Tag: ಭಾರತೀಯ ಸಮುದಾಯ

  • ಸಂಬಂಧವನ್ನು ಮರುಸ್ಥಾಪಿಸುತ್ತೇವೆ – NRIಗಳಿಗೆ ಕೆನಡಾ ವಿರೋಧ ಪಕ್ಷ ಭರವಸೆ

    ಸಂಬಂಧವನ್ನು ಮರುಸ್ಥಾಪಿಸುತ್ತೇವೆ – NRIಗಳಿಗೆ ಕೆನಡಾ ವಿರೋಧ ಪಕ್ಷ ಭರವಸೆ

    ಒಟ್ಟಾವಾ: ನಾನು ಕೆನಡಾದ (Canada) ಮುಂದಿನ ಪ್ರಧಾನಿಯಾದ್ರೆ, ಭಾರತದ ಜೊತೆಗಿನ ವೃತ್ತಿಪರ ಸಂಬಂಧವನ್ನು (Professional Relationship) ಸ್ಥಾಪಿಸುವುದಾಗಿ ಕೆನಡಾದ ವಿರೋಧ ಪಕ್ಷದ ನಾಯಕ ಪಿಯರೆ ಪೊಯ್ಲಿವ್ರೆ (Pierre Poilievre) ಅವರು ಕೆನಡಾದಲ್ಲಿರುವ ಭಾರತೀಯ ಸಮುದಾಯಕ್ಕೆ ಭರವಸೆ ನೀಡಿದ್ದಾರೆ.

    ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಹತ್ಯೆ ವಿಚಾರದಲ್ಲಿ ಉಭಯ ದೇಶಗಳ ನಡುವೆ ರಾಜತಾಂತಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಳ್ಳುತ್ತಿದೆ. ಭಾರತದಿಂದ ತನ್ನ 41 ರಾಜತಾಂತ್ರಿಕರನ್ನು ಹಿಂದಕ್ಕೆ ಕರೆಸಿಕೊಂಡಿರುವ ಕೆನಡಾ, ಅದರ ಬೆನ್ನಲ್ಲೇ ಭಾರತಕ್ಕೆ ಪ್ರಯಾಣಿಸುವ ತನ್ನ ಪ್ರಜೆಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಭಾರತದಲ್ಲಿನ ತನ್ನ ಬಹುತೇಕ ಎಂಬೆಸ್ಸಿ ಹಾಗೂ ಕಾನ್ಸುಲೇಟ್‌ಗಳನ್ನು ಮುಚ್ಚಿರುವ ಕೆನಡಾ, ಅಧಿಕ ಮಟ್ಟದಲ್ಲಿ ಜಾಗರೂಕತೆ ವಹಿಸುವಂತೆ ತನ್ನ ನಾಗರಿಕರಿಗೆ ಸಲಹೆ ಕೊಟ್ಟಿದೆ.

    ಈ ಹಿನ್ನೆಲೆಯಲ್ಲಿ ಕನ್ಸರ್ವೇಟಿವ್ ಪಕ್ಷದ ನಾಯಕ ಪೊಯ್ಲಿವ್ರೆ, ಕೆನಡಾದಲ್ಲಿ ನೆಲೆಸಿರುವ ಭಾರತೀಯ ರಾಜತಾಂತ್ರಿಕರಿಗೆ ತೋರುತ್ತಿರುವ ಆಕ್ರಮಣಶೀಲತೆಯ ನಡೆಯನ್ನ ಖಂಡಿಸಿದ್ದಾರೆ. ಇದನ್ನೂ ಓದಿ: ನಿಜ್ಜರ್‌ನಿಂದ ಕೆನಡಾದಲ್ಲಿ ಶಸ್ತ್ರಾಸ್ತ್ರ ತರಬೇತಿ, ಭಾರತದಲ್ಲಿ ದಾಳಿಗೆ ಧನ ಸಹಾಯ: ಗುಪ್ತಚರ ದಾಖಲೆ

    ಈ ಕುರಿತು ರೇಡಿಯೋ ಸಂದರ್ಶನವೊಂದರಲ್ಲಿ ಮಾತನಾಡಿದ ಪೊಯ್ಲಿವ್ರೆ, ಕೆನಡಾದ ಮುಂದಿನ ಪ್ರಧಾನಿಯಾದ್ರೆ, ಭಾರತದ ಜೊತೆಗಿನ ವೃತ್ತಿಪರ ಹಾಗೂ ರಾಜತಾಂತ್ರಿಕ ಸಂಬಂಧವನ್ನು ಮರುಸ್ಥಾಪಿಸುತ್ತೇನೆ. ನಮಗೆ ಭಾರತ ಸರ್ಕಾರದ ಜೊತೆಗಿನ ವೃತ್ತಿಪರ ಸಂಬಂಧದ ಅಗತ್ಯವಿದೆ. ಏಕೆಂದರೆ ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ದೇಶ ಭಾರತವಾಗಿದೆ. ಇದು ನಮ್ಮ ಅಭಿಪ್ರಾಯ-ಭಿನ್ನಾಭಿಪ್ರಾಯಗಳನ್ನ ಹೊಂದಲು ಸಹಕಾರಿಯಾಗಿದೆ. ಆದ್ರೆ ನಾವು ವೃತ್ತಿಪರ ಸಂಬಂಧವನ್ನು ಹೊಂದಿರಲೇಬೇಕು. ನಾನು ಪ್ರಧಾನಿಯಾದ್ರೆ ಖಂಡಿತವಾಗಿಯೂ ಅದನ್ನು ಪುನರ್‌ಸ್ಥಾಪಿಸುತ್ತೇನೆ ಎಂದು ಹೇಳಿದ್ದಾರೆ.

    ಇನ್ನೂ ಭಾರತದಿಂದ ಕೆನಡಾದ 41 ರಾಜತಾಂತ್ರಿಕರನ್ನು ಹಿಂದಕ್ಕೆ ಕರೆಸಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿ, ಪ್ರಶಾನಿ ಜಸ್ಟಿನ್ ಟ್ರುಡೊ ಕೆನಡಿಯರೇ ಪರಸ್ಪರ ವಿರುದ್ಧ ತಿರುಗಿಬೀಳುವಂತೆ ಮಾಡುತ್ತಿದ್ದಾರೆ. ಅಸಮರ್ಥರಾಗಿದ್ದು, ವಿದೇಶದಲ್ಲಿಯೂ ನಮ್ಮ ಸಂಬಂಧಗಳ ಬಗ್ಗೆ ಭಿನ್ನಾಭಿಪ್ರಾಯ ಉಂಟಾಗುವಂತೆ ಮಾಡಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಭಾರತವನ್ನ ಪ್ರಚೋದಿಸುವುದಿಲ್ಲ; ತಣ್ಣಗಾದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ

    ಜೊತೆಗೆ ನಿನ್ನೆಯಷ್ಟೇ ಒಟ್ಟಾವಾ, ಟೊರೆಂಟೊ ಮತ್ತು ವ್ಯಾಂಕೋವರ್‌ನಲ್ಲಿ, ಭಾರತದ ಚಾರಿಟಿಗಳಿಗೆ ವಿರುದ್ಧವಾಗಿ ನಡೆಸಿದ ಖಲಿಸ್ತಾನ್‌ ರ‍್ಯಾಲಿಯನ್ನ ಖಂಡಿಸಿದ್ದಾರೆ. ಬ್ರಿಟಿಷ್ ಕೊಲಂಬಿಯಾದ ಅಬಾಟ್ಸ್‌ ಫೋರ್ಡ್ ಪಟ್ಟಣದಲ್ಲಿರುವ ವೈಷ್ಣೋದೇವಿ ಹಿಂದೂ ದೇವಾಲಯದ ವೇಲೆ ಹಿಂದೂ ಹಾಗೂ ಭಾರತ ವಿರೋಧಿ ಪೋಸ್ಟರ್‌ಗಳಿಂದ ಅಪವಿತ್ರಗೊಳಿಸಿರುವುದಕ್ಕೂ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅ. 10ರೊಳಗೆ 40 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಿ- ಕೆನಡಾಗೆ ಭಾರತ ಗಡುವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸಿ ಭಾರತ ವಿಶ್ವಕ್ಕೇ ತನ್ನ ಸಾಮರ್ಥ್ಯ ತೋರಿಸಿದೆ- ಮೋದಿ

    ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸಿ ಭಾರತ ವಿಶ್ವಕ್ಕೇ ತನ್ನ ಸಾಮರ್ಥ್ಯ ತೋರಿಸಿದೆ- ಮೋದಿ

    – ಗ್ರೀಸ್‌ನಲ್ಲಿ ಚಂದ್ರಯಾನ ಗುಣಗಾನ, ಮೋದಿಗೆ ಗ್ರೀಸ್‌ ಅತ್ತುನ್ನತ ನಾಗರಿಕ ಗೌರವ

    ಅಥೆನ್ಸ್:‌ ಭಾರತ ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಇಡೀ ವಿಶ್ವಕ್ಕೇ ತನ್ನ ಸಾಮರ್ಥ್ಯವನ್ನ ತೋರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಚಂದ್ರಯಾನ ಗುಣಗಾನ ಮಾಡಿದ್ದಾರೆ.

    ಸುಮಾರು 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಗ್ರೀಸ್‌ (Greece) ದೇಶಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದು, ಪ್ರಧಾನಿ ಮೋದಿ ಅವರನ್ನ ಗ್ರೀಸ್‌ ರಾಷ್ಟ್ರಪತಿ ಹಾಗೂ ಪ್ರಧಾನಿ ಬರಮಾಡಿಕೊಂಡರು. ಭಾರತೀಯ ಸಮುದಾಯ ಸಾಂಪ್ರದಾಯಿಕವಾಗಿ ಮೋದಿ ಅವರನ್ನು ಸ್ವಾಗತಿಸಲಾಯಿತು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗ್ರೀಸ್‌ ನಾಗರಿಕ ಗೌರವ ‘ದಿ ಗ್ರ್ಯಾಂಡ್‌ ಕ್ರಾಸ್‌ ಆಫ್‌ ದಿ ಆರ್ಡರ್‌ ಆಫ್‌ ಹಾನರ್‌’ ನೀಡಿ ಗೌರವಿಸಲಾಯಿತು. ಅಧ್ಯಕ್ಷೆ ಕ್ಯಾಥರೀನಾ ಸಕೆಲ್ಲರೊಪೌಲೊ ಅವರು ಮೋದಿಗೆ ಅವರಿಗೆ ಗ್ರೀಸ್‌ ನಾಗರಿಕ ಗೌರವ ನೀಡಿ ಸನ್ಮಾನಿಸಿದರು.

    ನಂತರ ಗ್ರೀಸ್‌ನ ರಾಜಧಾನಿ ಅಥೆನ್ಸ್‌ನಲ್ಲಿ (Athens) ಭಾರತೀಯ ಸಮುದಾಯದವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಭಾರತದ ಚಂದ್ರಯಾನ ಸಾಧನೆಯನ್ನ ಹಾಡಿ ಹೊಗಳಿದರು. ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಇಡೀ ಜಗತ್ತಿಗೆ ಭಾರತ ತನ್ನ ಸಾಮರ್ಥ್ಯ ತೋರಿಸಿದೆ ಎಂದು ಶ್ಲಾಘಿಸಿದರು.

    ಈ ತಿಂಗಳು ಶಿವನನ್ನು ಪೂಜಿಸುವ ಪರ್ವಕಾಲ, ಶ್ರಾವಣ ಮಾಸದಲ್ಲಿ ದೇಶವು ಹೊಸ ಸಾಧನೆ ಮಾಡಿದೆ. ಚಂದ್ರನ ಕತ್ತಲಿನ ವಲಯವಾದ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶವಾಗಿ ಭಾರತ ಹೊರಹೊಮ್ಮಿದೆ. ತಿರಂಗವನ್ನು ಚಂದ್ರನ ಮೇಲೆ ಹಾರಿಸುವ ಮೂಲಕ ಜಗತ್ತಿಗೆ ನಮ್ಮ ಸಾಮರ್ಥ್ಯ ತೋರಿಸಿದ್ದೇವೆ. ಜಗತ್ತಿನ ಮೂಲೆಮೂಲೆಗಳಿಂದ ಅಭಿನಂದನೆಯ ಸಂದೇಶಗಳು ಹರಿದು ಬರುತ್ತಿವೆ. ಸಾಧನೆಯು ಇಷ್ಟು ದೊಡ್ಡದಾಗಿರುವಾಗ ಸಂಭ್ರಮವೂ ಸಹ ಮುಂದುವರಿಯುತ್ತದೆ. ಚಂದ್ರಯಾನ-3ರ ಯಶಸ್ಸಿಗೆ ನಾನು ಮತ್ತೊಮ್ಮೆ ಅಭಿನಂದನೆ ಸಲ್ಲಿಸುತ್ತೇನೆ. ನಿಮ್ಮ ಮುಖದ ಭಾವನೆಗಳೇ ಹೇಳುತ್ತಿವೆ, ನೀವು ಜಗತ್ತಿನ ಯಾವುದೇ ಜಾಗದಲ್ಲಿದ್ದರೂ ಹೃದಯದಲ್ಲಿ ಭಾರತವು ಮಿಡಿಯುತ್ತಿರುತ್ತದೆ ಎಂದು ಹೊಗಳಿದರು.

    ಮುಂದುವರಿದು, ವಿಶ್ವದ ದೊಡ್ಡ ಕಂಪನಿಗಳು ಭಾರತದಲ್ಲಿ ಹೂಡಿಕೆ ಮಾಡಲು ಮುಂಚೂಣಿಯಲ್ಲಿವೆ. ಭಾರತದ ಜಗತ್ತಿನ 5ನೇ ಅತಿ ದೊಡ್ಡ ಆರ್ಥಿಕ ಶಕ್ತಿಯನ್ನು ಹೊಂದಿರುವ ದೇಶವಾಗಿದ್ದು, ತಜ್ಞರ ಪ್ರಕಾರ ದೇಶವು 3ನೇ ಸ್ಥಾನಕ್ಕೆ ಏರಲಿದೆ. ಆರ್ಥಿಕತೆ ಬೆಳೆಯುತ್ತಿದ್ದಂತೆ ದೇಶವು ಬಡತನದಿಂದ ವೇಗವಾಗಿ ಹೊರಬರುತ್ತದೆ. ಭಾರತದಲ್ಲಿ 5 ವರ್ಷಗಳಲ್ಲಿ 13.5 ಕೋಟಿ ಭಾರತೀಯರು ಬಡತನ ಮಟ್ಟದಿಂದ ಹೊರಬಂದಿದ್ದಾರೆ ಎಂದು ಹೇಳಿದರಲ್ಲದೇ, ಭಾರತ ತಾಂತ್ರಿಕವಾಗಿಯೂ ಬೆಳೆಯುತ್ತಿದ್ದ ಸುಮಾರು 700 ಜಿಲ್ಲೆಗಳಲ್ಲಿ ಈಗಾಗಲೇ 5 ಜಿ ತಂತ್ರಜ್ಞಾನವನ್ನು ಹೊಂದಿದೆ ಎಂದು ಬೀಗಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಈಜಿಪ್ಟ್‌ನಲ್ಲಿ ‘ಯೇ ದೋಸ್ತಿ’ ಹಾಡು ಹೇಳಿ ಮೋದಿ ಸ್ವಾಗತಿಸಿದ ಮಹಿಳೆಯರು

    ಈಜಿಪ್ಟ್‌ನಲ್ಲಿ ‘ಯೇ ದೋಸ್ತಿ’ ಹಾಡು ಹೇಳಿ ಮೋದಿ ಸ್ವಾಗತಿಸಿದ ಮಹಿಳೆಯರು

    ಕೈರೋ: 2 ದಿನಗಳ ಈಜಿಪ್ಟ್‌ ಪ್ರವಾಸ (Egypt Tour) ಕೈಗೊಂಡಿರುವ ಪ್ರಧಾನಿ ಮೋದಿ (Narendra Modi) ಶನಿವಾರ ಈಜಿಪ್ಟ್‌ ರಾಜಧಾನಿ ಕೈರೋಗೆ ಬಂದಿಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಈಜಿಪ್ಟ್‌ ಪ್ರಧಾನಿ ಮೊಸ್ತಫಾ ಮೊಡ್‌ಬೌಲಿ (Madbouly) ಅವರು ಆಲಿಂಗನ ಮಾಡುವ ಮೂಲಕ ಬರಮಾಡಿಕೊಂಡರು. ನಂತರ ಸಕಲ ಸೇನಾ ಗೌರವದೊಂದಿಗೆ ಭವ್ಯ ಸ್ವಾಗತಕೋರಲಾಯಿತು.

    ಆ ನಂತರ ಅಲ್ಲಿನ ಹೋಟೆಲ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ ಈಜಿಪ್ಟ್‌ನ ಭಾರತೀಯ ಸಮುದಾಯದೊಂದಿಗೆ (Indian Community) ಸಂವಾದ ನಡೆಸಿದರು. ಈ ವೇಳೆ ಸಾಂಸ್ಕೃತಿಕ ಉಡುಗೆಯಲ್ಲಿ ಸಿಂಗಾರಗೊಂಡು ಸ್ವಾಗತಿಸಿದ ಮಹಿಳೆಯರು ʻಯೇ ದೋಸ್ತಿʼ ಗೀತೆಯನ್ನಾಡುವ ಮೂಲಕ ಮೋದಿ ಅವರನ್ನು ಬರಮಾಡಿಕೊಂಡರು.

    ಅಧ್ಯಕ್ಷ ಎಲ್‌-ಸಿಸಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದು, 1997ರ ಬಳಿಕ ಈಜಿಪ್ಟ್‌ಗೆ ತೆರಳಿ ದ್ವಿಪಕ್ಷೀಯ ಮಾತುಕತೆ ನಡೆಸುತ್ತಿರುವ ಮೊದಲ ಪ್ರಧಾನಿಯೂ ಆಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 3,200 ಕೋಟಿ ಹೂಡಿಕೆ ಮಾಡಲಿದೆ ಸೆಮಿಕಂಡಕ್ಟರ್ ಕಂಪನಿ Applied Materials

    ಉಭಯ ದೇಶಗಳ ರಾಜತಾಂತ್ರಿಕ ಸಂಬಂಧ ವೃದ್ಧಿ ಉದ್ದೇಶದಿಂದ ಪ್ರಧಾನಿ ಮೋದಿ ಭಾನುವಾರ ಎಲ್‌-ಸಿಸಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಈಜಿಪ್ಟ್‌ನಲ್ಲಿರುವ ಭಾರತ ಮೂಲದ ಸಂಪುಟ ಸದಸ್ಯರೊಂದಿಗೆ ಮತ್ತು ಪ್ರಮುಖ ತಜ್ಞರೊಂದಿಗೂ ಸಂವಾದ ನಡೆಸಲಿದ್ದಾರೆ. ಇದನ್ನೂ ಓದಿ: ಪುಟಿನ್‌ಗೆ ಅಡುಗೆ ಭಟ್ಟನಾಗಿದ್ದ ಪ್ರಿಗೋಜಿನ್ – ರಷ್ಯಾ ಅಧ್ಯಕ್ಷನ ವಿರುದ್ಧವೇ ತಿರುಗಿ ಬಿದ್ದದ್ದು ಯಾಕೆ?

    ಆ ನಂತರ 11ನೇ ಶತಮಾನದ ಅಲ್‌-ಹಕೀಮ್‌ ಮಸೀದಿಗೆ ಭೇಟಿ ನೀಡಲಿದ್ದಾರೆ. ಈ ಮಸೀದಿ 11ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು, ಸಾದ್ಯ ಹಾಗೂ ಬೊಹ್ರಾ ಸಮುದಾಯದಿಂದ ನವೀಕರಿಸಲಾಗಿದೆ. ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಿದ ಬಳಿಕ ಹೆಲಿಯೊಪೊಲಿಸ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಮೊದಲ ಮಹಾಯುದ್ಧದಲ್ಲಿ ಈಜಿಪ್ಟ್‌ಗಾಗಿ ಹೋರಾಡಿ ಬಲಿದಾನಗೈದ ಭಾರತೀಯ ಸೈನಿಕರಿಗೆ ಗೌರವ ಸಲ್ಲಿಸಲಿದ್ದಾರೆ. ಪ್ರಧಾನಿ ಮೋದಿ ಅವರ ಭೇಟಿಯು ಭಾರತ ಮತ್ತು ಈಜಿಪ್ಟ್‌ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ.