Tag: ಬೈಕ್ ಸ್ಟಂಟ್

  • ಕ್ರೇಜ್‌ಗಾಗಿ 300km ವೇಗದಲ್ಲಿ ಸೂಪರ್‌ ಬೈಕ್‌ ರೈಡಿಂಗ್‌ – ಯೂಟ್ಯೂಬರ್‌ ಸಾವು

    ಕ್ರೇಜ್‌ಗಾಗಿ 300km ವೇಗದಲ್ಲಿ ಸೂಪರ್‌ ಬೈಕ್‌ ರೈಡಿಂಗ್‌ – ಯೂಟ್ಯೂಬರ್‌ ಸಾವು

    ಲಕ್ನೋ: ತನ್ನ ಯೂಟ್ಯೂಬ್‌ ಚಾನೆಲ್‌ಗೆ ವೀಡಿಯೋ ಮಾಡುವ ಸಲುವಾಗಿ 300 ಕಿಮೀ ವೇಗದಲ್ಲಿ ಬೈಕ್‌ (SuperBike) ಚಲಿಸುತ್ತಿದ್ದಾಗ ಭೀಕರ ಅಪಘಾತಕ್ಕೀಡಾಗಿ ಯೂಟ್ಯೂಬರ್‌ (YouTuber) ಸಾನ್ನಪ್ಪಿರುವ ಘಟನೆ ಉತ್ತರಪ್ರದೇಶದ (UttarPradesh) ಯಮುನಾ ಎಕ್ಸ್‌ಪ್ರೆಸ್‌ವೇ ನಲ್ಲಿ ನಡೆದಿದೆ.

    ಯೂಟ್ಯೂಬರ್‌ ಅಗಸ್ತೆ ಚೌಹಾಣ್‌ ಕವಾಸಕಿ ನಿಂಜಾ ZX10R – 1,000CC ಸೂಪರ್ ಬೈಕ್ ನಲ್ಲಿ ಆಗ್ರಾದಿಂದ ದೆಹಲಿಗೆ ಬರುತ್ತಿದ್ದ ವೇಳೆ ತನ್ನ ಚಾನೆಲ್‌ಗಾಗಿ ವೀಡಿಯೋ ಮಾಡುತ್ತಿದ್ದನು. ಅದಕ್ಕಾಗಿ 300 ಕಿಮೀ ವೇಗದಲ್ಲಿ ಬೈಕ್‌ ಚಾಲನೆ ಮಾಡುತ್ತಿದ್ದಾಗ ಭೀಕರ ಅಪಘಾತಕ್ಕೀಡಾಗಿದ್ದಾನೆ. ಸ್ನೇಹಿತರು ಸಾವಿನ ಸುದ್ದಿ ಕೇಳಿ ಆತಂಕಗೊಂಡಿದ್ದಾರೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ ಪ್ರಕರಣ – ಉಗ್ರರನ್ನು ಸುತ್ತುವರಿದ ಸೇನೆ, ಇಬ್ಬರು ಯೋಧರು ಸಾವು

    ಮೂಲಗಳ ಪ್ರಕಾರ, ಯೂಟ್ಯೂಬರ್‌ ಬೈಕ್‌ ನಿಯಂತ್ರಣ ತಪ್ಪಿ ಯಮುನಾ ಎಕ್ಸ್‌ಪ್ರೆಸ್‌ವೇ ಡಿವೈಡರ್‌ಗೆ ಡಿಕ್ಕಿ ಹೊಡೆದ್ದಾನೆ. ಬೈಕ್‌ ಡಿಕ್ಕಿ ಹೊಡೆದ ರಭಸಕ್ಕೆ ಹೆಲ್ಮೆಟ್‌ ತುಂಡುತುಂಡಾಗಿದೆ, ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಅಲಿಘರ್‌ನ ತಪ್ಪಲ್ ಪೊಲೀಸ್ ಠಾಣೆ ವ್ಯಾಪ್ತಿಯ 47 ಮೈಲ್ ಪಾಯಿಂಟ್‌ನಲ್ಲಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಒಂದು ಸೆಕೆಂಡ್‌ನಲ್ಲಿ ನಿನ್ನನ್ನು ಭಯೋತ್ಪಾದಕ ಅಂತ ಘೋಷಿಸುತ್ತೇನೆ – ಶಿಕ್ಷಕನಿಗೆ ಬಿಹಾರ ಪೊಲೀಸ್ ಬೆದರಿಕೆ

