Tag: ಬೇಹುಗಾರಿಕೆ

  • ಆಪರೇಷನ್‌ ಸಿಂಧೂರ| ಪಾಕ್‌ ಬೆಡಗಿಗೆ ಮಾಹಿತಿ ರವಾನೆ – ನೌಕಾ ಸೇನೆಯ ಪ್ರಧಾನ ಕಚೇರಿಯ ಉದ್ಯೋಗಿ ಅರೆಸ್ಟ್‌

    ಆಪರೇಷನ್‌ ಸಿಂಧೂರ| ಪಾಕ್‌ ಬೆಡಗಿಗೆ ಮಾಹಿತಿ ರವಾನೆ – ನೌಕಾ ಸೇನೆಯ ಪ್ರಧಾನ ಕಚೇರಿಯ ಉದ್ಯೋಗಿ ಅರೆಸ್ಟ್‌

    ನವದೆಹಲಿ: ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆ ವೇಳೆ ಪಾಕಿಸ್ತಾನದ (Pakistan) ಪರ ಬೇಹುಗಾರಿಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ದೆಹಲಿಯ ನೌಕಾ ಸೇನೆಯ ಪ್ರಧಾನ ಕಚೇರಿಯ ಉದ್ಯೋಗಿಯನ್ನು ರಾಜಸ್ಥಾನ ಪೊಲೀಸರ (Rajasthan Police) ಗುಪ್ತಚರ ವಿಭಾಗ ಬಂಧಿಸಿದೆ.

    ಹರಿಯಾಣದ ರೇವಾರಿಯದ ಪುನ್ಸಿಕಾ ನಿವಾಸಿ ವಿಶಾಲ್ ಯಾದವ್ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದ. ಈತನನ್ನು 1923 ರ ಅಧಿಕೃತ ರಹಸ್ಯ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.

    ಯಾದವ್ ಡಾಕ್‌ಯಾರ್ಡ್ ನಿರ್ದೇಶನಾಲಯದಲ್ಲಿ ಕೆಲಸ ಮಾಡುತ್ತಿದ್ದ ಈತ ಸಾಮಾಜಿಕ ಜಾಲತಾಣದಲ್ಲಿ (Social Media) ಪ್ರಿಯಾ ಶರ್ಮಾ ಎಂಬಾಕೆಯ ಜೊತೆ ಸಂಪರ್ಕದಲ್ಲಿದ್ದ. ನೌಕಾ ಕಾರ್ಯಾಚರಣೆಯ ನಿರ್ಣಾಯಕ ಕಾರ್ಯತಂತ್ರದ ಬಗ್ಗೆ ಮಾಹಿತಿಯನ್ನು ಪಡೆಯಲು ಆಕೆ ವಿಶಾಲ್ ಯಾದವ್‌ಗೆ ಹಣದ ಆಮಿಷ ಒಡ್ಡಿದ್ದಳು. ಇದನ್ನೂ ಓದಿ: ಎಫ್‌ 35ಗೆ ಪಾರ್ಕಿಂಗ್‌ ಶುಲ್ಕ ವಿಧಿಸಲು ಮುಂದಾದ ತಿರುವನಂತಪುರ ಏರ್‌ಪೋರ್ಟ್‌

     

    ಯಾದವ್ ಆನ್‌ಲೈನ್ ಗೇಮಿಂಗ್‌ ವ್ಯಸನಿಯಾಗಿದ್ದ ಈತ ಹಣಕಾಸು ಸಂಕಷ್ಟಕ್ಕೆ ಸಿಲುಕಿದ್ದ. ಹೀಗಾಗಿ ಆತ ಸೂಕ್ಮ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದ. ಈತನಿಗೆ ಕ್ರಿಪ್ಟೋ ಕರೆನ್ಸಿ ಮೂಲಕ ಹಣವನ್ನು ಪಾವತಿಸಲಾಗುತ್ತಿತ್ತು. ಇದನ್ನೂ ಓದಿ: ಕಬಿನಿ ಡ್ಯಾಂಗೆ ಶಿವಣ್ಣ ದಂಪತಿ ಭೇಟಿ

    ವಿಶಾಲ್‌ ಫೋನ್‌ ಚಾಟ್‌ ವಿವರ ಸೇರಿದಂತೆ ಹಲವು ದಾಖಲೆಗಳಿಂದ ಈತ ಮಾಹಿತಿ ಸೋರಿಕೆ ಮಾಡಿದ್ದಕ್ಕೆ ಸಾಕ್ಷ್ಯಗಳು ಲಭ್ಯವಾಗಿದೆ. ಈತ ದೀರ್ಘಕಾಲದಿಂದ ಬೇಹುಗಾರಿಕೆ ಮಾಡುತ್ತಿದ್ದು, ಅದರಲ್ಲೂ ಆಪರೇಷನ್ ಸಿಂಧೂರ್ ಸಮಯದಲ್ಲಿ ನೌಕಾ ಸೇನೆಯ ರಹಸ್ಯ ವಿವರ ಸೋರಿಕೆ ಮಾಡಿದ್ದ ಎಂದು ರಾಜಸ್ಥಾನ ಪೊಲೀಸರು ತಿಳಿಸಿದ್ದಾರೆ.

  • ಪಾಕ್‌, ಉಗ್ರರ ಮೇಲೆ ಕಣ್ಣು – ನಾಳೆ ಭಾರತದ ಬೇಹುಗಾರಿಕಾ ಉಪಗ್ರಹ ಉಡಾವಣೆ!

    ಪಾಕ್‌, ಉಗ್ರರ ಮೇಲೆ ಕಣ್ಣು – ನಾಳೆ ಭಾರತದ ಬೇಹುಗಾರಿಕಾ ಉಪಗ್ರಹ ಉಡಾವಣೆ!

    ಶ್ರೀಹರಿಕೋಟಾ: ಗಡಿಯಲ್ಲಿ ರಾತ್ರಿಯ ವೇಳೆ ಕುತಂತ್ರ ಮಾಡುತ್ತಿರುವ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಲು ಭಾರತ (India) ಈಗ ಬೇಹುಗಾರಿಕಾ ಉಪಗ್ರಹವನ್ನು (Spy Satellite) ಉಡಾವಣೆ ಮಾಡುತ್ತಿದೆ.

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) EOS-9 ರೇಡಾರ್‌ ಇಮೇಜಿಂಗ್‌ ಉಪಗ್ರಹವನ್ನು ಅಭಿವೃದ್ಧಿ ಪಡಿಸಿದ್ದು, ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡಾವಣಾ ಕೇಂದ್ರದಿಂದ ಭಾನುವಾರ ಬೆಳಗ್ಗೆ 5:59ಕ್ಕೆ ಪಿಎಸ್‌ಎಲ್‌ವಿ ರಾಕೆಟ್‌ ಮೂಲಕ ಈ ಉಪಗ್ರಹ ನಭಕ್ಕೆ ಚಿಮ್ಮಲಿದೆ.

    ಬೆಂಗಳೂರಿನಲ್ಲಿರುವ ಇಸ್ರೋದ ಯುಆರ್ ರಾವ್ ಉಪಗ್ರಹ ಕೇಂದ್ರವು ಗೂಢಚಾರ ಉಪಗ್ರವನ್ನು ನಿರ್ಮಿಸಿದೆ. ಸಿ-ಬ್ಯಾಂಡ್ ಸಿಂಥೆಟಿಕ್ ಅಪರ್ಚರ್ ರೇಡಾರ್ ಅನ್ನು ಉಪಗ್ರಹ ಹೊಂದಿದ್ದು, ಇದು ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿ ಮತ್ತು ಕಡಿಮೆ ಬೆಳಕಿನಲ್ಲೂ ಭೂಮಿಯ ಮೇಲ್ಮೈಯ ಹೆಚ್ಚಿನ ರೆಸಲ್ಯೂಶನ್ ಚಿತ್ರಗಳನ್ನು ಸೆರೆಹಿಡಿಯಲು ಅನುವು ಮಾಡಿಕೊಡುತ್ತದೆ.

    ಇಸ್ರೋ 101ನೇ ದೊಡ್ಡ ರಾಕೆಟ್ ಉಡಾವಣೆ ಇದಾಗಿದ್ದು 1,696 ಕಿಲೋಗ್ರಾಂ ತೂಕದ EOS-9 ರಾಡಾರ್ ಇಮೇಜಿಂಗ್ ಉಪಗ್ರಹವು ಭೂಮಿಯ ಮೇಲ್ಮೈಯಿಂದ 500 ಕಿಲೋಮೀಟರ್‌ಗಳಿಗಿಂತ ಹೆಚ್ಚು ಎತ್ತರದಲ್ಲಿ ನೆಲೆಗೊಳ್ಳಲಿದೆ. ಇದನ್ನೂ ಓದಿ: ಪಾಕ್‌ ವಿರುದ್ಧ ‘ಬ್ರಹ್ಮೋಸ್‌’ ಪರಾಕ್ರಮ – ಬ್ರಹ್ಮೋಸ್‌ ಕ್ಷಿಪಣಿಗಾಗಿ 18 ರಾಷ್ಟ್ರಗಳಿಂದ ಬೇಡಿಕೆ

    ಈಗಾಗಲೇ ಬಾಹ್ಯಾಕಾಶಕ್ಕೆ ಭಾರತ ಹಾರಿಸಿದ 57 ಕ್ಕೂ ಹೆಚ್ಚು ಉಪಗ್ರಹಗಳ ಸಮೂಹಕ್ಕೆ EOS-9 ಸೇರ್ಪಡೆಯಾಗಲಿದೆ. ಇವುಗಳಲ್ಲಿ ಕಕ್ಷೆಯಲ್ಲಿರುವ ನಾಲ್ಕು ರೇಡಾರ್ ಉಪಗ್ರಹಗಳು ಸೇರಿವೆ.

    ಉಪಗ್ರಹದ ವಿಶೇಷತೆ ಏನು?
    ಸಾಧಾರಣವಾಗಿ ಮೋಡಗಳು, ಬಿರುಗಾಳಿ, ರಾತ್ರಿಯ ವೇಳೆ ಹೆಚ್ಚಿನ ಉಪಗ್ರಹಗಳಿಗೆ ಸರಿಯಾಗಿ ಚಿತ್ರಗಳನ್ನು ಸೆರೆ ಹಿಡಿಯಲು ಸಾಧ್ಯವಾಗುವುದಿಲ್ಲ. ಆದರೆ ಈ ಉಪಗ್ರಹ ಮೋಡಗಳು, ಮಳೆ, ಮಂಜು ಸೇರಿದಂತೆ ಎಲ್ಲಾ ರೀತಿಯ ಹವಾಮಾನದಲ್ಲೂ ಹಗಲು ಮತ್ತು ರಾತ್ರಿ ಸ್ಷಷ್ಟವಾದ ಚಿತ್ರಗಳನ್ನು ಸೆರೆ ಹಿಡಿಯವ ಸಾಮರ್ಥ್ಯ ಹೊಂದಿದೆ.

    EOS-09 ನಲ್ಲಿರುವ Synthetic Aperture Radar ಎಷ್ಟು ಶಕ್ತಿಶಾಲಿ ಎಂದರೆ ಭೂ ಪ್ರದೇಶ, ಸಸ್ಯಗಳು ಮತ್ತು ಮಾನವ ನಿರ್ಮಿತ ಡೇರೆಗಳನ್ನು ಸಹ ವರ್ಗೀಕರಣ ಮಾಡಿ ಫಲಿತಾಂಶ ನೀಡುತ್ತದೆ. ಹೀಗಾಗಿ ಇನ್ನು ಮುಂದೆ ಗಡಿಯಲ್ಲಿ ಯಾವುದೇ ಸಮಯದಲ್ಲಿ ಅನುಮಾನಾಸ್ಪದ ಚಟುಟವಿಕೆ ನಡೆದರೂ ಅದರ ಸಂಪೂರ್ಣ ಚಿತ್ರಗಳು ಕ್ಯಾಮೆರಾದಲ್ಲಿ ಸೆರೆಯಾಗಲಿದೆ.

    10 ರಿಂದ 225 ಕಿಮೀ ವರೆಗಿನ ವಿಶಾಲವಾದ ಜಾಗಗಳನ್ನು ಸ್ಕ್ಯಾನ್ ಮಾಡುತ್ತದೆ. ದೊಡ್ಡ ಪ್ರಮಾಣದ ವಿಪತ್ತು ನಡೆದಾಗ ಉದಾಹರಣೆ ಪ್ರವಾಹ, ಚಂಡಮಾರುತಗಳು, ಭೂಕುಸಿತ ನಡೆದಾಗ ಅದರ ನೈಜ ಚಿತ್ರಣವನ್ನು ವೀಕ್ಷಿಸಬಹುದು. ಇದನ್ನೂ ಓದಿ: ಪಾಕಿಸ್ತಾನ ಪರ ಬೇಹುಗಾರಿಕೆ – ಭಾರತದ ಯೂಟ್ಯೂಬರ್ ಬಂಧನ

    ಈ ಉಪಗ್ರಹ ಗಡಿಯನ್ನು ಕಾಯುತ್ತದೆ ಎಂದು ಹೇಳಿದರೂ ತಪ್ಪಾಗಲಾರದು. ಅಕ್ರಮ ಸಮುದ್ರ ಚಟುವಟಿಕೆಯನ್ನು ಮೇಲ್ವಿಚಾರಣೆ, ತೈಲ ಸೋರಿಕೆಗಳನ್ನು ಪತ್ತೆ, ಭಾರತದ 7,500 ಕಿಮೀ ಉದ್ದದ ಕರಾವಳಿಯಲ್ಲಿ ಹಡಗುಗಳನ್ನು ಪತ್ತೆ ಹಚ್ಚುತ್ತದೆ.

  • ವಾರದಲ್ಲಿ 4ನೇ ಕಾರ್ಯಾಚರಣೆ – ಮತ್ತೊಂದು ಹಾರುವ ವಸ್ತುವನ್ನು ಹೊಡೆದುರುಳಿಸಿದ ಅಮೆರಿಕ

    ವಾರದಲ್ಲಿ 4ನೇ ಕಾರ್ಯಾಚರಣೆ – ಮತ್ತೊಂದು ಹಾರುವ ವಸ್ತುವನ್ನು ಹೊಡೆದುರುಳಿಸಿದ ಅಮೆರಿಕ

    ವಾಷಿಂಗ್ಟನ್: ವಾರದ ಹಿಂದೆ ಶಂಕಿತ ಚೀನಾದ ಬೇಹುಗಾರಿಕಾ ಬಲೂನನ್ನು (Spy Balloon) ಅಮೆರಿಕ (America) ಹೊಡೆದುರುಳಿಸಿದ ಬಳಿಕ ಒಂದಾದ ಮೇಲೊಂದರಂತೆ ಆಕಾಶದಲ್ಲಿ ಹಾರಾಡುತ್ತಿದ್ದ ಶಂಕಿತ ವಸ್ತುಗಳನ್ನು (Flying Object) ತನ್ನ ಯುದ್ಧ ವಿಮಾನಗಳನ್ನು ಬಳಸಿ ಹೊಡೆದುರುಳಿಸಿದೆ. ಭಾನುವಾರ ಅಮೆರಿಕ ಮತ್ತೊಂದು ತೇಲುತ್ತಿದ್ದ ವಸ್ತುವನ್ನು ಹೊಡೆದುರುಳಿಸಿದ್ದು, ವಾರದಿಂದ ಇಂತಹ ಒಟ್ಟು 4 ವಸ್ತುಗಳನ್ನು ಹೊಡೆದುರುಳಿಸಿದೆ ಎಂದು ವರದಿಯಾಗಿದೆ.

    ಚೀನಾದೊಂದಿಗಿನ (China) ಉದ್ವಿಗ್ನತೆ ಹಾಗೂ ನಿಗೂಢ ದಾಳಿಯ ಭೀತಿಯ ಹಿನ್ನೆಲೆ ಅಮೆರಿಕ ತನ್ನ ಆಕಾಶದ ಮೇಲೆ ಹೆಚ್ಚಿನ ನಿಗಾ ವಹಿಸಿದೆ. ವಾರದ ಹಿಂದೆ ತನ್ನ ಅಣ್ವಸ್ತ್ರ ತಾಣದ ಮೇಲೆ ಹಾರಾಡುತ್ತಿದ್ದ ಬೇಹುಗಾರಿಕಾ ಬಲೂನಿನ ಹಿಂದೆ ಚೀನಾದ ಕುತಂತ್ರವಿದೆ ಎಂದು ಹೇಳಲಾಗಿದೆ.

    ಭಾನುವಾರ ಹೊಡೆದುರುಳಿಸಲಾದ ಹೊಸ ವಸ್ತು ನೇತಾಡುವ ತಂತಿಯೊಂದಿಗೆ ಅಷ್ಟಭುಜಾಕೃತಿಯ ರಚನೆ ಹೊಂದಿತ್ತು ಎಂದು ತಿಳಿಸಲಾಗಿದೆ. ಇದು ಯಾವುದೇ ಮಿಲಿಟರಿ ಬೆದರಿಕೆಯನ್ನು ಉಂಟುಮಾಡುತ್ತದೆ ಎಂದು ಪರಿಗಣಿಸಲಾಗಿಲ್ಲವಾದರೂ ಇದು ನಾಗರಿಕ ವಿಮಾನಯಾನಕ್ಕೆ ಅಪಾಯ ಉಂಟುಮಾಡುವ ಸಾಧ್ಯತೆಯಿತ್ತು. ಈ ಹಿನ್ನೆಲೆ ಭೂಮಿಯಿಂದ ಸುಮಾರು 20,000 ಅಡಿಗಳಷ್ಟು ಎತ್ತರದಲ್ಲಿ ಹಾರಾಡುತ್ತಿದ್ದ ವಸ್ತುವನ್ನು ಎಫ್-16 ಫೈಟರ್ ಜೆಟ್ ಬಳಸಿ ಹೊಡೆದುರುಳಿಸಲಾಗಿದೆ ಎಂದು ಹಿರಿಯ ಆಡಳಿತಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಅದ್ಧೂರಿ Aero India 2023 ಏರ್ ಶೋ

