Tag: ಭದ್ರಾ ಅಭಯಾರಣ್ಯ

  • ಭದ್ರಾ ಅಭಯಾರಣ್ಯದಲ್ಲಿ ಆಹಾರ ಸಿಗದೆ ಸಲಗ ಸಾವು

    ಭದ್ರಾ ಅಭಯಾರಣ್ಯದಲ್ಲಿ ಆಹಾರ ಸಿಗದೆ ಸಲಗ ಸಾವು

    ಚಿಕ್ಕಮಗಳೂರು: ಭದ್ರಾ ಅಭಯಾರಣ್ಯ (Bhadra Wildlife Sanctuary) ವ್ಯಾಪ್ತಿಯ ಹೆಬ್ಬೆ ವಲಯದಲ್ಲಿ ಆನೆಯ (Elephant) ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಒಂಟಿ ದಂತ ಹೊಂದಿದ್ದ ಸುಮಾರು 50 ವರ್ಷ ಪ್ರಾಯದ ಒಂಟಿ ಸಲಗ ಸಾವನ್ನಪ್ಪಿದ್ದು, ಕಳೆದ ನಾಲ್ಕು ದಿನಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಕಳ್ಳ ಬೇಟೆ ನಿಗ್ರಹ ಪಡೆಯ ಸಿಬ್ಬಂದಿ ಅರಣ್ಯದಲ್ಲಿ ಗಸ್ತು ತಿರುಗುವಾಗ ಆನೆಯ ಕಳೆಬರಹ ಪತ್ತೆಯಾಗಿದೆ. ಕಳೆದ ಹಲವು ತಿಂಗಳುಗಳಿಂದ ಈ ಆನೆಯ ಎಡಗಾಲಿಗೆ ಪೆಟ್ಟಾಗಿದ್ದರಿಂದ ಕುಂಟುತ್ತಾ ಅರಣ್ಯದಲ್ಲಿ ಆಹಾರ ಹುಡುಕುತ್ತಿತ್ತು ಎಂದು ಹೇಳಲಾಗಿದೆ. ಇದನ್ನೂ ಓದಿ: ನದಿಯಲ್ಲಿ ಈಜಲು ಹೋದ ಇಬ್ಬರು ಹುಡುಗರು ನೀರುಪಾಲು

    ಆನೆಯ ಮೃತ ದೇಹವನ್ನು ಅರಣ್ಯಾಧಿಕಾರಿ ಪ್ರಕಾಶ್ ನೇತೃತ್ವದ ಪಶು ವೈದ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸಿದೆ. ಈ ವೇಳೆ ಆನೆಯ ಹೊಟ್ಟೆಯಲ್ಲಿ ಆಹಾರ ಕಂಡು ಬಂದಿಲ್ಲ. ಹೀಗಾಗಿ ಆನೆ ಆಹಾರ ಸಿಗದೇ ಹಸಿವಿನಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಆನೆಯ ದಂತವನ್ನು ತೆಗೆದು ಆ‌ನೆಯ ಕಳೆಬರಹವನ್ನ ಅಲ್ಲಿಯೇ ಬಿಡಲಾಗಿದೆ.

    ಜ.30ರಂದು ಮೂಡಿಗೆರೆ-ಸಕಲೇಶಪುರ ಅರಣ್ಯ ಗಡಿ ವ್ಯಾಪ್ತಿಯಲ್ಲಿ ಕಾಡಾನೆಯೊಂದರ ಕಾಲು ಕಲ್ಲುಗಳ ನಡುವೆ ಸಿಲುಕಿ ಹೊರಬರಲಾರದೇ ಸಾವನ್ನಪ್ಪಿತ್ತು. ಇದನ್ನೂ ಓದಿ: ಚಾಮುಲ್‌ನಿಂದ ಹೈನುಗಾರರಿಗೆ ಯುಗಾದಿ ಗಿಪ್ಟ್ – ಲೀಟರ್ ಹಾಲಿಗೆ 4 ರೂ. ಹೆಚ್ಚಳ

  • ಮೂರು ಜಿಲ್ಲೆಗಳ ಕಾಡಾನೆ ಹಾವಳಿ ತಡೆಗೆ ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಈಶ್ವರ್ ಖಂಡ್ರೆ

    ಮೂರು ಜಿಲ್ಲೆಗಳ ಕಾಡಾನೆ ಹಾವಳಿ ತಡೆಗೆ ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಈಶ್ವರ್ ಖಂಡ್ರೆ

    ಶಿವಮೊಗ್ಗ: ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ (Bhadra Sanctuary) ಆನೆ ಶಿಬಿರ (Elephant Camp) ಸ್ಥಾಪಿಸುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwara Khandre) ಘೋಷಿಸಿದ್ದಾರೆ.

    ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆದ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಈ ವೇಳೆ ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದೆ. ಆನೆಗಳಿಂದ ಹೆಚ್ಚಿನ ಜೀವಹಾನಿ ಮತ್ತು ಬೆಳೆ ಹಾನಿ ಸಂಭವಿಸುತ್ತಿದೆ. ಇದನ್ನು ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆ ವಿಹಾರಧಾಮ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ವನ್ಯಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ನಾವು ದಾಳಿ ಮಾಡುವ ಮೊದಲೇ ಅಪರಾಧ ಕೃತ್ಯಗಳನ್ನ ಬಿಟ್ಟುಬಿಡಿ: ರೌಡಿಗಳಿಗೆ ಎಸ್ಪಿ ಖಡಕ್ ವಾರ್ನಿಂಗ್

    ಈ ಆನೆ ವಿಹಾರಧಾಮದ ಸುಮಾರು 5 ಸಾವಿರ ಎಕರೆ ಪ್ರದೇಶದಲ್ಲಿ ಆನೆಗಳಿಗೆ ಇಷ್ಟವಾದ ಬಿದಿರು, ಹಲಸು, ಹುಲ್ಲು ಇತ್ಯಾದಿ ಸಸ್ಯಗಳನ್ನು ಬೆಳೆಸಲಾಗುವುದು. ಇದರ ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಸೆರೆ ಹಿಡಿದ ಆನೆಗಳನ್ನು ಇಲ್ಲಿ ತಂದು ಬಿಡಲಾಗುವುದು. ಇದರಿಂದ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಿನ ಹೊರಗೆ ಇರುವ ಆನೆಗಳಿಂದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಲಿದೆ ಎಂದಿದ್ದಾರೆ.

    ಕಾರ್ಯಕ್ರಮದಲ್ಲಿ ರೈತರನ್ನು ಒಕ್ಕಲೆಬ್ಬಿಸದಂತೆ ಸಚಿವರಿಗೆ ರೈತರಿಂದ ಮನವಿ ಸಲ್ಲಿಸಲಾಯಿತು. ಇದರೊಂದಿಗೆ ಕಾಡಾನೆ ದಾಳಿಗೆ ಸಾವನ್ನಪ್ಪಿರುವ ವ್ಯಕ್ತಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ಕಾಡಾನೆಯಿಂದ ಆಗುವ ಬೆಳೆ ನಷ್ಟಕ್ಕೆ ಪರಿಹಾರ ಕೊಡಬೇಕು. ಕಾಡಾನೆಗಳನ್ನು ಗ್ರಾಮಗಳಿಗೆ, ರೈತರ ಜಮೀನಿಗೆ ಬರದಂತೆ ತಡೆಯಲು ಕ್ರಮವಹಿಸಬೇಕು ಎಂದು ರೈತರು ಮನವಿ ಮಾಡಿದರು. ಇದನ್ನೂ ಓದಿ: ಬೆಂಗ್ಳೂರಿನ ಮೂರು ಕಾಲೇಜುಗಳಿಗೆ ಬಾಂಬ್ ಬೆದರಿಕೆ – ಪೊಲೀಸರಿಂದ ತೀವ್ರ ಶೋಧ