Tag: ಬೈಯ್ಯಪ್ಪನಹಳ್ಳಿ

  • ವಿದ್ಯುತ್ ಕಂಬ ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು

    ವಿದ್ಯುತ್ ಕಂಬ ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು

    ಬೆಂಗಳೂರು: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿಯಾಗಿ ವಿದ್ಯುತ್ ಕಂಬ ತುಂಡಾಗಿ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಯ್ಯಪ್ಪನಹಳ್ಳಿ (Baiyyappanahalli) ಬಳಿಯ ಸದ್ದುಗುಂಟೆಪಾಳ್ಯದಲ್ಲಿ ನಡೆದಿದೆ.

    ಸದ್ದುಗುಂಟೆಪಾಳ್ಯ (Sudduguntepalya) ನಿವಾಸಿಗಳಾದ ಸುಮತಿ(35) ಮತ್ತು ಸೋನಿ ಕುಮಾರಿ (35) ಮೃತ ದುರ್ದೈವಿಗಳು.

    ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಸದ್ದುಗುಂಟೆಪಾಳ್ಯ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: Aurangzeb Tomb Row| ಧರ್ಮಗ್ರಂಥ ಸುಟ್ಟ ವದಂತಿಯಿಂದ ನಾಗ್ಪುರದಲ್ಲಿ ಹಿಂಸಾಚಾರ, ಕರ್ಫ್ಯೂ ಜಾರಿ

    ಈ ದುರಂತಕ್ಕೆ ಜೆಸಿಬಿ ಡ್ರೈವರ್‌ನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ರಸ್ತೆ ಕಾಮಗಾರಿಯ ವೇಳೆ ಜೆಸಿಬಿ ಡ್ರೈವರ್‌ ಕಿವಿಗೆ ಹೆಡ್‌ಫೋನ್ ಹಾಕಿಕೊಂಡು ಕೆಲಸ ಮಾಡುತ್ತಿದ್ದ. ಈ ವೇಳೆ ಲೈಟ್ ಕಂಬದಿಂದ ಮನೆಗೆ ಬೇರೆ ಕಡೆಗೆ ಕನೆಕ್ಟ್ ಮಾಡಿದ್ದ ವೈಯರ್‌ಗೆ ಜೆಸಿಬಿಯ ಮುಂಭಾಗ ಟಚ್ ಆಗಿದೆ. ಜನ ಜೋರಾಗಿ ಕೂಗಿಕೊಂಡರೂ ಡ್ರೈವರ್‌ ಕೇಳಿಸಿಕೊಳ್ಳದೇ ವೈಯರ್ ಎಳೆದಿರುವುದೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಉಗ್ರರ ದಾಳಿ ಭೀತಿ – ಪಾಕ್‌ ಸೇನೆ ತೊರೆಯುತ್ತಿದ್ದಾರೆ ಯೋಧರು!

    ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದರು. ಜೆಸಿಬಿಯನ್ನು ಜಪ್ತಿ ಮಾಡಿ, ಜೆಸಿಬಿ ಚಾಲಕನ್ನು ವಶಕ್ಕೆ ಪಡೆದಿದ್ದಾರೆ. ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಶೀಘ್ರವೇ ಬೈಯ್ಯಪ್ಪನಹಳ್ಳಿ – ಕೆ.ಆರ್. ಪುರಂ ಮೆಟ್ರೋ ಟೆಸ್ಟ್ ಟ್ರಯಲ್

    ಶೀಘ್ರವೇ ಬೈಯ್ಯಪ್ಪನಹಳ್ಳಿ – ಕೆ.ಆರ್. ಪುರಂ ಮೆಟ್ರೋ ಟೆಸ್ಟ್ ಟ್ರಯಲ್

    ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್ ಕೊಡುವುದಕ್ಕೆ ಬಿಎಂಆರ್‌ಸಿಎಲ್ ಮುಂದಾಗಿದೆ.

    ಸೆಪ್ಟೆಂಬರ್‌ನಿಂದ ಪರ್ಪಲ್ ಲೈನ್ ಎಕ್ಸ್‌ಟೆನ್ಷನ್ ಟ್ರಯಲ್ ರನ್ ಶುರುವಾಗುತ್ತಿದೆ. ಇದರಿಂದ ಟ್ರಾಫಿಕ್ ದಟ್ಟಣೆಯ ಬೈಯಪ್ಪನಹಳ್ಳಿಯಿಂದ, ಕೆ.ಆರ್ ಪುರಂವರೆಗಿನ ಟೆಸ್ಟ್ ಟ್ರಯಲ್ ಮಾಡಲಿದೆ. ವೈಟ್‌ಫೀಲ್ಡ್‌ವರೆಗಿನ ವಿಸ್ತರಣೆಯನ್ನು ಇದೇ ಡಿಸೆಂಬರ್ ಹೊತ್ತಿಗೆ ಮುಗಿಸುವ ಯೋಜನೆಯಲ್ಲಿ ಬಿಎಂಆರ್‌ಸಿಎಲ್ ಇದ್ದು, 2ನೇ ಹಂತದಲ್ಲಿ ಮುಖ್ಯವಾಗಿ ಎಲೆಕ್ಟ್ರಾನಿಕ್ ಸಿಟಿ ಮಾರ್ಗ, ಸಿಲ್ಕ್ ಬೋರ್ಡ್ ಟು ಕೆಆರ್ ಪುರಂ ಮಾರ್ಗ, ಹಾಗೇ ವೈಟ್ ಫೀಲ್ಡ್ ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದೆ.  ಇದನ್ನೂ ಓದಿ: ಕಾಂಗೋದಲ್ಲಿ ಯುಎನ್ ವಿರೋಧಿ ಪ್ರತಿಭಟನೆ: 3 ಶಾಂತಿಪಾಲನ ಸೈನಿಕರು, 12 ನಾಗರಿಕರು ಮೃತ

    ಇಲ್ಲೆಲ್ಲಾ ಐಟಿ, ಬಿಟಿ ಕಂಪನಿಗಳು ಹೆಚ್ಚಾಗಿದ್ದು, ಪೀಕ್ ಅವರ್ಸ್‍ನಲ್ಲಿ ಸಾಕಷ್ಟು ರಷ್ ಆಗುವ ಬಗ್ಗೆ ತಜ್ಞರು ಎಚ್ಚರಿಸಿದ್ದಾರೆ. ಅಲ್ಲದೇ ಮೆಟ್ರೋ ಬೋಗಿಗಳನ್ನು 6ರ ಬದಲಾಗಿ 8ಕ್ಕೆ ಏರಿಸಲು ಸಲಹೆ ನೀಡಲಾಗಿತ್ತು. ಆದರೆ ಬಿಎಂಆರ್‌ಸಿಎಲ್ 8 ಬೋಗಿ ಮಾಡಿದರೆ ಸ್ಟೇಷನ್ ಸ್ಟ್ರಕ್ಚರ್ ಬದಲಾಯಿಸಬೇಕು. ದೊಡ್ಡ ಸ್ಟೇಷನ್ ನಿರ್ಮಾಣಕ್ಕೆ ಭೂಸ್ವಾಧೀನ ಸೇರಿ ಹೆಚ್ಚಿನ ಹಣ ವೆಚ್ಚವಾಗಲಿದೆ. ಹೀಗಾಗಿ ಬೋಗಿ ಜಾಸ್ತಿ ಮಾಡುವುದಕ್ಕಿಂತ ರೈಲಿನ ಸಂಖ್ಯೆ ಹೆಚ್ಚಿಸುವುದು ಸೂಕ್ತ ಎಂದು ತೀರ್ಮಾನಿಸಿದೆ. ಹಾಗಾಗಿ ಎರಡನೇ ಹಂತದಲ್ಲಿ ಪ್ರತಿ ಎರಡು ನಿಮಿಷಕ್ಕೊಂದು ಟ್ರೈನ್ ಓಡಿಸುವಂತಾ ತಂತ್ರಜ್ಞಾನವನ್ನು ಅಳವಡಿಸುವುದಕ್ಕೆ ಬಿಎಂಆರ್‌ಸಿಎಲ್ ಮುಂದಾಗಿದೆ. ಇದನ್ನೂ ಓದಿ: 6 ವರ್ಷ ತುಂಬಿದರಷ್ಟೇ 1ನೇ ಕ್ಲಾಸ್‌ಗೆ ಪ್ರವೇಶ – ಗೊಂದಲಕ್ಕೆ ಕಾರಣವಾದ ಆದೇಶ

    Live Tv
    [brid partner=56869869 player=32851 video=960834 autoplay=true]