Tag: ಭೀಮಾನಾಯ್ಕ್

  • ಹಾಲಿ ಶಾಸಕನಿಂದ ಮಾಜಿ ಶಾಸಕನ ಮೇಲೆ ಚಪ್ಪಲಿಯಿಂದ ಹಲ್ಲೆಗೆ ಯತ್ನ

    ಹಾಲಿ ಶಾಸಕನಿಂದ ಮಾಜಿ ಶಾಸಕನ ಮೇಲೆ ಚಪ್ಪಲಿಯಿಂದ ಹಲ್ಲೆಗೆ ಯತ್ನ

    ವಿಜಯನಗರ (ಬಳ್ಳಾರಿ): ಬಿಜೆಪಿಯ ಮಾಜಿ ಶಾಸಕ ನೇಮಿರಾಜನಾಯ್ಕ್ ಮೇಲೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಾ ನಾಯಕ್ ಚಪ್ಪಲಿಯಿಂದ ಹಲ್ಲೆಗೆ ಯತ್ನಸಿದ್ದಾರೆ.

    ನಿನ್ನೆ ನಡೆದ ಪುರಸಭೆಯ ಚುನಾವಣೆಯ ಮತದಾನದ ವೇಳೆ ಮತಕೇಂದ್ರದ ಒಳಗೆ ನೇಮಿರಾಜ್ ನಾಯಕ್, ಅವರು ಹೋಗಿದ್ದ ಕಾರಣ ಆರಂಭವಾದ ಜಗಳವು, ಇಬ್ಬರು ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿನ ಭರಾಟೆಯಲ್ಲಿ ಭೀಮಾ ನಾಯಕ್ ಕೈಯಲ್ಲಿ ಚಪ್ಪಲಿ ಹಿಡಿದು ಹಲ್ಲೆಗೆ ಯತ್ನಿಸಿದ್ದಾರೆ. ಹಾಲಿ ಶಾಸಕ ಕೈಯಲ್ಲಿ ಚಪ್ಪಲಿ ಹಿಡಿದು ಹಲ್ಲೆ ಮಾಡಲು ಮುಂದಾದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಇಂದು ವೈರಲ್ ಆಗಿದೆ. ಇದನ್ನೂ ಓದಿ: ಕರ್ನಾಟಕ ಬಂದ್ ಮಾಡುವ ಅನಿವಾರ್ಯತೆ ಇಲ್ಲ: ಸುನಿಲ್ ಕುಮಾರ್

    ಪುರಸಭೆ ಚುನಾವಣೆಯಲ್ಲಿ ಮತದಾನ ಕೇಂದ್ರದ ಮುಂದೆ ಪರಸ್ಪರ ಈ ವಾಗ್ವಾದ ನಡೆದಿದ್ದು, ನೇಮಿರಾಜ್ ನಾಯಕ್ ಹಾಗೂ ಅವರ ಬೆಂಬಲಿಗರ ಮೇಲೆ ಹಾಲಿ ಶಾಸಕ ಹಲ್ಲೆ ಮಾಡಲು ಮುಂದಾಗಿದ್ದರು. ಈ ವಾಗ್ವಾದ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಪೊಲೀಸರು ಮಧ್ಯ ಪ್ರವೇಶಿಸಿದ್ದಾರೆ. ಇದನ್ನೂ ಓದಿ: ತೇಜಸ್ವಿ ಸೂರ್ಯನ ಬುರುಡೇಲಿ ಮೆದುಳೇ ಇಲ್ಲ: ರಮ್ಯಾ

  • ಬಿಎಸ್‍ವೈ ಆಪರೇಷನ್ ಕಮಲದ ಪಿತಾಮಹ: ಶಾಸಕ ಭೀಮಾನಾಯ್ಕ್

    ಬಿಎಸ್‍ವೈ ಆಪರೇಷನ್ ಕಮಲದ ಪಿತಾಮಹ: ಶಾಸಕ ಭೀಮಾನಾಯ್ಕ್

    ವಿಜಯನಗರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಆಪರೇಷನ್ ಕಮಲದ ಪಿತಾಮಹ ಇದ್ದಂತೆ ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಎಸ್. ಭೀಮನಾಯ್ಕ್ ಹೇಳಿದ್ದಾರೆ.

    ದೇಶದಲ್ಲಿ ಜಾತಿಗಳ ಮಧ್ಯೆ ಕಲಹ ತಂದಿಟ್ಟು ಸಮಾಜದಲ್ಲಿನ ಸಹಬಾಳ್ವೆಗೆ ಬೆಂಕಿಯಿಟ್ಟು ಪೆಟ್ರೋಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಹೆಚ್ಚಳ ಮಾಡಿ ಶ್ರಮಿಕ ವರ್ಗವನ್ನು ತೆರಿಗೆ ಎಂಬ ಕೂಪಕ್ಕೆ ಸಿಲುಕಿಸಿದೆ ಎಂದು ಭೀಮನಾಯ್ಕ್‍ರವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ತೈಲ ಬೆಲೆ ಏರಿಕೆ ಖಂಡಿಸಿ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಳ್ಳಾರಿ ಜಿಲ್ಲೆಯ ಕೊಟ್ಟರು ಪಟ್ಟಣದ ಉಜ್ಜಿನಿ ರಸ್ತೆಯ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ನಂಬಿ ಮತ ಹಾಕಿದ ಎಲ್ಲಾ ಮತದಾರರಿಗೂ ತಮ್ಮ ತಮ್ಮ ಖಾತೆಗೆ 15 ಲಕ್ಷ ರೂ ಹಣ, ಎರಡು ಲಕ್ಷ ಕೋಟಿ ಉದ್ಯೋಗ ನೀಡದೇ ಸುಳ್ಳು ಭರವಸೆ ನೀಡಿ ದೇಶದ ಜನರಿಂದ ತೆರಿಗೆ ವಸೂಲಿ ಮಾಡುತ್ತಿದೆ ಎಂದು ಖಾರವಾಗಿ ನುಡಿದಿದ್ದಾರೆ.

    ಈಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಆಪರೇಷನ್ ಕಮಲದ ಪಿತಾಮಹ ಇದ್ದಂತೆ ಏಕೆಂದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚಿಸಿಕೊಂಡು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವಾಗ ನಮ್ಮ ಸಮ್ಮಿಶ್ರ ಸರ್ಕಾರದ 19 ಶಾಸಕರನ್ನು ಲಂಚ ಕೊಟ್ಟು ಖರೀದಿ ಮಾಡಿಕೊಂಡು ಕಳ್ಳದಾರಿಯಲ್ಲಿ ಬಂದು ಅಧಿಕಾರ ಗಿಟ್ಟಿಸಿಕೊಂಡಿದ್ದಾರೆ ಎಂದರು. ಇದನ್ನೂ ಓದಿ:  ಈಶ್ವರಪ್ಪನವರಿಗೆ ಈಗ ಅರಿವಾಗುತ್ತಿರುವುದು ಆಶ್ಚರ್ಯ: ಆರ್.ವಿ.ದೇಶಪಾಂಡೆ

  • ವೇದಿಕೆ ಮೇಲೆಯೇ ಭೀಮಾನಾಯ್ಕ್- ದೇವೇಂದ್ರಪ್ಪ ಮಧ್ಯೆ ವಾಕ್ಸಮರ

    ವೇದಿಕೆ ಮೇಲೆಯೇ ಭೀಮಾನಾಯ್ಕ್- ದೇವೇಂದ್ರಪ್ಪ ಮಧ್ಯೆ ವಾಕ್ಸಮರ

    – ಒಬ್ಬರನ್ನೊಬ್ಬರು ಬೈದಾಡಿಕೊಂಡ ನಾಯಕರು

    ಬಳ್ಳಾರಿ: ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಹಾಗೂ ಬಿಜೆಪಿ ಸಂಸದ ದೇವೇಂದ್ರಪ್ಪ ಅವರು ಪರಸ್ಪರ ಬೈದಾಡಿಕೊಂಡ ಪ್ರಸಂಗ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

    ಹಗರಿಬೊಮ್ಮನ ಹಳ್ಳಿ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ ವಾಲ್ಮೀಕಿ ಜಯಂತಿ ನಿಮಿತ್ತ ವೇದಿಕೆ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಮಾತನಾಡಿದ ಶಾಸಕ ಭೀಮಾನಾಯ್ಕ್, ಹಗರಿಬೊಮ್ಮನ ಹಳ್ಳಿ ಕ್ಷೇತ್ರಕ್ಕೆ ಬಂದಿದ್ದ ಅನುದಾನವನ್ನು ಬಿಜೆಪಿ ಸರ್ಕಾರವು ವಾಪಸ್ ಪಡೆಯಿತು ಎಂದರು. ಇದರಿಂದ ಆಕ್ರೋಶಗೊಂಡ ಸಂಸದರು, ಯಾವ ಕಾರ್ಯಕ್ರಮದಲ್ಲಿ ಏನು ಮಾತನಾಡಬೇಕು ಎನ್ನುವುದು ಗೊತ್ತಿಲ್ಲಾ ಎಂದು ಗುಡುಗಿದರು.

    ಇಲ್ಲಿ ರಾಜಕಾರಣ ಮಾಡುತ್ತಿಲ್ಲ. ಹಗರಿಬೊಮ್ಮನ ಹಳ್ಳಿ ಪುರಸಭೆಗೆ ಎರಡು ಕೋಟಿ ರೂ. ಕೊಟ್ಟಿದ್ದೇವೆ. ಅದರಲ್ಲಿ ಐದು ಪುತ್ಥಳಿ ಕೊಟ್ಟಿದ್ದೇವೆ. ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಹತ್ತು ಲಕ್ಷ ರೂ., ಕಿತ್ತೂರು ಚೆನ್ನಮ್ಮ ಪುತ್ಥಳಿಗೆ ಹತ್ತು ಲಕ್ಷ ರೂ., ವಾಲ್ಮೀಕಿ ಪುತ್ಥಳಿಗೆ ಹತ್ತು ಲಕ್ಷ ರೂ., ಕನಕದಾಸರ ಪುತ್ಥಳಿಗೆ ಹತ್ತು ಲಕ್ಷ ರೂ., ಒಟ್ಟು ನಾಲ್ವತ್ತು ಲಕ್ಷ ರೂ. ಅನುದಾನ ಕೊಟ್ಟಿದ್ದೇವೆ. ಆದರೆ ಸರ್ಕಾರ ಆ ಅನುದಾನವನ್ನು ಹಿಂದಕ್ಕೆ ಪಡೆದಿದೆ. ದಯಮಾಡಿ ಸನ್ಮಾನ್ಯ ಲೋಕಸಭಾ ಸದಸ್ಯರು ಅನುದಾನವನ್ನು ಮರಳಿಸಲಿ ಎಂದರು.

    ಇದರಿಂದ ಮತ್ತಷ್ಟು ಕೋಪಗೊಂಡ ದೇವೇಂದ್ರಪ್ಪ ಅವರು, ಈ ಮಾತನ್ನು ಇಲ್ಲಿಗೆ ಬಿಟ್ಟು ಬಿಡಿ ಎಂದು ಕಿಡಿಕಾರಿದರು. ಆಗ ಭೀಮಾನಾಯ್ಕ್, ಲೋಕಸಭಾ ಸದಸ್ಯರು ತಾವು. ಸ್ವಲ್ಪ ತಾಳ್ಮೆಯಿಂದ ಕುಳಿತರೆ ಆ ವಿಚಾರವನ್ನೇ ಬಿಟ್ಟು ಬಿಡುತ್ತೇನೆ ಎಂದರು.  ದೇವೇಂದ್ರಪ್ಪ ಅವರು ಮಧ್ಯ ಪ್ರವೇಶಿಸಿ, ಆ ವಿಷಯವನ್ನು ಇಲ್ಲಿಗೆ ಬಿಟ್ಟು ಬಿಡಿ ದಯಮಾಡಿ ಎಂದು ಕೇಳಿಕೊಂಡರು.

    ಸಂಸದರ ಮನವಿಗೆ ಕ್ಯಾರೇ ಎನ್ನದ ಶಾಸಕರು ಮಾತು ಮುಂದುವರಿಸಿ, ನೀವು ರೈಲು ಬಿಟ್ಟಿದ್ದು ನೀವು ಎಂದು ಹೇಳುತ್ತೀರಾ. ಆದರೆ ಕೊಟ್ಟೂರು ಹರಿಹರ ರೈಲು ಬಿಟ್ಟಿದ್ದು ಕೇಂದ್ರ ಮಾಜಿ ಸಚಿವ ಜಾಫರ್ ಷರೀಷ್ ಮತ್ತು ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಬಿಟ್ಟುದ್ದು. ಅದು ನೀವು ಬಿಟ್ಟಿದ್ದು ಅಲ್ಲಾ ಎಂದು ಛಾಟಿ ಬೀಸಿದರು.

    ನಾಯಕರ ವಾಕ್ಸಮರದಿಂದಾಗಿ ಕೆಲ ಹೊತ್ತು ಕಾರ್ಯಕ್ರಮದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಕೆಲ ಸ್ಥಳೀಯ ಮುಖಂಡರು ಮಧ್ಯ ಪ್ರವೇಶಿಸಿ ವಾತಾವರಣವನ್ನು ತಿಳಿಗೊಳಿಸಿದರು.

  • ರೇವಣ್ಣ ಕೈತಪ್ಪಿದ ಕೆಎಂಎಫ್ ಪಟ್ಟ ಭೀಮಾನಾಯ್ಕ್ ಪಾಲು

    ರೇವಣ್ಣ ಕೈತಪ್ಪಿದ ಕೆಎಂಎಫ್ ಪಟ್ಟ ಭೀಮಾನಾಯ್ಕ್ ಪಾಲು

    ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಮಂತ್ರಿ ಸ್ಥಾನದ ಜೊತೆಗೆ ಕೆಎಂಎಫ್ ಅಧ್ಯಕ್ಷ ಸ್ಥಾನ ಬೇಕೆಂದು ಪಟ್ಟು ಹಿಡಿದಿದ್ದರು. ಆದರೆ ಈಗ ಕೆಎಂಎಫ್ ಪಟ್ಟದ ಮೇಲೆ ಕಣ್ಣಿಟ್ಟಿದ್ದ ರೇವಣ್ಣಗೆ ನಿರಾಸೆಯಾಗಿದೆ.

    ಕೆಎಂಎಫ್ ಅಧ್ಯಕ್ಷ ಸ್ಥಾನ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಅವರ ಪಾಲಾಗಿದೆ. ಮೊದಲು ನನಗೆ ಅಸಮಾಧಾನ ಇದ್ದಿದ್ದು ನಿಜ. ಆದರೆ ಈಗ ಅಸಮಾಧಾನ ಇಲ್ಲ. ಕೆಎಂಎಫ್ ಅಧ್ಯಕ್ಷರ ವಿಚಾರದಲ್ಲಿ ರಾಜೀ ಇಲ್ಲ. ಕಾಂಗ್ರೆಸ್ ಅತೀ ಹೆಚ್ಚು ನಿರ್ದೇಶಕರನ್ನ ಹೊಂದಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಈ ಬಾರಿ ಕೆಎಂಎಫ್ ವಿಚಾರದಲ್ಲಿ ರಾಜೀ ಇಲ್ಲವೇ ಇಲ್ಲ. ಸರ್ಕಾರ ಉಳಿಸುವ ನಿಟ್ಟಿನಲ್ಲಿ ಸಿಎಲ್‍ಪಿ(ಕಾಂಗ್ರೆಸ್ ಶಾಸಕಾಂಗ ಸಭೆ) ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ. ಒಂದು ವೇಳೆ ಕೆಎಂಎಫ್ ಅಧ್ಯಕ್ಷ ಸ್ಥಾನ ಕೊಟ್ಟಿಲ್ಲ ಅಂದರೆ ಬೇರೆ ಶಾಸಕರಂತೆ ನನ್ನ ದಾರಿ ನೋಡಿಕೊಳ್ಳುತ್ತೇನೆ ಎಂದು ಭೀಮಾನಾಯ್ಕ್ ಹೇಳಿದ್ದರು.

    ಭೀಮಾನಾಯ್ಕ್ ಮಾತಿಗೆ ಸಿಎಂ ಬೆದರಿದ್ದಾರೆ ಎನ್ನಲಾಗಿದೆ. ಹಾಗಾಗಿ ಅವರಿಗೆ ಅಧ್ಯಕ್ಷ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಅಂದಹಾಗೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಭೀಮಾನಾಯ್ಕ್ ನಡುವೆ ತೀವ್ರ ಫೈಟ್ ಶುರುವಾಗಿತ್ತು.

