Tag: ಬೈರತಿ ಬಸವರಾಜ

  • ಸಮಗ್ರ ಅಭಿವೃದ್ಧಿ ಯೋಜನೆ ನಕ್ಷೆ ತಯಾರಿಸಿ: ಬೈರತಿ ಬಸವರಾಜ

    ಸಮಗ್ರ ಅಭಿವೃದ್ಧಿ ಯೋಜನೆ ನಕ್ಷೆ ತಯಾರಿಸಿ: ಬೈರತಿ ಬಸವರಾಜ

    ಬೆಂಗಳೂರು: ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು ಸಮಗ್ರ ಅಭಿವೃದ್ಧಿ ಯೋಜನೆ ನಕ್ಷೆ (Comprehensive Development Plan) ತಯಾರಿಸಲು ಆಯುಕ್ತರುಗಳಿಗೆ ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ ಅವರು ಸೂಚಿಸಿದ್ದಾರೆ.

    ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಅಯುಕ್ತರ ಸಭೆ ವಿಕಾಸ ಸೌಧದಲ್ಲಿ ಇಂದು ಮಧ್ಯಾಹ್ನ ನಗರಾಭಿವೃದ್ಧಿ ಸಚಿವರಾದ ಬಸವರಾಜ ಅವರ ಅಧ್ಯಕ್ಷತೆಯಲ್ಲಿ ಜರುಗಿತು ಸಭೆಯಲ್ಲಿ ಆಯುಕ್ತರು ಗಳನ್ನು ಉದ್ದೇಶಿಸಿ ಮಾತನಾಡಿದ ಬಸವರಾಜ ಅವರು, 2021 ಸೆಪ್ಟೆಂಬರ್ 30 ರೊಳಗೆ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು ತಮ್ಮ ವ್ಯಾಪ್ತಿಗೆ ಬರುವ ಬಡಾವಣೆ ಅಭಿವೃದ್ಧಿ, ನಗರ ಅಭಿವೃದ್ಧಿ, ಕೆರೆ ಅಭಿವೃದ್ಧಿ ಸೇರಿದಂತೆ ಇತರೆ ಯೋಜನೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಿಡಿಪಿ ಯನ್ನು ನಗರಾಭಿವೃದ್ಧಿ ಇಲಾಖೆ ಮತ್ತು ನಗರ ಹಾಗೂ ಗ್ರಾಮಾಂತರ ಯೋಜನಾ ನಿರ್ದೇಶನಾಲಯಕ್ಕೆ ಸಲ್ಲಿಸಬೇಕು ಎಂದು ಗಡುವು ನೀಡಿದರು.

    ಕೆಲ ಪ್ರಾಧಿಕಾರದ ಅಭಿವೃದ್ಧಿ ಯೋಜನೆ ವಿಚಾರದಲ್ಲಿ ಪ್ರಕರಣಗಳು ಇರುವುದರಿಂದ ಅಂತಹ ಪ್ರಾಧಿಕಾಗಳಿಗೆ ಅಕ್ಟೋಬರ್ ಮತ್ತು ನವೆಂಬರ್ 30 ರೊಳಗೆ ಸಲ್ಲಿಸಲು ಅವಕಾಶ ನೀಡಿದ್ದಾರೆ. ಕೆಲ ಪ್ರಾಧಿಕಾರದ ಸುಪರ್ದಿಯಲ್ಲಿ ಇರುವ ಮೂಲೆ ಮತ್ತು ಮಧ್ಯಂತರ ನಿವೇಶನಗಳನ್ನು ಹರಾಜು ಪ್ರಕ್ರಿಯೆಯಲ್ಲಿ ಮಾರಾಟ ಮಾಡಲು ಸೂಚಿಸಿದರು. ಇದರಿಂದ ಪ್ರಾಧಿಕಾರಕ್ಕೆ ಆದಾಯ ಬರುತ್ತದೆ ಎಂದರು.

    ಅಲ್ಲದೇ ಹೊಸ ಬಡಾವಣೆ ನಿರ್ಮಾಣಕ್ಕೆ ಒತ್ತು ನೀಡುವ ಮೂಲಕ ನಗರಾಭಿವೃದ್ಧಿ ಪ್ರಾಧಿಕಾರಗಳ ಸಂಪನ್ಮೂಲ ಹೆಚ್ಚಿಸಬಹುದು ಮತ್ತು ಪ್ರಾಧಿಕಾರದ ನಿರ್ವಹಣೆಗೆ ಅನುಕೂಲವಾಗುತ್ತದೆ ಎಂದು ಹೇಳಿದರು. ಕಾನೂನು ತೊಡಕು ಇದ್ದಲ್ಲಿ ಅದನ್ನು ಇಲಾಖೆಯ ಕಾರ್ಯದರ್ಶಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತಂದು ನಿವಾರಿಸಿಕೊಳ್ಳಲು ಮುಂದಾಗಬೇಕು ಎಂದು ಆಯುಕ್ತರು ಗಳಿಗೆ ಸೂಚಿಸಿದರು. ಇದನ್ನೂ ಓದಿ: ಮೂರು ದಿನದಿಂದ ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ ಬಸ್ – ವಾಹನ ಸವಾರರ ಪರದಾಟ

    ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಎಂ.ಎನ್. ಅಜಯ್ ನಾಗಭೂಷಣ, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ನಿರ್ದೇಶಕ ಎಲ್.ಶಶಿಕುಮಾರ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಬಲಿಷ್ಠ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸದಂತೆ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹ

  • ಒಂದು ಲಕ್ಷ ದಿನಸಿ ಕಿಟ್ ವಿತರಿಸಿದ ಸಚಿವ ಬೈರತಿ ಬಸವರಾಜ

    ಒಂದು ಲಕ್ಷ ದಿನಸಿ ಕಿಟ್ ವಿತರಿಸಿದ ಸಚಿವ ಬೈರತಿ ಬಸವರಾಜ

    ಬೆಂಗಳೂರು: ಕೊರೊನಾ ಸೊಂಕು ನಿಯಂತ್ರಣ ಸಾಧಿಸಲು ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕೆ.ಆರ್‌.ಪುರ ವಿಧಾನ ಸಭಾ ಕ್ಷೇತ್ರದ ಬಡವರು, ಶ್ರಮಿಕ ವರ್ಗದವರು, ಕೂಲಿ ಕಾರ್ಮಿಕರಿಗೆ ಶಾಸಕರು ಹಾಗೂ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು ಕ್ಷೇತ್ರದ ವ್ಯಾಪ್ತಿಯಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಆಹಾರ ಪದಾರ್ಥಗಳ ದಿನಸಿ ಕಿಟ್ ವಿತರಿಸಿದರು.

    ಕೆ.ಆರ್.ಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೊತ್ತನೂರಿನ ನಂಜುಂಡೇಶ್ವರ ಕಲ್ಯಾಣ ಮಂಟಪದಲ್ಲಿ ದಿನಸಿ ವಿತರಿಸಿ ಮಾತನಾಡಿದ ಬಸವರಾಜ ಅವರು ಇನ್ನೂ ಅಗತ್ಯ ಬಿದ್ದಲ್ಲಿ ಮತ್ತೆ ಬಡಜನರಿಗೆ ಕಿಟ್‌ ನೀಡುವುದಾಗಿ ಭರವಸೆ ನೀಡಿದರು. ಕ್ಷೇತ್ರದ ಎಲ್ಲರಿಗೂ ಕೊರೊನಾ ನಿಯಂತ್ರಣ ಲಸಿಕೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಅದನ್ನು ಹಂತ ಹಂತವಾಗಿ ನೀಡಲಾಗುತ್ತದೆ ಎಂದರು.

    ಕೃಷ್ಣರಾಜಪುರ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಗುರಿ ಹೊಂದಿದೆ. 200 ಹಾಸಿಗೆಗಳ ಆಸ್ಪತ್ರೆಗೆ ಉನ್ನತೀಕರಿಸಲು 13 ಕೋಟಿ ರೂಪಾಯಿಗಳು ವೆಚ್ಚವಾಗಲಿದೆ. ಐಟಿಐ ಆಸ್ಪತ್ರೆಯಲ್ಲಿ ಕೋವಿಡ್ ಆರೈಕೆ ಕೇಂದ್ರ ತೆರೆಯಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕೇಂದ್ರ ಸರ್ಕಾರ ಅದಕ್ಕೆ ಒಪ್ಪಿಗೆ ನೀಡಿದೆ ಎಂದು ಹೇಳಿದರು.

    ಡಿವಿಎಸ್‌ ಭಾಗಿ: ಈ ವರ್ಷದ ಡಿಸೆಂಬರ್ ಅಂತ್ಯದ ವೇಳೆಗೆ ದೇಶದ 130 ಕೋಟಿ ಜನರಿಗೂ ಕೋವಿಡ್ ನಿಯಂತ್ರಣ ಲಸಿಕೆಯನ್ನು ನೀಡಲಾಗುವುದು ಎಂದು ಕೇಂದ್ರ ‌ ರಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರು ಹೇಳಿದರು. ಜೂನ್ ಅಂತ್ಯದ ವೇಳೆಗೆ ರಾಜ್ಯಕ್ಕೆ ಕೇಂದ್ರದಿಂದ 50 ಲಕ್ಷ ಲಸಿಕೆ ನೀಡಲಾಗುತ್ತದೆ, ರಾಜ್ಯ ಸರ್ಕಾರ ಕೂಡ 15 ಲಕ್ಷ ಲಸಿಕೆಯನ್ನು ಖರೀದಿಸಲು ಮುಂದಾಗಿದೆ. ಈ ತಿಂಗಳಲ್ಲಿ ಒಟ್ಟು 65 ಲಕ್ಷ ದಷ್ಟು ಲಸಿಕೆ ರಾಜ್ಯಕ್ಕೆ ಲಭ್ಯವಾಗಲಿದೆ ಎಂದರು.

    ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಜನರಿಗೆ ಒಂದು ಲಕ್ಷ ಆಹಾರ ಪದಾರ್ಥಗಳನ್ನು ಬೈರತಿ ಬಸವರಾಜ ಅವರು ವಿತರಣೆ ಮಾಡುತ್ತಿರುವುದು ನಿಜವಾಗಿಯೂ ಒಂದು ಪುಣ್ಯದ ಕೆಲಸ ಎಂದರು.

    ಕ್ಷೇತ್ರದ ಜನ ಮತ ಹಾಕುವ ಮೂಲಕ ಅವರಿಗೆ ಆಶೀರ್ವಾದ ಮಾಡಿದ್ದೀರಿ. ಅವರು ನಿಮಗೆ ಇಂತಹ ಸಂದರ್ಭದಲ್ಲಿ ಸಹಾಯಕ್ಕೆ ಬಂದಿದ್ದಾರೆ. ಸದಾ ಜನರ ನಡುವೆ ಇರುವ ಬಸವರಾಜ ಅಂತಹವರು ಸಮಾಜಕ್ಕೆ ಅವಶ್ಯಕತೆ ಇದೆ. ಅವರಿಗೆ ತಮ್ಮ ಬೆಂಬಲ ಸದಾ ಇರಲಿ ಎಂದು ಅಶಿಸುತ್ತೇನೆ ಎಂದರು.

    ಕೆ.ಆರ್‌.ಪುರ ವಿಧಾನಸಭಾ ಕ್ಷೇತ್ರ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಒಂದು ವಿಧಾನಸಭಾ ಕ್ಷೇತ್ರವಾಗಿದೆ. ಇದನ್ನು ಸಚಿವರಾದ ಬಸವರಾಜ ಅವರು ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ. ಈ ಭಾಗದ ಲೋಕಸಭಾ ಸದಸ್ಯನಾಗಿ ಮತ್ತು ಕೇಂದ್ರ ಸಚಿವನಾಗಿ ನನ್ನ ಬೆಂಬಲ, ಸಹಕಾರ ಈ ಕ್ಷೇತ್ರಕ್ಕೆ ಯಾವಾಗಲೂ ಇರುತ್ತದೆ ಎಂದು ಹೇಳಿದರು.

    ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೊರೊನಾ ನಿಯಂತ್ರಣ ಕುರಿತು ಸಭೆ ಕರೆದಾಗಲೆಲ್ಲ ‌ನಾನು ಕೆ.ಆರ್.ಪುರ ‌ಕ್ಷೇತ್ರದ ಬಗ್ಗೆ ಮತ್ತು ಬೈರತಿ ಬಸವರಾಜ ಅವರು ಕೈಗೊಂಡಿರುವ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ನೀಡುತ್ತೇನೆ. ಹೀಗಾಗಿ ಬಸವರಾಜ ಅವರ ಕಾರ್ಯವೈಖರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ತಿಳಿದಿದೆ ಎಂದರು.