Tag: ಬೇಬಿ ಬೆಟ್ಟ

  • ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ಬ್ರೇಕ್

    ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ಬ್ರೇಕ್

    ಮಂಡ್ಯ: ಜಿಲ್ಲೆಯ ಬೇಬಿ ಬೆಟ್ಟದಲ್ಲಿ (Baby Hills) ಟ್ರಯಲ್ ಬ್ಲಾಸ್ಟ್ (Trial Blast) ನಡೆಸಿದರೆ ಹಳೆ ಮೈಸೂರು ಭಾಗದ ಜೀವನಾಡಿಯಾದ ಕೆಆರ್‌ಎಸ್ (KRS) ಅಣೆಕಟ್ಟೆಗೆ ಅಪಾಯ ಎದುರಾಗುತ್ತೆ ಎಂದು ಬೇಬಿ ಬೆಟ್ಟದಲ್ಲಿನ ಟ್ರಯಲ್ ಬ್ಲಾಸ್ಟ್‌ಗೆ ರೈತ ಸಂಘಟನೆಗಳು ವಿರೋಧಿಸಿದ ಬೆನ್ನಲ್ಲೇ ಇದೀಗ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ.

    ಇಂದು ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್ ವಿಚಾರ ಸಂಬಂಧ ಸಚಿವ ಚಲುವರಾಯಸ್ವಾಮಿ (Chaluvarayaswamy) ಮಂಡ್ಯ (Mandya) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ಕರೆದಿದ್ದರು. ಈ ಸಭೆಯಲ್ಲಿ ಜನಪ್ರತಿನಿಧಿಗಳು, ರೈತ ಸಂಘಟನೆಯ ಮುಖಂಡರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಭಾಗಿಯಾಗಿದ್ದರು. ಆರಂಭದಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ರೈತ ಸಂಘಟನೆಗಳ ಮುಖಂಡರು ಈ ಬಗ್ಗೆ ಮಾತನಾಡಿದರು. ಇದನ್ನೂ ಓದಿ: ಜು.23 ರಂದು ʼಮೋದಿ 3.0ʼ ಬಜೆಟ್‌ ಮಂಡನೆ

    ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಯನ್ನು ಮತ್ತೆ ಮಾಡಲು ಅವಕಾಶ ನೀಡಿದರೆ ಕೆಆರ್‌ಎಸ್ ಅಣೆಕಟ್ಟೆಗೆ ಅಪಾಯ ಎದುರಾಗೋದು ನಿಶ್ಚಿತವಾಗಿದೆ. ಕೆಆರ್‌ಎಸ್ ಡ್ಯಾಂ ಅನ್ನು ಲಕ್ಷಾಂತರ ಜನರು ಅವಲಂಬಿಸಿದ್ದಾರೆ. ಮೈಸೂರು ಮಹಾರಾಜರು ನಮಗೆ ನೀಡಿರುವ ಅಮೂಲ್ಯ ಕೊಡುಗೆ ಕೆಆರ್‌ಎಸ್ ಡ್ಯಾಂ ಆಗಿದೆ. ಇದೀಗ ಇಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಿ ಮುಂದೆ ಗಣಿಗಾರಿಕೆಗೆ ಅನುಮತಿ ನೀಡಿದ್ರೆ ಡ್ಯಾಂಗೆ ಹಾನಿಯಾಗುತ್ತದೆ. ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡದೆ ಸುಗ್ರೀವಾಜ್ಞೆ ಜಾರಿಗೆ ತರಬೇಕೆಂದು ರೈತ ಸಂಘಟನೆಗಳ ಮುಖಂಡರು ಆಗ್ರಹ ಮಾಡಿದರು. ಇದನ್ನೂ ಓದಿ: ಕೀರ್ತಿ ಚಕ್ರ; ಪತಿಯ ಮರಣೋತ್ತರ ಪ್ರಶಸ್ತಿ ಸ್ವೀಕರಿಸುವಾಗ ಕ್ಯಾ.ಅನ್ಶುಮನ್‌ ಸಿಂಗ್‌ ಪತ್ನಿ ಭಾವುಕ

    ಬಳಿಕ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಈ ಸಂಬಂಧ ಜುಲೈ 15ಕ್ಕೆ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಹೀಗಾಗಿ 15ರ ವರೆಗೆ ಟ್ರಯಲ್ ಬ್ಲಾಸ್ಟ್ ವಿಚಾರವನ್ನು ಮುಂದೂಡಲಾಗಿದೆ. ನಾವು ಸಹ ಕೋರ್ಟ್‌ಗೆ ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದೇವೆ. ಟ್ರಯಲ್ ಬ್ಲಾಸ್ಟ್ ಸಂಬಂಧ ತಜ್ಞರ ವರದಿ, ಇಲ್ಲಿನ ರೈತರ ಅಭಿಪ್ರಾಯಗಳನ್ನು ನ್ಯಾಯಲಯಕ್ಕೆ ತಿಳಿಸಿ ಮನದಟ್ಟು ಮಾಡುವ ಕೆಲಸ ಮಾಡುತ್ತೇವೆ. ನಮಗೂ ಸಹ ಗಣಿಗಾರಿಕೆ ಮೇಲೆ ಆಸಕ್ತಿ ಇಲ್ಲ. ಕೆಆರ್‌ಎಸ್ ಡ್ಯಾಂ ಉಳಿಸಿಕೊಳ್ಳುವುದೆ ನಮ್ಮ ನಿಲುವಾಗಿದೆ. ಜು.15ರವರೆಗೆ ಯಾವುದೇ ಟ್ರಯಲ್ ಬ್ಲಾಸ್ಟ್ ಮಾಡೋದಿಲ್ಲ ಎಂದು ಸಭೆ ಬಳಿಕ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಉಪ ಪ್ರಧಾನಿ ಎಲ್.ಕೆ ಅಡ್ವಾಣಿ ಆರೋಗ್ಯ ಸ್ಥಿರ – ಆಸ್ಪತ್ರೆಯಿಂದ ಡಿಸ್ಚಾರ್ಜ್

  • ಮಂಡ್ಯದ ಬೇಬಿ ಬೆಟ್ಟದಲ್ಲಿ ಇಂದಿನಿಂದ 4 ದಿನ ಟ್ರಯಲ್ ಬ್ಲಾಸ್ಟ್ – ಕೆಆರ್‌ಎಸ್‌ಗೆ ಬಂದ ತಜ್ಞರ ತಂಡ

    ಮಂಡ್ಯದ ಬೇಬಿ ಬೆಟ್ಟದಲ್ಲಿ ಇಂದಿನಿಂದ 4 ದಿನ ಟ್ರಯಲ್ ಬ್ಲಾಸ್ಟ್ – ಕೆಆರ್‌ಎಸ್‌ಗೆ ಬಂದ ತಜ್ಞರ ತಂಡ

    – ರೈತ ಸಂಘ, ಬಿಜೆಪಿಯಿಂದ ಗೋ ಬ್ಯಾಕ್ ಚಳುವಳಿ

    ಮಂಡ್ಯ: ಇಲ್ಲಿನ ಬೇಬಿ ಬೆಟ್ಟದಲ್ಲಿ (Baby Betta) ಗಣಿಗಾರಿಕೆ (Mining) ನಡೆಯಬೇಕೋ ಬೇಡವೋ ಎಂದು ತೀರ್ಮಾನ ಮಾಡುವ ಉದ್ದೇಶದಿಂದ ಹೈಕೋರ್ಟ್ ಟ್ರಯಲ್ ಬ್ಲಾಸ್ಟ್ (Trail blast) ನಡೆಸಲು ಆದೇಶ ನೀಡಿದೆ. ಅದರಂತೆ ಇಂದಿನಿಂದ 4 ದಿನಗಳ ಟ್ರಯಲ್ ಬ್ಲಾಸ್ಟ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಈ ನಡುವೆ ಇದಕ್ಕೆ ತೀವ್ರ ವಿರೋಧ ಸಹ ವ್ಯಕ್ತವಾಗುತ್ತಿದೆ.

    ಮಂಡ್ಯ (Mandya) ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಗಣಿಗಾರಿಕೆಯಿಂದ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್ (KRS) ಅಣೆಕಟ್ಟೆಗೆ ಹಾನಿ ಆಗುತ್ತದೆ ಎಂದು ಹಲವು ಹೋರಾಟಗಳು ನಡೆದವು. ರೈತ ಸಂಘಟನೆಗಳು, ಸಂಸದೆ ಸುಮಲತಾ ಅಂಬರೀಶ್, ಸಾಮಾಜಿಕ ಕಾರ್ಯಕರ್ತರ ಹೋರಾಟದ ಪ್ರತಿಫಲವಾಗಿ ಹೈಕೋರ್ಟ್ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಿತ್ತು. ಇದೀಗ ಇದೇ ಹೈಕೋರ್ಟ್ ಬೇಬಿ ಬೆಟ್ಟದ ಗಣಿಗಾರಿಕೆಯಿಂದ ಕೆಆರ್‌ಎಸ್ ಅಣೆಕಟ್ಟೆಗೆ ಸಮಸ್ಯೆ ಆಗುತ್ತಾ ಎಂದು ತಿಳಿಯಲು ಟ್ರಯಲ್ ಬ್ಲಾಸ್ಟ್ ಮಾಡಿಸಲು ಸರ್ಕಾರಕ್ಕೆ ಆದೇಶ ನೀಡಿದೆ. ಇದನ್ನೂ ಓದಿ: ಸರ್‌, ನಾನು ನೂರಾರು ಕೋಟಿಗೆ ಬಾಳ್ತೀನಿ: ಪಾಕ್‌ ಪರ ಘೋಷಣೆ ಕೂಗಿದ್ದ ನಾಶಿಪುಡಿ ಯಾರು?

    ಸರ್ಕಾರವೂ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲು ಇಂದಿನಿಂದ 4 ದಿನ ಮುಹೂರ್ತ ಫಿಕ್ಸ್ ಮಾಡಿದೆ. ಈ ಸಂಬಂಧ ಹೊರ ರಾಜ್ಯದಿಂದ ತಜ್ಞರ ತಂಡ ಸೋಮವಾರ ರಾತ್ರಿಯೇ ಕೆಆರ್‌ಎಸ್‌ನ ರಾಯಲ್ ಆರ್ಕಿಡ್ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದೆ. ಇಂದು ಬೆಳಗ್ಗೆ ಕೆಆರ್‌ಎಸ್‌ನ ಕಾವೇರಿ ಸಭಾಂಗಣದಲ್ಲಿ ತಜ್ಞರು ಕಾವೇರಿ ನೀರಾವರಿ ನಿಗಮ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಸೇರಿದಂತೆ ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಬೇಬಿ ಬೆಟ್ಟಕ್ಕೂ ತಜ್ಞರು ಭೇಟಿ ನೀಡಲಿದ್ದಾರೆ. ಬುಧವಾರ ಹಾಗೂ ಗುರುವಾರ ಬೇಬಿ ಬೆಟ್ಟದ ಆಯ್ದ ಸ್ಥಳದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳು ಮೂರು ದಿನ ಪೊಲೀಸ್ ಕಸ್ಟಡಿಗೆ

    ಒಂದೆಡೆ ಹೈಕೋರ್ಟ್ ಆದೇಶದಂತೆ ಸರ್ಕಾರ ಇಂದಿನಿಂದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಿಸುತ್ತಿದ್ದರೆ, ಇನ್ನೊಂದೆಡೆ ರೈತ ಸಂಘ (Farmers Association) ಹಾಗೂ ಬಿಜೆಪಿ (BJP) ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಸರ್ಕಾರ ಗಣಿ ಮಾಲೀಕರ ಲಾಬಿಗೆ ಮಣಿದು ಟ್ರಯಲ್ ಬ್ಲಾಸ್ಟ್ ಮಾಡಿಸಲು ಮುಂದಾಗುತ್ತಿದೆ. ಟ್ರಯಲ್ ಬ್ಲಾಸ್ಟ್ ಮಾಡುವಾಗ ಕಡಿಮೆ ಸ್ಫೋಟ ಬಳಸಿ ಬ್ಲಾಸ್ಟ್ ಮಾಡಿ ಕೆಆರ್‌ಎಸ್‌ಗೆ ತೊಂದರೆ ಆಗಲ್ಲ ಎಂದು ವರದಿ ನೀಡುತ್ತಾರೆ. ಬಳಿಕ ಬೆಟ್ಟದಲ್ಲಿ ಮತ್ತೆ ಗಣಿಗಾರಿಕೆ ಆರಂಭವಾಗಿ ಅಪಾರ ಪ್ರಮಾಣದ ಸ್ಫೋಟಕ ಬಳಸಿ ಬ್ಲಾಸ್ಟ್ ಮಾಡುರತ್ತಾರೆ. ಇದರಿಂದ ಕೆಆರ್‌ಎಸ್‌ಗೆ ಹಾನಿಯಾಗುತ್ತದೆ. ಹೀಗಾಗಿ ಟ್ರಯಲ್ ಬ್ಲಾಸ್ಟ್ ಮಾಡಬಾರದು. ಈಗ ಇರುವಂತೆಯೇ ಶಾಶ್ವತವಾಗಿ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಲ್ಲಿಸಬೇಕೆಂದು ರೈತ ಸಂಘ ಹಾಗೂ ಬಿಜೆಪಿ ಆಗ್ರಹಿಸಿದೆ. ಇದನ್ನೂ ಓದಿ: ಶಿಲ್ಪಿ ಅರುಣ್ ಯೋಗಿರಾಜ್‌ಗೆ ಪ್ರತಿಷ್ಠಿತ ‘ಅಭಿನವ ಅಮರಶಿಲ್ಪಿ’ ಪ್ರಶಸ್ತಿ ಪ್ರದಾನ

    ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತರು ಗೋ ಬ್ಯಾಕ್ ಚಳುವಳಿ ನಡೆಸಲಿದ್ದಾರೆ. ಕೆಆರ್‌ಎಸ್ ಬೃಂದಾವನದ ಮುಖ್ಯ ದ್ವಾರದ ರಸ್ತೆಯಲ್ಲಿ ಈ ಚಳುವಳಿ ನಡೆಯಲಿದೆ. ರೈತಸಂಘ ಹಾಗೂ ಬೇಬಿ ಬೆಟ್ಟ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಟ್ರಯಲ್ ಬ್ಲಾಸ್ಟ್ ನಡೆಸದಂತೆ ಬೆಳಿಗ್ಗೆ 10 ಗಂಟೆಗೆ ಚಳುವಳಿ ಆರಂಭವಾಗಲಿದೆ. ಬಿಜೆಪಿಯಿಂದಲೂ ಪ್ರತ್ಯೇಕ ಪ್ರತಿಭಟನೆಗೆ ನಿರ್ಧಾರ ಮಾಡಿದ್ದು, ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಟ್ರಯಲ್ ಬ್ಲಾಸ್ಟ್‌ಗೆ ಆಗಮಿಸಿರುವ ತಜ್ಞರು ವಾಪಸ್ ತೆರಳುವಂತೆ ಗೋ ಬ್ಯಾಕ್ ಚಳುವಳಿ ನಡೆಯಲಿದೆ. ಇದನ್ನೂ ಓದಿ: ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮೋದಿ ನರ ಕಟ್- ತಲ್ವಾರ್ ಹಿಡಿದು ಅವಾಜ್ ಹಾಕಿದವನಿಗಾಗಿ ಶೋಧ

    ಗಣಿ ಮಾಲೀಕರು ನಡೆಸುವ ಬ್ಲಾಸ್ಟ್‌ಗೂ ತಜ್ಞರು ನಡೆಸುವ ಬ್ಲಾಸ್ಟ್‌ಗೂ ತುಂಬಾ ವ್ಯತ್ಯಾಸ ಇದೆ. ಗಣಿಗಾರಿಕೆಗೆ ಅಪಾರ ಪ್ರಮಾಣದ ಸ್ಫೋಟಕ ಬಳಕೆ ಮಾಡುತ್ತಾರೆ. ಆದರೆ ತಜ್ಞರು ಟ್ರಯಲ್ ಬ್ಲಾಸ್ಟ್‌ನಲ್ಲಿ ಅಲ್ಪ ಪ್ರಮಾಣದ ಸ್ಫೋಟಕ ಬಳಸುತ್ತಾರೆ. ಟ್ರಯಲ್ ಬ್ಲಾಸ್ಟ್‌ನಲ್ಲಿ ಕೆಆರ್‌ಎಸ್ ಡ್ಯಾಂಗೆ ಅಪಾಯ ಇಲ್ಲ ಎಂಬ ವರದಿ ಬರುವ ಸಾಧ್ಯತೆ ಇದೆ. ಯಾವುದೇ ಕಾರಣಕ್ಕೂ ಟ್ರಯಲ್ ಬ್ಲಾಸ್ಟ್ ಮಾಡಬಾರದು ಎಂದು ಪ್ರತಿಭಟನೆ ನಡೆಯಲಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ಎಲ್ಲರೂ ಜೇಬಿನಲ್ಲಿ ಟಿಕೆಟ್‌ ಇಟ್ಕೊಂಡು ಓಡಾಡ್ತಿದ್ದಾರೆ: ಅನಂತ್‌ ಕುಮಾರ್‌ ಹೆಗಡೆ

  • KRSಗೆ ಕಂಟಕದ ಆತಂಕ – ರೈತರ ಧರಣಿಗೆ ಮಣಿದು ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ತಡೆ

    KRSಗೆ ಕಂಟಕದ ಆತಂಕ – ರೈತರ ಧರಣಿಗೆ ಮಣಿದು ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ತಡೆ

    ಮಂಡ್ಯ: ತೀವ್ರ ವಿರೋಧದ ನಡುವೆಯೂ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‍ಗೆ ಸಿದ್ಧತೆ ನಡೆಸಲಾಗಿದ್ದು, ರೈತರ ಧರಣಿಗೆ ಮಣಿದು ತಾತ್ಕಾಲಿಕ ತಡೆ ನೀಡಲಾಗಿದೆ. ಕೆಆರ್‍ಎಸ್ ವ್ಯಾಪ್ತಿಯ ಬೇಬಿ ಬೆಟ್ಟದಲ್ಲಿ ಬ್ಲಾಸ್ಟಿಂಗ್‍ಗೆ ತಯಾರಿ ನಡೆಸಲಾಗುತ್ತಿತ್ತು. ಇದೀಗ ತೀವ್ರ ವಿರೋಧದಿಂದಾಗಿ `ಟ್ರಯಲ್ ಬ್ಲಾಸ್ಟ್’ ಮುಂದೂಡಿಕೆ ಮಾಡಲಾಗಿದೆ.

    ತಾತ್ಕಾಲಿಕವಾಗಿ ಟ್ರಯಲ್ ಬ್ಲಾಸ್ಟ್ ಮುಂದೂಡಿಕೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟದಿಂದ ಅಹೋರಾತ್ರಿ ಧರಣಿ ವಾಪಸ್ ಪಡೆಯಲಾಗಿದೆ. ಆದರೆ ಟ್ರಯಲ್ ಬ್ಲಾಸ್ಟ್ ಬಗ್ಗೆ ಸ್ಪಷ್ಟ ತೀರ್ಮಾನ ಬರುವವರೆಗೆ ಹೋರಾಟ ಮುಂದುವರಿಸಲಿದ್ದಾರೆ. ಕೆಆರ್‍ಎಸ್ ಹಾಗೂ ಬೇಬಿ ಬೆಟ್ಟದ ಸುತ್ತಮುತ್ತ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಇದನ್ನೂ ಓದಿ: ಟ್ರಯಲ್ ಬ್ಲಾಸ್ಟ್ ಆಧರಿಸಿ ಗಣಿಗಾರಿಕೆಗೆ ಅವಕಾಶ ಕೊಡಬಾರದು: ಸಿಎಂಗೆ ಸುಮಲತಾ ಪತ್ರ

    ಇಂದು ಕೆಆರ್‍ಎಸ್ ಬಳಿಯ ಕಟ್ಟೇರಿಯ ಬಳಿ ಸಂಪೂರ್ಣ ಟ್ರಯಲ್ ಬ್ಲಾಸ್ಟ್ ನಿಷೇಧವಾಗಬೇಕೆಂದು ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಜಿಲ್ಲಾಡಳಿತದ ನಿಲುವು ಬರುವವರೆಗೆ ಪ್ರತಿಭಟನೆ ಮುಂದುವರಿಯಲಿದ್ದು, ದಿನಕ್ಕೊಂದು ವಿಭಿನ್ನ ಪ್ರತಿಭಟನೆ ಮಾಡುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: KRS ಸುತ್ತಮುತ್ತ ಟ್ರಯಲ್ ಬ್ಲಾಸ್ಟ್ ಆಕ್ಷೇಪಿಸಿ ರಾಜಮನೆತನ ಪತ್ರ

    ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತರು ಧರಣಿ ನಡೆಸುತ್ತಿದ್ದಂತೆಯೇ ಇತ್ತ ಪ್ರಮೋದಾದೇವಿ ಹಾಗೂ ಸಂಸದೆ ಸುಮಲತಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗಣಿ ಸಚಿವರಿಗೆ ಪತ್ರ ಬರೆದಿದ್ದಾರೆ. ಕೆಆರ್‍ಎಸ್ ವ್ಯಾಪ್ತಿಯ 20 ಕಿ.ಮೀ ಗಣಿನಿಷೇಧ ಪ್ರದೇಶವಾಗಿ ಯಥಾಸ್ಥಿತಿ ಕಾಪಾಡುವಂತೆ ಸಿಎಂ, ಗಣಿ ಸಚಿವರಿಗೆ ಸುಮಲತಾ ಅಂಬರೀಶ್ ಮನವಿ ಮಾಡಿದ್ದಾರೆ.

    ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸಂಶೋಧನಾ ಸಂಸ್ಥೆಗಳು ಕೆಆರ್‍ಎಸ್ ಸುತ್ತಮುತ್ತಲ ಗಣಿಗಾರಿಕೆಯಿಂದ ಡ್ಯಾಂಗೆ ಆಗುತ್ತಿರುವ ಅಪಾಯದ ಬಗ್ಗೆ ವರದಿ ನೀಡಿವೆ. ಟ್ರಯಲ್ ಬ್ಲಾಸ್ಟ್ ಆಧರಿಸಿ ಗಣಿಗಾರಿಕೆಗೆ ಅವಕಾಶ ಕೊಡಬಾರದು ಎಂದು ಒತ್ತಾಯಿಸಿದ್ದಾರೆ. ಕೆಆರ್‍ಎಸ್ ಸುತ್ತಮುತ್ತ 20 ಕಿ.ಮೀ ವ್ಯಾಪ್ತಿ ಗಣಿಗಾರಿಕೆ ನಿಷೇಧದ ಪ್ರದೇಶವಾಗಿಯೆ ಇರಲಿ. ಇದೇ ನನ್ನ ಹಾಗೂ ರೈತ, ಪ್ರಗತಿಪರ ಸಂಘಟನೆಗಳ ನಿಲುವು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೇಬಿ ಬೆಟ್ಟದಲ್ಲಿ ಸ್ಫೋಟಕಗಳು ಪತ್ತೆ

    ಬೇಬಿ ಬೆಟ್ಟದಲ್ಲಿ ಸ್ಫೋಟಕಗಳು ಪತ್ತೆ

    ಮಂಡ್ಯ: ಕಳೆದ ಒಂದುವರೆ ತಿಂಗಳಿಂದ ಸಾಕಷ್ಟು ವಿವಾದ ಮೂಡಿಸಿರುವ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ನಿಷೇಧಿತ ಗಣಿ ಪ್ರದೇಶಗಳಲ್ಲಿ ಸ್ಫೋಟಕಗಳು ಪತ್ತೆಯಾಗಿವೆ.

