ಬೆಂಗಳೂರು: ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ನ (High Court) ದ್ವಿಸದ್ಯ ಪೀಠ ರದ್ದುಗೊಳಿಸಿದ್ದು 5,8,9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿದೆ.
ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ (Karnataka Government) ಮೇಲ್ಮನವಿ ಸಲ್ಲಿಸಿತ್ತು. ಸುದೀರ್ಘ ವಿಚಾರಣೆ ನಡೆಸಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಅಸ್ತು ಎಂದಿದೆ.
ಉಳಿದ ವಿಷಯಗಳ ಪರೀಕ್ಷೆ ನಡೆಸಲು ತುರ್ತು ಹಾಗೂ ಸೂಕ್ತ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ನ್ಯಾ.ಸೋಮಶೇಖರ್ ಹಾಗೂ ನ್ಯಾ.ರಾಜೇಶ್ ರೈ ಅವರಿದ್ದ ಪೀಠ ಸೂಚನೆ ನೀಡಿದೆ.
ಮಾರ್ಚ್ 11ರಿಂದ ಮಾರ್ಚ್ 18ರವರೆಗೆ ಪರೀಕ್ಷೆ ನಿಗದಿಯಾಗಿತ್ತು. ಮಾರ್ಚ್ 11 ಮತ್ತು 12 ಎರಡು ದಿನ ಎರಡು ವಿಷಯಗಳ ಪರೀಕ್ಷೆ ನಡೆದ ಬಳಿಕ ಪರೀಕ್ಷೆಗೆ ತಡೆ ನೀಡಲಾಗಿದೆ. 5ನೇ ತರಗತಿಗೆ ಎರಡು ವಿಷಯಗಳ ಪರೀಕ್ಷೆ ಮಾತ್ರ ಬಾಕಿ ಉಳಿದಿದೆ. 8 ಮತ್ತು 9ನೇ ತರಗತಿಗಳಿಗೆ ಇನ್ನೂ 4 ವಿಷಯಗಳ ಪರೀಕ್ಷೆ ಬಾಕಿ ಇದೆ.
ನವದೆಹಲಿ: 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ (Board Exam) ಸುಪ್ರೀಂ ಕೋರ್ಟ್ (Supreme Court) ತಡೆಯಾಜ್ಞೆ ನೀಡಿದ್ದು ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದೆ.
5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ (Karnataka High Court) ಆದೇಶ ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಬೋರ್ಡ್ ಪರೀಕ್ಷೆ ನಡೆಸದಂತೆ ತಡೆ ನೀಡಿದೆ.
ಸುಪ್ರೀಂ ಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ 5,8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಶಿಕ್ಷಣ ಇಲಾಖೆ ಮುಂದೂಡಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠ ಮಾರ್ಚ್ 6 ರಂದು ಬೋರ್ಡ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು.
ರಾಜ್ಯಾದ್ಯಂತ 45,000 ಶಾಲೆಗಳ 28 ಲಕ್ಷ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ಬರೆಯುತ್ತಿದ್ದು, ಇದೀಗ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. 11ನೇ ತರಗತಿ ಪರೀಕ್ಷೆಗಳು ಈಗಾಗಲೇ ಫೆಬ್ರವರಿ 28 ರಂದೇ ಮುಕ್ತಾಯಗೊಂಡಿವೆ. 5,8 ಮತ್ತು 9ನೇ ತರಗತಿಗಳಿಗೆ ಮಾ.11 ರಿಂದ ಪರೀಕ್ಷೆಗಳು ಆರಂಭವಾಗಿತ್ತು.
ಬೆಂಗಳೂರು: ಗರಿಷ್ಠ ಸಂಖ್ಯೆಯ ಪರೀಕ್ಷೆಗಳು, ಸ್ಪಷ್ಟ ನೀತಿ ಇಲ್ಲದೆ ಇರುವುದನ್ನು ಚರ್ಚೆ ಮಾಡಲು ಶಿಕ್ಷಣ ತಜ್ಞರ ಸಭೆ ಕರೆಯಬೇಕೆಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ (N. Ravikumar) ಆಗ್ರಹಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ಉತ್ತರಪತ್ರಿಕೆ ಕೊಡಲಾಗದಷ್ಟು ರಾಜ್ಯ ಸರ್ಕಾರದ ಖಜಾನೆ ಖಾಲಿ ಆಗಿದೆಯೇ ಎಂದು ರಾಜ್ಯ ಶಿಕ್ಷಣ ಸಚಿವರಿಗೆ ಪ್ರಶ್ನಿಸಿದ್ದಾರೆ. 8ರಿಂದ 8.5 ಲಕ್ಷ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ನೀವು ಪ್ರಿಪರೇಟರಿ ಪರೀಕ್ಷೆ ನಡೆಸಲು 50 ರೂ. ಸಂಗ್ರಹಿಸಿ ಪ್ರಶ್ನೆಪತ್ರಿಕೆ ನೀಡುವುದಾದರೆ, ಉತ್ತರ ಪತ್ರಿಕೆ ನೀವೇ ತರಬೇಕು ಎನ್ನುವುದಾದರೆ ಸರ್ಕಾರ ಯಾವ ಅಧೋಗತಿಗೆ ತಲುಪಿದೆ? ಇದು ಬಹಳ ನೋವಿನ ವಿಚಾರ. ಶಿಕ್ಷಣದ ಕುರಿತ ಕಳಕಳಿಯಿಂದ ಇದನ್ನು ಬಿಜೆಪಿ ಪ್ರಶ್ನಿಸುತ್ತಿದೆ ಎಂದಿದ್ದಾರೆ.
11 ಮತ್ತು 12ನೇ ತರಗತಿಗೆ ಎರಡೆರಡು ಸಪ್ಲಿಮೆಂಟರಿ ಪರೀಕ್ಷೆ ನಡೆಸಲು ಸರ್ಕಾರ ಅಸ್ತು ಎಂದಿದೆ. ಎಸ್ಎಸ್ಎಲ್ಸಿ (SSLC) ಪ್ರಿಪರೇಟರಿ ಪರೀಕ್ಷೆ ನಡೆಸಲು ಸರ್ಕಾರ ಹಣ ಕೊಡುತ್ತಿಲ್ಲ. ವಿದ್ಯಾರ್ಥಿಗಳ ಬಳಿ ಹಣ ಸಂಗ್ರಹಿಸಿ, ಕೇವಲ ಪ್ರಶ್ನೆಪತ್ರಿಕೆ ಕೊಡುವುದಾಗಿ ಹೇಳುತ್ತಾರೆ. ಉತ್ತರ ಪತ್ರಿಕೆ ನೀಡುವುದಿಲ್ಲ ಎಂದಿದ್ದಾರೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿ 2 ವರ್ಷದಲ್ಲಿ ಪೂರ್ಣ – ಜೋಶಿ ವಿಶ್ವಾಸ
ಹಳ್ಳಿಯಿಂದ ಸಣ್ಣಪುಟ್ಟ ಪಟ್ಟಣಕ್ಕೆ ಬರಲು 90% ಶಿಕ್ಷಕವರ್ಗ ಬಸ್ಸನ್ನೇ ಆಶ್ರಯಿಸಿದೆ. ಉಚಿತ ಬಸ್ಗಳಿಂದಾಗಿ ಬಸ್ಗಳು ಲಭ್ಯವಿಲ್ಲ. ಬಸ್ಸುಗಳು ಕಡಿಮೆಯಾಗಿವೆ. ಇದರಿಂದ ಶಿಕ್ಷಕರು, ವಿದ್ಯಾರ್ಥಿಗಳೂ ತಡವಾಗಿ ಬರುವಂತಾಗಿದೆ. ಉಚಿತ ಪ್ರಯಾಣದ ನಂತರ ಅರ್ಧಕ್ಕರ್ಧ ಬಸ್ ಕಡಿಮೆಯಾಗಿದೆ. ಬೆಳಿಗ್ಗೆ 10ಕ್ಕೆ ಶಾಲೆ ತೆರೆದರೆ 11, 12 ಗಂಟೆಗೆ ವಿದ್ಯಾರ್ಥಿಗಳು ಬರುವಂತಾಗಿದೆ. ಶಿಕ್ಷಕರೂ ಶಾಲೆಗೆ ಸಕಾಲದಲ್ಲಿ ಬರಲಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ಶಾಲೆಗಳಲ್ಲಿ ಮೂಲಸೌಕರ್ಯವಿಲ್ಲ, ಕುಡಿಯುವ ನೀರಿನ ಸೌಲಭ್ಯ ಇಲ್ಲ. ಶೌಚಾಲಯ ಸೌಕರ್ಯ ಇಲ್ಲ. ಬಿಜೆಪಿ ಸರ್ಕಾರ ಇದ್ದಾಗ ಮಂಜೂರಾದ ವಿವೇಕ ಕೊಠಡಿಗಳನ್ನು ರದ್ದು ಮಾಡಿದ್ದಾರೆ. 13- 14 ಸಾವಿರ ಕೊಠಡಿ ನಿರ್ಮಾಣಕ್ಕೆ ಬೊಮ್ಮಾಯಿಯವರ ಕಾಲದಲ್ಲಿ ಬಿಜೆಪಿ ಸರ್ಕಾರ ನಿರ್ಣಯಿಸಿತ್ತು. ಅದನ್ನು ರದ್ದು ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ರಾಜಕಾರಣದ ಕಾಳಜಿ ವಹಿಸುವ ಮಧು ಬಂಗಾರಪ್ಪ (Madhu Bangarappa) ಅವರು, ಶಿಕ್ಷಣದ ಬಗ್ಗೆ ಕಾಳಜಿ ವಹಿಸದೆ ರಾಜಕಾರಣದಲ್ಲಿ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಆದ್ದರಿಂದ ಶಿಕ್ಷಣ ಸಚಿವರು, ಬೋರ್ಡ್ ಪರೀಕ್ಷೆ, ಗರಿಷ್ಠ ಸಂಖ್ಯೆ ಪರೀಕ್ಷೆ ಬೇಡವೆನ್ನುವ ಸರ್ಕಾರವೇ ಅತಿ ಹೆಚ್ಚು ಪರೀಕ್ಷೆ ನಡೆಸುತ್ತಿರುವುದು. ರಾಜ್ಯ ಪಠ್ಯಕ್ರಮ, ಕೇಂದ್ರೀಯ ಪಠ್ಯಕ್ರಮದ ಸಂಬಂಧ ಅನೇಕ ಶಿಕ್ಷಣ ಸಂಸ್ಥೆಗಳಿಂದ ಗೊಂದಲಮಯ ನಿರ್ಧಾರ ಕುರಿತಂತೆ ಪೋಷಕರು, ಶಿಕ್ಷಣ ತಜ್ಞರ ಸಭೆ ನಡೆಸಬೇಕು. ಸಂಘಟನೆಗಳು, ಶಿಕ್ಷಕರ ಕ್ಷೇತ್ರ, ಪದವೀಧರರ ಕ್ಷೇತ್ರದಿಂದ ಆಯ್ಕೆಯಾದ ಶಾಸಕರನ್ನೂ ಈ ಸಭೆಗೆ ಆಹ್ವಾನಿಸಿ ಎಂದು ಅವರು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ 5ನೇ ತರಗತಿಯಿಂದ 11ನೇ ತರಗತಿ ವರೆಗೆ ನಡೆಯುತ್ತಿರುವ ಪರೀಕ್ಷೆ ವಿಚಾರದಲ್ಲಿ ಬಹಳಷ್ಟು ಚರ್ಚೆ ನಡೆಯುತ್ತಿದೆ. ಈ ಗೊಂದಲಕ್ಕೆ ಹೈಕೋರ್ಟ್ (High Court) ತೆರೆ ಎಳೆದಿದೆ. ಏಕಸದಸ್ಯ ಪೀಠವು ಬೋರ್ಡ್ ಪರೀಕ್ಷೆ ಬೇಡ ಎಂದಿದ್ದರೆ, ದ್ವಿಸದಸ್ಯ ಪೀಠವು ಬೋರ್ಡ್ ಪರೀಕ್ಷೆ ನಡೆಸಿ ಎಂದು ತೀರ್ಪು ನೀಡಿದೆ. ಇಂಥ ಸಂದರ್ಭದಲ್ಲಿ ಪೋಷಕರು, ವಿದ್ಯಾರ್ಥಿಗಳಲ್ಲಿ ಸಾಕಷ್ಟು ಗೊಂದಲ ಉಂಟಾಗಿದೆ. ರಾಜ್ಯ ಸರ್ಕಾರ ನಡೆಸುವ ಬೋರ್ಡ್ ಪರೀಕ್ಷೆ ಕಾರಣಕ್ಕೆ ವಿದ್ಯಾರ್ಥಿಗಳಲ್ಲಿ ಫೇಲ್ ಆಗುವ ಭಯ ಇದೆ. ಈ ಗೊಂದಲ, ಭಯ ನಿವಾರಿಸುವ ದೃಷ್ಟಿಯಿಂದ ರಾಜ್ಯದ ಶಿಕ್ಷಣ ತಜ್ಞರ ಸಭೆಯನ್ನು ಕೂಡಲೇ ಕರೆಯಬೇಕೆಂದು ಅವರು ಬಿಜೆಪಿ ಪರವಾಗಿ ಆಗ್ರಹಿಸಿದ್ದಾರೆ.
ಎಳೆಯ ಮಕ್ಕಳ ಮನಸ್ಸಿನಲ್ಲಿ ಅನುತ್ತೀರ್ಣರಾದರೆ, ನಪಾಸ್ ಆದರೆ, ನಾನು ಇನ್ನು ಶಾಲೆಗೆ ಹೋಗುವಂತಿಲ್ಲ. ನಾನು ಅಸಮರ್ಥ ಎಂಬ ಭಾವನೆ ಬರುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ 8ನೇ ತರಗತಿವರೆಗೆ ನಪಾಸ್ ಮಾಡಬಾರದೆಂದು ಸರ್ಕಾರ ನಿಯಮ ರೂಪಿಸಿದೆ. ಇದನ್ನು ಸ್ವಾಗತಿಸುತ್ತೇವೆ. ಈಗ 5, 8, 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಲ್ಲಿ ಗೊಂದಲ ಇದೆ. ಶಿಕ್ಷಣ ಎಂದರೆ ಕೇವಲ ಪರೀಕ್ಷೆ ಅಲ್ಲ ಎಂದು ಸರ್ಕಾರ ಒಂದೆಡೆ ಹೇಳುತ್ತದೆ. ಮಾಸಿಕ, ವಾರ್ಷಿಕ ಪರೀಕ್ಷೆಗೆ ಪೂರ್ವಭಾವಿ ಪ್ರಿಪರೇಟರಿ ಸೇರಿ ಹಲವು ಪರೀಕ್ಷೆ ನಡೆಸುವುದನ್ನು ಸರ್ಕಾರ ಬೇಡ ಎನ್ನುತ್ತದೆ. ಒಂದು ಕಡೆ ಬಹುಪರೀಕ್ಷೆಗಳನ್ನು ನಡೆಸಲು ಮುಂದಾಗಿದೆ ಎಂದು ಅವರು ಟೀಕಿಸಿದ್ದಾರೆ. ಇದನ್ನೂ ಓದಿ: Lok Sabha 2024: ಬೀದರ್ನಲ್ಲಿ ಬಿಜೆಪಿಗೆ ಮೈತ್ರಿ ಬಲ?- ಕಾಂಗ್ರೆಸ್ಗೆ ವರವಾಗುತ್ತಾ ‘ಕಮಲ’ ಟಿಕೆಟ್ ಒಳಜಗಳ?
ಬೆಂಗಳೂರು: ರಾಜ್ಯ ಪಠ್ಯ ಕ್ರಮದ 5, 8, 9,11 ತರಗತಿಗಳಿಗೆ ಬೋರ್ಡ್ ಎಕ್ಸಾಮ್ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ.
ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠದ 5,8,9,11 ತರಗತಿಗಳಿಗೆ ಬೋರ್ಡ್ ಎಕ್ಸಾಮ್ ರದ್ದು ಮಾಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಪಬ್ಲಿಕ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಹೀಗಾಗಿ ನಿಗದಿಯಂತೆ ಸೋಮವಾರದಿಂದ 5, 8, 9,11 ತರಗತಿಗಳಿಗೆ ಬೋರ್ಡ್ ಎಕ್ಸಾಮ್ ನಡೆಯಲಿವೆ. ಈ ಕುರಿತ ಗೊಂದಲಕ್ಕೆ ತೆರೆ ಬಿದ್ದಿದೆ.
ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ಬುಧವಾರ ತೀರ್ಪು ಪ್ರಕಟಿಸಿತ್ತು. ಹೈಕೋರ್ಟ್ನ ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11 ರವರೆಗೂ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿತ್ತು. ಇದನ್ನೂ ಓದಿ: ದೇಶದಲ್ಲೇ ಪಶ್ಚಿಮ ಬಂಗಾಳವು ಮಹಿಳೆಯರಿಗೆ ಸುರಕ್ಷಿತ ರಾಜ್ಯ: ಮಮತಾ ಬ್ಯಾನರ್ಜಿ
ಚಂಡೀಗಢ: ಹರಿಯಾಣದ ನುಹ್ ಜಿಲ್ಲೆಯ ಶಾಲೆಯೊಂದರಲ್ಲಿ 10 ನೇ ತರಗತಿಯ ಬೋರ್ಡ್ ಪರೀಕ್ಷೆಯ (10th Board Exam) ಸಂದರ್ಭದಲ್ಲಿ ನಕಲಿಗೆ ಸಹಕರಿಸಿರುವ ವಿಚಾರ ಬಯಲಾಗಿದೆ.
ನುಹ್ ಜಿಲ್ಲೆಯ ತೌರುನಲ್ಲಿರುವ ಚಂದ್ರಾವತಿ ಶಾಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಪರೀಕ್ಷೆ ಪ್ರಾರಂಭವಾದ ಸ್ವಲ್ಪ ಸಮಯದ ನಂತರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ವರದಿಯಾಗಿದೆ.
भाजपा के शासन में नकल का नज़ारा देखिए!
हरियाणा के नूंह में बोर्ड परीक्षा का ये हाल है, BJP वाले किस मुंह से ढिंढोरा पीटते घूमते हैं! pic.twitter.com/3uRZFEujI0
— Govind Singh Dotasra (@GovindDotasra) March 6, 2024
ಇದಕ್ಕೆ ಸಂಬಂಧಪಟ್ಟ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ಜನರು ಬೋರ್ಡ್ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳಿಗೆ ಚೀಟಿ ರವಾನಿಸಲು ಶಾಲೆಯ ಗೋಡೆಗಳನ್ನು ಏರುತ್ತಿರುವುದನ್ನು ಕಾಣಬಹುದಾಗಿದೆ. ಈ ಸಂಬಂಧ ವಿದ್ಯಾರ್ಥಿಗಳ ಜೊತೆಗಿದ್ದ ಪೋಷಕರು ಮತ್ತು ಸಂಬಂಧಿಕರು ಪರೀಕ್ಷೆಯ ಹೊರಗೆ ಗಲಾಟೆ ಸೃಷ್ಟಿಸಿದರು.
ಕೆಲವು ಮಕ್ಕಳು ಶಾಲೆಯ ಛಾವಣಿಯ ಮೇಲೆ ಹತ್ತಿದ ವೀಡಿಯೋ ನಾನು ನೋಡಿದೆ. ಘಟನೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ಜಿಲ್ಲಾ ಶಿಕ್ಷಣಾಧಿಕಾರಿ ಪರಮಜೀತ್ ಚಹಾಲ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ- ಸರ್ಕಾರಕ್ಕೆ ತೇಜಸ್ವಿ ಸೂರ್ಯ ಎಚ್ಚರಿಕೆ
ಪರೀಕ್ಷೆಯ ಸಮಯದಲ್ಲಿ ನಕಲು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಪರೀಕ್ಷಾ ಕೇಂದ್ರಗಳ ಹೊರಗೆ ಪೊಲೀಸರ ನಿಯೋಜನೆಯನ್ನು ಹೆಚ್ಚಿಸಲು ಶಿಕ್ಷಣ ಮಂಡಳಿಯು ಪೊಲೀಸರನ್ನು ವಿನಂತಿಸುತ್ತದೆ ಎಂದು ಬ್ಲಾಕ್ ಶಿಕ್ಷಣಾಧಿಕಾರಿ ಧರಂಪಾಲ್ ಹೇಳಿದರು.
ಬೆಂಗಳೂರು: ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ (Board Exam) ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ (High Court) ರದ್ದುಪಡಿಸಿ ಆದೇಶಿಸಿದೆ.
ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ಬುಧವಾರ ತೀರ್ಪು ಪ್ರಕಟಿಸಿತು. ಇದನ್ನೂ ಓದಿ: ಬೆಂಗಳೂರು ಬಿಸಿ ಬಿಸಿ; 4 ವರ್ಷದ ದಾಖಲೆ ಮುರಿದ ಸಿಲಿಕಾನ್ ಸಿಟಿ
ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9 ರಂದು ಎರಡು ಸುತ್ತೋಲೆಗಳನ್ನ ಹೊರಡಿಸಿ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ ಸಂಘ, ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದರೆ ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ. ಹಾಗಾಗಿ ಎಲ್ಲಾ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಕೋರಿದ್ದರು. ಇದನ್ನೂ ಓದಿ: ಕೆಲ ಪುರುಷರು ಅತ್ಯಾಚಾರ ಮಾಡಿದಾಗ, ಎಲ್ಲಾ ಭಾರತೀಯರಿಗೂ ನಾಚಿಕೆಯಾಗ್ಬೇಕು: ಗ್ಯಾಂಗ್ರೇಪ್ಗೆ ಗಾಯಕಿ ಕಿಡಿ
ಸರ್ಕಾರ ಪರ ವಕೀಲರು, ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗವೇ ಆಗಿದೆ. ಸಾಮಾನ್ಯ ಪಠ್ಯಕ್ರಮದಿಂದಲೇ ಕಲಿಕಾ ಚೇತರಿಗೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. ಮಕ್ಕಳ ಬುದ್ಧಿಮತ್ತೆಯನ್ನು ಸಕಾರಾತ್ಮಕವಾಗಿ ವೃದ್ಧಿಸುವ ನಿಟ್ಟಿನಲ್ಲಿ ಇದನ್ನು ರೂಪಿಸಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಲ್ಲ. ಹಾಗಾಗಿ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಪಡೆದುಕೊಂಡಿರುವುದು ಸರಿಯಿದೆ. ಅದರಂತೆ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಸಮರ್ಥಿಸಿದ್ದರು. ಇದನ್ನೂ ಓದಿ: ದೇಶದ ಮೊದಲ ನದಿಯೊಳಗಿನ ಮೆಟ್ರೋ ಸುರಂಗ ಮಾರ್ಗ ಲೋಕಾರ್ಪಣೆ
ನವದೆಹಲಿ: ರಾಜ್ಯ ಪಠ್ಯಕ್ರಮವಿರುವ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ (5th And 8th Class) ಮಕ್ಕಳಿಗೆ ಬೋರ್ಡ್ ಪರೀಕ್ಷೆ (Board Exam) ನಡೆಸಲು ಅನುಮತಿ ನೀಡಿದ ಹೈಕೋರ್ಟ್ (High Court) ಆದೇಶ ಪ್ರಶ್ನಿಸಿ ನೊಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ (ಕುಸ್ಮಾ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ.
ಸೋಮವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ ಕುಸ್ಮಾ ವಾದವನ್ನು ತಿರಸ್ಕರಿಸಿತು. ಕುಸ್ಮಾ ಪರ ವಾದ ಮಂಡಿಸಿದ ವಕೀಲರು, ಬೋರ್ಡ್ ಎಕ್ಸಾಂ ಅತಿ ಕಡಿಮೆ ಸಮಯದಲ್ಲಿ ಜಾರಿ ಮಾಡಲು ಹೊರಟಿದೆ. ಈ ಬಗ್ಗೆ ಪೊಷಕರಿಗೂ ಮಾಹಿತಿ ಇಲ್ಲ. ಮತ್ತು ಶಾಲೆಗಳ ಜೊತೆಗೂ ಇಲಾಖೆ ಚರ್ಚೆ ಮಾಡಿಲ್ಲ. ಇದರಿಂದ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ವಾದಿಸಿದರು. ಈ ವಾದವನ್ನು ಒಪ್ಪದ ಕೋರ್ಟ್, ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿ ಅರ್ಜಿ ವಜಾ ಮಾಡಿತು.
ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಇದನ್ನು ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿತ್ತು. ಪೋಷಕರ ಮನವಿಗೆ ಸಮ್ಮತಿಸಿ 5 ಮತ್ತು 8ನೇ ತರಗತಿಯ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ನ ಏಕಸದಸ್ಯ ಪೀಠ ರದ್ದುಪಡಿಸಿತ್ತು. ಇದನ್ನೂ ಓದಿ: ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್ ಪಟ್ಟಿ ಔಟ್ – ಯಾರಿಗೆ ವರ್ಷಕ್ಕೆ ಎಷ್ಟು ಸಂಭಾವನೆ?
ಇದರ ವಿರುದ್ಧ ಶಿಕ್ಷಣ ಇಲಾಖೆ ಮೇಲ್ಮನವಿ ಸಲ್ಲಿಸಿತ್ತು. ನಂತರ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿ ಹೈಕೋರ್ಟ್ ದ್ವಿಸದಸ್ಯ ತೀರ್ಪು ನೀಡಿತ್ತು. ಈ ವೇಳೆ ಮಧ್ಯಪ್ರವೇಶ ಮಾಡಿದ ನೊಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್ ಆದೇಶಕ್ಕೆ ತಡೆ ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಸದ್ಯ ಸುಪ್ರೀಂಕೋರ್ಟ್ ಅರ್ಜಿ ವಜಾ ಮಾಡಿರುವ ಹಿನ್ನೆಲೆ ಬೋರ್ಡ್ ಪರೀಕ್ಷೆಗಳು ಸರಾಗವಾಗಿ ನಡೆಯಲಿವೆ. ಇದನ್ನೂ ಓದಿ: ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ರಾಮನಗರ ರಾಜಕೀಯ ಘಟಾನುಘಟಿಗಳ ತವರು
ನವದೆಹಲಿ: 5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ (Board Exam) ನಡೆಸಲು ಷರತ್ತುಬದ್ಧ ಅನುಮತಿ ನೀಡಿದ್ದ ಹೈಕೋರ್ಟ್ನ (High Court) ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ (School) ಸಂಘ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಪ್ರಕರಣವನ್ನು ತುರ್ತು ವಿಚಾರಣೆ ನಡೆಸುವಂತೆ ಸಂಘದ ಪರ ವಕೀಲರು ಮನವಿ ಮಾಡಿದ್ದಾರೆ.
ಸೋಮವಾರ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಪೀಠದ ಮುಂದೆ ಪ್ರಸ್ತಾಪಿಸಿದ ವಕೀಲರು, ರಾಜ್ಯಮಟ್ಟದ ‘ಬೋರ್ಡ್ ಪರೀಕ್ಷೆ’ಗಳನ್ನು ನಡೆಸುವುದರಿಂದ ಮೌಲ್ಯಮಾಪನ ವಿಧಾನವು ವಿದ್ಯಾರ್ಥಿಗಳು (Student) ಮತ್ತು ಶಿಕ್ಷಕರ (Teacher) ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರವು ಪೋಷಕರ ಮತ್ತು ಶಾಲೆಗಳ ಜೊತೆಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ವಾದಿಸಿದರು.
ವಾದ ಆಲಿಸಿದ ಸಿಜೆಐ ಡಿ.ವೈ ಚಂದ್ರಚೂಡ್ ಮಾ. 27ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದರು. ಈ ವೇಳೆ ಮಧ್ಯಪ್ರವೇಶ ಮಾಡಿದ ವಕೀಲರು ಮಾ. 27ರಂದು ಪರೀಕ್ಷೆಗಳು ಆರಂಭವಾಗಲಿದೆ. ಹೀಗಾಗಿ ಇದಕ್ಕೂ ಮುನ್ನ ವಿಚಾರಣೆ ನಡೆಸಬೇಕು ಎಂದು ಹೇಳಿದರು. ಇದಕ್ಕೆ ಗರಂ ಆದ ಸಿಜೆಐ, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮ ಎಂದು ಹೈಕೋರ್ಟ್ಗೆ ಗೊತ್ತಿದೆ ಎಂದರು.
ವಾದ ಮುಂದುವರಿಸಿದ ವಕೀಲರು ನಾವು 4,000 ಶಾಲೆಗಳನ್ನು ಪ್ರತಿನಿಧಿಸುತ್ತೇವೆ, ನಮ್ಮ ಅಭಿಪ್ರಾಯ ಕೇಳಬೇಕು ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಸಿಜೆಐ ಮಾ. 27ರಂದೇ ನಿಮ್ಮ ಅಭಿಪ್ರಾಯ ಕೇಳಲಾಗುವುದು. ಯಾವುದೇ ಬದಲಾವಣೆ ಇಲ್ಲ ಎಂದರು. ಇದನ್ನೂ ಓದಿ: 5, 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿತ್ತು. ಆದರೆ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಷರತ್ತುಗಳೊಂದಿಗೆ ಬೋರ್ಡ್ ಪರೀಕ್ಷೆ ನಡೆಸಲು ವಿಭಾಗೀಯ ಪೀಠ ಆದೇಶಿಸಿತ್ತು. ಈ ಆದೇಶವನ್ನು ಸದ್ಯ ಸುಪ್ರೀಂಕೋರ್ಟ್ನಲ್ಲಿ (Supreme Court) ಪ್ರಶ್ನೆ ಮಾಡಲಾಗಿದೆ. ಇದನ್ನೂ ಓದಿ: ಶೋಭಾ ಡೆವಲಪರ್ಸ್ ಕಚೇರಿಗೆ ಐಟಿ ಶಾಕ್
ಬೆಂಗಳೂರು: ರಾಜ್ಯ ಪಠ್ಯಕ್ರಮ ಹೊಂದಿದ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟ ಬೆನ್ನಲ್ಲೇ, ಪರೀಕ್ಷೆ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ನಿಂದ ವೇಳಾಪಟ್ಟಿ ಪ್ರಕಟವಾಗಿದೆ. ಹೈಕೋರ್ಟ್ ಆದೇಶದ ಮೇರೆಗೆ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
5ನೇ ತರಗತಿಗೆ ಮಾರ್ಚ್ 27 ರಿಂದ ಮಾರ್ಚ್ 30ರ ವರೆಗೆ ಹಾಗೂ 8ನೇ ತರಗತಿಗೆ ಮಾರ್ಚ್ 27 ರಿಂದ ಏಪ್ರಿಲ್ 1ರ ವರೆಗೆ ಪರೀಕ್ಷೆ ನಡೆಯಲಿದೆ. ಆಯಾ ಶಾಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ಫಲಿತಾಂಶ ವಿದ್ಯಾರ್ಥಿಗೆ ಮಾತ್ರ ತಿಳಿಸಬೇಕು. ಗೌಪ್ಯತೆ ಕಾಪಾಡಲು ಶಿಕ್ಷಣ ಇಲಾಖೆ ಸೂಚಿಸಿದೆ.
5ನೇ ತರಗತಿ ವೇಳಾಪಟ್ಟಿ
ಮಾ.27 – ಪ್ರಥಮ ಭಾಷೆ
ಮಾ.28 – ದ್ವಿತೀಯ ಭಾಷೆ
ಮಾ.29 – ಪರಿಸರ ಅಧ್ಯಯನ
ಮಾ.30 – ಗಣಿತ
8ನೇ ತರಗತಿ ವೇಳಾಪಟ್ಟಿ
ಮಾ.27 – ಪ್ರಥಮ ಭಾಷೆ
ಮಾ.28 – ದ್ವಿತೀಯ ಭಾಷೆ
ಮಾ.29 – ತೃತೀಯ ಭಾಷೆ
ಮಾ.30 – ಗಣಿತ
ಮಾ.31 – ವಿಜ್ಞಾನ
ಏ.1 – ಸಮಾಜ ವಿಜ್ಞಾನ
ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. 10 ದಿನಗಳ ಬಳಿಕ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ. ಆ ಮೂಲಕ ಪೋಷಕರ ಗೊಂದಲಕ್ಕೂ ತೆರೆ ಎಳೆದಿದೆ.
ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದ್ದು, ಬೋರ್ಡ್ ಪರೀಕ್ಷೆ ನಡೆಸಲು ಆದೇಶ ಹೊರಡಿಸಿದೆ.
10 ದಿನದ ಬಳಿಕ ಪರೀಕ್ಷೆ ನಡೆಸಬೇಕು. ಮಾ.27 ನೇ ತಾರೀಖಿನಿಂದ ಪರೀಕ್ಷೆ ಪ್ರಾರಂಭಿಸಬೇಕು. ಆದರೆ ಯಾವುದೇ ವಿದ್ಯಾರ್ಥಿಗಳನ್ನು ಫೇಲ್ ಮಾಡುವಂತಿಲ್ಲ ಎಂದು ಸೂಚಿಸಿದೆ.
ನ್ಯಾ.ನರೇಂದರ್ ಹಾಗೂ ನ್ಯಾ. ಅಶೋಕ್ ಕಿಣಗಿ ಅವರಿದ್ದ ಪೀಠವು ಅರ್ಜಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ. ಕುಸ್ಮಾ ಪರವಾಗಿ ವಕೀಲ ಕೆ.ವಿ.ಧನಂಜಯ ಹಾಗೂ ಸರ್ಕಾರದ ಪರವಾಗಿ ಎಎಜಿ ಧ್ಯಾನ್ಚಿನ್ನಪ್ಪ ವಾದ ಮಂಡಿಸಿದರು.
ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.