ಪ್ರಮುಖವಾದ ತಳಿಯ ಗೋಮೂತ್ರವನ್ನು ಮಾರುಕಟ್ಟೆಗಳಲ್ಲಿ ಪ್ರತಿ ಲೀಟರ್ ಗೆ 15 ರೂ. ನಿಂದ 30 ರೂ. ನಂತೆ ಮಾರಾಟ ಮಾಡುತ್ತಿದ್ದರೆ, ಹಾಲನ್ನು 22 ರೂ. ನಿಂದ 25 ರೂ ವರೆಗೆ ಮಾರಾಟ ಮಾಡುತ್ತಿದ್ದಾರೆ.

    2 ವರ್ಷಗಳಿಂದ ಹೈನುಗಾರಿಕೆಯಲ್ಲಿ ತೊಡಗಿರುವ ಜೈಪುರದ ಕೈಲೇಶ್ ಗುಜ್ಜರ್ ಪ್ರತಿಕ್ರಿಯಿಸಿ, ಗೋಮೂತ್ರ ಮಾರಾಟದಿಂದಾಗಿ ನನ್ನ ಆದಾಯ 30% ಹೆಚ್ಚಾಗಿದೆ. ಮಾರಾಟದಿಂದಾಗಿ ಈಗ ನನಗೆ ಅದೃಷ್ಟ ಬಂದಿದ್ದು, ಗೋಮೂತ್ರ ಸಂಗ್ರಹಿಸಲು ರಾತ್ರಿಯಿಡಿ ಹಸುವಿನ ಕೊಟ್ಟಿಗೆಯಲ್ಲೇ ಎಚ್ಚರವಾಗಿರಬೇಕಾಗುತ್ತದೆ. ದನ ನಮ್ಮ ತಾಯಿ, ಹಾಗಾಗಿ ರಾತ್ರಿಯಿಡಿ ಗೋಮೂತ್ರಕ್ಕಾಗಿ ಕೊಟ್ಟಿಗೆಯಲ್ಲಿ ಕಾಯುವುದು ನನಗೆ ಬೇಸರವಾಗುವುದಿಲ್ಲ ಎಂದು ಹೇಳಿದ್ದಾರೆ.

    ಓಂ ಪ್ರಕಾಶ್ ಮೀನಾ ಪ್ರತಿಕ್ರಿಯಿಸಿ, ಗಿರ್ ತಳಿಯ ಹಸುವಿನ ಮೂತ್ರವನ್ನು ನಾನು ಮಾರಾಟ ಮಾಡುತ್ತಿದ್ದೇನೆ. ಲೀಟರ್ ಒಂದಕ್ಕೆ 30 ರಿಂದ 50 ರೂಪಾಯಿ ಸಿಗುತ್ತಿದೆ ಎಂದು ಹೇಳಿದರು. ಇದನ್ನು ಓದಿ: ಗೋ ಮೂತ್ರದಿಂದ ಕ್ಯಾನ್ಸರ್ ಗುಣಪಡಿಸಬಹುದು!

    ಬೇಡಿಕೆ ಯಾಕೆ?
    ಗೋಮೂತ್ರವನ್ನು ಹೆಚ್ಚಾಗಿ ರೈತರು ತಮ್ಮ ಕೃಷಿಯನ್ನು ಹಾಳು ಮಾಡುವ ಕೀಟಗಳನ್ನು ತಡೆಗಟ್ಟಲು ಬೆಳೆಗಳ ಮೇಲೆ ಸಿಂಪಡಿಸುತ್ತಾರೆ. ಅಷ್ಟೇ ಅಲ್ಲದೇ ಯಜ್ಞ, ಪಂಚಗವ್ಯಗಳಲ್ಲಿ ಮತ್ತು ಧಾರ್ಮಿಕ ಆಚರಣೆ ಕಾರ್ಯಕ್ರಮಗಳಲ್ಲಿ ಬಳಸುವುದರಿಂದ ಬೇಡಿಕೆ ಹೆಚ್ಚಾಗಿದೆ.

    ಉದಯಪುರದ ಸರ್ಕಾರಿ ಮಹಾರಾಣಾ ಪ್ರತಾಪ್ ಕೃಷಿ ವಿಶ್ವವಿದ್ಯಾಲಯ, ಜೈವಿಕ ಕೃಷಿ ಯೋಜನೆಗಾಗಿ ಪ್ರತಿ ತಿಂಗಳಿಗೂ 300 ರಿಂದ 500 ಲೀಟರ್ ನಷ್ಟು ಗೋಮೂತ್ರವನ್ನು ಬಳಸುತ್ತದೆ. ಪ್ರತಿ ತಿಂಗಳು 15,000-20,000 ರೂಪಾಯಿಯ ಮೌಲ್ಯದಷ್ಟು ಗೋಮೂತ್ರವನ್ನು ಖರೀದಿಸುತ್ತದೆ ಎಂದು ಉಪಕುಲಪತಿ ಉಮಾ ಶಂಕರ್ ಹೇಳಿದ್ದಾರೆ.