Tag: ಬೊಲೆರೊ

  • ಸ್ಕೂಟರ್‌ಗೆ ಬೊಲೆರೊ ಡಿಕ್ಕಿ – ಮಕ್ಕಳ ಎದುರೇ ಹೋಯ್ತು ಹೆತ್ತಮ್ಮನ ಉಸಿರು..!

    ಸ್ಕೂಟರ್‌ಗೆ ಬೊಲೆರೊ ಡಿಕ್ಕಿ – ಮಕ್ಕಳ ಎದುರೇ ಹೋಯ್ತು ಹೆತ್ತಮ್ಮನ ಉಸಿರು..!

    – ರಸ್ತೆಯಲ್ಲೇ ಮಕ್ಕಳ ಗೋಳಾಟ

    ಮಂಡ್ಯ: ಆ ತಾಯಿ ತನ್ನ ಮುದ್ದಾದ ಎರಡು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರ ಭವಷ್ಯವನ್ನು ಉಜ್ವಲಗೊಳಿಸಲು ಸಾಕಷ್ಟು ಕನಸು ಕಂಡಿದ್ದರು. ಆದರೆ ಕ್ರೂರ ವಿಧಿ ಮಕ್ಕಳ ಎದುರೆ ದಾರುಣವಾಗಿ ಆ ತಾಯಿ ಜೀವವನ್ನು ಪಡೆದಿದೆ. ಇದೀಗ ಆ ಮಕ್ಕಳು ತಾಯಿಯನ್ನು ಕಳೆದುಕೊಂಡು ಕಣ್ಣೀರಿಡುವ ಸ್ಥಿತಿ ನಿರ್ಮಾಣವಾಗಿದೆ.

    ಹೌದು. ಮಂಡ್ಯದ (Mandya) ಮಳವಳಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಕ್ಕಳ ಎದುರಲ್ಲೇ ಹೆತ್ತ ತಾಯಿ ಜೀವ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ಮದ್ದೂರಿನ ಕುಂದೂರು ಗ್ರಾಮದ ಶಿಲ್ಪಾ ಮೃತ ದುರ್ದೈವಿ. ಇದನ್ನೂ ಓದಿ: ಕಲುಷಿತ ನೀರು ಸೇವಿಸಿ ವೃದ್ದ ಸಾವು..? – 2 ಗ್ರಾಮಗಳ ಜನರಿಗೆ ವಾಂತಿ ಭೇದಿ ಮೈ-ಕೈ ನೋವು

    ಶಿಲ್ಪಾ ನಿತ್ಯ ತಮ್ಮ ಸ್ಕೂಟರ್‌ನಲ್ಲೇ ಮಕ್ಕಳಿಬ್ಬರನ್ನು ಶಾಲೆಗೆ ಬಿಡೋದು ಕರೆತರುವ ಕೆಲಸ ಮಾಡ್ತಿದ್ರು. ಎಂದಿನಂತೆ ಮಳವಳ್ಳಿಯ ಶಾಲೆಯಿಂದ ಮನೆಗೆ ಕರೆತರುವಾಗ ಯಮಸ್ವರೂಪಿಯಾಗಿ ಬಂದ ಬೊಲೆರೊ ವಾಹನ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಮಳವಳ್ಳಿ ಕೊಳ್ಳೆಗಾಲದ ರಸ್ತೆಯಲ್ಲಿ ಹೋಗುವ ವೇಳೆ ರಸ್ತೆಯಿಂದ ಬಲಬದಿಗೆ ತಿರುಗಿಸಿದಾಗ ವೇಗವಾಗಿ ಬಂದ ಬೊಲೆರೋ ಸ್ಕೂಟರ್‌ಗೆ ಗುದ್ದಿದೆ. ಡಿಕ್ಕಿ ರಭಸಕ್ಕೆ ಹೆಲ್ಮೆಟ್ ಧರಿಸಿದ್ರೂ ಶಿಲ್ಪಾ ಹಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕ್ರೂರ ವಿಧಿ ಮಕ್ಕಳ ಎದುರೇ ತಾಯಿಯ ಪ್ರಾಣಪಕ್ಷಿಯನ್ನು ಕೊಂಡೊಯ್ದಿದೆ.

    ಅಮ್ಮ ಅಪಘಾತಕ್ಕೆ (Accident) ಸ್ಥಳದಲ್ಲೇ ಉಸಿರು ಚೆಲ್ಲಿದರೆ.. ರಸ್ತೆಯ ಆ ಬದಿ ಮಕ್ಕಳಿಬ್ಬರೂ ಅಮ್ಮ ಅಮ್ಮ ಎಂದು ಗೋಳಾಡುತ್ತಿದ್ದು ಎಂತಹವರ ಮನಸ್ಸನ್ನು ಕದಲಿಸುವಂತಿತ್ತು. 7 ವರ್ಷದ ಅನನ್ಯ, 5 ವರ್ಷದ ಮಾನ್ಯಗೆ ಸಣ್ಣಪುಟ್ಟ ಗಾಯಗಳಾಗಿತ್ತು. ರಕ್ತ ಸುರಿಯುತ್ತಿದ್ರೂ ಮಕ್ಕಳಿಬ್ಬರ ಬಾಯಲ್ಲಿ ಒಂದೇ ಪದ ಅದು ಅಮ್ಮ.. ಅಮ್ಮ.. ಆದರೆ ಮಕ್ಕಳಿಬ್ಬರೂ ತನ್ನನ್ನು ಕರೆಯುತ್ತಿದ್ರೂ ತಾಯಿ ಮಾತ್ರ ಎದ್ದು ಬಂದು ಸಮಾಧಾನ ಮಾಡುವ ಸ್ಥಿತಿಯಲ್ಲಿರಲಿಲ್ಲ. ಈ ದೃಶ್ಯ ಕಂಡವರೂ ರಸ್ತೆಯಲ್ಲಿ ಕಣ್ಣೀರು ಹಾಕಿದ್ದು ಸುಳ್ಳಲ್ಲ.

    ಸದ್ಯ ಬೊಲೆರೊ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಅಪಘಾತಕ್ಕೆ ಬೊಲೆರೋ ವಾಹನ ಚಾಲಕನ ಅಜಾಗರೂಕತೆ ಹಾಗೂ ರಸ್ತೆಯ ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದನ್ನೂ ಓದಿ: ಕೆನಡಾ ಅಮೆರಿಕದ ಭಾಗವಾಗಲ್ಲ – ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಪ್ರಧಾನಿ ಮಾರ್ಕ್‌ ಕಾರ್ನಿ ಘೋಷಣೆ

    ಡಿವೈಡರ್‌ಗೆ ಕೆಟಿಎಂ ಬೈಕ್ ಡಿಕ್ಕಿ – ಓರ್ವ ಸಾವು:
    ಇನ್ನೂ ಮಂಡ್ಯದಲ್ಲೇ ಮತ್ತೊಂದು ಕಡೆ ಅಪಘಾತಕ್ಕೆ ಓರ್ವ ಜೀವ ಬಿಟಿದ್ದಾನೆ. ಮಂಡ್ಯ ನಗರದಲ್ಲಿ ಹಾದು ಹೋಗುವ ಹಳೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ತಮಿಳುನಾಡು ರಾಜ್ಯದ ನೋಂದಣಿಯ ಕೆಎಟಿಎಂ ಬೈಕ್ ಅಪಘಾತವಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಕೆಟಿಎಂ ಬೈಕ್‌ನಲ್ಲಿ ಇಬ್ಬರು ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬೈಕ್ ಸವಾರ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಬೈಕ್ ವೇಗವಾಗಿ ಇದ್ದ ಪರಿಣಾಮ ಡಿವೈಡರ್‌ನ ಮೇಲತ್ತಿ ಮರಕ್ಕೆ ಡಿಕ್ಕಿಯಾಗಿದೆ.

    ಡಿವೈಡರ್ ಬಳಿಯಿದ್ದ ಬೇವಿನಮರಕ್ಕೆ ಬೈಕ್ ಡಿಕ್ಕಿ ಆಗಿದೆ. ಡಿಕ್ಕಿ ರಭಸಕ್ಕೆ ಬೇವಿನಮರ ಮುರಿದಿದೆ. ಇದರಿಂದ ಸ್ಥಳದಲ್ಲೇ ಓರ್ವ ಸವಾರ ಸಾವನ್ನಪ್ಪಿದ್ದಾನೆ. ಮತ್ತೋರ್ವನಿಗೆ ಗಾಯವಾಗಿದೆ. ಗಾಯಾಳುವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಶುಲ್ಕ – ತಿಂಗಳಿಗೆ ವಸತಿ, ವಾಣಿಜ್ಯ ಕಟ್ಟಡಗಳಿಗೆ ಎಷ್ಟು?

  • ಬೊಲೆರೊದಲ್ಲಿ 15 ಗೋವುಗಳ ಸಾಗಾಟ – ಹಿಂದೂ ಕಾರ್ಯಕರ್ತರಿಂದ ಚಾಲಕನಿಗೆ ತರಾಟೆ

    ಬೊಲೆರೊದಲ್ಲಿ 15 ಗೋವುಗಳ ಸಾಗಾಟ – ಹಿಂದೂ ಕಾರ್ಯಕರ್ತರಿಂದ ಚಾಲಕನಿಗೆ ತರಾಟೆ

    ರಾಯಚೂರು: ಒಂದೇ ಬೊಲೆರೊ (Bolero) ವಾಹನದಲ್ಲಿ 15 ಗೋವುಗಳನ್ನು ಸಾಗಾಟ (Cattle Transportation) ಮಾಡುತ್ತಿದ್ದು, ಹಿಂದೂ ಕಾರ್ಯಕರ್ತರು (Hindu Activists) ವಾಹನ ತಡೆದು ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ರಾಯಚೂರಿನ (Raichur) ಲಿಂಗಸುಗೂರಿನ (Lingasugur) ಗುರಗುಂಟಾದಲ್ಲಿ ನಡೆದಿದೆ.

    ಒಂದರ ಮೇಲೆ ಒಂದು ಹಸುಗಳನ್ನು (Cow) ಹಾಕಿ ಚಿತ್ರಹಿಂಸೆ ನೀಡಿ ಸಾಗಾಣಿಕೆ ಮಾಡಿರುವುದಾಗಿ ಆರೋಪಿಸಿ ಹಿಂದೂ ಕಾರ್ಯಕರ್ತರು ವಾಹನ ತಡೆದು ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸುರಪೂರು, ಯಾದಗಿರಿ ಹಾಗೂ ಕಲಬುರಗಿಯಿಂದ ನಿರಂತರ ಗೋವುಗಳ ಸಾಗಾಟ ನಡೆಯುತ್ತಿದ್ದು, ಗೋವುಗಳಿಗೆ ಚಿತ್ರಹಿಂಸೆ ನೀಡಿ ಸಾಗಾಣಿಕೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎದೆ, ತಲೆ ಭಾಗಕ್ಕೆ ತುಳಿದ ಆನೆ- ಪಶ್ಚಿಮ ಬಂಗಾಳದ ಕಾರ್ಮಿಕ ಸಾವು

    ರಾತ್ರೋರಾತ್ರಿ ಕಾನೂನು ವಿರುದ್ಧವಾಗಿ ಸಾಗಾಣಿಕೆ ಮಾಡಿರುವುದಾಗಿ ಆರೋಪಿಸಿದ್ದು, ಹಟ್ಟಿ ಠಾಣೆ ಪೊಲೀಸರು ವಾಹನ ಜಪ್ತಿ ಮಾಡಿ ಗೋವುಗಳನ್ನು ರಕ್ಷಿಸಿದ್ದಾರೆ. ಇನ್ನು ಬೊಲೆರೊ ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದು, ಪ್ರಕರಣ ಇನ್ನೂ ದಾಖಲಾಗಿಲ್ಲ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಆಸ್ಪತ್ರೆಯಿಂದ ಮಗು ಕದ್ದು ಸಾಗಿಸುತ್ತಿದ್ದ ಮಹಿಳೆ ಅರೆಸ್ಟ್ – ಪೊಲೀಸರ ಕಾರ್ಯಕ್ಕೆ ಸಿಎಂ ಮೆಚ್ಚುಗೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶೋರೂಮ್‍ನಲ್ಲಿ ರೈತನಿಗೆ ಅವಮಾನ – ಆನಂದ್ ಮಹಿಂದ್ರಾ ಹೇಳಿದ್ದೇನು?

    ಶೋರೂಮ್‍ನಲ್ಲಿ ರೈತನಿಗೆ ಅವಮಾನ – ಆನಂದ್ ಮಹಿಂದ್ರಾ ಹೇಳಿದ್ದೇನು?

    ನವದೆಹಲಿ: ಇತ್ತೀಚೆಗೆ ಕರ್ನಾಟಕದ ರೈತನೊಬ್ಬ ಬೊಲೆರೋ ಪಿಕ್‍ಅಪ್ ಟ್ರಕ್ ಖರೀದಿಸಲು ಶೋರೂಮ್‍ಗೆ ಹೋಗಿದ್ದಾಗ ಅಲ್ಲಿನ ಸೇಲ್ಸ್‍ಮ್ಯಾನ್ ರೈತನಿಗೆ ಅವಮಾನ ಮಾಡಿದ್ದಾಗಿ ಸುದ್ದಿಯಾಗಿತ್ತು. ಇದೀಗ ಕೈಗಾರಿಕೋದ್ಯಮಿ ಆನಂದ್ ಮಹಿಂದ್ರಾ ಈ ವಿಚಾರವಾಗಿ ಸಂದೇಶ ನೀಡಿದ್ದಾರೆ.

    ಮಂಗಳವಾರ ಸಾರ್ವಜನಿಕ ಪ್ರತಿಕ್ರಿಯೆಯಲ್ಲಿ ವ್ಯಕ್ತಿಯ ಘನತೆಯನ್ನು ಎತ್ತಿ ಹಿಡಿಯುವ ಮಹತ್ವದ ಬಗ್ಗೆ ಆನಂದ್ ಮಹಿಂದ್ರಾ ಒತ್ತಿ ಹೇಳಿದ್ದಾರೆ. ಮಹಿಂದ್ರಾ ಕಂಪನಿಯ ಮುಖ್ಯ ಉದ್ದೇಶ ಸಮುದಾಯ ಹಾಗೂ ಎಲ್ಲಾ ಪಾಲುದಾರರನ್ನು ಹೆಚ್ಚಿಸಲು ಅನುವು ಮಾಡಿ ಕೊಡುವುದು. ವ್ಯಕ್ತಿಯ ಘನತೆಯನ್ನು ಎತ್ತಿ ಹಿಡಿಯುವುದು ಒಂದು ಪ್ರಮುಖ ಮೌಲ್ಯವಾಗಿದೆ ಎಂದು ಮಹಿಂದ್ರಾ ಸಿಇಒ ವಿಜಯ್ ನಕ್ರಾ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: SSLC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – ಮಾ.28 ರಿಂದ ಆರಂಭ

    ಈ ಕುರಿತು ವಿಜಯ್ ನಕ್ರಾ, ಆನಂದ್ ಮಹಿಂದ್ರಾ ಅವರ ಸಂದೇಶವನ್ನು ತಿಳಿಸಿದ್ದು ಘಟನೆಯ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

    ಕಳೆದ ವಾರ ತುಮಕೂರು ಮೂಲದ ರೈತನೊಬ್ಬ ಬೊಲೆರೋ ಪಿಕ್‍ಅಪ್ ಟ್ರಕ್ ಖರೀದಿಸಲು ಶೋರೂಮ್‍ಗೆ ತೆರಳಿದ್ದ. ಆದರೆ ಶೋರೂಮ್‍ನ ಸೇಲ್ಸ್‍ಮ್ಯಾನ್ 10 ಲಕ್ಷ ರೂ.ಯ ಕಾರ್ ಅನ್ನು ಖರೀದಿಸಲು 10 ರೂ. ನಿನ್ನ ಬಳಿ ಇಲ್ಲ ಎಂದು ವ್ಯಂಗ್ಯ ಮಾಡಿದ್ದ. ಇದನ್ನು ರೈತ ಸವಾಲಾಗಿ ತೆಗೆದುಕೊಂಡು ಕೇವಲ ಒಂದು ಗಂಟೆಯಲ್ಲಿ 10 ಲಕ್ಷ ರೂ. ಯೊಂದಿಗೆ ಶೋರೂಮ್‍ಗೆ ಮರಳಿದ್ದ. ಇದನ್ನೂ ಓದಿ: ಸಾಲ ವಸೂಲಿಯಲ್ಲೂ ಗುರು ರಾಘವೇಂದ್ರ ಬ್ಯಾಂಕ್ ವಂಚನೆ: ಎಎಪಿ ಆರೋಪ

    ಆಕ್ರೋಶಗೊಂಡಿದ್ದ ರೈತನ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು. ಟ್ವಿಟ್ಟರ್‍ನಲ್ಲಿ ಮಹಿಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹಿಂದ್ರಾಗೆ ಟ್ಯಾಗ್ ಮಾಡಲಾಗಿತ್ತು.

  • ಜಾನುವಾರುಗಳನ್ನು ತಪ್ಪಿಸಲು ಹೋಗಿ ಪೊಲೀಸ್‌ ವಾಹನ ಪಲ್ಟಿ

    ಜಾನುವಾರುಗಳನ್ನು ತಪ್ಪಿಸಲು ಹೋಗಿ ಪೊಲೀಸ್‌ ವಾಹನ ಪಲ್ಟಿ

    ಯಾದಗಿರಿ: ಜಾನುವಾರುಗಳ ಮೇಲಾಗುವ ಅಪಘಾತ ತಪ್ಪಿಸಲು ಹೋಗಿ ಪೊಲೀಸ್‌ ವಾಹನವೇ ಪಲ್ಟಿ ಹೊಡೆದ ಘಟನೆ ವಡಗೇರಾ ತಾಲೂಕಿನ ಖಾನಾಪುರ ಬಳಿ ನಡೆದಿದೆ.

    ಘಟನೆಯಲ್ಲಿ ಮೂವರಿಗೆ ಗಾಯಗಳಾಗಿವೆ. ಕಲಬುರಗಿಯ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಪಿಐ ಪಂಚಾಕ್ಷರಯ್ಯ, ಪೊಲೀಸ್‌ ಪೇದೆ ಪ್ರಶಾಂತ ಹಾಗೂ ಚಾಲಕ ಶ್ರೀಶೈಲ್ ಗಾಯಗೊಂಡಿದ್ದು, ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಬುಧವಾರ ರಾತ್ರಿ ಕೋರ್ಟ್ ಕೆಲಸ ಮುಗಿಸಿಕೊಂಡು ಬೊಲೆರೊ ಪೊಲೀಸ್‌ ವಾಹನದಲ್ಲಿ ಅಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿ ಕಲಬುರಗಿಗೆ ತೆರಳುತ್ತಿದ್ದರು. ಖಾನಾಪುರ ಸಮೀಪದಲ್ಲಿ ಜಾನುವಾರುಗಳಿಗೆ ಬೊಲೆರೊ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಶ್ರೀಶೈಲ್ ಪ್ರಯತ್ನಿಸಿದರು. ಆದರೆ ಬೊಲೆರೊ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪರಿಣಾಮ ಅದರಲ್ಲಿದ್ದ ಮೂವರಿಗೂ ಗಾಯಗಳಾಗಿವೆ.

    ಈ ಘಟನೆ ವಡಗೇರಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

  • ಟಂಟಂ ಹಿಂಬದಿಗೆ ಬೊಲೆರೊ ಡಿಕ್ಕಿ – ವಿದ್ಯಾರ್ಥಿಯ ಕೈ ಕಟ್, 6 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

    ಟಂಟಂ ಹಿಂಬದಿಗೆ ಬೊಲೆರೊ ಡಿಕ್ಕಿ – ವಿದ್ಯಾರ್ಥಿಯ ಕೈ ಕಟ್, 6 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

    ಬಾಗಲಕೋಟೆ: ಟಂಟಂ, ಬೊಲೆರೊ ಮುಖಾಮುಖಿ ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯ ಕೈ ತುಂಡಾಗಿ, ಆರು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಾಗಲಕೋಟೆಯ ನಗರದ ವಿದ್ಯಾಗಿರಿಯಲ್ಲಿ ನಡೆದಿದೆ.

    ಅಭಿಷೇಕ್ ಘಟನೆಯಲ್ಲಿ ಬಲಗೈ ಕಳೆದು ಕೊಂಡ ವಿದ್ಯಾರ್ಥಿಯಾಗಿದ್ದು, ಉಳಿದಂತೆ ಆರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯ ಲಯನ್ ಆಂಗ್ಲ ಮಾಧ್ಯಮ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಬುಲೆರೋ ಡಿಕ್ಕಿಯಾಗಿದೆ.

    ಅಪಘಾತದ ರಭಸಕ್ಕೆ ವಾಹನದಲ್ಲಿದ್ದ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ವಾಹನ ಸದ್ಯ ಕೈ ಕಳೆದು ಕೊಂಡಿರುವ ಅಭಿಷೇಕನನ್ನು ಸ್ಥಳೀಯ ಕೆರೋಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳಲ್ಲಿ ಮೂವರ ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

    ಅಪಘಾತಕ್ಕೆ ಬೊಲೆರೊ ವಾಹನ ಚಾಲಕನ ಅತೀ ವೇಗವೇ ಕಾರಣ ಎನ್ನಲಾಗಿದ್ದು, ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಎಸ್ಪಿ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    https://www.youtube.com/watch?v=fsssAfdZ8K8

  • ಸಡನ್ ಬ್ರೇಕ್ ಹಾಕಿದ BMTC ಬಸ್, ಬಸ್ ಗೆ ಗುದ್ದಿದ ಬೊಲೆರೊ, ಬೊಲೆರೋಗೆ ಡಿಕ್ಕಿ ಹೊಡೆದ ಲಾರಿ

    ಸಡನ್ ಬ್ರೇಕ್ ಹಾಕಿದ BMTC ಬಸ್, ಬಸ್ ಗೆ ಗುದ್ದಿದ ಬೊಲೆರೊ, ಬೊಲೆರೋಗೆ ಡಿಕ್ಕಿ ಹೊಡೆದ ಲಾರಿ

    ಬೆಂಗಳೂರು: ಶನಿವಾರ ರಾತ್ರಿ ಬೆಂಗಳೂರಿನ ಅಂತಾರರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಸರಣಿ ಅಪಘಾತವಾಗಿದೆ. ಬಿಎಂಟಿಸಿ ಬಸ್, ಬೊಲೆರೊ ಗೂಡ್ಸ್ ಗಾಡಿ ಮತ್ತು ಲಾರಿಯ ನಡುವೆ ಅಪಘಾತವಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

    ಬಿಎಂಟಿಸಿ ಬಸ್ ಸಡನ್ ಆಗಿ ಬ್ರೇಕ್ ಹಾಕಿದ ಕಾರಣ ಬಸ್ ಹಿಂದೆ ಬರುತ್ತಿದ್ದ ಬೊಲೆರೋ ಬಸ್ಸಿಗೆ ಡಿಕ್ಕಿ ಹೊಡೆದ್ರೇ, ಲಾರಿ ಬೊಲೆರೋಗೆ ಡಿಕ್ಕಿ ಹೊಡೆದಿದೆ. ಬೊಲೆರೋ ವಾಹನದಲ್ಲಿದ್ದ ಇಬ್ಬರಿಗೆ ಗಾಯಾಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಘಟನಾ ಸ್ಥಳಕ್ಕೆ ಯಲಹಂಕ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.