Tag: ಭರ್ತಿ

  • ಮತ್ತೊಮ್ಮೆ ಬಸವಸಾಗರ ಡ್ಯಾಂ ಭರ್ತಿ- ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು

    ಮತ್ತೊಮ್ಮೆ ಬಸವಸಾಗರ ಡ್ಯಾಂ ಭರ್ತಿ- ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು

    ಯಾದಗಿರಿ: ಮತ್ತೊಮ್ಮೆ ಬಸವಸಾಗರ ಡ್ಯಾಂ ಸಂಪೂರ್ಣ ಭರ್ತಿಯಾದ ಹಿನ್ನೆಲೆ ಡ್ಯಾಂನಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ.

    ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಸಮೀಪದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 10 ಕ್ರಸ್ಟ್ ಗೇಟ್‍ಗಳ ಮೂಲಕ 1.1 ಲಕ್ಷ ಕ್ಯೂಸೆಕ್ ನಷ್ಟು ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಇದನ್ನೂ ಓದಿ: ಎರಡೂವರೆ ತಿಂಗಳಿಂದ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ- ಆರೋಪಿ ಬಂಧನ

    ಸದ್ಯದ ಡ್ಯಾಂಗೆ 85 ಸಾವಿರ ಕ್ಯೂಸೆಕ್ ನೀರು ಇದೆ. 492.25 ಮೀ. ಎತ್ತರದ ಜಲಾಶಯದಲ್ಲಿ ಸದ್ಯ 492.01 ಮೀಟರ್ ಅಂದರೆ 31 ಟಿಎಂಸಿ ಸದ್ಯ ನೀರು ಸಂಗ್ರಹವಾಗಿದೆ. ಹೀಗಾಗಿ ನೀರನ್ನು ಹೊರಬಿಡಲಾಗಿದೆ. ನದಿ ಪಾತ್ರದ ಜನರಲ್ಲಿ ಇದೀಗ ಮತ್ತೆ ಭಯ ಶುರುವಾಗಿದೆ.

  • ನಾಲ್ಕನೇ ಬಾರಿ ಭರ್ತಿಯಾದ ಶಿವಮೊಗ್ಗದ ಮಾಣಿ ಜಲಾಶಯ

    ನಾಲ್ಕನೇ ಬಾರಿ ಭರ್ತಿಯಾದ ಶಿವಮೊಗ್ಗದ ಮಾಣಿ ಜಲಾಶಯ

    ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನಲ್ಲಿರುವ ಮಾಣಿ ಡ್ಯಾಂ ನಾಲ್ಕನೇ ಬಾರಿ ಭರ್ತಿಯಾಗಿದೆ. ಡ್ಯಾಂನ ಮೂರು ಗೇಟ್ ತೆರೆದು 1,000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.

    ವರಾಹಿ ನದಿಗೆ 1988ರಲ್ಲಿ ನಿರ್ಮಾಣವಾದ ಈ ಡ್ಯಾಂ ಇದಕ್ಕೂ ಮುಂಚೆ 1994, 2006 ಹಾಗೂ 2007ರಲ್ಲಿ ಭರ್ತಿಯಾಗಿತ್ತು. ಇದೀಗ ಹನ್ನೆರಡು ವರ್ಷಗಳ ನಂತರ ಮತ್ತೊಮ್ಮೆ ಭರ್ತಿಯಾಗಿದೆ. ಕೆಪಿಸಿ ಅಸ್ತಿತ್ವಕ್ಕೆ ಬಂದ ಮೇಲೆ ನಿರ್ಮಾಣಗೊಂಡ ಮೊದಲ ಅಣೆಕಟ್ಟು ಇದಾಗಿದ್ದು, 31 ಟಿಎಂಸಿ ಸಾಮರ್ಥ್ಯದ ಈ ಅಣೆಕಟ್ಟು ವಿಶಿಷ್ಟ ವಿನ್ಯಾಸದಿಂದ ಗಮನ ಸೆಳೆಯುತ್ತಿದೆ.

    ಇಲ್ಲಿರುವ ಹನ್ನೊಂದು ಗುಡ್ಡಗಳಿಗೆ ಅಡ್ಡಕಟ್ಟೆ ನಿರ್ಮಿಸಿರುವ ಈ ಅಣೆಕಟ್ಟನ್ನು `ಬೆಟ್ಟದ ಮೇಲಿನ ಬಟ್ಟಲು’ ಎಂದು ಕರೆಯಲಾಗುತ್ತಿದೆ. ವಿದ್ಯುತ್ ಉತ್ಪಾದನೆಗೆ ಮಾತ್ರ ಮೀಸಲಾಗಿರುವ ಈ ಅಣೆಕಟ್ಟಿನ ಬಳಿಯೇ ಪವರ್ ಹೌಸ್ ಇದೆ. ಇಲ್ಲಿ ವಿದ್ಯುತ್ ಉತ್ಪಾದನೆಯಾದ ನಂತರ ಇದೇ ನೀರನ್ನು ಬಳಸಿ ಭೂಗರ್ಭ ವಿದ್ಯುದಾಗಾರದಲ್ಲೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ.

    ಹನ್ನೆರಡು ವರ್ಷಗಳ ನಂತರ ತುಂಬಿರುವ ಈ ಜಲಾಶಯದ ಮನಮೋಹಕ ದೃಶ್ಯ ನೋಡಲು ಪ್ರವಾಸಿಗರಿಗೆ ಮುಕ್ತ ಅವಕಾಶ ಇಲ್ಲ. ಹೊಸಂಗಡಿಯಲ್ಲಿರುವ ಕೆಪಿಸಿ ಕಚೇರಿಯಲ್ಲಿ ಪಾಸ್ ಪಡೆದ ನಂತರವಷ್ಟೇ ಈ ಅಣೆಕಟ್ಟೆಯ ಮೇಲೆ ನಿಂತು ಇಲ್ಲಿನ ಸೌಂದರ್ಯ ಸವಿಯಲು ಸಾಧ್ಯ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜಿಲ್ಲೆಯಲ್ಲಿ ತಗ್ಗಿದ ವರುಣ: ಕೆಆರ್‌ಎಸ್ ಸಂಪೂರ್ಣ ಭರ್ತಿ

    ಜಿಲ್ಲೆಯಲ್ಲಿ ತಗ್ಗಿದ ವರುಣ: ಕೆಆರ್‌ಎಸ್ ಸಂಪೂರ್ಣ ಭರ್ತಿ

    ಮಂಡ್ಯ: ಜಿಲ್ಲೆಯಲ್ಲಿ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು,ಕೆಆರ್‌ಎಸ್ ಜಲಾಶಯದಿಂದ ಹೊರ ಬಿಡಲಾಗುತ್ತಿದ್ದ ಹೆಚ್ಚುವರಿ ನೀರಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿದೆ. ಇದರ ಪರಿಣಾಮವಾಗಿ ನದಿ ಪಾತ್ರದ ಪ್ರದೇಶಗಳಲ್ಲಿ ಉಂಟಾಗಿದ್ದ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

    ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ಕಾವೇರಿ ನದಿ ಸೇರಿದಂತೆ ಹಲವು ನದಿಗಳು ಮೈದುಂಬಿ ಹರಿಯುತ್ತಿದ್ದವು. ಹೀಗಾಗಿ ಕೆಆರ್‌ಎಸ್ ಜಲಾಶಯಕ್ಕೆ 1 ಲಕ್ಷ ಕ್ಯೂಸೆಕ್‍ಗೂ ಹೆಚ್ಚಿನ ನೀರು ಹರಿದು ಬರುತ್ತಿದ್ದರಿಂದ ಜಲಾಶಯ ಸಂಪೂರ್ಣವಾಗಿ ತುಂಬಿತ್ತು. ಇದರಿಂದಾಗಿ ಅಷ್ಟೇ ಪ್ರಮಾಣದ ನೀರನ್ನು  ಕಾವೇರಿ ನದಿಗೆ ಬಿಡಲಾಗಿತ್ತು. ಅಧಿಕ ಪ್ರಮಾಣದ ನೀರನ್ನು ಬಿಡುಗಡೆ ಮಾಡಿದ್ದರಿಂದ ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ ಅಧಿಕಾರಿಗಳು ಸಹ ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದ ನೀರಿನ ಮಟ್ಟವನ್ನು 121 ಅಡಿಗೆ ಕಾಯ್ದುಕೊಂಡಿದ್ದರು.

    ಸದ್ಯ ಜಿಲ್ಲೆಯಾದ್ಯಂತ ವರುಣನ ಆರ್ಭಟ ಕಡಿಮೆಯಾಗಿದ್ದರಿಂದ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಭಾರೀ ಇಳಿಕೆ ಕಂಡಿದೆ. ಜಲಾಶಯಕ್ಕೆ ಶುಕ್ರವಾರದಿಂದ 21,170 ಕ್ಯೂಸೆಕ್ ಒಳಹರಿವು ಬರುತ್ತಿದ್ದು, ಇದಕ್ಕೆ ಸಮಾಂತರವಾಗಿ 21,202 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆಮಾಡಲಾಗುತ್ತಿದೆ.

    ಮಳೆ ಕಡಿಮೆಯಾಗಿದ್ದರಿಂದ ಜಲಾಶಯವನ್ನು ಮತ್ತೆ ಸಂಪೂರ್ಣವಾಗಿ ಭರ್ತಿ ಮಾಡಲಾಗಿದ್ದು, ಶನಿವಾರದ ಮಾಹಿತಿಯಂತೆ ಕೆಆರ್‌ಎಸ್ ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದರೆ, ಸಂಗ್ರಹವಾದ ನೀರಿನ ಮಟ್ಟ 124.70 ಅಡಿಗಳಷ್ಟಾಗಿದೆ ಎಂದು ತಿಳಿದುಬಂದಿದೆ.

    ಕ್ಯೂಸೆಕ್ ಟಿಎಂಸಿ ಎಂದರೆ ಎಷ್ಟು?
    ಕ್ಯೂಸೆಕ್ ಎಂಬುದು cubic foot per second ಹೃಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಟಿಬಿ ಡ್ಯಾಂನಿಂದ 2.22 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ: ಕಂಪ್ಲಿಯಲ್ಲಿ 25 ಮನೆ ಜಲಾವೃತ

    ಟಿಬಿ ಡ್ಯಾಂನಿಂದ 2.22 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ: ಕಂಪ್ಲಿಯಲ್ಲಿ 25 ಮನೆ ಜಲಾವೃತ

    ಕೊಪ್ಪಳ: ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಾಭದ್ರಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜಿಲ್ಲೆಯ ತುಂಗಾಭದ್ರಾ ಜಲಾಶಯವು ತುಂಬಿದೆ. ಜಲಾಶಯ ತುಂಬಿದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.

    ಮಲೆನಾಡಿನಲ್ಲಿ ಸುರಿಯುತ್ತಿರುವ ವರ್ಷಧಾರೆಯಿಂದಾಗಿ ಬರದ ನಾಡು ಬಳ್ಳಾರಿ ಮತ್ತು ಕೊಪ್ಪಳದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ತುಂಗಾಭದ್ರಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಜಿಲ್ಲೆಯ ಮುನಿರಾಬಾದ್ ತಾಲೂಕಿನಲ್ಲಿರುವ ತುಂಗಭದ್ರಾ ಜಲಾಶಯವು ಸಂಪೂರ್ಣ ತುಂಬಿದೆ. ಇದರಿಂದಾಗಿ ಜಲಾಶಯದಿಂದ ಗುರುವಾರ ತುಂಗಭದ್ರಾ ನದಿಗೆ 2 ಲಕ್ಷ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗಿತ್ತು.

    ಶುಕ್ರವಾರವೂ ಸಹ 33 ಕ್ರಸ್ಟ್ ಗೇಟುಗಳ ಮೂಲಕ ನದಿಗೆ 2.22 ಲಕ್ಷ ಕ್ಯೂಸೆಕ್ ನೀರನ್ನು ಹರಿದು ಬೀಡಲಾಗಿದೆ. ಕಳೆದ 10 ವರ್ಷಗಳ ಬಳಿಕ ತುಂಗಾಭದ್ರ ನದಿಯು ಮೈದುಂಬಿ ಹರಿಯುತ್ತಿದೆ. ಇದರಿಂದಾಗಿ ಕಂಪ್ಲಿ ತಾಲೂಕಿನಲ್ಲಿ ಬರುವ ಅನೇಕ ಸ್ಮಾರಕಗಳು ಮುಳುಗಡೆಗೊಂಡಿವೆ. ಅಲ್ಲದೆ ಕಂಪ್ಲಿ ಸೇತುವೆಯು ಸಹ ಸಂಪೂರ್ಣವಾಗಿ ಮುಳುಗಡೆಗೊಂಡಿದೆ. ಕಂಪ್ಲಿ ಕೋಟೆ ಪ್ರದೇಶದ 25 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಈಗಾಗಲೇ ತಾಲೂಕು ಆಡಳಿತ ಮಂಡಳಿಯು 80ಕ್ಕೂ ಹೆಚ್ಚು ಮಂದಿ ನಿರಾಶ್ರಿತರಿಗೆ ಕಂಪ್ಲಿ ಸೇತುವೆಯ ಬಳಿ ಇರುವ ಸರ್ಕಾರಿ ಶಾಲೆಯಲ್ಲಿ ಗಂಜಿ ಕೇಂದ್ರವನ್ನು ಆರಂಭಿಸಿದೆ.

    ಅಲ್ಲದೇ ಕಂಪ್ಲಿ ಪಟ್ಟಣದಲ್ಲಿಯೂ ಗಂಜಿಕೇಂದ್ರ ತೆರೆಯಲು ಸಿದ್ಧತೆ ನಡೆಸಿದೆ. ಆದರೆ ನದಿ ನೀರು ಮನೆಗಳಿಗೆ ನುಗ್ಗಿದರೂ ಜನರು ಮನೆಯಿಂದ ಹೊರಬರುತ್ತಿಲ್ಲ. ಸ್ವತಃ ಕಂಪ್ಲಿ ತಹಶೀಲ್ದಾರ್ ರೇಣುಕಮ್ಮನವರು ನದಿ ನೀರಿಗಿಳಿದು ಜನರ ಮನವೊಲಿಸುತ್ತಿದ್ದಾರೆ. ಅಲ್ಲದೇ ನದಿಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿಮಾಡಿಕೊಳ್ಳುತ್ತಿದ್ದಾರೆ.

    ಕ್ಯೂಸೆಕ್ ಟಿಎಂಸಿ ಎಂದರೆ ಎಷ್ಟು?
    ಕ್ಯೂಸೆಕ್ ಎಂಬುದು cubic foot per second ಹೃಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಳಗಾವಿ, ಬಾಗಲಕೋಟೆ ಜೀವನಾಡಿ ಹಿಡಕಲ್ ಜಲಾಶಯ ಸಂಪೂರ್ಣ ಭರ್ತಿ

    ಬೆಳಗಾವಿ, ಬಾಗಲಕೋಟೆ ಜೀವನಾಡಿ ಹಿಡಕಲ್ ಜಲಾಶಯ ಸಂಪೂರ್ಣ ಭರ್ತಿ

    ಚಿಕ್ಕೋಡಿ: ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಜೀವನಾಡಿ ರಾಜಾ ಲಖಮಗೌಡ ಜಲಾಶಯ(ಹಿಡಕಲ್ ಡ್ಯಾಂ) ಸಂಪೂರ್ಣ ಭರ್ತಿಯಾಗಿದ್ದು, ಎರಡು ಜಿಲ್ಲೆಯ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ

    ಘಟಪ್ರಭಾ ನದಿಗೆ ಅಡ್ಡಲಾಗಿ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹಿಡಕಲ್ ಗ್ರಾಮದ ಬಳಿ ನಿರ್ಮಿಸಿರುವ ಈ ಡ್ಯಾಮ್ ಕಳೆದ 3 ವರ್ಷಗಳಿಂದ ಸಂಪೂರ್ಣವಾಗಿ ಭರ್ತಿಯಾಗಿರಲಿಲ್ಲ. ಸಾಮಾನ್ಯವಾಗಿ ಅಕ್ಟೋಬರ್ ತಿಂಗಳಲ್ಲಿ ಭರ್ತಿ ಆಗುತ್ತಿದ್ದ ಜಲಾಶಯ ಎರಡು ತಿಂಗಳು ಅವಧಿಗೂ ಮುನ್ನವೇ ತನ್ನ ಒಡಲನ್ನು ತುಂಬಿಕೊಂಡಿದೆ.

    ರಾಜಾ ಲಖಮಗೌಡ ಜಲಾಶಯ 51 ಟಿಎಂಸಿ ನೀರು ಸಂಗ್ರಹ ಹೊಂದಿದ್ದು, ಈಗ 50.70 ಟಿಎಂಸಿ ನೀರು ಸಂಗ್ರಹವಾಗಿದೆ. ಹೀಗಾಗಿ ಬುಧವಾರ ಸಂಜೆ 4 ಗಂಟೆಗೆ ಜಲಾಶಯದ 10 ಗೇಟ್‍ಗಳ ಮೂಲಕ ನೀರನ್ನು ಹರಿಬಿಡಲಾಗುತ್ತದೆ ಎಂದು ಅಧಿಕಾರಿಗಳು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಈಗಾಗಲೇ ಘಟಪ್ರಭಾ ನದಿ ಪಾತ್ರದ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರವಾಗುವಂತೆ ಸೂಚನೆ ನೀಡಲಾಗಿದೆ. ಜೊತೆಗೆ ಘಟಪ್ರಭಾ ನದಿ ಪಾತ್ರದಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಕಾರಣ 10 ಸಾವಿರ ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ಹೊರ ಬೀಡುವ ಸಾಧ್ಯತೆಯಿದೆ. ಅಲ್ಲದೇ ಮುಖ್ಯ ಕಾಲುವೆ ಮೂಲಕ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ಈಗಾಗಲೇ ನೀರು ಬೀಡಲಾಗಿದೆ. ಈ ವರ್ಷ ಹಿಡಕಲ್ ಜಲಾಶಯ ಭರ್ತಿ ಆಗಿರುವ ಹಿನ್ನೆಯಲ್ಲಿ ಕುಡಿಯುವ ನೀರು, ವಿದ್ಯುತ್ ಉತ್ಪಾದನೆ ಹಾಗೂ ನೀರಾವರಿಗೆ ಬೇಸಿಗೆ ಕಾಲದವರೆಗೂ ಯಾವುದೇ ವ್ಯತ್ಯಯ ಆಗುವುದಿಲ್ಲ ಎನ್ನುವುದು ಸಂತಸ ತಂದಿದೆ.

  • ಕೋಡಿ ಬೀಳುವ ಹಂತಕ್ಕೆ ತಲುಪಿದೆ ಪ್ರಸಿದ್ಧ ಮದಗದ ಕೆರೆ!

    ಕೋಡಿ ಬೀಳುವ ಹಂತಕ್ಕೆ ತಲುಪಿದೆ ಪ್ರಸಿದ್ಧ ಮದಗದ ಕೆರೆ!

    ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಪ್ರಸಿದ್ಧ ಕೆರೆಯಾದ ಮದಗದ ಕೆರೆಯು ಸಂಪೂರ್ಣ ತುಂಬಿದ್ದು, ಕೆರೆ ಕೋಡಿ ಬೀಳಲು ಕೆಲವೇ ಅಡಿಗಳು ಬಾಕಿ ಇದೆ.

    ಜಿಲ್ಲೆಯ ಗಿರಿ ಭಾಗದಲ್ಲಿ ಸುರಿಯುತ್ತಿರೋ ಧಾರಾಕಾರ ಮಳೆಯಿಂದಾಗಿ ಸುಮಾರು 2,036 ಎಕರೆ ವಿಸ್ತಿರ್ಣದ ಕಡೂರಿನ ಪ್ರಸಿದ್ಧ ಮದಗದ ಕೆರೆ ಸಂಪೂರ್ಣ ತುಂಬಿಹೋಗಿದೆ. ಈ ಹಿನ್ನೆಲೆಯಲ್ಲಿ ಕೆರೆ ಕೋಡಿ ಬೀಳಲು ಕೆಲವೇ ಅಡಿಗಳು ಬಾಕಿ ಇವೆ.

    ಮದಗದ ಕೆರೆಯು ಎಂತಹುದೇ ಬರಗಾಲ ಬಂದರೂ, ಬತ್ತದೆ ಇರುವುದು ಇದರ ಇತಿಹಾಸವಾಗಿದೆ. ಕಳೆದೆರಡು ವರ್ಷಗಳ ಹಿಂದಿನ ಭೀಕರ ಬರಗಾಲದಲ್ಲೂ ಈ ಕೆರೆ ಕೋಡಿ ಬಿದ್ದಿತ್ತು. ಮದಗದ ಕೆರೆಗೆ ಬರೋದೆ ಮಾಯದಂತ ಮಳೆ ಎಂಬ ಜಾನಪದ ಗೀತೆ ಕೂಡ ಇದೆ.

    ಕಳೆದ ವರ್ಷ ನೀರಿನ ಪ್ರಮಾಣ ಕಡಿಮೆಯಾಗಿದ್ದ ಈ ಕೆರೆಯಲ್ಲಿ, ಈ ವರ್ಷ ನೀರು ತುಂಬಿರುವುದರಿಂದ ಕಡೂರು ಹಾಗೂ ಬೀರೂರಿನ ರೈತರಿಗೆ ಕುಡಿಯಲು ಹಾಗೂ ಬೆಳೆಗೆ ನೀರಿನ ಸೌಲಭ್ಯ ಸಿಕ್ಕಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

  • ಅವಧಿಗೂ ಮುನ್ನವೇ ಭರ್ತಿಯಾದ ಬೆಳಗಾವಿಯ ರಕ್ಕಸಕೊಪ್ಪ ಜಲಾಶಯ

    ಅವಧಿಗೂ ಮುನ್ನವೇ ಭರ್ತಿಯಾದ ಬೆಳಗಾವಿಯ ರಕ್ಕಸಕೊಪ್ಪ ಜಲಾಶಯ

    ಬೆಳಗಾವಿ: ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ರಕ್ಕಸಕೊಪ್ಪ ಜಲಾಶಯವು ಈ ಬಾರಿ ಅವಧಿಗೂ ಮುನ್ನವೇ ಭರ್ತಿಯಾಗಿದ್ದು, ಜನತೆಯ ಮೊಗದಲ್ಲಿ ಸಂತಸಕ್ಕೆ ಕಾರಣವಾಗಿದೆ.

    ಖಾನಾಪುರದ ಸಹ್ಯಾದ್ರಿ ಪರ್ವತ ಶ್ರೇಣಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಒಟ್ಟು 0.62 ಟಿಎಂಸಿ ನೀರು ಸಂಗ್ರಹ ಸಾಮಥ್ರ್ಯ ಇರುವ ರಕ್ಕಸಕೊಪ್ಪ ಜಲಾಶಯ ಇದೀಗ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಜಲಾಶಯದ ಗೇಟ್ ಗಳ ಮೂಲಕ ಮಾರ್ಕಂಡೇಯ ನದಿಗೆ ನೀರು ಬಿಡಲಾಗುತ್ತಿದೆ.

    ಕಳೆದ ವರ್ಷ ಸೆಪ್ಟೆಂಬರ್ 15 ರಂದು ಭರ್ತಿಯಾಗಿದ್ದ ಜಲಾಶಯ ಈ ವರ್ಷ ಒಂದು ತಿಂಗಳು ಮೊದಲೇ ಭರ್ತಿಯಾಗಿದೆ. ವರ್ಷ ಪೂರ್ತಿ ಬೆಳಗಾವಿ ನಗರಕ್ಕೆ ರಕ್ಕಸಕೊಪ್ಪ ಜಲಾಶಯದಿಂದಲೇ ನೀರು ಪೂರೈಕೆಯಾಗುತ್ತದೆ. ಅಲ್ಲದೇ ಜಿಲ್ಲೆಯ ಕುಡಿಯುವ ನೀರು ಪೂರೈಕೆಗೆ ರಕ್ಕಸಕೊಪ್ಪ ಜಲಾಶಯವೇ ಮೂಲ ಆಧಾರವಾಗಿದೆ.