Tag: ಬೈಯಪ್ಪನ ಹಳ್ಳಿ

  • ಬೆಂಗಳೂರಿನಲ್ಲಿ ಭಾರತದ ಮೊದಲ ಎಸಿ ರೈಲ್ವೆ ನಿಲ್ದಾಣ

    ಬೆಂಗಳೂರಿನಲ್ಲಿ ಭಾರತದ ಮೊದಲ ಎಸಿ ರೈಲ್ವೆ ನಿಲ್ದಾಣ

    ಬೆಂಗಳೂರು: ರೈಲ್ವೆ ಸಚಿವ ಪಿಯೂಷ್ ಗೋಯಲ್ ನಗರದಲ್ಲಿ ನಿರ್ಮಾಣವಾಗುತ್ತಿರುವ 314 ಕೋಟಿ ರೂ ವೆಚ್ಚದ ರೈಲ್ವೆ ನಿಲ್ದಾಣವು ದೇಶದ ಮೊದಲ ಹವಾನಿಯಂತ್ರಿತ(ಏಸಿ)  ರೈಲ್ವೇ ನಿಲ್ದಾಣವಾಗಲಿದೆ  ಎಂದು ತಿಳಿಸಿದ್ದಾರೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಭಾರತದ ಮೊಟ್ಟ ಮೊದಲ ಕೇಂದ್ರೀಕೃತ ಹವಾನಿಯಂತ್ರಿತ ರೈಲ್ವೆ ನಿಲ್ದಾಣಕ್ಕೆ ಆದಷ್ಟು ಬೇಗ ಚಾಲನೆ ನೀಡಲಾಗುತ್ತದೆ ಎಂದು ಕ್ಯಾಪ್ಷನ್ ಹಾಕಿದ್ದಾರೆ.

    ಬೈಯಪ್ಪನಹಳ್ಳಿಯ ಹೊಸ ಟರ್ಮಿನಲ್‍ಗೆ 2015-16ರಂದು ಅನುಮತಿ ನೀಡಲಾಗಿದ್ದು, ಈ ರೈಲ್ವೆ ನಿಲ್ದಾಣ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮಾದರಿಯಲ್ಲಿಯೇ ನಿರ್ಮಿಸಲಾಗಿದೆ. ಅಲ್ಲದೆ ಪ್ಲಾಟ್‍ಫಾರಂಗಳು, ಶೌಚಾಲಯ, ವಿಶ್ರಾಂತಿ ಕೋಣೆ, ಪಾರ್ಕಿಂಗ್, ಬಸ್‍ಬೇ ಹೀಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದ್ದು, ವಿಮಾನ ನಿಲ್ದಾಣದ ಮಾದರಿಯಲ್ಲಿಯೇ ರೈಲ್ವೆ ನಿಲ್ದಾಣವನ್ನು ನಿರ್ಮಿಸಲಾಗಿದೆ. ಇದನ್ನೂ ಓದಿ: ಒಂದು ಹನಿ ನೀರು ಹೊರ ಬೀಳಲ್ಲ – ಮೈಸೂರು, ಬೆಂಗಳೂರು ಹಳಿ ನಿರ್ವಹಣೆಗೆ ಗೋಯಲ್‌ ಮೆಚ್ಚುಗೆ

    ಮೆಜಿಸ್ಟಿಕ್‍ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಯಶವಂತಪುರ ರೈಲು ನಿಲ್ದಾಣದ ಬಳಿಕ ಬೈಯಪ್ಪನಹಳ್ಳಿಯ ಟರ್ಮಿನಲ್ ನಗರದ ಮೂರನೇ ರೈಲ್ವೆ ನಿಲ್ದಾಣವಾಗಿದೆ. ಜೊತೆಗೆ 4200 ಚದರ ಮೀಟರ್ ವ್ಯಾಪ್ತಿ ಇರುವ ಈ ನಿಲ್ದಾಣದಲ್ಲಿ ಏಳು ಪ್ಲಾಟ್‍ಫಾರಂ, ಏಳು ಸ್ಲಾಬಿಂಗ್ ಲೈನ್, ಮೂರು ಪಿನ್‍ಲೈನ್‍ಗಳಿವೆ ಹಾಗೂ ಎಲ್ಲಾ ಕಡೆ ಎಲ್‍ಇಡಿ ಲೈಟ್‍ಗಳನ್ನು ಅಳವಡಿಸಲಾಗಿದೆ.

    ವಿಐಪಿ ಲಾಂಚ್, ಫುಡ್‍ಕೋರ್ಟ್, ಎಸ್ಕಲೇಟರ್, ಲಿಫ್ಟ್, ಫ್ಲಾಟ್‍ಫಾರಂ ಹಾಗೂ ಸಬ್ ವೇಗಳನ್ನು ನಿರ್ಮಿಸಲಾಗಿದ್ದು, 50 ರೈಲು ಸಂಚರಿಸುವ ವ್ಯವಸ್ಥೆ, ಸಾವಿರಕ್ಕೂ ಅಧಿಕ ದ್ವಿಚಕ್ರ ವಾಹನ, 250ಕ್ಕೂ ಹೆಚ್ಚು ಕಾರುಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಕೊಡಲಾಗಿದೆ.

  • ಗಂಡನ ಕಾಮದಾಟ ಬೇಸತ್ತು ಸುಪಾರಿ ಕೊಟ್ಟು ಗಂಡನನ್ನೇ ಕೊಲ್ಲಿಸಿದ್ಳು!

    ಗಂಡನ ಕಾಮದಾಟ ಬೇಸತ್ತು ಸುಪಾರಿ ಕೊಟ್ಟು ಗಂಡನನ್ನೇ ಕೊಲ್ಲಿಸಿದ್ಳು!

    ಬೆಂಗಳೂರು: ಬಡ್ಡಿಗೆ ಹಣ ಕೊಡುತ್ತಿದ್ದ ಗಂಡ ವಾಪಸ್ಸು ಹಣಕೊಡದೇ ಇದ್ರೆ ಮಹಿಳೆಯರನ್ನು ಬೆಡ್‍ರೂಂಗೆ ಕರಿಯುತ್ತಿದ್ದ ಗಂಡನ ಲಂಪಟತನವನ್ನು ನೋಡಿದ ಪತ್ನಿ ಸುಪಾರಿ ಕೊಟ್ಟು ಕೊಲ್ಲಿಸಿದ್ದಾಳೆ.

    ಕುಮಾರ್ ಕೊಲೆಯಾದ ವ್ಯಕ್ತಿ. ಡೋರಿನ್ ಗಂಡನನ್ನು ಕೊಲೆ ಮಾಡಿಸಿದ ಪತ್ನಿ. ಡೋರಿನ್ ಪತಿಯ ಬಳಿ ಸಾಲ ಪಡೆದಿದ್ದ ಬೈಯಪ್ಪನಹಳ್ಳಿ ನಿವಾಸಿ ಶ್ರೀಧರ್ ಎಂಬಾತನಿಗೆ ಪತಿಯನ್ನು ಕೊಲ್ಲಲು 30 ಲಕ್ಷ ರೂ.ಗೆ ಸುಪಾರಿ ಕೊಟ್ಟಿದ್ದಳು.

    ಏನಿದು ಪ್ರಕರಣ?
    ಏಪ್ರಿಲ್ 6 ರಂದು ಸಂಜೆ ಪುಲಕೇಶಿ ನಗರದ ಬಳಿಯ ಕಲ್ಪಳ್ಳಿ ಸ್ಮಶಾನದ ಬಳಿಯಲ್ಲಿ ಕುಮಾರ್‍ನನ್ನು ಕೊಲೆ ಮಾಡಲಾಗಿತ್ತು. ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದ ಕುಮಾರ್‍ನನ್ನು ಹಳೆಯ ದ್ವೇಷದಲ್ಲಿ ಯಾರೋ ಕೊಲೆ ಮಾಡಿರಬಹುದು ಎಂದು ಪೊಲೀಸರು ಮೊದಲಿಗೆ ಅನುಮಾನ ವ್ಯಕ್ತಪಡಿಸಿದ್ದರು.

    ಪೊಲೀಸರು ತನಿಖೆ ಆರಂಭಿಸಿದಾಗ ಅವರಿಗೆ ದೊಡ್ಡ ಶಾಕ್ ಕಾದಿತ್ತು. ಕುಮಾರ್ ಹೆಂಗಸರಿಗೆ ಸಾಲ ಕೊಡುತ್ತಿದ್ದ. ಸಾಲ ಏನಾದ್ರೂ ಹಿಂದಿರುಗಿಸಿ ಕೊಡದೇ ಇದ್ರೆ ಅವರನ್ನು ಬೆದರಿಸಿ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ. ಕೊನೆ ಕೊನೆಗೆ ಹೆಂಗಸರನ್ನು ಮನೆಗೆ ಕರೆದುಕೊಂಡು ಬರುತ್ತಿದ್ದ. ಇದ್ರಿಂದ ಬೇಸತ್ತ ಹೆಂಡತಿ ಗಂಡನಿಂದ ಮುಕ್ತಿ ಹೊಂದಬೇಕು ಎಂದು ತೀರ್ಮಾನಿಸಿ ಗಂಡನ ಬಳಿ ಸುಮಾರು 5 ಲಕ್ಷ ರೂ. ಸಾಲ ಪಡೆದು ಬಡ್ಡಿ ಕಟ್ಟುತ್ತಿದ್ದ ಶ್ರೀಧರ್ ಜೊತೆ ಸೇರಿ ಪ್ಲಾನ್ ಹಾಕಿದ್ದಳು.

    ಡೋರಿನ್‍ನೊಂದಿಗೆ ಮಂಚವನ್ನು ಹಂಚಿಕೊಂಡಿದ್ದ ಶ್ರೀಧರ್ ತನ್ನ ಗ್ಯಾಂಗ್ ಜೊತೆಗೂಡಿ ಕುಮಾರ್‍ನನ್ನು ಮುಗಿಸೋಕೆ ಹುಡ್ಗೀರ ಜೊತೆಯಲ್ಲಿ ಫೋನ್ ಮಾಡಿ ಕರೆಸಿ ಕೊಲೆ ಮಾಡಿದ್ದನು.

    ಸುಳಿವೇ ಇಲ್ಲದ ಪ್ರಕರಣದ ಹಿಂದೆ ಬಿದ್ದಿದ್ದ ಬೈಯಪ್ಪನಹಳ್ಳಿ ಪೊಲೀಸ್ರು ಕುಮಾರ್‍ನ ಹೆಂಡತಿ ಡೋರಿನ್, ಶ್ರೀಧರ್ ಮತ್ತು ಗ್ಯಾಂಗ್‍ನ ಸದಸ್ಯರನ್ನು ಈಗ ಸೆರೆಮನೆಗೆ ಕಳುಹಿಸುವಲ್ಲಿ ಯಶ್ವಸಿಯಾಗಿದ್ದಾರೆ.