Tag: ಭುವನಂ ಗಗನಂ

  • ಪ್ರಮೋದ್ ಚಿತ್ರಕ್ಕೆ ಸಾಥ್ ನೀಡಿದ ಕಿಚ್ಚ ಸುದೀಪ್

    ಪ್ರಮೋದ್ ಚಿತ್ರಕ್ಕೆ ಸಾಥ್ ನೀಡಿದ ಕಿಚ್ಚ ಸುದೀಪ್

    ಭುವನಂ ಗಗನಂ (Bhuvanam Gaganam) ಸಿನಿಮಾ ತನ್ನ ಟೀಸರ್ ನಿಂದಲೇ ಪ್ರೇಕ್ಷಕರಲ್ಲಿ ಕುತೂಹಲ ಕೇಂದ್ರ ಬಿಂದುವಾಗಿದೆ. ಕ್ಲಾಸ್ ಕಥೆಗಳ ಮೂಲಕ ಗಮನಸೆಳೆದ ಪೃಥ್ವಿ ಅಂಬಾರ್ ಹಾಗೂ ಮಾಸ್ ಸಿನಿಮಾಗಳ ಮೂಲಕ ಸೈ ಎನಿಸಿಕೊಂಡ ಪ್ರಮೋದ್ (Pramod) , ಮೊದಲ ಬಾರಿ ಒಟ್ಟಿಗೆ ತೆರೆಹಂಚಿಕೊಂಡಿರುವ ಈ ಚಿತ್ರದ ಟೈಟಲ್ ಟ್ರ್ಯಾಕ್ ಅನಾವರಣಗೊಂಡಿದೆ.

    ಹೊಸ ಪ್ರತಿಭೆಗಳಿಗೆ ಸದಾ ಬೆನ್ನುತಟ್ಟುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Sudeep), ಚಿತ್ರರಂಗದ ಭರವಸೆ ನಾಯಕರಾಗಿರುವ ಪ್ರಮೋದ್, ಪೃಥ್ವಿ ಚಿತ್ರಕ್ಕೆ ಸಾಥ್ ಕೊಟ್ಟಿದ್ದಾರೆ, ಭುವನಂ ಗಗನಂ ಹಾಡು ಬಿಡುಗಡೆ ಮಾಡಿ ಇಡೀ ಸಿನಿತಂಡಕ್ಕೆ ಆಲ್ ದಿ ಬೆಸ್ಟ್ ತಿಳಿಸಿದ್ದಾರೆ. ಭುವನಂ ಗಗನಂ ಎಂದು ಶುರುವಾಗುವ ಹಾಡಿಗೆ ಅನಿರುದ್ಧ ಶಾಸ್ತ್ರೀ ಕ್ಯಾಚಿ ಮ್ಯಾಚಿ ಪದ ಪೊಣಿಸಿದ್ದು, ಅರ್ಮಾನ್ ಮಲ್ಲಿಕ್ ಹಾಗೂ ಐಶ್ವರ್ಯ ರಂಗರಾಜನ್ ಧ್ವನಿಯಾಗಿದ್ದಾರೆ. ಗುಮ್ಮಿನೇನಿ ವಿಜಯ್ ಈ ಮಧುರ ಗೀತೆಗೆ ಟ್ಯೂನ್ ಹಾಕಿದ್ದಾರೆ. ಭುವನಂಗಗನಂ ಟೈಟಲ್ ಟ್ರ್ಯಾಕ್ ನಲ್ಲಿ ಪ್ರಮೋದ್ ಹಾಗೂ ರೆಚೆಲ್ ಡೇವಿಡ್ ಜೋಡಿಯ ಕೆಮಿಸ್ಟ್ರೀ ನೋಡುಗರಿಗೆ ಇಷ್ಟವಾಗುತ್ತದೆ.

    ಗಿರೀಶ್ ಮೂಲಿಮನಿ ಭುವನಂ ಗಗನಂ ಸಿನಿಮಾಗೆ ಕಥೆ, ಚಿತ್ರಕಥೆ ಬರೆದಿದ್ದು, ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ಇವರು ರಾಜರು ಎಂಬ ಚಿತ್ರ ಮಾಡಿದ್ದರು. ಇದೀಗ ಭುವನಂ ಗಗನಂ ಮೂಲಕ ಮತ್ತೊಂದು ಫ್ರೆಶ್ ಕಥೆಯನ್ನು ಹೇಳೋದಿಕ್ಕೆ ಬರ್ತಿದ್ದಾರೆ. ಕನ್ನಡ ಸಿನಿಮಾ ರಂಗಕ್ಕೆ ಅದ್ಭುತ ಸಿನಿಮಾಗಳನ್ನು ಕೊಡುಗೆಯಾಗಿ ನೀಡ್ಬೇಕೆಂಬ ಕನಸಿನೊಂದಿಗೆ ನಿರ್ಮಾಪಕ ಎಂ ಮುನೇಗೌಡ ತಮ್ಮದೇ ಎಸ್ ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನಡಿ ಭುವನಂ ಗಗನಂಗೆ ಹಣ ಹಾಕಿದ್ದಾರೆ.

    ಭುವನಂ ಗಗನಂ ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್ ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್ ಗೆ ಜೋಡಿಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸ್ತಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ. ಉದಯ್ ಲೀಲಾ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್ ಮ್ಯೂಸಿಕ್ ಕಿಕ್, ಸುನೀಲ್ ಕಶ್ಯಪ್ ಸಂಕಲನ ಸಿನಿಮಾಕ್ಕಿದೆ. ಪ್ರಚಾರ ಅಖಾಡಕ್ಕೆ ಇಳಿದಿರುವ ಚಿತ್ರತಂಡ ಆದಷ್ಟು ಬೇಗ ಭುವನಂ ಗಗನಂ ಸಿನಿಮಾ ತೆರೆಗೆ ತರಲಿದೆ.

  • ಪ್ರಮೋದ್, ಪೃಥ್ವಿ ಚಿತ್ರಕ್ಕೆ ಸಾಥ್ ನೀಡಿದ ಧ್ರುವ ಸರ್ಜಾ

    ಪ್ರಮೋದ್, ಪೃಥ್ವಿ ಚಿತ್ರಕ್ಕೆ ಸಾಥ್ ನೀಡಿದ ಧ್ರುವ ಸರ್ಜಾ

    ಸ್ಯಾಂಡಲ್ ವುಡ್ ಅಂಗಳದ ಇಬ್ಬರು ಪ್ರತಿಭಾನ್ವಿತ ನಟರಾದ ಸಲಾರ್ ಪ್ರಮೋದ್ (Pramod) ಹಾಗೂ ದಿಯಾ ಪೃಥ್ವಿ ಅಂಬಾರ್ (Prithvi) ನಟನೆಯ ಬಹುನಿರೀಕ್ಷಿತ ಸಿನಿಮಾ ಭುವನಂ ಗಗನಂ. ಈ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಬೆಸ್ಟ್ ವಿಷಸ್ ತಿಳಿಸಿದ್ದಾರೆ. ಬೆಂಗಳೂರಿನ ಡಾ.ರಾಜಕುಮಾರ ಇಂಡೋರ್ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನಟ ನೆನಪಿರಲಿ ಪ್ರೇಮ್, ನಿರ್ದೇಶಕ ಸಿಂಪಲ್ ಸುನಿ ಸೇರಿದಂತೆ ಹಲವರು ಉಪಸ್ಥಿತಿದ್ದರು.

    ಟೀಸರ್ ರಿಲೀಸ್ ಬಳಿಕ ಧ್ರುವ ಸರ್ಜಾ ಮಾತನಾಡಿ, ಚಿತ್ರದ ಟೈಟಲ್ ಕೇಳಿದ ತಕ್ಷಣ ನನಗೆ ನೆನಪಾಗಿದ್ದು, ಭುವನಂ ಗಗನಂ (Bhuvanam Gaganam) ಸಾಂಗ್. ವಂಶಿ ಚಿತ್ರದ್ದು. ಪುನೀತ್ ಸರ್ ನೆನಪಾದರು. ಅಪ್ಪು ಸರ್ ಗೆ ಬರ್ತ್ ಡೇ ವಿಷ್ ಮಾಡ್ತಾ ಮಾತನಾಡಲು ಶುರು ಮಾಡುತ್ತೇನೆ. ನಾನು ಇವತ್ತು ಇಲ್ಲಿಗೆ ಬರಲು ಮುಖ್ಯ ಕಾರಣ ಈ ಚಿತ್ರದ ಟೆಕ್ನಿಷಿಯನ್ಸ್. ನಮ್ಮ ಅಣ್ಣ ಹಾಗೂ ಸುದೀಪ್ ಸರ್ ನಟಿಸಿದ ವರದನಾಯಕ ಸಿನಿಮಾದಲ್ಲಿ  ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದವರು ಗಿರೀಶ್ ಮೂಲಿಮನಿ.‌ ಅವರು ಈ ಚಿತ್ರದ ನಿರ್ದೇಶಕ ಗಿರೀಶ್. ಈ ಸಿನಿಮಾದ ಟ್ರೇಲರ್ ನೋಡಿದರೇ ಟೇಕಿಂಗ್ ಚೆನ್ನಾಗಿದೆ. ಈ ಚಿತ್ರದ ಡಿಒಪಿ ಉದಯ್ ಅವರು. ಅವರ ಜೊತೆ ಬಹದ್ದೂರು, ಭರ್ಜರಿ ಮಾಡಿದ್ದೇವೆ. ಅವರು ಅದ್ಭುತ ವರ್ಕರ್. ಮ್ಯೂಸಿಕ್ ಡೈರೆಕ್ಟರ್ ಜೊತೆಯೂ ಕೆಲಸ ಮಾಡಿದ್ದೇವೆ. ನಮ್ಮ ಎಡಿಟರ್ ಸುನಿಲ್ ಸರ್. ಇವತ್ತು ನಿರ್ಮಾಪಕ ಮುನೇಗೌಡರು ಜನ್ಮದಿನ.ಅವರಿಗೆ ಒಳ್ಳೆಯದು ಆಗಲಿ. ಸಿನಿಮಾದ ಹೀರೋ ಪ್ರಮೋದ್, ಹಾಗೂ ಪೃಥ್ವಿ ಇಡೀ ತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿ. ಈ ಸಿನಿಮಾ ಸೂಪರ್ ಹಿಟ್ ಆಗುತ್ತದೆ  ಎಂದರು.

    ನಟ ಪ್ರಮೋದ್ ಮಾತನಾಡಿ, ಭುವನಂ ಗಗನಂ ತುಂಬಾ ಇಷ್ಟಪಟ್ಟು ಒಪ್ಪಿಕೊಂಡ ಸಿನಿಮಾ. ಯಾಕಂದರೆ ನಾನು ಲವ್ ಸ್ಟೋರಿ ಮಾಡಿರಲಿಲ್ಲ. ಗಿರೀಶ್ ಸರ್ ಕಥೆ ಹೇಳಿದಾಗ, ಸೀನ್ಸ್ ಹೇಳಿದಾಗ ಖುಷಿಯಾಯ್ತು. ಅಂದರೆ ಈ ತರಹದ್ದು ಸಿನಿಮಾ ಮಾಡಿದರೆ ತುಂಬಾ ಜನ, ಫ್ಯಾಮಿಲಿ, ಹೆಣ್ಮಕ್ಕಳಿಗೆ ರೀಚ್ ಆಗುತ್ತದೆ.  ಅಂತಾ ಖುಷಿಪಟ್ಟು ಒಪ್ಪಿಕೊಂಡಿದ್ದೇನೆ. ಗಿರೀಶ್ ಸರ್ ಶೂಟ್ ಮಾಡಿದಾಗ ಯಾಕೆ ಇಷ್ಟು ಇವರು ನಿಧಾನ ಇದ್ದಾರೆ ಎಂದು ಗಾಬರಿಯಾಗಿತ್ತು. ಡಬ್ಬಿಂಗ್ ಶುರುವಾಗಿದೆ. ಸಿನಿಮಾ ನೋಡುತ್ತಿದ್ದೇವೆ. ಈಗ ಅವರು ಯಾಕೆ ನಿಧಾನ ಶೂಟ್ ಮಾಡಿದ್ದಾರೆ ಅನ್ನೋದು ಗೊತ್ತಾಗಿದೆ. ಪ್ರತಿಯೊಬ್ಬರು ಅವರು ಅಂದುಕೊಂಡಂತೆ ಬರಲು ತಡವಾಗಿದೆ ಎಂದು ಅರ್ಥವಾಯ್ತು. ಎಲ್ಲರಿಗೂ ಸಿನಿಮಾ ಇಷ್ಟವಾಗುತ್ತದೆ. ಮುನೇಗೌಡ ತುಂಬಾ ಫ್ಯಾಷನೇಟೆಡ್ ನಿರ್ಮಾಪರು ಎಂದರು.

    ನಿರ್ದೇಶಕ ಗಿರೀಶ್ ಮಾತನಾಡಿ, ಭುವನಂ ಗಗನಂ ಟೀಸರ್ ಲಾಂಚ್ ಮಾಡಿದ್ದೇವೆ.  ಟೀಸರ್ ಲಾಂಚ್ ಮಾಡಲು ಕಾರಣ ನಿರ್ಮಾಪಕ ಹುಟ್ಟುಹಬ್ಬ. ಅವರ ಬರ್ತ್ ಡೇಗೆ ಏನಾದರೂ ಗಿಫ್ಟ್ ಕೊಡಲು ಟೀಸರ್ ಲಾಂಚ್ ಮಾಡಿದ್ದೇವೆ. ಸಿನಿಮಾ ಜರ್ನಿ ಬಗ್ಗೆ ಹೇಳಲು ತುಂಬಾ ಇದೆ. ಇದು ಜಸ್ಟ್ ಟೀಸರ್. ಮುಂದೆ ಸಾಂಗ್ ಇದೆ. ಟ್ರೇಲರ್ ಇದೆ. ಸಿನಿಮಾ ಚೆನ್ನಾಗಿದೆ. ಅದರಲ್ಲೂ ಯೂತ್ಸ್ ಗೆ ಕನೆಕ್ಟ್ ಆಗುತ್ತದೆ. ಫ್ಯಾಮಿಲಿ ಎಂಟರ್ ಟೈನರ್ ಕಥೆ ಇದೆ. ಸಿನಿಮಾದ ಪ್ರತಿ ಹಂತದಲ್ಲಿಯೂ ನಿರ್ಮಾಪಕರು ಬೆಂಬಲವಾಗಿ ನಿಂತಿದ್ದಾರೆ ಎಂದರು. ಗಿರೀಶ್ ಮೂಲಿಮನಿ ಕಥೆ, ಚಿತ್ರಕಥೆ ಬರೆದು ಭುವನಂ ಗಗನಂ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಇವರು ರಾಜರು ಎಂಬ ಚಿತ್ರ ಮಾಡಿದ್ದರು. ಇದೀಗ ಭುವನಂ ಗಗನಂ ಮೂಲಕ ಮತ್ತೊಂದು ಫ್ರೆಶ್ ಕಥೆಯನ್ನು ಹೇಳೋದಿಕ್ಕೆ ಬರ್ತಿದ್ದಾರೆ. ಕನ್ನಡ ಸಿನಿಮಾ ರಂಗಕ್ಕೆ ಅದ್ಭುತ ಸಿನಿಮಾಗಳನ್ನು ಕೊಡುಗೆಯಾಗಿ ನೀಡ್ಬೇಕೆಂಬ ಕನಸಿನೊಂದಿಗೆ ನಿರ್ಮಾಪಕ ಎಂ ಮುನೇಗೌಡ ತಮ್ಮದೇ ಎಸ್ ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನಡಿ ಭುವನಂ ಗಗನಂಗೆ ಹಣ ಹಾಕಿದ್ದಾರೆ.

    ಭುವನಂ ಗಗನಂ ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್ ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್ ಗೆ ಜೋಡಿಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸ್ತಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ. ಉದಯ್ ಲೀಲಾ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್ ಮ್ಯೂಸಿಕ್ ಕಿಕ್, ಸುನೀಲ್ ಕಶ್ಯಪ್ ಸಂಕಲನ ಸಿನಿಮಾಕ್ಕಿದೆ. ಮಾನ್ಸೂನ್ ಗೆ ಭುವನಂ ಗಗನಂ ಸಿನಿಮಾ ತೆರೆಗೆ ಬರಲಿದೆ.

  • ‘ಸಲಾರ್’ ಪ್ರಮೋದ್- ಪೃಥ್ವಿ ಅಂಬರ್ ನಟನೆಯ ‘ಭುವನಂ ಗಗನಂ’ ಚಿತ್ರದ ಶೂಟಿಂಗ್ ಕಂಪ್ಲೀಟ್

    ‘ಸಲಾರ್’ ಪ್ರಮೋದ್- ಪೃಥ್ವಿ ಅಂಬರ್ ನಟನೆಯ ‘ಭುವನಂ ಗಗನಂ’ ಚಿತ್ರದ ಶೂಟಿಂಗ್ ಕಂಪ್ಲೀಟ್

    ‘ಭುವನಂ ಗಗನಂ’ (Bhuvanam Gaganam Film) ಸಿನಿಮಾ ತನ್ನ ಟೈಟಲ್ ಮೂಲಕ ಗಾಂಧಿನಗರದ ಟಾಕ್ ಐಟಂ ಎನಿಸಿಕೊಂಡಿದೆ. ‘ಸಲಾರ್’ (Salaar) ಸಿನಿಮಾ ಖ್ಯಾತಿ ಪ್ರಮೋದ್, ‘ದಿಯಾ’ (Dia) ಖ್ಯಾತಿಯ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದೆ. ಬೆಂಗಳೂರಿನ ಹೆಸರಘಟ್ಟದಲ್ಲಿ ಅದ್ಧೂರಿ ಸೆಟ್ ಹಾಕಿ ಕೊನೆ ದಿನ ಚಿತ್ರೀಕರಣ ನಡೆಸಲಾಗಿದೆ. ಈ ವೇಳೆ, ಚಿತ್ರತಂಡ ಮಾಧ್ಯಮದರೊಂದಿಗೆ ಮಾಹಿತಿ ಹಂಚಿಕೊಂಡಿದೆ.

    ನಟ ಪ್ರಮೋದ್ (Pramod) ಮಾತನಾಡಿ, ನನ್ನ ಭಾಗದ ಶೂಟಿಂಗ್ ಅಕ್ಟೋಬರ್ ತಿಂಗಳಲ್ಲಿಯೇ ಮುಗಿತ್ತು. ತುಂಬಾ ಚೆನ್ನಾಗಿ ಮೂಡಿಬಂದಿದೆ. ಅದ್ಭುತ ಶೂಟಿಂಗ್ ಸೆಟ್ ಹಾಕಿದ್ದಾರೆ. ಇದಕ್ಕೆಲ್ಲಾ ಮುನೇಗೌಡರ ಬೆಂಬಲವಿದೆ. ಅವರಿಗೆ ಸಿನಿಮಾ ಮೇಲೆ ಹೆಚ್ಚು ಫ್ಯಾಷನ್ ಇದೆ. ಸ್ಕ್ರಿನ್‌ ಪ್ಲೇ ಅದ್ಭುತವಾಗಿದೆ. ಈ ಚಿತ್ರದಲ್ಲಿ ನಾನು ಸ್ಟೈಲೀಶ್ ಆಗಿ ಲವ್ ಬಾಯ್ ಆಗಿ ಕಾಣಿಸಿಕೊಂಡಿದ್ದೇನೆ ಎಂದರು. ಇದನ್ನೂ ಓದಿ:ದೊಡ್ಮನೆಯಲ್ಲಿ ಬಿಗ್‌ ಫೈಟ್-‌ ಸಮರ್ಥ್‌ನ ಕೆನ್ನೆಗೆ ಬಾರಿಸಿ ಎಲಿಮಿನೇಟ್‌ ಆದ ಅಭಿಷೇಕ್‌

    ನಟ ಪೃಥ್ವಿ ಅಂಬರ್ (Pruthvi Ambar) ಮಾತನಾಡಿ, ಮುನೇಗೌಡರ ಎಸ್‌ವಿಸಿ ಫಿಲ್ಮಂಸ್ ದೊಡ್ಡ ಸಂಸ್ಥೆಯಾಗಿ ಚಿತ್ರರಂಗದಲ್ಲಿ ಹೊರಹೊಮ್ಮಬೇಕು. ಒಬ್ಬ ಸ್ಟ್ರಾಂಗ್ ಪ್ರೊಡ್ಯೂಸರ್ ಸಿಗುವುದು ಕಷ್ಟ. ಈ ಕಂಟೆಂಟ್‌ಗೆ ಏನು ಬೇಕೋ ಅದನ್ನು ಮನಸಾರೆ, ತುಂಬಾ ಪ್ರೀತಿ ಇಟ್ಟು ಕೊಟ್ಟಿದ್ದಾರೆ. ಈ ಸಂಸ್ಥೆಯಿಂದ ತುಂಬಾ ಒಳ್ಳೆಯ ಸಿನಿಮಾಗಳು ಬರಬೇಕು. ನನ್ನ ಪಾತ್ರ ತುಂಬಾ ಭಿನ್ನವಾಗಿ ಮೂಡಿ ಬಂದಿದೆ. ಇಡೀ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದರು. ಇದನ್ನೂ ಓದಿ:ಗೆಳೆಯನ ಜೊತೆ ತಿಮ್ಮಪ್ಪನ ದರ್ಶನ ಮಾಡಿದ ಜಾಹ್ನವಿ ಕಪೂರ್

