Tag: ಭೀಮಾತೀರದ ಹಂತಕ

  • ಭೀಮಾತೀರದ ಹಂತಕನ ಮಾಜಿ ಶಿಷ್ಯ ಸುಶೀಲ್ ಕಾಳೆ ಹತ್ಯೆ ಕೇಸ್ – ಪರಾರಿಯಾಗಿದ್ದ ನಾಲ್ವರು ಅರೆಸ್ಟ್

    ಭೀಮಾತೀರದ ಹಂತಕನ ಮಾಜಿ ಶಿಷ್ಯ ಸುಶೀಲ್ ಕಾಳೆ ಹತ್ಯೆ ಕೇಸ್ – ಪರಾರಿಯಾಗಿದ್ದ ನಾಲ್ವರು ಅರೆಸ್ಟ್

    ವಿಜಯಪುರ: ಭೀಮಾತೀರದ ಹಂತಕ ಬಾಗಪ್ಪ ಹರಿಜನ ಮಾಜಿ ಶಿಷ್ಯ ಸುಶೀಲ್ ಕಾಳೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಪರಾರಿಯಾಗಿದ್ದ ನಾಲ್ವರನ್ನು ಬಂಧಿಸಿದ್ದಾರೆ.

    ಗೌತಮ್ ಆಲಮೇಲಕರ, ನಾರಾಯಣ ಜಾಧವ್, ಬಸವರಾಜ್ ಮುನ್ನಾಳ, ಪ್ರಜ್ವಲ ಹಳಿಮನಿ ಬಂಧಿತ ಆರೋಪಿಗಳು. ಇದಕ್ಕೂ ಮುನ್ನ ಪೊಲೀಸರು ಅಪ್ರಾಪ್ತ ಸೇರಿ ಇಬ್ಬರನ್ನು ಬಂಧಿಸಿದ್ದರು.ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಕೇಸ್‌ – ಆರ್‌ಸಿಬಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಕ್ಯಾಬಿನೆಟ್‌ನಲ್ಲಿ ತೀರ್ಮಾನ

    ಈ ಕುರಿತು ಎಸ್ಪಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಹತ್ಯೆಯ ಬಳಿಕ ಪರಾರಿಯಾಗಿದ್ದ ಆರೋಪಿಗಳ ಪೈಕಿ ಅಪ್ರಾಪ್ತ ಸೇರಿ ಇಬ್ಬರನ್ನು ಇತ್ತೀಚಿಗೆ ಬಂಧಿಸಲಾಗಿತ್ತು. ಇದೀಗ ಇನ್ನುಳಿದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಜೊತೆಗೆ ಬಂಧಿತರಿಂದ ಒಂದು ಕಂಟ್ರಿ ಮೇಡ್ ಪಿಸ್ತೂಲ್, ನಾಲ್ಕು ಜೀವಂತ ಗುಂಡುಗಳು, ಮೂರು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಏನಿದು ಘಟನೆ?
    ಜು.14ರಂದು ವಿಜಯಪುರ ನಗರದ ಎಸ್‌ಎಸ್ ಕಾಂಪ್ಲೆಕ್ಸ್‌ನಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ ಶಿಷ್ಯ ಸುಶೀಲ್ ಕಾಳೆಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಹತ್ಯೆಯ ದೃಶ್ಯಗಳು ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೃಶ್ಯದಲ್ಲಿ ಸುಶೀಲ್ ಕಾಳೆಯನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು, ಎಲ್ಲಿಗೂ ತಪ್ಪಿಸಿಕೊಂಡು ಹೋಗದಂತೆ ಬಿಡದೇ ಕೊನೆಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಎಳನೀರು ಕೊಚ್ಚುವ ಮಚ್ಚಿನಿಂದ ಬೆನ್ನು, ತಲೆ, ಕುತ್ತಿಗೆ ಸೇರಿ ಹಲವೆಡೆ ಕೊಚ್ಚಿದ್ದರು. ಕೊನೆಗೆ ಮಚ್ಚನ್ನು ಸುಶೀಲ್ ಕಾಳೆ ದೇಹದ ಮೇಲೆ ಬಿಟ್ಟು ಪರಾರಿಯಾಗಿದ್ದರು.ಇದನ್ನೂ ಓದಿ: India’s Cleanest City: ದೇಶದ ‘ಸ್ವಚ್ಛ ನಗರ’ ಪಟ್ಟಿಯಲ್ಲಿ ಇಂದೋರ್‌ ನಂ.1 – ಮೈಸೂರಿಗೆ 3ನೇ ಸ್ಥಾನ

  • ಭೀಮಾತೀರದ ಹಂತಕನಿಗೆ ಸಿಕ್ತು ಗೌರವ ಡಾಕ್ಟರೇಟ್

    ಭೀಮಾತೀರದ ಹಂತಕನಿಗೆ ಸಿಕ್ತು ಗೌರವ ಡಾಕ್ಟರೇಟ್

    ವಿಜಯಪುರ: ಭೀಮಾತೀರದ ಹಂತಕ ಮಹದೇವ ಸಾಹುಕಾರನಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಲಾಗಿದೆ.

    ಏಷಿಯನ್ ಇಂಟರನ್ಯಾಶನಲ್ ಇಂಡೋನೇಷಿಯಾ ಯುನಿವರ್ಸಿಟಿಯವರು ಖುದ್ದಾಗಿ, ಮಹದೇವ ಸಾಹುಕಾರನ ಸ್ವಗ್ರಾಮವಾದ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಕೆರೂರಿನ ಗ್ರಾಮಕ್ಕೆ ತೆರಳಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿದ್ದಾರೆ.

    ಮಹದೇವ ಸಾಹುಕಾರ ಒಡೆತನದ ಭೈರವನಾಥ ಶಿಕ್ಷಣ ಸಂಸ್ಥೆಯಿಂದ ಬಡಮಕ್ಕಳಿಗೆ ಶಿಕ್ಷಣ ಮತ್ತು ಹಲವು ಸಾಮಾಜಿಕ ಸೇವೆಯನ್ನು ಗುರುತಿಸಿದ ಏಷಿಯನ್ ಇಂಟರನ್ಯಾಶನಲ್ ಇಂಡೋನೇಷಿಯಾ ಯುನಿವರ್ಸಿಟಿಯ ಕರ್ನಾಟಕದ ಸಂಯೋಜಕ ಡಾ. ರಾಜು ರೋಖಡೆಯವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ.

    ಭೀಮಾ ತೀರದ ಹಂತದ ಧರ್ಮರಾಜ ಚಡಚಣ ನಕಲಿ ಎನಕೌಂಟರ್ ಹಾಗೂ ಆತನ ತಮ್ಮ ಗಂಗಾಧರ ಚಡಚಣ ನಿಗೂಢ ಕೊಲೆ ಆರೋಪ ಈ ಎರಡೂ ಪ್ರಕರಣಗಳಲ್ಲಿ ಪ್ರಮುಖ ಆರೋಪಿ ಮಹಾದೇವ ಸಾಹುಕಾರ ಭೈರಗೊಂಡ ಸೇರಿ ಮೂವರಿಗೆ ಏಪ್ರಿಲ್ ತಿಂಗಳಿನಲ್ಲಿ ಕಲಬುರಗಿ ಸಂಚಾರಿ ಹೈಕೋರ್ಟ್ ಪೀಠ ಜಾಮೀನು ನೀಡಿತ್ತು.

  • ನನ್ ತಂಟೆಗೆ ಬಂದ್ರೆ ಹಣೆಗೆ ಗುಂಡು ಹೊಡೀತೀನಿ: ಭೀಮಾತೀರದ ಹಂತಕನ ಬಲಗೈ ಬಂಟ

    ನನ್ ತಂಟೆಗೆ ಬಂದ್ರೆ ಹಣೆಗೆ ಗುಂಡು ಹೊಡೀತೀನಿ: ಭೀಮಾತೀರದ ಹಂತಕನ ಬಲಗೈ ಬಂಟ

    ವಿಜಯಪುರ: ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ. ಹಣೆಗೆ ಬಂದೂಕು ಹಚ್ಚಿ ಹೊಡೆಯುತ್ತೇನೆಂದು ವಿಜಯಪುರದಲ್ಲಿ ಭೀಮಾತೀರದ ಹಂತಕನ ಬಲಗೈ ಬಂಟ ಬಾಗಪ್ಪ ಹರಿಜನ ಅವಾಜ್ ಹಾಕಿದ್ದಾನೆ.

    ಭೀಮಾತೀರದ ಹಂತಕ ಚಂದಪ್ಪ ಹರಿಜನ ಬಲಗೈ ಬಂಟನಾಗಿದ್ದ ಬಾಗಪ್ಪ ಈ ರೀತಿ ಆವಾಜ್ ಹಾಕಿದ್ದಾನೆ. ಚಂದಪ್ಪ ಹರಿಜನ ಸಂಬಂಧಿಗಳು ನನಗೆ ಕಿರುಕುಳ ನೀಡುತ್ತಿದ್ದಾರೆ. ಚಂದಪ್ಪನ ಸಂಬಂಧಿಕರಿಂದ ತೊಂದರೆಯಾಗುತ್ತಿದೆ ಎಂದು ಬಾಗಪ್ಪ ಆರೋಪಿಸಿದ್ದಾನೆ.

    ಯಾರ ಸಹವಾಸ ಬೇಡ ಎಂದು ನಾನಿದ್ದೇನೆ. ನನ್ನ ವಿಚಾರಕ್ಕೆ ಬಂದರೆ 24 ಗಂಟೆಗಳಲ್ಲಿ ಬಂದೂಕು ಹಿಡಿಯುತ್ತೇನೆ. ಪೊಲೀಸ್ ಇಲಾಖೆ ಮತ್ತು ಸಮಾಜಕ್ಕೆ ತೊಂದರೆ ಆಗಬಾರದು ಎಂದು ಉದ್ದೇಶದಿಂದ ಎಲ್ಲ ವಿಚಾರಗಳಿಂದಲೂ ದೂರವಾಗಿದ್ದೇನೆ. ಈ ಬದಲಾವಣೆಯನ್ನು ನನ್ನ ಅಶಕ್ತನೆಂದು ತಿಳಿಯಬೇಡಿ ಎಂದು ಬಾಗಪ್ಪ ವೈರಿಗಳಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾನೆ.