Tag: ಬ್ಯಾನ್

  • ಗಲ್ಫ್ ರಾಷ್ಟ್ರಗಳಲ್ಲಿ ‘ಆರ್ಟಿಕಲ್ 370’ ಸಿನಿಮಾ ಬ್ಯಾನ್

    ಗಲ್ಫ್ ರಾಷ್ಟ್ರಗಳಲ್ಲಿ ‘ಆರ್ಟಿಕಲ್ 370’ ಸಿನಿಮಾ ಬ್ಯಾನ್

    ಲ್ಫ್ ರಾಷ್ಟ್ರಗಳಲ್ಲಿ (Gulf nation) ಮತ್ತೊಂದು ಭಾರತದ ಸಿನಿಮಾವನ್ನು ಬ್ಯಾನ್ (Ban) ಮಾಡಲಾಗಿದೆ. ಈ ಹಿಂದೆ ದೀಪಿಕಾ ಪಡುಕೋಣೆ ಮತ್ತು ಹೃತಿಕ್ ರೋಷನ್ ನಟನೆಯ ಫೈಟರ್ ಸಿನಿಮಾವನ್ನೂ ಬ್ಯಾನ್ ಮಾಡಲಾಗಿತ್ತು. ಈಗ ಆರ್ಟಿಕಲ್ 370 ಸಿನಿಮಾವನ್ನು ಬಿಡುಗಡೆ ಮಾಡದಂತೆ ಗಲ್ಫ್ ರಾಷ್ಟ್ರಗಳು ಮುಂದಾಗಿವೆ. ಹಾಗಾಗಿ ಗಲ್ಫ್ ರಾಷ್ಟ್ರಗಳಲ್ಲಿ ಈ ಸಿನಿಮಾ ರಿಲೀಸ್ ಆಗಿಲ್ಲ.

    ಇದೇ ಶುಕ್ರವಾರ ಆರ್ಟಿಕಲ್ 370 (Article 370) ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗಿದ್ದು, ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕೇವಲ ನೋಡುಗರು ಮಾತ್ರವಲ್ಲ, ವಿಮರ್ಶಕರೂ ಕೂಡ ಸಿನಿಮಾದ ಬಗ್ಗೆ ಹೊಗಳಿ ಬರೆದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೂ ಚಿತ್ರವನ್ನು ನಾನಾ ರೀತಿಯಲ್ಲಿ ಬಣ್ಣಿಸಲಾಗುತ್ತಿದೆ. ಬಾಕ್ಸ್ ಆಫೀಸ್ ಲೆಕ್ಕಾಚಾರ ಕೂಡ ಸಕಾರಾತ್ಮಕವಾಗಿಯೇ ಕೇಳಿ ಬರುತ್ತಿದೆ.

    ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಆರ್ಟಿಕಲ್ 370 ಚಿತ್ರದ ಬಗ್ಗೆ ತಮ್ಮ ಭಾಷಣದಲ್ಲಿ ಉಲ್ಲೇಖ ಮಾಡಿದ್ದರು. ಕಾಶ್ಮೀರದಲ್ಲಿ ನಡೆದ ಕಾರ್ಯಮಕ್ರದಲ್ಲಿ ಮೋದಿ, ‘ಆರ್ಟಿಕಲ್ 370 ಸಿನಿಮಾ ಜಮ್ಮು ಕಾಶ್ಮೀರದ ವಿಶೇಷ ಅಧಿಕಾರವನ್ನು ಯಾಕೆ ತೆಗೆಯಲಾಯಿತು ಎನ್ನುವುದನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದು ಹೇಳಿದ್ದರು.

    ಮೋದಿಯ ಈ ಭಾಷಣವನ್ನು ಕೇಳಿರುವ ಆರ್ಟಿಕಲ್ 370 ಸಿನಿಮಾದ ನಾಯಕಿ ಯಾಮಿನಿ ಗೌತಮ್ (Yamini Gautam), ಮೋದಿ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದರು. ಈ ನೈಜ ಕಥೆಯನ್ನು ನಿಮಗೆ ಮತ್ತು ಎಲ್ಲರಿಗೂ ಒಪ್ಪುವಂತೆ ಸಿನಿಮಾ ಮಾಡಿದ್ದೇವೆ ಎನ್ನುವ ಭರವಸೆಯನ್ನು ನಾನು ಮತ್ತು ನನ್ನ ತಂಡ ನೀಡಲಿದೆ ಎಂದು ಯಾಮಿನಿ ಪ್ರತಿಕ್ರಿಯೆ ನೀಡಿದ್ದರು.

     

    ಕನ್ನಡತಿ ಪ್ರಿಯಾ ಮಣಿ ಹಾಗೂ ಬಾಲಿವುಡ್ ಹೆಸರಾಂತ ನಟಿ ಯಾಮಿನಿ ಗೌತಮ್ ಕಾಂಬಿನೇಷನ್ ನ ‘ಆರ್ಟಿಕಲ್ 370’ (Article 370)ಚಿತ್ರದ ಟ್ರೈಲರ್ ಮೊನ್ನೆಯಷ್ಟೇ ರಿಲೀಸ್ ಆಗಿದ್ದು, ನೋಡುಗರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಟ್ರೈಲರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಪಾತ್ರಗಳು ಇವೆ. ರಿಲೀಸ್ ಆದ ಟ್ರೈಲರ್ (Trailer)ನಲ್ಲಿ ‘ಪೂರಾ ಕಾ ಪೂರಾ ಕಾಶ್ಮೀರ್ (Kashmir), ಭಾರತ್ ದೇಶ್ ಕಾ ಹಿಸ್ಸಾ ಥಾ. ಹೇ ಔರ್ ರೆಹೇಗಾ’ ಎನ್ನುವ ಮಾತು ಮತ್ತೆ ಮತ್ತೆ ಪ್ರೇರೇಪಿಸುತ್ತಿದೆ. ಅಂದಹಾಗೆ ಜಮ್ಮು ಕಾಶ್ಮೀರದ ವಿಶೇಷಾಧಿಕಾರವಾದ ಆರ್ಟಿಕಲ್ 370 ಅನ್ನು ತೆಗೆದು ಹಾಕಲಾದ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ. ಫೆಬ್ರವರಿ 23 ರಂದು ಈ ಸಿನಿಮಾ ತೆರೆಗೆ ಬರಲಿದ್ದು, ಯಾಮಿ ಗೌತಮ್ ಖಡಕ್ ಎನ್.ಐ.ಎ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

  • ಖ್ಯಾತ ನಟ ಧನುಷ್ ಸೇರಿದಂತೆ 4 ಜನ ಸ್ಟಾರ್ ನಟರಿಗೆ ಬ್ಯಾನ್ ಬಿಸಿ

    ಖ್ಯಾತ ನಟ ಧನುಷ್ ಸೇರಿದಂತೆ 4 ಜನ ಸ್ಟಾರ್ ನಟರಿಗೆ ಬ್ಯಾನ್ ಬಿಸಿ

    ಮಿಳು ಚಿತ್ರೋದ್ಯಮದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಹೆಸರಾಂತ ನಟ ಧನುಷ್ ಸೇರಿದಂತೆ ನಾಲ್ವರು ಸ್ಟಾರ್ ನಟರಿಗೆ ಅಲ್ಲಿನ ನಿರ್ಮಾಪಕರ ಸಂಘವು ರೆಡ್ ಕಾರ್ಡ್ ನೀಡಿದ್ದು, ನಿರ್ಮಾಪಕರಿಗೆ ಇವರು ಅಪಾರ ಹಾನಿಯನ್ನಿಂಟು ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ನಿಷೇಧದ ಕಠಿಣ ಕ್ರಮಕ್ಕೆ ಮುಂದಾಗಿದೆ.

    ಎರಡು ದಿನಗಳ ಹಿಂದೆ ನಡೆದ ನಿರ್ಮಾಪಕರ ಸಂಘದ ಸಭೆಯಲ್ಲಿ ವಿಶಾಲ್ (Vishal), ಧನುಷ್ (Dhanush), ಅಥರ್ವ್ (Atharv) ಮತ್ತು ಸಿಂಬುಗೆ (Simbu) ರೆಡ್ ಕಾರ್ಡ್ ನೀಡಿದ್ದು, ಕಠಿಣ ಕ್ರಮದ ಒಮ್ಮತದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ನಾಲ್ವರು ಕಲಾವಿದರು ನಿರ್ಮಾಪಕರಿಂದ ಹಣ ಪಡೆದುಕೊಂಡು ಮೋಸ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ:ವರ್ಷಾ ಕಾವೇರಿಗೆ ಮೋಸ? ವರುಣ್‌ ಸ್ಪಷ್ಟನೆ

    ಕಳೆ ಕೆಲವು ತಿಂಗಳ ಹಿಂದೆ ಚೆನ್ನೈನ ಅಣ್ಣಾಸಾಲೈನಲ್ಲಿ ನಡೆದ ನಿರ್ಮಾಪಕರ (Film Chamber) ಹಾಗೂ ಕಲಾವಿದರ  ಸಂಘದ ಸಭೆಯಲ್ಲಿ ಅನೇಕ ನಿರ್ಮಾಪಕರು (Producer) ಕಲಾವಿದರ ಮೇಲೆ ಆರೋಪ ಮಾಡಿದ್ದರು.  ಅದರಲ್ಲೂ ಪ್ರಮುಖವಾಗಿ ಧನುಷ್, ರಾಯ್ ಲಕ್ಷ್ಮಿ(Roy Lakshmi) , ಅಮಲಾ ಪೌಲ್ (Amala Paul) ವಿರುದ್ಧವೂ ದೂರು ದಾಖಲಾಗಿತ್ತು.

    ತೇನಾಂಡಾಲ್ ಫಿಲ್ಮ್ ಸಂಸ್ಥೆಯು ಧನುಷ್ ಗಾಗಿ ಚಿತ್ರವೊಂದನ್ನು ನಿರ್ಮಾಣ ಮಾಡುತ್ತಿದೆ. ಒಂದು ತಿಂಗಳ ಕಾಲ ಶೂಟಿಂಗ್ ಕೂಡ ನಡೆದಿದೆ. ಕಾರಣಾಂತರಗಳಿಂದ ಶೂಟಿಂಗ್ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಶೂಟಿಂಗ್ ಮಾಡುವಂತೆ ಧನುಷ್ ಗೆ ಮನವಿ ಮಾಡಲಾಗಿದೆ. ಆದರೆ, ಅವರು ಸ್ಪಂದಿಸುತ್ತಿಲ್ಲ ಎಂದು ದೂರಿನಲ್ಲಿದೆ. ಈ ಸಿನಿಮಾಗಾಗಿ ಸಂಸ್ಥೆಯು 20 ಕೋಟಿ ರೂಪಾಯಿಯನ್ನು ಧನುಷ್ ಗೆ ನೀಡಿದೆಯಂತೆ.

     

    ಕಾಲ್ ಶೀಟ್ ನೀಡದೇ ಇರುವುದು ಒಂದು ಸಮಸ್ಯೆಯಾದರೆ, ಕೆಲ ನಟಿಯರು ಚಿತ್ರೀಕರಣಕ್ಕೆ ಬಂದರೆ, ಅವರಿಗೆ ಹತ್ತು ಜನ ಸೆಕ್ಯೂರಿಟಿ ಗಾರ್ಡ್ ಗಳು ಬೇಕೆಂದು ಹೇಳುತ್ತಾರಂತೆ. ಇದರಿಂದಾಗಿ ಭಾರೀ ಮೊತ್ತದ ಹಣವನ್ನೇ ಸಂಸ್ಥೆಯು ನೀಡಬೇಕಾಗಿದೆ. ಇದನ್ನು ತಪ್ಪಿಸುವಂತೆ ಫಿಲ್ಮ್ ಚೇಂಬರ್ ಗೆ ಕೆಲವು ನಿರ್ಮಾಪಕರು ಪತ್ರ ಬರೆದಿದ್ದಾರೆ. ಸೆಕ್ಯೂರಿಟಿ ಬೇಕಾದ ನಟಿಯರು ತಾವೇ ದುಡ್ಡು ಕೊಟ್ಟ ನೇಮಿಸಿಕೊಳ್ಳಲಿ ಎನ್ನುವುದು ನಿರ್ಮಾಪಕರ ವಾದವಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಪೇಂದ್ರರನ್ನ 5 ವರ್ಷ ಬ್ಯಾನ್ ಮಾಡಿ : ಫಿಲ್ಮ್ ಚೇಂಬರ್ ಗೆ ಮನವಿ

    ಉಪೇಂದ್ರರನ್ನ 5 ವರ್ಷ ಬ್ಯಾನ್ ಮಾಡಿ : ಫಿಲ್ಮ್ ಚೇಂಬರ್ ಗೆ ಮನವಿ

    ಜಾತಿ ನಿಂದನೆ (caste abuse) ಆರೋಪ ಎದುರಿಸುತ್ತಿರುವ ನಟ ಉಪೇಂದ್ರ (Upendra) ಅವರನ್ನು ಸಿನಿಮಾ ರಂಗದಿಂದ 5 ವರ್ಷ ಬ್ಯಾನ್ ಮಾಡಬೇಕು ಎಂದು ಕರ್ನಾಟಕ ರಣಧೀರ ಪಡೆಯ ಕಾರ್ಯಕರ್ತರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ (film chamber) ಮಂಡಳಿಗೆ ದೂರು ನೀಡಿದ್ದಾರೆ. ಭೈರಪ್ಪ ಹರೀಶ್ ಕುಮಾರ್ ನೇತೃತ್ವದಲ್ಲಿ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ಕಾರ್ಯಕರ್ತರು ಉಪೇಂದ್ರ ಅವರನ್ನು ಬ್ಯಾನ್ (ban) ಮಾಡುವಂತೆ ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಭೈರಪ್ಪ ಹರೀಶ್ ಕುಮಾರ್, ‘ದಲಿತಕೇರಿ, ಊರಲ್ಲಿ ಯಾರು ಯಾರು ಇರಬೇಕು ಅಂತಾ ಹೇಳಬೇಕು. ಇವರೆಲ್ಲ ಸಿನಿಮಾಗಳಲ್ಲಿ ಮಾತ್ರ ನಾಯಕರು. ನಿಜವಾದ ನಾಯಕ ಓಡಿ ಹೋಗೋದಲ್ಲ. ಸ್ಟೇ ತರೋದು, ಓಡಿ ಹೋಗೋದಲ್ಲ. ಜಾತಿ, ಕೇರಿಗಳ ಬಗ್ಗೆ ಮಾತನಾಡುವವರನ್ನು ಬ್ಯಾನ್ ಮಾಡಬೇಕು’ ಎಂದು ಮಾತನಾಡಿದರು.

    ದೂರು ಸ್ವೀಕರಿಸಿದ ಹಿರಿಯ ನಟ ಹಾಗೂ ಕರ್ನಾಟಕ ಫಿಲ್ಮ್ ಚೇಂಬರ್ ಗೌರವ ಕಾರ್ಯದರ್ಶಿ ಸುಂದರ್ ರಾಜ್, ‘ನಟ ಉಪೇಂದ್ರ ಅವರು ಬೇಕಂತ ಮಾತನಾಡಿದ್ದು ಅಂತಾ ಅನಿಸತ್ತಾ ಇಲ್ಲ. ಸಮಾಜಮುಖಿಯಾಗಿ ಯೋಚನೆ ಮಾಡಬೇಕು. ಫಿಲ್ಮ್ ಚೇಂಬರ್ ಗೆ ಬ್ಯಾನ್ ಮಾಡೋ ಹಕ್ಕಿಲ್ಲ. ನಾವು ಸಂಧಾನ ಮಾಡ್ತೇವೆ, ಸಂಹಾರ ಮಾಡಲ್ಲ. ಕಾರ್ಯದರ್ಶಿಯಾಗಿ ಬ್ಯಾನ್ ಮಾಡಬೇಕೆಂಬ ಮನವಿ ಸ್ವೀಕರಿಸಿದ್ದೇನೆ. ಬ್ಯಾನ್ ಮಾಡಲು ಕೋರ್ಟ್ ಅನುಮತಿ ಕೊಡಲ್ಲ. ಉಪೇಂದ್ರ ಅವರನ್ನು ಕರೆಸಿ ಮಾತನಾಡುತ್ತೇವೆ’ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಖ್ಯಾತ ನಟ ಧನುಷ್ ಮೇಲೆ ನಿಷೇಧದ ತೂಗುಕತ್ತಿ

    ಖ್ಯಾತ ನಟ ಧನುಷ್ ಮೇಲೆ ನಿಷೇಧದ ತೂಗುಕತ್ತಿ

    ಮುಂಗಡ ಹಣ ಪಡೆದುಕೊಂಡು ಈವರೆಗೂ ಕಾಲ್ ಶೀಟ್ ನೀಡದೇ ಇರುವ ನಟ ನಟಿಯರ ವಿರುದ್ಧ ತಮಿಳು ಚಿತ್ರ ನಿರ್ಮಾಪಕರು ಗರಂ ಆಗಿದ್ದಾರೆ. ಮುಂಗಡ ಹಣ ಪಡೆದೂ, ಶೂಟಿಂಗ್ ಬಗ್ಗೆ ಚಕಾರ ಎತ್ತದ ನಟ-ನಟಿಯರು ವಿರುದ್ಧ ತಮಿಳು ಫಿಲ್ಮ್ ಚೇಂಬರ್ ನಲ್ಲಿ ದೂರು ದಾಖಲಾಗಿದ್ದು, ಧನುಷ್ (Dhanush) ಸೇರಿದಂತೆ ಹಲವು ಕಲಾವಿದರ ಮೇಲೆ ನಿಷೇಧದ (Ban) ತೂಗುಕತ್ತಿ ತೂಗಾಡುತ್ತಿದೆ.

    ಮೊನ್ನೆಯಷ್ಟೇ ಚೆನ್ನೈನ ಅಣ್ಣಾಸಾಲೈನಲ್ಲಿ ನಡೆದ ನಿರ್ಮಾಪಕರ (Film Chamber) ಹಾಗೂ ಕಲಾವಿದರ  ಸಂಘದ ಸಭೆಯಲ್ಲಿ ಅನೇಕ ನಿರ್ಮಾಪಕರು (Producer) ಕಲಾವಿದರ ಮೇಲೆ ಆರೋಪ ಮಾಡಿದ್ದಾರೆ.  ಅದರಲ್ಲೂ ಪ್ರಮುಖವಾಗಿ ಧನುಷ್, ರಾಯ್ ಲಕ್ಷ್ಮಿ(Roy Lakshmi) , ಅಮಲಾ ಪೌಲ್ (Amala Paul) ವಿರುದ್ಧವೂ ದೂರು ದಾಖಲಾಗಿದೆ. ಇದನ್ನೂ ಓದಿ:ತಿರುಪತಿ ತಿಮ್ಮಪ್ಪನಿಗೆ ‘ಮುಡಿ’ ಕೊಟ್ಟ ಖ್ಯಾತ ನಟ ಧನುಷ್

    ತೇನಾಂಡಾಲ್ ಫಿಲ್ಮ್ ಸಂಸ್ಥೆಯು ಧನುಷ್ ಗಾಗಿ ಚಿತ್ರವೊಂದನ್ನು ನಿರ್ಮಾಣ ಮಾಡುತ್ತಿದೆ. ಒಂದು ತಿಂಗಳ ಕಾಲ ಶೂಟಿಂಗ್ ಕೂಡ ನಡೆದಿದೆ. ಕಾರಣಾಂತರಗಳಿಂದ ಶೂಟಿಂಗ್ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಶೂಟಿಂಗ್ ಮಾಡುವಂತೆ ಧನುಷ್ ಗೆ ಮನವಿ ಮಾಡಲಾಗಿದೆ. ಆದರೆ, ಅವರು ಸ್ಪಂದಿಸುತ್ತಿಲ್ಲ ಎಂದು ದೂರಿನಲ್ಲಿದೆ. ಈ ಸಿನಿಮಾಗಾಗಿ ಸಂಸ್ಥೆಯು 20 ಕೋಟಿ ರೂಪಾಯಿಯನ್ನು ಧನುಷ್ ಗೆ ನೀಡಿದೆಯಂತೆ.

    ಕಾಲ್ ಶೀಟ್ ನೀಡದೇ ಇರುವುದು ಒಂದು ಸಮಸ್ಯೆಯಾದರೆ, ಕೆಲ ನಟಿಯರು ಚಿತ್ರೀಕರಣಕ್ಕೆ ಬಂದರೆ, ಅವರಿಗೆ ಹತ್ತು ಜನ ಸೆಕ್ಯೂರಿಟಿ ಗಾರ್ಡ್ ಗಳು ಬೇಕೆಂದು ಹೇಳುತ್ತಾರಂತೆ. ಇದರಿಂದಾಗಿ ಭಾರೀ ಮೊತ್ತದ ಹಣವನ್ನೇ ಸಂಸ್ಥೆಯು ನೀಡಬೇಕಾಗಿದೆ. ಇದನ್ನು ತಪ್ಪಿಸುವಂತೆ ಫಿಲ್ಮ್ ಚೇಂಬರ್ ಗೆ ಕೆಲವು ನಿರ್ಮಾಪಕರು ಪತ್ರ ಬರೆದಿದ್ದಾರೆ. ಸೆಕ್ಯೂರಿಟಿ ಬೇಕಾದ ನಟಿಯರು ತಾವೇ ದುಡ್ಡು ಕೊಟ್ಟ ನೇಮಿಸಿಕೊಳ್ಳಲಿ ಎನ್ನುವುದು ನಿರ್ಮಾಪಕರ ವಾದ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆದಿಪುರುಷನಿಗೆ ಬಿಗ್ ರಿಲೀಫ್ : ಬ್ಯಾನ್ ತೆರವುಗೊಳಿಸಿದ ನೇಪಾಳ ಹೈಕೋರ್ಟ್

    ಆದಿಪುರುಷನಿಗೆ ಬಿಗ್ ರಿಲೀಫ್ : ಬ್ಯಾನ್ ತೆರವುಗೊಳಿಸಿದ ನೇಪಾಳ ಹೈಕೋರ್ಟ್

    ಪ್ರಭಾಸ್ ನಟನೆಯ ಆದಿಪುರುಷ ಸಿನಿಮಾಗೆ ನೇಪಾಳ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸೀತೆಯ ಕುರಿತಾದ ಡೈಲಾಗ್ ಅನ್ನು ಪ್ರಶ್ನಿಸಿ ಕಠ್ಮಂಡು ಮೇಯರ್ ಬಲೇನ್ ಶಾ ಕೋರ್ಟ್ ಮೊರೆ ಹೋಗಿದ್ದರು. ಜೊತೆಗೆ ನೇಪಾಳದಲ್ಲಿ ಈ ಸಿನಿಮಾವನ್ನು ಬ್ಯಾನ್ ಮಾಡಲಾಗಿತ್ತು. ಈ ಬ್ಯಾನ್ ಪ್ರಶ್ನಿಸಿ ಚಿತ್ರತಂಡ ಕೂಡ ಕೋರ್ಟ್ ಮೆಟ್ಟಿಲು ಏರಿತು.

    ಆದಿಪುರುಷ ಸಿನಿಮಾ ಕುರಿತಾದ ಅರ್ಜಿಯನ್ನು ಕೈಗೆತ್ತಿಕೊಂಡ ನೇಪಾಳ ಹೈಕೋರ್ಟ್, ‘ಸಿನಿಮಾ ಸೆನ್ಸಾರ್ ಆಗಿದೆ. ಸೆನ್ಸಾರ್ ಮಂಡಳಿಯು ಚಿತ್ರವನ್ನು ಒಪ್ಪಿಕೊಂಡ ಮೇಲೆ ಬ್ಯಾನ್ ಗೆ ಅರ್ಥವಿಲ್ಲ. ಹಾಗಾಗಿ ಬ್ಯಾನ್ ತೆರೆವುಗೊಳಿಸಿ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಇದರಿಂದಾಗಿ ನೇಪಾಳದಲ್ಲಿ ಆದಿಪುರುಷ ಚಿತ್ರಕ್ಕೆ ದೊಡ್ಡ ಗೆಲುವು ಸಿಕ್ಕಿದೆ. ಆದರೆ, ಕೋರ್ಟ್ ತೀರ್ಪು ಏನೇ ಬಂದರೂ, ಸಿನಿಮಾ ಪ್ರದರ್ಶನಕ್ಕೆ ಬಿಡುವುದಿಲ್ಲ ಎಂದಿದ್ದಾರೆ ಬಲೇನ್ ಶಾ.

    ಆದಿಪುರುಷ (Adi Purush) ಸಿನಿಮಾದಲ್ಲಿ ಸೀತೆಯನ್ನು ಭಾರತದ ಮಗಳು ಎಂದು ಕರೆದ ಡೈಲಾಗ್ ಕುರಿತಂತೆ ಕಠ್ಮಂಡು ಮೇಯರ್ ಈ ಹಿಂದೆ ಆಕ್ಷೇಪ ವ್ಯಕ್ತ ಪಡಿಸಿದ್ದರು. ಸಿನಿಮಾದಲ್ಲಿ ಸುಳ್ಳು ಇತಿಹಾಸವನ್ನು ಹೇಳಿದ್ದಕ್ಕೆ ಚಿತ್ರವನ್ನು ಕಠ್ಮಂಡುವಿನಲ್ಲಿ ಬ್ಯಾನ್ ಮಾಡಿದ್ದರು. ಡೈಲಾಗ್ ತಗೆಯುವಂತೆ ಚಿತ್ರತಂಡಕ್ಕೆ ಹೇಳಿದ್ದರೂ ಡೈಲಾಗ್ ಅನ್ನು ತಗೆಯದೇ ಇರುವ ಕಾರಣಕ್ಕಾಗಿ ಕಠ್ಮಂಡು ಮೇಯರ್ ಸುತ್ತೋಲೆ ಹೊರಡಿಸಿದ್ದಾರೆ. ಇದನ್ನೂ ಓದಿ:ಅಮ್ಮು ಜೊತೆಗಿನ ಮದುವೆ ಬಗ್ಗೆ ರಾಕೇಶ್ ಅಡಿಗ ಸ್ಪಷ್ಟನೆ

    ಬರೀ ಆದಿಪುರುಷ ಸಿನಿಮಾ ಮಾತ್ರವಲ್ಲ, ಕಠ್ಮಂಡುನಲ್ಲಿ (Kathmandu) ಒಟ್ಟು 17 ಚಿತ್ರಮಂದಿರಗಳಿದ್ದು ಈ ಅಷ್ಟೂ ಚಿತ್ರಮಂದಿರಗಳಲ್ಲೂ ಭಾರತೀಯ ಸಿನಿಮಾಗಳನ್ನು ಪ್ರದರ್ಶನ ಮಾಡಬಾರದು ಎಂದು ಆದೇಶ ಹೊರಡಿಸಿರುವುದಾಗಿ ಮೇಯರ್ ಬಲೇನ್ ಶಾ (Balen Shah) ಟ್ವೀಟ್ ಮಾಡಿದ್ದರು. ಆದಿಪುರುಷ ಸಿನಿಮಾ ಸೇರಿದಂತೆ ಭಾರತದ ಅಷ್ಟೂ ಸಿನಿಮಾಗಳನ್ನೂ ಬ್ಯಾನ್ (Ban) ಮಾಡಿರುವುದಾಗಿ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

    ಓಂ ರಾವತ್ (Om Raut) ನಿರ್ದೇಶನದ ‘ಆದಿಪುರುಷ್’ ಸಿನಿಮಾಗೆ ಕೆಟ್ಟ ವಿಮರ್ಶೆ ವ್ಯಕ್ತವಾಗಿದೆ. ಈ ಸಿನಿಮಾದ ಹಲವು ಅಂಶಗಳನ್ನು ಟೀಕಿಸಲಾಗುತ್ತಿದೆ. ರಾಮಾಯಣವನ್ನು ಆಧರಿಸಿದ ಈ ಚಿತ್ರದಲ್ಲಿ ಪ್ರಭಾಸ್ ಅವರು ರಾಮನ ಪಾತ್ರ ಮಾಡಿದ್ದಾರೆ. ಸೀತೆಯಾಗಿ ಕೃತಿ ಸನೋನ್ ಕಾಣಿಸಿಕೊಂಡಿದ್ದಾರೆ. ಆಂಜನೇಯನಾಗಿ ದೇವದತ್ತ ನಾಗೆ ಅವರು ಅಭಿನಯಿಸಿದ್ದಾರೆ. ಲಕ್ಷ್ಮಣನ ಪಾತ್ರಕ್ಕೆ ಸನ್ನಿ ಸಿಂಗ್ ಅವರು ಬಣ್ಣ ಹಚ್ಚಿದ್ದಾರೆ. ಸೈಫ್ ಅಲಿ ಖಾನ್ ಅವರು ರಾವಣನಾಗಿ ಅಬ್ಬರಿಸಿದ್ದಾರೆ. ಆದರೆ ರಾಮಾಯಣವನ್ನು ತೋರಿಸಿದ ರೀತಿ ಸರಿಯಾಗಿಲ್ಲ ಎಂದು ಪ್ರೇಕ್ಷಕರು ತಕರಾರು ತೆಗೆದಿದ್ದಾರೆ. ಸೈಫ್‌ರನ್ನ ಮಾಡ್ರನ್ ರಾವಣನಂತೆ ತೋರಿಸಿರೋದು ಟ್ರೋಲ್ ಆಗುತ್ತಿದೆ. ಸಿನಿಮಾ ನೈಜವಾಗಿ ತೋರಿಸಿಲ್ಲ ಎಂದು ಟೀಕೆ ಮಾಡಿದ್ದಾರೆ.

    ಚಿತ್ರಕಥೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಸಿನಿಮಾದ ಸಂಭಾಷಣೆಕಾರ ಮನೋಜ್ ಮುಂತಶೀರ್ ಅವರು ಮಾತು ಬದಲಾಯಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ‘ಆದಿಪುರುಷ್’ ಸಿನಿಮಾವನ್ನು ಟ್ರೋಲ್ ಮಾಡಲಾಗುತ್ತಿದೆ. ಪಾತ್ರಗಳನ್ನು ತೋರಿಸಿದ ರೀತಿ, ಗ್ರಾಫಿಕ್ಸ್ ಗುಣಮಟ್ಟ ಸೇರಿದಂತೆ ಅನೇಕ ವಿಚಾರಗಳನ್ನು ಜನರು ಟೀಕಿಸುತ್ತಿದ್ದಾರೆ. ಈ ನಡುವೆ ಸಂಭಾಷಣಕಾರ ಮನೋಜ್ ಮುಂತಶೀರ್ ಅವರು ನೀಡಿದ ಕೇಳಿಕೆ ಸೆನ್ಸೇಷನ್ ಕ್ರಿಯೆಟ್ ಮಾಡಿದೆ. ಇದನ್ನು ನಾನು ಮೊದಲೇ ಹೇಳಿದ್ದೇ ಮತ್ತು ಈಗಲೂ ಹೇಳುತ್ತೇನೆ. ಈ ಸಿನಿಮಾದ ಹೆಸರು ಆದಿಪುರುಷ್. ನಾವು ರಾಮಾಯಣವನ್ನು ಸಿನಿಮಾ ಮಾಡಿಲ್ಲ. ರಾಮಾಯಾಣಕ್ಕೂ ಆದಿಪುರುಷ್‌ ಸಿನಿಮಾಗೂ ಸಂಬಂಧವಿಲ್ಲ. ಅದರಿಂದ ತುಂಬ ಸ್ಫೂರ್ತಿ ಪಡೆದಿದ್ದೇವೆ. ಡಿಸ್‌ಕ್ಲೈಮರ್‌ನಲ್ಲೂ ನಾವು ಅದನ್ನೇ ಹೇಳಿದ್ದೇವೆ ಎಂದು ಮನೋಜ್ ಮುಂತಶೀರ್ ಹೇಳಿದ್ದಾರೆ.

  • 6 ದಿನಕ್ಕೆ ಆದಿಪುರುಷ ಗಳಿಸಿದ್ದು 419 ಕೋಟಿ ರೂ.: ಚಿತ್ರತಂಡವೇ ಅಧಿಕೃತ ಮಾಹಿತಿ

    6 ದಿನಕ್ಕೆ ಆದಿಪುರುಷ ಗಳಿಸಿದ್ದು 419 ಕೋಟಿ ರೂ.: ಚಿತ್ರತಂಡವೇ ಅಧಿಕೃತ ಮಾಹಿತಿ

    ಭಾರೀ ವಿವಾದ (Controversy) ಮತ್ತು ಬ್ಯಾನ್ ನಡುವೆಯೂ ಆದಿ ಪುರುಷ (Adipurush) ಸಿನಿಮಾ 6 ದಿನದಲ್ಲಿ ಬರೋಬ್ಬರಿ 419 ಕೋಟಿ ರೂಪಾಯಿ ಗಳಿಕೆ (Collection) ಮಾಡಿದೆ ಎಂದು ಸ್ವತಃ ಚಿತ್ರತಂಡವೇ ಘೋಷಣೆ ಮಾಡಿದೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಅದು ಪೋಸ್ಟರ್ ವೊಂದನ್ನು ಹಂಚಿಕೊಂಡಿದೆ. ವಿವಾದ, ಬ್ಯಾನ್ ಏನೇ ಇದ್ದರೂ ಉತ್ತಮ ಗಳಿಕೆಯನ್ನೇ ಸಿನಿಮಾ ತಂದುಕೊಟ್ಟಿದೆ.

    ಮೊದಲ ದಿನವೇ ಸಿನಿಮಾ 140 ಕೋಟಿ ರೂಪಾಯಿ ಆದಾಯ ತಂದುಕೊಟ್ಟಿದ್ದರೆ, 2ನೇ ದಿನ 240 ಕೋಟಿ, 3ನೇ ದಿನ 34 ಕೋಟಿ, 4ನೇ ದಿನ 35 ಕೋಟಿ ರೂಪಾಯಿ, 5ನೇ ದಿನ 20 ಕೋಟಿ ರೂಪಾಯಿ ಹಾಗೂ 6ನೇ ದಿನ 15 ಕೋಟಿ ರೂಪಾಯಿಯನ್ನು ಬಾಕ್ಸ್ ಆಫೀಸಿನಲ್ಲಿ ಆದಿ ಪುರುಷ ಕಮಾಯಿ ಮಾಡಿದೆ ಎಂದು ಚಿತ್ರತಂಡ ತಿಳಿಸಿದೆ. ಇದನ್ನೂ ಓದಿ:‘ಕಾಂತಾರ’ 2ಗಾಗಿ ಕುದುರೆ ಸವಾರಿ, ಕಳರಿ ಪಯಟ್ಟು ಕಲಿಕೆಯಲ್ಲಿ ರಿಷಬ್ ಶೆಟ್ಟಿ ಬ್ಯುಸಿ

    ಈ ನಡುವೆ ಇಂದಿನಿಂದ ಟಿಕೆಟ್ ದರವನ್ನೂ ಚಿತ್ರತಂಡ ಇಳಿಸಿದೆ. ತ್ರಿಡಿ ಸಿನಿಮಾವನ್ನು ಕೇವಲ 150 ರೂಪಾಯಿಯಲ್ಲಿ ನೋಡಬಹುದು ಎಂದು ಘೋಷಣೆ ಮಾಡಿದೆ. ಮೂರನೇ ದಿನದಿಂದ ಬಾಕ್ಸ್ ಆಫೀಸ್  (Box Office) ಗಳಿಕೆಯಲ್ಲಿ ಭಾರೀ ಇಳಿಮುಖ ಕಂಡಿದ್ದರಿಂದ ಟಿಕೆಟ್ ದರವನ್ನು ಇಳಿಸುವ ಮೂಲಕ ಮತ್ತೆ ಚೇತರಿಕೆ ಕಾಣುವ ಕನಸು ಕಂಡಿದೆ.

    ಈ ಸಿನಿಮಾವನ್ನು ಬ್ಯಾನ್ (Ban) ಮಾಡಬೇಕು ಎಂದು ವಿಷ್ಣು ಗುಪ್ತಾ ಎನ್ನುವವರು ದೆಹಲಿ ಹೈಕೋರ್ಟ್ ಗೂ ಮೊರೆ ಹೋಗಿದ್ದಾರೆ. ನಿನ್ನೆ ಅರ್ಜಿಯನ್ನು ಕೈಗೆತ್ತಿಕೊಂಡಿರುವ ನ್ಯಾಯಾಧೀಶರು ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಿದ್ದಾರೆ. ಸಿನಿಮಾ ರಿಲೀಸ್ ಆಗಿರುವುದರಿಂದ ಆತುರದ ವಿಚಾರಣೆ ಮಾಡುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.

  • ಆದಿಪುರುಷ ಸಿನಿಮಾ ಬ್ಯಾನ್ ಮಾಡಿ : ಜೂ 30ಕ್ಕೆ ಬನ್ನಿ ಎಂದ ಹೈಕೋರ್ಟ್

    ಆದಿಪುರುಷ ಸಿನಿಮಾ ಬ್ಯಾನ್ ಮಾಡಿ : ಜೂ 30ಕ್ಕೆ ಬನ್ನಿ ಎಂದ ಹೈಕೋರ್ಟ್

    ಪ್ರಭಾಸ್ (Prabhas) ಅಭಿನಯದ ಆದಿ ಪುರುಷ  (Adi Purush)ಸಿನಿಮಾ ಬ್ಯಾನ್ ಮಾಡುವಂತೆ ಹಿಂದೂ ಪರ ಸಂಘಟನೆಗಳು ದೆಹಲಿ ಹೈಕೋರ್ಟ್ (Delhi High Court) ಮೆಟ್ಟಿಲು ಏರಿದ್ದವು. ಬ್ಯಾನ್ ಕುರಿತಾಗಿ ತುರ್ತು ಕ್ರಮ ತಗೆದುಕೊಳ್ಳುವಂತೆ ನ್ಯಾಯಾಲಯಕ್ಕೆ ಅವು ಮನವಿ ಮಾಡಿದ್ದವು. ನಿನ್ನೆ ವಿಚಾರಣೆ ನಡೆಸಿದ ನ್ಯಾಯಾಲಯವು ಜೂ 30ಕ್ಕೆ ಬರುವಂತೆ ಹೇಳಿ ವಿಚಾರಣೆಯನ್ನು ಮುಂದೂಡಿತು.

    ಆದಿ ಪುರುಷ ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ಆಗುವಂತಹ ಸಾಕಷ್ಟು ಅಂಶಗಳು ಇವೆ. ಈಗಾಗಲೇ ನೇಪಾಳ ಸರಕಾರ ಸಿನಿಮಾವನ್ನು ಬ್ಯಾನ್ (Ban) ಮಾಡಿದೆ. ಭಾರತದಲ್ಲೂ ಈ ಚಿತ್ರ ಬ್ಯಾನ್ ಆಗಲಿ ಎಂದು ಹಿಂದೂ ಪರ ಸಂಘಟನೆಯ ಅಧ್ಯಕ್ಷ ವಿಷ್ಣು ಗುಪ್ತಾ (Vishnu Gupta) ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಕೂಡಲೇ ಅರ್ಜಿಯನ್ನು ಕೈಗೆತ್ತಿಕೊಳ್ಳಬೇಕು ಎಂದು ಅವರು ಮನವಿ ಕೂಡ ಮಾಡಿದ್ದರು.

    ನಿನ್ನೆ ಅರ್ಜಿಯ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯವು, ‘ಈಗಾಗಲೇ ಸಿನಿಮಾ ರಿಲೀಸ್ ಆಗಿದೆ. ಆತುರದಲ್ಲಿ ವಿಚಾರಣೆಯನ್ನು ಮಾಡಲು ಸಾಧ್ಯವಿಲ್ಲ. ಜೂ.30ರಂದು ವಿಚಾರಣೆ ನಡೆಸಲಾಗುವುದು ಎಂದು ವಿಷ್ಣು ಗುಪ್ತಾ ಪರ ವಕೀಲರಿಗೆ ನ್ಯಾಯಾಲಯ ತಿಳಿಸಿತು. ಅಲ್ಲಿಗೆ ಚಿತ್ರತಂಡಕ್ಕೆ ಎಂಟು ದಿನಗಳ ಕಾಲ ಬಿಗ್ ರಿಲೀಫ್ ಸಿಕ್ಕಂತಾಯಿತು.

    ಒಂದು ಕಡೆ ಕಾನೂನು ಸಮರ ನಡೆದಿದ್ದರೆ ಮತ್ತೊಂದು ಕಡೆ ದಿ ಪುರುಷ ಸಿನಿಮಾದ ಡೈಲಾಗ್ ರೈಟರ್ ಮನೋಜ್ ಮುಂತಶೀರ್  (Manoj Mantashir) ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ‘ಹನುಮಾನ್ (Hanuman) ದೇವರೇ ಅಲ್ಲ’ ಎಂದು ಹೇಳುವ ಮೂಲಕ ಉರಿವ ಬೆಂಕಿಗೆ ತುಪ್ಪ ಸುರಿದ್ದಾರೆ. ಆದಿಪುರುಷ ಸಿನಿಮಾದಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಈಗಾಗಲೇ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತ ಪಡಿಸುತ್ತಿವೆ. ಈ ನಡುವೆ ಹನುಮಾನ್ ದೇವರೇ ಅಲ್ಲ ಅನ್ನುವ ಮಾತು ಮತ್ತೆ ವಿವಾದಕ್ಕೆ (Controversy) ಕಾರಣವಾಗಿದೆ. ಇದನ್ನೂ ಓದಿ:ಲೈಂಗಿಕ ಕಿರುಕುಳ ಆರೋಪ: ಧಾರಾವಾಹಿ ನಿರ್ಮಾಪಕನ ಮೇಲೆ ಎಫ್.ಐ.ಆರ್ ದಾಖಲು

    ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ‘ಹನುಮಾನ್ ದೇವರಲ್ಲ. ಭಜರಂಗಿಯನ್ನು ನಾವು ದೇವರು ಮಾಡಿದ್ದೇವೆಯಷ್ಟೆ. ಹನುಮ ರಾಮನ ಭಕ್ತ. ರಾಮನ ಭಕ್ತ ದೇವರು ಹೇಗೆ ಆಗುತ್ತಾನೆ. ರಾಮನನ್ನು ಪೂಜಿಸುತ್ತೇವೆ ಎನ್ನುವ ಕಾರಣಕ್ಕಾಗಿ ಹನುಮನನ್ನೂ ಪೂಜಿಸುತ್ತೇವೆ ಎಂದು ಹೇಳಿದ್ದಾರೆ. ಈ ಮಾತೇ ಅವರಿಗೆ ಮುಳುವಾಗಿದೆ.

    ಆದಿಪುರುಷ (Adipurush) ಸಿನಿಮಾದ ಬಗ್ಗೆ ದಿನಕ್ಕೊಂದು ಹೇಳಿಕೆ ಕೊಡುತ್ತಿರುವ ಮನೋಜ್ ಅವರಿಗೆ ಜೀವ ಬೆದರಿಕೆ ಇದೆ ಎನ್ನುವ ಕಾರಣಕ್ಕಾಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಈ ಭದ್ರತೆಯ ನಡುವೆಯೂ ಅವರು ಮತ್ತೆ ಮತ್ತೆ ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಇದು ಚಿತ್ರತಂಡಕ್ಕೆ ನುಂಗಲಾರದ ತುತ್ತಾಗಿದೆ.

  • ಆದಿಪುರುಷ ಬ್ಯಾನ್ ಮಾಡಿ ಎಂದು ಪ್ರಧಾನಿಗೆ ಪತ್ರ ಬರೆದ ಸಿನಿ ಅಸೋಷಿಯೇಷನ್

    ಆದಿಪುರುಷ ಬ್ಯಾನ್ ಮಾಡಿ ಎಂದು ಪ್ರಧಾನಿಗೆ ಪತ್ರ ಬರೆದ ಸಿನಿ ಅಸೋಷಿಯೇಷನ್

    ಆಲ್ ಇಂಡಿಯಾ ಸಿನಿ ಅಸೋಷಿಯೇಷನ್ ‘ಆದಿಪುರುಷ’ (Adipurush) ಸಿನಿಮಾದ ಮೇಲೆ ಸಾಕಷ್ಟು ಆರೋಪಗಳನ್ನು ಮಾಡಿದ್ದು, ಕೂಡಲೇ ಸಿನಿಮಾ ಪ್ರದರ್ಶನವನ್ನು ನಿಲ್ಲಿಸುವಂತೆ ಹಾಗೂ ಶಾಶ್ವತವಾಗಿ ಈ ಸಿನಿಮಾವನ್ನು ಬ್ಯಾನ್ (Ban) ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರವೊಂದನ್ನು ಬರೆದಿದೆ. ಅಲ್ಲದೇ, ನಿರ್ದೇಶಕ ಓಂ ರಾವುತ್ ಮತ್ತು ಲೇಖಕ ಮನೋಜ್ ಮೇಲೆ ಎಫ್.ಐ.ಆರ್ ದಾಖಲಿಸಬೇಕು ಎಂದು ಅದು ಒತ್ತಾಯ ಮಾಡಿದೆ.

    ಹಿಂದೂಗಳ ಭಾವನೆಯನ್ನು ನೋವಿಸುವಂತಹ ಅನೇಕ ಸಂಗತಿಗಳು ಸಿನಿಮಾದಲ್ಲಿವೆ. ಭಗವಾನ್ ಶ್ರೀರಾಮ್ ಮತ್ತು ರಾವಣನನ್ನು ಕಾರ್ಟೂನ್ ರೀತಿಯಲ್ಲಿ ತೋರಿಸಲಾಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ಬರುವಂತೆ ಚಿತ್ರ ತಯಾರಿಸಲಾಗಿದೆ. ಈ ಸಿನಿಮಾದಿಂದಾಗಿ ಅನೇಕರು ನೋವನ್ನುಂಡಿದ್ದಾರೆ. ಹಾಗಾಗಿ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಮಾತ್ರವಲ್ಲ, ಓಟಿಟಿ ಸೇರಿದಂತೆ ಯಾವ ವೇದಿಕೆಯಲ್ಲೂ ಪ್ರದರ್ಶನವಾಗಬಾರದು ಎಂದು ಸಿನಿ ಅಸೋಷಿಯೇಷನ್ (Cine Association) ಪ್ರಧಾನಿಗೆ ಮನವಿ ಮಾಡಿಕೊಂಡಿದೆ. ಇದನ್ನೂ ಓದಿ:ಲೈಂಗಿಕ ಕಿರುಕುಳ ಆರೋಪ: ಧಾರಾವಾಹಿ ನಿರ್ಮಾಪಕನ ಮೇಲೆ ಎಫ್.ಐ.ಆರ್ ದಾಖಲು

    ಆದಿಪುರುಷ ಸಿನಿಮಾವನ್ನು ಗಂಭೀರವಾಗಿ ತೆಗೆದುಕೊಂಡಿರುವ ಸಿನಿ ಅಸೋಷಿಯೇಷನ್ ಸಿನಿಮಾವನ್ನು ಬ್ಯಾನ್ ಮಾಡಲೇಬೇಕು ಎಂದು ಪ್ರಧಾನಿಯನ್ನು ಒತ್ತಾಯಿಸಿದ್ದಾರೆ. ಇತಿಹಾಸವನ್ನು ಈ ಸಿನಿಮಾದಲ್ಲಿ ತಿರುಚಲಾಗಿದೆ. ಅಲ್ಲದೇ ಡೈಲಾಗ್ ನಲ್ಲೂ ಹಿಂದೂ ಧರ್ಮಕ್ಕೆ ಅವಹೇಳನ ಮಾಡುವಂತಹ ಪದಗಳನ್ನು ಬಳಸಲಾಗಿದೆ. ಹೀಗಾಗಿ ಕೂಡಲೇ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದು ಪತ್ರದಲ್ಲಿ ಬರೆಯಲಾಗಿದೆ.

    ನಟ ಪ್ರಭಾಸ್ (Prabhas) ಅವರು ಇಂತಹ ಕೆಟ್ಟ ಸಿನಿಮಾದ ಭಾಗವಾಗಬಾರದಿತ್ತು. ಕೃತಿ ಸನೂನ್ ಸೇರಿದಂತೆ ನುರಿತ ಕಲಾವಿದರೇ ಈ ಸಿನಿಮಾದಲ್ಲಿದ್ದಾರೆ. ಶೂಟಿಂಗ್ ಮಾಡುವಾಗ ಇವರಿಗೆ ಅರ್ಥವಾಗಲಿಲ್ಲವೆ? ಎಂದು ಹಲವರು ಕೇಳಿದ್ದಾರೆ.

  • ಆದಿಪುರುಷ ವಿವಾದ : ಕಠ್ಮಂಡುನಲ್ಲಿ ಭಾರತೀಯ ಸಿನಿಮಾಗಳು ಬ್ಯಾನ್

    ಆದಿಪುರುಷ ವಿವಾದ : ಕಠ್ಮಂಡುನಲ್ಲಿ ಭಾರತೀಯ ಸಿನಿಮಾಗಳು ಬ್ಯಾನ್

    ಪ್ರಭಾಸ್ (Prabhas) ನಟನೆಯ ಆದಿಪುರುಷ (Adi Purush) ಸಿನಿಮಾದಲ್ಲಿ ಸೀತೆಯನ್ನು ಭಾರತದ ಮಗಳು ಎಂದು ಕರೆದ ಡೈಲಾಗ್ ಕುರಿತಂತೆ ಕಠ್ಮಂಡು ಮೇಯರ್ ಆಕ್ಷೇಪ ವ್ಯಕ್ತ ಪಡಿಸಿದ್ದರು. ಸಿನಿಮಾದಲ್ಲಿ ಸುಳ್ಳು ಇತಿಹಾಸವನ್ನು ಹೇಳಿದ್ದಕ್ಕೆ ಚಿತ್ರವನ್ನು ಕಠ್ಮಂಡುವಿನಲ್ಲಿ ಬ್ಯಾನ್ ಮಾಡಲಾಗುವುದು ಎಂದು ತಿಳಿಸಿದ್ದರಂತೆ. ನಿನ್ನೆವರೆಗೂ ಡೈಲಾಗ್ ಅನ್ನು ತಗೆಯದೇ ಇರುವ ಕಾರಣಕ್ಕಾಗಿ ಕಠ್ಮಂಡು ಮೇಯರ್ ಮತ್ತೊಂದು ಸುತ್ತೋಲೆ ಹೊರಡಿಸಿದ್ದಾರೆ.

    ಕಠ್ಮಂಡುನಲ್ಲಿ (Kathmandu) ಒಟ್ಟು 17 ಚಿತ್ರಮಂದಿರಗಳಿದ್ದು, ಈ ಅಷ್ಟೂ ಚಿತ್ರಮಂದಿರಗಳಲ್ಲೂ ಭಾರತೀಯ ಸಿನಿಮಾಗಳನ್ನು ಪ್ರದರ್ಶನ ಮಾಡಬಾರದು ಎಂದು ಆದೇಶ ಹೊರಡಿಸಿರುವುದಾಗಿ ಮೇಯರ್ ಬಲೇನ್ ಶಾ (Balen Shah) ಟ್ವೀಟ್ ಮಾಡಿದ್ದಾರೆ. ಆದಿಪುರುಷ ಸಿನಿಮಾ ಸೇರಿದಂತೆ ಭಾರತದ ಅಷ್ಟೂ ಸಿನಿಮಾಗಳನ್ನೂ ಬ್ಯಾನ್ (Ban) ಮಾಡಿರುವುದಾಗಿ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ದುಬೈನಲ್ಲಿ ನಡೆಯಿತು ಡಾ.ರಾಜ್ ಕಪ್ ಟೀಮ್ ಹರಾಜು ಪ್ರಕ್ರಿಯೆ

    ಈ ನಡುವೆ ಚಿತ್ರ ತಂಡ ಹೊಸದೊಂದು ವರಸೆ ಶುರು ಮಾಡಿಕೊಂಡಿದೆ. ಸಿನಿಮಾ ಬಗ್ಗೆ ಬಗೆ ಬಗೆಯ ರೀತಿಯಲ್ಲಿ ಚರ್ಚೆ ನಡೆಯುತ್ತಿದ್ದರೆ, ಚಿತ್ರತಂಡದ ಸಂಭಾಷಣೆಕಾರ ಮನೋಜ್ ಮುಂತಶೀರ್ ಅವರು ಇದೀಗ ಸಿನಿಮಾ ಬಗ್ಗೆ ವರಸೆ ಬದಲಿಸಿದ್ದಾರೆ. ರಾಮಾಯಣಕ್ಕೂ ಆದಿಪುರುಷ್ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಅಂತಾ ಹೇಳಿಕೆ ನೀಡಿದ್ದಾರೆ.

    ಓಂ ರಾವತ್ (Om Raut) ನಿರ್ದೇಶನದ ‘ಆದಿಪುರುಷ್’ ಸಿನಿಮಾಗೆ ಕೆಟ್ಟ ವಿಮರ್ಶೆ ವ್ಯಕ್ತವಾಗುತ್ತಿದೆ. ಈ ಸಿನಿಮಾದ ಹಲವು ಅಂಶಗಳನ್ನು ಟೀಕಿಸಲಾಗುತ್ತಿದೆ. ರಾಮಾಯಣವನ್ನು ಆಧರಿಸಿದ ಈ ಚಿತ್ರದಲ್ಲಿ ಪ್ರಭಾಸ್ ಅವರು ರಾಮನ ಪಾತ್ರ ಮಾಡಿದ್ದಾರೆ. ಸೀತೆಯಾಗಿ ಕೃತಿ ಸನೋನ್ ಕಾಣಿಸಿಕೊಂಡಿದ್ದಾರೆ. ಆಂಜನೇಯನಾಗಿ ದೇವದತ್ತ ನಾಗೆ ಅವರು ಅಭಿನಯಿಸಿದ್ದಾರೆ. ಲಕ್ಷ್ಮಣನ ಪಾತ್ರಕ್ಕೆ ಸನ್ನಿ ಸಿಂಗ್ ಅವರು ಬಣ್ಣ ಹಚ್ಚಿದ್ದಾರೆ. ಸೈಫ್ ಅಲಿ ಖಾನ್ ಅವರು ರಾವಣನಾಗಿ ಅಬ್ಬರಿಸಿದ್ದಾರೆ. ಆದರೆ ರಾಮಾಯಣವನ್ನು ತೋರಿಸಿದ ರೀತಿ ಸರಿಯಾಗಿಲ್ಲ ಎಂದು ಪ್ರೇಕ್ಷಕರು ತಕರಾರು ತೆಗೆದಿದ್ದಾರೆ. ಸೈಫ್‌ರನ್ನ ಮಾಡ್ರನ್ ರಾವಣನಂತೆ ತೋರಿಸಿರೋದು ಟ್ರೋಲ್ ಆಗುತ್ತಿದೆ. ಸಿನಿಮಾ ನೈಜವಾಗಿ ತೋರಿಸಿಲ್ಲ ಎಂದು ಟೀಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಿನಿಮಾದ ಸಂಭಾಷಣೆಕಾರ ಮನೋಜ್ ಮುಂತಶೀರ್ ಅವರು ಮಾತು ಬದಲಾಯಿಸಿದ್ದಾರೆ. ಈ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ.

     

    ಸೋಶಿಯಲ್ ಮೀಡಿಯಾದಲ್ಲಿ ‘ಆದಿಪುರುಷ್’ ಸಿನಿಮಾವನ್ನು ಟ್ರೋಲ್ ಮಾಡಲಾಗುತ್ತಿದೆ. ಪಾತ್ರಗಳನ್ನು ತೋರಿಸಿದ ರೀತಿ, ಗ್ರಾಫಿಕ್ಸ್ ಗುಣಮಟ್ಟ ಸೇರಿದಂತೆ ಅನೇಕ ವಿಚಾರಗಳನ್ನು ಜನರು ಟೀಕಿಸುತ್ತಿದ್ದಾರೆ. ಈ ನಡುವೆ ಸಂಭಾಷಣಕಾರ ಮನೋಜ್ ಮುಂತಶೀರ್ ಅವರು ನೀಡಿದ ಕೇಳಿಕೆ ಸೆನ್ಸೇಷನ್ ಕ್ರಿಯೆಟ್ ಮಾಡಿದೆ. ಇದನ್ನು ನಾನು ಮೊದಲೇ ಹೇಳಿದ್ದೇ ಮತ್ತು ಈಗಲೂ ಹೇಳುತ್ತೇನೆ. ಈ ಸಿನಿಮಾದ ಹೆಸರು ಆದಿಪುರುಷ್. ನಾವು ರಾಮಾಯಣವನ್ನು ಸಿನಿಮಾ ಮಾಡಿಲ್ಲ. ರಾಮಾಯಾಣಕ್ಕೂ ಆದಿಪುರುಷ್‌ ಸಿನಿಮಾಗೂ ಸಂಬಂಧವಿಲ್ಲ. ಅದರಿಂದ ತುಂಬ ಸ್ಫೂರ್ತಿ ಪಡೆದಿದ್ದೇವೆ. ಡಿಸ್‌ಕ್ಲೈಮರ್‌ನಲ್ಲೂ ನಾವು ಅದನ್ನೇ ಹೇಳಿದ್ದೇವೆ ಎಂದು ಮನೋಜ್ ಮುಂತಶೀರ್ ಹೇಳಿದ್ದಾರೆ.

  • ‘ಆದಿಪುರುಷ’ನಿಗೆ ಸಂಕಷ್ಟ: ಚಿತ್ರ ನಿಲ್ಲಿಸುವಂತೆ ದೆಹಲಿ ಹೈಕೋರ್ಟಿಗೆ ಅರ್ಜಿ

    ‘ಆದಿಪುರುಷ’ನಿಗೆ ಸಂಕಷ್ಟ: ಚಿತ್ರ ನಿಲ್ಲಿಸುವಂತೆ ದೆಹಲಿ ಹೈಕೋರ್ಟಿಗೆ ಅರ್ಜಿ

    ನಿನ್ನೆಯಷ್ಟೇ ಜಗತ್ತಿನಾದ್ಯಂತ ಬಿಡುಗಡೆಯಾಗಿರುವ ಆದಿಪುರುಷ ಸಿನಿಮಾ ಪ್ರದರ್ಶನವನ್ನು ನಿಲ್ಲಿಸುವಂತೆ ದೆಹಲಿ (Delhi) ಹೈಕೋರ್ಟಿಗೆ (High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿವೆ ಹಿಂದೂಪರ ಸಂಘಟನೆಗಳು. ಈ ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆಯಾಗುವಂತಹ ಸಾಕಷ್ಟು ಅಂಶಗಳು ಇವೆ. ಹಾಗಾಗಿ ಸಿನಿಮಾ ಪ್ರದರ್ಶನವನ್ನು ನಿಲ್ಲಿಸುವಂತೆ ಸಂಘಟನೆಗಳು ಮನವಿ ಮಾಡಿಕೊಂಡಿವೆ.

    ರಾಮಾಯಣವನ್ನು ತಮಗೆ ಬೇಕಾದಂತೆ ಬದಲಾಯಿಸಿಕೊಂಡಿದ್ದಾರೆ. ಅದು ಹಿಂದೂಗಳಿಗೆ ಮತ್ತು ಹಿಂದೂ (Hindu) ದೇವರುಗಳಿಗೆ ಮಾಡಿರುವ ಅಪಮಾನ. ಈ ಹಿಂದೆಯೇ ಅನೇಕ ಅಂಶಗಳನ್ನು ಚಿತ್ರತಂಡದ ಗಮನಕ್ಕೆ ತರಲಾಗಿತ್ತು. ಎಲ್ಲವನ್ನೂ ಬದಲಾವಣೆ ಮಾಡುವುದಾಗಿ ಚಿತ್ರತಂಡ ತಿಳಿಸಿತ್ತು. ಆದರೆ, ಯಾವುದೇ ಬದಲಾವಣೆಯನ್ನು ಮಾಡದೇ ಹಳೆ ಸಿನಿಮಾವನ್ನೇ ಬಿಡುಗಡೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

    ನೇಪಾಳದಲ್ಲಿ ಸಿನಿಮಾ ಬ್ಯಾನ್ ?

    ಪ್ರಭಾಸ್ (Prabhas) ನಟನೆಯ ಆದಿಪುರುಷ (Adipurusha) ಸಿನಿಮಾ ಎಲ್ಲ ಕಡೆ ತುಂಬಿದ ಪ್ರದರ್ಶನ ಕಾಣುತ್ತಿದ್ದರೆ ನೇಪಾಳದಲ್ಲಿ ಅದು ಬಿಡುಗಡೆಯಾಗಿಲ್ಲ. ಚಿತ್ರದ ಒಂದು ಡೈಲಾಗ್ ಬಗ್ಗೆ ಕಠ್ಮಂಡು (Kathmandu)  ಮೇಯರ್ ಗರಂ ಆಗಿದ್ದು, ವಿವಾದಿತ  ಆ ಡೈಲಾಗ್ ತಗೆಯದಿದ್ದರೆ ಸಿನಿಮಾವನ್ನು ಬ್ಯಾನ್ ಮಾಡುವುದಾಗಿ ಅವರು ಹೇಳಿದ್ದಾರೆ. ಅಲ್ಲದೇ, ಮೂರು ದಿನ ಗಡುವು ಕೂಡ ನೀಡಿದ್ದಾರೆ.

    ಆದಿಪುರುಷ ಸಿನಿಮಾ ಮೊದಲಿನಿಂದಲೂ ವಿವಾದಕ್ಕೀಡು ಆಗುತ್ತಲೇ ಇದೆ. ಸಿನಿಮಾದ ಗ್ರಾಫಿಕ್ಸ್, ರಾವಣನ ಪಾತ್ರ, ತಿರುಪತಿಯಲ್ಲಿ ನಟಿಗೆ ಮುತ್ತಿಟ್ಟ ನಿರ್ದೇಶಕ ಹೀಗೆ ನಾನಾ ಕಾರಣಗಳಿಂದ ಸಿನಿಮಾ ಸುದ್ದಿಯಾಗುತ್ತಿದೆ. ಈ ಬಾರಿ ಡೈಲಾಗ್ ವೊಂದು ಹಲವು ಜನರ ಭಾವನೆಗೆ ಸಂಚಕಾರ ತಂದಿದೆಯಂತೆ. ಇದನ್ನೂ ಓದಿ:ಯಶ್ ಸಿನಿಮಾಗಾಗಿ ಬೆಂಗಳೂರಿನಲ್ಲಿ ಬೀಡು ಬಿಟ್ಟ ಡೈರೆಕ್ಟರ್- ಇಲ್ಲಿದೆ ಗುಡ್ ನ್ಯೂಸ್

    ಈ ಸಿನಿಮಾದಲ್ಲಿ ‘ಸೀತಾ ಭಾರತದ ಮಗಳು..’ ಎಂದು ಡೈಲಾಗ್ ಹೇಳಿಸಲಾಗಿದೆ. ಈ ಮಾತಿಗೆ ಕಠ್ಮುಂಡು ಮೇಯರ್ (Mayor) ಆಕ್ಷೇಪನೆಯನ್ನು ಎತ್ತಿದ್ದಾರೆ. ರಾಮಾಯಣದ ಪ್ರಕಾರ ಸೀತೆಯು ನೇಪಾಳದ ಜಾನಕ್ ಪುರದಲ್ಲಿ ಜನಿಸಿದ್ದಾರೆ. ಇಲ್ಲಿಗೆ ಶ್ರೀರಾಮ ಬಂದು ಸೀತೆಯನ್ನು ಮದುವೆ ಆಗಿರುವ ಉಲ್ಲೇಖ ಕೂಡ ಇದೆ. ಆದರೆ, ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಮತ್ತು ಸುಳ್ಳು ಹೇಳಲಾಗಿದೆ ಎಂದು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

     

    ಈಗಾಗಲೇ ನೇಪಾಳದಲ್ಲಿ ಈ ಸಿನಿಮಾದ ಸೆನ್ಸಾರ್ ಅನ್ನು ತಡೆಹಿಡಿಯಲಾಗಿದೆ. ಆದರೆ, ಉಳಿದ ಕಡೆ ಸಿನಿಮಾ ಪ್ರದರ್ಶನವಾಗುತ್ತಿದೆ. ಎಲ್ಲೆಲ್ಲಿ ಈ ಸಿನಿಮಾ ಪ್ರದರ್ಶನವಾಗುತ್ತಿದೆಯೋ ಅಲ್ಲಲ್ಲಿ, ಈ ಡೈಲಾಗ್ ತಗೆಯಲೇಬೇಕು ಎಂದು ಮೇಯರ್ ಒತ್ತಾಯಿಸಿದ್ದಾರೆ. ಸಿನಿಮಾವನ್ನು ನೇಪಾಳದಲ್ಲಿ ಬ್ಯಾನ್ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.