Tag: ಬೋಲ್ಟ್

  • ಮಂಗಳೂರಿನ ಆಟೋದಲ್ಲಿ ಕುಕ್ಕರ್‌ ಅನಿರೀಕ್ಷಿತವಾಗಿ ಸ್ಪೋಟಗೊಂಡಿಲ್ಲ, ಇದೊಂದು ಉಗ್ರ ಕೃತ್ಯ: ಪ್ರವೀಣ್‌ ಸೂದ್

    ಮಂಗಳೂರಿನ ಆಟೋದಲ್ಲಿ ಕುಕ್ಕರ್‌ ಅನಿರೀಕ್ಷಿತವಾಗಿ ಸ್ಪೋಟಗೊಂಡಿಲ್ಲ, ಇದೊಂದು ಉಗ್ರ ಕೃತ್ಯ: ಪ್ರವೀಣ್‌ ಸೂದ್

    ಬೆಂಗಳೂರು: ಮಂಗಳೂರಿನ(Mangaluru) ಅಟೋದಲ್ಲಿ ಕುಕ್ಕರ್‌ ಅನಿರೀಕ್ಷಿತವಾಗಿ ಸ್ಪೋಟಗೊಂಡಿದ್ದಲ್ಲ. ಇದೊಂದು ಭಯೋತ್ಪಾದನಾ ಕೃತ್ಯ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್(Praveen Sood) ಹೇಳಿದ್ದಾರೆ.

    ಈ ಸಂಬಂಧ ಟ್ವೀಟ್‌ ಮಾಡಿದ ಅವರು, ಉದ್ದೇಶಪೂರ್ವಕವಾಗಿ ಸಾವು ನೋವು ಹಾನಿ ಉಂಟು ಮಾಡಲು ಮಾಡಿದ್ದ ಪ್ಲಾನ್ ಇದಾಗಿದ್ದು ಕೇಂದ್ರ ತನಿಖಾ ಸಂಸ್ಥೆಗಳ ಜೊತೆ ಕರ್ನಾಟಕ ಪೊಲೀಸ್‌ ಸೂಕ್ಷ್ಮವಾಗಿ, ಆಳವಾಗಿ ತನಿಖೆ ನಡೆಸುತ್ತಿದೆ ಎಂದಿದ್ದಾರೆ.‌

    ಆಟೋದಲ್ಲಿ ಕುಕ್ಕರ್ ಸ್ಫೋಟ(Cooker Blast) ಪ್ರಕರಣ ತನಿಖೆಯ ಚುರುಕುಗೊಂಡಿದ್ದು ಪರಿಶೀಲನೆ ವೇಳೆ ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿದೆ. ನಟ್, ಬೋಲ್ಟ್‌, ಬ್ಯಾಟರಿ, ಸರ್ಕಿಟ್ ರೀತಿಯ ವೈರಿಂಗ್ ಇರುವ ವಸ್ತುಗಳು ಪತ್ತೆಯಾಗಿದೆ. ಲಘು ತೀವ್ರತೆ ಇರುವ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ(FSL), ಬಾಂಬ್ ನಿಷ್ಕ್ರೀಯ ದಳದಿಂದ(Bomb Disposal Squad) ತೀವ್ರ ಪರಿಶೀಲನೆ ನಡೆಯುತ್ತಿದೆ. ಇದನ್ನೂ ಓದಿ: ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ, ಹೊತ್ತಿ ಉರಿದ ಆಟೋ – ಚಾಲಕ, ಸವಾರನಿಗೆ ಗಾಯ

     

    ಶನಿವಾರ ಸಂಜೆ 5 ಗಂಟೆಯ ವೇಳೆ ಮಂಗಳೂರಿನ(Mangaluru) ಪಂಪ್‍ವೆಲ್‍ನಿಂದ ನಾಗುರಿ ಕಡೆ ಚಲಿಸುತ್ತಿದ್ದ ಆಟೋ ನಿಗೂಢ ಸ್ಫೋಟಗೊಂಡಿದೆ. ದಾರಿ ಮಧ್ಯೆ ವ್ಯಕ್ತಿಯೊಬ್ಬ ಕೈಯಲ್ಲಿ ಕುಕ್ಕರ್ ಹಿಡಿದುಕೊಂಡು ಆಟೋ ಹತ್ತಿದ್ದು ನಾಗುರಿಗೆ ಹೋಗಲು ಚಾಲಕನಿಗೆ ಸೂಚಿಸಿದ್ದ. ಆದರೆ ಕೆಲವೇ ಕ್ಷಣಗಳಲ್ಲಿ ನಾಗುರಿಯ ಕಂಕನಾಡಿ ಪೊಲೀಸ್ (Police) ಠಾಣೆಯ ಎದುರು ಕ್ಷಣಗಳಲ್ಲಿ ಆಟೋದ ಒಳಗೆ ಸ್ಫೋಟಗೊಂಡಿದ್ದು ಪ್ರಯಾಣಿಕನ ಕೈಯಲ್ಲಿದ್ದ ಕುಕ್ಕರ್ ಛಿದ್ರಗೊಂಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಮಂಗಳೂರಿನ ಆಟೋದಲ್ಲಿ ಕುಕ್ಕರ್ ಸ್ಫೋಟ – ನಟ್‌, ಬೋಲ್ಟ್‌, ಬ್ಯಾಟರಿ ಪತ್ತೆ

    ಮಂಗಳೂರಿನ ಆಟೋದಲ್ಲಿ ಕುಕ್ಕರ್ ಸ್ಫೋಟ – ನಟ್‌, ಬೋಲ್ಟ್‌, ಬ್ಯಾಟರಿ ಪತ್ತೆ

    ಮಂಗಳೂರು: ನಗರದ ಆಟೋದಲ್ಲಿ ಕುಕ್ಕರ್ ಸ್ಫೋಟ(Cooker Blast) ಪ್ರಕರಣ ತನಿಖೆಯ ಚುರುಕುಗೊಂಡಿದ್ದು ಪರಿಶೀಲನೆ ವೇಳೆ ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿದ್ದು ಹೈ ಅಲರ್ಟ್‌ ಘೋಷಣೆಯಾಗಿದೆ.

    ನಟ್, ಬೋಲ್ಟ್‌, ಬ್ಯಾಟರಿ, ಸರ್ಕಿಟ್ ರೀತಿಯ ವೈರಿಂಗ್ ಇರುವ ವಸ್ತುಗಳು ಪತ್ತೆಯಾಗಿದೆ. ಲಘು ತೀವ್ರತೆ ಇರುವ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ(FSL), ಬಾಂಬ್ ನಿಷ್ಕ್ರೀಯ ದಳದಿಂದ(Bomb Disposal Squad) ತೀವ್ರ ಪರಿಶೀಲನೆ ನಡೆಯುತ್ತಿದೆ.

    ಬಾಕ್ಸ್ ಮತ್ತು ಬ್ಯಾಗ್‌ನಿಂದಲೇ ನಿಗೂಢ ಸ್ಪೋಟ ಸಂಭವಿಸಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸ್ಪೋಟದ ತೀವ್ರತೆಗೆ ಪ್ರಯಾಣಿಕನ ದೇಹ ಶೇ.50ರಷ್ಟು ಸುಟ್ಟು ಹೋಗಿದ್ದು ಚಿಕಿತ್ಸೆ ಮುಂದುವರಿದಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬರುತ್ತಿದ್ದ ಆಟೋವವನ್ನು ನಾಗುರಿ ಬಳಿ ಪ್ರಯಾಣಿಕ ಹತ್ತಿದ್ದ. ಆಟೋ ಒಂದು ಕಿ.ಮೀ ಕ್ರಮಿಸುವಷ್ಟರಲ್ಲಿ ನಿಗೂಢ ಸ್ಫೋಟಗೊಂಡಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ.

    ಪರಿಶೀಲನೆ ವೇಳೆ ಪ್ರೇಮ್ ರಾಜ್ ಕನೋಗಿ ಎಂಬ ಹೆಸರಿ‌ನ ಐಡಿ ದಾಖಲೆ ಪತ್ತೆಯಾಗಿದೆ. ದಾಖಲೆಯಲ್ಲಿ ಮೈಸೂರಿನ ವಿಳಾದ ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸ್‌ ತಂಡ ಮೈಸೂರಿಗೆ ತೆರಳಿದೆ. ಪ್ರಯಾಣಿಕನ ಬಳಿ 30 ಸಾವಿರ ರೂ. ನಗದು ಪತ್ತೆಯಾಗಿದೆ. ಇದನ್ನೂ ಓದಿ: ಲವ್ ಜಿಹಾದ್ ಆರೋಪ – ದೂರು ನೀಡಿದರೂ ಕ್ರಮ ಕೈಗೊಳ್ಳದ ಇನ್ಸ್‌ಪೆಕ್ಟರ್‌ ನಾಸಿರ್ ಹುಸೇನ್

    ಏನಿದು ಘಟನೆ?
    ಶನಿವಾರ ಸಂಜೆ 5 ಗಂಟೆಯ ವೇಳೆ ಮಂಗಳೂರಿನ(Mangaluru) ಪಂಪ್‍ವೆಲ್‍ನಿಂದ ನಾಗುರಿ ಕಡೆ ಚಲಿಸುತ್ತಿದ್ದ ಆಟೋ ನಿಗೂಢ ಸ್ಫೋಟಗೊಂಡಿದೆ. ದಾರಿ ಮಧ್ಯೆ ಸವಾರನೋರ್ವ ಕೈಯಲ್ಲಿ ಕುಕ್ಕರ್ ಹಿಡಿದುಕೊಂಡು ಆಟೋ ಹತ್ತಿದ್ದು ನಾಗುರಿಗೆ ಹೋಗಲು ಚಾಲಕನಿಗೆ ಸೂಚಿಸಿದ್ದ. ಆದರೆ ಕೆಲವೇ ಕ್ಷಣಗಳಲ್ಲಿ ನಾಗುರಿಯ ಕಂಕನಾಡಿ ಪೊಲೀಸ್ (Police) ಠಾಣೆಯ ಎದುರು ಆಟೋದ ಒಳಗೆ ಸ್ಫೋಟಗೊಂಡಿದ್ದು ಸವಾರನ ಕೈಯಲ್ಲಿದ್ದ ಕುಕ್ಕರ್ ಛಿದ್ರಗೊಂಡಿತ್ತು.

    Live Tv
    [brid partner=56869869 player=32851 video=960834 autoplay=true]

  • ವ್ಯಕ್ತಿ ಹೊಟ್ಟೆಯಲ್ಲಿ 1ಕೆ.ಜಿ ಮೊಳೆ, ಬೋಲ್ಟ್, ಸ್ಕ್ರೂ ನೋಡಿ ವೈದ್ಯರು ಶಾಕ್

    ವ್ಯಕ್ತಿ ಹೊಟ್ಟೆಯಲ್ಲಿ 1ಕೆ.ಜಿ ಮೊಳೆ, ಬೋಲ್ಟ್, ಸ್ಕ್ರೂ ನೋಡಿ ವೈದ್ಯರು ಶಾಕ್

    ಮಾಸ್ಕೋ: ವ್ಯಕ್ತಿಯೋರ್ವನ ಹೊಟ್ಟೆಯಿಂದ 1ಕಿಲೋಗ್ರಾಂಗಿಂತಲೂ ಹೆಚ್ಚು ಮೊಳೆಗಳು, ಬೋಲ್ಟ್‌ಗಳು, ತಿರುಪು ಇರುವುದನ್ನು ಕಂಡು ವೈದ್ಯರು ಶಾಕ್ ಆಗಿದ್ದಾರೆ.

    ಹೌದು, ಮದ್ಯವ್ಯಸನನಾಗಿದ್ದ ವ್ಯಕ್ತಿ, ಮದ್ಯ ಸೇವನೆಯನ್ನು ತ್ಯಜಿಸಿದ ನಂತರ ಲೋಹದಂತಹ ವಸ್ತುಗಳನ್ನು ಸೇವಿಸಲು ಆರಂಭಿಸಿದ್ದಾನೆ. ಆದರೆ ನಂತರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಆತನನ್ನು ಬಾಲ್ಟಿನ್ ನಗರದ ಕ್ಲೈಪೆಡಾದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ:  ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR

    Nail bolt

    ಈ ವೇಳೆ ವ್ಯಕ್ತಿ ಹೊಟ್ಟೆಯನ್ನು ಎಕ್ಸ್ ರೇ ಮಾಡಿದ ವೈದ್ಯರಿಗೆ 4 ಇಂಚಿರುವ ಆತನ ಹೊಟ್ಟೆಯಲ್ಲಿ ಲೋಹದ ತುಂಡುಗಳಿರುವ ವಿಚಾರ ತಿಳಿದುಬಂದಿದೆ. ಮನುಷ್ಯ ದೇಹದಲ್ಲಿ ಇಷ್ಟೆಲ್ಲಾ ಇದ್ದರೂ ಆತ ಇದ್ದಾನೆ ಎಂದರೆ ಇದು ಸಾಮಾನ್ಯವಾದಂತಹ ಪ್ರಕರಣವಲ್ಲ. ಇದೊಂದು ವಿಭಿನ್ನವಾದಂತಹ ಪ್ರಕರಣ ಎಂದು ವೈದ್ಯರು ತಿಳಿಸಿದ್ದಾರೆ.

    ನಂತರ ಸತತ ಮೂರಗಂಟೆಗಳ ಎಲ್ಲಾ ಲೋಹದ ವಸ್ತುಗಳನ್ನು ಹೊರ ತೆಗೆಯುವ ಮೂಲಕ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಕುರಿತಂತೆ ವೈದ್ಯ ಸರುನಾಸ್ ಡೈಲಿಡೆನಾ, ಎಕ್ಸ್ ರೇ ಬಳಿಕ ಮೂರು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ, ವ್ಯಕ್ತಿಯ ಹೊಟ್ಟೆಯಿಂದ ಎಲ್ಲಾ ವಿದೇಶಿ ಲೋಹಗಳನ್ನು ಹೊರತೆಗೆಯಲಾಯಿತು. ಈ ವೇಳೆ ಸಣ್ಣ, ಸಣ್ಣ ಲೋಹಗಳನ್ನು ಹೊಟ್ಟೆಯಿಂದ ಹೊರತೆಗೆಯಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಜನಸಂದಣಿ ಮಧ್ಯೆಯೇ ಮಹಿಳೆ ಬರ್ಬರ ಹತ್ಯೆ – ಬೆಚ್ಚಿಬಿದ್ದ ದೆಹಲಿ ಮಂದಿ

    ಈ ಸಂಬಂಧ ಕ್ಲೈಪೆಡಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಆಲ್ಗಿರ್ದಾಸ್ ಸ್ಪೆಪಾವಿಸಿಯಸ್ ನಾವು ಈ ರೀತಿಯ ಪ್ರಕರಣವನ್ನು ಇಲ್ಲಿಯವರೆಗೂ ನೋಡೆ ಇಲ್ಲ. ಕಳೆದ ಒಂದು ತಿಂಗಳ ಹಿಂದೆ ಮದ್ಯಸೆವನೆಯನ್ನು ನಿಲ್ಲಿಸಿದ ನಂತರ ಲೋಹಗಳನ್ನು ನುಂಗಲು ವ್ಯಕ್ತಿ ಆರಂಭಿಸಿದ. ಇದೀಗ ವ್ಯಕ್ತಿ ಸ್ಥಿತಿ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ ಎಂದು ತಿಳಿಸಿದ್ದಾರೆ.

  • ಸಿಗ್ನೇಚರ್ ಸೇತುವೆಯ ನಟ್, ಬೋಲ್ಟ್ ಕದ್ದ ಕಳ್ಳರು!

    ಸಿಗ್ನೇಚರ್ ಸೇತುವೆಯ ನಟ್, ಬೋಲ್ಟ್ ಕದ್ದ ಕಳ್ಳರು!

    ನವದೆಹಲಿ: ಒಂದು ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಸಿಗ್ನೇಚರ್ ಸೇತುವೆಯ ಕೇಬಲ್ ಜೋಡಣೆಗೆ ಬಳಸಿದ್ದ ನಟ್ ಮತ್ತು ಬೋಲ್ಟ್ ಗಳನ್ನು ಕಳ್ಳತನ ಮಾಡಲಾಗಿದೆ.

    ನವೆಂಬರ್ 5ಕ್ಕೆ ಲೋಕಾರ್ಪಣೆಯಾದ ಬಳಿಕ ಸ್ಟಂಟ್, ಸೆಲ್ಫಿ ವಿಚಾರದಲ್ಲಿ ಸುದ್ದಿಯಾಗಿದ್ದ ಸಿಗ್ನೇಚರ್ ಸೇತುವೆಯ ನಟ್ ಮತ್ತು ಬೋಲ್ಟ್ ಗಳನ್ನೇ ಕಳ್ಳರು ಕದ್ದಿದ್ದು ಈಗ ಭದ್ರತೆಯ ವಿಚಾರದಲ್ಲಿ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

    ನಟ್, ಬೋಲ್ಟ್ ಗಳನ್ನು ಬಳಸಿ ಮೇಲ್ಮೈಯಿಂದ ಕಂಬಗಳನ್ನು ಸಂಪರ್ಕಿಸುವಂತೆ ಕೇಬಲ್‍ಗಳನ್ನು ಹಾಕಲಾಗಿದೆ. ಪ್ರತಿಯೊಂದು ಕೇಬಲ್ ತಲಾ 12 ನಟ್, ಬೋಲ್ಟ್‍ಗಳ ಮೇಲೆ ನಿಂತಿದ್ದು ಕಳ್ಳರು ಕದ್ದಿರುವ ವಿಚಾರ ಸೋಮವಾರ ಬೆಳಕಿಗೆ ಬಂದೆ. ಇದನ್ನೂ ಓದಿ: ಸಿಗ್ನೇಚರ್ ಬ್ರಿಡ್ಜ್ ಮೇಲೆ ಬಟ್ಟೆ ಬಿಚ್ಚಿ ಮಂಗಳಮುಖಿಯರ ಡ್ಯಾನ್ಸ್

    ದೆಹಲಿ ಪ್ರವಾಸೋದ್ಯಮ ಮತ್ತು ಸಾರಿಗೆ ಅಭಿವೃದ್ಧಿ ನಿಗಮ (ಡಿಟಿಟಿಡಿಸಿ) ಎಂಜಿನಿಯರುಗಳು ನಡೆಸಿದ ಪರಿಶೀಲನೆ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಕಳ್ಳತನವಾಗದೇ ಇರಲು ವೆಲ್ಡಿಂಗ್ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸಿಸಿಟಿವಿ ಅಳವಡಿಸದ್ದು ಮತ್ತು ಭದ್ರತಾ ಸಿಬ್ಬಂದಿ ಇಲ್ಲದ ಕಾರಣ ಕಳ್ಳತನ ನಡೆದಿದ್ದು ಮುಂದೆ ಸಿಸಿಟಿವಿ ಅಳವಡಿಸಲಾಗುವುದು. ಸೇತುವೆ ಸಂಬಂಧಿಸಿದ ಕೆಲಸ ಇನ್ನೂ ಪೂರ್ಣಗೊಳ್ಳದ ಕಾರಣ ಡಿಟಿಡಿಸಿ ಇನ್ನೂ ದೆಹಲಿಯ ಲೋಕೋಪಯೋಗಿ ಇಲಾಖೆ ಸುಪರ್ದಿಗೆ ಸೇತುವೆಯನ್ನು ನೀಡಿಲ್ಲ. ಇದನ್ನೂ ಓದಿ:ಗೋವಾದಿಂದ ಮುಂಬೈಗೆ ಮರಳಿದ ತೇಜಸ್ ರೈಲಿನ ಸ್ಥಿತಿ ನೋಡಿ ಅಧಿಕಾರಿಗಳಿಗೆ ಶಾಕ್!

    1997ರಲ್ಲಿ ವಜೀರಾಬಾದ್ ಸೇತುವೆಯಿಂದ ಶಾಲಾ ಬಸ್ ಉರುಳಿ, 22 ಮಕ್ಕಳು ಯಮುನಾ ನದಿಯಲ್ಲಿ ಕೊನೆಯುಸಿರೆಳೆದಿದ್ದರು. ಈ ದುರಂತ ನಡೆದ ಬಳಿಕ ಸರ್ಕಾರ ಬೃಹತ್ ತೂಗು ಸೇತುವೆ ಕಾಮಗಾರಿಯನ್ನು ಪ್ರಾರಂಭಿಸಿತ್ತು. 2010ರಲ್ಲಿ ಪೂರ್ಣಗೊಳ್ಳಬೇಕಿದ್ದ ಕಾಮಗಾರಿ ಹಣಕಾಸು ತೊಂದರೆಯಿಂದ ನಿಂತು ಹೋಗಿತ್ತು. ಸುಮಾರು 1594 ಕೋಟಿ ರೂ. ವೆಚ್ಚದಲ್ಲಿ 154 ಮೀಟರ್ ಉದ್ದದ ನಿರ್ಮಾಣಗೊಂಡಿರುವ ಈ ಸೇತುವೆಯನ್ನು ನವೆಂಬರ್ ನಲ್ಲಿ ಉದ್ಘಾಟಿಸಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv