ದೊಡ್ಮನೆಯಲ್ಲಿ (BBK 11) ವೈಲ್ಡ್ ಕಾರ್ಡ್ ಸ್ಪರ್ಧಿ ಶೋಭಾ (Shobha Shetty) ಮತ್ತು ರಜತ್ (Rajath) ಎಂಟ್ರಿ ಕೊಟ್ಮೇಲೆ ಉಳಿವಿಕೆಗಾಗಿ ಸ್ಪರ್ಧಿಗಳ ಸೆಣಸಾಟ ಜೋರಾಗಿದೆ. ಇನ್ನೂ ಬಿಗ್ ಬಾಸ್ ಕೊಟ್ಟ ಟಾಸ್ಕ್ವೊಂದರಲ್ಲಿ ಎತ್ತರದಿಂದ ಶೋಭಾ ಶೆಟ್ಟಿ ಬಿದ್ದಿದ್ದಾರೆ. ಪೆಟ್ಟು ಮಾಡಿಕೊಂಡ ಶೋಭಾರನ್ನು ನೋಡಿ ಸ್ಪರ್ಧಿಗಳು ಗಾಬರಿಯಾಗಿದ್ದಾರೆ. ಇದನ್ನೂ ಓದಿ:‘ಜೀಬ್ರಾ’ಗೆ ‘ಭೀಮ’ ಬೆಂಬಲ- ಡಾಲಿ, ಸತ್ಯದೇವ್ ಚಿತ್ರಕ್ಕೆ ದುನಿಯಾ ವಿಜಯ್ ಸಾಥ್

‘ಬಿಗ್ ಬಾಸ್’ ಮನೆಯ ಆಟಕ್ಕೆ 50 ದಿನ ಪೂರೈಸಿದೆ. ರೋಚಕ ತಿರುವು ಪಡೆದು ಮುನ್ನುಗ್ಗತ್ತಿದೆ. ಇನ್ನೂ ವೈಲ್ಡ್ ಕಾರ್ಡ್ ಸ್ಪರ್ಧಿ ಶೋಭಾ ಅವರು ಉಗ್ರಂ ಮಂಜುಗೆ ತಿರುಗೇಟು ಕೊಟ್ಟಿರುವ ರೀತಿ ನೋಡಿ ಅವರು ಎಂತಹ ಗಟ್ಟಿ ಸ್ಪರ್ಧಿ ಎಂಬುದು ಮನೆ ಮಂದಿ ಗೊತ್ತಾಗಿದೆ. ಇದನ್ನೂ ಓದಿ:‘ಲಕ್ಷ್ಮಿ ಬಾರಮ್ಮ’ ಸೀರಿಯಲ್ನಲ್ಲಿ ಮಹಾ ತಿರುವು- ಕಾವೇರಿ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಬಂದ ಕೀರ್ತಿ

ಇಂದಿನ ಸಂಚಿಕೆಯಲ್ಲಿನ ಪ್ರೋಮೋವೊಂದನ್ನು ವಾಹಿನಿ ಹಂಚಿಕೊಂಡಿದೆ. ಅದರಲ್ಲಿ ಶೋಭಾ ಮತ್ತು ಭವ್ಯಾ ಗೌಡ ನೇತೃತ್ವದಲ್ಲಿ ಎರಡು ಟೀಮ್ಗಳಾಗಿ ವಿಂಗಡಿಸಿದ್ದಾರೆ. ಎದುರಾಳಿ ತಂಡ ಭವ್ಯಾಗಿಂತ (Bhavya Gowda) ವೇಗವಾಗಿ ಟಾಸ್ಕ್ ಪೂರ್ಣಗೊಳಿಸಬೇಕು ಎಂಬ ಆತುರದಲ್ಲಿ ಶೋಭಾ ಆಟ ಆಡುವಾಗ ಎತ್ತರದಿಂದ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಇದನ್ನು ನೋಡಿ ಸಹಸ್ಪರ್ಧಿಗಳು ಒಂದು ಕ್ಷಣ ಶಾಕ್ ಆಗಿದ್ದಾರೆ.
View this post on Instagram
ಶೋಭಾಗೆ ತೀವ್ರವಾಗಿ ಪೆಟ್ಟು ಆಗಿದ್ಯಾ? ಎಂಬುದು ಇಂದಿನ ಸಂಚಿಕೆಯಲ್ಲಿ ತಿಳಿದು ಬರಲಿದೆ. ನಟಿಗೆ ಏನಾಗಿದೆ ಎಂಬುದನ್ನು ಕಾದುನೋಡಬೇಕಿದೆ.















ಈ ಕಾರ್ಯಕ್ರಮದಲ್ಲಿ ಕರವೇ ಅಧ್ಯಕ್ಷ ನಾರಾಯಣ ಗೌಡ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ಎನ್ ಸುರೇಶ್, ಉದ್ಯಮಿ ಪೂರ್ವಂಕರ್ ಸಿಇಒ ಮಲ್ಲಣ್ಣ, ಅಂತರಾಷ್ಟ್ರೀಯ ಕ್ರೀಡಾಪಟು ವೃಂದಾ ದಿನೇಶ್, ಮಹಿಳಾ ಕ್ರಿಕೆಟರ್ಗಳಾದ ಪುಷ್ಪ ಕುಮಾರಿ, ಪ್ರತ್ಯುಷ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.


ಡಾಕ್ಟರ್ಸ್, ಲಾಯರ್ಸ, ಸಿನಿಮಾ ನಟರು, ಕಿರುತೆರೆ ಕಲಾವಿದರು, ಮಾಧ್ಯಮದವರು ಹೀಗೆ ಎಲ್ಲಾ ಕ್ಷೇತ್ರದವರು ಸೇರಿ ಆಡಲಿರುವ ಕ್ರಿಕೆಟ್ ಟೂರ್ನಮೆಂಟ್. ಈ ಪಂದ್ಯಾವಳಿ ಆರಂಭಕ್ಕೂ ಮುನ್ನ ಲೋಗೋ ಬಿಡುಗಡೆ ಮಾಡಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್ವೊಂದರಲ್ಲಿ ಈ ಕಾರ್ಯಕ್ರಮ ನೆರವೇರಿದೆ. ನಟಿಯರಾದ ತನಿಷಾ ಕುಪ್ಪಂಡ, ಭವ್ಯಾ ಗೌಡ, ಎನ್ 1 ಕ್ರಿಕೆಟ್ ಅಕಾಡೆಮಿ ಅಧ್ಯಕ್ಷ ಸುನಿಲ್ ಕುಮಾರ್, ಶೈಲೇಶ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬಳಿಕ ನಟಿ ತನಿಷಾ ಕುಪ್ಪಂಡ (Tanisha Kuppanda) ಮಾತನಾಡಿ, ಎನ್ 1 ಕ್ರಿಕೆಟ್ ಅಕಾಡೆಮಿ ಮೂಲಕ ಹಲವು ಟೂರ್ನಮೆಂಟ್ ಮಾಡುವ ಮೂಲಕ ಸುನಿಲ್ ಅವರು ಖ್ಯಾತಿ ಪಡೆದಿದ್ದಾರೆ. ನಾನು ಇದಕ್ಕೂ ಮುನ್ನ ಟಿಪಿಎಲ್ ಸೀಸನ್ ಒಂದರಲ್ಲಿ ಟೀಂ ಒಂದಕ್ಕೆ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದೆ. ಯಾವುದೇ ಪ್ರೊಫೆಷನ್ ಆಗಲಿ ಕ್ರಿಕೆಟ್ ಅಂದರೆ ಪ್ರಾಣ ಕೊಡುವವರು ಬಹಳಷ್ಟು ಜನ ಇದ್ದಾರೆ. ಈ ಟೂರ್ನಮೆಂಟ್ ವಿಶೇಷತೆ ಏನೆಂದರೆ ಎಲ್ಲಾ ಕ್ರಿಕೆಟ್ ಪ್ರೇಮಿಗಳು ಇದರಲ್ಲಿ ಭಾಗಿಯಾಗಬಹುದು. ಎನ್ 1 ಕ್ರಿಕೆಟ್ ಅಕಾಡೆಮಿ ಅಂದರೆ ಹೊಸ ಪ್ರಯತ್ನ. ಈ ಮೂಲಕ ಮಾಧ್ಯಮದವರು, ಡಾಕ್ಟರ್ಸ್, ಲಾಯರ್ಸ, ಸಿನಿಮಾ ನಟರು, ಕಿರುತೆರೆ ಕಲಾವಿದರು, ಮಾಧ್ಯಮದವರಿಗೆ ಏರ್ಪಡಿಸಲಾಗಿದೆ ಎಂದರು.



ಬೆಂಗಳೂರಿನ ಖಾಸಗಿ ರೆಸಾರ್ಟ್ವೊಂದರಲ್ಲಿ ಧನುಷ್-ಸಂಜನಾ ಎಂಗೇಜ್ಮೆಂಟ್ ಕಾರ್ಯಕ್ರಮ ನಡೆದಿದೆ. ‘ಗೀತಾ’ ಸಹನಟಿ ಭವ್ಯಾ ಗೌಡ ಮತ್ತು ಕುಟುಂಬಸ್ಥರು, ಆಪ್ತರು ಅಷ್ಟೇ ಈ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ:
ಸೋಷಿಯಲ್ ಮೀಡಿಯಾದಲ್ಲಿ ನಟಿ ಭವ್ಯಾ ಗೌಡ (Bhavya Gowda) ಅವರು ಧನುಷ್-ಸಂಜನಾ ಜೊತೆಗಿನ ಫೋಟೋ ಹಂಚಿಕೊಂಡು ಹೊಸ ಬಾಳಿಗೆ ಶುಭಕೋರಿದ್ದಾರೆ. ಧನುಷ್ ಎಂಗೇಜ್ಮೆಂಟ್ ಫೋಟೋ ವೈರಲ್ ಆಗ್ತಿದ್ದಂತೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ. ಅಂದಹಾಗೆ ಧನುಷ್ ನಿಶ್ಚಿತಾರ್ಥದ ಸುಂದರ ಫೋಟೋಗಳು ಸುಜಯ್ ನಾಯ್ಡು ಅವರ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.


ಅಕ್ಟೋಬರ್ 8ರಿಂದ ಪ್ರಾರಂಭವಾಗುವ ಬಿಗ್ ಬಾಸ್ ಶೋ, ಮೊದಲ ದಿನ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ. ಮರುದಿನದಿಂದ ಪ್ರತಿ ರಾತ್ರಿ 9.30ಕ್ಕೆ ಕಾರ್ಯಕ್ರಮ ಪ್ರಸಾರವಾಗಲಿದೆ ಎಂದು ವಾಹಿನಿಯು ರಿಲೀಸ್ ಮಾಡಿದ ಪ್ರೋಮೋದಲ್ಲಿ ತಿಳಿಸಲಾಗಿದೆ. ಇದಕ್ಕಾಗಿಯೇ ವಿಶೇಷ ಪ್ರೋಮೋ ಕೂಡ ಮಾಡಿದೆ.
ಬಿಗ್ ಬಾಸ್ಗೆ ಹೋಗುವ ಮುನ್ನವೇ ವಾಹಿನಿಯಾಗಲಿ, ಬಿಗ್ ಬಾಸ್ ಮನೆ ಪ್ರವೇಶ ಮಾಡುವ ಸ್ಪರ್ಧಿಗಳಾಗಲೀ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವ ವಿಚಾರವನ್ನು ರಿವೀಲ್ ಮಾಡೋದಿಲ್ಲ. ಸ್ಪರ್ಧಿಗಳು ಯಾರು ಅನ್ನೋದು ಬಿಗ್ ಬಾಸ್ ಶೋ ಲಾಂಚ್ ಆಗುವ ದಿನವೇ ಗೊತ್ತಾಗುತ್ತದೆ. ಆದರೆ ಈ ಬಾರಿ ಮೊದಲ ಬಾರಿಗೆ ಸೋಶಿಯಲ್ ಮೀಡಿಯಾದಲ್ಲಿ ಸ್ಪರ್ಧಿ ಯಾರು ಅನ್ನೋದನ್ನು ಇದೀಗ ವಾಹಿನಿ ಹೇಳಿದೆ. ರಕ್ಷಿತ್ ಶೆಟ್ಟಿ ಜೊತೆ ನಟಿಸಿದ ಚಾರ್ಲಿ ಮನೆಗೆ ಎಂಟ್ರಿ ಕೊಡುತ್ತಿದ್ದಾರೆ.