Tag: ಭಾರತೀಯ ವಾಯುಪಡೆ

  • G-20 ಶೃಂಗಸಭೆ ಹಿನ್ನೆಲೆ ಸೆ.14ರ ವರೆಗೆ ಚೀನಾ-ಪಾಕ್ ಗಡಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ಸ್ಥಗಿತ

    G-20 ಶೃಂಗಸಭೆ ಹಿನ್ನೆಲೆ ಸೆ.14ರ ವರೆಗೆ ಚೀನಾ-ಪಾಕ್ ಗಡಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ಸ್ಥಗಿತ

    – ಭದ್ರತೆಗೆ ಸುಧಾರಿತ ಯುದ್ಧ ವಿಮಾನಗಳ ನಿಯೋಜನೆ

    ಶ್ರೀನಗರ: ಜಿ20 ಶೃಂಗಸಭೆಗೆ (G20 Summit) ಭಾರತ ಸಂಪೂರ್ಣ ಸಿದ್ಧವಾಗಿದೆ. ಬರುವ ಗಣ್ಯರಿಗೆ ವಾಸ್ತವ್ಯದೊಂದಿಗೆ ಹಲವು ಹಂತಗಳಲ್ಲಿ ಭದ್ರತೆ ನಿಯೋಜನೆ ಮಾಡಲಾಗಿದೆ. ಈ ನಡುವೆ ಭಾರತೀಯ ವಾಯುಸೇನೆಯು (IAF) ಉತ್ತರ ವಲಯದಲ್ಲಿ ನಡೆಯುತ್ತಿರುವ ತ್ರಿಶೂಲ್ ವ್ಯಾಯಾಮಕ್ಕೆ (ಡ್ರಿಲ್ಲಿಂಗ್) ವಿರಾಮ ನೀಡಿದೆ. ಸೆಪ್ಟೆಂಬರ್ 10ರ ವರೆಗೆ ಯಾವುದೇ ಯುದ್ಧ ವಿಮಾನಗಳು (Fighter Jets) ಹಾರಾಟ ನಡೆಸುವುದಿಲ್ಲ. ಡ್ರಿಲ್ಲಿಂಗ್ ಕಾರ್ಯಾಚರಣೆಯನ್ನು ಮೊಟಕುಗೊಳಿಸಲಾಗುವುದು ಎಂದು ಐಎಎಫ್ ಅಧಿಕಾರಿಗಳು ಹೇಳಿದ್ದಾರೆ.

    ಇದೇ ಅವಧಿಯಲ್ಲಿ G20 ಶೃಂಗಸಭೆ (G-20 Summit) ನಡೆಯಲಿದ್ದು ರಾಜಧಾನಿಯ ವಾಯು ಪ್ರದೇಶವನ್ನು ರಕ್ಷಿಸಲು ಹಾಗೂ ದೇಶಾದ್ಯಂತ ವಾಯುನೆಲೆಗಳಲ್ಲಿ ಹೆಚ್ಚಿನ ನಿಗಾ ಇರಿಸಲು ಫಾಲ್ಕನ್ ಅವಾಕ್ಸ್ ವಿಮಾನವನ್ನ ಕಾರ್ಯಾಚರಣೆಗೆ ಇಳಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ರಫೇಲ್ ಸೇರಿದಂತೆ ಇತರೆ ಸುಧಾರಿತ ಯುದ್ಧ ವಿಮಾನಗಳನ್ನ ವಾಯುನೆಲೆಗಳಲ್ಲಿ ಭದ್ರತೆಗೆ ನಿಯೋಜಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಿ20ಯಲ್ಲಿ ಭಾಗಿಯಾಗುವ ಗಣ್ಯರಿಗೆ ಭವ್ಯ ಭೋಜನ – ಚಿನ್ನ, ಬೆಳ್ಳಿ ಲೇಪಿತ ತಟ್ಟೆಯಲ್ಲಿ ಊಟದ ವ್ಯವಸ್ಥೆ

    ಜಿ20 ಶೃಂಗಸಭೆ ಹಿನ್ನೆಲೆ ಗಣ್ಯಾತಿಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಆದ್ದರಿಂದ ಶತ್ರು ವಿಮಾನ ಭಾರತಕ್ಕೆ ನುಸುಳಿದರೆ ಅಥವಾ ಡ್ರೋನ್ ಮೂಲಕ ದಾಳಿ ನಡೆಸುವ ಪ್ರಯತ್ನಗಳು ನಡೆದರೆ ತಕ್ಷಣವೇ ಹೊಡೆದುರುಳಿಸಲು ಸುಧಾರಿತ ಯುದ್ಧವಿಮಾನಗಳ ನಿಯೋಜನೆ ಮಾಡಲಾಗಿದೆ. ಅದಕ್ಕಾಗಿ ದೆಹಲಿಯ ಸುತ್ತಮುತ್ತಲಿನ ವಾಯುನೆಲೆಗಳಲ್ಲೂ ಯುದ್ಧ ವಿಮಾನಗಳ ನಿಯೋಜನೆ ಮಾಡಲಾಗಿದೆ ಎಂದು ವಾಯುಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: G20 ಸಭೆಗೆ ಆಗಮಿಸುತ್ತಿರೋ ಜೋ ಬೈಡನ್‌ಗಾಗಿ ಮೂರು ಹಂತದ ಭದ್ರತೆ

    ಭಾರತೀಯ ವಾಯುಪಡೆಯು ಸೆಪ್ಟೆಂಬರ್ 4 ರಿಂದ ಚೀನಾ ಮತ್ತು ಪಾಕಿಸ್ತಾನ ಗಡಿಯುದ್ಧಕ್ಕೂ ಉತ್ತರ ವಲಯದಲ್ಲಿ ತ್ರಿಶೂಲ್ ವ್ಯಾಯಾಮ (ಡ್ರಿಲ್ಲಿಂಗ್) ನಡೆಸುತ್ತಿದೆ. ಲಡಾಖ್, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಮತ್ತು ಪಂಜಾಬ್ ಸೇರಿದಂತೆ ಉತ್ತರ ವಲಯದಲ್ಲಿ ಡ್ರಿಲ್ಲಿಂಗ್ ನಡೆಯುತ್ತಿದ್ದು, ಸೆಪ್ಟೆಂಬರ್ 14ರಂದು ಇದು ಮುಕ್ತಾಯಗೊಳ್ಳಲಿದೆ. ರಫೇಲ್, ಮಿರಾಜ್-2000, SU-30MKI, ಹೆವಿ-ಲಿಫ್ಟ್ ಸಾರಿಗೆ ವಿಮಾನಗಳು, ಚಿನೂಕ್ಸ್ ಮತ್ತು ಅಪಾಚೆ ಸೇರಿದಂತೆ ಚಾಪರ್‌ಗಳು ತರಬೇತಿಯಲ್ಲಿ ಪಾಲ್ಗೊಳ್ಳುತ್ತಿವೆ. ಸೆಪ್ಟೆಂಬರ್ 10ರ ವರೆಗೆ ಈ ತರಬೇತಿಗೆ ವಿರಾಮ ನೀಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಕ್, ಚೀನಾಗೆ ಠಕ್ಕರ್ ಕೊಡಲು ಅತ್ಯಾಧುನಿಕ ಡ್ರೋಣ್ ನಿಯೋಜನೆ

    ಪಾಕ್, ಚೀನಾಗೆ ಠಕ್ಕರ್ ಕೊಡಲು ಅತ್ಯಾಧುನಿಕ ಡ್ರೋಣ್ ನಿಯೋಜನೆ

    ನವದೆಹಲಿ: ಭಾರತೀಯ ವಾಯುಪಡೆಯು (Indian Air Force) ಚೀನಾ (China) ಮತ್ತು ಪಾಕಿಸ್ತಾನ (Pakistan) ಎರಡೂ ಗಡಿಗಳ ಮೇಲೆ ಏಕಕಾಲಕ್ಕೆ ಕಣ್ಗಾವಲಿರಿಸುವ ಸಾಮರ್ಥ್ಯವುಳ್ಳ 4 ಸರ್ವೇಕ್ಷಣಾ ಡ್ರೋನ್‌ಗಳನ್ನ ನಿಯೋಜಿಸಿದೆ. ಹೆರಾನ್ ಮಾರ್ಕ್-2 ಹೆಸರಿನ ಡ್ರೋಣ್ ಏಕಕಾಲದಲ್ಲಿ ಚೀನಾ ಮತ್ತು ಪಾಕಿಸ್ತಾನ ಗಡಿಗಳಲ್ಲಿ ಗಸ್ತು ತಿರುಗುವ ಸಾಮರ್ಥ್ಯ ಹೊಂದಿದೆ.

    ಗಡಿಯಲ್ಲಿ 4 ಹೆರಾನ್ ಮಾರ್ಕ್-2 ಡ್ರೋನ್‌ಗಳನ್ನು (Heron Mark-2 Drones) ನಿಯೋಜಿಸಲಾಗಿದೆ. ದೀರ್ಘ-ಶ್ರೇಣಿಯ ಕ್ಷಿಪಣಿಗಳು ಹಾಗೂ ಶಸ್ತ್ರಾಸ್ತ್ರಗಳ ವ್ಯವಸ್ಥೆ ಹೊಂದಿದೆ. ಜೊತೆಯಲ್ಲೇ ಹತ್ತಾರು ಅತ್ಯಾಧುನಿಕ ಶಸ್ತ್ರಾಸ್ತ್ರಗಳೂ ಈ ಡ್ರೋನ್‌ಗಳಲ್ಲಿ ಇರಲಿವೆ. ಭಾರತದ ಉತ್ತರ ವಲಯದ ಗಡಿಯ ಮುಂಚೂಣಿ ಪ್ರದೇಶಗಳಲ್ಲಿ ಈ ಡ್ರೋನ್‌ಗಳನ್ನು ಅಳವಡಿಕೆ ಮಾಡಲಾಗಿದೆ. ಇದನ್ನೂ ಓದಿ: ಪಾಕ್, ಚೀನಾಕ್ಕೆ ಠಕ್ಕರ್ – ಶ್ರೀನಗರದಲ್ಲಿ ಮೇಲ್ದರ್ಜೆಗೆರಿಸಿದ MiG- 29 ಯುದ್ಧ ವಿಮಾನ ನಿಯೋಜನೆ

    ಹೆರಾನ್ ಮಾರ್ಕ್-2 ವಿಶೇಷತೆ ಏನು?
    ಈ ಡ್ರೋನ್‌ಗಳು ಉಪಗ್ರಹಗಳ ಜೊತೆಗೆ ಸಂವಹನ ಸಂಪರ್ಕ ಹೊಂದಿರುತ್ತವೆ. ಭಾರತೀಯ ವಾಯುಪಡೆಯು ಅತ್ಯಂತ ಸುದೀರ್ಘ ಸಮಯದಿಂದ ಈ ರೀತಿಯ ಡ್ರೋನ್‌ಗಳ ಅಗತ್ಯತೆಯನ್ನ ಪ್ರತಿಪಾದಿಸಿತ್ತು. ಈ ಡ್ರೋನ್‌ಗಳು ಅತಿ ದೂರದವರೆಗೆ ಇಂಧನ ಮರುಭರ್ತಿ ಇಲ್ಲದೇ ಸಂಚರಿಸಬಲ್ಲವು. ಒಮ್ಮೆ ಇಂಧನ ಭರ್ತಿಯಾದರೆ 36 ಗಂಟೆ ಕಾಲ ಕಾರ್ಯ ನಿರ್ವಹಿಸಬಲ್ಲವು. ಲೇಸರ್ ತಂತ್ರಜ್ಞಾನದ ಮೂಲಕ ಶತ್ರುಗಳ ನೆಲೆ ಗುರುತಿಸಬಲ್ಲವು. ಅತಿ ದೂರದಿಂದಲೇ ಶತ್ರುಗಳ ನೆಲೆಯನ್ನ ಗುರುತಿಸುವ ಸಾಮರ್ಥ್ಯ ಡ್ರೋನ್‌ಗಳಿಗೆ ಇರುವ ಕಾರಣ, ಇವುಗಳ ನೆರವಿನಿಂದ ವಾಯುಪಡೆಯ ಫೈಟರ್ ಜೆಟ್‌ಗಳು ಶತ್ರುಗಳ ನೆಲೆಗಳನ್ನು ದೂರಗಾಮಿ ಕ್ಷಿಪಣಿಗಳ ಮೂಲಕ ನಾಶಪಡಿಸಬಹುದಾಗಿದೆ ಎಂದು ವಾಯುಪಡೆ ತಿಳಿಸಿದೆ.

    ಹೆರಾನ್ ಮಾರ್ಕ್-2 ಡ್ರೋನ್ ದೃಷ್ಟಿಯ ವ್ಯಾಪ್ತಿಯ ಆಚೆಗಿನ ಸರ್ವೇಕ್ಷಣೆಗೂ ನೆರವಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಇವುಗಳ ನೆರವಿನಿಂದ ಇಡೀ ದೇಶವನ್ನ ಒಂದೇ ಸ್ಥಳದಿಂದ ಸರ್ವೇಕ್ಷಣೆ ಮಾಡಲು ಸಾಧ್ಯ ಎಂದು ಡ್ರೋನ್ ಸ್ವಾಡರ್ನ್‌ನ ವಿಂಗ್ ಕಮಾಂಡರ್ ಪಂಕಜ್ ರಾಣಾ ತಿಳಿಸಿದ್ದಾರೆ. ಇದನ್ನೂ ಓದಿ: ಉಡುಪಿ ಮಾದರಿ ಮತ್ತೊಂದು ಕೇಸ್‌; ಹಾಸ್ಟೆಲ್‌ ಹುಡ್ಗೀರ ಬೆತ್ತಲೆ ವೀಡಿಯೋ ಸೆರೆ ಹಿಡಿದು ಸೀನಿಯರ್‌ಗೆ ಕಳಿಸ್ತಿದ್ದ ವಿದ್ಯಾರ್ಥಿನಿ

    ದಿನದ 24 ಗಂಟೆಯೂ ಕಾರ್ಯನಿರ್ವಹಿಸಬಲ್ಲ ಸಾಮರ್ಥ್ಯ ಹೊಂದಿರುವ ಈ ಡ್ರೋನ್‌ಗಳು ಯಾವುದೇ ಹವಾಮಾನದಲ್ಲೂ ಕೆಲಸ ಮಾಡುತ್ತವೆ. ಅದಕ್ಕಾಗಿ ಇವುಗಳ ಎಂಜಿನ್ ಸಾಮರ್ಥ್ಯವನ್ನೂ ಹೆಚ್ಚಿಸಲಾಗಿದೆ. ಒಂದೇ ಕಾರ್ಯಾಚರಣೆಗಳಲ್ಲಿ ಈ ಡ್ರೋನ್‌ಗಳು ಹಲವು ವಲಯಗಳ ಕಾರ್ಯಗಳನ್ನು ಸುದೀರ್ಘ ಕಾಲ ನಿರ್ವಹಿಸುವ ಸಾಮರ್ಥ್ಯ ಹೊಂದಿವೆ. ಬೇಹುಗಾರಿಕೆ, ಸರ್ವೇಕ್ಷಣೆ ಹಾಗೂ ಭಾರತೀಯ ವಾಯುಪಡೆಗೆ ಮಾಹಿತಿ ರವಾನಿಸುವ ಕಾರ್ಯಗಳನ್ನು ಈ ಡ್ರೋನ್ ಮಾಡುತ್ತದೆ ಎಂದು ರಾಣಾ ವಿವರಿಸಿದ್ದಾರೆ.

    ಎರಡು ದಿನಗಳ ಹಿಂದೆಯಷ್ಟೇ ಭಾರತೀಯ ವಾಯುಪಡೆ ಹಾರುವ ಶವಪೆಟ್ಟಿಗೆ ಎಂದೇ ಕುಖ್ಯಾತಿ ಪಡೆದಿದ್ದ ಮಿಗ್-21 ವಿಮಾನಗಳ ಬದಲಿಗೆ ಮೇಲ್ದರ್ಜೆಗೇರಿಸಿದ ಮಿಗ್-29 ಫೈಟರ್ ಜೆಟ್‌ಗಳನ್ನ ಗಸ್ತಿಗೆ ನಿಯೋಜನೆ ಮಾಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಫೈಟರ್ ಜೆಟ್ ಎಂಜಿನ್ ತಯಾರಿಕೆ – HAL ಜೊತೆಗೆ USನ GE ಏರೋಸ್ಪೇಸ್ ಒಪ್ಪಂದ

    ಫೈಟರ್ ಜೆಟ್ ಎಂಜಿನ್ ತಯಾರಿಕೆ – HAL ಜೊತೆಗೆ USನ GE ಏರೋಸ್ಪೇಸ್ ಒಪ್ಪಂದ

    ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮೇಕ್ ಇನ್ ಇಂಡಿಯಾ ಯೋಜನೆಗೆ ಭಾರೀ ಉತ್ತೇಜನ ಸಿಕ್ಕಿದಂತಾಗಿದೆ. ಏಕೆಂದರೆ ಅಮೆರಿಕ ಜನರಲ್ ಎಲೆಕ್ಟ್ರಿಕ್ಸ್‌ನ ಏರೋಸ್ಪೇಸ್ ಆರ್ಮ್ (GE Aerospace), ಭಾರತದ ವಾಯುಪಡೆಗಾಗಿ ಫೈಟರ್ ಜೆಟ್ ಎಂಜಿನ್‌ಗಳನ್ನು (Fighter Jet Engines) ತಯಾರಿಸಲು ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನೊಂದಿಗೆ ಕೈಜೋಡಿಸುವುದಾಗಿ ಗುರುವಾರ ತಿಳಿಸಿದೆ.

    ಅಧ್ಯಕ್ಷ ಜೋ ಬೈಡನ್ (Joe Biden) ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದು, ವಾಷಿಂಗ್ಟನ್‌ನಲ್ಲಿ ಜನರಲ್ ಎಲೆಕ್ಟ್ರಿಕ್ಸ್ ಅಧ್ಯಕ್ಷ ಹೆಚ್. ಲಾರೆನ್ಸ್ ಕಲ್ಫ್ ಜೂನಿಯರ್ ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಿದ ಕೆಲವೇ ಗಂಟೆಗಳಲ್ಲಿ ಘೋಷಣೆ ಹೊರಬಿದ್ದಿದೆ. ಮೋದಿ ಅವರು ಜೆಇ ಮುಖ್ಯಸ್ಥರೊಂದಿಗೆ ಈ ಕುರಿತು ಮಾತುಕತೆ ನಡೆದಿಸಿದ್ದಾರೆ.

    ಭಾರತ ಮತ್ತು ಯುಎಸ್ ನಡುವಿನ ರಕ್ಷಣಾ ಸಹಕಾರ ಒಪ್ಪಂದ ಒಂದು ದೊಡ್ಡ ಮೈಲುಗಲ್ಲು. ಜೊತೆಗೆ ಉಭಯ ದೇಶಗಳ ರಕ್ಷಣಾ ಸಹಕಾರ ಬಲಪಡಿಸಲು ಇದು ಪ್ರಮುಖ ಹೆಜ್ಜೆಯಾಗಿರಲಿದೆ ಎಂದು ಜಿಇ ಏರೋಸ್ಪೇಸ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

    ‘ಜಿಇ ಏರೋಸ್ಪೇಸ್‌ನ F414 ಎಂಜಿನ್‌ಗಳನ್ನ ಭಾರತದಲ್ಲಿ ಜಂಟಿಯಾಗಿ ಉತ್ಪಾದಿಸುವ ಅಂಶ ಒಪ್ಪಂದದಲ್ಲಿದೆ. ಇದಕ್ಕಾಗಿ ಅಗತ್ಯ ರಫ್ತು ಮಾನ್ಯತೆಯನ್ನ ಪಡೆಯಲು ಯುಎಸ್ ಸರ್ಕಾರದೊಂದಿಗೆ ಜಿಇ ಏರೋಸ್ಪೇಸ್ ಕೆಲಸ ಮಾಡಲಿದೆ. ಈ ಪ್ರಯತ್ನವು ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ ಎಂಕೆ2 ಕಾರ್ಯಕ್ರಮದ ಭಾಗವಾಗಿದೆ ಎಂದು ಹೇಳಿದೆ.

    ಈ ಕುರಿತು ಮಾತನಾಡಿದ ಲಾರೆನ್ಸ್ ಕಲ್ಫ್, ಇದೊಂದು ಐತಿಹಾಸಿಕ ಒಪ್ಪಂದವಾಗಿದೆ. ಎರಡೂ ರಾಷ್ಟ್ರಗಳ ನಡುವಿನ ನಿಕಟ ಸಮನ್ವಯತೆ ಸಾಧಿಸುವಲ್ಲಿ ನಾವು ಪ್ರಮುಖ ಪಾತ್ರ ವಹಿಸುತ್ತೇವೆ. ನಮ್ಮ F414 ಎಂಜಿನಿಗಳಿಗೆ ಸಾಟಿಯೇ ಇಲ್ಲ. ಇದರಿಂದ ಎರಡೂ ದೇಶಗಳಿಗೂ ಆರ್ಥಿಕ ಹಾಗೂ ರಾಷ್ಟ್ರೀಯ ಭದ್ರತೆಯ ಪ್ರಯೋಜನ ದೊರೆಯುತ್ತದೆ. ಅಲ್ಲದೇ ನಮ್ಮ ಗ್ರಾಹಕರಿಗೆ ಸಹಕರಿಸಲು ಹಾಗೂ ತಮ್ಮ ಮಿಲಿಟರಿ ನೌಕಾಪಡೆಯ ಅಗತ್ಯತೆಗಳನ್ನು ಪೂರೈಸಲು ಗುಣಮಟ್ಟದ ಎಂಜಿನ್‌ಗಳನ್ನು ಉತ್ಪಾದಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದ್ದಾರೆ.

    ತೇಜಸ್‌ನ ಪ್ರಸ್ತುತ ರೂಪಾಂತರವು F404 ಎಂಜಿನ್‌ಗಳಿಂದ ಚಾಲಿತವಾಗಿರುವುದರಿಂದ ವಾಯುಪಡೆಯು ಜಿಇಯೊಂದಿಗೆ ದೀರ್ಘಕಾಲದ ಸಂಬಂಧ ಹೊಂದಿದೆ. ಆದ್ರೆ ಇದು ಎಷ್ಟರಮಟ್ಟಿಗೆ ಫಲಕಾರಿಯಾಗುತ್ತದೆ ಎಂಬುದನ್ನ ಕಾದುನೋಡಬೇಕಿದೆ.

    ಜಿಇ ಏರೋಸ್ಪೇಸ್‌ನ ಎಫ್414 ಎಂಜಿನ್‌ಗಳು 5 ದಶಲಕ್ಷಕ್ಕೂ ಹೆಚ್ಚು ಗಂಟೆಗಳ ಹಾರಾಟ ನಡೆಸಿದೆ. 8 ರಾಷ್ಟ್ರಗಳು ಈ ಎಂಜಿನ್‌ಗಳನ್ನು ತಮ್ಮ ಸೇನಾ ವಿಮಾನಗಳಿಗೆ ಬಳಸುತ್ತಿವೆ. ಜಿಇ ಇಲ್ಲಿಯವರೆಗೆ ಜಾಗತಿಕವಾಗಿ 1,600 ಕ್ಕಿಂತ ಹೆಚ್ಚು ಎಫ್414 ಎಂಜಿನ್‌ಗಳನ್ನು ವಿತರಿಸಿದೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

  • ಪಾಕಿಸ್ತಾನದ ಮೇಲೆ ಪರಾಕ್ರಮ ಮೆರೆದಿದ್ದ ಭಾರತದ ಮಿಗ್-21 ಫೈಟರ್ ಜೆಟ್ ಸೇನೆಯಿಂದ ನಿವೃತ್ತಿ

    ಪಾಕಿಸ್ತಾನದ ಮೇಲೆ ಪರಾಕ್ರಮ ಮೆರೆದಿದ್ದ ಭಾರತದ ಮಿಗ್-21 ಫೈಟರ್ ಜೆಟ್ ಸೇನೆಯಿಂದ ನಿವೃತ್ತಿ

    ನವದೆಹಲಿ: ಪಾಕಿಸ್ತಾನ (Pakistan) ಶತ್ರು ಪಡೆಗಳ ಮೇಲೆ ಶೌರ್ಯ ಮೆರೆದಿದ್ದ ಮಾಜಿ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ (Abhinandan Varthaman) (ಪ್ರಸ್ತುತ ಗ್ರೂಪ್‌ ಕ್ಯಾಪ್ಟನ್‌) ಅವರ ಮಿಗ್-21 ಬೈಸನ್ ಫೈಟರ್ ಜೆಟ್ (MiG-21 Fighter Jets) ಇದೇ ಸೆಪ್ಟೆಂಬರ್ 30 ರಂದು ಭಾರತೀಯ ವಾಯುಪಡೆಯಿಂದ (Indian Air Force) ನಿವೃತ್ತಿಯಾಗಲಿದೆ.

    ಮಿಗ್-21 ಬೈಸನ್ 1960 ದಶಕದಲ್ಲಿ ಭಾರತೀಯ ವಾಯುಪಡೆಗೆ (IAF) ಸೇರ್ಪಡೆಗೊಳಿಸಲಾಯಿತು. ಆದರೆ 1980ರ ದಶಕಕದಿಂದ 400ಕ್ಕೂ ಹೆಚ್ಚು ಮಿಗ್-21 ಯುದ್ಧ ವಿಮಾನಗಳು ಅಪಘಾತಕ್ಕೀಡಾಗಿವೆ. 200ಕ್ಕೂ ಹೆಚ್ಚು ಪೈಲಟ್‌ಗಳು (Pilots) ಮತ್ತು 60 ನಾಗರಿಕರನ್ನು ಬಲಿ ತೆಗೆದುಕೊಂಡಿವೆ. ಪ್ರಸ್ತುತ 32 ಸ್ಕ್ವಾಡ್ರನ್‌ಗಳಿಗೆ ಇಳಿಕೆಯಾಗಿದೆ. ಭಾರತೀಯ ವಾಯುಪಡೆಯು ಸದ್ಯ 550 ಫೈಟರ್ ಜೆಟ್‌ಗಳ (Fighter Jets) ಸಾಮರ್ಥ್ಯಕ್ಕೆ ಇಳಿದಿದ್ದು, ಇನ್ನೂ 200 ಯುದ್ಧ ವಿಮಾನಗಳ ಕೊರತೆ ಎದುರಿಸುತ್ತಿದೆ. ಇದನ್ನೂ ಓದಿ: ಏರ್‌ಸ್ಟ್ರೈಕ್‌ನಲ್ಲಿ 300 ಉಗ್ರರು ಹತ – ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

    ಸದ್ಯ ಅಭಿನಂದನ್ ವರ್ಧಮಾನ್ ಅವರ ಮಿಗ್-21 ಫೈಟರ್ ಜೆಟ್ (ಶ್ರೀನಗರ ಮೂಲದ ನಂ.51 ಸ್ಕ್ವಾಡ್ರನ್)ಅನ್ನು ಸೆಪ್ಟೆಂಬರ್ 30 ರಂದು ಸೇನೆಯಿಂದ ನಿವೃತ್ತಿಗೊಳಿಸಲಿದ್ದು, 2025ರ ವೇಳೆಗೆ ಹಂತಹಂತವಾಗಿ ಬದಲಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲದೇ 1980 ದಶಕದಲ್ಲಿ ಸೇನೆಗೆ ಸೇರ್ಪಡೆಗೊಂಡ ಜಾಗ್ವಾರ್, ಮಿಗ್-29 ಹಾಗೂ ಮಿರಾಜ್ ನಂತಹ ಯುದ್ಧ ವಿಮಾನಗಳೂ ಹಳೆಯದ್ದಾಗುತ್ತಿದ್ದು, ಅವುಗಳು ಸಹ ಬದಲಾವಣೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 

    ಪಾಕ್ ವಿರುದ್ಧ ಪರಾಕ್ರಮ ಮೆರೆದಿದ್ದ ಅಭಿನಂದನ್:
    2019ರ ಫೆಬ್ರವರಿ 14ರಂದು 40 ಸಿಆರ್‌ಪಿಎಫ್ ಯೋಧರನ್ನು ಬಲಿ ತೆಗೆದುಕೊಂಡಿದ್ದ ಪುಲ್ವಾಮಾ ಉಗ್ರರ ದಾಳಿಗೆ ಪ್ರತಿಕಾರವಾಗಿ ಏರ್‌ಸ್ಟ್ರೈಕ್ ನಡೆಸಿ ಭಾರತ ಪ್ರತಿಕಾರ ತೀರಿಸಿಕೊಂಡಿತ್ತು. ಪಾಕಿಸ್ತಾನದ ಖೈಬರ್ ಪಕ್ತುಂಕ್ವಾ ಪ್ರದೇಶದ ಬಾಲಾಕೋಟ್‌ನಲ್ಲಿ ಜೈಷೆ ಮೊಹಮದ್ ಸಂಘಟನೆಗಳ ಉಗ್ರರ ಶಿಬಿರಗಳ ಮೇಲೆ 2019 ರ ಫೆಬ್ರವರಿ 26 ರಂದು ಭಾರತ ವೈಮಾನಿಕ ದಾಳಿ ನಡೆಸಿತ್ತು.

    ಫೆ.26ರ ನಸುಕಿನ ಜಾವ 3.30 ರಿಂದ 3.55ರ ನಡುವೆ ಪಾಕಿಸ್ತಾನದ ಬಾಲಾಕೋಟ್‌ನಲ್ಲಿದ್ದ ಜೈಷ್ ಉಗ್ರರ ಶಿಬಿರಗಳ ಮೇಲೆ 12 ಮಿರಾಜ್-2000 ಯುದ್ಧ ವಿಮಾನಗಳು ದಾಳಿ ನಡೆಸಿದ್ದವು. ಗಡಿ ನಿಯಂತ್ರಣ ರೇಖೆ ದಾಟಿ ಸುಮಾರು 85 ಕಿಮೀ ಒಳನುಗ್ಗಿ ಭಾರತೀಯ ವಾಯುಪಡೆ ಈ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಸುಮಾರು 300 ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಭಾರತ ತನ್ನ ನೆಲದಲ್ಲಿ ದೊಡ್ಡ ದಾಳಿ ನಡೆಸಿದೆ ಎಂದು ಗೊತ್ತಾದ ತಕ್ಷಣ ಪಾಕ್ ಕೂಡ ಪ್ರತಿ ದಾಳಿ ಮಾಡಿತ್ತು. ಪಾಕ್‌ನ ಪ್ರತಿದಾಳಿಯ ವೇಳೆ ವಿಂಗ್ ಕಮಾಂಡರ್ ಆಗಿದ್ದ ಅಭಿನಂದನ್ ವರ್ಧಮಾನ್ ಅವರು ತಮ್ಮ ಮಿಗ್-21 ರಿಂದ ಪಾಕಿಸ್ತಾನದ ಎಫ್-16 ಜೆಟ್ ವಿಮಾನವನ್ನು ಹೊಡೆದುರುಳಿಸಿದ್ದರು. ಅದಾದ ಬಳಿಕ ಪಾಕಿಸ್ತಾನ ಸೇನೆ ಅಭಿನಂದನ್ ಅವರನ್ನು ಬಂಧಿಸಿ ಮಾರ್ಚ್ 1ರ ಮಧ್ಯರಾತ್ರಿ ಬಿಡುಗಡೆ ಮಾಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಪಾಕ್ ಮೇಲೆ ಬ್ರಹ್ಮೋಸ್ ಕ್ಷಿಪಣಿ ಉಡಾವಣೆ – ವಾಯುಪಡೆಯ ಮೂವರು ಅಧಿಕಾರಿಗಳು ವಜಾ

    ಪಾಕ್ ಮೇಲೆ ಬ್ರಹ್ಮೋಸ್ ಕ್ಷಿಪಣಿ ಉಡಾವಣೆ – ವಾಯುಪಡೆಯ ಮೂವರು ಅಧಿಕಾರಿಗಳು ವಜಾ

    ನವದೆಹಲಿ: ಪ್ರಸಕ್ತ ವರ್ಷದ ಮಾರ್ಚ್‌ 9ರಂದು ಭಾರತದ ಬ್ರಹ್ಮೋಸ್ ಕ್ಷಿಪಣಿಯನ್ನು ಪಾಕಿಸ್ತಾನದ ಮೇಲೆ ಆಕಸ್ಮಿಕವಾಗಿ ಉಡಾಯಿಸಿದ್ದ ಕಾರಣಕ್ಕಾಗಿ ಭಾರತೀಯ ವಾಯುಪಡೆಯ ಮೂವರು ಅಧಿಕಾರಿಗಳನ್ನು ವಜಾಗೊಳಿಸಿದೆ.

    ಭಾರತದ ಸೂಪರ್‌ಸಾನಿಕ್ ಕ್ಷಿಪಣಿ ಆಕಸ್ಮಿಕವಾಗಿ ಪಾಕಿಸ್ತಾನದ ಭೂಪ್ರದೇಶದ ಒಳಗೆ ಹೋಗಿರುವುದನ್ನು ಭಾರತದ ರಕ್ಷಣಾ ಸಚಿವಾಲಯ ಒಪ್ಪಿಕೊಂಡಿತ್ತು. ತಾಂತ್ರಿಕ ಸಮಸ್ಯೆಯಿಂದ ಆಕಸ್ಮಿಕವಾಗಿ ಕ್ಷಿಪಣಿ ಉಡಾವಣೆಯಾಗಿದ್ದು, ಈ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ರಕ್ಷಣಾ ಸಚಿವಾಲಯ ಹೇಳಿತ್ತು. ಜತೆಗೆ ಈ ಘಟನೆಯನ್ನು ಭಾರತ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಉನ್ನತ ಮಟ್ಟದ ಕೋರ್ಟ್‌ ತನಿಖೆಗೆ ಆದೇಶಿತ್ತು. ಇದನ್ನೂ ಓದಿ: ಸೆ.2ರಂದು ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ವಿಕ್ರಾಂತ್‌ ನೌಕಾಪಡೆಗೆ ಅಧಿಕೃತ ಸೇರ್ಪಡೆ

    ಅದರಂತೆ ತನಿಖೆ ನಡೆಸಿ ತಪ್ಪಿತಸ್ಥರೆಂದು ಸಾಬೀತಾದ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆಯ ಗ್ರೂಪ್‌ ಕ್ಯಾಪ್ಟನ್‌, ವಿಂಗ್‌ ಕಮಾಂಡರ್‌ ಹಾಗೂ ಸ್ಕ್ವಾಡ್ರನ್‌ ಲೀಡರ್‌ ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ವಾಯುಪಡೆ ತಿಳಿಸಿದೆ.

    ಪಾಕಿಸ್ತಾನದ ಪ್ರಕಾರ, ಕ್ಷಿಪಣಿಯು ಅಲ್ಲಿನ ವಾಯು ವಲಯದಲ್ಲಿ 100 ಕಿಲೋ ಮೀಟರ್‌ಗೂ ಹೆಚ್ಚು ದೂರ, ಒಳಭಾಗಕ್ಕೆ ಸುಮಾರು 40,000 ಅಡಿಗಳಷ್ಟು ಎತ್ತರದಿಂದ ಅಪ್ಪಳಿಸಿತ್ತು. ಭಾರತದ ಬ್ರಹ್ಮೋಸ್ ಕ್ಷಿಪಣಿಯು ಶಬ್ದದ ಮೂರು ಪಟ್ಟು ವೇಗದಲ್ಲಿ ಹಾರಿತ್ತು. ಕ್ಷಿಪಣಿಯಲ್ಲಿ ಯಾವುದೇ ಸಿಡಿತಲೆ ಇರಲಿಲ್ಲ, ಆದ್ದರಿಂದ ಅದು ಸ್ಫೋಟಿಸಲಿಲ್ಲ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪಾಕಿಸ್ತಾನ ಆಗ್ರಹಿಸಿತ್ತು. ಇದನ್ನೂ ಓದಿ: ಗೋವು ಕಳ್ಳಸಾಗಣೆ ಪ್ರಕರಣ – ಅನುಬ್ರತಾ ಮೊಂಡಲ್‌ಗೆ ಜಾಮೀನು ನೀಡಿ, ಇಲ್ಲವೇ..: ನ್ಯಾಯಾಧೀಶರಿಗೆ ಬೆದರಿಕೆ ಪತ್ರ

    ಭಾರತ ಮತ್ತು ಪಾಕಿಸ್ತಾನ ನಡುವೆ 2005ರಲ್ಲಿ ನಡೆದ ಒಪ್ಪಂದದ ಪ್ರಕಾರ, ಭೂಮಿಯ ಮೇಲ್ಮೈ ಮೇಲ್ಲೈನಿಂದ ಅಥವಾ ಸಮುದ್ರ ಉಡಾವಣಾ ಕ್ಷಿಪಣಿಗಳ ಪರೀಕ್ಷಾರ್ಥ ಪ್ರಯೋಗ ನಡೆಸುವುದಿದ್ದರೆ, ಕನಿಷ್ಠ ಮೂರು ದಿನಗಳ ಮುಂಚೆ ಇನ್ನೊಂದು ದೇಶಕ್ಕೆ ಅದರ ಮಾಹಿತಿ ನೀಡಬೇಕು. ಈ ಬಗ್ಗೆ ಖಂಡಾಂತರ ಕ್ಷಿಪಣಿ ಪರೀಕ್ಷೆಗಳ ಹಾರಾಟದ ಪೂರ್ವ ಅಧಿಸೂಚನೆ ಮಾಡಿಕೊಳ್ಳಲಾಗಿತ್ತು. ಜತೆಗೆ ಉಡಾವಣಾ ಸ್ಥಳಗಳು ಎರಡೂ ದೇಶಗಳ ನಡುವಿನ ಅಂತಾರಾಷ್ಟ್ರೀಯ ಗಡಿ ಅಥವಾ ಎಲ್‌ಒಸಿಯ 40 ಕಿಮೀ ಒಳಗೆ ಇರಬಾರದು ಹಾಗೂ ಅದರ ಪರಿಣಾಮ ಉಂಟಾಗುವ ವಲಯವು 75 ಕಿಮೀ ಒಳಗೆ ಇರಬಾರದು.

    Live Tv
    [brid partner=56869869 player=32851 video=960834 autoplay=true]

  • ಬಿಗಿ ಭದ್ರತೆಯಲ್ಲಿ ನಡೆದ ಮೊದಲ ಅಗ್ನಿಪಥ್ ಏರ್‌ಫೋರ್ಸ್ ನೇಮಕಾತಿ ಪರೀಕ್ಷೆ

    ಬಿಗಿ ಭದ್ರತೆಯಲ್ಲಿ ನಡೆದ ಮೊದಲ ಅಗ್ನಿಪಥ್ ಏರ್‌ಫೋರ್ಸ್ ನೇಮಕಾತಿ ಪರೀಕ್ಷೆ

    ಲಕ್ನೋ: ಕೇಂದ್ರವು ಹೊಸದಾಗಿ ಪ್ರಾರಂಭಿಸಿರುವ ಅಗ್ನಿಪಥ್ ಯೋಜನೆಯಡಿಯಲ್ಲಿ ಭಾರತೀಯ ವಾಯುಪಡೆ(IAF) ಸಿಬ್ಬಂದಿ ಮೊದಲ ಬ್ಯಾಚ್‍ನ ನೇಮಕಾತಿಗಾಗಿ ಪರೀಕ್ಷೆಯು ಭಾನುವಾರ ಯುಪಿಯ ಕಾನ್ಪುರದಲ್ಲಿ ಬಿಗಿ ಪೊಲೀಸ್ ಭದ್ರತೆಯ ನಡುವೆ ನಡೆಯಿತು.

    ದೇಶದಾದ್ಯಂತ ಜುಲೈ 24 ರಿಂದ ಜುಲೈ 31 ರವರೆಗೆ ನಡೆಯಲಿರುವ ಪರೀಕ್ಷೆಯಲ್ಲಿ ನಗರದಿಂದ ಸುಮಾರು 2.5 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಅಗ್ನಿವೀರ್ ಪರೀಕ್ಷೆಗೆ ಒಟ್ಟು 11 ಕೇಂದ್ರಗಳನ್ನು ನಿಗದಿಪಡಿಸಲಾಗಿದ್ದು, ಈ ಪೈಕಿ ಆರು ಕೇಂದ್ರಗಳು ಕಾನ್ಪುರ ಔಟರ್‌ನಲ್ಲಿವೆ. ಪ್ರತಿ ಕೇಂದ್ರದಲ್ಲಿ ಪ್ರತಿ ದಿನ 1,875 ಅಭ್ಯರ್ಥಿಗಳು ಮೂರು ಪಾಳಿಯಲ್ಲಿ ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ. ಇದನ್ನೂ ಓದಿ: 5ನೇ ಮಹಡಿ ಕಿಟಕಿಯಿಂದ ಬೀಳುತ್ತಿದ್ದ 2 ವರ್ಷದ ಕಂದಮ್ಮನನ್ನು ರಕ್ಷಿಸಿದ – ನಮ್ಮ ಹೀರೋ ಎಂದ ನೆಟ್ಟಿಗರು 

    ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು, ವಾಯುಪಡೆಯ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ. ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ಬ್ರಿಜೇಶ್ ಶ್ರೀವಾಸ್ತವ ಈ ಕುರಿತು ಮಾತನಾಡಿದ್ದು, ವಾಯುಪಡೆಯ ಸಹಾಯದಿಂದ ಪರೀಕ್ಷೆಯನ್ನು ಶಾಂತಿಯುತವಾಗಿ ನಡೆಸಲಾಗುತ್ತಿದೆ. ಎಲ್ಲಾ ಕೇಂದ್ರಗಳನ್ನು ಕಟ್ಟುನಿಟ್ಟಾದ ಸಿಸಿಟಿವಿ ಮತ್ತು ಡ್ರೋನ್ ವೀಕ್ಷಣೆಗೆ ಒಳಪಡಿಸಲಾಗಿದೆ. ಎಲ್ಲೆಡೆ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.  ಇದನ್ನೂ ಓದಿ: ಅಗ್ನಿಪಥ್‌ಗೆ ಭರ್ಜರಿ ಪ್ರತಿಕ್ರಿಯೆ – 4 ದಿನಕ್ಕೆ 94 ಸಾವಿರ ಅರ್ಜಿ

    ಭಾರತೀಯ ಯುವಕರಿಗೆ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಕೇಂದ್ರವು ಜೂನ್ 14 ರಂದು ಹೊಸ ಅಲ್ಪಾವಧಿಯ ನೇಮಕಾತಿ ನೀತಿಯನ್ನು ಅನಾವರಣಗೊಳಿಸಿತ್ತು. ಅಗ್ನಿಪಥ್ ಎಂದು ಕರೆಯಲ್ಪಡುವ ಈ ಯೋಜನೆಯು 17.5 ರಿಂದ 21 ವರ್ಷ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ‘ಅಗ್ನಿವೀರರು’ ಎಂದು ಸೇವೆಗೆ ನಿಯೋಜಿಸಲಾಗುವುದು. ಇದನ್ನೂ ಓದಿ: ಭೂಕುಸಿತದ ಕಾರಣ ತಿಳಿಯಲು ವಿಜ್ಞಾನಿಗಳ ನೆರವು: ಬಿ.ಸಿ.ನಾಗೇಶ್

    Live Tv
    [brid partner=56869869 player=32851 video=960834 autoplay=true]

  • ಹೆಲಿಕಾಪ್ಟರ್ ಪತನವಾದ ಸ್ಥಳದಲ್ಲಿ ಶಂಕಿತ ವ್ಯಕ್ತಿ ಅರೆಸ್ಟ್

    ಹೆಲಿಕಾಪ್ಟರ್ ಪತನವಾದ ಸ್ಥಳದಲ್ಲಿ ಶಂಕಿತ ವ್ಯಕ್ತಿ ಅರೆಸ್ಟ್

    ಚೆನ್ನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿಯ ಕೂನೂರಿನಲ್ಲಿ ಪತನಗೊಂಡಿದ್ದು, ರಾವತ್ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನಾ ಸ್ಥಳದಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬನ್ನು  CRPF ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಘಟನೆ ನಡೆದ ಸ್ಥಳ ವೆಲ್ಲಿಂಗ್‍ಟನ್‍ನಿಂದ ಏಳು ಕಿಮೀ ಪರ್ವತ ಪ್ರದೇಶದಲ್ಲಿದೆ ಎಂದು ತಿಳಿದು ಬಂದಿದೆ. ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ 12 ಜನರನ್ನು (ಸೇನಾಧಿಕಾರಿಗಳೂ ಒಳಗೊಂಡಂತೆ) ಹೊತ್ತು ತೆರಳುತ್ತಿತ್ತು. ಇದನ್ನೂ ಓದಿ:  2015ರಲ್ಲಿ ಹೆಲಿಕಾಪ್ಟರ್ ಪತನಗೊಂಡಾಗ ಪಾರಾಗಿದ್ದರು ಬಿಪಿನ್ ರಾವತ್

    ವೆಲ್ಲಿಂಗ್ಟನ್‍ನ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿನಲ್ಲಿ ಇಂದು ಮಧ್ಯಾಹ್ನ ನಡೆಯಲಿದ್ದ ಕೆಡೆಟ್ ಸಂವಾದ ಕಾರ್ಯಕ್ರಮಕ್ಕೆ ಭಾಗವಹಿಸಲು ರಾವತ್ ಸೇರಿ 14 ಮಂದಿ ಹೆಲಿಕಾಪ್ಟರ್‌ನಲ್ಲಿ ಆಗಮಿಸುತ್ತಿದ್ದರು. ಇನ್ನೇನು 10 ಕೀ.ಮೀ. ಇರುವಂತೆ ಮಧ್ಯಾಹ್ನ 12:20ರ ಸುಮಾರಿಗೆ ಹೆಲಿಕಾಪ್ಟರ್ ಮರಕ್ಕೆ ಡಿಕ್ಕಿಯಾಗಿ ಪತನಗೊಂಡಿದೆ. ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದವರಲ್ಲಿ 11 ಮಂದಿ ಸಾವನ್ನಪ್ಪಿ, 3 ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ತೆರಳಿದ್ದಾರೆ.  ಇದನ್ನೂ ಓದಿ: CDS ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ- ಪತ್ನಿ ಸೇರಿ11 ಮಂದಿ ಸಾವು

    ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಪತನಗೊಂಡ ತಮಿಳುನಾಡಿನ ನೀಲಗಿರಿ ಅರಣ್ಯದ ವ್ಯಾಪ್ತಿಯ, ಘಟನಾ ಸ್ಥಳದಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದ ವ್ಯಕ್ತಿಯೊಬ್ಬನನ್ನು CRPF ಕೋಬ್ರಾ ಪಡೆ ಬಂಧಿಸಿದೆ ಎನ್ನಲಾಗಿದೆ. ಸೇನಾಪಡೆಗಳ ಉನ್ನತ ನಾಯಕರೊಬ್ಬರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ಹೇಗಾಯಿತು? ಎನ್ನುವುದರ ಬಗ್ಗೆ ನೆಟ್ಟಿಗರು ಚರ್ಚಿಸುತ್ತಿದ್ದಾರೆ. ಇದನ್ನೂ ಓದಿ: ಬಿಪಿನ್ ರಾವತ್ ಸ್ಥಿತಿ ಗಂಭೀರ – Mi-17 V5 ಹೆಲಿಕಾಪ್ಟರ್ ವಿಶೇಷತೆ ಏನು?

    ಘಟನಾ ಸ್ಥಳದಲ್ಲಿ 11 ಮೃತದೇಹಗಳು ಪತ್ತೆಯಾಗಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಗಂಭೀರವಾಗಿ ಗಾಯಗೊಂಡು ಪತ್ತೆಯಾಗಿರುವ ಮೂವರನ್ನು ನೀಲಗಿರೀಸ್‍ನ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣೆ ಮಾಡಿದವರಲ್ಲಿ ಬಿಪಿನ್ ರಾವತ್ ಕೂಡ ಒಬ್ಬರಾಗಿದ್ದು ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಂದು ಪ್ರಾಥಮಿಕ ಮೂಲಗಳು ತಿಳಿದು ಬಂದಿದೆ. ಇದನ್ನೂ ಓದಿ: ನಿಮಿಷಗಳ ಅಂತರದಲ್ಲಿ ಲ್ಯಾಂಡ್ ಆಗಬೇಕಿದ್ದ Mi-17V5 ಪತನ – 11 ಮಂದಿಯ ಮೃತದೇಹ ಪತ್ತೆ

  • 87ನೇ ವಾಯಪಡೆಯ ದಿನಾಚರಣೆಯಲ್ಲಿ ಭಾಗವಹಿಸಿದ ಕ್ಯಾಪ್ಟನ್ ಸಚಿನ್ ತೆಂಡೂಲ್ಕರ್

    87ನೇ ವಾಯಪಡೆಯ ದಿನಾಚರಣೆಯಲ್ಲಿ ಭಾಗವಹಿಸಿದ ಕ್ಯಾಪ್ಟನ್ ಸಚಿನ್ ತೆಂಡೂಲ್ಕರ್

    ಲಕ್ನೋ: ಇಂದು ಗಾಜಿಯಾಬಾದ್‍ನ ಹಿಂಡನ್ ವಾಯುಪಡೆ ನಿಲ್ದಾಣದಲ್ಲಿ ನಡೆದ ಭಾರತೀಯ ವಾಯುಪಡೆಯ (ಐಎಎಫ್) 87 ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್ ಭಾಗವಹಿಸಿದ್ದರು.

    2010ರ ಸೆಪ್ಟೆಂಬರ್ ನಲ್ಲಿ ಭಾರತೀಯ ವಾಯುಸೇನೆಯಲ್ಲಿ ಗ್ರೂಪ್ ಕ್ಯಾಪ್ಟನ್ ರ‌್ಯಾಂಕ್ ಪಡೆದ ಸಚಿನ್ ಅವರು, ಸಮವಸ್ತ್ರ ಧರಿಸಿ ಪಾಲ್ಗೊಂಡರು. ಇವರ ಜೊತೆಗೆ ಕಳೆದ ತಿಂಗಳು ಅಧಿಕಾರ ವಹಿಸಿಕೊಂಡ ಏರ್ ಚೀಫ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಸೇರಿದಂತೆ ಭಾರತೀಯ ವಾಯುಪಡೆಯ ಹಲವಾರು ಉನ್ನತ ಶ್ರೇಣಿಯ ಅಧಿಕಾರಿಗಳು ಭಾಗವಹಿಸಿದರು.

    ತಮ್ಮ ಪತ್ನಿ ಅಂಜಲಿ ತೆಂಡೂಲ್ಕರ್ ಅವರೊಂದಿಗೆ ಮೆರವಣಿಗೆಗೆ ಆಗಮಿಸಿದ ಸಚಿನ್ ಅವರನ್ನು ವಾಯುಪಡೆಯ ಅಧಿಕಾರಿಗಳು ಸ್ವಾಗತಿಸಿದರು. ಕಳೆದ ವರ್ಷ ನಡೆದ ಭಾರತೀಯ ವಾಯುಪಡೆಯ ದಿನಾಚರಣೆಯ ಸಂದರ್ಭದಲ್ಲೂ ಸಚಿನ್ ಪಾಲ್ಗೊಂಡಿದ್ದರು.

    ಇಂದು ಹಿಂಡನ್ ವಾಯುನೆಲೆಯಲ್ಲಿ ನಡೆಯುವ ವಾಯುಪಡೆಯ ದಿನದ ಮೆರವಣಿಗೆಯಲ್ಲಿ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮನ್ ಮಿಗ್ ಬೈಸನ್ ವಿಮಾನವನ್ನು ಹಾರಿಸಿದ್ದಾರೆ. ಇದರ ಜೊತೆಗೆ ಈ ವರ್ಷದ ಆರಂಭದಲ್ಲಿ ಫೆಬ್ರವರಿ 26 ರಂದು ಭಾರತೀಯ ವಾಯುಪಡೆಯು ನಡೆಸಿದ ಬಾಲಕೋಟ್ ವೈಮಾನಿಕ ದಾಳಿಯ ಭಾಗವಾಗಿದ್ದ ಎಲ್ಲ ಏರ್ ಫೈಟರ್ ಪೈಲಟ್‍ಗಳು ಈ ದಿನ ತಮ್ಮ ವಿಮಾನಗಳನ್ನು ಹಾರಿಸಲಿದ್ದಾರೆ.

    ವಾಯುಪಡೆಯ ಮುಖ್ಯಸ್ಥ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಮಾತನಾಡಿ, ನಮ್ಮ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ವಾಯುಪಡೆ ಕೃತಜ್ಞವಾಗಿದೆ. ನಾವು ನಮ್ಮ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಹೋರಾಡುತ್ತೇವೆ. ನಾನು ನಮ್ಮ ವಾಯು ಪಡೆಯ ಯೋಧರ ಪರವಾಗಿ ನಮ್ಮ ರಾಷ್ಟ್ರಕ್ಕೆ ಈ ಭರವಸೆ ನೀಡುತ್ತೇನೆ ಎಂದು ತಿಳಿಸಿದರು.

    ವಿಶ್ವ ಕ್ರಿಕೆಟ್‍ನಲ್ಲೇ ವಿಶ್ವ ದಾಖಲೆಯನ್ನು ನಿರ್ಮಿಸಿರುವ ಸಚಿನ್ ತೆಡೂಲ್ಕರ್ ಅವರಿಗೆ, 1994 ರಲ್ಲಿ ಅರ್ಜುನ ಪ್ರಶಸ್ತಿ, ರಾಜೀವ್ ಗಾಂಧಿ ಖೇಲ್ ರತ್ನ (1997-98), ಪದ್ಮಶ್ರೀ (1999) ಮತ್ತು 2008 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗಳನ್ನು ಭಾರತ ಸರ್ಕಾರ ನೀಡಿದೆ.

  • ನಾವು ಬಾಲಕೋಟ್ ರೀತಿಯ ಇನ್ನೊಂದು ವೈಮಾನಿಕ ದಾಳಿಗೆ ಸಿದ್ಧ: ಐಎಎಫ್ ಮುಖ್ಯಸ್ಥ ಭದೌರಿಯಾ

    ನಾವು ಬಾಲಕೋಟ್ ರೀತಿಯ ಇನ್ನೊಂದು ವೈಮಾನಿಕ ದಾಳಿಗೆ ಸಿದ್ಧ: ಐಎಎಫ್ ಮುಖ್ಯಸ್ಥ ಭದೌರಿಯಾ

    ನವದೆಹಲಿ: ನಾವು ಬಾಲಕೋಟ್ ರೀತಿಯ ಇನ್ನೊಂದು ವೈಮಾನಿಕ ದಾಳಿಗೆ ಸಿದ್ಧವಿದ್ದೇವೆ ಎಂದು ಭಾರತೀಯ ವಾಯುಪಡೆ ನೂತನ ಮುಖ್ಯಸ್ಥ ಆರ್.ಕೆ.ಎಸ್ ಭದೌರಿಯಾ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಬಿ.ಎಸ್ ಧನೋವಾ ಅವರು ಇಂದು ನಿವೃತ್ತಿ ಹೊಂದಿದ ಬಳಿಕ ಅಧಿಕಾರ ವಹಿಸಿಕೊಂಡ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ, ಭವಿಷ್ಯದಲ್ಲಿ ಬಾಲಕೋಟ್ ರೀತಿಯ ದಾಳಿಗೆ ಭಾರತೀಯ ವಾಯುಪಡೆ ಸಿದ್ಧವಿದೆ ಎಂದು ಹೇಳಿದರು.

    ಅಧಿಕಾರ ವಹಿಸಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮುಂದಿನ ಸವಾಲಿಗೆ ತಯಾರಾಗಿದ್ದೇವೆ. ಯಾವುದೇ ಬೆದರಿಕೆಗೆ ಹೆದುರುವುದಿಲ್ಲ ಎಂದರು. ಇದೇ ವೇಳೆ ಫೆಬ್ರವರಿಯಲ್ಲಿ ನಡೆದ ಬಾಲಕೋಟ್ ವೈಮಾನಿಕ ದಾಳಿಯಲ್ಲಿ ನಾಶವಾಗಿದ್ದ ಜೈಶ್-ಇ-ಮೊಹಮ್ಮದ್ ಉಗ್ರರ ಸಂಘಟನೆಯ ಕ್ಯಾಪ್ ಮತ್ತೆ ಸಕ್ರಿಯವಾಗಿದೆ ಎಂಬ ವಿಚಾರದ ಬಗ್ಗೆ ಕೇಳಿದಾಗ, ನಮಗೆ ಈ ವಿಚಾರದ ಬಗ್ಗೆ ಮಾಹಿತಿ ಸಿಕ್ಕಿದೆ ಅಗತ್ಯವಿದ್ದಾಗ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

    ನನ್ನ ಮೊದಲ ಆದ್ಯತೆ ಬಜೆಟ್ ಅನ್ನು ಗಮನದಲ್ಲಿ ಇಟ್ಟುಕೊಂಡು ಎಲ್ಲ ಜೆಟ್‍ಗಳನ್ನು ಅಧುನೀಕರಣ ಮತ್ತು ಸಾಮರ್ಥ್ಯವನ್ನು ಹೆಚ್ಚಿಸುವುದು. ನಮ್ಮ ಕಾರ್ಯಾಚರಣೆಗಳಲ್ಲಿ ರಫೇಲ್ ವಿಮಾನ ಮುಖ್ಯ ಪಾತ್ರ ವಹಿಸಲಿದೆ. ಈ ಜೆಟ್ ಚೀನಾ ಮತ್ತು ಪಾಕಿಸ್ತಾನದ ನಿದ್ದೆಗೆಡಿಸಲಿದೆ ಎಂದು ಹೇಳಿದರು. ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಪರುಮಾಣು ದಾಳಿಯ ವಿಚಾರದ ಬಗ್ಗೆ ಮಾತನಾಡಿದ ಅವರು, ಅದು ಅವರ ತಿಳುವಳಿಕೆ ಬಿಟ್ಟದ್ದು, ನಮಗೆ ನಮ್ಮದೇ ಆದ ಯೋಜನೆಗಳಿವೆ. ನಾವು ಯಾವುದೇ ಸಾವಲನ್ನು ಯಾವುದೇ ಸಮಯದಲ್ಲಾದರು ಎದುರಿಸಲು ಸಿದ್ಧವಿದ್ದೇವೆ ಎಂದು ತಿಳಿಸಿದರು.

    https://twitter.com/IAF_MCC/status/1178533186931806209

    ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾದ ಏರ್ ಮಾರ್ಷಲ್ ಭದೌರಿಯಾ ಅವರನ್ನು ಜೂನ್ 1980 ರಲ್ಲಿ ಐಎಎಫ್‍ನ ಫೈಟರ್ ಸ್ಟ್ರೀಮ್‍ನಲ್ಲಿ ನಿಯೋಜನೆ ಮಾಡಲಾಯಿತು. ಅವರು 39 ವರ್ಷಗಳ ಸೇವೆಯಲ್ಲಿ ವಿವಿಧ ಕಮಾಂಡ್, ಸಿಬ್ಬಂದಿ ಮತ್ತು ಸೂಚನಾ ನೇಮಕಾತಿಗಳು ಕೆಲಸವನ್ನು ನಿರ್ವಹಿಸಿದ್ದಾರೆ. ಇಂದು ಭಾರತೀಯ ವಾಯುಪಡೆಯ ಏರ್ ಮಾರ್ಷಲ್ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

    ಭದೌರಿಯಾ ಅವರು ಪರಮ ವಿಶಿಷ್ಟ ಸೇವಾ ಮೆಡಲ್, ಅತಿ ವಿಶಿಷ್ಟ ಸೇವಾ ಮೆಡಲ್, ವಾಯು ಸೇನಾ ಮೆಡಲ್ ಪಡೆದಿದ್ದಾರೆ. ಎಡಿಸಿಯ ಸುಪ್ರೀಂ ಕಮಾಂಡರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಭಡೌರಿಯಾ ಅವರು ಈ ವರೆಗೆ 4,250 ಗಂಟೆಗೂ ಹೆಚ್ಚು ಕಾಲ ವಿಮಾನ ಹಾರಾಟ ನಡೆಸಿದ್ದಾರೆ. ಒಟ್ಟು 26 ವಿವಿಧ ಯುದ್ಧ ವಿಮಾನಗಳು ಹಾಗೂ ಸಾಗಣಿಕಾ ವಿಮಾನಗಳಲ್ಲಿ ಹಾರಾಟ ನಡೆಸಿದ್ದಾರೆ. ಅಲ್ಲದೆ, ಪ್ರಾಯೋಗಿಕ ಪರೀಕ್ಷಾ ಪೈಲೆಟ್, ಕ್ಯಾಟ್ `ಎ’ ಅರ್ಹ ಫ್ಲೈಯಿಂಗ್ ಇನ್‍ಸ್ಟ್ರಕ್ಟರ್ ಹಾಗೂ ಪೈಲೆಟ್ ಅಟ್ಯಾಕ್ ಇನ್‍ಸ್ಟ್ರಕ್ಟರ್ ಅನುಭವ ಹೊಂದಿದ್ದಾರೆ. ಈ ಹಿಂದೆ ಫ್ರೆಂಚ್ ವಾಯುಪಡೆಯ ಮಾಂಟ್-ಡಿ-ಮಾರ್ಸನ್ ವಾಯುನೆಲೆಯಲ್ಲಿ ರಫೇಲ್ ವಿಮಾನವನ್ನು ಸಹ ಭಡೌರಿಯಾ ಹಾರಿಸಿದ್ದರು. ಬೆಂಗಳೂರಿನ ಮಾಜಿ ಚೀಫ್ ಟ್ರೇನಿಂಗ್ ಕಮಾಂಡರ್ ಆಗಿಯೂ ಭದೌರಿಯಾ ಕರ್ತವ್ಯ ನಿರ್ವಹಿಸಿದ್ದರು.

  • ವಾಯುಸೇನೆಯಿಂದ ಇತಿಹಾಸ – ವಿದೇಶಾಂಗ ಇಲಾಖೆಯ ಉನ್ನತ ಹುದ್ದೆ ಅಲಂಕರಿಸಿದ ಮಹಿಳಾ ವಿಂಗ್ ಕಮಾಂಡರ್

    ವಾಯುಸೇನೆಯಿಂದ ಇತಿಹಾಸ – ವಿದೇಶಾಂಗ ಇಲಾಖೆಯ ಉನ್ನತ ಹುದ್ದೆ ಅಲಂಕರಿಸಿದ ಮಹಿಳಾ ವಿಂಗ್ ಕಮಾಂಡರ್

    ನವದೆಹಲಿ: ಭಾರತೀಯ ವಾಯುಪಡೆಯ ಮಹಿಳಾ ವಿಂಗ್ ಕಮಾಂಡರ್ ಅಂಜಲಿ ಸಿಂಗ್ ಅವರು ರಷ್ಯಾದ ಮಾಸ್ಕೊದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಡೆಪ್ಯೂಟಿ ಏರ್ ಅಟ್ಯಾಚೆ ಸೇವೆಗೆ ನಿಯೋಜನೆಗೊಂಡಿದ್ದಾರೆ. ಈ ಮೂಲಕ ವಿದೇಶಿ ಸೇವೆಗೆ ನೇಮಕವಾದ ಭಾರತದ ಮೊದಲ ಸೇನಾ ಮಹಿಳೆ ಎಂಬ ಕೀರ್ತಿಗೆ ಪಾತ್ರವಾಗಿದ್ದಾರೆ.

    ಡೆಪ್ಯೂಟಿ ಏರ್ ಅಟ್ಯಾಚೆ ಸೇವೆಗೆ ನೇಮಕವಾದ ಅಧಿಕಾರಿ ವಿದೇಶಗಳಲ್ಲಿರುವ ಭಾರತೀಯ ರಾಯಭಾರಿ ಕಚೇರಿಗಳಲ್ಲಿ ರಕ್ಷಣಾ ವ್ಯವಹಾರಗಳನ್ನು ನೋಡಿಕೊಳ್ಳುತ್ತಾರೆ. ಇಂತಹ ಉನ್ನತ ಹುದ್ದೆಗೆ ನೇಮಕವಾದ ಮೊದಲ ಮಹಿಳಾ ಕಮಾಂಡರ್ ಆಗಿ ಅಂಜಲಿ ಅವರು ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಇಲ್ಲಿಯವರೆಗೂ ಈ ಹುದ್ದೆಗೆ ಭಾರತದ ಮೂರೂ ಶಸಸ್ತ್ರ ಪಡೆಗಳಲ್ಲಿ ಪುರುಷ ಅಧಿಕಾರಿಗಳನ್ನೇ ನೇಮಕ ಮಾಡಲಾಗುತ್ತಿತ್ತು.

    ಈ ಬಾರಿ ಈ ಸಂಪ್ರದಾಯವನ್ನು ವಾಯುಪಡೆ ಮುರಿದು ಮೊದಲ ಬಾರಿಗೆ ಮಹಿಳಾ ಅಧಿಕಾರಿಯನ್ನು ನೇಮಿಸಿದೆ. ಈ ಮೂಲಕ ಅಂಜಲಿ ಅವರಿಗೆ ವಿದೇಶದಲ್ಲಿ ದೇಶದ ಪರವಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ.

    ಸೆ. 10ರಂದು ಅಂಜಲಿ ಸಿಂಗ್ ಅವರು ಮಾಸ್ಕೊದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಡೆಪ್ಯೂಟಿ ಏರ್ ಅಟ್ಯಾಚೆ ಹುದ್ದೆಗೆ ಸೇರಿದ್ದಾರೆ. ವಿದೇಶದಲ್ಲಿರುವ ಭಾರತೀಯ ಕಾರ್ಯಾಚರಣೆಗಳಲ್ಲಿ ಮಿಲಿಟರಿ ರಾಜತಾಂತ್ರಿಕರಾಗಿ ನೇಮಕಗೊಂಡ ಭಾರತದ ಮೊದಲ ಮಹಿಳಾ ಸಶಸ್ತ್ರ ಪಡೆ ಅಧಿಕಾರಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ ಎಂದು ಭಾರತೀಯ ರಾಯಭಾರ ಕಚೇರಿ ಟ್ವೀಟ್ ಮಾಡಿದೆ.

    ಮಿಗ್-29 ಯುದ್ಧ ವಿಮಾನ ಹಾರಾಟದ ತರಬೇತಿ ಪಡೆದಿರುವ ಅಂಜಲಿ ಅವರು, ಏರೋನಾಟಿಕಲ್ ಎಂಜಿನಿಯರ್ ಅಧಿಕಾರಿಯಾಗಿ 17 ವರ್ಷಗಳ ಸೇವಾ ಅನುಭವವನ್ನು ಹೊಂದಿದ್ದಾರೆ.