    ಬೇಬಿ ಬೆಟ್ಟದ ಸಿದ್ಧಲಿಂಗೇಶ್ವರ ಕ್ರಷರ್ ಸಮೀಪ ಸ್ಫೋಟಕ ವಸ್ತಗಳು ಪತ್ತೆಯಾಗಿವೆ. ಕಳೆದ ಒಂದೂವರೆ ತಿಂಗಳಿನಿಂದ ಬೇಬಿ ಬೆಟ್ಟದ ಗಣಿಗಾರಿಕೆಯ ಬಗ್ಗೆ ರಾಜ್ಯ ಮಟ್ಟದಲ್ಲಿ ವ್ಯಾಪಕ ಸುದ್ದಿಯಾಗಿತ್ತು. ಈ ಪ್ರದೇಶದಲ್ಲಿ ಬ್ಲಾಸ್ಟಿಂಗ್ ಮೂಲಕ ಗಣಿಗಾರಿಕೆ ಮಾಡುತ್ತಿಲ್ಲ ಎಂದು ಗಣಿ ಮಾಲೀಕರು ಹಾಗೂ ಅಧಿಕಾರಿಗಳು ಸ್ಪಷ್ಟಪಡಿಸಿದ್ದರು. ಇದೀಗ ಈ ಪ್ರದೇಶದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿರುವ ಹಿನ್ನೆಲೆ ಹಲವು ಅನುಮಾನಗಳಿಗ ಕಾರಣವಾಗಿದೆ. ಕಳೆದ ಜುಲೈ 16 ರಂದು  ಕೆಆರ್‌ಎಸ್‌ ಸರಹದ್ದಿನಲ್ಲೂ ಸಹ ಸ್ಫೋಟಕಗಳು ಪತ್ತೆಯಾಗಿದ್ದವು.

    ಇಂದು ಪತ್ತೆಯಾಗಿರುವ ಸ್ಫೋಟಕಗಳ ಪೈಕಿ 11 ಡಿಟೋನೇಟರ್, 20 ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿವೆ. ಪತ್ತೆಯಾಗಿರುವ ಸ್ಫೋಟಕಗಳನ್ನು ಪಾಂಡವಪುರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂತಹ ಪ್ರಕರಣಗಳು ಪದೇ ಪದೇ ಬೇಬಿ ಬೆಟ್ಟದಲ್ಲಿ ಬೆಳಕಿಗೆ ಬರುತ್ತಿರುವ ಕಾರಣ ಬೆಟ್ಟದಲ್ಲಿ ಸಂಪೂರ್ಣವಾಗಿ ಗಣಿಗಾರಿಕೆಯನ್ನು ನಿಷೇಧ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹೊಸ ಸ್ವರೂಪ ಪಡೆದ ಕೊರೊನಾ-ಕಣ್ಣೀರಿನಿಂದಲೂ ಸೋಂಕು ಹಬ್ಬುತ್ತೆ, ಎಚ್ಚರ..!

  • ಕನ್ನಂಬಾಡಿ ಕಟ್ಟೆ, ಬೇಬಿ ಬೆಟ್ಟದ ಸರಹದ್ದಿನಲ್ಲಿ ಸ್ಪೋಟಕಗಳು ಪತ್ತೆ

    ಕನ್ನಂಬಾಡಿ ಕಟ್ಟೆ, ಬೇಬಿ ಬೆಟ್ಟದ ಸರಹದ್ದಿನಲ್ಲಿ ಸ್ಪೋಟಕಗಳು ಪತ್ತೆ

    ಮಂಡ್ಯ: ಕನ್ನಂಬಾಡಿ ಕಟ್ಟೆ ಹಾಗೂ ಬೇಬಿ ಬೆಟ್ಟದ ಸರಹದ್ದಿನಲ್ಲಿ ಸ್ಪೋಟಕಗಳು ಪತ್ತೆಯಾಗಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಇದನ್ನೂ ಓದಿ: ವಿಕ್ರಾಂತ್ ರೋಣಗಾಗಿ ಕನ್ನಡ ಕಲಿತ ಜಾಕ್ವೆಲಿನ್

    ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಬರುವ ಕನ್ನಂಬಾಡಿ ಕಟ್ಟೆ ಹಾಗೂ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ನಡುವೆ ಜಿಲೆಟಿನ್ ಕಡ್ಡಿಗಳು ಸೇರಿದಂತೆ ಇತರೆ ಸ್ಪೋಟಕ ವಸ್ತಗುಳು ಪತ್ತೆಯಾಗಿವೆ. ದನ ಮೇಯಿಸಲು ವ್ಯಕ್ತಿಯೊಬ್ಬ ತೆರಳಿದಾಗ ಈ ಸ್ಫೋಟಕ ವಸ್ತುಗಳಿರುವುದ ಪತ್ತೆಯಾಗಿದೆ. ಇದನ್ನೂ ಓದಿ: ತಲೆ ಕೆಳಗಾಗಿ ಚಿತ್ರ ಬಿಡಿಸುವ ಗಂಗಾವತಿಯ ಯುವ ಕಲಾವಿದ

    ಈ ಸ್ಪೋಟಕಗಳನ್ನು ಕಲ್ಲು ಗಣಿಗಾರಿಕೆಗೆ ಉಪಯೋಗಿಸಲಾಗುತ್ತದೆ. ಒಂದಯ ಕಡೆ ಅಧಿಕಾರಿಗಳು ಹಾಗೂ ಗಣಿ ಮಾಲೀಕರು ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆ ಮಾಡಲು ಸ್ಪೋಟಕಗಳು ಬಳಸುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಈ ಸ್ಪೋಟಕಗಳು ಇಲ್ಲಿ ಹೇಗೆ ಬಂತು ಎಂದು ಸ್ಥಳೀಯರು ಪ್ರಶ್ನೆ ಮಾಡುತ್ತಿದ್ದಾರೆ. ಕನ್ನಂಬಾಡಿ ಕಟ್ಟೆಯ ಸರಹದ್ದಿನಲ್ಲಿ ಇಂತಹ ಸ್ಫೋಟಕ ವಸ್ತಗಳು ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿವೆ. ಜಿಲ್ಲಾಡಳಿತ ಈ ಬಗ್ಗೆ ಕ್ರಮವಹಿಸಬೇಕೆಂದು ಸಾರ್ವಜನಿಕರು ಆಗ್ರಹ ಪಡಿಸುತ್ತಿದ್ದಾರೆ. ಈ ಕುರಿತು ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • KRS ಬಿರುಕು ವಿಚಾರದಲ್ಲಿ ಸುಮಲತಾ ದ್ವಂದ್ವ- ದೊಡ್ಡವರ ಬಗ್ಗೆ ಮಾತಾಡಲ್ಲ ಅಂದ್ರು ಹೆಚ್‍ಡಿಕೆ

    KRS ಬಿರುಕು ವಿಚಾರದಲ್ಲಿ ಸುಮಲತಾ ದ್ವಂದ್ವ- ದೊಡ್ಡವರ ಬಗ್ಗೆ ಮಾತಾಡಲ್ಲ ಅಂದ್ರು ಹೆಚ್‍ಡಿಕೆ

    – ಗಣಿ ಅಕ್ರಮ ಬಗ್ಗೆ ಜು.30ರೊಳಗೆ ವರದಿಗೆ ಸೂಚನೆ

    ಬೆಂಗಳೂರು: ಮಂಡ್ಯದ ಅಕ್ರಮ ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಸಮರ ಮತ್ತಷ್ಟು ಹೊಸ ರೂಪ ಪಡೆದುಕೊಂಡಿದೆ. ಅಕ್ರಮ ಗಣಿಗಾರಿಕೆಯಿಂದ ಕೆಆರ್‍ಎಸ್ ಡ್ಯಾಂಗೆ ಹಾನಿಯ ಬಗ್ಗೆ ಸಂಸದೆ ಸುಮಲತಾ ದ್ವಂದ್ವ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಕೆಆರ್‍ಎಸ್ ಡ್ಯಾಂ ಬಿರುಕು ಬಿಟ್ಟಿದೆ ಅಂದಿದ್ರು. ಆದ್ರೆ ಇಂದು ಕೆಆರ್‍ಎಸ್ ಡ್ಯಾಂ ಪರಿಶೀಲನೆ ವೇಳೆ, ಡ್ಯಾಂ ಬಿರುಕು ಬಿಟ್ಟಿದೆ ಎಂದು ನಾನು ಹೇಳಿಲ್ಲ. ಬಿರುಕು ಬಿಟ್ಟಿದಿಯೇ ಎಂದು ನಾನು ಪ್ರಶ್ನಿಸಿದ್ದೆ ಎಂದು ಹೇಳಿದರು.

    ಅಧಿಕಾರಿಗಳ ಜೊತೆ ಸಭೆ ನಡೆಸಿ, ಮಾಹಿತಿ ಪಡೆದರು. ಡ್ಯಾಮ್ ಬಿರುಕೇ ಆಗಿಲ್ಲ ಅನ್ನೋದು ಅಸತ್ಯ. ಈಗ ಸಣ್ಣಪುಟ್ಟ ಬಿರುಕು ಅಂತೇವೆ, ಮುಂದೆ ಅವೇ ಬಹಳ ಮುಖ್ಯ ಆಗುತ್ತೆ. ಗ್ರೋಟಿಂಗ್ ಅನ್ನೋದನ್ನ ಯಾಕೆ ಮಾಡ್ತೀರಿ? 67 ಕೋಟಿಯಲ್ಲಿ ಏನು ಮಾಡಿದ್ರಿ? ಅಕ್ರಮ ಗಣಿಗಾರಿಕೆ ಬ್ಲಾಸ್ಟಿಂಗ್‍ನಿಂದ ಡ್ಯಾಂಗೆ ಏನೂ ಆಗಲ್ವಾ? ಎಂದು ಕ್ಲಾಸ್ ತೆಗೆದುಕೊಂಡರು. 7 ದಿನದಲ್ಲಿ ಮಾಹಿತಿ ಕೊಡೋದಾಗಿ ಅಧಿಕಾರಿಗಳು ಹೇಳಿದರು.

    ಸಂಜೆ ಶ್ರೀರಂಗಪಟ್ಟಣದ ಬೇಬಿಬೆಟ್ಟಕ್ಕೂ ಸಂಸದೆ ಸುಮಲತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ನೂರಾರು ರೈತ ಸಂಘದ ಕಾರ್ಯಕರ್ತರು ಜಮಾಯಿಸಿದ್ರು. ನಮ್ಮ ಬದುಕು ಗಣಿಗಾರಿಕೆಯಿಂದಲೇ ನಡೆಯುತ್ತಿದೆ. ಸಾವಿರಾರು ಜನ ಗಣಿಗಾರಿಕೆಯನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಕೈಕುಳಿ ಗಣಿಗಾರಿಕೆಗೆ ಅನುಮತಿ ಕೊಡುವಂತೆ ಮನವಿ ಮಾಡಿದರು. ಗಣಿ ಮಾಲೀಕರು ಕೂಡ ಮನವಿ ಸಲ್ಲಿಸಿದ್ರು. ಗಣಿಗಾರಿಕೆಯಿಂದ ಡ್ಯಾಮ್‍ಗೆ ಅಪಾಯ ಇದ್ಯಾ ಇಲ್ವಾ..? ಅಂತ ಟ್ರಯಲ್ ಬ್ಲಾಸ್ಟ್ ನಲ್ಲಿ ಸ್ಪಷ್ಟತೆ ಸಿಗಲಿದೆ. ವಿರೋಧಿಸುತ್ತಿರುವ ರೈತರ ಮನವೊಲಿಸ್ತೇನೆ ಎಂದರು.

    ಈ ಮದ್ಯೆ, ಸುಮಲತಾ ಭೇಟಿ ಬಳಿಕ ಮಂಡ್ಯದಲ್ಲಿನ ಅಕ್ರಮ ಗಣಿಗಾರಿಕೆ ಬಗ್ಗೆ ಸ್ಥಳ ಪರಿಶೀಲಿಸಿ, ಬರಬೇಕಾಗಿರುವ ರಾಜಧನ ಹಾಗೂ ದಂಡ ವಸೂಲಾತಿ ಬಗ್ಗೆ ಜುಲೈ 30ರೊಳಗೆ ವರದಿ ಸಲ್ಲಿಸಲು ಗಣಿ ಸಚಿವ ಮುರುಗೇಶ್ ನಿರಾಣಿ ಆದೇಶಿಸಿದ್ದಾರೆ.

    ಮಾಜಿ ಸಿಎಂ ಹೆಚ್‍ಡಿಕೆ ವಿರುದ್ಧ ಮತ್ತೆ ಸಂಸದೆ ಸುಮಲತಾ ವಾಗ್ದಾಳಿ ನಡೆಸಿದ್ದಾರೆ. ಕಣ್ಣೀರು ಹಾಕುವುದು ಯಾರು ಎಂಬುದು ಜನರಿಗೆ ಗೊತ್ತು. ಪ್ರತಿ ಚುನಾವಣೆಯಲ್ಲೂ ಕಣ್ಣೀರು ಹಾಕುವ ಕಾರ್ಡ್ ಪ್ಲೇ ಆಗಿದ್ದಾರೆ. ನನಗೆ ಕಣ್ಣೀರ ರಾಜಕೀಯ ಬೇಕಿಲ್ಲ. ನನ್ನ ವಿರುದ್ಧ ಸೊಂಟದ ಭಾಷೆ ಬಳಸಿದ್ದಾರೆ. ವೀಡಿಯೋ, ಫೋಟೋ ಎಡಿಟ್ ಮಾಡೋರು ಮಾಡಲಿ. ಇದಕ್ಕೆಲ್ಲ ನಾನು ಜಗ್ಗಲ್ಲ, ಕುಗ್ಗಲ್ಲ ಎಂದು ತಿರುಗೇಟು ಕೊಟ್ಟರು.

    ಸುಮಲತಾ ಬಗ್ಗೆ ಮಾತನಾಡಲು ಮಾಜಿ ಸಿಎಂ ಕುಮಾರಸ್ವಾಮಿ ನಿರಾಕರಿಸಿದ್ದಾರೆ. ಚನ್ನಪಟ್ಟಣದಲ್ಲಿ ಪ್ರತಿಕ್ರಿಯೆ ಕೇಳಿದಾಗ, ದೊಡ್ಡವರ ವಿಷಯವನ್ನ ನನ್ನ ಬಳಿ ಕೇಳಬೇಡಿ. ಮಾತನಾಡುವ ವಿಚಾರ ಏನು ಇಲ್ಲ ಅಂದ್ರು. ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಠ್ ಮಾತನಾಡಿ, ನಿಮ್ಮ ಕಿತ್ತಾಟ, ಒಳಜಗಳದಿಂದ ರಾಜ್ಯವನ್ನ ಹಾಳು ಮಾಡಬೇಡಿ ಅಂದ್ರೆ, ಸಚಿವ ಬಿಸಿ ಪಾಟೀಲ್, ನಿಮ್ಮ ರಾಜಕೀಯಕ್ಕೆ ಕನ್ನಂಬಾಡಿ ಕಟ್ಟೆ ಬೇಕಿತ್ತಾ ಅಂದ್ರು.

  • ಬೇಬಿ ಬೆಟ್ಟದ ಗಣಿಗಾರಿಕೆಗೆ ಸಂಪೂರ್ಣ ಬ್ರೇಕ್

    ಬೇಬಿ ಬೆಟ್ಟದ ಗಣಿಗಾರಿಕೆಗೆ ಸಂಪೂರ್ಣ ಬ್ರೇಕ್

    ಮಂಡ್ಯ: ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೆ ಮಂಡ್ಯ ಜಿಲ್ಲಾಡಳಿತದಿಂದ ಸಂಪೂರ್ಣ ಬ್ರೇಕ್ ಬಿದ್ದಿದೆ. ಹಳೆ ಮೈಸೂರು ಭಾಗದ ರೈತರ ಜೀವನಾಡಿಯಾಗಿರುವ ಕೆಆರ್‍ಎಸ್ ಡ್ಯಾಂಗೆ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಅಪಾಯ ಉಂಟಾಗುತ್ತಿದೆ ಎಂಬ ತಜ್ಞರ ಮನವಿಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

    ಬೇಬಿ ಬೆಟ್ಟದಲ್ಲಿ ನಡೆಯುವ ಗಣಿಗಾರಿಕೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‍ಎಸ್ ಡ್ಯಾಂ ಅಪಾಯ ಎದುರಾಗುತ್ತದೆ ಎಂದು ಹಲವು ತಜ್ಞರು ರಾಜ್ಯ ಸರ್ಕಾರಕ್ಕೆ ವರದಿಯನ್ನು ನೀಡಿದ್ದರು. ಆದರೂ ಸಹ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಯನ್ನು ತಡೆಯಲು ಸಾಧ್ಯವಾಗಿರಲಿಲ್ಲ. ಕಳೆದ ಒಂದು ವರ್ಷದ ಹಿಂದೆ ಗಣಿಗಾರಿಕೆಯನ್ನು ಬಂದ್ ಮಾಡುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿತ್ತು. ಆದರೆ ಮತ್ತೆ ಕೆಲದಿನಗಳ ನಂತರ ಬೇಬಿ ಬೆಟ್ಟದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿತ್ತು. ಪ್ರಭಾವಿಗಳ ಕೈವಾಡದಿಂದಾಗಿ ರಾತ್ರಿ ವೇಳೆ ಬ್ಲಾಸ್ಟಿಂಗ್ ಮಾಡಿ ಗಣಿಗಾರಿಕೆಯನ್ನು ನಡೆಸುತ್ತ ಇದ್ದಾರೆ ಎಂಬ ಆರೋಪ ಸ್ಥಳೀಯರಿಂದ ಕೇಳಿ ಬರುತ್ತಿತ್ತು. ಆದರೂ ಜಿಲ್ಲಾಡಳಿತ ಈ ಅಕ್ರಮ ಕ್ವಾರಿಯ ಬಗ್ಗೆ ಕ್ರಮ ಕೈಗೊಂಡಿರಲಿಲ್ಲ.

     

    ಕಳೆದ ಕೆಲದಿನಗಳ ಹಿಂದೆ ಶಿವಮೊಗ್ಗದಲ್ಲಿ ನಡೆದ ಘಟನೆಯಿಂದ ಮಂಡ್ಯ ಜಿಲ್ಲಾಡಳಿತ ಈಗಲಾದರೂ ಬೇಬಿ ಬೆಟ್ಟದಲ್ಲಿ ಸಂಪೂರ್ಣವಾಗಿ ಗಣಿಗಾರಿಕೆಯನ್ನು ತಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕೆಆರ್‍ಎಸ್ ಅಣೆಕಟ್ಟೆಗೆ ಅಪಾಯ ಎದುರಾಗುತ್ತದೆ ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿತ್ತು. ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ಜಿಲ್ಲಾಡಳಿತ ಇದೀಗ ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಗಣಿಗಾರಿಕೆಯನ್ನು ಸಂಪೂರ್ಣವಾಗಿ ಬಂದ್ ಮಾಡಿದೆ. ಅಲ್ಲದೇ ಕದ್ದು ಮುಚ್ಚಿ ಗಣಿಗಾರಿಕೆ ಮಾಡುವುದನ್ನು ತಡೆಗಟ್ಟಲು, ಡ್ರೋಣ್ ಮೂಲಕ ನಿಗಾ ವಹಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

  • ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧದ ವಿರುದ್ಧ ಪ್ರತಿಭಟನೆ

    ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧದ ವಿರುದ್ಧ ಪ್ರತಿಭಟನೆ

    ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಗೆ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಹೇರಿರುವ ಬೆನ್ನಲ್ಲೇ ಕಲ್ಲುಕುಟಿಕ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.

    ಬೇಬಿ ಬೆಟ್ಟದ ತಪ್ಪಲಿನ ಕಾವೇರಿ ಪುರ ಗ್ರಾಮದ ಬಳಿ ಕಲ್ಲು ಕುಟಿಕ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಗಣಿಗಾರಿಕೆ ನಿಷೇಧದಿಂದ ನಮ್ಮ ಕುಟುಂಬಗಳು ಬೀದಿಗೆ ಬರುತ್ತವೆ. ಜಿಲ್ಲಾಡಳಿತ ಗಣಿಗಾರಿಕೆ ನಿಷೇಧ ಮಾಡಬೇಕು ಎಂದರೆ ಬ್ಲಾಸ್ಟಿಂಗ್ ಹಾಗೂ ಕ್ರಷಿಂಗ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಿ. ಆದರೆ ಕೈಯಲ್ಲಿ ಕುಟ್ಟಿ ಗಣಿಗಾರಿಕೆ ಮಾಡುವುದನ್ನು ನಿಲ್ಲಿಸ ಬಾರದು.

    ಇದರಿಂದ ಹಲವಾರು ಕುಟುಂಬಗಳು ಜೀವನ ಮಾಡುತ್ತಿವೆ. ಒಂದು ವೇಳೆ ಇದನ್ನು ನಿಷೇಧ ಮಾಡಿದರೆ ನೂರಾರು ಕುಟಂಬಗಳು ಬೀದಿಗೆ ಬೀಳುತ್ತವೆ. ಆದ್ದರಿಂದ ಬ್ಲಾಸ್ಟಿಂಗ್ ಮತ್ತು ಕ್ರಷಿಂಗ್ ಮಾಡುವುದನ್ನು ತಡೆಗಟ್ಟಿ ಕಲ್ಲು ಕುಟಿಕರಿಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿದರು.

  • ಬೇಬಿ ಬೆಟ್ಟದ ಗಣಿಗಾರಿಕೆಗೆ ಸಂಪೂರ್ಣ ನಿಷೇಧ – ಜಿಲ್ಲಾಧಿಕಾರಿ ಆದೇಶ

    ಬೇಬಿ ಬೆಟ್ಟದ ಗಣಿಗಾರಿಕೆಗೆ ಸಂಪೂರ್ಣ ನಿಷೇಧ – ಜಿಲ್ಲಾಧಿಕಾರಿ ಆದೇಶ

    ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಇದೀಗ ಮಂಡ್ಯ ಜಿಲ್ಲಾಡಳಿತ ಮುಂದಾಗಿದೆ.

    ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಗಣಿಗಾರಿಕೆಯನ್ನು ಇದೀಗ ನಿಷೇಧ ಮಾಡಿರುವುದಾಗಿ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಗಣಿಗಾರಿಕೆಯಿಂದ ಹಳೆ ಮೈಸೂರು ಭಾಗದ ಜೀವ ನಾಡಿಯಾಗಿದ್ದ ಕೆಆರ್‍ಎಸ್ ಡ್ಯಾಂಗೆ ಅಪಾಯ ಎದುರಾಗುತ್ತಿದೆ ಎಂದು ವರದಿಗಳನ್ನು ರಾಜ್ಯ ಸರ್ಕಾರಕ್ಕೆ ನೀಡಲಾಗಿತ್ತು.

    ಈ ಕುರಿತು ಪಬ್ಲಿಕ್ ಟಿವಿಯಲ್ಲಿ ಸಾಕಷ್ಟು ಬಾರಿ ಸುದ್ದಿ ಬಿತ್ತರವಾಗಿತ್ತು. ಹೀಗಾಗಿ ಭಾನುವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬೇಬಿ ಬೆಟ್ಟದ ಗಣಿಗಾರಿಕೆಯನ್ನು ನಿಷೇಧ ಮಾಡಲು ಜಿಲ್ಲಾಧಿಕಾರಿಗೆ ಆದೇಶ ನೀಡಿದರು. ಇದೀಗ ಜಿಲ್ಲಾಧಿಕಾರಿ ವೆಂಕಟೇಶ್ ಅವರು ಬೇಬಿ ಬೆಟ್ಟದ ಗಣಿಗಾರಿಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

    ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಗಾಗಿ ಬಳಕೆ ಮಾಡುತ್ತಿದ್ದ ಎಲ್ಲಾ ಯಂತ್ರೋಪಕರಣಗಳನ್ನು ಖಾಲಿ ಮಾಡಬೇಕೆಂದು ಸಹ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಒಂದು ವೇಳೆ ಆದೇಶವನ್ನು ಮೀರಿ ಗಣಿಗಾರಿಕೆ ನಡೆಸಿದರೆ ಕ್ರಿಮಿನಲ್ ಕೇಸ್ ದಾಖಲು ಮಾಡುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.