    ಈ ಸಂಬಂಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಬಳಿ ರೇವಣ್ಣ ಬೇಡಿಕೆ ಇಟ್ಟಿದ್ದರು. ಎಚ್‍ಡಿಡಿ ಅವರೂ ಕೂಡ ಸಮ್ಮತಿ ಸೂಚಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಭೀಮಾನಾಯ್ಕ್ ಅವರಿಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ ಸಿಎಂ ತಿಳಿಸಿದ್ದಾರೆ.

  • ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ರೇವಣ್ಣ ಕಣ್ಣು – ಭೀಮಾನಾಯ್ಕ್ `ಕೈ’ಕೊಡುವ ಭೀತಿ

    ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ರೇವಣ್ಣ ಕಣ್ಣು – ಭೀಮಾನಾಯ್ಕ್ `ಕೈ’ಕೊಡುವ ಭೀತಿ

    ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಅವರು ಮಂತ್ರಿ ಸ್ಥಾನದ ಜೊತೆಗೆ ಮತ್ತೊಂದು ಪ್ರಭಾವಿ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

    ಕೆಎಂಎಫ್ ಅಧ್ಯಕ್ಷ ಸ್ಥಾನ ಬೇಕು ಎಂದು ರೇವಣ್ಣ ಪಟ್ಟು ಹಿಡಿದಿದ್ದು, ಈ ಸಂಬಂಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಬಳಿ ಈಗಾಗಲೇ ಬೇಡಿಕೆ ಇಟ್ಟಿದ್ದಾರೆ. ಎಚ್‍ಡಿಡಿ ಅವರೂ ಸಮ್ಮತಿ ಸೂಚಿಸಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಇತ್ತ ಕಾಂಗ್ರೆಸ್ ಕೂಡ ತಮ್ಮ ಅತೃಪ್ತ ಶಾಸಕ ಭೀಮಾನಾಯ್ಕ್ ಗೆ ಕೆಎಂಎಫ್ ಅಧ್ಯಕ್ಷ ಸ್ಥಾನ ಕೊಡುತ್ತೀವಿ ಎಂದು ಭರವಸೆ ಕೊಟ್ಟಿದೆ. ಒಂದು ವೇಳೆ ಕೆಎಂಎಫ್ ಅಧ್ಯಕ್ಷ ಸ್ಥಾನ ಸಿಗದಿದ್ದರೆ ಭೀಮಾನಾಯ್ಕ್ ರಾಜೀನಾಮೆಗೂ ಸಿದ್ಧರಿದ್ದಾರೆ ಎನ್ನಲಾಗಿದೆ.

    ಇಬ್ಬರನ್ನು ಸಮಾಧಾನ ಮಾಡಲಾಗದೇ ತಲೆಕೆಡಿಸಿಕೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸದ್ಯಕ್ಕೆ ಅಮೆರಿಕದಿಂದ ಸಿಎಂ ಬರುವಿಕೆಗಾಗಿ ಕಾಯುತ್ತಿದ್ದಾರೆ ಎಂದು ಹೇಳಲಾಗಿದೆ.

  • ಅತೃಪ್ತರ ರಾಜೀನಾಮೆ ಬೆನ್ನಲ್ಲೇ ಬೆಂಗ್ಳೂರಿಗೆ ಆಗಮಿಸಿದ ‘ಕೈ’ ಮೂವರು ಶಾಸಕರು

    ಅತೃಪ್ತರ ರಾಜೀನಾಮೆ ಬೆನ್ನಲ್ಲೇ ಬೆಂಗ್ಳೂರಿಗೆ ಆಗಮಿಸಿದ ‘ಕೈ’ ಮೂವರು ಶಾಸಕರು

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿಯ ರಾಜೀನಾಮೆ ಇಂದು ಬಿರುಗಾಳಿ ಎಬ್ಬಿಸಿದೆ. ಇದರ ಬೆನ್ನಲ್ಲೇ ಈ ಹಿಂದಿನಿಂದಲೂ ಸರ್ಕಾರದ ವಿರುದ್ಧ ಅತೃಪ್ತಿ ವ್ಯಕ್ತಪಡಿಸುತ್ತಿದ್ದ ಕಾಂಗ್ರೆಸ್ ಶಾಸಕರಾದ ಭೀಮಾನಾಯ್ಕ್, ಪ್ರತಾಪ್ ಗೌಡ ಪಾಟೀಲ್, ಅಮರೇಗೌಡ ಬಯ್ಯಾಪುರ ಇಂದು ಸಂಜೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಕಾಂಗ್ರೆಸ್ ಪಕ್ಷದ ರಮೇಶ್ ಜಾರಕಿಹೊಳಿ ಹಾಗೂ ಆನಂದ್ ಸಿಂಗ್ ರಾಜೀನಾಮೆ ಬೆನ್ನಲ್ಲೇ ಮೂವರು ಶಾಸಕ ನಡೆ ಕುತೂಹಲಕ್ಕೆ ಕಾರಣವಾಗಿದೆ.

    ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಭೀಮಾನಾಯ್ಕ್ ಅವರು, ಸಾಕಷ್ಟು ಬಾರಿ ನಾನು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದೇನೆ. ಆನಂದ್ ಸಿಂಗ್ ಅವರು ಬೆಳಗ್ಗೆ ರಾಜೀನಾಮೆ ನೀಡಿದ ಬಳಿಕವೂ ನಾನು ಸ್ಪಷ್ಟನೆ ನೀಡಿದ್ದೆ. ಅವರ ಮನವೊಲಿಕೆ ಮಾಡುವ ಪ್ರಯತ್ನವನ್ನು ಮಾಡುತ್ತೇವೆ ಎಂದು ಹೇಳಿದ್ದೆ. ಆದರೆ ಇಂದಿಗೂ ಮಾಧ್ಯಮಗಳ ಅತೃಪ್ತ ಪಟ್ಟಿಯಲ್ಲಿ ನಮ್ಮ ಹೆಸರಿದೆ. ನಾವು ಕಾಂಗ್ರೆಸ್‍ನಲ್ಲಿಯೇ ಮುಂದುವರಿಯುತ್ತೇವೆ ಎಂದು ಹೇಳುತ್ತೇನೆ. ಯಾವುದೇ ಕಾರಣಕ್ಕೂ ಮಾಧ್ಯಮಗಳು ಆಪರೇಷನ್ ಕಮಲ ಹೆಸರಿನಲ್ಲಿ ನಮ್ಮ ಹೆಸರು ಪ್ರಸ್ತಾಪ ಮಾಡಬೇಡಿ ಎಂದರು.

    ನಮಗೂ ಮಾನ, ಮರ್ಯಾದೆ ಇದೆ:
    ಈ ವೇಳೆ ಮಾತನಾಡಿದ ಅಮರೇಗೌಡ ಬಯ್ಯಾಪುರ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅವರ ಹಕ್ಕು. ಆದರೆ ರಾಜೀನಾಮೆ ನೀಡಿದ ಬಳಿಕ ಎಲ್ಲಿ ಹೋಗುತ್ತಾರೆ ಎಂಬುವುದು ಕೂಡ ಅವರ ವೈಯಕ್ತಿಕ ಅಭಿಪ್ರಾಯ. ಆದರೆ ಶಾಸಕರ ರಾಜೀನಾಮೆ ಹಿಂದೆ ನನ್ನ ಕೈವಾಡ ಇದೆ. ನಾನು ರಾಜೀನಾಮೆ ನೀಡುತ್ತೇನೆ ಎಂಬುವುದು ಸುಳ್ಳು. ಆದ್ದರಿಂದ ಮಾಧ್ಯಮಗಳಿಗೆ ಕೈ ಮುಗಿದು ಮನವಿ ಮಾಡುತ್ತೇನೆ ನನ್ನ ಹೆಸರನ್ನು ಆತೃಪ್ತರ ಪಟ್ಟಿಯಲ್ಲಿ ಪ್ರಸ್ತಾಪ ಮಾಡಬೇಡಿ ಎಂದು ಮನವಿ ಮಾಡಿದರು.

    ಸದ್ಯ ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್ ರಾಜೀನಾಮೆ ಅವರು ವೈಯಕ್ತಿಕ ವಿಚಾರವಾಗಿ ರಾಜೀನಾಮೆ ನೀಡಿದ್ದಾರೆ. ಇದರಿಂದ ನಾವು ನಾವು ಬಿಜೆಪಿಗೆ ಹೋಗುವ ಅನಿವಾರ್ಯತೆ ಇಲ್ಲ. ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟು ಕ್ಷೇತ್ರದಲ್ಲಿ ಗೆಲ್ಲಿಸಿಕೊಂಡು ಬಂದಿದೆ. ಆದ್ದರಿಂದ ಪಕ್ಷದಲ್ಲೇ ಮುಂದುವರಿಯುತ್ತೇವೆ. ಯಾವುದೇ ಅತೃಪ್ತರ ಗುಂಪಿನಲ್ಲಿ ನಾವಿಲ್ಲ. ನಮಗೆ ಮಾನ ಮಾರ್ಯದೆ. ಇದೇ ಪಕ್ಷ ಬಿಡುವ ಯೋಚನೆಯೇ ಇಲ್ಲ ಎಂದರು.

  • ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್‍ಗೆ ಶಾಸಕ ಭೀಮಾನಾಯ್ಕ್ ಎಚ್ಚರಿಕೆ

    ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್‍ಗೆ ಶಾಸಕ ಭೀಮಾನಾಯ್ಕ್ ಎಚ್ಚರಿಕೆ

    ಬಳ್ಳಾರಿ: ಸಿಎಂ ಕುರ್ಚಿ ಖಾಲಿಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಇನ್ನು ಮುಂದೆ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಮಾತನಾಡಬಾರದು. ಆ ರೀತಿಯಲ್ಲಿ ಮಾತನಾಡಿದರೆ ಮುಂದಿನ ಅನಾಹುತಕ್ಕೆ ವಿಶ್ವನಾಥ್ ಕಾರಣರಾಗುತ್ತಾರೆ ಎಂದು ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಎಚ್ಚರಿಕೆ ನೀಡಿದ್ದಾರೆ.

    ಬಳ್ಳಾರಿ ರಾಯಚೂರು ಕೊಪ್ಪಳ ಹಾಲೂ ಒಕ್ಕೂಟದ ನಿರ್ದೇಶಕರಾಗಿ ಶಾಸಕ ಭೀಮಾನಾಯ್ಕ್ ಆಯ್ಕೆಯಾಗಿದ್ದು, ಪ್ರಮಾಣಪತ್ರ ಸ್ವೀಕರಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರದಲ್ಲಿ ಏನೂ ಬದಲಾವಣೆ ಆಗಲ್ಲ. ನಾನು ಕಾಂಗ್ರೆಸ್ ಪಕ್ಷದ ಚಿಹ್ನೆಯಡಿಯಲ್ಲಿ ಗೆಲುವು ಸಾಧಿಸಿದ್ದೇನೆ. ಹೀಗಾಗಿ ನಾನು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

    ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ವಿಚಾರದ ಬಗ್ಗೆ ಶಾಸಕರ ಅಭಿಪ್ರಾಯ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಭೀಮಾನಾಯ್ಕ್, ಮುಂದಿನ ಚುನಾವಣೆಯ ನಂತರ ಸಿದ್ದರಾಮಯ್ಯ ಸಿಎಂ ಆಗಬೇಕು ಅನ್ನೋದು ನಮ್ಮೆಲ್ಲರ ಬಯಕೆಯಾಗಿದೆ. ಆದರೆ ಜೆಡಿಎಸ್‍ರ ರಾಜಾಧ್ಯಕ್ಷ ವಿಶ್ವನಾಥ್ ಪದೇ ಪದೇ ಸಿದ್ದರಾಮಯ್ಯ ವಿರುದ್ಧ ಮಾತನಾಡಬಾರದು. ಇದು ಒಳ್ಳೆಯ ಬೆಳವಣಿಗೆಯಲ್ಲ, ವಿಶ್ವನಾಥ್ ಹೇಳಿಕೆಯಿಂದ ಮೈತ್ರಿ ಧರ್ಮಕ್ಕೆ ಧಕ್ಕೆ ಆಗುವ ಲಕ್ಷಣಗಳು ಇವೆ ಎಂದು ಎಚ್ಚರಿಕೆ ನೀಡಿದ್ದಾರೆ.

  • ಮೂರು ದಿನದಿಂದ ಸ್ವಿಚ್ ಆಫ್ ಮಾಡಿದ್ದೆ- ಕೊನೆಗೂ ಪಬ್ಲಿಕ್ ಟಿವಿಗೆ ತನ್ನ ನಿರ್ಧಾರ ತಿಳಿಸಿದ್ರು ಭೀಮಾನಾಯ್ಕ್

    ಮೂರು ದಿನದಿಂದ ಸ್ವಿಚ್ ಆಫ್ ಮಾಡಿದ್ದೆ- ಕೊನೆಗೂ ಪಬ್ಲಿಕ್ ಟಿವಿಗೆ ತನ್ನ ನಿರ್ಧಾರ ತಿಳಿಸಿದ್ರು ಭೀಮಾನಾಯ್ಕ್

    ಬೆಂಗಳೂರು: ನಾನು ಎಲ್ಲೂ ಹೋಗಿಲ್ಲ, ಈಗ ಬೆಂಗಳೂರಿನಲ್ಲೇ ಇದ್ದೇನೆ ಎಂದು ಶಾಸಕ ಭೀಮಾನಾಯ್ಕ್ ಸ್ಪಷ್ಟನೆ ಕೊಟ್ಟಿದ್ದಾರೆ.

    ಕಳೆದ ಮೂರ್ನಾಲ್ಕು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದ ಶಾಸಕ ಭೀಮಾನಾಯ್ಕ್ ಬುಧವಾರ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ನಾನು ಎಲ್ಲೂ ಹೋಗಿಲ್ಲ. ಬೆಂಗಳೂರಿನ ಮನೆಯಲ್ಲಿಯೇ ಇದ್ದೇನೆ. ಇದೆಲ್ಲಾ ಸುಳ್ಳು, ಬರಿ ಊಹಾಪೋಹವಷ್ಟೇ. ನಾನು ಮಂಗಳವಾರ ಗೋವಾದಿಂದ ಬಂದಿದ್ದೀನೆ. ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಯೋಚನೆ, ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದಾರೆ.

    ಇಂದು ಬೆಳಗ್ಗೆ ಕೂಡ ನಾನು ಕಾಂಗ್ರೆಸ್ಸಿನಲ್ಲಿಯೇ ಇರುತ್ತೇವೆ ಎಂದು ನಮ್ಮ ನಾಯಕ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೇನೆ. ನಾನು ಫೋನ್ ಮೂಲಕ ಕಾಂಗ್ರೆಸ್ ನಾಯಕರ ಜೊತೆ ಮಾತನಾಡುತ್ತಿದ್ದೆ. ನಾನು ಗೋವಾಗೆ ಹೋಗಿದ್ದು, ಧಾರವಾಡದಲ್ಲಿ ಇರುವುದನ್ನು ಕೂಡ ಸಿದ್ದರಾಮಯ್ಯ ಅವರಿಗೆ ಮೊದಲೇ ಹೇಳಿದ್ದೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

    ಆಪರೇಷನ್ ಕಮಲದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಎಲ್ಲಿ ಇದ್ದಾರೆ ಗೊತ್ತಿಲ್ಲ. ಯಾರು ನನ್ನನ್ನು ಸಂಪರ್ಕ ಮಾಡಿಲ್ಲ. ಬಿಜೆಪಿ ಜೊತೆ ಸೇರುವ ಪ್ರಶ್ನೆಯೇ ಇಲ್ಲ. ನಾನು ಕಳೆದ ದಿನದಿಂದ ನಮ್ಮ ಕಾಂಗ್ರೆಸ್ ನಾಯಕರ ಜೊತೆ ಗೋವಾದಲ್ಲಿ ಇದ್ದೇನೆ ಎಂದು ಹೇಳಿದ್ದೇನೆ. ನಮಗೆ ಸಣ್ಣಪುಟ್ಟ ಅಸಮಾಧಾನ ಇದೆ ಅಷ್ಟೇ. ಅದೆಲ್ಲವನ್ನು ಸಾರ್ವಜನಿಕವಾಗಿ ಮಾತನಾಡಲು ಸಾಧ್ಯವಿಲ್ಲ. ಆದರೆ ಬಿಜೆಪಿಗೆ ಹೋಗುವ ಮಾತಿಲ್ಲ ಎಂದು ಹೇಳಿದರು.

    ಶಾಸಕ ಗಣೇಶ್ ಕೂಡ ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗಲ್ಲ. ಬಿಜೆಪಿ ಆಪರೇಷನ್ ಬಗ್ಗೆ ನನಗೆ ಏನು ಗೊತ್ತಿಲ್ಲ. ನನ್ನ ಫೋನ್ ನಿನ್ನೆ ಮಧ್ಯಾಹ್ನದವರೆಗೂ ಸ್ವಿಚ್ ಆಫ್ ಆಗಿತ್ತು. ಆನಂತರ ಆನ್ ಮಾಡಿದ್ದೆ. 3-4 ತಿಂಗಳ ಹಿಂದೆ ಬಿಜೆಪಿಯವರು ಸಂಪರ್ಕ ಮಾಡಿದ್ದರು. ಆಗಲೇ ನಾನು ಕಾಂಗ್ರೆಸ್ ಬಿಟ್ಟು ಬರುವುದಿಲ್ಲ ಎಂದು ಹೇಳಿದ್ದೆ. ಈಗಲೂ ಕೂಡ ನಾನು ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ ಎಂದು ಭೀಮಾ ನಾಯ್ಕ್ ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಒಬ್ಬರ ಕ್ಷೇತ್ರದಲ್ಲಿ ಹಿಡಿತ ಸಾಧಿಸಲು ಮತ್ತೊಬ್ಬರಿಂದ ಕಿತ್ತಾಟ ಶುರು- ಹೈಕಮಾಂಡ್ ಗೆ ದೂರು

    ಒಬ್ಬರ ಕ್ಷೇತ್ರದಲ್ಲಿ ಹಿಡಿತ ಸಾಧಿಸಲು ಮತ್ತೊಬ್ಬರಿಂದ ಕಿತ್ತಾಟ ಶುರು- ಹೈಕಮಾಂಡ್ ಗೆ ದೂರು

    ಬಳ್ಳಾರಿ: ಆಡಳಿತಾರೂಢ ಶಾಸಕರು ತಮ್ಮ ಕ್ಷೇತ್ರದಲ್ಲಿ ಕಚೇರಿ ತೆರೆಯುವುದು ಸಾಮಾನ್ಯ. ಆದ್ರೆ ಕಾಂಗ್ರೆಸ್ ಶಾಸಕರೊಬ್ಬರು ಮತ್ತೊಬ್ಬ ಕಾಂಗ್ರೆಸ್ ಶಾಸಕರ ಕ್ಷೇತ್ರದಲ್ಲಿ ಸಮಾಜ ಸೇವೆ ಮಾಡೋ ನೆಪದಲ್ಲಿ ಜನಸಂಪರ್ಕ ಕಚೇರಿ ತೆರದು ವಿವಾದ ಸೃಷ್ಠಿ ಮಾಡಿದ್ದಾರೆ.

    ಹೌದು. ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಮುಂದೆಯೇ ಕಿತ್ತಾಡಿಕೊಂಡಿದ್ದ ಹಗರಿಬೊಮ್ಮನಹಳ್ಳಿಯ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಹಾಗೂ ಹೊಸಪೇಟೆ ಶಾಸಕ ಆನಂದ್ ಸಿಂಗ್, ಇದೀಗ ಒಬ್ಬರ ಕ್ಷೇತ್ರದಲ್ಲಿ ಮತ್ತೊಬ್ಬರು ಪ್ರತಿಷ್ಠೆ ಮೆರೆಯಲು ಮುಂದಾಗುವ ಮೂಲಕ ಕೈಕೈ ಮಿಲಾಯಿಸಲು ಸಜ್ಜಾಗಿದ್ದಾರೆ.

    ಶಾಸಕ ಆನಂದಸಿಂಗ್ ಹೊಸಪೇಟೆ ಕ್ಷೇತ್ರ ಬಿಟ್ಟು ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ಲಗ್ಗೆ ಇಟ್ಟು ಜನಸಂಪರ್ಕ ಕಚೇರಿ ತೆರೆದು ಜನಸೇವೆ ನೆಪದಲ್ಲಿ ಭೀಮಾನಾಯ್ಕರನ್ನು ಮಣಿಸಲು ಮುಂದಾಗಿದ್ದಾರೆ. ಎರಡು ತಿಂಗಳ ಹಿಂದೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಆನಂದ್ ಸಿಂಗ್ ಹಸ್ತಕ್ಷೇಪದ ಬಗ್ಗೆ ಶಾಸಕ ಭೀಮಾನಾಯ್ಕ್ ತಕರಾರು ತೆಗೆದಿದ್ದರು. ಇದೀಗ ಒಂದು ಹೆಜ್ಜೆ ಮುಂದೆ ಹೋಗಿರುವ ಆನಂದ್ ಸಿಂಗ್ ಹಗರಿಬೊಮ್ಮನಹಳ್ಳಿಯಲ್ಲಿ ಜನಸಂಪರ್ಕ ಕಚೇರಿ ತೆರೆದು ಸಮಾಜ ಸೇವೆ ಮಾಡೋದಾಗಿ ಹೇಳುತ್ತಿದ್ದಾರೆ. ಇದು ಭೀಮಾನಾಯ್ಕ್ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಮುಂದೆ ಕ್ಷೇತ್ರದಲ್ಲಿ ಏನೇ ಆದ್ರೂ ಅದಕ್ಕೆ ಆನಂದ್ ಸಿಂಗ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಹೊಣೆ ಅಂತಾ ಭೀಮಾನಾಯ್ಕ್ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯ ಮಾತಿಗೂ ಬೆಲೆ ಕೊಡದ ಆನಂದ್ ಸಿಂಗ್, ಭೀಮಾನಾಯ್ಕ್ ವಿರುದ್ಧ ತೊಡೆತಟ್ಟಿ ನಿಂತಿದ್ದಾರೆ. ಹೀಗಾಗಿ ಭೀಮಾನಾಯ್ಕ್ ಕಾಂಗ್ರೆಸ್ ಹೈಕಮಾಂಡ್‍ಗೆ ಲಿಖಿತ ದೂರು ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸಿದ್ದರಾಮಯ್ಯ ಕರೆದು ಬುದ್ದಿ ಹೇಳಿದ್ರೂ ಮಾತು ಕೇಳ್ತಿಲ್ಲ ‘ಕೈ’ ಶಾಸಕರು

    ಸಿದ್ದರಾಮಯ್ಯ ಕರೆದು ಬುದ್ದಿ ಹೇಳಿದ್ರೂ ಮಾತು ಕೇಳ್ತಿಲ್ಲ ‘ಕೈ’ ಶಾಸಕರು

    – ಇದು ಕಾಂಗ್ರೆಸ್ ಶಾಸಕರಿಬ್ಬರ ಕಾಳಗದ ಬಿಗ್ ಸ್ಟೋರಿ

    ಬಳ್ಳಾರಿ: ಬಳ್ಳಾರಿ ಜಿಲ್ಲಾ ಕಾಂಗ್ರೆಸ್‍ನಲ್ಲಿನ ಕಿತ್ತಾಟ, ಭಿನ್ನಮತಗಳಿಗೆ ಕೊನೆಯೇ ಇಲ್ಲ ಅನ್ನಿಸುತ್ತಿದೆ. ಸಚಿವ ಸ್ಥಾನಕ್ಕಾಗಿ ಕಿತ್ತಾಡಿದ್ದಾಯ್ತು, ಜಿಲ್ಲಾಧಿಕಾರಿ ವಿಚಾರದಲ್ಲಿ ಪತ್ರ ಸಮರ ನಡೆಸಿದ್ದಾಯ್ತು, ಈಗ ಮತ್ತೊಂದು ಕಿತ್ತಾಟ ಶುರುವಾಗಿದೆ. ಅದು ಮಾಜಿ ಸಿಎಂ ಸಿದ್ದರಾಮಯ್ಯರ ಶಿಷ್ಯರಾದ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಹಾಗೂ ಹೊಸಪೇಟೆ ಶಾಸಕ ಆನಂದ್ ಸಿಂಗ್ ನಡುವೆ ಶೀತಲ ಸಮರ ನಡೆದಿದೆ.

    ಇತ್ತೀಚೆಗೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಇವರಿಬ್ಬರು ಶಾಸಕರು ಬಹಿರಂಗವಾಗಿ ಆರೋಪ-ಪ್ರತ್ಯಾರೋಪಗಳನ್ನು ಮಾಡಿದ್ದರು. ತಮ್ಮ ಕ್ಷೇತ್ರಗಳಲ್ಲಿ ಪರಸ್ಪರ ಹಸ್ತಕ್ಷೇಪದ ಇವರಿಬ್ಬರು ದೂರು ನೀಡಿದ್ದರು. ಈ ವೇಳೆ ಸ್ವತಃ ಸಿದ್ದರಾಮಯ್ಯ, ಇಬ್ಬರನ್ನು ಸಮಾಧಾನಪಡಿಸಿ ಬುದ್ದಿ ಹೇಳಿದ್ದರು. ಆದರೂ ದೊಡ್ಡವರ ಮಾತು ಕೇಳದ ಶಾಸಕ ಆನಂದಸಿಂಗ್, ಭೀಮಾನಾಯ್ಕ್ ವಿರುದ್ಧ ತೊಡೆತಟ್ಟಿ ನಿಂತಿದ್ದಾರೆ. ಅಳಿಯ ಸಂದೀಪಸಿಂಗ್ ಮೂಲಕ ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಘಟನೆಗೆ ಕೈ ಹಾಕಿದ್ದಾರೆ. ಇದಕ್ಕಾಗಿ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಎರಡು ಮನೆ, ಕಚೇರಿಗಳನ್ನ ಬಾಡಿಗೆ ತಗೆದುಕೊಂಡಿದ್ದಾರಂತೆ. ಇದರಿಂದ ಶಾಸಕರಿಬ್ಬರು ಕಿತ್ತಾಡಿಕೊಂಡಿದ್ದು, ಕಾರ್ಯಕರ್ತರಲ್ಲಿ ಇರಸುಮುರುಸು ಉಂಟು ಮಾಡಿದೆ.

    ಕಳೆದೆರಡು ಚುನಾವಣೆಯಲ್ಲಿ ಭೀಮಾನಾಯ್ಕ್ ತಮ್ಮ ಸಹಾಯದಿಂದಲೇ ಗೆದ್ದಿದ್ದು ಅನ್ನೋ ಆನಂದಸಿಂಗ್ ಇದೀಗ ಅವರ ವಿರುದ್ಧವೇ ಕಾಂಗ್ರೆಸ್ ಕಾರ್ಯಕರ್ತರನ್ನ ಎತ್ತಿಗಟ್ಟಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ತಮ್ಮ ಬೆಂಬಲಿಗನ್ನ ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿಸಲು ಮುಂದಾಗಿದ್ದಾರೆ. ಒಟ್ಟಿನಲ್ಲಿ ಬಳ್ಳಾರಿ ಕಾಂಗ್ರೆಸ್ ಅಂದ್ರೆ ಕಿತ್ತಾಟ, ಕಾಳಗ ಎನ್ನುವಂತಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv