Tag: ಭೂಪೇಂದ್ರ ಪಟೇಲ್

  • ಗುಜರಾತ್‌ ಸಂಪುಟ ಪುನಾರಚನೆ – ಜಡೇಜಾ ಪತ್ನಿ ರಿವಾಬಾಗೆ ಮಿನಿಸ್ಟರ್‌ ಪಟ್ಟ

    ಗುಜರಾತ್‌ ಸಂಪುಟ ಪುನಾರಚನೆ – ಜಡೇಜಾ ಪತ್ನಿ ರಿವಾಬಾಗೆ ಮಿನಿಸ್ಟರ್‌ ಪಟ್ಟ

    – ನೂತನ ಡಿಸಿಎಂ ಆಗಿ ಹರ್ಷ ಸಾಂಘ್ವಿ ಪ್ರಮಾಣ ಸ್ವೀಕಾರ

    ಗಾಂಧಿನಗರ: ಗುಜರಾತ್‌ನಲ್ಲಿಂದು (Gujarat) ನಡೆದ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಹರ್ಷ ಸಾಂಘ್ವಿ (Harsh Sanghavi) ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೇ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ (Rivaba Jadeja) ಸೇರಿ 26 ಸಚಿವರೂ ಪ್ರಮಾಣ ಸ್ವೀಕಾರ ಮಾಡಿದರು.

    ಭೂಪೇಂದ್ರ ಪಟೇಲ್‌ (Bhupendra Patel) ಸಂಪುಟದ 16 ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಗಾಂಧಿನಗರದ ಮಹಾತ್ಮ ಮಂದಿರ ಸಮಾವೇಶ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ 26 ಸದಸ್ಯರು ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಜಾತಿ ಮತ್ತು ಪ್ರಾದೇಶಿಕ ಸಮತೋಲನದ ಆಧಾರದ ಮೇಲೆ ಕೆಲವರಿಗೆ, ವಿಪಕ್ಷಗಳಿಂದ ಬಿಜೆಪಿ ಸೇರ್ಪಡೆಯಾದ ಕೆಲ ನಾಯಕರನ್ನ ಗುರುತಿಸಿ ಸಚಿವ ಸ್ಥಾನ ನೀಡಿರುವುದು ಹಿರಿಯ ನಾಯಕರ ಮೆಚ್ಚುಗೆಗೂ ಪಾತ್ರವಾಗಿದೆ.

    2027ರ ವಿಧಾನಸಭಾ ಚುನಾವಣೆಯನ್ನ ಗುರಿಯಾಗಿಟ್ಟು ಸಮುದಾಯದ ನಾಯಕರು, ಕಾರ್ಯಕರ್ತರ ಮೇಲೆ ಹಿಡಿತ ಸಾಧಿಸುವ ನಾಯಕರನ್ನ ಸಂಪುಟಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಪಾಟಿದಾರ್ ಸಮುದಾಯದ ಆರು ಮಂದಿ, ಪರಿಶಿಷ್ಟ ಜಾತಿಯಿಂದ ಮೂವರು, ಆದಿವಾಸಿ ಸಮುದಾಯದ ನಾಲ್ವರು, ಕ್ಷತ್ರಿಯ ಸಮುದಾಯದ ಇಬ್ಬರು, ಒಬಿಸಿ ಸಮುದಾಯದ ಎಂಟು ಮಂದಿ ಹಾಗೂ ಬ್ರಾಹ್ಮಣ ಮತ್ತು ಜೈನ ಸಮುದಾಯ ತಲಾ ಒಬ್ಬೊಬ್ಬರಿಗೆ ಸಚಿವ ಸ್ಥಾನ ನೀಡಲಾಯಿತು.

    ಸಮುದಾಯವಾರು ನಾಯಕರ ಪಟ್ಟಿ
    * ಪಾಟಿದಾರ್ ಸಮುದಾಯದಿಂದ: ಕೌಶಿಕ್ ವೆಕಾರಿಯಾ, ಪ್ರಫುಲ್ ಪನ್ಸಾರಿಯಾ, ಕಾಂತಿ ಅಮೃತಿಯಾ, ರಿಷಿಕೇಶ್ ಪಟೇಲ್, ಜಿತುಭಾಯ್ ವಘಾನಿ ಮತ್ತು ಕಮಲೇಶ್ ಪಟೇಲ್.
    * ಪರಿಶಿಷ್ಟ ಜಾತಿಯಿಂದ: ಮನೀಶಾ ವಕೀಲ್, ಪ್ರದ್ಯುಮ್ನ ವಾಜಾ ಮತ್ತು ದರ್ಶನ್ ವಘೇಲಾ.
    * ಆದಿವಾಸಿ ಸಮುದಾಯದಿಂದ: ರಮೇಶ ಕಾಟಾರ, ಪಿ.ಸಿ. ಬರಂದ, ಜೈರಾಮ್ ಗಮಿತ್ ಮತ್ತು ನರೇಶ್ ಪಟೇಲ್.
    * ಕ್ಷತ್ರಿಯ ಸಮುದಾಯದಿಂದ: ರಿವಾಬಾ ಜಡೇಜಾ ಮತ್ತು ಸಂಜಯ್‌ಸಿನ್ಹ್ ಮಹಿದಾ.
    * ಒಬಿಸಿ ಸಮುದಾಯದಿಂದ: ಕುನ್ವರ್ಜಿ ಬವಲಿಯಾ, ಅರ್ಜುನ್ ಮೊದ್ವಾಡಿಯಾ, ಪರ್ಷೋತ್ತಮ್ ಸೋಲಂಕಿ, ತ್ರಿಕಮ್ ಛಂಗಾ, ಪ್ರವೀಣ್ ಮಾಲಿ, ಸ್ವರೂಪ್ಜಿ ಠಾಕೋರ್, ಈಶ್ವರಸಿನ್ಹ್ ಪಟೇಲ್ ಮತ್ತು ರಾಮನ್ ಸೋಲಂಕಿ.
    * ಬ್ರಾಹ್ಮಣ ಸಮುದಾಯದಿಂದ: ಕನುಭಾಯಿ ದೇಸಾಯಿ
    * ಜೈನ (ಲಘುಮತಿ) ಸಮುದಾಯದಿಂದ: ಹರ್ಷ ಸಾಂಘ್ವಿ

  • ಗುಜರಾತ್ ಸಿಎಂ ಜೊತೆ ಗಡಿ ಜಿಲ್ಲೆಗಳ ಭದ್ರತೆ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ

    ಗುಜರಾತ್ ಸಿಎಂ ಜೊತೆ ಗಡಿ ಜಿಲ್ಲೆಗಳ ಭದ್ರತೆ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ

    ಗಾಂಧಿನಗರ: ಭಾರತ-ಪಾಕ್ ನಡುವಿನ ಉದ್ವಿಗ್ನ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ(Narendra Modi) ಗುಜರಾತ್ ಸಿಎಂ ಭೂಪೇಂದ್ರ ಪಟೇಲ್(Bhupendra Patel) ಜೊತೆ ಗಡಿ ಜಿಲ್ಲೆಗಳ ಭದ್ರತೆ ಕುರಿತು ಚರ್ಚೆ ನಡೆಸಿದರು.

    ಪ್ರಧಾನಿ ಮೋದಿ ಅವರು ಗುಜರಾತ್(Gujarat) ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಕರೆ ಮಾಡಿ, ಗಡಿ ರಾಜ್ಯವಾದ ಗುಜರಾತ್‌ನಲ್ಲಿ ಪ್ರಸ್ತುತ ಉದ್ವಿಗ್ನತೆಯ ಪರಿಸ್ಥಿತಿಗೆ ರಾಜ್ಯ ಸರ್ಕಾರ ಕೈಗೊಂಡಿರುವ ಮುಂಗಡ ಯೋಜನೆಯ ವಿವರಗಳನ್ನು ಪಡೆದರು. ಈ ವೇಳೆ ಪ್ರಧಾನಿ ಅವರು ಕೆಲವು ಅಗತ್ಯ ಮಾರ್ಗದರ್ಶನವನ್ನೂ ನೀಡಿದರು. ಇದನ್ನೂ ಓದಿ: India’s Strike | ಪಾಕ್‌ ಮೇಲೆ ಭಾರತ ಪ್ರಯೋಗಿಸಿದ 3 ರಾಷ್ಟ್ರಗಳ ಶಸ್ತ್ರಾಸ್ತ್ರಗಳು ಎಷ್ಟು ಪವರ್‌ಫುಲ್?‌

    ಪಾಕಿಸ್ತಾನ ಗಡಿಗೆ(Pakistan Border) ಸಂಪರ್ಕ ಹೊಂದಿರುವ ಕಚ್, ಬನಸ್ಕಂತ, ಪಟಾನ್, ಜಾಮ್‌ನಗರದಂತಹ ಸೂಕ್ಷ್ಮ ಜಿಲ್ಲೆಗಳಲ್ಲಿ ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಕೈಗೊಂಡಿರುವ ಕ್ರಮಗಳ ವಿವರಗಳನ್ನು ಪಡೆದರು. ಇದನ್ನೂ ಓದಿ: ಸೇನಾ ಮುಖ್ಯಸ್ಥರ ಜೊತೆ ಹೈವೋಲ್ಟೇಜ್‌ ಸಭೆ ನಡೆಸಿದ ರಾಜನಾಥ್ ಸಿಂಗ್‌

    ಪ್ರಧಾನಿ ಮೋದಿಯವರು ಗಡಿ ಸುರಕ್ಷತೆ ಬಗ್ಗೆ ಮಾಹಿತಿ ಪಡೆದಿರುವುದರ ಕುರಿತು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಈಗಾಗಲೇ ಪಾಕಿಸ್ತಾನವು ಗುಜರಾತ್‌ನ ಭುಜ್ ಸೇರಿದಂತೆ 15 ನಗರಗಳಲ್ಲಿ ಮಿಲಿಟರಿ ಸ್ಥಾಪನೆಗಳ ಮೇಲೆ ನಡೆಸಿದ ವಾಯುದಾಳಿ ಪ್ರಯತ್ನವನ್ನು ಭಾರತ ವಿಫಲಗೊಳಿಸಿದೆ.

  • 2 ತಿಂಗಳಿಂದ ನನ್ನ ಮಕ್ಕಳು ಕಾಣ್ತಿಲ್ಲ: ಸಿಎಂ, ಗೃಹ ಸಚಿವರಿಗೆ ಪತ್ರ ಬರೆದ ಅವಳಿ ಸಹೋದರಿಯರ ತಂದೆ

    2 ತಿಂಗಳಿಂದ ನನ್ನ ಮಕ್ಕಳು ಕಾಣ್ತಿಲ್ಲ: ಸಿಎಂ, ಗೃಹ ಸಚಿವರಿಗೆ ಪತ್ರ ಬರೆದ ಅವಳಿ ಸಹೋದರಿಯರ ತಂದೆ

    ಗಾಂಧೀನಗರ: ಕಳೆದ 2 ತಿಂಗಳಿಂದ ನನ್ನ ಅವಳಿ ಮಕ್ಕಳು ಕಾಣೆಯಾಗಿದ್ದಾರೆಂದು ಗುಜರಾತ್‌ (Gujarat) ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ವ್ಯಕ್ತಿಯೊಬ್ಬ ಪತ್ರ ಬರೆದಿರುವ ಘಟನೆ ನಡೆದಿದೆ.

    ವಡೋದರ (Vadodara) ನಿವಾಸಿ ಚಿಮನ್‌ ಎಂಬಾತನ ಮಕ್ಕಳಾದ ಪದವಿ ಓದುತ್ತಿರುವ ಶೀತಲಾ ಹಾಗೂ ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ ಸರಿಕಾ ಕಾಣೆಯಾಗಿರುವ ಅವಳಿ ಸಹೋದರಿಯರು. ಎಂದಿನಂತೆ ಕಾಲೇಜಿಗೆ ಹೋಗಿದ್ದ ಇಬ್ಬರು ಸಹೋದರಿಯರು ಫೆ.17 ರಿಂದ ನಾಪತ್ತೆಯಾಗಿದ್ದಾರೆ. ಮಕ್ಕಳಿಗಾಗಿ ಸಾಕಷ್ಟು ಹುಡುಕಾಟ ನಡೆಸಿದ್ದ ತಂದೆ ಕೊನೆಗೆ ಸಯಾಜಿಗಂಜ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ನಿಷೇಧಿತ ಪಿಎಫ್‍ಐನ ಇಬ್ಬರು ಮುಖಂಡರ ಬಂಧನ

    ಆದರೆ, 25 ದಿನಗಳು ಕಳೆದರೂ ಪೊಲೀಸರಿಂದ ಯಾವುದೇ ತೃಪ್ತಿಕರ ಉತ್ತರ ಸಿಗದ ಕಾರಣ ಚಿಮನ್‌ ನಂತರ ಪೊಲೀಸ್ ಕಮಿಷನರ್ ಅವರನ್ನು ಸಂಪರ್ಕಿಸಿದರು. ಪ್ರಕರಣವನ್ನು ವಡೋದರಾ ಕ್ರೈಂ ಬ್ರಾಂಚ್‌ಗೆ ಹಸ್ತಾಂತರಿಸಲಾಯಿತು.

    51 ದಿನಗಳು ಕಳೆದರೂ ಅವರ ಇಬ್ಬರು ಪುತ್ರಿಯರ ಗುರುತು ಪತ್ತೆಯಾಗದ ಕಾರಣ ಹತಾಶರಾದ ಚಿಮನ್ ಈಗ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (Bhupendra Patel) ಮತ್ತು ಗೃಹ ಸಚಿವ ಹರ್ಷ ಶಾಂಘ್ವಿಗೆ (Harsh Shanghvi) ಪತ್ರ ಬರೆದಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಸಹೋದರಿಯರ ವಾಟ್ಸ್‌ ಆ್ಯಪ್ ಚಾಟ್‌ಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸರ ಭರ್ಜರಿ ಭೇಟೆ – ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

    ನನ್ನ ಇಬ್ಬರು ಮಕ್ಕಳ ಬಗ್ಗೆ ಇನ್ನೂ ಕುರುಹು ಸಿಕ್ಕಿಲ್ಲ. ಅವರ ಬಗ್ಗೆ ಪೊಲೀಸರಿಂದ ಮಾಹಿತಿ ಸಿಗಬಹುದು ಎಂಬ ನಿರೀಕ್ಷೆಯಲ್ಲೇ ಕಾಲ ಕಳೆಯುತ್ತಿದ್ದೇನೆ. ನಿತ್ಯ ಆತಂಕದಿಂದಲೇ ದಿನ ದೂಡುತ್ತಿದ್ದೇನೆ ಎಂದು ನಾಪತ್ತೆಯಾಗಿರುವ ಸಹೋದರಿಯರ ತಂದೆ ನೊಂದು ನುಡಿದಿದ್ದಾರೆ.

  • ಸತತ ಎರಡನೇ ಬಾರಿ ಮುಖ್ಯಮಂತ್ರಿ ಗದ್ದುಗೆ ಏರಿದ ಭೂಪೇಂದ್ರ ಪಟೇಲ್

    ಸತತ ಎರಡನೇ ಬಾರಿ ಮುಖ್ಯಮಂತ್ರಿ ಗದ್ದುಗೆ ಏರಿದ ಭೂಪೇಂದ್ರ ಪಟೇಲ್

    ಗಾಂಧಿನಗರ: ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಸ್ಥಾನಗಳನ್ನು ಪಡೆಯುವ ಮೂಲಕ ಗುಜರಾತ್‍ನಲ್ಲಿ (Gujarat) ಬಹುಮತ ಪಡೆದಿರುವ ಬಿಜೆಪಿ (BJP) ಇಂದು ಏಳನೇ ಬಾರಿಗೆ ಸರ್ಕಾರ ರಚಿಸಿದೆ. ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದ ಭೂಪೇಂದ್ರ ಪಟೇಲ್ (Bhupendra Patel) ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

    ಈ ಮೂಲಕ ಗುಜರಾತ್‍ನ 18ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾದರು. ಈ ಹಿಂದೆ ಕಳೆದ ವರ್ಷ ವಿಜಯ್ ರೂಪಾನಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಭೂಪೇಂದ್ರ ಪಟೇಲ್ ಸಿಎಂ ಆಗಿದ್ದರು. ಇದೀಗ ಸತತ ಎರಡನೇ ಬಾರಿ ಅಧಿಕಾರ ಹಿಡಿದಿದ್ದಾರೆ. ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಪ್ರಮಾಣವಚನ ಬೋಧಿಸಿದರು. ಸಿಎಂ ಜೊತೆ ಇಂದು ಒಟ್ಟು 16 ಮಂದಿ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿದರು. ಈ ಹಿಂದೆ ಭೂಪೇಂದ್ರ ಪಟೇಲ್ ಸಂಪುಟದಲ್ಲಿದ್ದ ಕಾನು ದೇಸಾಯಿ, ಋಷಿಕೇಶ್ ಪಟೇಲ್, ರಾಘವ್ಜಿ ಪಟೇಲ್, ಬಲವಂತಸಿನ್ಹ್ ರಜಪೂತ್, ಕುನ್ವರ್ಜಿ ಬವಲಿಯಾ, ಮುಲು ಬೇರಾ, ಕುಬೇರ್ ದಿಂಡೋರ್ ಮತ್ತು ಭಾನುಬೆನ್ ಬಬಾರಿಯಾ ಮತ್ತೊಮ್ಮೆ ಕ್ಯಾಬಿನೆಟ್‍ನಲ್ಲಿ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಮಾಜಿ ಸಚಿವ ದೇಶ್‌ಮುಖ್‌ ಜಾಮೀನು ನೀಡಿ ಕೆಲ ಹೊತ್ತಲ್ಲೇ ತಡೆ ಹಿಡಿದ ಬಾಂಬೆ ಕೋರ್ಟ್‌

    ಗಾಂಧಿನಗರದ ಹೊಸ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್‌ನ ಹೆಲಿಪ್ಯಾಡ್ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi), ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಜೆ.ಪಿ ನಡ್ಡಾ, ಕೆಲ ಕೇಂದ್ರ ಸಚಿವರು ಭಾಗಿಯಾದರು. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಸಿಎಂಗಳು, ಮಾಜಿ ಸಿಎಂ ಯಡಿಯೂರಪ್ಪ ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿಶೇಷವಾಗಿ 200 ಸಂತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ಪ್ರಿಯಾಂಕಾ ಗಾಂಧಿ ಮಗಳು

    ಗುಜರಾತ್ ಚುನಾವಣೆಯಲ್ಲಿ 182 ಸ್ಥಾನಗಳ ಪೈಕಿ ಬಿಜೆಪಿ 156 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಇತ್ತ ಈ ಬಾರಿ ಚುನಾವಣೆಯಲ್ಲಿ ಶೇಕಡಾ 10 ರಷ್ಟು ಸ್ಥಾನಗಳನ್ನು ಗೆಲ್ಲದ ಕಾಂಗ್ರೆಸ್ ಅಧಿಕೃತ ವಿಪಕ್ಷ ಸ್ಥಾನವನ್ನು ಕಳೆದುಕೊಂಡಿದೆ. ಕೇವಲ 17 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಫಲವಾಗಿ ಕಾಂಗ್ರೆಸ್ ಮುಖಭಂಗ ಅನುಭವಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಶಾಸಕಾಂಗ ಪಕ್ಷದ ನಾಯಕನಾಗಿ ಭೂಪೇಂದ್ರ ಪಟೇಲ್ ಆಯ್ಕೆ- ಸೋಮವಾರ ಪ್ರಮಾಣವಚನ

    ಶಾಸಕಾಂಗ ಪಕ್ಷದ ನಾಯಕನಾಗಿ ಭೂಪೇಂದ್ರ ಪಟೇಲ್ ಆಯ್ಕೆ- ಸೋಮವಾರ ಪ್ರಮಾಣವಚನ

    ಅಹಮದಾಬಾದ್: ಗುಜರಾತ್‍ (Gujarat) ನಲ್ಲಿ ಬಹುಮತ ಪಡೆದ ಹಿನ್ನೆಲೆ ಬಿಜೆಪಿ (BJP) ಇಂದು ಶಾಸಕಾಂಗ ಪಕ್ಷದ ಸಭೆ ನಡೆಸಿದ್ದು, ಭೂಪೇಂದ್ರ ಪಟೇಲ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಚುನಾಯಿತ ಹೊಸ ಶಾಸಕರು ಹೈಕಮಾಂಡ್ ವೀಕ್ಷಕರ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ.

    ಭೂಪೇಂದ್ರ ಪಟೇಲ್ (Bhupendra Patel) ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (AmitShah), ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (J.P Nadda) ಸೇರಿ ಹಲವು ನಾಯಕರು ಈ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಸಿಎಂ, ತಜ್ಞರ ಜೊತೆಗೆ ಚರ್ಚಿಸಿದ ಬಳಿಕವಷ್ಟೆ ಸಲಾಂ ಆರತಿ ಹೆಸರು ಬದಲಾವಣೆ: ಶಶಿಕಲಾ ಜೊಲ್ಲೆ

    ಭೂಪೇಂದ್ರ ಪಟೇಲ್ ಜೊತೆಗೆ ಹಲವು ಪ್ರಮುಖ ನಾಯಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ (Hardik Patel), ಓಬಿಸಿ ನಾಯಕ ಅಲ್ಪೇಶ್ ಠಾಕೂರ್, ಕ್ರಿಕೆಟಗ ರವಿಂದ್ರ ಜಡೇಜಾ ಪತ್ನಿ ರಿವಾನಾ ಸಂಪುಟ ಸೇರುವುದು ಖಚಿತ ಎನ್ನಲಾಗುತ್ತಿದೆ. 182 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 156 ಸ್ಥಾನಗಳನ್ನು ಗೆದ್ದಿತ್ತು.

    Live Tv
    [brid partner=56869869 player=32851 video=960834 autoplay=true]

  • ಡಿ.12ರಂದು ಮೋದಿ ಸ್ಟೇಡಿಯಂನಲ್ಲಿ ಪ್ರಮಾಣವಚನ – ಮೋದಿ, ಶಾ ಭಾಗಿ

    ಡಿ.12ರಂದು ಮೋದಿ ಸ್ಟೇಡಿಯಂನಲ್ಲಿ ಪ್ರಮಾಣವಚನ – ಮೋದಿ, ಶಾ ಭಾಗಿ

    ಗಾಂಧಿನಗರ: ಗುಜರಾತ್‍ನ 17ನೇ ಮುಖ್ಯಮಂತ್ರಿಯಾಗಿ ಬಿಜೆಪಿ (BJP) ನಾಯಕ ಭೂಪೇಂದ್ರ ಪಟೇಲ್ (Bhupendra Patel) ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಸಿ.ಆರ್. ಪಾಟೀಲ್ ತಿಳಿಸಿದರು.

    ಈಗಾಗಲೇ ಗುಜರಾತ್‍ನಲ್ಲಿ (Gujarat) ಬಹುತೇಕ ಕ್ಷೇತ್ರಗಳ ಚುನಾವಣೆ (Election) ಪಕ್ಕಾ ಆಗಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಲು ಸಿದ್ಧವಾಗಿದೆ. ಸತತ 7ನೇ ಬಾರಿಗೆ ಬಿಜೆಪಿ ಸರ್ಕಾರ ರಚಿಸುವ ಮೂಲಕ ದಾಖಲೆಯನ್ನು ನಿರ್ಮಾಣ ಮಾಡಲಿದೆ. ಹಾಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಘಟ್ಲೋಡಿಯಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇದೀಗ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, 1.92 ಲಕ್ಷ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

    ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಆಗಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಡಿಸೆಂಬರ್ 12ರಂದು ಮಧ್ಯಾಹ್ನ 2 ಗಂಟೆಗೆ ಭೂಪೇಂದ್ರ ಪಟೇಲ್ ಗುಜರಾತ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಭಾರತೀಯ ಚುನಾವಣಾ ಆಯೋಗದ ಅಂಕಿ ಅಂಶಗಳ ಪ್ರಕಾರ, 182 ಸದಸ್ಯ ಬಲದ ಗುಜರಾತ್‍ನಲ್ಲಿ ವಿಧಾನಸಭೆಯಲ್ಲಿ ಬಿಜೆಪಿ 154 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಾರಿಯ ಬಿಜೆಪಿಯ ಚುನಾವಣಾ ಫಲಿತಾಂಶವು ಹಿಂದಿನ ಚುನಾವಣೆಯ ಫಲಿತಾಂಶಗಳನ್ನು ಮೀರಿದೆ. ಇದನ್ನೂ ಓದಿ: ಜಾಮ್‍ನಗರದಲ್ಲಿ ಅರಳಿದ ಕಮಲ- ಜಡೇಜಾ ಪತ್ನಿಗೆ ಭರ್ಜರಿ ಜಯ

    ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಮಾತನಾಡಿ, ಗುಜರಾತ್ ಚುನಾವಣೆಯ ಫಲಿತಾಂಶಗಳು ಸಾಕಷ್ಟು ಸ್ಪಷ್ಟವಾಗಿವೆ. ಜನರು ಗುಜರಾತ್‍ನಲ್ಲಿ ಅಭಿವೃದ್ಧಿಯ ಪಯಣವನ್ನು ಮುಂದುವರಿಸಲು ಮನಸ್ಸು ಮಾಡಿದ್ದಾರೆ. ನಾವು ಜನರ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತೇವೆ. ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ಜನರ ಸೇವೆಗೆ ಬದ್ಧರಾಗಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಗುಜರಾತ್‍ನಲ್ಲಿ ನಿರೀಕ್ಷೆಯಂತೆ ಸ್ಥಾನಗಳು ಬಂದಿಲ್ಲ: ಪ್ರಿಯಾಂಕ್ ಖರ್ಗೆ

    Live Tv
    [brid partner=56869869 player=32851 video=960834 autoplay=true]

  • ಗುಜರಾತ್ ವಿಧಾನಸಭೆ ಚುನಾವಣೆ – 14 ಮಂದಿ ಮಹಿಳೆಯರು ಸೇರಿ 160 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟ

    ಗುಜರಾತ್ ವಿಧಾನಸಭೆ ಚುನಾವಣೆ – 14 ಮಂದಿ ಮಹಿಳೆಯರು ಸೇರಿ 160 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟ

    ಗಾಂಧೀನಗರ: ಗುಜರಾತ್ ವಿಧಾನಸಭೆ ಚುನಾವಣೆ (Gujarat Assembly polls) ಹಿನ್ನೆಲೆ ಬಿಜೆಪಿ (BJP) ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಮೊದಲ ಪಟ್ಟಿ 160 ಮಂದಿ ಅಭ್ಯರ್ಥಿಗಳನ್ನು ಒಳಗೊಂಡಿದ್ದು, ಈ ಪೈಕಿ 69 ಮಂದಿ ಹಾಲಿ ಶಾಸಕರಿದ್ದು, 13 ಪರಿಶಿಷ್ಟ ಜಾತಿ ಅಭ್ಯರ್ಥಿಗಳು, 24 ಪರಿಶಿಷ್ಟ ಪಂಗಡದ ಸಮುದಾಯ ಹಾಗೂ 14 ಮಂದಿ ಮಹಿಳೆಯರಿಗೆ ಅವಕಾಶ ನೀಡಲಾಗಿದೆ.

    ಜಂಟಿ ಸುದ್ದಿಗೋಷ್ಠಿಯನ್ನು ನಡೆಸಿದ ಕೇಂದ್ರ ಸಚಿವರಾದ ಮನ್ಸುಖ್ ಮಾಂಡವಿಯಾ, ಭೂಪೇಂದರ್ ಯಾದವ್ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದರು. ಇದನ್ನೂ ಓದಿ: ಜಡೇಜಾ ಪತ್ನಿಗೆ ಗುಜರಾತ್‍ನ ಜಾಮ್‌ನಗರ ಉತ್ತರದಿಂದ ಬಿಜೆಪಿ ಟಿಕೆಟ್

    bhupendra patel gujarat chief minister

    ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (Bhupendra Patel) ಘಟ್ಲೋಡಿಯಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಗೃಹ ಸಚಿವ ಹರ್ಷ ಸಂಘವಿ ಮಜುರಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ (Congress) ತೊರೆದು ಬಿಜೆಪಿ ಸೇರಿದ್ದ ಹಾರ್ದಿಕ್ ಪಟೇಲ್ ವಿರಾಮಗಮ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಕ್ರಿಕೆಟಿಗ ರವೀಂದ್ರ ಜಡೇಜಾ (Ravindra Jadeja) ಅವರ ಪತ್ನಿ ರಿವಾಬಾ ಜಡೇಜಾ (Rivaba Jadega) ಅವರಿಗೆ ಟಿಕೆಟ್ ಸಿಕ್ಕಿದ್ದು, ಅವರು ಜಾಮ್‍ನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

    182 ಸ್ಥಾನಗಳ ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಈ ಹಿನ್ನಲೆ ನಿನ್ನೆ ಕೇಂದ್ರ ಚುನಾವಣಾ ಸಮಿತಿ ದೆಹಲಿಯಲ್ಲಿ ಸಭೆ ನಡೆಸಿತ್ತು. ಸಭೆಯ ಬಳಿಕ ಇಂದು ಒಂದೇ ಹಂತದಲ್ಲಿ 160 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಇದನ್ನೂ ಓದಿ: ಮೋರ್ಬಿ ಸೇತುವೆ ದುರಂತ – ನದಿಗೆ ಹಾರಿ ಜನರ ಪ್ರಾಣ ಉಳಿಸಿದ ಮಾಜಿ ಶಾಸಕನಿಗೆ ಬಿಜೆಪಿಯಿಂದ ಟಿಕೆಟ್

    ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ (Vijay Rupani) ಮತ್ತು ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಇತರ ಮೂವರು ನಾಯಕರು ಹೊಸ ಮುಖಗಳಿಗೆ ದಾರಿ ಮಾಡಿಕೊಡಲು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದರು. ರೂಪಾನಿ ಆಗಸ್ಟ್ 2016 ರಿಂದ ಸೆಪ್ಟೆಂಬರ್ 2021 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಪ್ರಸ್ತುತ ಅವರು ರಾಜ್ಕೋಟ್ ಪಶ್ಚಿಮದಿಂದ ಶಾಸಕರಾಗಿದ್ದಾರೆ.

    ಎರಡೂ ಹಂತದ ಮತಗಳ ಎಣಿಕೆ ಡಿಸೆಂಬರ್ 08 ರಂದು ನಡೆಯಲಿದೆ. ಬಿಜೆಪಿಯು ಚುನಾವಣೆಯಲ್ಲಿ ಆರನೇ ಬಾರಿಗೆ ನೇರ ಅಧಿಕಾರವನ್ನು ಹಿಡಯುವ ವಿಶ್ವಾಸದಲ್ಲಿದೆ, AAP ಗುಜರಾತ್ ಚುನಾವಣೆಯಲ್ಲಿ ಪಾದಾರ್ಪಣೆ ಮಾಡಲು ಪ್ರಯತ್ನಿಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಗುಜರಾತ್‌ಗೆ ಕಳಂಕ ತರುವ ಸಂಚು ನಡೆಯುತ್ತಿದೆ – ಮೋದಿ ಅಸಮಾಧಾನ

    ಗುಜರಾತ್‌ಗೆ ಕಳಂಕ ತರುವ ಸಂಚು ನಡೆಯುತ್ತಿದೆ – ಮೋದಿ ಅಸಮಾಧಾನ

    ಗಾಂಧಿನಗರ: ವಿಶ್ವ ಮತ್ತು ದೇಶದಲ್ಲಿ ಗುಜರಾತಿನ ಹೆಸರಿಗೆ ಕಳಂಕ ತರಲು ಸಂಚು ರೂಪಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಗುಜರಾತ್ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ವೇಳೆ ಕಛ್ ಜಿಲ್ಲೆಯಲ್ಲಿಂದು ಸುಮಾರು 4,400 ಕೋಟಿ ಮೊತ್ತದ ಯೋಜನೆಗಳಿಗೆ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ. ಅಲ್ಲದೇ 2001ರ ಜನವರಿ 21ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಭೂಕಂಪದ ಸಂತ್ರಸ್ತರ ಸ್ಮರಣಾರ್ಥವಾಗಿ ನಿರ್ಮಿಸಿರುವ `ಸ್ಮೃತಿ ವನ ಸ್ಮಾರಕದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಕೊಹ್ಲಿಯ ಈ ಸಾಧನೆಗೂ ಮುನ್ನವೇ ವಿಶ್ ಮಾಡಿದ ದೋಸ್ತಿ ABD

    ವಿಶ್ವದಲ್ಲಿ ಹಾಗೂ ದೇಶದಲ್ಲಿ ಗುಜರಾತ್ ಹೆಸರಿಗೆ ಕಳಂಕ ತರುವ ಕೆಲಸ ನಡೆಯುತ್ತಿದೆ. ರಾಜ್ಯಕ್ಕೆ ಹರಿದುಬರುವ ಬಂಡವಾಳವನ್ನು ತಡೆಯಲು ಸಂಚು ನಡೆಯುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೇಶದ ದೈತ್ಯ ಅವಳಿ ಕಟ್ಟಡ ನೆಲಸಮ – ಅಕ್ಕಪಕ್ಕದ ಕಾಂಪ್ಲೆಕ್ಸ್‌ಗಳ ಗೋಡೆ, ಕಿಟಕಿಗಳು ಡ್ಯಾಮೇಜ್

    ದೇಶದಲ್ಲೇ ಮೊದಲ ಬಾರಿಗೆ ವಿಪತ್ತು ನಿರ್ವಹಣಾ ಕಾಯ್ದೆಯನ್ನು ರೂಪಿಸಿದ ರಾಜ್ಯ ಗುಜರಾತ್. ಕೋವಿಡ್ ಸಾಂಕ್ರಾಮಿಕ ನಿರ್ವಹಣೆ ವೇಳೆಯೂ ಆ ಕಾಯ್ದೆ ಉತ್ತೇಜನಕಾರಿ ಆಗಿತ್ತು. ಬಂಡವಾಳಕ್ಕೆ ತಡೆ ಒಡ್ಡುವ ಎಲ್ಲಾ ರೀತಿಯ ಸಂಚುಗಳನ್ನೂ ವಿಫಲಗೊಳಿಸಿ ಗುಜರಾತ್ ಮತ್ತು ಕಛ್ ಅಭಿವೃದ್ಧಿ ಹೊಂದಿದವು ಎಂದಿದ್ದಾರೆ.

    ಇದೇ ವೇಳೆ ಗುಜರಾತ್‌ನಲ್ಲಿ ಈ ಹಿಂದೆ ಭೂಕಂಪ ಸಂಭವಿಸಿದಾಗ ನರೇಂದ್ರ ಮೋದಿ ಅವರು ಕೇವಲ ಬಿಜೆಪಿ ಕಾರ್ಯಕರ್ತರಾಗಿದ್ದು, ಸಂತ್ರಸ್ತರಿಗೆ ಸಹಾಯ ಮಾಡಲು ದೆಹಲಿಯಿಂದ ಕಛ್‌ಗೆ ಆಗಮಿಸಿದ್ದನ್ನು ನೆನಪಿಸಿಕೊಂಡಿದ್ದಾರೆ.

    ಆಣೆಕಟ್ಟು ವಿರೋಧಿಸುತ್ತಿರುವವರು ನಗರ ನಕ್ಸಲರು: ಇದೇ ವೇಳೆ ಮಾತನಾಡಿದ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಜಿಲ್ಲೆಗೆ ನರ್ಮದಾ ನೀರು ಬರುವುದನ್ನು ಕಛ್ ಜನರು ಸಂಭ್ರಮಿಸುತ್ತಿದ್ದಾರೆ. ನಗರ ನಕ್ಸಲರು ಸರ್ದಾರ್ ಸರೋವರ ಅಣೆಕಟ್ಟು ನಿರ್ಮಾಣವನ್ನು ವಿರೋಧಿಸುತ್ತಿದ್ದಾರೆ. ಅವರಲ್ಲಿ ಒಬ್ಬ ನಗರ ನಕ್ಸಲ್ ಮೇಧಾ ಪಾಟ್ಕರ್ ಆಗಿದ್ದಾರೆ. ಅವರನ್ನು ಯಾವ ಪಕ್ಷ ಬೆಂಬಲಿಸುತ್ತಿದೆ ಎಂದೂ ತಿಳಿದಿದೆ ಎಂದು ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗುಜರಾತ್-ಮುಂಬೈ ನಡುವೆ ವಿಮಾನಯಾನ ಸೇವೆ ಆರಂಭ

    ಗುಜರಾತ್-ಮುಂಬೈ ನಡುವೆ ವಿಮಾನಯಾನ ಸೇವೆ ಆರಂಭ

    ಗಾಂಧಿನಗರ: ಕೇಂದ್ರದ `ಉದೇ ದೇಶ್ ಕಾ ಅಮ್ ನಾಗರಿಕ್ (ಉಡಾನ್)’ ಕಾರ್ಯಕ್ರಮದ ಅಡಿಯಲ್ಲಿ ಇದೇ ಮೊದಲ ಬಾರಿಗೆ ಗುಜರಾತ್‌ನ ಜುನಾಗಡ ಜಿಲ್ಲೆಯ ಕೇಶೋಡ್ ಮತ್ತು ಮುಂಬೈ ನಡುವೆ ನಾಗರಿಕ ವಿಮಾನಯಾನಕ್ಕೆ ಚಾಲನೆ ನೀಡಲಾಗಿದೆ. ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ವಿಮಾನ ಯಾನಕ್ಕೆ ಚಾಲನೆ ನೀಡಿದ್ದಾರೆ.

    Capture

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರವಾಸೋದ್ಯಮದೊಂದಿಗೆ ರಾಜ್ಯದ ಅಭಿವೃದ್ಧಿಯನ್ನು ತ್ವರಿತಗೊಳಿಸಲು ಉದ್ದೇಶಿಸಿ ವಿಮಾನ ಸೇವೆ ಪ್ರಾರಂಭಿಸಲಾಗಿದೆ. ಈ ಸೌಲಭ್ಯವು ಹೆಚ್ಚು ಪ್ರಯಾಣಿಕರನ್ನು ಆಕರ್ಷಿಸಲು ಸಹಕರಿಸುತ್ತದೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ಜೊತೆಗೆ ವ್ಯಾಪಾರ ಸಮೃದ್ಧಿಯ ಹೊಸ ಆಯಾಮವನ್ನೂ ನೋಡಬಹುದಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೋವಿಡ್ ಉಲ್ಬಣ – ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್

    FLIGHT

    ಇದೇ ವೇಳೆ ಕೇಂದ್ರ ಸಚಿವರು ಹಿರಾಸರ್ ಮತ್ತು ಧೋಲೆರಾದಲ್ಲಿ ಎರಡು ಹೊಸ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಗಳನ್ನು ಸ್ಥಾಪಿಸುವುದಾಗಿ ಘೋಷಿಸಿದರು. ನಾವು ಗುಜರಾತ್‌ಗೆ 5 ಹೊಸ ವಿಮಾನಗಳನ್ನು ನೀಡಿದ್ದು, ಅಹಮದಾಬಾದ್‌ನಿಂದ ಅಮೃತಸರ, ರಾಂಚಿ, ಆಗ್ರಾ, ಪೋರಬಂದರ್‌ನಿಂದ ಮುಂಬೈ, ರಾಜ್‌ಕೋಟ್‌ನಿಂದ ಮುಂಬೈಗೆ ಅವು ಪ್ರಯಾಣಿಸಲಿವೆ. ಇದರೊಂದಿಗೆ 1,405 ಕೋಟಿ ರೂ. ವೆಚ್ಚದಲ್ಲಿ ಹಿರಾಸರ್‌ನಲ್ಲಿ ಮತ್ತು 1305 ಕೋಟಿ ವೆಚ್ಚದಲ್ಲಿ ಧೋಲೇರಾದಲ್ಲಿ ಎರಡು ಹೊಸ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸ್ಥಳೀಯ ಉತ್ಪನ್ನ ಮಾತ್ರ ಖರೀದಿಸಲು ಜನರನ್ನು ಪ್ರೇರೇಪಿಸಿ: ಸ್ವಾಮೀಜಿಗಳಿಗೆ ಮೋದಿ ಮನವಿ

    ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಉಪಸ್ಥಿತರಿದ್ದರು.

  • ಚುನಾವಣೆಯಲ್ಲಿ ಬಿಜೆಪಿಗೆ ಸರಿಸಾಟಿಯಾದ ಪ್ರತಿಸ್ಪರ್ಧಿಗಳೇ ಇಲ್ಲ: ಭೂಪೇಂದ್ರ ಪಟೇಲ್

    ಚುನಾವಣೆಯಲ್ಲಿ ಬಿಜೆಪಿಗೆ ಸರಿಸಾಟಿಯಾದ ಪ್ರತಿಸ್ಪರ್ಧಿಗಳೇ ಇಲ್ಲ: ಭೂಪೇಂದ್ರ ಪಟೇಲ್

    ಅಹಮದಾಬಾದ್: ಗುಜರಾತ್ ಚುನಾವಣೆಯಲ್ಲಿ ಬಿಜೆಪಿಗೆ ಸರಿಸಾಟಿಯಾದ ಪ್ರತಿಸ್ಪರ್ಧಿಗಳೇ ಇಲ್ಲ ಎಂದು ಮುಖ್ಯಮಂತ್ರಿ ಬಿಜೆಪಿಯ ಭೂಪೇಂದ್ರ ಪಟೇಲ್ ಹೇಳಿದ್ದಾರೆ.

    ಉತ್ತರಪ್ರಡೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಜಯಭೇರಿ ಬಾರಿಸಿದ ನಂತರ ಉತ್ಸಾಹದಲ್ಲಿರುವ ಗುಜರಾತ್ ಮುಖ್ಯಮಂತ್ರಿ ಬಿಜೆಪಿಯ ಭೂಪೇಂದ್ರ ಪಟೇಲ್ ರಾಜ್ಯದಲ್ಲಿ ತಮ್ಮ ಪಕ್ಷಕ್ಕೆ ಸರಿಸಾಟಿಯಾಗಿ ಪ್ರತಿಸ್ಪರ್ಧಿಗಳೇ ಇಲ್ಲ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

    ರಾಜ್ಯದಲ್ಲಿ ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ನಿಚ್ಚಳ ಗೆಲುವು ದಾಖಲಿಸಲಿದೆ. 5 ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ 4 ರಾಜ್ಯಗಳನ್ನು ಗೆದ್ದುಕೊಂಡಿರುವ ಬಿಜೆಪಿ ಗುಜರಾತ್ ಮೇಲೆ ದೃಷ್ಟಿ ನೆಟ್ಟಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಘೋಷಿಸಿರುವ ಯೋಜನೆಗಳು ಸಮರ್ಥವಾಗಿ ಜನರನ್ನು ತಲುಪಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರದ ಜನಪರ ಕೆಲಸಗಳಿಂದಾಗಿ ಜನರು ಬಿಜೆಪಿ ಸರ್ಕಾರದ ಜೊತೆಗಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಶಂಕರಣ್ಣನ ಬಳಿ ಹೋಗಿ ಮದುವೆ ಆಗ್ತೀರಾ ಎಂದು ಕೇಳಿದ್ದ ಮೇಘನಾ

    ನಾವು ಅಭಿವೃದ್ಧಿ ಮಾಡಿದ್ದೇವೆ ಎಂಬುದು ಜನರಿಗೆ ಇದು ಚೆನ್ನಾಗಿ ತಿಳಿದಿದೆ. ಕೋವಿಡ್-19 ಸಾಂಕ್ರಾಮಿಕದ ಸಮಯವಾಗಲಿ ಅಥವಾ ಇತರ ತುರ್ತು ಸಮಸ್ಯೆಗಳಾಗಲಿ, ಜನರೊಂದಿಗೆ ನಿಂತ ಏಕೈಕ ಪಕ್ಷ ಬಿಜೆಪಿ. ವಾಸ್ತವವೆಂದರೆ ನಾವು ಯಾವುದೇ ಸವಾಲನ್ನು ನಿರೀಕ್ಷಿಸುವುದಿಲ್ಲ. ನಾವು ಕೆಲಸ ಮಾಡುವಾಗ, ಚುನಾವಣಾ ಫಲಿತಾಂಶಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

    bhupendra patel gujarat chief minister

    2021 ರಲ್ಲಿ ನಾನು ಸಿಎಂ ಆಗಿ ಅಧಿಕಾರ ವಹಿಸಿಕೊಂಡಾಗ, ಗಾಂಧಿನಗರ ಮುನ್ಸಿಪಲ್ ಕಾರ್ಪೋರೆಷನ್‌  ಚುನಾವಣೆಯಲ್ಲಿ ಎಎಪಿ ಗೆಲ್ಲುತ್ತದೆ ಎಂದು ಊಹಿಸಲಾಗಿತ್ತು. ಆದರೆ ಆಗ ಏನಾಯಿತು? 44 ಸ್ಥಾನಗಳಲ್ಲಿ ಬಿಜೆಪಿ 41 ಸ್ಥಾನಗಳನ್ನು ಗೆದ್ದಿದೆ. ಅದು ನಾವು ಜನರಿಗಾಗಿ ಮಾಡಿದ ಕೆಲಸಗಳ ಫಲ. ಪ್ರಜಾಪ್ರಭುತ್ವದಲ್ಲಿ, ಯಾವುದೇ ಪಕ್ಷವು ಚುನಾವಣೆಯಲ್ಲಿ ಹೋರಾಡಲು ಎಲ್ಲಿ ಬೇಕಾದರೂ ಹೋಗಬಹುದು. ಆದರೆ ರಾಜ್ಯದ ಜನರ ಸಾಮೂಹಿಕ ಬುದ್ಧಿವಂತಿಕೆಯು ಫಲಿತಾಂಶಗಳನ್ನು ನಿರ್ಧರಿಸುತ್ತದೆ ಎಂದಿದ್ಧಾರೆ.