Tag: ಭಾರತ

  • ಯುದ್ಧ ಸಿದ್ಧತೆಯಲ್ಲಿ ಪಾಕ್ ? ಸಿಯಾಚಿನ್ ಪ್ರದೇಶದಲ್ಲಿ ಈಗ ಏನಾಗುತ್ತಿದೆ?

    ಯುದ್ಧ ಸಿದ್ಧತೆಯಲ್ಲಿ ಪಾಕ್ ? ಸಿಯಾಚಿನ್ ಪ್ರದೇಶದಲ್ಲಿ ಈಗ ಏನಾಗುತ್ತಿದೆ?

    ನವದೆಹಲಿ: ಭಾರತ ನಿನ್ನೆ ಕೊಟ್ಟ ಏಟಿಗೆ ಬೆಚ್ಚಿ ಬಿದ್ದಿರೋ ಪಾಕಿಸ್ತಾನ ಮತ್ತೊಮ್ಮೆ ಕಾಲು ಕೆರೆದುಕೊಂಡು ಜಗಳಕ್ಕೆ ಬಂದಿದೆ. ಸರ್ಜಿಕಲ್ ಸ್ಟ್ರೈಕ್ ಹಾಗೂ ಬಂಕರ್‍ಗಳ ನಾಶದಿಂದ ಕಂಗೆಟ್ಟಿರುವ ಪಾಕಿಸ್ತಾನ, ಭಾರತದ ವಿರುದ್ಧ ಯುದ್ಧಕ್ಕೆ ಸಿದ್ಧತೆ ನಡೆಸ್ತಿದೆಯಾ ಎನ್ನುವ ಪ್ರಶ್ನೆ ಈಗ ಬಲವಾಗುತ್ತಿದೆ.

    ಸಿಯಾಚಿನ್ ಪ್ರದೇಶದಲ್ಲಿ ಪಾಕ್ ಸೇನಾ ಚಟುವಟಿಕೆಗಳು ಚುರುಕಾಗಿವೆ. ಸಿಯಾಚಿನ್ ಗ್ಲೇಸಿಯರ್ ಬಳಿ ಪಾಕಿಸ್ತಾನದ ಜೆಟ್ ವಿಮಾನವೊಂದು ಹಾರಾಟ ನಡೆಸಿದೆ. ಅಲ್ಲದೇ ವಾಯುಪಡೆ ಸಮರಾಭ್ಯಾಸ ನಡೆಸುತ್ತಿದ್ದು ಎಲ್ಲಾ ಸೇನಾ ನೆಲೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ.

    ಸಿಯಾಚಿನ್ ಬಳಿಯ ಸ್ಕಾರ್ದುವಿನಲ್ಲಿರುವ ಖಾದ್ರಿ ವಾಯುನೆಲೆಗೆ ಭೇಟಿ ನೀಡಿದ್ದ ಪಾಕ್‍ನ ವಾಯುಪಡೆ ಮುಖ್ಯಸ್ಥ ಸೊಯೇಲ್ ಅಮಾನ್, ಮಿರಾಜ್ ಯುದ್ಧ ವಿಮಾನದ ಸಮರಭ್ಯಾಸವನ್ನೂ ವೀಕ್ಷಿಸಿದ್ದಾರೆ.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮಾನ್, ವಿರೋಧಿಗಳ ಯಾವುದೇ ಬೆದರಿಕೆಗಳಿಗೆ ದೇಶದ ಜನರು ವಿಚಲಿತರಾಗಬೇಕಿಲ್ಲ. ಎಲ್ಲ ಸವಾಲುಗಳನ್ನು ಸ್ವೀಕರಿಸಲು ನಮ್ಮ ಸೇನೆ ಸನ್ನದ್ಧವಾಗಿದೆ. ಅವರು ತಲೆಮಾರು ನೆನಪಿಟ್ಟುಕೊಳ್ಳುವಂತೆ ಉತ್ತರ ನೀಡ್ತೇವೆ ಅಂತಾ ಧಿಮಾಕಿನ ಮಾತಾಡಿದ್ದಾರೆ.

    ಈ ಎಲ್ಲಾ ಬೆಳವಣಿಗೆಗಳಿಂದಾಗಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಯುದ್ಧದ ವಾತಾವರಣವೇ ಸೃಷ್ಟಿಯಾದಂತಾಗಿದೆ. ಆದರೆ ಪಾಕಿಸ್ತಾನದಿಂದ ಗಡಿ ಉಲ್ಲಂಘನೆ ಆಗಿಲ್ಲ ಎಂದು ಭಾರತೀಯ ಸೇನೆ ತಿಳಿಸಿದೆ.

    ಮುಂಬೈಗೆ ಉಗ್ರರು: ಈ ನಡುವೆ 20 ಲಷ್ಕರ್ ಉಗ್ರರು ಮುಂಬೈಗೆ ನುಗ್ಗಿದ್ದಾರೆ. ಯಾವುದೇ ಸಮಯದಲ್ಲೂ ದೆಹಲಿ ಹಾಗೂ ಮುಂಬೈನಲ್ಲಿ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರ ಕೂಡಾ ಹೈ ಅಲರ್ಟ್ ಆಗಿದ್ದು, ಎಲ್ಲಾ ಕಡೆ ಬಿಗಿ ಬಂದೋ ಬಸ್ತ್ ಘೋಷಿಸಿದೆ. ಇನ್ನು ನಾಪತ್ತೆಯಾಗಿರೋ ಸುಖೋಯ್ ವಿಮಾನದ ಬಗ್ಗೆ ನಮಗೆ ಮಾಹಿತಿ ಇಲ್ಲ. ಜನರ ಶಾಂತಿ ಕದಡಬೇಡಿ ಅಂತಾ ಚೀನಾ ಭಾರತಕ್ಕೆ ಹೇಳಿದೆ.

    ಇದನ್ನೂ ಓದಿ: 54 ಮುಸ್ಲಿಂ ರಾಷ್ಟ್ರಗಳಿಂದ ಪಾಕ್ ಪ್ರಧಾನಿಗೆ ಅವಮಾನ!

    https://twitter.com/miqazi/status/867342209493991425

     

  • ಭಾರತೀಯ ಸೇನೆಯಿಂದ ಪಾಕ್ ಸೇನಾ ಪೋಸ್ಟ್ ಗಳ ಧ್ವಂಸ: ವಿಡಿಯೋ ನೋಡಿ

    ಭಾರತೀಯ ಸೇನೆಯಿಂದ ಪಾಕ್ ಸೇನಾ ಪೋಸ್ಟ್ ಗಳ ಧ್ವಂಸ: ವಿಡಿಯೋ ನೋಡಿ

    ನವದೆಹಲಿ: ಪಾಕಿಸ್ತಾನದ ಸೇನಾ ಪೋಸ್ಟ್ ಗಳ ಮೇಲೆ ದಾಳಿ ಮಾಡಿದ್ದನ್ನು ಭಾರತೀಯ ಸೇನೆ ಅಧಿಕೃತವಾಗಿ ಬಹಿರಂಗಪಡಿಸಿದೆ. ಜಮ್ಮು ಕಾಶ್ಮೀರದ ನೌಶೇರಾ ಸೆಕ್ಟರ್‍ನಲ್ಲಿ ನುಸುಳುಕೋರರಿಗೆ ನೆರವು ನೀಡಿದ್ದ ಪಾಕಿಸ್ತಾನದ ಸೇನಾ ಪೋಸ್ಟ್ ಗಳನ್ನ ಧ್ವಂಸ ಮಾಡಲಾಗಿದೆ.

    ಸೇನಾ ವಕ್ತಾರರಾದ ಮೇಜರ್ ಜೆನರಲ್ ಅಶೋಕ್ ನರುಲಾ ಈ ಬಗ್ಗೆ ಹೇಳಿಕೆ ನೀಡಿದ್ದು, ಪಾಕಿಸ್ತಾನದ ಸೇನೆ ಶಸ್ತ್ರಾಸ್ತ್ರ ಸಜ್ಜಿತ ನುಸುಳುಕೋರರಿಗೆ ನೆರವು ನೀಡಿತ್ತು. ಇತ್ತೀಚೆಗೆ ನೌಶೆರಾದಲ್ಲಿ ನಡೆದ ದಾಳಿಯಲ್ಲಿ ನಾವು ಪಾಕಿಸ್ತಾನದ ಸೇನಾ ಪೋಸ್ಟ್ ಗಳನ್ನ ಧ್ವಂಸ ಮಾಡಿದ್ದೇವೆ ಎಂದು ಹೇಳಿದ್ದಾರೆ.

    ಈ ದಾಳಿ ಯಾವಾಗ ನಡೆದಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ನರುಲಾ, ಇತ್ತೀಚೆಗೆ, ತೀರಾ ಇತ್ತೀಚಿನ ಕಾರ್ಯಾಚರಣೆ ಎಂದು ಹೇಳಿದ್ದಾರೆ.

    ಭಾರತೀಯ ಸೇನೆ ದಾಳಿಯ ವಿಡಿಯೋವನ್ನ ಕೂಡ ಬಿಡುಗಡೆ ಮಾಡಿದೆ. ಕಾಡಿನಂತಿರುವ ಪ್ರದೇಶದಲ್ಲಿ ಸ್ಫೋಟಕಗಳು ಸ್ಫೋಟಗೊಂಡ ನಂತರ ದಟ್ಟ ಹೊಗೆ ಆವರಿಸಿ ಕಟ್ಟದ ಕುಸಿಯುವುದನ್ನು ಕಾಣಬಹುದು.

    ಇದನ್ನೂ ಓದಿ: ಕಲ್ಲು ತೂರಿದ್ದ ಯುವಕನನ್ನು ಜೀಪಿಗೆ ಕಟ್ಟಿ ಮೆರವಣಿಗೆ ಮಾಡಿದ್ದ ಅಧಿಕಾರಿಗೆ ಸೇನೆಯಿಂದ ಪ್ರಶಸ್ತಿ

    ಭಯೋತ್ಪಾದನೆಯನ್ನ ಹತ್ತಿಕ್ಕುವ ತಂತ್ರಗಾರಿಕೆಯ ಭಾಗವಾಗಿ ಈ ದಾಳಿ ನಡೆಸಲಾಗಿದೆ. ಇದರಿಂದ ಉಗ್ರರ ಸಂಖ್ಯೆ ಕಡಿಮೆಯಾಗಿ, ಕಾಶ್ಮೀರದ ಯುವಕರು ಕೆಟ್ಟ ದಾರಿ ತುಳಿಯದಂತೆ ಆಗಬೇಕು ಎಂದು ನರುಲಾ ಹೇಳಿದ್ದಾರೆ.

    ಮಂಜು ಕರಗಲು ಆರಂಭಿಸಿದ್ದು, ಉಗ್ರರ ಆಕ್ರಮಣಕ್ಕೆ ಪರ್ವತ ಕಣಿವೆಗಳು ತೆರೆದುಕೊಳ್ಳುತ್ತಿದ್ದರಿಂದ ನುಸುಳುಕೋರರ ಸಂಖ್ಯೆ ಹೆಚ್ಚಾಗಬಹುದು ಎಂಬ ಬಗ್ಗೆ ಸೇನೆಗೆ ಅರಿವಿತ್ತು. ಭಾರತೀಯ ಸೇನೆ ಗಡಿ ನಿಯಂತ್ರಣಾ ರೇಖೆಯಲ್ಲಿ ಪ್ರಾಬಲ್ಯ ಹೊಂದಿದೆ. ನಮಗೆ ಜಮ್ಮು ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕು ಎಂದಿದ್ದಾರೆ.

