Tag: ಬೈಕ್ ರೈಡ್

  • ಹೆಬ್ಬಾಳ ಫ್ಲೈಓವರ್ ಉದ್ಘಾಟಿಸಿದ ಡಿಸಿಎಂ – ಮೇಲ್ಸೇತುವೆಯಲ್ಲಿ ಡಿಕೆಶಿ ಬೈಕ್ ಓಡಿಸಿದ ಸ್ಟೈಲ್ ನೋಡಿ

    ಹೆಬ್ಬಾಳ ಫ್ಲೈಓವರ್ ಉದ್ಘಾಟಿಸಿದ ಡಿಸಿಎಂ – ಮೇಲ್ಸೇತುವೆಯಲ್ಲಿ ಡಿಕೆಶಿ ಬೈಕ್ ಓಡಿಸಿದ ಸ್ಟೈಲ್ ನೋಡಿ

    ಬೆಂಗಳೂರು: ಕೆ.ಆರ್ ಪುರದಿಂದ ಮೇಖ್ರಿ ಸರ್ಕಲ್‌ಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳ ವಿಸ್ತರಿತ ಮೇಲ್ಸೆತುವೆಯನ್ನು (Hebbal Flyover) ಸೋಮವಾರ (ಇಂದು) ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಉದ್ಘಾಟಿಸಿದರು.

    700 ಮೀ. ಉದ್ದದ ಕೆ.ಆರ್ ಪುರನಿಂದ ಮೇಖ್ರಿ ಸರ್ಕಲ್‌ಗೆ ಸಂಪರ್ಕ ಕಲ್ಪಿಸುವ ಈ ಫ್ಲೈಓವರ್ ಆರಂಭ ಸ್ಥಳದಲ್ಲಿ ಡಿಕೆಶಿ ಉದ್ಘಾಟಸಿದರು. ಫ್ಲೈಓವರ್ ಅಂತ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿಸದ್ದಾರೆ. ಬಳಿಕ ಹೊಸ ಮೇಲ್ಸೇತುವೆಯಲ್ಲಿ ಡಿಕೆಶಿ ಬೈಕ್ ರೈಡ್ ಮಾಡಿ ಖುಷಿಪಟ್ಟರು. ಇದನ್ನೂ ಓದಿ: ಸಂಜೆಯೊಳಗೆ ಮಹೇಶ್‌ ಶೆಟ್ಟಿ ತಿಮರೋಡಿ ಅರೆಸ್ಟ್‌ ಮಾಡಲು ಪರಮೇಶ್ವರ್‌ ಸೂಚನೆ

    ಇತ್ತೀಚೆಗೆ ಡಿಸಿಎಂ ಬೈಕ್ ಓಡಿಸಿ ಫ್ಲೈಓವರ್ ವೀಕ್ಷಣೆ ಮಾಡಿದ್ದರು, ಈ ವೇಳೆ ದಂಡ ಬಾಕಿಯಿರುವ ಬೈಕ್ ಓಡಿಸಿರೋದಾಗಿ ಬಿಜೆಪಿ ಕಾಲೆಳೆದಿತ್ತು. ಹಾಗಾಗಿ ಕಳೆದ ಬಾರಿಯ ಎಡವಟ್ಟು ಮರು ಕಳಿಸದಂತೆ ಎಚ್ಚರವಹಿಸಿ, ತನ್ನ ಪ್ರೀತಿಯ Yezdi ಬೈಕ್ ತರಿಸಿಕೊಂಡು, ಹೊಸ ಹೆಲ್ಮಟ್ ಖರೀದಿ ಮಾಡಿ ಬೈಕ್ ಓಡಿಸಿದರು. ಇದನ್ನೂ ಓದಿ: Video Viral | ಯೋಧನನ್ನ ಕಂಬಕ್ಕೆ ಕಟ್ಟಿ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ; ನಾಲ್ವರು ಅರೆಸ್ಟ್‌

    ನಂತರ ಮಾತನಾಡಿ, ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡಲು ಈ ಫ್ಲೈಓವರ್ ನಿರ್ಮಾಣ ಮಾಡಲಾಗಿದೆ. ಈ ಹಿಂದೆ ಪ್ಲಾನ್ ಆಗಿತ್ತು. ಕಾರ್ಯರೂಪಕ್ಕೆ ಬಂದಿರಲಿಲ್ಲ. ನಾನು ಬಂದ ಮೇಲೆ ಹಣ ಕೊಟ್ಟು, ಅನುಮತಿ ನೀಡಿದೆ. 80 ಕೋಟಿ ರೂ. ವೆಚ್ಚದಲ್ಲಿ ಈ ಫ್ಲೈಓವರ್ ಮಾಡಲಾಗಿದೆ. ಇನ್ನೊಂದು ಜಂಕ್ಷನ್ ರೋಡ್ ಮಾಡಲಾಗುತ್ತದೆ. 6 ಲೇನ್ ನವೆಂಬರ್ ಒಳಗೆ ಆಗುತ್ತದೆ. 3 ತಿಂಗಳಲ್ಲಿ ಇನ್ನೊಂದು ಲೂಪ್ ಬರಲಿದೆ. ಎಸ್ಟಿಮ್ ಮಾಲ್‌ನಿಂದ ಒಂದೂವರೆ ಕಿ.ಮೀ ತನಕ ಟನಲ್ ಮಾಡಲಾಗುತ್ತದೆ. ಎಮೆರ್ಜೆನ್ಸಿಗೆ ಇದರ ಬಳಕೆಯಾಗುತ್ತದೆ. ಏರ್ಪೋರ್ಟ್ನಿಂದ ಬರುವವರಿಗೆ ಅನುಕೂಲವಾಗಲಿದೆ. ಟನಲ್ ಯೋಜನೆಗೆ ಹೊಸ ಟೆಂಡರ್ ಸದ್ಯದಲ್ಲಿಯೇ ಶುರುವಾಗುತ್ತದೆ ಹೇಳಿದ್ದಾರೆ.

    ಉದ್ಘಾಟನೆ ವೇಳೆ ಸಚಿವ ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಬಿ.ಡಿ.ಎ ಅಧ್ಯಕ್ಷ, ಶಾಸಕ ಎನ್ ಎ ಹ್ಯಾರಿಸ್, ಮಾಜಿ ಸಂಸದೆ, ನಟಿ ರಮ್ಯಾ, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಬಿ.ಡಿ.ಎ. ಕಮಿಷನರ್ ಮಣಿವಣ್ಣನ್, ಬಿಬಿಎಂಪಿ ಮುಖ್ಯ ಆಯುಕ್ತ ಡಾ ಮಹೇಶ್ವರರಾವ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.

  • ಉತ್ತರ ಕಾಶ್ಮೀರದಲ್ಲಿ ‘ಕನ್ನಡ’ ಬಾವುಟ ಹಾರಿಸಿದ ಧಾರವಾಡದ ಯುವತಿ

    ಉತ್ತರ ಕಾಶ್ಮೀರದಲ್ಲಿ ‘ಕನ್ನಡ’ ಬಾವುಟ ಹಾರಿಸಿದ ಧಾರವಾಡದ ಯುವತಿ

    – ಧಾರವಾಡದಿಂದ ಕಾಶ್ಮೀರಕ್ಕೆ ಬೈಕ್‌ನಲ್ಲಿ ತೆರಳಿ ರೆಕಾರ್ಡ್

    ಧಾರವಾಡ: ಸಾಧಿಸುವ ಛಲವೊಂದಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಧಾರವಾಡದ (Dharwad) ಯುವತಿಯೊಬ್ಬಳು ಸಾಕ್ಷಿಯಾಗಿದ್ದಾಳೆ. ಬೈಕ್ ರೈಡರ್ (Bike Raider) ಆದ ಈಕೆ ಉತ್ತರ ಕಾಶ್ಮೀರಕ್ಕೆ (North Kashmir) ಒಬ್ಬಂಟಿಯಾಗಿ ಹೋಗಿ ಹೊಸ ದಾಖಲೆ ಬರೆದಿದ್ದಾಳೆ.

