Tag: ಭದ್ರಾ ಜಲಾಶಯ

  • ಚಿತ್ರದುರ್ಗ | ಕೋಡಿಬಿದ್ದ ವಾಣಿವಿಲಾಸ ಸಾಗರ ಜಲಾಶಯ – ಜ.18ಕ್ಕೆ ಸಿಎಂ ಬಾಗಿನ

    ಚಿತ್ರದುರ್ಗ | ಕೋಡಿಬಿದ್ದ ವಾಣಿವಿಲಾಸ ಸಾಗರ ಜಲಾಶಯ – ಜ.18ಕ್ಕೆ ಸಿಎಂ ಬಾಗಿನ

    ಚಿತ್ರದುರ್ಗ: ಕಳೆದ ಒಂದು ಶತಮಾನದಲ್ಲಿ 70 ವರ್ಷ ಬರ ಅನುಭವಿಸಿದ್ದ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯ (Vani Vilasapura Dam) ಭರ್ತಿಯಾಗಿ ಕೋಡಿಬಿದ್ದಿದೆ.

    ಕೋಟೆ ನಾಡಿನ ಏಕೈಕ ಜಲಾಶಯ ನಿರ್ಮಾಣವಾದ ಬಳಿಕ 3ನೇ ಬಾರಿಗೆ ಕೋಡಿಬಿದ್ದ ಜಲಾಶಯ ಬರದ ನಾಡಿಗೆ ಜೀವಕಳೆ ತಂದಿದೆ. ಕೊನೆಯಬಾರಿಗೆ 2022ರಲ್ಲಿ ಜಲಾಶಯ ಕೋಡಿ ಬಿದ್ದಿತ್ತು. ಆದ್ರೆ ಇತ್ತೀಚೆಗೆ ಭದ್ರಾ ಜಲಾಶಯದ ನೀರು ಹರಿದ ಪರಿಣಾಮ ವಿವಿ ಸಾಗರ ಜಲಾಶಯ 3ನೇ ಬಾರಿಗೆ ಕೋಡಿಬಿದ್ದಿದೆ. ಇದನ್ನೂ ಓದಿ: ಪ್ರೀತಿಸುವಂತೆ ಮುಸ್ಲಿಂ ಯುವಕನಿಂದ ಕಿರುಕುಳ – ಅಪ್ರಾಪ್ತೆ ಆತ್ಮಹತ್ಯೆ, ಆರೋಪಿ ಬಂಧನ

    ಜಲಾಶಯ ಭರ್ತಿಯಿಂದ ನೂರಾರು ಕಿಮೀ ವರೆಗೆ ಅಂತರ್ಜಲದ ಮಟ್ಟ ಹೆಚ್ಚಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ. ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ತಾಲ್ಲೂಕಿನ ರೈತರು ಸಂಭ್ರಮಿಸಿದ್ದಾರೆ. ಜಲಾಶಯ ಭರ್ತಿಯಾದ ಹಿನ್ನೆಲೆ ರೈತಮುಖಂಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜ.18 ರಂದು ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ.

    1907 ರಲ್ಲಿ ಮೈಸೂರು ಒಡೆಯರಾದ ಕೃಷ್ಣರಾಜ ಒಡೆಯರ್ ಈ ಜಲಾಶಯ ನಿರ್ಮಿಸಿದ್ದರು. ಇದನ್ನೂ ಓದಿ: ಮಹಾ ಕುಂಭಮೇಳ ವೈಭವ – ಇಂಚಿಂಚಿಗೂ ಹದ್ದಿನ ಕಣ್ಣು, 2,700 ಎಐ ಕ್ಯಾಮೆರಾ ಕಣ್ಗಾವಲು

  • ಭದ್ರಾ ರಿಸರ್ವ್ ಫಾರೆಸ್ಟ್‌ನಲ್ಲಿ ಆನೆ ಹಣೆಗೆ ಗುಂಡು – ದಂತ ಚೋರರ ಕಾಟ ಸಕ್ರಿಯವಾ?

    ಭದ್ರಾ ರಿಸರ್ವ್ ಫಾರೆಸ್ಟ್‌ನಲ್ಲಿ ಆನೆ ಹಣೆಗೆ ಗುಂಡು – ದಂತ ಚೋರರ ಕಾಟ ಸಕ್ರಿಯವಾ?

    ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಅಭಯಾರಣ್ಯದ (Bhadra Reserve Forest) ವ್ಯಾಪ್ತಿಯಲ್ಲಿ ಆನೆಯ ಕಳೆಬರ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

    ಭದ್ರಾ ಅಭಯಾರಣ್ಯದ ಹುಲಿ ಮೀಸಲು ಅರಣ್ಯ ವ್ಯಾಪ್ತಿಯ ಲಕ್ಕವಳ್ಳಿ ವಿಭಾಗದ ಅಲ್ದಾರ ಸಮೀಪದ ಬೈರಾಪುರ ಹಿನ್ನೀರಿನ ದಟ್ಟಅರಣ್ಯ ಪ್ರದೇಶದಲ್ಲಿ ಆನೆಯ ಕಳೆಬರಹ ಪತ್ತೆಯಾಗಿದೆ. ಆನೆ ಮೃತಪಟ್ಟು ಸುಮಾರು ಒಂದು ತಿಂಗಳು ಕಳೆದಿದೆ. ಆನೆಯ (Elephant) ಅಸ್ತಿ ಪಂಜರ ಸ್ಥಳೀಯ ಮೀನುಗಾರಿಗೆ ಕಂಡು ಬಂದಿದ್ದು ಅರಣ್ಯ ಇಲಾಖೆ ಅಧಿಕಾರಿಗಳಿಗೆ (Forest Department) ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಆಫ್ರಿಕಾದ ಮಹಿಳೆಗೆ ಏಕಕಾಲದಲ್ಲೇ ಎರಡು ಹೃದಯ ಕವಾಟ ಬದಲಿ ಶಸ್ತ್ರಚಿಕಿತ್ಸೆ ನಡೆಸಿದ ಬೆಂಗ್ಳೂರು ವೈದ್ಯರು

    ಆನೆ ಹಣೆಯ ಭಾಗಕ್ಕೆ ಗುಂಡು ಹೊಡೆದಿರುವ ಗುರುತು ಪತ್ತೆಯಾಗಿದೆ. ಆನೆ ಹಣೆಯ ಮಧ್ಯ ಭಾಗದಲ್ಲಿ ಸುಮಾರು ಎರಡು ಇಂಚು ಅಗಲದ ಗುಂಡಿನ ರಂಧ್ರ ಎದ್ದು ಕಾಣುತ್ತಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಆನೆ ದಂತಕ್ಕಾಗಿ ದಂತಚೋರರ ಗ್ಯಾಂಗ್‌ ಭದ್ರಾ ಅಭಯಾರಣ್ಯ ಭಾಗದಲ್ಲಿ ಸಕ್ರಿಯವಾಗಿದ್ಯಾ? ಎಂಬ ಪ್ರಶ್ನೆ ಮೂಡಿದೆ. ಈ ನಡುವೆ ಅರಣ್ಯ ಇಲಾಖೆಯ ಅಧಿಕಾರಿಗಳು ಆನೆಯ ಕಳೆಬರವನ್ನ ಸರಿಯಾಗಿ ತಪಾಸಣಾ ಮಾಡಿಲ್ಲ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ. ಇದನ್ನೂ ಓದಿ: ಜಿತಿಯಾ ಪವಿತ್ರ ಸ್ನಾನದ ವೇಳೆ ಅವಘಡ – ಬಿಹಾರದಲ್ಲಿ 37 ಮಕ್ಕಳು ಸೇರಿ 46 ಮಂದಿ ನದಿಯಲ್ಲಿ ಮುಳುಗಿ ದುರ್ಮರಣ

    ಆನೆಯನ್ನು ದಂತಕ್ಕಾಗಿ ಹತ್ಯೆ ಮಾಡಿರುವ ಅನುಮಾನ ಸ್ಥಳೀಯರನ್ನ ಕಾಡುತ್ತಿದೆ. ಏಕೆಂದರೆ ಆನೆ ಸತ್ತ ಜಾಗದಲ್ಲಿ ಆನೆಯ ಯಾವುದೇ ದಂತಗಳು ಕಂಡು ಬಂದಿಲ್ಲ. ಅಲ್ಲದೇ ರಾತ್ರಿ ವೇಳೆ ಭದ್ರಾ ಹಿನ್ನೀರಿನಲ್ಲಿ ಬೋಟ್‌ಗಳ ಮೂಲಕ ಅಭಯಾರಣ್ಯಕ್ಕೆ ಕಳ್ಳಸಾಗಣೆ ಮಾಡಲು ಕಾಡ್ಗಳ್ಳರು ಬರುವುದು ಹೆಚ್ಚಾಗಿದೆ ಎಂಬ ಆರೋಪವೂ ಬಲವಾಗಿದೆ. ಇದನ್ನೂ ಓದಿ: Badlapur Encounter | ಆರೋಪಿ ಗುಂಡು ಹಾರಿಸಿದ್ರೆ ಪೊಲೀಸರು ಚಪ್ಪಾಳೆ ತಟ್ಟಬೇಕಾ?: ದೇವೇಂದ್ರ ಫಡ್ನವೀಸ್

    ಭದ್ರಾ ಹಿನ್ನೀರಿನಲ್ಲಿ ಆನೆಗಳ ಹಿಂಡು ವ್ಯಾಪಕವಾಗಿವೆ. ಆನೆ ದಂತಕ್ಕೆ ಭಾರಿ ಬೇಡಿಕೆ ಇದ್ದು ಕಳೆದ ವರ್ಷ ಕೂಡ ಮುತ್ತೋಡಿ ಅರಣ್ಯದ ಜಾಗರ ಗ್ರಾಮದ ಸಮೀಪ ಆನೆ ಕೊಂದು ದಂತ ಅಪಹರಿಸಲಾಗಿತ್ತು. ಆನೆ ಸತ್ತು ತಿಂಗಳಾದರೂ ಅರಣ್ಯ ವ್ಯಾಪ್ತಿಯಲ್ಲಿ ಗಸ್ತುತಿರುಗುವ ಅಧಿಕಾರಿಗಳಿಗೂ ಗೊತ್ತಾಗಲಿಲ್ಲ ಪ್ರಶ್ನೆ ಎಲ್ಲರನ್ನ ಕಾಡತೊಡಗಿದೆ.‌ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆನೆಗಳ ಮೇಲಿನ ದಾಳಿ ಮುಂದುವರಿದಿದೆ. ಹಿರಿಯ ಅರಣ್ಯಾಧಿಕಾರಿಗಳು ಈ ಸಂಬಂಧ ಸೂಕ್ತ ತನಿಖೆ ನಡೆಸಬೇಕಿದೆ ಎಂದು ಪರಿಸರವಾದಿಗಳು ಹಾಗೂ ಸ್ಥಳಿಯರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: 21 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಅರುಣಾಚಲ ಪ್ರದೇಶದ ಹಾಸ್ಟೆಲ್ ವಾರ್ಡನ್‌ಗೆ ಗಲ್ಲು ಶಿಕ್ಷೆ

  • ಕೇಂದ್ರ ಸರ್ಕಾರವೇ ಕೋಣ: ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ

    ಕೇಂದ್ರ ಸರ್ಕಾರವೇ ಕೋಣ: ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ

    ಬೆಂಗಳೂರು: ಕೇಂದ್ರ ಸರ್ಕಾರವೇ (Union Govt) ಕೋಣ ಎಂದು ವಿಧಾನಸಭೆಯಲ್ಲಿ ಸ್ಪೀಕರ್ ಪೀಠದಲ್ಲಿದ್ದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ (Rudrappa Lamani) ಹೇಳಿದ್ದಾರೆ.

    ಭದ್ರಾ ಜಲಾಶಯದ (Bhadra Dam) ಮುಳುಗಡೆ ಸಂತ್ರಸ್ತರಿಗೆ ಮಂಜೂರಾಗಿರುವ ದರಖಾಸ್ತು ಜಮೀನುಗಳ ರೈತರನ್ನು ಒಕ್ಕಲೆಬ್ಬಿಸದಂತೆ ಹಾಗೂ ಸಂತ್ರಸ್ತರಿಗೆ ನೆರವು ನೀಡುವ ಬಗ್ಗೆ ತರೀಕೆರೆ ಶಾಸಕ ಜಿ.ಹೆಚ್. ಶ್ರೀನಿವಾಸ್‌ ಗಮನ ಸೆಳೆದರು. ಆಗ ಸಮಸ್ಯೆ ಕುರಿತು ಪಕ್ಷಾತೀತವಾಗಿ ಎಲ್ಲ ಶಾಸಕರು ಸರ್ಕಾರವನ್ನು ಆಗ್ರಹಿಸಿದರು. ಇದನ್ನೂ ಓದಿ: ಸರ್ಕಾರಿ ನೌಕರರು ಆರ್‌ಎಸ್‌ಎಸ್ ಸೇರಬಹುದು – ಇಂದಿರಾ ಗಾಂಧಿ ಅಂದು ನಿಷೇಧ ಹೇರಿದ್ದು ಯಾಕೆ?

