Tag: ಭಾರತ್ ಬಂದ್

  • ಯಾವ ವಿವಿ ಪರೀಕ್ಷೆಗಳು ಮುಂದೂಡಿಕೆ? ಇಲ್ಲಿದೆ ಮಾಹಿತಿ

    ಯಾವ ವಿವಿ ಪರೀಕ್ಷೆಗಳು ಮುಂದೂಡಿಕೆ? ಇಲ್ಲಿದೆ ಮಾಹಿತಿ

    -ಎಲ್ಲಿ ರಜೆ ಘೋಷಣೆ..? ಎಲ್ಲಿ ರಜೆ ಇಲ್ಲ?

    ಬೆಂಗಳೂರು: ಎರಡು ದಿನ ಕಾರ್ಮಿಕ ಮುಷ್ಕರ ಹಿನ್ನೆಲೆಯಲ್ಲಿ ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬೆಂಗಳೂರು ವಿವಿ, ರಾಣಿ ಚೆನ್ನಮ್ಮ ವಿವಿ, ಕರ್ನಾಟಕ ವಿವಿ, ಹಂಪಿ ಕನ್ನಡ ವಿವಿ, ಕುವೆಂಪು ವಿವಿ, ದಾವಣಗೆರೆ ವಿವಿ, ಗಂಗೂಬಾಯಿ ಹಾನಗಲ್ ವಿವಿ ಪರೀಕ್ಷೆಗಳು ಇಂದು ನಡೆಯಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

    ಬೆಂಗಳೂರು ವಿವಿಯು ಕಾನೂನು, ದೈಹಿಕ ಪರೀಕ್ಷೆ, ರಾಣಿ ಚೆನ್ನಮ್ಮ ವಿವಿಯ ಎಲ್ಲಾ ಪರೀಕ್ಷೆಗಳು, ಹಂಪಿ ಕನ್ನಡ ವಿವಿ, ಕರ್ನಾಟಕ ವಿವಿಯ ಎಂಎ, ಎಂಕಾಂ, ಎಂಎಸ್ಸಿ ಸ್ನಾತಕೋತ್ತರ ಪರೀಕ್ಷೆಗಳು ಇವತ್ತು ನಡೆಯಲ್ಲ. ಕುವೆಂಪು ವಿವಿಯ ಬಿಎಡ್ ಪರೀಕ್ಷೆ, ತುಮಕೂರು ವಿವಿಯ ಎಂಬಿಎ, ಎಂಕಾಂ, ಎಂಎ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ದಾವಣಗೆರೆ ವಿವಿ, ಗಂಗೂಬಾಯಿ ಹಾನಗಲ್ ವಿವಿ ಪರೀಕ್ಷೆಗಳು ಸಹ ನಡೆಯಲ್ಲ.

    ಎಲ್ಲಿ ರಜೆ ಘೋಷಣೆ..?
    ಬೆಂಗಳೂರು, ಬೆಂಗಳೂರು ಗ್ರಾ., ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ಬಳ್ಳಾರಿ, ಧಾರವಾಡ, ಉತ್ತರ ಕನ್ನಡ, ತುಮಕೂರು, ರಾಯಚೂರು, ದಾವಣಗೆರೆ, ರಾಮನಗರ, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ಬಾಗಲಕೋಟೆ, ಬೀದರ್, ಕಲಬುರಗಿ, ಗದಗ, ಚಿಕ್ಕಬಳ್ಳಾಪುರ, ಕೊಪ್ಪಳ

    ಎಲ್ಲಿ ರಜೆ ಇಲ್ಲ:
    ಮಡಿಕೇರಿ, ಚಿಕ್ಕಮಗಳೂರು, ವಿಜಯಪುರ, ಹಾವೇರಿ, ಹಾಸನ, ಯಾದಗಿರಿ, ಶಿವಮೊಗ್ಗ

    ಬಂದ್‍ಗೆ ಯಾರ್ಯಾರ ಬೆಂಬಲ?
    ಎಐಟಿಯುಸಿ, ಎನ್‍ಐಡಿಯುಸಿ, ಸಿಐಟಿಯು ಸಂಘಟನೆ ಬೆಂಬಲ ನೀಡಿದ್ದು, ಇತ್ತ ಕೆಎಸ್‍ಆರ್ಟಿಸಿ, ಬಿಎಂಟಿಸಿ ನೌಕರರ ಸಂಘ, ಬಾಷ್ ಕಾರ್ಮಿಕ ಸಂಘಟನೆ, ಬ್ಯಾಂಕ್ ಫೆಡರೇಷನ್ ಆಫ್ ಇಂಡಿಯಾ, ಪೀಣ್ಯ ಕೈಗಾರಿಕಾ ಕಾರ್ಮಿಕ ಸಂಘಟನೆ, ಟಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಸಂಘ, ಗಾರ್ಮೆಂಟ್ಸ್ ಸಂಘಟನೆ, ಅಂಗನವಾಡಿ ನೌಕರರು, ಕಟ್ಟಡ ಕಾರ್ಮಿಕ ಸಂಘಟನೆ, ಎಸ್‍ಎಫ್‍ಐ ವಿದ್ಯಾರ್ಥಿ ಸಂಘಟನೆ, 50ಕ್ಕೂ ಹೆಚ್ಚು ರೈತ ಸಂಘಟನೆಗಳು, ಎಪಿಎಂಸಿ ಸಂಘ ಬಂದ್ ಗೆ ಬೆಂಬಲ ನೀಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂದು, ನಾಳೆ ಕಾರ್ಮಿಕ ಮುಷ್ಕರ-ಎಂದಿನಂತೆ ಸಂಚಾರ ಆರಂಭಿಸಿದ ಬಿಎಂಟಿಸಿ

    ಇಂದು, ನಾಳೆ ಕಾರ್ಮಿಕ ಮುಷ್ಕರ-ಎಂದಿನಂತೆ ಸಂಚಾರ ಆರಂಭಿಸಿದ ಬಿಎಂಟಿಸಿ

    -ಮಲ್ಲೇಶ್ವರಂ, ಯಶವಂತಪುರದಲ್ಲಿ ಬಸ್‍ಗಳ ಮೇಲೆ ಕಲ್ಲು ತೂರಾಟ

    ಬೆಂಗಳೂರು: ಇಂದು ಮತ್ತು ನಾಳೆ ಬಂದ್ ಹಿನ್ನೆಲೆಯಲ್ಲಿ ಭಾರತ್ ಬಂದ್ ಘೋಷಣೆಯಾಗಿದೆ. ಇಂದು ಬೆಳಗ್ಗಿನ ಜಾವ ಎಂದಿನಂತೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭಿಸಿದೆ. ಮೆಜೆಸ್ಟಿಕ್ ನಿಲ್ದಾಣದಿಂದ ಬಸ್ ಗಳು ಹೊರಟ್ಟಿದ್ದು, ಬಂದ್ ತೀವ್ರತೆ ನೋಡಿಕೊಂಡು ಅಧಿಕಾರಿಗಳು ಮುಂದೆ ಕ್ರಮ ತೆಗೆದುಕೊಳ್ಳಲಿದ್ದಾರೆ. ಇತ್ತ ಮೆಜೆಸ್ಟಿಕ್ ಸುತ್ತಮುತ್ತಲಿರುವ ಹೋಟೆಲ್ ಗಳು ತೆರೆದಿವೆ.

    ನಸುಕಿನ ಜಾವ ಬಸ್ ಸಂಚಾರವಿದ್ದರೂ, 11 ಗಂಟೆಯ ನಂತರ ಬಸ್ ಗಳ ಓಡಾಟ ಸಂಪೂರ್ಣ ಸ್ತಬ್ಧವಾಗುವ ಸಾಧ್ಯತೆಗಳಿವೆ. ಕೆಎಸ್‍ಆರ್ ಟಿಸಿ, ವಾಯುವ್ಯ, ನೈರುತ್ಯ, ಈಶಾನ್ಯ ಸಾರಿಗೆ ಬಸ್‍ಗಳ ಓಡಾಟ ಸ್ತಬ್ಧವಾಗಿದೆ. ನಮ್ಮ ಮೆಟ್ರೋ ಸೌಲಭ್ಯವಿರಲಿದೆ. ಮಲ್ಲೇಶ್ವರಂನಲ್ಲಿ ಡಿಪೋ 9ರ ಬಸ್ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

    ಖಾಸಗಿ ಶಾಲೆಗಳು ಮುನ್ನೇಚ್ಚರಿಕೆ ಕ್ರಮವಾಗಿ ಎರಡು ದಿನ ರಜೆ ಘೋಷಣೆ ಮಾಡಿಕೊಂಡಿವೆ. ಬಂದ್ ಹಿನ್ನೆಲೆಯಲ್ಲಿ ಒಂದು ಕಡೆ ಬಸ್ ಗಳ ಸಂಚಾರ ಆರಂಭವಾಗಿದ್ದರೂ, ಪ್ರಯಾಣಿಕರು ಮಾತ್ರ ಕಾಣಿಸುತ್ತಿಲ್ಲ. ದೂರದ ಊರುಗಳಿಂದ ಸಿಲಿಕಾನ್ ಸಿಟಿಗೆ ಬಂದ ಜನರು ಲಭ್ಯವಿರುವ ಬಸ್ ಸೌಲಭ್ಯದ ಸಹಾಯದಿಂದ ತಮ್ಮ ನಿಗದಿತ ಸ್ಥಳ ತಲುಪಲು ಪ್ರಯತ್ನಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎರಡು ದಿನ ಭಾರತ್ ಬಂದ್ – ಏನಿರುತ್ತೆ? ಏನಿರಲ್ಲ?

    ಎರಡು ದಿನ ಭಾರತ್ ಬಂದ್ – ಏನಿರುತ್ತೆ? ಏನಿರಲ್ಲ?

    ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಎರಡು ದಿನಗಳ ಬಂದ್‍ಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಹಾಗೂ ಆಟೋ ಚಾಲಕರು ಬೆಂಬಲ ನೀಡಿದ್ದು, ಎಂದಿನಂತೆ ಓಲಾ, ಊಬರ್ ಸಂಚಾರ ಆಗಲಿದೆ.

    ನಗರದ ಖಾಸಗಿ ಶಾಲೆಗಳ ಸಂಘ ಬಂದ್ ಕಾರಣ ಎಲ್ಲಾ ಶಾಲಾ ಕಾಲೇಜುಗಳಿಗೆ 2 ದಿನಗಳ ರಜೆ ಘೋಷಣೆ ಮಾಡಿದೆ. ಉಳಿದಂತೆ ಸರ್ಕಾರಿ ಶಾಲೆ ಕಾಲೇಜುಗಳ ರಜೆ ಬಗ್ಗೆ ತೀರ್ಮಾನ ಕೈಗೊಳ್ಳಬೇಕಿದೆ. ಉಳಿದಂತೆ ಬಹುತೇಕ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ.

    ಏನಿರುತ್ತೆ?
    ಚಿತ್ರ ಮಂದಿರ, ಮಾಲ್, ಮೆಟ್ರೋ, ಎಸ್‍ಬಿಐ ಬ್ಯಾಂಕ್, ಹೋಟೆಲ್, ಆಸ್ಪತ್ರೆ, ಆಂಬುಲೆನ್ಸ್, ಹಾಲು-ತರಕಾರಿ, ಸರ್ಕಾರಿ ಕಚೇರಿ.

    ಏನಿರಲ್ಲ?
    ಸರ್ಕಾರಿ ಬಸ್, ಆಟೋ ಸಂಚಾರ, ಖಾಸಗಿ ಶಾಲಾ-ಕಾಲೇಜು, ಬ್ಯಾಂಕ್ ಸೇವೆ, ಎಪಿಎಂಸಿ ಮಾರುಕಟ್ಟೆ

    ಬಂದ್‍ಗೆ ಯಾರ್ಯಾರ ಬೆಂಬಲ?
    ಎಐಟಿಯುಸಿ, ಎನ್‍ಐಡಿಯುಸಿ, ಸಿಐಟಿಯು ಸಂಘಟನೆ ಬೆಂಬಲ ನೀಡಿದ್ದು, ಇತ್ತ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ನೌಕರರ ಸಂಘ, ಬಾಷ್ ಕಾರ್ಮಿಕ ಸಂಘಟನೆ, ಬ್ಯಾಂಕ್ ಫೆಡರೇಷನ್ ಆಫ್ ಇಂಡಿಯಾ, ಪೀಣ್ಯ ಕೈಗಾರಿಕಾ ಕಾರ್ಮಿಕ ಸಂಘಟನೆ, ಟಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಸಂಘ, ಗಾರ್ಮೆಂಟ್ಸ್ ಸಂಘಟನೆ, ಅಂಗನವಾಡಿ ನೌಕರರು, ಕಟ್ಟಡ ಕಾರ್ಮಿಕ ಸಂಘಟನೆ, ಎಸ್‍ಎಫ್‍ಐ ವಿದ್ಯಾರ್ಥಿ ಸಂಘಟನೆ, 50ಕ್ಕೂ ಹೆಚ್ಚು ರೈತ ಸಂಘಟನೆಗಳು, ಎಪಿಎಂಸಿ ಸಂಘ ಬಂದ್ ಗೆ ಬೆಂಬಲ ನೀಡಿದೆ.

    ಉಳಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳದ ಬೆಳಗಾವಿ, ಹಾಸನ, ಮಂಗಳೂರು, ಹುಬ್ಬಳ್ಳಿ, ಕಲಬುರಗಿ, ಉಡುಪಿ, ದಕ್ಷಿಣ ಕನ್ನಡ, ಹುಬ್ಬಳ್ಳಿಯಲ್ಲಿ ಸರ್ಕಾರಿ ಸಾರಿಗೆ ವ್ಯವಸ್ಥೆ ಲಭ್ಯವಿರುವುದಿಲ್ಲ. ಉಳಿದಂತೆ ಆಟೋ, ಟ್ಯಾಕ್ಸಿ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಅಲ್ಲದೇ ಸರ್ಕಾರಿ ಶಾಲೆಗೆ ರಜೆ ನೀಡುವ ನಿರ್ಧಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಬಳ್ಳಾರಿ, ಚಾಮರಾಜನಗರ, ಮೈಸೂರಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದ್ದು, 2 ದಿನಗಳ ಬದಲಾಗಿ ಶನಿವಾರ ಹಾಗೂ ಭಾನುವಾರ ತರಗತಿಗಳು ನಡೆಯಲಿದೆ. ಧಾರವಾಡದಲ್ಲಿ 8 ರಂದು ಮಾತ್ರ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದಾರೆ.

    ದಕ್ಷಿಣ ಕನ್ನಡದಲ್ಲಿ ಖಾಸಗಿ ಬಸ್ ಮಾಲೀಕರು ಬಂದ್ ಗೆ ಬೆಂಬಲ ನೀಡಿಲ್ಲ. ಆದರೆ ಉಡುಪಿ ಜಿಲ್ಲೆಯಲ್ಲಿ ಬಂದ್ ಗೆ ಮಾಲೀಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

    ತುಮಕೂರು ಜಿಲ್ಲೆಯಲ್ಲಿ ಶಾಲೆ ಕಾಲೇಜುಗಳು ಸರ್ಕಾರಿ ಕಚೇರಿಗಳು ಯಥಾಸ್ಥಿತಿ ಇರಲಿದೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಹಾಸನದಲ್ಲಿಯೂ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾಹಿತಿ ನೀಡಿದ್ದಾರೆ.

    ನಾಳೆ ಯಾವ ಪರೀಕ್ಷೆಗಳು ಇರಲ್ಲ?
    ಬೆಳಗಾವಿ ರಾಣಿ ಚೆನ್ನಮ್ಮ ವಿವಿ, ಧಾರವಾಡ ಕರ್ನಾಟಕ ವಿ.ವಿ, ಶಿವಮೊಗ್ಗ ಕುವೆಂಪು ವಿವಿ, ತುಮಕೂರು ವಿವಿ ಮಂಗಳವಾರ ಮತ್ತು ಬುಧವಾರ ನಡೆಯಬೇಕಿದ್ದ ಎಲ್ಲ ಪರೀಕ್ಷೆಗಳು ಮುಂದೂಡಿಕೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ‘ಅಕ್ಕಿ ಉದ್ದು ನೆನೆಸಿಯಾಗಿದೆ, ತರಕಾರಿ ಕಟ್ ಆಗಿದೆ, ಬಂದ್ ಮಾಡ್ಲಿಕೆ ಹೋಟೆಲ್ ಇವರ …..?’

    ‘ಅಕ್ಕಿ ಉದ್ದು ನೆನೆಸಿಯಾಗಿದೆ, ತರಕಾರಿ ಕಟ್ ಆಗಿದೆ, ಬಂದ್ ಮಾಡ್ಲಿಕೆ ಹೋಟೆಲ್ ಇವರ …..?’

    – ಉಡುಪಿಯಲ್ಲಿ ಹೋಟೆಲ್ ಮಾಲೀಕ ಗರಂ

    ಉಡುಪಿ: ಎರಡು ದಿನಗಳ ಭಾರತ್ ಬಂದ್ ಗೆ ಉಡುಪಿಯಲ್ಲಿ ಸಾರ್ವಜನಿಕರು ಅಸಮಾಧಾನ ವ್ಯಕ್ತ ಮಾಡಿದ್ದಾರೆ. ಬಂದ್ ಮಾಡಿ ಅಂತ ಯಾರೂ ಹೇಳಿಲ್ಲ. ಇಷ್ಟಕ್ಕೂ ಬಂದ್ ಯಾಕೆ ಮಾಡ್ಬೇಕು ಅಂತ ಪ್ರಶ್ನೆ ಮಾಡಿದ್ದಾರೆ.

    ಬ್ರಹ್ಮಗಿರಿಯ ದುರ್ಗಾ ಹೋಟೆಲ್ ಮಾಲೀಕ ದೇವು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ದಿನಾ ಬಂದ್ ಮಾಡಿದ್ರೆ ಖರ್ಚಿಗೆ ಹಣ ಯಾರು ಇವರು ಕೊಡ್ತಾರಾ? ಜನಕ್ಕೆ ಇದ್ರಿಂದ ಕಷ್ಟ ಅಲ್ವಾ? ಹೋಟೆಲ್ ಬಂದ್ ಆದ್ರೆ ಎಲ್ಲರೂ ಮನೆಯಿಂದ ಬುತ್ತಿ ತರೋಕೆ ಆಗುತ್ತಾ? ನಾವು ನಾಳೆಗೆ ಉದ್ದು ಅಕ್ಕಿ ನೆನೆಸಿಯಾಗಿದೆ. ಬನ್ಸ್ ಗೆ ಹಿಟ್ಟು ಕಲಸಿಯಾಗಿದೆ. ಇದನ್ನು ಏನ್ ಮಾಡೋದು ಎಂದು ಕೇಳಿದ್ದಾರೆ. ಒತ್ತಾಯಪೂರ್ವಕ ಬಂದ್ ಮಾಡೋಕೆ ಹೋಟೆಲ್ ಇವರ ಅಪ್ಪನದ್ದಾ ಎಂದು ಅವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಆಟೋ ರಿಕ್ಷಾ ಚಾಲಕರು, ದಿನಸಿ- ತರಕಾರಿ ಅಂಗಡಿ ಮಾಲೀಕರು ಎರಡು ದಿನ ಬಂದ್ ಎಂದು ಹೇಳಿದ ಕೂಡಲೇ ಮೂಗು ಮುರಿಯುತ್ತಿದ್ದಾರೆ. ಬಂದ್ ಮಾಡಿ ಅಂತ ನಮಗೆ ಯಾರೂ ಹೇಳಿಲ್ಲ. ಬಸ್ಸಲ್ಲಿ ಬೋರ್ಡ್ ಅಂಟಿಸಿರೋದನ್ನು ನೋಡಿದ್ದೇವೆ ಎಂದು ಹೇಳಿದ್ದಾರೆ.

    ಆಟೋ, ಟೆಂಪೋ ಮಾಲಕರು, ಚಾಲಕರು ಬಂದ್ ಮಾಡ್ಬೇಕಾ ಬೇಡ್ವಾ ಅನ್ನೋ ಗೊಂದಲದಲ್ಲಿದ್ದಾರೆ. ಶಾಲೆಯಿಂದ ಮನೆಗೆ ಹೋಗುವ ವಿದ್ಯಾರ್ಥಿಗಳು ನಾಳೆ ಮನೆಯಿಂದ ಹೊರಗೆ ಬರ್ಬೇಕಾ ಬೇಡ್ವಾ ಅನ್ನುವ ಆತಂಕದಲ್ಲಿದ್ದಾರೆ.

    ಬಸ್‍ಗಳು ರಸ್ತೆಗಿಳಿಯಲ್ಲ:
    ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಭಾರತ್ ಬಂದ್‍ಗೆ ಉಡುಪಿ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಐದು ಬಿಜೆಪಿ ಶಾಸಕರಿದ್ದರೂ, ಕೇಂದ್ರದ ಕಾರ್ಮಿಕ ನೀತಿ ವಿಚಾರದಲ್ಲಿ ಕಾರ್ಮಿಕರು ಬಂದ್ ಮಾಡಲಿದ್ದಾರೆ. ಖಾಸಗಿ ಬಸ್ ಚಾಲಕರು, ನಿರ್ವಾಹಕರು ಬಂದ್‍ಗೆ ಬೆಂಬಲ ಕೊಟ್ಟಿದ್ದಾರೆ. ಖಾಸಗಿ ಬಸ್ ಮಾಲಕರು ಬಂದ್ ಮಾಡಬಾರದೆಂದು ಮನವೊಲಿಸುತ್ತಿದ್ದರೂ, ಬಸ್ ಗಳು ರಸ್ತೆಗೆ ಇಳಿಯಲ್ಲ. ಸರ್ಕಾರಿ ಶಾಲಾ ಕಾಲೇಜು ರಜೆ ಬಗ್ಗೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಈವರೆಗೆ ನಿರ್ಧಾರ ತೆಗೆದುಕೊಂಡಿಲ್ಲ.

    ಟ್ಯಾಕ್ಸಿಮೆನ್ ಅಸೋಸಿಯೇಷನ್ ಬಂದ್ ಮಾಡದಿರಲು ಸದ್ಯ ನಿರ್ಧರಿಸಿದ್ದಾರೆ. ಉಡುಪಿ ಜಿಲ್ಲೆಯ ಹೋಟೆಲ್-ಬಾರ್ ಅಸೋಸಿಯೇಶನ್ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಮಾಡಿದ್ದಾರೆ. ಆದ್ರೆ ಬಂದ್ ಮಾಡಲ್ಲ ಅಂತ ಹೇಳಿದ್ದಾರೆ. ರಾಜ್ಯ ಸಂಘ ಬೆಂಗಳೂರಲ್ಲಿ ನಿರ್ಧಾರ ಮಾಡಿದ್ದನ್ನು ಇಲ್ಲಿ ಅನುಸರಿಸುತ್ತಾರಂತೆ ಹೋಟೆಲ್ ಮಾಲೀಕರು ಹೇಳುತ್ತಾರೆ.

    ಕೆಎಸ್‍ಆರ್‍ಟಿಸಿ ಬಸ್‍ಗಳು ಸ್ವಯಂಪ್ರೇರಿತ ಬಂದ್ ಇಲ್ಲ ಅನ್ನೋ ಮಾಹಿತಿ ಇದೆ. ಖಾಸಗಿ ಬಸ್ ಕಾರ್ಮಿಕರು ಬಂದ್ ಒತ್ತಾಯ ಮಾಡಿ ಬಸ್ ಅಡ್ಡ ಹಾಕಿ ಗಲಾಟೆ ಮಾಡಿದರೆ ಬಂದ್ ಆಗುತ್ತದೆ. ಕೆಎಸ್‍ಆರ್‍ಟಿಸಿ ಚಾಲಕ ನಿರ್ವಾಹಕರು ಸೇವೆಗೆ ಬರದಿದ್ದರೆ ಬಸ್ ಓಡಲ್ಲ.

    ಮೆಡಿಕಲ್ ಆಸ್ಪತ್ರೆ ಓಪನ್ ಇರುತ್ತದೆ. ಉಡುಪಿಯಲ್ಲಿ ಚಿತ್ರಮಂದಿರ ಬಂದ್ ಇರುವುದಿಲ್ಲ. ಕಮ್ಯೂನಿಸ್ಟ್ ಬೆಂಬಲಿತ ಆಟೋರಿಕ್ಷಾಗಳು ಓಡಲ್ಲ. ಬಿಜೆಪಿ ಬೆಂಬಲಿತ ಯೂನಿಯನ್ ಆಟೋಗಳು ಬಾಡಿಗೆ ಮಾಡುತ್ತದೆ. ಮಂಗಳವಾರ ಶುಭ ಕಾರ್ಯ ಇಲ್ಲ. ಮದುವೆಗಳು ಇರುವುದಿಲ್ಲ.

    ಒಟ್ಟಿನಲ್ಲಿ ಕರಾವಳಿ ಜಿಲ್ಲೆ ಉಡುಪಿಯಲ್ಲಿ ಜನರು ಮತ್ತು ವ್ಯಾಪಾರಸ್ಥರು, ವಾಹನ ಚಾಲಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾಳೆ KSRTC, ಬಿಎಂಟಿಸಿ ಬಸ್ ಇರುತ್ತಾ – ಸಾರಿಗೆ ಸಚಿವರು ಹೇಳೋದು ಏನು

    ನಾಳೆ KSRTC, ಬಿಎಂಟಿಸಿ ಬಸ್ ಇರುತ್ತಾ – ಸಾರಿಗೆ ಸಚಿವರು ಹೇಳೋದು ಏನು

    ಮಂಡ್ಯ: ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ ಭಾರತ್ ಬಂದ್ ಗೆ ಸಹಕಾರ ನೀಡುವುದಾಗಿ ಸಾರಿಗೆ ಸಚಿವ ಡಿಸಿ.ತಮ್ಮಣ್ಣ ಹೇಳಿದ್ದಾರೆ.

    ಮದ್ದೂರಿನಲ್ಲಿ ಮಾತನಾಡಿದ ಅವರು, ಅನೇಕ ಸಂಘ ಸಂಸ್ಥೆಗಳು ಬಂದ್‍ಗೆ ಕರೆ ನೀಡಿವೆ. ಹೀಗಾಗಿ ಸಾರಿಗೆ ಇಲಾಖೆಯ ನೌಕರರು ಸಹಕರಿಸುತ್ತಾರೆ ಎಂದು ತಿಳಿಸಿದರು.

    ಸರ್ಕಾರದ ಬೆಂಬಲ ಎಂದು ಹೇಳುತ್ತಿಲ್ಲ. ಕಾರ್ಮಿಕರ ಹಿತದೃಷ್ಟಿಯಿಂದ ಅಖಿಲ ಭಾರತ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ನಾವು ಕೂಡ ಸಹಕರಿಸುತ್ತಿದ್ದೇವೆ. ನಾಳೆ ಬಸ್ ಸಂಚಾರದ ಬಗ್ಗೆ ಪರಿಸ್ಥಿತಿ ನೋಡಿ ತೀರ್ಮಾನಕ್ಕೆ ಬರುತ್ತೇವೆ. ಆದರೆ ಬಂದ್ ಇರುವುದರಿಂದ ಸಾರಿಗೆ ವ್ಯವಸ್ಥೆ ಕಷ್ಟ ಎಂದು ಹೇಳಿದರು.

    ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರೆ ಮಾತ್ರ ಬಸ್ ಸಂಚಾರ ಇರುತ್ತೆ. ಇಲ್ಲದಿದ್ರೆ ಬಸ್ ಸಂಚಾರ ಇರುವುದಿಲ್ಲ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎರಡು ದಿನ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

    ಎರಡು ದಿನ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

    ಬೆಂಗಳೂರು: ಮಂಗಳವಾರ ಹಾಗೂ ಬುಧವಾರ ದೇಶಾದ್ಯಂತ ಕಾರ್ಮಿಕರ ಮುಷ್ಕರ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಖಾಸಗಿ ಶಾಲೆಗಳ ಆಡಳಿತ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ದೇಶಾದ್ಯಂತ ಮಂಗಳವಾರ ಹಾಗೂ ಬುಧವಾರ ಮುಷ್ಕರ ನಡೆಸಲು ಹಲವು ಕಾರ್ಮಿಕ ಸಂಘಟನೆಗಳು ನಿರ್ಧರಿಸಿದ್ದಾರೆ. ರಾಜ್ಯದಲ್ಲೂ ಎಲ್ಲಾ ಕಾರ್ಮಿಕರು ಈ ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. ಗಲಾಟೆ, ಗಲಭೆಗಳು ನಡೆಯುವ ಸಾಧ್ಯತೆಯಿದೆ. ಆದರಿಂದ ಮುಂಜಾಗೃತ ಕ್ರಮವಾಗಿ ಶಾಲಾ ಮಕ್ಕಳಿಗೆ ತೊಂದರೆ ಆಗಬಾರದೆಂದು ರಜೆ ಘೋಷಿಸಲಾಗಿದೆ ಎಂದು ಶಶಿಕುಮಾರ್ ತಿಳಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಶಿಕುಮಾರ್ ಅವರು, ಮುಷ್ಕರಕ್ಕೆ ಖಾಸಗಿ ಶಾಲೆಗಳು ಬೆಂಬಲ ಕೊಡುತ್ತಿದ್ದೇವೆ ಅಂತ ಅಂದುಕೊಳ್ಳಬೇಡಿ. ನಾವು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ರಜೆ ಘೋಷಿಸಲು ತಿರ್ಮಾನಿಸಿದ್ದೇವೆ. ಖಾಸಗಿ ಶಾಲೆಗಳ ಆಡಳಿತ ಒಕ್ಕೂಟದ ಸದಸ್ಯರು ಸೇರಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ನಾಳೆ, ನಾಡಿದ್ದು ಎರಡು ದಿನಗಳು ಖಾಸಗಿ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಇನ್ನೂ ಸರ್ಕಾರಿ ಶಾಲೆಗಳಿಗೆ ಭಾರತ್ ಮುಷ್ಕರ ಹಿನ್ನೆಲೆ ರಜೆ ಘೋಷಣೆ ಮಾಡಿಲ್ಲ. ಆದ್ರೆ ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ನೀಡಲು ಜಿಲ್ಲೆಯಲ್ಲಿ ನಡೆಯುವ ಮುಷ್ಕರದ ಪರಿಸ್ಥಿತಿ ಅನುಗುಣವಾಗಿ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಹಾಜನರೇ ಎಚ್ಚರ ಎಚ್ಚರ..! ಮಂಗಳವಾರ, ಬುಧವಾರ ಕಾರ್ಮಿಕ ಸಂಘಟನೆಗಳಿಂದ ಮುಷ್ಕರ

    ಮಹಾಜನರೇ ಎಚ್ಚರ ಎಚ್ಚರ..! ಮಂಗಳವಾರ, ಬುಧವಾರ ಕಾರ್ಮಿಕ ಸಂಘಟನೆಗಳಿಂದ ಮುಷ್ಕರ

    ಬೆಂಗಳೂರು: ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಒಟ್ಟು ಹನ್ನೇರಡು ಬೇಡಿಕೆ ಮುಂದಿಟ್ಟು ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಮುಷ್ಕರಕ್ಕೆ ಕರೆ ಕೊಟ್ಟಿದೆ. ಎಐಟಿಸಿ, ಐಎನ್‍ಟಿಯುಸಿ, ಸಿಐಟಿಯು ಸೇರಿದಂತೆ ಅಖಿಲ ಭಾರತ ಕಾರ್ಮಿಕ ಸಂಘಟನೆಗಳು ಕರೆಕೊಟ್ಟ ಬಂದ್‍ಗೆ ದೋಸ್ತಿ ಸರ್ಕಾರ ಪರೋಕ್ಷ ಬೆಂಬಲ ನೀಡಿದಂತೆ ಕಾಣುತ್ತಿದೆ. ಬಿಎಂಟಿಸಿ ಹಾಗೂ ಕೆಎಸ್‍ಆರ್ ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಬಸ್‍ಗಳು ಸ್ತಬ್ಧವಾಗಲಿವೆ.

    ಏನಿರಲ್ಲ?
    * ಬಿಎಂಟಿಸಿ, ಕೆಎಸ್‍ಆರ್ ಟಿಸಿ ಬಸ್ ಸೇವೆ
    * ಆಟೋ, ಟ್ಯಾಕ್ಸಿ ಸಂಚಾರ ಅನುಮಾನ
    * ಅಂಗನವಾಡಿ, ಬ್ಯಾಂಕ್ ಸೇವೆ
    * ಗಾರ್ಮೆಂಟ್ಸ್, ಫ್ಯಾಕ್ಟರಿ ಕ್ಲೋಸ್
    * ಕರಾವಳಿ ಭಾಗದಲ್ಲಿ ಖಾಸಗಿ ಬಸ್ ಸೇವೆ

    ಬಿಎಂಟಿಸಿ, ಕೆಎಸ್‍ಆರ್ ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಬಸ್‍ಗಳ ಓಡಾಟ ಇರಲ್ಲ. ಒಟ್ಟು 26 ಸಾವಿರ ನಾಲ್ಕು ನಿಗಮದ ಬಸ್ ಸ್ತಬ್ಧವಾಗಲಿದೆ. ಎಆರ್ ಡಿಯು ಆಟೋ ಸಂಘಟನೆ ಬೆಂಬಲ ನೀಡಿದ್ದರಿಂದ ಬಹುತೇಕ ಆಟೋ ಸಂಚಾರ ಅನುಮಾನ. ಟ್ಯಾಕ್ಸಿ ಮಾಲೀಕರ ಸಂಘ ಕೂಡ ಬೆಂಬಲ ಕೊಟ್ಟಿದೆ. ಇನ್ನು ಅಂಗನವಾಡಿ ನೌಕರರು ಮುಷ್ಕರದಲ್ಲಿ ಭಾಗಿಯಾಗುತ್ತಿದ್ದು ಅಂಗನವಾಡಿಗಳು ಬಂದ್ ಆಗಲಿವೆ. ಬ್ಯಾಂಕ್ ನೌಕರರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ತಿರೋದ್ರಿಂದ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಲಕ್ಷಾಂತರ ಮಂದಿ ಗಾರ್ಮೆಂಟ್ಸ್ ನೌಕರರು ಬಂದ್‍ನಲ್ಲಿ ಭಾಗವಹಿಸೋದ್ರಿಂದ ಎಲ್ಲಾ ಫ್ಯಾಕ್ಟರಿಗಳು ಕ್ಲೋಸ್ ಆಗಿರಲಿವೆ. ಕರಾವಳಿ ಭಾಗದಲ್ಲಿ ಖಾಸಗಿ ಬಸ್‍ಗಳ ಸಂಚಾರ ಕೂಡ ಇರಲ್ಲ

    ಸರ್ಕಾರಿ ನೌಕರರು, ಚಿತ್ರೋದ್ಯಮದ ಮಂದಿ, ಬೀದಿ ಬದಿ ವ್ಯಾಪಾರಿಗಳು, ಎಪಿಎಂಸಿ ಬಂದ್‍ಗೆ ನೈತಿಕ ಬೆಂಬಲ ಘೋಷಿಸಿದ್ದಾರೆ. ಓಲಾ, ಉಬರ್ ಬಂದ್‍ಗೆ ನೈತಿಕ ಬೆಂಬಲ ನೀಡಿವೆ. ಕ್ಯಾಬ್ ರಸ್ತೆಗಿಳಿಸದೇ ಇರುವ ಬಗ್ಗೆ ಇನ್ನಷ್ಟೇ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಬೇಕಿದೆ. ಹೋಟೆಲ್ ಕೂಡ ಓಪನ್ ಇರೋದು ಡೌಟ್. ಶಾಲಾ ಕಾಲೇಜು ಬಂದ್ ಮಾಡುವ ನಿರ್ಧಾರ ಆಯಾ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ.

    ಏನಿರುತ್ತೆ ?
    * ಆಸ್ಪತ್ರೆಗಳು, ಮೆಡಿಕಲ್ ಶಾಪ್
    * ಆ್ಯಂಬುಲೆನ್ಸ್ ಸೇವೆ
    * ಹಾಲು, ತರಕಾರಿ, ಪೇಪರ್

    ಬಂದ್ ನಡೆಯುವ ಎರಡೂ ದಿನ ನಿತ್ಯದ ಅಗತ್ಯ ವಸ್ತುಗಳು, ತುರ್ತು ಸೇವೆಗಳಿಗೆ ಅವಕಾಶ ನೀಡಲಾಗಿದೆ. ಆಸ್ಪತ್ರೆಗಳು, ಮೆಡಿಕಲ್ ಶಾಪ್, ಆ್ಯಂಬುಲೆನ್ಸ್ ಸೇವೆಗಳು ಇರುತ್ತವೆ. ಬೆಳಗ್ಗೆ ಹಾಲು, ತರಕಾರಿ, ಪೇಪರ್ ಲಭ್ಯ ಇರುತ್ತವೆ. ಬಂದ್ ದಿನ ಕಾರ್ಮಿಕ ಸಂಘಟನೆಗಳು ಬೆಂಗಳೂರಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿವೆ. ಟೌನ್ ಹಾಲ್, ಮಿನರ್ವ ವೃತ್ತದಿಂದ ಫ್ರೀಡಂಪಾರ್ಕ್ ವರೆಗೆ ನಡೆವ ರ್ಯಾಲಿಯಲ್ಲಿ ಲಕ್ಷಾಂತರ ಕಾರ್ಮಿಕರು ಪಾಲ್ಗೊಳ್ಳಲಿದ್ದು, ದೊಡ್ಡ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಸಂಭವಿಸೋ ಸಾಧ್ಯತೆ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಾರತ್ ಬಂದ್: ರಾಜ್ಯದಲ್ಲಿ ಎಲ್ಲಿ? ಏನಾಯ್ತು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

    ಭಾರತ್ ಬಂದ್: ರಾಜ್ಯದಲ್ಲಿ ಎಲ್ಲಿ? ಏನಾಯ್ತು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

    ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆಕೊಟ್ಟಿದ್ದ ಭಾರತ್ ಬಂದ್ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಯಶಸ್ವಿಯಾಗಿದ್ದು, ಬೆಳಗ್ಗೆಯಿಂದಲೂ ಸಾರಿಗೆ ಸಂಪರ್ಕ, ವಹಿವಾಟು ಇಲ್ಲದೇ ಅಸ್ತವ್ಯಸ್ತ ಗೊಂಡಿದ್ದ ಸಾರ್ವಜನಿಕ ಜೀವನ ಸಂಜೆ ವೇಳೆಗೆ ಸಹಜ ಸ್ಥಿತಿಯತ್ತ ಮರಳಿತು.

    ಬಂದ್ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳು, ಪಟ್ಟಣ ಹಾಗೂ ನಗರದಗಳಲ್ಲಿ ಪೊಲೀಸರು ಬೀಗಿ ಬಂದೋಬಸ್ತ್ ಅಳವಡಿಸಿದ್ದರು. ಇದರ ಹೊರತಾಗಿಯೂ ಕೆಲವೆಡೆ ಕಲ್ಲು ತೂರಾಟ ಸೇರಿದಂತೆ ಕೆಲ ಅಹಿತರಕರ ಘಟನೆಗಳು ವರದಿಯಾಗಿದೆ.

    ಹಲವು ನಗರಗಳಲ್ಲಿ ಬೆಳಂಬೆಳಗ್ಗೆ ಪ್ರತಿಭಟನೆಗಳು ಶುರುವಾದವು. ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದವು. ಬೆಳಗ್ಗೆ 11 ಗಂಟೆಯಾಗುತ್ತಿದ್ದಂತೆ ಪ್ರತಿಭಟನೆಯ ಕಾವು ಏರತೊಡಗಿತು. ರಾಜ್ಯದೆಲ್ಲೆಡೆ ಗಲಾಟೆ, ಪ್ರತಿಭಟನೆಗಳು ನಡೆದವು. ಉಡುಪಿ ಸೇರಿದಂತೆ ಹಲವಡೆ ಗಲಾಟೆ ನಡೆದಿದ್ದು, ಕೆಲವು ಕಡೆ ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಲಾಯಿತು. ಉಡುಪಿಯ ಬನ್ನಂಜೆಯಲ್ಲಿ ಅಂಗಡಿ ಬಂದ್ ಮಾಡಿಸುವ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು, ಬಿಜೆಪಿ ಜಿಲ್ಲಾಧ್ಯಕ್ಷ ಪ್ರಭಾಕರ್ ತಲೆಗೆ ಗಾಯವಾಗಿತ್ತು. ಬಳಿಕ ಗುಂಪು ಚದುರಿಸಲು ಎಸ್ಪಿ ಸೇರಿದಂತೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿ ನಿಯಂತ್ರಿಸಿದರು. ಸದ್ಯ ನಾಳೆ ಬೆಳಗ್ಗೆ 6 ಗಂಟೆವರೆಗೆ ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

    ಮೋದಿ ಅಧಿಕಾರಕ್ಕೆ ಬಂದ 4 ವರ್ಷ 5 ತಿಂಗಳಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ತೈಲ ದರ ಏರಿಕೆ ಬಗ್ಗೆ ಒಂದೂ ಮಾತು ಮಾತನಾಡಿಲ್ಲ. ಪೆಟ್ರೋಲ್ ಡೀಸೆಲ್ ಮೇಲೆ ತೆರಿಗೆ ದರ ಏರಿಸಿ 11 ಲಕ್ಷ ಕೋಟಿ ರೂ. ಹಣ ಪಡೆದಿದ್ದೀರಿ ಆ ಹಣ ಎಲ್ಲಿ ಹೋಯಿತು ಎಂದು ಲೋಕಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು. ಈ ಹೋರಾಟಕ್ಕೆ ಪ್ರಧಾನಿ ಮೋದಿ ಸ್ಪಂದಿಸದಿದ್ದರೆ ಮತ್ತೊಂದು ಬ್ರಹ್ಮಾಸ್ತ್ರ ಬಿಡಲಿದ್ದೇವೆ ಎಂದು ಮಾಜಿಸ ಸಚಿವ ಎಚ್.ಕೆ.ಪಾಟೀಲ್ ಎಚ್ಚರಿಸಿದರು. ಇಂದು ಕರೆ ನೀಡಿರುವ ಬಂದ್ ಚುನಾವಣೆ ಪ್ರೇರಿತದ ದುರುದ್ದೇಶದ ಬಂದ್ ಬಿಜೆಪಿ ರಾಜ್ಯಾಧ್ಯಲ್ಷ ಬಿಎಸ್ ಯಡಿಯೂರಪ್ಪ, ಉದಾಸಿ, ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.


    ಬೆಂಗಳೂರು ಸ್ತಬ್ಧ: ಬಂದ್ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಹೆಚ್ಚಿನ ಜನರು ಮನೆಯಿಂದ ಹೊರಬಾರದೇ ರಸ್ತೆಗಳು ಬಿಕೋ ಎನ್ನುತ್ತಿತ್ತು. ಮೈಸೂರು ಬ್ಯಾಂಕ್ ವೃತ್ತದಲ್ಲಿ ಕಾಂಗ್ರೆಸ್ ನಾಯಕರು ಎತ್ತಿನ ಗಾಡಿ ಏರಿ ಪ್ರತಿಭಟನೆ ನಡೆಸಿ ಬಳಿಕ ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಟೌನ್‍ಹಾಲ್‍ನಿಂದ ರಾಜಭವನದವರೆಗೆ ಜೆಡಿಎಸ್ ಪಾದಯಾತ್ರೆ ನಡೆಸಲು ಯತ್ನಿಸಿತ್ತು. ಆದರೆ ಈ ಪ್ರತಿಭಟನೆಗೆ ರಾಜ್ಯ ಜೆಡಿಎಸ್ ಅಧ್ಯಕ್ಷರೇ ಗೈರಾಗಿದ್ದರು. ಪ್ರತಿ ಪ್ರತಿಭಟನ ಸ್ಥಳಕ್ಕೆ ಎಂಎಲ್‍ಸಿ ಶರವಣ ಕುದುರೆ ಏರಿ ಬಂದು ಗಮನ ಸೆಳೆದರು. ಮತ್ತೊಂದೆಡೆ ಕನ್ನಡ ಪರ ಸಂಘಟನೆಗಳಾದ ಕರವೇ ನಾರಾಯಣ ಗೌಡ ಬಣ ಮೌರ್ಯ ವೃತ್ತದಲ್ಲಿ, ಪ್ರವೀಣ್ ಕುಮಾಣ ಮೇಖ್ರಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಇಲ್ಲಿಯೂ ಪೊಲೀಸರು ಪ್ರತಿಭಟನಾಕಾರನ್ನು ತಡೆದರು. ಪ್ರತಿಭಟನೆ ವೇಳೆ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಎಮ್ಮೆ ಏರಿ ಪ್ರತಿಭಟಿಸಿದರು.

    ದುಪ್ಪಟ್ಟು ವಸೂಲಿ: ಬಂದ್ ಅನ್ನು ಬಂಡವಾಳ ಮಾಡಿಕೊಂಡ ಖಾಸಗಿ ಬಸ್‍ಗಳು ದುಪ್ಪಟ್ಟು ಹಣ ವಸೂಲಿ ಮಾಡಿದರೆ, ಓಲಾ, ಊಬರ್ ಕ್ಯಾಬ್ ಸಂಘದ ಸದಸ್ಯರು ಕಾರಿಗೆ ಹಗ್ಗ ಕಟ್ಟಿ ಎಳೆದು ಪ್ರತಿಭಟನೆ ನಡೆಸಿದರು. ಭಾರತ್ ಬಂದ್ ಕಾರಣ ಬೇರೆ ಊರಿಂದ ಬಂದ ಸಾರ್ವಜನಿಕರು ಬೆಂಗಳೂರು ಸೇರಿದಂತೆ ಹಲವು ಬಸ್ ಇಲ್ಲದೇ ಪರದಾಡಿದರು. ಮಧ್ಯಾಹ್ನ 3 ಗಂಟೆ ಬಳಿ ನಗರಗಳುಸ ಯಥಾ ಸ್ಥಿತಿಗೆ ತಲುಪಿತ್ತು. ಬಂದ್ ನಿಂದ ಬೆಳಗ್ಗೆ ಇಂದ ರಸ್ತೆಗಳಿಯದ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಸಂಚಾರ ಆರಂಭವಾಯಿತು. ಮಾಲ್‍ಗಳು, ಚಿತ್ರಮಂದಿರಗಳು ಸಂಜೆ ವೇಳೆಗೆ ಪುನರ್ ಆರಂಭವಾದವು.

    https://www.youtube.com/watch?v=iYMBznDqMeQ

  • ಮಾಧ್ಯಮಗಳನ್ನು ಟೀಕಿಸಿ ಎಚ್‍ಡಿಡಿಗೆ ಟಾಂಗ್ ಕೊಟ್ಟ ಚಲುವರಾಯಸ್ವಾಮಿ

    ಮಾಧ್ಯಮಗಳನ್ನು ಟೀಕಿಸಿ ಎಚ್‍ಡಿಡಿಗೆ ಟಾಂಗ್ ಕೊಟ್ಟ ಚಲುವರಾಯಸ್ವಾಮಿ

    ಮಂಡ್ಯ: ಬಸ್ ದರ ಏರಿಕೆ ವಿಚಾರವಾಗಿ ರಾಷ್ಟ್ರೀಯ ನಾಯಕರು ಅಷ್ಟೊಂದು ತುಚ್ಛವಾಗಿ ಹೇಳಿರಲ್ಲ, ಮಾಧ್ಯಮದವರು ಉಪ್ಪು ಖಾರ ಸೇರಿಸಿ ಹೇಳಿದ್ದಾರೆ ಎಂದು ಟೀಕಿಸಿ ತೈಲ ಬೆಲೆ ಏರಿಕೆಯಾದರೆ ನೀರಲ್ಲಿ ಓಡಿಸಲಾಗುತ್ತಾ ಎಂಬ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆಗೆ ಮಾಜಿ ಸಚಿವ ಚಲುವರಾಯಸ್ವಾಮಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

    ತೈಲ ಬೆಲೆ ಏರಿಕೆ ವಿರೋಧಿಸಿ ಬಂದ್‍ನಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿದ ವೇಳೆ ಮಾತನಾಡಿದ ಅವರು ತೈಲ ಬೆಲೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಬೆಂಗಳೂರು ಮೈಸೂರು ಹೆದ್ದಾರಿ ಸೇರಿದಂತೆ ಮಂಡ್ಯ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೇಂದ್ರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಇದನ್ನು ಓದಿ: ದರ ಇಳಿಸಿ ಅಂದ್ರೆ ನೀರಲ್ಲಿ ಬಸ್ ಓಡಿಸುವುದಕ್ಕೆ ಸಾಧ್ಯವಾಗುತ್ತಾ..?- ಎಚ್‍ಡಿಡಿ

    ಡಿಕೆ ಶಿವಕುಮಾರ್ ಅವರ ವಿಚಾರಕ್ಕೆ ಪ್ರತಿಕ್ರಿಯಿಸಿ ಕರ್ನಾಟಕದಲ್ಲಿ ಪ್ರಭಾವಿ ನಾಯಕರಾಗಿದ್ದು, ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಅವರ ಮೇಲೆ ಐಟಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಐಟಿ ದಾಳಿ ಸರ್ಕಾರದ ಮೇಲೂ ಪರಿಣಾಮ ಬೀರಲ್ಲ. ಡಿಕೆ ಶಿವಕುಮಾರ್ ಮೇಲೂ ಪರಿಣಾಮ ಬೀರಲ್ಲ. ಬಿಜೆಪಿ ಅನೇಕ ಕಡೆ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಆತಂಕ ಬೇಡ. ನಾವೆಲ್ಲರೂ ಡಿಕೆ ಶಿವಕುಮಾರ್ ಜೊತೆ ಇದ್ದೇವೆ. ಅವರೂ ಕೂಡ ಐಟಿ ದಾಳಿಯನ್ನು ಸಮರ್ಥವಾಗಿ ಎದುರಿಸುತ್ತಾರೆ ಎಂದರು.

    ಪ್ರಧಾನಿ ವಿರುದ್ಧವೂ ಹರಿಹಾಯ್ದ ಅವರು ಮೋದಿ ನೀಡಿದ ಒಂದೊಂದು ಭರವಸೆಯೂ ಹುಸಿಯಾಗಿದೆ. ಆರು ತಿಂಗಳಲ್ಲಿ ಚುನಾವಣೆ ಇರುವುದರಿಂದ ಇಲ್ಲದ್ದನ್ನು ಗಿಮಿಕ್ ಮಾಡುತ್ತಿದ್ದಾರೆ ಎಂದು ದೂರಿದರು.

    ಪ್ರತಿಭಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕೆಲವೊಂದು ಅಂಗಡಿಗಳನ್ನು ಬಲವಂತವಾಗಿ ಬಾಗಿಲು ಹಾಕಿಸಿದ್ದು ಸಾರ್ವಜನಿಕ ಟೀಕೆಗೆ ಗುರಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತೈಲ ಬೆಲೆ ಏರಿಸಬೇಕು ಎಂದ ಆಪ್ ಕಾರ್ಯಕರ್ತನಿಗೆ ಮುಖಂಡನಿಂದ ಕಪಾಳಮೋಕ್ಷ – ವಿಡಿಯೋ ನೋಡಿ

    ತೈಲ ಬೆಲೆ ಏರಿಸಬೇಕು ಎಂದ ಆಪ್ ಕಾರ್ಯಕರ್ತನಿಗೆ ಮುಖಂಡನಿಂದ ಕಪಾಳಮೋಕ್ಷ – ವಿಡಿಯೋ ನೋಡಿ

    ಬೆಳಗಾವಿ: ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ವೇಳೆ ತಪ್ಪಾಗಿ ತೈಲ ಬೆಲೆ ಏರಿಸಬೇಕು ಎಂದು ಘೋಷಣೆ ಕೂಗಿದ ಎಎಪಿ ಕಾರ್ಯಕರ್ತನಿಗೆ ಮುಖಂಡರೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ.

    ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಆಮ್ ಆದ್ಮಿ ಪಕ್ಷದಿಂದ ತೈಲ ಬೆಲೆ ಖಂಡಿಸಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತನೊಬ್ಬ ತೈಲ ಬೆಲೆ ಏರಿಸಲೇಬೇಕು ಎಂದು ಘೋಷಣೆಯನ್ನು ಕೂಗಿದ್ದಾರೆ. ಇದರಿಂದ ಆಕ್ರೋಶಗೊಂಡು ಅಲ್ಲೆ ಇದ್ದ ಮುಖಂಡ ಸದಾನಂದ್ ಬಾಮನೆ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ.

    ದೇಶದೆಲ್ಲೆಡೆ ತೈಲ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಬೆಳಗಾವಿಯಲ್ಲೂ ಬಂದ್ ಗೆ ಕರೆ ನೀಡಿದ್ದರು. ಈ ವೇಳೆ ಕಾರ್ಯಕರ್ತ ತೈಲ ಬೆಲೆ ಇಳಿಸಬೇಕು ಎಂದು ಹೇಳುವ ಬದಲು ತೈಲ ಬೆಲೆ ಏರಿಸಬೇಕು ಎಂದು ಕೂಗಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv