Tag: ಬೈಲಹೊಂಗಲ

  • ಬೈಲಹೊಂಗಲದಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ದುರ್ಮರಣ

    ಬೈಲಹೊಂಗಲದಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ದುರ್ಮರಣ

    ಬೆಳಗಾವಿ: ಎರಡು ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) ಇಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೈಲಹೊಂಗಲದ (Bailhongal) ಇಂಚಲ ಗ್ರಾಮದಲ್ಲಿ ನಡೆದಿದೆ.

    ಮೃತರನ್ನು ಬೈಲಹೊಂಗಲ ನಗರದ ನಿವಾಸಿ ಮಂಗಲ ಭರಮನಾಯ್ಕರ್ (50), ಚಾಲಕ ಶ್ರೀಶೈಲ ನಾಗನಗೌಡರ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ರಾಯನಾಯ್ಕ ಭರಮನಾಯ್ಕರ್ (87), ಗಂಗವ್ವ ಭರಮನಾಯ್ಕರ್ (80), ಮಂಜುಳ ನಾಗನಗೌಡರ್ (30), ಮತ್ತೊಂದು ಕಾರಿನ ಇಂಚಲ ಗ್ರಾಮದ ಚಾಲಕ ಸುಬಾನಿ ವಕ್ಕುಂದ (28) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಚೆಕ್ ಬೌನ್ಸ್ ಕೇಸ್‌ – ಸಚಿವ ಮಧು ಬಂಗಾರಪ್ಪಗೆ 6.96 ಕೋಟಿ ದಂಡ

    ಗೋಕಾಕ್‍ನ ಕೊಣ್ಣೂರು ಪಟ್ಟಣದಿಂದ ಮನೆ ಗೃಹಪ್ರವೇಶಕ್ಕೆ ಬಟ್ಟೆ ಖರೀದಿಸಿ ಮರಳುವಾಗ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸ್ಥಳಕ್ಕೆ ಮುರಗೋಡ ಠಾಣೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ನಾರಾಯಣಗೌಡ ಸೇರಿದಂತೆ ಎಲ್ಲಾ ಕಾರ್ಯಕರ್ತರ ಬಿಡುಗಡೆ ಮಾಡಿ – ಡಿಸಿಎಂಗೆ ಕರವೇ ಮನವಿ

  • ರಾಜ್ಯೋತ್ಸವಕ್ಕೆ ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು

    ರಾಜ್ಯೋತ್ಸವಕ್ಕೆ ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು

    ಬೆಳಗಾವಿ: ಕನ್ನಡ ರಾಜ್ಯೋತ್ಸವ (Kannada Rajyotsava) ಹಿನ್ನೆಲೆ ಧ್ವಜಸ್ತಂಭ (Flagpole) ನಿಲ್ಲಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ (Electric Shock) ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ (Bailahongala) ತಾಲೂಕಿನಲ್ಲಿ ನಡೆದಿದೆ.

    ತಾಲೂಕಿನ ವಕ್ಕುಂದ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಪ್ರಜ್ವಲ್ ಚನ್ನಗೌಡ ಮುನೇಪ್ಪನವರ (18) ಮೃತಪಟ್ಟ ಯುವಕ. ಗ್ರಾಮದ ಬಸ್ ನಿಲ್ದಾಣದ ಮುಂದೆ ಧ್ವಜಸ್ತಂಭ ನಿಲ್ಲಿಸಲು ತಯಾರಿ ನಡೆಸುತ್ತಿದ್ದಾಗ ಸರ್ವಿಸ್ ತಂತಿ ತಾಗಿದ್ದರಿಂದ ವಿದ್ಯುತ್ ಪ್ರವಹಿಸಿ ಪ್ರಜ್ವಲ್ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಬೈಕ್ ರಿಪೇರಿ ಹಣ ಕೊಡದೆ ಸತಾಯಿಸಿದ್ದಕ್ಕೆ ವ್ಯಕ್ತಿ ಹತ್ಯೆ- ಅಪ್ರಾಪ್ತ ಸೇರಿ ನಾಲ್ವರು ಅರೆಸ್ಟ್

    ವಿದ್ಯುತ್ ಶಾಕ್ ತಗುಲಿದ ತಕ್ಷಣ ಸ್ಥಳೀಯರು ಯುವಕನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ. ಘಟನೆ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಕೆರೆಗೆ ಧುಮುಕಿದ ಕಾರು- ಓರ್ವ ಪಾರು, ಇಬ್ಬರು ನೀರುಪಾಲು

    ಮನೆ ಮಗನ ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದ್ದ ಒಬ್ಬ ಮಗನನ್ನು ಚೆನ್ನಾಗಿ ಓದಿಸಿ, ನೂರಾರು ಕನಸು ಕಟ್ಟಿಕೊಂಡಿದ್ದ ತಂದೆ-ತಾಯಿಗೆ ಈಗ ದಿಕ್ಕೇ ತೋಚದಾಗಿದೆ. ಅಗ್ನಿವೀರ್ ಪರೀಕ್ಷೆ ಪಾಸ್ ಆಗಿದ್ದ ಯುವಕ ಪ್ರಜ್ವಲ್, ದೈಹಿಕ ಪರೀಕ್ಷೆಗೆ ತಯಾರಾಗುತ್ತಿದ್ದ. ಅಷ್ಟರೊಳಗೆ ಈ ರೀತಿ ದುರಂತ ಸಂಭವಿಸಿರೋದು ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.

    ಮರಣೋತ್ತರ ಪರೀಕ್ಷೆಗಾಗಿ ಯುವಕನ ಮೃತದೇಹ ಬೈಲಹೊಂಗಲ ತಾಲ್ಲೂಕಾಸ್ಪತ್ರೆಯ ಶವಾಗಾರದಲ್ಲಿದ್ದು, ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೆತ್ತಪ್ಪನಿಂದಲೇ ಮಗನ ಕೊಲೆಗೆ ಸುಪಾರಿ – ಹತ್ಯೆಗೈದು ಮನೆ ಸೇರಿದ್ದವನ ಕಥೆ ಹೇಳಿತು ಸುಣ್ಣದ ಡಬ್ಬಿ!

    ಹೆತ್ತಪ್ಪನಿಂದಲೇ ಮಗನ ಕೊಲೆಗೆ ಸುಪಾರಿ – ಹತ್ಯೆಗೈದು ಮನೆ ಸೇರಿದ್ದವನ ಕಥೆ ಹೇಳಿತು ಸುಣ್ಣದ ಡಬ್ಬಿ!

    ಬೆಳಗಾವಿ: ಹೆತ್ತಪ್ಪನೇ (Father) ಮಗನ (Son) ಕೊಲೆಗೆ ಮನೆ ಕೆಲಸದವನಿಗೆ ಸುಪಾರಿ ಕೊಟ್ಟು ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿಸಿರುವ ಘಟನೆ ಬೈಲಹೊಂಗಲ (Bailhongal) ತಾಲೂಕಿನ ಕುಟರನಟ್ಟಿ ಗ್ರಾಮದಲ್ಲಿ ನಡೆದಿದ್ದು, ಇಬ್ಬರು ಆರೋಪಿಗಳನ್ನು ಮುರಗೋಡ ಪೊಲೀಸರು ಬಂಧಿಸಿದ್ದಾರೆ.

    ಬೈಲಹೊಂಗಲ ಪಟ್ಟಣದ ನಿವಾಸಿ ಸಂಗಮೇಶ ತಿಗಡಿ (38) ಕೊಲೆಯಾದ ವ್ಯಕ್ತಿ. ಮಾರುತೆಪ್ಪ ತಿಗಡಿ (72) ಮಗನ ಕೊಲೆಗೆ ಸುಪಾರಿ ಕೊಟ್ಟ ಅಪ್ಪ. ಆಗಸ್ಟ್ 20ರಂದು ರಾತ್ರಿ ಸಂಗಮೇಶಗೆ ಮದ್ಯ (Alcohol) ಕುಡಿಸಿ ಕುಟರನಟ್ಟಿ ಗ್ರಾಮದ ಹೊರವಲಯದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಇದನ್ನೂ ಓದಿ: ರೆಸಾರ್ಟ್‌ ತೋರಿಸುತ್ತೇನೆ ಬಾ ಅಂತ ಕರೆದು ಮಹಿಳೆ ಮೇಲೆ ರೇಪ್‌ – ಟೆಕ್ಕಿ ಅರೆಸ್ಟ್‌

    ಹತ್ಯೆಯಾದವನ ಕಿಸೆಯಲ್ಲಿದ್ದ ಸುಣ್ಣದ ಡಬ್ಬಿ (Lime Box) ಆರೋಪಿಯನ್ನು ಪತ್ತೆಹಚ್ಚಲು ಸಹಾಯ ಮಾಡಿದೆ. ಮೃತನ ಜೇಬಲ್ಲಿದ್ದ ಸುಣ್ಣದ ಡಬ್ಬಿಯಲ್ಲಿ ಕೊಲೆ ಮಾಡಿದ ಹಂತಕನ ನಂಬರ್ ಇತ್ತು. ತನ್ನ ಬಳಿ ಮೊಬೈಲ್ ಇಲ್ಲದ್ದಕ್ಕೆ ಮನೆಗೆಲಸ ಮಾಡುತ್ತಿದ್ದಾತನ ನಂಬರ್ ಅನ್ನು ಚೀಟಿಯಲ್ಲಿ ಬರೆದು ಸುಣ್ಣದ ಡಬ್ಬಿಯಲ್ಲಿ ಸಂಗಮೇಶ ಇಟ್ಟುಕೊಂಡಿದ್ದ. ಇದನ್ನೂ ಓದಿ: ಗ್ರಾಹಕರ ಖಾತೆಯಿಂದ 40 ಲಕ್ಷ ರೂ. ಎಗರಿಸಿದ ಬ್ಯಾಂಕ್ ಉದ್ಯೋಗಿ

    ಪ್ರಕರಣದ ಹಿಂದೆ ಬಿದ್ದ ಪೊಲೀಸರು ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಸಂಗಮೇಶ ಮನೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಕುಡಿದು ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಸಂಗಮೇಶನ ನಡೆಯಿಂದ ಬೇಸತ್ತು ಹೋಗಿದ್ದ ತಂದೆ ಮಾರುತ್ತೆಪ್ಪ ಪುತ್ರನನ್ನು ಕೊಲ್ಲಲು ಮನೆಕೆಲಸ ಮಾಡಿಕೊಂಡಿದ್ದ ಮಂಜುನಾಥನಿಗೆ ಸುಪಾರಿ ಕೊಟ್ಟಿದ್ದಾನೆ. ಬಳಿಕ ಮಂಜುನಾಥ ಹಾಗೂ ಆತನ ಸ್ನೇಹಿತ ಅಡಿವೆಪ್ಪ ಬೋಳೆತ್ತಿನ್ ಆತನನ್ನು ಕೊಲೆ ಮಾಡಿ ಇದೀಗ ಜೈಲುಪಾಲಾಗಿದ್ದಾರೆ. ಇದನ್ನೂ ಓದಿ: ಧಾರವಾಡ ಮೂಲದ ಆಸ್ಟ್ರೇಲಿಯಾ ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಆಸ್ಟ್ರೇಲಿಯಾದ ಕಠಿಣ ಕಾನೂನುಗಳೇ ಸಾವಿಗೆ ಕಾರಣ

    ಸದ್ಯ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆ ಐಸಿಯುವಿನಲ್ಲಿ ಆರೋಪಿ ತಂದೆ ಮಾರುತ್ತೆಪ್ಪ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸ್ನೇಹಿತರಿಂದಲೇ ಚಿನ್ನ ಕಳವು ಮಾಡಿಸಿ ನಾಟಕ – ಗಂಡನಿಗೆ ಬುದ್ಧಿ ಕಲಿಸಲು ಹೋಗಿ ಸಿಕ್ಕಿಬಿದ್ದ ಪತ್ನಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಳಗಾವಿ ವಿಭಜನೆ ಮಾಡೋದಾದರೆ ಮೊದಲ ಆದ್ಯತೆ ಬೈಲಹೊಂಗಲಕ್ಕೆ ಕೊಡಿ: ಜಾರಕಿಹೊಳಿ ಹೇಳಿಕೆಗೆ ವಿರೋಧ

    ಬೆಳಗಾವಿ ವಿಭಜನೆ ಮಾಡೋದಾದರೆ ಮೊದಲ ಆದ್ಯತೆ ಬೈಲಹೊಂಗಲಕ್ಕೆ ಕೊಡಿ: ಜಾರಕಿಹೊಳಿ ಹೇಳಿಕೆಗೆ ವಿರೋಧ

    ಬೆಳಗಾವಿ: ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಬೆಳಗಾವಿ ಜಿಲ್ಲೆಯನ್ನು (Belagavi District) ವಿಭಜನೆ ಮಾಡಲಾಗುತ್ತದೆ ಎಂಬ ಹೇಳಿಕೆಯ ಬೆನ್ನಲ್ಲೇ ಜಿಲ್ಲೆಯಲ್ಲಿ ಅಸಮಾಧಾನದ ಹೊಗೆ ಎದ್ದಿದೆ.

    ಬೈಲಹೊಂಗಲ (Bailhongal) ಮತ್ತು ಅಥಣಿ (Athani) ತಾಲೂಕಿನ ಜನರು ಜಾರಕಿಹೊಳಿ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮುಂದಿನ ಹೋರಾಟದ ರೂಪರೇಷೆಗಳ ಮಾಡಲು ಪೂರ್ವಭಾವಿ ಸಭೆ ನಡೆಸಿದ್ದಾರೆ. ಬೈಲಹೊಂಗಲ ಮೂರುಸಾವಿರಮಠದ ಪೀಠಾಧಿಪತಿ ಪ್ರಭು ನೀಲಕಂಠ ಸ್ವಾಮೀಜಿ ನೇತೃತ್ವದಲ್ಲಿ ಜಿಲ್ಲಾ ಹೋರಾಟ ಸಮಿತಿಯ ಪೂರ್ವಭಾವಿ ಸಭೆ ನಡೆಸಿದೆ.  ಇದನ್ನೂ ಓದಿ: ನಾನು ಕಾಂಗ್ರೆಸ್‌ ಕಾರ್ಯಕರ್ತನಾಗಿ ಮೇಲೆ ಬಂದವನು, JDS ಕಚೇರಿಯಲ್ಲೇ ಕಾಂಗ್ರೆಸ್ ನನ್ನ ತಾಯಿ ಅಂದಿದ್ದೇನೆ: ವಿಶ್ವನಾಥ್

    ಬೆಳಗಾವಿ ವಿಭಜನೆ ಮಾಡುವುದಾದರೆ ಮೊದಲ ಆದ್ಯತೆ ಬೈಲಹೊಂಗಲಕ್ಕೆ ಕೊಡಬೇಕು. ಬೈಲಹೊಂಗಲ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕೆಂಬ ಬೇಡಿಕೆಯನ್ನು ಹೋರಾಟಗಾರರು  ಮುಂದಿಟ್ಟಿದ್ದಾರೆ.

    ಬ್ರಿಟಿಷರ ಕಾಲದಿಂದಲೂ ಆಡಳಿತಾತ್ಮಕ ಕೇಂದ್ರವಾಗಿದ್ದ ಬೈಲಹೊಂಗಲದಲ್ಲಿ ಜಿಲ್ಲಾ ಘೋಷಣೆಗೆ ಬೇಕಾದ ಅಗತ್ಯ ಕಚೇರಿಗಳಿವೆ. ಜಿಲ್ಲೆಗೆ ಅರ್ಹವಲ್ಲದ ತಾಲೂಕಿನ ಬಗ್ಗೆ ಮಾತನಾಡುವುದನ್ನು ಸಚಿವರು ಕೈಬಿಡಬೇಕು. ಬೈಲಹೊಂಗಲ ತಾಲೂಕನ್ನ ಜಿಲ್ಲೆಯನ್ನಾಗಿ ಮಾಡದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

    ಒಂದು ವೇಳೆ ಬೈಲಹೊಂಗಲ ಜಿಲ್ಲೆಯಾಗದೇ ಇದ್ದರೆ ಬೆಳಗಾವಿ ಅಖಂಡ ಜಿಲ್ಲೆಯಾಗಿಯೇ ಉಳಿಯಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದಾರೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಂಡ ಬೇರೆ ಮನೆಮಾಡದ್ದಕ್ಕೆ ತವರಿಗೆ ಕರೆಸಿ ಅತ್ತೆಯನ್ನೇ ಕೊಂದ ಸೊಸೆ!

    ಗಂಡ ಬೇರೆ ಮನೆಮಾಡದ್ದಕ್ಕೆ ತವರಿಗೆ ಕರೆಸಿ ಅತ್ತೆಯನ್ನೇ ಕೊಂದ ಸೊಸೆ!

    – ಪತಿ ಕುಟುಂಬಸ್ಥರಿಂದ ಗಂಭೀರ ಆರೋಪ

    ಬೆಳಗಾವಿ: ಪತಿ (Husband) ಹಾಗೂ ಅತ್ತೆಯ ಮೇಲೆ ಸೊಸೆಯೊಬ್ಬಳು ಹಲ್ಲೆ ಮಾಡಿಸಿ ಅತ್ತೆಯನ್ನು ಕೊಲ್ಲಿಸಿದ ಪ್ರಕರಣ ಬೈಲಹೊಂಗಲದಲ್ಲಿ (Bailhongal) ನಡೆದಿದೆ.

    ಮೃತಳನ್ನು ಮಹಾಬೂಬಿ ಯಾಕೂಶಿ (53) ಎಂದು ಗುರುತಿಸಲಾಗಿದೆ. ಮೇಹರೂಣಿ ಯಾಕೂಶಿ ಹಲ್ಲೆ ಮಾಡಿಸಿದ ಮಹಿಳೆ ಎಂದು ತಿಳಿದು ಬಂದಿದೆ. ಗಂಡ ಸುಬಾನ್ ಬೇರೆ ಮನೆ ಮಾಡಲಿಲ್ಲ ಎಂದು ಪತ್ನಿ (Wife) ಈ ಕೃತ್ಯ ಎಸಗಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: Bomb Threatː ಬೆಂಗಳೂರಿನ ITBT ಕಂಪನಿಗೆ ಬಾಂಬ್ ಬೆದರಿಕೆ ಕರೆ..!

    ಮೇಹರೂಣಿ ಯಾಕೂಶಿ, ಪತಿ ಬೇರೆ ಮನೆ ಮಾಡಲಿಲ್ಲ ಎಂದು ಮನೆ ತೊರೆದು ತವರು ಮನೆಗೆ ತೆರಳಿದ್ದಾಳೆ. ಸ್ವಲ್ಪ ದಿನಗಳ ಬಳಿಕ ಅತ್ತೆ ಹಾಗೂ ಪತಿಯನ್ನು ತನ್ನ ತವರು ಮನೆಗೆ ಕರೆಸಿದ್ದಾಳೆ. ಈ ವೇಳೆ ತನ್ನ ಇಬ್ಬರೂ ಸಹೋದರರೊಂದಿಗೆ ಸೇರಿ ಅತ್ತೆ ಹಾಗೂ ಪತಿಯ ಮೇಲೆ ರಾಡ್‍ನಿಂದ ದಾಳಿ ನಡೆಸಿದ್ದಾರೆ ಎಂಬ ಆರೋಪ ಬಂದಿದೆ.

    ಮೇ 22ರಂದು ಈ ಘಟನೆ ನಡೆದಿದ್ದು, ತೀವ್ರ ಗಾಯಗೊಂಡಿದ್ದ ಅತ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

    ಮೂರು ವರ್ಷದ ಹಿಂದೆ ಮೇಹರೂಣಿ ಮತ್ತು ಸುಬಾನ್ ಪ್ರೀತಿಸಿ ಮದುವೆಯಾಗಿದ್ದರು. ಒಂದು ವರ್ಷದ ಬಳಿಕ ಬೇರೆ ಮನೆ ಮಾಡುವಂತೆ ಗಂಡನೊಂದಿಗೆ ಜಗಳ ಆಡುತ್ತಿದ್ದಳು ಎಂದು ತಿಳಿದು ಬಂದಿದೆ. ಈ ಸಂಬಂಧ ಬೈಲಹೊಂಗಲ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಪ್ಪಿತಸ್ಥರನ್ನು ಬಂಧಿಸುವಂತೆ ಪತಿ ಮತ್ತು ಕುಟುಂಬಸ್ಥರ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ: ಕೋಟಾ ಶ್ರೀನಿವಾಸ ಪೂಜಾರಿ

  • ಜಿಲ್ಲಾಧಿಕಾರಿ ಕಚೇರಿಯಲ್ಲೇ ಮಕ್ಕಳ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

    ಜಿಲ್ಲಾಧಿಕಾರಿ ಕಚೇರಿಯಲ್ಲೇ ಮಕ್ಕಳ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

    ಬೆಳಗಾವಿ: ವಿಶ್ವ ಮಹಿಳಾ ದಿನದಂದೇ ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ (Suicide Attempt) ಘಟನೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ (DC Office) ನಡೆದಿದೆ.

    ಬೆಳಗಾವಿಯ (Belagavi) ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ (Bailahongala) ಜನತಾ ಫ್ಲ್ಯಾಟ್‌ ನಿವಾಸಿ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಆಕೆ ಜೊತೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಮಕ್ಕಳಾದ ಸೃಷ್ಟಿ (14), ಸಾಕ್ಷಿ (8), ಸಾನ್ವಿ (3) ಅವರಿಗೂ ಫಿನಾಯಿಲ್ (Phenyl) ಕುಡಿಸಿದ್ದಾರೆ. ಇದನ್ನೂ ಓದಿ: ಧ್ವನಿಯಿಂದ ಎದುರಿಸಿದ ಟೀಕೆ ಬಗ್ಗೆ ಬಾಯ್ಬಿಟ್ಟ ರಾಣಿ ಮುಖರ್ಜಿ

    ಕಳೆದ ಹಲವು ವರ್ಷಗಳಿಂದ ಪತಿ ಅದೃಶ್ಯಪ್ಪ ಹಂಪಣ್ಣವರ ಜೊತೆಗೆ ಬೆಳಗಾವಿಯ ಅನಗೋಳದ ಬಾಡಿಗೆ ಮನೆಯಲ್ಲಿ ಸರಸ್ವತಿ ವಾಸವಿದ್ದರು. ಅನಗೋಳದ ಸಲೂನ್ ಶಾಪ್‌ನಲ್ಲಿ ಅದೃಶ್ಯಪ್ಪ ಹಂಪಣ್ಣವರ ಕೆಲಸ ಮಾಡುತ್ತಿದ್ದರು. ಕೈತುಂಬ ಸಾಲ ಮಾಡಿ 15 ದಿನಗಳ ಹಿಂದೆಯೇ ಪತ್ನಿ ಹಾಗೂ ತನ್ನ ಮೂವರು ಹೆಣ್ಣು ಮಕ್ಕಳನ್ನು ಬಿಟ್ಟು ಅದೃಶ್ಯಪ್ಪ ಹೋಗಿದ್ದರು. ಇದನ್ನೂ ಓದಿ: ಬಿಜೆಪಿಯಿಂದ ಹೋಗುವವರನ್ನು ಗೌರವಯುತವಾಗಿ ಕಳುಹಿಸಿಕೊಡುತ್ತೇವೆ: ಬಿಎಸ್‌ವೈ

    ತುತ್ತು ಅನ್ನಕ್ಕೂ ಗತಿಯಿಲ್ಲದೇ ಸರಸ್ವತಿ ತನ್ನ ಮಕ್ಕಳ ಜೊತೆಗೆ ಜಿಲ್ಲಾಧಿಕಾರಿ ಭೇಟಿಗಾಗಿ ಡಿಸಿ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಮಹಿಳೆಯನ್ನು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ವಿಚಾರಿಸಿದ್ದಾರೆ. ಆಗ ಜ್ಯೂಸ್ ಎಂದು ನನ್ನ ತಾಯಿ ಏನೋ ಕುಡಿಸಿದ್ದಾಳೆಂದು ಸಿಬ್ಬಂದಿ ಎದುರು ಹಿರಿಯ ಪುತ್ರಿ ಸೃಷ್ಟಿ ಹೇಳಿದ್ದಾಳೆ. ಬಳಿಕ ಸರಸ್ವತಿ ಹಾಗೂ ಮೂವರು ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾರೆ. ತಕ್ಷಣ ಅಲರ್ಟ್ ಆದ ಡಿಸಿ ಕಚೇರಿ ಸಿಬ್ಬಂದಿಗಳು ಡಿಸಿ ಕಚೇರಿ ಬಳಿಯ ಪೊಲೀಸರ ನೆರವು ಪಡೆದು ಜಿಲ್ಲಾಸ್ಪತ್ರೆಗೆ ಅಸ್ವಸ್ಥರನ್ನು ಶಿಫ್ಟ್ ಮಾಡಿದ್ದಾರೆ. ಸದ್ಯ ಸರಸ್ವತಿ ಹಾಗೂ ಮೂವರು ಹೆಣ್ಣು ಮಕ್ಕಳಿಗೆ ಜಿಲ್ಲಾಸ್ಪತ್ರೆಯಲ್ಲಿ (District Hospital) ಚಿಕಿತ್ಸೆ ಮುಂದುವರೆಸಲಾಗಿದೆ. ಇದನ್ನೂ ಓದಿ: ನಡುಬೀದಿಯಲ್ಲಿಯೇ ಹೊಡೆದಾಡಿಕೊಂಡ ಯುವತಿಯರು!

  • ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ- ಯುವಕನನ್ನ ಕೊಚ್ಚಿ ಕೊಂದ ಪತಿ

    ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ- ಯುವಕನನ್ನ ಕೊಚ್ಚಿ ಕೊಂದ ಪತಿ

    ಬೆಳಗಾವಿ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಶಂಕೆ ಹಿನ್ನೆಲೆಯಲ್ಲಿ ಯುವಕನನ್ನು ಪತಿ ಹಾಗೂ ಕುಟುಂಬಸ್ಥರು ಬರ್ಬರವಾಗಿ ಕೊಲೆಗೈದ ಘಟನೆ ಬೈಲಹೊಂಗಲ ತಾಲೂಕಿನ ಹೊಸ ಕುರಗುಂದ ಗ್ರಾಮದಲ್ಲಿ ನಡೆದಿದೆ.

    ಹೊಸ ಕುರಗುಂದ ಗ್ರಾಮದ ನಿವಾಸಿ ದ್ಯಾಮಪ್ಪ ವಣ್ಣೂರ (22) ಹತ್ಯೆಯಾದ ಯುವಕ. ಅದೇ ಗ್ರಾಮದ ಈರಪ್ಪ ನಾಯ್ಕರ್ ಮತ್ತು ಕುಟುಂಬಸ್ಥರಿಂದ ಕೃತ್ಯ ನಡೆದಿದೆ. ಗ್ರಾಮದಲ್ಲಿ ಬುಧವಾರ ಸಂಜೆ ಘಟನೆ ನಡೆದಿದ್ದು, ದ್ಯಾಮಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

    ದ್ಯಾಮಪ್ಪ ವಣ್ಣೂರ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಈರಣ್ಣಗೆ ವ್ಯಕ್ತವಾಗಿತ್ತು. ಹೀಗಾಗಿ ಬುಧವಾರ ಪೈಕ್‍ನಲ್ಲಿ ಬರುತ್ತಿದ್ದ ದ್ಯಾಮಪ್ಪನನ್ನು ಅಡ್ಡಗಟ್ಟಿದ ಈರಣ್ಣ ನಾಯ್ಕರ್ ಹಾಗೂ ಆತನ ಕುಟುಂಬಸ್ಥರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ದ್ಯಾಮಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

    ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಬೈಲಹೊಂಗಲ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

  • ಬೆಳಗಾವಿಯಲ್ಲಿ ವರುಣನ ಆರ್ಭಟ- ಕೊಚ್ಚಿಹೋಯ್ತು ಸೇತುವೆ

    ಬೆಳಗಾವಿಯಲ್ಲಿ ವರುಣನ ಆರ್ಭಟ- ಕೊಚ್ಚಿಹೋಯ್ತು ಸೇತುವೆ

    ಬೆಳಗಾವಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಿನ್ನೆ ಸುರಿದ ಭಾರಿ ಮಳೆಯಿಂದ ಮಲಪ್ರಭಾ ನದಿಗೆ ನಿರ್ಮಿಸಿದ್ದ ಸೇತುವೆ ಕೊಚ್ಚಿ ಹೋಗಿದೆ.

    ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ-ಬೇವಿನಕೊಪ್ಪ ಗ್ರಾಮಗಳ ನಡುವೆ ಮಲಪ್ರಭಾ ನದಿಗೆ ಸೇತುವೆ ನಿರ್ಮಿಸಲಾಗಿತ್ತು. ಸುಮಾರು 5 ಕೋಟಿ ರೂ ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು.

    ಭಾರೀ ಮಳೆ ಸುರಿದ ಪರಿಣಾಮವಾಗಿ ಅರ್ಧ ಸೇತುವೆಯೇ ಕೊಚ್ಚಿಕೊಂಡು ಹೋಗಿದೆ. ಸಾಕಷ್ಟು ನೀರಿನ ಒತ್ತಡವಿರುವ ಪ್ರದೇಶ ಇದಾಗಿದ್ದು ಸೇತುವೆ ನೆಲಕಚ್ಚಿದೆ. ಬ್ರಿಡ್ಜ್ ನಿರ್ಮಾಣವಾಗಿ ಈ ಕಾಮಗಾರಿ ಪೂರ್ಣಗೊಂಡು ಇನ್ನೂ 6 ತಿಂಗಳೂ ಕಳೆದಿಲ್ಲ. ಸೇತುವೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.