    ಇದು ಕಣ್ಗಾವಲು ಸಾಮರ್ಥ್ಯ ಹೊಂದಿದೆ ಎಂಬುದಕ್ಕೆ ಯಾವುದೇ ಸಾಕ್ಷಿಗಳಿಲ್ಲ. ಆದರೆ ಅದನ್ನು ನಾವು ತಳ್ಳಿ ಹಾಕುವಂತಿಲ್ಲ. ಕೆನಡಾದ ಗಡಿಯ ಬಳಿ ಹಾರಾಡುತ್ತಿದ್ದ ಅಪರಿಚಿತ ವಸ್ತುವನ್ನು ನಾವು ಮಿಚಿಗನ್ ಸರೋವರದ ಪ್ರದೇಶದಲ್ಲಿ ಹೊಡೆದುರುಳಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಭವನದಲ್ಲಿ ಮೋದಿ ರಾತ್ರಿ ವಾಸ್ತವ್ಯ – 800ಕ್ಕೂ ಹೆಚ್ಚು ಪೊಲೀಸರಿಂದ ಬಿಗಿಭದ್ರತೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಾಲಿವುಡ್ ಸ್ಟಾರ್ ಜೋಡಿಯ ಮನೆ ನುಗ್ಗಿ ಹೊಡಿತೀನಿ : ಕಂಗನಾ ರಣಾವತ್ ಗರಂ

    ಬಾಲಿವುಡ್ ಸ್ಟಾರ್ ಜೋಡಿಯ ಮನೆ ನುಗ್ಗಿ ಹೊಡಿತೀನಿ : ಕಂಗನಾ ರಣಾವತ್ ಗರಂ

    ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ ಕಳೆದ ಒಂದು ವಾರದಿಂದ ಸಿಕ್ಕಾಪಟ್ಟೆ ಕೋಪ ಮಾಡಿಕೊಂಡಿದ್ದಾರೆ. ತಮ್ಮ ಮೇಲೆ ಬೇಹುಗಾರಿಕೆ ಮಾಡಲಾಗುತ್ತಿದೆ ಎನ್ನುವುದರಿಂದ ಹಿಡಿದು ತಾವೊಬ್ಬ ಹುಚ್ಚಿ, ಏನು ಬೇಕಾದರೂ ಮಾಡುವುದಕ್ಕೆ ರೆಡಿ, ಮನೆಗೆ ನುಗ್ಗಿ ಹೊಡಿತೀನಿ ಎನ್ನುವವರೆಗೆ ತಾಳ್ಮೆ ಕಳೆದುಕೊಂಡಿದ್ದಾರೆ. ಅದಕ್ಕೆ ಕಾರಣ ಏನು ಎನ್ನುವುದು ಅವರ ಅಭಿಮಾನಿಗಳಿಗೆ ಯಕ್ಷ ಪ್ರಶ್ನೆಯಾಗಿದೆ.

    ಬಾಲಿವುಡ್ ಜೋಡಿಯೊಂದು ತಮಗೆ ವಿಪರೀತ ಕಿರುಕುಳ ನೀಡುತ್ತಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಆ ಜೋಡಿಯ ಬಗ್ಗೆ ಕಿಡಿಕಾರಿದ್ದಾರೆ. ನೀವು ಹೀಗೆಯೇ ಮುಂದುವರೆದರೆ, ನಿಮ್ಮ ಮನೆಗೆ ನುಗ್ಗಿ ಹೊಡೆಯುತ್ತೇನೆ ಎಂದು ಅವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಆದರೆ, ಆ ಜೋಡಿ ಯಾರು ಎನ್ನುವುದನ್ನು ಅವರು ತಿಳಿಸಿಲ್ಲ. ಆ ಜೋಡಿಗೂ ಇವರಿಗೆ ಇಷ್ಟೊಂದು ದ್ವೇಷ ಯಾಕೆ ಎನ್ನುವುದನ್ನೂ ಅವರು ಹೇಳಿಕೊಂಡಿಲ್ಲ. ಇದನ್ನೂ ಓದಿ: ರಾಖಿ ಸಾವಂತ್ ಪತಿ, ಮೈಸೂರು ಹುಡುಗ ಆದಿಲ್ ಪೊಲೀಸ್ ವಶಕ್ಕೆ

    ಮೊನ್ನೆಯಷ್ಟೇ ಎಮರ್ಜನ್ಸಿ ಚಿತ್ರಕ್ಕಾಗಿ ಇಡೀ ಆಸ್ತಿಯನ್ನು ಅಡವಿಟ್ಟಿದ್ದೇನೆ ಎಂದು ಕಂಗನಾ ಬರೆದುಕೊಂಡಿದ್ದರು. ತನ್ನೆಲ್ಲ ಆಸ್ತಿಯನ್ನು ಈ ಚಿತ್ರಕ್ಕಾಗಿ ಮುಡುಪಿಟ್ಟ ವಿಚಾರವನ್ನು ಭಾವುಕರಾಗಿಯೇ ಅವರು ಹಂಚಿಕೊಂಡಿದ್ದಾರೆ. ಈ ಕಾರಣದಿಂದಾಗಿ ಏನಾದರೂ ಅವರು ಡಿಪ್ರೆಷನ್ ಗೆ ಹೋಗಿದ್ದಾರಾ ಎನ್ನುವ ಚರ್ಚೆ ಕೂಡ ನಡೆಯುತ್ತಿದೆ. ನಿರ್ದೇಶನ, ನಟನೆ ಜೊತೆ ನಿರ್ಮಾಣಕ್ಕೂ ಅವರು ಇಳಿದಿರುವುದರಿಂದ ಕಂಗನಾ ಆರೋಗ್ಯದಲ್ಲಿ ಏರುಪೇರು ಆಗಿರಬಹುದಾ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಮೆರಿಕದ ಅಣ್ವಸ್ತ್ರ ತಾಣದ ಮೇಲೆ ಚೀನಾದ ಬೇಹುಗಾರಿಕಾ ಬಲೂನು ಹಾರಾಟ

    ಅಮೆರಿಕದ ಅಣ್ವಸ್ತ್ರ ತಾಣದ ಮೇಲೆ ಚೀನಾದ ಬೇಹುಗಾರಿಕಾ ಬಲೂನು ಹಾರಾಟ

    ವಾಷಿಂಗ್ಟನ್: ಶಂಕಿತ ಚೀನಾದ (China) ಬೇಹುಗಾರಿಕಾ ಬಲೂನು (Spy Balloon) ಒಂದು ಅಮೆರಿಕದ (America) ವಾಯುಪ್ರದೇಶದಲ್ಲಿ ಹಾರಾಡುತ್ತಿರುವುದು ಕಂಡುಬಂದಿರುವುದಾಗಿ ವರದಿಯಾಗಿದೆ. ಅಮೆರಿಕದ ಅಣ್ವಸ್ತ್ರ ತಾಣಗಳ ಮೇಲೆ ಈ ಬಲೂನು ಹಾರಾಡಿರುವುದು ಪತ್ತೆಯಗಿದ್ದು, ಚೀನಾ ಅಮೆರಿಕ ಮೇಲೆ ಬೇಹುಗಾರಿಕೆ ನಡೆಸುತ್ತಿರುವ ಆರೋಪ ಕೇಳಿಬಂದಿದೆ.

    ಮಾಲ್ಮ್‌ಸ್ಟ್ರೋಮ್ ಏರ್ ಫೋರ್ಸ್ ಬೇಸ್‌ನಲ್ಲಿರುವ ರಾಷ್ಟ್ರದ 3 ಪರಮಾಣು ಕ್ಷಿಪಣಿ ಉಡಾವಣಾ ಸೌಲಭ್ಯಗಳಲ್ಲಿ ಒಂದಾದ ಮೊಂಟಾನಾದಲ್ಲಿ ಬಲೂನು ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ. ಬಲೂನು ಪತ್ತೆಯಾಗುತ್ತಲೇ ಅದನ್ನು ಹೊಡೆದುರುಳಿಸಲು ಮೊದಲಿಗೆ ನಿರ್ಧರಿಸಲಾಗಿತ್ತು. ಆದರೆ ಈ ಕ್ರಮದಿಂದ ಆ ಪ್ರದೇಶದಲ್ಲಿರುವ ಜನರಿಗೆ ಹಾನಿಯಾಗುವ ಭೀತಿಯೂ ವ್ಯಕ್ತವಾಗಿದೆ.

    ವಾಯುಪ್ರದೇಶದಲ್ಲಿ ಸಂಚರಿಸುತ್ತಿರುವ, ಜನರಿಗೆ ಅಪಾಯವಾಗುವ ಭೀತಿಯನ್ನು ಹುಟ್ಟಿಸುತ್ತಿರುವ ಬಲೂನ್ ಮೇಲೆ ಕಣ್ಣಿಡಲಾಗಿದೆ. ಈ ಹಿಂದೆಯೂ ಇಂತಹ ಬಲೂನುಗಳನ್ನು ಗುರುತಿಸಲಾಗಿದೆ. ರಾಷ್ಟ್ರದ ಭದ್ರತೆಗೆ ಸಂಬಂಧಪಟ್ಟಂತೆ ಸೂಕ್ಷ್ಮ ಮಾಹಿತಿಗಳನ್ನು ಈ ಬೇಹುಗಾರಿಕಾ ತಂತ್ರ ಸಂಗ್ರಹಿಸದಂತೆ ತಡೆಯಲು ಅಮೆರಿಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಯುದ್ಧ ವಿಮಾನಗಳನ್ನು ಕಳುಹಿಸುತ್ತೇವೆ – ಉಕ್ರೇನ್ ಬೆಂಬಲಕ್ಕೆ ನಿಂತ ಬ್ರಿಟನ್

    ಅಧಿಕಾರಿಗಳು ಶಂಕಿತ ಬೇಹುಗಾರಿಕಾ ಬಲೂನಿನ ಗಾತ್ರವನ್ನು ನಿರ್ದಿಷ್ಟವಾಗಿ ತಿಳಿಸಿಲ್ಲ. ಮೂಲಗಳ ಪ್ರಕಾರ ಅದು ದೊಡ್ಡ ಗಾತ್ರದ್ದಾಗಿದ್ದು, ವಾಣಿಜ್ಯ ವಾಯು ಸಂಚಾರ ವ್ಯಾಪ್ತಿಗಿಂತಲೂ ಎತ್ತರದಲ್ಲಿ ಹಾರಾಡುತ್ತಿದೆ ಎನ್ನಲಾಗಿದೆ. ಒಂದು ವೇಳೆ ಬಲೂನ್ ಅನ್ನು ಹೊಡೆಯಲು ಮುಂದಾದರೆ ಅದರಿಂದ ಭೂಪ್ರದೇಶದಲ್ಲಿರುವ ಜನರಿಗೆ ಹಾನಿಯಾಗಬಹುದೇ ಅಥವಾ ಎಷ್ಟರ ಮಟ್ಟಿಗೆ ಹಾನಿಯಾಗಬಹುದು ಎಂಬುದು ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಬೆಂಗಳೂರಿನಲ್ಲಿ ಜಿ20 ಶೃಂಗಸಭೆ – ತಾಜ್ ವೆಸ್ಟ್ ಎಂಡ್ ಆವರಣದ ಮೇಲೆ No Fly Zone ಜಾರಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಮ್ರಾನ್ ವಿರುದ್ಧ ಬೇಹುಗಾರಿಕೆಗೆ ಪ್ರಯತ್ನಿಸಿದವ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ

    ಇಮ್ರಾನ್ ವಿರುದ್ಧ ಬೇಹುಗಾರಿಕೆಗೆ ಪ್ರಯತ್ನಿಸಿದವ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ

    ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಬೇಹುಗಾರಿಕೆಗೆ ಪ್ರಯತ್ನಿಸಿದ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಇಮ್ರಾನ್ ಖಾನ್ ನಿವಾಸದಲ್ಲಿ ಉದ್ಯೋಗಿಯೊಬ್ಬ ಗೂಢಾಚಾರಿಕೆ ಸಾಧನವನ್ನು ಅಳವಡಿಸಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಮಾಜಿ ಪ್ರಧಾನಿ ಮಲಗುವ ಕೋಣೆಯಲ್ಲಿ ಗೂಢಾಚಾರಿಕೆ ಸಾಧನವನ್ನು ಅಳವಡಿಸಲು ಉದ್ಯೋಗಿಯೊಬ್ಬರಿಗೆ ಹಣ ನೀಡಲಾಗಿದೆ ಎನ್ನಲಾಗಿದ್ದು, ಈ ಬಗ್ಗೆ ತಿಳಿದ ಇನ್ನೊಬ್ಬ ಉದ್ಯೋಗಿ ಗೂಢಾಚಾರಿಕೆ ಬಗ್ಗೆ ಭದ್ರತಾ ತಂಡಕ್ಕೆ ತಿಳಿಸಿದ್ದಾನೆ. ಈ ಮೂಲಕ ಬೇಹುಗಾರಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಪಕ್ಷಿ ಬಡಿದು ಎಮರ್ಜನ್ಸಿ ಲ್ಯಾಂಡಿಂಗ್

    ಪಾಕಿಸ್ತಾನ್ ತೆಹ್ರಿಕ್-ಎ-ಇನ್ಸಾಫ್(ಪಿಟಿಐ) ಅಧ್ಯಕ್ಷನನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ವದಂತಿಯ ಮಧ್ಯೆಯೇ ಈ ಘಟನೆ ನಡೆದಿದೆ. ಇದಕ್ಕೂ ಮೊದಲು ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು, ನಗರದ ಬನಿ ಗಲಾದ ಅಕ್ಕಪಕ್ಕದ ಪ್ರದೇಶಗಳಲ್ಲಿ ಭದ್ರತಾ ಪಡೆಗಳಿಗೆ ಹೈ ಅಲರ್ಟ್ ನೀಡಲಾಗಿತ್ತು. ಇದನ್ನೂ ಓದಿ: ದಯವಿಟ್ಟು ಸಹಾಯ ಮಾಡೋದನ್ನ ನಿಲ್ಲಿಸಬೇಡಿ- ಅಮೆರಿಕಾಗೆ ತಾಲಿಬಾನ್ ಬೇಡಿಕೆ

    ಘಟನೆ ಬಗ್ಗೆ ಮಾಹಿತಿ ನೀಡಿದ ಪಿಟಿಐ ನಾಯಕ ಶೆಹಬಾಜ್ ಗಿಲ್, ಮಾಜಿ ಪ್ರಧಾನಿ ಕೊಠಡಿ ಸ್ವಚ್ಛಗೊಳಿಸುವ ಉದ್ಯೋಗಿಯೊಬ್ಬ ಗೂಢಾಚಾರಿಕೆ ಸಾಧನವನ್ನು ಅಳವಡಿಸಲು ಪ್ರಯತ್ನಿಸುತ್ತಿದ್ದ. ಅವನಿಗೆ ಈ ಕೃತ್ಯ ನಡೆಸಲು ಹಣ ನೀಡಲಾಗಿದೆ. ಆರೋಪಿಯನ್ನು ಬನಿ ಗಾಲಾ ಭದ್ರತಾ ತಂಡ ಬಂಧಿಸಿದ್ದು, ಫೆಡರಲ್ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿಸಿದ್ದಾರೆ.

    Live Tv

  • ಚೀನಾ ಬೇಹುಗಾರಿಕೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಬೇಕು: ಸಿದ್ದರಾಮಯ್ಯ

    ಚೀನಾ ಬೇಹುಗಾರಿಕೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಬೇಕು: ಸಿದ್ದರಾಮಯ್ಯ

    ಬಾಗಲಕೋಟೆ: ಚೀನಾ ಬೇಹುಗಾರಿಕೆ ಪಟ್ಟಿಯಲ್ಲಿ ನನ್ನು ಹೆಸರು ಕೇಳಿ ಬಂದಿದ್ದು, ವಿದೇಶಿ ಬೇಹುಗಾರಿಕೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

    ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಇನ್ನೊಂದು ದೇಶದವರ ಬಗ್ಗೆ ಬೇಹುಗಾರಿಕೆ ಮಾಡುವುದು ಖಂಡನೀಯ. ಇಂತಹ ಬೇಹುಗಾರಿಕೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಬೇಕು. ಅವರನ್ನು ಪತ್ತೆ ಹಚ್ಚಿ ಬಲಿ ಹಾಕಬೇಕು. ಇದು ಕೇಂದ್ರ ಸರ್ಕಾರ ಮಾಡಬೇಕಾದ ಕೆಲಸ. ಇಂತಹ ಕೃತ್ಯ ನಡೆಯುವುದನ್ನು ತಡೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

    ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಬೇಕೆಂಬ ಕೂಗು ಕೇಳಿ ಬರುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈಗ ಸದ್ಯಕ್ಕೆ ನಾನು ಬಾದಾಮಿ ಶಾಸಕ. ಏನ್ರಿ ಚಿಮ್ಮನಕಟ್ಟಿ ಎಂದು ಬಾದಾಮಿ ಮಾಜಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ನೋಡಿ ನಗೆ ಚಟಾಕಿ ಹಾರಿಸಿದರು. ಅಲ್ಲದೆ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಪ್ರತಿಕ್ರಿಯಿಸಲು ನಿರಾಕರಿಸಿದರು.

    ಬಾದಾಮಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎರಡನೇ ದಿನದ ಪ್ರವಾಸ ಮುಂದುವರಿಸಿದ್ದು, ಪಟ್ಟಣದಲ್ಲಿ ಕುಡಿಯುವ ನೀರಿನ ಕಾಮಗಾರಿ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಧಿಕಾರಿಗಳ ಜೊತೆಗೆ ಕಾಮಗಾರಿ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಶಾಸಕರ ಗೃಹ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಮಾಜಿ ಸಚಿವರಾದ ಬಿ.ಬಿ.ಚಿಮ್ಮನಕಟ್ಟಿ, ಎಚ್.ವೈ.ಮೇಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಾಯಕ್ಕ ಮೇಟಿ ಮತ್ತಿತರರು ಇದ್ದರು.

  • ವಾಟ್ಸಪ್ ಮೂಲಕ ಪಾಕ್ ಪರ ಬೇಹುಗಾರಿಕೆ ಶಂಕೆ- ಮೂವರು ಅರೆಸ್ಟ್

    ವಾಟ್ಸಪ್ ಮೂಲಕ ಪಾಕ್ ಪರ ಬೇಹುಗಾರಿಕೆ ಶಂಕೆ- ಮೂವರು ಅರೆಸ್ಟ್

    ನವದೆಹಲಿ: ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂಬ ಶಂಕೆಯ ಮೇಲೆ ಮೂವರನ್ನು ಹರ್ಯಾಣದ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಉತ್ತರ ಪ್ರದೇಶದ ಮುಜಾಫರ್ ನಗರದ ಮಹತಾಬ್(28), ರಾಗಿಬ್ (34) ಹಾಗೂ ಶಾಮ್ಲಿಯ ಖಾಲಿದ್(25) ಎಂದು ಗುರುತಿಸಲಾಗಿದೆ. ಹಿಸಾರ್ ಪೊಲೀಸರು ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

    ಹಿಸಾರ್ ಕಂಟೋನ್ಮೆಂಟ್‍ನಲ್ಲಿ ಮೂವರು ಕಟ್ಟಡ ಕೆಲಸ ಮಾಡುತ್ತಿದ್ದರು. ಅವರ ಚಲವಲನದ ಮೇಲೆ ಶಂಕೆ ವ್ಯಕ್ತಪಡಿಸಿದ ಪೊಲೀಸರು, ಮೂವರನ್ನು ಆಗಸ್ಟ್ 1ರಂದು ಬಂಧಿಸಿದ್ದರು. ಬಳಿಕ ಅವರ ಬಳಿ ಇದ್ದ ಮೊಬೈಲ್ ವಶಕ್ಕೆ ಪಡೆದಾಗ ಭಾರತೀಯ ಸೇನೆಯ ಶಿಬಿರದ ಫೋಟೋ ಮತ್ತು ವಿಡಿಯೋಗಳು ಪತ್ತೆಯಾಗಿದ್ದವು ಎಂದು ಪೊಲೀಸರು ಆರೋಪಿಸಿದ್ದಾರೆ.

    ಈ ಆರೋಪಿಗಳು ಭಾರತೀಯ ಸೇನೆಯ ಮಾಹಿತಿಯನ್ನು ಸಾಮಾಜಿಕ ಜಾಲತಾಣ ವಾಟ್ಸಪ್ ಮೂಲಕ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು. ಪಾಕಿಸ್ತಾನ ಪರವಾಗಿ ಬೇಹುಗಾರಿಕೆ ಕೆಲಸ ಮಾಡುತ್ತಿದ್ದ ಬಂಧಿತರು, ಪಾಕ್ ಏಜೆಂಟರನ್ನು ವಾಟ್ಸಪ್ ವಾಯ್ಸ್ ಮತ್ತು ವಿಡಿಯೋ ಕರೆ ಮೂಲಕ ಸಂಪರ್ಕಿಸುತ್ತಿದ್ದರು ಎಂದು ವರದಿಯಾಗಿದೆ.

  • ಆಪರೇಷನ್ ಕಮಲಕ್ಕೆ ಪ್ರತ್ಯುತ್ತರ – 6 ಮಂದಿಯ ಸುತ್ತ `ಗುಪ್ತ’ ಬೇಹುಗಾರಿಕೆ

    ಆಪರೇಷನ್ ಕಮಲಕ್ಕೆ ಪ್ರತ್ಯುತ್ತರ – 6 ಮಂದಿಯ ಸುತ್ತ `ಗುಪ್ತ’ ಬೇಹುಗಾರಿಕೆ

    ಬೆಂಗಳೂರು: ಆಪರೇಷನ್ ಕಮಲಕ್ಕೆ ಪ್ರತ್ಯುತ್ತರ ನೀಡಲು ಸಮ್ಮಿಶ್ರ ಸರ್ಕಾರ ಸಜ್ಜಾಗಿದ್ದು, ಡಿಸೆಂಬರ್ ಟಾರ್ಗೆಟ್ ಫೇಲ್ಯೂರ್ ಮಾಡಲು ಮಹಾಪ್ಲಾನ್ ರೂಪಿಸಲಾಗಿದ್ದು, 6 ಮಂದಿಯ ಸುತ್ತ ಗುಪ್ತಚರ ಇಲಾಖೆ ಬೇಹುಗಾರಿಕೆ ನಡೆಸುತ್ತಿದೆ ಅನ್ನೋ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ‘ಆ’ 6 ಮಂದಿ ಯಾರು?
    ಬಿಎಸ್‍ವೈ ಪಿಎ ಸಂತೋಷ್ ಅವರು ಕೆಲ ಶಾಸಕರ ಜೊತೆ ಸಂಪರ್ಕ ಇರುವ ಗುಮಾನಿ ಎದ್ದಿದೆ. ಸಚಿವ ರಮೇಶ್ ಜಾರಕಿಹೊಳಿ ಜತೆ ನಿಕಟ ಸಂಪರ್ಕ ಹಾಗೂ ಬಹುತೇಕ ಶಾಸಕರ ಜತೆ ಡೀಲ್ ಮಾಡ್ತಾರೆ ಅನ್ನೋ ಮಾಹಿತಿ ಇದೆ. ಹಾಗಾಗಿಯೇ ಬೇಹುಗಾರಿಕೆ ಟೀಂ ಸಂತೋಷ್ ಅವರನ್ನು ಬೆನ್ನತ್ತಿದೆ ಎನ್ನಲಾಗಿದೆ.

    ಮಾಜಿ ಶಾಸಕ ಸಿ.ಪಿ. ಯೋಗೀಶ್ವರ್ ಅವರು ಕಳೆದ ಬಾರಿ ಆಪರೇಷನ್ ಕಮಲದಲ್ಲಿ ಇದ್ದರು ಅನ್ನೋ ಮಾಹಿತಿ ಲಭ್ಯವಾಗಿದ್ದು, ಜಿಮ್, ಕ್ಲಬ್‍ಗಳಲ್ಲಿ ಕೈ-ತೆನೆ ಶಾಸಕರನ್ನ ಸಂಪರ್ಕಿಸಿದ್ರು ಅನ್ನೋ ಗುಮಾನಿ ಇದೆ. ಈಗಲೂ ಆಡಳಿತ ಪಕ್ಷದ ಶಾಸಕರನ್ನ ಟಚ್ ಮಾಡ್ತಿದ್ದಾರೆ. ಹಾಗಾಗಿಯೇ ಸಿ.ಪಿ.ಯೋಗೇಶ್ವರ್ ಮೇಲೆ `ಬೇಹು’ ಪಡೆ ಹದ್ದಿನಗಣ್ಣಿಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಮಲ್ಲೇಶ್ವರಂ ಶಾಸಕ ಅಶ್ವತ್ಥನಾರಾಯಣ ಅವರು ಕಳೆದ ಬಾರಿ ಮಹತ್ವದ ಪಾತ್ರ ವಹಿಸಿದ್ರು ಅನ್ನೋ ಮಾಹಿತಿ ಇದೆ. ಇವರು ಹಲವು ಶಾಸಕರ ಜತೆ ಮಾತುಕತೆ ನಡೆಸಿ ಇನ್ನು ಸಂಪರ್ಕದಲ್ಲಿದ್ದಾರೆ. ಈಗಲೂ ಹಲವು ಶಾಸಕರ ಜತೆ ವರ್ಕ್ ಔಟ್‍ನಲ್ಲಿ ಬ್ಯುಸಿ ಆಗಿರುವ ಮಾಹಿತಿ ಇದೆ. ಹಾಗಾಗಿಯೇ ಬೇಹುಗಾರಿಕೆ ಟೀಂ ಶಾಸಕ ಅಶ್ವತ್ಥನಾರಾಯಣ್  ಅವರ ಬೆನ್ನುಬಿದ್ದಿದೆ.

    ಬಿಎಸ್‍ವೈ ಪುತ್ರ ವಿಜಯೇಂದ್ರ ಅವರು ಬಹಳಷ್ಟು ಶಾಸಕರನ್ನ ಮನವೊಲಿಸ್ತಿದ್ದಾರೆ. ಅಲ್ಲದೇ ಆಪರೇಷನ್ ಟೀಂ ಆಪರೇಟ್ ಮಾಡುವುದು ಇವರೇ ಅನ್ನೋ ಮಾಹಿತಿ ಸಿಕ್ಕಿದೆ. ಕಳೆದ ಬಾರಿಯೂ ಶಾಸಕರ ಜೊತೆ ಡೀಲ್ ಮಾಡಿದ್ದಾರೆ ಅಂತಾ ಆರೋಪಿಸಲಾಗಿತ್ತು. ಹೀಗಾಗಿ ಬೇಹುಗಾರಿಕೆ ಟೀಂ ಬಿ.ವೈ.ವಿಜಯೇಂದ್ರ ಅವರ ಹಿಂದೆ ಬಿದ್ದಿದೆ ಎನ್ನಲಾಗಿದೆ.

    ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಎಚ್‍ಡಿಕೆಯೇ ನನ್ನ ಬಂಧನ ಮಾಡಿಸಿದ್ದು ಅಂತಾ ಗರಂ ಆಗಿದ್ದಾರೆ. ಕಳೆದ ವಾರದಿಂದ ಜನಾರ್ದನ ರೆಡ್ಡಿ ಹಲವು ಶಾಸಕರ ಸಂಪರ್ಕಿಸಿದ್ದಾರೆ ಅನ್ನೋ ಮಾಹಿತಿಯಿದ್ದು, ದೊಡ್ಡ ದೊಡ್ಡ ಶಾಸಕರಿಗೆ ಕೈ ಹಾಕ್ತಿದ್ದಾರೆ ಅನ್ನೋ ಗುಪ್ತ ವರದಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಟೀಂ ಇವರನ್ನು ಕೂಡ ಫಾಲೋ ಮಾಡುತ್ತಿದೆ ಎಂಬುದಾಗಿ ತಿಳಿದುಬಂದಿದೆ.

    ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಗುಪ್ತಚರ ಇಲಾಖೆ ಕಳೆದ ಒಂದು ತಿಂಗಳಿನಿಂದ ಕಣ್ಗಾವಲು ಇಟ್ಟಿದೆ. ಬಿಎಸ್‍ವೈ ಮನೆ ಸುತ್ತ ಹೆಚ್ಚುವರಿ ಗುಪ್ತಚರ ಇಲಾಖೆ ಪೊಲೀಸರು ಕಾವಲು ಕಾಯುತ್ತಿದ್ದಾರೆ. ಇಡೀ ಆಪರೇಷನ್ ಕೇಂದ್ರ ಬಿಂದು ಬಿಎಸ್‍ವೈ ಅವರೇ ಅನ್ನೋ ಮಾಹಿತಿ ಇದ್ದು, ಬೇಹುಗಾರಿಕೆ ಬಿಸಿ ತಾಳಲಾರದೇ ಬಿಎಸ್‍ವೈ ಅವರೇ ಕೇರಳಕ್ಕೆ ಹೋಗಿದ್ದಾರಂತೆ. ಈ ಎಲ್ಲಾ ಬೆಳವಣಿಗೆಗಳಿಂದ ಬಿಎಸ್‍ವೈ ನಡೆಗಳ ಬಗ್ಗೆ ಬೇಹುಗಾರಿಕೆ ಟೀಂ ಆಲರ್ಟ್ ಆಗಿದೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv