Tag: ಬೊಂಬೆ ಹೇಳುತೈತೆ

  • ಬೊಂಬೆ ಹೇಳುತೈತೆ: ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ

    ಬೊಂಬೆ ಹೇಳುತೈತೆ: ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ

    ಸಿನಿಮಾ ಪತ್ರಕರ್ತನಾಗಿ ಪರಿಚಿತರಾಗಿದ್ದ ಯತಿರಾಜ್ (Yathiraj) ನಂತರ ಕಲಾವಿದನಾಗಿ ಚಿರಪರಿಚಿತರಾದರು. ಈಗ ಯತಿರಾಜ್ ನಿರ್ದೇಶಕನಾಗೂ ಪ್ರಸಿದ್ದರಾಗುತ್ತಿದ್ದಾರೆ. ಪ್ರಸ್ತುತ ಅವರು ನಿರ್ದೇಶಿಸಿ, ಏಕಪಾತ್ರದಲ್ಲಿ ನಟಿಸಿರುವ “ಬೊಂಬೆ ಹೇಳುತೈತೆ” (Bombe Helataite) ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಈ ಚಿತ್ರದ ಮೂಲಕ ಯತಿರಾಜ್ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ (Record) ಬರೆದಿದ್ದಾರೆ. ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಯತಿರಾಜ್ ವಿವರಣೆ ನೀಡಿದರು.

    ನಾನು ಇಪ್ಪತ್ತೈದು ವರ್ಷಗಳ ಹಿಂದೆ ಸಿನಿಮಾದ ಒಂದು ಸನ್ನಿವೇಶದಲ್ಲಿ ಕಂಡರೆ ಸಾಕು ಎಂದು ಕೊಂಡಿದ್ದವನು. ಆನಂತರ ಅನೇಕ ಚಿತ್ರಗಳಲ್ಲಿ ಅಭಿನಯಿಸಿದೆ. ನಂತರ ನಿರ್ದೇಶಕನಾಗುವ ಕನಸು ಈಡೇರಿತು. ಈತನಕ ಆರು ಚಿತ್ರಗಳನ್ನು ನಿರ್ದೇಶಿಸಿದ್ಧೇನೆ. ಇಡೀ ಚಿತ್ರ ಪೂರ್ತಿ ಒಂದೇ ಪಾತ್ರವಿರಬೇಕು. ಅದರಲ್ಲಿ ನಟಿಸಬೇಕು ಎಂಬ ಆಸೆಯಿತ್ತು. ಇದಕ್ಕೆ ಸ್ಪೂರ್ತಿ ಹಿಂದಿಯಲ್ಲಿ ಸುನಿಲ್ ದತ್ ಹಾಗೂ ತಮಿಳಿನಲ್ಲಿ ಪಾರ್ಥಿಬನ್ ಅವರು ಎಂದರೆ ತಪ್ಪಾಗಲಾರದು. ಈ ವಿಷಯವನ್ನು ನನ್ನ ಮಗ ಪೃಥ್ವಿರಾಜ್‌ ಮುಂದೆ ಹೇಳಿದಾಗ, ಅವನು “ಬೊಂಬೆ ಹೇಳುತೈತೆ” ಚಿತ್ರದ ಕಥೆ ಹೇಳಿದ್ದ. ಪರಿಕಲ್ಪನೆ ಅವನದೆ. ಕಥೆ ಕೇಳಿ ಮೆಚ್ಚಿದ ಮಾರುತಿ ಪ್ರಸಾದ್ ನಿರ್ಮಾಣಕ್ಕೆ ಮುಂದಾದರು. ಚನ್ನಪಟ್ಟಣದ ಒಂದು ಬೊಂಬೆ ಅಂಗಡಿಯಲ್ಲೇ ಹೆಚ್ಚಿನ ಚಿತ್ರೀಕರಣವಾಗಿದೆ. ಚಿತ್ರ ಸೆನ್ಸಾರ್ ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗಿದೆ. ಚಿತ್ರ ಮುಗಿದ ಮೇಲೆ ನನಗೊಂದು ವಿಷಯ ತಿಳಿಯಿತು. ಈವರೆಗೂ ಕನ್ನಡದಲ್ಲಿ ಒಬ್ಬ ವ್ಯಕ್ತಿ ತಾನೇ ನಿರ್ದೇಶಿಸಿ, ಏಕಪಾತ್ರದಲ್ಲಿ ನಟಿಸಿರುವ ಯಾವ ಚಿತ್ರಗಳು ಬಂದಿಲ್ಲ ಎಂದು. ಏಕ ಪಾತ್ರ, ದ್ವಿಪಾತ್ರ ಚಿತ್ರಗಳು ಬಂದಿದೆಯಾದರೂ, ನಿರ್ದೇಶಕರು ಬೇರೆಯವರಾಗಿರುತ್ತಾರೆ. ಅವರೆ ನಿರ್ದೇಶಿಸಿ ಜೊತೆಗೆ ಏಕಪಾತ್ರದಲ್ಲಿ ನಟಿಸಿರುವ ಕನ್ನಡದ ಮೊದಲ ಚಿತ್ರ ಇದೇ ಎನ್ನಬಹುದು. ಹಾಗಂತ ನಾನು ಯಾವ ದಾಖಲೆಗೂ ಇದನ್ನು ಕಳುಹಿಸಿಲ್ಲ. ಇದೇ ಮಾರ್ಚ್ 23ರ ರಿಂದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ. ಅದರಲ್ಲಿ ನಮ್ಮ‌ ಚಿತ್ರ ಪ್ರದರ್ಶನವಾಗಬೇಕೆಂಬ ಆಸೆ. ಆ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದೇನೆ. ಸಕಾಲ ನೋಡಿಕೊಂಡು ಮುಂದಿನ ದಿನಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತೇನೆ ಎಂದ ನಿರ್ದೇಶಕ ಹಾಗೂ ನಟ ಯತಿರಾಜ್, ಸಹಕಾರ ನೀಡಿದ ಚಿತ್ರತಂಡದ ಸದಸ್ಯರಿಗೆ ಹಾಗೂ ಸ್ನೇಹಿತರಿಗೆ ಧನ್ಯವಾದ ತಿಳಿಸಿದರು. ಇದನ್ನೂ ಓದಿ: Exclusive: ʻಯುವ’ ಚಿತ್ರಕ್ಕೆ ಸಪ್ತಮಿ ಗೌಡ ಸೆಲೆಕ್ಟ್ ಆಗಿದ್ದು ಹೇಗೆ?

    ಕಥೆ ಬರೆದಿರುವ ಪೃಥ್ವಿರಾಜ್, ಛಾಯಾಗ್ರಾಹಕ ವಿದ್ಯಾ ನಾಗೇಶ್ ಹಾಗೂ ಸಹ ನಿರ್ದೇಶಕ ಅರುಣ್ ಚಿತ್ರದ ಕುರಿತು ಮಾತನಾಡಿದರು. ಪಿ ಆರ್ ಓ ಸುಧೀಂದ್ರ ವೆಂಕಟೇಶ್, ಸಿರಿ ಮ್ಯೂಸಿಕ್ ನ ಚಿಕ್ಕಣ್ಣ ಮತ್ತು ಮುಖ್ಯ ಅತಿಥಿಗಳಾಗಿ ಬಿಬಿಎಂಪಿ ಸಂಪರ್ಕಾಧಿಕಾರಿ ಶಂಕರ್ ಚಿತ್ರಕ್ಕೆ ಶುಭ ಕೋರಿದರು. ಪತ್ರಿಕಾಗೋಷ್ಠಿಗೂ ಮುನ್ನ ಯತಿರಾಜ್ ಅವರೆ ಬರೆದಿರುವ, ರಾಜ್ ಭಾಸ್ಕರ್ ಸಂಗೀತ ನೀಡಿರುವ ಹಾಡನ್ನು ಹಾಗೂ ಚಿತ್ರದ ಟ್ರೇಲರ್ ಪ್ರದರ್ಶಿಸಲಾಯಿತು.

  • ಹಲವು ಪಾತ್ರಗಳಿದ್ದರೂ ತೆರೆ ಮೇಲೆ ಕಾಣುವುದು ಒಂದೇ ಪಾತ್ರ: ಬೊಂಬೆ ಹೇಳುತೈತೆ ಸಿನಿಮಾದಲ್ಲಿ ಪ್ರಯೋಗ

    ಹಲವು ಪಾತ್ರಗಳಿದ್ದರೂ ತೆರೆ ಮೇಲೆ ಕಾಣುವುದು ಒಂದೇ ಪಾತ್ರ: ಬೊಂಬೆ ಹೇಳುತೈತೆ ಸಿನಿಮಾದಲ್ಲಿ ಪ್ರಯೋಗ

    ತ್ರಕರ್ತ, ಕಲಾವಿದರಾಗಿ ಪರಿಚಿತರಾಗಿದ್ದ ಯತಿರಾಜ್ (Yathiraj) ಈಗ ನಿರ್ದೇಶಕರಾಗಿಯೂ ಪ್ರಸಿದ್ಧಿ. ಒಂದೇ ವರ್ಷದಲ್ಲಿ ಅವರ ಮೂರು ಸಿನಿಮಾಗಳು ಸೆಟ್ಟೇರಿದೆ.  ಆ ಪೈಕಿ “ಸೀತಮ್ಮನ ಮಗ” ಚಿತ್ರ ಬಿಡುಗಡೆಯಾಗಿದ್ದು, “ಮಾಯಾಮೃಗ” ಬಿಡುಗಡೆ ಹಂತದಲ್ಲಿದೆ. ಇದೀಗ ಅವರ ಮೂರನೇ ಚಿತ್ರ “ಬೊಂಬೆ ಹೇಳುತೈತೆ” (Bombe Helutaite) ಸದ್ಯದಲ್ಲೇ ಆರಂಭವಾಗಲಿದೆ. ಇದನ್ನೂ ಓದಿ:ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಎದುರು ಅಬ್ಬರಿಸಲಿದ್ದಾರೆ ಸಂಜಯ್ ದತ್

    “ಬೊಂಬೆ ಹೇಳುತೈತೆ” ನನ್ನ ನಿರ್ದೇಶನದ ನಾಲ್ಕನೇ ಚಿತ್ರ. ಇದೇ ವರ್ಷ ನಾನು ನಿರ್ದೇಶಿಸುತ್ತಿರುವ ಮೂರನೇ ಚಿತ್ರವೂ ಹೌದು.  ನನ್ನ ಮಗ ಪೃಥ್ವಿರಾಜ್ ನೀಡಿದ ಎಳೆಯನ್ನಿಟ್ಟುಕೊಂಡು ಚಿತ್ರಕಥೆ ಹೆಣೆಯಲಾಗಿದೆ. ಕೇವಲ ಹದಿನೈದು ದಿನಗಳಲ್ಲಿ ಈ ಚಿತ್ರಕ್ಕೆ ಚಾಲನೆ ದೊರಕಿದೆ. ಚಿತ್ರದ ಸಂಪೂರ್ಣ ಚಿತ್ರೀಕರಣ ಚನ್ನಪಟ್ಟಣದಲ್ಲಿ ನಡೆಯಲಿದೆ. ಅದರಲ್ಲೂ ವಿಶೇಷವಾಗಿ ಕಾವೇರಿ ಆರ್ಟ್ಸ್ ಅಂಡ್ ಕ್ರಾಫ್ಟ್ ಎಂಪೋರಿಯಮ್ ನಲ್ಲಿ ಚಿತ್ರೀಕರಣ ನಡೆಸಲು ಅನುಮತಿ ದೊರೆತಿರುವುದರಿಂದ ಚಿತ್ರಕ್ಕೆ ಬಲ ಬಂದಂತಾಗಿದೆ.  ಇನ್ನೂ “ಬೊಂಬೆ ಹೇಳುತೈತೆ” ಚಿತ್ರದ ಬಗ್ಗೆ ಹೇಳ ಬೇಕೆಂದರೆ, ಇಲ್ಲಿ ನಂಬಿಕೆಯ ಪ್ರಶ್ನೆಯಿದೆ. ಸರಿ-ತಪ್ಪುಗಳ ಜಿಜ್ಞಾಸೆಯಿದೆ. ಮಮತೆ – ವಾತ್ಸಲ್ಯಗಳ ವೈರುಧ್ಯವಿದೆ. ಆಸೆ – ದುರಾಸೆಗಳ ಆಳ ಅಗಲವಿದೆ. ವಾಸ್ತವ ಲೋಕದ ಪರಿಚಯಯವಿದೆ. ಅಳುವಿದೆ.. ನಗುವಿದೆ. ಎಲ್ಲರೊಂದಿಗೆ ಬೆರೆಯುವ ವ್ಯಕ್ತಿ ಹೇಗೆ ಏಕಾಂಗಿಯಾಗುತ್ತಾನೆ? ಎಂಬುದೆ ಚಿತ್ರದ ಕೇಂದ್ರ ವಸ್ತು. ಚಿತ್ರದಲ್ಲಿ ಹಲವು ಪಾತ್ರಗಳಿದ್ದರೂ ತೆರೆಯ ಮೇಲೆ ಕಾಣುವುದು ಸಿದ್ದರಾಜು (Siddaraj) ಪಾತ್ರ ಮಾತ್ರ. ಆ ಪಾತ್ರದಲ್ಲಿ ನಾನೇ ಅಭಿನಯಿಸುತ್ತಿದ್ದೇನೆ. ಈ ಹಿಂದೆ ಒಂದೇ ಪಾತ್ರದ ಕೆಲವು ಚಿತ್ರಗಳು ಬಂದಿದೆಯಾದರೂ ನಮ್ಮ ಚಿತ್ರದ ಕಥೆ ಸಾಗುವ ರೀತಿ ಸ್ವಲ್ಪ ಭಿನ್ನ ಎನ್ನುವ ಯತಿರಾಜ್, ಚಿತ್ರತಂಡದ ಪರಿಚಯ ಮಾಡಿಸಿ, ಸಹಕಾರ  ನೀಡುತ್ತಿರುವವರಿಗೆ ಧನ್ಯವಾದ ತಿಳಿಸಿದರು. ಪುನೀತ್ ರಾಜ್‍ಕುಮಾರ್ (Puneeth Rajkumar) ಅವರ ಬೊಂಬೆಯ ಮೂಲಕ ಸಮಾಜಕ್ಕೆ  ಸಂದೇಶ ಸಾರುವ ಅಂಶ ನಮ್ಮ ಚಿತ್ರದಲ್ಲಿದ್ದು, ಅದಕ್ಕಾಗಿ ಅವರ ಪುಟ್ಟ ಪುತ್ಥಳಿ ಬೇಕಾಗಿತ್ತು. ಅದನ್ನು ಒದಗಿಸಿದ ಇಂಜಿನಿಯರ್ ಸಚಿನ್ ಅವರನ್ನು ವೇದಿಕೆಯಲ್ಲಿ ಪರಿಚಯಿಸಲಾಯಿತು.

    ಚಿತ್ರಕಥೆ, ಸಂಭಾಷಣೆ  ಬರೆಯುತ್ತಿರುವ ಶ್ರೀಕಾಂತ್, ಛಾಯಾಗ್ರಾಹಕ ವಿದ್ಯಾನಾಗೇಶ್ , ಸಹ ನಿರ್ದೇಶಕ ಅರುಣ್ ಕುಮಾರ್, ಗಾಯಕ ಸಚಿನ್ ಚಿತ್ರದ ಕುರಿತು ಮಾತನಾಡಿದರು. ಎಂ.ಡಿ.ಕೌಶಿಕ್,  ವಿ ಶಶಿ ಗೌಡ, ವಿ ಆರ್ ರೆಸಿಡೆನ್ಸಿ ಹೋಟೆಲ್ ನ ಮಾಲೀಕ ಕುಮಾರ್ ಗೌಡ , ಕಾವೇರಿ ಎಂಪೋರಿಯಂ ನ ಅಶ್ವಿನ್ ಗೌಡ ಮುಂತಾದ ಗಣ್ಯರು ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಮಾರುತಿ ಪ್ರೊಡಕ್ಷನ್ಸ್ ಮೂಲಕ ಮಾರುತಿ ಪ್ರಸಾದ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪುನೀತ್ ಗಾಗಿ ಹಾಡಿದ ಅಪ್ಪು ಅಕ್ಕನ ಮಗಳು ನಟಿ ಧನ್ಯಾ ರಾಮ್ ಕುಮಾರ್

    ಪುನೀತ್ ಗಾಗಿ ಹಾಡಿದ ಅಪ್ಪು ಅಕ್ಕನ ಮಗಳು ನಟಿ ಧನ್ಯಾ ರಾಮ್ ಕುಮಾರ್

    ರಾಜಕುಮಾರ ಸಿನಿಮಾದ ‘ಬೊಂಬೆ ಹೇಳುತೈತೆ..’ ಹಾಡು ಸಿನಿಮಾ ರಿಲೀಸ್ ಆದ ವೇಳೆ ಮತ್ತು ನಂತರವೂ ಕೋಟಿ ಕೋಟಿ ಕಂಗಳನ್ನು ಒದ್ದೆಯಾಗಿಸಿತ್ತು. ಹೃದಯ ಭಾವುಕತೆಯಿಂದ ಒದ್ದೆಯಾಗಿತ್ತು. ಪುನೀತ್ ನಿಧನದ ನಂತರ ಮತ್ತಷ್ಟು ಕಾಡಿದ ಹಾಡಿದು. ಇದೇ ಸಾಹಿತ್ಯವನ್ನು ಸ್ವಲ್ಪ ಹಿಂದೆ ಮುಂದೆ ಮಾಡಿಕೊಂಡು ನಾಗೇಂದ್ರ ಪ್ರಸಾದ್ ಕೂಡ ‘ಗೊಂಬೆ ಹೇಳಲಿಲ್ಲ’ ಎಂದು ಹಾಡು ಬರೆದರು. ಇದೀಗ ಗೊಂಬೆ ಹೇಳತೈತಿ ಹಾಡಿಗೆ ಧನ್ಯಾ ರಾಮ್ ಕುಮಾರ್ ಧ್ವನಿಯಾಗಿದ್ದಾರೆ. ಇದನ್ನೂ ಓದಿ : ದಕ್ಷಿಣದ ಸಿನಿಮಾ ನೋಡಲ್ಲ: ವಿವಾದಕ್ಕೆ ಕಾರಣವಾದ ಬಾಲಿವುಡ್ ಖ್ಯಾತ ನಟ ನವಾಜುದ್ಧೀನ್ ಸಿದ್ದಿಕಿ

    ಏಪ್ರಿಲ್ 24 ರಂದು ತಮ್ಮ ತಾತ (ಡಾ.ರಾಜ್ ಕುಮಾರ್) ಹುಟ್ಟು ಹಬ್ಬಕ್ಕೆ ಮಾವ (ಪುನೀತ್) ನಟಿಸಿರುವ ರಾಜಕುಮಾರ್ ಸಿನಿಮಾದ ‘ಬೊಂಬೆ ಹೇಳುತೈತೆ’ ಗೀತೆಗೆ ಧ್ವನಿಯಾಗಿದ್ದಾರೆ ಪುನೀತ್ ಅವರ ಸಹೋದರಿ ಪೂರ್ಣಿಮಾ ಅವರ ಪುತ್ರ, ನಟಿ ಧನ್ಯ ರಾಮ್ ಕುಮಾರ್. ಇದನ್ನೂ ಓದಿ : ಕರ್ನಾಟಕದಲ್ಲೇ ನಡೆಯಿತು ತಮಿಳು ಸಿನಿಮಾಗೆ ಮುಹೂರ್ತ: ಬೆಂಗಳೂರಿಗೆ ಬಂದಿಳಿದ ತಮಿಳು ನಟ

    ಮೂಲ ಹಾಡನ್ನು ಹಾಡಿದ್ದು ವಿಜಯ ಪ್ರಕಾಶ್. ಆನಂತರ ಬೇರೆ ಬೇರೆಯವರು ಈ ಹಾಡಿಗೆ ಧ್ವನಿಯಾಗಿ ತಮ್ಮಿಷ್ಟದಂತೆ ಹಾಡುತ್ತಿದ್ದರು. ಸ್ವತಃ ಪುನೀತ್ ರಾಜ್ ಕುಮಾರ್ ಅವರೇ ಈ ಹಾಡನ್ನು ಹಲವು ವೇದಿಕೆಗಳಲ್ಲಿ ಹಾಡಿದ್ದೂ ಇದೆ. ಈಗ ಮೊದಲ ಬಾರಿಗೆ ಧನ್ಯಾ ರಾಮ್ ಈ ಗೀತೆಗೆ ದನಿಯಾಗಿದ್ದಾರೆ. ಅಪ್ಪು ಫೋಟೋ ಇರೊ ಹೆಡ್‍ಸೆಟ್ ಹಾಕಿಕೊಂಡು ಈ ಗೀತೆಯನ್ನು ಹಾಡಿದ್ದಾರೆ. ಇದನ್ನೂ ಓದಿ : ನಮ್ಮದು ಪ್ಯಾನ್ ಇಂಡಿಯಾ ಸಿನಿಮಾವಲ್ಲ, ಸಿನಿಮಾ ಅಷ್ಟೇ : ಬಾಲಿವುಡ್ ವಿರುದ್ಧ ಕಿಚ್ಚ ಸುದೀಪ್ ಗುಡುಗು

    ಧನ್ಯಾ ರಾಮ್ ಕುಮಾರ್ ಅವರನ್ನು ಕಂಡರೆ ಡಾ.ರಾಜ್ ಕುಮಾರ್ ಅವರಿಗೆ ಎಲ್ಲಿಲ್ಲದ ಪ್ರೀತಿ. ಪುನೀತ್ ಅವರಿಗೂ ಧನ್ಯಾ ಮೇಲೆ ಅಕ್ಕರೆ. ಹೀಗಾಗಿಯೇ ಇಬ್ಬರಿಗಾಗಿ ಈ ಗೀತೆಯನ್ನು ಧನ್ಯಾ ಹಾಡಿದ್ದಾರೆ. ಹಾಡಿನ ಮೂಲಕ ಇಬ್ಬರೂ ಮಹಾನ್ ಕಲಾವಿದರನ್ನು ನೆನೆದಿದ್ದಾರೆ.

  • `ಬೊಂಬೆ ಹೇಳುತೈತೆ’ ಹಾಡನ್ನು ತುಳು ಭಾಷೆಯಲ್ಲಿ ಒಂದ್ಸಲ ಕೇಳಿ

    `ಬೊಂಬೆ ಹೇಳುತೈತೆ’ ಹಾಡನ್ನು ತುಳು ಭಾಷೆಯಲ್ಲಿ ಒಂದ್ಸಲ ಕೇಳಿ

    ಬೆಂಗಳೂರು: ಯಶಸ್ವಿ ಚಲನಚಿತ್ರ `ರಾಜಕುಮಾರ’ ಸ್ಯಾಂಡಲ್‍ವುಡ್ ನಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿದೆ. ಸಿನಿಮಾದ ಹಾಡುಗಳು ಸೇರಿದಂತೆ ಎಲ್ಲಾ ವಿಭಾಗದಲ್ಲಿಯೂ ಸಿನಿರಸಿಕರನ್ನು ಸೆಳೆಯುವಲ್ಲಿ ರಾಜಕುಮಾರ ಯಶಸ್ವಿಯಾಗಿತ್ತು.

    ಇದೇ ಸಿನಿಮಾದ `ಬೊಂಬೆ ಹೇಳುತೈತೆ’ ಹಾಡು ಇನ್ನೂ ಜನ-ಮನದಲ್ಲಿ ಉಳಿದಿದೆ. ಇದೇ ಹಾಡನ್ನು ಹಲವರು ತಮ್ಮದೆ ಶೈಲಿಯಲ್ಲಿ ಹಾಡುವ ಮೂಲಕ ಪ್ರೀತಿಯನ್ನು ಪಡೆದುಕೊಂಡಿದ್ದಾರೆ. ಈಗ ಇದೇ ಹಾಡನ್ನು ತುಳು ಭಾಷೆಯಲ್ಲಿ ಹಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

    ಉಡುಪಿಯ ಸುಹಾನ್ ಶೇಖ್ ಎಂಬವರು ತುಳು ಭಾಷೆಯಲ್ಲಿ ಹಾಡಿದ್ದಾರೆ. ಸುಂದರ ಕಡಲತೀರದಲ್ಲಿ ಕುಳಿತಿರುವ ಯುವಕ ಭಾವನಾಭರಿತವಾಗಿ ಹಾಡುವುದನ್ನು ನೋಡಲು ಇಷ್ಟವಾಗುತ್ತದೆ.

    ಮೂಲ ಹಾಡನ್ನು ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜನೆಯಲ್ಲಿ ಹಾಡು ಮೂಡಿ ಬಂದಿದ್ದು, ಯೂಟ್ಯೂಬ್ ನಲ್ಲಿ ಇದೂವರೆಗೂ ಈ ಹಾಡು 36 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಯಾಗಿದೆ.