Tag: ಭಾರತ

  • ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ ಭಾರೀ ಸುಂಕ ಹಾಕ್ತೇವೆ: ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

    ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ ಭಾರೀ ಸುಂಕ ಹಾಕ್ತೇವೆ: ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

    ವಾಷಿಂಗ್ಟನ್‌: ರಷ್ಯಾದಿಂದ (Russia) ಭಾರತ (India) ತೈಲ ಖರೀದಿ ನಿಲ್ಲಿಸದೇ ಇದ್ದರೆ ಮುಂದೆ ಭಾರಿ ಸುಂಕಗಳನ್ನು ಎದುರಿಸಬೇಕಾಗುತ್ತದೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಎಚ್ಚರಿಕೆ ನೀಡಿದ್ದಾರೆ.

    ಏರ್ ಫೋರ್ಸ್ ಒನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ನಾನು ರಷ್ಯಾದ ತೈಲ ಖರೀದಿ ಮಾಡುವುದಿಲ್ಲ ಎಂದು ಪ್ರಧಾನಿ ಮೋದಿ (Narendra Modi) ನನಗೆ ವೈಯಕ್ತಿಕವಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಅವರು ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಿದರೆ ಭಾರೀ ಸುಂಕಗಳನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿದರು.  ಇದನ್ನೂ ಓದಿ:  ಪಾಕಿಸ್ತಾನ-ಅಫ್ಘಾನಿಸ್ತಾನದ ನಡುವೆ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಗೆ

    ಟ್ರಂಪ್‌ ಮತ್ತು ಪ್ರಧಾನಿ ಮೋದಿ ನಡುವಿನ ಯಾವುದೇ ಇತ್ತೀಚಿನ ಸಂಭಾಷಣೆಯ ಬಗ್ಗೆ ತಿಳಿದಿಲ್ಲ ಎಂಬ ಭಾರತ ಸರ್ಕಾರದ ಪ್ರತಿಕ್ರಿಯೆಯ ಬಗ್ಗೆ ಕೇಳಿದ್ದಕ್ಕೆ, ಅವರು ಹಾಗೆ ಹೇಳಲು ಬಯಸಿದರೆ ಮುಂದೆ ಅವರು ಬೃಹತ್ ಸುಂಕಗಳನ್ನು ಪಾವತಿಸುವುದನ್ನು ಮುಂದುವರಿಸಬೇಕಾಗುತ್ತದೆ ಎಂದರು.

    ಡೊನಾಲ್ಡ್‌ ಟ್ರಂಪ್‌ ಆರಂಭದಲ್ಲಿ ಭಾರತದ ಮೇಲೆ 25% ಸುಂಕವನ್ನು ಹೇರಿದ್ದರು. ನಂತರ ರಷ್ಯಾದಿಂದ ಭಾರತ ಕಚ್ಚಾ ತೈಲ ಆಮದು ಮಾಡುತ್ತಿರುವುದಕ್ಕೆ ದಂಡದ ರೂಪದಲ್ಲಿ 25% ಸುಂಕ ಹಾಕಿದ್ದಾರೆ. ಇದರ ಪರಿಣಾಮ ಈಗ ಭಾರತದಿಂದ ಅಮೆರಿಕ್ಕೆ ಆಮದಾಗುವ ವಸ್ತುಗಳ ಮೇಲೆ 50% ಸುಂಕ ಹೇರಲಾಗಿದೆ.

    ರಷ್ಯಾದಿಂದ ಕಚ್ಚಾ ತೈಲ ಖರೀದಿಸುತ್ತಿರುವುದಕ್ಕೆ ಚೀನಾ ಮೇಲೆ 100% ಸುಂಕವನ್ನು ಟ್ರಂಪ್‌ ಘೋಷಿಸಿದ್ದಾರೆ. ಹೊಸ ಸುಂಕ ನೀತಿಗಳು ನ.1 ರಿಂದ ಜಾರಿಗೆ ಬರಲಿದೆ.

  • ದೀಪಾವಳಿಗೆ ಚಿನ್ನ ಖರೀದಿ ಯಾಕೆ?

    ದೀಪಾವಳಿಗೆ ಚಿನ್ನ ಖರೀದಿ ಯಾಕೆ?

    ಭಾರತೀಯ ಸಂಪ್ರದಾಯದಲ್ಲಿ ಪ್ರತಿ ಹಬ್ಬ ಬಂದಾಗ ಚಿನ್ನ, ಭೂಮಿ, ವಾಹನ ಇತ್ಯಾದಿಗಳನ್ನು ಖರೀದಿಸುವ ಪದ್ದತಿಯಿದೆ. ಅದರಲ್ಲೂ ದೀಪಾವಳಿ (Deepavali) ಸಂದರ್ಭದಲ್ಲಿ ಹೂಡಿಕೆ ಮಾಡಿದರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಈ ಕಾರಣಕ್ಕೆ ದೀಪಾವಳಿ ಹಬ್ಬದಂದು ಭಾರೀ ಪ್ರಮಾಣದಲ್ಲಿ ಭಾರತದಲ್ಲಿ ಚಿನ್ನ(Gold) ಮಾರಾಟವಾಗುತ್ತದೆ.

    ಚಿನ್ನದ ಬೇಡಿಕೆ ಹೆಚ್ಚಿದಂತೆ ಈಗ ದರವೂ ಭಾರೀ ಏರಿಕೆ ಕಾಣುತ್ತಿದ. ಟ್ರಂಪ್‌ ಒಂದೊಂದು ನಿರ್ಧಾರ ಪ್ರಕಟಿಸುತ್ತಿದ್ದಂತೆ ಷೇರು ಮಾರುಕಟ್ಟೆಗಳು ಪತನಗೊಳ್ಳುತ್ತಿದ್ದು ಹೂಡಿಕೆದಾರರಿಗೆ ಭಾರೀ ನಷ್ಟವಾಗುತ್ತಿದೆ. ಪರಿಣಾಮ ವಿಶ್ವಾದ್ಯಂತ ಹೂಡಿಕೆದಾರರು ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಮಾಡುತ್ತಿದ್ದತೆ ಈ ಲೋಹಗಳ ಬೆಲೆ ರಾಕೆಟ್‌ ವೇಗದಂತೆ ಮೇಲಕ್ಕೆ ಏರುತ್ತಿದೆ.

    ಚಿನ್ನವನ್ನು ಆಭರಣವನ್ನಾಗಿಯೂ ಖರೀದಿಸಬಹುದು ಅಥವಾ ಹೂಡಿಕೆ ಮಾಡಬಹುದು. ಆಭರಣವಾಗಿ ಚಿನ್ನ ಖರೀದಿ ಮಾಡಿದಾಗ ಮೇಕಿಂಗ್‌ ಚಾರ್ಜ್‌ ಬೀಳುತ್ತದೆ. ಒಂದು ವೇಳೆ ಮಾರಾಟ ಮಾಡುವಾಗಲೂ ಅದನ್ನು ಪರಿಶೀಲಿಸುವಾಗ ಇತರ ಕಾರಣಗಳಿಂದ ತೂಕ ಸ್ವಲ್ಪ ಕಡಿಮೆಯಾಗುತ್ತದೆ. ಹೀಗಾಗಿ ಚಿನ್ನದ ಮೇಲೆ ಹೂಡಿಕೆ ಮಾಡುವವರು ಜುವೆಲ್ಲರಿಗಳಲ್ಲಿ ನಾಣ್ಯಗಳನ್ನು ಖರೀದಿ ಮಾಡಿದರೆ ನಂತರ ಮಾರಾಟ ಮಾಡಿದರೂ ಆಗಿನ ಮಾರುಕಟ್ಟೆಯ ಬೆಲೆಯೇ ಸಿಗುತ್ತದೆ.

    ಒಂದು ವೇಳೆ ಚಿನ್ನವನ್ನು ಈಗಲೇ ಖರೀದಿಸಬೇಕೆಂದೇ ಇಲ್ಲ. ಹಲವಾರು ಜುವೆಲ್ಲರಿ ಮಳಿಗೆಗೆಗಳು ಪ್ರತಿ ತಿಂಗಳು ನಿಗದಿತ ಪ್ರಮಾಣ ಹಣದ ಯೋಜನೆಯನ್ನು ಹಾಕಿಕೊಂಡಿರುತ್ತಾರೆ. 11 ತಿಂಗಳ ನಂತರ ಚಿನ್ನ ಖರೀದಿಸಬಹುದು. ಚಿನ್ನ ಖರೀದಿ ಮಾಡುವ ಸಂದರ್ಭದಲ್ಲಿ ಕಂಪನಿಗಳು ಹಲವಾರು ರಿಯಾಯಿತಿಗಳನ್ನು ಪ್ರಕಟಿಸುತ್ತವೆ.

    ಬಹಳಷ್ಟು ಖಾಸಗಿ ಸಂಸ್ಥೆಗಳು ಡಿಜಿಟಲ್‌ ರೂಪದಲ್ಲಿ ಚಿನ್ನವನ್ನು ಮಾರಾಟ ಮಾಡುತ್ತವೆ. ಇಲ್ಲೂ ಈಗ ಹೂಡಿಕೆ ಮಾಡಬಹುದು. ಇದರ ಹೊರತಾಗಿ ಚಿನ್ನದ ಮ್ಯೂಚುಬಲ್‌ ಫಂಡ್‌ ಅಥವಾ ಗೋಲ್ಡ್‌ ಎಕ್ಸ್‌ಚೇಂಜ್‌ ಟ್ರೇಡೆಡ್‌ ಫಂಡ್‌ನಲ್ಲಿ(ಗೋಲ್ಡ್ ಇಟಿಎಫ್‌) ಯೂನಿಟ್‌ ಲೆಕ್ಕದಲ್ಲಿ ಖರೀದಿ ಮಾಡಬಹುದು. ಆದರೆ ಇಲ್ಲಿ ಖರೀದಿಸಿದ ಚಿನ್ನವನ್ನು ನಿಮಗೆ ಖರೀದಿ ಮಾಡಲು ಸಾಧ್ಯವಿಲ್ಲ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ದರ ಬದಲಾಗುತ್ತದೆ.

  • ಭಾರತದ ಆರ್ಥಿಕತೆಗೆ ರಷ್ಯಾದ ತೈಲ ಮುಖ್ಯ, ನಮ್ಮ ಸಂಬಂಧ ನಂಬಿಕೆ ಮೇಲೆ ಕಟ್ಟಿರುವ ಸೇತುವೆ: ರಷ್ಯಾ

    ಭಾರತದ ಆರ್ಥಿಕತೆಗೆ ರಷ್ಯಾದ ತೈಲ ಮುಖ್ಯ, ನಮ್ಮ ಸಂಬಂಧ ನಂಬಿಕೆ ಮೇಲೆ ಕಟ್ಟಿರುವ ಸೇತುವೆ: ರಷ್ಯಾ

    ಮಾಸ್ಕೋ: ಭಾರತ ಮತ್ತು ರಷ್ಯಾ ಸಂಬಂಧವು ನಂಬಿಕೆಯ ಮೇಲೆ ಕಟ್ಟಿರುವ ಸೇತುವೆ, ಘನವಾದ ಅಡಿಪಾಯ ಹೊಂದಿದೆ. ಯಾರೂ ಅಲುಗಾಡಿಸಲು ಸಾಧ್ಯವಿಲ್ಲ. ರಷ್ಯಾದ ತೈಲ (Russian Oil) ಪೂರೈಕೆಯು ಭಾರತದ ಆರ್ಥಿಕತೆಗೆ ಮುಖ್ಯವಾಗಿದೆ ಎಂದು ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್ (Denis Alipov) ಹೇಳಿದ್ದಾರೆ.

    ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ ಅಂತ ಮೋದಿ (Narendra Modi) ನನಗೆ ಭರವಸೆ ನೀಡಿದ್ದಾರೆ ಎಂಬ ಟ್ರಂಪ್‌ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ. ನಮ್ಮ ಸರ್ಕಾರವು ಭಾರತದ ಹಿತಾಸಕ್ತಿಗೆ ಅನುಗುಣವಾಗಿದೆ. ಏಕೆಂದ್ರೆ ರಷ್ಯಾ ತೈಲ ಪೂರೈಕೆಯು ಭಾರತದ ಆರ್ಥಿಕತೆಗೆ (Indian Economy) ಪ್ರಯೋಜನಕಾರಿಯಾಗಿದೆ. ನಮ್ಮ ನಡುವಿನ ಕಾರ್ಯತಂತ್ರ ಹಾಗೂ ಪಾಲುದಾರಿಕೆಯು ಜಾಗತಿಕ ವ್ಯವಹಾರ ಸ್ಥಿರಗೊಳಿಸುವ ಶಕ್ತಿಯಾಗಿ ಪರಿಣಮಿಸಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಭಾರತ ಹೇಳಿದ್ದೇನು?
    ಇನ್ನೂ ಟ್ರಂಪ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತ, ದೇಶದ ಗ್ರಾಹಕರ ಹಿತಾಸಕ್ತಿ ಕಾಪಾಡುವುದು ಭಾರತ ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದೆ.

    ಟ್ರಂಪ್‌ ಹೇಳಿದ್ದೇನು?
    ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿರುವುದಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ನನಗೆ ಭರವಸೆ ನೀಡಿದ್ದಾರೆ. ಇದು ನಿಜಕ್ಕೂ ಒಂದು ಪ್ರಮುಖ ಹೆಜ್ಜೆ. ರಷ್ಯಾ-ಉಕ್ರೇನ್ ಯುದ್ಧ ತಡೆಯುವ ನಮ್ಮ ಪ್ರಯತ್ನಗಳ ಭಾಗವೂ ಆಗಿದೆ. ಚೀನಾಗೂ ಸಹ ಅದೇ ರೀತಿ ಮಾಡುವಂತೆ ನಾವು ಹೇಳಬೇಕಾಗಿದೆ ಎಂದು ಹೇಳಿದ್ದರು.

    ಅಮೆರಿಕದ ಆರೋಪ ಏನಿದೆ?
    ಭಾರತವು ರಷ್ಯಾದ ತೈಲ ಖರೀದಿ ಮಾಡುವ ಮೂಲಕ ಉಕ್ರೇನ್ ವಿರುದ್ಧದ ಯುದ್ಧಕ್ಕೆ ಹಣಕಾಸಿನ ನೆರವು ನೀಡುತ್ತಿದೆ ಎಂದು ಡೊನಾಲ್ಡ್ ಟ್ರಂಪ್ ಅವರ ಬಲವಾದ ನಂಬಿಕೆ. ಅಮೆರಿಕದ ಕೆಲ ಅಧಿಕಾರಿಗಳೂ ಟ್ರಂಪ್ ಹೇಳಿಕೆಯನ್ನ ಉಲ್ಲೇಖಿಸಿ ರಷ್ಯಾದ ತೈಲ ಖರೀದಿ ನಿಲ್ಲಿಸುವಂತೆ ಭಾರತಕ್ಕೆ ಮನವಿ ಮಾಡಿಕೊಂಡಿದ್ದರು. ಆದ್ರೆ ರಷ್ಯಾದ ಸಂಬಂಧ ಬಿಟ್ಟುಕೊಡದ ಭಾರತ ತೈಲ ಖರೀದಿ ಮುಂದುವರಿಸಿದೆ.

  • ತಾಲಿಬಾನ್‌ ಯುದ್ಧಕ್ಕೆ ಭಾರತ ಪ್ರಾಯೋಜಕತ್ವ, ಪ್ಲ್ಯಾನ್‌ ನಡೆದಿದ್ದು ದೆಹಲಿಯಲ್ಲಿ – ಪಾಕ್‌ ಸಚಿವ ಆರೋಪ

    ತಾಲಿಬಾನ್‌ ಯುದ್ಧಕ್ಕೆ ಭಾರತ ಪ್ರಾಯೋಜಕತ್ವ, ಪ್ಲ್ಯಾನ್‌ ನಡೆದಿದ್ದು ದೆಹಲಿಯಲ್ಲಿ – ಪಾಕ್‌ ಸಚಿವ ಆರೋಪ

    – ಅಫ್ಘಾನಿಸ್ತಾನ ʻಭಾರತದ ಪ್ರಾಕ್ಸಿ ಯುದ್ಧʼದಲ್ಲಿ ಹೋರಾಡ್ತಿದೆ ಎಂದ ಖವಾಜಾ

    ಇಸ್ಲಾಮಾಬಾದ್‌: ತಾಲಿಬಾನ್‌ ಯುದ್ಧಕ್ಕೆ ಭಾರತ ಪ್ರಾಯೋಜಕತ್ವ ವಹಿಸಿದ್ದು, ಅಫ್ಘಾನಿಸ್ತಾನ ಭಾರತದ ಪ್ರಾಕ್ಸಿ ಯುದ್ಧದಲ್ಲಿ (Indias Proxy War) ಹೋರಾಡುತ್ತಿದೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ (Khawaja Asif) ಆರೋಪಿಸಿದ್ದಾರೆ.

    ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಅಫ್ಘಾನಿಸ್ತಾನವು (Afghanistan) ಯುದ್ಧದ ನಿರ್ಧಾರಗಳನ್ನ ಕಾಬೂಲ್‌ನಲ್ಲಿ ಅಲ್ಲ ಭಾರತದ ನವದೆಹಲಿಯಲ್ಲಿ ತೆಗೆದುಕೊಳ್ಳುತ್ತಿದೆ ಎಂದಿದ್ದಾರೆ. ಇದೇ ವೇಳೆ ಕದನ ವಿರಾಮದ ಬಗ್ಗೆಯೂ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಫ್ಘಾನ್‌-ಪಾಕ್‌ ಮಧ್ಯೆ 48 ಗಂಟೆಗಳ ಕದನ ವಿರಾಮ ಜಾರಿ

    ತಾಲಿಬಾನ್‌ನ (Taliban) ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ ಇತ್ತೀಚೆಗೆ ಭಾರತಕ್ಕೆ ಭೇಟಿ ನೀದ್ದಾಗ ಪ್ಲ್ಯಾನ್‌ ರೂಪಿಸಿದ್ದಾರೆ. ದೆಹಲಿಗೆ ಅವರ ಮೊದಲ ಭೇಟಿಯು ಅಧಿಕೃತವಾಗಿ ವ್ಯಾಪಾರ ಮತ್ತು ದ್ವಿಪಕ್ಷೀಯ ಸಂಬಂಧಗಳ ಮೇಲೆ ಕೇಂದ್ರೀಕೃತವಾಗಿತ್ತು. ಆದ್ರೆ ಈ ಸಭೆಯ ನಿಜವಾದ ಉದ್ದೇಶ ಬೇರೆಯದ್ದೇ ಆಗಿತ್ತು ಎಂದಿದ್ದಾರೆ ಖವಾಜ ಆಸಿಫ್. ಇದನ್ನೂ ಓದಿ: ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ, ಮೋದಿ ನನಗೆ ಭರವಸೆ ನೀಡಿದ್ದಾರೆ: ಟ್ರಂಪ್‌

    48 ಗಂಟೆಗಳ ಕದನ ವಿರಾಮ
    ಪಾಕಿಸ್ತಾನ ಮತ್ತು ಅಫ್ಘಾನ್ ನಡುವೆ 48 ಗಂಟೆಗಳ ಕದನ ವಿರಾಮ ಘೋಷಣೆಯಾಗಿದೆ. ಎರಡು ದೇಶಗಳ ಮಧ್ಯೆ ಸಂಭವಿಸಿದ ಸಂಘರ್ಷದಲ್ಲಿ ಕನಿಷ್ಠ 15 ಅಫ್ಘಾನ್ ನಾಗರಿಕರು, 6 ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ. ರಾತ್ರಿ ಅಫ್ಘಾನ್ ಪಡೆಗಳು, ಸ್ಥಳೀಯ ಉಗ್ರಗಾಮಿಗಳು ನಡೆಸಿದ ಗಡಿಯಾಚೆಗಿನ ಗುಂಡಿನ ದಾಳಿಗೆ ತನ್ನ ಸೇನೆಯು ಪ್ರತೀಕಾರ ತೀರಿಸಿಕೊಂಡಿದೆ ಎಂದು ಪಾಕಿಸ್ತಾನ ಹೇಳಿದೆ.

  • ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ, ಮೋದಿ ನನಗೆ ಭರವಸೆ ನೀಡಿದ್ದಾರೆ: ಟ್ರಂಪ್‌

    ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ, ಮೋದಿ ನನಗೆ ಭರವಸೆ ನೀಡಿದ್ದಾರೆ: ಟ್ರಂಪ್‌

    – ಚೀನಾಗೂ ತೈಲ ಖರೀದಿ ನಿಲ್ಲಿಸುವಂತೆ ಹೇಳಬೇಕು

    ವಾಷಿಂಗ್ಟನ್‌: ಭಾರತ (India) ಇನ್ಮುಂದೆ ರಷ್ಯಾದಿಂದ ತೈಲ ಖರೀದಿರುವುದಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ನನಗೆ ಭರವಸೆ ನೀಡಿದ್ದಾರೆ. ಇದು ನಿಜಕ್ಕೂ ಒಂದು ಪ್ರಮುಖ ಹೆಜ್ಜೆ. ರಷ್ಯಾ-ಉಕ್ರೇನ್‌ ಯುದ್ಧ ತಡೆಯುವ ನಮ್ಮ ಪ್ರಯತ್ನಗಳ ಭಾಗವೂ ಆಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಹೇಳಿದರು.

    ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಷ್ಯಾದ ತೈಲ ಖರೀದಿ ಮಾಡುವ ಮೂಲಕ ಭಾರತ ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ಹಣಕಾಸಿನ ನೆರವು ನೀಡುತ್ತಿದೆ ಎಂಬ ಅಮೆರಿಕದ ಅಭಿಪ್ರಾಯಕ್ಕೆ ಮೋದಿ (PM Modi) ಕಳವಳ ವ್ಯಕ್ತಪಡಿಸಿದ್ದಾರೆ. ಭಾರತ ತೈಲ ಖರೀದಿಸುವುದು ನಮಗೂ ತೃಪ್ತಿದಾಯಕವಾಗಿರಲಿಲ್ಲ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಅಮೆರಿಕದ ರಹಸ್ಯ ದಾಖಲೆಗಳ ಸಂಗ್ರಹ ಆರೋಪ – ಭಾರತ ಮೂಲದ ವಿದೇಶಾಂಗ ನೀತಿ ತಜ್ಞ ಆಶ್ಲೇ ಟೆಲ್ಲಿಸ್ ಅರೆಸ್ಟ್‌

    ಈ ಎಲ್ಲ ಕಾರಣಗಳಿಂದ ಮೋದಿ ಅವರು ರಷ್ಯಾದಿಂದ ತೈಲ (Russian Oil) ಖರೀದಿಸುವುದಿಲ್ಲ ಎಂದು ಭರವಸೆ ನೀಡಿದರು. ಚೀನಾಗೂ ಸಹ ಅದೇ ರೀತಿ ಮಾಡುವಂತೆ ನಾವು ಹೇಳಬೇಕಾಗಿದೆ ಎಂದು ಹೇಳಿದರಲ್ಲದೇ ಇಂಧನ ನೀತಿಯಲ್ಲಿ ಏನೇ ಭಿನ್ನಾಭಿಪ್ರಾಯಗಳಿದ್ದರೂ ಪ್ರಧಾನಿ ಮೋದಿ ನನ್ನ ಆಪ್ತ ಮಿತ್ರ ಎಂದರು.

    ಇನ್ನೂ ಚೀನಾದೊಂದಿಗಿನ ಉದ್ವಿಗ್ನತೆ ನಡುವೆ ಭಾರತವನ್ನ ವಿಶ್ವಾಸಾರ್ಹ ಪಾಲುದಾರ ಎಂದು ನೀವು ಪರಿಗಣಿಸುತ್ತೀರಾ? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಟ್ರಂಪ್‌, ಮೋದಿ ನನ್ನ ಸ್ನೇಹಿತ, ಭಾರತದೊಂದಿಗೆ ಉತ್ತಮ ಸಂಬಂಧವಿದೆ ಎಂದು ಹೇಳಿದರು. ಆದ್ರೆ ಟ್ರಂಪ್‌ ಹೇಳಿಕೆ ಬಗ್ಗೆ ಈವರೆಗೆ ಭಾರತ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದನ್ನೂ ಓದಿ: ಭಾರತ ಅದ್ಭುತ ದೇಶ, ನನ್ನ ಒಳ್ಳೆಯ ಫ್ರೆಂಡ್‌ – ಪಾಕ್‌ ಪ್ರಧಾನಿ ಎದುರೇ ಮೋದಿಯನ್ನ ಹಾಡಿಹೊಗಳಿದ ಟ್ರಂಪ್‌

    ಅಮೆರಿಕದ ಆರೋಪ ಏನು?
    ಭಾರತವು ರಷ್ಯಾದ ತೈಲ ಖರೀದಿ ಮಾಡುವ ಮೂಲಕ ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ಹಣಕಾಸಿನ ನೆರವು ನೀಡುತ್ತಿದೆ ಎಂದು ಡೊನಾಲ್ಡ್‌ ಟ್ರಂಪ್‌ ಅವರ ಬಲವಾದ ನಂಬಿಕೆ. ಅಮೆರಿಕದ ಕೆಲ ಅಧಿಕಾರಿಗಳೂ ಟ್ರಂಪ್‌ ಹೇಳಿಕೆಯನ್ನ ಉಲ್ಲೇಖಿಸಿ ರಷ್ಯಾದ ತೈಲ ಖರೀದಿ ನಿಲ್ಲಿಸುವಂತೆ ಭಾರತಕ್ಕೆ ಮನವಿ ಮಾಡಿಕೊಂಡಿದ್ದರು. ಆದ್ರೆ ರಷ್ಯಾದ ಸಂಬಂಧ ಬಿಟ್ಟುಕೊಡದ ಭಾರತ ತೈಲ ಖರೀದಿ ಮುಂದುವರಿಸಿದೆ. ಇದನ್ನೂ ಓದಿ: ಟ್ರಂಪ್‌ ಇಲ್ಲದಿದ್ರೆ ಭಾರತ-ಪಾಕ್‌ ಪರಮಾಣು ಸಂಘರ್ಷದಲ್ಲಿ ಯಾರೋಬ್ಬರೂ ಉಳಿಯುತ್ತಿರಲಿಲ್ಲವೇನೋ: ಪಾಕ್‌ ಪಿಎಂ

  • ಅಹಮದಾಬಾದ್‌ನಲ್ಲಿ ನಡೆಯಲಿದೆ 2030ರ ಕಾಮನ್‌ವೆಲ್ತ್‌ ಗೇಮ್ಸ್‌

    ಅಹಮದಾಬಾದ್‌ನಲ್ಲಿ ನಡೆಯಲಿದೆ 2030ರ ಕಾಮನ್‌ವೆಲ್ತ್‌ ಗೇಮ್ಸ್‌

    ಲಂಡನ್‌: 2030ರ ಕಾಮನ್‌ವೆಲ್ತ್‌ ಗೇಮ್ಸ್‌ ಗುಜರಾತಿನ ಅಹಮದಾಬಾದ್‌ನಲ್ಲಿ (Ahmedabad)  ನಡೆಯಲಿದೆ.  2030ರ ಶತಮಾನೋತ್ಸವದ ಕಾಮನ್‌ವೆಲ್ತ್ ಕ್ರೀಡಾಕೂಟ (Commonwealth Games 2030) ಆಯೋಜನೆ ಮಾಡಲು ಕಾಮನ್‌ವೆಲ್ತ್ ಗೇಮ್ಸ್‌ನ ಕಾರ್ಯನಿರ್ವಾಹಕ ಮಂಡಳಿ ಅಹಮದಾಬಾದ್‌ ನಗರವನ್ನು ಶಿಫಾರಸು ಮಾಡಿದೆ.

    2030 ರ ಗೇಮ್ಸ್‌ ಆಯೋಜನೆಗೆ ನೈಜೀರಿಯಾ ತನ್ನ ರಾಜಧಾನಿ ಅಬುಜಾ ನಗರವನ್ನು ಬಿಡ್‌ಗೆ ಕಳುಹಿಸಿತ್ತು. ಆದರೆ ಅಬುಜಾ ನಗರದಲ್ಲಿ 2034ರ ಗೇಮ್ಸ್‌ ನಡೆಯುವ ಸಾಧ್ಯತೆಯಿದೆ.   ಕುರಿತು ಅಂತಿಮ ನಿರ್ಧಾರವು ನವೆಂಬರ್ 26 ರಂದು ಗ್ಲಾಸ್ಗೋದಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟಡ ಮಹಾಸಭೆಯಲ್ಲಿ ಪ್ರಕಟವಾಗಲಿದೆ.

    ಇದನ್ನೂ ಓದಿ:  ವಿಂಡೀಸ್‌ 2-0 ವೈಟ್‌ವಾಶ್‌ – ಭಾರತಕ್ಕೆ 7 ವಿಕೆಟ್‌ಗಳ ಜಯ; ಗಿಲ್‌ ನಾಯಕತ್ವದಲ್ಲಿ ಮೊದಲ ಸರಣಿ ಗೆಲುವು

    ಕಾಮನ್‌ವೆಲ್ತ್ ಗೇಮ್ಸ್‌ನ ಮಧ್ಯಂತರ ಅಧ್ಯಕ್ಷರಾದ ಡಾ. ಡೊನಾಲ್ಡ್ ರುಕರೆ ಮಾತನಾಡಿ, 2030 ರ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸಲು ಭಾರತ ಮತ್ತು ನೈಜೀರಿಯಾಗಳು ತೋರಿದ ಪ್ರಸ್ತಾಪಕ್ಕೆ ನಾವು ಕೃತಜ್ಞರಾಗಿದ್ದೇವೆ. ಎರಡೂ ನಗರಗಳ ಪ್ರಸ್ತಾಪಗಳು ಸ್ಪೂರ್ತಿದಾಯಕವಾಗಿದ್ದವು. ನಮ್ಮ ಶತಮಾನೋತ್ಸವ ಕ್ರೀಡಾಕೂಟವನ್ನು ನಾವು ಎದುರು ನೋಡುತ್ತಿದ್ದು, ಗ್ಲ್ಯಾಸ್ಗೋದಲ್ಲಿ ನಡೆಯುವ ಸಾಮಾನ್ಯ ಸಭೆಯಲ್ಲಿ ನಮ್ಮ ಸದಸ್ಯರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

    ಈ ಹಿಂದೆ 2010 ರಲ್ಲಿ ಭಾರತ ದೆಹಲಿಯಲ್ಲಿ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಆಯೋಜನೆ ಮಾಡಿತ್ತು. 2036 ರ ಒಲಿಂಪಿಕ್ಸ್‌ ಆಯೋಜನೆಗೆ ಭಾರತ ಈಗಾಗಲೇ ಬಿಡ್‌ ಸಲ್ಲಿಸಿದೆ.

  • ಅಮೆರಿಕದ ರಹಸ್ಯ ದಾಖಲೆಗಳ ಸಂಗ್ರಹ ಆರೋಪ – ಭಾರತ ಮೂಲದ ವಿದೇಶಾಂಗ ನೀತಿ ತಜ್ಞ ಆಶ್ಲೇ ಟೆಲ್ಲಿಸ್ ಅರೆಸ್ಟ್‌

    ಅಮೆರಿಕದ ರಹಸ್ಯ ದಾಖಲೆಗಳ ಸಂಗ್ರಹ ಆರೋಪ – ಭಾರತ ಮೂಲದ ವಿದೇಶಾಂಗ ನೀತಿ ತಜ್ಞ ಆಶ್ಲೇ ಟೆಲ್ಲಿಸ್ ಅರೆಸ್ಟ್‌

    – ಆರೋಪ ಸಾಬೀತಾದ್ರೆ 10 ವರ್ಷ ಜೈಲು, 2.21 ಕೋಟಿ ದಂಡ
    – ರಹಸ್ಯ ದಾಖಲೆಗಳೊಂದಿಗೆ ಚೀನಾ ಅಧಿಕಾರಿಗಳನ್ನ ಭೇಟಿಯಾದ್ರಾ ಆಶ್ಲೇ?

    ವಾಷಿಂಗ್ಟನ್‌: ಅಮೆರಿಕ ರಾಷ್ಟ್ರದ ರಕ್ಷಣೆಗೆ ಸಂಬಂಧಿಸಿದ ರಹಸ್ಯ ದಾಖಲೆಗಳನ್ನ (US Secret Documents) ಅನಧಿಕೃತವಾಗಿ ತಮ್ಮ ಬಳಿ ಸಂಗ್ರಹಿಸಿದ್ದ ಹಾಗೂ ಕೆಲ ವರ್ಷದ ಹಿಂದೆ ಚೀನಾ ಜೊತೆ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಭಾರತದ ಮುಂಬೈ ಮೂಲದ ಅಮೆರಿಕನ್ ವಿಶ್ಲೇಷಕ ಹಾಗೂ ವಿದೇಶಾಂಗ ನೀತಿ ತಜ್ಞ ಆಶ್ಲೇ ಟೆಲ್ಲಿಸ್‌ರನ್ನ (Ashley Tellis) ಬಂಧಿಸಲಾಗಿದೆ.

    64 ವರ್ಷದ ಆಶ್ಲೇ ಟೆಲ್ಲಿಸ್ ತಮ್ಮ ವಿಯೆನ್ನಾ, ವರ್ಜೀನಿಯಾದ ಮನೆಯಲ್ಲಿ ವಾಯುಪಡೆಯ ತಂತ್ರಗಳು ಮತ್ತು ವಿಧಾನಗಳಿಗೆ ಸಂಬಂಧಿಸಿದ 1000ಕ್ಕೂ ಹೆಚ್ಚು ಪುಟಗಳಷ್ಟು ರಹಸ್ಯ ದಾಖಲೆಗಳನ್ನು ಇಟ್ಟುಕೊಂಡಿದ್ದರು. ಈ ಮೂಲಕ 18 USC § 793(e) ನಿಯಮ ಉಲ್ಲಂಘನೆ ಮಾಡಿದ್ದಾರೆ. ಶನಿವಾರ ಅವರನ್ನ ಬಂಧಿಸಿದ್ದು, ಸೋಮವಾರ ಅಧಿಕೃತವಾಗಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ ಎಂದು ವರ್ಜೀನಿಯಾದ ಪೂರ್ವ ಜಿಲ್ಲೆಯ ಅಮೆರಿಕದ ಅಟಾರ್ನಿ ಕಚೇರಿ ತಿಳಿಸಿದೆ.

    ಮುಂಬೈ ಮೂಲದ ಆಶ್ಲೇ ಈ ಹಿಂದೆ ಅಧ್ಯಕ್ಷರಾಗಿದ್ದ ಜಾರ್ಜ್ ಡಬ್ಲ್ಯೂ. ಬುಷ್ ಅವರ ಅಡಿಯಲ್ಲಿ ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ಕೆಲಸ ಮಾಡಿದ್ದರು. ವಿದೇಶಾಂಗ ಇಲಾಖೆಗೆ ಗೌರವ ಸಂಭಾವನೆ ರಹಿತ ಸಲಹೆಗಾರರಾಗಿಯೂ ಮತ್ತು ಪೆಂಟಗನ್‌ ಆಫೀಸ್ ಆಫ್ ನೆಟ್ ಅಸೆಸ್‌ಮೆಂಟ್‌ನ ಗುತ್ತಿಗೆದಾರರಾಗಿಯೂ ವೃತ್ತಿ ಜೀವನ ನಡೆಸಿದ್ದಾರೆ. ಭಾರತ ಮತ್ತು ದಕ್ಷಿಣ ಏಷ್ಯಾಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಅಮೆರಿಕ ಆಡಳಿತಗಳಿಗೆ ಸಲಹೆ ನೀಡುವಲ್ಲಿ ಟೆಲ್ಲಿಸ್ ಹೆಸರುವಾಸಿಯಾಗಿದ್ದಾರೆ.

    ಏನಿದು ರಹಸ್ಯ ದಾಖಲೆ?
    ಅಮೆರಿಕ ಸೇನಾ ವಿಮಾನಗಳ ಸಾಮರ್ಥ್ಯಕ್ಕೆ ಸಂಬಂಧಿಸಿದ ಗೌಪ್ಯ ಕಡತಗಳನ್ನ 2025ರ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ರಕ್ಷಣಾ ಮತ್ತು ವಿದೇಶಾಂಗ ಇಲಾಖೆಗಳ ಕಟ್ಟಡದಿಂದ ರಹಸ್ಯ ಮಾಹಿತಿ ಸಂಗ್ರಹಿಸಿದ್ದಾರೆ. ದಾಖಲೆಗಳನ್ನ ಮುದ್ರಿಸಿ ಲೆದರ್ ಬ್ರೀಫ್‌ಕೇಸ್‌ನೊಂದಿಗೆ ಒಂದು ಕಟ್ಟಡದಿಂದ ಹೊರಬರುತ್ತಿರುವುದು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಅಕ್ಟೋಬರ್ 11 ರಂದು ಅವರ ನಿವಾಸದಲ್ಲಿ ಶೋಧ ನಡೆಸಿದಾಗ ಹಲವಾರು ರಹಸ್ಯ ಕಡತಗಳು ಪತ್ತೆಯಾಗಿವೆ. ಕಸದ ಬುಟ್ಟಿಯಲ್ಲಿಯೂ ದಾಖಲೆಗಳು ಸಿಕ್ಕಿವೆ ಎಂದು ವರದಿಗಳಿಂದ ತಿಳಿದುಬಂದಿದೆ. ಬಳಿಕ ಅವರನ್ನ ಬಂಧಿಸಲಾಗಿದೆ.

    ಚೀನಾ ಭೇಟಿ ಸಾಧ್ಯತೆ
    ಆಶ್ಲೇ ಅಧಿಕೃತ ಕಡತಗಳನ್ನು ಅಪಹರಿಸಿದ ಬಳಿಕ ಚೀನಾದ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ ಎಂಬ ಅನುಮಾನ ಹುಟ್ಟಿಕೊಂಡಿದೆ. ಹೀಗಾಗಿ ಚೀನಾದ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆಯೇ? ಅವರ ಬಳಿಕ ವರದಿ ಹಂಚಿಕೊಂಡಿದ್ದಾರೆಯೇ ಅನ್ನೋದನ್ನೂ ಅಮೆರಿಕದ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಯುಎಸ್‌ ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದಾರೆ.

    ಆರೋಪ ಸಾಬೀತಾದ್ರೆ ಜೈಲೇ ಗತಿ
    ಒಂದು ವೇಳೆ ಆಶ್ಲೇ ಅವರ ವಿರುದ್ಧ ಹೊರಿಸಲಾದ ಆರೋಪ ಸಾಬೀತಾದ್ರೆ 10 ವರ್ಷಗಳ ಜೈಲುಶಿಕ್ಷೆ ಹಾಗೂ 2.50 ಲಕ್ಷ ಡಾಲರ್‌ (2.21 ಕೋಟಿ ರೂ.) ದಂಡ ಪಾವತಿಸಬೇಕಾಗುತ್ತದೆ. ಜೊತೆಗೆ ಅವರ ಆಸ್ತಿಯನ್ನು ಅಮೆರಿಕ ಮುಟ್ಟುಗೋಲು ಹಾಕಿಕೊಳ್ಳಲಿದೆ.

