Tag: ಭಾರತ

  • ಉಗ್ರರ ಒಳನುಸುಳುವಿಕೆ ತಡೆಯಲು ಬಿಎಸ್‌ಎಫ್ ಕಟ್ಟೆಚ್ಚರ; ಕಾಶ್ಮೀರ ಕಣಿವೆಯಲ್ಲಿ ಭದ್ರತೆ ಹೆಚ್ಚಳ

    ಉಗ್ರರ ಒಳನುಸುಳುವಿಕೆ ತಡೆಯಲು ಬಿಎಸ್‌ಎಫ್ ಕಟ್ಟೆಚ್ಚರ; ಕಾಶ್ಮೀರ ಕಣಿವೆಯಲ್ಲಿ ಭದ್ರತೆ ಹೆಚ್ಚಳ

    – ಎಲ್‌ಒಸಿಯಲ್ಲಿ ಭಯೋತ್ಪಾದಕರ ಲಾಂಚ್‌ ಪ್ಯಾಡ್‌ಗಳು ಸಕ್ರಿಯ; ಗುಪ್ತಚರ ವರದಿ

    ಶ್ರೀನಗರ: ಚಳಿಗಾಲದ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ತಡೆಯುವ ಸಲುವಾಗಿ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಎಲ್‌ಒಸಿಯಲ್ಲಿ (LoC ಗಡಿ ನಿಯಂತ್ರಣ ರೇಖೆ) ಉಗ್ರ ಲಾಂಚ್‌ಪ್ಯಾಡ್‌ಗಳು ಸಕ್ರಿಯಗೊಂಡಿರುವ ಹಿನ್ನೆಲೆ ಗಡಿಯುದ್ದಕ್ಕೂ BSF (ಗಡಿ ಭದ್ರತಾ ಪಡೆ) ಕಟ್ಟೆಚ್ಚರ ವಹಿಸಿದೆ.

    ಹೌದು. ಗುಪ್ತಚರ ವರದಿಗಳ ಪ್ರಕಾರ, ಎಲ್‌ಒಸಿ ಗಡಿಯುದ್ಧಕ್ಕೂ ಹಲವಾರು ಲಾಂಚ್‌ ಪ್ಯಾಡ್‌ಗಳಲ್ಲಿ ಭಯೋತ್ಪಾದಕರು (Terrorists) ಕಣಿವೆಯೊಳಗೆ ನುಸುಳಲು ಕಾಯುತ್ತಿದ್ದಾರೆ. ಚಳಿಗಾಲದ ಸಂದರ್ಭದಲ್ಲಿ ಇದು ನಡೆಯುತ್ತಿರುತ್ತದೆ. ಹಾಗಾಗಿ ಚಳಿಗಾಲಕ್ಕೂ ಮುನ್ನವೇ ಕಟ್ಟೆಚ್ಚರ ವಹಿಸಲಾಗಿದೆ ಎಂದು ಬಿಎಸ್‌ಎಫ್‌ ಮೂಲಗಳು ತಿಳಿಸಿವೆ.

    ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ನಡೆದ ʻವುಲರ್ 2.0ʼ ಮ್ಯಾರಥಾನ್ ವೇಳೆ ಈ ಕುರಿತು ಬಿಎಸ್‌ಎಫ್ ಹೆಚ್ಚುವರಿ ಮಹಾನಿರ್ದೇಶಕ (ADG) ಸತೀಶ್ ಎಸ್. ಖಂಡ್ರೆ ಮಾತನಾಡಿದರು.

    ಚಳಿಗಾಲ ಶುರುವಾಗುತ್ತಿದ್ದಂತೆ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವು ಸಾಮಾನ್ಯವಾಗಿ ಹೆಚ್ಚಾಗುತ್ತದೆ. ಹಾಗಾಗಿ ಗಡಿಯಲ್ಲಿ ಕಣ್ಗಾವಲು ಬಲಪಡಿಸಿದ್ದೇವೆ. ನಮ್ಮ ಸೈನಿಕರು, ಅಧಿಕಾರಿಗಳನ್ನ ಅಲರ್ಟ್‌ ಮಾಡಿದ್ದೇವೆ. ಗುಪ್ತಚರ ಮಾಹಿತಿಯ ಪ್ರಕಾರ, ಈಗಾಗಲೇ ಗಡಿಯಲ್ಲಿ ಹಲವಾರು ಭಯೋತ್ಪಾದಕ ಲಾಂಚ್‌ ಪ್ಯಾಡ್‌ಗಳನ್ನ ಸಕ್ರಿಯಗೊಳಿಸಿದೆ. ಅಲ್ಲಿಂದ ಭಯೋತ್ಪಾದಕರು ಒಳನುಸುಳಲು ತಯಾರಿ ನಡೆಸುತ್ತಿದ್ದಾರೆ. ಸದ್ಯಕ್ಕೆ ಎಷ್ಟು ಉಗ್ರರು ಇದ್ದಾರೆ ಅನ್ನೋದು ಅಂದಾಜು ಮಾಡುವುದು ಕಷ್ಟ. ಆದ್ರೆ ಕೆಲ ಚಟುವಟಿಕೆಗಳು ಸಕ್ರಿಯಗೊಂಡಿರುವ ಬಗ್ಗೆ ವರದಿ ಬಂದಿದೆ. ಹಾಗಾಗಿ ನಾವು ಗಡಿಯ ಎಲ್ಲಾ ಭಾಗದಲ್ಲು ಸಕ್ರಿಯವಾಗಿದ್ದೇವೆ ಎಂದು ತಿಳಿಸಿದ್ದಾರೆ.

    ಸಾಂದರ್ಭಿಕ ಚಿತ್ರ

    ಸೇನೆ, ಬಿಎಸ್‌ಎಫ್‌ ಜಂಟಿ ಕಣ್ಗಾವಲು
    ಗುಪ್ತಚರ ವರದಿ ಬೆನ್ನಲ್ಲೇ ಗಡಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಬಿಎಸ್‌ಎಫ್‌ ಹಾಗೂ ಭಾರತೀಯ ಸೇನೆ ಸಂಪೂರ್ಣ ಸಿದ್ಧವಾಗಿದ್ದು, ಜಂಟಿಯಾಗಿ ಕಣ್ಗಾವಲು ನಿಯೋಜಿಸಲಾಗಿದೆ. ನಮ್ಮ ಸೈನಿಕರ ಕಣ್ತಪ್ಪಿಸಿ‌ ಬರಲು ಯಾರಿಂದಲೂ ಸಾಧ್ಯವಿಲ್ಲ ಎಂದಿದೆ ಬಿಎಸ್‌ಎಪ್.

    ಚಳಿಗಾಲದಲ್ಲಿ ಏಕೆ ನುಸುಳುವಿಕೆ ಹೆಚ್ಚಳ?
    ಚಳಿಗಾಲದಲ್ಲಿ ಹಿಮಪಾತದಿಂದಾಗಿ ಕಾಶ್ಮೀರ ಕಣಿವೆಯಲ್ಲಿ ಅನೇಕ ಮಾರ್ಗಗಳು ಮುಚ್ಚಿಕೊಳ್ಳುತ್ತವೆ. ಇದರ ಉಪಯೋಗ ಪಡೆದುಕೊಳ್ಳುವ ಭಯೋತ್ಪಾದಕರು ಒಳಗೆ ನುಸುಳಲು ಯತ್ನಿಸುತ್ತಾರೆ. ಹೀಗಾಗಿ ಬಿಎಸ್‌ಎಫ್‌ ಹಗಲು ಮತ್ತು ರಾತ್ರಿ ಕಣ್ಗಾವಲು ಇರಿಸಿದೆ. ಡ್ರೋನ್‌ಗಳನ್ನು ಸಹ ನಿಯೋಜನೆ ಮಾಡಲಾಗಿದೆ.

  • ಅಭಿಷೇಕ್‌ ಶರ್ಮಾ ಔಟ್‌ ಮಾಡೋಕೆ ಕೇವಲ 3 ಎಸೆತ ಸಾಕು: ಪಾಕ್‌ ವೇಗಿ ಸವಾಲ್

    ಅಭಿಷೇಕ್‌ ಶರ್ಮಾ ಔಟ್‌ ಮಾಡೋಕೆ ಕೇವಲ 3 ಎಸೆತ ಸಾಕು: ಪಾಕ್‌ ವೇಗಿ ಸವಾಲ್

    ಮುಂಬೈ: ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್‌ ಅಭಿಷೇಕ್‌ ಶರ್ಮಾರನ್ನ (Abhishek Sharma) ಕೇವಲ 3 ಎಸೆತಗಳಲ್ಲಿ ಔಟ್‌ ಮಾಡುತ್ತೇನೆ ಎಂದು ಪಾಕಿಸ್ತಾನದ ವೇಗಿ ಇಹ್ಸಾನುಲ್ಲಾ (Ihsanullah) ಸವಾಲು ಹಾಕಿದ್ದಾರೆ.

    ಇಹ್ಸಾನುಲ್ಲಾ ಸವಾಲು ಹಾಕಿರುವ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಶರ್ಮಾ ಅವರನ್ನು ಔಟ್‌ ಮಾಡಲು ಮೂರು ಎಸೆತಗಳನ್ನು ಸಾಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಿಲ್ಲಿಯಲ್ಲಿ ಬೌಲರ್‌ಗಳ ದರ್ಬಾರ್‌ – ಫಾಲೋ ಆನ್‌ ಬಳಿಕ ವಿಂಡೀಸ್‌ ದಿಟ್ಟ ಹೋರಾಟ; ಭಾರತಕ್ಕೆ ಇನ್ನಿಂಗ್ಸ್‌ & 97 ರನ್‌ಗಳ ಮುನ್ನಡೆ

    ಅಭಿಷೇಕ್ ಶರ್ಮಾ ನನ್ನ ವಿರುದ್ಧ ಆರು ಎಸೆತಗಳಿಗಿಂತ ಹೆಚ್ಚು ಸಮಯ ಆಡುವುದಿಲ್ಲ. ನಾನು ಅವರನ್ನು ಮೂರು ಎಸೆತಗಳಲ್ಲಿ ಔಟ್ ಮಾಡುತ್ತೇನೆ ಎಂದು ಸವಾಲೆಸೆದಿದ್ದಾರೆ.

    ಇಹ್ಸಾನುಲ್ಲಾ ಬಲಗೈ ವೇಗದ ಬೌಲರ್ ಆಗಿದ್ದು, 2023 ರಲ್ಲಿ ಮುಲ್ತಾನ್ ಸುಲ್ತಾನ್ಸ್ ಪರ 5/12 ವಿಕೆಟ್ ಪಡೆಯುವ ಮೂಲಕ ಗಮನ ಸೆಳೆದಿದ್ದರು. ಪಿಎಸ್ಎಲ್ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಮತ್ತು ಬೌಲರ್ ಆಫ್ ದಿ ಟೂರ್ನಮೆಂಟ್ ಗೌರವಕ್ಕೂ ಭಾಜನರಾಗಿದ್ದಾರೆ. ಅವರ ಬೌಲಿಂಗ್ ವೇಗವು ಗಂಟೆಗೆ 144 ಕಿಮೀ ಸರಾಸರಿಯಲ್ಲಿದೆ. ಇದನ್ನೂ ಓದಿ: ದಿಲ್ಲಿಯಲ್ಲಿ ದರ್ಬಾರ್‌, ದಿಲ್‌ ಗೆದ್ದ ಗಿಲ್‌ – ಭಾರತದ ಹಿಡಿತದಲ್ಲಿ ಪಂದ್ಯ, ವಿಂಡೀಸ್‌ 140ಕ್ಕೆ 4 ವಿಕೆಟ್‌

    2023 ರಲ್ಲಿ ಪಾಕಿಸ್ತಾನ ಪರ T20I ಮತ್ತು ODI ಎರಡರಲ್ಲೂ ಆಡಿದ್ದರು. 2023-24ರಲ್ಲಿ ಮೊಣಕೈ ಸಮಸ್ಯೆ ಎದುರಿಸಿದರು. ಮತ್ತೆ ಅವರ ಪುನರಾಗಮನವಾಗಿಲ್ಲ. 2025 ರ ಡ್ರಾಫ್ಟ್‌ನಲ್ಲಿ ಮಾರಾಟವಾಗದಿದ್ದಕ್ಕೆ PSL ಅನ್ನು ಬಹಿಷ್ಕರಿಸುವ ಪ್ರತಿಜ್ಞೆ ಮಾಡಿದ್ದರು.

  • ಭಾರತ-ಅಫ್ಘಾನಿಸ್ತಾನ ಜಂಟಿ ಹೇಳಿಕೆ ಸರಿಯಲ್ಲ; ಅಫ್ಘಾನ್‌ ರಾಯಭಾರಿಗೆ ಪಾಕಿಸ್ತಾನ ಸಮನ್ಸ್‌

    ಭಾರತ-ಅಫ್ಘಾನಿಸ್ತಾನ ಜಂಟಿ ಹೇಳಿಕೆ ಸರಿಯಲ್ಲ; ಅಫ್ಘಾನ್‌ ರಾಯಭಾರಿಗೆ ಪಾಕಿಸ್ತಾನ ಸಮನ್ಸ್‌

    ಇಸ್ಲಾಮಾಬಾದ್: ಭಾರತ ಭೇಟಿ ವೇಳೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಅಫ್ಘಾನಿಸ್ತಾನದ ರಾಯಭಾರಿಗೆ ಪಾಕಿಸ್ತಾನ (Pakistan) ಸಮನ್ಸ್‌ ನೀಡಿದೆ.

    ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಹೆಚ್ಚುವರಿ ವಿದೇಶಾಂಗ ಕಾರ್ಯದರ್ಶಿ (ಪಶ್ಚಿಮ ಏಷ್ಯಾ ಮತ್ತು ಅಫ್ಘಾನಿಸ್ತಾನ) ಅಫ್ಘಾನ್ ರಾಯಭಾರಿ ಹೇಳಿಕೆಗಳಿಗೆ ಪಾಕಿಸ್ತಾನದ ಬಲವಾದ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದೆ. ಇದನ್ನೂ ಓದಿ: ತಾಲಿಬಾನ್ ಸಚಿವನ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ನಿಷೇಧ – ನಮ್ಮ ಪಾತ್ರ ಇಲ್ಲ ಅಂತ ಕೇಂದ್ರ ಸ್ಪಷ್ಟನೆ

    ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಭಾಗವಾಗಿ ಉಲ್ಲೇಖಿಸುವುದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿಸಲಾಗಿದೆ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿ ತಿಳಿಸಿದೆ.

    ಏಪ್ರಿಲ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಅಫ್ಘಾನಿಸ್ತಾನ ಬಲವಾಗಿ ಖಂಡಿಸಿದೆ. ಜನರು ಮತ್ತು ಭಾರತ ಸರ್ಕಾರದೊಂದಿಗೆ ಅಫ್ಘಾನಿಸ್ತಾನ ಜೊತೆಯಾಗಿರುತ್ತದೆ. ಪ್ರಾದೇಶಿಕ ದೇಶಗಳಿಂದ ಆಗುವ ಎಲ್ಲಾ ಭಯೋತ್ಪಾದಕಾ ಕೃತ್ಯಗಳನ್ನು ಎರಡೂ ಕಡೆಯವರು (ಭಾರತ-ಅಫ್ಘಾನಿಸ್ತಾನ) ನಿಸ್ಸಂದಿಗ್ಧವಾಗಿ ಖಂಡಿಸಿದ್ದಾರೆ. ಈ ಪ್ರದೇಶದಲ್ಲಿ ಶಾಂತಿ ಸ್ಥಾಪನೆಯಾಗಬೇಕು ಎಂದು ಅಫ್ಘಾನಿಸ್ತಾನ ತಿಳಿಸಿದೆ. ಇದನ್ನೂ ಓದಿ: ಕಾಬೂಲ್ ರಾಯಭಾರ ಕಚೇರಿ 4 ವರ್ಷದ ಬಳಿಕ ಪುನಾರಂಭಕ್ಕೆ ಭಾರತ ನಿರ್ಧಾರ – ಎಸ್.ಜೈಶಂಕರ್ ಘೋಷಣೆ

    ಗುರುವಾರ ನವದೆಹಲಿಗೆ ಬಂದಿಳಿದ ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಆರು ದಿನಗಳ ಭಾರತ ಭೇಟಿಯಲ್ಲಿದ್ದಾರೆ.

  • ಪ್ರಧಾನಿ ಭೇಟಿಯಾದ ಸೆರ್ಗಿಯೊ ಗೋರ್ – ಟ್ರಂಪ್ ಮೋದಿಯನ್ನ ಗ್ರೇಟ್‌ ಫ್ರೆಂಡ್‌ ಅಂತ ಪರಿಗಣಿಸ್ತಾರೆ: ಯುಎಸ್‌ ರಾಯಭಾರಿ

    ಪ್ರಧಾನಿ ಭೇಟಿಯಾದ ಸೆರ್ಗಿಯೊ ಗೋರ್ – ಟ್ರಂಪ್ ಮೋದಿಯನ್ನ ಗ್ರೇಟ್‌ ಫ್ರೆಂಡ್‌ ಅಂತ ಪರಿಗಣಿಸ್ತಾರೆ: ಯುಎಸ್‌ ರಾಯಭಾರಿ

    ನವದೆಹಲಿ: ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಆಪ್ತ ರಾಜಕೀಯ ಸಹಾಯಕ ಹಾಗೂ ಅಮೆರಿಕಾದ ಭಾರತೀಯ ರಾಯಭಾರಿ ಸೆರ್ಗಿಯೊ ಗೋರ್‌ (Sergio Gor) ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಇಂದು ಭೇಟಿಯಾದರು.

    ತಮ್ಮನ್ನು ಭೇಟಿಯಾದ ಸೆರ್ಗಿಯೋ ಅವರನ್ನ ಮೋದಿ ಆತ್ಮೀಯವಾಗಿ ಸ್ವಾಗತಿಸಿದರು. ಇದೇ ವೇಳೆ ಸೆರ್ಗಿಯೋ, ಪ್ರಧಾನಿಗಳಿಗೆ ಟ್ರಂಪ್‌ ಹಾಗೂ ಮೋದಿ (Narendra Modi) ಅವರು ಇರುವ ಫೋಟೋವನ್ನ ಉಡುಗೊರೆಯಾಗಿ ನೀಡಿದರು. ಜೊತೆಗೆ ಟ್ರಂಪ್‌ ವಿಶೇಷ ಸಂದೇಶವನ್ನೂ ಹಂಚಿಕೊಂಡರು. ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ರೈತರಿಗೆ ಬಿಗ್ ಗಿಫ್ಟ್ – 35 ಸಾವಿರ ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ

    ಸೆರ್ಗಿಯೋ ಅವರ‌ ಭೇಟಿ ಬಳಿಕ ಎಕ್ಸ್‌ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪ್ರಧಾನಿ ಮೋದಿ, ಭಾರತಕ್ಕೆ ಅಮೆರಿಕ ನಿಯೋಜಿತ ರಾಯಭಾರಿ ಸೆರ್ಹಿಯೊ ಗೋರ್‌ ಅವರನ್ನ ಸ್ವಾಗತಿಸಲು ಸಂತೋಷವಾಗಿದೆ. ಅವ್ರ ಅಧಿಕಾರವಧಿಯು ಭಾರತ ಮತ್ತು ಅಮೆರಿಕದ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ.

    ಮೋದಿ ಅವರ ಭೇಟಿ ಬಳಿಕ ಮಾತನಾಡಿರುವ ಸೆರ್ಗಿಯೊ ಗೋರ್, ಟ್ರಂಪ್‌ ಅವರ ವಿದೇಶ ಸಂದೇಶವನ್ನ ಹಂಚಿಕೊಂಡಿದ್ದಾರೆ. ʻಡೊನಾಲ್ಡ್‌ ಟ್ರಂಪ್‌ ಪ್ರಧಾನಿ ಮೋದಿ ಅವರನ್ನ ವೈಯಕ್ತಿಕ ಸ್ನೇಹಿತ ಹಾಗೂ ಗ್ರೇಟ್‌ ಫ್ರೆಂಡ್‌ ಅಂತಲೇ ಪರಿಗಣಿಸುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಾಲಿಬಾನ್ ಸಚಿವನ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ನಿಷೇಧ – ನಮ್ಮ ಪಾತ್ರ ಇಲ್ಲ ಅಂತ ಕೇಂದ್ರ ಸ್ಪಷ್ಟನೆ

    ಉಭಯ ನಾಯಕರ ನಡುವಿನ ಭೇಟಿಯು ಪ್ರಸ್ತುತ ಭಾರತ-ಅಮೆರಿಕ ನಡುವಿನ ವ್ಯಾಪಾರ ಯುದ್ಧಕ್ಕೆ ತೆರೆ ಎಳೆಯಲಿದೆ. ಜೊತೆಗೆ ಪರಸ್ಪರ ದ್ವಿಪಕ್ಷೀಯ ಸಹಕಾರಕ್ಕೆ ನೆರವಾಗಲಿದೆ ಎಂದು ನಂಬಲಾಗಿದೆ.

    ಕಳೆದ ಆಗಸ್ಟ್‌ 22ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೆರ್ಗಿಯೊ ಗೋರ್ ಅವರನ್ನ ರಾಯಭಾರಿಯಾಗಿ ಮತ್ತು ದಕ್ಷಿಣ ಮತ್ತು ಮಧ್ಯ ಏಷ್ಯಾ ವ್ಯವಹಾರಗಳ ವಿಶೇಷ ರಾಯಭಾರಿಯಾಗಿ ನಾಮನಿರ್ದೇಶನ ಮಾಡಿದರು. ಇದನ್ನೂ ಓದಿ: ಕಲಾವಿದೆ ಅರ್ಚನಾ ಪಾಟೀಲ್ ವಿರುದ್ಧದ ಪೋಕ್ಸೊ ಕೇಸ್‌ ವಿಚಾರಣೆಗೆ ಸುಪ್ರೀಂ ತಡೆ

  • ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳಿ: ಭಾರತ ನೆಲದಿಂದ ಪಾಕ್‌ಗೆ ತಾಲಿಬಾನ್‌ ಸಚಿವ ಸಲಹೆ

    ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳಿ: ಭಾರತ ನೆಲದಿಂದ ಪಾಕ್‌ಗೆ ತಾಲಿಬಾನ್‌ ಸಚಿವ ಸಲಹೆ

    – ಉಗ್ರರ ಗುಂಪುಗಳನ್ನು ಅಫ್ಘಾನಿಸ್ತಾನ ನಿರ್ನಾಮ ಮಾಡಿದೆ ಎಂದ ಮುತ್ತಕಿ

    ನವದೆಹಲಿ: ಭಯೋತ್ಪಾದಕ ಗುಂಪುಗಳನ್ನು ಅಫ್ಘಾನಿಸ್ತಾನ ನಿರ್ನಾಮ ಮಾಡಿದೆ. ಪಾಕಿಸ್ತಾನ ಕೂಡ ಅದೇ ಶಾಂತಿಯ ಮಾರ್ಗವನ್ನು ಅನುಸರಿಸಬೇಕು ಎಂದು ಭಾರತದ ನೆಲದಿಂದ ಪಾಕ್‌ಗೆ ತಾಲಿಬಾನ್‌ (Taliban) ಸಲಹೆ ನೀಡಿದೆ.

    ಅಫ್ಘಾನಿಸ್ತಾನದ ತಾಲಿಬಾನ್‌ ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ ಅವರು ಶುಕ್ರವಾರ ಭಾರತಕ್ಕೆ ಭೇಟಿ ನೀಡಿದ್ದರು. ಇದೇ ವೇಳೆ, ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ ನಂತಹ ಭಯೋತ್ಪಾದಕ ಗುಂಪುಗಳು ಅಫ್ಘಾನ್ ನೆಲದಿಂದ ದೀರ್ಘಕಾಲದಿಂದ ಕಾರ್ಯನಿರ್ವಹಿಸುತ್ತಿವೆ. ಆದರೆ, ಕಳೆದ ನಾಲ್ಕು ವರ್ಷಗಳಲ್ಲಿ ತಾಲಿಬಾನ್ ಎಲ್ಲಾ ಭಯೋತ್ಪಾದಕರನ್ನು ನಿರ್ನಾಮ ಮಾಡಿದೆ ಎಂದು ಮುತ್ತಕಿ ತಿಳಿಸಿದ್ದಾರೆ. ಇದನ್ನೂ ಓದಿ: ಕಾಬೂಲ್ ರಾಯಭಾರ ಕಚೇರಿ 4 ವರ್ಷದ ಬಳಿಕ ಪುನಾರಂಭಕ್ಕೆ ಭಾರತ ನಿರ್ಧಾರ – ಎಸ್.ಜೈಶಂಕರ್ ಘೋಷಣೆ

    ಭಯೋತ್ಪಾದಕರಲ್ಲಿ ಒಬ್ಬರೂ ಅಫ್ಘಾನಿಸ್ತಾನದಲ್ಲಿಲ್ಲ. ಅಫ್ಘಾನಿಸ್ತಾನದಲ್ಲಿ ಒಂದು ಇಂಚು ಭೂಮಿಯೂ ಅವರ ನಿಯಂತ್ರಣದಲ್ಲಿಲ್ಲ. ನಾವು (2021 ರಲ್ಲಿ) ಕಾರ್ಯಾಚರಣೆ ನಡೆಸಿದ ಅಫ್ಘಾನಿಸ್ತಾನವು ಬದಲಾಗಿದೆ ಎಂದು ಪಾಕಿಸ್ತಾನಿ ಭಯೋತ್ಪಾದಕ ಗುಂಪುಗಳು ಈ ಹಿಂದೆ ಅಫ್ಘಾನ್ ಮಣ್ಣನ್ನು ಕಾರ್ಯಾಚರಣೆಗೆ ಬಳಸುತ್ತಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಮುತ್ತಕಿ ಪ್ರತಿಕ್ರಿಯಿಸಿದ್ದಾರೆ.

    ಗಡಿಯಾಚೆಗಿನ ಭಯೋತ್ಪಾದನೆಯ ಬಲಿಪಶುವಾಗಿರುವ ಭಾರತೀಯ ನೆಲದಿಂದ ಅವರು ಪಾಕಿಸ್ತಾನಕ್ಕೆ ಮುತ್ತಕಿ ಒಂದು ಸಂದೇಶವನ್ನು ನೀಡಿದ್ದಾರೆ. ‘ಶಾಂತಿಗಾಗಿ ಅಫ್ಘಾನಿಸ್ತಾನ ಮಾಡಿದಂತೆ ಇತರ ದೇಶಗಳು ಸಹ ಅಂತಹ ಭಯೋತ್ಪಾದಕ ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳಲಿ’ ಎಂದು ಕರೆ ನೀಡಿದ್ದಾರೆ.

    ಭಾರತಕ್ಕೆ ಮುತ್ತಕಿ ಅವರ ಭೇಟಿಯು ಉಭಯ ದೇಶಗಳ ರಾಜತಾಂತ್ರಿಕ ಸಂಬಂಧಗಳನ್ನು ಪುನಸ್ಥಾಪಿಸಲು ಸಹಕಾರಿಯಾಗಿದೆ. ಭಾರತವು ಕಾಬೂಲ್‌ನಲ್ಲಿರುವ ತನ್ನ ತಾಂತ್ರಿಕ ಮಿಷನ್‌ ಅನ್ನು ರಾಯಭಾರ ಕಚೇರಿಯಾಗಿ ಮೇಲ್ದರ್ಜೆಗೇರಿಸಲಿದೆ ಎಂದು ಮುತ್ತಕಿ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಜೈಶಂಕರ್‌ ತಿಳಿಸಿದ್ದಾರೆ.

  • ಪಾಕಿಸ್ತಾನಕ್ಕೆ ಸುಧಾರಿತ AMRAAM ಕ್ಷಿಪಣಿ ನೀಡಲ್ಲ: ವರದಿ ನಿರಾಕರಿಸಿದ ಅಮೆರಿಕ

    ಪಾಕಿಸ್ತಾನಕ್ಕೆ ಸುಧಾರಿತ AMRAAM ಕ್ಷಿಪಣಿ ನೀಡಲ್ಲ: ವರದಿ ನಿರಾಕರಿಸಿದ ಅಮೆರಿಕ

    ನವದೆಹಲಿ: ಪಾಕಿಸ್ತಾನಕ್ಕೆ (Pakistan) ಯಾವುದೇ ಹೊಸ ಸುಧಾರಿತ ಮಧ್ಯಮ-ಶ್ರೇಣಿಯ ಏರ್-ಟು-ಏರ್ ಕ್ಷಿಪಣಿಗಳನ್ನು (AMRAAMs) ನೀಡುವುದಿಲ್ಲ ಎಂದು ಅಮೆರಿಕ (USA) ಸ್ಪಷ್ಟಪಡಿಸಿದೆ.

    ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಹೆಚ್ಚಳವಾಗುತ್ತಿದ್ದಂತೆ ಪಾಕಿಸ್ತಾನಕ್ಕೆ AMRAAMs ಕ್ಷಿಪಣಿಯನ್ನು ಅಮೆರಿಕ ನೀಡಲಿದೆ ಎಂದು ವರದಿಯಾಗಿತ್ತು. ಈ ವರದಿ ಪ್ರಕಟವಾದ ಬೆನ್ನಲ್ಲೇ ಭಾರತದಲ್ಲಿರುವ  ರಾಯಭಾರ ಕಚೇರಿ ಈಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಅಮೆರಿಕದ ನಿಲುವು ತಿಳಿಸಿದೆ.

    ಪಾಕಿಸ್ತಾನವು ಅಮೆರಿಕದಿಂದ AIM-120 ಸುಧಾರಿತ ಮಧ್ಯಮ-ಶ್ರೇಣಿಯ ಏರ್-ಟು-ಏರ್ ಕ್ಷಿಪಣಿಗಳನ್ನು ಪಡೆಯುವ ಸಾಧ್ಯತೆಯಿದೆ. ಟ್ರಂಪ್‌ (Donald Trump) ಅವಧಿಯಲ್ಲಿ ಯುದ್ಧ ಇಲಾಖೆಯಾಗಿ ಬದಲಾಗಿರುವ ಅಮೆರಿಕದ ರಕ್ಷಣಾ ಇಲಾಖೆ ಕ್ಷಿಪಣಿ ಖರೀದಿಸುವ ಒಟ್ಟು 35 ದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಪಾಕಿಸ್ತಾನದ ಹೆಸರಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿತ್ತು.

    ಅಮೆರಿಕ ರಾಯಭಾರ ಕಚೇರಿ ಪ್ರತಿಕ್ರಿಯಿಸಿ, ಈ ಒಪ್ಪಂದವು ಈಗಾಗಲೇ ಅಸ್ತಿತ್ವದಲ್ಲಿರುವ ವಿದೇಶಿ ಮಿಲಿಟರಿ ಮಾರಾಟ ಒಪ್ಪಂದಕ್ಕೆ ಮಾಡಲಾಗಿರುವ ತಿದ್ದುಪಡಿಯಾಗಿದೆ ಎಂದು ಹೇಳಿದೆ. ಇದನ್ನೂ ಓದಿ:  ಭಯೋತ್ಪಾದಕ ಗುಂಪು ಜೆಇಎಂ ಮಹಿಳಾ ವಿಭಾಗ ಆರಂಭ – ‘ಆಪರೇಷನ್‌ ಸಿಂಧೂರ’ದಲ್ಲಿ ಗಂಡನ ಕಳೆದುಕೊಂಡ ಮಹಿಳೆಗೆ ಚುಕ್ಕಾಣಿ

    ಸೆಪ್ಟೆಂಬರ್‌ನಲ್ಲಿ ಯುದ್ಧ ಇಲಾಖೆಯು ಪ್ರಮಾಣಿತ ಒಪ್ಪಂದ ಪ್ರಕಟಣೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದು ಪಾಕಿಸ್ತಾನ ಸೇರಿದಂತೆ ಹಲವಾರು ದೇಶಗಳಿಗೆ ಸುಸ್ಥಿರತೆ ಮತ್ತು ಬಿಡಿಭಾಗಗಳಿಗಾಗಿ ಅಸ್ತಿತ್ವದಲ್ಲಿರುವ ವಿದೇಶಿ ಮಿಲಿಟರಿ ಮಾರಾಟ ಒಪ್ಪಂದವನ್ನು ತಿಳಿಸುತ್ತದೆ. ಈ ಒಪ್ಪಂದದ ಅನ್ವಯ ಬಹು ರಾಷ್ಟ್ರಗಳಲ್ಲಿ ನವೀಕರಣಗಳು, ಬಿಡಿಭಾಗಗಳು ಮತ್ತು ನಿರ್ವಹಣೆಯನ್ನು ಮಾಡಲಾಗುತ್ತದೆ ಎಂದು ಹೇಳಿದೆ.

    ಒಪ್ಪಂದದ ಅನ್ವಯ ಯುನೈಟೆಡ್ ಕಿಂಗ್‌ಡಮ್, ಪೋಲೆಂಡ್, ಪಾಕಿಸ್ತಾನ, ಜರ್ಮನಿ, ಫಿನ್‌ಲ್ಯಾಂಡ್, ಆಸ್ಟ್ರೇಲಿಯಾ, ರೊಮೇನಿಯಾ, ಕತಾರ್, ಓಮನ್, ಕೊರಿಯಾ, ಗ್ರೀಸ್, ಸ್ವಿಟ್ಜರ್‌ಲ್ಯಾಂಡ್, ಪೋರ್ಚುಗಲ್, ಸಿಂಗಾಪುರ, ನೆದರ್‌ಲ್ಯಾಂಡ್ಸ್, ಜೆಕ್ ರಿಪಬ್ಲಿಕ್, ಜಪಾನ್, ಸ್ಲೋವಾಕಿಯಾ, ಡೆನ್ಮಾರ್ಕ್, ಕೆನಡಾ, ಬೆಲ್ಜಿಯಂ, ಬಹ್ರೇನ್, ಸೌದಿ ಅರೇಬಿಯಾ, ಇಟಲಿ, ನಾರ್ವೆ, ಸ್ಪೇನ್, ಕುವೈತ್, ಫಿನ್‌ಲ್ಯಾಂಡ್, ಸ್ವೀಡನ್, ತೈವಾನ್, ಲಿಥುವೇನಿಯಾ, ಇಸ್ರೇಲ್, ಬಲ್ಗೇರಿಯಾ, ಹಂಗೇರಿ ಮತ್ತು ಟರ್ಕಿಗೆ ಶಸ್ತ್ರಾಸ್ತ್ರ ನೀಡಲು ಅನುಮತಿ ನೀಡುತ್ತದೆ. ಇದನ್ನೂ ಓದಿ:  ಕಾಬೂಲ್‌ ಮೇಲೆ ಪಾಕ್‌ ಏರ್‌ಸ್ಟ್ರೈಕ್‌ – ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್‌ ಬಂದ್‌

    ಬಾಲಾಕೋಟ್‌ ಏರ್‌ಸ್ಟ್ರೈಕ್‌ಗೆ ಪ್ರತಿಯಾಗಿ ಪಾಕ್‌ ಎಫ್‌-16 ಯುದ್ಧವಿಮಾನ ಬಳಸಿ ಪ್ರಯೋಗಿಸಿದ AMRAAM ಕ್ಷಿಪಣಿ ಭಾಗವನ್ನು ಪ್ರದರ್ಶಿಸುತ್ತಿರುವ ಸೇನೆಯ ಅಧಿಕಾರಿಗಳು
    ಬಾಲಾಕೋಟ್‌ ಏರ್‌ಸ್ಟ್ರೈಕ್‌ಗೆ ಪ್ರತಿಯಾಗಿ ಪಾಕ್‌ ಎಫ್‌-16 ಯುದ್ಧವಿಮಾನ ಬಳಸಿ ಪ್ರಯೋಗಿಸಿದ AMRAAM ಕ್ಷಿಪಣಿ ಭಾಗವನ್ನು ಪ್ರದರ್ಶಿಸುತ್ತಿರುವ ಸೇನೆಯ ಅಧಿಕಾರಿಗಳು

    ಪಾಕ್‌ ಬಳಿಯಿದೆ ಎಫ್‌ 16:
    ವಿಶ್ವ ವಾಣಿಜ್ಯ ಕೇಂದ್ರದ ಅವಳಿ ಕಟ್ಟಡ ಉರುಳಿದ ಬಳಿಕ ಅಮೆರಿಕ ಅಫ್ಘಾನಿಸ್ತಾನದಲ್ಲಿರುವ ತಾಲಿಬಾನ್‌ (Taliban) ಮೇಲೆ ಯುದ್ಧ ಸಾರಿತ್ತು. ಈ ಯುದ್ಧಕ್ಕೆ ಪಾಕಿಸ್ತಾನ ತನ್ನ ಭೂಮಿ, ಬಂದರು, ವಾಯು ನೆಲೆಗಳ ನೆರವು ನೀಡಿತ್ತು. ಇದಕ್ಕೆ ಪ್ರತಿಯಾಗಿ ಅಮೆರಿಕ ಪಾಕಿಸ್ತಾನಕ್ಕೆ ಎಫ್‌ 16 ಯುದ್ಧ ವಿಮಾನಗಳನ್ನು ನೀಡಿದೆ. ಸದ್ಯ ಪಾಕ್‌ ಬಳಿ 75 ಎಫ್‌-16 ಯುದ್ಧ ವಿಮಾನ ಇರಬಹುದು ಎಂದು ಅಂದಾಜಿಸಲಾಗಿದೆ.

    ಭಯೋತ್ಪಾದನೆ ನಿಗ್ರಹ ಮತ್ತು ಆಂತರಿಕ ರಕ್ಷಣೆಗೆ ಮಾತ್ರ ಈ ಯುದ್ಧ ವಿಮಾನಗಳನ್ನು ಬಳಸಬೇಕು ಎಂದು ಅಮೆರಿಕ ಪಾಕಿಗೆ ಷರತ್ತು ವಿಧಿಸಿದೆ. ಹೀಗಿದ್ದರೂ 2019 ರಲ್ಲಿ ಬಾಲಾಕೋಟ್‌ ಏರ್‌ಸ್ಟ್ರೈಕ್‌ ಮಾಡಿದ ಬಳಿಕ ಭಾರತದ ಮೇಲೆ ದಾಳಿ ನಡೆಸಲು ಪಾಕ್‌ ಎಫ್‌-16 ಯುದ್ಧ ವಿಮಾನಗಳನ್ನು ಬಳಸಿತ್ತು. ಹೀಗಿದ್ದರೂ ಅಭಿನಂದನ್‌ ವರ್ಧಮಾನ್‌ ಅವರು ಹಳೆಯ ಮಿಗ್‌ 21 ಬೈಸನ್‌ ವಿಮಾನದ ಮೂಲಕ ಆಕಾಶದಲ್ಲೇ ಕಾದಾಟ(ಡಾಗ್‌ ಫೈಟ್‌) ನಡೆಸಿ ಎಫ್‌ 16 ಯುದ್ಧ ವಿಮಾನವನ್ನು ಹೊಡೆದು ಹಾಕಿದ್ದರು. ಪಾಕ್‌ ಎಫ್‌ 16 ವಿಮಾನದ ಮೂಲಕ AMRAAM ಕ್ಷಿಪಣಿಯನ್ನು ಭಾರತದ ಸೇನಾ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿತ್ತು. ಇದಕ್ಕೆ ಸಾಕ್ಷ್ಯವಾಗಿ ಭಾರತ ಪಾಕ್‌ ಬಳಸಿದ್ದ AMRAAM ಕ್ಷಿಪಣಿಯ ಬಿಡಿ ಭಾಗವನ್ನು ಪ್ರದರ್ಶಿಸಿತ್ತು.

    ಆಪರಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತ ಪಾಕಿಸ್ತಾನದ 11 ವಾಯುನೆಲೆಗಳ ಮೇಲೆ ದಾಳಿ ನಡೆಸಿತ್ತು. ಇದರಲ್ಲಿ ಮುಖ್ಯವಾಗಿ ರಾವಲ್ಪಿಂಡಿ ಬಳಿಯ ನೂರ್‌ ಖಾನ್‌ ವಾಯುನೆಲೆಯ ಮೇಲೆ ದಾಳಿ ನಡೆಸಿತ್ತು. ಈ ವಾಯುನೆಲೆಯಲ್ಲಿ ಅಮೆರಿಕ ನಿರ್ಮಿತ ಎಫ್‌16 ಯುದ್ಧ ವಿಮಾನಗಳು ಇದ್ದವು. ದಾಳಿಯ ಸಂದರ್ಭದಲ್ಲಿ ಹಲವು ಎಫ್‌16 ಯುದ್ಧ ವಿಮಾನಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲದೇ ಇದನ್ನು ಅಮೆರಿಕದ ಅನಧಿಕೃತ ವಾಯು ನೆಲೆ ಎಂದೇ ಕರೆಯಲಾಗುತ್ತದೆ.   ಈಗ ತನ್ನ ಎಫ್‌ 16 ವಿಮಾನಗಳ ರಕ್ಷಣೆಗೆ ಅಮೆರಿಕ AMRAAM ಕ್ಷಿಪಣಿಯನ್ನು ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ.

  • ಕಾಬೂಲ್‌ ಮೇಲೆ ಪಾಕ್‌ ಏರ್‌ಸ್ಟ್ರೈಕ್‌ – ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್‌ ಬಂದ್‌

    ಕಾಬೂಲ್‌ ಮೇಲೆ ಪಾಕ್‌ ಏರ್‌ಸ್ಟ್ರೈಕ್‌ – ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್‌ ಬಂದ್‌

    – ತಾಲಿಬಾನ್‌ ವಿದೇಶಾಂಗ ಸಚಿವ ಭಾರತದಲ್ಲಿರುವಾಗ ದಾಳಿ

    ಕಾಬೂಲ್/ ಇಸ್ಲಾಮಾಬಾದ್‌: ಗುರುವಾರ ರಾತ್ರಿ ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್‌ (Kabul) ನಗರದ ಮೇಲೆ ಪಾಕಿಸ್ತಾನ (Pakistan) ಯುದ್ಧ ವಿಮಾನಗಳನ್ನು ಬಳಸಿ ವಾಯು ದಾಳಿ (Air Strike) ನಡೆಸಿದೆ.

    ಕಾಬೂಲ್ ನಗರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ.ಘಟನೆಯ ತನಿಖೆ ನಡೆಯುತ್ತಿದೆ, ಇಲ್ಲಿಯವರೆಗೆ ಯಾವುದೇ ಹಾನಿಯ ವರದಿ ಬಂದಿಲ್ಲ ಎಂದು ಅಫ್ಘಾನ್-ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ.

    ವರದಿಗಳ ಪ್ರಕಾರ ಕಾಬೂಲ್‌ನ ಪೂರ್ವ ಭಾಗದಲ್ಲಿರುವ ತಾಲಿಬಾನ್‌ ಸರ್ಕಾರದ ಪ್ರಮುಖ ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ.

    ದೇಶದ ಒಳಗಡೆ ನಡೆಯುತ್ತಿರುವ ಭಯೋತ್ಪಾದಕ ದಾಳಿಗೆ ತಾಲಿಬಾನ್‌ನಲ್ಲಿರುವ ತೆಹ್ರೀಕ್-ಇ-ತಾಲಿಬಾನ್(TTP) ಉಗ್ರರೇ ಕಾರಣ ಎಂದು ಪಾಕಿಸ್ತಾನ ದೂರಿದೆ. ಈ ಉಗ್ರರಿಗೆ ಅಫ್ಘಾನಿಸ್ತಾನ ಬೆಂಬಲ ನೀಡುತ್ತಿರುವುದಕ್ಕೆ ತಾಲಿಬಾನ್‌ ಸರ್ಕಾರದ ವಿರುದ್ಧ ಪಾಕ್‌ ಸಿಟ್ಟಾಗಿದೆ..  ಇದನ್ನೂ ಓದಿ:  ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

    ಅಫ್ಘಾನಿಸ್ತಾನದ ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತಾಕಿ (Amir Khan Muttaqi) ಭಾರತಕ್ಕೆ ಭೇಟಿ ನೀಡುತ್ತಿರುವ ಸಮಯದಲ್ಲಿ ಮತ್ತು ಇಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಪ್ರಮುಖ ಮಾತುಕತೆ ನಡೆಸಲು ಸಿದ್ಧರಾಗಿರುವ ಸಮಯದಲ್ಲಿ ಕಾಬೂಲ್‌ನಲ್ಲಿ ಪಾಕಿಸ್ತಾನ ದಾಳಿ ನಡೆಸಿರುವುದು ಮಹತ್ವ ಪಡೆದಿದೆ.

    ಕಾಬೂಲ್‌ ಮೇಲೆ ಏರ್‌ಸ್ಟ್ರೈಕ್‌ ನಡೆದ ಬೆನ್ನಲ್ಲೇ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್‌ ಮತ್ತು ಸೇನೆಯ ಪ್ರಧಾನ ಕಚೇರಿ ಇರುವ ರಾವಲ್ಪಿಂಡಿಯಲ್ಲಿ ಮುಂದಿನ ಆದೇಶ ಜಾರಿಯಾಗುವವರೆಗೂ ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

  • ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

    ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

    – ಅಫ್ಘಾನ್‌ನಲ್ಲಿ ತಾಲಿಬಾನ್‌ ಅಧಿಕಾರಕ್ಕೆ ಏರಿದ ಬಳಿಕ ಮೊದಲ ಭೇಟಿ

    ನವದೆಹಲಿ: ತಾಲಿಬಾನ್‌ ಸರ್ಕಾರದ ಅಫ್ಘಾನ್‌ ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ (Amir Khan Muttaqi)  ದೆಹಲಿಗೆ ಆಗಮಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ (Afghanistan) ತಾಲಿಬಾನ್‌ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಮೊದಲ ಭಾರತ ಭೇಟಿ ಇದಾಗಿದೆ.

    ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುತಾಕಿ ಅವರಿಗೆ ಅಂತರರಾಷ್ಟ್ರೀಯ ಪ್ರಯಾಣ ನಿರ್ಬಂಧಗಳಿಂದ ತಾತ್ಕಾಲಿಕ ವಿನಾಯಿತಿ ನೀಡಿದ್ದರಿಂದ ಮುತ್ತಕಿ ಭಾರತಕ್ಕೆ ಬಂದಿದ್ದಾರೆ. ಭದ್ರತಾ ಮಂಡಳಿ ಅ.9 ಮತ್ತು 16 ರ ನಡುವೆ ಭಾರತಕ್ಕೆ (India) ಭೇಟಿ ನೀಡಲು ಅವಕಾಶ ನೀಡಿದೆ.

    2021ರ ಆಗಸ್ಟ್‌ನಲ್ಲಿ ತಾಲಿಬಾನ್ (Taliban) ಅಧಿಕಾರ ವಶಪಡಿಸಿಕೊಂಡ ನಂತರ ಮೊದಲ ಉನ್ನತ ಮಟ್ಟದ ಸಭೆ ನಡೆಯಲಿರುವ ಕಾರಣ ಭಾರತ-ಅಫ್ಘಾನ್‌ ಸಂಬಂಧದ ಹೊಸ ಅಧ್ಯಾಯ ತೆರೆಯಲಿದೆ.

    ಜೂನ್‌ 2022 ರಲ್ಲಿ ಹಿರಿಯ ರಾಜತಾಂತ್ರಿಕ ಜೆಪಿ ಸಿಂಗ್ ನೇತೃತ್ವದ ತಂಡ ಕಾಬೂಲ್‌ನಲ್ಲಿ ಅಮೀರ್‌ ಖಾನ್‌ ಮುತ್ತಕಿ ಅವರನ್ನು ಭೇಟಿಯಾಗಿದ್ದರು. ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಇದು ಭಾರತದ ಮೊದಲ ಭೇಟಿಯಾಗಿತ್ತು. ಇದನ್ನೂ ಓದಿ:  ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಘರ್ಷಣೆ; 11 ಪಾಕಿಸ್ತಾನಿ ಸೈನಿಕರು, ಟಿಟಿಪಿಯ 19 ಉಗ್ರರು ಸಾವು

    ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಹಿರಿಯ ಐಎಫ್‌ಎಸ್ ಅಧಿಕಾರಿ ಜೆ.ಪಿ. ಸಿಂಗ್ ಸೇರಿದಂತೆ ಭಾರತೀಯ ಅಧಿಕಾರಿಗಳು ಮುತ್ತಕಿ ಮತ್ತು ಇತರ ತಾಲಿಬಾನ್ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಆಗಾಗ ದುಬೈನಂತಹ ತಟಸ್ಥ ಸ್ಥಳಗಳಲ್ಲಿ ಭೇಟಿಯಾಗುತ್ತಿದ್ದರು.

    ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ದುಬೈನಲ್ಲಿ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರನ್ನು ಭೇಟಿಯಾಗಿದ್ದರು. ಭಾರತವು ಅಫ್ಘಾನಿಸ್ತಾನಕ್ಕೆ ನೀಡುತ್ತಿರುವ ಮಾನವೀಯ ನೆರವು, ವಿಶೇಷವಾಗಿ ಆರೋಗ್ಯ ವಲಯವನ್ನು ಬಲಪಡಿಸುವುದು ಮತ್ತು ನಿರಾಶ್ರಿತರ ಪುನರ್ವಸತಿಯನ್ನು ಬೆಂಬಲಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

    ಕೋವಿಡ್‌ ಸಮಯದಲ್ಲಿ ಭಾರತ ಉಚಿತವಾಗಿ ಲಸಿಕೆಯನ್ನು ನೀಡಿತ್ತು. ಈಗಲೂ ಭಾರತ ಅಫ್ಘಾನಿಸ್ತಾನಕ್ಕೆ ಆಹಾರ ಉತ್ಪನ್ನಗಳನ್ನು ರಫ್ತು ಮಾಡುತ್ತಿದೆ.

    ಭಾರತವು ಪಾಕಿಸ್ತಾನದ ವಿರುದ್ಧ ಯಶಸ್ವಿಯಾಗಿ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ಮೇ 15 ರಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮುತ್ತಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದರು. ಇದು 2021 ರ ನಂತರದ ಮೊದಲ ಸಚಿವ ಮಟ್ಟದ ಸಂಪರ್ಕವಾಗಿತ್ತು. ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ತಾಲಿಬಾನ್ ಖಂಡಿಸಿದ್ದಕ್ಕಾಗಿ ಜೈಶಂಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಭಾರತ ಮತ್ತು ಅಫ್ಘಾನ್ ಜನರೊಂದಿಗಿನ ಸಾಂಪ್ರದಾಯಿಕ ಸ್ನೇಹವನ್ನು ಪುನರುಚ್ಚರಿಸಿದರು.

     

  • ಕಾಂಗ್ರೆಸ್‌ ದೌರ್ಬಲ್ಯಗಳೇ ಉಗ್ರರನ್ನ ಬಲಪಡಿಸಿತು, ಇಂದಿನ ಭಾರತ ಶತ್ರುಗಳ ಮನೆಗಳಿಗೇ ನುಗ್ಗಿ ಹೊಡೆಯುತ್ತೆ: ಮೋದಿ

    ಕಾಂಗ್ರೆಸ್‌ ದೌರ್ಬಲ್ಯಗಳೇ ಉಗ್ರರನ್ನ ಬಲಪಡಿಸಿತು, ಇಂದಿನ ಭಾರತ ಶತ್ರುಗಳ ಮನೆಗಳಿಗೇ ನುಗ್ಗಿ ಹೊಡೆಯುತ್ತೆ: ಮೋದಿ

    – 2008ರ ಮುಂಬೈ ದಾಳಿ ಉಲ್ಲೇಖಿಸಿ ಕಾಂಗ್ರೆಸ್‌ ವಿರುದ್ಧ ಕಿಡಿ
    – ಯಾವ ರಾಷ್ಟ್ರ ಕಾಂಗ್ರೆಸ್‌ ಮೇಲೆ ಒತ್ತಡ ಹೇರಿತ್ತು ಅನ್ನೋದನ್ನ ಬಹಿರಂಗಪಡಿಸಲಿ

    ಮುಂಬೈ: ಕಾಂಗ್ರೆಸ್‌ ಪಕ್ಷವು ಉಗ್ರರ ಬಗ್ಗೆ ಮೃದು ಧೋರಣೆ ಹೊಂದಿದೆ. ಕಾಂಗ್ರೆಸ್‌ನ (Congress) ದೌರ್ಬಲ್ಯಗಳೇ ಉಗ್ರರನ್ನ ಬಲಪಡಿಸಿತು. ಆದ್ರೆ ಇಂದಿನ ಭಾರತ ಶತ್ರುಗಳ ಮನೆಗಳಿಗೇ ನುಗ್ಗಿ ಹೊಡೆಯುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಗುಡುಗಿದರು.

    ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹಂತ-1 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ, 26/11 ದಾಳಿ (2008 Mumbai Attack) ವೇಳೆ ಜಾಗತಿಕ ಒತ್ತಡವಿತ್ತು ಎಂದಿದ್ದ ಪಿ.ಚಿದಂಬರಂ ಹೇಳಿಕೆಗೆ ತಿರುಗೇಟು ಕೊಟ್ಟರು. ಅಲ್ಲದೇ ತಮ್ಮ ಮೇಲೆ ಒತ್ತಡ ಹಾಕಿದ್ದ ದೇಶ ಯಾವುದು ಎಂದು ಕಾಂಗ್ರೆಸ್ ಬಹಿರಂಗಪಡಿಸಲಿ ಎಂದು ಬಹಿರಂಗವಾಗಿಯೇ ಸವಾಲೆಸೆದರು.

    2008ರ ಮುಂಬೈ ಭಯೋತ್ಪಾದಕ ದಾಳಿಯ (Terrorist Attack) ಬಳಿಕ ಕಾಂಗ್ರೆಸ್‌ ಪಕ್ಷ ತನ್ನ ದೌರ್ಬಲ್ಯವನ್ನು ತೋರಿಸಿತು. ಅಂದಿನ ರಾಜಕೀಯ ನಿರ್ಧಾರಗಳೂ ಸಹ ಬೇರೆ ದೇಶದ ಒತ್ತಡದಿಂದ ಪ್ರಭಾವಿತವಾಗಿತ್ತು ಎಂದು ಮೋದಿ ವಾಗ್ದಾಳಿ ನಡೆಸಿದರು.

    ಮುಂಬೈ (Mumbai) ಭಾರತದ ಆರ್ಥಿಕ ರಾಜಧಾನಿ ಮಾತ್ರವಲ್ಲ, ಅತ್ಯಂತ ಕ್ರಿಯಾಶೀಲ ನಗರಗಳಲ್ಲಿ ಒಂದಾಗಿದೆ. ಅದಕ್ಕಾಗಿಯೇ 2008ರಲ್ಲಿ ಉಗ್ರರು ಮುಂಬೈ ಅನ್ನು ಗುರಿಯಾಗಿಸಿಕೊಂಡರು. ಆದ್ರೆ ಅಂದಿನ ಕಾಂಗ್ರೆಸ್‌ ತನ್ನ ದೌರ್ಬಲ್ಯವನ್ನ ತೋರಿಸಿತು ಎಂದು ಕಿಡಿ ಕಾರಿದರು.

    ಯಾವ ದೇಶ ಅಂತಹ ಒತ್ತಡ ಹೇರಿತ್ತು?
    ಮುಂದುವರಿದು… ಮಾಜಿ ಗೃಹಸಚಿವ ಪಿ.ಚಿದಂಬರಂ ಅವರು ಸಂದರ್ಶನದಲ್ಲಿ ನೀಡಿದ್ದ ಹೇಳಿಕೆ ಉಲ್ಲೇಖಿಸಿದ ಪ್ರಧಾನಿ ಮೋದಿ, ಇತ್ತೀಚೆಗೆ ಕಾಂಗ್ರೆಸ್‌ ನಾಯಕರೊಬ್ಬರು ಮುಂಬೈ ದಾಳಿಯ ಬಳಿಕ ನಮ್ಮ ಭದ್ರತಾ ಪಡೆಗಳು ಪಾಕಿಸ್ತಾನದ ಮೇಲೆ ದಾಳಿ ಮಾಡಲು ಸಜ್ಜಾಗಿದ್ದವು. ಆದ್ರೆ ಬೇರೆ ದೇಶದ ಒತ್ತಡದಿಂದಾಗಿ ಭದ್ರತಾ ಪಡೆಗಳನ್ನು ನಿಲ್ಲಿಸಿತು ಎಂದು ಬಹಿರಂಗಪಡಿಸಿದ್ದಾರೆ. ಹಾಗಿದ್ದಲ್ಲಿ, ಯಾವ ರಾಷ್ಟ್ರ ಅಂತಹ ಒತ್ತಡ ಹೇರಿದೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸವಾಲೆಸೆದರು.

    ಕಾಂಗ್ರೆಸ್‌ನ ತಪ್ಪಿಗೆ ಜೀವಗಳು ಬಲಿಯಾಗಿವೆ
    ಯಾವ ರಾಷ್ಟ್ರ ಒತ್ತಡ ಹೇರಿತು ಅನ್ನೋದನ್ನ ಬಹಿರಂಗಪಡಿಸಬೇಕು. ಏಕೆಂದ್ರೆ ಆ ನಿರ್ಧಾರದಿಂದಾಗಿಯೇ ಭಾರತ ಸಾಕಷ್ಟು ತೊಂದರೆ ಅನುಭವಿಸಬೇಕಾಯ್ತು. ಕಾಂಗ್ರೆಸ್‌ನ ದೌರ್ಬಲ್ಯಗಳು ಉಗ್ರರನ್ನ ಬಲಪಡಿಸಿತು. ಕಾಂಗ್ರೆಸ್‌ ಮಾಡಿದ ಈ ತಪ್ಪಿದೆ ಈ ದೇಶ ಪದೇ ಪದೇ ಜೀವಗಳನ್ನು ಬಲಿ ಕೊಡುವ ಮೂಲಕ ಬೆಲೆ ತೆರಬೇಕಾಯ್ತು. ಆದ್ರೆ ನಮಗೆ ರಾಷ್ಟ್ರೀಯ ಭದ್ರತೆ, ನಮ್ಮ ನಾಗರಿಕರ ಸುರಕ್ಷತೆಗಿಂತ ಬೇರಾವುದೂ ಮುಖ್ಯವಲ್ಲ ಎಂದು ಹೇಳಿದರು.

    chidambaram

    ಇಂದಿನ ಭಾರತ ಬಲಿಷ್ಠ ಭಾರತ, ಶತ್ರುಗಳನ್ನ ಅವರ ಮನೆಗಳಿಗೇ ನುಗ್ಗಿ ಹೊಡೆದುರುಳಿಸುತ್ತೆ. ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ನಡೆಸಿದ ಆಪರೇಷನ್‌ ಸಿಂಧೂರವೇ ಇದಕ್ಕೆ ಸ್ಪಷ್ಟ ನಿದರ್ಶನ. ಆಪರೇಷನ್ ಸಿಂಧೂರ ನಂತರ ಇಡೀ ಜಗತ್ತು ಭಾರತದ ಶಕ್ತಿಯನ್ನು ಮೆಚ್ಚಿಕೊಂಡಿದೆ ಎಂದು ಶ್ಲಾಘಿಸಿದರು.

  • ರಷ್ಯಾ ಮಿಲಿಟರಿ ಸೇರಿದ್ದ ಭಾರತ ಮೂಲದ ಸೈನಿಕ ಉಕ್ರೇನ್ ಸೇನೆ ಮುಂದೆ ಶರಣು

    ರಷ್ಯಾ ಮಿಲಿಟರಿ ಸೇರಿದ್ದ ಭಾರತ ಮೂಲದ ಸೈನಿಕ ಉಕ್ರೇನ್ ಸೇನೆ ಮುಂದೆ ಶರಣು

    ಕೈವ್: ರಷ್ಯಾ ಮಿಲಿಟರಿಯಲ್ಲಿ ( Russian Army) ಸೇವೆ ಸಲ್ಲಿಸುತ್ತಿದ್ದ ಭಾರತ ಮೂಲದ ಸೈನಿಕ ಉಕ್ರೇನ್ (Ukraine) ಮುಂದೆ ಶರಣಾಗಿದ್ದಾರೆ ಎಂದು ಉಕ್ರೇನ್ ಸೇನೆ ತಿಳಿಸಿದೆ. ಉಕ್ರೇನಿಯನ್ ಮಿಲಿಟರಿ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ಈ ವೀಡಿಯೋವನ್ನು ಬಿಡುಗಡೆ ಮಾಡಿದೆ.

    ಗುಜರಾತ್‌ನ (Gujarat) 22 ವರ್ಷದ ಮಜೋತಿ ಸಾಹಿಲ್ ಮೊಹಮ್ಮದ್ ಹುಸೇನ್ ಉಕ್ರೇನ್ ಪಡೆ ಮುಂದೆ ಶರಣಾದ ಸೈನಿಕ. ಈ ವಿಷಯದ ಬಗ್ಗೆ ಭಾರತೀಯ ಅಧಿಕಾರಿಗಳು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೈವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ವರದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇದುವರೆಗೆ ಉಕ್ರೇನ್ ಅಧಿಕಾರಿಗಳಿಂದ ಯಾವುದೇ ಔಪಚಾರಿಕ ಮಾಹಿತಿ ಬಂದಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ

    ಹುಸೇನ್ ಹೆಚ್ಚಿನ ಅಧ್ಯಯನಕ್ಕೆಂದು ರಷ್ಯಾಗೆ ಹೋಗಿದ್ದರು. ಅಲ್ಲಿ ಮಾದಕವಸ್ತು ಸಂಬಂಧಿತ ಪ್ರಕರಣದಲ್ಲಿ ಸಿಲುಕಿ 7 ವರ್ಷಗಳ ಶಿಕ್ಷೆಯನ್ನು ವಿಧಿಸಲಾಯಿತು. ಜೈಲು ಶಿಕ್ಷೆ ತಪ್ಪಿಸಲು ರಷ್ಯಾದ ಮಿಲಿಟರಿ ಒಪ್ಪಂದಕ್ಕೆ ಸಹಿ ಹಾಕುವ ಅವಕಾಶವನ್ನು ಹುಸೇನ್‌ಗೆ ನೀಡಲಾಯಿತು. ಇದನ್ನೂ ಓದಿ: LPG ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ – ಸಿಲಿಂಡರ್‌ಗಳ ಸರಣಿ ಸ್ಫೋಟ, ಕಿ.ಮೀಗಟ್ಟಲೇ ಕಾಣಿಸಿದ ಜ್ವಾಲೆ

    ನನಗೆ ಜೈಲಿನಲ್ಲಿರಲು ಇಷ್ಟವಿರಲಿಲ್ಲ, ಆದ್ದರಿಂದ ನಾನು ವಿಶೇಷ ಮಿಲಿಟರಿ ಕಾರ್ಯಾಚರಣೆಗಾಗಿ ಒಪ್ಪಂದಕ್ಕೆ ಸಹಿ ಹಾಕಿದೆ. ಆದರೆ ನಾನು ಅಲ್ಲಿಂದ ಹೊರಬರಲು ಬಯಸಿದ್ದೆ ಎಂದು ಹುಸೇನ್ ಹೇಳಿದ್ದಾರೆ. ಕೇವಲ 16 ದಿನಗಳ ತರಬೇತಿಯ ನಂತರ, ನನ್ನನ್ನು ಅಕ್ಟೋಬರ್ 1 ರಂದು ಮೂರು ದಿನಗಳ ಕಾಲ ನಡೆದ ಮೊದಲ ಯುದ್ಧ ಕಾರ್ಯಾಚರಣೆಗೆ ಕಳುಹಿಸಲಾಯಿತು. ತಮ್ಮ ಕಮಾಂಡರ್ ಜೊತೆಗಿನ ಘರ್ಷಣೆಯ ನಂತರ ಉಕ್ರೇನ್ ಸೇನೆ ಮುಂದೆ ಶರಣಾಗಲು ನಿರ್ಧರಿಸಿದೆ ಎಂದು ಹುಸೇನ್ ವೀಡಿಯೋದಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: ಉ.ಕರ್ನಾಟಕದಲ್ಲಿ ಪ್ರವಾಹ – ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