Tag: ಬೈಡನ್

  • ಬೆಂಗಳೂರಿನಲ್ಲಿ ಯು.ಎಸ್ ಚಾರ್ಜೆ ಡಿ ಅಫೇರ್ಸ್ ಪೆಟ್ರೀಷಿಯಾ ಲಸಿನಾ

    ಬೆಂಗಳೂರಿನಲ್ಲಿ ಯು.ಎಸ್ ಚಾರ್ಜೆ ಡಿ ಅಫೇರ್ಸ್ ಪೆಟ್ರೀಷಿಯಾ ಲಸಿನಾ

    – ಬೆಂಗಳೂರಿನ 650ಕ್ಕೂ ಹೆಚ್ಚು ಅಮೇರಿಕ ಕಂಪನಿಗಳಿಂದ ಕೊಡುಗೆ

    ಬೆಂಗಳೂರು: ಯು.ಎಸ್. ಮಿಷನ್ ಇಂಡಿಯಾ ಚಾರ್ಜೆ ಡಿ ಅಫೇರ್ಸ್ ಪೆಟ್ರೀಷಿಯಾ ಲಸಿನಾ ಅವರು 2022 ರಂದು ಆಗಸ್ಟ್ 10 ರಂದು ಬೆಂಗಳೂರಿನ ವಾಣಿಜ್ಯೋದ್ಯಮ ನೇತಾರರು ಮತ್ತು ಉದ್ಯಮಿಗಳನ್ನು ಭೇಟಿ ಮಾಡಿ ಅಮೇರಿಕ- ಭಾರತದ ನಡುವಿನ ಸುಭದ್ರ ಆರ್ಥಿಕ ಮತ್ತು ವಾಣಿಜ್ಯ ಒಡನಾಟದ ಬಗ್ಗೆ ಸಂವಾದ ನಡೆಸಿದರು. ಚಾರ್ಜೆ ಲಸಿನಾ ಅವರು ಸೆಪ್ಟೆಂಬರ್ 2021ರಲ್ಲಿ ಅಧಿಕಾರವಹಿಸಿಕೊಂಡಿದ್ದು, ಅವರು ಬೆಂಗಳೂರಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಸಲ.

    ಚಾರ್ಜೆ ಅವರೊಂದಿಗೆ ಚೆನ್ನೈನ ಯು.ಎಸ್.ಕಾನ್ಸಲ್ ಜನರಲ್ ಜುಡಿತ್ ರೇವಿನ್ ಮತ್ತು ಯು.ಎಸ್.ನ್ಯಾಷನಲ್ ಸೈನ್ಸ್ ಫೌಂಡೇಷನ್ (ಎನ್‍ಎಸ್‍ಎಫ್)ನ ನಿರ್ದೇಶಕ ಡಾ. ಸೇತುರಾಮನ್ ಪಂಚನಾಥನ್ ಉಪಸ್ಥಿತರಿದ್ದರು. ವಾಣಿಜ್ಯ ಮತ್ತು ಉದ್ಯಮ ನಾಯಕರಿಗೆ ಆಯೋಜಿಸಿದ್ದ ಔತಣಕೂಟದಲ್ಲಿ ಚಾರ್ಜೆ ಲಸಿನಾ ಹತ್ತಾರು ಸಾವಿರ ಭಾರತದ ನಾಗರಿಕರನ್ನು ಔಪಚಾರಿಕ ವಲಯದಲ್ಲಿ ಉನ್ನತ ಗುಣಮಟ್ಟದ ಕೆಲಸದ ಪರಿಸರಗಳಲ್ಲಿ ಉದ್ಯೋಗ ನೀಡಿರುವ ಬೆಂಗಳೂರಿನಲ್ಲಿರುವ 650ಕ್ಕೂ ಹೆಚ್ಚು ಯು.ಎಸ್. ಕಂಪನಿಗಳ ಕೊಡುಗೆ ಸ್ಮರಿಸಿದ ಅವರು, ಈ ಮೂಲಕ ಆರ್ಥಿಕ ಸಂಬಂಧ ಮತ್ತು ಬಂಡವಾಳದ ಮೂಲಕವಷ್ಟೇ ಅಲ್ಲದೇ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ಉಪಕ್ರಮಗಳ ಮೂಲಕ ಮತ್ತು ಉದ್ಯೋಗಿಗಳ ಕೌಶಲ ಅಭಿವೃದ್ಧಿಗೆ ಬದ್ಧತೆಯ ಮೂಲಕ ನೀಡುತ್ತಿರುವ ಅಪಾರ ಕೊಡುಗೆಯನ್ನು ಶ್ಲಾಘಿಸಿದರು.

    ಅಧ್ಯಕ್ಷ ಬೈಡೆನ್ ಅವರು ಇತ್ತೀಚೆಗೆ ಹೇಳಿದಂತೆ ನಮ್ಮ ಜನರು, ಕೌಟುಂಬಿಕ ಬಾಂಧವ್ಯಗಳು, ಮಿತ್ರತ್ವ ಮತ್ತು ಹಂಚಿಕೊಂಡ ಮೌಲ್ಯಗಳ ಮೂಲಕ ಗಟ್ಟಿಗೊಂಡಿರುವ ಆಳವಾದ ಸಂಪರ್ಕವನ್ನು ಸಂಭ್ರಮಿಸುತ್ತಿದ್ದೇವೆ. ಯು.ಎಸ್. ಮತ್ತು ಭಾರತದ ಉದ್ಯಮಗಳ ನಡುವೆ ಈ ಸಮಾನ ಮೌಲ್ಯಗಳಿಂದಾಗಿ ಅಮೇರಿಕ ಮತ್ತು ಭಾರತದ ಕಂಪನಿಗಳು ಜತೆಯಾಗಿ ಸುಲಲಿತವಾಗಿ ಕೆಲಸ ಮಾಡುವ ಮೂಲಕ, ಆವಿಷ್ಕಾರ ಮತ್ತು ಸಮೃದ್ಧಿಯತ್ತ ಮುನ್ನಡೆಯುತ್ತಿವೆ.

    ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರಗಳಲ್ಲಿ ಸದೃಢ ಸಹಯೋಗವನ್ನು ವಿಸ್ತರಿಸುವ ಉದ್ದೇಶದಿಂದ ಬೆಂಗಳೂರಿಗೆ ಭೇಟಿ ನೀಡಿರುವ ಎನ್‍ಎಸ್‍ಎಫ್ ನಿರ್ದೇಶಕ ಡಾ.ಪಂಚನಾಥನ್, ಮೂಲತಃ ಚೆನ್ನೈ ನಿವಾಸಿ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನ ಪದವೀಧರರಾಗಿರುವ ಡಾ.ಪಂಚನಾಥನ್ ಯು.ಎಸ್. ಮತ್ತು ಭಾರತದ ವಿಶ್ವವಿದ್ಯಾಲಯಗಳ ಪ್ರಯೋಗಾಲಯಗಳಲ್ಲಿ 35 ಸಹಯೋಗದ ಸಂಶೋಧನಾ ಯೋಜನೆಗಳಿಗೆ ಎನ್‍ಎಸ್‍ಎಫ್ ಅನುದಾನ ಪ್ರಕಟಿಸಲು ಭಾರತಕ್ಕೆ ಬಂದಿದ್ದಾರೆ. ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗೆ ಆಗ್ರಹಿಸಿ ಹೋರಾಟ – ಜಯಮೃತ್ಯುಂಜಯ ಸ್ವಾಮೀಜಿ ಕರೆ

    ಡಾ.ಪಂಚನಾಥನ್ ಅವರ ಮಾರ್ಗದರ್ಶನದಲ್ಲಿ ವಿಸ್ತಾರ ಶ್ರೇಣಿಯ ವೈಜ್ಞಾನಿಕ ವಲಯಗಳಲ್ಲಿ ಆವಿಷ್ಕಾರದಲ್ಲಿ ಅಮೇರಿಕವನ್ನು ಮುಂಚೂಣಿಗೆ ತರುವ ಉದ್ದೇಶವನ್ನು ಎನ್‍ಎಸ್‍ಎಫ್ ಹೊಂದಿದೆ. ಎಲ್ಲ ಕ್ಷೇತ್ರಗಳಿಗೂ ಅನುದಾನ ನೀಡಿ ಬೆಂಬಲಿಸುವುದಲ್ಲದೆ, ತಂತ್ರಜ್ಞಾನ, ಆವಿಷ್ಕಾರ ಮತ್ತು ಸಹಭಾಗಿತ್ವದ ಮೂಲಕ ಸಂಶೋಧನೆಯನ್ನು ಅನ್ವಯಿಕತೆಗೆ ವಿಸ್ತರಿಸುತ್ತದೆ. ಡಾ.ಪಂಚನಾಥನ್ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯಲ್ಲಿ ಡಾ.ಎಂ.ಎ.ಗೋವಿಂದ್ ರಾವು ಫೌಂಡರ್ ಸ್ಮಾರಕ ಉಪನ್ಯಾಸ ನೀಡಿದರು.

    ಚಾರ್ಜೆ ಲಸಿನಾ ಅವರು ಇದೇ ಸಂದರ್ಭದಲ್ಲಿ ಹೊಸ ಕಾನ್ಸುಲರ್ ಫಾರ್ ಕಮರ್ಷಿಯಲ್ ಅಫೇರ್ಸ್ ಕ್ಯಾರೀ ಅರುಣ್ ಅವರನ್ನು ಪರಿಚಯಿಸಿದರು. ಚೆನ್ನೈನಲ್ಲಿರುವ ಕ್ಯಾರಿ ಅರುಣ್ ಅವರು ದಕ್ಷಿಣ ಭಾರತದ ಯು.ಎಸ್. ಕಮರ್ಷಿಯಲ್ ಸರ್ವೀಸ್‍ನ ಉಸ್ತುವಾರಿ ವಹಿಸಿದ್ದು, ಅಮೇರಿಕ ಮತ್ತು ಭಾರತದ ವ್ಯಾಪಾರ ಮತ್ತು ವಾಣಿಜ್ಯ ಅವಕಾಶಗಳನ್ನು ಬೆಂಬಲಿಸಲಿದ್ದಾರೆ. ಯು.ಎಸ್. ಕಮರ್ಷಿಯಲ್ಸರ್ವೀಸ್ ಚೆನ್ನೈ ಮತ್ತು ಬೆಂಗಳೂರಿನಲ್ಲಿ ಕಚೇರಿಗಳನ್ನು ಹೊಂದಿದೆ.

    ಫೋಟೋ (ಬಲದಿಂದ ಎಡಕ್ಕೆ): ಬೆಂಗಳೂರಿನಲ್ಲಿ ಬುಧವಾರ ಆಗಸ್ಟ್ 10, 2022 ರಂದು ನಡೆದ ವಾಣಿಜ್ಯ ಮತ್ತು ಉದ್ಯಮ ವಲಯದ ಔತಣ ಕೂಟದಲ್ಲಿ ಯು.ಎಸ್. ಚಾರ್ಜೆ ಡಿ’ ಅಫೇರ್ಸ್ ಪೆಟ್ರೀಷಿಯಾ ಎ.ಲಸಿನಾ, ಯು.ಎಸ್.ನ್ಯಾಷನಲ್ ಸೈನ್ಸ್ ಫೌಂಡೇಷನ್ ನಿರ್ದೇಶಕ ಡಾ.ಸೇತುರಾಮನ್ ಪಂಚನಾಥನ್, ಯು.ಎಸ್.ಕಾನ್ಸಲ್ ಜನರಲ್ ಚೆನ್ನೈ ಜುಡಿತ್ ರೇವಿನ್ ಮತ್ತು ಉನ್ನತ ಶಿಕ್ಷಣ, ಐಟಿ& ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ.ಸಿ.ಎನ್. ಅಶ್ವತ್ಧ ನಾರಾಯಣ್.

    Live Tv
    [brid partner=56869869 player=32851 video=960834 autoplay=true]

  • ಭದ್ರತಾ ಮಂಡಳಿ ಜೊತೆ ಎನ್‍ಎಸ್‍ಜಿಯಲ್ಲೂ ಭಾರತ ಇರಬೇಕು: ಬೈಡನ್

    ಭದ್ರತಾ ಮಂಡಳಿ ಜೊತೆ ಎನ್‍ಎಸ್‍ಜಿಯಲ್ಲೂ ಭಾರತ ಇರಬೇಕು: ಬೈಡನ್

    ವಾಷಿಂಗ್ಟನ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ(ಯುಎನ್‍ಎಸ್‍ಸಿ) ಭಾರತಕ್ಕೆ ಖಾಯಂ ಸದಸ್ಯತ್ವ ಕಲ್ಪಿಸಬೇಕು ಎಂಬ ಭಾರತದ ಬೇಡಿಕೆಗೆ ಈಗ ಮತ್ತಷ್ಟು ಬಲ ಬಂದಿದ್ದು ಅಮೆರಿಕ ಮತ್ತೆ ಬೆಂಬಲ ಘೋಷಿಸಿದೆ.

    ಆಗಸ್ಟ್‌ನಲ್ಲಿ ಯುಎನ್‍ಎಸ್‍ಸಿ ಅಧ್ಯಕ್ಷತೆ ವಹಿಸಿದ್ದ ಭಾರತ, ಅಫ್ಘಾನ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸಮರ್ಥವಾಗಿ ಕೆಲಸ ಮಾಡಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡಬೇಕು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

    ನರೇಂದ್ರ ಮೋದಿಯವರೊಂದಿಗಿನ ಮೊದಲ ವೈಯಕ್ತಿಕ ದ್ವಿಪಕ್ಷೀಯ ಸಭೆಯ ಬಳಿಕ ಶ್ವೇತ ಭವನ ಹೇಳಿಕೆ ಬಿಡುಗಡೆ ಮಾಡಿದೆ. ಭಾರತದ ಬಲವಾದ ನಾಯಕತ್ವವನ್ನು ಶ್ಲಾಘಿಸಿದ ಬೈಡನ್ ಪರಮಾಣು ಪೂರೈಕೆದಾರರ ಗುಂಪಿಗೂ(ಎನ್‍ಎಸ್‍ಜಿ) ಸೇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.

    ಭದ್ರತಾ ಮಂಡಳಿಯ ತುರ್ತು ದೀರ್ಘಾವಧಿಯ ಬಾಕಿ ಇರುವ ಸುಧಾರಣೆಗೆ ಭಾರತ ಮೊದಲಿನಿಂದಲೂ ಆಗ್ರಹಿಸುತ್ತಿದೆ. ಪ್ರಸ್ತುತ ಈಗ ಅಮೆರಿಕ, ಚೀನಾ, ರಷ್ಯಾ, ಇಂಗ್ಲೆಂಡ್, ಫ್ರಾನ್ಸ್ ಸದಸ್ಯ ರಾಷ್ಟ್ರಗಳಾಗಿದ್ದು ವಿಶೇಷ ವಿಟೋ ಅಧಿಕಾರವನ್ನು ಹೊಂದಿದೆ. ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ 

    ಇಂದು ಜಗತ್ತು ಬದಲಾಗುತ್ತಿರುವ ಹಿನ್ನೆಲೆಯಲ್ಲಿ 5 ರಾಷ್ಟ್ರಗಳ ಜೊತೆ ಬಲಾಢ್ಯ ರಾಷ್ಟ್ರಗಳಿಗೂ ಸದಸ್ಯ ಸ್ಥಾನ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ. ಭಾರತ ಅಲ್ಲದೇ ಜಪಾನ್, ಬ್ರೆಜೆಲ್, ಜರ್ಮನಿಯೂ ತಮಗೆ ಸ್ಥಾನ ನೀಡಬೇಕೆಂದು ಬೇಡಿಕೆ ಇಟ್ಟಿದೆ.

  • ಭಾರತಕ್ಕೆ ಲಸಿಕೆ ಕಚ್ಚಾ ವಸ್ತುಗಳ ರಫ್ತಿಗೆ ನಿಷೇಧ – ನಮಗೆ ಅಮೆರಿಕವೇ ಫಸ್ಟ್, ಬೈಡನ್ ಸರ್ಕಾರದ ಸಮರ್ಥನೆ

    ಭಾರತಕ್ಕೆ ಲಸಿಕೆ ಕಚ್ಚಾ ವಸ್ತುಗಳ ರಫ್ತಿಗೆ ನಿಷೇಧ – ನಮಗೆ ಅಮೆರಿಕವೇ ಫಸ್ಟ್, ಬೈಡನ್ ಸರ್ಕಾರದ ಸಮರ್ಥನೆ

    ನವದೆಹಲಿ:“ಅಮೆರಿಕನ್ನರ ಆರೋಗ್ಯ ರಕ್ಷಣೆಯೇ ಬೈಡೆನ್ ಸರಕಾರದ ಮೊದಲ ಆದ್ಯತೆ” ಎಂದು ಹೇಳುವ ಮೂಲಕ ಕೊರೊನಾ ಲಸಿಕೆ ನಿರ್ಮಾಣಕ್ಕೆ ಬೇಕಾದ ಕಚ್ಚಾ ವಸ್ತುಗಳ ರಫ್ತಿಗೆ ತಾನು ವಿಧಿಸಿರುವ ನಿಷೇಧ ಕ್ರಮವನ್ನು ಅಮೆರಿಕ ಬಲವಾಗಿ ಸಮರ್ಥಿಸಿಕೊಂಡಿದೆ.

    ಲಸಿಕೆಗೆ ಬೇಕಾದ ಅಗತ್ಯ ಕಚ್ಚಾ ವಸ್ತುಗಳ ರಫ್ತಿಗೆ ಅಮೆರಿಕ ಸರ್ಕಾರ ನಿಷೇಧ ಹೇರಿದೆ. ಇದರಿಂದಾಗಿ ಲಸಿಕೆ ಉತ್ಪಾದನೆಗೆ ಸಮಸ್ಯೆಯಾಗಿದೆ. ಈ ಕೂಡಲೇ ಭಾರತ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಸೀರಂ ಇನ್‍ಸ್ಟಿಟ್ಯೂಟ್ ಮುಖ್ಯಸ್ಥ ಆಧಾರ್ ಪೂನಾವಾಲಾ ಮನವಿ ಮಾಡಿಕೊಂಡಿದ್ದರು. ಈ ಮನವಿಗೆ ಸ್ಪಂದಿಸಿದ ಭಾರತ ಅಮೆರಿಕ ಸರ್ಕಾರಕ್ಕೆ ರಫ್ತು ಮೇಲಿನ ನಿಷೇಧವನ್ನು ತೆರವುಗೊಳಿಸಲು ಮನವಿ ಮಾಡಿತ್ತು.

    ಭಾರತದ ಮನವಿಗೆ ಅಮೆರಿಕದಿಂದ ಸರಿಯಾದ ಪ್ರತಿಕ್ರಿಯೆ ಬಂದಿಲ್ಲ. ವಿದೇಶಾಂಗ ಸಚಿವ ಜೈಶಂಕರ್ ಅವರು ಮಾತುಕತೆ ನಡೆಸಿದರೂ ಯಾವುದೇ ಫಲ ಸಿಕ್ಕಿಲ್ಲ.

    ಈ ಬಗ್ಗೆ ಮಾಧ್ಯಮಗಳು ಅಮೆರಿಕ ಸರ್ಕಾರದ ವಕ್ತಾರರ ಜೊತೆ ಪ್ರಶ್ನೆ ಕೇಳಿದ್ದಕ್ಕೆ, ಜಗತ್ತಿನ ಯಾವುದೇ ದೇಶಕ್ಕಿಂತ ಅತಿ ಹೆಚ್ಚು ಕೋವಿಡ್ 19 ಸೋಂಕಿಗೆ ಅಮೆರಿಕ ಜನತೆ ತುತ್ತಾಗಿದ್ದು, ಇಲ್ಲಿಯವರೆಗೆ 5.5 ಲಕ್ಷ ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಬೈಡನ್ ಸರ್ಕಾರ ಅಮೆರಿಕ ಪ್ರಜೆಗಳ ರಕ್ಷಣೆಗೆ ಬದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕೋವಿಡ್-19 ಲಸಿಕೆ ಉತ್ಪಾದನೆಗೆ ಬೇಕಾಗುವ ಕಚ್ಚಾ ವಸ್ತುಗಳನ್ನು ಅಮೆರಿಕದ ಕಂಪನಿಗಳು ರಫ್ತು ಮಾಡದಂತೆ ಕಳೆದ ಫೆಬ್ರವರಿಯಲ್ಲಿ ಅಧ್ಯಕ್ಷ ಬೈಡೆನ್ ನಿಷೇಧ ಹೇರಿದ್ದಾರೆ. ಇದರಿಂದಾಗಿ ಭಾರತದಲ್ಲಿ ಕೋವಿಶೀಲ್ಡ್ ಉತ್ಪಾದನೆ ಮಾಡುವ ಸೀರಂ ಮತ್ತು ಕೊವ್ಯಾಕ್ಸಿನ್ ಉತ್ಪಾದನೆ ಮಾಡುವ ಭಾರತ್ ಬಯೋಟೆಕ್ ಕಂಪನಿಗೆ ಸಮಸ್ಯೆಯಾಗಿದೆ.

    ವಿದೇಶಗಳ ಲಾಬಿ ಏನು?
    ವಿಶ್ವದ 60 ಪ್ರತಿಶತ ಲಸಿಕೆಗಳು ಭಾರತದಲ್ಲಿ ತಯಾರಾಗಿ ರಫ್ತು ಆಗುತ್ತಿದ್ದವು. ಭಾರತದ ಕೊರೊನಾ ಲಸಿಕೆಗೆಳು ವಿಶ್ವದಲ್ಲೇ ಕಡಿಮೆ ಬೆಲೆಯಲ್ಲಿ ತಯಾರಾಗಿದ್ದ ಕಾರಣ ಬೇಡಿಕೆಯೂ ಹೆಚ್ಚಿತ್ತು. ಕೊರೊನಾ ಲಸಿಕೆಯನ್ನು ವಿಶ್ವ ವಾಣಿಜ್ಯ ಒಪ್ಪಂದದಿಂದ ಹೊರಗಿಟ್ಟು ಕಡಿಮೆ ಬೆಲೆಯಲ್ಲಿ ಜನರಿಗೆ ನೀಡಬೇಕು ಎಂದು ಭಾರತ ವಾದಿಸಿತ್ತು. ಆದರೆ ಅಮೆರಿಕ ಮತ್ತು ಯುರೋಪ್ ದೇಶಗಳು ಕಡಿಮೆ ಬೆಲೆಯಲ್ಲಿ ಲಸಿಕೆ ನೀಡಿದರೆ ಸಂಶೋಧನೆ, ಉತ್ಪಾದನೆಗೆ ಬಂಡವಾಳ ಹೂಡುವ ಕಂಪನಿಗಳಿಗೆ ತೊಂದರೆ ಆಗುತ್ತದೆ ಎಂದು ಹೇಳಿ ವಿರೋಧ ವ್ಯಕ್ತಪಡಿಸಿದ್ದವು.

    ಭಾರತದಿಂದ ಸೀರಂ ಕಂಪನಿ ತಯಾರಿಸಿದ ಲಸಿಕೆಗಳು 80ಕ್ಕೂ ಅಧಿಕ ಬಡ ರಾಷ್ಟ್ರಗಳಿಗೆ ರಫ್ತು ಆಗತೊಡಗಿದಾಗ ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೈಡನ್ ಲಸಿಕೆ ತಯಾರಿಸಲು ಬೇಕಾದ ಕಚ್ಚಾ ವಸ್ತುವಿನ ಅಮದಿನ ಮೇಲೆ ನಿರ್ಬಂಧ  ಹೇರಿದರು. ಈ ನಡುವೆ ಭಾರತದಲ್ಲೂ ಕೊರೊನಾ ಎರಡನೇ ಅಲೆ ಅಬ್ಬರ ದಿನೇ ದಿನೇ ಜಾಸ್ತಿಯಾಗುತ್ತಿದೆ. ಪರಿಣಾಮ ಭಾರತದಲ್ಲಿ ಅಮೆರಿಕ ಸೇರಿದಂತೆ ವಿದೇಶಿ ಕಂಪನಿಗಳ ಲಸಿಕೆಗಳಿಗೆ ಅನುಮತಿ ನೀಡುವ ಅನಿವಾರ್ಯತೆ ಸೃಷ್ಟಿಯಾಗಿದೆ. ಭಾರತದ ಮೇಲೆ ಒತ್ತಡ ಹಾಕಿಸಿ ಲಸಿಕೆಗೆ ಅನುಮತಿ ನೀಡುವಲ್ಲಿ ವಿದೇಶಿ ಕಂಪನಿಗಳ ಲಾಬಿ ಕೊನೆಗೂ ಯಶಸ್ವಿಯಾಗಿದೆ ಎಂಬ ಅಭಿಪ್ರಾಯ ಈಗ ವ್ಯಕ್ತವಾಗುತ್ತಿದೆ.