    ಆಶ್ಲೇ ಟೆಲ್ಲಿಸ್ ಯಾರು?
    2001 ರಲ್ಲಿ ಅಮೆರಿಕ ಸರ್ಕಾರ ಸೇರಿದ್ದ ಟೆಲ್ಲಿಸ್, ಭಾರತ ಮತ್ತು ದಕ್ಷಿಣ ಏಷ್ಯಾ ಬಗ್ಗೆ ರಿಪಬ್ಲಿಕನ್ ಮತ್ತು ಡೆಮಾಕ್ರಟಿಕ್ ಆಡಳಿತಗಳಿಗೆ ಸಲಹೆ ನೀಡಿದ್ದಾರೆ. ಮುಂಬೈನಲ್ಲಿ ಜನಿಸಿದ ಟೆಲ್ಲಿಸ್, ಸೇಂಟ್ ಕ್ಸೇವಿಯರ್ಸ್ ಕಾಲೇಜಿನಲ್ಲಿ ಓದಿದ್ದು, ನಂತರ ಚಿಕಾಗೋ ವಿಶ್ವವಿದ್ಯಾಲಯದಿಂದ ಪಿಹೆಚ್‌ಡಿ ಪಡೆದಿದ್ದಾರೆ. ಅವರು ಚಿಕಾಗೋ ವಿಶ್ವವಿದ್ಯಾಲಯದಿಂದಲೇ ರಾಜಕೀಯ ವಿಜ್ಞಾನದಲ್ಲಿ ಎಂಎ ಪದವಿಯನ್ನೂ ಹೊಂದಿದ್ದಾರೆ. ವರ್ಷಗಳಲ್ಲಿ, ಟೆಲ್ಲಿಸ್ ಅಮೆರಿಕ-ಭಾರತ-ಚೀನಾ ನೀತಿ ವಲಯದಲ್ಲಿ ಗುರುತಿಸಿಕೊಂಡಿದ್ದರು. ವೇದಿಕೆಗಳಲ್ಲಿ ಪರಿಚಿತ ಮುಖವಾಗಿದ್ದ ಅವರು, ವಾಷಿಂಗ್ಟನ್, ನವದೆಹಲಿ ಮತ್ತು ಬೀಜಿಂಗ್‌ನಲ್ಲಿ ಅವರ ಬರಹಗಳನ್ನು ಗೌರವಿಸಲಾಗುತ್ತಿತ್ತು.

  • Operation Sindoor| ಪಾಕಿನ 100ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದಾರೆ:DGMO

    Operation Sindoor| ಪಾಕಿನ 100ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದಾರೆ:DGMO

    ನವದೆಹಲಿ: ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯ ಸಂದರ್ಭದಲ್ಲಿ ಪಾಕಿಸ್ತಾನದ 100ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO) ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ (Lt Gen Rajiv Ghai) ಹೇಳಿದ್ದಾರೆ.

    ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗಳಿಗೆ ಸೈನ್ಯವನ್ನು ಕೊಡುಗೆ ನೀಡುವ 34 ರಾಷ್ಟ್ರಗಳ ಸೇನಾ ಮುಖ್ಯಸ್ಥರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಭಾರೀ ಪ್ರಮಾಣದ ಮಿಲಿಟರಿ ನಷ್ಟವನ್ನು ಅನುಭವಿಸಿದೆ. ನಾಲ್ಕು ದಿನಗಳ ಸಂಘರ್ಷದ ಸಮಯದಲ್ಲಿ ಪಾಕಿಸ್ತಾನದ(Pakistan) ಕನಿಷ್ಠ 12 ವಿಮಾನಗಳನ್ನು ಕಳೆದುಕೊಂಡಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಟಾಟಾ ಮೋಟಾರ್ಸ್ ಷೇರು ಮೌಲ್ಯ 40% ಕುಸಿತವಾದ್ರೂ ಆತಂಕ ಪಡೋ ಅಗತ್ಯವಿಲ್ಲ: ನಿಜವಾಗಿ ಆಗಿದ್ದೇನು?

    ಸಾವುನೋವುಗಳಿಗೆ ಸಾಕ್ಷಿಯಾಗಿ ಪಾಕಿಸ್ತಾನದ ಮರಣೋತ್ತರ ಮಿಲಿಟರಿ ಪ್ರಶಸ್ತಿಗಳ ಪಟ್ಟಿಯನ್ನು ಉಲ್ಲೇಖಿಸಿದ ಅವರು, ಆಗಸ್ಟ್ 14 ರಂದು ಪಾಕಿಸ್ತಾನವು ತಿಳಿಯದೆಯೇ ಈ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಿರಬಹುದು. ಅವರು ನೀಡಿದ ಮರಣೋತ್ತರ ಪ್ರಶಸ್ತಿಗಳ ಸಂಖ್ಯೆಯಿಂದ ಗಡಿಯಲ್ಲಿ ಸಾವನ್ನಪ್ಪಿದ ಸೈನಿಕರ ಸಂಖ್ಯೆ 100 ಕ್ಕಿಂತ ಹೆಚ್ಚಿವೆ ಎಂಬುದನ್ನು ಸೂಚಿಸುತ್ತಿವೆ ಎಂದರು.

    ನಾವು ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಿದ್ದೆವು. ಆದರೆ ಪಾಕಿಸ್ತಾನ ಈ ದಾಳಿಗೆ ಪ್ರತಿಯಾಗಿ ನಮ್ಮ ಸೇನಾ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದಕ್ಕೆ ಪ್ರತಿ ದಾಳಿ ನಡೆಸಿದೆವು. ನಾವು ಅವರ 11 ವಾಯು ನೆಲೆಗಳನ್ನು ಹೊಡೆದು ಹಾಕಿದ್ದೇವೆ. ನಾಲ್ಕು ರಾಡಾರ್‌ಗಳನ್ನು ಧ್ವಂಸ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ:  ಬಿಹಾರ ಚುನಾವಣೆಗೆ 71 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ – ಸ್ಪೀಕರ್‌ಗೆ ಕೊಟ್ಟಿಲ್ಲ ಟಿಕೆಟ್

    ಭಯೋತ್ಪಾದಕ ದಾಳಿ ನಡೆದರೆ ನಿರ್ಣಾಯಕ ಪ್ರತೀಕಾರ ಇರುತ್ತದೆ. ನಾವು ಪರಮಾಣು ಬ್ಲ್ಯಾಕ್‌ಮೇಲ್‌ಗೆ ಬಲಿಯಾಗುವುದಿಲ್ಲ. ಭಯೋತ್ಪಾದಕರು ಮತ್ತು ಭಯೋತ್ಪಾದನೆಯ ಪ್ರಾಯೋಜಕರ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಮೂರು ವಿಚಾರದ ಬಗ್ಗೆ ಪ್ರಧಾನಿಯವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.

  • ಟ್ರಂಪ್‌ ಇಲ್ಲದಿದ್ರೆ ಭಾರತ-ಪಾಕ್‌ ಪರಮಾಣು ಸಂಘರ್ಷದಲ್ಲಿ ಯಾರೋಬ್ಬರೂ ಉಳಿಯುತ್ತಿರಲಿಲ್ಲವೇನೋ: ಪಾಕ್‌ ಪಿಎಂ

    ಟ್ರಂಪ್‌ ಇಲ್ಲದಿದ್ರೆ ಭಾರತ-ಪಾಕ್‌ ಪರಮಾಣು ಸಂಘರ್ಷದಲ್ಲಿ ಯಾರೋಬ್ಬರೂ ಉಳಿಯುತ್ತಿರಲಿಲ್ಲವೇನೋ: ಪಾಕ್‌ ಪಿಎಂ

    – ಭಾರತ – ಪಾಕ್‌ ನಡುವಿನ ಪರಮಾಣು ಸಂಘರ್ಷ ತಪ್ಪಿಸಿದ್ದು ಟ್ರಂಪ್‌; ಹೊಗಳಿದ ಷರೀಫ್

    ಕೈರೋ: ಭಾರತ ಮತ್ತು ಪಾಕಿಸ್ತಾನ ನಡುವಿನ ಪರಮಾಣು ಸಂಘರ್ಷವನ್ನು ಡೊನಾಲ್ಡ್‌ ಟ್ರಂಪ್‌ (Donald Trump) ತಪ್ಪಿಸಿದ್ದಾರೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ (Shehbaz Sharif) ಹೇಳುವ ಮೂಲಕ ಮತ್ತೊಮ್ಮೆ ಅಮೆರಿಕದ ಅಧ್ಯಕ್ಷರ ಬೆನ್ನುತಟ್ಟಿದ್ದಾರೆ.

    ಈಜಿಪ್ಟ್‌ನಲ್ಲಿ (Egypt) ನಡೆದ ಗಾಜಾ ಶಾಂತಿ ಸಮ್ಮೇಳದಲ್ಲಿ ಮಾತನಾಡಿದ ಷರೀಪ್‌, ಭಾರತ-ಪಾಕ್‌ ನಡುವೆ ಪರಮಾಣು ಸಂಘರ್ಷ ತಪ್ಪಿಸಿದ್ದೇ ಟ್ರಂಪ್‌. ಟ್ರಂಪ್‌ ಮಧ್ಯಪ್ರವೇಶ ಮಾಡದೇ ಇದ್ದಿದ್ರೆ ಅದೇನಾಗುತ್ತಿತ್ತು ಅನ್ನೋದನ್ನ ಊಹಿಸಲೂ ಆಗುತ್ತಿರಲಿಲ್ಲ. 2 ಪರಮಾಣು ರಾಷ್ಟ್ರಗಳ ನಡುವಿನ ಯುದ್ಧ ಏನಾಗ್ತಿತ್ತು ಅಂತ ಹೇಳೋಕೆ ಯಾರೂ ಬದುಕುಳಿಯದ ಹಂತಕ್ಕೆ ತಲುಪುತ್ತಿತ್ತೇನೋ ಎಂದು ಕಳವಳ ವ್ಯಕ್ತಪಡಿಸಿದರು.

    ಮುಂದುವರಿದು… ಟ್ರಂಪ್ ಶಾಂತಿಯ ರಾಯಭಾರಿ, ಅವರು ನಿಲ್ಲಿಸಿದ 8 ಯುದ್ಧಗಳಲ್ಲಿ ಭಾರತ-ಪಾಕಿಸ್ತಾನ ಯುದ್ಧವೂ ಒಂದು. ಅದಕ್ಕಾಗಿಯೇ ಅವರನ್ನ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದೆವು. ನೊಬೆಲ್ ಪ್ರಶಸ್ತಿಗೆ ಅತ್ಯಂತ ಪ್ರಾಮಾಣಿಕ ಮತ್ತು ಅರ್ಹ ಅಭ್ಯರ್ಥಿ ಆಗಿದ್ದರು ಎಂದು ಹೊಗಳಿದರು.

    ಮೇ 10 ರಂದು ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮದ ನಂತರ ಟ್ರಂಪ್‌ ನಿರಂತರವಾಗಿ ಭಾರತ‌ – ಪಾಕ್‌ ಯುದ್ಧ ನಿಲ್ಲಸಿದ್ದು ನಾನೇ ಎಂದು ಬೆನ್ನುತ್ತಟ್ಟಿಕೊಳ್ಳುತ್ತಲೇ ಇದ್ದಾರೆ. ಆದ್ರೆ ಇದರಲ್ಲಿ ಯಾವುದೇ ಮೂರನೇ ವ್ಯಕ್ತಿಯ ಹಸ್ತಕ್ಷೇಪ ಇಲ್ಲ ಎಂಬುದನ್ನು ಭಾರತ ಪದೇ ಪದೇ ಸ್ಪಷ್ಟಪಡಿಸುತ್ತಲೇ ಇದೆ.

    ಷರೀಫ್‌ ಮುಂದೆಯೇ ಭಾರತ ಹೊಗಳಿದ ಟ್ರಂಪ್‌
    ಇದಕ್ಕೂ ಮುನ್ನ ಮಾತನಾಡಿದ ಟ್ರಂಪ್‌, ಭಾರತ ಹಾಗೂ ಪ್ರಧಾನಿ ಮೋದಿ ಅವರನ್ನ ಹೊಗಳಿದ್ರು. ಈಗ ಭಾರತ ಮತ್ತು ಪಾಕಿಸ್ತಾನ ಚೆನ್ನಾಗಿ ಹೊಂದಿಕೊಳ್ಳುತ್ತವೇ ಅಲ್ಲವೇ ಎಂದೂ ಶಹಬಾಜ್ ಷರೀಫ್ ಕಡೆಗೆ ತಿರುಗಿ ಕೇಳಿದರು. ಇದಕ್ಕೆ ಪಾಕ್‌ ಪ್ರಧಾನಿ ಹೌದು ಎನ್ನುತ್ತಲೇ ಸಕಾರಾತ್ಮಕವಾಗಿ ತಲೆಯಾಡಿಸಿದ್ರು. ಈ ವಿಡಿಯೋ ತುಣುಕುಗಳೀಗ ಸೋಷಿಯಲ್‌ ಮೀಡಿಯಾದಲ್ಲೂ ವೈರಲ್‌ ಆಗ್ತಿವೆ.

    ಭಾಷಣದ ವೇಳೆ ಮುಗುಳುನಗೆ ಬೀರಿ ಮಾತನಾಡಿದ ಟ್ರಂಪ್‌, ಭಾರತವು ಒಂದು ಅದ್ಭುತ ದೇಶ, ನನ್ನ ಇಳ್ಳೆಯ ಸ್ನೇಹಿತನ ನೇತೃತ್ವದಲ್ಲಿ ಅದ್ಭುತ ಕೆಲಸಗಳನ್ನ ಮಾಡುತ್ತಿದೆ. ಭಾರತ ಮತ್ತು ಪಾಕಿಸ್ತಾನ ತುಂಬಾ ಚೆನ್ನಾಗಿ ಹೊಂದಿಕೊಳ್ಳುತ್ತವೆ ಎಂದು ನಾನು ಭಾವಿಸುತ್ತೇನೆ ಎಂದರು.

    ಪಾಕ್‌ ಮಿಲಿಟರಿ ನಾಯಕತ್ವ ಶ್ಲಾಘನೆ
    ಇನ್ನೂ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರೊಂದಿಗೆ ಗಾಜಾ ಶಾಂತಿ ಶೃಂಗಸಭೆಯ ಸಹ-ಅಧ್ಯಕ್ಷತೆ ವಹಿಸಿದ್ದ ಟ್ರಂಪ್, ಪಾಕಿಸ್ತಾನದ ಮಿಲಿಟರಿ ನಾಯಕತ್ವವನ್ನು ಶ್ಲಾಘಿಸಿದರು. ಉತ್ತಮ ಸ್ನೇಹಿತರು ಒಟ್ಟಾಗಿ ಕೆಲಸ ಮಾಡುವುದರಿಂದ ಶಾಂತಿ ನೆಲೆಸುತ್ತದೆ ಎಂದು ಭಾರತ-ಪಾಕ್‌ ಒಂದಾಗುವಂತೆ ಪರೋಕ್ಷವಾಗಿ ಹೇಳಿದರು. ಇದೇ ವೇಳೆ ತಮ್ಮ ಹಿಂದೆ ನಿಂತಿದ್ದ ಶಹಬಾಜ್ ಷರೀಫ್ ಅವರನ್ನ ತೋರಿಸುತ್ತಾ, ಇದನ್ನ ಸಾಧ್ಯವಾಗಿಸಲು ಸಹಕರಿಸುತ್ತಾರೆ… ಹೌದಲ್ಲವೇ ಎಂದು ವ್ಯಂಗ್ಯ ಮಾಡಿದರು.

  • ಭಾರತ ಅದ್ಭುತ ದೇಶ, ನನ್ನ ಒಳ್ಳೆಯ ಫ್ರೆಂಡ್‌ – ಪಾಕ್‌ ಪ್ರಧಾನಿ ಎದುರೇ ಮೋದಿಯನ್ನ ಹಾಡಿಹೊಗಳಿದ ಟ್ರಂಪ್‌

    ಭಾರತ ಅದ್ಭುತ ದೇಶ, ನನ್ನ ಒಳ್ಳೆಯ ಫ್ರೆಂಡ್‌ – ಪಾಕ್‌ ಪ್ರಧಾನಿ ಎದುರೇ ಮೋದಿಯನ್ನ ಹಾಡಿಹೊಗಳಿದ ಟ್ರಂಪ್‌

    – ಈಗ ಭಾರತ -ಪಾಕ್‌ ಚೆನ್ನಾಗಿ ಹೊಂದಿಕೊಳ್ಳುತ್ತವೆ ಅಲ್ಲವೇ? – ಟ್ರಂಪ್‌ ಪ್ರಶ್ನೆ
    – ಅಧ್ಯಕ್ಷರ ಮಾತಿಗೆ ಹೌದು ಎನ್ನುತ್ತಾ ತಲೆಯಾಡಿಸಿದ ಶೆಹಬಾಜ್ ಷರೀಫ್

    ವಾಷಿಂಗ್ಟನ್‌/ಕೈರೋ: ಭಾರತ ಒಂದು ಅದ್ಭುತ ದೇಶ, ನನ್ನ ಒಳ್ಳೆಯ ಸ್ನೇಹಿತ ಕೂಡ ಹೌದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಎದುರಲ್ಲೇ ಭಾರತ & ಮೋದಿ ಅವರನ್ನ ಹಾಡಿಹೊಗಳಿದ್ದಾರೆ.

    ಈಜಿಪ್ಟ್‌ನಲ್ಲಿ ಸೋಮವಾರ ನಡೆದ ಗಾಜಾ ಶಾಂತಿ ಸಮ್ಮೇಳದಲ್ಲಿ ಮಾತನಾಡಿದ ಟ್ರಂಪ್‌, ಭಾರತ ಹಾಗೂ ಪ್ರಧಾನಿ ಮೋದಿ ಅವರನ್ನ ಹೊಗಳಿದ್ರು. ಈಗ ಭಾರತ ಮತ್ತು ಪಾಕಿಸ್ತಾನ ಚೆನ್ನಾಗಿ ಹೊಂದಿಕೊಳ್ಳುತ್ತವೇ ಅಲ್ಲವೇ ಎಂದೂ ಶೆಹಬಾಜ್ ಷರೀಫ್ (Shehbaz Sharif) ಕಡೆಗೆ ತಿರುಗಿ ಕೇಳಿದರು. ಇದಕ್ಕೆ ಪಾಕ್‌ ಪ್ರಧಾನಿ (Pak PM) ಹೌದು ಎನ್ನುತ್ತಲೇ ಸಕಾರಾತ್ಮಕವಾಗಿ ತಲೆಯಾಡಿಸಿದ್ರು. ಈ ವಿಡಿಯೋ ತುಣುಕುಗಳೀಗ ಸೋಷಿಯಲ್‌ ಮೀಡಿಯಾದಲ್ಲೂ ವೈರಲ್‌ ಆಗ್ತಿವೆ.

    ಭಾಷಣದ ವೇಳೆ ಮುಗುಳುನಗೆ ಬೀರಿ ಮಾತನಾಡಿದ ಟ್ರಂಪ್‌, ಭಾರತವು (India) ಒಂದು ಅದ್ಭುತ ದೇಶ, ನನ್ನ ಇಳ್ಳೆಯ ಸ್ನೇಹಿತನ ನೇತೃತ್ವದಲ್ಲಿ ಅದ್ಭುತ ಕೆಲಸಗಳನ್ನ ಮಾಡುತ್ತಿದೆ. ಭಾರತ ಮತ್ತು ಪಾಕಿಸ್ತಾನ ತುಂಬಾ ಚೆನ್ನಾಗಿ ಹೊಂದಿಕೊಳ್ಳುತ್ತವೆ ಎಂದು ನಾನು ಭಾವಿಸುತ್ತೇನೆ ಎಂದರು.

    ಪಾಕ್‌ ಮಿಲಿಟರಿ ನಾಯಕತ್ವ ಶ್ಲಾಘನೆ
    ಇನ್ನೂ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರೊಂದಿಗೆ ಗಾಜಾ ಶಾಂತಿ ಶೃಂಗಸಭೆಯ ಸಹ-ಅಧ್ಯಕ್ಷತೆ ವಹಿಸಿದ್ದ ಟ್ರಂಪ್, ಪಾಕಿಸ್ತಾನದ ಮಿಲಿಟರಿ ನಾಯಕತ್ವವನ್ನು ಶ್ಲಾಘಿಸಿದರು. ಉತ್ತಮ ಸ್ನೇಹಿತರು ಒಟ್ಟಾಗಿ ಕೆಲಸ ಮಾಡುವುದರಿಂದ ಶಾಂತಿ ನೆಲೆಸುತ್ತದೆ ಎಂದು ಭಾರತ-ಪಾಕ್‌ ಒಂದಾಗುವಂತೆ ಪರೋಕ್ಷವಾಗಿ ಹೇಳಿದರು. ಇದೇ ವೇಳೆ ತಮ್ಮ ಹಿಂದೆ ನಿಂತಿದ್ದ ಶಹಬಾಜ್ ಷರೀಫ್ ಅವರನ್ನ ತೋರಿಸುತ್ತಾ, ಇದನ್ನ ಸಾಧ್ಯವಾಗಿಸಲು ಸಹಕರಿಸುತ್ತಾರೆ… ಹೌದಲ್ಲವೇ ಎಂದು ವ್ಯಂಗ್ಯ ಮಾಡಿದರು.

    ಇಸ್ರೇಲ್‌ ಸಂಸತ್ತಿನಲ್ಲಿ ಟ್ರಂಪ್‌ ಭಾಷಣ
    ಇದಕ್ಕೂ ಮುನ್ನ ಇಸ್ರೇಲ್ (Isreal) ಮತ್ತು ಗಾಜಾದ ಹಮಾಸ್ (Hamas) ಬಂಡುಕೋರರ ನಡುವಿನ ಸುದೀರ್ಘ 2 ವರ್ಷಗಳ ಯುದ್ಧಕ್ಕೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಇಸ್ರೇಲ್‌ ಸಂಸತ್ತನ್ನು ಉದ್ದೇಶಿಸಿ ಟ್ರಂಪ್‌ ಮಾತನಾಡಿದ್ದರು. ಹಲವು ವರ್ಷಗಳ ನಿರಂತರ ಯುದ್ಧದ ನಂತರ ಇಂದು ಆಕಾಶವು ಶಾಂತವಾಗಿದೆ. ಬಂದೂಕುಗಳು ಮೌನವಾಗಿವೆ. ಸೈರನ್‌ಗಳು ಶಬ್ಧ ಮಾಡುವುದನ್ನು ನಿಲ್ಲಿಸಿವೆ. ಶಾಂತಿಯಿಂದ ಇರುವ ಪವಿತ್ರ ಭೂಮಿಯ ಮೇಲೆ ಸೂರ್ಯ ಉದಯಿಸುತ್ತಿದ್ದಾನೆ ಎಂದು ಹೇಳಿದರು.

    ಒತ್ತೆಯಾಳುಗಳು ಹಿಂತಿರುಗಿದ್ದಾರೆ, ಅದನ್ನು ಹೇಳಲು ತುಂಬಾ ಸಂತೋಷವಾಗುತ್ತಿದೆ. ನಾನು ಕ್ರೂರಿಯಾಗಿ ವರ್ತಿಸುತ್ತೇನೆ ಎಂದು ಎಲ್ಲರೂ ಭಾವಿಸಿದ್ದರು. ನಾನು ಎಲ್ಲರೊಂದಿಗೆ ಯುದ್ಧಕ್ಕೆ ಹೋಗುತ್ತೇನೆ ಎಂದು ಹಿಲರಿ ಕ್ಲಿಂಟನ್ ಹೇಳಿದ್ದು ನನಗೆ ನೆನಪಿದೆ. ಆದರೆ ನಾನು ಯುದ್ಧ ಬಯಸುವ ವ್ಯಕ್ತಿಯಲ್ಲ. ನನ್ನದು ಯುದ್ಧ ನಿಲ್ಲಿಸುವ ವ್ಯಕ್ತಿತ್ವ ತಾವೇ ಬೆನ್ನುತಟ್ಟಿಕೊಂಡರು.