    ನಿರ್ದೇಶಕ ಗಿರೀಶ್ ಮೂಲಿಮನಿ ಮಾತನಾಡಿ, ಒಂದೂವರೆ ವರ್ಷದ ಹಿಂದೆ ‘ಭುವನಂ ಗಗನಂ’ ಜರ್ನಿ ಶುರುವಾಗಿತ್ತು. ಅಲ್ಲಿಂದ ಇಲ್ಲಿವರೆಗೆ ನಾವು ನಿಮ್ಮನ್ನು ಭೇಟಿಯಾಗಲು ಆಗಿರಲಿಲ್ಲ. ಈಗ ಚಿತ್ರೀಕರಣ ಮುಕ್ತಾಯಗೊಂಡಿದೆ. ಎಲ್ಲರ ಸಹಕಾರ ನಮ್ಮ ಸಿನಿಮಾ ಮೇಲೆ ಇರಲಿ ಎಂದರು.

    ನಿರ್ಮಾಪಕ ಎಂ ಮುನೇಗೌಡ ಮಾತನಾಡಿ, ಒಂದೂವರೆ ವರ್ಷ ಹಿಂದೆ ಶುರುವಾದ ಜರ್ನಿ ಇದು. ಸುಮಾರು 75 ದಿನಗಳ ಕಾಲ ಮೈಸೂರು, ಹಾವೇರಿ, ಕುದುರೆಮುಖ, ಕಳಸ, ಕನ್ಯಾಕುಮಾರಿ, ಬೆಂಗಳೂರು ಇಷ್ಟು ಜಾಗ ಸುತ್ತಿಕೊಂಡು ಕೊನೆಯಲ್ಲಿ ಈ ಜಾಗದಲ್ಲಿ ಅದ್ಧೂರಿಯಾಗಿ ಸೆಟ್ ಹಾಕಿ ಚಿತ್ರೀಕರಣ ನಡೆಸಲಾಗಿದೆ. ಒಂದೊಳ್ಳೆ ಕಥೆ ಇಟ್ಕೊಂಡು ಸಿನಿಮಾ ಮಾಡಿದ್ದೇವೆ. ನನಗೆ ಹೋಪ್ ಇದೆ. ಈ ಸಿನಿಮಾ ಯಾವುದೋ ಒಂದು ರೇಂಜ್‌ನಲ್ಲಿ ಹೋಗುತ್ತದೆ ಎಂದರು.

    ಪೃಥ್ವಿ ಅಂಬಾರ್, ಸಲಾರ್ (Salaar) ಖ್ಯಾತಿಯ ಪ್ರಮೋದ್ ನಾಯಕರಾಗಿ ನಟಿಸ್ತಿರುವ ‘ಭುವನಂ ಗಗನಂ’ ಸಿನಿಮಾಗೆ ಗಿರೀಶ್ ಮೂಲಿಮನಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ‘ರಾಜರು’ ಎಂಬ ಚಿತ್ರ ಮಾಡಿದ್ದರು. ಇದೀಗ ‘ಭುವನಂ ಗಗನಂ’ ಮೂಲಕ ಮತ್ತೊಂದು ಫ್ರೆಶ್ ಕಥೆಯನ್ನು ಹೇಳೋದಿಕ್ಕೆ ಬರುತ್ತಿದ್ದಾರೆ. ಕನ್ನಡ ಸಿನಿಮಾ ರಂಗಕ್ಕೆ ಅದ್ಭುತ ಸಿನಿಮಾಗಳನ್ನು ಕೊಡುಗೆಯಾಗಿ ನೀಡ್ಬೇಕೆಂಬ ಕನಸಿನೊಂದಿಗೆ ನಿರ್ಮಾಪಕ ಎಂ ಮುನೇಗೌಡ ತಮ್ಮದೇ ಎಸ್ ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನಡಿ ‘ಭುವನಂ ಗಗನಂ’ಗೆ ಹಣ ಹಾಕಿದ್ದಾರೆ.

    ‘ಭುವನಂ ಗಗನಂ’ ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್‌ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್‌ಗೆ ಜೋಡಿಯಾಗಿ ‘ಲವ್ ಮಾಕ್ಟೇಲ್’ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ. ಉದಯ್ ಲೀಲಾ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್ ಮ್ಯೂಸಿಕ್ ಕಿಕ್, ಸುನೀಲ್ ಕಶ್ಯಪ್ ಸಂಕಲನ ಸಿನಿಮಾಕ್ಕಿದೆ.