    ಅಗಸ್ತೆ ಉತ್ತರಾಖಂಡದ ಡೆಹ್ರಾಡೂನ್ ನಿವಾಸಿಯಾಗಿದ್ದು, ʻಪ್ರೊ ರೈಡರ್ 1000ʼ ಎಂಬ ಶೀರ್ಷಿಕೆಯ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ. ಸುಮಾರು 12 ಲಕ್ಷ ಚಂದಾದಾರರನ್ನ ಹೊಂದಿದ್ದ. ತಾನು ದೆಹಲಿಗೆ ಹೋಗುತ್ತಿರುವುದಾಗಿ ತನ್ನ ಚಾನೆಲ್‌ಗೆ ಕೊನೆಯ ವೀಡಿಯೋ ಅಪ್ಲೋಡ್‌ ಮಾಡಿದ್ದ. ದೆಹಲಿಗೆ ಮತ್ತೆ ಮರಳುವಾಗ ನಾನು 300 ಕಿಮೀ ವೇಗದಲ್ಲಿ ಬೈಕ್‌ ಓಡಿಸುವುದನ್ನ ತೋರಿಸುತ್ತೇನೆ ಎಂದು ಹೇಳಿದ್ದ. ಅದಕ್ಕಾಗಿ ವೀಡಿಯೋ ಮಾಡಲು ಹೋಗಿ ಬೈಕ್‌ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಯೂಟ್ಯೂಬರ್‌ ಸಾವಿನ ಸುದ್ದಿ ಕೇಳಿದ ನೆಟ್ಟಿಗರು ಹೆದ್ದಾರಿ ಅಥವಾ ಎಕ್ಸ್‌ಪ್ರೆಸ್‌ ವೇಗಳಲ್ಲಿ ಬೈಕ್‌ ಓಡಿಸುವ ಮುನ್ನ ಎಚ್ಚರಿಕೆ ವಹಿಸಬೇಕು. ಬೈಕ್‌ ಸ್ಟಂಟ್‌ ಮಾಡುವುದು, ಅತೀ ವೇಗವಾಗಿ ಚಲಿಸುವುದು ಹಾಗೂ ಬೈಕ್‌ ಚಾಲನೆ ಮಾಡುವಾಗ ಮೊಬೈಲ್‌ ಬಳಕೆ ಮಾಡುವುದನ್ನು ಮಾಡಬಾರದು ಎಂದು ಸಲಹೆ ನೀಡಿದ್ದಾರೆ.

  • ಬೈಕ್ ಸ್ಟಂಟ್ ಮಾಡಲು ಹೋಗಿ ಕೆಳಗೆ ಬಿದ್ದ ಯುವಕ – ವೀಡಿಯೋ ವೈರಲ್

    ಬೈಕ್ ಸ್ಟಂಟ್ ಮಾಡಲು ಹೋಗಿ ಕೆಳಗೆ ಬಿದ್ದ ಯುವಕ – ವೀಡಿಯೋ ವೈರಲ್

    ಯುವಕನೊಬ್ಬ ಅಪಾಯಕಾರಿಯಾದ ಬೈಕ್ ಸ್ಟಂಟ್ ಮಾಡಲು ಹೋಗಿ ಕೆಳಗೆ ಬೀಳುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇಂದಿನ ಯುವಕರು ಟಿಕ್‍ಟಾಕ್, ಇನ್ ಸ್ಟಾಗ್ರಾಮ್‍ನಂತಹ ಸೋಶಿಯಲ್ ಮೀಡಿಯಾ ಆ್ಯಪ್‍ಗಳಲ್ಲಿ ಬ್ಯೂಸಿಯಾಗಿದ್ದರೆ, ಈ ಯುವಕ ಅಪಾಯಕಾರಿಯಾದ ಬೈಕ್ ಸ್ಟಂಟ್‍ವೊಂದನ್ನು ಮಾಡಲು ಮುಂದಾಗಿದ್ದಾನೆ.

    ವೀಡಿಯೋದಲ್ಲಿ ಮೋಟಾರ್ ಬೈಕ್ ಮೇಲೆ ನಿಂತು ಬೈಕ್ ಓಡಿಸಲು ಯುವಕ ಮುಂದಾಗುತ್ತಾನೆ. ಬೈಕ್ ಸರಿಯಾಗಿ ಹಿಡಿದುಕೊಳ್ಳದೇ ಬೈಕ್ ಸೀಟಿನ ಮೇಲೆ ನಿಂತುಕೊಳ್ಳಲು ಪ್ರಯತ್ನಿಸಿದಾಗ, ನಿಯಂತ್ರಣ ತಪ್ಪಿ ಯುವಕ ಕೆಳಗೆ ಹಾರಿ ಬೀಳುತ್ತಾನೆ. ಆಗ ಆತನ ತಲೆಗೆ ಕೊಂಚ ಹಾನಿಯಾಗುತ್ತದೆ. ಆದರೆ ಅದೃಷ್ಟವಶತ್ ಯುವಕ ಪ್ರಾಣಾಪಾಯದಿಂದ ಪಾರಾಗುತ್ತಾನೆ.

    ಈ ವೀಡಿಯೋವನ್ನು ಐಪಿಎಸ್ ಅಧಿಕಾರಿ ದೀಪನ್ಶು ಕಬ್ರಾ ಮಾರ್ಚ್ 25ರಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ನೋಡಿದ್ರಾ ನಿಮ್ಮ ಸ್ನೇಹಿತನಿಗೆ ಏನು ಆಯಿತೆಂದು. ದಯವಿಟ್ಟು ಇಂತಹ ದುಸ್ಸಾಹಸಗಳನ್ನು ಮಾಡುವುದನ್ನು ನಿಲ್ಲಿಸಿ. ಸುರಕ್ಷತೆ ಹಾಗೂ ಟ್ರಾಫಿಕ್ ನಿಯಮಗಳ ಬಗ್ಗೆ ಅರಿತುಕೊಳ್ಳಿ. ಗಮನಿಸಿ ನಿಮ್ಮ ಮಕ್ಕಳು/ ಸ್ನೇಹಿತರು ಮಾಡುವ ಇಂತಹ ಮೂರ್ಖತನದ ಸಾಹಸಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಆಪ್‍ಲೋಡ್ ಮಾಡಲು ಬಿಡಬೇಡಿ ಎಂದು ಬರೆದು ಹಾಕಿಕೊಂಡಿದ್ದಾರೆ.

    ವೈರಲ್ ಆಗಿರುವ ಈ ವೀಡಿಯೋವನ್ನು ಇಲ್ಲಿಯವರೆಗೂ ಸುಮಾರು 18,000ಕ್ಕೂ ಅಧಿಕ ವ್ಯೂವ್ ಪಡೆದುಕೊಂಡಿದೆ.

  • ಬೈಕ್ ಸ್ಟಂಟ್ ಮಾಡಲು ಆಕ್ಷೇಪ – ವ್ಯಕ್ತಿಯನ್ನು ನಡುಬೀದಿಯಲ್ಲಿ 28 ಬಾರಿ ಚುಚ್ಚಿ ಕೊಂದ ಅಪ್ರಾಪ್ತರು

    ಬೈಕ್ ಸ್ಟಂಟ್ ಮಾಡಲು ಆಕ್ಷೇಪ – ವ್ಯಕ್ತಿಯನ್ನು ನಡುಬೀದಿಯಲ್ಲಿ 28 ಬಾರಿ ಚುಚ್ಚಿ ಕೊಂದ ಅಪ್ರಾಪ್ತರು

    – ಬರ್ಬರ ಕೊಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ
    – ಸಿನಿಮಾ ರೀತಿ ಕೊಲೆಗೈದ ಬಾಲಕರು

    ನವದೆಹಲಿ: ಬೈಕ್ ಸ್ಟಂಟ್ ಮಾಡಲು ಆಕ್ಷೇಪ ವ್ಯಕ್ತಪಡಿಸಿದ ವ್ಯಕ್ತಿಯನ್ನು ಮೂವರು ಅಪ್ರಾಪ್ತ ಬಾಲಕರು ನಡುಬೀದಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿಯ ರಘುಬೀರ್ ನಗರದಲ್ಲಿ ನಡೆದಿದೆ.

    ಮೃತ ವ್ಯಕ್ತಿಯನ್ನು 25 ವರ್ಷದ ಮನೀಶ್ ಜಗ್ಗಿ ಎಂದು ಗುರುತಿಸಲಾಗಿದೆ. ಮನೀಶ್ ವಾಸವಿದ್ದ ಏರಿಯಾದಲ್ಲಿ ದಿನ ಮೂವರು ಅಪ್ರಾಪ್ತ ಬಾಲಕರು ಬೈಕ್ ರೈಸ್ ಮಾಡುವುದು ಮತ್ತು ಜನರು ಓಡಾಡುವ ರಸ್ತೆಯಲ್ಲಿ ಬೈಕ್ ಸ್ಟಂಟ್ ಮಾಡುತ್ತಿದ್ದರು. ಇದರಿಂದ ಕಿರಿಕಿರಿಗೊಂಡು ಮನೀಶ್ ಇಲ್ಲಿ ಬೈಕ್ ರೇಸ್‌ ಮಾಡಬೇಡಿ ಎಂದು ಆಕ್ಷೇಪ ವ್ಯಕ್ತಪಡಿಸಿದ್ದ.

    ಮನೀಶ್ ಬೈಕ್ ಸ್ಟಂಟ್‍ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಕೋಪಗೊಂಡ ಅಪ್ರಾಪ್ತರು ಆತನ ಮೇಲೆ ಜಗಳಕ್ಕೆ ನಿಂತಿದ್ದಾರೆ. ಈ ಜಗಳ ವಿಕೋಪಕ್ಕೆ ಹೋಗಿ, ಮೂವರು ಬಾಲಕರು ನಡುರಸ್ತೆಯಲ್ಲಿ ಆತನನ್ನು ಕೊಂದು ಹಾಕಿದ್ದಾರೆ. ಬಾಲಕರು ನಡುರಸ್ತೆಯಲ್ಲಿ ಆತನ್ನು ಎಳೆದಾಡಿಕೊಂಡು ಮರ್ಡರ್ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಿನಿಮಾ ರೀತಿಯಲ್ಲಿ ಕೊಲೆ ಮಾಡಲಾಗಿದೆ. ಚಾಕುವಿನಿಂದ 28 ಬಾರಿ ಇರಿದು ಮನೀಶ್‍ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಈ ಘಟನೆಯಲ್ಲಿ ಇನ್ನೊಂದು ಶಾಂಕಿಂಗ್ ಸಂಗತಿ ಎಂದರೆ, ಮನೀಶ್ ಕೊಲೆಯಾಗುವ ವೇಳೆ ರಸ್ತೆಯಲ್ಲಿ ನೂರಾರು ಜನರು ಓಡಾಡುತ್ತಿದ್ದರು. ಆದರೆ ಯಾರೂ ಕೂಡ ಮನೀಶ್ ಸಹಾಯಕ್ಕೆ ಬಂದಿಲ್ಲ. ವಾಹನ ಸವಾರರು, ದಾರಿಹೋಕರು ಎಲ್ಲರೂ ಮನೀಶ್ ಸಾಯುವುದನ್ನು ನೋಡುತ್ತಾ ಮುಂದೆ ಹೋಗಿದ್ದಾರೆ. ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಸ್ಥಳೀಯ ಪೊಲೀಸರು, ಮನೀಶ್‌ನನ್ನು ಆಸ್ಪತ್ರೆಗೆ ತೆಗೆದುಕೊಂಡು ಬರಲಾಗಿದೆ. ಆದರೆ ಆತ ಆಸ್ಪತ್ರೆಗೆ ತರುವ ಮುನ್ನವೇ ಮೃತಪಟ್ಟಿದ್ದ ಎಂದು ಹೇಳಿದ್ದಾರೆ.

  • ಗಣರಾಜ್ಯೋತ್ಸವ ಸಂಭ್ರಮದಲ್ಲಿ ಮೈನವಿರೇಳಿಸಿದ ದಿ ಟೋರ್ನಾಡಸ್ ಬೈಕ್ ಸ್ಟಂಟ್

    ಗಣರಾಜ್ಯೋತ್ಸವ ಸಂಭ್ರಮದಲ್ಲಿ ಮೈನವಿರೇಳಿಸಿದ ದಿ ಟೋರ್ನಾಡಸ್ ಬೈಕ್ ಸ್ಟಂಟ್

    ಬೆಂಗಳೂರು: 71ನೇ ಗಣರಾಜ್ಯೋತ್ಸವ ದಿನವನ್ನು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ರಾಜ್ಯಪಾಲ ವಿ.ಆರ್.ವಾಲಾ ಧ್ವಜಾರೋಹಣ ನೆರವೇರಿಸಿದರು. ವಾಯುಸೇನೆ ಹೆಲಿಕಾಪ್ಟರ್ ಮೂಲಕ ರಾಷ್ಟ್ರಧ್ವಜಕ್ಕೆ ಪುಷ್ಪಾರ್ಚನೆ ಮಾಡಲಾಯ್ತು. ಬಳಿಕ ರಾಜ್ಯಪಾಲರು ಪರೇಡ್ ವೀಕ್ಷಿಸಿ ಗೌರವ  ವಂದನೆ ಸ್ವೀಕಾರ ಮಾಡಿದರು.

    1750 ಜನರ 44 ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಮೊದಲ ಬಾರಿಗೆ ಬಿಬಿಎಂಪಿ ಪೌರ ಕಾರ್ಮಿಕರ ತಂಡ ಪಥ ಸಂಚಲನದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲ ವಿ.ಆರ್.ವಾಲಾ ರಾಜ್ಯ ಸರ್ಕಾರದ ಸಾಧನೆ ಬಿಚ್ಚಿಟ್ಟರು.

     

    ರಾಜ್ಯಪಾಲರ ಭಾಷಣದ ಬಳಿಕ 2 ಸಾವಿರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಹಮಾರ ಭಾರತ್ ಮಹಾನ್, ಕಲ್ಯಾಣ ಕ್ರಾಂತಿ, ಭಾರತ ಭಾಗ್ಯವಿಧಾತ ನೃತ್ಯ ರೂಪಕ ನೋಡುಗರ ಮನ ಸೆಳೆಯಿತು.

    ಸಾಂಸ್ಕೃತಿಕ ಕಾರ್ಯಕ್ರಮದ ಬಳಿಕ ಮೈನವಿರೇಳಿಸುವ ಆಕರ್ಷಕ ಬೈಕ್ ಸ್ಟಂಟ್ ನಡೆಯಿತು. ದಿ ಆರ್ಮಿ ಸರ್ವೀಸ್ ಕಾರ್ಪ್ಸ್ 20 ಜನರ ತಂಡದಿಂದ ದಿ ಟೋರ್ನಾಡಸ್ ಬೈಕ್ ಸ್ಟಂಟ್ ನಡೆಸಿದರು.

    ಎಎಸ್ಸಿ ಟೋರ್ನಾಡಸ್ ತಂಡ 1982 ರಲ್ಲಿ ರಚನೆ ಆಗಿದ್ದು, ವೇಗ ಮತ್ತು ಚಾಕಚಕ್ಯತೆ ನಿರ್ವಹಣೆ, ಸಾಹಸದ ಮೂಲಕ ಹೆಸರು ಮಾಡಿರುವ ತಂಡ ಇದು. ಕ್ಯಾಪ್ಟನ್ ಧೀರಜ್ ಸಿಂಗ್ ಈ ತಂಡವನ್ನ ನಿರ್ವಹಣೆ ಮಾಡುತ್ತಿದ್ದಾರೆ. 20 ವಿಶ್ವದಾಖಲೆ ನಿರ್ಮಿಸಿದ ತಂಡ ಟ್ಯೂಬ್ ಲೈಟ್ ಬ್ಲಾಸ್ಟ್ ಸ್ಟಂಟ್, ಬೆಂಕಿ ಜೊತೆಗಿನ ಸ್ಟಂಟ್, ಬೈಕ್ ಮೇಲೆ ವಿವಿಧ ಭಂಗಿಗಳಿಂದ ಕಸರತ್ತು ಮಾಡಿ ಜನರನ್ನು ಮೂಕ ವಿಸ್ಮಿತರನ್ನಾಗಿ ಮಾಡಿತು. ರಾಜ್ಯ ಪೊಲೀಸ್ ಆಂತರಿಕ ಭದ್ರತಾ ಗರುಡ ತಂಡದಿಂದ ಬಸ್ ಇಂಟರ್ ವೆನ್ಷನ್ (ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ) ಅಣಕು ಪ್ರದರ್ಶನ ನಡೀತು. ಬಳಿಕ ರಾಜ್ಯಪಾಲ ವಿ.ಆರ್.ವಾಲಾ ಸರ್ಕಾರಿ ಅಧಿಕಾರಿಗಳು, ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ ಮಾಡಿದರು.

  • ಆನೆಗುಂದಿ ಉತ್ಸವದಲ್ಲಿ ಗಮನ ಸೆಳೆದ ಗಾಳಿಪಟ ಹಾರಾಟ, ಬೈಕ್ ಸ್ಟಂಟ್

    ಆನೆಗುಂದಿ ಉತ್ಸವದಲ್ಲಿ ಗಮನ ಸೆಳೆದ ಗಾಳಿಪಟ ಹಾರಾಟ, ಬೈಕ್ ಸ್ಟಂಟ್

    – ಮೈ ನೆವಿರೇಳಿಸಿದ ಸವಾರರು

    ಕೊಪ್ಪಳ: ಆನೆಗೊಂದಿ ಉತ್ಸವಕ್ಕೂ ಮುನ್ನ ನಡೆಯುತ್ತಿರುವ ಗಾಳಿಪಟ ಹಾರಾಟ ಹಾಗೂ ಬೈಕ್ ಸ್ಟಂಟ್‍ಗಳು ನೆರೆದವರ ಮೈ ನೆವಿರೇಳುವಂತೆ ಮಾಡಿದವು.

    ಆನೆಗೊಂದಿ ಉತ್ಸವವನ್ನು ಜನಾಕರ್ಷಣೆಯನ್ನಾಗಿಸುವ ಉದ್ದೇಶಕ್ಕೆ ಜಿಲ್ಲಾಡಳಿತ ಹಮ್ಮಿಕೊಂಡಿರುವ ನಾನಾ ಸ್ಪರ್ಧೆ, ಪ್ರದರ್ಶನಗಳ ಪೈಕಿ ಗಂಗಾವತಿ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಗಾಳಿಪಟ ಹಾರಿಸುವ ಕ್ರೀಡೆ ಜನರ ಗಮನ ಸೆಳೆಯಿತು.

    ಶುಭ್ರ ಬಾನಂಗಳದಲ್ಲಿ ಹತ್ತಾರು ನಮೂನೆ, ನಾನಾ ವಿನ್ಯಾಸದ ಗಾಳಿಪಟಗಳು ಹಾರಾಡಿ ಚಿತ್ತಾರ ಮೂಡಿಸಿದವು. ಅಂತರಾಷ್ಟ್ರೀಯ ಗಾಳಿಪಟ ಪ್ರದರ್ಶಕರಾದ ಬೆಂಗಳೂರಿನ ಕೆ.ವಿ.ರಾವ್, ಮೈಸೂರಿನ ಸುಭಾಶ್ ಹಾಗೂ ದೊಡ್ಡಬಳ್ಳಾಪುರದ ಮುನಿಷ್ ಸುಮಾರು 30ಕ್ಕೂ ಹೆಚ್ಚು ಮಾದರಿಯ ಗಾಳಿಪಟ ಹಾರಿಸಿ ಜನರ ಗಮನ ಸೆಳೆದರು.

    ಇದರಲ್ಲಿ ಮುಖ್ಯವಾಗಿ ರೋರಿಂಗ್, ಟೇಲ್, ಸಿರೀಸ್, ಸ್ಟಂಟ್, ಡೆಲ್ಟಾ, ಸಿಡಿ, ಅಕ್ಟೋಪಸ್, ಡಾಲ್ಫಿನ್, ಎಲ್‍ಇಡಿ, ಪ್ಲೇನ್, ಈಗಲ್, ಸ್ಪೈಡರ್, ಟೈಗರ್ ಮಾದರಿಯ ಗಾಳಿಪಟಗಳು ಜನರ, ಮುಖ್ಯವಾಗಿ ಶಾಲಾ ಮಕ್ಕಳ ಗಮನ ಸೆಳೆದವು. ಶಾಸಕ ಪರಣ್ಣ ಮುನವಳ್ಳಿ, ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ, ಜಿಲ್ಲಾ ಪಂಚಾಯತಿ ಅಧ್ಯಕ್ಷ ವಿಶ್ವನಾಥ ರೆಡ್ಡಿ ಗಾಳಿ ಪಟ ಹಾರಿಸುವ ಮೂಲಕ ಪ್ರದರ್ಶನಕ್ಕೆ ಚಾಲನೆ ನೀಡಿದರು.

    ಭಟ್ಕಳ ಮೂಲದ ಸಾಹಸಿ ಬೈಕ್ ರೈಡರ್ ಗಳಾದ ಅಖಿಲ್, ಸೈಯದ್ ಗೌಸ್ ಹಾಗೂ ಸಚಿನ್ ನೀಡಿದ ಬೈಕ್ ಸ್ಟಂಟ್ ಗಳು ನೆರೆದವರಲ್ಲಿ ತುದಿಗಾಲ ಮೇಲೆ ನಿಲ್ಲುವಂತೆ ಮಾಡಿತು. ಈ ಯುವಕರು ಸುಮಾರು ಅರ್ಧ ಗಂಟೆಗಳ ಕಾಲ ಬೈಕ್ಸ್ ಸ್ಟಂಟ್ ಮಾಡಿದರು. ಫ್ರಿಸ್ಟೈಲ್ ರೈಡಿಂಗಿನಲ್ಲಿ ವೀಲ್ಹಿಂಗ್, ಸ್ಟಾಪಿ, ಫ್ಲ್ಯಾಗ್ ಮಾರ್ಚಿಂಗ್, ಡ್ರಪ್ಟಿಂಗ್, ಚೈನ್ ಶೋ, ಬರ್ನೊ, ಹ್ಯಾಂಡಲ್ ಕ್ರಿಷ್, ಸ್ಟಾಂಡಿಂಗ್, ಸ್ಲಿಪಿಂಗ್, 350 ಡಿಗ್ರಿ ಸ್ಟಂಟ್, ಫೈಯರ್ ರಿಂಗ್ ಹೀಗೆ ನಾನಾ ನಮೂನೆಯ ಸ್ಟಂಟ್ ಮಾಡುವ ಮೂಲಕ ಜನರ ಗಮನ ಸೆಳೆದರು.