Tag: ಭಾರ್ಗವಿ ನಾರಾಯಣ್

  • ತಾಯಿಯ ದೇಹದಾನ ಮಾಡಿದ ನಟ ಪ್ರಕಾಶ್ ಬೆಳವಾಡಿ ಕುಟುಂಬ

    ತಾಯಿಯ ದೇಹದಾನ ಮಾಡಿದ ನಟ ಪ್ರಕಾಶ್ ಬೆಳವಾಡಿ ಕುಟುಂಬ

    ಬೆಂಗಳೂರು: ನಿನ್ನೆ ನಿಧನರಾದ ಹಿರಿಯ ನಟಿ ಭಾರ್ಗವಿ ನಾರಾಯಣ್ ಅವರ ದೇಹದಾನಕ್ಕೆ ಅವರ ಕುಟುಂಬ ನಿರ್ಧರಿಸಿತ್ತು. ಅದರಂತೆ ಇಂದು ಬೆಂಗಳೂರಿನ ಸೇಂಟ್ ಜಾನ್ ಆಸ್ಪತ್ರೆಗೆ ಭಾರ್ಗವಿ ನಾರಾಯಣ್ ಅವರ ದೇಹದಾನ ಮಾಡಲಾಯಿತು. ಬೆಳ್ಳಗ್ಗೆ 11 ಗಂಟೆಯವರೆಗೆ ಭಾರ್ಗವಿ ಅವರ ಸ್ವಗೃಹದಲ್ಲಿಯೇ ಅಂತಿಮ ದರ್ಶನಕ್ಕೆ ಏರ್ಪಾಡು ಮಾಡಲಾಗಿತ್ತು. ನಂತರ ಅಲ್ಲಿಂದ ಪಾರ್ಥಿವ ಶರೀರವನ್ನು ಸೇಂಟ್ ಜಾನ್ ಆಸ್ಪತ್ರೆಗೆ ರವಾನಿಸಲಾಯಿತು.


    ದೇಹದಾನ ಮತ್ತು ಕಣ್ಣುದಾನ ಮಾಡಬೇಕು ಎನ್ನುವುದು ಸ್ವತಃ ಭಾರ್ಗವಿ ನಾರಾಯಣ್ ಅವರ ಆಸೆಯಾಗಿತ್ತಂತೆ. ಹಾಗಾಗಿ ಅವರ ಆಸೆಯನ್ನು ಕುಟುಂಬ ಈಡೇರಿಸಿದೆ ಎಂದು ನಟ, ನಿರ್ದೇಶಕ ಹಾಗೂ ಭಾರ್ಗವಿ ನಾರಾಯಣ್ ಅವರ ಪುತ್ರ ಪ್ರಕಾಶ್ ಬೆಳವಾಡಿ ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿ ಬರಲು ಬಿಡಲ್ಲ: ಸಚಿವ ಅಶ್ವತ್ಥ ನಾರಾಯಣ


    ಕನ್ನಡ ರಂಗಭೂಮಿ, ಕಿರುತೆರೆ ಮತ್ತು ಚಲನಚಿತ್ರ ರಂಗದಲ್ಲಿ ಏಕಕಾಲಕ್ಕೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಭಾರ್ಗವಿ ನಾರಾಯಣ್. ಅಲ್ಲದೇ, ಹಲವು ಕೃತಿಗಳನ್ನು ಕೂಡ ಅವರು ರಚಿಸಿದ್ದಾರೆ. ‘ನಾನು ಭಾರ್ಗವಿ’ ಅವರ ಆತ್ಮಕಥೆ ಪುಸ್ತಕ. ಕನ್ನಡದ ಖ್ಯಾತ ಪ್ರಸಾಧನ ಕಲಾವಿದರಾಗಿದ್ದ ಮೇಕಪ್ ನಾಣಿ ಅವರ ಪತಿ. ಅವರೊಂದಿಗೆನ ಬದುಕಿನ ಹಲವು ಮಜಲುಗಳನ್ನು ಪುಸ್ತಕ ರೂಪದಲ್ಲಿಯೇ ಭಾರ್ಗವಿ ನಾರಾಯಣ್ ಅವರು ದಾಖಲಿಸಿದ್ದರು.


    ಮಹಿಳೆಯರು ನಾಟಕದಲ್ಲಿ ನಟಿಸುವುದಕ್ಕೆ ಒಪ್ಪದವಾಗದ ದಿನಗಳಲ್ಲಿ ಅವರು ನಾಟಕ ರಂಗ ಪ್ರವೇಶಿಸಿದರು. ಬೆಂಗಳೂರಿನ ಅನೇಕ ಹವ್ಯಾಸ ನಾಟಕ ತಂಡಗಳ ಜತೆ ಕೆಲಸ ಮಾಡಿದ ಹೆಗ್ಗಳಿಕೆ ಇವರದ್ದು. ಪುತ್ರಿ ಸುಧಾ ಬೆಳವಾಡಿ, ಪುತ್ರ ಪ್ರಕಾಶ್ ಬೆಳವಾಡಿ ಮತ್ತು ಮೊಮ್ಮಕ್ಕಳಾದ ಸಂಯುಕ್ತ ಹೊರನಾಡು ಹೀಗೆ ಈ ಕುಟುಂಬದಿಂದ ಅನೇಕ ಕಲಾವಿದರು ಬಣ್ಣದ ಲೋಕದಲ್ಲಿದ್ದಾರೆ.

  • ಹಿರಿಯ ಕಲಾವಿದೆ ಭಾರ್ಗವಿ ನಾರಾಯಣ್ ಇನ್ನಿಲ್ಲ

    ಹಿರಿಯ ಕಲಾವಿದೆ ಭಾರ್ಗವಿ ನಾರಾಯಣ್ ಇನ್ನಿಲ್ಲ

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಹಿರಿಯ ಕಲಾವಿದೆ ಭಾರ್ಗವಿ ನಾರಾಯಣ್ ಅವರು ನಿಧನರಾಗಿದ್ದಾರೆ.

    ಭಾರ್ಗವಿ ನಾರಾಯಣ್ (84) ಅವರು ಸೋಮವಾರ ಸಂಜೆ 7:30ಕ್ಕೆ ಕೊನೆಯುಸಿರೆಳೆದಿದ್ದಾರೆ. ಭಾರ್ಗವಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

    ಸಿನಿಮಾ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಭಾರ್ಗವಿ ನಾರಾಯಣ್ ಅವರು ಸಹಜ ಅಭಿನಯದಿಂದ ಗುರುತಿಸಿಕೊಂಡವರು. ಅವರ ಸಾವಿನ ಕುರಿತು ಅವರ ಮೊಮ್ಮಗಳು, ನಟಿ ಸಂಯುಕ್ತಾ ಹೊರನಾಡು  ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಎರಡು ಕನಸು, ಹಂತಕರ ಸಂಚು, ಪಲ್ಲವಿ ಅನುಪಲ್ಲವಿ, ಬಾ ನಲ್ಲೆ ಮಧುಚಂದ್ರಕೆ, ವಂಶವೃಕ್ಷ,  ಪ್ರೋಫೆಸರ್ ಹುಚ್ಚುರಾಯ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. 2019ರಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಭಾರ್ಗವಿ ಅವರು 600ಕ್ಕೂ ಹೆಚ್ಚು ನಾಟಕಗಳ ಪ್ರದರ್ಶನ ನೀಡಿದ್ದಾರೆ.

    ರಂಗಭೂಮಿಯಲ್ಲಿ ಮೇಕಪ್ ನಾಣಿ ಎಂದೇ ಹೆಸರಾಗಿದ್ದ ಬೆಳವಾಡಿ ನಂಜುಡಯ್ಯ ನಾರಾಯಣ ಅವರು ಭಾರ್ಗವಿ ಅವರ ಪತಿ. ದಂಪತಿಗೆ ನಟರಾದ ಪ್ರಕಾಶ್ ಬೆಳವಾಡಿ, ಸುಧಾ ಬೆಳವಾಡಿ ಸೇರಿ ನಾಲ್ವರು ಮಕ್ಕಳಿದ್ದಾರೆ.

     

    View this post on Instagram

     

    A post shared by Samyukta Hornad (@samyuktahornad)

    ಕನ್ನಡ ನಾಟಕ ಅಕಾಡೆಮಿಯ ಸದಸ್ಯರಾಗಿ ಕೆಲಸ ಮಾಡಿದ ಅವರು AIR ನ ಮಹಿಳಾ ಕಾರ್ಯಕ್ರಮಗಳು ಮತ್ತು ಮಕ್ಕಳಿಗಾಗಿ ಮಹಿಳಾ ಸಂಘ, ಕರ್ನಾಟಕಕ್ಕೆ ನಾಟಕಗಳನ್ನು ಬರೆದು ನಿರ್ದೇಶಿಸಿದ್ದಾರೆ. ಅವರು ಕನ್ನಡದಲ್ಲಿ ನಾ ಕಂಡ ನಮ್ಮವರು ಎಂಬ ಪುಸ್ತಕವನ್ನೂ ಬರೆದಿದ್ದಾರೆ. 2012 ರಲ್ಲಿ ಬಿಡುಗಡೆಯಾದ ಭಾರ್ಗವಿ ನಾರಾಯಣ್ ಅವರ ಆತ್ಮಕಥೆ, ನಾನು, ಭಾರ್ಗವಿ (ನಾನು, ಭಾರ್ಗವಿ) ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು.