Tag: ಬೌಂಡರಿ

  • ಆರ್‌ಸಿಬಿ ವಿರುದ್ಧ 1 ಬೌಂಡರಿ, 5 ಸಿಕ್ಸರ್ – ಟಿ-20 ಇತಿಹಾಸದಲ್ಲೇ ಗೇಲ್ ಹೊಸ ದಾಖಲೆ

    ಆರ್‌ಸಿಬಿ ವಿರುದ್ಧ 1 ಬೌಂಡರಿ, 5 ಸಿಕ್ಸರ್ – ಟಿ-20 ಇತಿಹಾಸದಲ್ಲೇ ಗೇಲ್ ಹೊಸ ದಾಖಲೆ

    ಅಬುಧಾಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಐದು ಸಿಕ್ಸರ್ ಮತ್ತು ಒಂದು ಬೌಂಡರಿ ಸಿಡಿಸಿದ ಪಂಜಾಬ್ ತಂಡದ ದೈತ್ಯ ಆಟಗಾರ ಗೇಲ್, ಟಿ-20 ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ.

    ನಿನ್ನೆ ಶಾರ್ಜಾ ಮೈದಾನದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ ಪಂದ್ಯದಲ್ಲಿ ಪಂಜಾಬ್ ತಂಡ 8 ವಿಕೆಟ್‍ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ನಾಯಕ ಕೆಎಲ್ ರಾಹುಲ್ ಮತ್ತು ಯುನಿವರ್ಸಲ್ ಬಾಸ್ ಕ್ರಿಸ್ ಗೇಲ್ ಅವರು ಅರ್ಧಶತಕ ಸಿಡಿಸಿ ಮಿಂಚಿದರು. ಈ ಮೂಲಕ ಪಂಜಾಬ್ ತಂಡ ಐಪಿಎಲ್-2020ಯಲ್ಲಿ ಎರಡನೇ ಗೆಲುವು ಸಾಧಿಸಿದೆ.

    ಬೆಂಗಳೂರು ವಿರುದ್ಧ ನಡೆದ ಪಂದ್ಯದಲ್ಲಿ ಅಬ್ಬರಿಸಿದ ಗೇಲ್, 45 ಎಸೆತದಲ್ಲಿ ಒಂದು ಬೌಂಡರಿ ಮತ್ತು ಐದು ಭರ್ಜರಿ ಸಿಕ್ಸರ್ ಸಮೇತ 53 ರನ್ ಸಿಡಿಸಿ ಪಂದ್ಯದ ಕೊನೆಯ ಓವರಿನಲ್ಲಿ ರನೌಟ್ ಆದರು. ಆದರೆ ಒಂದು ಬೌಂಡರಿ ಮತ್ತು ಐದು ಭರ್ಜರಿ ಸಿಕ್ಸರ್ ನೊಂದಿಗೆ ಟಿ-20 ಇತಿಹಾದಲ್ಲೇ ಫೋರ್ ಮತ್ತು ಸಿಕ್ಸ್ ಮೂಲಕ 10 ಸಾವಿರ ರನ್ ಮೂಲಕ ಏಕೈಕ ಬ್ಯಾಟ್ಸ್ ಮ್ಯಾನ್ ಎಂಬ ಹೊಸ ದಾಖಲೆ ಬರೆದಿದ್ದಾರೆ.

    ಗೇಲ್ ಟಿ-20 ಮಾದರಿಯ ಆಟಕ್ಕೆ ಹೇಳಿ ಮಾಡಿಸಿದಂತ ಬ್ಯಾಟ್ಸ್‍ಮ್ಯಾನ್ ಆಗಿದ್ದಾರೆ. ಈ ಹೊಡಿಬಡಿ ಆಟದಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದಿರುವ ಅವರು, ತಮ್ಮ ವೃತ್ತಿಜೀವನದಲ್ಲಿ ಅಂತಾರಾಷ್ಟ್ರೀಯ ಮತ್ತು ಇತರ ಲೀಗ್‍ಗಳಿಂದ ಬರೋಬ್ಬರಿ 397 ಟಿ-20 ಇನ್ನಿಂಗ್ಸ್ ಗನ್ನು ಆಡಿದ್ದಾರೆ. ಇದರಲ್ಲಿ ಒಟ್ಟು 1,027 ಬೌಂಡರಿಗಳು ಮತ್ತು 983 ಸಿಕ್ಸರ್ ಗಳನ್ನು ಭಾರಿಸಿದ್ದಾರೆ. ಈ ಮೂಲಕ ಟಿ-20ಯಲ್ಲಿ 13,349 ರನ್‍ಗಳಿಸಿದ್ದಾರೆ. ಇದರಲ್ಲಿ 10,006 ರನ್ ಸಿಕ್ಸ್ ಮತ್ತು ಫೋರ್ ಗಳಿಂದ ಬಂದಿವೆ.

    ಜೊತೆಗೆ ಐಪಿಎಲ್‍ನಲ್ಲೂ ಕೂಡ ಗೇಲ್ ಅವರು ಹಲವಾರು ದಾಖಲೆ ಮಾಡಿದ್ದಾರೆ. 125 ಐಪಿಎಲ್ ಪಂದ್ಯಗಳಿಂದ 4,537 ರನ್ ಗಳಿಸಿ ಐಪಿಎಲ್‍ನಲ್ಲಿ ಅತೀ ಹೆಚ್ಚು ರನ್ ಗಳಿಸಿದವರ ಪೈಕಿ 9ನೇ ಸ್ಥಾನದಲ್ಲಿದ್ದಾರೆ. 41.13 ಸರಾಸರಿಯಲ್ಲಿ 6 ಶತಕ ಮತ್ತು 29 ಅರ್ಧಶತಕ ಭಾರಿಸಿದ್ದಾರೆ. ಐಪಿಎಲ್‍ನಲ್ಲಿ 331 ಸಿಕ್ಸರ್ ಭಾರಿಸಿ ಅತೀ ಹೆಚ್ಚು ಸಿಕ್ಸರ್ ಭಾರಿಸಿ ಆಟಗಾರ ಎನಿಸಿಕೊಂಡಿದ್ದಾರೆ. 6 ಶತಕ ಸಿಡಿಸಿ ಅತಿ ಹೆಚ್ಚು ಶತಕ ಸಿಡಿಸಿದ ಬ್ಯಾಟ್ಸ್ ಮ್ಯಾನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜೊತೆಗೆ 175 ರನ್ ಹೊಡೆದು ಅತಿ ಹೆಚ್ಚು ವೈಯಕ್ತಿಕ ರನ್ ಸ್ಕೋರರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

  • ಅನಿಲ್ ಕುಂಬ್ಳೆ ನೇತೃತ್ವದಲ್ಲಿ ‘ಬೌಂಡರಿ ಕೌಂಟ್’ ವಿವಾದಕ್ಕೆ ಬ್ರೇಕ್ ಬೀಳುತ್ತಾ?

    ಅನಿಲ್ ಕುಂಬ್ಳೆ ನೇತೃತ್ವದಲ್ಲಿ ‘ಬೌಂಡರಿ ಕೌಂಟ್’ ವಿವಾದಕ್ಕೆ ಬ್ರೇಕ್ ಬೀಳುತ್ತಾ?

    ದುಬೈ: ಟೀಂ ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ನೇತೃತ್ವದ ಐಸಿಸಿ ಕ್ರಿಕೆಟ್ ಸಮಿತಿ ವಿವಾದಾತ್ಮಕ ‘ಬೌಂಡರಿ ಕೌಟ್’ ಸೇರಿದಂತೆ ಇತರೇ ಕ್ರಿಕೆಟ್ ನಿಯಮಗಳ ಬಗ್ಗೆ ಚರ್ಚೆ ನಡೆಸಲಿದೆ. ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬೌಂಡರಿಗಳ ಆಧಾರದಲ್ಲಿ ಇಂಗ್ಲೆಂಡ್ ನ್ಯೂಜಿಲೆಂಡ್ ಗೆಲುವು ಪಡೆದಿತ್ತು. ಆ ಬಳಿಕ ಐಸಿಸಿ ನಿಯಮಗಳ ಕುರಿತು ಹಲವರು ಕಿಡಿಕಾರಿದ್ದರು.

    ಸೂಪರ್ ಓವರಿನಲ್ಲಿ ಟೈ ಆದ ಸಂದರ್ಭದಲ್ಲಿ ಯಾವ ತಂಡ ಹೆಚ್ಚು ಬೌಂಡರಿ ಸಿಡಿಸಿದೆ ಎಂಬ ಆಧಾರದ ಮೇಲೆ ಗೆಲುವುವನ್ನು ನಿರ್ಧರಿಸಲಾಗುತ್ತದೆ. ಈ ಬಗ್ಗೆ ಕ್ರಿಕೆಟ್ ವಿಶ್ಲೇಷಕರು ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಪರಿಣಾಮ ಐಸಿಸಿ ಈ ಬಗ್ಗೆ ಸಮೀಕ್ಷಾ ಸಮಾವೇಶವನ್ನು ನಡೆಸಲು ತೀರ್ಮಾನಿಸಿದೆ. ಇದರ ಭಾಗವಾಗಿಯೇ ಕುಂಬ್ಳೆ ನೇತೃತ್ವದಲ್ಲಿ ಕಮಿಟಿ ರಚಿಸಲಾಗಿದೆ. ಈ ಕಮಿಟಿ ಸಭೆ ನಡೆಸಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಿದೆ.

    ಕುಂಬ್ಳೆ ನೇತೃತ್ವದ ಸಭೆ ಮುಂದಿನ ವರ್ಷ ನಡೆಯಲಿದೆ ಎಂದು ಐಸಿಸಿ ಪ್ರಧಾನ ವ್ಯವಸ್ಥಾಪಕ ಸ್ಪಷ್ಟಪಡಿಸಿದ್ದಾರೆ. ಪಂದ್ಯ ಟೈ ಆದರೆ ಸೂಪರ್ ಓವರ್ ಮೂಲಕ ಫಲಿತಾಂಶವನ್ನು ನಿರ್ಣಹಿಸುವ ಪದ್ಧತಿಯನ್ನ 2009 ರಿಂದ ಅನುಸರಿಸುತ್ತಿದ್ದೆವೆ. ಸೂಪರ್ ಓವರ್ ನಲ್ಲೂ ಟೈ ಆದರೆ ಬೌಂಡರಿಗಳ ಆಧಾರದ ಮೇಲೆ ಗೆಲುವು ತೀರ್ಮಾನಿಸಲಾಗುತ್ತದೆ. ಇದೇ ವಿಶ್ವಕಪ ಫೈನಲ್ ಪಂದ್ಯದಲ್ಲೂ ನಡೆದಿದೆ. ವಿಶ್ವದ ಎಲ್ಲಾ ಟಿ20 ಕ್ರಿಕೆಟ್ ಟೂರ್ನಿಗಳಲ್ಲೂ ಇದನ್ನೇ ಅನುಸರಿಸಲಾಗುತ್ತಿದೆ. ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಒಂದೇ ರೀತಿಯ ನಿಯಮಗಳು ಇರಬೇಕಾಗಿದ್ದು, ಈ ಬಗ್ಗೆ ಗೊಂದಲಗಳು ಇದ್ದರೆ ಅನಿಲ್ ಕುಂಬ್ಳೆ ನೇತೃತ್ವದ ಸಮಿತಿ ತೀರ್ಮಾನಿಸಲಿದೆ ಎಂದು ವಿವರಿಸಿದ್ದಾರೆ. ಅನಿಲ್ ಕುಂಬ್ಳೆ ನೇತೃತ್ವ ಸಮಿತಿ ಯಾವ ತೀರ್ಮಾನ ಕೈಗೊಳ್ಳಿಲಿದೆ ಎಂಬುವುದನ್ನು ಕಾದು ನೋಡಬೇಕಿದೆ.

  • ಚಿನ್ನಸ್ವಾಮಿಯಲ್ಲಿ ಸಿಕ್ಸರ್, ಬೌಂಡರಿ ಸುರಿಮಳೆ

    ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಬ್ ಏರ್ ಸೌಲಭ್ಯ ಅಳವಡಿಕೆಯಾದ ನಡೆದ ಮೊದಲ ಅಂತರಾಷ್ಟ್ರೀಯ ಪಂದ್ಯದಲ್ಲಿ ಭಾರತ ಬ್ಯಾಟ್ಸ್ ಮನ್‍ಗಳು ರನ್ ಸುರಿಮಳೆಗೈದಿದ್ದಾರೆ.

    ಇಂಗ್ಲೆಂಡ್ ವಿರುದ್ಧ ಮೂರನೇಯ ಟಿ 20 ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿದ ಭಾರತ ಆರಂಭದಲ್ಲಿ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡರೂ ಸುರೇಶ್ ರೈನಾ, ಧೋನಿ ಅರ್ಧಶತಕ, ಕೊನೆಯಲ್ಲಿ ಯುವರಾಜ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಅಂತಿಮವಾಗಿ 6 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿದೆ.

    ಎರಡನೇ ಓವರ್‍ನ ಮೊದಲ ಎಸೆತದಲ್ಲಿ ನಾಯಕ ಕೊಹ್ಲಿ ಜೊರ್ಡನ್ ಬೌಲಿಂಗ್‍ನಲ್ಲಿ ರನೌಟ್ ಆದರು. ಆರಂಭದಲ್ಲಿ ಕುಸಿತ ಕಂಡರೂ ಎರಡನೇ ವಿಕೆಟ್‍ಗೆ ರಾಹುಲ್ ಮತ್ತು ರೈನಾ 6.1 ಓವರ್‍ನಲ್ಲಿ 61 ರನ್ ಕಲೆ ಹಾಕಿ ಭದ್ರವಾದ ಇನ್ನಿಂಗ್ಸ್ ಕಟ್ಟಿದರು.

    22 ರನ್(18 ಎಸೆತ, 2 ಬೌಂಡರಿ, 1ಸಿಕ್ಸರ್) ಗಳಿಸಿದ್ದ ರಾಹುಲ್ ಔಟಾದಾಗ ತಂಡದ ಮೊತ್ತ 65 ಆಗಿತ್ತು. ಧೋನಿ ಕ್ರೀಸ್‍ಗೆ ಬಂದ ಮೇಲೆ ಸಿಕ್ಸರ್, ಬೌಂಡರಿ ಸಿಡಿಯಲು ಆರಂಭವಾಯಿತು.

    ರೈನಾ ಮತ್ತು ಧೋನಿ 37 ಎಸೆತದಲ್ಲಿ 55 ರನ್ ಜೊತೆಯಾಟವಾಡಿದರು. 39 ಎಸೆತದಲ್ಲಿ ಅರ್ಧಶತಕ ಹೊಡೆದ ರೈನಾ ಅಂತಿಮವಾಗಿ 63 ರನ್(45 ಎಸೆತ, 2 ಬೌಂಡರಿ, 5 ಸಿಕ್ಸರ್) ಗಳಿಸಿದ್ದಾಗ ಮೊರ್ಗನ್‍ಗೆ ಕ್ಯಾಚ್ ನೀಡಿ ಹೊರ ನಡೆದರು.

    ಯುವರಾಜ್ ಬಂದ ಕೂಡಲೇ ಆಕ್ರಮಣಕಾರಿ ಆಟಕ್ಕೆ ಮುಂದಾದರು. ಪರಿಣಾಮ ಜೊರ್ಡನ್ ಎಸೆದ 18ನೇ ಓವರ್ ನಲ್ಲಿ ಯುವರಾಜ್ ಮೂರು ಸಿಕ್ಸರ್ ಒಂದು ಬೌಂಡರಿ ಚಚ್ಚಿದರು. ಈ ಓವರ್‍ನಲ್ಲಿ ಧೋನಿ ಮತ್ತು ಯುವಿ 24 ರನ್ ಸೊರೆಗೈದರು. ಉತ್ತಮವಾಗಿ ಆಡುತ್ತಿದ್ದ ಯುವರಾಜ್ ಸಿಂಗ್ 27 ರನ್( 10 ಎಸೆತ, 1 ಬೌಂಡರಿ,1 ಸಿಕ್ಸರ್) ಗಳಿಸಿದ್ದಾಗ ಮಿಲ್ಸ್ ಎಸೆದ ಸ್ಲೋ ಬಾಲಿಗೆ ಕೀಪರ್‍ಗೆ ಕ್ಯಾಚ್ ನೀಡಿ ಹೊರ ನಡೆದರು. ಇವರಿಬ್ಬರು 28 ಎಸೆತದಲ್ಲಿ 57 ರನ್ ಚಚ್ಚುವ ಮೂಲಕ ತಂಡದ ಮೊತ್ತವನ್ನು 170 ರನ್‍ಗಳ ಗಡಿ ದಾಟಿಸಿದರು.

    ಧೋನಿ 56 ರನ್(36 ಎಸೆತ,5 ಬೌಂಡರಿ, 2 ಸಿಕ್ಸರ್) ಹೊಡೆದು ಔಟಾದರೆ, 11 ರನ್(4 ಎಸೆತ, 1 ಸಿಕ್ಸರ್) ಗಳಿಸಿದ್ದ ಹಾರ್ದಿಕ್ ಪಾಂಡ್ಯಾ ಇನ್ನಿಂಗ್ಸ್ ಕೊನೆಯ ಬಾಲ್‍ನಲ್ಲಿ ರನ್ ಔಟಾದರು. ಕೊನೆಯಲ್ಲಿ ರಿಶಬ್ ಪಂತ್ 6 ರನ್ ಗಳಿಸಿ ಔಟಾಗದೇ ಉಳಿದರು.

     12 ಸಿಕ್ಸರ್, 11 ಬೌಂಡರಿ ಸಿಡಿದರೆ, ಇತರೇ ರೂಪದಲ್ಲಿ 15 ರನ್ ಟೀಂ ಇಂಡಿಯಾಗೆ ಬಂತು.

    ಭಾರತದ ರನ್ ಏರಿದ್ದು ಹೀಗೆ:
    50 ರನ್ – 5.5 ಓವರ್
    100 ರನ್ – 12.1 ಓವರ್
    150 ರನ್ – 16.5 ಓವರ್
    200 ರನ್ – 19.5 ಓವರ್
    202 ರನ್ – 20 ಓವರ್