Tag: ಭಾರತ

  • ಜೆಮಿಮಾ ಶತಕದ ಮಿಂಚು – ಭಾರತಕ್ಕೆ ವಿಶ್ವದಾಖಲೆಯ ಜಯ; 3ನೇ ಬಾರಿ ಮಹಿಳಾ ವಿಶ್ವಕಪ್ ಫೈನಲ್‌ಗೆ ಲಗ್ಗೆ!

    ಜೆಮಿಮಾ ಶತಕದ ಮಿಂಚು – ಭಾರತಕ್ಕೆ ವಿಶ್ವದಾಖಲೆಯ ಜಯ; 3ನೇ ಬಾರಿ ಮಹಿಳಾ ವಿಶ್ವಕಪ್ ಫೈನಲ್‌ಗೆ ಲಗ್ಗೆ!

    -‌ ಪಂದ್ಯ ಗೆಲ್ಲಿಸಿ ಮೈದಾನದಲ್ಲೇ ಕಣ್ಣೀರಿಟ್ಟ ರೋಡ್ರಿಗ್ಸ್‌

    ಮುಂಬೈ: ಜೆಮಿಮಾ ರೋಡ್ರಿಗ್ಸ್‌ ಅವರ ಅಜೇಯ ಶತಕ ಮತ್ತು ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ಜವಾಬ್ದಾರಿಯುತ ಅರ್ಧಶತಕದ ಬ್ಯಾಟಿಂಗ್‌ ನೆರವಿನಿಂದ ಭಾರತ ತಂಡ ಹಾಲಿ ವಿಶ್ವಚಾಂಪಿಯನ್ ಆಸ್ಟ್ರೇಲಿಯಾವನ್ನ 5 ವಿಕೆಟ್‌ಗಳಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ 3ನೇ ಬಾರಿಗೆ ಐಸಿಸಿ ಮಹಿಳಾ ವಿಶ್ವಕಪ್‌ ಫೈನಲ್ ಪ್ರವೇಶಿಸಿದೆ. 2008ರಲ್ಲಿ ಭಾರತ ಮೊದಲ ಬಾರಿ ಫೈನಲ್‌ ಪ್ರವೇಶಿಸಿದಾಗ ಆಸೀಸ್‌ ವಿರುದ್ಧವೇ 98 ರನ್‌ಗಳಿಂದ ಸೋತಿತ್ತು. 2017ರಲ್ಲಿ ಇಂಗ್ಲೆಂಡ್‌ ವಿರುದ್ಧ 9 ರನ್‌ಗಳ ವಿರೋಚಿತ ಸೋಲು ಕಂಡಿತ್ತು. ಇದೀಗ ಸೆಮಿಸ್‌ನಲ್ಲಿ ಸೋಲಿಸಿ ಆಸೀಸ್‌ ತಂಡವನ್ನ ಮನೆಗೆ ಕಳುಹಿಸಿದೆ.

    ಈ ಮೂಲಕ ಲೀಗ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅನುಭವಿಸಿದ್ದ ಆಘಾತಕಾರಿ ಸೋಲಿಗೆ ಇದೇ ಟೂರ್ನಿಯಲ್ಲಿ ಭಾರತ ತಕ್ಕ ಉತ್ತರ ನೀಡಿದೆ. ನವೆಂಬರ್ 2ರಂದು ನಡೆಯುವ ಫೈನಲ್ ನಲ್ಲಿ ಭಾರತ ತಂಡ ಪ್ರಶಸ್ತಿಗಾಗಿ ದಕ್ಷಿಣ ಆಫ್ರಿಕಾ ವಿರುದ್ಧ ಸೆಣೆಸಬೇಕಿದೆ.

    ವಿಶ್ವದಾಖಲೆಯ ಜಯ
    ಗುರುವಾರ ನವಿಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 49.5 ಓವರ್ ಗಳಲ್ಲಿ 338 ರನ್ ಗಳಿಗೆ ಆಲೌಟ್ ಆಯಿತು. ಇದನ್ನು ಭಾರತ ತಂಡ ಕೇವಲ 5 ವಿಕೆಟ್ ಕಳೆದುಕೊಂಡು ಇನ್ನೂ 48.3 ಓವರ್‌ಗಳಲ್ಲೇ 341 ರನ್‌ ಗಳಿಸಿ ಗೆಲುವು ಸಾಧಿಸಿತು. ವಿಶ್ವಕಪ್ ಇತಿಹಾಸದಲ್ಲೇ ಅತಿ ದೊಡ್ಡ ಮೊತ್ತ ಚೇಸಿಂಗ್‌ ಮಾಡಿ ಗೆಲುವು ಸಾಧಿಸಿದ ಹೆಗ್ಗಳಿಕೆ ಇದೀಗ ಭಾರತದ ವನಿತೆಯರ ಪಾಲಾಗಿದೆ.

    ಕಠಿಣ ಗುರಿ ಬೆನ್ನಟ್ಟಿದ ಭಾರತ ತಂಡ ಆರಂಭಿಕ 2 ವಿಕೆಟ್‌ ಕಳೆದುಕೊಂಡು ಆಘಾತಕ್ಕೆ ಸಿಲುಕಿತ್ತು. ಆದರೆ, ಜೆಮಿಮಾ ರೊಡ್ರಿಗಸ್‌ (127*) ಹಾಗೂ ಹರ್ಮನ್‌ಪ್ರೀತ್‌ ಕೌರ್‌ (89 ರನ್‌) ಅವರ 167 ರನ್‌ಗಳ ದೊಡ್ಡ ಜೊತೆಯಾಟದ ತಂಡಕ್ಕೆ ಬಲ ನೀಡಿತು.

    ಜೆಮಿಮಾ ರೋರಿಂಗ್‌ ಶತಕ
    ಭಾರತ ತಂಡ, 13 ರನ್‌ ಇದ್ದಾಗ ಶಫಾಲಿ ವರ್ಮಾ ಹಾಗೂ 59 ರನ್‌ಗೆ ಸ್ಮೃತಿ ಮಂಧಾನಾ ಅವರ ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತ್ತು. ಆದರೆ, 3ನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದು ಕೊನೆಯವರೆಗೂ ಅಜೇಯರಾಗಿ ಹೋರಾಡಿದ ಜೆಮಿಮಾ ರೊಡ್ರಿಗ್ಸ್‌ 134 ಎಸೆತಗಳಲ್ಲಿ 14 ಬೌಂಡರಿಗಳೊಂದಿಗೆ 127* ರನ್‌ ಗಳಿಸಿ ಭಾರತ ತಂಡವನ್ನ ಗೆಲುವಿನ ದಡ ಸೇರಿಸಿದರು. ಅಲ್ಲದೇ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಜೊತೆಗೂಡಿ 167 ರನ್‌ಗಳ ನಿರ್ಣಾಯಕ ಜೊತೆಯಾಟ ನೀಡಿದರು. ಇದರೊಂದಿಗೆ ದೀಪ್ತಿ ಶರ್ಮಾ 24 ರನ್‌, ರಿಚಾ ಘೋಷ್‌ 26 ರನ್‌, ಅಮನ್‌ ಜೋತ್‌ ಕೌರ್‌ 15 ರನ್‌ ಕೊಡುಗೆ ನೀಡಿದರು.

    338 ರನ್‌ ಕಲೆ ಹಾಕಿದ್ದ ಆಸ್ಟ್ರೇಲಿಯಾ
    ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದ ಆಸ್ಟ್ರೇಲಿಯಾ ತಂಡ ದೊಡ್ಡ ಮೊತ್ತವನ್ನೇ ಕಲೆ ಹಾಕಿತ್ತು. ಫೋಬೆ ಲಿಚ್‌ಫೀಲ್ಡ್‌ 119 ರನ್‌, ಎಲಿಸ್‌ ಪೆರ್ರಿ 77 ರನ್‌ ಹಾಗೂ ಆಶ್ಲೆ ಗಾರ್ಡ್ನರ್ ಸ್ಫೋಟಕ 63 ರನ್‌ಗಳ ನೆರವಿನಿಂದ ಆಸೀಸ್‌ ವನಿತಾ ತಂಡ 49.5 ಓವರ್‌ಗಳಿಗೆ 338 ರನ್‌ ಕಲೆ ಹಾಕಿತ್ತು. ಆ ಮೂಲಕ ಎದುರಾಳಿ ಭಾರತ ಮಹಿಳಾ ತಂಡಕ್ಕೆ 339 ರನ್‌ಗಳ ಕಠಿಣ ಗುರಿ ನೀಡಿತ್ತು.

    ಸಂಕ್ಷಿಪ್ತ ಸ್ಕೋರ್
    ಆಸ್ಟ್ರೇಲಿಯಾ
    49.5 ಓವರ್ ಗಳಲ್ಲಿ 338/10, ಲಿಚ್ ಫೀಲ್ಡ್ 119(93), ಎಸಿಸ್ ಪೆರ್ರಿ 77(88), ಆ್ಯಶ್ಲೆ ಗಾರ್ಡನರ್ 63 (45), ಶ್ರೀಚರಣಿ 49ಕ್ಕೆ 2, ದೀಪ್ತಿ ಶರ್ಮಾ 73ಕ್ಕೆ 2

    ಭಾರತ ತಂಡ
    48.3 ಓವರ್ ಗಳಲ್ಲಿ 341/1, ಜೆಮಿಮಾ ರೋಡ್ರಿಗಸ್ ಅಜೇಯ 127 (134), ಹರ್ಮನ್ ಪ್ರೀತ್ ಕೌರ್ 89(88), ಕಿಮ್ ಗರ್ಥ್ 46ಕ್ಕೆ 2, ಅನಾಬೆಲ್ ಸದರ್ ಲ್ಯಾಂಡ್ 69ಕ್ಕೆ 2

  • ಏರ್‌ ಇಂಡಿಯಾ 4,000 ಕೋಟಿ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ – ಸಿಇಒ ಸ್ಪೋಟಕ ಮಾಹಿತಿ

    ಏರ್‌ ಇಂಡಿಯಾ 4,000 ಕೋಟಿ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ – ಸಿಇಒ ಸ್ಪೋಟಕ ಮಾಹಿತಿ

    ನವದೆಹಲಿ: ಏರ್‌ ಇಂಡಿಯಾ (Air India) ಸಂಸ್ಥೆ 4,000 ಕೋಟಿಗೂ ಅಧಿಕ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ ಎಂದು ಏರ್ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ (Campbell Wilson) ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

    ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪಹಲ್ಗಾಮ್‌ ಭಯೋತ್ಪಾದಕ ದಾಳಿ (Pahalgam Attack) ಬಳಿಕ ಎರಡೂ ರಾಷ್ಟ್ರಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದರಿಂದ ಭಾರತ ಮತ್ತು ಪಾಕಿಸ್ತಾನ ಪರಸ್ಪರ ತಮ್ಮ ವಾಯುಪ್ರದೇಶವನ್ನು ಮುಚ್ಚಿದವು. ಇದು ಭಾರತೀಯ ವಿಮಾನಯಾನ ಸಂಸ್ಥೆಗಳ ಮೇಲೆ ಗಮನಾರ್ಹ ಪರಿಣಾಮ ಬೀರಿತು. ಏರ್‌ ಇಂಡಿಯಾ ಒಂದೇ ಸಂಸ್ಥೆ ಸುಮಾರು 4,000 ಕೋಟಿ ರೂ.ಗೂ ಹೆಚ್ಚು ನಷ್ಟ ಅನುಭವಿಸಿತು ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಮೋದಿ ಮತಕ್ಕಾಗಿ ಡ್ಯಾನ್ಸ್ & ಡ್ರಾಮಾ, ಬೇಕಿದ್ರೆ ಭರತನಾಟ್ಯನೂ ಮಾಡ್ತಾರೆ – ರಾಹುಲ್‌ ಗಾಂಧಿ ಲೇವಡಿ

    ಸಂಘರ್ಷದ ಬಳಿಕ ಪಾಕಿಸ್ತಾನ ತನ್ನ ವಾಯುಸೀಮೆಯನ್ನು (Pakistans Airspace) ನಿರಂತರವಾಗಿ ಮುಚ್ಚಿತು. ಇದರಿಂದ ಏರ್‌ ಇಂಡಿಯಾ ಸಂಸ್ಥೆ ನಿರಂತರ ನಷ್ಟ ಅನುಭವಿಸಿತು. ಏಕೆಂದ್ರೆ ಪಹಲ್ಗಾಮ್‌ ದಾಳಿ ಬಳಿಕ ಏರ್‌ ಇಂಡಿಯಾ ಹಲವಾರು ಅಂತಾರಾಷ್ಟ್ರೀಯ ವಿಮಾನಗಳ ಮಾರ್ಗಗಳನ್ನ ಬದಲಾಯಿಸಬೇಕಾಯಿತು. ಇದರಿಂದ ಕಾರ್ಯಾಚರಣೆಯ ವೆಚ್ಚ ಹೆಚ್ಚಾಯಿತು. ಇದೆಲ್ಲ ಕಾರಣಗಳಿಂದ ವಿಮಾನಯಾನ ಸಂಸ್ಥೆ ನಷ್ಟ ಅನುಭವಿಸಬೇಕಾಯ್ತು ಎಂದ ತಿಳಿಸಿದ್ರು. ಇದನ್ನೂ ಓದಿ: 10 ಮುಸ್ಲಿಂ ಯುವತಿಯರನ್ನು ಕರೆತಂದು ಹಿಂದೂ ಯುವಕರು ಮದುವೆಯಾಗಿ: ಬಿಜೆಪಿ ಮಾಜಿ ಶಾಸಕ ವಿವಾದಾತ್ಮಕ ಹೇಳಿಕೆ

    ಈ ಅವಧಿಯಲ್ಲಿ ಯುರೋಪ್‌ ಮತ್ತು ಯುನೈಟೆಡ್‌ ಸ್ಟೇಸ್ಟ್‌ಗೆ ಹೋಗುವ ಮಾರ್ಗಗಳು ಹೆಚ್ಚು ಪರಿಣಾಮ ಬೀರಿತು. ಈ ಮಾರ್ಗಗಳಲ್ಲಿ ಬದಲಾವಣೆ ಮಾಡಿದ್ದರಿಂದ 60 ರಿಂದ 90 ನಿಮಿಷಗಳ ಪ್ರಯಾಣ ಸಮಯ ಹೆಚ್ಚಾಯಿತು. ಜೊತೆಗೆ ಸಿಬ್ಬಂದಿ ಖರ್ಚು ಹೆಚ್ಚಾಯ್ತು ಎಂದು ವಿವರಿಸಿದ್ರು. ಇದನ್ನೂ ಓದಿ:  ಅಯೋಧ್ಯೆ ರಾಮಮಂದಿರಕ್ಕೆ 3 ಸಾವಿರ ಕೋಟಿ ದೇಣಿಗೆ; 1500 ಕೋಟಿ ರೂ. ಖರ್ಚು

    ಪಹಲ್ಗಾಮ್‌ನಲ್ಲಿ ಹರಿಯಿತು ನೆತ್ತರು
    ಏಪ್ರಿಲ್ 22ರಂದು ಶ್ರೀನಗರದ ಪಹಲ್ಗಾಮ್‌ನಲ್ಲಿರುವ ಬೈಸರನ್ ಕಣಿವೆಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಹಾಜರಿದ್ದರು. ಹಠಾತ್ ಭಯೋತ್ಪಾದಕ ದಾಳಿಯ ಸಮಯದಲ್ಲಿ, 26 ಜನರು ಸಾವನ್ನಪ್ಪಿದರು ಮತ್ತು ಗುಂಡಿನ ದಾಳಿಯಲ್ಲಿ 17 ಜನರು ಗಾಯಗೊಂಡರು. 370ನೇ ವಿಧಿ ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಇದಾಗಿತ್ತು. ಟಿಆರ್‌ಎಫ್‌ ಸಂಘಟನೆ ಇದರ ಹೊಣೆ ಹೊತ್ತುಕೊಂಡಿತ್ತು.

  • ಮೋದಿ ಕಠಿಣ ವ್ಯಕ್ತಿ, ಶೀಘ್ರವೇ ಭಾರತದ ಜೊತೆ ವ್ಯಾಪಾರ ಒಪ್ಪಂದ: ಟ್ರಂಪ್‌ ಸುಳಿವು

    ಮೋದಿ ಕಠಿಣ ವ್ಯಕ್ತಿ, ಶೀಘ್ರವೇ ಭಾರತದ ಜೊತೆ ವ್ಯಾಪಾರ ಒಪ್ಪಂದ: ಟ್ರಂಪ್‌ ಸುಳಿವು

    – ಮತ್ತೆ ಭಾರತ-ಪಾಕ್‌ ಯುದ್ಧ ನಿಲ್ಲಿಸಿದ್ದೇನೆಂದು ಬೆನ್ನು ತಟ್ಟಿಕೊಂಡ ಅಧ್ಯಕ್ಷ

    ಸಿಯೋಲ್‌: ನರೇಂದ್ರ ಮೋದಿ (Narendra Modi) ಅಷ್ಟು ಸುಲಭವಾಗಿ ಬಗ್ಗುವ ವ್ಯಕ್ತಿಯಲ್ಲ. ಅವರೊಬ್ಬ ಕಠಿಣ ವ್ಯಕ್ತಿ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಹೇಳಿದ್ದಾರೆ.

    ದಕ್ಷಿಣ ಕೊರಿಯಾದಲ್ಲಿ ನಡೆದ ಏಷ್ಯಾ ಪೆಸಿಫಿಕ್ ಆರ್ಥಿಕ ಸಹಕಾರ (APEC) ಸಿಇಒಗಳ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್‌ ಮತ್ತೆ ಭಾರತ ಮತ್ತು ಪಾಕಿಸ್ತಾನ (India-Pakistan) ನಡುವಿನ ಯುದ್ಧವನ್ನು ನಿಲ್ಲಿಸಿದ್ದೇನೆ ಎಂದು ಹೇಳುವ ಮೂಲಕ ಮತ್ತೆ ತನ್ನ ಬೆನ್ನನ್ನು ತಟ್ಟುವ ಕೆಲಸವನ್ನು ಮುಂದುವರಿಸಿದ್ದಾರೆ.

    ಇದೇ ವೇಳೆ ಶೀಘ್ರವೇ ಭಾರತದ ಜೊತೆ ವ್ಯಾಪಾರ ಒಪ್ಪಂದ (India-USA Trade Deal) ಮಾಡುವ ಬಗ್ಗೆ ಟ್ರಂಪ್‌ ಸುಳಿವು ನೀಡಿದ್ದಾರೆ. ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಿದ್ದೇನೆ ಮತ್ತು ಪ್ರಧಾನಿ ಮೋದಿಯವರ ಬಗ್ಗೆ ನನಗೆ ಅಪಾರ ಗೌರವ ಮತ್ತು ಪ್ರೀತಿ ಇದೆ. ನಮ್ಮಿಬ್ಬರ ನಡುವೆ ಉತ್ತಮ ಸಂಬಂಧವಿದೆ ಎಂದು ಹೇಳಿದರು.

    ಟ್ರಂಪ್‌ ಹೇಳಿದ್ದೇನು?
    ಪ್ರಧಾನಿ ಮೋದಿಯವರ ಬಗ್ಗೆ ನನಗೆ ಅಪಾರ ಗೌರವ ಮತ್ತು ಪ್ರೀತಿ ಇದೆ. ನಮಗೆ ಉತ್ತಮ ಸಂಬಂಧವಿದೆ. ಅದೇ ರೀತಿ, ಪಾಕಿಸ್ತಾನದ ಪ್ರಧಾನಿ ಒಬ್ಬ ಉತ್ತಮ ವ್ಯಕ್ತಿ. ಅವರಲ್ಲಿ ಫೀಲ್ಡ್ ಮಾರ್ಷಲ್ ಇದ್ದಾರೆ. ಅವರು ಫೀಲ್ಡ್ ಮಾರ್ಷಲ್ ಯಾಕೆ ಎನ್ನುವುದು ನಿಮಗೆ ತಿಳಿದಿದ್ಯಾ? ಅವರು ಒಬ್ಬ ಉತ್ತಮ ಹೋರಾಟಗಾರ. ಇದನ್ನೂ ಓದಿ:  ಕೆನಡಾದಲ್ಲಿ ಉದ್ಯಮಿ ಹತ್ಯೆ, ಗಾಯಕನ ಮನೆಗೆ ಬೆಂಕಿಯಿಟ್ಟ ಬಿಷ್ಣೋಯ್‌ ಗ್ಯಾಂಗ್‌

    ಸುಂದರವಾಗಿರುವ ಏಳು ಹೊಸ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ನಾನು ಓದಿದ್ದೇನೆ. ಎರಡು ಪರಮಾಣು ರಾಷ್ಟ್ರಗಳು ಯುದ್ಧದಲ್ಲಿ ತೊಡಗಿದ್ದಾಗ ನಾನು ಮೋದಿ ಮತ್ತು ಪಾಕಿಸ್ತಾನಕ್ಕೆ ಕರೆ ಮಾಡಿ ಯುದ್ಧವನ್ನು ನಿಲ್ಲಿಸುವಂತೆ ಕೇಳಿದೆ. ಯುದ್ಧ ನಿಲ್ಲಿಸದೇ ಇದ್ದರೆ ವ್ಯಾಪಾರ ಒಪ್ಪಂದ ಮಾಡುವುದಿಲ್ಲ ಎಂದು ಹೇಳಿದ್ದೆ. ಎರಡು ದಿನಗಳ ನಂತರ ಈ ಯುದ್ಧ ನಿಂತಿತು.

    ಯುದ್ಧ ನಿಂತಿರುವುದು ಅದ್ಭುತವಲ್ಲವೇ? ಒಂದು ವೇಳೆ ಜೋ ಬೈಡೆನ್‌ ಅಧಿಕಾರದಲ್ಲಿ ಇದ್ದರೆ ಯುದ್ಧ ನಿಲ್ಲಿಸುತ್ತಿದ್ದರು ಎಂದು ಭಾವಿಸುತ್ತೀರಾ? ನಾನು ಹಾಗೆ ಭಾವಿಸುವುದಿಲ್ಲ ಎಂದು ಹೇಳಿ ತಾನೊಬ್ಬ ಶಾಂತಿದೂತ ಎಂದು ಬಿಂಬಿಸುವ ಪ್ರಯತ್ನ ಮಾಡಿದರು.

  • ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 49% ವಿದೇಶಿ ನೇರ ಹೂಡಿಕೆಗೆ ಅನುಮೋದನೆ ಸಾಧ್ಯತೆ

    ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 49% ವಿದೇಶಿ ನೇರ ಹೂಡಿಕೆಗೆ ಅನುಮೋದನೆ ಸಾಧ್ಯತೆ

    ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 49% ವಿದೇಶಿ ನೇರ ಹೂಡಿಕೆಗೆ (FDI) ಭಾರತ ಸರ್ಕಾರ ಅನುಮೋದನೆ ನೀಡುವ ಸಾಧ್ಯತೆ ಇದೆ.

    ಕಳೆದ ಎರಡು ತಿಂಗಳಿಂದ ಹಣಕಾಸು ಸಚಿವಾಲಯವು ದೇಶದ ಬ್ಯಾಂಕಿಂಗ್ ವಲಯದ ನಿಯಂತ್ರಕ ಸಂಸ್ಥೆಯಾದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಜೊತೆ ಈ ವಿಷಯದ ಬಗ್ಗೆ ಚರ್ಚಿಸುತ್ತಿದೆ. ಈ ಪ್ರಸ್ತಾವನೆಯನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಇದನ್ನೂ ಓದಿ: ವೈಯಕ್ತಿಕ ಹಗೆತನಕ್ಕೆ ಬಲಿಯಾಗ್ತಿದೆಯೇ ಟೀಂ ಇಂಡಿಯಾ – ಇನ್ನೂ ಮುಗಿದಿಲ್ವಾ ಕೊಹ್ಲಿ-ಗಂಭೀರ್‌ ಮುನಿಸು?

    ಪ್ರಸ್ತುತ ಶೇ.20 ಎಫ್‌ಡಿಐ ಮಿತಿ ಹೇರಿದೆ. ಹೊಸ ಕ್ರಮವು ಸಾರ್ವಜನಿಕ ವಲಯ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳ ನಿಯಮಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಪ್ರಯತ್ನದ ಭಾಗವಾಗಿದೆ. ಖಾಸಗಿ ವಲಯದ ಬ್ಯಾಂಕ್‌ಗಳಿಗೆ ಪ್ರಸ್ತುತ ಎಫ್‌ಡಿಐ ಮಿತಿ ಶೇ.74 ರಷ್ಟಿದೆ. ಈ ಬಗ್ಗೆ ಆರ್‌ಬಿಐ ಜೊತೆಗೆ ಹಣಕಾಸು ಸಚಿವಾಲಯ ಚರ್ಚಿಸುತ್ತಿದೆ.

    ಭಾರತದ ಸಾರ್ವಜನಿಕ ಬ್ಯಾಂಕ್‌ಗಳಲ್ಲಿ ಹೂಡಿಕೆ ಮಾಡಲು ವಿದೇಶಿ ಕಂಪನಿಗಳು ಆಸಕ್ತಿ ತೋರಿಸುತ್ತಿವೆ. ಶೀಘ್ರದಲ್ಲೇ ಹೂಡಿಕೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.

    ದುಬೈ ಮೂಲದ ಎಮಿರೇಟ್ಸ್ ಎನ್‌ಬಿಡಿ ಇತ್ತೀಚೆಗೆ ಆರ್‌ಬಿಎಲ್ ಬ್ಯಾಂಕಿನಲ್ಲಿ 60% ಪಾಲನ್ನು 3 ಬಿಲಿಯನ್‌ ಡಾಲರ್‌ಗೆ ಖರೀದಿಸಿದೆ. ಸುಮಿಟೊಮೊ ಮಿಟ್ಸುಯಿ ಬ್ಯಾಂಕಿಂಗ್ ಕಾರ್ಪ್ ಯೆಸ್ ಬ್ಯಾಂಕಿನಲ್ಲಿ 20% ಪಾಲನ್ನು 1.6 ಬಿಲಿಯನ್‌ ಡಾಲರ್‌ಗೆ ಸ್ವಾಧೀನಪಡಿಸಿಕೊಂಡಿದ್ದು, ಜಪಾನಿನ ಸಾಲದಾತ ನಂತರ ಇದನ್ನು ಮತ್ತೊಂದು 4.99% ಹೆಚ್ಚಿಸಿದ್ದರಿಂದ ಭಾರತದ ಬ್ಯಾಂಕಿಂಗ್ ಉದ್ಯಮದಲ್ಲಿ ವಿದೇಶಿ ಆಸಕ್ತಿ ಹೆಚ್ಚುತ್ತಿದೆ. ಇದನ್ನೂ ಓದಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ

    ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ವಿದೇಶಿ ಹೂಡಿಕೆದಾರರಿಂದ ಆಸಕ್ತಿಯನ್ನು ನಿರೀಕ್ಷಿಸುತ್ತಿವೆ. ವಿದೇಶಿ ಮಾಲೀಕತ್ವದ ಮಿತಿಯನ್ನು ಹೆಚ್ಚಿಸುವುದರಿಂದ ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಬಂಡವಾಳವನ್ನು ಪಡೆಯಲು ಸಹಾಯವಾಗುತ್ತದೆ.

  • ಪಾಕ್‌ ಜೊತೆಗಿನ ಸಂಬಂಧ ಭಾರತದ ಸ್ನೇಹಕ್ಕೆ ಧಕ್ಕೆ ತರುವುದಿಲ್ಲ – ಮಾರ್ಕೊ ರೂಬಿಯೊ

    ಪಾಕ್‌ ಜೊತೆಗಿನ ಸಂಬಂಧ ಭಾರತದ ಸ್ನೇಹಕ್ಕೆ ಧಕ್ಕೆ ತರುವುದಿಲ್ಲ – ಮಾರ್ಕೊ ರೂಬಿಯೊ

    ವಾಷಿಂಗ್ಟನ್‌: ಪಾಕಿಸ್ತಾನದ (Pakistan) ಜೊತೆಗಿನ ಸಂಬಂಧ ಬಲಪಡಿಸಲು ಅಮೆರಿಕ ಪ್ರಯತ್ನಿಸುತ್ತಿದೆ. ಆದ್ರೆ ಇದು ಭಾರತದೊಂದಿಗಿನ ಸ್ನೇಹಕ್ಕೆ, ಐತಿಹಾಸಿಕ ಸಂಬಂಧಗಳಿಗೆ ಧಕ್ಕೆ ಉಂಟು ಮಾಡುವುದಿಲ್ಲ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ (Marco Rubio) ಹೇಳಿದ್ದಾರೆ.

    ಭಾರತ ಮತ್ತು ಪಾಕ್‌ ನಡುವಿನ ಸಂಘರ್ಷದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಭೇಟಿಯ ನಂತರ ಈ ಬೆಳವಣಿಗೆ ನಡೆದಿದೆ. ಉಭಯ ದೇಶಗಳ ನಡುವೆ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ಟ್ರಂಪ್ ಹೇಳಿಕೊಂಡಿದ್ದನ್ನು ಭಾರತ ತಿರಸ್ಕರಿಸಿದ್ದರೆ, ಪಾಕಿಸ್ತಾನವು ಸಂಘರ್ಷ ಕೊನೆಗೊಳಿಸಿದ್ದಕ್ಕಾಗಿ ಅಮೆರಿಕ ಅಧ್ಯಕ್ಷರಿಗೆ ಮಣೆ ಹಾಕಿದೆ. ಇದನ್ನೂ ಓದಿ: ಅರ್ಧಗಂಟೆ ಅಂತರದಲ್ಲಿ 2 ದುರಂತ – ಅಮೆರಿಕ ನೌಕಾಪಡೆಯ ಹೆಲಿಕಾಪ್ಟರ್, ಫೈಟರ್ ಜೆಟ್ ಪತನ

    ಆಸಿಯಾನ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮಲೇಷ್ಯಾದ ಕ್ವಾಲಾಲಂಪುರಕ್ಕೆ ತೆರಳುವ ಮುನ್ನ ಮಾತನಾಡಿದ ರುಬಿಯೋ, ಪಾಕಿಸ್ತಾನ ಜೊತೆಗಿನ ಸಂಬಂಧ ಬಲಪಡಿಸುವಿಕೆಯೂ ಭಾರತದ ಜೊತೆಗಿನ ಐತಿಹಾಸಿಕ ಸಂಬಂಧಕ್ಕೆ ಅಡ್ಡಿಯಾಗುವುದಿಲ್ಲ. ಆದ್ರೆ ಅಮೆರಿಕಕ್ಕೆ ಎಲ್ಲ ದೇಶದೊಂದಿಗೆ ದ್ವಿಪಕ್ಷೀಯ ಸಂಬಂಧ ಹೊಂದುವುದು ಅನಿವಾರ್ಯ. ಭಾರತ ಇದನ್ನ ಅರ್ಥ ಮಾಡಿಕೊಳ್ಳಬೇಕು ಅಂತ ಹೇಳಿದ್ದಾರೆ.

    ರಕ್ಷಣಾ ಸಂಬಂಧ ವೃದ್ಧಿಗಾಗಿ ನಾವು ಪಾಕಿಸ್ತಾನದ ಜೊತೆ ಸಂಬಂಧ ಬೆಳೆಸುತ್ತಿದ್ದೇವೆ. ಭಾರತೀಯರು ರಾಜತಾಂತ್ರಿಕತೆ ಮತ್ತು ಅಂತಹ ವಿಷಯಗಳಲ್ಲಿ ಬಹಳ ಪ್ರಬುದ್ಧರಾಗಿದ್ದಾರೆ. ನಾವು ಸಂಬಂಧ ಹೊಂದಿರದಂತಹ ದೇಶಗಳೊಂದಿಗೆ ಭಾರತ ದ್ವಿಪಕ್ಷೀಯ ಬಾಂಧವ್ಯ ಈಗಾಗಲೇ ಹೊಂದಿದೆ. ಹೀಗಾಗಿ ಇವೆಲ್ಲ ಪ್ರಬುದ್ಧತೆಯಿಂದ ಕೂಡಿದ ವಿದೇಶಾಂಗ ನೀತಿಯ ಭಾಗ ಎಂದಿದ್ದಾರೆ. ಇದನ್ನೂ ಓದಿ: ಬ್ರಿಟನ್‌ನಲ್ಲಿ ಭಾರತೀಯ ಮೂಲದ 20ರ ಯುವತಿ ಮೇಲೆ ಅತ್ಯಾಚಾರ

    ಪಾಕ್‌ ಜೊತೆಗೆ ಸ್ನೇಹ ಬೆಳೆಸಬೇಕು
    ಪಾಕಿಸ್ತಾನ ಜೊತೆಗಿನ ಪಾಲುದಾರಿಕೆ, ವ್ಯಾಪಾರ ಸಂಬಂಧ ಮತ್ತಷ್ಟು ಹೆಚ್ಚಿಸಲು ಅಮೆರಿಕ ಬಯಸುತ್ತದೆ. ಆದರೆ, ಇಲ್ಲಿಯವರೆಗೂ ಭಾರತದೊಂದಿಗೆ ಇರುವ ಐತಿಹಾಸಿಕ ಸಂಬಂಧಕ್ಕೆ ಧಕ್ಕೆಯನ್ನುಂಟು ಮಾಡಿಕೊಂಡು, ಪಾಕಿಸ್ತಾನದೊಂದಿಗೆ ಬಾಂಧವ್ಯ ಬೆಳೆಸಲು ಇಷ್ಟಪಡುವುದಿಲ್ಲ ಅಂತಲೂ ರುಬಿಯೋ ಹೇಳಿದ್ದಾರೆ.

  • 5 ವರ್ಷದ ಬಳಿಕ ಭಾರತದಿಂದ ಚೀನಾಗೆ ಹಾರಿತು ವಿಮಾನ!

    5 ವರ್ಷದ ಬಳಿಕ ಭಾರತದಿಂದ ಚೀನಾಗೆ ಹಾರಿತು ವಿಮಾನ!

    ನವದೆಹಲಿ: ಭಾರತ (India) ಮತ್ತು ಚೀನಾ (China) ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ (Direct Flights) ಸೇವೆ ಆರಂಭಗೊಂಡಿದೆ. ಕೋಲ್ಕತ್ತಾ-ಗುವಾಂಗ್‌ಝೌ ನಡುವಿನ ಇಂಡಿಗೋ (Indigo) ವಿಮಾನ ಭಾನುವಾರ ರಾತ್ರಿ 10 ಗಂಟೆಗೆ ಟೇಕಾಫ್‌ ಆಗಿದೆ.

    ಶಾಂಘೈನಿಂದ ನವದೆಹಲಿಗೆ ವಿಮಾನಗಳು ನವೆಂಬರ್ 9 ರಿಂದ ಪುನರಾರಂಭಗೊಳ್ಳಲಿವೆ. ವಾರಕ್ಕೆ ಮೂರು ದಿನ ಈ ವಿಮಾನ ಸಂಚಾರ ಇರಲಿದೆ. ದೆಹಲಿಯಿಂದ ಗುವಾಂಗ್‌ಝೌಗೆ ಇಂಡಿಗೋ ವಿಮಾನ ನವೆಂಬರ್ 10 ರಿಂದ ಪ್ರಾರಂಭವಾಗಲಿದೆ. ಇದನ್ನೂ ಓದಿ:  ಪಾತಾಳಕ್ಕೆ ಬಿದ್ದ ಪಾಕ್‌ – ಸಾಲದ ಪ್ರಮಾಣ 80 ಲಕ್ಷ ಕೋಟಿಗೆ ಏರಿಕೆ

     

    ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆಗಳ ನಂತರ ನೇರ ವಿಮಾನ ಸೇವೆಗಳನ್ನು ಪುನರಾರಂಭಿಸಲು ಭಾರತ ಮತ್ತು ಚೀನಾ ಈ ತಿಂಗಳ ಆರಂಭದಲ್ಲಿ ಒಪ್ಪಿಗೆ ನೀಡಿತ್ತು.

    ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ (Xi Jinping) ನಡುವೆ ನಡೆದ ಮಹತ್ವದ ಸಭೆಯ ಬಳಿಕ ವಿಮಾನ ಹಾರಾಟಕ್ಕೆ ಎರಡೂ ದೇಶಗಳು ಒಪ್ಪಿಗೆ ನೀಡಿವೆ. ಇದನ್ನೂ ಓದಿ: ರಷ್ಯಾದಿಂದ ತೈಲ ಆಮದನ್ನು ಭಾರತ ಸಂಪೂರ್ಣವಾಗಿ ನಿಲ್ಲಿಸಲಿದೆ: ಟ್ರಂಪ್ ಅದೇ ರಾಗ

    ಡೋಕ್ಲಾಮ್ ಘರ್ಷಣೆಯ ಬಳಿಕ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿತ್ತು. ಕೋವಿಡ್-19 ಸಾಂಕ್ರಾಮಿಕ ರೋಗ ಬಂದ ನಂತರ ಸ್ಥಗಿತಗೊಂಡಿದ್ದ ವಿಮಾನ ಹಾರಾಟ ಮತ್ತೇ ಆರಂಭಗೊಂಡಿರಲಿಲ್ಲ.

  • ಭಾರತದ ವಿರುದ್ಧ ಯುದ್ಧದಿಂದ ಪ್ರಯೋಜನವಿಲ್ಲ, ಯಾಕಂದ್ರೆ ಪಾಕಿಸ್ತಾನಿಗಳೇ ಸೋಲುತ್ತಾರೆ: ಪಾಕ್‌ ಕಾರ್ಯಾಚರಣೆಗಳ ಮಾಜಿ ಸಿಐಎ

    ಭಾರತದ ವಿರುದ್ಧ ಯುದ್ಧದಿಂದ ಪ್ರಯೋಜನವಿಲ್ಲ, ಯಾಕಂದ್ರೆ ಪಾಕಿಸ್ತಾನಿಗಳೇ ಸೋಲುತ್ತಾರೆ: ಪಾಕ್‌ ಕಾರ್ಯಾಚರಣೆಗಳ ಮಾಜಿ ಸಿಐಎ

    ಇಸ್ಲಾಮಾಬಾದ್: ಭಾರತದ ವಿರುದ್ಧ ಯುದ್ಧ ಮಾಡುವುದರಿಂದ ಪಾಕಿಸ್ತಾನಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದು ಪಾಕ್ ಕಾರ್ಯಾಚರಣೆಗಳ ನೇತೃತ್ವ ವಹಿಸಿದ್ದ ಮಾಜಿ ಸಿಐಎ ಅಧಿಕಾರಿ ಜಾನ್ ಕಿರಿಯಾಕೌ ಹೇಳಿಕೆ ನೀಡಿದ್ದಾರೆ.

    ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದಿಂದ ಏನೂ ಒಳ್ಳೆಯದಾಗುವುದಿಲ್ಲ. ಏಕೆಂದರೆ ಪಾಕಿಸ್ತಾನಿಗಳು ಸೋಲುತ್ತಾರೆ. ನಾನು ಪರಮಾಣು ಶಸ್ತ್ರಾಸ್ತ್ರಗಳ ಬಗ್ಗೆ ಮಾತನಾಡುತ್ತಿಲ್ಲ. ನಾನು ಸಾಂಪ್ರದಾಯಿಕ ಯುದ್ಧದ ಬಗ್ಗೆ ಮಾತ್ರ ಮಾತನಾಡುತ್ತಿದ್ದೇನೆ. ನಿರಂತರವಾಗಿ ಭಾರತೀಯರನ್ನು ಪ್ರಚೋದಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಪಾಕ್‌ ಪರಮಾಣು ಶಸ್ತ್ರಾಗಾರದ ಮೇಲೆ ಅಮೆರಿಕ ನಿಯಂತ್ರಣ ಹೊಂದಿತ್ತು – CIA ಮಾಜಿ ಅಧಿಕಾರಿ ಜಾನ್ ಕಿರಿಯಾಕೌ ಆರೋಪ

    2016 ರಲ್ಲಿ ಸರ್ಜಿಕಲ್ ಸ್ಟ್ರೈಕ್, 2019 ರಲ್ಲಿ ಬಾಲಾಕೋಟ್ ದಾಳಿ ಮತ್ತು ಈ ವರ್ಷದ ಏಪ್ರಿಲ್‌ನಲ್ಲಿ 26 ಅಮಾಯಕರ ಸಾವಿಗೆ ಕಾರಣವಾದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತು. ಹಲವು ವರ್ಷಗಳಿಂದ ಗಡಿಯಾಚೆಯಿಂದ ಭಯೋತ್ಪಾದಕರು ನಡೆಸಿದ ದಾಳಿಗಳಿಗೆ ಭಾರತ ನಿರ್ಣಾಯಕವಾಗಿ ಪ್ರತ್ಯುತ್ತರ ನೀಡಿದೆ.

    2001 ರ ಸಂಸತ್ತಿನ ದಾಳಿಯ ನಂತರ, ಆಪರೇಷನ್ ಪರಾಕ್ರಮ್‌ ಕಾರ್ಯಾಚರಣೆ ನಡೆಯಿತು. ಭಾರತ-ಪಾಕಿಸ್ತಾನದ ಉದ್ವಿಗ್ನತೆಗಳು ಯುದ್ಧಕ್ಕೆ ಕಾರಣವಾಗಬಹುದೆಂದು ಅಮೆರಿಕವು ನಿರೀಕ್ಷಿಸಿತ್ತು. ಆಗ ಪಾಕಿಸ್ತಾನ ತನ್ನ ನಾಗರಿಕರನ್ನು ಸ್ಥಳಾಂತರಿಸಲು ಪ್ರಾರಂಭಿಸಿತ್ತು ಎಂದು ಕಿರಿಯಾಕೌ ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: PUBLiC TV Explainer| ಅಮೆರಿಕ Vs ಚೀನಾ – ಏನಿದು ಗೋಲ್ಡ್‌ ಬಾಂಬ್‌? ವಿಶ್ವದ ಮೇಲೆ ಪರಿಣಾಮ ಏನು?

    ಪಾಕಿಸ್ತಾನದ ಪರಮಾಣು ಬಾಂಬ್ ವಿನ್ಯಾಸಗೊಳಿಸಿದ ಅಬ್ದುಲ್ ಖದೀರ್ ಖಾನ್ ಅವರನ್ನು ಅಮೆರಿಕ ನಿರ್ಮೂಲನೆ ಮಾಡಬಹುದಿತ್ತು. ಆದರೆ ಸೌದಿ ಅರೇಬಿಯಾದ ಕೋರಿಕೆಯ ಮೇರೆಗೆ ಅವರನ್ನು ಉಳಿಸಿತು ಎಂದು ಕಿರಿಯಾಕೌ ತಿಳಿಸಿದ್ದಾರೆ.

    ನಾವು ಇಸ್ರೇಲಿ ವಿಧಾನವನ್ನು ಅಳವಡಿಸಿಕೊಂಡಿದ್ದರೆ, ಅವನನ್ನು ಕೊಲ್ಲುತ್ತಿದ್ದೆವು. ಅವನು ಎಲ್ಲಿ ವಾಸಿಸುತ್ತಿದ್ದಾನೆಂಬ ಬಗ್ಗೆ ನಮಗೆ ತಿಳಿದಿತ್ತು. ಆದರೆ, ಅವನಿಗೆ ಸೌದಿ ಸರ್ಕಾರದ ಬೆಂಬಲವಿತ್ತು. ಸೌದಿಗಳು ನಮ್ಮ ಬಳಿಗೆ ಬಂದು, ‘ದಯವಿಟ್ಟು ಅವನನ್ನು ಬಿಟ್ಟುಬಿಡಿ. ನಮಗೆ ಎಕ್ಯೂ ಖಾನ್ ಇಷ್ಟ. ನಾವು ಎಕ್ಯೂ ಖಾನ್ ಜೊತೆ ಕೆಲಸ ಮಾಡುತ್ತಿದ್ದೇವೆ. ಅವನನ್ನು ಬಿಟ್ಟುಬಿಡಿ’ ಎಂದು ಕೇಳಿಕೊಂಡಿತ್ತೆಂದು ತಿಳಿಸಿದ್ದಾರೆ.

  • ಪಾಕ್‌ ಪರಮಾಣು ಶಸ್ತ್ರಾಗಾರದ ಮೇಲೆ ಅಮೆರಿಕ ನಿಯಂತ್ರಣ ಹೊಂದಿತ್ತು – CIA ಮಾಜಿ ಅಧಿಕಾರಿ ಜಾನ್ ಕಿರಿಯಾಕೌ ಆರೋಪ

    ಪಾಕ್‌ ಪರಮಾಣು ಶಸ್ತ್ರಾಗಾರದ ಮೇಲೆ ಅಮೆರಿಕ ನಿಯಂತ್ರಣ ಹೊಂದಿತ್ತು – CIA ಮಾಜಿ ಅಧಿಕಾರಿ ಜಾನ್ ಕಿರಿಯಾಕೌ ಆರೋಪ

    – ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತದೊಂದಿಗೆ ಇಬ್ಬಗೆಯ ಆಟ

    ನವದೆಹಲಿ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ (Pervez Musharraf) ಅವರ ಆಡಳಿತದ ಸಂದರ್ಭದಲ್ಲಿ ಅಮೆರಿಕ ಪಾಕಿಸ್ತಾನದ ಪರಮಾಣು ಶಸ್ತ್ರಾಗಾರದ ಮೇಲೆ ನಿಯಂತ್ರಣ ಹೊಂದಿತ್ತು ಎಂದು ಮಾಜಿ ಕೇಂದ್ರ ಗುಪ್ತಚರ ಸಂಸ್ಥೆ (CIA) ಏಜೆಂಟ್ ಜಾನ್ ಕಿರಿಯಾಕೌ (John Kiriakou) ಗಂಭೀರ ಆರೋಪ ಮಾಡಿದ್ದಾರೆ.

    CIA ಯಲ್ಲಿ ವಿಶ್ಲೇಷಕರಾಗಿ, ನಂತರ ಭಯೋತ್ಪಾದನಾ ನಿಗ್ರಹ ಘಟಕದಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿದ ಜಾನ್ ಕಿರಿಯಾಕೌ, ಪರ್ವೇಜ್ ಮುಷರಫ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಒಂದು ಕಾಲದಲ್ಲಿ ಪರ್ವೇಜ್ ಮುಷರಫ್‌ ಸರ್ಕಾರವನ್ನ ಖರೀದಿಸಲು ಅಮೆರಿಕ ಹೇಗೆ ಪಾಕಿಸ್ತಾನಕ್ಕೆ ಲಕ್ಷಾಂತರ ರೂಪಾಯಿ ನೆರವು ನೀಡಿತ್ತು ಅನ್ನೋ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅಲ್ಲದೇ ಪಾಕಿಸ್ತಾನವು (Pakistan) ಭ್ರಷ್ಟಾಚಾರದ ಅಡಿಯಲ್ಲಿ ಹೂತುಹೋಗಿದೆ. ಅಲ್ಲಿನ ಮಾಜಿ ಪ್ರಧಾನಿ ಬೆನಜೀರ್ ಭುಟ್ಟೋ ಅವರಂತಹ ನಾಯಕರು ವಿದೇಶಗಳಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದರೆ, ಇತ್ತ ದೇಶದ ಸಾಮಾನ್ಯ ನಾಗರಿಕರು ಬಳಲುತ್ತಿದ್ದರು ಎಂದು ಬೇಸರ ಹೊರಹಾಕಿದ್ದಾರೆ.

    ನಾನು 2002 ರಲ್ಲಿ ಪಾಕಿಸ್ತಾನದಲ್ಲಿದ್ದಾಗ ಅಮೆರಿಕದ ಪೆಂಟಗನ್ ಪಾಕಿಸ್ತಾನದ ಪರಮಾಣು ಶಸ್ತ್ರಾಗಾರವನ್ನ ನಿಯಂತ್ರಿಸುತ್ತಿದೆ ಎಂದು ನನಗೆ ಅನಧಿಕೃತ ಮೂಲಗಳಿಂದ ಗೊತ್ತಾಯಿತು. ಆದರೆ ಇತ್ತೀಚಿನ ವರ್ಷಗಳಲ್ಲಿ, ಪಾಕಿಸ್ತಾನಿಯರು ಇದನ್ನ ನಿರಾಕರಿಸಿದ್ದಾರೆ. ಪಾಕಿಸ್ತಾನಿ ಜನರಲ್‌ಗಳು ನಿಯಂತ್ರಣದಲ್ಲಿದ್ದರೆ, ರಾಜಕೀಯವಾಗಿ ಯಾರು ಉಸ್ತುವಾರಿ ವಹಿಸುತ್ತಾರೆ ಎಂಬುದರ ಬಗ್ಗೆ ನನಗೆ ತುಂಬಾ ಚಿಂತೆಯಾಗುತ್ತದೆ ಎಂದು ಖಾಸಗಿ ಸಂದರ್ಶನದಲ್ಲಿ ತಿಳಿಸಿದ್ದಾರೆ.

    ಮುಷರಫ್ ಸರ್ಕಾರದೊಂದಿಗೆ ಅಮೆರಿಕವು ಉತ್ತಮ ಸಂಬಂಧ ಹೊಂದಿತ್ತು. ಆ ಸಂದರ್ಭದಲ್ಲಿ ನಮ್ಮ ಸಂಬಂಧಗಳೂ ಕೂಡ ಪಾಕ್‌ ಸರ್ಕಾರದೊಂದಿಗೆ ಚೆನ್ನಾಗಿತ್ತು. ಆದ್ರೆ ಅಮೆರಿಕ ಸರ್ವಾಧಿಕಾರಿಗಳೊಂದಿಗೆ ಕೆಲಸ ಮಾಡಲು ಇಷ್ಟಪಡುತ್ತದೆ. ಏಕೆಂದ್ರೆ ಆಗ ನೀವು ಜನಾಭಿಪ್ರಾಯದ ಬಗ್ಗೆ ಚಿಂತಿಸಬೇಕಾಗಿಲ್ಲ, ಮಾಧ್ಯಮಗಳಿಗೂ ಹೆದರಬೇಕಿಲ್ಲ. ಆದ್ದರಿಂದ ಅಮೆರಿಕ ಮುಷರಫ್‌ ಅವರನ್ನ ಖರೀದಿ ಮಾಡಿತ್ತು. ಜೊತೆಗೆ ತನ್ನ ಭದ್ರತಾ ಆದ್ಯತೆಗಳನ್ನ ಖಚಿತಪಡಿಸಿಕೊಳ್ಳಲು ಪಾಕಿಸ್ತಾನದ ಪರಮಾಣು ಶಸ್ತ್ರಗಾರದ ಮೇಲೆ ಹಿಡಿತ ಸಾಧಿಸಿತು ಅಂತ ಹೇಳಿದ್ದಾರೆ.

    ಮಿಲಿಟರಿ ಹಾಗೂ ಆರ್ಥಿಕವಾಗಿಯೂ ಅಮೆರಿಕ ಪಾಕಿಸ್ತಾನಕ್ಕೆ ಮಿಲಿಯನ್‌ ಡಾಲರ್‌ಗಟ್ಟಲೇ ಸಹಾಯ ನೀಡಿತು. ಆಗ ಮುಷರಫ್ ಪೆಂಟಗನ್‌ಗೆ ಪರಮಾಣು ಶಸ್ತ್ರಾಸ್ತ್ರಗಳ ನಿಯಂತ್ರಣ ಅಧಿಕಾರ ನೀಡಿದರು.

    ಭಾರತದ ವಿರುದ್ಧ ಉಗ್ರ ಕೃತ್ಯಕ್ಕೂ ಸಾಥ್‌
    ಮುಂದುವರಿದು ಮಾತನಾಡಿದ ಕಿರಿಯಾಕೌ, ಭಾರತದ ವಿರುದ್ಧ ಭಯೋತ್ಪಾದನೆ ಚಟುವಟಿಕೆಗಳನ್ನು ನಿಗ್ರಹಿಸುವ ವಿಚಾರದಲ್ಲಿ ಅವರು ಇಬ್ಬಗೆಯ ನೀತಿ ಹೊಂದಿದ್ದರು. ಒಂದು ಕಡೆ ಭಾರತದ ಬಗ್ಗೆ ಕಾಳಜಿ ವಹಿಸಿದಂತೆ ನಡೆದುಕೊಳ್ಳುತ್ತಿದ್ದರು. ಮತ್ತೊಂದು ಕಡೆ ಪಾಕ್‌ ಸೈನ್ಯ ಹಾಗೂ ಕೆಲವು ಉಗ್ರರನ್ನ ತೃಪ್ತಿಪಡಿಸಲು ಭಾರತದ ವಿರುದ್ಧದ ಭಯೋತ್ಪಾದನೆ ಕೃತ್ಯಗಳಿಗೆ ಸಾಥ್‌ ನೀಡುತ್ತಿದ್ದರು. ಈ ವಿಚಾರದಲ್ಲಿ ಅಮೆರಿಕನ್ನರೊಂದಿಗೆ ಸಹಕರಿಸುತ್ತಿರುವುದಾಗಿಯೂ ನಟಿಸುತ್ತಿದ್ದರು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

  • ಪಿಓಕೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ – ವಿಶ್ವಸಂಸ್ಥೆಯಲ್ಲಿ ಪಾಕ್ ಕುಟುಕಿದ ಭಾರತ

    ಪಿಓಕೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ – ವಿಶ್ವಸಂಸ್ಥೆಯಲ್ಲಿ ಪಾಕ್ ಕುಟುಕಿದ ಭಾರತ

    ನವದೆಹಲಿ: ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶದಲ್ಲಿ ಸೇನೆಯ ವಿರುದ್ಧ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ (Human Rights Violation) ಎಂದು ಭಾರತ (India) ಖಂಡಿಸಿದೆ. ವಿಶ್ವಸಂಸ್ಥೆಯಲ್ಲಿ ಮಾತನಾಡಿದ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ (Parvathaneni Harish), ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (POK) ಕ್ರೌರ್ಯವನ್ನು ಕೊನೆಗೊಳಿಸಬೇಕೆಂದು ಕರೆ ನೀಡಿದರು.

    80ನೇ ವಿಶ್ವಸಂಸ್ಥೆಯ ದಿನದಂದು ಆಯೋಜಿಸಲಾದ ಮುಕ್ತ ಚರ್ಚೆಯ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಉದ್ದೇಶಿಸಿ ಮಾತನಾಡಿದ ಹರೀಶ್, ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ ನಡೆಯುತ್ತಿರುವ ಗಂಭೀರ ಮತ್ತು ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಕೊನೆಗೊಳಿಸಬೇಕೆಂದು ನಾವು ಪಾಕಿಸ್ತಾನವನ್ನು ಒತ್ತಾಯಿಸುತ್ತೇವೆ. ಪಾಕಿಸ್ತಾನದ ಮಿಲಿಟರಿ ಆಕ್ರಮಣ, ದಬ್ಬಾಳಿಕೆ, ಕ್ರೂರತೆ ಮತ್ತು ಸಂಪನ್ಮೂಲಗಳ ಅಕ್ರಮ ಶೋಷಣೆಯ ವಿರುದ್ಧ ಜನಸಂಖ್ಯೆಯು ಬಹಿರಂಗ ದಂಗೆಯಲ್ಲಿ ತೊಡಗಿದೆ ಎಂದರು. ಇದನ್ನೂ ಓದಿ: ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಬೆಂಗಳೂರು ಲಿಂಕ್‌ – ಬಳ್ಳಾರಿಯಲ್ಲಿ ಚಿನ್ನ ಮಾರಾಟ ಮಾಡಿರೋ ಶಂಕೆ

    ಜಮ್ಮು ಮತ್ತು ಕಾಶ್ಮೀರವು ಯಾವಾಗಲೂ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿ ಉಳಿಯುತ್ತದೆ ಮತ್ತು ಇಲ್ಲಿನ ಜನರು ತಮ್ಮ ಮೂಲಭೂತ ಹಕ್ಕುಗಳನ್ನು ಆನಂದಿಸುತ್ತಾರೆ. ಅಂತಹ ಸ್ವಾತಂತ್ರ‍್ಯಗಳು ಪಾಕಿಸ್ತಾನದಲ್ಲಿ ಪರಕೀಯ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರು | ಸಿಲಿಂಡರ್‌ ಸ್ಫೋಟ – ಮನೆಯೇ ನೆಲಸಮ, ಓರ್ವ ಸಾವು

    ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಮತ್ತು ಯಾವಾಗಲೂ ಇರುತ್ತದೆ. ಜಮ್ಮು ಮತ್ತು ಕಾಶ್ಮೀರದ ಜನರು ಭಾರತದ ಕಾಲ-ಪರೀಕ್ಷಿತ ಪ್ರಜಾಪ್ರಭುತ್ವ ಸಂಪ್ರದಾಯಗಳು ಮತ್ತು ಸಾಂವಿಧಾನಿಕ ಚೌಕಟ್ಟಿನ ಅನುಸಾರವಾಗಿ ತಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸುತ್ತಾರೆ. ಇವು ಪಾಕಿಸ್ತಾನಕ್ಕೆ ಅನ್ಯವಾದ ಪರಿಕಲ್ಪನೆಗಳು ಎಂದು ನಮಗೆ ತಿಳಿದಿದೆ ಎಂದರು. ಇದನ್ನೂ ಓದಿ: ‌ಒಳ ಉಡುಪಿನಲ್ಲಿಟ್ಟುಕೊಂಡು ಚಿನ್ನ ಸಾಗಾಟ – ದೆಹಲಿ ಏರ್‌ಪೋರ್ಟ್‌ನಲ್ಲಿ ಮಹಿಳೆಯಿಂದ 1 ಕೆಜಿ ಗೋಲ್ಡ್‌ ಬಿಸ್ಕೆಟ್ ವಶಕ್ಕೆ

    ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನಿ ಸೇನೆ ಗುಂಡು ಹಾರಿಸಿದ ನಂತರ ಹಲವಾರು ನಾಗರಿಕರು ಸಾವನ್ನಪ್ಪಿದರು. ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾದ ನಂತರ ಅಶಾಂತಿ ಭುಗಿಲೆದ್ದಿತು. ಜಂಟಿ ಅವಾಮಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದವು. ಮಾರುಕಟ್ಟೆಗಳು, ಅಂಗಡಿಗಳು ಮತ್ತು ಸಾರಿಗೆ ಸೇವೆಗಳು ಹಲವಾರು ದಿನಗಳವರೆಗೆ ಈ ಪ್ರದೇಶದಾದ್ಯಂತ ಮುಚ್ಚಲ್ಪಟ್ಟವು. ಇದನ್ನೂ ಓದಿ: ಪರೀಕ್ಷೆಯಲ್ಲಿ ಕಳಪೆ ಅಂಕ ಬಂತೆಂದು MBBS ವಿದ್ಯಾರ್ಥಿನಿ ಆತ್ಮಹತ್ಯೆ

  • ಭಾರತದ ಬಳಿಕ ಪಾಕ್‌ಗೆ ನೀರಿನ‌ ಹರಿವು ತಡೆಯಲು ಪ್ಲ್ಯಾನ್‌ – ಅಣೆಕಟ್ಟು ನಿರ್ಮಿಸಲು ಮುಂದಾದ ಅಫ್ಘಾನ್

    ಭಾರತದ ಬಳಿಕ ಪಾಕ್‌ಗೆ ನೀರಿನ‌ ಹರಿವು ತಡೆಯಲು ಪ್ಲ್ಯಾನ್‌ – ಅಣೆಕಟ್ಟು ನಿರ್ಮಿಸಲು ಮುಂದಾದ ಅಫ್ಘಾನ್

    – ರಕ್ತ, ನದಿ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ – ಅಫ್ಘಾನ್‌ ಸರ್ಕಾರ ಪ್ರತಿಪಾದನೆ

    ಕಾಬೂಲ್: ಭಾರತದ ನಂತರ ತಾಲಿಬಾನ್ (Taliban) ಆಳ್ವಿಕೆಯ ಅಫ್ಘಾನಿಸ್ತಾನವು ತನ್ನ ಭೂಪ್ರದೇಶದಲ್ಲಿ ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ ಪಾಕಿಸ್ತಾನಕ್ಕೆ (Pakistan) ನೀರಿನ ಹರಿವು ತಡೆಯಲು ಯೋಜಿಸುತ್ತಿದೆ.

    ತಾಲಿಬಾನ್ ಸರ್ವೋಚ್ಚ ನಾಯಕ ಹಿಬತುಲ್ಲಾ ಅಖುಂಡ್ಜಾದಾ (Taliban Supreme Hibatullah Akhundzada) ಅವರು, ಕುನಾರ್‌ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸುವಂತೆ ಆದೇಶಿಸಿದ್ದಾರೆ. ಕುನಾರ್‌ನಲ್ಲಿ ಅಣೆಕಟ್ಟುಗಳ ನಿರ್ಮಾಣವನ್ನು ಸಾಧ್ಯವಾದಷ್ಟು ಬೇಗ ಪ್ರಾರಂಭಿಸಬೇಕು. ವಿದೇಶಿ ಕಂಪನಿಗಳಿಗೆ ಕಾಯದೇ ಆಂತರಿಕ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ ಎಂದು ತಾಲಿಬಾನ್ ಜಲ ಸಚಿವ ಅಬ್ದುಲ್ ಲತೀಫ್ ಮನ್ಸೂರ್ ತಿಳಿಸಿದ್ದಾರೆ.

    ಅಲ್ಲದೇ ಆಫ್ಘನ್ನರು (Afghans) ತಮ್ಮದೇ ಆದ ಜಲ ಸಂಪನ್ಮೂಲಗಳನ್ನ ನಿರ್ವಹಿಸುವ ಹಕ್ಕು ಹೊಂದಿದ್ದಾರೆ. ನೀರು ಮತ್ತು ನದಿ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಅಂತ ಮನ್ಸೂರ್‌ ಪ್ರತಿಪಾದಿಸಿದ್ದಾರೆ.

    ಕಳೆದ ಮೇ ತಿಂಗಳಲ್ಲಿ ತಾಲಿಬಾನ್ ಆಡಳಿತದ ಸೇನಾ ಜನರಲ್ ಮುಬಿನ್, ಕುನಾರ್ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದರು. ಬಳಿಕ ಹಣ ಸಂಗ್ರಹಿಸಿ ಅಣೆಕಟ್ಟು ನಿರ್ಮಿಸಲು ತಾಲಿಬಾನ್‌ ಸರ್ಕಾರಕ್ಕೆ ಒತ್ತಾಯಿಸಿದ್ದರು.

    ಕುನಾರ್‌ ನದಿಯ ಮಹತ್ವ ಏನು?
    ಕುನಾರ್ ಪಾಕಿಸ್ತಾನದ ಚಿತ್ರಾಲ್ ಪ್ರದೇಶದಿಂದ (Chitral Area) ಉಗಮವಾಗುವ 480 ಕಿಮೀ ಉದ್ದದ ನದಿಯಾಗಿದೆ. ಇದು ಅಫ್ಘಾನಿಸ್ತಾನದ ನಂಗಹಾರ್ ಮತ್ತು ಕುನಾರ್ ಪ್ರಾಂತ್ಯಗಳ ಮೂಲಕ ಹಾದುಹೋಗಲಿದ್ದು, ಸಿಂಧೂ ನದಿ ಸೇರುತ್ತದೆ. ಅಫ್ಘಾನಿಸ್ತಾನದಿಂದ ಪಾಕಿಸ್ತಾನಕ್ಕೆ ಹರಿಯುವ ಕಾಬೂಲ್ ಮತ್ತು ಕುನಾರ್ ನದಿಗಳು ಪಾಕಿಸ್ತಾನಕ್ಕೆ ಅತಿದೊಡ್ಡ ನೀರಿನ ಮೂಲಗಳಾಗಿವೆ.

    ಅಫ್ಘಾನ್‌ ವಾಟರ್‌ ಬಾಂಬ್‌ ಹಾಕ್ತಿರೋದೇಕೆ?
    ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಪಾಕ್‌ – ಅಫ್ಘಾನ್‌ ಯುದ್ಧಕ್ಕೆ ಕದನ ವಿರಾಮ ಘೋಷಣೆಯಾಗಿದೆ. ಆದ್ರೆ ಕದನ ವಿರಾಮ ಉಲ್ಲಂಘಿಸಿ ಪಾಕ್‌ ದಾಳಿ ನಡೆಸುತ್ತಿದೆ. ತನ್ನ ನಾಗರಿಕರ ಮೇಲಿನ ದಾಳಿಗೆ ಮಿಲಿಟರಿ ಬಲವನ್ನು ಬಳಸುತ್ತಿದೆ. ಹಾಗಾಗಿ ಪಾಕ್‌ ತನ್ನ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ತಪ್ಪಿಸಲು ʻನೀರುʼ ತನ್ನ ಏಕೈಕ ಮಿಲಿಟರಿಯೇತರ ಅಸ್ತ್ರವೆಂಬುದು ಅಫ್ಘಾನ್‌ ನಂಬಿಕೆ. ಇದರೊಂದಿಗೆ ಹೆಲ್ಮಂಡ್‌, ಕಾಬೂಲ್‌ ಹಾಗೂ ಕುನಾರ್‌ ನಂತಹ ನದಿಗಳ ಮೇಲೆ ತನ್ನ ಹಕ್ಕು ಸಾಧಿಸಲು ಅಫ್ಘಾನ್‌ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಮುಂದಾಗುತ್ತಿದೆ. ಅದರಂತೆ ಪಾಕ್‌ಗೆ ಹರಿಯುವ ಮೊದಲು ಅಫ್ಘಾನ್‌ನ ಕೃಷಿ ಮತ್ತು ವಿದ್ಯುತ್‌ ಚಟುವಟಿಕೆಗಳಿಗೆ ನೀರಿನ ಪ್ರಯೋಜನ ಪಡೆದುಕೊಳ್ಳಲು ತಯಾರಿ ನಡೆಸಿದೆ.