    ವಿದ್ಯಾಕಾಶಿ ಧಾರವಾಡದ ಯುವತಿ 18ನೇ ವಯಸ್ಸಿಗೆ ಹೊಸ ದಾಖಲೆ ನಿರ್ಮಿಸಿದ್ದಾಳೆ. ನಗರದ ಆರ್.ಎನ್ ಶೆಟ್ಟಿ ಕ್ರೀಡಾಂಗಣ ಬಳಿಯ ನಿವಾಸಿ ಪ್ರತೀಕ್ಷಾ ಹರವಿಶಟ್ಟರ್ ಬಿಸಿಎ ವ್ಯಾಸಂಗ ಮಾಡುತ್ತಿದ್ದಾಳೆ. ಬೈಕ್ ರೈಡಿಂಗ್ ಹವ್ಯಾಸವಿರುವ ಪ್ರತೀಕ್ಷಾ ಸೋಲೋ ಬೈಕ್ ರೈಡಿಂಗ್ ಮೂಲಕ ಉತ್ತರ ಕಾಶ್ಮೀರಕ್ಕೆ ಹೋಗಿಬಂದಿದ್ದಾಳೆ. ಸುಮಾರು 6 ಸಾವಿರ ಕಿಲೋ ಮೀಟರ್ ದೂರದ ರಸ್ತೆ ಕ್ರಮಿಸಿ ಬಂದಿರುವ ಪ್ರತೀಕ್ಷಾ 10 ದಿನಗಳಲ್ಲಿ ಈ ಸಾಧನೆ ಮಾಡುವ ಉದ್ದೇಶ ಹೊಂದಿದ್ದರು. ಆದರೆ 9 ದಿನಗಳಲ್ಲೇ ತಮ್ಮ ಗುರಿ ಸಾಧಿಸಿದ್ದಾರೆ. ದಾರಿಯುದ್ದಕ್ಕೂ ಜನರ ಸಹಕಾರ ಕೊಟ್ಟರು ಎನ್ನುತ್ತಾರೆ ಪ್ರತೀಕ್ಷಾ. ಇದನ್ನೂ ಓದಿ: ಸಿದ್ದರಾಮುಲ್ಲ ಖಾನ್ ಎನ್ನುತ್ತಾ ಸರ್ಕಾರದ ವಿರುದ್ಧ ರೊಚ್ಚಿಗೆದ್ದ ಸಂಸದ ಅನಂತ್ ಕುಮಾರ್ ಹೆಗಡೆ

    ಬೈಕ್ ರೈಡರ್ ಪ್ರತೀಕ್ಷಾಗೆ ಇಲ್ಲಿಂದ ಕಾಶ್ಮೀರದವರೆಗೆ ಹೋಗಲು ಸಹಾಯ ಆಗಿದ್ದು ಜಿಪಿಎಸ್ ಲೊಕೇಷನ್. ನಡುರಸ್ತೆಯಲ್ಲಿ ದಾರಿ ಗೊಂದಲವಾದಾಗ ಸಹೋದರಿ ಕೋಮಲ್ ಜಿಪಿಎಸ್ ಮೂಲಕ ಸಹಾಯ ಮಾಡಿದ್ದಾರೆ. ದಾಖಲೆ ಮಾಡಲೆಂದೇ ಈ ರೈಡ್ ಮಾಡಿದ್ದು ಎನ್ನಲಾಗಿದೆ. ಈ ಹಿಂದೆ 21 ವರ್ಷದ ಕೇರಳ ಯುವತಿ ಕಾಶ್ಮೀರದವರೆಗೆ ಒಬ್ಬಂಟಿ ಹೋಗಿರುವ ದಾಖಲೆ ಇದೆ. ಇದಾದ ನಂತರ ಪ್ರತೀಕ್ಷಾಳ ಸಹೋದರಿ ಕೋಮಲ್ 19 ವರ್ಷದವಳಿದ್ದಾಗ ಕಾಶ್ಮೀರಕ್ಕೆ ಹೋಗಿದ್ದರು. ಈಗ 18 ವರ್ಷದ ಪ್ರತೀಕ್ಷಾ ಅಕ್ಕನ ದಾಖಲೆಯನ್ನೂ ಮುರಿದಿದ್ದಾರೆ. ಪ್ರತೀಕ್ಷಾ ಸಾಧನೆಗೆ ಅಕ್ಕ ಕೋಮಲ್ ಹಾಡಿಹೊಗಳಿದ್ದಾರೆ. ಇದನ್ನೂ ಓದಿ: ಬೈಕ್ ಟ್ಯಾಕ್ಸಿಗೆ ಕೇಂದ್ರ ಅಸ್ತು- ರಾಜ್ಯ ಸರ್ಕಾರಕ್ಕೆ ಕ್ಯಾಬ್ ಅಸೋಸಿಯೇಷನ್ ಎಚ್ಚರಿಕೆ

    ಸದ್ಯ ನಮ್ಮ ರಾಜ್ಯದ ಹೆಮ್ಮೆಯ ಯುವತಿ ಒಬ್ಬಂಟಿಯಾಗಿ ಕಾಶ್ಮೀರ ಲಾಲ್ ಚೌಕಗೆ ಒಬ್ಬಂಟಿಯಾಗಿ ಹೋಗಿಬಂದು ಹೊಸ ದಾಖಲೆ ಬರೆದಿದ್ದಾಳೆ. ಇವರ ಈ ಸಾಧನೆ ಜನರು ಕೊಂಡಾಡಿದರಷ್ಟೇ ಸಾಲದು. ದಾಖಲೆ ಪುಸ್ತಕದಲ್ಲೂ ದಾಖಲಾಗಬೇಕಿದೆ. ಇದನ್ನೂ ಓದಿ: ದೆಹಲಿಯಲ್ಲಿ ಪ್ರತಿಭಟಿಸ್ತಿರೋರು ರೈತರಲ್ಲ, ದೇಶದ್ರೋಹಿಗಳು: ಅನಂತ್‌ ಕುಮಾರ್‌ ಹೆಗಡೆ

  • ಕೆಟಿಎಮ್ 390 ಬೈಕ್‌ನಲ್ಲಿ ರಾಹುಲ್ ಗಾಂಧಿ ಲಡಾಖ್ ಪ್ರವಾಸ – ಪ್ಯಾಂಗಾಂಗ್ ಸರೋವರ ಭೇಟಿ

    ಕೆಟಿಎಮ್ 390 ಬೈಕ್‌ನಲ್ಲಿ ರಾಹುಲ್ ಗಾಂಧಿ ಲಡಾಖ್ ಪ್ರವಾಸ – ಪ್ಯಾಂಗಾಂಗ್ ಸರೋವರ ಭೇಟಿ

    ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಪ್ರಸ್ತುತ ಲಡಾಖ್ (Ladakh) ಪ್ರವಾಸ ಕೈಗೊಂಡಿದ್ದು, ಶನಿವಾರ ಬೈಕ್ ರೈಡ್ (Bike Ride) ಮೂಲಕ ಪ್ಯಾಂಗಾಂಗ್ ಸರೋವರಕ್ಕೆ (Pangong Lake) ತೆರಳಿದ್ದಾರೆ. ರಾಹುಲ್ ಗಾಂಧಿ ಅವರ ಬೈಕ್ ರೈಡ್ ಫೋಟೋಸ್ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.

    ರಾಹುಲ್ ಗಾಂಧಿ ತಾವು ಬೈಕ್ ಓಡಿಸುತ್ತಿರುವ ಫೋಟೋಗಳನ್ನು ತಮ್ಮ ಟ್ವಿಟ್ಟರ್ (Twitter) ಖಾತೆಯಲ್ಲಿ ಹಂಚಿಕೊಂಡಿದ್ದು, ಕೆಲವು ಫೋಟೋಗಳನ್ನು ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದೆ. ರಾಹುಲ್ ಗಾಂಧಿ ಫೋಟೋಗಳನ್ನು ಹಂಚಿಕೊಳ್ಳುವುದರ ಜೊತೆಗೆ ಕೆಲವು ಸಾಲುಗಳನ್ನು ಕೂಡಾ ಬರೆದಿದ್ದಾರೆ. ಪ್ಯಾಂಗಾಂಗ್ ಸರೋವರ ವಿಶ್ವದ ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದು ಎಂದು ನಮ್ಮ ತಂದೆ ಸರೋವರಕ್ಕೆ ಹೋಗುತ್ತಿದ್ದ ದಾರಿಯಲ್ಲಿ ಹೇಳುತ್ತಿದ್ದರು ಎಂದು ರಾಗಾ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದ್ವಾರಕಾ ಎಕ್ಸ್‌ಪ್ರೆಸ್‌ವೇ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ನಿತಿನ್ ಗಡ್ಕರಿ ಸ್ಪಷ್ಟನೆ

    ಮಾಹಿತಿಗಳ ಪ್ರಕಾರ, ರಾಹುಲ್ ಗಾಂಧಿ ಆಗಸ್ಟ್ 20ರಂದು ತಮ್ಮ ತಂದೆ ರಾಜೀವ್ ಗಾಂಧಿಯವರ (Rajiv Gandhi) ಜನ್ಮದಿನದ ಸಲುವಾಗಿ ಪ್ಯಾಂಗಾಂಗ್ ಸರೋವರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ರಾಹುಲ್ ಗಾಂಧಿ ತಮ್ಮದೇ ಆದ ಕೆಟಿಎಮ್ ಬೈಕ್ ಅನ್ನು ಹೊಂದಿದ್ದರೂ ಸಹಿತ ಅವರ ಭದ್ರತಾ ಸಿಬ್ಬಂದಿ ಅದರಲ್ಲಿ ಸವಾರಿ ಮಾಡಲು ಬಿಡುವುದಿಲ್ಲ ಎಂದು ಈ ಹಿಂದೆ ಹೇಳಿದ್ದರು. ಇದನ್ನೂ ಓದಿ: Rajasthan: ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸಮಿತಿ ರಚಿಸಿದ ರಾಜಸ್ಥಾನ ಸಿಎಂ

    ರಾಹುಲ್ ಗಾಂಧಿ ಕೆಟಿಎಮ್ 390 ಅಡ್ವೆಂಚರ್ ಬೈಕ್ ಅನ್ನು ಸವಾರಿ ಮಾಡುತ್ತಿದ್ದು, ಹೆಲ್ಮೆಟ್, ಕೈಗವಸು, ಸವಾರಿ ಬೂಟುಗಳು ಮತ್ತು ಜಾಕೆಟ್ ಧರಿಸಿರುವುದನ್ನು ಫೋಟೋದಲ್ಲಿ ಕಾಣಬಹುದು. ಕೆಟಿಎಮ್ 390 ಅಡ್ವೆಂಚರ್ ಬೈಕ್ 373 ಸಿಸಿ ಬೈಕ್ ಆಗಿದ್ದು, ಗರಿಷ್ಠ 32 ಕಿಲೋ ವ್ಯಾಟ್ ಪವರ್ ಮತ್ತು 37 ಎನ್‌ಎಮ್ ಗರಿಷ್ಠ ಟಾರ್ಕ್ ಅನ್ನು ಹೊಂದಿದೆ. ಅಲ್ಲದೇ ಗರಿಷ್ಠ 155 ಕಿಲೋ ಮೀಟರ್ ವೇಗವನ್ನು ಹೊಂದಿದೆ. ಇದನ್ನೂ ಓದಿ: ಸರ್ಕಾರದ ಎಲ್ಲ ಸಂಸ್ಥೆಗಳಲ್ಲೂ RSS ತನ್ನ ಜನರನ್ನಿರಿಸಿದೆ – ರಾಹುಲ್ ಗಾಂಧಿ ಆರೋಪ

    ರಾಹುಲ್ ಗಾಂಧಿ ಕೆಟಿಎಮ್ ಬೈಕ್ ಅನ್ನು ಹೊಂದಿದ್ದರೂ ಸಹಿತ ಅವರ ಭದ್ರತಾ ಸಿಬ್ಬಂದಿ ಅದರಲ್ಲಿ ಸವಾರಿ ಮಾಡಲು ಬಿಡುವುದಿಲ್ಲ ಎಂದು ಈ ಹಿಂದೆ ಹೇಳಿದ್ದರು. ಇದನ್ನೂ ಓದಿ: ಅಮೇಥಿಯಿಂದ ರಾಹುಲ್, ವಾರಣಾಸಿಯಿಂದ ಪ್ರಿಯಾಂಕಾ ಸ್ಪರ್ಧೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಂಪತಿ ಈ ಕೆಲಸ ಮಾಡಿದ್ರೆ ದಾಂಪತ್ಯ ಜೀವನ ಸುಖಮಯವಾಗಿರುತ್ತೆ..

    ದಂಪತಿ ಈ ಕೆಲಸ ಮಾಡಿದ್ರೆ ದಾಂಪತ್ಯ ಜೀವನ ಸುಖಮಯವಾಗಿರುತ್ತೆ..

    ದಾಂಪತ್ಯ ಎಂಬುದು ಬದುಕಿನ ಒಂದು ಅಮೂಲ್ಯ ಘಟ್ಟ. ಪ್ರತಿ ಸನ್ನಿವೇಶದಲ್ಲೂ ಸತಿ-ಪತಿ ಹೊಂದಾಣಿಕೆಯಿಂದ ಸಾಗಿದರೆ ಸಂಸಾರ ಸುಂದರವಾಗಿರುತ್ತೆ. ದಾಂಪತ್ಯದ ಪ್ರತಿ ಕ್ಷಣವೂ ಸುಮಧುರವಾಗಿರಬೇಕು. ಮುಂದೊಮ್ಮೆ ಅದರ ನೆನಪುಗಳು ಸಿಹಿಯಾಗಿರಬೇಕು.

    ದಾಂಪತ್ಯದಲ್ಲಿ ಹೊಂದಾಣಿಕೆಯ ಬದುಕು ಅಷ್ಟು ಸುಲಭವಲ್ಲ. ಸಾಗರದಲ್ಲಿ ನೌಕೆಗೆ ಎದುರಾಗುವ ಅಡೆತಡೆಗಳಂತೆಯೇ ಸಂಸಾರದಲ್ಲೂ ಅಡ್ಡಿ ಆತಂಕಗಳಿರುತ್ತವೆ. ಅದೆಲ್ಲವನ್ನೂ ಸ್ವೀಕರಿಸಿ ಸುಖಿ ಜೀವನ ನಡೆಸಬೇಕು ಎನ್ನುವುದಾದರೆ, ದಂಪತಿ (Couple) ತಮ್ಮ ನಿತ್ಯದ ಬದುಕಿನಲ್ಲಿ ಮಾಡಬೇಕಾದ ಒಂದಷ್ಟು ಕೆಲಸಗಳಿವೆ. ಬನ್ನಿ ಅವುಗಳನ್ನು ತಿಳಿಯೋಣ. ಇದನ್ನೂ ಓದಿ: ಪ್ರೀತಿ ಪ್ರಬುದ್ಧವಾಗಿರಬೇಕು.. ಅಪ್ರಬುದ್ಧರ ಪ್ರೀತಿ ಹೇಗಿರುತ್ತೆ ಗೊತ್ತಾ?

    ಒಟ್ಟಿಗೆ ಡ್ಯಾನ್ಸ್‌ ಮಾಡಿ
    ನಿಮ್ಮ ದಿನಚರಿಯಲ್ಲಿ ಕೆಲಹೊತ್ತು ಇಬ್ಬರೂ ಸೇರಿ ನೃತ್ಯ ಮಾಡಿ. ತುಂಬಾ ಟ್ರೆಂಡಿಂಗ್‌ನಲ್ಲಿರೋ ರೊಮ್ಯಾಂಟಿಕ್‌ ನೃತ್ಯವನ್ನೇ ಆಯ್ಕೆ ಮಾಡಿಕೊಳ್ಳಿ. ಇಬ್ಬರೂ ಒಟ್ಟಿಗೆ ನೃತ್ಯ ಕಲಿಯಿರಿ. ಅದನ್ನು ಚಿತ್ರೀಕರಿಸಿ ಫನ್‌ ಮಾಡಿ.

    ಬೈಕ್‌ ರೈಡ್‌ ಹೋಗಿ
    ದಂಪತಿ ಒಟ್ಟಿಗೆ ಆಗಾಗ ಬೈಕ್‌ ರೈಡ್‌ ಹೋಗಿ. ಬೀದಿ ಬದಿಯಲ್ಲಿ ಸಿಗುವ ತಿನಿಸನ್ನು ಸವಿಯಿರಿ. ಅಲ್ಲಿ ಟೀ, ಕಾಫಿ ಸೇವಿಸಿ. ಬೈಕ್‌ ರೈಡ್‌ನ್ನು ಇಬ್ಬರೂ ಎಂಜಾಯ್‌ ಮಾಡಿ. ಇದನ್ನೂ ಓದಿ: ಸದಾ ಹ್ಯಾಪಿಯಾಗಿರುವವರ ಸೀಕ್ರೆಟ್‌ ಗುಣಗಳೇನು ಗೊತ್ತಾ?

    ಇಷ್ಟದ ಅಡುಗೆಯನ್ನು ಜೊತೆಯಾಗಿ ಮಾಡಿ
    ಅಡುಗೆ ಮನೆ ಗೃಹಿಣಿಗೆ ಮಾತ್ರ ಸೀಮಿತ ಅನ್ನೋದು ಕಾಮನ್‌. ಎಂದಾದರೂ ಪುರುಷರೂ ಕಿಚನ್‌ಗೆ ಹೋಗಿ, ಅಡುಗೆ ಮಾಡಲು ಹೆಂಡತಿಗೆ ಸಹಾಯ ಮಾಡಿದ್ದೀರಾ? ಇನ್ಮುಂದೆ ಆ ಮನೋಭಾವ ಬೆಳೆಸಿಕೊಳ್ಳಿ. ನಿಮ್ಮ ಇಷ್ಟದ ಅಡುಗೆಯನ್ನು ಪತ್ನಿಯೊಂದಿಗೆ ಸೇರಿ ಮಾಡಿ. ಬದುಕಿನಲ್ಲಿ ಇಬ್ಬರಿಗೂ ಅದು ಮರೆಯಲಾಗದ ಕ್ಷಣ ಆಗಿರುತ್ತೆ.

    ಮನೆ ಸ್ವಚ್ಛಗೊಳಿಸಿ
    ಮನೆಗೆಲಸವನ್ನು ಪತ್ನಿಗೆ ಮಾತ್ರ ಬಿಡುವುದು ಸರಿಯಲ್ಲ. ಎಲ್ಲಾ ಸಂದರ್ಭದಲ್ಲೂ ಅವರಿಗೆ ಸಾಥ್‌ ನೀಡುವುದು ಪತಿಯ ಕರ್ತವ್ಯ ಆಗಬೇಕು. ಆಗ ನೀವು ಪತ್ನಿ ಮನಸ್ಸಿಗೆ ಇನ್ನಷ್ಟು ಹತ್ತಿರ ಆಗ್ತೀರಾ. ಇಬ್ಬರೂ ಒಟ್ಟಿಗೆ ಮನೆ ಕ್ಲೀನ್‌ ಮಾಡಿ. ವಸ್ತುಗಳನ್ನು ನಿಗದಿತ ಸ್ಥಗಳಲ್ಲಿ ಇಟ್ಟುಕೊಳ್ಳಿ. ಮನೆ ಶುಚಿಯಾಗಿದ್ದಷ್ಟೂ, ಮನಸ್ಸು ಪ್ರಶಾಂತವಾಗಿರುತ್ತೆ. ಇದನ್ನೂ ಓದಿ: ಮಕ್ಕಳೊಂದಿಗೆ ಜಗಳವಾಡುವ ಮುನ್ನ ಪೋಷಕರು ಈ ಅಂಶಗಳನ್ನು ನೆನಪಿಡಿ..

    ಮೂವಿ ನೋಡಿ
    ಮೂವಿ ನೋಡಲು ದಂಪತಿ ಸಿನಿಮಾ ಥಿಯೇಟರ್‌ಗಳಿಗೇ ಹೋಗಬೇಕು ಎಂದೇನು ಇಲ್ಲ. ಮನೆಯಲ್ಲೇ ಒಟ್ಟಿಗೆ ಕೂತು ಇಷ್ಟದ ಸಿನಿಮಾ ವೀಕ್ಷಿಸಬಹುದು. ಇಂತಹ ಸಂದರ್ಭದಲ್ಲಿ ಆದಷ್ಟು ಕಾಮಿಡಿ ಸಿನಿಮಾಗಳನ್ನು ನೋಡಿದರೆ ಮತ್ತಷ್ಟು ಎಂಜಾಯ್‌ ಮಾಡಬಹುದು.

    ಆಗಾಗ ಪಿಕ್ನಿಕ್‌ಗೆ ಹೋಗಿ
    ಮನೆ, ಕಚೇರಿ ಅಂತಷ್ಟೇ ಇದ್ದರೆ ಲೈಫು ತುಂಬಾ ಬೇಜಾರು ಎನಿಸುತ್ತೆ. ಕಪಲ್‌ ಆಗಾಗ ಹೊರಗಡೆ ಪಿಕ್ನಿಕ್‌ಗೆ ಹೋಗಬೇಕು. ಮನೆಯಿಂದಲೇ ಒಂದಷ್ಟು ಹಣ್ಣು-ಹಂಪಲು, ಸ್ನ್ಯಾಕ್ಸ್‌ ಪ್ಯಾಕ್‌ ಮಾಡಿಕೊಂಡು, ಪಿಕ್ನಿಕ್‌ ಸ್ಥಳದಲ್ಲಿ ಜೊತೆಯಾಗಿ ಸವಿಯಿರಿ. ಜೀವನದಲ್ಲಿ ಇದು ಕೂಡ ಮರೆಯಲಾಗದ ಕ್ಷಣವಾಗುತ್ತೆ.

    Live Tv
    [brid partner=56869869 player=32851 video=960834 autoplay=true]

  • ಅಪ್ಪು ಅಭಿಮಾನಿಗಳಿಂದ ಆವಲಬೆಟ್ಟಕ್ಕೆ `ಗಂಧದಗುಡಿ ರೈಡ್’ – ಆಲದ ಗಿಡ ನೆಟ್ಟು ಪುನೀತ್‌ ನಾಮಕರಣ

    ಅಪ್ಪು ಅಭಿಮಾನಿಗಳಿಂದ ಆವಲಬೆಟ್ಟಕ್ಕೆ `ಗಂಧದಗುಡಿ ರೈಡ್’ – ಆಲದ ಗಿಡ ನೆಟ್ಟು ಪುನೀತ್‌ ನಾಮಕರಣ

    ಚಿಕ್ಕಬಳ್ಳಾಪುರ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್‌ಗೆ (Puneeth Rajkumar) ಪ್ರಕೃತಿ ಅಂದ್ರೆ ಪ್ರೀತಿ. ಪ್ರಕೃತಿಯನ್ನೇ ಆರಾಧಿಸಿ ಅವರು ನಟಿಸಿರೋ ʻಗಂಧದಗುಡಿʼ (Gandhada Gudi) ಸಿನಿಮಾ ತೆರೆ ಮೇಲೆ ಬರೋಕೆ ಕೆಲವೇ ದಿನಗಳು ಬಾಕಿ ಇದ್ದು, ಎಲ್ಲೆಲ್ಲೂ ಗಂಧದಗುಡಿ ಸದ್ದು ಕೇಳಿಬರುತ್ತಿದೆ. ಇದೇ ಹೊತ್ತಲ್ಲಿ ಅಪ್ಪುವಿನ ನೆನಪಿನಾರ್ಥಕವಾಗಿ ಅಪ್ಪು ಫ್ಯಾನ್ಸ್ ಗಂಧದಗುಡಿ ರೈಡ್ ಹೊರಟಿದ್ದಾರೆ. ಅಲ್ಲದೇ ಅಪ್ಪುವಿನ ಹೆಸರಲ್ಲಿ ಆಲದ ಸಸಿಗಳನ್ನು ನೆಟ್ಟು ಸಮಾಜಮುಖಿ ಕಾಯಕ ಮಾಡಿದ್ದಾರೆ.

    ಹೌದು, ಬೆಂಗಳೂರಿನ ಮಲ್ಲೇಶ್ವರಂನಿಂದ ಆವಲಬೆಟ್ಟಕ್ಕೆ ಕಾರು ಹಾಗೂ ಬೈಕ್‌ಗಳ ಮೂಲಕ ಬೆಳ್ಳಂಬೆಳಗ್ಗೆ ರೈಡ್ ಫಾರ್ ಅಪ್ಪು ಅಂತ ಗಂಧದಗುಡಿ ರೈಡ್ ಹೊರಟ ಅಭಿಮಾನಿಗಳಿಗೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಹಾಗೂ ಸಚಿವ ಅಶ್ವತ್ಥ ನಾರಾಯಣ ಚಾಲನೆ ನೀಡಿದರು. ಇದನ್ನೂ ಓದಿ: ಪುನೀತ್ ರಾಜ್ ಕುಮಾರ್ ನೆನಪಿಗೆ ಅಪ್ಪು ಹೆಸರಿನಲ್ಲಿ ಫುಡ್ ಫೆಸ್ಟ್

    ಬೆಂಗಳೂರಿನಿಂದ (Bengaluru) ಚಿಕ್ಕಬಳ್ಳಾಪುರ (Chikkaballapura) ಮಾರ್ಗವಾಗಿ ಹೈವೆ 44 ರ ಮೂಲಕ ಅಫ್ಪು ಫ್ಯಾನ್ಸ್ ಆವಲಬೆಟ್ಟಕ್ಕೆ ಆಗಮಿಸಿದರು. ಅಪ್ಪು ನೆನೆಪಿಗಾಗಿ ರೈಡ್ ಅಷ್ಟೇ ಅಲ್ಲದೆ ಆವಲಬೆಟ್ಟದಲ್ಲಿ ಅಪ್ಪು ಹೆಸರಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವರ ಹೆಸರು ಅಜರಾಮರವಾಗುವಂತೆ ಮಾಡಿದರು. ಇಂಚರ ಸ್ಟುಡಿಯೋ, ದ್ವಿಚಕ್ರ ಪ್ರೆಸೆಂಟ್ಸ್ ಸಹಯೋಗದೊಂದಿಗೆ ನೂರಕ್ಕೂ ಹೆಚ್ಚು ಬೈಕ್‌ಗಳ ಮೂಲಕ ಆಗಮಿಸಿದ ಅಪ್ಪು ಅಭಿಮಾನಿಗಳು, ಅರಣ್ಯ ಇಲಾಖೆಯ ಸಹಕಾರದಿಂದ ಆವಲಬೆಟ್ಟದ ಎರಡು ಕಿಲೋಮೀಟರ್ ರಸ್ತೆಯ ಇಕ್ಕೆಲಗಳಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟರು.

    ಆವಲಬೆಟ್ಟದ ಪ್ರವೇಶದ್ವಾರದ ಬಳಿ ಆಲದ ಸಸಿ ನೆಟ್ಟು ಪೂಜೆ ಪುನಸ್ಕಾರ ಮಾಡಿ ಅಪ್ಪು ಅಂತ ನಾಮಕರಣ ಸಹ ಮಾಡಿದರು. ಬೆಟ್ಟದ ರಸ್ತೆಯುದ್ದಕ್ಕೂ ಇಕ್ಕೆಲಗಳಲ್ಲಿ ಆಲದ ಸಸಿಗಳನ್ನು ನೆಟ್ಟು ಇಡೀ ದಿನ ಆವಲಬೆಟ್ಟದಲ್ಲೇ ಅಪ್ಪು ನೆನಪಿನಾರ್ಥಕವಾಗಿ ಕಾಲ ಕಳೆದು ಅಪ್ಪುವನ್ನ ನೆನೆದರು. ಇನ್ನೂ ಇದೇ ತಿಂಗಳು 29 ಕ್ಕೆ ಅಪ್ಪು ನಮ್ಮನ್ನ ಆಗಲಿ ಒಂದು ವರ್ಷ ಆಗಲಿದ್ದು, ಮುನ್ನಾ ದಿನವೇ ಅಭಿಮಾನಿಗಳಿಗೆ ಅಪ್ಪು ನಟನೆಯ ಗಂಧದಗುಡಿ ಸಿನಿಮಾ ಗಿಫ್ಟ್ ಆಗಿ ಸಿಗಲಿದೆ. ಇದನ್ನೂ ಓದಿ: ಬೆಂಗಳೂರು ಸ್ಟೀಲ್ ಬ್ರಿಡ್ಜ್ ಫ್ಲೈ ಓವರ್ ಗೆ ಪುನೀತ್ ಹೆಸರಿಡಲು ಮನವಿ

    ಗಂಧದಗುಡಿ ಸಿನಿಮಾಗೆ ಸ್ವಾಗತ ಕೋರುವುದಕ್ಕೆ ಅಪ್ಪುವನ್ನ ಕಣ್ತುಂಬಿಕೊಳ್ಳೋಕೆ ಈಗಾಗಲೇ ಫ್ಯಾನ್ಸ್ ಕಾತುರದಿಂದ ಕಾಯುತ್ತಿದ್ದಾರೆ. ಇತ್ತ ಅಪ್ಪುವಂತೆ ಫ್ಯಾನ್ಸ್ ಕೂಡ ಗಂಧದಗುಡಿ ರೈಡ್ ಹೆಸರಲ್ಲಿ ನೂರಾರು ಆಲದ ಸಸಿ ನೆಟ್ಟು ಇತರರಿಗೂ ಮಾದರಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೊರೊನಾ ಜಾಗೃತಿಗಾಗಿ ಕಾಶ್ಮೀರ ಟು ಕನ್ಯಾಕುಮಾರಿ ರೈಡ್ ಆರಂಭಿಸಿದ ಯುವಕ

    ಕೊರೊನಾ ಜಾಗೃತಿಗಾಗಿ ಕಾಶ್ಮೀರ ಟು ಕನ್ಯಾಕುಮಾರಿ ರೈಡ್ ಆರಂಭಿಸಿದ ಯುವಕ

    ಧಾರವಾಡ: ಸರ್ಕಾರ ಎಷ್ಟೊಂದು ಕೊರೊನಾ ಜಾಗೃತಿ ಮುಡಿಸುತ್ತಿದೆ. ಆದರೂ ಸಹ ಭಾರತದಲ್ಲಿ ಸಾಕಷ್ಟು ಜನ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಈ ಹಿನ್ನೆಲೆ ಧಾರವಾಡದ ಯುವಕ ಕೆ2ಕೆ ಬೈಕ್‍ನಲ್ಲಿ ರೈಡ್ ಆರಂಭಿಸಿದ್ದಾರೆ.

