Tag: ಭಾರತೀಯ ವಾಯು ಪಡೆ

  • ಸೈನಿಕರ ಮೇಲೆ ದಾಳಿ – ಇಬ್ಬರು ಪಾಕ್ ಉಗ್ರರ ತಲೆಗೆ 20 ಲಕ್ಷ ಬಹುಮಾನ ಘೋಷಿಸಿದ IAF

    ಸೈನಿಕರ ಮೇಲೆ ದಾಳಿ – ಇಬ್ಬರು ಪಾಕ್ ಉಗ್ರರ ತಲೆಗೆ 20 ಲಕ್ಷ ಬಹುಮಾನ ಘೋಷಿಸಿದ IAF

    ಶ್ರೀನಗರ: ಇತ್ತೀಚೆಗೆ ಪೂಂಚ್‌ನಲ್ಲಿ ಭಾರತೀಯ ವಾಯುಪಡೆಯ ವಾಹನದ ಮೇಲೆ ನಡೆದ ದಾಳಿಗೆ ಹೊಣೆಗಾರರಾಗಿರುವ ಇಬ್ಬರು ಪಾಕಿಸ್ತಾನಿ (Pakistan) ಭಯೋತ್ಪಾದಕರ ರೇಖಾಚಿತ್ರಗಳನ್ನು ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪಡೆ ಬಹಿರಂಗಪಡಿಸಿದೆ.

    ಶಂಕಿತ ಉಗ್ರರ ಬಂಧನಕ್ಕೆ ನೆರವಾಗುವ ಯಾವುದೇ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಭದ್ರತಾ ಪಡೆ (Indian Air Force) ಘೋಷಿಸಿದೆ. ಇದನ್ನೂ ಓದಿ: ಪಾಕಿಸ್ತಾನ ಕೈಗೆ ಬಳೆ ತೊಟ್ಟಿಲ್ಲ- ಫಾರೂಖ್ ಅಬ್ದುಲ್ಲ ವಿವಾದಾತ್ಮಕ ಹೇಳಿಕೆ

    ಶನಿವಾರ ಸಂಜೆ ಪೂಂಚ್‌ನ ಶಾಸಿತಾರ್ ಬಳಿ ಐಎಎಫ್ (IAF) ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಐಎಎಫ್ ಕಾರ್ಪೋರಲ್ ವಿಕ್ಕಿ ಪಹಾಡೆ ಪ್ರಾಣ ಕಳೆದುಕೊಂಡಿದ್ದರು. ಅಲ್ಲದೇ ಘಟನೆಯಲ್ಲಿ ನಾಲ್ವರು ಸೈನಿಕರು ಗಾಯಗೊಂಡಿದ್ದರು. ದಾಳಿಯ ಬಳಿಕ ಶಾಸಿತಾರ್ ಪ್ರದೇಶದಲ್ಲಿ ಸಶಸ್ತ್ರ ಪಡೆಗಳು ಸಶಸ್ತ್ರ ಪಡೆಗಳು ಮಹತ್ವದ ಶೋಧ ಕಾರ್ಯಾಚರಣೆ ನಡೆಸಿದವು. ಇದನ್ನೂ ಓದಿ: ವಾಯುಸೇನೆಯ ವಾಹನದ ಮೇಲೆ ಉಗ್ರರ ದಾಳಿ – ಹಲವರನ್ನು ವಶಕ್ಕೆ ಪಡೆದ ಸೇನೆ

    ದಾಳಿಯಲ್ಲಿ ದುರಂತವಾಗಿ ಪ್ರಾಣ ಕಳೆದುಕೊಂಡ ವಿಕ್ಕಿ ಪಹಾಡೆ, ತನ್ನ ಸಹೋದರಿಯ ಮದುವೆಗೆ 15 ದಿನಗಳ ರಜೆ ತೆಗೆದುಕೊಂಡಿದ್ದು, ಬಳಿಕ ಕೆಲಸಕ್ಕೆ ಬಂದಿದ್ದರು. ಮಧ್ಯಪ್ರದೇಶದ ಚಿಂದ್ವಾರದ ನೋನಿಯಾ ಕರ್ಬಲ್ ಪ್ರದೇಶದ ಪಹಾಡೆಯವರು ಜಮ್ಮು ಮತ್ತು ಕಾಶ್ಮೀರದಲ್ಲಿ ನೆಲೆಸಿದ್ದರು. 2011 ರಲ್ಲಿ ಭಾರತೀಯ ವಾಯುಪಡೆಗೆ ಸೇರಿದ ಅವರು ತಮ್ಮ ಪತ್ನಿ ರೀನಾ ಮತ್ತು ಮಗ ಹಾರ್ದಿಕ್ ಅವರನ್ನು ಅಗಲಿದ್ದಾರೆ.

    ಸಹೋದರಿ ಗೀತಾ ಪಹಾಡೆ ಅವರು ತಮ್ಮ ಸಹೋದರನ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ನನಗೆ ನನ್ನ ಸಹೋದರನ ಬಗ್ಗೆ ಹೆಮ್ಮೆ ಇದೆ. ನಿನ್ನೆ ಮೊನ್ನೆಯಷ್ಟೇ ಸಹೋದರನ ನಿಧನ ಬಗ್ಗೆ ನನಗೆ ತಿಳಿದಿತ್ತು. ನನ್ನ ಸಹೋದರನಿಗೆ ನ್ಯಾಯ ಬೇಕು ಎಂದು ಹೇಳಿದರು.

  • ಅಭಿನಂದನ್‍ರನ್ನು ಬಿಡುಗಡೆ ಮಾಡದಿದ್ರೆ ಪಾಕ್ ಬ್ರಿಗೇಡ್‍ಗಳು ಧ್ವಂಸ ಆಗ್ತಿತ್ತು – ಧನೋವಾ

    ಅಭಿನಂದನ್‍ರನ್ನು ಬಿಡುಗಡೆ ಮಾಡದಿದ್ರೆ ಪಾಕ್ ಬ್ರಿಗೇಡ್‍ಗಳು ಧ್ವಂಸ ಆಗ್ತಿತ್ತು – ಧನೋವಾ

    – ಅಭಿನಂದನ್ ತಂದೆಗೆ ಧೈರ್ಯ ತುಂಬಿದ್ದ ಮಾಜಿ ವಾಯು ಸೇನಾ ಮುಖ್ಯಸ್ಥ
    – ನಮ್ಮ ಶಕ್ತಿಯ ಅರಿವು ಪಾಕಿಗೆ ತಿಳಿದಿತ್ತು

    ನವದೆಹಲಿ: ಭಾರತೀಯ ವಾಯು ಸೇನೆಯ ಪೈಲಟ್ ಅಭಿನಂದನ್ ವಿಚಾರದಲ್ಲಿ ಪಾಕಿಸ್ತಾನಕ್ಕೆ ಢವ ಢವ ಶುರುವಾಗಿತ್ತು. ಸೇನಾ ಮುಖ್ಯಸ್ಥರ ಕೈ, ಕಾಲು ನಡುಗುತ್ತಿತ್ತು ಎಂಬ ವಿಚಾರವನ್ನು ಸ್ವತಃ ಪಾಕ್ ಸಂಸದ ಸಂಸತ್‍ನಲ್ಲಿ ಬಿಚ್ಚಿಟಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ವಾಯು ಸೇನೆಯ ನಿವೃತ್ತ ಮುಖ್ಯಸ್ಥ ಬಿ.ಎಸ್.ಧನೋವಾ ಈ ಕುರಿತು ಮಾತನಾಡಿದ್ದು, ಒಂದು ವೇಳೆ ಅಭಿನಂದನ್ ಅವರನ್ನು ಬಿಡುಗಡೆ ಮಾಡದಿದ್ದಲ್ಲಿ ಪಾಕಿಸ್ತಾನದ ಬ್ರಿಗೇಡ್‍ಗಳನ್ನೇ ಧ್ವಂಸ ಮಾಡುತ್ತಿದ್ದೆವು ಎಂದು ಹೇಳಿದ್ದಾರೆ.

    ಪಾಕಿಸ್ತಾನ ಸಂಸದರ ಹೇಳಿಕೆ ಬೆನ್ನಲ್ಲೇ ಮಾತನಾಡಿರುವ ಧನೋವಾ, ಅಭಿನಂದನ್ ಪಾಕಿಸ್ತಾನದಲ್ಲಿ ಸೆರೆಯಾದಾಗ ನಾನು ಅವರ ತಂದೆಗೆ ಧೈರ್ಯ ತುಂಬಿದ್ದೆ. ಖಂಡಿತವಾಗಿಯೂ ನಾವು ಅಭಿನಂದನ್ ಅವರನ್ನು ಮರಳಿ ಕರೆ ತರುತ್ತೇವೆ ಎಂದು ಹೇಳಿದ್ದೆ ಎಂದು ಅವರು ತಿಳಿಸಿದ್ದಾರೆ.

    ಇದೀಗ ಪಾಕಿಸ್ತಾನ ಸಂಸದರ ಹೇಳಿಕೆಯನ್ನು ಗಮನಿಸಿದರೆ ನಮ್ಮ ಸೇನೆ ಎಷ್ಟು ಆಕ್ರಮಣಕಾರಿಯಾಗಿದೆ ಎಂಬುದನ್ನು ತಿಳಿಯಬಹುದು. ಪಾಕಿಸ್ತಾನದ ಫಾರ್ವರ್ಡ್ ಬ್ರಿಗೇಡ್‍ಗಳನ್ನು ಧ್ವಂಸ ಮಾಡಲು ನಾವು ಆಗಲೇ ಸಿದ್ಧತೆ ನಡೆಸಿದ್ದೆವು. ನಮ್ಮ ಸಾಮರ್ಥ್ಯ ಏನೆಂದು ಅವರಿಗೆ ತಿಳಿದಿದೆ ಎಂದು ಧನೋವಾ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಆರ್ 73 ಸೆಲೆಕ್ಟ್ ಮಾಡಿದ್ದೇನೆ : ಅಭಿನಂದನ್ ಕೊನೆಯ ರೇಡಿಯೋ ಸಂದೇಶ – ಡಾಗ್ ಫೈಟ್ ಹೇಗೆ ನಡೆಯಿತು?

    ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಹ ಸರಣಿ ಟ್ವೀಟ್ ಮಾಡಿ ಕಾಂಗ್ರೆಸ್ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ. ನಮ್ಮ ಭಾರತೀಯ ಸೇನೆ ಶಕ್ತಿ ಕುರಿತು ವಿರೋಧ ಪಕ್ಷಗಳಿಗೆ ಅರಿವಿಲ್ಲ. ಕಾಂಗ್ರೆಸ್ ಪಕ್ಷ ನಮ್ಮ ಸಶಸ್ತ್ರ ಪಡೆಗಳನ್ನು ದುರ್ಬಲವಾಗಿಸುವ ಅಭಿಯಾನ ನಡೆಸಿದೆ. ನಮ್ಮ ಸಶಸ್ತ್ರ ಪಡೆಗಳ ಕುರಿತು ಅಪಹಾಸ್ಯ ಮಾಡಿದ್ದಾರೆ. ಅವರ ಶೌರ್ಯವನ್ನು ಪ್ರಶ್ನಿಸಿದ್ದಾರೆ. ಇತ್ತೀಚೆಗೆ ರಫೇಲ್ ಯುದ್ಧ ವಿಮಾನ ಖರೀದಿಯನ್ನು ತಡೆಯಲು ಸಹ ಪ್ರತಿಯೊಂದು ತಂತ್ರವನ್ನು ಮಾಡಿದರು. ಆದರೆ ಜನ ಅಂತಹ ರಾಜಕೀಯವನ್ನು ತಿರಸ್ಕರಿಸಿ ಕಾಂಗ್ರೆಸ್‍ನ್ನು ಶಿಕ್ಷಿಸಿದರು ಎಂದು ಹರಿಹಯ್ದಿದ್ದಾರೆ.

    ಕಾಂಗ್ರೆಸ್ ಭಾರತದ ರಾಜತಾಂತ್ರಿಕತೆಯನ್ನು ನಂಬುವುದಿಲ್ಲ. ಅದು ಸೈನ್ಯವಾಗಲಿ, ನಮ್ಮ ಸರ್ಕಾರವನ್ನಾಗಲೀ, ನಮ್ಮ ಜನರನ್ನೇ ಆಗಲಿ ಯಾವುದನ್ನೂ ನಂಬುವುದಿಲ್ಲ. ಪಾಕಿಸ್ತಾನ ಅವರ ‘ಅತ್ಯಂತ ವಿಶ್ವಾಸಾರ್ಹ ರಾಷ್ಟ್ರವಾಗಿದೆ’. ಆಶಾದಾಯಕ ಬೆಳವಣಿಗೆ ಎಂಬಂತೆ ಅವರು ಈಗ ಬೆಳಕು ನೋಡುತ್ತಿದ್ದಾರೆ ಎಂದು ರಾಹುಲ್ ಗಾಂಧಿಗೆ ಟಾಂಗ್ ನೀಡಿದರು. ಇದನ್ನೂ ಓದಿ: ಅಭಿನಂದನ್‍ಗೆ ಮಾರ್ಗದರ್ಶನ ನೀಡಿದ್ದ ಐಎಎಫ್ ಮಹಿಳಾ ನಿಯಂತ್ರಕಿಗೆ ಯುಧ್ ಸೇವಾ ಪದಕ

    ಪಾಕ್ ಸಂಸದ ಹೇಳಿದ್ದೇನು?
    ಬುಧವಾರ ಸಂಸತ್ತಿನಲ್ಲಿ ಮಾತನಾಡಿರುವ ಪಾಕಿಸ್ತಾನ ಮುಸ್ಲಿಂ ಲೀಗ್ ಎನ್ ಪಕ್ಷದ ಮುಖ್ಯಸ್ಥ, ಸಂಸದ ಅಯಾಜ್ ಸಾದಿಕ್, ಪಾಕಿಸ್ತಾನ ಅಭಿನಂದನ್ ಅವರನ್ನು ಬಿಡುಗಡೆ ಮಾಡದಿದ್ದರೆ ಆ ರಾತ್ರಿ 9 ಗಂಟೆ ವೇಳೆಗೆ ಭಾರತ ಪಾಕಿಸ್ತಾನ ಮೇಲೆ ದಾಳಿ ಮಾಡುತ್ತದೆ ಎಂದು ವಿದೇಶಾಂಗ ಸಚಿವ ಖುರೇಷಿ ಬಂದು ಬೇಡಿಕೊಂಡಿದ್ದರು ಎಂದು ಮಾತನಾಡಿರುವ ಬಗ್ಗೆ ಅಲ್ಲಿನ ಮಾಧ್ಯಮವೊಂದು ವರದಿ ಮಾಡಿದೆ.


    ಪ್ರಮುಖ ಸಭೆಯಲ್ಲಿದ್ದ ಸೇನಾ ಮುಖ್ಯಸ್ಥ ಜನಲರ್ ಬಾಜ್ವಾ, ವಿರೋಧ ಪಕ್ಷ ನಾಯಕರು, ಸಂಸತ್ ಸದಸ್ಯರು ಸೇರಿದಂತೆ ಎಲ್ಲರೂ ಅಭಿನಂದನ್ ಅವರನ್ನು ಬಿಡುಗಡೆ ಮಾಡಲು ಹೇಳಿದ್ದರು. ಸಭೆಯಲ್ಲಿ ಭಾಗಿಯಾಗಲು ಇಮ್ರಾನ್ ಖಾನ್ ನಿರಾಕರಿಸಿದ್ದರು. ಈ ವೇಳೆ ಸೇನಾ ಮುಖ್ಯಸ್ಥ ಜನಲರ್ ಬಾಜ್ವಾ ಕೋಣೆಗೆ ಬಂದರು. ಅವರ ಕಾಲುಗಳು ನಡುಗುತ್ತಿದ್ದವು, ಅವರು ಬೆವರುತ್ತಿದ್ದರು. ವಿದೇಶಾಂಗ ಸಚಿವರು ದೇವರ ಸಲುವಾಗಿ ಅವರನ್ನು ಬಿಡಲಿ, ಭಾರತ ರಾತ್ರಿ 9 ಗಂಟೆಗೆ ದಾಳಿ ಮಾಡಲಿದೆ ಎಂದಿದ್ದರು ಎಂದು ಸಾದಿಕ್ ಅಂದಿನ ಘಟನೆಯ ಬಗ್ಗೆ ಬಿಚ್ಚಿಟ್ಟಿದ್ದಾರೆ. ಅಲ್ಲದೆ ಮೊದಲು ಅಭಿನಂದನ್ ಸೇರಿದಂತೆ ಎಲ್ಲ ವಿಷಯಗಳಲ್ಲಿ ಸರ್ಕಾರದ ಬೆಂಬಲಕ್ಕೆ ನಿಲ್ಲುತ್ತೇವೆ ಎಂದಿದ್ದ ಪ್ರತಿಪಕ್ಷಗಳು ಮತ್ತೆ ಬೆಂಬಲಿಸಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.

    ಅಭಿನಂದನ್ ಸೆರೆಯಾಗಿದ್ದು ಹೇಗೆ?
    2019ರ ಫೆ. 14ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‍ಪಿಎಫ್ ಯೋಧರಿದ್ದ ಬಸ್ಸಿನ ಮೇಲೆ ಜೈಷ್ ಉಗ್ರನೊಬ್ಬ ಆತ್ಮಾಹುತಿ ದಾಳಿ ನಡೆಸಿದ್ದ. ಈ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ವಾಯು ಪಡೆ ಪಾಕಿಸ್ತಾನದ ಬಾಲಕೋಟ್‍ನಲ್ಲಿ ಜೈಷ್ ಉಗ್ರರ ನೆಲೆಗಳ ಮೇಲೆ ಏರ್ ಸ್ಟ್ರೈಕ್ ನಡೆಸಿ ಉಗ್ರರನ್ನು ಸದೆಬಡೆದಿತ್ತು.

    ಬಾಲಾಕೋಟ್ ಏರ್ ಸ್ಟ್ರೈಕ್ ನಂತರ ಪಾಕಿಸ್ತಾನ ಫೆ.27 ರಂದು ತನ್ನ ಎಫ್-16 ಯುದ್ಧ ವಿಮಾನದ ಮೂಲಕ ಭಾರತವನ್ನು ಗುರಿಯಾಗಿಸಿಕೊಂಡು ವಾಯು ದಾಳಿ ನಡೆಸಿದ ಸಂದರ್ಭದಲ್ಲಿ ಅಭಿನಂದನ್ ಮಿಗ್-21 ವಿಮಾನದ ಮೂಲಕ ಪಾಕ್ ವಿಮಾನವನ್ನು ಹೊಡೆದುರುಳಿಸಿದ್ದರು. ಈ ವೇಳೆ ಅಭಿನಂದನ್ ಅವರ ಮಿಗ್-21 ವಿಮಾನ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪತನಗೊಂಡಿತ್ತು. ಆಗ ಸುಮಾರು 58 ಗಂಟೆಗಳ ಕಾಲ ಅಭಿನಂದನ್ ಪಾಕಿಸ್ತಾನದ ಕಸ್ಟಡಿಯಲ್ಲೇ ಇದ್ದರು. ನಂತರ ಕೇಂದ್ರ ಸರ್ಕಾರ ಪಾಕ್ ಮೇಲೆ ಒತ್ತಡ ಹೇರಿ ಅಭಿನಂದನ್ ಅವರನ್ನು ಬಿಡಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿತ್ತು.

  • ಮಿಗ್ 21 ಯುದ್ಧ ವಿಮಾನದಲ್ಲಿ ಮಿಂಚಿದ ಅಭಿನಂದನ್

    ಮಿಗ್ 21 ಯುದ್ಧ ವಿಮಾನದಲ್ಲಿ ಮಿಂಚಿದ ಅಭಿನಂದನ್

    ಲಕ್ನೋ: ಇಂದು ಭಾತರತೀಯ ವಾಯು ಪಡೆ(ಐಎಎಫ್) 87ನೇ ದಿನಾಚರಣೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗಾಜಿಯಾಬಾದ್‍ನ ಹಿಂಡನ್ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ ಕಲರವ ಜೋರಾಗಿದ್ದು, ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರು ಮಿಗ್-21 ಬೈಸನ್ ಯುದ್ಧ ವಿಮಾನ ಹಾರಾಟ ನಡೆಸಿ ಎಲ್ಲರ ಗಮನ ಸೆಳೆದರು.

    87ನೇ ಐಎಎಫ್ ದಿನಾಚರಣೆ ಅಂಗವಾಗಿ ಹಿಂಡನ್ ಏರ್‌ಬೇಸ್‌ನಲ್ಲಿ ಯುದ್ಧ ವಿಮಾನ ಮತ್ತು ಹೆಲಿಕಾಪ್ಟರ್ ಗಳ ಪ್ರದರ್ಶನ ನಡೆಯಿತು. ಈ ಕಾರ್ಯಕ್ರಮದಲ್ಲಿ ವಾಯುಸೇನೆ ಮುಖ್ಯಸ್ಥ ಆರ್. ಕೆ ಎಸ್ ಬದೌರಿಯಾ, ಭೂಸೇನೆ ಮುಖ್ಯಸ್ಥ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಕರಂಬಬೀರ್ ಸಿಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವವನ್ನು ವೀಕ್ಷಿಸಲು ಸಾವಿರಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದು, ಕಾರ್ಯಕ್ರಮದಲ್ಲಿ ಅಭಿನಂದನ್ ಅವರ ಉಪಸ್ಥತಿ ಜನರ ಉತ್ಸಾಹ ಹೆಚ್ಚಿಸಿತು. ಇದನ್ನೂ ಓದಿ:87ನೇ ವಾಯಪಡೆಯ ದಿನಾಚರಣೆಯಲ್ಲಿ ಭಾಗವಹಿಸಿದ ಕ್ಯಾಪ್ಟನ್ ಸಚಿನ್ ತೆಂಡೂಲ್ಕರ್

    ಏರ್ ಶೋಗೆ ಅಭಿನಂದನ್ ಪ್ರವೇಶಿಸುತ್ತಿದ್ದಂತೆ ಏರ್‌ಬೇಸ್‌ನಲ್ಲಿ ಸಾರ್ವಜನಿಕರು ಚಪ್ಪಾಳೆಗಳ ಸುರಿಮಳೆಗೈದರು. ಈ ಮಧ್ಯೆ ಅಭಿನಂದನ್ ಅವರು ಮಿಗ್-21 ಯುದ್ಧ ವಿಮಾನ ಹಾರಾಟ ನಡೆಸುವ ಮೂಲಕ ಎಲ್ಲರ ಗಮನ ಸೆಳೆದರು. ಅಲ್ಲದೆ ಇದೇ ಮೊದಲ ಬಾರಿಗೆ ವಿಶ್ವದ ಅತ್ಯಂತ ಅಪಾಯಕಾರಿ ಯುದ್ಧ ಹೆಲಿಕಾಪ್ಟರ್ ಅಪಾಚೆ ತನ್ನ ಶಕ್ತಿ ಪ್ರದರ್ಶನ ತೋರಿದ್ದು ವಿಶೇಷವಾಗಿತ್ತು. ಚಿನೂಕ್ ಹೆಲಿಕಾಪ್ಟರ್‌ಗಳು ಕೂಡ ಆಗಸದಲ್ಲಿ ಶಕ್ತಿ ಪ್ರದರ್ಶಿಸಿದವು. ಜೊತೆಗೆ ಸ್ವದೇಶಿ ನಿರ್ಮಿತ ತೇಜಸ್ ಯುದ್ಧ ವಿಮಾನದ ಆರ್ಭಟವನ್ನು ಕಾರ್ಯಕ್ರಮದಲ್ಲಿ ನೆರೆದವರು ಕಣ್ತುಂಬಿಕೊಂಡರು. ಇದನ್ನೂ ಓದಿ:ಐಎಎಫ್‍ನ ಮೊದಲ ‘ರಫೇಲ್’ಗೆ ರಾಜನಾಥ್ ಸಿಂಗ್ ಆಯುಧ ಪೂಜೆ

    ಫೆ. 14ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರಿದ್ದ ಬಸ್ಸಿನ ಮೇಲೆ ಜೈಷ್ ಉಗ್ರನೊಬ್ಬ ಆತ್ಮಾಹುತಿ ದಾಳಿ ನಡೆಸಿ 40ಕ್ಕೂ ಹೆಚ್ಚು ಮಂದಿ ಯೋಧರನ್ನು ಬಲಿಪಡೆದಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ವಾಯು ಪಡೆ ಪಾಕಿಸ್ತಾನದ ಬಾಲಕೋಟ್‍ನಲ್ಲಿ ಜೈಷ್ ಉಗ್ರರ ನೆಲೆಗಳ ಮೇಲೆ ಏರ್ ಸ್ಟ್ರೈಕ್ ನಡೆಸಿ ಉಗ್ರರನ್ನು ಸದೆಬಡೆದಿತ್ತು.

    ಫೆ. 27ರಂದು ಪಾಕಿಸ್ತಾನ ಎಫ್-16 ಯುದ್ಧ ವಿಮಾನವನ್ನು ತನ್ನ ಮಿಗ್-21 ಯುದ್ಧ ವಿಮಾನದ ಮೂಲಕ ಹೊಡೆದುರುಳಿಸಿದ ನಂತರ ಅಭಿನಂದನ್ ಅವರು ನ್ಯಾಷನಲ್ ಹೀರೋ ಆಗಿ ಹೊರಹೊಮ್ಮಿದ್ದರು. ಬಾಲಾಕೋಟ್ ಏರ್ ಸ್ಟ್ರೈಕ್ ನಂತರ ಪಾಕಿಸ್ತಾನ ತನ್ನ ಎಫ್-16 ಯುದ್ಧ ವಿಮಾನದ ಮೂಲಕ ಭಾರತವನ್ನು ಗುರಿಯಾಗಿಸಿಕೊಂಡು ವಾಯು ದಾಳಿ ನಡೆಸಿದ ಸಂದರ್ಭದಲ್ಲಿ ಅಭಿನಂದನ್ ಮಿಗ್-21 ವಿಮಾನದ ಮೂಲಕ ಪಾಕ್ ವಿಮಾನವನ್ನು ಹೊಡೆದುರುಳಿಸಿದ್ದರು. ಈ ವೇಳೆ ಅಭಿನಂದನ್ ಅವರ ಮಿಗ್-21 ವಿಮಾನ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪತನಗೊಂಡಿತ್ತು. ಆಗ ಸುಮಾರು 58 ಗಂಟೆಗಳ ಕಾಲ ಅಭಿನಂದನ್ ಪಾಕಿಸ್ತಾನದ ಕಸ್ಟಡಿಯಲ್ಲೇ ಇದ್ದರು. ನಂತರ ಕೇಂದ್ರ ಸರ್ಕಾರ ಪಾಕ್ ಮೇಲೆ ಒತ್ತಡ ಹೇರಿ ಅಭಿನಂದನ್ ಅವರನ್ನು ಬಿಡಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿತ್ತು.

