Tag: ಭಾರತೀಯ ಸಂಸ್ಕೃತಿ

  • ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು: ಆನಂದ್ ಸ್ವರೂಪ್ ಶುಕ್ಲಾ

    ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು: ಆನಂದ್ ಸ್ವರೂಪ್ ಶುಕ್ಲಾ

    – ಮುಸ್ಲಿಮರು ಭಾರತೀಯ ಸಂಸ್ಕೃತಿಗೆ ತಲೆಬಾಗಬೇಕು

    ಲಕ್ನೋ: ರಾಮ, ಕೃಷ್ಣ, ಶಿವ ಭಾರತೀಯ ಮುಸ್ಲಿಮರ ಪೂರ್ವಜರಾಗಿದ್ದು, ಈ ಸಮುದಾಯದವರು ಭಾರತೀಯ ಸಂಸ್ಕೃತಿಗೆ ತಲೆಬಾಗಬೇಕು ಎಂದು ಉತ್ತರ ಪ್ರದೇಶ ಸರ್ಕಾರದ ಸಂಸದೀಯ ವ್ಯವಹಾರಗಳ ಸಚಿವ ಆನಂದ್ ಸ್ವರೂಪ್ ಶುಕ್ಲಾ ಹೇಳಿದ್ದಾರೆ

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ನಾಲ್ಕೂವರೆ ವರ್ಷಗಳ ಮಾಡಿದ ಸಾಧನೆಗಳ ಕುರಿತು ಮಾಹಿತಿ ನೀಡುವುದಕ್ಕಾಗಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ಅವರು ಭಾರತೀಯ ಸಂಸ್ಕೃತಿ ಮತ್ತು ಹಿಂದುತ್ವದ ಧ್ವಜವನ್ನು ಹಾರಿಸುವ ಮೂಲಕ ದೇಶದಲ್ಲಿ ಇಸ್ಲಾಮಿಕ್ ರಾಜ್ಯ ರಚಿಸಬೇಕೆಂಬ ಉದ್ದೇಶದ ಮನೋಭಾವದವರನ್ನು ಹಿಮ್ಮೆಟ್ಟಿಸಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ:  ಈ ಸಲ ಕಪ್ ನಮ್ದೆ – ಆರ್‌ಸಿಬಿಗೆ ಶಮಂತ್, ರಘು ಸಪೋರ್ಟ್

    ಶ್ರೀರಾಮ, ಕೃಷ್ಣ ಮತ್ತು ಶಂಕರ(ಶಿವ) ಭಾರತದಲ್ಲಿರುವ ಮುಸ್ಲಿಮರ ಪೂರ್ವಜರು. ಆದ್ದರಿಂದ ಮುಸ್ಲಿಮರು ಭಾರತೀಯ ಸಂಸ್ಕೃತಿಗೆ ತಲೆಬಾಗಬೇಕು. ಸಿರಿಯಾ ಮತ್ತು ಅಫ್ಗಾನಿಸ್ತಾನ ನಂತರ, ಜಗತ್ತಿನ ಬೇರೆ ಬೇರೆ ರಾಷ್ಟ್ರಗಳು, ವಿಶ್ವವನ್ನೇ ಇಸ್ಲಾಮಿಕ್ ರಾಷ್ಟ್ರವನ್ನಾಗಿಸಬೇಕು ಎಂದು ಬಯಸಿವೆ. ಭಾರತದಲ್ಲೂ ಇಂಥ ಮನಸ್ಥಿತಿಯವರಿದ್ದಾರೆ. ಆದರೆ ಮೋದಿ ಮತ್ತು ಆದಿತ್ಯನಾಥ್ ನೇತೃತ್ವದ ಸರ್ಕಾರಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹಿಂದುತ್ವ ಮತ್ತು ಭಾರತೀಯ ಸಂಸ್ಕೃತಿಯ ಧ್ವಜವನ್ನು ಹಾರಿಸುವ ಮೂಲಕ, ಇಸ್ಲಾಂ ರಾಷ್ಟ್ರವಾಗಿಸುವ ಮನಸ್ಥಿತಿಯನ್ನೇ ಸೋಲಿಸಿದ್ದಾರೆ ಎಂದು ಶುಕ್ಲಾ ಹೇಳಿದರು. ಇದನ್ನೂ ಓದಿ: ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ- ಓಂ ಬಿರ್ಲಾರಿಂದ ಪ್ರಶಸ್ತಿ ಪ್ರದಾನ

    ಇತ್ತೀಚೆಗೆ ಸಂಭಾಲ್‍ನಲ್ಲಿ ಹಾಕಲಾಗಿದ್ದ ವಿವಾದಾತ್ಮಕ ಭಿತ್ತಿಪತ್ರವೊಂದರ ಕುರಿತು ಉಲ್ಲೇಖಿಸಿದ ಶುಕ್ಲಾ, ಇದು ಸಮಾಜವಾದಿ ಪಕ್ಷದವರು ಇಸ್ಲಾಮಿಕ್ ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಹಾಗೂ ಆ ಪಕ್ಷದ ಸಂಸದ ಶೈಫುರ್ ರಹಮಾನ್ ಅವರು ತಾಲಿಬಾನ್ ಬೆಂಬಲಿಸುವ ಹೇಳಿಕೆಗಳನ್ನು ನೀಡುತ್ತಿರುವುದರ ಪರಿಣಾಮ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ:  LOVE YOU MY SON: ನಿಖಿಲ್ ಕುಮಾರಸ್ವಾಮಿ

    ಸಂಭಾಲ್‍ನಲ್ಲಿ ಹಾಕಿದ್ದ  ಪೋಸ್ಟರ್‌ನಲ್ಲಿ ಸಂಭಾಲ್ ಘಾಜಿಗಳ ನೆಲ ಎಂದು ಬರೆಯಲಾಗಿತ್ತು. ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ ನಂತರ ಅಖಿಲ ಭಾರತ ಮಜ್ಲಿಸ್ ಇತ್ತೇಹಾದುಲ್ ಮುಸ್ಲಿಮೀನ್(ಎಐಎಂಎಐಎಂ) ಕಾರ್ಯಕರ್ತರು ಅವುಗಳನ್ನು ತೆಗೆದು ಹಾಕಿದರು. ಈ ವಾರದ ಆರಂಭದಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಭೇಟಿಗೂ ಮುನ್ನ ಸಂಭಾಲ್‍ನಲ್ಲಿ ಈ ಪೋಸ್ಟರ್ ಹಾಕಲಾಗಿತ್ತು. ಉತ್ತರ ಪ್ರದೇಶದಿಂದ ಈಗಾಗಲೇ ಘಾಜಿಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗಿದೆ. ಭವಿಷ್ಯದಲ್ಲಿ ಅಂತಹ ಶಕ್ತಿಗಳು ತಲೆ ಎತ್ತಲು ಸಾಧ್ಯವಾಗುವುದಿಲ್ಲ. ಎಐಎಂಎಐಎಂ ನಾಯಕ ಒವೈಸಿ ವಿರುದ್ಧ ವಾಗ್ದಾಳಿ ನಡೆಸಿದ ಶುಕ್ಲಾ, ಇವರ ಪೂರ್ವಿಕರು ದೇಶದಿಂದ ಹೈದರಾಬಾದ್ ಅನ್ನು ಪ್ರತ್ಯೇಕಿಸಲು ಪ್ರಯತ್ನಿಸಿದ್ದರು. ಆದರೆ ಅದು ಯಶಸ್ವಿಯಾಗಲಿಲ್ಲ ಎಂದು ಹೇಳಿದರು.

  • RSS, ದೇಶದ ಸಂಸ್ಕೃತಿ ದೂಷಣೆ ಮಾಡೋರು ತಾಯಿ ಶೀಲದ ಮೇಲೇ ಶಂಕಿಸೋ ನೀಚರು: ಮಳಲಿ

    RSS, ದೇಶದ ಸಂಸ್ಕೃತಿ ದೂಷಣೆ ಮಾಡೋರು ತಾಯಿ ಶೀಲದ ಮೇಲೇ ಶಂಕಿಸೋ ನೀಚರು: ಮಳಲಿ

    ಬಾಗಲಕೋಟೆ: ಆರ್‌ಎಸ್‌ಎಸ್ ಹಾಗೂ ಭಾರತೀಯ ಸಂಸ್ಕೃತಿಯನ್ನು ದೂಷಣೆ ಮಾಡುವವರು ತನ್ನ ತಾಯಿಯ ಶೀಲದ ಮೇಲೆಯೇ ಶಂಕೆ ವ್ಯಕ್ತಪಡಿಸುವ ನೀಚರು ಎಂದು ಆರ್‌ಎಸ್‌ಎಸ್ ಮುಖಂಡ ಹನುಮಂತ ಮಳಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬಾಗಲಕೋಟೆಯ ಆರ್‌ಎಸ್‌ಎಸ್ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಆರ್‌ಎಸ್‌ಎಸ್ ವಿರೋಧಿಸುವವರಿಗೆ ಉತ್ತರ ಕೊಡಲ್ಲ. ನಾಯಿ ಬೊಗಳಿದರೂ ಆನೆ ಹೋಗುತ್ತಿರುತ್ತದೆ. ಆರ್‌ಎಸ್‌ಎಸ್ ಅಣ್ಣ ಬಸವಣ್ಣನ ಸೂತ್ರದ ಮೇಲೆ ನಿಂತಿದೆ. ಅಲ್ಲದೆ ಹಿಂದೂ ಧರ್ಮವೇ ಅಲ್ಲ, ರಾಮನಿಗೆ ಅಸ್ತಿತ್ವನೇ ಇಲ್ಲ ಎಂದು ಕೆಲವರು ಹೇಳುತ್ತಾರೆ. ಯಾರ ಮನಸ್ಸು ಶಾಂತ ಇರುತ್ತೋ, ಪ್ರಫುಲ್ಲ ಇರುತ್ತೋ ಅವರಿಗೆ ಮಾತ್ರ ನಮ್ಮ ಧರ್ಮದ ಬಗ್ಗೆ ಅರ್ಥ ಆಗುತ್ತದೆ ಎಂದು ಟಾಂಗ್ ಕೊಟ್ಟರು.

    ಇದೇ ವೇಳೆ ರಾಮ ಮಂದಿರದ ಬಗ್ಗೆ ಪ್ರತಿಕ್ರಿಯಿಸಿ, ನಾವು ಎಲ್ಲದರಲ್ಲೂ ವಿಜಯ ಸಾಧಿಸುತ್ತಿದ್ದೇವೆ. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ್ದೇವೆ, ಏಕರೂಪ ತೆರಿಗೆ ತಂದಿದ್ದೇವೆ, ಮುಂದೆ ರಾಮ ಮಂದಿರನೂ ಕಟ್ಟುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಭಾರತೀಯ ಸಂಸ್ಕೃತಿಯನ್ನು ಸಾರುವ ಪರಂಪರಾ ದಿನವನ್ನ ಆಚರಿಸಿದ ಚಿಕ್ಕಮಗಳೂರು ವಿದ್ಯಾರ್ಥಿನಿಯರು

    ಭಾರತೀಯ ಸಂಸ್ಕೃತಿಯನ್ನು ಸಾರುವ ಪರಂಪರಾ ದಿನವನ್ನ ಆಚರಿಸಿದ ಚಿಕ್ಕಮಗಳೂರು ವಿದ್ಯಾರ್ಥಿನಿಯರು

    ಚಿಕ್ಕಮಗಳೂರು: ದೇಶದ ಒಂದೊಂದು ಹಬ್ಬಗಳು ಒಂದೊಂದು ದಿನ ಬಂದರೆ ಕಾಫಿನಾಡಿಗರಿಗೆ ಮಾತ್ರ ಆ ಎಲ್ಲಾ ಹಬ್ಬಗಳು ಒಂದೇ ದಿನ ಬರುತ್ತವೆ. ಕಾಫಿನಾಡಿನ ಎಸ್‍ಟಿಜೆ ಕಾಲೇಜು ವಿದ್ಯಾರ್ಥಿನಿಯರು ಆಚರಿಸಿದ ಪರಂಪರಾ ದಿನದ ಆಚರಣೆ ಆಧುನಿಕ ಭಾರತದಲ್ಲಿ ಮರೆಯಾಗುತ್ತಿರುವ ಸಂಪ್ರದಾಯದ ಉಳಿವಿಗೆ ಸಾಕ್ಷಿಯಾಗಿತ್ತು.

    ಬಣ್ಣ-ಬಣ್ಣದ ಸೀರೆಯುಟ್ಟ ನಾರಿಯರು, ಸ್ಟೈಲಾಗಿ ಜೀನ್ಸ್-ಟೀ ಶರ್ಟ್ ತೊಟ್ಟ ಯುವತಿಯರು, ಮುತ್ತೈದೆಯಂತೆ ಮೈತುಂಬಾ ಸೆರಗೊದ್ದು ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸುತ್ತಿರುವ ಹುಡುಗಿಯರು, ಮಲೆಯಾಳಿ ಕುಟ್ಟಿಗಳಂತೆ ಬಾರ್ಡರ್ ನ ಬಿಳಿ ಸೀರೆಯುಟ್ಟು ಸೆಲ್ಫಿ ಕ್ಲಿಕ್ಕಿಸುತ್ತಿರುವ ಸುಂದರಿಯರು. ಕಿರೀಟ ತೊಟ್ಟು, ಕೈಯಲ್ಲಿ ತ್ರಿಶೂಲ ಇಟ್ಕೊಂಡು ದುರ್ಗೆಯರಾಗಿರೋ ಯುವತಿಯರು, ಇವರೆಲ್ಲಾ ಚಿಕ್ಕಮಗಳೂರಿನ ಎಸ್‍ಟಿಜೆ ಕಾಲೇಜಿನಲ್ಲಿ ಕಂಡು ಬಂದರು.

    ವಿದ್ಯಾರ್ಥಿನಿಯರು ಪ್ರತಿ ವರ್ಷ ಪರಂಪರಾ ದಿನದ ಅಂಗವಾಗಿ ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳ ಸಂಸ್ಕೃತಿಯನ್ನ ಸಾರುವಂತಹ ಕಾರ್ಯಕ್ರಮವನ್ನ ಆಚರಿಸುತ್ತಾರೆ. ಈ ಬಾರಿ ಕೃಷ್ಣ ಜನ್ಮಾಷ್ಟಮಿ, ಹೋಳಿ ಹುಣ್ಣಿಮೆ, ನವದುರ್ಗೆಯರ ವೈಭವ, ಪರಿಸರ ಉಳಿಸಿ-ದೇಶ ರಕ್ಷಿಸಿ ಸೇರಿದಂತೆ ವಿವಿಧ ಸಾಂಪ್ರದಾಯಿಕ ಹಬ್ಬಗಳನ್ನ ಆಚರಿಸಿದ್ದಾರೆ. ಜೊತೆಗೆ ಕೃಷಿ ಮೇಳ, ಹಳ್ಳಿಸೊಗಡಿನ ಜೀವನ ಶೈಲಿ, ಹಳ್ಳಿಗಳ ಸಂಪ್ರದಾಯಗಳೆಲ್ಲವೂ ಅಲ್ಲಿದ್ದವು. ಅಷ್ಟೇ ಅಲ್ಲದೇ ಹಿಂದೂ, ಮುಸ್ಲಿಂ ಎಂಬ ಭಾವವಿಲ್ಲದೆ ಒಟ್ಟಾಗಿ ಸೇರಿ ಆಚರಣೆ ಮಾಡಿದ್ದಾರೆ.

    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಫಲಿತಾಂಶಕ್ಕಾಗಿ ಪೋಷಕರು, ಉಪನ್ಯಾಸಕರು ಓದಿನ ಮೇಲೆ ಒತ್ತಡ ಹಾಕುತ್ತಾರೆ. ಆದರೆ ಇಲ್ಲಿನ ಉಪನ್ಯಾಸಕರು ಓದಿನ ಜೊತೆ ರೂಢಿ-ಸಂಪ್ರದಾಯ ಉಳಿಸೋಕು ಹೆಗಲು ಕೊಟ್ಟಿದ್ದಾರೆ. ವರ್ಷಪೂರ್ತಿ ಕಾಲೇಜು, ಓದು, ಮನೆ ಎನ್ನುವ ವಿದ್ಯಾರ್ಥಿನಿಯರು ಮನೋರಂಜನೆ ಜೊತೆ ಅವರೇ ಇಷ್ಟ ಪಟ್ಟು ನಡೆಸುವ ಇಂತಹ ಸಂಸ್ಕೃತಿ ಹಬ್ಬಕ್ಕೆ ಕಾಲೇಜು ಆಡಳಿತ ಮಂಡಳಿ ಹಾಗೂ ಪೋಷಕರ ಬೆಂಬಲವಿದೆ.

    ಕಳೆದ ನಾಲ್ಕು ವರ್ಷಗಳಿಂದಲೂ ಪ್ರತಿ ವರ್ಷ ಈ ರೀತಿಯ ಒಂದೊಂದು ವಿಭಿನ್ನ ರೀತಿಯ ಆಚರಣೆಯಿಂದ ನಾವು ಸಂಭ್ರಮಿಸುತ್ತೇವೆ. ಜೊತೆಗೆ ಭಾರತೀಯ ಸಂಸ್ಕೃತಿಯನ್ನ ಕಾಲೇಜಿನ ವಿದ್ಯಾರ್ಥಿನಿಯರು ಉಳಿಸಿ, ಬೆಳೆಸುತ್ತಿದ್ದಾರೆ. ನಾಡಿನ ಸಂಸ್ಕೃತಿಯ ಬಗ್ಗೆ ತಮ್ಮ ಮಕ್ಕಳಿಗಿರುವ ಗೌರವನ್ನ ಕಂಡು ಕಾಲೇಜಿನ ಉಪನ್ಯಾಸಕರೆಲ್ಲರೂ ಕೂಡ ಮಕ್ಕಳೊಂದಿಗೆ ಸೇರಿ ಮಕ್ಕಳಾಗಿದ್ದರು ಎಂದು ಪ್ರಾಂಶುಪಾಲರಾದ ಭಾರತಿ ಹೇಳಿದ್ದಾರೆ.