    ಧಾರವಾಡದ ವಿಜೇತ್ ಕುಮಾರ್ ಹೊಸಮಠ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಒಟ್ಟು 6 ಸಾವಿರ ಕಿ.ಮೀಟರ್ ಬೈಕ್ ರೈಡ್ ಮಾಡಲಿದ್ದಾರೆ. ತನ್ನದೇ 97 ಸಿಸಿಯ ಹೀರೋ ಹೊಂಡಾ ಸ್ಪಂಡ್ಲರ್ ಪ್ಲಸ್ ಬೈಕ್ ನಲ್ಲಿ ಈ ರೈಡ್ ಆರಂಭ ಮಾಡಿದ್ದಾರೆ. ಕಳೆದ 11 ರಂದು ಕಾಶ್ಮೀರ ಲೇಹ್ ಲಡಾಕ್‍ನಿಂದ ವಿಜೇತ್ ಬೈಕ್ ರೈಡ್ ಆರಂಭ ಮಾಡಿದ್ದು, ಇವತ್ತು ಪಂಜಾಬ್ ರಾಜ್ಯದ ಭಟಿಂಡಾಗೆ ತಲುಪಿದ್ದಾರೆ. ಇದನ್ನೂ ಓದಿ: ರೈಲ್ವೆ ಉದ್ಯೋಗ ಕೊಡಿಸುವುದಾಗಿ ವಂಚನೆ – ನಾಲ್ವರು ಆರೋಪಿಗಳು ಅರೆಸ್ಟ್

    ಇದೇ ಅ.20 ರಂದು ವಿಜೇತ್ ಕನ್ಯಾಕುಮಾರಿಗೆ ತಲುಪುವ ಟಾರ್ಗೆಟ್ ಇಟ್ಟುಕೊಂಡಿದ್ದಾರೆ. ಲೇಹ ಲದಾಖ್ ನ ಕಠಿಣ ರಸ್ತೆಗಳನ್ನು ದಾಟಿ ವಿಜೇತ್ ಈಗ ಪಂಜಾಬ್ ರಾಜ್ಯ ತಲಿಪಿದ್ದಾರೆ. ಇನ್ನೂ ಹಲವು ರಾಜ್ಯಗಳನ್ನು ದಾಟಿ ವಿಜೇತ್ ಕನ್ಯಾಕುಮಾರಿ ತಲುಪಬೇಕಿದೆ.

    ಈ ಹಿಂದೆ ಇದೇ ಯುವಕ 2018 ರ ಲೋಕಸಭಾ ಚುನಾವಣೆ ವೇಳೆ ಧಾರವಾಡದಿಂದ ಕನ್ಯಾಕುಮಾರಿವರೆಗೆ ಇದೇ ಬೈಕ್ ಅಲ್ಲಿ 2,800 ಕಿಲೋ ಮೀಟರ್ ಬೈಕ್ ರೈಡ್ ಮಾಡಿದ್ದರು. ಇದನ್ನೂ ಓದಿ: ಕೋಟೆನಾಡಲ್ಲಿ ಮಳೆಯ ಆರ್ಭಟ- ಸೂರಿಲ್ಲದೇ ಬೀದಿಗೆ ಬಿದ್ದ ಕುಟುಂಬಗಳು

  • ಪತ್ನಿ ಜೊತೆ ವಿವೇಕ್ ಒಬೆರಾಯ್ ಔಟಿಂಗ್- ದಾಖಲಾಯ್ತು ಎಫ್‍ಐಆರ್

    ಪತ್ನಿ ಜೊತೆ ವಿವೇಕ್ ಒಬೆರಾಯ್ ಔಟಿಂಗ್- ದಾಖಲಾಯ್ತು ಎಫ್‍ಐಆರ್

    ಮುಂಬೈ: ಪತ್ನಿ ಜೊತೆ ಔಟಿಂಗ್ ಹೋಗುವಾಗ ಹೆಲ್ಮೆಟ್ ಹಾಗೂ ಮಾಸ್ಕ್ ಹಾಕದ್ದಕ್ಕೆ ನಟ ವಿವೇಕ್ ಒಬೆರಾಯ್ ವಿರುದ್ಧ ಪ್ರಕರಣ ದಾಖಲಾಗಿದ್ದು, ದಂಡ ಸಹ ವಿಧಿಸಲಾಗಿದೆ.

    ವ್ಯಾಲೆಂಟೈನ್ಸ್ ಡೇ ದಿನ ಪತ್ನಿ ಜೊತೆ ವಿವೇಕ್ ಒಬೆರಾಯ್ ಔಟಿಂಗ್ ಹೋಗಿದ್ದ ವೀಡಿಯೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದರು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ವೈರಲ್ ಆಗಿದ್ದು, ಹೆಲ್ಮೆಟ್ ಹಾಗೂ ಮಾಸ್ಕ್ ಹಾಕದಿರುವುದು ಕಂಡುಬಂದಿದೆ. ಹೀಗಾಗಿ ದಂಡ ಹಾಕಲಾಗಿದೆ.

    ಹೆಲ್ಮೆಟ್ ಹಾಕದೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿರುವುದು ಹಾಗೂ ಕೊರೊನಾ ಸಮಯದಲ್ಲಿ ಮಾಸ್ಕ್ ಧರಿಸದೇ ಸಂಚರಿಸಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದಾಗಿ ಯುವಕರನ್ನು ತಪ್ಪು ದಾರಿಗೆ ಎಳೆಯಲು ಪ್ರೋತ್ಸಾಹಿಸಿದಂತಾಗುತ್ತದೆ. ಹೀಗಾಗಿ ದಂಡ ಕಟ್ಟಬೇಕು ಎಂದು ಒತ್ತಾಯಿಸಲಾಗಿತ್ತು.

    ಇದನ್ನು ಗಮನಿಸಿದ ಮುಂಬೈ ಪೊಲೀಸರು ಕ್ರಮ ಕೈಗೊಂಡಿದ್ದು, ಇ-ಚಲನ್ ನೀಡುವ ಮೂಲಕ ದಂಡ ಹಾಕಿದ್ದಾರೆ. ಹೆಲ್ಮೆಟ್ ಧರಿಸದ್ದಕ್ಕೆ ವಿವೇಕ್ ಒಬೆರಾಯ್ ಅವರಿಗೆ 500 ರೂ.ಗಳ ದಂಡದ ಇ-ಚಲನ್‍ನ್ನು ಸ್ಯಾಂತಾಕ್ರೂಜ್ ವಿಭಾಗದ ಪೊಲೀಸರು ನೀಡಿದ್ದಾರೆ. ಶುಕ್ರವಾರ ಸಂಜೆ 7 ಗಂಟೆಗೆ ಅಸಿಸ್ಟೆಂಟ್ ಇನ್‍ಸ್ಪೆಕ್ಟರ್ ನಂದಕಿಶೋರ್ ಯಾದವ್ ಅವರು ಇ-ಚಲನ್ ನೀಡಿದ್ದಾರೆ.

    ದಂಡ ಮಾತ್ರವಲ್ಲದೆ ಮಾಸ್ಕ್ ಧರಿಸದ್ದಕ್ಕೆ ವಿವೇಕ್ ಒಬೆರಾಯ್ ವಿರುದ್ಧ ಮುಂಬೈನ ಜುಹು ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 19ರಂದು ಎಫ್‍ಐಆರ್ ಸಹ ದಾಖಲಾಗಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಮಾಸ್ಕ್ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

    ಮೋಟರ್ ವೆಹಿಕಲ್ಸ್ ಆ್ಯಕ್ಟ್‍ನ ಸೆಕ್ಷನ್ 21ರ ಅಡಿ ಸೆಕ್ಷನ್ 129/177 ಅಡಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಮಹಾರಾಷ್ಟ್ರ ಕೋವಿಡ್-19 ಮೀಶರ್ಸ್ 2020ಯ ಜುಹು ಠಾಣೆಯ ಸಬ್ ಇನ್‍ಸ್ಪೆಕ್ಟರ್ ಕಾಂಬ್ಳೆ ಅವರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ. ಇಂದು ಪೊಲೀಸರು ವಿವೇಕ್ ಒಬೆರಾಯ್ ಅವರ ಮನೆಗೆ ಹೇಳಿಕೆ ಪಡೆಯಲು ತೆರಳಿದ್ದು, ಈ ವೇಳೆ ಅವರು ದೆಹಲಿಗೆ ತರಳಿದ್ದಾರೆ ಎಂದು ಮನೆಯವರು ತಿಳಿಸಿದ್ದಾರೆ.

     

    View this post on Instagram

     

    A post shared by Viral Bhayani (@viralbhayani)

    ದಂಡ ಬಿದ್ದಿದ್ಯಾಕೆ?
    ವ್ಯಾಲೆಂಟೈನ್ಸ್ ಡೇ ದಿನ ನಟ ವಿವೇಕ್ ಒಬೆರಾಯ್ ಅವರು ಹಾರ್ಲೆ ಡೆವಿಡ್ಸನ್ ಬೈಕ್ ಮೇಲೆ ಪತ್ನಿಯನ್ನು ಕೂರಿಸಿಕೊಂಡು ತೆರಳುತ್ತಿದ್ದರು. ಈ ವಿಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದರು. ಬಳಿಕ ಈ ವಿಡಿಯೋ ವೈರಲ್ ಆಗಿತ್ತು. ವ್ಯಾಲೆಂಟೈನ್ಸ್ ಡೇ ಹೇಗೆ ಆರಂಭಿಸಬೇಕು ಎನ್ನುತ್ತಲೇ ನಾನು ನನ್ನ ಪತ್ನಿ ಜಾಯ್ ರೈಡ್ ಮೂಲಕ ರಿಫ್ರೆಶ್ ಆಗುತ್ತಿದ್ದೇವೆ ಎಂದು ಬರೆದುಕೊಂಡಿದ್ದರು.

  • ಗೆಳೆಯರ ಜೊತೆ ‘ರಾಬರ್ಟ್’ ಬೈಕ್ ರೈಡ್ – 3 ದಿನ ಮಡಿಕೇರಿಯಲ್ಲಿ ಸಾರಥಿ

    ಗೆಳೆಯರ ಜೊತೆ ‘ರಾಬರ್ಟ್’ ಬೈಕ್ ರೈಡ್ – 3 ದಿನ ಮಡಿಕೇರಿಯಲ್ಲಿ ಸಾರಥಿ

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಚಿತ್ರರಂಗದ ಗೆಳೆಯರು ಮತ್ತು ಕೆಲ ಬಾಲ್ಯದ ಸ್ನೇಹಿತರ ಜೊತೆಗೆ ಜಾಲಿಯಾಗಿ ಬೈಕ್ ರೈಡ್ ಹೋಗಿದ್ದಾರೆ.

    ದರ್ಶನ್ ಅವರು ಆಗಾಗ ಟ್ರಿಪ್ ಹೋಗುತ್ತಿರುತ್ತಾರೆ. ಅದರಲ್ಲೂ ಕಾರು, ಬೈಕಿನ ಮೇಲೆ ಹೆಚ್ಚಿನ ಕ್ರೇಜ್ ಹೊಂದಿರುವ ಡಿಬಾಸ್, ಗೆಳೆಯರ ಜೊತೆ ವರ್ಷಕ್ಕೆ ಒಂದು ಬಾರಿ ಟ್ರಿಪ್ ಹೋಗುತ್ತಾರೆ. ಅಂತಯೇ ಈ ಬಾರಿ ಕೂಡ ತಮ್ಮ 15ಕ್ಕೂ ಹೆಚ್ಚು ಮಂದಿ ಗೆಳೆಯರೊಂದಿಗೆ ಮಡಿಕೇರಿಗೆ ಮೂರು ದಿನದ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ.

    ಇಂದು ಆರ್.ಆರ್ ನಗರದ ನಿವಾಸದಿಂದ ಸಾರಥಿಯ ನೇತೃತ್ವದಲ್ಲೇ ನಟ ಚಿಕ್ಕಣ್ಣ, ನಿರ್ಮಾಪಕ ಉಮಾಪತಿ, ಪ್ರಜ್ವಲ್ ದೇವರಾಜ್, ಪ್ರಣಮ್ ದೇವರಾಜ್ ಮತ್ತು ಚಿಂಗಾರಿಯ ಬಾಲ್ಯದ ಗೆಳೆಯರು ಮಡಿಕೇರಿ ಕಡೆ ಹೋಗಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಡಿಬಾಸ್ ಮತ್ತವರ ಸ್ನೇಹಿತರು ಅಲ್ಲೇ ತಂಗಲಿದ್ದಾರೆ. ದರ್ಶನ್ ಅವರು ಟ್ರಿಪ್ ಹೊರಟಿರುವ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ.

    ದರ್ಶನ್ ಅವರ ನಿವಾಸದ ಮುಂದೆ ಸುಮಾರು 15ಕ್ಕೂ ಹೆಚ್ಚಿನ ಬೈಕ್‍ಗಳು ನಿಂತಿರುವ ಫೋಟೋಗಳು ಮತ್ತು ಅವರು ಮನೆಯಿಂದ ಸೂಪರ್ ಬೈಕಿನಲ್ಲಿ ಹೋಗುತ್ತಿರುವ ವಿಡಿಯೋಗಳನ್ನು ಅವರ ಅಭಿಮಾನಿಗಳು ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ. ಡಿ ಬಾಸ್ ತಮ್ಮ ನೀಲಿ ಬಣ್ಣದ ಬೈಕಿನಲ್ಲಿ ಕಪ್ಪು ಜಾಕೆಟ್ ತೊಟ್ಟು ರೈಡ್‍ಗೆ ಹೋಗಿದ್ದಾರೆ. ಇದರ ಜೊತೆಗೆ ಪ್ರಜ್ವಲ್ ದೇವರಾಜ್ ಅವರು ತಾವು ರೈಡಿಗೆ ಸಿದ್ಧವಾಗಿರುವ ಫೋಟೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

  • ಇನ್‍ಸ್ಟಾ ಫೋಟೋ ನೋಡಿ ಯುವಕನ ಮೇಲೆ ಗ್ಯಾಂಗ್‍ರೇಪ್

    ಇನ್‍ಸ್ಟಾ ಫೋಟೋ ನೋಡಿ ಯುವಕನ ಮೇಲೆ ಗ್ಯಾಂಗ್‍ರೇಪ್

    – ಚಲಿಸುತ್ತಿದ್ದ ಕಾರಿನಲ್ಲಿ ಮೂರು ಗಂಟೆ ಅತ್ಯಾಚಾರ
    – ನಾಲ್ವರು ಕಾಮುಕರಲ್ಲಿ ಓರ್ವ ಅಪ್ರಾಪ್ತ

    ಮುಂಬೈ: ಇನ್‍ಸ್ಟಾಗ್ರಾಂನಲ್ಲಿ ಹಾಕಿದ್ದ ಪೋಸ್ಟ್ ಆಧರಿಸಿ 22 ವರ್ಷದ ಯುವಕನ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.

    ಮುಂಬೈನ ವಿಬಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಇನ್‍ಸ್ಟಾಗ್ರಾಂನಲ್ಲಿ ಹಾಕಿದ್ದ ಪೋಸ್ಟ್ ವ್ಯಕ್ತಿಯ ಮೇಲೆ ಅತ್ಯಾಚಾರ ಎಸಗಲು ಸಹಾಯ ಮಾಡಿದೆ ಎಂಬುದು ಇನ್ನೂ ಅಚ್ಚರಿಯ ಸಂಗತಿಯಾಗಿದೆ. ಚಲಿಸುತ್ತಿದ್ದ ಕಾರಿನಲ್ಲಿ ಯುವಕನ ಮೇಲೆ ಅತ್ಯಾಚಾರ ಎಸಗಿ ರಸ್ತೆಯಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪ್ರಕರಣದ ಸಂಬಂಧ ಐಪಿಸಿ ಸೆಕ್ಷನ್ 377 (ಅಸ್ವಾಭಾವಿಕ ಲೈಂಗಿಕತೆ) ಅಡಿ ಮುಂಬೈ ಪೊಲೀಸರು ಎಫ್‍ಐಆರ್ ದಾಖಲಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರಲ್ಲಿ ಒಬ್ಬ ಅಪ್ರಾಪ್ತನಾಗಿದ್ದು, ಬಾಲಾಪರಾಧಿಗಳ ಕಾರಾಗೃಹಕ್ಕೆ ಕಳುಹಿಸಲಾಗಿದೆ.

    ಈ ಕುರಿತು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿ, ಯುವಕ ಮುಂಬೈನಲ್ಲಿ ವಾಸವಿದ್ದು, ನಗರದ ಹೊರವಲಯದಲ್ಲಿರುವ ರೆಸ್ಟೋರೆಂಟಿಗೆ ಭೇಟಿ ನೀಡಿ ಅಲ್ಲಿ ಸೆಲ್ಫಿ ತೆಗೆದುಕೊಂಡಿದ್ದ ಚಿತ್ರಗಳನ್ನು ಇನ್‍ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾನೆ. ಇದನ್ನು ಆಧರಿಸಿ ನಾಲ್ವರು ಆರೋಪಿಗಳು ಸಂತ್ರಸ್ತ ಯುವಕ ತಂಗಿರುವ ಜಾಗಕ್ಕೆ ತೆರಳಿದ್ದಾರೆ ಎಂದು ವಿವರಿಸಿದ್ದಾರೆ.

    ವಿಚಾರಣೆ ವೇಳೆ ಆರೋಪಿಗಳು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು, ಇನ್‍ಸ್ಟಾಗ್ರಾಂ ನಲ್ಲಿ ಹಾಕಿದ ಫೋಟೊ ಆಧರಿಸಿ ವ್ಯಕ್ತಿ ಇರುವ ಲೊಕೇಶನ್ ಹುಡುಕಿದೆವು. ಆಗ ನಾಲ್ವರೂ ರೆಸ್ಟೊರೆಂಟಿಗೆ ತೆರಳಿದೆವು, ನಾವು ನಿಮ್ಮನ್ನು ಇನ್‍ಸ್ಟಾಗ್ರಾಂ ನಲ್ಲಿ ಫಾಲೋ ಮಾಡುತ್ತಿದ್ದೇವೆ. ನಿಮ್ಮ ಅಭಿಮಾನಿಗಳಾಗಿದ್ದೇವೆ ಎಂದು ಪರಿಚಯಿಸಿಕೊಂಡೆವು ಎಂದು ಹೇಳಿದ್ದಾರೆ.

    ನಂತರ ಬೈಕ್ ರೈಡಿಗೆ ಹೊರಟಿದ್ದೇವೆ ನಮ್ಮ ಜೊತೆ ಬಂದು ಕಂಪನಿ ಕೊಡಿ ಎಂದು ಆರೋಪಿಯನ್ನು ಮನವೊಲಿಸಿದೆವು. ಇದಕ್ಕೆ ಸಂತ್ರಸ್ತ ಒಪ್ಪಿದ, ಸುಮಾರು 20 ನಿಮಿಷಗಳ ಬೈಕ್ ರೈಡ್ ನಂತರ ಸಂತ್ರಸ್ತನನ್ನು ಮುಂಬೈ ವಿಮಾನ ನಿಲ್ದಾಣದ ಬಳಿಯ ಹೋಟೆಲಿಗೆ ಕರೆದೊಯ್ದೆವು. ನಂತರ ಕಾರಿನಲ್ಲಿ ಕರೆದೊಯ್ದು ಮೂರು ಗಂಟೆಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿ ಯುವಕನನ್ನು ರಸ್ತೆ ಬಳಿ ಬಿಟ್ಟು ಹೊರಟೆವು ಎಂದು ವಿವರಿಸಿದ್ದಾರೆ.

    ನಂತರ ಸಂತ್ರಸ್ತ ಪೋಷಕರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದು, ಪೊಲೀಸರಿಗೂ ಕರೆ ಮಾಡಿ ಘಟನೆ ಕುರಿತು ವಿವರಿಸಿ ದೂರು ದಾಖಲಿಸಿದ್ದಾರೆ. ಮರುದಿನ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂವರು ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಲಾಗಿದ್ದು, ನಂತರ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಇನ್ನೊಬ್ಬ ಅಪ್ರಾಪ್ತನಾಗಿದ್ದು ಬಾಲಾಪರಾಧಿಗಳ ಕಾರಾಗೃಹದಲ್ಲಿಡಲಾಗಿದೆ.

    ಘಟನೆ ಕುರಿತು ವಿ.ಬಿ.ನಗರ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ಮಾಧುರಿ ಪೊಕ್ಲೆ ಮಾಹಿತಿ ನೀಡಿ, ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ. ಎಲ್ಲ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಆರೋಪಿಗಳಿಂದ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದೇವೆ. ತನಿಖೆ ನಡೆಯುತ್ತಿದೆ, ಸಂತ್ರಸ್ತನನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಪೊಕ್ಲೆ ತಿಳಿಸಿದ್ದಾರೆ.

  • ಬೆಟ್ ಕಟ್ಟಿ ಬೆತ್ತಲಾಗಿ ಯುವತಿಯಿಂದ ಬೈಕ್ ರೈಡ್: ವಿಡಿಯೋ ವೈರಲ್

    ಬೆಟ್ ಕಟ್ಟಿ ಬೆತ್ತಲಾಗಿ ಯುವತಿಯಿಂದ ಬೈಕ್ ರೈಡ್: ವಿಡಿಯೋ ವೈರಲ್

    ಬೆಳಗಾವಿ: ಡ್ರಗ್ಸ್ ಅಮಲಿನಲ್ಲಿ ಯುವತಿಯೊಬ್ಬಳು ಬೆತ್ತಲಾಗಿ ಬೈಕ್ ರೈಡ್ ಮಾಡಿದ ಘಟನೆ ನಗರದಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

    ಈ ಘಟನೆಯು ಎರಡು ದಿನಗಳ ಹಿಂದೆ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದ್ದು, ಯುವತಿಯ ಗುರುತು ಪತ್ತೆಯಾಗಿಲ್ಲ. ಯುವತಿಯನ್ನು ಪತ್ತೆ ಹಚ್ಚಿ ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿಯ ಜನತೆ ಒತ್ತಾಯಿಸಿದ್ದಾರೆ.

    ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ರೈಡ್ ಮಾಡಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲೆ ಇದ್ದ ಕೆಲ ಯುವಕರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

    ಯುವತಿ ಚೆನ್ನಮ್ಮ ಮಾರ್ಗವಾಗಿ, ಕ್ಲಬ್ ರೋಡ್‍ಗೆ ಬಂದ ಬಳಿಕ ಒಬ್ಬಳೇ ರೈಡ್ ಮಾಡಿಕೊಂಡು ಹಿಂಡಲಗಾ ರಸ್ತೆಯಲ್ಲಿ ತೆರಳಿದ್ದಾಳೆ. ಡ್ರಗ್ ಅಮಲಿನಲ್ಲಿ ಬೆಟ್ಟಿಂಗ್ ಕಟ್ಟಿ ಯುವತಿ ಮತ್ತು ಗೆಳೆಯರ ಗುಂಪೊಂದು ಈ ರೀತಿ ವರ್ತಿಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

    ಬೇರೆ ರಾಜ್ಯಗಳಿಂದ ಬಂದಿರುವ ಕೆಲವು ವಿದ್ಯಾರ್ಥಿಗಳು ಇಂತಹ ಬೆಟ್ಟಿಂಗ್ ಕೃತ್ಯಗಳಲ್ಲಿ ಪಾಲ್ಗೊಳ್ಳುತ್ತಿದ್ದು, ಪೊಲೀಸರು ಗಸ್ತನ್ನು ಬಿಗಿಗೊಳಿಸಬೇಕು. ಈ ಮೂಲಕ ಇಂತಹ ಘಟನೆಗಳನ್ನು ತಡೆಯಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

    ಎಪಿಎಂಸಿ ಮಾರುಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆದರೆ ಘಟನೆ ನಡೆದು ಎರಡು ದಿನಗಳು ಕಳೆದರೂ ಪೊಲೀಸರು ಯುವತಿಯನ್ನು ಪತ್ತೆ ಹಚ್ಚಿಲ್ಲ. ಯುವತಿಯನ್ನು ಪತ್ತೆ ಹಚ್ಚಿ ಸೂಕ್ತ ಶಿಕ್ಷೆ ವಿಧಿಸಬೇಕು. ಮತ್ತೆ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕಿ ಎಂಬ ಒತ್ತಾಯ ಕೇಳಿ ಬಂದಿದೆ.