Tag: ಬ್ರಹ್ಮಾಸ್ತ್ರ

  • ‘ಬ್ರಹ್ಮಾಸ್ತ್ರ’ ಕಲೆಕ್ಷನ್ ಎಲ್ಲಾ ಬುರುಡೆ ಎಂದು ಟೀಕೆ ಮಾಡಿದ ನಟಿ ಕಂಗನಾ ರಣಾವತ್

    ‘ಬ್ರಹ್ಮಾಸ್ತ್ರ’ ಕಲೆಕ್ಷನ್ ಎಲ್ಲಾ ಬುರುಡೆ ಎಂದು ಟೀಕೆ ಮಾಡಿದ ನಟಿ ಕಂಗನಾ ರಣಾವತ್

    ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಕಾಂಬಿನೇಷನ್ ನ ‘ಬ್ರಹ್ಮಾಸ್ತ್ರ’ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಬಗ್ಗೆ ಕಳೆದ ಎರಡು ದಿನಗಳಿಂದ ಚರ್ಚೆ ಆಗುತ್ತಿದೆ. ಸಿನಿಮಾ ರಿಲೀಸ್ ಆಗಿ ಮೊದಲನೇ ದಿನವೇ ನೂರು ಕೋಟಿ ಕ್ಲಬ್ ಗೆ ಸಿನಿಮಾ ಸೇರಿತು ಎಂದು ಹೇಳಲಾಗಿತ್ತು. ಇದೀಗ ಮೂರು ದಿನಗಳ ಒಟ್ಟು ಕಲೆಕ್ಷನ್ 125 ಕೋಟಿ ಎಂದು ವರದಿಯಾಗಿದೆ. ಸಿನಿಮಾ ತಂಡವು ಅಧಿಕೃತ ಮಾಹಿತಿ ಕೊಡದೇ ಇರುವ ಕಾರಣಕ್ಕಾಗಿ ಈ ಕಲೆಕ್ಷನ್ ಸೋಮವಾರಕ್ಕೆ 200 ಕೋಟಿ ತಲುಪಿದೆ.

    ಸಿನಿಮಾದ ನಿರ್ಮಾಪಕ ಕರಣ್ ಜೋಹಾರ್ ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ದಾಖಲೆ ರೀತಿಯಲ್ಲಿ  ಆಗಿದೆ. ಮೊದಲ ದಿನವೇ ನೂರು ಕೋಟಿ ಕ್ಲಬ್‍ಗೆ ಸೇರಿದ್ದು ನಿಜ ಎಂದು ಹೇಳಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಅಲ್ಲದೇ ವೀಕೆಂಡ್ ನಲ್ಲಿ ಪ್ರೇಕ್ಷಕರು ಸಿನಿಮಾ ಒಪ್ಪಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ನೋಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಹಾಗಾಗು ಶುಕ್ರವಾರ, ಶನಿವಾರ ಮತ್ತು ಭಾನುವಾರದ ಒಟ್ಟು ಕಲೆಕ್ಷನ್ ಅಂದಾಜು 200 ಕೋಟಿ ಎಂದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ. ಇದನ್ನೂ ಓದಿ:ನಂದಿನಿ ಔಟ್ ಆದ್ಮೇಲೆ ಸಾನ್ಯ ಜೊತೆ ಜಶ್ವಂತ್ ಲವ್ವಿ-ಡವ್ವಿ: ರೂಪೇಶ್‌ಗೆ ಟೆನ್ಷನ್ ಶುರು

     

    ಇದೆಲ್ಲವನ್ನೂ ಬಾಲಿವುಡ್ ನಟಿ ಕಂಗನಾ ರಣಾವತ್ ಅಲ್ಲಗಳೆಯುತ್ತಾರೆ. ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಫೇಕ್, ಅದೊಂದು ಬುರುಡೆ ಪುರಾಣ ಎಂದು ಟೀಕೆ ಮಾಡಿದ್ದಾರೆ. ಸುಖಾಸುಮ್ಮನೆ ಕಲೆಕ್ಷನ್ ಬಗ್ಗೆ ಗಾಸಿಪ್ ಹಬ್ಬಿಸಲಾಗುತ್ತಿದೆ. 350 ಕೋಟಿಗೂ ಅಧಿಕ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ ಎಂದು ಕೇಳಲ್ಪಟ್ಟಿದ್ದೆ. ಈವರೆಗೂ ನೂರೇ ಕೋಟಿ ಬಂದಿದೆ ಎಂದರೂ, ಇನ್ನೂ 250 ಕೋಟಿ ಬರಬೇಕು. ಈಗಲೇ ಸಿನಿಮಾ ಗೆದ್ದಿದೆ ಅಂದು ಹೇಳುವುದಕ್ಕೆ ಆಗುವುದಿಲ್ಲ ಎಂದು ಟೀಕೆ ಮಾಡಿದ್ದಾರೆ.

     

     

    Live Tv
    [brid partner=56869869 player=32851 video=960834 autoplay=true]

  • ʼಬ್ರಹ್ಮಾಸ್ತ್ರʼ ಚಿತ್ರದಲ್ಲಿ ನಾಯಕನ ತಾಯಿ ಪಾತ್ರ ಮಾಡಿರೋ ನಟಿ ರಣಬೀರ್‌ ಮಾಜಿ ಪ್ರೇಯಸಿ?

    ʼಬ್ರಹ್ಮಾಸ್ತ್ರʼ ಚಿತ್ರದಲ್ಲಿ ನಾಯಕನ ತಾಯಿ ಪಾತ್ರ ಮಾಡಿರೋ ನಟಿ ರಣಬೀರ್‌ ಮಾಜಿ ಪ್ರೇಯಸಿ?

    ಬಾಯ್ಕಾಟ್ ನಡುವೆಯೂ ಬಾಲಿವುಡ್‌ನಲ್ಲಿ `ಬ್ರಹ್ಮಾಸ್ತ್ರ’ (Brahmastra) ಸಿನಿಮಾ ಕೋಟಿ ಕೋಟಿ ಲೂಟಿ ಮಾಡಿ ಗೆದ್ದು ಬಿಗುತ್ತಿದೆ. ರಣ್‌ಬೀರ್ ಕಪೂರ್ (Ranbir Kapoor) ಮತ್ತು ಆಲಿಯಾ ಭಟ್ (Alia Bhatt) ಲವ್ ಕೆಮಿಸ್ಟ್ರಿ ಜೊತೆ ಚಿತ್ರದ ಕಂಟೆಂಟ್ ಫ್ಯಾನ್ಸ್ ಫಿದಾ ಆಗಿದ್ದಾರೆ. ಹೀಗಿರುವಾಗ ಚಿತ್ರದ ಬಗ್ಗೆ ಹೊಸ ಅಪ್‌ಡೇಟ್‌ವೊಂದು ಸಿಕ್ಕಿದೆ. ಈ ಚಿತ್ರದಲ್ಲಿ ರಣ್‌ಬೀರ್ ಕಪೂರ್ ತಾಯಿಯ ಪಾತ್ರದಲ್ಲಿ ರಣ್‌ಬೀರ್‌ ಮಾಜಿ  ಗರ್ಲ್‌ಫ್ರೆಂಡ್ ದೀಪಿಕಾ ಪಡುಕೋಣೆ ನಟಿಸಿದ್ದಾರೆ.

    ರಣ್‌ಬೀರ್ ಕಪೂರ್ ಮತ್ತು ಆಲಿಯಾ ಭಟ್ ನಟನೆಯ `ಬ್ರಹ್ಮಾಸ್ತ್ರ’ ಚಿತ್ರಕ್ಕೆ ಸಾಕಷ್ಟು ಅಡೆತಡೆ ಬಂದಿತ್ತು. ಇದೀಗ ರಿಲೀಸ್ ಆಗಿ ಎರಡೇ ದಿನಕ್ಕೆ 160 ಕೋಟಿ ಗಲ್ಲಾಪೆಟ್ಟಿಗೆಯಲ್ಲಿ ಲೂಟಿ ಮಾಡಿದೆ. ಈ ಗುಡ್ ನ್ಯೂಸ್ ನಡುವೆ ಶಾಕಿಂಗ್ ನ್ಯೂಸ್‌ವೊಂದು ಹೊರಬಿದ್ದಿದೆ. `ಬ್ರಹ್ಮಾಸ್ತ್ರ’ ಚಿತ್ರದಲ್ಲಿ ರಣ್‌ಬೀರ್ ತಾಯಿಯ ಪಾತ್ರದಲ್ಲಿ ನಟನ ಮಾಜಿ ಪ್ರೇಯಸಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:ಕಾಫಿನಾಡು ಚಂದು ಇನ್ಸ್ಟಾಗ್ರಾಂ ಅಕೌಂಟ್ ಹ್ಯಾಕ್ ಆಗಿದ್ದಕ್ಕೆ ಫ್ಯಾನ್ಸ್ ಬೇಸರ

    ಈ ಚಿತ್ರದಲ್ಲಿ ಚಿಕ್ಕ ವಯಸ್ಸಿನಲ್ಲೇ ತಂದೆ ತಾಯಿಯನ್ನು ಕಳೆದುಕೊಂಡ ಶಿವ ಪಾತ್ರದಲ್ಲಿ ರಣಬೀರ್ ಕಪೂರ್ ಕಾಣಿಸಿಕೊಂಡಿದ್ದಾರೆ. ಇದೇ ಚಿತ್ರದಲ್ಲಿ ಸಣ್ಣ ದೃಶ್ಯವೊಂದರಲ್ಲಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದು. ಮಗು ಅವರ ಕೈಯಲ್ಲಿದೆ. ಇದರಿಂದ ಚಿತ್ರದಲ್ಲಿ ರಣಬೀರ್‌ಗೆ ತಾಯಿಯಾಗಿದ್ದಾಳೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಕುರಿತ ಫೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಬಾಯ್ಕಾಟ್ ನಡುವೆಯೂ ಗೆದ್ದು ಬೀಗಿದ ‘ಬ್ರಹ್ಮಾಸ್ತ್ರ’: ಬಾಲಿವುಡ್ ಗೆ ಜೀವ ತಂದ ರಣಬೀರ್ ಕಪೂರ್

    ಬಾಯ್ಕಾಟ್ ನಡುವೆಯೂ ಗೆದ್ದು ಬೀಗಿದ ‘ಬ್ರಹ್ಮಾಸ್ತ್ರ’: ಬಾಲಿವುಡ್ ಗೆ ಜೀವ ತಂದ ರಣಬೀರ್ ಕಪೂರ್

    ಣಬೀರ್ ಕಪೂರ್ ಮೇಲಿನ ಕೋಪದಿಂದಾಗಿ ಹಿಂದೂಪರ ಸಂಘಟನೆಗಳು ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್ ಬ್ರಹ್ಮಾಸ್ತ್ರ’ (Boycott) ಹೋರಾಟ ಶುರು ಮಾಡಿದ್ದರು. ರಣಬೀರ್ ಕಪೂರ್ ಗೋಮಾಂಸ ತಿನ್ನುತ್ತೇನೆ ಎಂದು ಹೇಳುವ ಮೂಲಕ ಅಸಂಖ್ಯಾತ ಹಿಂದೂಗಳ ಭಾವನೆಯನ್ನು ಕೆರಳಿಸಿದ್ದಾರೆ. ಹಾಗಾಗಿ ಬ್ರಹ್ಮಾಸ್ತ್ರ (Brahmastra) ಸಿನಿಮಾ ನೋಡಬೇಡಿ ಎಂದು ಫೇಸ್ ಬುಕ್ ನಲ್ಲಿ ಟ್ರೆಂಡಿಂಗ್ ಮಾಡಿದ್ದರು. ಅಲ್ಲದೇ, ರಣಬೀರ್ ಕಪೂರ್ ಅವರನ್ನು ದೇವಸ್ಥಾನದ ಒಳಗೂ ಬಿಟ್ಟುಕೊಳ್ಳಲಿಲ್ಲ. ಬ್ರಹ್ಮಾಸ್ತ್ರ ನೋಡದಿರುವಂತೆ ಏನೇ ತಡೆದರೂ, ಕೊನೆಗೂ ಸಿನಿಮಾ ಗೆದ್ದಿದೆ.

    ಬ್ರಹ್ಮಾಸ್ತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 75 ಕೋಟಿ ಎಂದು ಹೇಳಲಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಏನೇ ನೆಗೆಟಿವ್ ಪ್ರಚಾರ ಮಾಡಿದರೂ, ಸಿನಿಮಾ ಚೆನ್ನಾಗಿದ್ದ ಕಾರಣಕ್ಕಾಗಿ ಜನರು ಮುಗಿಬಿದ್ದು ನೋಡುತ್ತಿದ್ದಾರೆ ಎಂದು ರಣಬೀರ್ ಕಪೂರ್ (Ranbir Kapoor) ಮತ್ತು ಆಲಿಯಾ ಭಟ್ ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ಶನಿವಾರ ಮತ್ತು ಭಾನುವಾರ ಹಣದ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಅಂದಾಜು ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಬಾಲಿವುಡ್ (Bollywood) ಸಿನಿಮಾವೊಂದು ಈ ಪ್ರಮಾಣದಲ್ಲಿ ದುಡ್ಡು ಮಾಡದೇ ಇರುವ ಕಾರಣಕ್ಕಾಗಿ ಬ್ರಹ್ಮಾಸ್ತ್ರ ಒಂದು ರೀತಿಯಲ್ಲಿ ಬಾಲಿವುಡ್ ಗೆ ಟಾನಿಕ್ ಅಂತಾಗಿದೆ. ಇದನ್ನೂ ಓದಿ:ಬಿಕಿನಿಯಲ್ಲಿ `ಲೈಗರ್’ ಬ್ಯೂಟಿ ಅನನ್ಯಾ ಪಾಂಡೆ ಮಿಂಚಿಂಗ್

    ಆಲಿಯಾ ಭಟ್ (Alia Bhatt) ಮತ್ತು ರಣಬೀರ್ ಕಪೂರ್ ಕಾಂಬಿನೇಷನ್‍ನ ಈ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಿದೆ. ದಕ್ಷಿಣದಲ್ಲಿ ಸ್ವತಃ ರಾಜಮೌಳಿ (Rajamouli) ಮತ್ತು ಜ್ಯೂನಿಯರ್ ಎನ್‍.ಟಿ.ಆರ್ ಮುಂದೆ ನಿಂತುಕೊಂಡು ಸಿನಿಮಾ ರಿಲೀಸ್ ಮಾಡಿಸಿದ್ದಾರೆ. ಈ ಚಿತ್ರಕ್ಕಾಗಿ ದೊಡ್ಡ ಪ್ರಮಾಣದ ಇವೆಂಟ್ ಕೂಡ ಹೈದರಾಬಾದ್‍ನಲ್ಲಿ ನಡೆಯೋದಿತ್ತು. ಪೊಲೀಸರು ಭದ್ರತೆ ನೀಡಲು ನಿರಾಕರಿಸಿದ ಕಾರಣದಿಂದಾಗಿ ಇವೆಂಟ್ ನಡೆಯಲಿಲ್ಲ. ಆದರೂ, ಸಿನಿಮಾ ಚೆನ್ನಾಗಿಯೇ ಓಪನಿಂಗ್ ಪಡೆದುಕೊಂಡಿದೆ. ಎರಡೇ ದಿನದಲ್ಲಿ ಈ ಸಿನಿಮಾ ನೂರು ಕೋಟಿ ಕ್ಲಬ್ ಸೇರಲಿದೆ ಎಂದು ಅಂದಾಜಿಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ‘ಈಗಲೂ ನಾನು ಗೋಮಾಂಸ ತಿನ್ನುತ್ತೇನೆ’ ಎಂದಿರುವ ದಿ ಕಾಶ್ಮೀರ್ ಫೈಲ್ಸ್  ನಿರ್ದೇಶಕನ ವಿಡಿಯೋ ವೈರಲ್

    ‘ಈಗಲೂ ನಾನು ಗೋಮಾಂಸ ತಿನ್ನುತ್ತೇನೆ’ ಎಂದಿರುವ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನ ವಿಡಿಯೋ ವೈರಲ್

    ಗೋಮಾಂಸ (Beef) ತಿನ್ನುವ ವಿಚಾರವಾಗಿ ಬ್ರಹ್ಮಾಸ್ತ್ರ (Brahmastra) ಸಿನಿಮಾದ ನಟ ರಣಬೀರ್ ಕಪೂರ್ ಅವರನ್ನು ದೇವಸ್ಥಾನದ ಒಳಗೆ ಬಿಡಲಿಲ್ಲ ಎನ್ನುವ ವಿಚಾರ ಸಖತ್ ಸದ್ದು ಮಾಡಿತ್ತು. ಸಿನಿಮಾ ಬಿಡುಗಡೆಗೂ ಮುನ್ನ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಲು ಹೊರಟಿದ್ದ ರಣಬೀರ್ ಕಪೂರ್ (Ranbir Kapoor) ಮತ್ತು ಆಲಿಯಾ ಭಟ್ ಅವರನ್ನು ದೇವಸ್ಥಾನದ ಒಳಗೆ ಹೋಗದಂತೆ ಭಜರಂಗ ದಳದ ಕಾರ್ಯಕರ್ತರು ತಡೆದಿದ್ದರು. ಅಲ್ಲದೇ, ಬ್ರಹ್ಮಾಸ್ತ್ರ ಸಿನಿಮಾ ಬಾಯ್ಕಾಟ್ (Boycott) ಅಭಿಯಾನ ಕೂಡ ಆರಂಭಿಸಿದ್ದಾರೆ. ಇದನ್ನೂ ಓದಿ:ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಎದುರು ಅಬ್ಬರಿಸಲಿದ್ದಾರೆ ಸಂಜಯ್ ದತ್

    ರಣಬೀರ್ ಕಪೂರ್ ಈ ಹಿಂದೆ ಹೇಳಿದ್ದ ವಿಡಿಯೋದಲ್ಲಿ ಗೋಮಾಂಸ ತಿನ್ನುವ ವಿಚಾರ ಪ್ರಸ್ತಾಪ ಆಗಿತ್ತು. ಅದನ್ನೇ ಇಟ್ಟುಕೊಂಡು ಹಿಂದೂಪರ ಸಂಘಟನೆಗಳು ಪ್ರತಿಭಟಿಸಿದ್ದವು. ಇದೀಗ ಇಂಥದ್ದೇ ಸಂಕಷ್ಟಕ್ಕೆ ಸಿಲುಕಿದ್ದಾರೆ ‘ದಿ ಕಾಶ್ಮೀರ್ ಫೈಲ್ಸ್’ (The Kashmir Files)  ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri). ಈ ಹಿಂದೆ ಅವರು ಸಂದರ್ಶನವೊಂದರಲ್ಲಿ ‘ನಾನು ಈ ಹಿಂದೇನೂ ಗೋಮಾಂಸ ತಿನ್ನುತ್ತಿದ್ದೆ, ಈಗಲೂ ತಿನ್ನುತ್ತೇನೆ’ ಎಂದು ಹೇಳಿರುವ ಮಾತಿನ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸದಾ ಹಿಂದೂಪರ ಯೋಚನೆ ಮಾಡುವ ವಿವೇಕ್ ಬಗ್ಗೆ ಭಜರಂಗ ದಳ ಯಾಕೆ ಸುಮ್ಮನಿದೆ ಎಂದು ಹಲವರು ಪ್ರಶ್ನಿಸಿದ್ದಾರೆ.

    ಗೋಮಾಂಸ ತಿನ್ನುತ್ತೇನೆ ಎಂದು ಬಹಿರಂಗವಾಗಿಯೇ ಹೇಳಿಕೊಂಡಿರುವ ವಿವೇಕ್ ಅಗ್ನಿಹೋತ್ರಿ ಸಿನಿಮಾಗಳನ್ನು ಬಹಿಷ್ಕರಿಸಬೇಕು ಮತ್ತು ಅವರನ್ನೂ ಯಾವುದೇ ದೇವಸ್ಥಾನದ ಒಳಗೆ ಬಿಡಕೂಡದು ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ರಣಬೀರ್ ಪರ ನಿಂತಿದ್ದ ಸಾಕಷ್ಟು ಅಭಿಮಾನಿಗಳು ಈ ವಿಡಿಯೋವನ್ನು ವೈರಲ್ ಮಾಡುತ್ತಿದ್ದಾರೆ. ಕೇವಲ ರಣಬೀರ್ ಗಷ್ಟೇ ಈ ಬಿಸಿ ತಾಗಬಾರದು, ವಿವೇಕ್ ಅಗ್ನಿಹೋತ್ರಿ ಮೇಲೂ ಕ್ರಮ ಆಗಬೇಕು ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.

    kashmir

    ಸೋಷಿಯಲ್ ಮೀಡಿಯಾದಲ್ಲಿ ವಿವೇಕ್ ಅಗ್ನಿಹೋತ್ರಿ ಅವರ ವಿಡಿಯೋ ವೈರಲ್ ಆಗುತ್ತಿದ್ದರೂ, ಆ ಕುರಿತು ವಿವೇಕ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಹಿಂದೂಪರ ಸಂಘಟನೆಗಳ ಸದಸ್ಯರ ಹಾಗೂ ರಣಬೀರ್ ಕಪೂರ್ ಅಭಿಮಾನಿಗಳ ಮಧ್ಯೆ ಕಾಮೆಂಟ್ ಗಳ ಯುದ್ಧವೇ ಶುರುವಾಗಿದೆ. ಪರ ವಿರೋಧದ ಸಾಕಷ್ಟು ಸಂದೇಶಗಳು ಬರುತ್ತಿವೆ.

    Live Tv
    [brid partner=56869869 player=32851 video=960834 autoplay=true]

  • ಬ್ರಹ್ಮಾಸ್ತ್ರ ಇವೆಂಟ್ ಕ್ಯಾನ್ಸಲ್: ನಟ ಜ್ಯೂ.ಎನ್.ಟಿ.ಆರ್ ಗೆ ಈಗಿನಿಂದಲೇ ಅಡ್ಡಗಾಲು ಹಾಕುತ್ತಿದ್ದಾರಾ ತೆಲಂಗಾಣ ಸಿಎಂ ಕೆಸಿಆರ್

    ಬ್ರಹ್ಮಾಸ್ತ್ರ ಇವೆಂಟ್ ಕ್ಯಾನ್ಸಲ್: ನಟ ಜ್ಯೂ.ಎನ್.ಟಿ.ಆರ್ ಗೆ ಈಗಿನಿಂದಲೇ ಅಡ್ಡಗಾಲು ಹಾಕುತ್ತಿದ್ದಾರಾ ತೆಲಂಗಾಣ ಸಿಎಂ ಕೆಸಿಆರ್

    ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ವಿರುದ್ಧ ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ಫ್ಯಾನ್ಸ್ ಗರಂ ಆಗಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಕೆಸಿಆರ್ ಸುಖಾಸುಮ್ಮನೆ ತೊಂದರೆ ಕೊಡುತ್ತಿದ್ದಾರೆ ಎಂದು ಫ್ಯಾನ್ಸ್ ಆರೋಪ ಮಾಡಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧದ ಚರ್ಚೆ ಕೂಡ ನಡೆದಿದ್ದು, ಕೆಸಿಆರ್ ನಡೆಯನ್ನು ವ್ಯಾಪಕವಾಗಿ ಖಂಡಿಸುತ್ತಿದ್ದಾರೆ. ಜ್ಯೂನಿಯರ್ ಫ್ಯಾನ್ಸ್ ಸಿಎಂ ಮೇಲೆ ಗರಂ ಆಗಿರುವುದಕ್ಕೆ ಕಾರಣವೂ ಇದೆ.

    ಆಲಿಯಾ ಭಟ್ ಮತ್ತು ರಣ್ಬೀರ್ ಕಪೂರ್ ಕಾಂಬಿನೇಷನ್ ನ ಬ್ರಹ್ಮಾಸ್ತ್ರ ಸಿನಿಮಾದ ಬೃಹತ್ ಇವೆಂಟ್ ಹೈದರಾಬಾದ್ ನಲ್ಲಿ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಜ್ಯೂನಿಯರ್ ಎನ್.ಟಿ.ಆರ್ ಆಗಮಿಸಬೇಕಿತ್ತು. ಜ್ಯೂನಿಯರ್ ಫ್ಯಾನ್ಸ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ತುದಿಗಾಲಲ್ಲಿ ನಿಂತಿದ್ದರು. ಈ ಕಾರ್ಯಕ್ರಮದಿಂದ ಜ್ಯೂನಿಯರ್ ಗೆ ಮತ್ತಷ್ಟು ಪ್ರಚಾರ ಸಿಗುತ್ತದೆ ಎನ್ನುವ ಕಾರಣಕ್ಕಾಗಿ ಪೊಲೀಸರನ್ನು ಬಳಸಿಕೊಂಡು ಇವೆಂಟ್ ಕ್ಯಾನ್ಸಲ್ ಮಾಡಿಸಿದ್ದಾರಂತೆ ಸಿಎಂ. ಹಾಗಂತ ಅಭಿಮಾನಿಗಳು ಆರೋಪ ಮಾಡುತ್ತಿದ್ದಾರೆ. ಇದನ್ನೂ ಓದಿ: ಜಶ್ವಂತ್‍ನಿಂದ ನಂದಿನಿ ಅಂತರ ಕಾಯ್ದುಕೊಳ್ಳುತ್ತಿರುವುದ್ಯಾಕೆ..?

    ಇತ್ತೀಚೆಗಷ್ಟೇ ಜ್ಯೂನಿಯರ್ ಎನ್.ಟಿ.ಆರ್ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಈ ಸಮಯದಲ್ಲಿ ಅಮಿತ್ ಶಾ ಕೂಡ ಜ್ಯೂನಿಯರ್ ಬಗ್ಗೆ ಹಾಡಿ ಹೊಗಳಿದ್ದರು. ರಾಜಕೀಯ ಕುಟುಂಬದ ಹಿನ್ನೆಲೆಯಿಂದಲೇ ಬಂದಿರುವ ಜ್ಯೂನಿಯರ್ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಕೂಡ ತೆಲಂಗಾಣದಲ್ಲಿ ಜೋರಾಗಿದೆ. ಇದು ತೆಲಂಗಾಣ ಸಿಎಂ ಕೆಸಿಆರ್ ಅವರನ್ನು ನಿದ್ದೆಗೆಡಿಸಿದೆ ಎಂದು ಹೇಳಲಾಗುತ್ತಿದೆ. ಬ್ರಹ್ಮಾಸ್ತ್ರ ಸಿನಿಮಾದ ಇವೆಂಟ್ ಗೆ ಸಿಲ್ಲಿ ಕಾರಣ ಕೊಟ್ಟು ಕ್ಯಾನ್ಸಲ್ ಆಗುವಂತೆ ಮಾಡಲಾಗಿದೆ.

    ಸದ್ಯ ಗಣಪತಿ ಹಬ್ಬವೂ ಇರುವುದರಿಂದ, ಹೆಚ್ಚಿನ ಸಂಖ್ಯೆಯಲ್ಲಿ ಭದ್ರತೆ ಅವಶ್ಯಕತೆಯಿದ್ದು, ಲಕ್ಷಾಂತರ ಜನರು ಸೇರುವ ಬ್ರಹ್ಮಾಸ್ತ್ರ ಸಿನಿಮಾದ ಇವೆಂಟ್ ಗೆ ಭದ್ರತೆ ನೀಡುವುದು ಕಷ್ಟ. ಹಾಗಾಗಿ ಕಾರ್ಯಕ್ರಮವನ್ನು ಕ್ಯಾನ್ಸಲ್ ಮಾಡಿಕೊಳ್ಳಿ ಎಂದು ಪೊಲೀಸರು ಸೂಚಿಸಿದ್ದಾರೆ. ಇವೆಂಟ್ ಗಾಗಿ ಸಾಕಷ್ಟು ಹಣ ಖರ್ಚು ಮಾಡಿದ್ದ ತಂಡಕ್ಕೆ ಈ ನಡೆಯಿಂದ ಬೇಸರವುಂಟಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮತ್ತೆ ಶುರುವಾಯ್ತು ಬಾಲಿವುಡ್ ಬಾಯ್‌ಕಾಟ್ ಟ್ರೆಂಡ್: `ಬ್ರಹ್ಮಾಸ್ತ್ರʼ ಚಿತ್ರಕ್ಕೆ ವಿರೋಧ

    ಮತ್ತೆ ಶುರುವಾಯ್ತು ಬಾಲಿವುಡ್ ಬಾಯ್‌ಕಾಟ್ ಟ್ರೆಂಡ್: `ಬ್ರಹ್ಮಾಸ್ತ್ರʼ ಚಿತ್ರಕ್ಕೆ ವಿರೋಧ

    ಬಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾ `ಬ್ರಹ್ಮಾಸ್ತ್ರʼ ಚಿತ್ರಕ್ಕೆ ಕಂಟಕವೊಂದು ಎದುರಾಗಿದೆ. `ಲಾಲ್ ಸಿಂಗ್ ಚಡ್ಡಾ’ ಚಿತ್ರದ ನಂತರ ಮತ್ತೆ ಬಾಯ್‌ಕಾಟ್‌ಗೆ `ಬ್ರಹ್ಮಾಸ್ತ್ರʼ ಚಿತ್ರ ಗುರಿಯಾಗುತ್ತಿದೆ. ಈ ಚಿತ್ರದ ರಿಲೀಸ್‌ಗೆ ವಿರೋಧ ವ್ಯಕ್ತವಾಗುತ್ತಿದೆ.

     

    View this post on Instagram

     

    A post shared by Alia Bhatt ????☀️ (@aliaabhatt)

    ರಣ್‌ಬೀರ್ ಕಪೂರ್ ಮತ್ತು ಆಲಿಯಾ ಭಟ್ ನಟನೆಯ `ಬ್ರಹ್ಮಾಸ್ತ್ರʼ ಚಿತ್ರಕ್ಕಾಗಿ ಫ್ಯಾನ್ಸ್ ಕಾಯ್ತಿದ್ದಾರೆ. ಸೆಪ್ಟೆಂಬರ್ 9ಕ್ಕೆ ತೆರೆಗೆ ಬರಲು ಸಜ್ಜಾಗಿದೆ. ಸಿನಿಮಾಗೆ ಟಿಕೆಟ್ ಬುಕ್ಕಿಂಗ್ ಓಪನ್ ಆಗುತ್ತಿದಂತೆ 10000 ಸಾವಿರಕ್ಕೂ ಹೆಚ್ಚು ಟಿಕೆಟ್ ಬುಕ್ ಆಗಿದೆ. ಈ ಬೆನ್ನಲ್ಲೇ ಈ ಚಿತ್ರಕ್ಕೆ ವಿರೋಧವಾಗಿ, ಟ್ವಿಟ್ಟರ್‌ನಲ್ಲಿ ಬಾಯ್‌ಕಾಟ್ `ಬ್ರಹ್ಮಾಸ್ತ್ರʼ ಟ್ರೆಂಡ್ ಆಗುತ್ತಿದೆ. ಇದನ್ನೂ ಓದಿ:ರಾಜಕೀಯಕ್ಕೆ ಸೇರಿ ಅಂದವರಿಗೆ ಕಾಫಿನಾಡು ಚಂದು ಹೇಳಿದ್ದೇನು ಗೊತ್ತಾ?

