Tag: ಭವ್ಯಾ ಗೌಡ

  • BBK 11: ಗೆಲುವಿಗಾಗಿ ವರಸೆ ಬದಲಿಸಿದ ಭವ್ಯಾಗೆ ಕಿವಿಹಿಂಡಿದ ತ್ರಿವಿಕ್ರಮ್‌

    BBK 11: ಗೆಲುವಿಗಾಗಿ ವರಸೆ ಬದಲಿಸಿದ ಭವ್ಯಾಗೆ ಕಿವಿಹಿಂಡಿದ ತ್ರಿವಿಕ್ರಮ್‌

    ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ (Bigg Boss Kannada 11) ತ್ರಿವಿಕ್ರಮ್ ಹಾಗೂ ಭವ್ಯಾ (Bhavya Gowda) ನಡುವೆ ಉತ್ತಮ ಒಡನಾಟವಿದೆ. ಈ ಗೆಳೆತನ ಇತ್ತೀಚೆಗೆ ದೂರಾದಂತೆ ಕಂಡರೂ ಮತ್ತೆ ಇಬ್ಬರೂ ಒಂದಾಗುತ್ತಿದ್ದಾರೆ. ಇಷ್ಟು ದಿನ ಗೆಳತಿ ಭವ್ಯಾ ತಪ್ಪುಗಳನ್ನು ತ್ರಿವಿಕ್ರಮ್‌ (Trivikram) ಹೇಳುತ್ತಿರಲಿಲ್ಲ. ಈಗ ಅವರು ಓಪನ್ ಆಗಿ ತ್ರಿವಿಕ್ರಮ್ ತಪ್ಪುಗಳನ್ನು ಭವ್ಯಾಗೆ ಹೇಳುತ್ತಿದ್ದಾರೆ. ಭವ್ಯಾ ಮಾಡಿದ ತಪ್ಪುವೊಂದನ್ನು ಎತ್ತಿ ತೋರಿಸಿದ್ದಾರೆ.

    ನಿನ್ನೆಯ ಸಂಚಿಕೆಯಲ್ಲಿ ಟಾಸ್ಕ್ ಆಡುವಾಗ ಭವ್ಯಾ ಮೇಲೆ ಅಟ್ಯಾಕ್ ಮಾಡಲು ಸಹಸ್ಪರ್ಧಿಗಳು ಬಂದರು. ಆಗ ಅವರು ಹೊಟ್ಟೆ ನೋವಿದೆ ಎಂದು ರಾಗ ತೆಗೆದರು. ಇದಾದ ಮರುಕ್ಷಣವೇ ಗೌತಮಿ ಮೇಲೆ ಭವ್ಯಾ ಅಟ್ಯಾಕ್ ಮಾಡಲು ಮುಂದಾದರು. ಈಗ ಹೊಟ್ಟೆ ನೋವು ಎಲ್ಲೋಯ್ತು ಎಂದು ಗೌತಮಿ ಗುಡುಗಿದರು. ಆಗ ಭವ್ಯಾ ಅವರು ನಾಟಕ ಮಾಡುತ್ತಿದ್ದಾರೆ ಎಂದು ಮನೆ ಮಂದಿಗೆ ಅನಿಸಿದೆ. ಈ ವಿಚಾರವಾಗಿ ತ್ರಿವಿಕ್ರಮ್ ಹಾಗೂ ಭವ್ಯಾ ನಡುವೆ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ:ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ – ಡಿವೋರ್ಸ್‌ ವದಂತಿ ಬೆನ್ನಲ್ಲೇ ಮೌನ ಮುರಿದ ಧನಶ್ರೀ

    ನನಗೆ ಆಟದಿಂದಾಗಿ ಫ್ರಸ್ಟ್ರೇಷನ್ ಆಯಿತು. ನಾನು ಏನು ಮಾಡುತ್ತಿದ್ದೇನೆ ಎಂಬುದು ನನ್ನ ಅರಿವಿಗೆ ಬರಲಿಲ್ಲ. ಡಾಕ್ಟರ್ ಬಳಿ ಹೋದಾಗ ಅವರು ಎಲ್ಲವೂ ಚೆನ್ನಾಗಿಯೇ ಇದೆ ಎಂದರು. ನನಗೇನು ಆಗಿಲ್ಲ ಎಂದು ಹೇಳಿ ನಾನು ಬಂದೆ ಎಂದು ಭವ್ಯಾ ಹೇಳಿಕೊಂಡರು. ನೀನು ಮಾಡಿದ್ದು ನಾಟಕ ಎಂದು ಎಲ್ಲರಿಗೂ ಅನಿಸಿತು ಎಂದು ತಪ್ಪನ್ನು ತಿದ್ದುವ ಕೆಲಸ ಮಾಡಿದರು ತ್ರಿವಿಕ್ರಮ್. ಹತಾಶೆಯಿಂದ ಈ ರೀತಿ ಆಯಿತು ಎಂದು ಭವ್ಯಾ ಮತ್ತೆ ತ್ರಿವಿಕ್ರಮ್‌ಗೆ ಸ್ಪಷ್ಟನೆ ಕೊಡುವ ಕೆಲಸ ಮಾಡಿದರು.

    ಭವ್ಯಾ, ತ್ರಿವಿಕ್ರಮ್, ಚೈತ್ರಾ, ಮೋಕ್ಷಿತಾ, ಧನರಾಜ್ ಕೂಡ ನಾಮಿನೇಷನ್ ಲಿಸ್ಟ್‌ನಲ್ಲಿದ್ದಾರೆ. ವೀಕೆಂಡ್‌ನಲ್ಲಿ ಒಬ್ಬರು ದೊಡ್ಮನೆಯಿಂದ ಹೊರಹೋಗುವುದು ಖಚಿತ. ಎಲ್ಲದಕ್ಕೂ ವಾರಾಂತ್ಯದಲ್ಲಿ ಉತ್ತರ ಸಿಗಲಿದೆ.

  • BBK 11: ಭವ್ಯಾ ಇಲ್ಲಿಯವರೆಗೆ ಬರಲು ನಾನೇ ಕಾರಣ- ವರಸೆ ಬದಲಿಸಿದ ತ್ರಿವಿಕ್ರಮ್

    BBK 11: ಭವ್ಯಾ ಇಲ್ಲಿಯವರೆಗೆ ಬರಲು ನಾನೇ ಕಾರಣ- ವರಸೆ ಬದಲಿಸಿದ ತ್ರಿವಿಕ್ರಮ್

    ಬಿಗ್‌ ಬಾಸ್‌ ಮನೆಯಲ್ಲಿ (BBK 11) ಪ್ರೇಮ ಪಕ್ಷಿಗಳಾಗಿದ್ದ ಭವ್ಯಾ (Bhavya Gowda) ಮತ್ತು ತ್ರಿವಿಕ್ರಮ್‌ (Trivikram) ದೂರ ದೂರ ಆಗಿದ್ದಾರೆ. ಇದಕ್ಕೆಲ್ಲ ಕಾರಣ ಆಗಿದ್ದು ಸ್ಪರ್ಧಿಗಳ ಫ್ಯಾಮಿಲಿ ಎಂಟ್ರಿ. ತ್ರಿವಿಕ್ರಮ್ ತಾಯಿ ಆಗಮಿಸಿ ಭವ್ಯಾನಿಂದ ದೂರ ಇರುವಂತೆ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಎಚ್ಚೆತ್ತುಕೊಂಡಿರುವ ತ್ರಿವಿಕ್ರಮ್ ಅವರು ಭವ್ಯಾರಿಂದ ದೂರ ಆಗುವ ಪ್ರಯತ್ನದಲ್ಲಿದ್ದಾರೆ. ಈ ಮಧ್ಯೆ ಅವರು ಆಡಿದ ಮಾತೊಂದು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಇದನ್ನೂ ಓದಿ:ಮದುವೆ ಯಾವಾಗ? ಎಂದಿದ್ದಕ್ಕೆ ನಾಚಿ ನೀರಾದ ರಮ್ಯಾ

    ಭವ್ಯಾ ಹಾಗೂ ತ್ರಿವಿಕ್ರಮ್ ಮಧ್ಯೆ ಉತ್ತಮ ಒಡನಾಟ ಇತ್ತು. ಇಬ್ಬರೂ ಒಟ್ಟಾಗಿ ಸಮಯ ಕಳೆಯುತ್ತಿದ್ದರು. ಒಬ್ಬರ ನೆರಳು ಒಬ್ಬರ ಮೇಲೆ ಇತ್ತು. ಇತ್ತೀಚೆಗೆ ಕುಟುಂಬದವರು ಬಂದಾಗ ತ್ರಿವಿಕ್ರಮ್‌ಗೆ ಅವರ ತಾಯಿ ಬುದ್ಧಿ ಮಾತು ಹೇಳಿ ಹೋಗಿದ್ದರು. ಅಲ್ಲದೆ, ಸುದೀಪ್ ಕಡೆಯಿಂದಲೂ ಈ ವಿಚಾರವಾಗಿ ಸಾಕಷ್ಟು ಸಲಹೆ ನೀಡಿದ್ದರು. ಈಗ ತ್ರಿವಿಕ್ರಮ್ ಅವರು ಅದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

    ಭವ್ಯಾಗೆ ಏನೇ ವಿಚಾರ ಇದ್ದರೂ ನೇರವಾಗಿ ಹೇಳುವ ಕೆಲಸವನ್ನೂ ಮಾಡಿದ್ದಾರೆ. ಇದು ಭವ್ಯಾಗೆ ಬೇಸರ ಮೂಡಿಸಿದೆ.  ಹಾಗಾದರೆ ಭವ್ಯಾ ಇಲ್ಲಿಯವರೆಗೆ ಬರೋಕೆ ತ್ರಿವಿಕ್ರಮ್ ಅವರು ಕಾರಣವಾ? ಹೀಗೊಂದು ಪ್ರಶ್ನೆ ಹುಟ್ಟುಹಾಕುವಂಥ ಮಾತು ಅವರ ಕಡೆಯಿಂದ ಬಂದಿದೆ. ನಿನ್ನೆಯ (ಜ.6) ಸಂಚಿಕೆಯಲ್ಲಿ ತ್ರಿವಿಕ್ರಮ್ ಹಾಗೂ ರಜತ್ ಅವರು ಕುಳಿತು ಮಾತನಾಡುತ್ತಿದ್ದರು. ಮನೆಗೆ ಬಂದು ಕಾಂಪಿಟೇಟರ್‌ನ ರೆಡಿ ಮಾಡಿ ನನಗೆ ಎದುರಾಳಿಯಾಗಿ ಬಿಟ್ಟುಕೊಂಡಂತೆ ಆಯಿತು ಎಂದರು ತ್ರಿವಿಕ್ರಮ್. ಅಂದರೆ, ಭವ್ಯಾನ ಒಳ್ಳೆಯ ಎದುರಾಳಿಯನ್ನಾಗಿ ಮಾಡಿ ಈಗ ಅವರ ಎದುರೇ ನಿಲ್ಲುವಂತೆ ಮಾಡಿಕೊಂಡಿದ್ದಾರೆ ಎಂಬರ್ಥದಲ್ಲಿ ತ್ರಿವಿಕ್ರಮ್‌ ಮಾತನಾಡಿದ್ದಾರೆ ಎಂದು ಫ್ಯಾನ್ಸ್‌ ಊಹಿಸಿದ್ದಾರೆ. ಒಟ್ನಲ್ಲಿ ಚೆನ್ನಾಗಿದ್ದ ಜೋಡಿಗಳ ನಡುವೆ ಬಿರುಕು ಮೂಡಿದೆ.

  • BBK 11: ಟಾಸ್ಕ್‌ನಲ್ಲಿ ರೊಚ್ಚಿಗೆದ್ದ ಸ್ಪರ್ಧಿ- ಹನುಮಂತನ ಬೆನ್ನಿಗೆ ಬಾರಿಸಿದ ಭವ್ಯಾ

    BBK 11: ಟಾಸ್ಕ್‌ನಲ್ಲಿ ರೊಚ್ಚಿಗೆದ್ದ ಸ್ಪರ್ಧಿ- ಹನುಮಂತನ ಬೆನ್ನಿಗೆ ಬಾರಿಸಿದ ಭವ್ಯಾ

    ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ಆಟ ಇದೀಗ 100ನೇ ದಿನಕ್ಕೆ ಕಾಲಿಟ್ಟಿದೆ. ಫಿನಾಲೆಗೆ ಟಿಕೆಟ್ ಬಾಚಿಕೊಳ್ಳಲು 9 ಸ್ಪರ್ಧಿಗಳ ನಡುವೆ ಬಿಗ್ ಫೈಟ್ ನಡೆಯುತ್ತಿದೆ. ಇದೀಗ ಬಾಲ್ ಟಾಸ್ಕ್‌ನಲ್ಲಿ ಭವ್ಯಾ (Bhavya Gowda) ರೊಚ್ಚಿಗೆದ್ದಿದ್ದಾರೆ. ಆಟ ಆಡುವ ಭರದಲ್ಲಿ ಹನುಮಂತನ (Hanumantha) ಬೆನ್ನಿಗೆ ಭವ್ಯಾ ಬಾರಿಸಿದ್ದಾರೆ. ಇದು ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ.

    ಸಾಕಷ್ಟು ಚೆಂಡುಗಳನ್ನು ಸಂಗ್ರಹಿಸಿದ್ದ ಅವರು ಒಂದಷ್ಟು ತಂತ್ರಗಳನ್ನು ಬಳಸಲು ಪ್ರಯತ್ನಿಸಿದರು. ಬಟ್ಟೆಯಿಂದ ಬಾಸ್ಕೆಟ್ ಮುಚ್ಚಿಕೊಳ್ಳುವಂತಿಲ್ಲ ಎಂದು ಕ್ಯಾಪ್ಟನ್ ರಜತ್ ಹೇಳಿದರು. ಹಾಗಾಗಿ ಚೆಂಡುಗಳನ್ನು ಕಾಪಾಡಿಕೊಳ್ಳುವುದು ಇನ್ನಷ್ಟು ಕಷ್ಟ ಆಯಿತು. ಆ ಸಂದರ್ಭವನ್ನು ಬಳಸಿಕೊಂಡು ಹನುಮಂತ ಟಾಸ್ಕ್ ವೇಳೆ, ಭವ್ಯಾ ಸಂಗ್ರಹಿಸಿದ್ದ ಬಾಲ್ ಕಸಿಯಲು ಬಂದಿದ್ದಾರೆ. ಇದರಿಂದ ಹನುಮಂತ ಹಾಗೂ ಭವ್ಯಾ ಅವರ ಮಧ್ಯೆ ನಡೆದ ಗಲಾಟೆ ಕೈ, ಕೈ ಮಿಲಾಯಿಸೋ ಹಂತಕ್ಕೆ ತಲುಪಿದೆ.

    ಚೈತ್ರಾ, ಗೌತಮಿ, ಭವ್ಯಾ, ಧನರಾಜ್, ಹನುಮಂತ ಅವರಲ್ಲಿ ಬಾಲ್‌ಗಳನ್ನು ಬುಟ್ಟಿಗೆ ಹಾಕುವ ಹೋರಾಟ ನಡೆದಿದೆ. ಇದರಲ್ಲಿ ಪ್ರತಿಯೊಬ್ಬರು ಎದುರಾಳಿಯ ಬುಟ್ಟಿಯಲ್ಲಿದ್ದ ಬಾಲ್‌ಗಳನ್ನ ಕಿತ್ತುಕೊಳ್ಳಲು ಮುಂದಾಗುತ್ತಾರೆ. ಇದೇ ವೇಳೆ, ಹನುಮಂತ ಅವರು ಭವ್ಯಾ ಅವರ ಬುಟ್ಟಿಯಲ್ಲಿದ್ದ ಬಾಲ್‌ಗಳನ್ನ ಹಿಡಿದು ಎಳೆಯುತ್ತಾರೆ. ಹನುಮಂತ ತನ್ನ ಬುಟ್ಟಿಗೆ ಕೈ ಹಾಕಿದ್ದಕ್ಕೆ ಸಿಟ್ಟಿಗೆದ್ದ ಸ್ಪರ್ಧಿ ಭವ್ಯಾ ಅವರ ಟಾಸ್ಕ್ನಲ್ಲಿ ಹನುಮಂತು ಅವರ ಬೆನ್ನಿನ ಮೇಲೆ ಬಾರಿಸಿದ್ದಾರೆ. ಇದನ್ನೂ ಓದಿ:‘ಪುಷ್ಪ 2’ ಕಾಲ್ತುಳಿತ ಪ್ರಕರಣ: ಮೃತ ರೇವತಿ ಪುತ್ರನನ್ನು ಭೇಟಿಯಾದ ಅಲ್ಲು ಅರ್ಜುನ್

    ಭವ್ಯಾ ಅವರು ಹೊಡೆದಿದ್ದಕ್ಕೆ ಖಂಡಿಸಿದ ಹನುಮಂತ ಅದನ್ನ ಕ್ಯಾಪ್ಟನ್ ರಜತ್ ಅವರ ಗಮನಕ್ಕೆ ತರುತ್ತಾರೆ. ರಜತ್ ಅವರು ಭವ್ಯಾ ನೀವು ಮಾಡಿದ್ದು ಸರಿಯಲ್ಲ ಎಂದು ಹೇಳಿದ್ದು, ಆಟದಲ್ಲಿ ಪಾಜ್ ಕೊಡುತ್ತಾರೆ. ಇಷ್ಟಾದರೂ ಭವ್ಯಾ ಅವರು ಹನುಮಂತು ಮೇಲೆ ಕೈ ಮಾಡಿದ್ದು, ಪ್ರೇಕ್ಷಕರ ಕೋಪಕ್ಕೆ ಕಾರಣವಾಗಿದೆ.

    ಇನ್ನೂ ಟಾಸ್ಕ್ ಮುಗಿದ ಬಳಿಕ ಭವ್ಯಾ ಹನುಮಂತನ ಬಳಿ ಹೋಗಿ ಕಾಲಿಗೆ ನಮಿಸುತ್ತಾರೆ. ತಪ್ಪಾಯ್ತು ಕ್ಷಮಿಸಿ ಬೇಕಂತ ಮಾಡಿದ್ದಲ್ಲ ಎಂದು ಹನುಮಂತನ ಬಳಿ ಭವ್ಯಾ ಕ್ಷಮೆಯಾಚಿಸಿದ್ದಾರೆ. ಈ ಕುರಿತು ವೀಕೆಂಡ್ ಪಂಚಾಯಿತಿಯಲ್ಲಿ ಸುದೀಪ್ ನಡೆಯೇನು? ಎಂದು ಕಾಯಬೇಕಿದೆ.

  • BBK 11: ತ್ರಿವಿಕ್ರಮ್‌ ಡೇಂಜರ್‌ ಎಂದ ಭವ್ಯಾ ಗೌಡ

    BBK 11: ತ್ರಿವಿಕ್ರಮ್‌ ಡೇಂಜರ್‌ ಎಂದ ಭವ್ಯಾ ಗೌಡ

    ಬಿಗ್ ಬಾಸ್ ಮನೆಯ (Bigg Boss Kannada 11) ಆಟ ಇನ್ನೇನು ಕೆಲವೇ ದಿನಗಳಲ್ಲಿ ಅಂತ್ಯವಾಗಲಿದೆ. ಈ ವಾರ ಫ್ಯಾಮಿಲಿ ರೌಂಡ್‌ನಿಂದ ಜಾಲಿ ಮೂಡ್‌ನಲ್ಲಿದ್ದ ಸ್ಪರ್ಧಿಗಳಿಗೆ ಸುದೀಪ್ ಶಾಕ್ ಕೊಟ್ಟಿದ್ದಾರೆ. ಎಂದಿನಂತೆ ಭಾನುವಾರದ ಎಪಿಸೋಡ್‌ನಲ್ಲಿ ಸುದೀಪ್ ಈ ವಾರವು ಸ್ಪರ್ಧಿಗಳಿಗೆ ಚಟುವಟಿಕೆ ಒಂದನ್ನು ಕೊಟ್ಟಿದ್ದಾರೆ. ಅದುವೆ ಈ ಬಿಗ್ ಬಾಸ್ ಮನೆಯಲ್ಲಿ ಯಾರು ಡೇಂಜರ್, ಯಾರು ಜೋಕರ್? ಎಂದು ಮನೆ ಮಂದಿಗೆ ಕಿಚ್ಚ ಕೇಳಿದ್ದಾರೆ. ಈ ವೇಳೆ, ಕಿಚ್ಚನ  ಮುಂದೆ ತ್ರಿವಿಕ್ರಮ್‌ (Trivikram) ಡೇಂಜರ್‌ ಎಂದು ಹೇಳಿದ್ದಾರೆ.

    ಹೌದು, ಈ ಜರ್ನಿಯಲ್ಲಿ ನೀವು ಯಾರು ಅಂತ ಇನ್ನೊಬ್ಬರಿಗೆ ಗೊತ್ತಾಗುತ್ತೆ ಎಂದು ಹೇಳಿದ್ದಾರೆ. ಒಂದು ಬೋರ್ಡ್ ಮೇಲೆ ಸ್ಪರ್ಧಿಗಳು ಈ ಮನೆಯಲ್ಲಿ ಯಾರು ಡೇಂಜರ್? ಯಾರು ಜೋಕರ್? ಹಾಗೂ ಯಾರು ಕಾಂಪಿಟೆಟರ್? ಅಂತ ಬರೆಯಲಾಗಿದೆ. ಅದರಂತೆ ಈ ಮನೆಯಲ್ಲಿರೋ ಸ್ಪರ್ಧಿಗಳಿಗೆ ಏನೇನೂ ಹೋಗುತ್ತೆ ಅಂತ ಬಾಣದ ಮೂಲಕ ಚುಚ್ಚಬೇಕು. ಅದರಂತೆ ಭವ್ಯಾ ಗೌಡ ಅವರು ‘ಡೇಂಜರ್’ ಜಾಗಕ್ಕೆ ತ್ರಿವಿಕ್ರಮ್ ಫೋಟೋವನ್ನು ಅಂಟಿಸಿದ್ದಾರೆ. ತ್ರಿವಿಕ್ರಮ್‌ ಡೇಂಜರ್‌ ಎಂದು ಭವ್ಯಾ ಹೇಳಿದ್ದಾರೆ.

    ಉಳಿದಂತೆ ರಜತ್ ಹಾಗೂ ಹನುಮಂತ ಚೈತ್ರಾಗೆ ಜೋಕರ್ ಪಟ್ಟ ಕೊಟ್ಟಿದ್ದಾರೆ. ಚೈತ್ರಕ್ಕಾಗೆ ನಾನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ ಅಂತ ಹನುಮಂತ ಹೇಳಿದ್ದಾರೆ. ಬಳಿಕ ಮಾತಾಡಿ ರಜತ್ ಅವರು ಚೈತ್ರಾ ಅವರು ಬಂದು 14 ವಾರ ಆಗಿದೆ. ಇಲ್ಲಿತನಕ ಅವರು ಇಷ್ಟು ಸಂಪಾದನೆ ಮಾಡಿದ್ದಾರೆ ಎಂದು ಈ ಚಟುವಟಿಕೆಯಿಂದ ತಿಳಿಯುತ್ತಿದೆ. ಹೀಗಾಗಿ ಅವರನ್ನು ಜೋಕರ್ ತರ ನೋಡುತ್ತಿದ್ದೇನೆ ಅಂತ ಹೇಳಿದ್ದಾರೆ.

    ರಜತ್ ಮಾತಿಗೆ ಕೂಡಲೇ ಮಾತಾಡಿದ ಚೈತ್ರಾ ಕುಂದಪುರ, ಅದೇ ಜೋಕರ್ ಆಸ್ಕರ್ ಗೆದ್ದಿದ್ದನ್ನು ನಾನು ಕೇಳಿದ್ದೀನಿ, ಹೀಗಾಗಿ ಇವರುಗಳ ಅಭಿಪ್ರಾಯ ನನಗೆ ದೊಡ್ಡದು ಅಂತ ಅನಿಸುವುದೇ ಇಲ್ಲ ಅಂತ ಹೇಳಿದ್ದಾರೆ. ಬೇಕಾದ್ರೇ ಚೈತ್ರಾ ಆಸ್ಕರ್ ಗೆದ್ದುಕೊಳ್ಳಲಿ, ನಾನು ಬಿಗ್ ಬಾಸ್ ಕಪ್ ಗೆದ್ದುಕೊಂಡು ಮನೆಗೆ ಹೋಗುತ್ತೇನೆ ಅಂತ ರಜತ್ ಠಕ್ಕರ್ ಕೊಟ್ಟಿದ್ದಾರೆ.

  • ನಿಮಗೆ ಕಪ್‌ ಗೆಲ್ಲಲು ಸಾಮರ್ಥ್ಯ ಇಲ್ವಾ?: ಭವ್ಯಾಗೆ ಸುದೀಪ್ ಕ್ಲಾಸ್

    ನಿಮಗೆ ಕಪ್‌ ಗೆಲ್ಲಲು ಸಾಮರ್ಥ್ಯ ಇಲ್ವಾ?: ಭವ್ಯಾಗೆ ಸುದೀಪ್ ಕ್ಲಾಸ್

    ನ್ನಡದ ‘ಬಿಗ್ ಬಾಸ್’ (Bigg Boss Kannada 11) ಆಟ ಇನ್ನು 3 ವಾರಗಳು ನಡೆಯಲಿದೆ. 9 ಸ್ಪರ್ಧಿಗಳು ರೇಸ್‌ನಲ್ಲಿದ್ದಾರೆ. ಯಾರಿಗೆ ಗೆಲುವಿನ ಪಟ್ಟ ಸಿಗಲಿದೆ ಎಂದು ಫ್ಯಾನ್ಸ್ ಕಾತರದಿಂದ ಎದುರು ನೋಡುತ್ತಿದ್ದಾರೆ. ಹೀಗಿರುವಾಗ ಟಾಸ್ಕ್‌ವೊಂದರಲ್ಲಿ ತಮ್ಮ ಬದಲು ಹನುಮಂತ ಆಟ ಆಡಲು ಭವ್ಯಾ ನೀಡಿರುವ ಕಾರಣಕ್ಕೆ ಸುದೀಪ್ ಸಿಟ್ಟಾಗಿದ್ದಾರೆ. ನಿಮಗೆ ಕಪ್ ಗೆಲ್ಲಲು ಸಾಮರ್ಥ್ಯ ಇಲ್ವಾ? ಅಂತ ಸುದೀಪ್ ಭವ್ಯಾಗೆ (Bhavya Gowda) ಪ್ರಶ್ನೆ ಮಾಡಿದ್ದಾರೆ.

    ಗ್ರಾಸರಿ ಟಾಸ್ಕ್‌ಗೆ ಬರೋಣ. ಭವ್ಯಾ ಅವರೊಂದು ಕಾರಣ ಕೊಡ್ತಾರೆ. ಹಾಡು, ಮನರಂಜನೆ ವಿಚಾರದಲ್ಲಿ ಹನುಮಂತ ಮುಂದೆ ಇದ್ದಾರೆ. ಈ ಟಾಸ್ಕ್ ಅವರು ಆಡಿದ್ರೆ ಬೆಟರ್ ಅನಿಸುತ್ತದೆ ಎಂದು ಭವ್ಯಾ ಕಾರಣ ನೀಡಿದ್ರು. ಇದು ಸಿಲ್ಲಿಯಾಗಿತ್ತು ಎಂದು ಸುದೀಪ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಈ ಕುರಿತು ಶನಿವಾರದ ಕಿಚ್ಚನ ಪಂಚಾಯಿತಿಯಲ್ಲಿ ಚರ್ಚೆ ನಡೆದಿದೆ. ಇದನ್ನೂ ಓದಿ:ಮಾವನಿಂದ ಸೊಸೆಗೆ ತೊಟ್ಟಿಲು ಗಿಫ್ಟ್‌ – ಧನರಾಜ್‌ಗೆ ಕೊಟ್ಟ ಮಾತನ್ನು ಉಳಿಸಿದ ಗೋಲ್ಡ್‌

    ಭವ್ಯಾ ಕೊಟ್ಟಿರುವ ಕಾರಣದ ಬಗ್ಗೆ ಸುದೀಪ್ ಪ್ರಶ್ನೆ ಮಾಡಿದ್ದಾರೆ. ಭವ್ಯಾ ನೀವು ಕೊಟ್ಟಿದ್ದ ಕಾರಣ ಸೂಟ್ ಆಗಲಿಲ್ಲ. ಕಾರಣ ಕೊಡೋದಕ್ಕೆ ನೀವು ಸಾವಿರ ಹೇಳಬಹುದಿತ್ತು. ಇಲ್ಲಾಂದ್ರೆ ಆಟ ಆಡೋಕೆ ನನಗೆ ಆಸಕ್ತಿ ಇಲ್ಲ ಅಂತ ಹೇಳಿದ್ರು ಮುಗಿದು ಹೋಗಿರೋದು. ಗ್ರಾಸರಿ ಟಾಸ್ಕ್‌ನಲ್ಲಿ ಎಂದೂ ಹಾಡು & ಡ್ಯಾನ್ಸ್‌ಗೆ ಸಂಬಂಧಪಟ್ಟ ಟಾಸ್ಕ್ ಬಂದೇ ಇಲ್ಲ ಅಂತ ಸುದೀಪ್ (Sudeep) ಸ್ಪಷ್ಟನೆ ನೀಡಿದರು. ಬ್ಯಾಲೆನ್ಸ್ ಅಂತ ಬಂದಾಗ ನನಗಿಂತ ಹನುಮಂತ (Hanumantha) ಬೆಸ್ಟ್ ಇದ್ದಾರೆ ಎಂದು ಹೇಳಿದ ಭವ್ಯಾಗೆ, ಹನುಮಂತನೇ ಕಪ್ ಗೆಲ್ಲಲಿ ಇದನ್ನು ನೀವು ಒಪ್ಪುತ್ತೀರಾ ಎಂದು ಸುದೀಪ್ ಖಡಕ್ ಆಗಿ ಕೇಳಿದ್ದಾರೆ. ಆಟ ಬಿಟ್ಟು ಕೊಡುವ ಸಲುವಾಗಿ ಕೊಟ್ಟಿರುವ ಸಿಲ್ಲಿ ಕಾರಣಕ್ಕೆ ಸುದೀಪ್‌ ಭವ್ಯಾಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ.

    ಎಲ್ಲಾ ವಿಷಯದಲ್ಲೂ ಸಾಮರ್ಥ್ಯ ಇರೋರು ಈ ಕಪ್ ಗೆಲ್ಲಬೇಕು ಭವ್ಯಾ. ಹಾಗಾಗಿ, ಬಿಗ್‌ ಬಾಸ್‌ಗೆ ನೀವು ಫಿಟ್ ಇಲ್ಲ ಎಂಬುದನ್ನು ನೀವೇ ಡಿಕ್ಲೇರ್ ಮಾಡಿದ್ರಿ ಎಂದು ಭವ್ಯಾಗೆ ಸುದೀಪ್ ಬೆಂಡೆತ್ತಿದ್ದಾರೆ. ಇದೇ ಮಾತನ್ನು ಕೇಳಿಸಿಕೊಂಡ ಭವ್ಯಾ ಗೌಡ (Bhavya Gowda) ಜೊತೆಗೆ ಮನೆ ಮಂದಿ ಫುಲ್ ಶಾಕ್ ಆಗಿದ್ದಾರೆ.

  • BBK 11: ತ್ರಿವಿಕ್ರಮ್‌ನಿಂದ ದೂರವಿರಲು ಪರೋಕ್ಷವಾಗಿ ಭವ್ಯಾಗೆ ಅಕ್ಕ ಸಲಹೆ

    BBK 11: ತ್ರಿವಿಕ್ರಮ್‌ನಿಂದ ದೂರವಿರಲು ಪರೋಕ್ಷವಾಗಿ ಭವ್ಯಾಗೆ ಅಕ್ಕ ಸಲಹೆ

    ಬಿಗ್ ಬಾಸ್ ಮನೆಯ ಆಟ (Bigg Boss Kannada 11) 94 ದಿನಗಳು ಪೂರೈಸಿವೆ. ಇದೀಗ ಸ್ಪರ್ಧಿಗಳ ಕುಟುಂಬದವರು ಮನೆಗೆ ಬರುತ್ತಿದ್ದಾರೆ. ಹೀಗೆ ಬರುವ ಕುಟುಂಬದವರು ಸ್ಪರ್ಧಿಗಳಿಗೆ ಒಂದೊಂದು ಟಿಪ್ಸ್ ನೀಡುವ ಕೆಲಸ ಮಾಡುತ್ತಾ ಇದ್ದಾರೆ. ಯಾವ ರೀತಿಯಲ್ಲಿ ಆಡಬೇಕು ಎಂಬುದನ್ನು ಪರೋಕ್ಷವಾಗಿ ಹೇಳುತ್ತಿದ್ದಾರೆ. ಇದೀಗ ಭವ್ಯಾ (Bhavya Gowda) ಅವರ ಅಕ್ಕ ದಿವ್ಯಾ ಬಿಗ್‌ ಬಾಸ್‌ಗೆ ಬಂದಿದ್ದಾರೆ. ಅವರು ತ್ರಿವಿಕ್ರಮ್‌ನಿಂದ ದೂರ ಇರುವಂತೆ ಪರೋಕ್ಷವಾಗಿ ಸಲಹೆ ನೀಡಿದ್ದಾರೆ. ಇದನ್ನೂ ಓದಿ:ಇಲಿಯಾನಾ ಮತ್ತೆ ಪ್ರೆಗ್ನೆಂಟಾ?- ಹೊಸ ವರ್ಷದಂದು ಸುಳಿವು ಕೊಟ್ರಾ ನಟಿ?

    ಭವ್ಯಾಗೆ ಕನ್ಫೆಷನ್ ಕೊಠಡಿಗೆ ಬರುವಂತೆ ಬಿಗ್ ಬಾಸ್ ಹೇಳಿದ್ದಾರೆ. ದಿವ್ಯಾ (Divya Gowda) ಅವರು ಕನ್‌ಫೆಷನ್ ರೂಂನಲ್ಲೇ ಇದ್ದರು. ಅವರು ವೈದ್ಯರ ಡ್ರೆಸ್‌ನಲ್ಲಿ ಮುಖಕ್ಕೆ ಮಾಸ್ಕ್ ಹಾಕಿ ಕುಳಿತಿದ್ದರು. ಭವ್ಯಾ ಹೋಗಿ ಕುಳಿತ ಬಳಿಕ, ಹೇಗಿದ್ದೀರಿ ಎಂದು ಕೇಳಿದರು. ಭವ್ಯಾ ಒಮ್ಮೆ ಗೊಂದಲಕ್ಕೆ ಒಳಗಾದರು. ಆ ನಂತರ ಅಕ್ಕ ಬಂದಿರುವ ರಿಯಾಲಿಟಿ ಅರಿತುಕೊಂಡ ಅವರು ಖುಷಿಯಿಂದ ಕುಣಿದಾಡಿದರು. ಅಕ್ಕನನ್ನು ಅಪ್ಪಿಕೊಂಡು ಕಣ್ಣೀರಿಟ್ಟರು. ಇದನ್ನೂ ಓದಿ:BBK 11: ಅಕ್ಕನ ಮರೆತ ವಿಶೇಷ ಚೇತನ ಸಹೋದರ- ಮೋಕ್ಷಿತಾ ಕಣ್ಣೀರು

    ಬಳಿಕ ಭವ್ಯಾ ಅವರು ನಾನು ಏನು ಬದಲಾವಣೆ ಮಾಡಿಕೊಳ್ಳಬೇಕು ಎಂದು ಅಕ್ಕ ದಿವ್ಯಾಗೆ ಕೇಳಿದರು. ಇದಕ್ಕೆ ಉತ್ತರಿಸಿದ ದಿವ್ಯಾ, ಜನರು ಕಡಿಮೆ ಆಗುತ್ತಿದ್ದಾರೆ. ನೀನು ಎಲ್ಲರ ಜೊತೆಯೂ ಬೆರೆಯಬೇಕು. ಕಂಫರ್ಟ್ ಜೋನ್‌ನಲ್ಲಿ ಇದ್ದೀಯಾ, ತೊಂದರೆ ಇಲ್ಲ. ಎಲ್ಲದಕ್ಕೂ ಒಂದು ಬ್ಯಾರಿಕೇಡ್ ಇರಬೇಕು. ನೀನು ಇರೋದು ತಪ್ಪು ಎನ್ನುತ್ತಿಲ್ಲ. ವೈಯಕ್ತಿಕವಾಗಿ ಹೇಗೆ ಆಟ ಆಡಬೇಕು ಎಂಬುದನ್ನು ಯೋಚನೆ ಮಾಡು. ಗೇಮ್ ಕಡೆ ಫೋಕಸ್ ಮಾಡು. ಬೇರೆ ಅವರಿಗೆ ಸಲಹೆ ಕೇಳಬಾರದು. ನೀನೇ ನಿರ್ಧಾರ ತೆಗೆದುಕೊಳ್ಳಬೇಕು. ನೀನು ನಿರ್ಧಾರ ತೆಗೆದುಕೊಳ್ಳಲು ಅಪ್ರಬುದ್ಧ ಎಂದು ಕಾಣಿಸಬಾರದು ಎಂದರು.

    ಭವ್ಯಾಗೆ ಅಕ್ಕ ದಿವ್ಯಾ ಕೊಟ್ಟಿರುವ ಟಿಪ್ಟ್‌ ನೋಡಿ ಪ್ರೇಕ್ಷಕರು, ತ್ರಿವಿಕ್ರಮ್‌ನಿಂದ ದೂರ ಇರು ಎಂದು ಪರೋಕ್ಷವಾಗಿ ಸೂಚನೆ ಕೊಟ್ಟಿದ್ದಾರೆ ಎಂದು  ಅಭಿಪ್ರಾಯಪಟ್ಟಿದ್ದಾರೆ.

  • ಕ್ಯಾಪ್ಟೆನ್ಸಿಗಾಗಿ ಮೋಸದಾಟ ಆಡಿದ ಭವ್ಯಾಗೆ ಸುದೀಪ್‌ ವಾರ್ನಿಂಗ್‌

    ಕ್ಯಾಪ್ಟೆನ್ಸಿಗಾಗಿ ಮೋಸದಾಟ ಆಡಿದ ಭವ್ಯಾಗೆ ಸುದೀಪ್‌ ವಾರ್ನಿಂಗ್‌

    ಬಿಗ್‌ ಬಾಸ್‌ ಮನೆಯ ಆಟ (Bigg Boss Kannada 11) ಇನ್ನೇನು ಕೆಲವೇ ದಿನಗಳಲ್ಲಿ ಅಂತ್ಯವಾಗಲಿದೆ. 90 ದಿನಗಳನ್ನು ಪೂರೈಸಿ ಮುನ್ನಗ್ಗುತ್ತಿರುವ ಆಟ ಮತ್ತಷ್ಟು ರೋಚಕವಾಗಿದೆ. 3ನೇ ಬಾರಿ ಭವ್ಯಾ (Bhavya Gowda) ಕ್ಯಾಪ್ಟನ್ ಆಗಿದ್ದಾರೆ. ಆದರೆ ಈ ಬಾರಿ ಅವರು ಮೋಸದಿಂದ ಕ್ಯಾಪ್ಟನ್ ಆಗಿದ್ದಾರೆ.ಈ ಮೋಸದಾಟವನ್ನು ಸುದೀಪ್ ಹೊರಗೆಳೆದರು. ಆದರೆ ಭವ್ಯಾ ಸಿಕ್ಕಿಬಿದ್ದರೂ ಸುಳ್ಳು ಹೇಳುವುದು ಬಿಟ್ಟಿರಲಿಲ್ಲ. ಆಗ ಸುದೀಪ್ ತಮ್ಮದೇ ಶೈಲಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

    ಟಾಸ್ಕ್‌ವೊಂದರಲ್ಲಿ 9ನೇ ಸಂಖ್ಯೆಯ ಬುಟ್ಟಿಯಲ್ಲಿರುವ ಚೆಂಡುಗಳನ್ನು ಬುಟ್ಟಿಗೆ ಹಾಕುವ ಟಾಸ್ಕ್ ಅನ್ನು ಕ್ಯಾಪ್ಟೆನ್ಸಿ ಟಾಸ್ಕ್ ಆಗಿ ನೀಡಲಾಗಿತ್ತು. ರಜತ್, ಮೋಕ್ಷಿತಾ, ಭವ್ಯಾ, ತ್ರಿವಿಕ್ರಮ್, ಧನರಾಜ್ ಅವರುಗಳು ಆಟದ ರೇಸ್‌ನಲ್ಲಿದ್ದರು. ಉಗ್ರಂ ಮಂಜು, ಚೈತ್ರಾ ಅವರುಗಳು ಉಸ್ತುವಾರಿ ಆಗಿದ್ದರು. ಈ ವೇಳೆ ಭವ್ಯಾ, ಬೇರೆ ಸಂಖ್ಯೆಯ ಡಬ್ಬಿಯಿಂದ ಬಿದ್ದ ಚೆಂಡನ್ನು ಎತ್ತಿಕೊಂಡು ಬುಟ್ಟಿಗೆ ಹಾಕಿ ಟಾಸ್ಕ್ ಗೆದ್ದರು ಮಾತ್ರವಲ್ಲದೆ ಮನೆಯ ಕ್ಯಾಪ್ಟನ್ ಸಹ ಆದರು. ಭವ್ಯಾ ರೂಲ್ಸ್‌ ಬ್ರೇಕ್‌ ಮಾಡಿದನ್ನು ರಜತ್ ನೋಡಿದರೂ ಸಹ ಹೇಳಿರಲಿಲ್ಲ. ಈಗ ಎಲ್ಲರೆದುರು ಸುದೀಪ್ (Sudeep) ವಿಡಿಯೋ ತೋರಿಸಿ ಕ್ಲಾಸ್‌ ತೆಗೆದುಕೊಂಡಿದ್ದಾರೆ.

    ಸಾಕ್ಷಿ ಸಮೇತ ತೋರಿಸಿದರೂ ಸಹ ಸುದೀಪ್‌ ಮುಂದೆ ಭವ್ಯಾ ಅದೇ ಸುಳ್ಳುಗಳನ್ನು ಮುಂದುವರೆಸಿದರು. ಆ ಚೆಂಡು ಎಲ್ಲಿಂದ ಬಿದ್ದಿದ್ದು ಎಂಬುದನ್ನು ನಾನು ನೋಡಿರಲಿಲ್ಲ ಎಂದರು. ಆ ನಂತರ ಇನ್ನೊಂದು ವಿಡಿಯೋ ಅನ್ನು ಸುದೀಪ್ ಹಾಕಿದರು. ಅದರಲ್ಲಿ ಸ್ಪಷ್ಟವಾಗಿ ಗೊತ್ತಾಗುತ್ತಿತ್ತು. ಉಸ್ತುವಾರಿಗಳಾದ ಚೈತ್ರಾ ಹಾಗೂ ಮಂಜು ಕೇಳಿದ ಪ್ರಶ್ನೆಗಳಿಗೆ ಭವ್ಯಾ ಬೇಕೆಂದೇ ಸುಳ್ಳು ಹೇಳಿದರು. ಮೋಸ ಮಾಡಿ ಕ್ಯಾಪ್ಟನ್ ಆಗಿದ್ದಲ್ಲದೆ, ಸುದೀಪ್ ಎದುರು ಆ ಸುಳ್ಳನ್ನೇ ಸತ್ಯ ಮಾಡುವ ಪ್ರಯತ್ನ ಮಾಡಿದರು.

    ಸುಮ್ಮನೆ ಇರು ಎಂದು ನೀವು ಹೇಳಿದ್ದು, ಬೇರೆ ಕಾರಣಕ್ಕೆ ಅಲ್ಲ ಬದಲಿಗೆ ನಾನು ಮೋಸ ಮಾಡುತ್ತಿದ್ದೀನಿ, ನೀನು ನೋಡಿದರೂ ನೋಡದಂತೆ ಇರು ಎಂದು ಸುಮ್ಮನೆ ಇರು, ಸುಮ್ಮನೆ ಇರು ಎಂದು ಮೆಲುದನಿಯಲ್ಲಿ ರಜತ್‌ಗೆ ಹೇಳಿದ್ದು ಎಂದು ಸ್ಪಷ್ಟವಾಗಿ ಸುದೀಪ್‌ ಹೇಳಿದರು. ಇಷ್ಟ ಆದರೂ ತಪ್ಪನ್ನು ಒಪ್ಪಿಕೊಳ್ಳದ ಭವ್ಯಾಗೆ ಸರಿಯಾಗಿ ಸುದೀಪ್‌ ಕ್ಲಾಸ್‌ ತೆಗೆದುಕೊಂಡರು. ಜೊತೆಗೆ ಭವ್ಯಾ ಪರ ನಿಂತಿದ್ದಕ್ಕೆ ರಜತ್‌ಗೂ ಸುದೀಪ್‌ ತರಾಟೆಗೆ ತೆಗೆದುಕೊಂಡರು.

  • ಉಗ್ರಂ ಮಂಜು ಅಬ್ಬರಕ್ಕೆ ಹಣ್ಣುಗಾಯಿ ನೀರುಗಾಯಿ ಮಾಡುವ ಶಪಥ ಮಾಡಿದ ರಜತ್

    ಉಗ್ರಂ ಮಂಜು ಅಬ್ಬರಕ್ಕೆ ಹಣ್ಣುಗಾಯಿ ನೀರುಗಾಯಿ ಮಾಡುವ ಶಪಥ ಮಾಡಿದ ರಜತ್

    ದೊಡ್ಮನೆಯ ಆಟ 90ನೇ ದಿನದತ್ತ ಮುನ್ನುಗ್ಗುತ್ತಿದೆ. ಪ್ರತಿವಾರ ವಿಭಿನ್ನ ಟಾಸ್ಕ್‌ಗಳನ್ನೇ ಕೊಡೋ ‌ʻಬಿಗ್‌ ಬಾಸ್’ (Bigg Boss Kannada 11) ಈ ಬಾರಿ ದೊಡ್ಮನೆಯನ್ನು ರೆಸಾರ್ಟ್ ಆಗಿ ಬದಲಿಸಿದ್ದಾರೆ. ಈ ರೆಸಾರ್ಟ್‌ನಲ್ಲಿ ಮೋಜು, ಮಸ್ತಿ ಮಾಡಲು ಭವ್ಯಾ ಗೌಡ (Bhavya Gowda) ಹಾಗೂ ಚೈತ್ರಾ ಕುಂದಾಪುರ (Chaithra Kundapura) ನೇತೃತ್ವದಲ್ಲಿ ಎರಡು ತಂಡಗಳಾಗಿ ವಿಂಗಡಿಸಲಾಗಿದೆ. ಇದನ್ನೂ ಓದಿ:ಸ್ಯಾಂಡಲ್‌ವುಡ್‌ನ ಶಿವಣ್ಣನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

    ಭವ್ಯಾ ಟೀಮ್‌, ರೆಸಾರ್ಟ್‌ನಲ್ಲಿ ಕೆಲಸ ಮಾಡುವ ಉದ್ಯೋಗಿಗಳಾಗಿದ್ದು, ಚೈತ್ರಾ ಟೀಮ್ ಗೆಸ್ಟ್‌ಗಳಾಗಿದ್ದಾರೆ. ಅತಿಥಿಗಳು ತಮಗೆ ಬೇಕಾದ ರೀತಿಯಲ್ಲಿ ಕೆಲಸಗಾರರನ್ನು ನಡೆಸಿಕೊಳ್ತಿದ್ದಾರೆ. ಚೈತ್ರಾ ತಂಡದಲ್ಲಿರುವ ಉಗ್ರಂ ಮಂಜು ಕೊಡ್ತಿರುವ ಕಾಟಕ್ಕೆ, ಟಾರ್ಚರ್‌ಗೆ ಸೇವೆ ಮಾಡುವ ಸಿಬ್ಬಂದಿ ಸುಸ್ತಾಗಿದ್ದಾರೆ. ಇವರ ಕಾಟ ತಾಳಲಾರದೇ ರಜತ್‌ ಅವರು ಎದುರಾಳಿಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುವ ಶಪಥ ಮಾಡಿದ್ದಾರೆ.

    ಇತ್ತ ಎದುರಾಳಿ ತಂಡದ ವಿಪರಿತ ಕಾಟ ತಾಳಲಾರದೇ ರೆಸಾರ್ಟ್ ಮ್ಯಾನೇಜರ್ ಭವ್ಯಾ ಕಣ್ಣೀರಿಟ್ಟಿದ್ದಾರೆ. ಮಧ್ಯರಾತ್ರಿ ಏನೇ ಕೇಳಿದ್ರೂ ಮಾಡಿಕೊಡಬೇಕು ಎದುರಾಳಿ ತಂಡ ಹೇಳಿದ್ದಕ್ಕೆ ಭವ್ಯಾ ಅತ್ತಿದ್ದಾರೆ. ಇತ್ತ ಚೈತ್ರಾ ತಮ್ಮ ದರ್ಬಾರ್ ನಡೆಸಿದ್ದಾರೆ. ರಾತ್ರಿ ಲೈಟ್ಸ್ ಆಫ್ ಆದರೂ ನೀವು ನಮ್ಮ ಸೇವೆ ಮಾಡಬೇಕು. ಇನ್ನೂ ಐಶ್ವರ್ಯಾ ನನ್ನ ತಲೆ ಒತ್ತಬೇಕು ಎಂದು ಪಟ್ಟು ಹಿಡಿದಿದ್ದಾರೆ.

    ಮಂಜು ನನಗೆ ಇವತ್ತು ಮ್ಯೂಜಿಕಲ್ ನೈಟ್ ಬೇಕು ಎಂದಿದ್ದಾರೆ. ಇತ್ತ ರೊಚ್ಚಿಗೆದ್ದಿರುವ ರಜತ್, ನಮಗೂ ಅವಕಾಶ ಸಿಗುತ್ತದೆ. ನಿಮ್ಮನ್ನು ಹಣ್ಣುಗಾಯಿ, ನೀರುಗಾಯಿ ಮಾಡಿಲ್ಲ ಅಂದ್ರೆ ನನ್ನ ಹೆಸರು ಬುಜ್ಜಿ ಅಲ್ಲ ನೋಡಿಕೋ ಎಂದು ಉಗ್ರಂ ಮಂಜುಗೆ ಖಡಕ್‌ ಆಗಿ ವಾರ್ನಿಂಗ್‌ ಕೊಟ್ಟಿದ್ದಾರೆ. ಒಟ್ನಲ್ಲಿ ಅಧಿಕಾರದ ದರ್ಪದಿಂದ ಮರೆಯುತ್ತಿರುವ ಚೈತ್ರಾ ಟೀಮ್ ಎದುರು ಭವ್ಯಾ ತಂಡ ಸೋತು ಸುಣ್ಣವಾಗಿರೋದಂತೂ ಗ್ಯಾರಂಟಿ.

  • BBK 11: ಕತ್ತಲೆ ಬೆಳಕಿನ ಆಟದಲ್ಲಿ ಗೆಲ್ಲೋದು ಯಾರು?- ಐಶ್ವರ್ಯಾ, ಭವ್ಯಾಗೆ ಬಿಗ್ ಟಾಸ್ಕ್

    BBK 11: ಕತ್ತಲೆ ಬೆಳಕಿನ ಆಟದಲ್ಲಿ ಗೆಲ್ಲೋದು ಯಾರು?- ಐಶ್ವರ್ಯಾ, ಭವ್ಯಾಗೆ ಬಿಗ್ ಟಾಸ್ಕ್

    ನ್ನಡದ ‘ಬಿಗ್ ಬಾಸ್ 11’ರ (Bigg Boss Kannada 11) ಆಟ ರೋಚಕವಾಗಿದೆ. ಕ್ಯಾಪ್ಟನ್ ಪಟ್ಟ ಏರಲು ಐಶ್ವರ್ಯಾ, ಭವ್ಯಾ (Bhavya Gowda) ನಡುವೆ ಪೈಪೋಟಿ ನಡೆದಿದೆ. ಬಿಗ್ ಬಾಸ್ ಕೊಟ್ಟ ಕತ್ತಲೆ ಬೆಳಕಿನ ಆಟದಲ್ಲಿ ಟ್ವಿಸ್ಟ್ ಕೊಡಲಾಗಿದೆ. ಸದ್ಯ ಕುತೂಹಲ ಮೂಡಿಸುವಂತಹ ಪ್ರೋಮೋವೊಂದನ್ನು ವಾಹಿನಿ ಹಂಚಿಕೊಂಡಿದೆ. ಇದನ್ನೂ ಓದಿ:ಸ್ಪೆಷಲ್ ಸಾಂಗ್‌ಗೆ ನೇಹಾ ಶೆಟ್ಟಿ ಗ್ರೀನ್ ಸಿಗ್ನಲ್

    ನಿನ್ನೆ ನಡೆದ ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಕಡೆಯದಾಗಿ ಸಹ ಸ್ಪರ್ಧಿಗಳನ್ನು ಸೋಲಿಸಿ ಐಶ್ವರ್ಯಾ ಮತ್ತು ಭವ್ಯಾ ಉಳಿದುಕೊಂಡಿದ್ದರು. ಇದೀಗ ಇವರಿಬ್ಬರ ನಡುವೆ ಕ್ಯಾಪ್ಟನ್ಸಿಗಾಗಿ ಟಫ್ ಫೈಟ್ ನಡೆದಿದೆ. ಆ್ಯಕ್ಟಿವಿಟಿ ರೂಮ್‌ನಲ್ಲಿ ಕಾಲ ಕಾಲಕ್ಕೆ ಲೈಟ್ ಆನ್ ಮತ್ತು ಆಫ್ ಆಗುತ್ತದೆ. ಆಗ ಒಂದೊಂದೇ ಬಣ್ಣಗಳನ್ನು ಆಯಾ ಬಣ್ಣವನ್ನು ಸೂಚಿಸುವ ಪೆಡಾಸ್ಟಲ್‌ಗಳ ಮೇಲೆ ಇಡಬೇಕು. ಈ ಕತ್ತಲೆ ಬೆಳಕಿನ ಆಟದಲ್ಲಿ ಭವ್ಯಾ, ಐಶ್ವರ್ಯಾ (Aishwarya) ಇವರಲ್ಲಿ ಯಾರು ಗೆಲ್ತಾರೆ ಎಂಬುದು ಕ್ಯೂರಿಯಸ್ ಆಗಿದೆ.

    ಗೆದ್ದವರು ಮನೆಯ ಕ್ಯಾಪ್ಟನ್ ಪಟ್ಟವನ್ನು ಅಲಂಕರಿಸಲಿದ್ದಾರೆ. ಇನ್ನೂ ಭವ್ಯಾ ಈಗಾಗಲೇ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಐಶ್ವರ್ಯಾ ಒಮ್ಮೆ ತ್ರಿವಿಕ್ರಮ್ ಜೊತೆ ಜೋಡಿ ಕ್ಯಾಪ್ಟನ್ ಆಗಿದ್ದರು. ಈ ಬಾರಿ ಸಿಂಗಲ್ ಕ್ಯಾಪ್ಟನ್ ಆಗಿ ದರ್ಬಾರ್ ಮಾಡಬೇಕು ಎಂಬುದು ಅಭಿಮಾನಿಗಳ ಆಶಯ. ಆದರೆ ಈ ಬಾರಿ ಭವ್ಯಾ ಕ್ಯಾಪ್ಟನ್ ಪಟ್ಟ ಏರಿದ್ದಾರೆ ಎಂಬುದು ಸದ್ಯ ಹರಿದಾಡುತ್ತಿರುವ ಸುದ್ದಿ. ಎಲ್ಲದ್ದಕ್ಕೂ ಇಂದಿನ ಸಂಚಿಕೆಯಲ್ಲಿ ಉತ್ತರ ಸಿಗಲಿದೆ.

  • BBK 11: ತ್ರಿವಿಕ್ರಮ್‌ ಮೇಲೆ ಡಿಪೆಂಡ್‌ ಆಗ್ತೀರಾ ಎಂದ ಮೋಕ್ಷಿತಾ ಮೇಲೆ ಭವ್ಯಾ ಕೆಂಡ

    BBK 11: ತ್ರಿವಿಕ್ರಮ್‌ ಮೇಲೆ ಡಿಪೆಂಡ್‌ ಆಗ್ತೀರಾ ಎಂದ ಮೋಕ್ಷಿತಾ ಮೇಲೆ ಭವ್ಯಾ ಕೆಂಡ

    ದೊಡ್ಮನೆಯ (Bigg Boss Kannada 11)  ಆಟ ದಿನದಿಂದ ದಿನಕ್ಕೆ ಸಾಕಷ್ಟು ತಿರುವುಗಳನ್ನು ಪಡೆದು ಮುನ್ನುಗ್ಗುತ್ತಿದೆ. ಮನೆಯ ಪಕ್ಷಪಾತಿ, ಅಶಕ್ತ ಎಂಬ ವಿಚಾರಕ್ಕೆ ಸ್ಪರ್ಧಿಗಳ ನಡುವೆ ಕಿತ್ತಾಟ ಶುರುವಾಗಿದೆ. ಈ ವೇಳೆ, ಉಗ್ರಂ ಮಂಜುಗೆ (Ugramm Manju) ರಜತ್ (Rajath) ಚೀಪ್ ಎಂದು ಕುಟುಕಿದ್ದಾರೆ. ಇತ್ತ ಮೋಕ್ಷಿತಾ (Mokshitha) ಕೂಡ ಭವ್ಯಾ ಮೇಲೆ ಎಗರಾಡಿದ್ದಾರೆ. ಇದನ್ನೂ ಓದಿ:ಸಿನಿಮಾ ಚಾನ್ಸ್‌ಗಾಗಿ ಸೆಕ್ಸ್ ಮಾಡಿದ್ದೀರಾ? ಎಂದವನಿಗೆ ಚೈತ್ರಾ ಆಚಾರ್ ತಿರುಗೇಟು

    ಸದ್ಯ ವಾಹಿನಿ ಹಂಚಿಕೊಂಡಿರುವ ಪ್ರೋಮೋದಲ್ಲಿ ನನ್ನಿಂದಲೇ ಈ ಟಾಸ್ಕ್ ಗೆಲ್ತು. ನನ್ನಿಂದಲೇ ಈ ಆಟ ಗೆದ್ದರು ಅಂದುಕೊಳ್ಳುವ ಚೀಪ್ ಮೆಂಟಾಲಿಟಿ ಮಂಜಣ್ಣನದ್ದು ಎಂದು ರಜತ್ ಹೇಳಿದ್ದಾರೆ. ರಜತ್ ಮಾತು ಕೇಳಿ, ಮಂಜು ಗರಂ ಆಗಿದ್ದಾರೆ. ನಾನು ಮಾಡಿರೋ ಕೆಲಸನಾ ನಾನೇ ಹೇಳಿಕೊಳ್ಳೋದ್ರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಬಳಿಕ ಬಿಗ್ ಬಾಸ್‌ನ ಟಾಸ್ಕ್ ರೂಲ್ಸ್‌ನಂತೆಯೇ ಸ್ಪರ್ಧಿ ಮಂಜುರನ್ನು ರಜತ್ ನೀರಿಗೆ ತಳ್ಳಿದ್ದಾರೆ.

    ಭವ್ಯಾ ಎಲ್ಲರ ಜೊತೆ ಮಿಂಗಲ್ ಆಗೋದಿಲ್ಲ. ನೀವು ತ್ರಿವಿಕ್ರಮ್ ಜೊತೆ ಡಿಪೆಂಡ್ ಆಗ್ತೀರಾ. ತುಂಬಾ ನಿಷ್ಠುರವಾಗಿ ಮಾತಾಡ್ತೀರಾ ಎಂದು ಮೋಕ್ಷಿತಾ ಹೇಳಿದರು. ಮೋಕ್ಷಿತಾರ ಪ್ರತಿ ಮಾತಿಗೂ ಭವ್ಯಾ ತಿರುಗೇಟು ನೀಡಿದ್ದಾರೆ. ನಾನು ಎಲ್ಲರ ಬಳಿ ಹೋಗಿ ಕಷ್ಟ ಸುಖ ಹೇಳಬೇಕಾಗಿಲ್ಲ. ತ್ರಿವಿಕ್ರಮ್ ನನ್ನ ಆಟವನ್ನ ಆಡುತ್ತಿಲ್ಲ. ನಾನು ಈ ಮನೆಗೆ ಸಂಬಂಧಗಳನ್ನು ಬೆಳೆಸಲು ಬಂದಿಲ್ಲ. ಯಾರ ಬಳಿ ಕೂಡ ಸರ್ಟಿಫಿಕೇಟ್ ಬೇಕಿಲ್ಲ ಎಂದು ಭವ್ಯಾ ಕೆಂಡಕಾರಿದ್ದಾರೆ. ಆ ನಂತರ ಭವ್ಯಾರನ್ನು (Bhavya Gowda) ಮೋಕ್ಷಿತಾ ನೀರಿಗೆ ತಳ್ಳಿದ್ದಾರೆ.

    ಇನ್ನೂ ಶಿಶಿರ್ ಎಲಿಮಿನೇಷನ್ ಮತ್ತು ಗೋಲ್ಡ್ ಸುರೇಶ್ ನಿರ್ಗಮನದ ನಂತರ ಈ ವಾರಾಂತ್ಯ ಯಾರು ಮನೆಯಿಂದ ಹೊರಬರುತ್ತಾರೆ ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲವಿದೆ. ಈ ವಾರ ಡಬಲ್ ಎಲಿಮಿನೇಷನ್ ಆಗುವ ಸಾಧ್ಯತೆಯಿದೆ.