    ಇದನ್ನೂ ಓದಿ: ಯಾವುದೇ ಸಮಯದಲ್ಲಿ ಯುದ್ಧ ನಡೆಯಬಹುದು, ಎಲ್ಲದಕ್ಕೂ ಸಿದ್ಧವಾಗಿರಿ: ಏರ್ ಚೀಫ್ ಮಾರ್ಷಲ್ ಪತ್ರ

    https://www.youtube.com/watch?v=ltXJtBhcno0

  • ಯಾವುದೇ ಸಮಯದಲ್ಲಿ ಯುದ್ಧ ನಡೆಯಬಹುದು, ಎಲ್ಲದಕ್ಕೂ ಸಿದ್ಧವಾಗಿರಿ: ಏರ್ ಚೀಫ್ ಮಾರ್ಷಲ್ ಪತ್ರ

    ಯಾವುದೇ ಸಮಯದಲ್ಲಿ ಯುದ್ಧ ನಡೆಯಬಹುದು, ಎಲ್ಲದಕ್ಕೂ ಸಿದ್ಧವಾಗಿರಿ: ಏರ್ ಚೀಫ್ ಮಾರ್ಷಲ್ ಪತ್ರ

    ನವದೆಹಲಿ: ಯಾವುದೇ ಕ್ಷಣದಲ್ಲಿ ಯುದ್ಧ ಎದುರಾಗುವ ಸಾಧ್ಯತೆ ಇದ್ದು ನೀವೆಲ್ಲರೂ ಸಿದ್ಧವಾಗಿರಿ ಎಂದು ಏರ್ ಚೀಫ್ ಮಾರ್ಷಲ್ ಬಿಎಸ್ ಧನೋವಾ ವಾಯುಪಡೆಯ ಪ್ರತಿಯೊಬ್ಬ ಅಧಿಕಾರಿಗೆ ವೈಯಕ್ತಿಕ ಪತ್ರ ಬರೆದಿದ್ದಾರೆ.

    ಈಗ ಇರುವ ಪರಿಸ್ಥಿತಿಯನ್ನು ಅವಲೋಕಿಸಿದರೆ, ನೆರೆ ರಾಷ್ಟ್ರಗಳ ಬಾಹ್ಯ ಬೆದರಿಕೆಯನ್ನು ನಾವು ಎದುರಿಸುತ್ತಿದ್ದೇವೆ. ಹೀಗಾಗಿ ಯಾವುದೇ ಸಮಯದಲ್ಲೂ ಕಾರ್ಯಾಚರಣೆ ನಡೆಸಲು ಸಿದ್ಧವಾಗಿರಿ ಎಂದು ಪತ್ರದಲ್ಲಿ ಬರೆದಿದ್ದಾರೆ.

    ವಾಯು ಸೇನೆಯ 12 ಸಾವಿರ ಅಧಿಕಾರಿಗಳಿಗೆ ಈ ಪತ್ರವನ್ನು ತಲುಪಿಸಲಾಗಿದೆ. ಈ ಪತ್ರದಲ್ಲಿ ನೆರೆ ರಾಷ್ಟ್ರಗಳಿಂದ ಭಾರತ ಎದುರಿಸುತ್ತಿರುವ ಯುದ್ಧ ಭಯವನ್ನು ಬಿಎಸ್ ಧನೋವಾ ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲದೇ ಈ ವಿಚಾರದಲ್ಲಿ ತರಬೇತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ವಾಯುಸೇನೆಯ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಈ ರೀತಿಯ ಪತ್ರ ಬರೆಯಲಾಗಿದೆ. ಈ ಮೊದಲು ಮೇ 1, 1950ರಲ್ಲಿ ಜನರಲ್ ಕಾರ್ಯಪ್ಪ ಮತ್ತು ಫೆಬ್ರವರಿ 1,1986ರಲ್ಲಿ ಜನರಲ್ ಸುಂದರ್ಜಿ ಎಲ್ಲ ಅಧಿಕಾರಿಗಳಿಗೆ ಪತ್ರ ಬರೆದಿದ್ದರು.

    ಈ ವಿಚಾರದ ಬಗ್ಗೆ ವಾಯುಸೇನೆಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಆಂತರಿಕ ಸಂವಹನಕ್ಕಾಗಿ ಈ ಪತ್ರ ಬರೆಯಲಾಗಿದೆ ಎಂದು ಹೇಳಿ ಈ ಪತ್ರದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

  • ಜಾಗತಿಕ ನ್ಯಾಯಾಲಯದಲ್ಲಿ ಪಾಕಿಸ್ತಾನಕ್ಕೆ ಕಪಾಳ ಮೋಕ್ಷವಾದ ಕಥೆಯನ್ನು ಓದಿ

    ಜಾಗತಿಕ ನ್ಯಾಯಾಲಯದಲ್ಲಿ ಪಾಕಿಸ್ತಾನಕ್ಕೆ ಕಪಾಳ ಮೋಕ್ಷವಾದ ಕಥೆಯನ್ನು ಓದಿ

    ಹೇಗ್: ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದ್ದು, ನೆದರ್‍ಲ್ಯಾಂಡಿನ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ಭಾರತದ ಮನವಿಯನ್ನು ಪುರಸ್ಕರಿಸಿ ಕುಲಭೂಷಣ್ ಜಾಧವ್‍ಗೆ ನೀಡಲಾಗಿದ್ದ ಗಲ್ಲು ಶಿಕ್ಷಗೆ ತಾತ್ಕಾಲಿಕ ತಡೆಯನ್ನು ನೀಡಿದೆ.

    ಭಾರತದ ಕಾಲಮಾನ ಮಧ್ಯಾಹ್ನ 3.30ಕ್ಕೆ ಮುಖ್ಯ ನ್ಯಾಯಾಧೀಶ ರೋನಿ ಅಬ್ರಾಹಂ ತೀರ್ಪು ಓದಲು ಆರಂಭಿಸಿ ಗಲ್ಲು ಶಿಕ್ಷೆಗೆ ತಡೆ ನೀಡಿದರು. ಹೀಗಾಗಿ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿರುವ ಪ್ರಮುಖ ಅಂಶವನ್ನು ನೀಡಲಾಗಿದೆ

    ಆರಂಭದಲ್ಲೇ ಹಿನ್ನಡೆ: ಪಾಕಿಸ್ತಾನ ತನ್ನ ವಾದದಲ್ಲಿ ಮಿಲಿಟರಿ ಕೋರ್ಟ್ ಈ ಶಿಕ್ಷೆಯನ್ನು ನೀಡಿದೆ. ಮಿಲಿಟರಿ ಕೋರ್ಟ್ ವಿಧಿಸಿರುವ ಶಿಕ್ಷೆ ಅಂತಾರಾಷ್ಟ್ರೀಯ ಕೋರ್ಟ್ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಹೇಳಿತ್ತು. ಈ ವಿಚಾರವನ್ನು ತೀರ್ಪು ಓದುವ ಆರಂಭದಲ್ಲೇ ಉಲ್ಲೇಖಿಸಿದ್ದ ನ್ಯಾಯಾಧೀಶರು, ವಿಯೆನ್ನಾ ಒಪ್ಪಂದಕ್ಕೆ ನೀವು ಸಹಿ ಹಾಕಿದ್ದೀರಿ. ಸಹಿ ಹಾಕಿದ ಕಾರಣ ನೀವು ಆ ಒಪ್ಪಂದದಂತೆ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಈ ಪ್ರಕರಣ ಈ ಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ವಿಯೆನ್ನಾ ಒಪ್ಪಂದದ 1ನೇ ವಿಧಿ ಪ್ರಕಾರ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಅಧಿಕಾರವಿದೆ. ಜಾಧವ್ ಬಂಧನದ ಬಗ್ಗೆ ಭಾರತಕ್ಕೆ ಮಾಹಿತಿ ನೀಡದಿರುವುದು, ರಾಜತಾಂತ್ರಿಕ ನೆರವಿಗೆ ಅವಕಾಶ ನೀಡದೇ ಇರುವುದು ವಿಯೆನ್ನಾ ಒಪ್ಪಂದ ವ್ಯಾಪ್ತಿಗೆ ಒಳಪಡುತ್ತದೆ. ಅಷ್ಟೇ ಅಲ್ಲೇ ಈ ಪ್ರಕರಣವನ್ನು ಇತ್ಯರ್ಥ ಪಡಿಸಲು ಈ ನ್ಯಾಯಾಲಯಕ್ಕೆ ಅಧಿಕಾರ ಇದೆ ಎಂದು ಹೇಳಿದರು.

    ಭಾರತ ಪ್ರಜೆ: ಭಾರತ ಮತ್ತು ಪಾಕಿಸ್ತಾನಗಳು ಎರಡೂ ಬಂಧನಕ್ಕೊಳಗಾಗಿರುವ ಕುಲಭೂಷಣ್ ಜಾಧವ್ ಭಾರತ ಪ್ರಜೆ ಎನ್ನುವುದನ್ನು ಹೇಳಿಕೊಂಡಿದ್ದು ಈ ವಿಚಾರವನ್ನು ಕೋರ್ಟ್ ಒಪ್ಪಿಕೊಂಡಿದೆ.

    ರಾಜತಾಂತ್ರಿಕ ನೆರವು: ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್‍ಗೆ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ನಾವು ಮನವಿ ಮಾಡಿದ್ದರೂ ಪಾಕ್ ತಿರಸ್ಕರಿಸಿದೆ ಎಂದು ಭಾರತ ವಾದಿಸಿತ್ತು. ಈ ಅಂಶಕ್ಕೆ ಸಂಬಂಧಿಸಿದಂತೆ ಕೋರ್ಟ್, ಒಬ್ಬ ವ್ಯಕ್ತಿ ಒಂದು ದೇಶದಲ್ಲಿ ಬಂಧಿತನಾದರೆ ಆತನ ಅಹವಾಲುಗಳನ್ನು ಕೇಳಿಕೊಳ್ಳಲು ಆ ದೇಶಕ್ಕೆ ಅಧಿಕಾರ ಇದೆ ಎಂದು ಹೇಳುವ ವಿಯೆನ್ನಾ ಒಪ್ಪಂದಕ್ಕೆ ನೀವು ಸಹಿ ಹಾಕಿದ್ದೀರಿ. ಈ ಒಪ್ಪಂದವನ್ನು ಉಲ್ಲಂಘಿಸಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ನೀವು ವಿಯೆನ್ನಾ ಒಪ್ಪಂದಂತೆ ರಾಜತಾಂತ್ರಿಕ ಸಹಾಯವನ್ನು ನೀಡಲು ಅನುಮತಿ ನೀಡಬೇಕು ಎಂದು ಕೋರ್ಟ್ ಪಾಕಿಸ್ತಾನಕ್ಕೆ ಸೂಚಿಸಿತು.

    ರಕ್ಷಣೆಯ ಮಾಹಿತಿ ನೀಡಿ: ಪಾಕಿಸ್ತಾನ ಜಾಧವ್ ಅವರ ಸಾವನ್ನು ಬಯಸುತ್ತಿದೆ ಎನ್ನುವ ವಿಚಾರವನ್ನು ತಿಳಿದ ಭಾರತ ಜಾಧವ್ ರಕ್ಷಣೆಯ ವಿಚಾರವನ್ನು ಪ್ರಸ್ತಾಪ ಮಾಡಿತ್ತು. ಯಾಕೆಂದರೆ ಗಲ್ಲು ಶಿಕ್ಷೆ ಅಲ್ಲದೇ ಹೋದರೂ ಬೇರೆ ಯಾರೋ ಒಬ್ಬ ವ್ಯಕ್ತಿ, ಖೈದಿಯ ಮೂಲಕ ಜಾಧವ್ ಅವರನ್ನು ಪಾಕ್ ಹತ್ಯೆ ಮಾಡಿದರೆ ಏನು ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ, ವಿಚಾರಣೆ ಪೂರ್ಣಗೊಳ್ಳುವವರೆಗೂ ಜಾಧವ್ ಅವರ ಪ್ರಾಣಕ್ಕೆ ಅಪಾಯ ಇರುವ ಸಾಧ್ಯತೆಯಿದೆ. ಹೀಗಾಗಿ ಅವರನ್ನು ರಕ್ಷಿಸಬೇಕು ಎಂದು ಮನವಿ ಮಾಡಿತ್ತು. ಈ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಜಾಧವ್ ಅವರ ರಕ್ಷಣೆಗೆ ಸಂಬಂಧಿಸಿದಂತೆ ನೀವು ಏನು ಕ್ರಮವನ್ನು ತೆಗೆದುಕೊಂಡಿದ್ದೀರಿ ಎಂದು ಪಾಕಿಗೆ ಪ್ರಶ್ನಿಸಿ ಅದಕ್ಕೆ ಸಂಬಂಧಿಸಿ ವಿವರವನ್ನು ನೀಡಿ ಎಂದು ಸೂಚಿಸಿದೆ.

    ವಿವಾದಾತ್ಮಕವಾಗಿದೆ: ಜಾಧವ್ ಅವರು ಇರಾಕ್‍ನಲ್ಲಿ ಉದ್ಯಮ ನಡೆಸುತ್ತಿರುವ ಪಾಕಿಸ್ತಾನ ಕಿಡ್ನಾಪ್ ಮಾಡಿದೆ. ಅವರು ರಾ ಏಜೆಂಟ್ ಅಲ್ಲ ಎಂದು ಭಾರತ ಹೇಳುತ್ತಾ ಬಂದಿದ್ದರೂ ಪಾಕಿಸ್ತಾನ ತನ್ನ ಮೊಂಡು ವಾದವನ್ನು ಕೋರ್ಟ್ ನಲ್ಲೂ ಮುಂದುವರಿಸಿತ್ತು. ಈ ವಿಚಾರವನ್ನು ತೀರ್ಪಿನಲ್ಲಿ ಪ್ರಸ್ತಾಪಿಸಿದ ಕೋರ್ಟ್, ಜಾಧವ್ ಬಂಧನ ಎಲ್ಲಿ ಆಗಿದೆ ಎಂಬ ಬಗ್ಗೆಯೇ ವಿವಾದವಿದೆ ಎಂದು ಅಭಿಪ್ರಾಯಪಟ್ಟಿದೆ.

    ಗಲ್ಲು ಶಿಕ್ಷೆ ನೀಡುವಂತಿಲ್ಲ: ವಿಯೆನ್ನಾ ಒಪ್ಪಂದ ಉಲ್ಲಂಘನೆ, ಅಂತಾರಾಷ್ಟ್ರೀಯ ನ್ಯಾಯಾಲಯದ ವ್ಯಾಪ್ತಿಗೆ ಈ ಪ್ರಕರಣ ಬರುವುದಿಲ್ಲ ಎಂದು ನೀವು ವಾದ ಮಂಡಿಸಿರುವುದನ್ನು ನೋಡಿದಾಗ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಲು ಮುಂದಾಗಿದ್ದೀರಿ ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಹೀಗಾಗಿ ಈ ಪ್ರಕರಣದ ವಿಚಾರಣೆ ಮುಗಿದು ಅಂತಿಮ ತೀರ್ಪು ಬರುವವರೆಗೂ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸುವಂತಿಲ್ಲ ಎಂದು ಪಾಕಿಸ್ತಾನಕ್ಕೆ ಕೋರ್ಟ್ ಆದೇಶಿಸಿತು.

    ಭಾರತದ ವಾದ ಸಮ್ಮತವೇ? ವಿಯೆನ್ನಾ ಒಪ್ಪಂದ ವಿಧಿ 36ರ ಪ್ರಕಾರ ಅನ್ಯ ದೇಶದ ವ್ಯಕ್ತಿಯನ್ನು ಬಂಧಿಸಿದರೆ ಆ ಬಗ್ಗೆ ಯಾವುದೇ ವಿಳಂಬವಿಲ್ಲದೇ ಮಾಹಿತಿ ನೀಡಬೇಕು ಮತ್ತು ರಾಜತಾಂತ್ರಿಕ ನೆರವನ್ನು ಬಂಧಿತನ ಹಕ್ಕು ಎಂದು ಕೋರ್ಟ್ ಹೇಳಿತು.

    ತುರ್ತು ವಿಚಾರಣೆ ಅಗತ್ಯ ಯಾಕೆ? ಜಾಧವ್ ಮರಣ ದಂಡನೆ ಶಿಕ್ಷೆಗೆ ಒಳಪಟ್ಟಿದ್ದಾರೆ. ಹೀಗಾಗಿ ಯಾವಾಗ ಬೇಕಾದರೂ ಗಲ್ಲಿಗೇರಿಸಬಹುದು ಎಂಬ ಭಾರತದ ಆತಂಕದಿಂದಾಗಿ ಪ್ರಕರಣದ ತುರ್ತು ವಿಚಾರಣೆಗೆ ಅಗತ್ಯವಿದೆ. ಆಗಸ್ಟ್ 2017ರ ಬಳಿಕವಷ್ಟೇ ಗಲ್ಲಿಗೇರಿಸುವುದಾಗಿ ಪಾಕಿಸ್ತಾನ ಹೇಳಿದೆ. ಆದರೆ ಕೋರ್ಟ್ ಅಂತಿಮ ತೀರ್ಪು ನೀಡುವುದಕ್ಕೂ ಮೊದಲು ಗಲ್ಲಿಗೇರಿಸಲ್ಲ ಎಂಬ ಭರವಸೆಯನ್ನು ಪಾಕಿಸ್ತಾನ ಕೋರ್ಟ್‍ಗೆ ನೀಡಿಲ್ಲ. ಅಂದರೆ ಆಗಸ್ಟ್ ಬಳಿಕ ಪಾಕಿಸ್ತಾನ ಗಲ್ಲಿಗೇರಿಸುವ ಸಾಧ್ಯತೆ ಇದೆ. ಹೀಗಾಗಿ ಪ್ರಕರಣದ ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಕೋರ್ಟ್ ತೀರ್ಮಾನಿಸಿದೆ.

    ಈ ತೀರ್ಪಿಗೆ ಸಂಬಂಧಿಸಿದಂತೆ ಎಚ್.ರಂಗನಾಥ್ ವಿಮರ್ಶೆಯ ವಿಡಿಯೋ,  ತೀರ್ಪಿನ ಸಂಪೂರ್ಣ ಪ್ರತಿ ಮತ್ತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಟ್ವೀಟ್ ಗಳನ್ನು ನೀಡಲಾಗಿದೆ. 

    https://www.youtube.com/watch?v=EJ4z66WdyQo

  • ಪಾಕ್‍ಗೆ ಭಾರೀ ಮುಖಭಂಗ: ಕುಲಭೂಷಣ್ ಜಾಧವ್‍ಗೆ ತಾತ್ಕಾಲಿಕ ರಿಲೀಫ್

    ಪಾಕ್‍ಗೆ ಭಾರೀ ಮುಖಭಂಗ: ಕುಲಭೂಷಣ್ ಜಾಧವ್‍ಗೆ ತಾತ್ಕಾಲಿಕ ರಿಲೀಫ್

    ಹೇಗ್: ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ನೆದರ್‍ಲೆಂಡ್‍ನ ಹೇಗ್‍ನಲ್ಲಿರುವ ಅಂತಾರಾಷ್ಟ್ರೀಯ  ನ್ಯಾಯಾಲಯ ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿದೆ.

    ಭಾರತದ ಕಾಲಮಾನ ಮಧ್ಯಾಹ್ನ 3.30ಕ್ಕೆ ಮುಖ್ಯ ನ್ಯಾಯಾಧೀಶ ರೋನಿ ಅಬ್ರಾಹಂ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿದ್ದು, ಕುಲಭೂಷಣ್ ಜಾಧವ್ ಅವರಿಗೆ ಭಾರತ ರಾಜತಾಂತ್ರಿಕ ನೆರವನ್ನು ನೀಡಬೇಕು ಎಂದು ಸೂಚಿಸಿದ್ದಾರೆ.

    ಭಾರತದ ಪರ ಹಿರಿಯ ವಕೀಲ ದೀಪಕ್ ಮಿತ್ತಲ್ ಹಾಗೂ ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ ವಾದ ಮಂಡಿಸಿದ್ದರು.

    ಮೂಲಭೂತ ಹಕ್ಕಿಗಾಗಿ ನಾವು ಹೋರಾಡುತ್ತಿದ್ದೇವೆ. ಜಾಧವ್ ಅವರನ್ನು ಬಿಡುಗಡೆ ಮಾಡಬೇಕು ಅಂತ ಭಾರತ ವಾದ ಮಂಡಿಸಿದ್ದರೆ, ಆದರೆ ಪಾಕಿಸ್ತಾನ ಭಾರತದ ವಾದವನ್ನು ಒಪ್ಪದೇ ಮೊಂಡಾಟ ಮಾಡ್ತು. ಭಾರತ ಅಂತಾರಾಷ್ಟ್ರೀಯ ಕೋರ್ಟನ್ನ ರಾಜಕೀಯ ಥಿಯೇಟರ್ ಥರ ಬಳಸ್ತಿದೆ ಅಂತಾ ವಾದ ಮಂಡಿಸಿತ್ತು.

    ಭಾರತದ ವಾದ ಹೀಗಿತ್ತು
    – ಜಾಧವ್ ವಿಚಾರಣೆ ವೇಳೆ ಪಕ್ಷಪಾತ ನಡೆದಿದ್ದು, ಪಾಕಿಸ್ತಾನ ಜಾಧವ್‍ಗೆ ರಾಜತಾಂತ್ರಿಕ ನೆರವು ನೀಡಲು ನಿರಾಕರಿಸಿದೆ.
    – ಅಕ್ರಮವಾಗಿ ಜಾಧವ್ ಬಂಧಿಸಿ ವಿಯೆನ್ನಾ ಒಪ್ಪಂದ ಮುರಿದಿದೆ.
    – ಪಾಕಿಸ್ತಾನದಿಂದ ಸತ್ಯದ ಸಮಾಧಿ ಮಾಡೋ ಪ್ರಯತ್ನ ಮಾಡುತ್ತಿದೆ.
    – ಕೋರ್ಟ್ ವಿಚಾರಣೆಗೆ ಮುನ್ನವೇ ಜಾಧವ್ ಗಲ್ಲಿಗೇರಿಸಲು ಪಾಕ್ ಪ್ರಯತ್ನಿಸ್ತಿದೆ
    – ಮೂಲಭೂತ ಹಕ್ಕಿಗಾಗಿ ನಾವು ಹೋರಾಡ್ತಿದ್ದೇವೆ, ಜಾಧವ್ ಬಿಡುಗಡೆ ಮಾಡಿ

    ಪಾಕಿಸ್ತಾನದ ವಾದ ಹೀಗಿತ್ತು
    – ಜಾಧವ್ ನಮ್ಮ ಬಳಿ ತಪ್ಪೊಪ್ಪಿಕೊಂಡಿದ್ದಾರೆ
    – ಜಾಧವ್ ಗಲ್ಲಿಗೇರಿಸಲು ನಮಗೆ ಆತುರ ಇಲ್ಲ
    – ಭಾರತದ ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ
    – ಭಾರತ ನ್ಯಾಯಾಲಯವನ್ನು ರಾಜಕೀಯ ನ್ಯಾಯಾಲಯವನ್ನಾಗಿ ಬಳಕೆ ಮಾಡ್ತಿದೆ
    – ರಾಜತಾಂತ್ರಿಕ ನೆರವಿಗೆ ಜಾಧವ್ ಅರ್ಹನಲ್ಲ
    – ಪಾಸ್‍ಪೋರ್ಟ್‍ನಲ್ಲಿ ಜಾಧವ್ ಅಂತಾ ಹೆಸರಿಲ್ಲ, ಮುಸ್ಲಿಂ ವ್ಯಕ್ತಿಯ ಹೆಸರು ಇದೆ

    ಏನಿದು ಪ್ರಕರಣ?
    ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿತ್ತು.

    ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿತ್ತು. ಕೂಲಭೂಷಣ್ ಯಾದವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು.

    ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್‍ಗೆ ಭಾರತ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ಭಾರತದ ಮಾಡಿದ್ದ ಮನವಿಯನ್ನು ಪಾಕಿಸ್ತಾನ ತಿರಸ್ಕರಿಸಿತ್ತು.ಆದರೆ ನಿವೃತ್ತ ನೌಕಾ ಸೇನಾಧಿಕಾರಿ ಕುಲಭೂಷಣ್‍ರನ್ನು ಇರಾನ್‍ನಿಂದ ಪಾಕಿಸ್ತಾನ ಕಿಡ್ನ್ಯಾಪ್ ಮಾಡಿತ್ತು ಎಂಬ ಅಂಶವನ್ನು ಕೋರ್ಟ್‍ನಲ್ಲಿ ಭಾರತ ಮಂಡಿಸಿತ್ತು.

  • ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಫೋನ್ ಯಾವುದು? ಟಾಪ್ 5 ಕಂಪೆನಿಗಳು ಯಾವುದು?

    ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಫೋನ್ ಯಾವುದು? ಟಾಪ್ 5 ಕಂಪೆನಿಗಳು ಯಾವುದು?

    ನವದೆಹಲಿ: ಚೀನಾದ ಕ್ಸಿಯೋಮಿ ಕಂಪೆನಿಯ ರೆಡ್‍ಮೀ ನೋಟ್4 ಮೊದಲ ತ್ರೈಮಾಸಿಕದಲ್ಲಿ ಭಾರತದಲ್ಲಿ ಅತಿಹೆಚ್ಚು ಮಾರಾಟವಾದ ಫೋನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಂಟರ್‍ನ್ಯಾಷನಲ್ ಡೇಟಾ ಕಾರ್ಪೋರೇಷನ್(ಐಡಿಸಿ) ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಫೋನ್ ಮಾರಾಟ ಮಾಡಿರುವ ಟಾಪ್5 ಕಂಪೆನಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    ಈ ಪಟ್ಟಿಯಲ್ಲಿ 2016ರ ಕೊನೆಯ ತ್ರೈಮಾಸಿಕದಲ್ಲಿ ನಂಬರ್ ಒನ್ ಸ್ಥಾನ ಪಡೆದಿದ್ದ ಸ್ಯಾಮ್‍ಸಂಗ್ ಗೆಲಾಕ್ಸಿ ಜೆ2 ಹಿಂದಿಕ್ಕಿ ರೆಡ್‍ಮೀ ನೋಟ್ 4 ಫೋನ್ ಅತಿ ಹೆಚ್ಚು ಮಾರಾಟವಾಗಿದೆ ಎಂದು ತಿಳಿಸಿದೆ.

    ವರದಿಯಲ್ಲಿ ಏನಿದೆ?
    ಈ ಅವಧಿಯಲ್ಲಿ ಒಟ್ಟು 2.7 ಕೋಟಿ ಫೋನ್ ಗಳು ಭಾರತದಲ್ಲಿ ಮಾರಾಟವಾಗಿದ್ದು, 2016ರ ಈ ಅವಧಿಗೆ ಹೋಲಿಸಿದರೆ ಶೇ.14.8ರಷ್ಟು ಬೆಳವಣಿಗೆಯಾಗಿದೆ. ಅದರಲ್ಲೂ ಚೀನಾ ಮೂಲದ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ಯಶಸ್ವಿಯಾಗಿದ್ದು, ಮಾರುಕಟ್ಟೆಯಲ್ಲಿ ಅತ್ಯಧಿಕ ಪಾಲನ್ನು ಪಡೆದುಕೊಂಡಿದೆ.

    ಮಾರಾಟವಾದ ಫೋನ್ ಗಳಲ್ಲಿ ಶೇ.51ರಷ್ಟು ಫೋನ್ ಗಳು ಚೈನಾ ಕಂಪೆನಿಗಳದ್ದೇ ಆಗಿದ್ದು, 2016ರಕ್ಕೆ ಹೋಲಿಸಿದರೆ ಶೇ.142.6 ಪ್ರಗತಿ ಸಾಧಿಸಿದೆ. 2016ರ ಇದೇ ಅವಧಿಯಲ್ಲಿ ಶೇ.40.5 ಪಾಲನ್ನು ಹೊಂದಿದ್ದ ಭಾರತೀಯ ಕಂಪೆನಿಗಳು ಈ ಬಾರಿ ಶೇ.13.5 ಪಾಲನ್ನು ಪಡೆಯುವ ಮೂಲಕ ವ್ಯಾಪಾರದಲ್ಲಿ ಕುಸಿತ ಕಂಡಿದೆ.

    ಮಾರಾಟವಾದ ಫೋನ್ ಗಳ ಪೈಕಿ ಶೇ.94.5 ಫೋನ್ ಗಳು 4ಜಿ ನೆಟ್ ವರ್ಕಿಗೆ ಬೆಂಬಲ ನೀಡುವ ಫೋನ್‍ಗಳು ಎಂದು ವರದಿ ತಿಳಿಸಿದೆ.

    ಮಾರಾಟವಾದ 10 ಫೋನ್‍ಗಳ ಪೈಕಿ 5 ಫೋನ್‍ಗಳು 13 ಮೆಗಾ ಪಿಕ್ಸೆಲ್ ಅಥವಾ ಅದಕ್ಕಿಂತ ಹೆಚ್ಚಿನ ಪಿಕ್ಸೆಲ್ ಹೊಂದಿದ ಫೋನ್ ಗಳಾಗಿದ್ದು, ಈ ವಿಭಾಗದಲ್ಲೂ ಶೇ.60 ರಷ್ಟು ಚೀನಾದ ಮೂಲದ ಕಂಪೆನಿಗಳ ಫೋನ್ ಮಾರಾಟವಾಗಿದೆ.

    5 ಇಂಚು ಸ್ಕ್ರೀನ್ ಗಾತ್ರವನ್ನು ಹೊಂದಿದ ಫೋನ್‍ಗಳ ಮಾರಾಟ ಕುಸಿತಗೊಂಡಿದ್ದು, 2016ರಲ್ಲಿ ಶೇ.40.3 ರಷ್ಟು ಈ ಫೋನ್‍ಗಳು ಪಾಲನ್ನು ಹೊಂದಿದ್ದರೆ, ಈ ಬಾರಿ ಶೇ.21.2 ಪಾಲನ್ನು ಹೊಂದಿದೆ.

    ಡೈರೆಕ್ಟ್ ಇಂಟರ್‍ನೆಟ್ ಚಾನೆಲ್(ಕಂಪೆನಿಯೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವುದು) ಒಟ್ಟು ಶೇ.4 ರಷ್ಟು ಪಾಲನ್ನು ಪಡೆದುಕೊಂಡಿದೆ. ಈ ವಿಭಾಗದಲ್ಲಿ ಕ್ಸಿಯೋಮಿ ಅತಿ ಹೆಚ್ಚು ಫೋನ್‍ಗಳನ್ನು ಮಾರಾಟ ಮಾಡಿದೆ.

    6 ಸಾವಿರ ರೂ. ಮತ್ತು 12 ಸಾವಿರ ರೂ. ಬೆಲೆಯಿರುವ ಫೋನ್‍ಗಳು ಭಾರತದಲ್ಲಿ ಅತಿಹೆಚ್ಚು ಮಾರಾಟವಾಗಿದ್ದು, ಕಳೆದ ಅವಧಿಗೆ ಹೋಲಿಸಿದರೆ ಈ ಬಾರಿ ಆನ್‍ಲೈನ್ ಮಾರಾಟ ಶೇ.7.7ರಷ್ಟು ಬೆಳವಣಿಗೆ ಕಂಡಿದೆ ಎಂದು ವರದಿ ತಿಳಿಸಿದೆ.

    ಇದನ್ನೂ ಓದಿ:2016ರಲ್ಲಿ ಅತಿಹೆಚ್ಚು ಮಾರಾಟವಾದ ವಿಶ್ವದ ಟಾಪ್ 10 ಫೋನ್‍ಗಳ ಪಟ್ಟಿ ಇಲ್ಲಿದೆ

    ಟಾಪ್ 5 ಕಂಪೆನಿಗಳು:
    ಮೊದಲ ತ್ರೈಮಾಸಿಕದಲ್ಲಿ ಭಾರತದ ಒಂದೇ ಒಂದು ಕಂಪೆನಿ ಟಾಪ್ 5 ಒಳಗಡೆ ಸ್ಥಾನವನ್ನು ಪಡೆದುಕೊಂಡಿಲ್ಲ. ದಕ್ಷಿಣ ಕೊರಿಯಾದ ಸ್ಯಾಮ್‍ಸಂಗ್ ಎಂದಿನಂತೆ ಮೊದಲ ಸ್ಥಾನದಲ್ಲಿ ಮುಂದುವರಿದರೆ, ಉಳಿದ 4 ಸ್ಥಾನಗಳನ್ನು ಚೈನಾ ಕಂಪೆನಿಗಳು ಪಡೆದುಕೊಂಡಿರುವುದು ವಿಶೇಷ.

    #1 ಸ್ಯಾಮ್‍ಸಂಗ್:


    ಶೇ.28ರಷ್ಟು ಪಾಲನ್ನು ಪಡೆಯುವ ಮೂಲಕ ಸ್ಯಾಮ್‍ಸಂಗ್ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದು, ಗೆಲಾಕ್ಸಿ ಜೆ2 ಅತಿ ಹೆಚ್ಚು ಸಂಖ್ಯೆಯಲ್ಲಿ ಮಾರಾಟವಾಗಿದೆ. ಅಷ್ಟೇ ಅಲ್ಲದೇ ಎ ಸಿರೀಸ್ ಫೋನ್‍ಗಳು ಹೆಚ್ಚು ಮಾರಾಟವಾಗುತ್ತಿದೆ.

    #2 ಕ್ಸಿಯೋಮಿ:


    ಈ ಅವಧಿಯಲ್ಲಿ ಶೇ.38ರಷ್ಟು ಬೆಳವಣಿಗೆ ಸಾಧಿಸುವ ಮೂಲಕ ಶೇ.14.2ರಷ್ಟು ಪಾಲನ್ನು ಪಡೆಯುದರೊಂದಿಗೆ ಕ್ಸಿಯೋಮಿಗೆ ಎರಡನೇ ಸ್ಥಾನ ಸಿಕ್ಕಿದೆ. ರೆಡ್ ಮೀ 4 ಮತ್ತು 4ಎ ಅತಿ ಹೆಚ್ಚು ಮಾರಾಟವಾಗುತ್ತಿದೆ ಎಂದು ತಿಳಿಸಿದೆ.

    ಇದನ್ನೂ ಓದಿ: ಭಾರತದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ರೆಡ್‍ಮೀ 4ಎ: ಜಸ್ಟ್ 4 ನಿಮಿಷದಲ್ಲಿ ಎಷ್ಟು ಫೋನ್ ಮಾರಾಟವಾಗಿದೆ ಗೊತ್ತಾ?

    #3 ವಿವೋ:


    ಈ ಬಾರಿ ಐಪಿಎಲ್ ಕಪ್ ಪ್ರಾಯೋಜಕ ಕಂಪೆನಿ ವಿವೋ ಕಳೆದ ವರ್ಷ ಟಾಪ್ 10 ಪಟ್ಟಿಯಲ್ಲಿ ಇರಲಿಲ್ಲ. ಆದರೆ 2016 ಕೊನೆಯ ತ್ರೈಮಾಸಿಕ ಮತ್ತು ಈ ತ್ರೈಮಾಸಿಕದಲ್ಲಿ ಹೆಚ್ಚು ಫೋನ್ ಮಾರಾಟವಾಗುವ ಮೂಲಕ ಮಾರುಕಟ್ಟೆಯಲ್ಲಿ ಶೇ10.5 ರಷ್ಟು ಪಾಲನ್ನು ಪಡೆದುಕೊಂಡಿದೆ. 10 ಸಾವಿರ ರೂ. ಗಿಂತ ಕಡಿಮೆ ಬೆಲೆಯ ಫೋನ್ ಮಾರಾಟದಿಂದಾಗಿ ವಿವೋಗೆ ಮೂರನೇ ಸ್ಥಾನ ಸಿಕ್ಕಿದೆ.

    #4.ಲೆನೋವೊ(ಮೊಟರೋಲಾ ಸೇರಿ)


    ಚೀನಾದ ಲೆನೋವೊ ಶೇ.9.5ರಷ್ಟು ಪಾಲನ್ನು ಪಡೆಯುವ ಮೂಲಕ 4ನೇ ಸ್ಥಾನವನ್ನು ಪಡೆದುಕೊಂಡಿದೆ.

    #5. ಒಪ್ಪೋ:

    ಟೀಂ ಇಂಡಿಯಾದ ನೂತನ ಜೆರ್ಸಿ ಪ್ರಾಯೋಜಕರಾದ ಚೀನಾದ ಮತ್ತೊಂದು ಕಂಪೆನಿ ಒಪ್ಪೋ ಸಹ ಶೇ.9.3ರಷ್ಟು ಪಾಲನ್ನು ಪಡೆದುಕೊಂಡಿದ್ದು ಲೆನೆವೋದ ಸನಿಹವೇ ಬಂದು ನಿಂತಿದೆ.

    ಈ ಐದು ಕಂಪೆನಿಗಳು ಮಾರುಕಟ್ಟೆಯಲ್ಲಿ ಶೇ.71.1 ಪಾಲನ್ನು ಪಡೆದುಕೊಂಡಿದ್ದರೆ, ಭಾರತದ ಕಂಪೆನಿಗಳು ಮತ್ತು ವಿಶ್ವದ ಇತರೇ ಕಂಪೆನಿಗಳು ಶೇ.28.3 ಪಾಲನ್ನು ಪಡೆದುಕೊಂಡಿದೆ.

    ಇದನ್ನೂ ಓದಿ: 2016-17ರಲ್ಲಿ ಮಾರಾಟವಾದ ದೇಶದ ಟಾಪ್ -10 ಕಾರುಗಳು: ಯಾವ ಕಾರು ಎಷ್ಟು ಮಾರಾಟವಾಗಿದೆ?

    https://twitter.com/IDCTracker/status/864522923905736704

  • ಜನ ಐಸ್‍ಲ್ಯಾಂಡಿಗೆ ಪ್ರವಾಸ ಯಾಕೆ ಹೋಗ್ತಾರೆ? ಅಂಥ ವಿಶೇಷತೆ ಏನಿದೆ?

    ಜನ ಐಸ್‍ಲ್ಯಾಂಡಿಗೆ ಪ್ರವಾಸ ಯಾಕೆ ಹೋಗ್ತಾರೆ? ಅಂಥ ವಿಶೇಷತೆ ಏನಿದೆ?

    ಸುತ್ತಲು ನೀರು, ಅಷ್ಟೇ ಅಲ್ಲದೇ ಮಂಜುಗೆಡ್ಡೆ, ಇದರ ಜೊತೆ ಜ್ವಾಲಾಮುಖಿಗಳು ಒಂದೇ ಕಡೆ ಇರುವುದು ಅಪರೂಪ. ಆದರೆ ಯುರೋಪ್ ಖಂಡದಲ್ಲಿರುವ ಐಸ್‍ಲ್ಯಾಂಡ್‍ಗೆ ನೀವು ಪ್ರವಾಸ ಹೋದರೆ ನೀವು ಈ ಮೂರು ದೃಶ್ಯಗಳನ್ನು ಕಣ್ತುಂಬಿ ನೋಡಬಹುದು.

    ಯುರೋಪ್ ಖಂಡ ಮತ್ತು ಗ್ರೀನ್ ಲ್ಯಾಂಡ್ ಮಧ್ಯೆ ಇರುವ ಅಟ್ಲಾಂಟಿಕ್ ಮಹಾಸಾಗರದಲ್ಲಿ ಐಸ್‍ಲ್ಯಾಂಡ್ ದ್ವೀಪವಿದೆ. ಪ್ರಪಂಚದ 18ನೇ ದೊಡ್ಡ ದ್ವೀಪ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಐಸ್‍ಲ್ಯಾಂಡ್ ತನ್ನ ಪ್ರಕೃತಿ ಸೌಂದರ್ಯದಿಂದ ಪ್ರವಾಸಿಗರನ್ನು ಸೆಳೆಯುತ್ತಿದೆ. ಐಸ್‍ಲ್ಯಾಂಡ್‍ನ ಜಿಡಿಪಿಯಲ್ಲಿ ಶೇ.5ರಷ್ಟು ಪಾಲನ್ನು ಪಡೆದುಕೊಂಡಿರುವುದು ಪ್ರವಾಸೋದ್ಯಮದ ಹೆಗ್ಗಳಿಕೆ.

    ಕಳೆದ 15 ವರ್ಷದಲ್ಲಿ ಪ್ರವಾಸೋದ್ಯಮ ಉದ್ಯಮ ಭಾರೀ ಬೆಳವಣಿಗೆಯಾಗಿದ್ದು ಜುಲೈ- ಸೆಪ್ಟೆಂಬರ್ ನಡುವಿನ ಬೇಸಿಗೆಯ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಐಸ್‍ಲ್ಯಾಂಡಿಗೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಐಸ್‍ಲ್ಯಾಂಡ್ ನಲ್ಲಿ ಅಂಥ ವಿಶೇಷತೆ ಏನಿದೆ? ನೀವು ಯಾಕೆ ತೆರಳಬೇಕು ಎನ್ನುವುದಕ್ಕೆ ಟಾಪ್ 10 ಕಾರಣಗಳನ್ನು ಇಲ್ಲಿ ನೀಡಲಾಗಿದೆ.

    #1. ನೀವು ಗಮನಿಸಿರಬಹುದು ಭಾರತದಲ್ಲಿ ಮಧ್ಯಾಹ್ನದ ವೇಳೆ ಸೂರ್ಯ ನಡು ನೆತ್ತಿಯಲ್ಲಿ ಇರುತ್ತಾನೆ. ಆದರೆ ಐಸ್‍ಲ್ಯಾಂಡ್‍ನಲ್ಲಿ ಸೂರ್ಯ ನಡು ನೆತ್ತಿಗೆ ಬರೋದಿಲ್ಲ. ಉತ್ತರಧ್ರುವದ ಹತ್ತಿರ ಐಸ್‍ಲ್ಯಾಂಡ್ ಇರುವ ಕಾರಣ ಅಲ್ಲಿ ಸೂರ್ಯನ ಬೆಳಕು ಅಷ್ಟಾಗಿ ಬೀಳುವುದಿಲ್ಲ. ಗರಿಷ್ಟ ಅಂದ್ರೆ ಬೆಳಗ್ಗೆ 9 ಗಂಟೆಗೆ ಭಾರತದಲ್ಲಿ ಸೂರ್ಯ ಹೇಗೆ ಕಾಣುತ್ತಾನೋ ಅದೇ ರೀತಿಯಾಗಿ ಮಧ್ಯಾಹ್ನದ ಅವಧಿಯಲ್ಲಿ ಅಲ್ಲಿ ಕಾಣುತ್ತಾನೆ.

    #2. ಬೆಂಗಳೂರು ಮಹಾನಗರದಲ್ಲಿರುವ ಜನಸಂಖ್ಯೆ ಸುಮಾರು 1 ಕೋಟಿ. ಆದರೆ ಐಸ್‍ಲ್ಯಾಂಡ್‍ನಲ್ಲಿರುವ ಒಟ್ಟು ಜನಸಂಖ್ಯೆಯೇ 3 ಲಕ್ಷ ಮಂದಿ. 39,682 ಚದರ ಕಿ.ಮೀ ವ್ಯಾಪ್ತಿಯನ್ನು ಹೊಂದಿರುವ ಈ ದೇಶದ ಈ ಜನಸಂಖ್ಯೆ 2/3ರಷ್ಟು ಜನ ರಾಜಧಾನಿಯಾದ ರೆಕ್ಟವಿಕ್‍ನಲ್ಲಿ ವಾಸಿಸುತ್ತಿದ್ದಾರೆ. ಉಳಿದ ಕಡೆ ಜನಸಂಖ್ಯೆ ಹೇಗಿದೆ ಅಂದರೆ ಪೂರ್ವ ಭಾಗದಲ್ಲಿ ನೀವು ರಸ್ತೆಯಲ್ಲಿ ಸಂಚರಿಸಿದರೆ ಹಲವು ಕಿಲೋಮೀಟರ್ ದೂರಕ್ಕೆ ಒಂದೊಂದು ಮನೆ ಕಾಣಸಿಗುತ್ತದೆ. ಕೆಲವು ಕಡೆ 100 ಕಿ.ಮೀ -200 ಕಿ.ಮೀ ಅಂತರದಲ್ಲಿ ಮನೆ ಕಾಣಸಿಗುತ್ತದೆ.

    #3. ಚಳಿಗಾಲದಲ್ಲಿ ಸಂಪೂರ್ಣ ಐಸ್‍ಲ್ಯಾಂಡ್ ದೇಶವೇ ಮಂಜಿನಿಂದ ಆವೃತವಾಗಿರುತ್ತದೆ. ಅಟ್ಲಾಂಟಿಕ್ ವಲಯದಲ್ಲಿದ್ದರೂ ಕನಿಷ್ಠ ಉಷ್ಣಾಂಶ ಮೈನಸ್ 10 ಡಿಗ್ರಿಗೆ ಇಳಿಯುತ್ತದೆ. ಹತ್ತಿರದಲ್ಲೇ ಗಲ್ಫ್ ಸ್ಟ್ರೀಮ್ ಇರುವ ಕಾರಣ ಅಲ್ಲಿಯ ಬಿಸಿಗಾಳಿಯಿಂದಾಗಿ ಐಸ್‍ಲ್ಯಾಂಡ್ ಸ್ವಲ್ಪ ಬೆಚ್ಚಗೆ ಇರುತ್ತದೆ.

    #4. ಉತ್ತರದಿಂದ ಮೂಡುವ ಸೂರ್ಯನ ಬೆಳಕುಗಳನ್ನು ವೀಕ್ಷಿಸಲು ಐಸ್‍ಲ್ಯಾಂಡ್ ಹೇಳಿ ಮಾಡಿಸಿದ ಸ್ಥಳ.

    #5. ಐಸ್‍ಲ್ಯಾಂಡ್ ಅನ್ನು ನೀವು ಎರಡೂ ರೀತಿಯಲ್ಲಿ ನೋಡಬಹುದು. ಚಳಿಗಾಲದಲ್ಲಿ ಸಂಪೂರ್ಣ ಮಂಜು ಆವರಿಸಿ, ಬಹುತೇಕ ರಸ್ತೆಗಳು ಸಂರ್ಪೂಣವಾಗಿ ಬಂದ್ ಆಗಿರುತ್ತದೆ. ಬಹುತೇಕ ಜಲಪಾತಗಳು ಹೆಪ್ಪುಗಟ್ಟಿರುತ್ತವೆ. ಆದರೆ ಬೇಸಿಗೆಯಲ್ಲಿ ರಸ್ತೆಗಳು ಓಪನ್ ಆಗಿರುತ್ತದೆ. ಜೂನ್, ಜುಲೈ ಸೆಪ್ಟೆಂಬರ್ ಅವಧಿಯಲ್ಲಿ ಪ್ರವಾಸಿಗರು ಅತಿ ಹೆಚ್ಚು ಸಂಖ್ಯೆಯಲ್ಲಿ ಐಸ್‍ಲ್ಯಾಂಡ್‍ಗೆ ಭೇಟಿ ನೀಡುತ್ತಾರೆ.

    #6. ಅತಿಹೆಚ್ಚು ಗಾಳಿ ಬೀಸೋ ದೇಶಗಳ ಪಟ್ಟಿಯಲ್ಲಿ ಐಸ್‍ಲ್ಯಾಂಡಿಗೆ ವಿಶ್ವದಲ್ಲೇ ಎರಡನೇ ಸ್ಥಾನ. ಗಾಳಿ ಎಷ್ಟು ರಭಸವಾಗಿ ಬೀಸುತ್ತದೆ ಎಂದರೆ ಕೆಲವೊಮ್ಮೆ ಕಾರುಗಳನ್ನೇ ಅಲುಗಾಡಿಸಿ ಬಿಡುತ್ತದೆ. ಹೊರಗಡೆ ನಿಲ್ಲುವುದಂತೂ ಅಸಾಧ್ಯವಾದ ಮಾತು. ಕೊಠಡಿಗಳನ್ನು ಬುಕ್ ಮಾಡಿದ್ರೆ ಗಾಳಿ ಬೀಸುವ ಕಡೆ ಓಪನ್ ಮಾಡದಿರುವಂತೆ ಕಂಪೆನಿಗಳು ಪ್ರವಾಸಿಗರಿಗೆ ಸೂಚಿಸುತ್ತವೆ. ಒಂದು ವೇಳೆ ಓಪನ್ ಮಾಡಿದರೆ ಗಾಳಿಯ ರಭಸಕ್ಕೆ ಬಾಗಿಲು ಮುರಿದು ಬೀಳುವ ಸಾಧ್ಯತೆ ಇರುತ್ತದೆ. ಕೆಲವೊಂದು ಕಡೆಯಲ್ಲಿ ಮುರಿದು ಬಿದ್ದಿರುವ ಉದಾಹರಣೆ ಇದೆಯಂತೆ.

    #7. ಐಸ್‍ಲ್ಯಾಂಡ್ ದ್ವೀಪದೇಶವಾಗಿರುವದರಿಂದ ಸುತ್ತಲೂ ಸಮುದ್ರ ಇದೆ ಎನ್ನುವುದು ನಿಮಗೆ ತಿಳಿದಿದೆ. ಆದರೆ ಈ ಸಮುದ್ರದ ದಂಡೆಯ ಭಾರತೀಯರಿಗೆ ವಿಶೇಷವಾಗಿ ಕಂಡರೆ ಆಶ್ಚರ್ಯ ಏನಿಲ್ಲ. ಭಾರತದ ಸಮುದ್ರದಲ್ಲಿ ಬಿಳಿ ಮರಳು ಸಿಕ್ಕಿದರೆ ಅಲ್ಲಿ ಒಂದೆ ಒಂದು ಕಡೆ ಬಿಳಿ ಮರಳು ಸಿಗೋದಿಲ್ಲ. ಅಲ್ಲಿ ಕಪ್ಪು ಬಣ್ಣದ ಮರಳು ಮಾತ್ರ ಸಿಗುತ್ತದೆ. ಇದು ಅಲ್ಲಿನ ಮತ್ತೊಂದು ವಿಶೇಷತೆ.

    #8. ಕಪ್ಪು ಮರಳು ಸಮುದ್ರದ ದಂಡೆಯಲ್ಲಿ ಯಾಕೆ ಸಿಗುತ್ತೆ ಅಂತ ನೀವು ಕೇಳಬಹುದು. ಅದಕ್ಕೂ ಕಾರಣ ಇದೆ. ಅಲ್ಲಿ ಜ್ವಾಲಾಮುಖಿಗಳು ಸಾಮಾನ್ಯ. ಈ ಹಿಂದಿನ ಒಂದು ಜ್ವಾಲಾಮುಖಿ ಸುಮಾರು 1 ವರ್ಷಗಳ ಕಾಲ ಜೀವಂತವಾಗಿತ್ತು. ಜ್ವಾಲಾಮುಖಿ ಇರುವಿಕೆ ಪತ್ತೆಯಾದರೆ ಆ ಸ್ಥಳವನ್ನು ಸಂಪರ್ಕಿಸುವ ರಸ್ತೆಗಳ ಸಂಪರ್ಕ ಕಡಿತಗೊಳಿಸಲಾಗುತ್ತದೆ. ಈ ವೇಳೆ ಸ್ಥಳೀಯ ಕಂಪೆನಿಗಳು ಇದನ್ನು ವೀಕ್ಷಿಸಲೆಂದೇ ಹೆಲಿಕಾಪ್ಟರ್ ಟೂರ್‍ಗಳನ್ನು ಆಯೋಜಿಸುತ್ತದೆ.

    #9 ದೇಶದ ಹೆಸರಿನಲ್ಲಿ ‘ಐಸ್’ ಇದೆ. ಹೀಗಾಗಿ ಐಸ್‍ಲ್ಯಾಂಡಿನಲ್ಲಿ ದೊಡ್ಡ ದೊಡ್ಡ ಹಿಮದ ಪರ್ವತಗಳಿರುವುದು ಇಲ್ಲಿ ಇರುವುದು ಸಾಮಾನ್ಯ. ಅದರಲ್ಲೂ ವಟನ್‍ಜೋಕುಲ್ ಹೆಸರಿನ ಗೆಡ್ಡೆ ಐಸ್‍ಲ್ಯಾಂಡ್ ಭೂಮಿಯ ಶೇ.8ರಷ್ಟು ಜಾಗದಲ್ಲಿ ಆವರಿಸಿಕೊಂಡಿದೆ. ಹಿಮದ ಗೆಡ್ಡೆಗಳಿರುವ ಪ್ರದೇಶಗಳಲ್ಲಿ ಹೋಗುವಾಗ ಜಾಗೃತೆಯಿಂದ ಇರಬೇಕಾಗುತ್ತದೆ. ಸ್ಥಳೀಯ ಗೈಡ್‍ಗಳ ಸಹಕಾರವಿಲ್ಲದೇ ಇಲ್ಲಿ ನಡೆಯಲು ಸಾಧ್ಯವೇ ಇಲ್ಲ.

    #10 ಪ್ರಾಕೃತಿಕ ಸೌಂದರ್ಯ ಹೊರತುಪಡಿಸಿ ಐಸ್‍ಲ್ಯಾಂಡಿನ ಮತ್ತೊಂದು ವಿಶೇಷ ಏನೆಂದರೆ ಅಲ್ಲಿ ಶುದ್ಧವಾದ ಗಾಳಿಯನ್ನು ಮಾರಾಟ ಮಾಡಲಾಗುತ್ತದೆ. ಹೌದು ಬಹುತೇಕ ಅಂಗಡಿಗಳು “ಫ್ರೆಶ್ ಐಸ್‍ಲ್ಯಾಂಡಿಕ್ ಮೌಂಟೇನ್ ಏರ್” ಹೆಸರಿನ್ ಸಣ್ಣ ಟಿನ್‍ನಲ್ಲಿ ಗಾಳಿಯನ್ನು ಮಾರಾಟ ಮಾಡುತ್ತಿವೆ. ಒಂದು ಟಿನ್‍ಗೆ ಭಾರತ ಬೆಲೆ 600 ರೂ. ಅಷ್ಟೇ!.

    ಐಸ್‍ಲ್ಯಾಂಡ್ ಬಗ್ಗೆ ನೀವು ಈ ಬರಹ ಓದಿ ತಿಳಿದುಕೊಂಡಾಯ್ತು. ನೀವು ಈಗ ಅಲ್ಲಿಗೆ ಪ್ರವಾಸಕ್ಕೆ ಹೋಗಬೇಕು ಎಂದರೆ ನಿಮಗೆ ಒಂದು ಸುವರ್ಣ ಅವಕಾಶವಿದೆ. wildvoyager ಸಂಸ್ಥೆಯವರು ಐಸ್‍ಲ್ಯಾಂಡ್ ಪ್ರವಾಸವನ್ನು ಆಯೋಜಿಸಿದೆ. ಈ ಪ್ರವಾಸದ ಮೊದಲ ಬ್ಯಾಚ್ ಜೂನ್ 24ಕ್ಕೆ ಐಸ್‍ಲ್ಯಾಂಡಿಗೆ ತೆರಳಲಿದೆ

    ದೆಹಲಿ ಮೂಲದ ವೈಲ್ಡ್ ಲೈಫ್ ಫೋಟೋಗ್ರಾಫಿಯಲ್ಲಿ ಆಸಕ್ತಿ ಇರುವ ಅಲಂಕಾರ್ ಚಂದ್ರ ಎಂಬವರು ಈ ಸಂಸ್ಥೆಯನ್ನು ಹುಟ್ಟಿ ಹಾಕಿದ್ದಾರೆ. ನ್ಯಾಷನಲ್ ಜಿಯೋಗ್ರಾಫಿಕ್ ಮ್ಯಾಗಜಿನ್ ನಲ್ಲಿ ಇವರ ಬರಹಗಳು ಪ್ರಕಟಗೊಂಡಿದ್ದು, ಹಲವಾರು ದೇಶಗಳಿಗೆ ಈ ಸಂಸ್ಥೆಯ ಮೂಲಕ ಪ್ರವಾಸವನ್ನು ಆಯೋಜಿಸುತ್ತಾರೆ. ಸೋ ನೀವು ಐಸ್‍ಲ್ಯಾಂಡಿಗೆ ಹೋಗಬೇಕು ಎಂದು ಕನಸು ಕಾಣುತ್ತಿದ್ದರೆ ಈ ವೆಬ್‍ಸೈಟ್ ಮೂಲಕ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಆಸಕ್ತರು info@wildvoyager.com ಮೇಲ್ ಮಾಡುವ  ಮೂಲಕ ನೇರವಾಗಿ ಮಾಹಿತಿಯನ್ನು ಪಡೆದುಕೊಳ್ಳಬಹುದು.

    ಪ್ರವಾಸಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗೆ ಈ ವೆಬ್‍ಸೈಟನ್ನು ಕ್ಲಿಕ್ಕಿಸಿ: https://wildvoyager.com/destinations/iceland

  • ಭಾರತದ ಮಾರುಕಟ್ಟೆಗೆ ನೋಕಿಯಾ 3310 ಫೀಚರ್ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

    ಭಾರತದ ಮಾರುಕಟ್ಟೆಗೆ ನೋಕಿಯಾ 3310 ಫೀಚರ್ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

    ನವದೆಹಲಿ: 3310 ಫೀಚರ್ ಫೋನ್ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಈ ಫೋನಿಗೆ 3,310 ರೂ. ದರವನ್ನು ನಿಗದಿ ಪಡಿಸಿದೆ.

    ಈ ಫೋನ್ ಆನ್‍ಲೈನ್ ಶಾಪಿಂಗ್ ತಾಣದಲ್ಲಿ ಸಿಗುವುದಿಲ್ಲ. ಆಫ್‍ಲೈನ್ ರಿಟೇಲ್ ಅಂಗಡಿಗಳಲ್ಲಿ ಈ ಫೋನನ್ನು ಗುರುವಾರದಿಂದ ಮಾರಾಟ ಮಾಡಲು ಎಚ್‍ಎಂಡಿ ಗ್ಲೋಬಲ್ ಮುಂದಾಗಿದೆ.

    17 ವರ್ಷಗಳ ಬಳಿಕ ಫೆಬ್ರವರಿಯಲ್ಲಿ ಸ್ಪೇನ್‍ನ ಬಾರ್ಸಿಲೋನಾದಲ್ಲಿ ನಡೆದ ಮೊಬೈಲ್ ವಲ್ರ್ಡ್ ಕಾಂಗ್ರೆಸ್‍ನಲ್ಲಿ ಸಿಂಗಲ್ ಸಿಮ್ ಮತ್ತು ಡ್ಯುಯಲ್ ಸಿಮ್ ಹಾಕಬಹುದಾದ ಫೋನನ್ನು ಬಿಡುಗಡೆ ಮಾಡಲಾಗಿತ್ತು.

    ನೋಕಿಯಾ ಕಂಪೆನಿಯ ಹೆಸರಿನಲ್ಲಿ ಫಿನ್ಲೆಂಡ್ ಮೂಲದ ಎಚ್ ಎಂಡಿ ಗ್ಲೋಬಲ್ ಈ ಫೋನ್ ತಯಾರಿಸಿದ್ದು, ಈ ಫೋನಿಗೆ 40 ಡಾಲರ್( ಅಂದಾಜು 2600 ರೂ.) ದರವನ್ನು ನಿಗದಿ ಪಡಿಸಿದೆ. ಎರಡನೇ ತ್ರೈಮಾಸಿಕದಲ್ಲಿ ವಿಶ್ವದ ಮಾರುಕಟ್ಟೆಗೆ ಈ ಫೋನನ್ನು ಬಿಡುಗಡೆ ಮಾಡುತ್ತೇವೆ ಎಂದು ಕಂಪೆನಿ ತಿಳಿಸಿತ್ತು.

    ಗುಣವೈಶಿಷ್ಟ್ಯಗಳು:
    2.4 ಇಂಚಿನ ಟಿಎಫ್‍ಟಿ (320* 240) ಕಲರ್ ಸ್ಕ್ರೀನ್, 167 ಪಿಪಿಐ, ಹೊಂದಿರುವ ಫೋನ್ ಸೀರೀಸ್ 30+ ಆಪರೇಟಿಂಗ್ ಸಿಸ್ಟಂನಲ್ಲಿ ರನ್ ಆಗುತ್ತದೆ. ಹೊಸ ಫೋನ್ 12.8 ಮಿ ಮೀಟರ್ ದಪ್ಪ, 79.6 ಗ್ರಾಂ ತೂಕವನ್ನು ಹೊಂದಿದೆ. ಈ ಹಿಂದಿನ ಫೋನ್ 22 ಮಿ.ಮೀ ದಪ್ಪ, 133 ಗ್ರಾಂ ತೂಕವನ್ನು ಹೊಂದಿತ್ತು.

    ಹಿಂದುಗಡೆ ಎಲ್‍ಇಡಿ ಫ್ಲಾಶ್ ಹೊಂದಿರುವ 2 ಎಂಪಿ ಕ್ಯಾಮೆರಾವನ್ನು ನೋಕಿಯಾ ನೀಡಿದ್ದು, ಮಿನಿ ಸಿಮ್ ಹಾಕಬಹುದು. 2ಜಿ ನೆಟ್‍ವರ್ಕಿಗೆ ಬೆಂಬಲ ನೀಡಬಲ್ಲ ಈ ಫೋನಿಗೆ ನೋಕಿಯಾ ತೆಗೆಯಲು ಸಾಧ್ಯವಾಗುವ 1,200 ಎಂಎಎಚ್ ಬ್ಯಾಟರಿಯನ್ನು ನೀಡಿದೆ. 22 ಗಂಟೆಗಳ ಟಾಕ್ ಟೈಂ ನೀಡಿದ್ದು, 1 ತಿಂಗಳ ಕಾಲ ಸ್ಟ್ಯಾಂಡ್ ಬೈ ಟೈಂ ಹೊಂದಿದೆ.

    ಎಫ್‍ಎಂ ರೇಡಿಯೋ, 16 ಎಂಬಿ ಆಂತರಿಕ ಮೆಮೊರಿ ಹೊಂದಿದ್ದು, ಗ್ರಾಹಕರು ಎಸ್‍ಡಿ ಕಾರ್ಡ್ ಮೂಲಕ 32 ಜಿಬಿವರೆಗೆ ಮಮೊರಿಯನ್ನು ವಿಸ್ತರಿಸಬಹುದು. ಹಿಂದುಗಡೆ ಕವರ್ ತೆಗೆದು ಮೈಕ್ರೋ ಎಸ್‍ಡಿ ಕಾರ್ಡನ್ನು ಹಾಕಬಹುದಾಗಿದೆ. ಮೇಲುಗಡೆ ಹೆಡ್‍ಫೋನ್ ಜ್ಯಾಕ್ ಮತ್ತು ಮೈಕ್ರೋ ಯುಎಸ್‍ಬಿ ಚಾರ್ಜಿಂಗ್ ಪೋರ್ಟ್ ಹೊಂದಿದೆ.

    ಬಹಳ ಪ್ರಸಿದ್ಧವಾಗಿರುವ ಸ್ನೇಕ್ ಆಟವನ್ನು ಈ ಫೋನಿಗೆ ನೋಕಿಯಾ ನೀಡಿದ್ದು, ನೀಲಿ, ಹಳದಿ, ಕೆಂಪು, ಬೂದು ಬಣ್ಣದಲ್ಲಿ ಬಿಡುಗಡೆಯಾಗಿದೆ.

    ಹಳೆ ನೋಕಿಯಾ ಹೀಗಿತ್ತು:
    2000 ಇಸ್ವಿಯ ಸೆಪ್ಟೆಂಬರ್ 1ರಂದು ಈ ಫೋನ್ ಬಿಡುಗಡೆಯಾಗಿದ್ದು, ವಿಶ್ವದಲ್ಲಿ 12.6 ಕೋಟಿ ಫೋನ್‍ಗಳು ಮಾರಾಟ ಕಂಡಿತ್ತು. ಈ ಮೂಲಕ ವಿಶ್ವದ ಶ್ರೇಷ್ಟ ಫೀಚರ್ ಫೋನ್ ಎಂಬ ಹೆಗ್ಗಳಿಕಗೆ ಪಾತ್ರವಾಗಿತ್ತು. 1000 ಎಂಎಎಚ್ ಬ್ಯಾಟರಿ, ಸ್ನೇಕ್ ಆಟ, ವೆಲ್‍ಕಂ ಸ್ಕ್ರೀನ್ ಅಲ್ಲದೇ ಈ ಫೋನ್ ದೇಹ(ಬಾಡಿ) ಬಹಳ ಗಟ್ಟಿಯಾಗಿತ್ತು. ಮೇಲಿನಿಂದ ಬಿದ್ದರೂ ಫೋನಿನ ಒಳಗಡೆ ಭಾಗಕ್ಕೆ ಯಾವುದೇ ಹಾನಿ ಆಗುತ್ತಿರಲಿಲ್ಲ. ಹೀಗಾಗಿ ನೋಕಿಯಾ 3310ನ್ನು ಶಕ್ತಿಶಾಲಿ ಫೋನ್ ಎಂದು ಜನ ಕರೆಯುತ್ತಿದ್ದರು.

    ಇದನ್ನೂ ಓದಿ: ನೀವು ನೋಕಿಯಾ 3310 ಖರೀದಿ ಮಾಡ್ತೀರಾ? ಹಾಗಾದ್ರೆ ಈ ವಿಚಾರ ತಿಳಿದುಕೊಳ್ಳಿ

    https://www.youtube.com/watch?v=r5hVdeTSm0Y

  • ಪಾಕಿಸ್ತಾನ ಸತ್ಯದ ಸಮಾಧಿ ಮಾಡ್ತಿದೆ: ಅಂತಾರಾಷ್ಟ್ರೀಯ ಕೋರ್ಟ್ ನಲ್ಲಿ ಭಾರತದ ವಾದ ಹೇಗಿತ್ತು? ವಿಡಿಯೋ ನೋಡಿ

    ಪಾಕಿಸ್ತಾನ ಸತ್ಯದ ಸಮಾಧಿ ಮಾಡ್ತಿದೆ: ಅಂತಾರಾಷ್ಟ್ರೀಯ ಕೋರ್ಟ್ ನಲ್ಲಿ ಭಾರತದ ವಾದ ಹೇಗಿತ್ತು? ವಿಡಿಯೋ ನೋಡಿ

    ಹೇಗ್: 18 ವರ್ಷಗಳ ಬಳಿಕ ನೆದರ್‍ಲೆಂಡ್‍ನ ಹೇಗ್‍ನಲ್ಲಿರು ಅಂತಾರಾಷ್ಟ್ರೀಯ ಕೋರ್ಟ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿವೆ. ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರೋ ಕುಲಭೂಷಣ್ ಜಾಧವ್ ವಿಚಾರದಲ್ಲಿ ಭಾರತ ಹಾಗೂ ಪಾಕಿಸ್ತಾನ ವಾದ ಪ್ರತಿವಾದ ಮಂಡಿಸಿವೆ.

    ಭಾರತದ ಪರ ಹಿರಿಯ ವಕೀಲ ದೀಪಕ್ ಮಿತ್ತಲ್ ಹಾಗೂ ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ ವಾದ ಮಂಡಿಸಿದ್ರು. ಕೋರ್ಟ್ ವಿಚಾರಣೆಗೆ ಮುನ್ನವೇ ಜಾಧವ್ ಅವರನ್ನು ಗಲ್ಲಿಗೇರಿಸಲು ಪಾಕ್ ಪ್ರಯತ್ನಿಸ್ತಿದೆ ಅಂತಾ ಸಾಳ್ವೆ ವಾದ ಮಂಡಿಸಿದರು.

    ಮೂಲಭೂತ ಹಕ್ಕಿಗಾಗಿ ನಾವು ಹೋರಾಡುತ್ತಿದ್ದೇವೆ. ಜಾಧವ್ ಅವರನ್ನು ಬಿಡುಗಡೆ ಮಾಡಬೇಕು ಅಂತ ವಾದ ಮಂಡಿಸಿದ್ರು. ಆದರೆ ಪಾಕಿಸ್ತಾನ ಭಾರತದ ವಾದವನ್ನು ಒಪ್ಪದೇ ಮೊಂಡಾಟ ಮಾಡ್ತು. ಭಾರತ ಅಂತಾರಾಷ್ಟ್ರೀಯ ಕೋರ್ಟನ್ನ ರಾಜಕೀಯ ಥಿಯೇಟರ್ ಥರ ಬಳಸ್ತಿದೆ ಅಂತಾ ವಾದ ಮಂಡಿಸಿತು.

    ಭಾರತದ ವಾದ ಏನಿತ್ತು?
    – ಜಾಧವ್ ವಿಚಾರಣೆ ವೇಳೆ ಪಕ್ಷಪಾತ ನಡೆದಿದ್ದು, ಪಾಕಿಸ್ತಾನ ಜಾಧವ್‍ಗೆ ರಾಜತಾಂತ್ರಿಕ ನೆರವು ನೀಡಲು ನಿರಾಕರಿಸಿದೆ.
    – ಅಕ್ರಮವಾಗಿ ಜಾಧವ್ ಬಂಧಿಸಿ ವಿಯೆನ್ನಾ ಒಪ್ಪಂದ ಮುರಿದಿದೆ.
    – ಪಾಕಿಸ್ತಾನದಿಂದ ಸತ್ಯದ ಸಮಾಧಿ ಮಾಡೋ ಪ್ರಯತ್ನ ಮಾಡುತ್ತಿದೆ.
    – ಕೋರ್ಟ್ ವಿಚಾರಣೆಗೆ ಮುನ್ನವೇ ಜಾಧವ್ ಗಲ್ಲಿಗೇರಿಸಲು ಪಾಕ್ ಪ್ರಯತ್ನಿಸ್ತಿದೆ
    – ಮೂಲಭೂತ ಹಕ್ಕಿಗಾಗಿ ನಾವು ಹೋರಾಡ್ತಿದ್ದೇವೆ, ಜಾಧವ್ ಬಿಡುಗಡೆ ಮಾಡಿ

    ಪಾಕಿಸ್ತಾನದ ವಾದ ಏನು?
    – ಜಾಧವ್ ನಮ್ಮ ಬಳಿ ತಪ್ಪೊಪ್ಪಿಕೊಂಡಿದ್ದಾರೆ
    – ಜಾಧವ್ ಗಲ್ಲಿಗೇರಿಸಲು ನಮಗೆ ಆತುರ ಇಲ್ಲ
    – ಭಾರತದ ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ
    – ಭಾರತ ನ್ಯಾಯಾಲಯವನ್ನು ರಾಜಕೀಯ ನ್ಯಾಯಾಲಯವನ್ನಾಗಿ ಬಳಕೆ ಮಾಡ್ತಿದೆ
    – ರಾಜತಾಂತ್ರಿಕ ನೆರವಿಗೆ ಜಾಧವ್ ಅರ್ಹನಲ್ಲ
    – ಪಾಸ್‍ಪೋರ್ಟ್‍ನಲ್ಲಿ ಜಾಧವ್ ಅಂತಾ ಹೆಸರಿಲ್ಲ, ಮುಸ್ಲಿಂ ವ್ಯಕ್ತಿಯ ಹೆಸರು ಇದೆ

    ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಪಾಕಿಸ್ತಾನ ವಿಯೆನ್ನಾ ಒಪ್ಪಂದವನ್ನು ಮುರಿದಿದ್ದು, ನೌಕಾಪಡೆಯಿಂದ ನಿವೃತ್ತರಾದ ಬಳಿಕ ಜಾಧವ್ ಅವರು ಇರಾನ್‍ನಲ್ಲಿ ಉದ್ಯಮ ನಡೆಸುತ್ತಿದ್ದರು. ಈ ವೇಳೆ ಪಾಕಿಸ್ತಾನ ಅಪಹರಿಸಿತ್ತು. ಆದರೆ, 2016ರ ಮಾರ್ಚ್ 3ರಂದು ಅವರನ್ನು ಬಲೂಚಿಸ್ತಾನದಲ್ಲಿ ಬಂಧಿಸಿದ್ದಾಗಿ ಪಾಕಿಸ್ತಾನ ಹೇಳಿದೆ ಎಂದು ಹಿರಿಯ ವಕೀಲ ಹರೀಶ್ ಸಾಳ್ವೆ ನೇತೃತ್ವದ ವಕೀಲರ ತಂಡವು ಮೇ 8ರಂದು ಅಂತರರಾಷ್ಟ್ರೀಯ ನ್ಯಾಯಾಲಯಕ್ಕೆ ಭಾರತದ ಪರವಾಗಿ ಅರ್ಜಿ ಸಲ್ಲಿಸಿತ್ತು.

  • ವಿದ್ಯುತ್ ಲಭ್ಯತೆ ಶ್ರೇಯಾಂಕದಲ್ಲಿ 99ರಿಂದ 26ನೇ ಸ್ಥಾನಕ್ಕೆ ಜಿಗಿದ ಭಾರತ

    ವಿದ್ಯುತ್ ಲಭ್ಯತೆ ಶ್ರೇಯಾಂಕದಲ್ಲಿ 99ರಿಂದ 26ನೇ ಸ್ಥಾನಕ್ಕೆ ಜಿಗಿದ ಭಾರತ

    ಲಂಡನ್: ವಿಶ್ವ ಬ್ಯಾಂಕ್‍ನ ವಿದ್ಯುತ್ ಲಭ್ಯತೆ ಶ್ರೇಯಾಂಕದಲ್ಲಿ 2015ರಲ್ಲಿ 99ನೇ ಸ್ಥಾನದಲ್ಲಿದ್ದ ಭಾರತ ಈಗ 26ನೇ ಸ್ಥಾನಕ್ಕೆ ಜಿಗಿದಿದೆ ಎಂದು ಕೇಂದ್ರ ಇಂಧನ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

    ನಮ್ಮ ಶ್ರೇಯಾಂಕ 99 ರಿಂದ 26ಕ್ಕೆ ಏರಿದೆ. ಪ್ರತಿ ಮನೆಗೆ ವಿದ್ಯುತ್ ಸೌಲಭ್ಯ ಸಿಗಬೇಕು, ಸುಲಭವಾಗಿ ವಿದುತ್ ಲಭ್ಯವಾಗಬೇಕು ಹಾಗೂ ಕೈಗೆಟುಕುವ ದರದಲ್ಲಿ ಸಿಗಬೇಕು ಎಂಬ ಪ್ರಧಾನ ಮಂತ್ರಿಯವರ ಉದ್ದೇಶ ಇದರಿಂದ ಮತ್ತಷ್ಟು ವೇಗವಾಗಲಿದೆ ಎಂದು ಅವರು ಹೇಳಿದ್ದಾರೆ.

    2019ರ ವೇಳೆಗೆ, ಉದ್ದೇಶಿತ ಸಮಯಕ್ಕಿಂತ ಮೂರು ವರ್ಷ ಮುಂಚಿತವಾಗಿಯೇ ಸರ್ಕಾರ ಪ್ರತಿ ಮನೆಗೆ ವಿದ್ಯುತ್ ಸೌಲಭ್ಯ ಒದಗಿಸಬಲ್ಲದಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಯಾವುದೇ ವ್ಯಕ್ತಿ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಲು ಅನಕೂಲಕರವಾಗಿರಬೇಕು. ಮೂಲಸೌಕರ್ಯಗಳು ಲಭ್ಯವಿದ್ದಲ್ಲಿ 24 ಗಂಟೆಯೊಳಗೆ ವಿದ್ಯುತ್ ಸಂಪರ್ಕ ಸಿಗಬೇಕು. ಮೂಲ ಸೌಕರ್ಯದ ವ್ಯವಸ್ಥೆ ಮಾಡಬೇಕಿದ್ದರೆ ಒಂದು ವಾರದ ಒಳಗಾಗಿ ವಿದ್ಯುತ್ ಸಂಪರ್ಕ ಸಿಗಬೇಕು ಎಂದು ಪಿಯೂಶ್ ಗೋಯಲ್ ಹೇಳಿದ್ರು.

    ಮೇ 11ರಂದು ನಡೆದ ವಿಯನ್ನಾ ಎನರ್ಜಿ ಫೋರಂನಲ್ಲಿ ಎಲ್ಲರೂ ಭರತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ರು ಅಂತ ತಿಳಿಸಿದ್ರು.

    ಸರ್ಕಾರದ ಗ್ರಾಮೀಣ ವಿದ್ಯುದ್ದೀಕರಣ ಯೋಜನೆ ತ್ವರಿತ ಗತಿಯಲ್ಲಿ ಸಾಗುತ್ತಿದ್ದು, ಒಟ್ಟು 18,452 ಗ್ರಾಮಗಳಲ್ಲಿ 13 ಸಾವಿರ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲಿಪಿಸಲಾಗಿದೆ. ಉಳಿದ ಭಾಗವನ್ನು ಮುಂದಿನ 1 ಸಾವಿರ ದಿನದೊಳಗೆ ಪೂರ್ಣಗೊಳಿಸಲಾಗುತ್ತದೆ ಎಂದಿದ್ದಾರೆ.