     

    View this post on Instagram

     

    A post shared by Alia Bhatt ????☀️ (@aliaabhatt)

    410 ಕೋಟಿ ವೆಚ್ಚದಲ್ಲಿ `ಬ್ರಹ್ಮಾಸ್ತ್ರʼ ಚಿತ್ರ ನಿರ್ಮಾಣವಾಗಿದೆ. ಇದೀಗ ಈ ಚಿತ್ರಕ್ಕೆ ಬಾಯ್‌ಕಾಟ್ ಅನ್ನೋ ಕಂಟಕ ಎದುರಾಗಿದೆ. ಚಿತ್ರದ ಪ್ರಚಾರ ಕೂಡ ಭರ್ಜರಿಯಾಗಿ ನಡೆಯುತ್ತಿದೆ. ಬಾಯ್‌ಕಾಟ್ ಕಂಟಕದ ಮಧ್ಯೆ ಸಿನಿಮಾ ಗೆಲ್ಲುತ್ತಾ ಎಂಬುದನ್ನ ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಬೇಬಿ ಆನ್ ಬೋರ್ಡ್ ಎಂದು ಬರೆದಿದ್ದ ಡ್ರೆಸ್ ಧರಿಸಿ, ಸಿನಿಮಾ ಪ್ರಚಾರದಲ್ಲಿ ಮಿಂಚಿದ ಆಲಿಯಾ ಭಟ್

    ಬೇಬಿ ಆನ್ ಬೋರ್ಡ್ ಎಂದು ಬರೆದಿದ್ದ ಡ್ರೆಸ್ ಧರಿಸಿ, ಸಿನಿಮಾ ಪ್ರಚಾರದಲ್ಲಿ ಮಿಂಚಿದ ಆಲಿಯಾ ಭಟ್

    ಬಾಲಿವುಡ್‌ನ ಮುದ್ದಾದ ಜೋಡಿ ರಣ್‌ಬೀರ್ ಮತ್ತು ಆಲಿಯಾ ಭಟ್ ಸದ್ಯ ʻಬ್ರಹ್ಮಾಸ್ತ್ರʼ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಚಿತ್ರದ ಪ್ರೀ ರಿಲೀಸ್ ಈವೆಂಟ್‌ನಲ್ಲಿ `ಬೇಬಿ ಆನ್ ಬೋರ್ಡ್’ ಎಂದು ಬರೆದಿದ್ದ ಡ್ರೆಸ್ ಧರಿಸಿ ಬಂದಿದ್ದ ಆಲಿಯಾ ಲುಕ್ ಈಗ ಅಭಿಮಾನಿಗಳ ಸೆಳೆಯುತ್ತಿದೆ.

    ಇದೇ ಸೆಪ್ಟೆಂಬರ್ 9ಕ್ಕೆ `ಬ್ರಹ್ಮಾಸ್ತ್ರ’ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರದ ಪ್ರಚಾರ ಕಾರ್ಯ ಕೂಡ ಭರದಿಂದ ಸಾಗುತ್ತಿದೆ. `ಬ್ರಹ್ಮಾಸ್ತ್ರʼ ಜೋಡಿ ಆಲಿಯಾ ಮತ್ತು ರಣ್‌ಬೀರ್ ಕೂಡ ಪ್ರಚಾರಕ್ಕೆ ಸಾಥ್ ನೀಡಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಪ್ರೀ ರಿಲೀಸ್ ಈವೆಂಟ್‌ನಲ್ಲಿ ಆಲಿಯಾ ಭಟ್ ಲುಕ್, ಅವರು ಧರಿಸಿದ ಪಿಂಕ್‌ ಕಲರ್‌ ಡ್ರೆಸ್ ಇದೀಗ ಎಲ್ಲರ ಗಮನ ಸೆಳೆದಿದೆ. ಇದನ್ನೂ ಓದಿ:ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ಧ್ರುವ ಸರ್ಜಾ

    ಬೇಬಿ ಆನ್ ಬೋರ್ಡ್ ಎಂದು ಬರೆದಿದ್ದ ಡ್ರೆಸ್ ಧರಿಸಿ ಈ ಸಿನಿಮಾ ಪ್ರಚಾರದಲ್ಲಿ ಭಾಗಿಯಾಗಿ, ಕ್ಯಾಮರಾ ಕಣ್ಣಿಗೆ ಮುದ್ದಾಗಿ ಪೋಸ್ ನೀಡಿದ್ದಾರೆ. ಗರ್ಭಿಣಿ ಆಲಿಯಾ, ಸಮಾರಂಭದಲ್ಲಿ ಪಿಂಕ್‌ ಕಲರ್‌ ಡ್ರೆಸ್‌ನಲ್ಲಿ ತುಂಬಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಆಲಿಯಾ ಭಟ್ ಫೋಟೋಸ್ ಸಖತ್ ವೈರಲ್ ಆಗುತ್ತಿದೆ.

     

    View this post on Instagram

     

    A post shared by Viral Bhayani (@viralbhayani)

    ಇನ್ನು ಬ್ರಹ್ಮಾಸ್ತç ಚಿತ್ರದ ಈವೆಂಟ್‌ನಲ್ಲಿ ಆಲಿಯಾ, ರಣ್‌ಬೀರ್, ಮೌನಿ ರಾಯ್, ನಾಗಾರ್ಜುನ, ರಾಜಮೌಳಿ, ಕರಣ್‌ ಜೋಹರ್  ಭಾಗಿಯಾಗಿದ್ದರು. ಇನ್ನು ಸಮಾರಂಭದ ಮುಖ್ಯ ಅತಿಥಿಯಾಗಿ ಜ್ಯೂ.ಎನ್‌ಟಿಆರ್ ಕೂಡ ಭಾಗವಹಿಸಿ, ಚಿತ್ರತಂಡಕ್ಕೆ ಶುಭಹಾರೈಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ‘ಗೋಮಾಂಸ ನನಗಿಷ್ಟ’ ಎಂದು ಹೇಳಿದ್ದ ರಣಬೀರ್ ಕಪೂರ್ ಸಿನಿಮಾಗೆ ಎದುರಾಯ್ತು ಸಂಕಷ್ಟ

    ‘ಗೋಮಾಂಸ ನನಗಿಷ್ಟ’ ಎಂದು ಹೇಳಿದ್ದ ರಣಬೀರ್ ಕಪೂರ್ ಸಿನಿಮಾಗೆ ಎದುರಾಯ್ತು ಸಂಕಷ್ಟ

    ಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಕಾಂಬಿನೇಷನ್ ನ ಬ್ರಹ್ಮಾಸ್ತ್ರ ಸಿನಿಮಾ ಥಿಯೇಟರ್ ಗೆ ಬರಲು ಸಿದ್ಧತೆ ಮಾಡಿಕೊಂಡಿದೆ. ಆಲಿಯಾ ಭಟ್ ಗರ್ಭಿಣಿ ಆಗಿದ್ದರೂ, ಸಿನಿಮಾದ ಪ್ರಚಾರಕ್ಕಾಗಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗುತ್ತಿದ್ದಾರೆ. ರಣಬೀರ್ ಕೂಡ ನಾನಾ ರಾಜ್ಯಗಳ ಪ್ರವಾಸ ಮಾಡಿ, ಈ ಚಿತ್ರದ ಪ್ರಚಾರಕ್ಕೆ ಮುನ್ನುಡಿ ಬರೆದಿದ್ದಾರೆ. ಈ ಸಮಯದಲ್ಲಿ ಹಲವು ವರ್ಷಗಳಿ ಹಿಂದೆ ಸಂದರ್ಶನದಲ್ಲಿ ಹೇಳಿದ್ದ ಹೇಳಿ ಬ್ರಹ್ಮಾಸ್ತ್ರ ಸಿನಿಮಾಗೆ ಸಂಕಷ್ಟ ತಂದಿದೆ.

    ತಮ್ಮದು ಮಾಂಸಪ್ರಿಯ ಕುಟುಂಬ. ಗೋಮಾಂಸ ಸೇರಿದಂತೆ ನಾನಾ ರೀತಿಯ ನಾನ್ ವೆಜ್ ತಿನ್ನುತ್ತೇವೆ. ಅದರಲ್ಲೂ ನನಗೆ ಗೋಮಾಂಸ ಅಂದರೆ ಇಷ್ಟ ಎಂದು ಹೇಳಿಕೊಂಡಿದ್ದಾರೆ. ಈ ಮಾತೇ ಅವರಿಗೆ ಮುಳುವಾಗಿದೆ. ಗೋವನ್ನು ದೇವರೆಂದು ಪೂಜಿಸುವವರು ಈ ಮಾತನ್ನು ಕೇಳಲು ಸಿದ್ಧರಿಲ್ಲ. ಹಾಗಾಗಿ ಬ್ರಹ್ಮಾಸ್ತ್ರ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ನೂಡಲ್ಸ್ ಬಿಡಿಸು ಅಂದ್ರೆ ಮೂಲಂಗಿ ಬಿಡಿಸ್ತಾಳೆ – ಸೋನು ಪೇಂಟಿಂಗ್‌ಗೆ ರಾಕೇಶ್ ಫುಲ್ ಶಾಕ್..!

    ಇದು ಹತ್ತು ವರ್ಷಗಳ ಹಿಂದಿನ ವಿಡಿಯೋವಾಗಿದ್ದರೂ, ಆಗಿನ್ನೂ ಗೋಮಾಂಸ ನಿಷೇಧ ಇಲ್ಲದೇ ಇದ್ದರೂ ಈಗ ಆ ವಿಡಿಯೋವನ್ನು ವೈರಲ್ ಮಾಡಲಾಗುತ್ತಿದೆ. ಹಿಂದೂ ವಿರೋಧಿಗಳ ಸಿನಿಮಾವನ್ನು ನೋಡಬೇಡಿ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಅಲ್ಲದೇ, ಈ ಹಿಂದೆ ಆಲಿಯಾ ಭಟ್ ಆಡಿದ ಮಾತುಗಳು ಕೂಡ ಬೆಂಕಿಯಲ್ಲಿ ತುಪ್ಪು ಸುರಿದಂತಾಗಿವೆ. ಒಟ್ಟಿನಲ್ಲಿ ಬ್ರಹ್ಮಾಸ್ತ್ರ ಸಿನಿಮಾಗೆ ಎಲ್ಲ ಕಡೆಯಿಂದಲೂ ವಿಘ್ನ ಎದುರಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬಾಯ್ಕಾಟ್ ‘ಬ್ರಹ್ಮಾಸ್ತ್ರ’: ಗಲಿಬಿಲಿಗೊಂಡ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್

    ಬಾಯ್ಕಾಟ್ ‘ಬ್ರಹ್ಮಾಸ್ತ್ರ’: ಗಲಿಬಿಲಿಗೊಂಡ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್

    ಲಿಯಾ ಭಟ್ ಮತ್ತು ರಣಬೀರ್ ಕಪೂರ್ ಕಾಂಬಿನೇಷನ್ ನ ಬ್ರಹ್ಮಾಸ್ತ್ರ ಸಿನಿಮಾ ಇನ್ನಷ್ಟೇ ಬಿಡುಗಡೆ ಆಗಬೇಕು. ಬಿಡುಗಡೆಗೂ ಮುನ್ನ ಸಂಭ್ರಮಿಸಬೇಕಿದ್ದ ಈ ಜೋಡಿ ಬಾಯ್ಕಾಟ್ ಅಸ್ತ್ರಕ್ಕೆ ಭಯದಿಂದ ಬಳಲುತ್ತಿದೆ. ಈಗಾಗಲೇ ರಿಲೀಸ್ ಆಗಿರುವ ಟ್ರೈಲರ್ ನಲ್ಲಿ ಹಿಂದೂ ದೇವರುಗಳಿಗೆ ರಣಬೀರ್ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಆಮೇಲೆ ಸಿನಿಮಾ ನಿರ್ದೇಶಕರು ಅದಕ್ಕೆ ಸ್ಪಷ್ಟನೆಯನ್ನೂ ನೀಡಿದ್ದರು.

    ಮೊನ್ನೆಯಷ್ಟೇ ಬಾಯ್ಕಾಟ್ ಕುರಿತಂತೆ ಆಲಿಯಾ ಭಟ್ ಆಡಿದ ಮಾತುಗಳು ಕೂಡ ಹಲವರ ಕಂಗೆಣ್ಣಿಗೆ ಗುರಿಯಾಗಿದ್ದವು. ಬಾಯ್ಕಾಟ್ ಮಾಡುವವರ ವಿರುದ್ಧ ಗುಡುಗಿದ್ದ ಆಲಿಯಾ, ನನ್ನ ಸಿನಿಮಾ ನೋಡದೇ ಇದ್ದರೆ ಬಿಡಿ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ಬಲವಂತವಾಗಿ ನೋಡಿ ಅಂತ ಹೇಳುತ್ತಿರುವವರು ಯಾರು ಎಂದು ಕೇಳಿದ್ದರು. ಇದನ್ನೂ ಓದಿ:ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗಲಿದೆ ಶಶಾಂಕ್ ನಿರ್ದೇಶನದ ‘ಲವ್ 360’ ಸಿನಿಮಾ

    ranbir alia

    ಟ್ರೈಲರ್ ನಲ್ಲಿ ಮಾಡಿದ ಅವಮಾನ ಮತ್ತು ಆಲಿಯಾ ಭಟ್ ಆಡಿದ ಮಾತುಗಳು ಸಿನಿಮಾ ಬಿಡುಗಡೆಗೆ ತೊಂದರೆ ಆಗುವ ಸಾಧ್ಯತೆ ಇದೆ. ಹಾಗಾಗಿ ಬಾಯ್ಕಾಟ್ ಎನ್ನುವವರ ಮನಸ್ಸನ್ನು ತಿಳಿಗೊಳಿಸುವ ಪ್ರಯತ್ನಕ್ಕೂ ಈ ಜೋಡಿ ಮುಂದಾಗಿದೆ ಎನ್ನಲಾಗುತ್ತಿದೆ. ಆದರೂ, ಸೋಷಿಯಲ್ ಮೀಡಿಯಾದಲ್ಲಿ ಬ್ರಹ್ಮಾಸ್ತ್ರ ಬಾಯ್ಕಾಟ್ ಟ್ರೆಂಡ್ ಜೋರಾಗಿದೆ.

    Live Tv
    [brid partner=56869869 player=32851 video=960834 autoplay=true]

  • ದುಬಾರಿ ಡ್ರೆಸ್ ಧರಿಸಿ ಸಿನಿಮಾ ಪ್ರಚಾರಕ್ಕೆ ಬಂದ ಆಲಿಯಾ ಭಟ್

    ದುಬಾರಿ ಡ್ರೆಸ್ ಧರಿಸಿ ಸಿನಿಮಾ ಪ್ರಚಾರಕ್ಕೆ ಬಂದ ಆಲಿಯಾ ಭಟ್

    ಬಾಲಿವುಡ್ ನಟಿ ಆಲಿಯಾ ಭಟ್ ತಾಯತ್ತನದ ಖುಷಿಯಲ್ಲಿದ್ದಾರೆ. ಸಿನಿಮಾ ಕೆರಿಯರ್ ಮತ್ತು ವೈಯಕ್ತಿಕ ಜೀವನ ಎರಡನ್ನು ನಿಭಾಯಿಸಿಕೊಂಡ ಹೋಗುತ್ತಿದ್ದಾರೆ. ಇದೀಗ ತಮ್ಮ ದುಬಾರಿ ಡ್ರೆಸ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.

    `ಬ್ರಹ್ಮಾಸ್ತ್ರʼ ಚಿತ್ರದ ಪ್ರಚಾರ ಕಾರ್ಯದಲ್ಲಿ ಆಲಿಯಾ ಮತ್ತು ರಣ್‌ಬೀರ್ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಈ ಚಿತ್ರದ ಪ್ರಚಾರ ಕಾರ್ಯಕ್ಕೆ ಆಲಿಯಾ ಪಿಂಕ್ ಕಲರ್ ಡ್ರೆಸ್‌ನಲ್ಲಿ ಮಿಂಚಿದ್ದರು. ನಟಿಯ ಬೇಬಿ ಬಂಪ್ ಲುಕ್ ಕೂಡ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

    ಇತ್ತೀಚೆಗೆ ನಡೆದ ʻಬ್ರಹ್ಮಾಸ್ತ್ರʼ ಚಿತ್ರದ ಪ್ರಚಾರದ ಈವೆಂಟ್‌ನಲ್ಲಿ ಆಲಿಯಾ ಲುಕ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದರು. ಆಲಿಯಾ ಧರಿಸಿದ ಡ್ರೆಸ್ ಬೆಲೆ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ಆಲಿಯಾ ಧರಿಸಿರುವ ಪಿಂಕ್ ಡ್ರೆಸ್‌ನ ಬೆಲೆ 4100 ಡಾಲರ್, ನಮ್ಮ ಕರೆನ್ಸಿಯಲ್ಲಿ ರೂ 3,87,883 ಆದರೆ ಈ ಸಿಂಪಲ್ ಡ್ರೆಸ್‌ಗೆ ಬೆಲೆ ಕೇಳಿ ನೆಟ್ಟಿಗರು ಶಾಕ್ ಆಗಿದ್ದಾರೆ. ಇದನ್ನೂ ಓದಿ:ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗಲಿದೆ ಶಶಾಂಕ್ ನಿರ್ದೇಶನದ ‘ಲವ್ 360’ ಸಿನಿಮಾ

     

    View this post on Instagram

     

    A post shared by Viral Bhayani (@viralbhayani)

    ಒಟ್ನಲ್ಲಿ ಸಿನಿಮಾ ಪ್ರಚಾರಕ್ಕಿಂತ ಆಲಿಯಾ ಧರಿಸಿದ್ದ ಡ್ರೆಸ್ ಬೆಲೆಯೇ ಚರ್ಚೆಗೆ ಗ್ರಾಸವಾಗಿದೆ.

    Live Tv
    [brid partner=56869869 player=32851 video=960834 autoplay=true]