Tag: ಬ್ಯಾಂಕ್ ಆಫ್ ಮಹಾರಾಷ್ಟ್ರ

  • ಭಾರತದ ಮೊದಲ ಆನ್-ಬೋರ್ಡ್ ಎಟಿಎಂ ಪ್ರಯೋಗ ಯಶಸ್ವಿ – ಇನ್ಮುಂದೆ ರೈಲಿನಲ್ಲೂ ಇರಲಿದೆ ಎಟಿಎಂ!

    ಭಾರತದ ಮೊದಲ ಆನ್-ಬೋರ್ಡ್ ಎಟಿಎಂ ಪ್ರಯೋಗ ಯಶಸ್ವಿ – ಇನ್ಮುಂದೆ ರೈಲಿನಲ್ಲೂ ಇರಲಿದೆ ಎಟಿಎಂ!

    ಮುಂಬೈ: ದೇಶದಲ್ಲೇ ಮೊದಲ ಬಾರಿಗೆ ರೈಲಿನಲ್ಲಿ ಸ್ಥಾಪಿಸಲಾದ ಎಟಿಎಂನ (ATM) ಪ್ರಾಯೋಗಿಕ ಪರೀಕ್ಷೆ ಮಂಗಳವಾರ ಯಶಸ್ವಿಯಾಗಿ ನಡೆದಿದೆ.

    ಬ್ಯಾಂಕ್ ಆಫ್ ಮಹಾರಾಷ್ಟ್ರದ (Bank Of Maharashtra) ಸಹಯೋಗದೊಂದಿಗೆ ಮನ್ಮಾಡ್‌ನಿಂದ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ವರೆಗೆ (Chhatrapati Shivaji Maharaj Terminus) ಸಂಚರಿಸುವ ಪಂಚವಟಿ ಎಕ್ಸ್‌ಪ್ರೆಸ್‌ನಲ್ಲಿ (Panchavati Express) ಪ್ರಾಯೋಗಿಕ ಪರೀಕ್ಷೆ ನಡೆದಿದೆ. ಈ ಪ್ರಾಯೋಗಿಕ ಪರೀಕ್ಷೆಯ ಬಳಿಕ ಈಶಾನ್ಯ ಗಡಿನಾಡು ರೈಲ್ವೆಗಳಲ್ಲಿ ಎಟಿಎಂಗಳನ್ನು ಪರಿಚಯಿಸಲು ನಿರ್ಧರಿಸಿದೆ. ನಾಸಿಕ್‌ನ ಮನ್ಮಾಡ್ ಮತ್ತು ಮುಂಬೈ ನಡುವೆ ಸಂಚರಿಸುವ ಪಂಚವಟಿ ಎಕ್ಸ್‌ಪ್ರೆಸ್‌ನ ಎಸಿ ಕೋಚ್‌ನಲ್ಲಿ (AC Coach) ಎಟಿಎಂ ಸ್ಥಾಪಿಸಲಾಗಿದೆ.

    ರೈಲ್ವೆ ಅಧಿಕಾರಿಗಳ ಮಾಹಿತಿ ಪ್ರಕಾರ, ಪ್ರಾಯೋಗಿಕ ಪರೀಕ್ಷೆ ವೇಳೆ ಇಗತ್ಪುರಿ ಮತ್ತು ಕಸರಾ ಪ್ರದೇಶದಲ್ಲಿ ಸಿಗುವ ಕಡಿಮೆ ನೆಟ್‌ವರ್ಕ್ ಹೊರತುಪಡಿಸಿ, ಯಾವುದೇ ಅಡಚಣೆಯಿಲ್ಲದೇ ಎಟಿಎಂ ಕಾರ್ಯನಿರ್ವಹಿಸಲಿದೆ. ಸುಗಮವಾಗಿ ಸಂಚರಿಸಿದೆ. ನವೀನ ಮತ್ತು ಶುಲ್ಕ ರಹಿತ ಆದಾಯ ಕಲ್ಪನೆಗಳ ಯೋಜನೆ ಅಡಿಯಲ್ಲಿ ಭೂಸಾವಲ್ ವಿಭಾಗ ಮತ್ತು ಬ್ಯಾಂಕ್ ಆಫ್ ಮಹಾರಾಷ್ಟ್ರದ ಪಾಲುದಾರಿಕೆಯಲ್ಲಿ ಈ ಎಟಿಎಂ ಅನ್ನು ಪರಿಚಯಿಸಲಾಗಿದೆ.ಇದನ್ನೂ ಓದಿ: 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ಅಡ್ಮಿಷನ್: ಮಧು ಬಂಗಾರಪ್ಪ

    ಈ ಕುರಿತು ಭೂಸಾವಲ್‌ನ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಇತಿ ಪಾಂಡೆ ಮಾತನಾಡಿ, ಭೂಸಾವಲ್ ವಿಭಾಗವು ಆಯೋಜಿಸಿದ್ದ ನವೀನ ಮತ್ತು ಶುಲ್ಕ ರಹಿತ ಆದಾಯ ಕಲ್ಪನೆಗಳ ಯೋಜನಾ ಸಭೆಯಲ್ಲಿ ರೈಲುಗಳಲ್ಲಿ ಎಟಿಎಂ ಸ್ಥಾಪಿಸುವ ಕುರಿತು ಮಂಡಿಸಲಾಯಿತು. ಬಳಿಕ ಈ ಕುರಿತು ಚರ್ಚೆ ನಡೆಸಲಾಗಿದೆ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶ ಉತ್ತಮವಾಗಿದ್ದು, ಜನರು ಚಲಿಸುವ ರೈಲಿನಲ್ಲಿ ಎಟಿಎಂ ಮೂಲಕ ಹಣವನ್ನು ಡ್ರಾ ಮಾಡಿಕೊಳ್ಳಬಹುದು. ಸದ್ಯ ಪಂಚವಟಿ ಎಕ್ಸ್ಪ್ರೆಸ್‌ನ ಎಸಿ ಕೋಚ್‌ನಲ್ಲಿ ಎಟಿಎಂ ಅಳವಡಿಸಲಾಗಿದ್ದು, ರೈಲಿನ ಎಲ್ಲಾ 22 ಬೋಗಿಗಳಲ್ಲಿರುವ ಪ್ರಯಾಣಿಕರು ಎಸಿ ಕೋಚ್‌ಗೆ ಬಂದು ಎಟಿಎಂನಿಂದ ಹಣ ಡ್ರಾ ಮಾಡಿಕೊಳ್ಳಬಹುದು.

    ಮುಂಬೈ-ಹಿಂಗೋಲಿ ಜನಶತಾಬ್ದಿ ಎಕ್ಸ್‌ಪ್ರೆಸ್‌ ರೈಲು ಪಂಚವಟಿ ಎಕ್ಸ್‌ಪ್ರೆಸ್‌ನೊಂದಿಗೆ ತನ್ನ ರೇಕ್ ಅನ್ನು ಹಂಚಿಕೊಳ್ಳುವುದರಿಂದ, ಜನಶತಾಬ್ದಿ ಎಕ್ಸ್‌ಪ್ರೆಸ್‌ ರೈಲಿನ ಪ್ರಯಾಣಿಕರಿಗೂ ಈ ಎಟಿಎಂ ಲಭ್ಯವಿರುತ್ತದೆ. ಹೀಗಾಗಿ ಮುಂಬೈ-ಹಿಂಗೋಲಿ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರೂ ಕೂಡ ಎಟಿಎಂನ ಲಾಭ ಪಡೆದುಕೊಳ್ಳಬಹುದು ಎಂದಿದ್ದಾರೆ.

    ಪ್ರಯಾಣಿಕ ಸಂಜಯ್ ಎಂಬುವವರು ಮಾತನಾಡಿ, ಎಟಿಎಂನಿಂದ ಹಣ ಡ್ರಾ ಮಾಡಿಕೊಳ್ಳುವುದರ ಜೊತೆಗೆ ಬ್ಯಾಂಕ್ ಅಕೌಂಟ್ ಸ್ಟೇಟ್‌ಮೆಂಟ್, ಚೆಕ್ ಬುಕ್ ಆರ್ಡರ್ ಮಾಡಬಹುದಾಗಿದೆ ಎಂದು ತಿಳಿಸಿದರು.

    ರೈಲ್ವೆ ಅಧಿಕಾರಿಯೊಬ್ಬರು ಮಾತನಾಡಿ, ಈ ಸೇವೆ ಜನಪ್ರಿಯವಾದರೆ ಹೆಚ್ಚಿನ ರೈಲುಗಳಲ್ಲಿ ಎಟಿಎಂ ಸ್ಥಾಪಿಸಲಾಗುವುದು ಮತ್ತು ಭದ್ರತೆಗಾಗಿ ಎಟಿಎಂ ಶಟರ್ ವ್ಯವಸ್ಥೆಯನ್ನು ಹೊಂದಿದ್ದು, 24/7 ಸಿಸಿಟಿವಿ ಕಣ್ಗಾವಲು ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಲಕ್ನೋ ಸೂಪರ್‌ ಜೈಂಟ್ಸ್‌ಗೆ ಬಿಗ್‌ ಬೂಸ್ಟ್‌ – ರಾಕೆಟ್‌ ವೇಗಿ ಮಯಾಂಕ್‌ ಯಾದವ್‌ ಕಂಬ್ಯಾಕ್‌

  • ವಿಡಿಯೋ: ದರೋಡೆಕೋರನನ್ನು ಹಿಡಿಯಲು ಹೋದ ಸೆಕ್ಯೂರಿಟಿ ಗಾರ್ಡ್ ಮೇಲೆ ಸುತ್ತಿಗೆಯಿಂದ ಹಲ್ಲೆ!

    ವಿಡಿಯೋ: ದರೋಡೆಕೋರನನ್ನು ಹಿಡಿಯಲು ಹೋದ ಸೆಕ್ಯೂರಿಟಿ ಗಾರ್ಡ್ ಮೇಲೆ ಸುತ್ತಿಗೆಯಿಂದ ಹಲ್ಲೆ!

    ಪಣಜಿ: ಎಟಿಎಂಗೆ ನುಗ್ಗಿ ದರೋಡೆ ನಡೆಸಲು ಮುಂದಾಗಿದ್ದ ಕಳ್ಳನನ್ನು ಹಿಡಿಯಲು ಹೋದ ಭದ್ರತಾ ಸಿಬ್ಬಂದಿ ತಲೆಗೆ ಸುತ್ತಿಗೆಯಿಂದ ಹೊಡೆದು ಹಲ್ಲೆ ಮಾಡಿ ಪರಾರಿಯಾದ ಘಟನೆ ಪಣಜಿಯಲ್ಲಿ ನಡೆದಿದೆ.

    ಬ್ಯಾಂಕ್ ಆಫ್ ಮಹಾರಾಷ್ಟ್ರ ಎಟಿಎಂ ನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯ ಎಟಿಎಂ ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದ್ರೆ ದರೋಡೆಕೋರ ಮುಖಕ್ಕೆ ಮಾಸ್ಕ್ ಧರಿಸಿದ್ದರಿಂದ ಆತನ ಮುಖ ಸಿಸಿಟಿಯಲ್ಲಿ ಸರಿಯಾಗಿ ಕಂಡಿಲ್ಲ.

    ಸಿಸಿಟಿವಿಯಲ್ಲಿ ಏನಿದೆ?: ಸುಮಾರು 40 ಸೆಕೆಂಡ್ ಇರೋ ಈ ವಿಡಿಯೋದಲ್ಲಿ ದರೋಡೆ ಮಾಡಲೆಂದು ವ್ಯಕ್ತಿಯೊಬ್ಬ ಮುಖ ಕಾಣಿಸದಂತೆ ಮಾಸ್ಕ್ ಹಾಕಿಕೊಂಡು ನುಗ್ಗಿದ್ದನು. ಇದನ್ನು ಗಮನಿಸಿದ ಸೆಕ್ಯೂರಿಟಿ ಗಾರ್ಡ್ ಎಟಿಎಂ ಕೊಠಡಿಯ ಒಳಗೆ ತೆರಳಿ ಯಾವುದೇ ಆಯುಧಗಳಿಲ್ಲದೇ ಆತನ ಮೇಲೆ ದಾಳಿ ಮಾಡಿದ್ದಾರೆ. ತನ್ನ ಕಳ್ಳತನದ ವಿಚಾರ ತಿಳಿದ ಸೆಕ್ಯೂರಿಟಿ ಗಾರ್ಡ್ ಮೇಲೆ ದರೋಡೆಕೋರ ಸುತ್ತಿಗೆಯಿಂದ ಹೊಡೆದಿದ್ದಾನೆ. ಈ ವೇಳೆ ಅವರಿಬ್ಬರ ಮಧ್ಯೆ ಗುದ್ದಾಟ ನಡೆದಿದೆ.

    ಸೆಕ್ಯೂರಿಟಿ ಗಾರ್ಡ್ ಘಟನೆಯಿಂದ ಗಾಯಗೊಂಡ್ರೂ ಕೂಡ ದರೋಡೆಕೋರನ ಮುಖದಲ್ಲಿರೋ ಮಾಸ್ಕ್ ತೆಗೆಯಲು ಪ್ರಯತ್ನಿಸಿದ್ದಾರೆ. ಅಲ್ಲದೇ ಆತನ ಕೈಯಲಿದ್ದ ಸುತ್ತಿಗೆಯನ್ನು ಎಳೆದುಕೊಳ್ಳಲು ಗಾರ್ಡ್ ಯತ್ನಿಸಿದ್ದಾರೆ. ಈ ವೇಳೆ ದರೋಡೆಕೋರ ಹಲವು ಬಾರಿ ಸೆಕ್ಯೂರಿಟಿಯ ತೆಲೆಗೆ ಮನಬಂದಂತೆ ಹೊಡೆದಿದ್ದಾನೆ. ಪರಿಣಾಮ ಸೆಕ್ಯೂರಿಟಿ ಕೆಳಗೆ ಬಿದ್ದಿದ್ದಾರೆ. ಆದ್ರೂ ಬಿಡದೆ ಸೆಕ್ಯೂರಿಟಿ ದರೋಡೆಕೋರನ ಮುಖದ ಮೇಲಿದ್ದ ಮಾಸ್ಕ್ ತೆಗೆದಿದ್ದಾರೆ. ತನ್ನ ಮುಖದಲ್ಲಿರೋ ಮಾಸ್ಕ್ ಕಳಚುತ್ತಿದ್ದಂತೆಯೇ ಸೆಕ್ಯುರಿಟಿ ಅಲ್ಲಿಂದ ಪರಾರಿಯಾಗಿದ್ದಾನೆ.

    ಸದ್ಯ ಪೊಲೀಸರು ಈ ಘಟನೆಯ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು, ದರೋಡಕೋರನಿಗಾಗಿ ಬಲೆಬೀಸಿದ್ದಾರೆ.