     

    ಮಧ್ಯಪ್ರವೇಶ ಮಾಡಿದ ಡೆಪ್ಯುಟಿ ಸ್ಪೀಕರ್, ಸಂಸದರಿಗೆ ಹೇಳಿ ಕೇಂದ್ರ ಸರ್ಕಾರದ ಗಮನಕ್ಕೆ ತನ್ನಿ ಎಂದರು. ಅಲ್ಲದೇ ರಾಜ್ಯ ಸರ್ಕಾರಕ್ಕೆ ಕೂಡಾ ಸಭೆ ನಡೆಸಿ ಸೂಕ್ತ ನಿರ್ಧಾರಕ್ಕೆ ಬನ್ನಿ ಎಂದು ಸೂಚಿಸಿದ್ರು. ಇದನ್ನೂ ಓದಿ: ದರ್ಶನ್‌ಗೆ ಜೈಲೂಟವೇ ಗತಿ

    ಈ ವೇಳೆ ಕೋಣನ ಮುಂದೆ ಕಿನ್ನರಿ ಬಾರಿಸಿದಂತಾಗಿದೆ ಎಂದು ಡೆಪ್ಯುಟಿ ಸ್ಪೀಕರ್ ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಶಾಸಕ ಸುರೇಶ್ ಕುಮಾರ್, ಕೋಣ ಯಾರು ಅಂತಾ ಗೊತ್ತಾಗಲಿಲ್ಲ ಎಂದು ಕೇಳಿದರು. ಆಗ ಕೇಂದ್ರ ಸರ್ಕಾರವೇ ಕೋಣ ಎಂದು ಸ್ಪೀಕರ್ ಪೀಠದಲ್ಲಿದ್ದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ತಿರುಗೇಟು ನೀಡಿದರು.

     

  • ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ – ನಾಲೆಗಳಿಗೆ ನೀರು ಹರಿಸದಂತೆ ರೈತರ ಪಟ್ಟು

    ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ – ನಾಲೆಗಳಿಗೆ ನೀರು ಹರಿಸದಂತೆ ರೈತರ ಪಟ್ಟು

    – 3 ದಿನ ಕಾದು ನೋಡಲು ಕಾಡಾ ಸಭೆ ನಿರ್ಧಾರ

    ಶಿವಮೊಗ್ಗ: ಭದ್ರಾ ಜಲಾಶಯದಿಂದ (Bhadra Dam) ನಾಲೆಗಳಿಗೆ ನಿರಂತರವಾಗಿ ನೀರು ಹರಿಸದಂತೆ ಆಗ್ರಹಿಸಿ ರೈತರು (Farmers) ಶಿವಮೊಗ್ಗದ (Shivamogga) ಭದ್ರಾ ನೀರಾವರಿ – ಕಾಡಾ (CADA) ಕಚೇರಿ ಮುಂಭಾಗ ಭದ್ರಾವತಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ (Protest) ನಡೆಸಿದರು.

    ಸರ್ಕಾರ ಭದ್ರಾ ಜಲಾಶಯದಿಂದ 100 ದಿನಗಳ ಕಾಲ ನೀರು ಹರಿಸುವುದಾಗಿ ತೀರ್ಮಾನ ಮಾಡಿದೆ. ಆದರೆ ಜಲಾಶಯದಲ್ಲಿ ಈಗ ಕೇವಲ 165 ಅಡಿ ನೀರು ಮಾತ್ರ ಇದೆ. ಸತತವಾಗಿ ನೀರು ಹರಿಸಿದರೆ ಪ್ರತಿದಿನ ನಾಲ್ಕು ಇಂಚು ಪ್ರಮಾಣದ ನೀರು ಖಾಲಿ ಆಗುತ್ತದೆ. 80 ದಿನ ಹರಿಸಿದರೆ 30 ಅಡಿ ನೀರು ಖಾಲಿ ಆಗಿ ಜಲಾಶಯದಲ್ಲಿ ನೀರೇ ಇಲ್ಲವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಜಾಗ ಗುರುತಿಸಿ: ಬೋಸರಾಜು

    ಬೇಸಿಗೆಗಳಲ್ಲಿ ತೋಟಗಳನ್ನು ಉಳಿಸಿಕೊಳ್ಳುವುದು ಕಷ್ಟವಾಗಲಿದ್ದು, ಭದ್ರಾ ಅಚ್ಚುಕಟ್ಟು ಆಶ್ರಯದ ಎಲ್ಲಾ ರೈತರ ಬೆಳೆಗಳ ಹಿತವನ್ನು ಕಾಪಾಡಿಕೊಳ್ಳಬೇಕಾಗಿದೆ. ಆದರೆ ಭತ್ತದ ಬೆಳೆಗೆ ನೀರು ಹರಿಸುತ್ತೇವೆ ಎಂದು ಜಲಾಶಯದ ನೀರನ್ನು ಪೋಲು ಮಾಡುತ್ತಿರುವುದು ಸರಿಯಲ್ಲ. ಭತ್ತ ಬೆಳೆಗಾರರು ಮತ್ತು ಅಡಿಕೆ ಬೆಳೆಗಾರರ ಮಧ್ಯೆ ವಿಷದ ಬೀಜ ಬಿತ್ತಿ ಹೊಡೆದಾಡುವಂತೆ ಮಾಡುವುದನ್ನು ಬಿಟ್ಟು ರೈತರ ಹಿತ ಕಾಪಾಡುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ದೇಶದ ಹೆಸರು ಬದಲಾವಣೆಗಿಂತ ಜನರ ಬದುಕು ಬದಲಾವಣೆ ಮುಖ್ಯ: ಡಿಕೆಶಿ

