Tag: ಭಜರಂಗದಳ ಕಾರ್ಯಕರ್ತರು

  • ನಿಂತಿದ್ದ ಮುಸ್ಲಿಂ ಯುವಕರ ಮೇಲೆ ಭಜರಂಗದಳ ಕಾರ್ಯಕರ್ತರಿಂದ ಹಲ್ಲೆ – ಲವ್‌ ಜಿಹಾದ್‌ ಆರೋಪ

    ನಿಂತಿದ್ದ ಮುಸ್ಲಿಂ ಯುವಕರ ಮೇಲೆ ಭಜರಂಗದಳ ಕಾರ್ಯಕರ್ತರಿಂದ ಹಲ್ಲೆ – ಲವ್‌ ಜಿಹಾದ್‌ ಆರೋಪ

    ಗಾಂಧೀನಗರ: ಅಹಮದಾಬಾದ್‌ನ (Ahmedabad) ಸಿಂಧು ಭವನ ರಸ್ತೆಯ ಗರ್ಬಾ ಸ್ಥಳದಲ್ಲಿ ನಾಲ್ವರು ಮುಸ್ಲಿಂ ಯುವಕರ ಮೇಲೆ ಭಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಈ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

    ನವರಾತ್ರಿಯಲ್ಲಿ ಇತರ ಧರ್ಮದ ಜನರು ಭಾಗವಹಿಸದಂತೆ ತಡೆಯಲು ಭಜರಂಗದಳದ (Bajarang Dal) ಸ್ವಯಂಸೇವಕರು ಎರಡು ಸ್ಥಳಗಳಲ್ಲಿ ತಪಾಸಣೆ ನಡೆಸಿದರು. ಎಚ್ಚರಿಕೆಯ ಹೊರತಾಗಿಯೂ ಇತರ ಧರ್ಮದ ನಾಲ್ವರು ಯುವಕರು ಒಂದು ಸ್ಥಳದಲ್ಲಿ ಕಾಣಿಸಿಕೊಂಡರು. ಲವ್‌ ಜಿಹಾದ್‌ (Love Jihad) ತಡೆಯಲು ನಮ್ಮ ಸ್ವಯಂಸೇವಕರು ಅವರನ್ನು ಹಿಡಿದು ಥಳಿಸಿದ್ದಾರೆ ಎಂದು ಗುಜರಾತ್‌ ವಿಹೆಚ್‌ಪಿ ವಕ್ತಾರ ಹಿತೇಂದ್ರ ಸಿನ್ಹಾ ರಜಪೂತ್‌ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಇಂದು ಸ್ಯಾನಿಟರಿ ಪ್ಯಾಡ್, ನಾಳೆ ಕಾಂಡೋಮ್ ಕೇಳ್ತೀರಿ – ವಿವಾದಿತ ಹೇಳಿಕೆಗೆ ಕ್ಷಮೆಯಾಚಿಸಿದ ಐಎಎಸ್ ಅಧಿಕಾರಿ

    https://twitter.com/Mr_ManmohanSing/status/1575123183820120064

    ಸ್ಕೈ ಯುನಿವರ್ಸಲ್ ಗಾರ್ಬಾ ಸ್ಥಳದ ಹೊರಗೆ ಭಜರಂಗದಳದವರು, “ಲವ್ ಜಿಹಾದ್” ವಿರುದ್ಧದ ಸಂದೇಶಗಳನ್ನು ಪ್ರದರ್ಶಿಸುವ ಫಲಕಗಳನ್ನು ಹಿಡಿದಿದ್ದಾರೆ. ಅಲ್ಲದೇ ಯುವಕರು, ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದಾರೆ. ಸ್ಥಳದಲ್ಲಿ ನಿಂತಿದ್ದ ಮುಸ್ಲಿಂ ಯುವಕರ ಹಣೆಗೆ ಬಲವಂತವಾಗಿ ತಿಲಕ ಇಡುತ್ತಿರುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ.

    ಮತ್ತೊಂದು ವೀಡಿಯೊದಲ್ಲಿ ತಲೆಯಿಂದ ತೀವ್ರವಾಗಿ ರಕ್ತಸ್ರಾವವಾಗುತ್ತಿದ್ದ ವ್ಯಕ್ತಿಯನ್ನು ಸುಮಾರು 30 ಮಂದಿ ಭಜರಂಗದಳದವರು ನಿಂದಿಸಿ ಥಳಿಸಿದ್ದಾರೆ. ಬಟ್ಟೆ ಹರಿದಿರುವ ವ್ಯಕ್ತಿ ತನ್ನನ್ನು ಸಲ್ಮಾನ್ ಶೇಖ್ ಎಂದು ಗುರುತಿಸಿಕೊಂಡಿದ್ದು, ತನ್ನನ್ನು ರಕ್ಷಿಸುವಂತೆ ಮನವಿ ಮಾಡಿದ್ದಾನೆ. ಇದನ್ನೂ ಓದಿ: ಪಿಎಫ್‍ಐ ಬ್ಯಾನ್ ವಿರೋಧಿಸಿದರೆ ಜನ ಒದೆಯುತ್ತಾರೆ – ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

    ಹಲ್ಲೆ ನಡೆಸಿರುವ ಜವಾಬ್ದಾರಿಯನ್ನು ಬಲಪಂಥೀಯ ಸಂಘಟನೆ ವಹಿಸಿಕೊಂಡರೂ ನಗರ ಪೊಲೀಸರು ಇನ್ನೂ ಪ್ರಕರಣ ದಾಖಲಿಸಿಕೊಂಡಿಲ್ಲ. ಡಿಸಿಪಿ ಬಿ.ಯು.ಜಡೇಜಾ ಘಟನೆ ಕುರಿತು ಪ್ರತಿಕ್ರಿಯಿಸಿದ್ದು, ಯಾವುದೇ ದೂರುದಾರರು ಮುಂದೆ ಬಂದಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೀನು ಸಾಗಾಟದ ಟೆಂಪೋದಲ್ಲಿ 12 ಟನ್ ಗೋಮಾಂಸ ಸಾಗಣೆ

    ಮೀನು ಸಾಗಾಟದ ಟೆಂಪೋದಲ್ಲಿ 12 ಟನ್ ಗೋಮಾಂಸ ಸಾಗಣೆ

    – ಭಜರಂಗದಳದ ಕಾರ್ಯಾಚರಣೆಯಿಂದ ಬಹಿರಂಗ

    ಮಂಗಳೂರು: ಮೀನು ಸಾಗಾಟದ ಟೆಂಪೋದಲ್ಲಿ ಬರೋಬ್ಬರಿ 12 ಟನ್ ಗೋಮಾಂಸ ಸಾಗಣೆ ಮಾಡುತ್ತಿದ್ದ ವೇಳೆ ಭಜರಂಗ ದಳದ ಕಾರ್ಯಕರ್ತರು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿದ್ದಾರೆ.

    ಮಂಗಳೂರಿನಲ್ಲಿ ಘಟನೆ ನಡೆದಿದ್ದು, ಭಾರೀ ಪ್ರಮಾಣದಲ್ಲಿ ಗೋಮಾಂಸವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಂಗಳೂರಿನ ಭಜರಂಗದಳದ ಕಾರ್ಯಕರ್ತರಿಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ನಗರದ ಹೊರವಲಯದ ಅಡ್ಯಾರ್ ನಿಂದ ಮೀನು ಸಾಗಟದ ಟೆಂಪೋವನ್ನು ಭಜರಂಗದಳದ ಕಾರ್ಯಕರ್ತರು ಬೆನ್ನಟ್ಟಿಕೊಂಡು ಬಂದಿದ್ದರು. ಇದೇ ವೇಳೆ ಕಂಕನಾಡಿ ನಗರ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ನಗರದ ಪಡೀಲ್ ನಲ್ಲಿ ಟೆಂಪೋವನ್ನು ತಡೆದಿದ್ದಾರೆ.

    ಬಳಿಕ ತಪಾಸಣೆ ನಡೆಸಿದಾಗ ಮೀನು ಸಾಗಾಟದ ಟೆಂಪೋದಲ್ಲಿ ಬರೋಬ್ಬರಿ 12 ಟನ್ ಗೋಮಾಂಸ ಪತ್ತೆಯಾಗಿದ್ದು, ಪೊಲೀಸರು ಗೋಮಾಂಸವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ಈ ಗೋಮಾಂಸವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರೋದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾರೆ.

    ಕಳೆದ ಒಂದು ವಾರದ ಹಿಂದೆ ಇದೇ ರೀತಿ ಹಾಲು ಸಾಗಾಟದ ಟೆಂಪೋದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದಾಗ ಭಜರಂಗದಳದ ಕಾರ್ಯಕರ್ತರು ಅಡ್ಡ ಹಾಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿತ್ತು.

  • ಮಗುಚಿ ಬಿದ್ದ ಕಾರು – ನಾಲ್ವರ ರಕ್ಷಣೆ

    ಮಗುಚಿ ಬಿದ್ದ ಕಾರು – ನಾಲ್ವರ ರಕ್ಷಣೆ

    ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಸ್ಥಳದಲ್ಲಿದ್ದ ಭಜರಂಗದಳ ಕಾರ್ಯಕರ್ತರು ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಾಗುಂಡಿ ಬಳಿ ನಡೆದಿದೆ.

    ಎನ್.ಆರ್.ಪುರ ತಾಲೂಕಿನ ಮಾಗುಂಡಿ ಗ್ರಾಮದ ನಿವಾಸಿ ಸಲಾಂ ಅವರ ಕಾರು ಚಾಲಕನ ನಿಯಂತ್ರಣ ತಪ್ಪಿ ಸುಬ್ಬೇಗೌಡ ಎಂಬವರ ಮನೆಯ ಬಳಿ ಮಗುಚಿ ಬಿದ್ದಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಗಂಡ-ಹೆಂಡತಿ ಹಾಗೂ ಇಬ್ಬರು ಮಕ್ಕಳು ಇದ್ದರು ಎಂದು ತಿಳಿದು ಬಂದಿದೆ. ಕಾರು ಮಗುಚಿ ಬೀಳುತ್ತಿದ್ದಂತೆ ಕಾರಿನಲ್ಲಿದ್ದವರು ಕೂಗಾಡಿದ್ದಾರೆ. ಸ್ಥಳದಲ್ಲಿದ್ದ ಭಜರಂಗದಳ ಯುವಕರು ಕಾರನ್ನ ಎತ್ತಿ ನಿಲ್ಲಿಸಿ ಗಾಯಳುಗಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಭಜರಂಗದಳದ ಜಿಲ್ಲಾ ಸಂಚಾಲಕ ಶಶಾಂಕ್ ಹೇರೂರು ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಮ್ಮ ಮೊದಲ ಆದ್ಯತೆ ಮಾನವೀಯತೆ. ಏಕೆಂದರೆ ನಮ್ಮ ಧರ್ಮ ನಮಗೆ ಶಾಂತಿ ಹಾಗೂ ಮಾನವೀಯ ಮೌಲ್ಯಗಳನ್ನ ಕಲಿಸಿಕೊಟ್ಟಿದೆ ಎಂದು ಸಂಘಟನೆಯ ಕಾರ್ಯಕರ್ತರೊಬ್ಬರು ಹೇಳಿದರು.