Tag: ಭರಮಸಾಗರ

  • ಊಟ ಬೇಕೆಂದು ಅಳುತ್ತಿದ್ದ ಮಗನ ಮೇಲೆ ಹಲ್ಲೆ ನಡೆಸಿ ಹತ್ಯೆ – ಪತಿ ವಿರುದ್ಧ ಪತ್ನಿ ದೂರು

    ಊಟ ಬೇಕೆಂದು ಅಳುತ್ತಿದ್ದ ಮಗನ ಮೇಲೆ ಹಲ್ಲೆ ನಡೆಸಿ ಹತ್ಯೆ – ಪತಿ ವಿರುದ್ಧ ಪತ್ನಿ ದೂರು

    ಚಿತ್ರದುರ್ಗ: ಊಟ ಬೇಕೆಂದು ಅಳುತ್ತಿದ್ದ ಮಗನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆಂದು ಪತಿ ವಿರುದ್ಧ ಪತ್ನಿ ದೂರು ದಾಖಲಿಸಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಹಳೇ ರಂಗಾಪುರ ಗ್ರಾಮದಲ್ಲಿ ನಡೆದಿದೆ.

    ಮಂಜುನಾಥ (06) ಮೃತ ದುರ್ದೈವಿ ಬಾಲಕ. ಮಂಜುನಾಥ ಊಟ ಬೇಕೆಂದು ಅಳುತ್ತಿದ್ದ. ಅದಕ್ಕಾಗಿ ತಾಯಿ ಪಕ್ಕದ ಮನೆಗೆ ಊಟ ತರಲು ಹೋಗಿದ್ದಳು. ಹಿಂತಿರುಗಿ ಬರುವಷ್ಟರಲ್ಲಿ ತಂದೆ ತಿಪ್ಪೇಶ್ ಮಗನ ಮೇಲೆ ಹಲ್ಲೆ ನಡೆಸಿದ್ದಾನೆ. ಬೆನ್ನು, ಪಕ್ಕೆಗೆ ಹೊಡೆದಿದ್ದು, ಮಗ ಮೂರ್ಛೆ ಹೋಗಿದ್ದಾನೆ. ತಾಯಿ ತಕ್ಷಣ ಮಗನನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ಕರೆತಂದರು. ಅಷ್ಟರಲ್ಲಿ ಬಾಲಕ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಸಿಎಂ ತವರಿನಲ್ಲೂ ವಕ್ಫ್ ಬೋರ್ಡ್ ಜಾದೂ; 2020 ರಲ್ಲಿ ಹಿಂದೂ ಜಾಗ, 2024 ರಲ್ಲಿ ವಕ್ಫ್‌ ಆಸ್ತಿ!

    ತಿಪ್ಪೇಶ್ ವಿರುದ್ಧ ಪತ್ನಿ ಗೌರಮ್ಮ ಭರಮಸಾಗರ ಠಾಣೆಯಲ್ಲಿ ದುರುದ್ದೇಶದಿಂದ ಮಗನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ದೂರು ನೀಡಿದ್ದಾರೆ. ತಿಪ್ಪೇಶ್ ಹಾಗೂ ಗೌರಮ್ಮ ಕೆಲ ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ತಿಪ್ಪೇಶ್ ತನ್ನ ತಾಯಿ ಶೆಟ್ಟಮ್ಮ ಮಾತು ಕೇಳಿ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಗುರುವಾರ ಸಂಜೆ ಈ ವೇಳೆ ದಾರುಣ ಘಟನೆ ನಡೆದಿದ್ದು, ಭರಮಸಾಗರ (Bharamasagara) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ – ಜಮೀನಿನಲ್ಲಿದ್ದ ಪೈಪ್, ಯಂತ್ರಗಳು ಧ್ವಂಸ!

  • ತಡೆಗೋಡೆ ಇಲ್ಲದ ಕೆರೆಗೆ ಉರುಳಿದ ಕಾರು – ವ್ಯಕ್ತಿ ಸಾವು

    ತಡೆಗೋಡೆ ಇಲ್ಲದ ಕೆರೆಗೆ ಉರುಳಿದ ಕಾರು – ವ್ಯಕ್ತಿ ಸಾವು

    ಚಿತ್ರದುರ್ಗ: ತಡೆಗೋಡೆ ಇಲ್ಲದ ದೊಡ್ಡಕೆರೆಗೆ ಕಾರು ಉರುಳಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ನಡೆದಿದೆ.

    ಚಿತ್ರದುರ್ಗ ತಾಲೂಕಿನ ಕೋಡಿರಂಗ ವನಹಳ್ಳಿಯಿಂದ ಭರಮಸಾಗರದ ಕಡೆಗೆ ಗುರುವಾರ ತಡರಾತ್ರಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ತುಮಕೂರು ನಿವಾಸಿ ಜಿ. ರಮೇಶ್ (40) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಫುಡ್ ಡೆಲಿವರಿ ಬಾಯ್ ಮೇಲೆ ಮಹಿಳಾ ಸಿಬ್ಬಂದಿ ದರ್ಪ

    25 ವರ್ಷಗಳ ಬಳಿಕ ತುಂಬಿದ್ದ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ದೊಡ್ಡಕೆರೆ ಏರಿ ಮೇಲೆ ಬರುತ್ತಿದ್ದ ಕಾರು ಕೆರೆಗೆ ಪಲ್ಟಿಯಾಗಿ ದುರ್ಘಟನೆ ನಡೆದಿದೆ. ಇಂದು ಬೆಳಗಿನ ಜಾವ ಕೆರೆಯಲ್ಲಿ ನೀರಿನೊಳಗೆ ಕಾರಿನ ಹೆಡ್ ಲೈಟ್ ಉರಿಯುತ್ತಿದ್ದ ಬೆಳಕನ್ನು ನೋಡಿದ ಸಾರ್ವಜನಿಕರು ಅಚ್ಚರಿಯಾಗಿ ಹಗ್ಗ ಹಾಗೂ ಜೆಸಿಬಿ ಸಹಾಯದಿಂದ ಕಾರನ್ನು ಹೊರ ತೆಗೆದಿದ್ದಾರೆ. ಇದನ್ನೂ ಓದಿ  ಹಿಂದಿನ ಸರ್ಕಾರವೇ ರೈತರ ಆತ್ಮಹತ್ಯೆಗೆ ಕಾರಣ – ಯೋಗಿ ಆದಿತ್ಯನಾಥ್

    ಕಾರನ್ನು ಹೊರ ತೆಗೆದ ಬಳಿಕ ಕಾರಲ್ಲೇ ವ್ಯಕ್ತಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಕೆರೆಯ ಬದಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ದೀಪ ಇಲ್ಲದ ಹಿನ್ನೆಲೆ ಈ ಅವಘಡ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳ ವಿರುದ್ಧ ಸ್ಥಳೀಯರು ಕಿಡಿಕಾರಿದ್ದಾರೆ. ಈ ಸಂಬಂಧ ಭರಮಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.