    ನಿರಂತರವಾಗಿ 100 ದಿನಗಳ ಕಾಲ ನೀರು ಹರಿಸಲು ನಿರ್ಧಾರ ತೆಗೆದುಕೊಂಡಿರುವುದು ಸರಿಯಲ್ಲ. ಈ ಕೂಡಲೇ ನಾಲೆಗಳಿಗೆ ಹರಿಸುವ ನೀರು ಸ್ಥಗಿತ ಮಾಡುವಂತೆ ರೈತರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡು ಕಾವೇರಿ ನೀರಿನ ಸಮರ್ಪಕ ಬಳಕೆ ಮಾಡುತ್ತಿಲ್ಲ – ಸುಪ್ರೀಂನಲ್ಲಿ ಕರ್ನಾಟಕ ಆಕ್ಷೇಪ

    ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಭೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಹೊರಭಾಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರಿಂದ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬಳಿಕ ಕಾಡಾ ನೀರಾವರಿ ಸಲಹಾ ಸಮಿತಿ ಸಭೆ ನಡೆದು, ಹಲವು ಚರ್ಚೆಗಳ ಬಳಿಕ ಮೂರು ದಿನ ಕಾದು ನಿರ್ಣಯ ಕೈಗೊಳ್ಳಲು ನಿರ್ಧರಿಸಲಾಯಿತು. ಇದನ್ನೂ ಓದಿ: ಸೂರ್ಯ, ಚಂದ್ರ, ಭೂಮಿ ಯಾವಾಗ ಹುಟ್ಟಿದೆ ಅಂತ ಕೇಳೋಕೆ ಆಗುತ್ತಾ? – ಪರಂ ವಿರುದ್ಧ ಮುತಾಲಿಕ್ ಕಿಡಿ

    ಮಳೆಯಾಗುವ ನಿರೀಕ್ಷೆಯಲ್ಲಿ ಸಮಿತಿ ಸದಸ್ಯರಿದ್ದು, ಎಡದಂಡೆಗೆ ಹರಿಸುತ್ತಿರುವ ನೀರು ನಿಲ್ಲಿಸಲು ನಿರ್ಣಯ ತೆಗೆದುಕೊಳ್ಳಲಾಯಿತು. ಬಲದಂಡೆಯ ಕೊನೆಯವರೆಗೂ ನೀರು ತಲುಪುವಂತೆ ಹರಿಸಲು ನಿರ್ಧರಿಸಲಾಯಿತಾದರೂ ನೀರಿನ ಪ್ರಮಾಣ ಕಡಿಮೆ ಮಾಡಲು ನಿರ್ಣಯಿಸಲಾಯಿತು. ಮುಂದಿನ ಮೂರು ದಿನಗಳು ಕಾದು ಮುಂದಿನ ನಿರ್ಧಾರ ಕೈಗೊಳ್ಳುವ ಜವಾಬ್ದಾರಿ ಸಚಿವ ಮಧು ಹೆಗಲಿಗೆ ಹೊರಿಸಲಾಗಿದ್ದು, ಈ ಬಗ್ಗೆ ನೀರಾವರಿ ಸಚಿವ ಡಿಕೆ ಶಿವಕುಮಾರ್ (DK Shivakumar) ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಮಧು ಬಂಗಾರಪ್ಪ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಸೆ.18-22 ವಿಶೇಷ ಸಂಸತ್ ಅಧಿವೇಶನ- ಪ್ರಮುಖ 9 ವಿಷಯಗಳ ಚರ್ಚೆಗೆ ಸೋನಿಯಾ ಗಾಂಧಿ ಆಗ್ರಹ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭದ್ರಾ ಜಲಾಶಯದ ಬಲ, ಎಡದಂಡೆ ಕಾಲುವೆಗೆ ನೀರು ಹರಿಸಲು ನಿರ್ಧಾರ

    ಭದ್ರಾ ಜಲಾಶಯದ ಬಲ, ಎಡದಂಡೆ ಕಾಲುವೆಗೆ ನೀರು ಹರಿಸಲು ನಿರ್ಧಾರ

    ಶಿವಮೊಗ್ಗ: ಭದ್ರಾ ಜಲಾಶಯದ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ಕಾಲುವೆಗಳು ಹಾಗೂ ಶಾಖಾ ನಾಲೆಗಳಿಗೆ ಜು.24 ರಿಂದ 120 ದಿನಗಳ ಕಾಲ ನೀರು ಹರಿಸಲಾಗುವುದು ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ತಿಳಿಸಿದ್ದಾರೆ.

    ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀರಾವರಿ ಸಲಹಾ ಸಮಿತಿಯ ಸರ್ವ ಸದಸ್ಯರು ಹಾಗೂ ರೈತರೊಂದಿಗೆ ಚರ್ಚೆ ನಡೆಸಿ ಒಮ್ಮತದಿಂದ ಜುಲೈ 24 ರಿಂದ ಭದ್ರಾ ಬಲದಂಡೆ, ಎಡದಂಡೆ ನಾಲೆ, ಆನವೇರಿ, ದಾವಣಗೆರೆ, ಮಲೆಬೆನ್ನೂರು ಮತ್ತು ಹರಿಹರ ಶಾಖಾ ನಾಲೆಗಳಲ್ಲಿ ನೀರು ಹರಿಸಲು ನಿರ್ಧಾರ ಕೈಗೊಂಡಿದ್ದೇವೆ ಎಂದಿದ್ದಾರೆ.

    ಜುಲೈ 15 ರಂದು ಜಲಾಶಯದಲ್ಲಿ 157 ಅಡಿ 4 ಇಂಚುಗಳಷ್ಟು ನೀರು ಸಂಗ್ರಹವಿದ್ದು, ಈ ಮಟ್ಟಕ್ಕೆ ನೀರಿನ ಸಂಗ್ರಹಣೆ 40.484 ಟಿಎಂಸಿ ಇದೆ. ಇದರಲ್ಲಿ 8.50 ಟಿ.ಎಂ.ಸಿ ಬಳಕೆಗೆ ಬಾರದ(ಡೆಡ್ ಸ್ಟೋರೇಜ್) ಪ್ರಮಾಣವಾಗಿದ್ದು, 26.652 ಟಿಎಂಸಿ ಬಳಕೆಗೆ ಬರುವ ನೀರಿನ ಪ್ರಮಾಣವಾಗಿದೆ. ಭದ್ರಾ ಬಲದಂಡೆ ಕಾಲುವೆಗೆ ಪ್ರತಿದಿನ ಸರಾಸರಿ 3,050 ಕ್ಯೂಸೆಕ್ ಮತ್ತು ಭದ್ರಾ ಎಡದಂಡೆ ಕಾಲುವೆಗೆ 490 ಒಟ್ಟು 3.540 ಕ್ಯೂಸೆಕ್ ಬೇಡಿಕೆ ಇದೆ ಎಂದು ತಿಳಿಸಿದ್ದಾರೆ.

    ಮುಂಗಾರು ಹಂಗಾಮಿಗೆ ಅವಶ್ಯವಿರುವ ನೀರಿನ ವಿವರಣೆ: ಪ್ರಸ್ತುತ ಜಲಾಶಯದಲ್ಲಿ ಬಳಕೆಗೆ 26.652 ಟಿಎಂಸಿ ನೀರು ಲಭ್ಯವಿದ್ದು ಮುಂಗಾರು ಅವಧಿಗೆ 49.13 ಟಿಎಂಸಿ ನೀರು ಅವಶ್ಯಕತೆ ಇದೆ. ಜುಲೈ ತಿಂಗಳಿನಲ್ಲಿ ಕೊರತೆಯಿರುವ ನೀರಿನ ಪ್ರಮಾಣ 22.478 ಟಿಎಂಸಿ, ಆಗಿದ್ದು ಈ ಪ್ರಮಾಣದ ಆಧಾರದಲ್ಲಿ ಸದಸ್ಯರೆಲ್ಲ ಚರ್ಚಿಸಿ ಜು.24 ರಿಂದ ನೀರು ಹರಿಸಲು ನಿರ್ಧರಿಸಿದ್ದೇವೆ ಎಂದಿದ್ದಾರೆ.

    ಸಭೆಯಲ್ಲಿ ನೀರಾವರಿ ಸಲಹಾ ಸಮಿತಿ ಸದಸ್ಯರಾದ ರುದ್ರಮೂರ್ತಿ, ಸದಾಶಿವಪ್ಪಗೌಡ, ರಾಜಪ್ಪ, ರೈತ ಮುಖಂಡ ಹೆಚ್.ಆರ್.ಬಸವರಾಜಪ್ಪ ಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಯತೀಶ್ಚಂದ್ರ, ಮುಖ್ಯ ಆಡಳಿತಾಧಿಕಾರಿ ಕೃಷ್ಣಮೂರ್ತಿ. ಬಿ.ಕುಲಕರ್ಣಿ, ಸೇರಿದಂತೆ ಇತರೆ ಸದಸ್ಯರು, ರೈತರು, ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಮಳೆರಾಯನ ಅಬ್ಬರ- ಕೃಷ್ಣಾ ನದಿ ನೀರಿನಲ್ಲಿ ಏರಿಕೆ, ಸೇತುವೆ ಜಲಾವೃತ

  • ಭದ್ರಾ ಜಲಾಶಯ ಭರ್ತಿ- 2 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹೊರಕ್ಕೆ

    ಭದ್ರಾ ಜಲಾಶಯ ಭರ್ತಿ- 2 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹೊರಕ್ಕೆ

    – ಮಲೆನಾಡಿನಲ್ಲಿ ಭರ್ಜರಿ ಮಳೆ

    ಶಿವಮೊಗ್ಗ: ರಾಜ್ಯದ ಬಹುತೇಕ ಭಾಗಗಳಲ್ಲಿ ಈ ಬಾರಿಯೂ ಭರ್ಜರಿ ಮಳೆಯಾಗಿದೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಮಲೆನಾಡು ಭಾಗದಲ್ಲಿ ಸಹ ಭರ್ಜರಿ ಮಳೆಯಾಗಿದ್ದು, ಭದ್ರಾ ಜಲಾಶಯ ಸಹ ತುಂಬಿದೆ. ಹೀಗಾಗಿ 2 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ.

    ಜಿಲ್ಲೆಯ ಭದ್ರಾವತಿ ತಾಲೂಕಿನ ಭದ್ರಾ ಜಲಾಶಯದ ಭಾಗದಲ್ಲಿ ಸತತ ಮಳೆಯಾಗಿದ್ದು, ಈ ಹಿನ್ನೆಲೆ ಭದ್ರ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಭದ್ರಾ ಜಲಾಶಯದಿಂದ ಇಂದು 4 ಗೇಟುಗಳು ಮೂಲಕ ಒಟ್ಟು 2,288 ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. ಭದ್ರಾ ಎಡದಂಡೆ, ಬಲದಂಡೆ ನಾಲೆಗಳಿಗೂ ನೀರು ಹರಿದಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

    ಭದ್ರಾ ಅಣೆಕಟ್ಟು 186 ಅಡಿ ಪೂರ್ಣ ಸಾಮರ್ಥ್ಯ ಹೊಂದಿದ್ದು, ಪ್ರಸ್ತುತ ಡ್ಯಾಂನಲ್ಲಿ 185.7 ಅಡಿ ನೀರು ಸಂಗ್ರಹವಾಗಿದೆ. ಒಟ್ಟು 71,116 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವನ್ನು ಈ ಆಣೆಕಟ್ಟು ಹೊಂದಿದೆ. ಸದ್ಯ 70,012 ಟಿಎಂಸಿ ನೀರು ಸಂಗ್ರಹವಾಗಿದೆ. ನದಿಗೆ 400 ಕ್ಯೂಸೆಕ್, ಎಡದಂಡೆ ನಾಲೆಗೆ 100 ಕ್ಯೂಸೆಕ್ ಹಾಗೂ ಬಲದಂಡೆ ನಾಲೆಗೆ 917 ಕ್ಯೂಸೆಕ್ ಸೇರಿದಂತೆ ಒಟ್ಟು 2,288 ಕ್ಯೂಸೆಕ್ ನೀರು ಹೊರ ಬಿಡಲಾಗಿದೆ.

    ಇನ್ನೂ ವಿಶೇಷವೆಂಬಂತೆ ಈ ಮಳೆಗಾಲದಲ್ಲಿ ಇದೇ ಮೊದಲ ಬಾರಿಗೆ ಅಣೆಕಟ್ಟು ತುಂಬಿದೆ. ನೀರನ್ನು ಹೊರ ಬಿಡುತ್ತಿದ್ದಂತೆ ಡ್ಯಾಂನಿಂದ ಹಾಲ್ನೊರೆಯಂತೆ, ಧುಮ್ಮಿಕ್ಕುತ್ತಿದೆ. ನೀರು ಹರಿಯುವುದನ್ನು ನೋಡಲು ಹೆಚ್ಚು ಜನ ಧಾವಿಸಿದ್ದು, ಮನೋಹರ ದೃಶ್ಯವನ್ನು ಕಣ್ತುಂಬಿಕೊಂಡಿದ್ದಾರೆ.

  • ಭದ್ರಾ ಡ್ಯಾಂ ಎಲ್ಲ ಗೇಟ್ ಓಪನ್: 80 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    ಭದ್ರಾ ಡ್ಯಾಂ ಎಲ್ಲ ಗೇಟ್ ಓಪನ್: 80 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    ಶಿವಮೊಗ್ಗ: ಭದ್ರಾ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಒಳ ಬರುತ್ತಿರುವ ಹಿನ್ನೆಲೆಯಲ್ಲಿ ನೀರಿನ ಪ್ರಮಾಣ ಕಡಿಮೆ ಮಾಡಲು ಅಧಿಕಾರಿಗಳು ಹೊರ ಹರಿವಿನ ಮಟ್ಟವನ್ನು ಹೆಚ್ಚಿಸಿದ್ದಾರೆ. ಆದರೆ ಇತ್ತ ನದಿ ಪಾತ್ರದ ಗ್ರಾಮಗಳಿಗೆ ನೀರು ನುಗ್ಗಿದ್ದು ಗ್ರಾಮಸ್ಥರು ಪರದಾಡುವಂತಾಗಿದೆ.

    90 ಸಾವಿರ ಕ್ಯೂಸೆಕ್ ಒಳಹರಿವು ಇರುವುದರಿಂದ ಜಲಾಶಯದ ಎಲ್ಲಾ ಗೇಟುಗಳ ಮೂಲಕ 80 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಭದ್ರಾ ಜಲಾಶಯದಿಂದ ಸಾಮಾನ್ಯವಾಗಿ 20 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿತ್ತು. ಆದರೆ ಈ ಬಾರಿ ಭದ್ರಾ ನದಿ ಜಲಾನಯನ ಪ್ರದೇಶಗಳಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಹೊರನಾಡು, ಶೃಂಗೇರಿ ಇನ್ನಿತರ ಕಡೆ ವ್ಯಾಪಕ ಮಳೆಯಾಗುತ್ತಿದ್ದು, ಲಕ್ಕವಳ್ಳಿಯಲ್ಲಿರುವ ಭದ್ರಾ ಜಲಾಶಯ ಒಳಹರಿವು ನಿರಂತರವಾಗಿ ಹೆಚ್ಚುತ್ತಿದೆ.

    ಅಧಿಕಾರಿಗಳು ಡ್ಯಾಮ್‍ನ ಎಲ್ಲ ಗೇಟ್‍ಗಳನ್ನು ತೆರದಿದ್ದು, 80 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡುತ್ತಿದೆ. ಇಷ್ಟು ಪ್ರಮಾಣದ ನೀರು ಕಳೆದ ಕೆಲವು ವರ್ಷಗಳಿಂದ ನದಿ ಪಾತ್ರದ ಜನರು ಕಂಡಿರಲಿಲ್ಲ.

    ತಾಲೂಕು ಆಡಳಿತ ತಗ್ಗು ಪ್ರದೇಶದ ನಿವಾಸಿಗಳನ್ನು ತೆರವುಗೊಳಿಸಿ, ಗಂಜಿ ಕೇಂದ್ರ ತೆರೆದು ಆಸರೆ ನೀಡುತ್ತಿದೆ. ಸುಣ್ಣದಹಳ್ಳಿ, ಹೊಳೆಹೊನ್ನೂರು, ಕವಲಗುಂದಿಯಲ್ಲಿ ಗಂಜೆ ಕೇಂದ್ರ ಆರಂಭಗೊಂಡಿವೆ. ಭದ್ರಾವತಿಯ ಹೊಸ ಸೇತುವೆ ಮೇಲೆ ಐದು ಅಡಿ ನೀರು ಹರಿಯುತ್ತಿದ್ದು, ಇದು ರಾತ್ರಿ ವೇಳೆಗೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಭದ್ರಾ ನದಿ ಪಾತ್ರದಲ್ಲಿ ಹೀಗೆ ಮಳೆ ನಿರಂತರವಾಗಿ ಮುಂದುವರಿದರೆ ನೀರಿನ ಹೊರ ಹರಿವು ಮತ್ತಷ್ಟು ಹೆಚ್ಚಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv