Tag: ಭಾರತ ಚೀನಾ ಗಡಿ ಸಂಘರ್ಷ

  • PM ಕೇರ್ ನಿಧಿಗೆ ಕೊಡುಗೆ ನೀಡಲು ಚೀನಾ ಕಂಪನಿಗಳಿಗೆ ಅನುಮತಿಸಿದ್ದೇಕೆ?- ಕಾಂಗ್ರೆಸ್

    PM ಕೇರ್ ನಿಧಿಗೆ ಕೊಡುಗೆ ನೀಡಲು ಚೀನಾ ಕಂಪನಿಗಳಿಗೆ ಅನುಮತಿಸಿದ್ದೇಕೆ?- ಕಾಂಗ್ರೆಸ್

    ನವದೆಹಲಿ/ಇಟಾನಗರ: ಚೀನಾ ಯುದ್ಧಕ್ಕೆ (China War) ತಯಾರಿ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ ನಂತರ ಕಾಂಗ್ರೆಸ್ ಹಲವು ಪ್ರಶ್ನೆಗಳನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮುಂದಿಟ್ಟಿದೆ. ಉತ್ತರಕೊಡಿ ಪ್ರಧಾನ ಮಂತ್ರಿ ಎಂದು ಪಟ್ಟು ಹಿಡಿದಿದೆ.

    ಅರುಣಾಚಲ ಪ್ರದೇಶದ (Arunachal Pradesh) ಎಲ್‌ಎಸಿಯಲ್ಲಿ (LAC) ಭಾರತ ಮತ್ತು ಚೀನಾದ ಸೈನಿಕರ ನಡುವೆ ಇದೇ ತಿಂಗಳ ಡಿಸೆಂಬರ್ 9ರಂದು ಘರ್ಷಣೆ ಏರ್ಪಟ್ಟಿತ್ತು. ಮೊದಲು ಚೀನಾ ಪಡೆಗಳು ಗಡಿಯನ್ನು ದಾಟಿ ಬಂದಿದ್ದು, ಭಾರತೀಯ ಸೈನಿಕರು ಪ್ರತಿರೋಧ ಒಡ್ಡಿದ್ದರು. ಈ ಕುರಿತು ಸಂಸತ್ತಿನಲ್ಲಿ ಚರ್ಚಿಸಬೇಕೆನ್ನುವ ಕಾಂಗ್ರೆಸ್ ನಾಯಕರ ಬೇಡಿಕೆಯನ್ನೂ ತಿರಸ್ಕರಿಸಲಾಯಿತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jairam Ramesh) 7 ಪ್ರಶ್ನೆಗಳನ್ನ ಪ್ರಧಾನಿ ಅವರ ಮುಂದಿಟ್ಟಿದ್ದಾರೆ. ಇದನ್ನೂ ಓದಿ: ಭಾರತ, ಚೀನಾ ಸಂಘರ್ಷಕ್ಕೆ ಕಾರಣ ಏನು? ಅರುಣಾಚಲದ ಗಡಿಯಲ್ಲಿ ನಿಜವಾಗಿ ಏನಾಯ್ತು? 

    ಕಾಂಗ್ರೆಸ್ ಪ್ರಶ್ನೆಗಳೇನು?
    2020ರ ಜೂನ್ 20 ರಂದು ಪೂರ್ವ ಲಡಾಖ್‌ನಲ್ಲಿ ಚೀನಾದಿಂದ ಭಾರತದ ಭೂಪ್ರದೇಶದ ಮೇಲೆ ಯಾವುದೇ ಆಕ್ರಮಣ ನಡೆದಿಲ್ಲ ಎಂದು ನೀವು ಏಕೆ ಹೇಳಿದ್ದೀರಿ? ಮೇ 2020ರ ಮೊದಲು ನಾವು ನಿಯಮಿತವಾಗಿ ಗಸ್ತು ತಿರುಗುತ್ತಿದ್ದ ಪೂರ್ವ ಲಡಾಖ್‌ನಲ್ಲಿ ಸಾವಿರಾರು ಚದರ ಕಿಮೀ ಗಳನ್ನು ಪ್ರವೇಶಿಸದಂತೆ ನಮ್ಮ ಸೈನ್ಯವನ್ನೇ ತಡೆಯಲು ಚೀನಿಯರಿಗೇಕೆ ಅನುಮತಿಸಿದ್ದೀರಿ? ಮೌಂಟೇನ್ ಸ್ಟ್ರೈಕ್‌ ಕಾರ್ಪ್ಸ್ ಅನ್ನು ಸ್ಥಾಪಿಸಲು 2013ರ ಜುಲೈ 17 ರಂದು ಕ್ಯಾಬಿನೆಟ್ ಅನುಮೋದಿಸಿದ ಯೋಜನೆಯನ್ನು ನೀವು ಏಕೆ ಕೈಬಿಟ್ಟಿದ್ದೀರಿ? ಇದನ್ನೂ ಓದಿ: ಮೋದಿ ಸರ್ಕಾರದಲ್ಲಿ ಚೀನಾ ವಿರುದ್ಧ ಮಾತನಾಡಲು ಅವಕಾಶವೇ ಇಲ್ಲ – ಖರ್ಗೆ ಕಿಡಿ

    ಪಿಎಂ ಕೇರ್ ನಿಧಿಗೆ ಕೊಡುಗೆ ನೀಡಲು ಚೀನಾ ಕಂಪನಿಗಳಿಗೆ ಏಕೆ ಅವಕಾಶ ಕೊಟ್ಟಿದ್ದೀರಿ? ಕಳೆದ 2 ವರ್ಷಗಳಲ್ಲಿ ಚೀನಾದಿಂದ ದಾಖಲೆಯ ಮಟ್ಟದ ಆಮದುಗಳನ್ನು ಏಕೆ ಅನುಮತಿಸಿದ್ದೀರಿ? ಗಡಿ ಪರಿಸ್ಥಿತಿ ಮತ್ತು ಚೀನಾದಿಂದ ಭಾರತ ಎದುರಿಸುತ್ತಿರುವ ಸವಾಲುಗಳನ್ನು ಸಂಸತ್ತಿನಲ್ಲಿ ಚರ್ಚಿಸಬಾರದು ಎಂದು ಏಕೆ ಒತ್ತಾಯಿಸಿದ್ದೀರಿ? ನೀವು 18 ಬಾರಿ ಚೀನಾದ ನಾಯಕನನ್ನು ಭೇಟಿ ಮಾಡಿದ್ದೀರಿ, ಇತ್ತೀಚೆಗೆ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಹಸ್ತಲಾಘವ ಮಾಡಿದ್ದೀರಿ. ಇದಾದ ಕೆಲವೇ ದಿನಗಳಲ್ಲಿ ಚೀನಾ ತವಾಂಗ್‌ಗೆ ಅತಿಕ್ರಮಣ ಪ್ರಾರಂಭಿಸಿತು. ಇಷ್ಟಾದರೂ ನೀವು ದೇಶವನ್ನು ಏಕೆ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಜೈರಾಮ್ ರಮೇಶ್ ಅವರು ಈ ಪ್ರಶ್ನೆಗಳ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೋದಿ ಸರ್ಕಾರದಲ್ಲಿ ಚೀನಾ ವಿರುದ್ಧ ಮಾತನಾಡಲು ಅವಕಾಶವೇ ಇಲ್ಲ – ಖರ್ಗೆ ಕಿಡಿ

    ಮೋದಿ ಸರ್ಕಾರದಲ್ಲಿ ಚೀನಾ ವಿರುದ್ಧ ಮಾತನಾಡಲು ಅವಕಾಶವೇ ಇಲ್ಲ – ಖರ್ಗೆ ಕಿಡಿ

    ನವದೆಹಲಿ: ಭಾರತೀಯ ಸೇನೆ (Indian Army) ಮತ್ತು ಚೀನಾ (China) ಸೇನಾ ಪಡೆಗಳ ನಡುವೆ ಅರುಣಾಚಲ ಪ್ರದೇಶದ ತವಾಂಗ್ ವಲಯದಲ್ಲಿ ಎಲ್‌ಎಸಿ (LAC) ಬಳಿ ಡಿಸೆಂಬರ್ 9 ರಂದು ನಡೆದ ಸಂಘರ್ಷ, ಎರಡೂ ದೇಶಗಳ ಗಡಿ ಬಿಕ್ಕಟ್ಟನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ. ಈ ಕುರಿತು ಚರ್ಚೆ ನಡೆಸಬೇಕು ಎನ್ನುವ ವಿಪಕ್ಷಗಳ ಬೇಡಿಕೆಗೆ ಸಂಸತ್ತಿನಲ್ಲಿ ಉಂಟಾದ ಘರ್ಷಣೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಖಂಡಿಸಿದ್ದಾರೆ.

    ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಖರ್ಗೆ ಅವರು, `ಮೋದಿ ಸರ್ಕಾರದ (Modi Government) ಕೆಂಗಣ್ಣು ಚೀನಾ ಕನ್ನಡಕದಿಂದ ಮುಚ್ಚಲ್ಪಟ್ಟಿದಂತೆ ತೋರುತ್ತದೆ. ಭಾರತದ ಸಂಸತ್ತಿನಲ್ಲಿ ಚೀನಾದ ವಿರುದ್ಧ ಮಾತನಾಡಲು ಅವಕಾಶವಿಲ್ಲವೇ?’ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ವಿರೋಧ ಪಕ್ಷಗಳು ಗಡಿಯಲ್ಲಿ ಚೀನಾದ ನಡೆಗೆ ಪ್ರತಿಯಾಗಿ ಆಕ್ರಮಣಕಾರಿ ನೀತಿಯನ್ನು ಅನುಸರಿಸಲು ಯೋಜಿಸಿವೆ. ಇದನ್ನೂ ಓದಿ: ಭಾರತ, ಚೀನಾ ಸಂಘರ್ಷಕ್ಕೆ ಕಾರಣ ಏನು? ಅರುಣಾಚಲದ ಗಡಿಯಲ್ಲಿ ನಿಜವಾಗಿ ಏನಾಯ್ತು?

    ಈ ವಾರ ಸಂಸತ್ತಿನಲ್ಲಿ ಉಭಯ ಸದನಗಳು `ಭಾರತ-ಚೀನಾ ಗಡಿ ಪರಿಸ್ಥಿತಿ’ (India China Border Clash) ಕುರಿತು ಚರ್ಚಿಸಬೇಕೆನ್ನುವ ಪ್ರತಿಪಕ್ಷಗಳ ಮನವಿ ತಿರಸ್ಕರಿಸಿದವು. ಸ್ಪೀಕರ್ ಚರ್ಚೆಗೆ ಮನವಿಯನ್ನು ತಿರಸ್ಕರಿದ ನಂತರ ಸೋನಿಯಾಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ (Congress) ಸಂಸದರು ಸಭಾತ್ಯಾಗ ಮಾಡಿದರು.  ಇದನ್ನೂ ಓದಿ: ಭಾರತ, ಚೀನಾ ಸಂಘರ್ಷ – ಅರುಣಾಚಲ ಪ್ರದೇಶದ ಮೇಲೆ ಡ್ರ್ಯಾಗನ್‌ ಕಣ್ಣು ಹಾಕಿದ್ದು ಯಾಕೆ?

    ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದಲ್ಲಿ ತವಾಂಗ್‌ನ ವಾಸ್ತವಿಕ ನಿಯಂತ್ರಣ ರೇಖೆಯ (LAC) ಬಳಿ ಚೀನಿಯರು ಭೂಸ್ವಾಧೀನಕ್ಕೆ ಯತ್ನಿಸಿದ್ದು, ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದರು. ಭಾರತೀಯ ಸೇನಾ ಕಮಾಂಡರ್‌ಗಳ ಸಮಯೋಚಿತ ಹಸ್ತಕ್ಷೇಪದಿಂದಾಗಿ ಚೀನಾ ಸೈನಿಕರು ತಮ್ಮ ಸ್ಥಾನಕ್ಕೆ ಮರಳಿದರು. ಅಲ್ಲದೇ ಸೇನಾ ಕಮಾಂಡರ್‌ಗಳ ಸಭೆಯಲ್ಲಿ ಗಡಿಯಲ್ಲಿ ಶಾಂತಿ ಕಾಪಾಡುವಂತೆ ಕೇಳಿಕೊಂಡರು.

    ಈಗಾಗಲೇ ಗಡಿಯಲ್ಲಿ ಭಾರತೀಯ ಸೇನೆ ಯುದ್ಧದ ಗಸ್ತು ಹೆಚ್ಚಿಸಿದ್ದು, ಫೈಟರ್‌ಜೆಟ್‌ಗಳ ಮೂಲಕ ಪರಿಸ್ಥಿತಿ ವೀಕ್ಷಣೆ ಮಾಡಿದೆ.

    Live Tv
    [brid partner=56869869 player=32851 video=960834 autoplay=true]