  • ಮುಸಲ್ಮಾನನ ಮಗ ಗಾಂಧಿ ಹೇಗಾದ ಎನ್ನುವ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ಕೊಡಲಿ: ಅನಂತಕುಮಾರ್ ಹೆಗ್ಡೆ

    ಮುಸಲ್ಮಾನನ ಮಗ ಗಾಂಧಿ ಹೇಗಾದ ಎನ್ನುವ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ಕೊಡಲಿ: ಅನಂತಕುಮಾರ್ ಹೆಗ್ಡೆ

    – ತಮ್ಮ ದೇಶದ ಕೆಲ ತಲೆಹಿಡುಕರಿಗೆ ಏರ್ ಸ್ಟ್ರೈಕ್ ಸಾಕ್ಷಿ ಬೇಕಂತೆ

    ಕಾರವಾರ: ಅಮೆರಿಕ ಸೇರಿದಂತೆ ಇಡೀ ಜಗತ್ತು ಭಾರತೀಯ ವಾಯು ಪಡೆ ನಡೆಸಿದ ಏರ್ ಸ್ಟ್ರೈಕ್ ಅನ್ನ ಒಪ್ಪಿಕೊಂಡಿದೆ. ಆದರೆ ನಮ್ಮಲ್ಲಿರುವ ಕೆಲ ತಲೆಹಿಡುಕರಿಗೆ ಸಾಕ್ಷಿ ಬೇಕು ಎಂದು ಏರ್ ಸ್ಟ್ರೈಕ್ ಬಗ್ಗೆ ಸಾಕ್ಷಿ ಕೇಳಿದವರ ವಿರುದ್ಧ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ವಾಗ್ದಾಳಿ ನಡೆಸಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕೂಗ್ತಿ ಮಹಾಸತಿ ದೇವಸ್ಥಾನದಲ್ಲಿ ನಡೆದ ತಾಯ್ನೆಲದ ಸೇವೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಭಾರತೀಯ ಯೋಧರ ಶೌರ್ಯದ ಬಗ್ಗೆ ಸಂದೇಹ ಪಡುವ ಬಿಕನಾಸಿ ಪರಿಸ್ಥಿತಿ ಕಾಂಗ್ರೆಸ್‍ನಿಂದ ನಿರ್ಮಾಣವಾಗಿದೆ. ನಮ್ಮ ಪೈಲಟ್‍ಗಳು ಪಾಕಿಸ್ತಾನಕ್ಕೆ ನುಗ್ಗಿ ಉಗ್ರರನ್ನು ಹತ್ಯೆ ಮಾಡಿದ್ದಕ್ಕೆ ಸಾಕ್ಷಿ ಕೇಳುತ್ತಿದ್ದಾರೆ. ಆದರೆ ಮುಸಲ್ಮಾನನ ಮಗ ಗಾಂಧಿ ಹೇಗಾದ ಎನ್ನುವುದಕ್ಕೆ ಸಾಕ್ಷಿ ಕೊಡುತ್ತಾರಾ ಎಂದು ಪ್ರಶ್ನಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಮುಸಲ್ಮಾನ ಅಪ್ಪ, ಕ್ರಿಶ್ಚಿಯನ್ ತಾಯಿಗೆ ಹುಟ್ಟಿರುವ ಈ ಪರದೇಶಿ ಬ್ರಾಹ್ಮಣ ಹೇಗಾದ ಎನ್ನುವುದಕ್ಕೆ ಡಿಎನ್‍ಎ ಸಾಕ್ಷಿ ಕೊಡುತ್ತಾರಾ? ಮಾಜಿ ಪ್ರಧಾನಿ ರಾಜೀವ್ ಗಾಂಧಿ ಉಗ್ರರ ದಾಳಿಗೆ ಬಲಿಯಾದಾಗ ಅವರ ದೇಹ ಛಿದ್ರ ಛಿದ್ರವಾಗಿತ್ತು. ಮೃತ ದೇಹವನ್ನು ಪತ್ತೆ ಹಚ್ಚಲು, ಡಿಎನ್‍ಎ ಪರೀಕ್ಷೆಗೆ ಮಕ್ಕಳ ರಕ್ತದ ಮಾದರಿ ನೀಡುವಂತೆ ಸೋನಿಯಾ ಗಾಂಧಿ ಕೇಳಲಾಗಿತ್ತು. ಆದರೆ ಸೋನಿಯಾ ಗಾಂಧಿ ಅವರು, ರಾಹುಲ್ ಗಾಂಧಿ ರಕ್ತದ ಮಾದರಿ ಬೇಡ, ಪ್ರಿಯಾಂಕಾ ಗಾಂಧಿ ರಕ್ತವನ್ನು ತೆಗೆದುಕೊಳ್ಳಿ ಎಂದು ಹೇಳಿದ್ದರು. ಅಂತಹವರು ಈಗ ಏರ್ ಸ್ಟ್ರೈಕ್ ಸಾಕ್ಷಿ ಕೇಳುತ್ತಿದ್ದಾರೆ ಎಂದು ಗಾಂಧಿ ಕುಟುಂಬದ ವಿರುದ್ಧ ಕಿಡಿಕಾರಿದರು.

    ಮೆಣಸಿನಕಾಯಿ ಗಿಡದಲ್ಲಿ ತೆಂಗಿನ ಕಾಯಿ ಬಿಡುತ್ತದೆ ಎನ್ನುವ ಸಾಕ್ಷಿ ಗಾಂಧಿ ಕುಟುಂಬದಲ್ಲಿ ಇರಬಹುದು. ಆದರೆ ನಮ್ಮಲ್ಲಿ ಅಂತಹ ಸಾಕ್ಷಿಗಳಿಲ್ಲ. ಕಾಂಗ್ರೆಸ್ ದಿವಾಳಿಯಾಗುತ್ತಿದೆ. ಹೀಗಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದೆ ಎಂದು ವ್ಯಂಗ್ಯವಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಅಭಿನಂದನ್‍ಗೆ ಪರಮವೀರ ಚಕ್ರ ನೀಡಿ: ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ

    ಅಭಿನಂದನ್‍ಗೆ ಪರಮವೀರ ಚಕ್ರ ನೀಡಿ: ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ

    ಚೆನ್ನೈ: ಪಾಕಿಸ್ತಾನದ ಬಂಧನದಲ್ಲಿದ್ದು ದೇಶಕ್ಕೆ ಮರಳಿದ ಭಾರತೀಯ ವಾಯು ಪಡೆಯ ಪೈಲಟ್ ಅಭಿನಂದನ್ ಅವರಿಗೆ ಪರಮವೀರ ಚಕ್ರ ಪ್ರಶಸ್ತಿ ನೀಡುವಂತೆ ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಪತ್ರ ಬರೆದಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಪಳನಿಸ್ವಾಮಿ ಪತ್ರ ಬರೆದಿದ್ದು, ಪಾಕಿಸ್ತಾನದ ಎಫ್ 16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದ ಅಭಿನಂದನ್ ಅವರಿಗೆ ಪರಮವೀರ ಚಕ್ರ ನೀಡಿ ಗೌರವಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

    ಅಭಿನಂದನ್ ಅವರು ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಉತ್ತಮ ಪ್ರದರ್ಶನ ಹಾಗೂ ಜವಾಬ್ದಾರಿ ಮೆರೆದಿದ್ದಾರೆ. ಅವರು ದೇಶದ ಜನರ ಮನಸ್ಸು ಗೆದ್ದಿದ್ದಾರೆ. ಹೀಗಾಗಿ ಭಾರತದ ಅತ್ಯುನ್ನತ ಸೇನಾ ಗೌರವವಾಗಿರುವ ಪರಮವೀರ ಚಕ್ರವನ್ನು ಅಭಿನಂದನ್ ಅವರಿಗೆ ನೀಡಬೇಕು ಎಂದು ಪಳನಿಸ್ವಾಮಿ ಒತ್ತಾಯಿಸಿದ್ದಾರೆ.

    ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ 40ಕ್ಕೂ ಹೆಚ್ಚು ಸಿಆರ್‍ಪಿಎಫ್ ಯೋಧರು ಫೆಬ್ರವರಿ 14ರಂದು ಹುತಾತ್ಮರಾಗಿದ್ದರು. ಉಗ್ರರಿಗೆ ತಕ್ಕ ಪಾಠ ಕಲಿಸಲು ಭಾರತೀಯ ವಾಯು ಪಡೆಯು ಉಗ್ರರ ಮೂರು ನೆಲೆಗಳ ಫೆಬ್ರವರಿ 26ರಂದು ಏರ್ ಸ್ಟ್ರೈಕ್ ನಡೆಸಿತ್ತು. ನಂತರದ ದಿನ (ಫೆ.27ರಂದು) ಪಾಕಿಸ್ತಾನ ವಾಯು ಪಡೆಯ ಯುದ್ಧ ವಿಮಾನಗಳು ಗಡಿಯನ್ನು ದಾಟಿಬಂದು ಹಾರಾಟ ನಡೆಸಿದ್ದವು. ಈ ವೇಳೆ ಪಾಕಿಸ್ತಾನದ ಎಫ್ 16 ಯುದ್ಧ ವಿಮಾನವನ್ನು ಭಾರತೀಯ ಪೈಲಟ್ ಅಭಿನಂದನ್ ಅವರು ಹೊಡೆದುರುಳಿಸಿದ್ದರು. ಪ್ರಾಣಾಪಾಯದಿಂದ ಪಾರಾಗಿದ್ದ ಅವರು, ಪ್ಯಾರಾಚೂಟ್ ಸಹಾಯದಿಂದ ಕೆಳಗೆ ಹಾರಿದ್ದರು. ಆದರೆ ಅಭಿನಂದನ್ ಅವರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬಿದ್ದಿದ್ದು, ಬಂಧನಕ್ಕೆ ಒಳಗಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಾಲಕೋಟ್ ಉಗ್ರರ ಕ್ಯಾಂಪ್‍ನಿಂದ ಸಾಗಿಸಲಾಗಿತ್ತು 35 ಶವ: ಪ್ರತ್ಯಕ್ಷದರ್ಶಿಗಳಿಂದ ಬಯಲಾಯ್ತು ಪಾಕ್ ಬಣ್ಣ

    ಬಾಲಕೋಟ್ ಉಗ್ರರ ಕ್ಯಾಂಪ್‍ನಿಂದ ಸಾಗಿಸಲಾಗಿತ್ತು 35 ಶವ: ಪ್ರತ್ಯಕ್ಷದರ್ಶಿಗಳಿಂದ ಬಯಲಾಯ್ತು ಪಾಕ್ ಬಣ್ಣ

    – ಬಾಂಬ್ ದಾಳಿ ನಡೆದ ಸ್ಥಳಕ್ಕೆ ಕೂಡಲೇ ಬಂತು ಅಂಬುಲೆನ್ಸ್
    – ಸಿಬ್ಬಂದಿಯಿಂದ ಮೊಬೈಲ್ ಕಸಿದ ಪಾಕ್ ಸೇನೆ

    ಇಸ್ಲಾಮಾಬಾದ್: ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಬಾಲಕೋಟ್ ಕ್ಯಾಂಪ್ ಮೇಲೆ ಭಾರತೀಯ ವಾಯು ಪಡೆ ನಡೆಸಿದ್ದ ದಾಳಿಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಉಗ್ರರನ್ನು ಹತ್ಯೆ ಮಾಡಿಲ್ಲ. ಖಾಲಿ ಜಾಗದ ಮೇಲೆ ಬಾಂಬ್ ಹಾಕಲಾಗಿದೆ ಎಂದು ಬಿಂಬಿಸಿದ್ದ ಪಾಕ್ ಸುಳ್ಳಿನ ನಾಟಕ ಈಗ ಬಯಲಾಗಿದೆ. ಪಾಕ್ ನಿವಾಸಿಗಳೇ ದಾಳಿಯಲ್ಲಿ 35 ಶವಗಳನ್ನು ಸಾಗಿಸಿದ ದೃಶ್ಯ ನೋಡಿದ್ದಾಗಿ ಒಪ್ಪಿಕೊಂಡಿದ್ದಾರೆ.

    ಭಾರತೀಯ ವಾಯು ಪಡೆಯ ಮಿರಜ್2000 ಯುದ್ಧ ವಿಮಾನದ ಮೂಲಕ ಬಾಲಕೋಟ್ ಉಗ್ರರ ಶಿಬಿರದ ಮೇಲೆ ಫೆಬ್ರವರಿ 26ರಂದು ದಾಳಿ ಮಾಡಲಾಗಿತ್ತು. ಹೀಗಾಗಿ ದಾಳಿ ನಡೆದ ಸ್ಥಳಕ್ಕೆ ಸಾರ್ವಜನಿಕರು ಹೋಗದಂತೆ ಪಾಕ್ ಸೈನ್ಯ ಸುತ್ತುವರಿದಿತ್ತು. ಅಷ್ಟೇ ಅಲ್ಲದೆ ಘಟನಾ ಸ್ಥಳದ ಸಮೀಪದ ಠಾಣೆಯ ಪೊಲೀಸರಿಗೂ ಅವಕಾಶ ಕೊಡಲಿಲ್ಲವೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾಗೆ ಎಂದು ವಿದೇಶಿ ಪ್ರತಕರ್ತೆಯೊಬ್ಬರು ವರದಿ ಮಾಡಿದ್ದಾರೆ.

    ವಿದೇಶಿ ಪತ್ರಕರ್ತೆ ಫ್ರಾನ್ಸೆಸ್ಸಾ ಮಾರಿನೋ ಎಂಬವರು ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಕಲೆಹಾಕಿ ಪಾಕಿಸ್ತಾನದ ಸುಳ್ಳು, ಮೊಂಡುವಾದವನ್ನು ವರದಿಯ ಮೂಲಕ ಬಯಲು ಮಾಡಿದ್ದಾರೆ. ತನಗೆ ಸಿಕ್ಕ ಮಾಹಿತಿಗಳ ಪ್ರಕಾರ 40-50 ಉಗ್ರರು ಈ ದಾಳಿಯಲ್ಲಿ ಹತರಾಗಿದ್ದಾರೆ ಎಂದು ಮಾರಿನೋ ಹೇಳಿದ್ದಾರೆ.

    ಏರ್ ಸ್ಟ್ರೈಕ್‍ನ ಬಾಂಬ್ ದಾಳಿಯಿಂದ ಮೃತಪಟ್ಟಿದ್ದ ಉಗ್ರರ ಶವಗಳನ್ನು ಸಾಗಿಸಲು ಅಂಬುಲೆನ್ಸ್ ಗಳನ್ನು ಕರೆಸಲಾಗಿತ್ತು. ಫೋಟೋ, ವಿಡಿಯೋಗಳು ಸೆರೆ ಹಿಡಿಯಬಾರದು ಎನ್ನುವ ಕಾರಣಕ್ಕಾಗಿ ಅಂಬುಲೆನ್ಸ್ ಸಿಬ್ಬಂದಿ ಮೊಬೈಲ್ ಫೋನ್‍ಗಳನ್ನು ಪಾಕ್ ಸೈನಿಕರು ಪಡೆದಿದ್ದರು ಎಂದು ವರದಿಯಲ್ಲಿ ಹೇಳಿದ್ದಾರೆ.

    ಬಾಲಕೋಟ್ ಕ್ಯಾಂಪ್ ಮೇಲೆ ಭಾರತೀಯ ವಾಯು ಪಡೆ ಬಾಂಬ್ ದಾಳಿ ನಡೆಸಿದ ಸ್ವಲ್ಪ ಸಮಯಕ್ಕೆ ಪಾಕ್ ಸೇನೆ ಸ್ಥಳಕ್ಕೆ ಬಂದಿತ್ತು. ತಕ್ಷಣವೇ ಉಗ್ರರ 35 ಶವಗಳನ್ನು ಆಂಬುಲೆನ್ಸ್ ನಲ್ಲಿ ಸಾಗಣೆ ಮಾಡುತ್ತಿದ್ದನ್ನು ಕಣ್ಣಾರೆ ಕಂಡಿದ್ದೇನೆ. ಮೃತರ ಪೈಕಿ 12 ಜನರು ಒಂದೇ ಕೊಠಡಿಯಲ್ಲಿ ಮಲಗಿದ್ದರು. 35 ಶವಗಳಲ್ಲಿ ಪಾಕ್ ಸೇನೆಯಲ್ಲಿ ಕೆಲಸ ಮಾಡಿದ್ದ ಅಧಿಕಾರಿಗಳ ಮೃತ ದೇಹಗಳು ಇದ್ದವು ಎಂದು ಹೆಸರು ಬಹಿರಂಗಪಡಿಸದ ಪಾಕಿಸ್ತಾನದ ಸರ್ಕಾರಿ ಅಧಿಕಾರಿಯೊಬ್ಬರು ತಾವು ನೋಡಿದ ದೃಶ್ಯವನ್ನು ತಿಳಿಸಿದ್ದಾಗಿ ಪತ್ರಕರ್ತೆ ಹೇಳಿದ್ದಾರೆ.

     

    ಬಾಂಬ್ ದಾಳಿಯಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‍ಐನ ನಿವೃತ್ತ ಅಧಿಕಾರಿಯೊಬ್ಬ ಬಲಿಯಾಗಿದ್ದಾನೆ. ಮೃತ ಅಧಿಕಾರಿಯನ್ನು ಸ್ಥಳೀಯವಾಗಿ ಕರ್ನಲ್ ಸಲೀಂ ಎಂದು ಕರೆಯಲಾಗುತ್ತಿತ್ತು. ಸುಧಾರಿತ ಸ್ಫೋಟಕ ತಯಾರಿಸುವುದರಲ್ಲಿ ಪರಿಣತರನಾಗಿರುವ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯಲ್ಲಿದ್ದ ತರಬೇತುದಾರ ಉಸ್ಮಾನ್ ಘನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕರ್ನಲ್ ಜರಾರ್ ಜಾಕ್ರಿ ಎಂಬವರು ಗಾಯಗೊಂಡಿದ್ದಾನೆ ಎಂದು ಫ್ರಾನ್ಸೆಸ್ಸಾ ಮಾರಿನೋ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಿಗ್ ಹೆಲಿಕಾಪ್ಟರ್ ಪತನ – ಸರ್ಕಾರಿ ಗೌರವದೊಂದಿಗೆ ಪೈಲಟ್ ಸಿದ್ಧಾರ್ಥ ಅಂತ್ಯಕ್ರಿಯೆ

    ಮಿಗ್ ಹೆಲಿಕಾಪ್ಟರ್ ಪತನ – ಸರ್ಕಾರಿ ಗೌರವದೊಂದಿಗೆ ಪೈಲಟ್ ಸಿದ್ಧಾರ್ಥ ಅಂತ್ಯಕ್ರಿಯೆ

    ಚಂಡೀಗಢ: ಭಾರತೀಯ ವಾಯು ಪಡೆಯ ಮಿಗ್ 17 ಹೆಲಿಕಾಪ್ಟರ್ ಪತನಗೊಂಡು ಹುತಾತ್ಮರಾಗಿದ್ದ ಪೈಲಟ್ ಸಿದ್ಧಾರ್ಥ ವಶಿಷ್ಠಾ ಅವರ ಅಂತ್ಯಕ್ರಿಯೆ ಇಂದು ಚಂಡೀಗಢದಲ್ಲಿ ನೆರವೇರಿತು.

    ಮಿ-17 ಯುದ್ಧ ಹೆಲಿಕಾಪ್ಟರ್ ಹಾರಾಟದ ವೇಳೆ ಬುಧವಾರ ಪತನಗೊಂಡು, ಜಮ್ಮು-ಕಾಶ್ಮೀರದ ಬುದ್ಗಾಮ್ ಪ್ರದೇಶದಲ್ಲಿ ಬಿದ್ದಿತ್ತು. ಈ ದುರಂತದಲ್ಲಿ ಪೈಲಟ್ ಸಿದ್ಧಾರ್ಥ ವಶಿಷ್ಠಾ ಅವರನ್ನು ಸೇರಿದಂತೆ ಒಟ್ಟು ಆರು ಜನರು ಹುತಾತ್ಮರಾಗಿದ್ದರು.

    ವಾಯು ಪಡೆಯ ಸೈನಿಕರು ಗಾಳಿಯಲ್ಲಿ ಗುಂಡು ಹಾರಿಸಿ ಪೈಲಟ್ ಸಿದ್ಧಾರ್ಥ ವಶಿಷ್ಠಾ ಅವರಿಗೆ ಸಕಲ ಸರ್ಕಾರಿ ಗೌರವ ಸಲ್ಲಿಸಿದರು. ಚಂಡೀಗಢನಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಕುಟುಂಬಸ್ಥರು ಸೇರಿದಂತೆ ನೂರಾರು ಜನರು ಸೇರಿದ್ದರು.

    ಸಿದ್ಧಾರ್ಥ ಅವರ ಪತ್ನಿ ಆರತಿ ಸಿಂಗ್ ಅಂತ್ಯಕ್ರಿಯ ವೇಳೆ ಕಣ್ಣೀರಾದರು. ಆರತಿ ಸಿಂಗ್ ಅವರು ಕೂಡ ಐಎಎಫ್‍ನ ಶ್ರೀನಗರ ಪಡೆಯ ಸಿಬ್ಬಂದಿಯಾಗಿದ್ದಾರೆ. ಹುತಾತ್ಮ ಸಿದ್ಧಾರ್ಥ ಹಾಗೂ ಆರತಿ ಸಿಂಗ್ ದಂಪತಿಗೆ ಎರಡು ವರ್ಷದ ಪುತ್ರನಿದ್ದಾನೆ.

    ಹುತಾತ್ಮ ಸಿದ್ಧಾರ್ಥ ಅವರ ಕುಟುಂಬವು ನಾಲ್ಕು ತಲೆಮಾರುಗಳಿಂದ ಭಾರತೀಯ ವಾಯು ಪಡೆಯಲ್ಲಿ ಸೇವೆ ಸಲ್ಲಿಸುತ್ತಾ ಬಂದಿದೆ. ಕೇರಳದಲ್ಲಿ ಕಳೆದ ವರ್ಷ ಸಂಭವಿಸಿದ್ದ ಪ್ರವಾಹದ ವೇಳೆ ಸಿದ್ಧಾರ್ಥ ಅವರು ಅಸಾಧಾರಣವಾಗಿ ಕಾರ್ಯನಿರ್ವಹಿಸಿದ್ದರು. ಈ ಹಿನ್ನಲೆಯಲ್ಲಿ ಸಿದ್ಧಾರ್ಥ ಅವರಿಗೆ ಜನವರಿ 26ರಂದು ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 60 ವರ್ಷದ ಕಾರು ಲೇಟೆಸ್ಟ್ ಸ್ಪೋರ್ಟ್ಸ್ ಕಾರನ್ನು ಸೋಲಿಸಿದೆ. ವಾಟ್ ಎ ಡ್ರೈವಿಂಗ್ – ಅಭಿ ಸಾಧನೆಗೆ ಎಲ್ಲೆಡೆ ಪ್ರಶಂಸೆ

    60 ವರ್ಷದ ಕಾರು ಲೇಟೆಸ್ಟ್ ಸ್ಪೋರ್ಟ್ಸ್ ಕಾರನ್ನು ಸೋಲಿಸಿದೆ. ವಾಟ್ ಎ ಡ್ರೈವಿಂಗ್ – ಅಭಿ ಸಾಧನೆಗೆ ಎಲ್ಲೆಡೆ ಪ್ರಶಂಸೆ

    ಬೆಂಗಳೂರು: ಭಾರತ ವಿಂಗ್ ಕಮಾಂಡರ್ ಅಭಿನಂದನ್ ಅವರು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಬೀಳುವ ಮುನ್ನ ಅತ್ಯುತ್ತಮ ಸಾಧನೆ ಮಾಡಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಕೊಂಡಾಡುತ್ತಿದ್ದಾರೆ.

    ಹೌದು. ಅಭಿನಂದನ್ ಅವರು ಹಾರಿಸುತ್ತಿದ್ದ ವಿಮಾನ ರಷ್ಯಾ ನಿರ್ಮಿತ ಮಿಗ್ 21 ಬೈಸನ್. ಎಫ್ 16ಗೆ ಹೋಲಿಕೆ ಮಾಡಿದರೆ ಇದರ ಸಾಮಥ್ರ್ಯ ತುಂಬಾ ಕಡಿಮೆ. ಅಮೆರಿಕದ ಜನರಲ್ ಡೈನಾಮಿಕ್ಸ್ ಲಾಕ್ ಹಿಡ್ ಮಾರ್ಟಿನ್ ಕಂಪನಿ ಎಫ್ 16 ಫೈಟಿಂಗ್ ಫಾಲ್ಕನ್ 1974 ರಲ್ಲಿ ತಯಾರಿಸಿದ್ದು ಸದ್ಯ ಜಗತ್ತಿನ ಅತ್ಯುತ್ತಮ ವಿಮಾನಗಳ ಪೈಕಿ ಒಂದಾಗಿದೆ.

    ಆದರೆ ರಷ್ಯಾದ ಮಿಕೋಯಾನ್ ಗುರೇವಿಚ್(ಮಿಗ್) 21 ಬೈಸನ್ 1959 ರಲ್ಲಿ ತಯಾರಾಗಿದ್ದು, 1963 ರಲ್ಲಿ ಮಿಗ್ 21 ವಿವಿಧ ಆವೃತ್ತಿ ಒಟ್ಟ 874 ವಿಮಾನಗಳು ಭಾರತದ ವಾಯುಸೇನೆಗೆ ಸೇರ್ಪಡೆಯಾಗಿತ್ತು. 1971 ರಲ್ಲಿ ಬಾಂಗ್ಲಾ ಕದನದ ವೇಳೆ ಪ್ರಮುಖ ಪಾತ್ರವಾಹಿಸಿದ್ದ ಮಿಗ್ ಪಾಕಿಸ್ತಾನ 9 ವಿಮಾನಗಳನ್ನು ಹೊಡೆದು ಹಾಕಿತ್ತು. ಉಳಿದ ಯುದ್ಧ ವಿಮಾನಗಳಿಗೆ ಹೋಲಿಸಿದರೆ ಈ ವಿಮಾನಗಳ ಸಾಮರ್ಥ್ಯ ಕಡಿಮೆ ಎಂದು ಗೊತ್ತಾದ ಬಳಿಕ 1990 ರಲ್ಲಿ ಇವುಗಳನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಸದ್ಯ ಭಾರತದಲ್ಲಿ 122 ಮಿಗ್ ವಿಮಾನಗಳಿವೆ. ಖರೀದಿಸಿದ ಪೈಕಿ 500ಕ್ಕೂ ಹೆಚ್ಚು ವಿಮಾನಗಳು ಪತನಗೊಂಡಿದೆ. ಹೀಗಾಗಿ ವಾಯುಪಡೆಯಲ್ಲಿ ಈ ವಿಮಾನಗಳು ಹಾರುವ ಶವಪೆಟ್ಟಿಗೆ ಎಂದೇ ಕುಖ್ಯಾತಿ ಪಡೆದಿವೆ. ಹಾರುವ ಶವಪೆಟ್ಟಿಗೆ ಎಂಬ ಕುಖ್ಯಾತಿ, ಎಫ್ 16 ಮುಂದೆ ಏನು ಅಲ್ಲ ಎಂದು ಭಾವಿಸಿದ್ದರೂ ಅಭಿನಂದನ್ ಈ ವಿಮಾನ ಮೂಲಕವೇ ಪಾಕ್ ಸೇನೆಯನ್ನು ಹಿಮ್ಮೆಟ್ಟಿಸಿ ಒಂದು ವಿಮಾನವನ್ನು ಉರುಳಿಸಿ ಈಗ ಭಾರತಕ್ಕೆ ಹೆಮ್ಮೆ ತಂದಿದ್ದಾರೆ.

    ಜನ ಹೇಳೋದು ಏನು?
    – “1960ಕ್ಕೆ ಸೇರಿದ ಎರಡನೇ ತಲೆಮಾರಿನ ಯುದ್ಧವಿಮಾನವೊಂದು 5ನೇ ತಲೆಮಾರಿನ ಅಮೆರಿಕ ನಿರ್ಮಿತ ವಿಮಾನವನ್ನು ಹೊಡೆದಿದೆ ಎಂದು ನಂಬುವುದೇ ಅಸಾಧ್ಯ. ಭಾರತೀಯ ವಾಯುಸೇನೆ ಜಗತ್ತಿನಲ್ಲೇ ಶ್ರೇಷ್ಠ ವಾಯುಸೇನೆಯಾಗಿದೆ”.
    – “ಮಿಗ್ ವಿಮಾನವೊಂದು ಎಫ್ 16 ಹೊಡೆದಿದ್ದು ವಿಶ್ವದಲ್ಲೇ ಮೊದಲು. ಈ ರೀತಿಯ ಸೈನಿಕರನ್ನು ಪಡೆದಿರುವ ಭಾರತ ನಿಜವಾಗಿ ಗ್ರೇಟ್”

    – “ಗಾಡಿ ಹೊಸದೇ ಇರಲಿ ಹಳೆಯದೇ ಇರಲಿ. ಅದನ್ನು ಓಡಿಸುವ ವ್ಯಕ್ತಿಯೇ ಮುಖ್ಯ. ಭಾರತೀಯರಿಗೆ ಸರಿಯಾಗಿ ತರಬೇತಿ ನೀಡಿದರೆ ಏನು ಬೇಕಾದರೂ ಮಾಡುವ ಸಾಮಥ್ರ್ಯ ಹೊಂದಿದ್ದಾರೆ ಎನ್ನುವುದು ಇದರಿಂದಲೇ ತಿಳಿಯುತ್ತದೆ. ವೆಲ್‍ಡನ್ ಅಭಿ”
    -“ಹಳೆಯ ಸ್ಕೂಟರ್ ಈಗಿನ ಲೇಟೆಸ್ಟ್ 200 ಎನ್‍ಎಸ್ ಎಬಿಎಸ್ ಹೊಂದಿರುವ ಬೈಕನ್ನು ರೇಸಿನಲ್ಲಿ ಸೋಲಿಸಿದಂತೆ ನಮ್ಮ ಹಳೇಯ ವಿಮಾನ ಪಾಕಿಸ್ತಾನ ಎಫ್ 16 ವಿಮಾನವನ್ನು ಸೋಲಿಸಿದೆ”.

    – “ಶವಪೆಟ್ಟಿಗೆಯಲ್ಲೇ ನಮ್ಮ ಪೈಲಟ್‍ಗಳು ಈ ಸಾಹಸ ಮಾಡಿದ್ದಾರೆ. ಒಂದು ವೇಳೆ ರಫೇಲ್ ಸಿಕ್ಕಿದ್ದರೆ?”
    – “ಸದ್ಯದ ಪರಿಸ್ಥಿತಿಯಲ್ಲಿ ಅಮೆರಿಕ ಮತ್ತು ರಷ್ಯಾ ಯುದ್ಧ ಮಾಡುವುದಿಲ್ಲ. ಆದರೆ ಭಾರತ ರಷ್ಯಾ ನಿರ್ಮಿತ ಮಿಗ್ ಬಳಸಿ ಎಫ್ 16 ವಿಮಾನವನ್ನು ಹೊಡೆಯುವ ಮೂಲಕ ಅಮೆರಿಕವನ್ನು ಸೋಲಿಸಿದೆ. ಈ ಸಂತೋಷಕ್ಕೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನರೇಂದ್ರ ಮೋದಿ ಕರೆ ಮಾಡಿ ಸಂತೋಷ ಹಂಚಿಕೊಂಡಿದ್ದಾರೆ”

    – “60 ವರ್ಷದ ಹಳೆಯ ಕಾರು ಲೇಟೆಸ್ಟ್ ಸ್ಪೋರ್ಟ್ಸ್ ಕಾರನ್ನು ಸೋಲಿಸಿದೆ. ವಾಟ್ ಎ ಡ್ರೈವಿಂಗ್ ಅಭಿ”
    – “ಭಾರತೀಯ ವಾಯುಸೇನೆಯ ಈ ಸಾಹಸ ಭವಿಷ್ಯದಲ್ಲಿ ಎಲ್ಲ ದೇಶಗಳ ವಾಯು ಸೈನಿಕರಿಗೆ ಪಠ್ಯವಾಗಲಿದೆ”

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಳ್ಳು ಹೇಳಿ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಪಾಕಿಸ್ತಾನ – ಇಲ್ಲಿದೆ ಪ್ರೂಫ್

    ಸುಳ್ಳು ಹೇಳಿ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಪಾಕಿಸ್ತಾನ – ಇಲ್ಲಿದೆ ಪ್ರೂಫ್

    ನವದೆಹಲಿ: ಪಾಕಿಸ್ತಾನ ಭಾರತದ ವಿಚಾರ ಬಂದಾಗ ಹೇಳುವುದೇ ಸುಳ್ಳು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈಗ ಮತ್ತೊಂದು ಸುಳ್ಳು ಹೇಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದೆ.

    ಇಂದು ಬೆಳಗ್ಗೆ ಪಾಕಿಸ್ತಾನ ಜನರಲ್ ಅಸಿಫ್ ಗಫೂರ್ ಟ್ವೀಟ್ ಮಾಡಿ ನಮ್ಮ ಬಳಿ ಇಬ್ಬರು ಭಾರತದ ವಾಯು ಸೇನಾ ಪೈಲಟ್ ಗಳು ಇದ್ದಾರೆ ಎಂದು ಹೇಳಿದ್ದರು. ಇದನ್ನು ಓದಿ:  ಭಾರತ V/S ಪಾಕಿಸ್ತಾನ: ಭೂ, ವಾಯು, ನೌಕಾ ಸೇನೆಯ ಸಾಮರ್ಥ್ಯ ಏನು?

    ಗಫೂರ್ ಟ್ವೀಟ್ ಬೆನ್ನಲ್ಲೇ ರೇಡಿಯೋ ಪಾಕಿಸ್ತಾನದ ಇಬ್ಬರು ಭಾರತದ ಪೈಲಟ್‍ಗಳನ್ನು ನಾವು ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ಇಬ್ಬರನ್ನು ಉತ್ತಮವಾಗಿ ನೋಡಿಕೊಳ್ಳುತ್ತೇವೆ. ಒಬ್ಬರಿಗೆ ಉತ್ತಮವಾಗಿ ವೈದ್ಯಕೀಯ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಗಫೂರ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿತ್ತು.

    ಮಧ್ಯಾಹ್ನ ಭಾರತ ಸುದ್ದಿಗೋಷ್ಠಿ ನಡೆಸಿ, ನಮ್ಮ ಒಬ್ಬರು ಪೈಲಟ್ ನಾಪತ್ತೆಯಾಗಿದ್ದಾರೆ ಎಂದು ಹೇಳಿತ್ತು. ಭಾರತದಿಂದ ಅಧಿಕೃತ ಹೇಳಿಕೆ ಬಂದಲ್ಲೇ ಪಾಕಿಸ್ತಾನ ಸಂಜೆ ಉಲ್ಟಾ ಹೊಡೆದಿದ್ದು ನಮ್ಮ ಬಳಿ ಒಬ್ಬರು ಪೈಲಟ್ ಕಸ್ಟಡಿಯಲ್ಲಿ ಇದ್ದಾರೆ ಎಂದು ಮೇಜರ್ ಜನರಲ್ ಗಫೂರ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ಇದನ್ನು ಓದಿ: ಭಾರತ ದಾಳಿಗೆ ಪಾಕ್ ಗಢ ಗಢ – ಮತ್ತೆ ಶಾಂತಿ ಮಂತ್ರ ಪಠಿಸಿದ ಇಮ್ರಾನ್ ಖಾನ್

    ಆರಂಭದ ಟ್ವೀಟ್ ನಲ್ಲಿ ಅಸಿಫ್ ಗಫೂರ್, ಗಡಿ ನಿಯಂತ್ರಣ ರೇಖೆಯನ್ನು ದಾಟಿದ್ದ ಭಾರತೀಯ ವಾಯು ಪಡೆಯ ಎರಡು ಯುದ್ಧ ವಿಮಾನಗಳನ್ನು ನಾವು ಹೊಡೆದು ಹಾಕಿದ್ದೇವೆ ಎಂದು ಹೇಳಿದ್ದರು. ಆದರೆ ಭಾರತ ಪಾಕಿಸ್ತಾನದ ವಿಮಾನ ಭಾರತದ ಗಡಿ ದಾಟಿ ಬರುವ ವೇಳೆ ನಡೆದ ದಾಳಿ ವೇಳೆ ಒಂದು ಮಿಗ್ ವಿಮಾನ ಪತನಗೊಂಡಿದೆ. ಒಬ್ಬರು ಪೈಲಟ್ ನಾಪತ್ತೆಯಾಗಿದ್ದಾರೆ ಎಂದು ಹೇಳಿಕೆ ನೀಡಿತ್ತು.

    ಪಾಕಿಸ್ತಾನ ಸೇನೆಯ ಜೊತೆ ಅಲ್ಲಿನ ಮಾಧ್ಯಮಗಳು ಸುಳ್ಳು ವರದಿ ಪ್ರಕಟಿಸಿವೆ. ಹಳೆಯ ಫೋಟೋ ಮತ್ತು ವಿಡಿಯೋಗಳನ್ನು ಪ್ರಸಾರ ಮಾಡಿ ಮಿಗ್ ವಿಮಾನವನ್ನು ಹೊಡೆದಿದ್ದೇವೆ ಎಂದು ವರದಿ ಮಾಡಿವೆ. ಈ ವರದಿಯಲ್ಲಿ ಏರ್ ಶೋ ಅಭ್ಯಾಸದ ವೇಳೆ ಸೂರ್ಯ ಕಿರಣ್ ವಿಮಾನ ಪತನಗೊಂಡ ಬಳಿಕ ಬೆಂಗಳೂರಿನ ಜನತೆ ಪೈಲಟ್ ಅವರನ್ನು ರಕ್ಷಿಸುವ ವಿಡಿಯೋವನ್ನು ಸಹ ಪ್ರಸಾರ ಮಾಡಿ ನಮ್ಮ ಸೇನೆ ಹೇಗೆ ಸಾಹಸ ಮಾಡಿದೆ ಎಂದು ಹೇಳಿ ಬೊಗಳೆಯನ್ನು ಬಿಟ್ಟಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕುದುರೆ ಬಿಟ್ಟು ಸಹೋದರ ಹೆಗಲು ಏರಿ ಏರ್ ಸ್ಟ್ರೈಕ್ ದಾಳಿ ಸಂಭ್ರಮಿಸಿದ ವರ

    ಕುದುರೆ ಬಿಟ್ಟು ಸಹೋದರ ಹೆಗಲು ಏರಿ ಏರ್ ಸ್ಟ್ರೈಕ್ ದಾಳಿ ಸಂಭ್ರಮಿಸಿದ ವರ

    ಭೋಪಾಲ್: ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಮೂರು ನೆಲೆಗಳ ಮೇಲೆ ಮಂಗಳವಾರ ವಾಯು ಪಡೆ ನಡೆಸಿದ ದಾಳಿಗೆ ದೇಶದಲ್ಲಿ ಸಂಭ್ರಮ ಮನೆ ಮಾಡಿತ್ತು. ದೆಹಲಿಯ ಆಟೋ ಚಾಲಕರೊಬ್ಬರು ತನ್ನ ಪ್ರಯಾಣಿಕರಿಗೆ ಉಚಿತ ಆಟೋ ಸೇವೆ ನೀಡಿ ಸಂಭ್ರಮಿಸಿದ್ದರು. ಇದರಂತೆ ಏರ್ ಸ್ಟ್ರೈಕ್ ಸುದ್ದಿ ತಿಳಿಯುತ್ತಿದ್ದಂತೆ ಮಧ್ಯಪ್ರದೇಶ ವರನೊಬ್ಬ ತ್ರಿವರ್ಣ ಧ್ವಜ ಹಿಡಿದು ಸಂಭ್ರಮಿಸಿದ್ದಾರೆ.

    ಮಧ್ಯಪ್ರದೇಶದ ಬರ್ವಾನಿಯಲ್ಲಿ ವರ ಗಣೇಶ್ ಸುಖ್‍ಲಾಲ್ ದಿಯೋರೆ ಕುದುರೆ ಮೇಲೆ ಕುಳಿತು ಮೆರವಣಿಗೆ ಮೂಲಕ ವಧುವಿನ ಮನೆಗೆ ಹೋಗುತ್ತಿದ್ದರು. ಈ ವೇಳೆ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ನೆಲೆಗಳ ಮೇಲೆ ದಾಳಿ ಮಾಡಿದ್ದಕ್ಕೆ ಜನರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದರು.

    ಏರ್ ಸ್ಟ್ರೈಕ್ ದಾಳಿಯನ್ನು ಜನರು ಸಂಭ್ರಮಿಸುತ್ತಿದ್ದಾಗ ವರ ಗಣೇಶ್ ಬರ್ವಾನಿ ಶಾಸ್ತ್ರೀ ನಗರದ ಮನೆಯಿಂದ ಆಗ ತಾನೇ ಮೆರವಣಿಗೆ ಹೊರಟಿದ್ದರು. ಜನರು ಡ್ರಮ್ ಬಾರಿಸಿ, ಭಾರತ್ ಮಾತಾಕೀ ಜೈ ಎನ್ನುತ್ತ ಸಂಭ್ರಮಿಸುತ್ತಿದ್ದನ್ನು ನೋಡಿದ ಗಣೇಶ್‍ಗೂ ಡ್ಯಾನ್ಸ್ ಮಾಡಬೇಕು, ಎಲ್ಲರೊಂದಿಗೆ ಖುಷಿ ಹಂಚಿಕೊಳ್ಳಬೇಕು ಎನ್ನುವ ಆಸೆಯಾಗಿತ್ತು. ಆದರೆ ಸಂಪ್ರದಾಯದ ಪ್ರಕಾರ ವಧುವಿನ ಮನೆ ತಲುಪುವರೆರಗೂ ವರ ನೆಲದ ಮೇಲೆ ಕಾಲು ಇಡುವಂತಿಲ್ಲ. ಹೀಗಾಗಿ ಕುದುರೆಯ ಮೇಲೆ ಕುಳಿತಿದ್ದ ಗಣೇಶ್ ಅವರನ್ನು ಸಹೋದರನೊಬ್ಬ ತನ್ನ ಭುಜದ ಮೇಲೆ ಕೂರಿಸಿಕೊಂಡು ಜನರು ಸೇರಿದ್ದ ಸ್ಥಳಕ್ಕೆ ಕರೆದುತಂದಿದ್ದಾನೆ.

    10ನೇ ಶತಮಾನದ ಶೆಂಧ್ವಾ ಕೋಟೆಯ ಗೇಟ್ ಬಳಿ ಬಂದ ಗಣೇಶ್, ತ್ರಿವರ್ಣ ಧ್ವಜವನ್ನು ಹಿಡಿದು ಸ್ಥಳದಲ್ಲಿ ಸೇರಿದ್ದ ಜನರೊಂದಿಗೆ ಭಾರತ್ ಮಾತಾಕೀ ಜೈ ಎಂದು ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.

    ಪುಲ್ವಾಮಾ ದಾಳಿಗೆ ಭಾರತೀಯ ವಾಯುಪಡೆ ಈ ಪ್ರಮಾಣದಲ್ಲಿ ಪ್ರತ್ಯುತ್ತರ ನೀಡುತ್ತದೆಂದು ಊಹಿಸಿರಲಿಲ್ಲ. ನಮಗೆ ಡಬಲ್ ಖುಷಿಯಾಗಿದೆ ಎಂದು ಸಂಭ್ರಮಾಚರಣೆ ಮಾಡುತ್ತಿದ್ದ ಹರೀಶ್ ಹಾಗೂ ರಾಜೇಶ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv