Tag: ಭಾರತ್‌ ಜೋಡೊ ನ್ಯಾಯ್‌ ಯಾತ್ರೆ

  • ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ನ್ಯಾಯ ಯಾತ್ರೆಗೆ ದೇಣಿಗೆ ಕೋರಿದ ಕಾಂಗ್ರೆಸ್‌

    ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ನ್ಯಾಯ ಯಾತ್ರೆಗೆ ದೇಣಿಗೆ ಕೋರಿದ ಕಾಂಗ್ರೆಸ್‌

    – 670 ರೂ. ದೇಣಿಗೆ ಕೊಟ್ಟವರಿಗೆ ಸಿಗುತ್ತೆ ರಾಗಾ ಸಹಿಯಿರುವ ಟಿ-ಶರ್ಟ್‌

    ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ (Congress) ನಾಯಕ ರಾಹುಲ್‌ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೊ ನ್ಯಾಯ ಯಾತ್ರೆಗಾಗಿ (Bharat Jodo Nyay Yatra) ದೇಣಿಗೆ ನೀಡುವಂತೆ ಕೋರಲಾಗಿದೆ. ಅದಕ್ಕಾಗಿ ‘ನ್ಯಾಯಕ್ಕಾಗಿ ದೇಣಿಗೆ’ ಅಭಿಯಾನ ಆರಂಭಿಸಲಾಗಿದೆ.

    6,700 ಕಿಮೀ ಭಾರತ್ ಜೋಡೋ ನ್ಯಾಯ ಯಾತ್ರೆಗೆ 670 ರೂ. ದೇಣಿಗೆ ಕೊಟ್ಟವರಿಗೆ ರಾಹುಲ್‌ ಗಾಂಧಿ ಸಹಿ ಇರುವ ಟಿ-ಶಿಟ್ ನೀಡಲಾಗುವುದು. 67,000 ರೂ. ಅಥವಾ ಅದಕ್ಕಿಂತ ಹೆಚ್ಚು ದೇಣಿಗೆ ನೀಡುವವರಿಗೆ ಟಿ-ಶರ್ಟ್, ಬ್ಯಾಗ್, ಬ್ಯಾಂಡ್, ಬ್ಯಾಡ್ಜ್ ಮತ್ತು ಸ್ಟಿಕ್ಕರ್ ಒಳಗೊಂಡಿರುವ ‘ನ್ಯಾಯ ಕಿಟ್’ ಎಂದು ಕಾಂಗ್ರೆಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ಗೆ  75 ವರ್ಷದ ಸಂಭ್ರಮ- ಪ್ರಧಾನಿಯಿಂದ ಜ.28ಕ್ಕೆ ವಜ್ರ ಮಹೋತ್ಸವ ಉದ್ಘಾಟನೆ

     

    ಯಾರಾದರೂ ದಾನ ಮಾಡುವ ಯಾವುದೇ ವಿಷಯಕ್ಕೆ, ಅವರು ರಾಹುಲ್ ಜಿಯವರ ಸಹಿ ಇರುವ ಪತ್ರ ಮತ್ತು ದೇಣಿಗೆ ಪ್ರಮಾಣಪತ್ರವನ್ನು ಪಡೆಯುತ್ತಾರೆ. ದೇಣಿಗೆ ಸಂಗ್ರಹವು, ಚುನಾವಣಾ ಪ್ರಚಾರವನ್ನು ಬೆಂಬಲಿಸಲು ಕಳೆದ ವರ್ಷ ಪ್ರಾರಂಭಿಸಿದ ಕ್ರೌಡ್‌ಫಂಡಿಂಗ್ ಅಭಿಯಾನದ ಭಾಗವಾಗಿದೆ.

    ಘೋಷಣೆಯಾದ ಎರಡು ಗಂಟೆಗಳಲ್ಲಿ 2 ಕೋಟಿ ರೂಪಾಯಿ ದೇಣಿಗೆ ಹರಿದುಬಂದಿತ್ತು. ಕ್ರೌಡ್‌ಫಂಡಿಂಗ್ ಅಭಿಯಾನವು ಇಲ್ಲಿಯವರೆಗೆ 20 ಕೋಟಿ ಮೌಲ್ಯದ ಹಣವನ್ನು ಗಳಿಸಿದೆ ಎಂದು ಪಕ್ಷ ಹೇಳಿದೆ. ರಾಹುಲ್ ಗಾಂಧಿಯವರು ಉತ್ತರ-ದಕ್ಷಿಣ ಭಾರತ ಜೋಡೊ ಯಾತ್ರೆ ನಡೆಸಿದದ್ದರು. ಈಗ ಮತ್ತೆ ಜನವರಿಯಲ್ಲಿ ಪೂರ್ವ-ಪಶ್ಚಿಮ ಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ಇದನ್ನೂ ಓದಿ: Loksabha Elections: ಬಿಜೆಪಿ ರಾಜ್ಯವಾರು ಚುನಾವಣಾ ಉಸ್ತುವಾರಿಗಳ ಪಟ್ಟಿ ಪ್ರಕಟ

    ಕಾಂಗ್ರೆಸ್ ಖಜಾಂಚಿ ಅಜಯ್ ಮಾಕನ್, ಜನರು ತಮ್ಮ ಕೈಲಾದಷ್ಟು ಕೊಡುಗೆ ನೀಡುವಂತೆ ಕೋರಿದ್ದಾರೆ. ಕೆಲವು ನಾಯಕರು ಪ್ರತಿ ಕಿಮೀಗೆ 20-100 ರೂ. ದೇಣಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

  • 60 ವರ್ಷಗಳಿಂದ ಮಾಡಿದ ಅನ್ಯಾಯಕ್ಕೆ ಕಾಂಗ್ರೆಸ್ಸಿಗರು ಈಗ ನ್ಯಾಯ ಕೇಳಲು ಹೊರಟಿದ್ದಾರೆ: ಮುನಿಸ್ವಾಮಿ ವ್ಯಂಗ್ಯ

    60 ವರ್ಷಗಳಿಂದ ಮಾಡಿದ ಅನ್ಯಾಯಕ್ಕೆ ಕಾಂಗ್ರೆಸ್ಸಿಗರು ಈಗ ನ್ಯಾಯ ಕೇಳಲು ಹೊರಟಿದ್ದಾರೆ: ಮುನಿಸ್ವಾಮಿ ವ್ಯಂಗ್ಯ

    ಕೋಲಾರ : ಈ ದೇಶಕ್ಕೆ 60 ವರ್ಷಗಳಿಂದ ಕಾಂಗ್ರೆಸ್ ನವರು (Congress) ಅನ್ಯಾಯ ಮಾಡಿದ್ದಾರೆ. ಈಗ ನ್ಯಾಯ ಕೇಳಲು ಯಾತ್ರೆ ಮಾಡುತ್ತಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ (MP Muniswamy) ಕಾಂಗ್ರೆಸ್ ನ್ಯಾಯ ಯಾತ್ರೆ ಕುರಿತು ವ್ಯಂಗ್ಯವಾಡಿದ್ದಾರೆ.

    ಈ ಸಂಬಂಧ ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಅನ್ಯಾಯ ಮಾಡಿಕೊಂಡಿದ್ದ ಇವರು ಜನರ ಬಳಿ ಹೋದಷ್ಟು ಇವರು ಮಾಡಿರುವ ಅನ್ಯಾಯವನ್ನ ಜನರೇ ಬಿಚ್ಚಿ ಹೇಳುತ್ತಾರೆ. ಅಲ್ಲದೆ ಇವರಿಗೆ ನ್ಯಾಯ ಎಂದು ಹೇಳುವುದಕ್ಕೆ ಅರ್ಹತೆ ಇಲ್ಲ. ಹೀಗಿರುವಾಗ ಇವರ ನ್ಯಾಯ ಏನು ಎಂದು ಪ್ರಶ್ನೆ ಮಾಡಿದ್ರು.

    ಜಮ್ಮು-ಕಾಶ್ಮೀರ, ಚೀನಾ ಸೇರಿದಂತೆ ಎಮೆರ್ಜೆನ್ಸಿ ಸಮಯದಲ್ಲಿ ಏನು ಮಾಡಿದ್ದೀರಿ ಎಂದು ಜನರಿಗೆ ತಿಳಿದಿದೆ. ಜೊತೆಗೆ ಅಯೋಧ್ಯೆ ರಾಮಮಂದಿರ (Ayodhya Ram Mandir) ಕಟ್ಟುವ ವಿಚಾರದಲ್ಲಿ ಡಿ.ಸಿ ಅವರನ್ನ ಹೇಗೆ ನಡೆಸಿಕೊಂಡು ಎತ್ತಂಗಡಿ ಮಾಡಿದ್ರು ಎಂದು ಮರುಪ್ರಶ್ನೆ ಹಾಕಿದರು.

    ಲಾಲ್ ಬಹದ್ದೂರ್ ಶಾಸ್ತ್ರಿ, ಸುಭಾಷ್ ಚಂದ್ರ ಬೋಸ್, ಶ್ಯಾಮ್ ಪ್ರಸಾದ್ ಮುಖರ್ಜಿ ಇವರ ಹತ್ಯೆ ಯಾರು ಮಾಡಿದ್ದಾರೆಂದು ಗೊತ್ತಿದೆ. ಇದೆಲ್ಲವನ್ನ ನೋಡಿದಾಗ ಈ ದೇಶಕ್ಕೆ ಕಾಂಗ್ರೆಸ್ ನವರು ಎಷ್ಟು ಅನ್ಯಾಯ ಮಾಡಿದ್ದಾರೆಂದು ತಿಳಿಯುತ್ತದೆ. ನೀವು ಎಷ್ಟೇ ಪಾದ ಯಾತ್ರೆಗಳನ್ನ ಮಾಡಿದ್ರು ನಿಮ್ಮ ಪಾಪದ ಕೊಡ ತುಂಬಿರುವ ಪರಿಣಾಮ ಏನೇ ಮಾಡಿದ್ರೂ ಕಳೆದ ಪಂಚ ರಾಜ್ಯ ಚುನಾವಣೆಗಿಂತಲೂ ಇನ್ನೂ ನೆಲ ಕಚ್ಚುತ್ತೀರಿ ಎಂದು ವಾಗ್ದಾಳಿ ನಡೆಸಿದ್ರು.

    ಭಾರತ ದೇಶದಲ್ಲಿ ಎಲ್ಲಾ ಜಾತಿಯ ಜನರು ಕಾಂಗ್ರೆಸ್‌ನ ತಿರಸ್ಕಾರ ಮಾಡಿದ್ದಾರೆ. ಕರ್ನಾಟದಲ್ಲಿ ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಮೂರೇ ತಿಂಗಳಲ್ಲಿ ಜನ ವಿರೋಧಿ ಸರ್ಕಾರ ಎನಿಸಿಕೊಂಡಿದೆ. ಎಲ್ಲೇ ಹೋದರೂ ಕಾಂಗ್ರೆಸ್ ಪಕ್ಷಕ್ಕೆ ಜನರು ಛೀ.. ಥೂ ಎಂದು ಚೀಮಾರಿ ಹಾಕುತ್ತಿದ್ದಾರೆ ಎಂದು ಹೇಳಿದ್ರು.