Tag: ಭಯೋತ್ಪಾದನಾ ನಿಗ್ರಹ ದಳ

  • ಶಂಕಿತ ಉಗ್ರನ ಜೊತೆ ಭಟ್ಕಳದ ವಿಚ್ಛೇದಿತ ಮಹಿಳೆ ಲಿಂಕ್‌ – ಲವ್‌ ಕಹಾನಿ ಶುರುವಾಗಿದ್ದೇ ರೋಚಕ!

    ಶಂಕಿತ ಉಗ್ರನ ಜೊತೆ ಭಟ್ಕಳದ ವಿಚ್ಛೇದಿತ ಮಹಿಳೆ ಲಿಂಕ್‌ – ಲವ್‌ ಕಹಾನಿ ಶುರುವಾಗಿದ್ದೇ ರೋಚಕ!

    – ಭಯೋತ್ಪಾದನಾ ನಿಗ್ರಹ ದಳದಿಂದ ತೀವ್ರ ವಿಚಾರಣೆ

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದ ವಿಚ್ಛೇದಿತ ಮಹಿಳೆಯೊಬ್ಬಳು ಭಯೋತ್ಪಾದಕನೊಂದಿಗೆ ಸಂಪರ್ಕ ಬೆಳಸಿ ಹಣ ನೀಡಿದ ಕುರಿತು ಮುಂಬೈನ ಭಯೋತ್ಪಾದನಾ ನಿಗ್ರಹ ದಳ ಭಟ್ಕಳದ (Bhatkal) ಮಹಿಳೆಯೊಬ್ಬಳನ್ನ ವಿಚಾರಣೆ ನಡೆಸಿದೆ.

    ಕಳೆದ ಎರಡು ದಿನಗಳ ಹಿಂದೆ ಮುಂಬೈನಲ್ಲಿ (Mumbai) ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಐಸಿಸ್ (ISIS) ಸಂಘಟನೆಗೆ ಹಣ ವರ್ಗಾವಣೆ ಮಾಡುತ್ತಿದ್ದ ಇಂಜಿನಿಯರ್ ಹುಸೇನ್ ಅಬ್ದುಲ್ ಅಜೀಜ್ ಶೇಖ್ (32) ಎಂಬಾತನನ್ನು ನಾಸಿಕ್‌ನ ಟಿಡ್ಕೆ ಕಾಲೋನಿಯಲ್ಲಿ ಬಂಧಿಸಿದ್ದರು. ಇದನ್ನೂ ಓದಿ: ಅಳಿಯನ ಪರೀಕ್ಷೆಯ ಫಲಿತಾಂಶಕ್ಕಾಗಿ ಸಿಎಂ ಬಳಿ ನುಗ್ಗಿದ ಮಾವ- ಮಾಣಿಕ್ ಷಾ ಗ್ರೌಂಡ್‌ನಲ್ಲಿ ಭದ್ರತಾ ಲೋಪ

    ಈ ಸಂದರ್ಭದಲ್ಲಿ ಹುಸೇನ್ ಅಬ್ದುಲ್ ಅಜೀಜ್ ಶೇಖ್ ಮನೆಯಲ್ಲಿ ಸಿಮ್ ಕಾರ್ಡ್ಸ್, ಮೊಬೈಲ್ ಫೋನ್‌ಗಳು, ಪೆನ್‌ಡ್ರೈವ್‌‌ಗಳು, ಲ್ಯಾಪ್‌ಟಾಪ್ ಪತ್ತೆಯಾಗಿತ್ತು. ಇವುಗಳನ್ನು ತಪಾಸಣೆ ನಡೆಸಿದಾಗ, ಹುಸೇನ್ ಅಬ್ದುಲ್ ಅಜೀಜ್ ಶೇಖ್ ಜೊತೆ ಭಟ್ಕಳದ ಆಜಾದ್ ನಗರದ ಮಹಿಳೆ ಸಂಪರ್ಕವಿರುವುದು ಪತ್ತೆಯಾಗಿದೆ. ಈ ಮಹಿಳೆ ಆರೋಪಿ ಹುಸೇನ್ ಅಬ್ದುಲ್ ಅಜೀಜ್ ಶೇಖ್‌ನನ್ನ ಪ್ರೀತಿ ಮಾಡುತ್ತಿದ್ದಳು ಎಂಬ ವಿಚಾರವೂ ತಿಳಿದುಬಂದಿದೆ.

    ಜನವರಿ 24 ರಂದು ಭಟ್ಕಳಕ್ಕೆ ಆಗಮಿಸಿದ್ದ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಭಟ್ಕಳ ಪೊಲೀಸರ ಸಹಾಯ ಪಡೆದು, ಶಂಕಿತ ಉಗ್ರನ ಜೊತೆ ಸಂಪರ್ಕವಿದ್ದ ಮಹಿಳೆಯ ಮನೆಗೆ ತೆರಳಿ ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದಾರೆ. ಅಧಿಕಾರಿಗಳು ಮಹಿಳೆಯಿಂದ ಸಾಕಷ್ಟು ಮಾಹಿತಿ ಕಲೆ ಹಾಕಿದ್ದಾರೆ. ಇದನ್ನೂ ಓದಿ: ಕರ್ತವ್ಯ ಪಥದಲ್ಲಿ ಮಿಂಚಿದ ʻರಾಕೆಟ್‌ ಗರ್ಲ್‌ʼ – ಚಂದ್ರಯಾನ-3 ಸಕ್ಸಸ್‌ನಲ್ಲಿ ಮಹಿಳಾ ವಿಜ್ಞಾನಿಗಳ ಕೊಡುಗೆ ನೆನಪಿಸಿದ ಟ್ಯಾಬ್ಲೊ

    ಆನ್‌ಲೈನ್‌ನಲ್ಲಿ ಅರೇಬಿಕ್‌ ಕ್ಲಾಸ್‌: ಶಂಕಿತ ಉಗ್ರನೊಂದಿಗೆ ಸಂಪರ್ಕದಲ್ಲಿದ್ದ ಮಹಿಳೆ ಭಟ್ಕಳದಲ್ಲಿದ್ದುಕೊಂಡೇ ಆನ್‌ಲೈನ್ ಅರೇಬಿಕ್ ಕ್ಲಾಸ್ ನಡೆಸುತ್ತಿದ್ದಳು. ಜೊತೆಗೆ ಮದರಸಾದ ಶಿಕ್ಷಕಿಯಾಗಿದ್ದಳು. ಈಕೆ ಜ.17ರಂದು ಆರೋಪಿ ಹುಸೇನ್ ಅಬ್ದುಲ್ ಅಜೀಜ್ ಶೇಖ್ ನನ್ನು ಭಟ್ಕಳದ ಲಾಡ್ಜ್‌ವೊಂದರಲ್ಲಿ ಭೇಟಿಯಾಗಿದ್ದಳು. ಅಲ್ಲದೇ, ಆರೋಪಿ ಹುಸೇನ್ ಅಬ್ದುಲ್ ಅಜೀಜ್ ಶೇಖ್‌ಗೆ ವಿವಿಧ ಹಂತಗಳಲ್ಲಿ ಈವರೆಗೆ 4-5 ಲಕ್ಷ ರೂ. ನೀಡಿದ್ದು ಬೆಳಕಿಗೆ ಬಂದಿದೆ. ಆ ನಂತರ ಆರೋಪಿ ಜೊತೆ ಮಹಿಳೆ ನಿರಂತರ ಸಂಪರ್ಕದಲ್ಲಿದ್ದಳು ಎಂದು ಮೂಲಗಳಿಂದ ತಿಳಿದುಬಂದಿದೆ. ಮಹಿಳೆಯ ತಂದೆ ಭಟ್ಕಳದಲ್ಲಿ ಐಸ್ ಕ್ರೀಮ್ ಪಾರ್ಲರ್ ನಡೆಸುತಿದ್ದಾರೆ.

  • ಗುಜರಾತ್ ಗಲಭೆ ಪ್ರಕರಣದಲ್ಲಿ ಕೋರ್ಟ್ ತೀರ್ಪು ಹೊರಬಿದ್ದ ಬೆನ್ನಲ್ಲೇ ತೀಸ್ತಾ ಸೆತಲ್ವಾಡ್ ಬಂಧನ

    ಗುಜರಾತ್ ಗಲಭೆ ಪ್ರಕರಣದಲ್ಲಿ ಕೋರ್ಟ್ ತೀರ್ಪು ಹೊರಬಿದ್ದ ಬೆನ್ನಲ್ಲೇ ತೀಸ್ತಾ ಸೆತಲ್ವಾಡ್ ಬಂಧನ

    ಮುಂಬೈ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಬಂಧಿಸಿದೆ.

    ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ತೀಸ್ತಾ ಸೆತಲ್ವಾಡ್ ಅವರ ನಿವಾಸಕ್ಕೆ ಭೇಟಿ ನೀಡಿದ ಗುಜರಾತಿನ ಭಯೋತ್ಪಾದನಾ ನಿಗ್ರಹದಳ ಅವರನ್ನು ಬಂಧಿಸಿದೆ. ನಂತರ ಆಕೆಯನ್ನು ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

    2002ರ ಗುಜರಾತ್ ಗಲಭೆ ಬಗ್ಗೆ ತೀಸ್ತಾ ಸೆತಲ್ವಾಡ್, ಪೊಲೀಸರಿಗೆ ಆಧಾರ ರಹಿತ ಮಾಹಿತಿ ನೀಡಿದ್ದಾರೆ. ಅಲ್ಲದೆ ಪ್ರಧಾನಿ ಮೋದಿಯವರ ಪ್ರತಿಷ್ಠೆಗೆ ಕಳಂಕ ತರುವಂತೆ ಅವರು ಪ್ರಚಾರ ನಡೆಸಲು ಸಹಾಯ ಮಾಡಿದ್ದಾರೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಆರೋಪಿಸಿದ ಕೆಲವೇ ಗಂಟೆಗಳಲ್ಲಿ ತೀಸ್ತಾ ಅವರನ್ನು ಬಂಧಿಸಲಾಗಿದೆ.

    2002ರ ಗುಜರಾತ್ ಗಲಭೆಯಲ್ಲಿ ದೊಡ್ಡ ಪಿತೂರಿ ನಡೆದಿದೆ ಎಂದು ಹತ್ಯೆಯಾದ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿತ್ತು. ಗಲಭೆಗೆ ಸಂಬಂಧಿಸಿ ಮೋದಿ ಸೇರಿ 64 ಜನರಿಗೆ ಎಸ್‌ಐಟಿ ಕ್ಲೀನ್‌ಚಿಟ್ ನೀಡಿದ್ದನ್ನು ಪ್ರಶ್ನಿಸಿ ಜಾಫ್ರಿ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರಲ್ಲಿ ತೀಸ್ತಾ ಕೂಡ ಒಬ್ಬರಾಗಿದ್ದರು. ಗಲಭೆ ನಡೆದ ಅವಧಿಯಲ್ಲಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದರು.

    ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ಅಮಿತ್ ಶಾ, ನಾನು ತೀರ್ಪನ್ನು ಬಹಳ ಎಚ್ಚರಿಕೆಯಿಂದಲೇ ಓದಿದ್ದೇನೆ. ಅದರಲ್ಲಿ ತೀಸ್ತಾ ಸೆತಲ್ವಾಡ್ ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಅವರು ನಡೆಸುತ್ತಿರುವ ಎನ್‌ಜಿಓ ಹೆಸರು ನನಗೆ ನೆನಪಿಲ್ಲ. ಆದರೆ ಗಲಭೆಯ ಬಗ್ಗೆ ಆಧಾರ ರಹಿತ ಮಾಹಿತಿಯನ್ನು ಪೊಲೀಸರಿಗೆ ನೀಡಿರುವ ಬಗ್ಗೆ ಮಾಹಿತಿ ಇತ್ತು ಎಂದು ಹೇಳಿರುವುದಾಗಿ ವರದಿಯಾಗಿದೆ.

    Live Tv

  • ಮುಂಬೈನಲ್ಲಿ ಭಯೋತ್ಪಾದನಾ ನಿಗ್ರಹ ದಳ ಸ್ಥಾಪಿಸಿದ ಮಾಜಿ ಐಪಿಎಸ್ ಅಧಿಕಾರಿ ಇನ್ನಿಲ್ಲ

    ಮುಂಬೈನಲ್ಲಿ ಭಯೋತ್ಪಾದನಾ ನಿಗ್ರಹ ದಳ ಸ್ಥಾಪಿಸಿದ ಮಾಜಿ ಐಪಿಎಸ್ ಅಧಿಕಾರಿ ಇನ್ನಿಲ್ಲ

    ಮುಂಬೈ: ನಗರದಲ್ಲಿ ಪೊಲೀಸ್ ಭಯೋತ್ಪಾದನಾ ನಿಗ್ರಹ ದಳವನ್ನು ಸ್ಥಾಪಿಸಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಅಫ್ತಾಬ್ ಅಹ್ಮದ್ ಖಾನ್ ಶುಕ್ರವಾರ ನಿಧನರಾಗಿದ್ದಾರೆ.

    ಮೂರು ದಶಕಗಳ ಹಿಂದೆ ಮುಂಬೈ ಪೊಲೀಸ್ ಇಲಾಖೆಯಲ್ಲಿ ಭಯೋತ್ಪಾದನಾ ನಿಗ್ರಹ ದಳವನ್ನು ಸ್ಥಾಪಿಸಿದ ಕೀರ್ತಿ ಹೊಂದಿರುವ ಅಫ್ತಾಬ್ ಅಹ್ಮದ್ ಖಾನ್ ತಮ್ಮ 81ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

    ಅಫ್ತಾಬ್ ಒಬ್ಬ ಹೆಸರಾಂತ ಪೊಲೀಸ್ ಅಧಿಕಾರಿಯಾಗಿದ್ದು, ತಮ್ಮ ಅಧಿಕಾರ ಅವಧಿಯಲ್ಲಿ ಮುಂಬೈನ ದರೋಡೆಕೋರರು ಹಾಗೂ ಭಯೋತ್ಪಾದಕರ ವಿರುದ್ಧ ಹಲವಾರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಅಫ್ತಾಬ್ ತಮ್ಮ ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇದನ್ನೂ ಓದಿ: ವಿಮಾನ ಪ್ರಯಾಣಿಕರು ಇನ್ಮುಂದೆ ಒಬ್ಬರು ಒಂದೇ ಹ್ಯಾಂಡ್ ಬ್ಯಾಗ್ ಒಯ್ಯಬೇಕು!

    ಕೆಲವು ದಿನಗಳ ಹಿಂದೆ ಖಾನ್‌ರಿಗೆ ಕೋವಿಡ್ ಸೋಂಕು ತಗುಲಿತ್ತು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯೂ ಹೊಂದಿದ್ದರು. ಶುಕ್ರವಾರ ಅವರಿಗೆ ಮತ್ತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    1963ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಖಾನ್, 1995ರಲ್ಲಿ ಮಹಾರಾಷ್ಟ್ರದ ಪೊಲೀಸ್ ಇನ್‌ಸ್ಪೆಕ್ಟರ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ್ದರು. 1990ರಲ್ಲಿ ಖಾನ್ ಮುಂಬೈನಲ್ಲಿ ಭಯೋತ್ಪಾದನಾ ನಿಗ್ರಹ ಸಂಸ್ಥೆಯನ್ನು ಸ್ಥಾಪಿಸಿದ್ದು, ಅದು ದೇಶದಲ್ಲೇ ಸ್ಥಾಪಿತವಾದ ಮೊದಲ ಭಯೋತ್ಪಾದನಾ ನಿಗ್ರಹ ಸಂಘಟನೆಯಾಗಿತ್ತು ಎಂದು ಹೇಳಲಾಗಿದೆ. ಇದನ್ನೂ ಓದಿ: ಐಎಸ್‌ಐ ಮಾರ್ಕ್ ಇಲ್ಲದ 70 ಲಕ್ಷ ಮೌಲ್ಯದ ಚೀನಾ ಆಟಿಕೆ ವಶ