Tag: ಬ್ರೇಕ್

  • ಜಾಹೀರಾತು ಕಿರಿಕಿರಿಗೆ ಪಿವಿಆರ್-ಐನಾಕ್ಸ್ ಬ್ರೇಕ್

    ಜಾಹೀರಾತು ಕಿರಿಕಿರಿಗೆ ಪಿವಿಆರ್-ಐನಾಕ್ಸ್ ಬ್ರೇಕ್

    ಪಿವಿಆರ್-ಐನಾಕ್ಸ್ (PVR-Inox)ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಿಗೆ ಸಿನಿಮಾ ನೋಡಲು ಹೋದರೆ, ಸಿನಿಮಾ ಶುರುವಿಗೂ ಮುಂಚೆ ಕನಿಷ್ಠ ಹತ್ತು ನಿಮಿಷಗಳ ಕಾಲ ಜಾಹೀರಾತುಗಳನ್ನು (Advertisement) ನೋಡಬೇಕಾಗಿತ್ತು. ಅದು ಅನಿವಾರ್ಯವಾಗಿತ್ತು. ಎಷ್ಟೋ ಸಲ ಬೈದುಕೊಂಡೇ ಜಾಹೀರಾತುಗಳನ್ನು ನೋಡಿದ್ದೂ ಇದೆ.

    ಸಿನಿಮಾ ಶುರುವಾಗುವ ಮುಂಚೆ ಮಾತ್ರವಲ್ಲ, ಮಧ್ಯಂತರ ಬಿಡುವಿನಲ್ಲೂ ಜಾಹೀರಾತುಗಳನ್ನು ತೋರಿಸಲಾಗುತ್ತಿತ್ತು. ಈಗ ಅದಕ್ಕೆ ಬ್ರೇಕ್ ಹಾಕುವಂತಹ ಕೆಲಸವನ್ನೂ ಪಿವಿಆರ್ ಮಂಡಳಿ ಚಿಂತನೆ ಮಾಡಿದೆಯಂತೆ. ಮುಂದಿನ ದಿನಗಳಲ್ಲಿ ಜಾಹೀರಾತು ರಹಿತ ಸಿನಿಮಾವನ್ನು ನೋಡಬಹುದು ಎಂದಿದೆ.

     

    ಜಾಹೀರಾತು ಪ್ರದರ್ಶನಕ್ಕೆ ಕೆಲವರು ಆಕ್ಷೇಪ ವ್ಯಕ್ತ ಪಡಿಸಿದ್ದರು. ಕಡಿಮೆ ದರದಲ್ಲಿ ಚಿತ್ರ ತೋರಿಸ್ತೀರಾ ಎಂದು ಪ್ರಶ್ನೆ ಕೇಳಿದವರೂ ಇದ್ದರು. ಈ ಎಲ್ಲ ಪ್ರಶ್ನೆಗೆ ಗೋಲಿ ಹೊಡೆದು, ಅದೇ ಸಮಯವನ್ನು ಒಟ್ಟು ಮಾಡಿ, ಮತ್ತೊಂದು ಶೋ ತೋರಿಸುವ ಪ್ಲ್ಯಾನ್ ಆಡಳಿತ ಮಂಡಳಿಯದ್ದು ಆಗಿದೆಯಂತೆ.

  • ಆ ಆರು ತಿಂಗಳು ಕಷ್ಟ ಕಷ್ಟ: ಸಮಂತಾ ದಿನಕ್ಕೊಂದು ಪೋಸ್ಟ್

    ಆ ಆರು ತಿಂಗಳು ಕಷ್ಟ ಕಷ್ಟ: ಸಮಂತಾ ದಿನಕ್ಕೊಂದು ಪೋಸ್ಟ್

    ರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನಟಿ ಸಮಂತಾ, ದಿನಕ್ಕೊಂದು ಪೋಸ್ಟ್ ಮಾಡಿ ತಮ್ಮ ಅಂತರಾಳದ ದುಗುಡಗಳನ್ನು ಅಭಿಮಾನಿಗಳ ಮುಂಚೆ ಬಿಚ್ಚಿಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದ ಮೂಲಕ ಸದಾ ಅಭಿಮಾನಿಗಳ ಜೊತೆ ಕನೆಕ್ಟ್ ಆಗುವ ಸಮಂತಾ, ಈ ಬಾರಿ ಆರು ತಿಂಗಳ ಕಷ್ಟದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ದಿನಕ್ಕೂ ಅವು ಯಾತನೆಯ ದಿನಗಳು ಎಂದಿದ್ದಾರೆ.

    ಆರೋಗ್ಯದ ಸಮಸ್ಯೆಯಿಂದಾಗಿ ಸಿನಿಮಾ ರಂಗಕ್ಕೆ ಒಂದು ವರ್ಷಗಳ ಕಾಲ ಗೈರಾಗಿದ್ದ ಸಮಂತಾ, ಟ್ರೀಟ್ ಮೆಂಟ್ ನಂತರ ಮತ್ತೆ ಬಂದಿದ್ದರು. ಒಪ್ಪಿಕೊಂಡಿದ್ದ ಪ್ರಾಜೆಕ್ಟ್ ಗಳನ್ನು ಅವರು ಮುಗಿಸಿಕೊಡಬೇಕಿತ್ತು. ಹಾಗಾಗಿ ಆರು ತಿಂಗಳ ಕಾಲ ನೋವಿನಲ್ಲೇ ಕೆಲಸ ಮಾಡಿದ್ದಾರೆ. ಇನ್ನೂ ಸಾಧ್ಯವಿಲ್ಲ ಅನಿಸಿ, ಒಂದಷ್ಟು ಪ್ರಾಜೆಕ್ಟ್ ಗಳಿಗೆ ತೆಗೆದುಕೊಂಡಿದ್ದ ಅಡ್ವಾನ್ಸ್ ವಾಪಸ್ಸು ಮಾಡಿ ಮತ್ತೆ ಆರೋಗ್ಯದ ಕಡೆ ಗಮನ ಹರಿಸಿದ್ದಾರೆ.

    ಸಮಂತಾ (Samantha), ಒಪ್ಪಿಕೊಂಡಿದ್ದ ಸಿನಿಮಾಗಳನ್ನ ಮುಗಿಸಿಕೊಟ್ಟಿದ್ದಾರೆ. ಈಗ ತಮ್ಮ ಆರೋಗ್ಯದ ಕಡೆ ಗಮನ ವಹಿಸುತ್ತಿದ್ದಾರೆ. ಡಿವೋರ್ಸ್ ನಂತರ ಒಂದಲ್ಲಾ ಒಂದು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಸಮಂತಾ ಸೂಕ್ತ ಚಿಕಿತ್ಸೆಗಾಗಿ ಅಮೆರಿಕಾಗೆ ಹಾರಿದ್ದಾರೆ. ತಮ್ಮ ಆರೋಗ್ಯ ಸುಧಾರಣೆಗೆ ಹೊಸ ಮಾದರಿಯ ಥೆರಪಿಯೊಂದನ್ನ ಮಾಡಿಸುತ್ತಿದ್ದಾರೆ. ಇದು ಆಮ್ಲಜನಕ ಥೆರಪಿಯಾಗಿದ್ದು, ಇದರ ಫೋಟೋವನ್ನ ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು.

    ನಾಗಚೈತನ್ಯ (NagaChaitanya) ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಮೇಲೆ ಮಯೋಸಿಟಿಸ್ ಕಾಯಿಲೆಯಿಂದ ಸಮಂತಾ ಬಳಲುತ್ತಿದ್ದರು. ಇದಕ್ಕೆ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ಚರ್ಮದ ಸಮಸ್ಯೆ, ಶ್ವಾಸಕೋಶದ ಸಮಸ್ಯೆಯನ್ನ ನಟಿ ಎದುರಿಸುತ್ತಿದ್ದರು. ಹಾಗಾಗಿ ಸಿನಿಮಾಗೆ ಕೊಂಚ ಬ್ರೇಕ್ ನೀಡಿ, ತಮ್ಮ ಹೆಲ್ತ್ ಕಡೆ ನಟಿ ಗಮನ ಕೊಡ್ತಿದ್ದಾರೆ. ಇದನ್ನೂ ಓದಿ:‘ದಸರಾ’ ನಂತರ ಮತ್ತೆ ಜೊತೆಯಾದ ಸತೀಶ್ ನೀನಾಸಂ ಮತ್ತು ಶರ್ಮಿಳಾ

    ಚ್‌ಬಿಓಟಿ ಹೆಸರಿನ ಚಿಕತ್ಸೆಯನ್ನು ಸ್ಯಾಮ್ ಪಡೆದುಕೊಳ್ಳುತ್ತಿದ್ದಾರೆ. ಎಚ್‌ಬಿಓಟಿ ಎಂದರೆ ಹೈಪರ್‌ಬ್ಯಾರಿಕ್ ಆಕ್ಸಿಜನ್ ಥೆರಪಿ ಎಂದರ್ಥ. ಈ ಚಿಕಿತ್ಸಾ ವಿಧಾನದಲ್ಲಿ ವ್ಯಕ್ತಿಗೆ ಪ್ರತ್ಯೇಕವಾಗಿ ಶುದ್ಧ ಆಮ್ಲಜನಕವನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನ ವೇಗದಲ್ಲಿ ನೀಡಲಾಗುತ್ತದೆ. ಈ ಥೆರಪಿ ಮಾಡಿಸಲು ವಿಶೇಷವಾದ ಕೋಣೆ ಅಥವಾ ಚೇಂಬರ್‌ಗಳನ್ನು ನಿರ್ಮಿಸಿ ಅದರಲ್ಲಿ ಚಿಕಿತ್ಸೆ ಪಡೆಯುವವರನ್ನು ಕೂರಿಸಿ ಅಥವಾ ಮಲಗಿಸಿ ವೇಗವಾಗಿ ಶುದ್ಧ ಆಮ್ಲಜನಕವನ್ನು ಅವರ ದೇಹಕ್ಕೆ ಹರಿಸಲಾಗುತ್ತದೆ. ಈ ಚಿಕಿತ್ಸೆಯಿಂದ ಶ್ವಾಸಕೋಶಗಳು ಹೆಚ್ಚು ಆಮ್ಲಜನಕವನ್ನು ಹೀರಿಕೊಳ್ಳುತ್ತವೆ ಹಾಗೂ ರಕ್ತದಲ್ಲಿಯೂ ಆಮ್ಲಜನಕದ ಪ್ರಮಾಣ ಹೆಚ್ಚಾಗುತ್ತದೆ. ಚರ್ಮವು ಶುಷ್ಕವಾಗಿ ಬಿಳಿಚಿಕೊಳ್ಳುವುದರಿಂದ ರಕ್ಷಿಸುತ್ತದೆ, ರಕ್ತದಲ್ಲಿ ಆಮ್ಲಜನಕ ಪ್ರಮಾಣ ಹೆಚ್ಚಾಗುವುದರಿಂದ ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಶ್ವಾಸಕೋಶದ ಸೋಂಕುಗಳು ನಿವಾರಣೆಯಾಗುತ್ತದೆ. ಗಾಯಗಳು, ನೋವುಗಳು ಬೇಗನೆ ಮಾಯಲು, ವಾಸಿಯಾಗಲು ಪ್ರಾರಂಭವಾಗುತ್ತವೆ.

     

    ನಟಿ ಸಮಂತಾ, ವಿಜಯ್ ದೇವರಕೊಂಡ (Vijay Devarakonda) ಜೊತೆಗಿನ ‘ಖುಷಿ’ (Kushi)  ಸಿನಿಮಾ ಮುಗಿಸಿ ಕೊಟ್ಟಿದ್ದಾರೆ. ವರುಣ್ ಧವನ್ ಜೊತೆಗಿನ ಸಿಟಾಡೆಲ್ (Citadel) ಕೂಡ ಶೂಟಿಂಗ್ ಮುಗಿದಿದೆ. ಇಂಗ್ಲೀಷ್‌ನ ಒಂದು ಸಿನಿಮಾ, ಬಾಲಿವುಡ್ ಚಿತ್ರವೊಂದನ್ನ ನಟಿ ಓಕೆ ಎಂದಿದ್ದಾರೆ. ಸಮಂತಾ ಆರೋಗ್ಯದಲ್ಲಿ ಚೇತರಿಕೆ ಕಂಡ ಮೇಲೆ ಮತ್ತೆ ಸಿನಿಮಾ ಮಾಡಲಿದ್ದಾರೆ. ಅಲ್ಲಿಯವರೆಗೂ ನಟಿ ಬ್ರೇಕ್‌ ತೆಗೆದುಕೊಳ್ಳಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಡನ್ ಬ್ರೇಕ್ –  ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ, ಕಾಲು ಅಪ್ಪಚ್ಚಿ

    ಸಡನ್ ಬ್ರೇಕ್ – ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ, ಕಾಲು ಅಪ್ಪಚ್ಚಿ

    ದಾವಣಗೆರೆ: ಚಲಿಸುತ್ತಿದ್ದಾಗ ಸಡನ್ ಬ್ರೇಕ್ ಹಾಕಿದ ಪರಿಣಾಮ ಹಿಂದೆ ಬರುತ್ತಿದ್ದ ಬೈಕ್ ಸವಾರ ಟ್ರ್ಯಾಕ್ಟರ್ ಗೆ ಡಿಕ್ಕಿಯಾಗಿರುವ ಘಟನೆ ದಾವಣಗೆರೆಯ ಕೈದಾಳೆ ಗ್ರಾಮದ ಬಳಿ ನಡೆದಿದೆ.

    ಅಪಘಾತದಲ್ಲಿ ಗಾಯಗೊಂಡ ವಿಜಯೇಂದ್ರಕುಮಾರ್(50) ಎಂದು ಗುರುತಿಸಲಾಗಿದೆ. ಇವರು ಚನ್ನಗಿರಿಯ ನವಿಲೇಹಾಳು ಗ್ರಾಮದ ನಿವಾಸಿಯಾಗಿದ್ದಾರೆ. ಬೈಕ್‍ನಲ್ಲಿ ಸ್ನೇಹಿತನ ಜೊತೆ ದಾವಣಗೆರೆಗೆ ಬರುತ್ತಿರುವಾಗ ಘಟನೆ ನಡೆದಿದೆ.

    ಬೈಕ್‍ನಲ್ಲಿ ಸ್ನೇಹಿತನ ಜೊತೆ ದಾವಣಗೆರೆಗೆ ಬರುತ್ತಿದ್ದರು. ಮುಂದೆ ಹೋಗುತ್ತಿದ್ದ ಟ್ರ್ಯಾಕ್ಟರ್ ಸಡನ್ ಬ್ರೇಕ್ ಹಾಕಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಬೈಕ್ ಟ್ರ್ಯಾಕ್ಟರ್ ಗೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ವಿಜಯೇಂದ್ರಕುಮಾರ್ ಅವರ ಎಡಗಾಲು ಅಪ್ಪಚ್ಚಿಯಾಗಿದೆ

    ಈ ಅಪಘಾತದಲ್ಲಿ ಗಾಯಗೊಂಡು ಗಾಯಾಳುಗಳು ನರಳಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹದಡಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

  • ಬಳ್ಳಾರಿಯಲ್ಲಿ ಏಕಕಾಲಕ್ಕೆ ನಡೆಯಬೇಕಿದ್ದ 8 ಬಾಲ್ಯ ವಿವಾಹಕ್ಕೆ ಬ್ರೇಕ್

    ಬಳ್ಳಾರಿಯಲ್ಲಿ ಏಕಕಾಲಕ್ಕೆ ನಡೆಯಬೇಕಿದ್ದ 8 ಬಾಲ್ಯ ವಿವಾಹಕ್ಕೆ ಬ್ರೇಕ್

    ಬಳ್ಳಾರಿ: ಗಣಿಜಿಲ್ಲೆ ಬಳ್ಳಾರಿಯಲ್ಲಿ ನಾನಾ ಕಡೆಗಳಲ್ಲಿ ಏಕಕಾಲಕ್ಕೆ ನಡೆಯಬೇಕಿದ್ದ ಎಂಟು ಬಾಲ್ಯ ವಿವಾಹಗಳನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ತಡೆಹಿಡಿದಿದ್ದಾರೆ.

    ಜಿಲ್ಲಾ ಮಕ್ಕಳ ಸಹಾಯವಾಣಿಗೆ ಬಂದ ಖಚಿತ ಮಾಹಿತಿ ಮೇರೆಗೆ ಶನಿವಾರ-ಭಾನುವಾರ ಎರಡು ದಿನಗಳ ಕಾಲ ದಾಳಿ ನಡೆಸಿ ಬಾಲ್ಯ ವಿವಾಹಗಳನ್ನು ತಡೆ ಹಿಡಿಯಲಾಗಿದೆ. ಬಳ್ಳಾರಿ ತಾಲೂಕಿನ ರೂಪನಗುಡಿಯಲ್ಲಿ 2, ಕಪ್ಪಗಲ್ಲು, ಸಿರವಾರ, ವದ್ದಟ್ಟಿ, ಕೊಳಗಲ್ಲು ಗ್ರಾಮಗಳಲ್ಲಿ ತಲಾ ಒಂದೊಂದು ಹಾಗೂ ಸಿರುಗುಪ್ಪ ತಾಲೂಕಿನ ತೊಂಡೆಹಾಳ್ ಗ್ರಾಮದ ಬಾಲಕ- ಬಾಲಕಿಯೊಂದಿಗೆ ನಡೆಯಬೇಕಿದ್ದ ಬಾಲ್ಯ ವಿವಾಹಗಳನ್ನ ತಡೆದ ಅಧಿಕಾರಿಗಳ ತಂಡ, ಅವರ ಪೋಷಕರಿಂದ ಮುಚ್ಚಳಿಕೆ ಪತ್ರಗಳನ್ನು ಬರೆಸಿಕೊಂಡಿದ್ದಾರೆ.

    ಪೋಷಕರ ವಿರುದ್ಧ ಪ್ರತ್ಯೇಕವಾಗಿ ನಾಲ್ಕು ಪ್ರಕರಣಗಳು ದಾಖಲಿಸಲಾಗಿದೆ. ಬಳ್ಳಾರಿ ಗ್ರಾಮಾಂತರ ಸಿಡಿಪಿಒ ಉಷಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೈಯದ್ ಚಾಂದ್ ಪಾಷಾ, ಸಿಬ್ಬಂದಿಯಾದ ರಾಜಾನಾಯ್ಕ, ಈಶ್ವರ್ ರಾವ್, ಉಮೇಶ್, ಜ್ಯೋತಿ, ನಾಗುಬಾಯಿ ನೇತೃತ್ವದ ಪೊಲೀಸ್ ಅಧಿಕಾರಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ತಂಡವು ಈ ದಾಳಿ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಆರ್.ನಾಗರಾಜ ತಿಳಿಸಿದ್ದಾರೆ.

  • ಮಗಳಿಗಾಗಿ ದಬಾಂಗ್- 3 ಚಿತ್ರದಿಂದ ಕಿಚ್ಚ ಬ್ರೇಕ್

    ಮಗಳಿಗಾಗಿ ದಬಾಂಗ್- 3 ಚಿತ್ರದಿಂದ ಕಿಚ್ಚ ಬ್ರೇಕ್

    ಬೆಂಗಳೂರು: ಕಿಚ್ಚ ಸುದೀಪ್ ವಿಶೇಷ ವ್ಯಕ್ತಿಯೊಬ್ಬರಿಗಾಗಿ ‘ದಬಾಂಗ್ -3’ ಚಿತ್ರದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ.

    ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಸುದೀಪ್ ಪ್ರತಿ ವರ್ಷ ತಮ್ಮ ಮಗಳ ಹುಟ್ಟುಹಬ್ಬವನ್ನು ಮಿಸ್ ಮಾಡಿಕೊಳ್ಳುವುದಿಲ್ಲ. ಕೆಲಸದಲ್ಲಿ ಎಷ್ಟೇ ಬ್ಯುಸಿಯಿದ್ದರೂ ಸುದೀಪ್ ತಮ್ಮ ಮಗಳ ಹುಟ್ಟುಹಬ್ಬದ ದಿನ ಅವಳ ಜೊತೆಯಲ್ಲಿ ಇರುತ್ತಾರೆ.

    ಈ ಬಗ್ಗೆ ಸುದೀಪ್ ತಮ್ಮ ಟ್ವಿಟ್ಟರಿನಲ್ಲಿ ಮಗಳ ಜೊತೆಯಿರುವ ಫೋಟೋ ಹಾಕಿ ಅದಕ್ಕೆ, “ನನ್ನ ಡಾರ್ಲಿಂಗ್ ಏಂಜೆಲ್‍ಗೆ ಹುಟ್ಟುಹಬ್ಬದ ಶುಭಾಶಯಗಳು. ನನ್ನ ಸಾನು ಬೇಬಿ ಯಾವಾಗಲೂ ಸಂತೋಷದಿಂದ ಇರು ಎಂದು ಟ್ವೀಟ್ ಮಾಡಿ ಶುಭಾಶಯ ತಿಳಿಸಿದ್ದಾರೆ. ಇತ್ತ ಸುದೀಪ್ ಅವರ ಪತ್ನಿ ಪ್ರಿಯಾ ಅವರು ಕೂಡ ಸುದೀಪ್ ಹಾಗೂ ಸಾನ್ವಿ ಜೊತೆಯಿರುವ ಫೋಟೋ ಹಾಕಿದ್ದಾರೆ. ಅಲ್ಲದೆ ಅವರು ಕೂಡ ತಮ್ಮ ಮಗಳಿಗೆ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದ್ದಾರೆ.

    ಭಾನುವಾರ ಸುದೀಪ್ ತಮ್ಮ ಟ್ವಿಟ್ಟರಿನಲ್ಲಿ, ಮೊದಲ ಶೂಟಿಂಗ್ ಶೆಡ್ಯೂಲ್ ರೋಮಾಂಚನವಾಗಿತ್ತು. ಇಲ್ಲಿಂದ ಹಲವು ಸಲ್ಮಾನ್ ಖಾನ್, ಸೋಹೈಲ್ ಖಾನ್, ಅರ್ಬಾಜ್ ಖಾನ್, ಸೋನಾಕ್ಷಿ ಸಿನ್ಹಾ, ಪ್ರಭುದೇವ್ ಟೀಮ್ ಜೊತೆಗೆ ಕಳೆದ ಸುಂದರ ಕ್ಷಣಗಳನ್ನು ಹೊತ್ತು ಮನೆಯತ್ತ ಸಾಗುತ್ತಿದ್ದೇನೆ. ಸಲ್ಮಾನ್ ಖಾನ್ ತಂದೆ ಸಲೀಂ ಸಾಬ್ ಕುಟುಂಬದ ಜೊತೆಗಿನ ಫೋಟೋವನ್ನು ಸುದೀಪ್ ಅಪ್ಲೋಡ್ ಮಾಡಿಕೊಂಡಿದ್ದಾರೆ. ಈಗ ಕೋಟಿಗೊಬ್ಬ-3ರ ಶೂಟಿಂಗ್ ಕೆಲಸ ಆರಂಭ ಎಂಬ ಸಿಹಿ ಸುದ್ದಿಯನ್ನು ನೀಡಿದ್ದಾರೆ.

    ದಬಾಂಗ್-3 ಚಿತ್ರದಲ್ಲಿ ಸಿಖಂದರ್ ಎಂಬ ಪಾತ್ರದಲ್ಲಿ ಕಿಚ್ಚ ನಟಿಸುತ್ತಿದ್ದು, ಚಿತ್ರ ಕ್ರಿಸ್‍ಮಸ್ ಹಬ್ಬಕ್ಕೆ ಬಿಡುಗಡೆಗೊಳ್ಳುವ ಸಾಧ್ಯತೆಗಳಿವೆ.

  • ನಂದಿಗಿರಿಧಾಮದಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ಗೆ ಬ್ರೇಕ್…!

    ನಂದಿಗಿರಿಧಾಮದಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ಗೆ ಬ್ರೇಕ್…!

    ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿದ್ದು, ಡಿಸೆಂಬರ್ 31ರ ಸಂಜೆ 4 ಗಂಟೆಯಿಂದ 2019ರ ಹೊಸ ವರ್ಷದ ಜನವರಿ 1ರ ಬೆಳಗ್ಗೆ 8 ಗಂಟೆಯವರೆಗೂ ನಂದಿಗಿರಿಧಾಮ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

    ಪ್ರತಿ ವರ್ಷದಂತೆ ಈ ವರ್ಷವೂ ಪ್ರವಾಸಿಗರ ಹಿತದೃಷ್ಟಿಯಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಈ ಆದೇಶ ಹೊರಡಿಸಿದೆ. 2019ರ ಜನವರಿ 1ರ ಬೆಳಗ್ಗೆ 8 ಗಂಟೆ ತರುವಾಯ ಪ್ರವಾಸಿಗರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ಮುಕ್ತ ಅವಕಾಶವಿದೆ. ನಂದಿಗಿರಿಧಾಮದ ಜೊತೆ ಜೊತೆಗೆ ಪ್ರಮುಖ ಪ್ರವಾಸಿ ತಾಣಗಳಾದ ಸ್ಕಂದಗಿರಿ ಬೆಟ್ಟ ಹಾಗೂ ಆವಲಬೆಟ್ಟದಲ್ಲೂ ಸಹ ನಿಷೇಧ ಹೇರಲಾಗಿದೆ. ಇದನ್ನೂ ಓದಿ: ತೋಟದ ಮನೆಯಲ್ಲಿ ಗಾಂಜಾ ಗಮ್ಮತ್ತು? ನಶೆಯಲ್ಲಿ ಯುವಕ-ಯುವತಿಯರ ತೇಲಾಟ!

    ಅಂಕು-ಡೊಂಕಿನ ನಂದಿಗಿರಿಧಾಮದ ರಸ್ತೆಯಲ್ಲಿ ಅಪಘಾತಗಳಾಗುವ ಸಂಭವ, ಮದ್ಯ ಸೇವಿಸಿದ ಅಮಲಲ್ಲಿ ಅನಾಹುತಗಳ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಂದಿಗಿರಿಧಾಮದ ಪ್ರವೇಶವನ್ನು ನಿಷೇಧಿಸಲಾಗಿದೆ. ಇದಲ್ಲದೆ ನಂದಿಗಿರಿಧಾಮದಲ್ಲಿನ ವಸತಿ ಗೃಹಗಳ ಬುಕ್ಕಿಂಗ್‍ಗೆ ಸಹ ಅವಕಾಶವಿಲ್ಲವಾಗಿದ್ದು, ಡಿಸೆಂಬರ್ 31ರಂದು ನಂದಿಗಿರಿಧಾಮದ ವಸತಿ ಗೃಹಗಳಲ್ಲೂ ಸಹ ಯಾರೂ ತಂಗುವಂತಿಲ್ಲ. ಇದನ್ನೂ ಓದಿ: ಹಚ್ಚಹಸಿರಿನ ಮಧ್ಯೆ ಹಾಲ್ನೊರೆ ಸೂಸುತ್ತಾ ಜುಳು-ಜುಳು ಹರೀತಿದೆ ಇರ್ಪು ಫಾಲ್ಸ್

    ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಎಸ್‍ಪಿ ಕಾರ್ತಿಕ್ ರೆಡ್ಡಿ, “ಜಿಲ್ಲೆಯಾದ್ಯಾಂತ ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸುವವರೆಗೂ ಕಡಿವಾಣ ಹಾಕಿ ದಂಡ ವಿಧಿಸೋಕೆ ಜಿಲ್ಲೆಯ ಪೊಲೀಸರು ಸಜ್ಜಾಗಿರುತ್ತಾರೆ. ನಿಗದಿಪಡಿಸಿದ ಸಮಯದ ನಂತರವೂ ಮದ್ಯ ಮಾರಾಟ ಮಾಡಿದರೆ ಬಾರ್‍ಗಳ ವಿರುದ್ಧವೂ ಕ್ರಮ ಕೈಗೊಳ್ಳುಲಾಗುವುದು” ಎಂದು ಹೇಳಿದರು. ಇದನ್ನೂ ಓದಿ: ಹೊಸ ವರ್ಷದಂದು ಪ್ರವಾಸಿ ತಾಣ ಮುತ್ತತ್ತಿಗೆ ನೋ ಎಂಟ್ರಿ

    ಇದಲ್ಲದೆ ಹೊಸ ವರ್ಷಾಚರಣೆಗೆ ಪಾರ್ಟಿ ಆಯೋಜನೆ ಮಾಡುವಂತವರು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರಿಂದ ಅನುಮತಿ ಪತ್ರ ಪಡೆದು ಪಾರ್ಟಿ ಆಯೋಜನೆ ಮಾಡಬೇಕಿದ್ದು, ಮದ್ಯ ಸರಬರಾಜು ಸಹ ಮಾಡುತ್ತಿದ್ರೆ ಅದಕ್ಕೂ ಸಂಬಂಧಪಟ್ಟ ಅಬಕಾರಿ ಇಲಾಖೆಯಿಂದ ಅನುಮತಿ ಕಡ್ಡಾಯ ಅಂತ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಗ್ನಲ್ ಜಂಪ್, ವಾಹನ ಚಾಲನೆ ವೇಳೆ ಮೊಬೈಲ್ ಬಳಸಿ ಸಿಕ್ಕಿಬಿದ್ರೆ 3 ತಿಂಗಳು ಲೈಸೆನ್ಸ್ ರದ್ದು!

    ಸಿಗ್ನಲ್ ಜಂಪ್, ವಾಹನ ಚಾಲನೆ ವೇಳೆ ಮೊಬೈಲ್ ಬಳಸಿ ಸಿಕ್ಕಿಬಿದ್ರೆ 3 ತಿಂಗಳು ಲೈಸೆನ್ಸ್ ರದ್ದು!

    ಮುಂಬೈ: ವಾಹನ ಚಾಲನೆ ವೇಳೆ ಮೊಬೈಲ್ ಬಳಸುವುದು ಅಥವಾ ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.

    ರಾಜ್ಯಾದ್ಯಂತ ಅಪಘಾತಗಳು ಹಾಗೂ ಸಂಚಾರಿ ನಿಯಮ ಉಲ್ಲಂಘನಾ ಪ್ರಕರಣಗಳು ಹೆಚ್ಚುತ್ತಿದೆ. ಹೀಗಾಗಿ ವಾಹನ ಸವಾರರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. 6 ಸಂಚಾರಿ ನಿಯಮಗಳ ಪೈಕಿ, ಯಾವುದೇ ಒಂದನ್ನು ಉಲ್ಲಂಘಿಸುವ ವಾಹನ ಸವಾರರ ಚಾಲನಾ ಪರವಾನಗಿಯನ್ನು ಮೂರು ತಿಂಗಳುಗಳವರೆಗೆ ನಿರ್ಬಂಧಿಸುವ ಅಧಿಕಾರವನ್ನು ಸರ್ಕಾರ ಆರ್‌ಟಿಓಗೆ ನೀಡಿದೆ.

    ವೇಗದ ಚಾಲನೆ, ಕುಡಿದು ಚಾಲನೆ, ಸಿಗ್ನಲ್ ಜಂಪ್, ಡ್ರೈವ್ ಮಾಡುವಾಗ ಮೊಬೈಲ್ ಬಳಕೆ, ವಾಣಿಜ್ಯ ವಾಹನಗಳಲ್ಲಿ ಪ್ರಯಾಣಿಕರ ಸಾಗಾಟ ಮತ್ತು ಓವರ್ ಲೋಡಿಂಗ್ ಸೇರಿದಂತೆ ಒಟ್ಟು 6 ಕಾರಣಗಳಿಗೆ ಲೈಸನ್ಸ್ ರದ್ದು ಮಾಡಲು ಆರ್‌ಟಿಓ ಅಧಿಕಾರ ನೀಡಲಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಹೆದ್ದಾರಿ ವರಿಷ್ಠಾಧಿಕಾರಿ ವಿಜಯ್ ಪಾಟೀಲ್, ಇಂದಿನ ದಿನಗಳಲ್ಲಿ ಹೆಚ್ಚಿನ ಮೊತ್ತದ ದಂಡ ವಿಧಿಸಿದರೂ, ಸಂಚಾರ ನಿಯಮ ಉಲ್ಲಂಘನೆ ತಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಚಾಲಕರ ವಾಹನಾ ಚಾಲನಾ ಪರವಾನಗಿಯನ್ನೇ ನಿಷೇಧಿಸಿದರೆ ಎಚ್ಚರಗೊಂಡು ತಕ್ಕ ಪಾಠ ಕಲಿಯುತ್ತಾರೆಂದು ಕಠಿಣ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.

    ಕಳೆದ ವರ್ಷ ಮಹಾರಾಷ್ಟ್ರದಲ್ಲಿ 35,800 ಕ್ಕೂ ಹೆಚ್ಚು ರಸ್ತೆ ಅಪಘಾತಗಳು ವರದಿಯಾಗಿವೆ. ಪರಿಣಾಮವಾಗಿ 12 ಸಾವಿರಕ್ಕೂ ಅಧಿಕ ಸಾವುಗಳು ಸಂಭವಿಸಿವೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ರಸ್ತೆ ಅಪಘಾತ ಮತ್ತು ಸಾವುಗಳನ್ನು 10% ರಷ್ಟು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿತ್ತು. ಹೀಗಾಗಿ ಮಹಾರಾಷ್ಟ್ರ ಸರ್ಕಾರ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • 225 ಕಿ.ಮೀ ವೇಗದಲ್ಲಿ ಹೋಗ್ತಿದ್ದಾಗ ಬೈಕಿನ ಬ್ರೇಕ್ ಹಾಕ್ದ ಪಕ್ಕದ ಸವಾರ: ವಿಡಿಯೋ ನೋಡಿ!

    225 ಕಿ.ಮೀ ವೇಗದಲ್ಲಿ ಹೋಗ್ತಿದ್ದಾಗ ಬೈಕಿನ ಬ್ರೇಕ್ ಹಾಕ್ದ ಪಕ್ಕದ ಸವಾರ: ವಿಡಿಯೋ ನೋಡಿ!

    ಸ್ಯಾನ್ ಮರಿನೋ: ಮೋಟರ್ ರೇಸಿಂಗ್ ವೇಳೆ 225 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ಬೈಕಿನ ಮುಂಬದಿ ಬ್ರೇಕನ್ನು ಮತ್ತೊಂದು ಬೈಕಿನ ಸವಾರ ಹಾಕುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ.

    ಸ್ಯಾನ್ ಮರಿನೋ ಗ್ರ್ಯಾಂಡ್ ಪ್ರಿಕ್ಸ್ ನಲ್ಲಿ ನಡೆದ ಎಫ್‍ಐಎಂ ಮೋಟೋ2 ಗ್ಯಾಂಡ್ ಪ್ರಿಕ್ಸ್ ಅಂತರಾಷ್ಟ್ರೀಯ ಚಾಂಪಿಯನ್‍ಷಿಪ್‍ ಬೈಕ್ ರೇಸಿಂಗ್ ವೇಳೆ ಇಟಲಿಯ ರೈಡರ್ ರೊಮಾನೋ ಫೆನಾಟಿಯವರು 225 ಕಿ.ಮೀಗೂ ಅಧಿಕ ವೇಗದಲ್ಲಿ ಸಾಗುತ್ತಿರುವಾಗಲೇ, ತಮ್ಮ ಪಕ್ಕದಲ್ಲೇ ಅಷ್ಟೇ ವೇಗದಲ್ಲಿ ಸಾಗುತ್ತಿದ್ದ ಸ್ಟೈಫಾನೋ ಮಾನ್ಜಿಯ ಬೈಕಿನ ಮುಂಬಾಗದ ಬ್ರೇಕ್‍ನ್ನು ಒತ್ತಿದ್ದಾರೆ. ಬ್ರೇಕ್ ಒತ್ತುತ್ತಿದಂತೆ ಬೈಕ್ ಅಲುಗಾಡಿದ್ದು, ಕೂಡಲೇ ಬೈಕನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಸವಾರ ಸ್ಟೈಫಾನೋ ಆಗಬಹುದಾಗಿದ್ದ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ.

    ಈ ರೇಸಿಂಗ್ ಕೂಟವು ಅಂತರಾಷ್ಟ್ರೀಯ ಮಟ್ಟದಲ್ಲಿ ನೇರಪ್ರಸಾರವಾಗುತ್ತಿದ್ದು, ಬೈಕ್ ಸವಾರ ಮತ್ತೊಂದು ಬೈಕಿನ ಬ್ರೇಕ್ ಹಾಕುತ್ತಿರುವ ದೃಶ್ಯ ನೋಡುಗರನ್ನು ತಲ್ಲಣಗೊಳಿಸಿದೆ. ಅಲ್ಲದೇ ರೈಡರ್ ವಿರುದ್ಧ ಸಾಕಷ್ಟು ಟೀಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿದ್ದವು.

    ಕೂಡಲೇ ಎಚ್ಚೆತ್ತ ಮೋಟೋ ಜಿಪಿ ಆಯೋಜಕರು ಫೆನಾಟಿಗೆ 2 ವರ್ಷಗಳ ಕಾಲ ರೇಸ್ ಮೇಲೆ ನಿಷೇಧ ಹೇರಿದ್ದಾರೆ. ಬಳಿಕ ತಮ್ಮ ತಪ್ಪಿನ ಅರಿವಾದ ಕೂಡಲೇ ಫೆನಾಟಿ ತಮ್ಮ ರೇಸಿಂಗ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ.

    https://twitter.com/2018MotoGP/status/1039597214648098816

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=P_WO9RtoBIk

  • ಕುದುರೆ ರೇಸ್ ಹೆಸರಲ್ಲಿ ನಡೆಯುತ್ತಿದ್ದ ಬೆಟ್ಟಿಂಗ್ ದಂಧೆಗೆ ಕೊಪ್ಪಳ ಪೊಲೀಸರಿಂದ ಬ್ರೇಕ್!

    ಕುದುರೆ ರೇಸ್ ಹೆಸರಲ್ಲಿ ನಡೆಯುತ್ತಿದ್ದ ಬೆಟ್ಟಿಂಗ್ ದಂಧೆಗೆ ಕೊಪ್ಪಳ ಪೊಲೀಸರಿಂದ ಬ್ರೇಕ್!

    ಕೊಪ್ಪಳ: ತಾಲೂಕಿನ ಗಿಣಗೇರಿಯಲ್ಲಿ ಕುದುರೆ ರೇಸ್ ಹೆಸರಿನಲ್ಲಿ ನಡೆಯುತ್ತಿದ್ದ ಬೆಟ್ಟಿಂಗ್ ದಂಧೆಗೆ ಪೊಲೀಸರು ತಡೆ ನೀಡಿದ್ದಾರೆ. ಈ ಸಂಬಂಧ ಓರ್ವ ಬೆಟ್ಟಿಂಗ್ ದಂಧೆಕೋರನನ್ನು ಬಂಧಿಸುವಲ್ಲಿಪೊಲೀಸರು ಯಶಸ್ವಿಯಾಗಿದ್ದಾರೆ.

    ತಾಲೂಕಿನ ಗಿಣಗೇರಿಯಲ್ಲಿ ಆಚರಣೆ ಹೆಸರಿನಲ್ಲಿ ಕಳೆದ ಮೂವತ್ತು ವರ್ಷಗಳಿಂದ ಕುದುರೆ ರೇಸ್ ನಡೆಯುತ್ತಿತ್ತು. ಕುದುರೆ ರೇಸ್ ನಲ್ಲಿ ಕೋಟ್ಯಾಂತರ ರೂಪಾಯಿ ಬೆಟ್ಟಿಂಗ್ ನಡೆಯುತ್ತಿದ್ದರಿಂದ ವ್ಯಾಪಕವಾಗಿ ಹೆಸರುಗಳಿಸಿತ್ತು. ಪ್ರತಿ ವರ್ಷದಂತೆ ಈ ವರ್ಷವೂ ಕುದುರೆ ರೇಸ್‍ನ್ನು ಆಯೋಜಿಸಲಾಗಿತ್ತು.

    ಕುದುರೆ ರೇಸ್ ಗೆ ಮೊದಲ ಬಾರಿ ಪೊಲೀಸರು ಬಂದೋಬಸ್ತು ಹಾಕಿದ್ದರಿಂದ ಆಯೋಜಕರು ಕುದುರೆ ರೇಸ್ ಅನ್ನು ಸ್ಥಗಿತಗೊಳಿಸಿದ್ದಾರೆ. ಈ ಮೂಲಕ ಕೊಪ್ಪಳ ಪೊಲೀಸರು ಕುದುರೆ ರೇಸ್ ಗೆ ಬ್ರೇಕ್ ಹಾಕಿದ್ದಾರೆ. ಇದೇ ಮೊದಲ ಬಾರಿಗೆ ಕುದುರೆ ರೇಸನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾದ ಪೊಲೀಸರು ಓರ್ವ ಬೆಟ್ಟಿಂಗ್ ದಂಧೆಕೋರನನ್ನು ಬಂಧಿಸಿದ್ದಾರೆ.

    ಕುದುರೆ ರೇಸ್ ಇದೆ ಎಂದು ಗುಂಪು ಗುಂಪಾಗಿ ಬರುತ್ತಿರುವ ಜನರನ್ನು ಪೊಲೀಸರು ಚದುರಿಸಿ ಕಳುಹಿಸಿದ್ದಾರೆ.

  • ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿರುವ ಯಜಮಾನ ಚಿತ್ರಕ್ಕೆ ಬ್ರೇಕ್!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿರುವ ಯಜಮಾನ ಚಿತ್ರಕ್ಕೆ ಬ್ರೇಕ್!

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಯಜಮಾನ ಚಿತ್ರದ ಚಿತ್ರಿಕರಣದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಚಿತ್ರೀಕರಣದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ.

    ಈ ಹಿಂದೆ ಚಿತ್ರೀಕರಣದ ಸಮಯದಲ್ಲಿ ದರ್ಶನ್ ಕೈಗೆ ಗಾಯ ಮಾಡಿಕೊಂಡಿದ್ದರು. ಆದರೆ ಈಗ ಅದರ ನೋವು ಕಾಣಿಸಿಕೊಂಡಿದೆ. ಹಾಗಾಗಿ ದರ್ಶನ್ ಹಾಗೂ ಚಿತ್ರತಂಡ ಮೇ 2ರಿಂದ ಚಿತ್ರೀಕರಣದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ.

    ಚಿಕ್ಕಮಗಳೂರಿನಲ್ಲಿ ಸಾಹಸ ದೃಶ್ಯಗಳನ್ನು ಚಿತ್ರೀಕರಿಸುವಾಗ ದರ್ಶನ್ ಅವರಿಗೆ ಈ ಹಳೆಯ ಗಾಯದ ನೋವು ಕಾಣಿಸಿಕೊಂಡಿದೆ. ಇದರ ಜೊತೆಯಲ್ಲಿ ದರ್ಶನ್ ಅವರ ಕಾಲು ಕೂಡ ಟ್ವಿಸ್ಟ್ ಆಗಿದೆ ಎಂದು ಹೇಳಲಾಗಿದೆ.

    ಇತ್ತೀಚೆಗೆ ನಡೆದ ವಿನೋದ್ ಪ್ರಭಾಕರ್ ಸಿನಿಮಾದ ಮೂಹರ್ತದಲ್ಲೂ ದರ್ಶನ್ ಆಗಮಿಸಿದ್ದರು. ಈ ವೇಳೆ ಅವರ ಕೈಗೆ ಪೆಟ್ಟಾಗಿರುವುದು ತಿಳಿದು ಬಂದಿದೆ.