Tag: ಭೇಟಿ

  • ದೀಪಕ್ ರಾವ್ ಮನೆಗೆ ಎಚ್‍ಡಿಡಿ ಭೇಟಿ-ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಮಾಜಿ ಪ್ರಧಾನಿ

    ದೀಪಕ್ ರಾವ್ ಮನೆಗೆ ಎಚ್‍ಡಿಡಿ ಭೇಟಿ-ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಮಾಜಿ ಪ್ರಧಾನಿ

    ಮಂಗಳೂರು: ಕಾಟಿಪಳ್ಳದಲ್ಲಿ ಜನವರಿ 3 ರಂದು ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಮನೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಇಂದು ಭೇಟಿ ನೀಡಿದರು.

    ಮಂಗಳೂರಿನ ಕಾಟಿಪಳ್ಳದಲ್ಲಿರುವ ಮನೆಯಲ್ಲಿ ದೀಪಕ್ ರಾವ್ ಅವರ ತಾಯಿ ಪ್ರೇಮಾರವರ ಪರಿಸ್ಥಿತಿ ಕಂಡು ದುಖಿಃತರಾದ ದೇವೇಗೌಡ ಅವರು, ದೀಪಕ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಎಚ್‍ಡಿಡಿ ಅವರಿಗೆ ಜೆಡಿಎಸ್ ಮುಖಂಡರಾದ ಬಿ.ಎಂ. ಫಾರೂಕ್, ಮಹಮ್ಮದ್ ಕುಂಞÂ ಸಾಥ್ ನೀಡಿದರು.

    ದೀಪಕ್ ಕೊಲೆಯಾದ ಬಳಿಕ ದುಷ್ಕರ್ಮಿಗಳಿಂದ ಹತ್ಯೆಯಾದ ಬಶೀರ್ ಅವರ ಮಂಗಳೂರಿನ ಆಕಾಶ ಭವನದಲ್ಲಿರುವ ಮನೆಗೂ ಎಚ್‍ಡಿಡಿ ನಾಳೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ.

  • ತನಗೆ ನೀಡಿದ ‘ಆ’ ವಿಶೇಷ ಸ್ವಾಗತಕ್ಕೆ ಶಿಷ್ಟಾಚಾರ ಬದಿಗಿರಿಸಿ ಮೋದಿಯಿಂದ ಇಸ್ರೇಲ್ ಪ್ರಧಾನಿಗೆ ಸ್ವಾಗತ

    ತನಗೆ ನೀಡಿದ ‘ಆ’ ವಿಶೇಷ ಸ್ವಾಗತಕ್ಕೆ ಶಿಷ್ಟಾಚಾರ ಬದಿಗಿರಿಸಿ ಮೋದಿಯಿಂದ ಇಸ್ರೇಲ್ ಪ್ರಧಾನಿಗೆ ಸ್ವಾಗತ

    ನವದೆಹಲಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾರತಕ್ಕೆ ಆಗಮಿಸಿದ್ದು, 15 ವರ್ಷಗಳ ಬಳಿಕ ಇಸ್ರೇಲ್ ಪ್ರಧಾನಿಯೊಬ್ಬರು ಭಾರತಕ್ಕೆ ಆಗಮಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಶಿಷ್ಟಾಚಾರ ಬದಿಗಿರಿಸಿ ವಿಮಾನ ನಿಲ್ದಾಣಕ್ಕೆ ತೆರಳಿ ಬೆಂಜಮಿನ್ ಅವರಿಗೆ ಸ್ವಾಗತ ಕೋರಿದ್ದಾರೆ.

    ಈ ಕುರಿತು ಟ್ವಿಟ್ಟರ್ ನಲ್ಲಿ ಸಂತಸ ವ್ಯಕ್ತಪಡಿಸಿರುವ ಮೋದಿ ಅವರು, ನನ್ನ ಆತ್ಮೀಯ ಗೆಳೆಯನಿಗೆ ಭಾರತಕ್ಕೆ ಸ್ವಾಗತ, ನಿಮ್ಮ ಭೇಟಿ ಐತಿಹಾಸಿಕವಾದದ್ದು, ನಮ್ಮ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

    ಇಸ್ರೇಲ್ ಗೆ ಪ್ರಧಾನಿ ನರೇಂದ್ರ ಮೋದಿ ಜುಲೈ ನಲ್ಲಿ ಭೇಟಿ ನೀಡಿದ್ದಾಗ ಇಸ್ರೇಲ್ ಪ್ರಧಾನಿ ನೆತನ್ಯಾಹು ಸಹ ಶಿಷ್ಟಾಚಾರ ಬದಿಗಿರಿಸಿ ನಮ್ಮ ಪ್ರಧಾನಿಯನ್ನು ಟೆಲ್ ಅವೀವ್‍ ವಿಮಾನ ನಿಮಾನ ನಿಲ್ದಾಣಕ್ಕೆ ತೆರಳಿ ಸ್ವಾಗತಿಸಿದ್ದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಧರ್ಮ ಗುರು ಪೋಪ್ ಅವರಿಗೆ ಈ ಸ್ವಾಗ ನೀಡಿದ್ದರು. ಇಸ್ರೇಲ್ ಪ್ರಧಾನಿಯಿಂದ ಈ ವಿಶೇಷ ಸ್ವಾಗತ ಪಡೆದ ಮೂರನೇ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದರು.

    ಆರು ದಿನಗಳ ಭಾರತದ ಭೇಟಿಗೆ ಆಗಮಿಸುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅವರ ಪತ್ನಿ ಅವರಿಗೆ ಪ್ರಧಾನಿ ಮೋದಿ ರಾತ್ರಿ ಔತಣ ಕೂಟ ಏರ್ಪಡಿಸಿದ್ದಾರೆ. ಅಲ್ಲದೇ ಇಸ್ರೇಲ್ ಪ್ರಧಾನಿ ತಾಜ್ ಮಹಲ್ ಗೂ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಇಸ್ರೇಲ್ ಪ್ರಧಾನಿ ಬೆಂಜಮಿನ್ ಭಾರತಕ್ಕೆ ಆಗಮಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಷ್ಟ್ರಪತಿ ಭವನದ ಮುಂದೆ ಅಧಿಕೃತ ಸ್ವಾಗತ ಕಾರ್ಯಕ್ರಮ ನಡೆಯಿತು. ನಂತರ ಅವರು ತೀನ್ ಮೂರ್ತಿ ಸ್ಮಾರಕಕ್ಕೆ ಭೇಟಿ ನೀಡಿದರು. 100 ವರ್ಷಗಳ ಹಿಂದೆ ಭಾರತದ ಮೂರು ರೆಜಿಮೆಂಟ್ ಗಳು ಹೈಫಾ ಯುದ್ಧದಲ್ಲಿ ಭಾಗವಹಿಸಿದ್ದ ಸ್ಮರಣೆಗಾಗಿ ಈ ಸ್ಮಾರಕ ನಿರ್ಮಿಸಲಾಗಿದೆ. ಅಲ್ಲದೇ ಈ ವೇಳೆ ತೀನ್ ಮೂರ್ತಿ ಮಾರ್ಗ್ ಚೌಕಕ್ಕೆ ತೀನ್ ಮೂರ್ತಿ ಹೈಫಾ ಚೌಕ್ ಎಂದು ಮರುನಾಮಕರಣ ಮಾಡಲಾಯಿತು. ಇದನ್ನೂ ಓದಿ: ಟ್ರಂಪ್, ಪೋಪ್ ಬಳಿಕ ಇಸ್ರೇಲಿನಲ್ಲಿ ಮೋದಿಗೆ ಸಿಕ್ತು ‘ಆ’ ವಿಶೇಷ ಸ್ವಾಗತ: ವಿಡಿಯೋ ನೋಡಿ

    ಈ ಸ್ಮಾರಕದಲ್ಲಿ ಸ್ಥಾಪನೆ ಮಾಡಲಾಗಿರುವ ಮೂರು ಕಂಚಿನ ಪ್ರತಿಮೆಗಳು ಮೈಸೂರು, ಹೈದರಾಬಾದ್ ಮತ್ತು ಜೋಧ್ಪುರ್ ಪಡೆಗಳನ್ನು ಪ್ರತಿನಿಧಿಸುತ್ತವೆ. ಮೊದಲ ವಿಶ್ವ ಯುದ್ಧ ಸಮಯದಲ್ಲಿ ಇಸ್ರೇಲ್ ನ ಹೈಫಾ ನಗರವನ್ನು 1918, ಸೆಪ್ಟೆಂಬರ್ 23 ಬ್ರಿಟಿಷ್ ಒಕ್ಕೂಟ ಸೈನ್ಯ ಜಯಿಸಿತ್ತು. ಈ ಯುದ್ಧದಲ್ಲಿ ಭಾರತೀಯ ಸೈನಿಕರ ತೋರಿದ ಸಾಧನೆಯ ನೆನಪಿಗಾಗಿ ಈ ಸ್ಮಾರಕವನ್ನು ನಿರ್ಮಾಣ ಮಾಡಲಾಗಿತ್ತು. ಹೈಫಾ ನಗರವನ್ನು ವಿಮೋಚನೆ ಮಾಡುವ ಸಮರದಲ್ಲಿ ಭಾರತದ 44 ಸೈನಿಕರು ತಮ್ಮ ಜೀವವನ್ನು ತ್ಯಾಗ ಮಾಡಿದ್ದರು.

    ಪ್ರಧಾನಿ ಮೋದಿ ಶಿಷ್ಟಾಚಾರ ಉಲ್ಲಂಘಿಸುವುದು ಇದೇ ಮೊದಲೆನಲ್ಲ. ಈ ಹಿಂದೆ 2015ರ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಭಾರತಕ್ಕೆ ಆಗಮಿಸಿದ್ದ ವೇಳೆ ಮೋದಿ ವಿಮಾನ ನಿಲ್ದಾಣಕ್ಕೆ ಹೋಗಿ ಅವರನ್ನು ಸ್ವಾಗತಿಸಿದ್ದರು. ಇದಾದ ಬಳಿಕ ಬುಲೆಟ್ ರೈಲು ಯೋಜನೆ ಶಂಕುಸ್ಥಾಪನೆಗೆ ಆಗಮಿಸಿದ್ದ ಜಪಾನ್ ಪ್ರಧಾನಿ ಶಿಂಜೊ ಅಬೆ ಅವರನ್ನು 2017ರ ಸೆಪ್ಟೆಂಬರ್ ನಲ್ಲಿ ಮೋದಿ ಗುಜರಾತ್ ನ ಅಹಮದಬಾದ್ ವಿಮಾನ ನಿಲ್ದಾಣಕ್ಕೆ ತೆರಳಿ ಸ್ವಾಗತ ಕೋರಿದ್ದರು.

    ಭಾರತಕ್ಕೆ ಭೇಟಿ ನೀಡುತ್ತಿರುವ ಎರಡನೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಗಿದ್ದು, ಈ ಹಿಂದೆ 2003ರಲ್ಲಿ ಏರಿಯಲ್ ಶರೋನ್ ಭಾರತ ಪ್ರವಾಸ ಕೈಗೊಂಡಿದ್ದರು.

  • ಜೆಡಿಎಸ್ ಮುಖಂಡ ಎಂಸಿ ನಾಣಯ್ಯ ಕಾಂಗ್ರೆಸ್ ಸೇರ್ತಾರಾ? – ಸಿಎಂ ಭೇಟಿ ವೇಳೆ ಆಗಿದ್ದೇನು?

    ಜೆಡಿಎಸ್ ಮುಖಂಡ ಎಂಸಿ ನಾಣಯ್ಯ ಕಾಂಗ್ರೆಸ್ ಸೇರ್ತಾರಾ? – ಸಿಎಂ ಭೇಟಿ ವೇಳೆ ಆಗಿದ್ದೇನು?

    ಮಡಿಕೇರಿ: ಜೆಡಿಎಸ್ ಮುಖಂಡ, ಮಾಜಿ ಸಚಿವ ಎಂಸಿ ನಾಣಯ್ಯ ಕಾಂಗ್ರೆಸ್ ಪಕ್ಷ ಸೇರ್ತಾರಾ…? ಸಿದ್ದರಾಮಯ್ಯ ಅವರು ಕೊಡಗು ಜಿಲ್ಲಾ ಪ್ರವಾಸಕ್ಕೆ ಬರುತ್ತಾರೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಅವರು ನಾಣಯ್ಯ ಅವರನ್ನು ಭೇಟಿಯಾಗುತ್ತಾರೆ ಎಂಬ ಸುದ್ದಿಯಿತ್ತು. ಆದರೆ ಇಂದು ಸಿಎಂ ಸಿದ್ದರಾಮಯ್ಯ ಉಡುಪಿಯಿಂದ ಮಡಿಕೇರಿಗೆ ಆಗಮಿಸಿದವರೇ ನೇರವಾಗಿ ನಾಣಯ್ಯ ಅವರ ಮನೆಗೆ ಭೇಟಿ ನೀಡಿದ್ದಾರೆ. ಈ ಭೇಟಿ ಬಳಿಕ ನಾಣಯ್ಯ ಅವರು ಹೇಳಿದ ಮಾತಿನ ಧಾಟಿ ನೋಡಿದರೆ ಅವರು ಪಕ್ಷ ಬಿಡುವ ಸಾಧ್ಯತೆ ಬಹುತೇಕ ಹೆಚ್ಚಾದಂತಿದೆ.

    ಉಡುಪಿಯ ಉಪ್ಪೂರಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಬಳಿಕ ನೇರವಾಗಿ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಮೂಲಕ ಕೊಡಗಿಗೆ ಆಗಮಿಸಿದರು. ಬಳಿಕ ಎಂಸಿ ನಾಣಯ್ಯ ಅವರ ಮನೆಗೆ ಭೇಟಿ ನೀಡಿ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದರು.

    ಭೇಟಿ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಎಂಸಿ ನಾಣಯ್ಯ ನನಗೆ ತುಂಬಾ ಆಪ್ತರು, ಅವರ ಆರೋಗ್ಯ ವಿಚಾರಿಸಲು ಬಂದಿದ್ದೇನೆ ಅಷ್ಟೇ. ಅವರನ್ನು ಜೆಡಿಎಸ್ ಸರಿಯಾಗಿ ಬಳಸಿಕೊಂಡಿಲ್ಲ, ಇದು ರಾಜಕೀಯ ಭೇಟಿ ಅಲ್ಲ. ಅವರನ್ನು ನಾನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿಲ್ಲ ಎಂದರು.

    ಆದರೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಎಂಸಿ ನಾಣಯ್ಯ, ನನ್ನ ಆರೋಗ್ಯ ವಿಚಾರಿಸಲು ಸಿದ್ದರಾಮಯ್ಯ ಬಂದಿದ್ದಕ್ಕೆ ನಾನು ಅವರಿಗೆ ಆಭಾರಿಯಾಗಿದ್ದೇನೆ. ರಾಜಕೀಯ ನಿಂತ ನೀರಲ್ಲ, ಅದು ಹರಿಯುತ್ತದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಜೆಡಿಎಸ್ ಪಕ್ಷ ತೊರೆಯುವ ಸೂಚನೆ ನೀಡಿದರು.

    ಇತ್ತೀಚೆಗೆ ಮಡಿಕೇರಿಯಲ್ಲಿ ಎಂಸಿ ನಾಣಯ್ಯ ಅವರು ಜೆಡಿಎಸ್ ಅತೃಪ್ತರ ಸಭೆ ನಡೆಸಿದ್ದು, ರಾಜ್ಯ ಜೆಡಿಎಸ್ ನಾಯಕರ ಮೇಲಿನ ತಮ್ಮ ಅತೃಪ್ತಿಯನ್ನು ಪ್ರದರ್ಶಿಸಿದರು. ಅಲ್ಲದೆ ಪಕ್ಷದ ಸಕ್ರಿಯ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಜನತಾದಳ ಸರ್ಕಾರ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಹಣಕಾಸು ಸಚಿವರಾಗಿದ್ದರು. ಇದೇ ವೇಳೆ ಎಂಸಿ ನಾಣಯ್ಯ ಅವರು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಅಂದಿನಿಂದಲೂ ಇಬ್ಬರ ನಡುವೆ ಉತ್ತಮ ಬಾಂಧವ್ಯವಿದೆ.

  • ಎಚ್‍ಡಿಕೆ ಬರೋವರೆಗೂ ಮದುವೆ ಆಗಲ್ಲ ಎಂದಿದ್ದ ಅಭಿಮಾನಿ ಮನೆಗೆ ಭೇಟಿ ಕೊಟ್ರು ಕುಮಾರಸ್ವಾಮಿ

    ಎಚ್‍ಡಿಕೆ ಬರೋವರೆಗೂ ಮದುವೆ ಆಗಲ್ಲ ಎಂದಿದ್ದ ಅಭಿಮಾನಿ ಮನೆಗೆ ಭೇಟಿ ಕೊಟ್ರು ಕುಮಾರಸ್ವಾಮಿ

    ಮಂಡ್ಯ: ಎಚ್‍ಡಿಕೆ ಬರೋವರೆಗೂ ಮದುವೆ ಆಗಲ್ಲ ಎಂದು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಅಭಿಮಾನಿ ಮನೆಗೆ ಭೇಟಿ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ನವ ದಂಪತಿಗಳಿಗೆ ಶುಭ ಹಾರೈಸಿದ್ದಾರೆ.

    ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಕ್ಕರೆಬೆಳ್ಳೂರಿ ಗ್ರಾಮದ ನಿವಾಸಿ ರವಿ ಎಚ್‍ಡಿಕೆ ಅವರ ಅಭಿಮಾನಿಯಾಗಿದ್ದು, ಡಿಸೆಂಬರ್ 1 ರಂದು ನಡೆಯುವ ತನ್ನ ಮದುವೆಗೆ ಎಚ್‍ಡಿಕೆ ಬರಬೇಕು ಎಂದು ಆಹ್ವಾನ ನೀಡಿದ್ದರು. ಆದರೆ ಕುಮಾರಸ್ವಾಮಿ ಮದುವೆಗೆ ಬರುವ ಭರವಸೆ ಕೊಡದ ಹಿನ್ನೆಲೆಯಲ್ಲಿ ಮದುವೆಯಾಗದೆ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದರು.

    ಪ್ರತಿಭಟನೆ ಮಾಹಿತಿ ತಿಳಿದು ರವಿ ಅವರೊಂದಿಗೆ ಮೊಬೈಲ್‍ನಲ್ಲಿ ಮಾತನಾಡಿದ್ದ ಎಚ್‍ಡಿಕೆ ಮದುವೆಯಾದ ನಂತರ ಬರುವುದಾಗಿ ಭರವಸೆ ನೀಡಿದ್ದರು. ಎಚ್‍ಡಿಕೆ ಭರವಸೆ ಹಿನ್ನಲೆಯಲ್ಲಿ ಉಪವಾಸ ಸತ್ಯಾಗ್ರಹ ಬಿಟ್ಟು ಮದುವೆಯಾಗಿದ್ದ ರವಿ ಅವರ ಮನೆಗೆ ಇಂದು ಕುಮಾರಸ್ವಾಮಿ ಭೇಟಿ ನೀಡಿದ್ದರು.

    ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪಕ್ಷದ ನಿಷ್ಠಾವಂತ ಕಾರ್ಯಕರ್ತರು ತಮ್ಮ ಕುಟುಂಬದ ಕಾರ್ಯಕ್ರಮಕ್ಕೆ ಬರಬೇಕೆಂದು ಹಠ ಮಾಡುತ್ತಾರೆ. ಅವರ ಅಭಿಮಾನ, ಪ್ರೀತಿಗೆ ಬೆಲೆಕಟ್ಟಲು ಸಾಧ್ಯವಿಲ್ಲ. ನನ್ನ ಇಕ್ಕಟ್ಟಿನ ಪರಿಸ್ಥಿತಿ. ಒತ್ತಡದ ನಡುವೆ ಕಾರ್ಯಕ್ರಮಕ್ಕೆ ಬರಬೇಕೆಂದು ಹೇಳಿದರೆ ನಾನು ಬೇರೆ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಬೆಳಗ್ಗೆಯಿಂದ ಸಂಜೆವರೆಗೂ ಕಾರ್ಯಕ್ರಮಕ್ಕೆ ಹೋಗಬೇಕಾಗುತ್ತದೆ. ಹಿಂದೊಮ್ಮೆ ದಿನಕ್ಕೆ 53 ಮದುವೆ ಹೋಗಿದ್ದೆ. ಆದರೆ ಈ ಒತ್ತಡದ ನಡುವೆ ನನಗೆ ಕಷ್ಟವಾದರೂ ಬಂದಿದ್ದೇನೆ. ಅದ್ದರಿಂದ ಅಭಿಮಾನಿಗಳು, ಕಾರ್ಯಕರ್ತರು ಒತ್ತಡ ಹಾಕಬೇಡಿ. ಯಾವುದಾದರೂ ಸಮಯ ಬಿಡುವಿದ್ದಾಗ ಮನೆಗೆ ಭೇಟಿ ನೀಡಿ ಶುಭ ಹಾರೈಸುತ್ತೇನೆ ಎಂದು ಅಭಿಮಾನಿಗಳಲ್ಲಿ ಎಚ್‍ಡಿಕೆ ಮನವಿ ಮಾಡಿದರು.

  • ಧರ್ಮಸ್ಥಳದ ಬಳಿಕ ಬೆಂಗ್ಳೂರಿಗೆ ಪ್ರಧಾನಿ- ಮೋದಿ ಬರೋ ರಸ್ತೆಯ ಗುಂಡಿಗಳೆಲ್ಲಾ ಮಾಯ

    ಧರ್ಮಸ್ಥಳದ ಬಳಿಕ ಬೆಂಗ್ಳೂರಿಗೆ ಪ್ರಧಾನಿ- ಮೋದಿ ಬರೋ ರಸ್ತೆಯ ಗುಂಡಿಗಳೆಲ್ಲಾ ಮಾಯ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದ್ರಿ ಅವರ ಕೃಪೆಯಿಂದ ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿಗಳೇ ಮಾಯವಾಗಿದ್ದು, ರಸ್ತೆಗಳೆಲ್ಲಾ ಥಳ ಥಳ ಎಂದು ಹೊಳೆಯುತ್ತಿವೆ.

    ರಸ್ತೆ ಗುಂಡಿಗಳಲ್ಲಿ ಬಿದ್ದು ಐವರು ಸತ್ತರೂ ತಲೆಕೆಡಿಸಿಕೊಳ್ಳಿಲ್ಲ. ಜನರು ಯಮಗುಂಡಿ ರಸ್ತೆಗಳನ್ನು ಮುಚ್ಚಿ ಅಂತಾ ಕೇಳಿಕೊಂಡರು ಸರ್ಕಾರಕ್ಕೆ ಕಾಳಜಿ ಇರಲಿಲ್ಲ. ಆದರೆ ಪ್ರಧಾನಿ ಮೋದಿ ಅವರು ನಗರಕ್ಕೆ ಭೇಟಿ ನೀಡುತ್ತಾರೆ ಎಂದು ಒಂದೇ ದಿನದಲ್ಲಿ ಯಮಗುಂಡಿಗಳಂತಹ ರಸ್ತೆಗಳೆಲ್ಲವನ್ನು ರಿಪೇರಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಮೋದಿ ಅವರು ಬರುವ ರಸ್ತೆಗಳೆಲ್ಲಾ ಥಳ ಧಳ ಅಂತಾ ಹೊಳೆಯುತ್ತಿವೆ.

    ಪ್ರಧಾನಿ ಮೋದಿ ಹೆಚ್‍ಎಲ್‍ನಿಂದ ಪ್ಯಾಲೇಸ್ ಗ್ರೌಂಡ್‍ಗೆ ಬರಲಿದ್ದಾರೆ. ಹೀಗಾಗಿ ಎಂಜಿ ರೋಡ್, ಒಲ್ಡ್ ಟ್ರಿನಿಟಿ ರೋಡ್, ಡಿಕೆನ್ಸನ್ ರೋಡ್, ರಾಜಭವನ ರಸ್ತೆ, ಸ್ಯಾಂಕಿ ರೋಡ್‍ನಲ್ಲಿ ಇದ್ದಂತಹ ಯಮಗುಂಡಿಗಳು ಒಂದೇ ದಿನದಲ್ಲಿ ಮಾಯವಾಗಿವೆ.

    ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಆಗಮಿಸುತ್ತಿದ್ದು, ಮಂಜುನಾಥ ದೇವರಿಗೆ ಪೂಜೆಯನ್ನು ಸಲ್ಲಿಸಿ ನಂತರ ಮಧ್ಯಾಹ್ನ ಸುಮಾರು 3.30 ಕ್ಕೆ ಬೆಂಗಳೂರಿಗೆ ಬಜ್ಪೆಯಿಂದ ವಿಮಾನದ ಮೂಲಕ ಆಗಮಿಸುತ್ತಿದ್ದಾರೆ. ಬೆಂಗಳೂರಿಗೆ ಬಂದು ಅರಮನೆ ಮೈದಾನದಲ್ಲಿ ಏರ್ಪಡಿಸಿರುವ ಸೌಂದರ್ಯ ಲಹರಿ ಸಮರ್ಪಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

    ಲಹರಿ ಕಾರ್ಯಕ್ರಮವನ್ನು ಮುಗಿಸಿಕೊಂಡು ಸಂಜೆ ಸುಮಾರು 4.45 ಕ್ಕೆ ಬೆಂಗಳೂರಿನಿಂದ ಬೀದರ್ ಗೆ ಪ್ರಧಾನಿ ಮೋದಿ ಅವರು ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ಸಂಜೆ 5.10 ಕ್ಕೆ ಬೀದರ್-ಕಲಬುರಗಿ ರೈಲು ಲೋಕಾರ್ಪಣೆ ಮಾಡಲಿದ್ದಾರೆ. ಈ ಕಾರ್ಯಕ್ರಮ ಮುಗಿಸಿ ಸಂಜೆ 6.20 ಕ್ಕೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

     

  • ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ಜೊತೆ ಅನುಪಮಾ ಶೆಣೈ ಗೌಪ್ಯ ಮಾತುಕತೆ!

    ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ಜೊತೆ ಅನುಪಮಾ ಶೆಣೈ ಗೌಪ್ಯ ಮಾತುಕತೆ!

    ಬಳ್ಳಾರಿ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ ಮಾಡಿದ್ದ ಮಾಜಿ ಡಿವೈಎಸ್ಪಿ ಅಧಿಕಾರಿ ಅನುಪಮಾ ಶೆಣೈ ಇಂದು ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ರ ಜೊತೆ ಗೌಪ್ಯ ಮಾತುಕತೆ ನಡೆಸಿದ್ದಾರೆ.

    ಬಳ್ಳಾರಿಯ ಖಾಸಗಿ ಹೋಟೆಲ್‍ವೊಂದರಲ್ಲಿ ಭೇಟಿ ಕಾರ್ಯಕ್ರಮ ನಡೆದಿದ್ದು, ಶೆಣೈ ಅವರ ಮುಂದಿನ ರಾಜಕೀಯ ನಡೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

    ಕಳೆದ ಕೆಲ ದಿನಗಳ ಹಿಂದೆಯಷ್ಟೇ ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ ಮಾಡಿದ್ದ ಅನುಪಮಾ ಶೆಣೈ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಉತ್ಸುಕರಾಗಿದ್ದರು. ಆದರೆ ಬಿಜೆಪಿ ಪಕ್ಷದಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಹೀಗಾಗಿ ಇಂದು ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ಜೊತೆ ಅನುಪಮಾ ಶೆಣೈ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ. ಅಲ್ಲದೇ ಇಬ್ಬರು ನಾಯಕರು ಮಾಧ್ಯಮಗಳ ಕಣ್ಣು ತಪ್ಪಿಸಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

    ಈ ಹಿಂದೆ ಪೊಲೀಸ್ ಕೆಲಸ ಮಾಡುವಾಗ ನನ್ನ ಮೇಲೆ ರಾಜಕೀಯ ಪ್ರಯೋಗ ಮಾಡಿದ್ದರು, ಆದರೆ ಈಗ ರಾಜಕಾರಣಿಗಳ ಮೇಲೆ ಪೊಲೀಸ್ ಪ್ರಯೋಗ ಮಾಡೋಣ ಎಂದು ಶೆಣೈ ತಿಳಿಸಿದ್ದರು. ಅಲ್ಲದೇ ನಾನು ಯಾವುದೇ ರಾಜಕೀಯ ಪಕ್ಷದ ಜೊತೆ ಸೇರುವುದಿಲ್ಲ. ಎಲ್ಲ ಅಂದು ಕೊಂಡಂತೆ ಆದರೆ ಬಳ್ಳಾರಿಯಿಂದಲೇ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಅಲ್ಲೇ ನನಗೆ ಹೆಚ್ಚು ಜನರ ಬೆಂಬಲವಿದೆ. ಹಲವು ಪಕ್ಷಗಳ ಕೇಂದ್ರ ನಾಯಕರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ಜನರ ದನಿಯಾಗುವ ಯಾವ ಪಕ್ಷವು ಇಲ್ಲ ಎಂದು ಹೇಳಿದ್ದರು.

     

  • ಮನೆಗೆ ನಾಗ ಸಾಧುಗಳು ಬಂದು ಹೇಳಿದ್ದೇನು: ಬಿಎಸ್‍ವೈ ತಿಳಿಸಿದ್ರು

    ಮನೆಗೆ ನಾಗ ಸಾಧುಗಳು ಬಂದು ಹೇಳಿದ್ದೇನು: ಬಿಎಸ್‍ವೈ ತಿಳಿಸಿದ್ರು

    ಬೆಂಗಳೂರು: ನಾಗಸಾಧುಗಳು ನಮ್ಮನೆಗೆ ಭೇಟಿ ನೀಡಿ ಅರ್ಧಗಂಟೆಗಳ ಕಾಲ ನನ್ನ ಜೊತೆ ಮಾತುಕತೆ ನಡೆಸಿದರು. ಕೇಂದ್ರದ ಮೋದಿ ಆಡಳಿತದ ಬಗ್ಗೆ ಪ್ರಶಂಶೆ ವ್ಯಕ್ತಪಡಿಸಿ ಆಶಿರ್ವಾದ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸಾಧುಗಳ ಭೇಟಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಸಾಧುಗಳ ಭೇಟಿ ಬಗ್ಗೆ ಮಾಧ್ಯಮದವರಿಗೆ ಸ್ಪಷ್ಟನೆ ನೀಡಿ ಮಾತನಾಡಿದರು. ಸಾಮಾನ್ಯವಾಗಿ ನಾಗ ಸನ್ಯಾಸಿಗಳು ಯಾರ ಮನೆಗೂ ಹೋಗುವುದಿಲ್ಲ ಅದೂ ಅತೀ ಅಪರೂಪ. ಮೊನ್ನೆ ಇದ್ದಕ್ಕಿದ್ದ ಹಾಗೇ ನಮ್ಮ ಮನೆಗೆ ಸುಮಾರು 18 ಜನರ ನಾಗಾ ಸನ್ಯಾಸಿಗಳು ಗುಂಪು ಬಂದು ಅರ್ಧಗಂಟೆ ಕಾಯ್ದಿದ್ದಾರೆ, ನಾನು ದೇವನಹಳ್ಳಿಯಲ್ಲಿ ಬಿಜೆಪಿ ವಿಸ್ತಾರಕರ ಸಭೆಯಲ್ಲಿದ್ದೆ. ನಾಗಸಾಧುಗಳು ಮನೆಗೆ ಭೇಟಿ ನೀಡಿರುವ ವಿಷಯ ತಿಳಿಯುತ್ತಿದ್ದಂತೆ ಅಲ್ಲಿಂದ ನಾನು ಓಡಿ ಬಂದೆ. ಬಳಿಕ ಸಾಧುಗಳ ಜೊತೆ ಅರ್ಧಗಂಟೆಗಳ ಕಾಲ ರಾಜಕೀಯ ಬೆಳವಣಿಗೆ ಕುರಿತು ಮಾತುಕತೆ ನಡೆಸಿದರು ಎಂದು ತಿಳಿಸಿದರು.

    ಕೇಂದ್ರದಲ್ಲಿ ಮೋದಿ ಸರ್ಕಾರದ ಕಾರ್ಯವೈಖರಿ ಬಗ್ಗೆ ಪ್ರಶಂನೀಯ ಮಾತುಗಳನ್ನಾಡಿದರು. ಅಲ್ಲದೇ ಬರೋ ವಿಧಾನಸಭಾ ಚುನಾವಣೆಯಲ್ಲಿ ನೂರಕ್ಕೆ ನೂರು ಬಿಜೆಪಿ ಪಕ್ಷ ಆಡಳಿತಕ್ಕೆ ಬರುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ ಚುನಾವಣೆ ಆದ ಮೇಲೆ ಮತ್ತೊಮ್ಮೆ ನಾವೆಲ್ಲಾ ನಿಮ್ಮನೆಗೆ ಭೇಟಿ ನೀಡುತ್ತೇವೆ ಎಂದು ಹೇಳಿ ನಾಗಸಾಧುಗಳು ಆಶಿರ್ವಾದ ಮಾಡಿದ್ದಾರೆ ಎಂದರು.

    ಸಾಧುಗಳ ಆಶಿರ್ವಾದ ಅನಿರೀಕ್ಷಿತ, ನಮ್ಮ ಪೂರ್ವ ಜನ್ಮದ ಪುಣ್ಯಫಲ. ಹುಡುಕಿಕೊಂಡು ಹೋದರೂ ಸಿಗದ ಅಪರೂಪದ ವ್ಯಕ್ತಿಗಳು. ಅವರೇ ನೇರವಾಗಿ ನಮ್ಮ ಮನೆಗೆ ಬಂದು ಆಶಿರ್ವಾದ ಮಾಡಿ ಹೋಗಿದ್ದಾರೆ. ಇದು ನನ್ನ ಭಾಗ್ಯ ಎಂದು ಸಾಧುಗಳ ಭೇಟಿಯ ಬಗ್ಗೆ ಸ್ಪಷ್ಟಪಡಿಸಿದರು.

  • ಅಮಿತ್ ಶಾ ಮಂಗಳೂರು ಭೇಟಿ ರದ್ದಾಗಿದ್ದು ಯಾಕೆ?

    ಅಮಿತ್ ಶಾ ಮಂಗಳೂರು ಭೇಟಿ ರದ್ದಾಗಿದ್ದು ಯಾಕೆ?

    ಮಂಗಳೂರು: ಗುರುವಾರ ಮಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆಯಬೇಕಿದ್ದ ಕೋರ್ ಕಮಿಟಿ ಸಭೆ ರದ್ದಾಗಿದೆ.

    ಪ್ರಸ್ತುತ ಕೇರಳ ಭೇಟಿಯಲ್ಲಿರುವ ಅಮಿತ್ ಶಾ ಹೆಚ್ಚು ಸಭೆಗಳಲ್ಲಿ ಬ್ಯುಸಿ ಇದುರುವುದರಿಂದ ಮಂಗಳೂರು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮಂಗಳೂರಿಗೆ ಭೇಟಿ ರದ್ದಾಗಿರುವುದರಿಂಧ ಪಕ್ಷದ ಕೋರ್ ಕಮಿಟಿ ಸಭೆ ಮತ್ತು ಮಾಧ್ಯಮ ಉಸ್ತುವಾರಿ ಸಭೆಗಳು ಬೆಂಗಳೂರಿಗೆ ಶಿಫ್ಟ್ ಆಗಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯಾಧ್ಯಕ್ಷ ಬಿಎಸ್‍ವೈ ನಾಳೆ ಮಂಗಳೂರಿನಲ್ಲಿ ನಡೆಯಬೇಕಿದ್ದ ಬಿಜೆಪಿ ಅಮಿತ್ ಶಾ ಅವರೊಂದಿಗೆ ಎಲ್ಲಾ ಸಭೆಗಳು ರದ್ದಾಗಿವೆ. ಪಕ್ಷದ ಪ್ರಣಾಳಿಕೆ ಸಮಿತಿ ಸಭೆ, ಚುನಾವಣೆ ಪ್ರಚಾರ ಸಮಿತಿ, ಕೋರ್ ಕಮಿಟಿ ಸಭೆಗಳು ಮಂಗಳೂರಿಗೆ ಬದಲಾಗಿ ಬೆಂಗಳೂರಿನಲ್ಲೇ ನಡೆಯಲಿವೆ ಎಂದು ತಿಳಿಸಿದರು.

    ನಾನು ಬೆಂಗಳೂರಿಗೆ ಬಂದು ಹೋದ ಬಳಿಕ ಪಕ್ಷ ಸಂಘಟನೆ ಸಂಪೂರ್ಣ ವರದಿಯನ್ನು ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆ. ಈ ವೇಳೆ ಎರಡು ತಿಂಗಳ ಪಕ್ಷ ಸಂಘಟನೆ ವರದಿ ಕೊಡಿ, ವಿಸ್ತಾರಕರು ಏನು ಕೆಲಸ ಮಾಡಿದ್ದಾರೆ ಎನ್ನುವ ಮಾಹಿತಿಯನ್ನು ನೀಡಿ ಎಂದು ಸೂಚಿಸಿದ್ದಾರೆ. ನಾನು ಮೂರು ದಿನಗಳ ಭೇಟಿ ವೇಳೆ ಕೊಟ್ಟಿದ್ದ ಸಲಹೆ ಮತ್ತು ನಿರ್ದೇಶನಗಳು ಎಷ್ಟು ಅನುಷ್ಠಾನ ಆಗಿದೆ ಇದರ ಬಗ್ಗೆ ವಿವರ ನೀಡುವಂತೆ ಅಮಿತ್ ಶಾ ತಾಕೀತು ಮಾಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

  • ವಾರಣಾಸಿ ನಾಗ ಸಾಧುಗಳಿಂದ ಆಶೀರ್ವಾದ ಪಡೆದ ಬಿಎಸ್‍ವೈ

    ವಾರಣಾಸಿ ನಾಗ ಸಾಧುಗಳಿಂದ ಆಶೀರ್ವಾದ ಪಡೆದ ಬಿಎಸ್‍ವೈ

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ನಾಗ ಸಾಧುಗಳ ಆಶೀರ್ವಾದ ಸಿಕ್ಕಿದೆ. ನವರಾತ್ರಿಯ ದಿನವಾದ ಸೆಪ್ಟಂಬರ್ 29ರಂದು ಬಿಎಸ್‍ವೈ ನಿವಾಸಕ್ಕೆ 9 ಮಂದಿ ನಾಗ ಸಾಧುಗಳು ಭೇಟಿಯಾಗಿದ್ದರು.

    ಬಿಎಸ್ ವೈ ನಿವಾಸದಲ್ಲಿ 20 ನಿಮಿಷಗಳ ಕಾಲ ಸಮಯ ಕಳೆದ ಸಾಧುಗಳು ಬಿಎಸ್‍ವೈಗೆ ಆಶೀರ್ವಾದ ಮಾಡಿದ್ರು ಎನ್ನಲಾಗಿದೆ. ಬಿಎಸ್‍ವೈ ಕಾಣಲು ಬಂದಿದ್ದೇವೆ, ವಾರಣಾಸಿ ಕಾಡಿನಿಂದ ಬಂದಿದ್ದೇವೆ ಅಂತೇಳಿ ಮನೆಯಲ್ಲಿ ಬಂದು ಕುಳಿತಿದ್ರಂತೆ. ಹೊರಗೆ ಹೋಗಿದ್ದ ಬಿಎಸ್‍ವೈ ತಕ್ಷಣ ಮನೆಗೆ ಆಗಮಿಸಿ ನಾಗ ಸಾಧುಗಳನ್ನ ಮಾತನಾಡಿಸಿ ಆಶೀರ್ವಾದ ಪಡೆದ್ರಂತೆ. ಅಲ್ಲದೆ ಇವತ್ತು ಮತ್ತೇ ಬಿಎಸ್‍ವೈ ನಿವಾಸಕ್ಕೆ ಆಗಮಿಸಿದ ನಾಗ ಸಾಧುಗಳು ಮತ್ತೊಮ್ಮೆ ಆಶೀರ್ವಾದ ಪಡೆದ್ರು ಎನ್ನಲಾಗಿದೆ.

    ಒಂದೇ ವಾರದಲ್ಲಿ ಎರಡು ದಿನ ನಾಗ ಸಾಧುಗಳು ಬಿಎಸ್‍ವೈ ಅವರನ್ನು ಭೇಟಿ ಮಾಡಿರೋದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ನಾಗ ಸಾಧುಗಳನ್ನ ಸತ್ಕರಿಸಿದ ಬಿಎಸ್‍ವೈ ಮುಂದಿನ ಭವಿಷ್ಯಕ್ಕೆ ಆಶೀರ್ವಾದ ಕೇಳಿದ್ರು ಎನ್ನಲಾಗಿದೆ. ನೀವು ಮುಂದಿನ ಸಿಎಂ ಆಗಿ, ನಿಮಗೆ ಯಾವುದೇ ಅಡೆತಡೆ ಬಾರದಿರಲಿ ಅಂತಾ ನಾಗ ಸಾಧುಗಳು ಆಶೀರ್ವಾದ ನೀಡಿದ್ರಂತೆ.

  • ಶೀಘ್ರವೇ ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ ಯಶವಂತ್ ಸಿನ್ಹಾ

    ಶೀಘ್ರವೇ ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ ಯಶವಂತ್ ಸಿನ್ಹಾ

    ನವದೆಹಲಿ: ಕೇಂದ್ರ ಬಿಜೆಪಿ ಸರ್ಕಾರದ ಆರ್ಥಿಕ ನೀತಿಯನ್ನು ಟೀಕಿಸಿ ಪತ್ರಿಕೆಯೊಂದರಲ್ಲಿ ಲೇಖನ ಬರೆದಿದ್ದ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಶೀಘ್ರದಲ್ಲಿಯೇ ಪ್ರಧಾನಿ ಮೋದಿಯವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.

    ಬಿಜೆಪಿಯ ವಿರುದ್ಧ ಟೀಕೆಯ ಸಂದರ್ಭದಲ್ಲಿ ಸಿನ್ಹಾ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು 1 ವರ್ಷದ ಹಿಂದೆಯೇ ನಾನು ಸಮಯವನ್ನು ಕೇಳಿದ್ದೆ, ಆದರೆ ಇದೂವರೆಗೂ ನನಗೆ ಭೇಟಿಯಾಗಲು ಸಮಯವನ್ನು ನೀಡಿಲ್ಲ ಎಂದು ಕಿಡಿಕಾರಿದ್ದರು. ಈ ಹಿನ್ನೆಲೆಯಲ್ಲಿ ಮೋದಿ ಹಾಗೂ ಸಿನ್ಹಾ ಅವರ ಭೇಟಿ ಹೆಚ್ಚು ಕುತೂಹಲಕಾರಿಯಾಗಿದೆ.

    ಆಕ್ಟೋಬರ್ 14 ರಂದು ಪಾಟ್ನಾ ವಿಶ್ವವಿದ್ಯಾಲಯದ ಶತಮಾನೋತ್ಸವ ಆಚರಣೆಯ ಸಮಾರಂಭ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯವರು ಭಾಗವಹಿಸಲಿದ್ದಾರೆ. ಇದೇ ಕಾರ್ಯಕ್ರಮಕ್ಕೆ ಸಿನ್ಹಾ ಅವರಿಗೂ ಆಹ್ವಾನವನ್ನು ನೀಡಲಾಗಿದೆ ಎಂದು ಪಾಟ್ನಾ ವಿವಿಯ ಉಪಕುಲಪತಿಗಳಾದ ರಾಸ್ ಬಿಹಾರಿ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಅಂದಹಾಗೇ ಸಿನ್ಹಾರವರು ಇದೇ ವಿವಿಯಿಂದ ತಮ್ಮ ರಾಜ್ಯಶಾಸ್ತ್ರ ವಿಭಾಗದಲ್ಲಿ ಪದವಿಯನ್ನು ಪಡೆದಿದ್ದು, ಬೋಧಕರಾಗಿಯು ಸೇವೆಸಲ್ಲಿದ್ದರು.

    ಈ ಕಾರ್ಯಕ್ರಮದಲ್ಲಿ ಸಿನ್ಹಾ ಭಾಗವಹಿಸುತ್ತಾರ ಅಥವಾ ಇಲ್ಲವೇ ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

    ಇದನ್ನೂ ಓದಿ: ಮೋದಿ ಸರ್ಕಾರವನ್ನು ಟೀಕಿಸಿದ್ರೂ ಯಶವಂತ್ ಸಿನ್ಹಾ ವಿರುದ್ಧ ಶಿಸ್ತು ಕ್ರಮ ಇಲ್ವಂತೆ ಯಾಕೆ? 

    ಕಳೆದ ಕೆಲವು ದಿನಗಳ ಹಿಂದೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಸಿನ್ಹಾ ಹಲವು ಆರೋಪಗಳನ್ನು ಮಾಡಿದ್ದರು. ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ನೇತೃತ್ವದಲ್ಲಿ ದೇಶದ ಅರ್ಥವ್ಯವಸ್ಥೆ ಹದಗೆಟ್ಟಿದೆ. ಹಣಕಾಸು ಸಚಿವರು ತಮ್ಮ ಕಾರ್ಯವನ್ನು ಉತ್ತಮವಾಗಿ ನಡೆಸುವಲ್ಲಿ ವಿಫಲರಾಗಿದ್ದಾರೆ. ಭಾರತ ಅರ್ಥಿಕ ವ್ಯವಸ್ಥೆ ಒತ್ತಡಕ್ಕೆ ಸಿಲುಕಿದ್ದು ಆಪಾರ ನಷ್ಟದಲ್ಲಿದೆ ಎಂದು ವಿಶ್ಲೇಷಿಸಿದ್ದರು.

    ಅಲ್ಲದೇ ಮೋದಿ ತಮ್ಮ ಸಚಿವ ಸಂಪುಟ ಸೇರ್ಪಡೆಗೆ ಸಚಿವರ ಗರಿಷ್ಠ ವಯೋಮಿತಿಯನ್ನು 75ಕ್ಕೆ ಸೀಮಿತಗೊಳಿಸಿದ್ದಕ್ಕೆ , ಈಗಿನ ಸರ್ಕಾರ 75 ದಾಟಿದವರನ್ನು “ಬ್ರೇನ್ ಡೆಡ್ ಎಂದು ಡಿಕ್ಲೇರ್ ಮಾಡಿದೆ”. ಅಲ್ಲದೇ ಹಲವು ಹಿರಿಯ ಬಿಜೆಪಿ ನಾಯಕರನ್ನು ಮೂಲೆ ಗುಂಪು ಮಾಡಿ `ಮಾರ್ಗದರ್ಶಕ ಮಂಡಳಿ’ಯ ಸದಸ್ಯರನ್ನಾಗಿ ನೇಮಿಸಿದ್ದಾರೆ ಎನ್ನುವ ಎಂದು ಲೇವಡಿ ಮಾಡಿದ್ದರು.

    ಇದನ್ನೂ ಓದಿ: ಒಂದು ಬಾರಿಯಾದ್ರೂ ದೇಶದ ಜನತೆಗೆ ಮೋದಿ ಉತ್ತರಿಸಲಿ: ಶತೃಘ್ನ ಸಿನ್ಹಾ