Tag: ಭಾರತ. ಕ್ರಿಕೆಟ್

  • ನಾಯಕತ್ವ ಯಾರೊಬ್ಬರ ಜನ್ಮಸಿದ್ಧ ಹಕ್ಕಲ್ಲ: ಗೌತಮ್ ಗಂಭೀರ್

    ನಾಯಕತ್ವ ಯಾರೊಬ್ಬರ ಜನ್ಮಸಿದ್ಧ ಹಕ್ಕಲ್ಲ: ಗೌತಮ್ ಗಂಭೀರ್

    ನವದೆಹಲಿ: ವಿರಾಟ್ ಕೊಹ್ಲಿ ಅವರು ಭಾರತ ಕ್ರಿಕೆಟ್ ತಂಡದ ಟೆಸ್ಟ್ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಅನೇಕ ಕ್ರಿಕೆಟಿಗರು ಹಾಗೂ ಮಾಜಿ ಆಟಗಾರರು ನಾನಾ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಅಂತೆಯೇ ಗೌತಮ್ ಗಂಭೀರ್ ಅವರು ಪ್ರತಿಕ್ರಿಯಿಸಿ, ನಾಯಕತ್ವ ಯಾರೊಬ್ಬರ ಜನ್ಮಸಿದ್ಧ ಹಕ್ಕಲ್ಲ ಎಂದು ಹೇಳಿದ್ದಾರೆ.

    ವಿರಾಟ್ ಕೊಹ್ಲಿ ಈಗ ಭಾರತ ಕ್ರಿಕೆಟ್ ತಂಡದ ಎಲ್ಲಾ ಮಾದರಿಯ ನಾಯಕತ್ವದಿಂದ ಹೊರನಡೆದಿದ್ದಾರೆ. ಈ ಬಗ್ಗೆ ಮಾತನಾಡಿದ ಗಂಭೀರ್, 33 ವಯಸ್ಸಿನ ಆಟಗಾರರು ರನ್ ಗಳಿಸುವತ್ತ ಗಮನ ಹರಿಸಬೇಕು. ಅದು ಹೆಚ್ಚು ಮುಖ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಮೂರು ಮಾದರಿ ತಂಡಕ್ಕೂ ಒಬ್ಬನೇ ನಾಯಕ – ಹಿಟ್‍ಮ್ಯಾನ್‍ಗೆ ಜಾಕ್‍ಪಾಟ್?

    ನಾಯಕತ್ವ ಯಾರೊಬ್ಬರ ಜನ್ಮಸಿದ್ಧ ಹಕ್ಕಲ್ಲ. ಎಂ.ಎಸ್.ಧೋನಿ ಅಂತಹವರು ತಮ್ಮ ನಾಯಕತ್ವವನ್ನು ಬಿಟ್ಟು ವಿರಾಟ್ ಕೊಹ್ಲಿಗೆ ಅವಕಾಶ ನೀಡಿದರು. ವಿರಾಟ್ ನಾಯಕತ್ವದಲ್ಲಿಯೂ ಆಟಗಾರನಾಗಿ ಧೋನಿ ಆಡಿದ್ದಾರೆ. ಅವರು ಮೂರು ಬಾರಿ ಐಸಿಸಿ ಟ್ರೋಫಿ ಹಾಗೂ ಐಪಿಎಲ್ ಟ್ರೋಫಿಗಳನ್ನೂ ಗೆದ್ದುಕೊಟ್ಟಿದ್ದಾರೆ ಎಂದು ಗಂಭೀರ್ ತಿಳಿಸಿದ್ದಾರೆ.

    ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಸೋಲನುಭವಿಸಿದ ಬಳಿಕ ವಿರಾಟ್ ಕೊಹ್ಲಿ ನಾಯಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಮೂಲಕ ಅವರು ಭಾರತ ತಂಡದ ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದಂತಾಗಿದೆ. ಈಗ ಟೀಂ ಇಂಡಿಯಾದ ಮೂರು ಮಾದರಿ ತಂಡಕ್ಕೂ ರೋಹಿತ್ ಶರ್ಮಾ ನಾಯಕ ಎಂದು ಬಿಸಿಸಿಐ ಘೋಷಿಸಿದೆ. ಇದನ್ನೂ ಓದಿ: ಕೊಹ್ಲಿ ಯಾವುದೇ ವಿವಾದದಲ್ಲಿರಲು ಬಯಸುವುದಿಲ್ಲ: ಬಾಲ್ಯದ ಕೋಚ್

  • ಲಂಕಾ ಪ್ರವಾಸ- ದಾಖಲೆ ಬರೆಯುವ ತವಕದಲ್ಲಿ ಭುವಿ

    ಲಂಕಾ ಪ್ರವಾಸ- ದಾಖಲೆ ಬರೆಯುವ ತವಕದಲ್ಲಿ ಭುವಿ

    ಕೊಲಂಬೋ: ಭಾರತ ಹಾಗೂ ಶ್ರೀಲಂಕಾ ನಡುವಿನ ಚುಟುಕು ಸರಣಿಯಲ್ಲಿ ಭಾರತ ತಂಡದ ಉಪನಾಯಕನಾಗಿರುವ ಭುವನೇಶ್ವರ್ ಕುಮಾರ್ ಹಲವು ದಾಖಲೆಗಳನ್ನು ಬರೆಯಲು ಸಜ್ಜಾಗಿದ್ದಾರೆ.

    ಕಳೆದ ಎರಡು ವರ್ಷಗಳಿಂದ ಸತತ ಗಾಯದಿಂದಾಗಿ ಭಾರತ ತಂಡದಿಂದ ಪದೇ ಪದೇ ಹೊರಗುಳಿಯುತ್ತಿದ್ದ ಭುವನೇಶ್ವರ್ ಕುಮಾರ್ ಇದೀಗ ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಭಾರತ ತಂಡದಲ್ಲಿ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. ಈ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡದ ಖಾಯಂ ನಾಯಕ ವಿರಾಟ್ ಕೊಹ್ಲಿ ಸಹಿತ ಹಿರಿಯ ಆಟಗಾರರು ಇಂಗ್ಲೆಂಡ್ ಪ್ರವಾಸದಲ್ಲಿರುವುದರಿಂದಾಗಿ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

    ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಭುವನೇಶ್ವರ್ ಮುಂದಿನ ಟಿ20 ವಿಶ್ವಕಪ್ ಭಾರತ ತಂಡದಲ್ಲಿ ಸ್ಥಾನ ಭದ್ರ ಪಡಿಸಿಕೊಳ್ಳುವ ಇರಾದೆಯಲ್ಲಿದ್ದಾರೆ. ಇದರೊಂದಿಗೆ ವೈಯಕ್ತಿಕವಾಗಿ ಹಲವು ದಾಖಲೆಗಳ ಸನಿಹದಲ್ಲಿ ಭುವಿ ಇದ್ದಾರೆ. ಇದನ್ನೂ ಓದಿ: ಸಹಆಟಗಾರನಿಗೆ ಕನ್ನಡ ಮೇಷ್ಟ್ರಾದ ಗೌತಮ್

    ಭಾರತ ತಂಡದಲ್ಲಿರುವ ಸ್ವಿಂಗ್ ಸ್ಪೇಷಲಿಸ್ಟ್ ಎನಿಸಿಕೊಂಡಿರುವ ಭುವಿ ಚೆಂಡನ್ನು ಎರಡೂ ಕಡೆಗೆ ಸ್ವಿಂಗ್ ಮಾಡುವುದರಲ್ಲಿ ಎತ್ತಿದ ಕೈ. ಈಗಾಗಲೇ ಭಾರತ ತಂಡದ ಪರ ಆಡಿ, 117 ಏಕದಿನ ಪಂದ್ಯದಿಂದ 138 ವಿಕೆಟ್, 48 ಟಿ2ಂ ಪಂದ್ಯಗಳಿಂದ 45 ವಿಕೆಟ್ ಮತ್ತು ಟೆಸ್ಟ್ ಕ್ರಿಕೆಟ್‍ನಲ್ಲಿ 21 ಪಂದ್ಯಗಳಿಂದ 63 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

    ಇದೀಗ ಲಂಕಾ ವಿರುದ್ಧ 3 ಏಕದಿನ ಮತ್ತು 3 ಟಿ20 ಪಂದ್ಯಗಳು ನಡೆಯಲಿದೆ ಈ ಸರಣಿಯಲ್ಲಿ ಕೆಲ ಮೈಲಿಗಲ್ಲಿನತ್ತ ಭುವಿ ಚಿತ್ತ ನೆಟ್ಟಿದ್ದಾರೆ. ಏಕದಿನ ಮಾದರಿಯಲ್ಲಿ ಈಗಾಗಲೇ 138 ವಿಕೆಟ್ ಪಡೆದಿರುವ ಭುವಿ ಇನ್ನೂ 12 ವಿಕೆಟ್ ಪಡೆದರೆ 150 ವಿಕೆಟ್ ಕಿತ್ತ ಸಾಧನೆ ಮಾಡಲಿದ್ದಾರೆ. ಈ ಮೂಲಕ 150 ವಿಕೆಟ್ ಕಿತ್ತ ಭಾರತದ 14ನೇ ಅಟಗಾರ ಎಂಬ ಮೈಲಿಗಲ್ಲಿನ ಸನಿಹದಲ್ಲಿದ್ದಾರೆ.

    ಟಿ20 ಕ್ರಿಕೆಟ್‍ನಲ್ಲಿ ಬೆಸ್ಟ್ ಬೌಲರ್ ಎನಿಸಿಕೊಂಡಿರುವ ಭುವಿ ಈಗಾಗಲೇ 45 ವಿಕೆಟ್ ಕಬಳಿಸಿದ್ದಾರೆ. ಇನ್ನೂ 5 ವಿಕೆಟ್ ಕಿತ್ತರೆ ವಿಕೆಟ್‍ಗಳ ಅರ್ಧಶತಕ ದಾಖಲಿಸಲಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‍ನಲ್ಲಿ 50 ವಿಕೆಟ್ ಕಿತ್ತ ಭಾರತ ಎರಡನೇ ವೇಗಿ ಎನಿಸಿಕೊಳ್ಳಲಿದ್ದಾರೆ. ಈಗಾಗಲೇ ಜಸ್ಪ್ರೀತ್ ಬೂಮ್ರಾ 50 ವಿಕೆಟ್ ಕಿತ್ತ ಮೊದಲ ವೇಗಿ ಎನಿಸಿಕೊಂಡಿದ್ದಾರೆ.

    ಭಾರತ ಹಾಗೂ ಶ್ರೀಲಂಕಾ ನಡುವಿನ ಏಕದಿನ ಮತ್ತು ಟಿ20 ಸರಣಿ ಜುಲೈ 13 ರಂದು ಪ್ರಾರಂಭಗೊಳ್ಳಲಿದೆ.