Tag: ಭೇಟಿ

  • ಯಶ್, ಪ್ರಭಾಸ್ ಭೇಟಿಯ ಸೀಕ್ರೆಟ್ ರಿವೀಲ್- ಅತೀ ದೊಡ್ಡ ಶೋನಲ್ಲಿ ನಟರು ಭಾಗಿ

    ಯಶ್, ಪ್ರಭಾಸ್ ಭೇಟಿಯ ಸೀಕ್ರೆಟ್ ರಿವೀಲ್- ಅತೀ ದೊಡ್ಡ ಶೋನಲ್ಲಿ ನಟರು ಭಾಗಿ

    ಮುಂಬೈ: ಬಾಹುಬಲಿ ಸೂಪರ್ ಸ್ಟಾರ್ ಪ್ರಭಾಸ್ ಹಾಗೂ ಕೆಜಿಎಫ್ ರಾಕಿ ಭಾಯ್ ಯಶ್ ಮುಂಬೈನಲ್ಲಿ ಭೇಟಿಯಾಗಿರುವ ಸೀಕ್ರೆಟ್ ಈಗ ರಿವೀಲ್ ಆಗಿದ್ದು, ರಾಜಾಹುಲಿ ಹಾಗೂ ಬಾಹುಬಲಿ ಅತೀ ದೊಡ್ಡ ಶೋವೊಂದರಲ್ಲಿ ಭಾಗಿಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

    ನಿರ್ದೇಶಕ ಕರಣ್ ಜೋಹರ್ ಇಂದು ಬೆಳಗ್ಗೆ ಟ್ವಿಟ್ಟರಿನಲ್ಲಿ, “ನಾನು ‘ಕಾಫಿ ವಿತ್ ಕರಣ್’ ಕಾರ್ಯಕ್ರಮ ನಡೆಸಿಕೊಡಲು ಹೋಗುತ್ತಿದ್ದೇನೆ. ಈ ಕಾರ್ಯಕ್ರಮ ನಡೆಸಿಕೊಡಲು ತುಂಬಾ ಹೆಮ್ಮೆಯಾಗುತ್ತಿದೆ. ಇಂದು ಹೆಮ್ಮೆಯ ಒಂದು ಕಾಫಿ ಯಾರೂ ಎಂದು ಗೆಸ್ ಮಾಡುತ್ತೀರಾ?” ಎಂದು ಟ್ವೀಟ್ ಮಾಡಿದರು.

    ಕರಣ್ ಜೋಹರ್ ಟ್ವೀಟಿಗೆ ಎಲ್ಲರೂ ಪ್ರಭಾಸ್, ರಾಜಾಮೌಳಿ ಹಾಗೂ ರಾಣಾ ಬರುತ್ತಾರೆ ಎಂದು ರೀ-ಟ್ವೀಟ್ ಮಾಡಿದರು. ಮತ್ತೆ ಕೆಲವರು ಪ್ರಭಾಸ್ ಹಾಗೂ ಯಶ್ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಗೆಸ್ ಮಾಡಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಬಾಹುಬಲಿ-ಕೆಜಿಎಫ್ ‘ರಾಕಿ ಭಾಯ್’ ಮುಂಬೈನಲ್ಲಿ ಭೇಟಿಯಾಗಿದ್ದೇಕೆ?

    https://twitter.com/karanjohar/status/1071233254055911424?ref_src=twsrc%5Etfw%7Ctwcamp%5Etweetembed%7Ctwterm%5E1071233254055911424&ref_url=http%3A%2F%2Fenglish.sakshi.com%2Fentertainment%2F2018%2F12%2F08%2Fbaahubali-prabhas-on-koffee-with-karan-opens-about-anushka-and-martial-status

    ಪ್ರಭಾಸ್ ಹಾಗೂ ಯಶ್ ಒಟ್ಟಿಗೆ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದು, ಇಬ್ಬರು ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾದರೆ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೊದಲ ಸೌತ್ ನಟರು ಯಶ್ ಹಾಗೂ ಪ್ರಭಾಸ್ ಆಗುತ್ತಾರೆ.

    ಮುಂಬೈನ ಪಾಲಿಭವನ್ ನಿಂದ ಹೊರಡುವಾಗ ಇಬ್ಬರು ನಟರೂ ಪರಸ್ಪರ ತಬ್ಬಿಕೊಂಡು ಬಾಯ್ ಹೇಳಿದ್ದಾರೆ. ಆ್ಯಕ್ಷನ್ ಸಿನಿಮಾದಿಂದ ಖ್ಯಾತಿಗೊಂಡ ಇಬ್ಬರನ್ನು ನೋಡಿ ಎಲ್ಲರಿಗೂ ಖುಷಿಯಾಗಿದೆ. ಇದೇ ವೇಳೆ ಇಬ್ಬರು ಸ್ಟಾರ್ ನಟರೂ ಯಾವುದೇ ಹಮ್ಮಿಲ್ಲದೆ ಫೋಟೋಗೆ ಪೋಸ್ ಕೊಟ್ಟು ಅಭಿಮಾನಿಗಳಿಗೆ ಖುಷಿ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಿಖಿಲ್ ಕುಮಾರಸ್ವಾಮಿಗೆ ಶೀಘ್ರವೇ ಕಂಕಣ ಭಾಗ್ಯ?

    ನಿಖಿಲ್ ಕುಮಾರಸ್ವಾಮಿಗೆ ಶೀಘ್ರವೇ ಕಂಕಣ ಭಾಗ್ಯ?

    ಚಿಕ್ಕಮಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಯ ಮದುವೆ ಬಗ್ಗೆ ಶೃಂಗೇರಿ ಶ್ರೀಗಳೊಂದಿಗೆ ಚರ್ಚೆ ನಡೆಸುತ್ತೇನೆಂದು ಹೇಳಿದ್ದಾರೆ.

    ಜಿಲ್ಲೆಯ ಸುಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬ ದೇವಾಲಯಕ್ಕೆ ಆಗಮಿಸಿರುವ ಎಚ್‍ಡಿಕೆ ಮಾಧ್ಯಮಗಳೊಂದಿಗೆ ಮಾತನಾಡಿ, ಗುರುಗಳ ಅಶೀರ್ವಾದ, ಶಾರದಾಂಬೆ ದರ್ಶನ ಪಡೆಯಲು ಬಂದಿದ್ದೇನೆ. ಕ್ಷೇತ್ರಕ್ಕೆ ಬಂದು ದೇವಿಯ ದರ್ಶನ, ಗುರುಗಳ ಆಶೀರ್ವಾದದಿಂದ ಹಲವಾರು ರೀತಿಯ ಸಮಸ್ಯೆಗಳಿಂದ ಪರಿಹಾರ ಕಂಡುಕೊಂಡಿದ್ದೇನೆ. ಎಲ್ಲಾ ಒಳ್ಳೆಯ ಕಾರ್ಯಕ್ಕೂ ಗುರುಗಳ ಆಶೀರ್ವಾದ ಇರಬೇಕು. ಹೀಗಾಗಿ ಮಗ ನಿಖಿಲ್ ಕುಮಾರಸ್ವಾಮಿಯ ಮದುವೆ ವಿಷಯವನ್ನೂ ಸಹ ಶ್ರೀಗಳ ಬಳಿ ಚರ್ಚೆ ನಡೆಸುತ್ತೇನೆ. ಇಂದಿನ ಭೇಟಿಯಲ್ಲಿ ಮದುವೆ ವಿಚಾರಕ್ಕೆ ಗುರುಗಳ ಆಶೀರ್ವಾದ ಪಡೆಯುವ ಉದ್ದೇಶವನ್ನು ಹೊಂದಿದ್ದೇನೆಂದು ಹೇಳಿದ್ದಾರೆ.

    ಈ ವೇಳೆ ಸುದ್ದಿಗಾರರು ಬಿಎಸ್‍ವೈ ಕೇರಳ ಭೇಟಿ ಹಿನ್ನೆಲೆ ಶೃಂಗೇರಿಗೆ ಭೇಟಿ ನೀಡಿದ್ದೀರಾ ಎಂದು ಪ್ರಶ್ನಿಸಿದಾಗ, ನಾವು ಕದ್ದು ಮುಚ್ಚಿ ವಾಮಾಚಾರ, ಯಾಗ ಮಾಡಿಸುವ ಪ್ರಶ್ನೆಯೇ ಇಲ್ಲ. ಆ ಉದ್ದೇಶದಿಂದ ಯಾಗ ನಡೆಸುತ್ತಿಲ್ಲ. ನಾವು ದೇವರನ್ನು ನಂಬಿದ್ದೇವೆ. ದೇವರ ಬಳಿ ಪ್ರಾರ್ಥನೆ ಮಾಡುತ್ತೇವೆ. ಈ ಬಾರಿಯ ಚಳಿಗಾಲದ ಅಧಿವೇಶನ ಸುಸೂತ್ರವಾಗಿ ನಡೆಯಬೇಕು. ಹೀಗಾಗಿ ತಾಯಿಯ ಆಶೀರ್ವಾದ ಪಡೆಯಲು ಬಂದಿದ್ದೇನೆ. ವಿಶೇಷ ಪೂಜೆ ಏನು ಇಲ್ಲ. ಶೃಂಗೇರಿ ಕ್ಷೇತ್ರಕ್ಕೂ ನಮ್ಮ ಕುಟುಂಬಕ್ಕೂ, ಹಿಂದಿನಿಂದಲೂ ಸಂಬಂಧ ಹಾಗೂ ನಂಬಿಕೆ ಇದೆ. ಕ್ಷೇತ್ರಕ್ಕೆ ಬಂದರೆ ಸಮಸ್ಯೆ ಬಗೆಹರಿಯುತ್ತದೆನ್ನುವ ನಂಬಿಕೆ ಇದೆ ಎಂದು ಹೇಳಿದರು.

    ಕಂಪ್ಲಿ ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾರು ಏನಾದರೂ ಹೇಳಿಕೆ ನೀಡಲು ಸ್ವಾತಂತ್ರ್ಯವಿದೆ. ಅದಕ್ಕೆ ಸುಮ್ಮನೆ ಯಾಕೆ ತಲೆ ಕೆಡಿಸಿಕೊಂಡಿದ್ದೀರೆಂದು ತಿಳಿಸಿದರು.

    ಶೃಂಗೇರಿಗೆ ಆಗಮಿಸುತ್ತಿದ್ದಂತೆ ಸಿಎಂ ನೇರವಾಗಿ ಶಾರದಾಂಬೆಯ ದರ್ಶನ ಪಡೆದುಕೊಂಡರು. ಬಳಿಕ ಶ್ರೀ ಮಠಕ್ಕೆ ತೆರಳಿ ಜಗದ್ಗುರು ಭಾರತೀತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಸಿಎಂ ಶುಕ್ರವಾರ ದೇವಾಲಯದಲ್ಲಿ ನಡೆಯುವ ಪ್ರತಿಶೂಲಿನಿ ಯಾಗದ ಪೂರ್ಣಾಹುತಿಯಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೇ ಚಳಿಗಾಲದ ಅಧಿವೇಶನ, ಆಪರೇಷನ್ ಕಮಲದ ಭೀತಿ ಹಾಗೂ ಸಚಿವ ಸಂಪುಟದ ಕಸರತ್ತು ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಿಎಂ ಕುಮಾರಸ್ವಾಮಿಯವರಿಗೆ ಪತ್ನಿ ಅನಿತಾ ಕುಮಾರಸ್ವಾಮಿ, ಸಚಿವ ರೇವಣ್ಣ, ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರೂ ಸಾಥ್ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

     

  • ಕೇಬಲ್ ಹಾಕಲು ಹೋದಾಗ ಲವ್ – ಪ್ರೇಯಸಿ ಭೇಟಿ ಆಗಲ್ಲ ಎಂದಿದ್ದಕ್ಕೆ 2 ಮಕ್ಳ ತಂದೆ ನೇಣಿಗೆ

    ಕೇಬಲ್ ಹಾಕಲು ಹೋದಾಗ ಲವ್ – ಪ್ರೇಯಸಿ ಭೇಟಿ ಆಗಲ್ಲ ಎಂದಿದ್ದಕ್ಕೆ 2 ಮಕ್ಳ ತಂದೆ ನೇಣಿಗೆ

    ನವದೆಹಲಿ: ವಿವಾಹಿತ ವ್ಯಕ್ತಿಯೊಬ್ಬ ತಾನು ಪ್ರೀತಿಸಿದ ಯುವತಿ ಭೇಟಿಯಾಗಲು ನಿರಾಕರಿಸಿದ್ದಕ್ಕೆ ನೇಣಿಗೆ ಶರಣಾಗಿರುವ ಘಟನೆ ದೆಹಲಿಯ ಟೈಗ್ರಿ ಪ್ರದೇಶದಲ್ಲಿ ನಡೆದಿದೆ.

    ದೆಹಲಿಯ ಟೈಗ್ರಿ ಪ್ರದೇಶದ ನಿವಾಸಿ ಲಕ್ಷ್ಮಿ ನಾರಾಯಣ್ (36) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ನಾರಾಯಣ್ ಸಂಗಮ್ ವಿಹಾರ್ ಆಫೀಸ್‍ನಲ್ಲಿ ಕೇಬಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದನು. 16 ವರ್ಷದ ಹಿಂದೆ ವಿವಾಹವಾಗಿದ್ದ ನಾರಾಯಣ್‍ಗೆ ಇಬ್ಬರು ಗಂಡು ಮಕ್ಕಳು ಇದ್ದಾರೆ. ಪತ್ನಿ ಇದ್ದರೂ ಬೇರೆ ಯುವತಿಯ ಸಹವಾಸ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಕೆಲ ತಿಂಗಳ ಹಿಂದೆ ನಾರಾಯಣ್ ಯುವತಿಯ ಮನೆಗೆ ಕೇಬಲ್ ಹಾಕಲು ಹೋಗಿದ್ದನು. ಆಗ ಯುವತಿ ಜೊತೆ ನಾರಾಯಣ್‍ಗೆ ಸ್ನೇಹವಾಗಿದೆ. ಯುವತಿ ಜೊತೆ ತುಂಬ ಸಲುಗೆ ಬೆಳಸಿಕೊಂಡಿದ್ದ ನಾರಾಯಣ್ ದಿನಾ ವಾಟ್ಸಾಪ್‍ನಲ್ಲಿ ಆಕೆ ಬಳಿ ಮಾತನಾಡುತ್ತಿದ್ದ. ಹೀಗೆ ಮಾತನಾಡುತ್ತ ಅವರಿಬ್ಬರ ಸ್ನೇಹ ಪ್ರೀತಿಗೆ ತಿರುಗಿದೆ. ಶನಿವಾರ ರಾತ್ರಿ ವೇಳೆ ನಾರಾಯಣ್ ಯುವತಿಯನ್ನು ಪ್ರೀತಿಸುತ್ತಿರುವ ವಿಷಯ ತಿಳಿಸಿ ಆಕೆಗೆ ಭೇಟಿ ಮಾಡಲು ಹೇಳಿದ್ದಾನೆ. ಆಗ ಯುವತಿ ಭೇಟಿಯಾಗಲು ನಿರಾಕರಿಸಿದ್ದಾಳೆ.

    ಯುವತಿಯ ಈ ನಿರ್ಧಾರದಿಂದ ಕೋಪಗೊಂಡ ನಾರಾಯಣ್ ತನ್ನ ಎದೆಯ ಮೇಲೆ ಚಾಕುವಿನಿಂದ ಕೆಲವು ಗಾಯವನ್ನು ಮಾಡಿಕೊಂಡು ಆಕೆಗೆ ಫೋಟೋ ಕಳುಹಿಸಿ ನೀನು ಭೇಟಿಯಾಗಿಲ್ಲ ಅಂದ್ರೆ ಸಾಯ್ತೀನಿ ಎಂದು ಹೆದರಿಸಿದ್ದಾನೆ. ಈ ವೇಳೆ ಅವರಿಬ್ಬರ ನಡುವೆ ಜಗಳ ಕೂಡ ನಡೆದಿದೆ. ಏನೇ ಮಾಡಿದರೂ ಯುವತಿ ಭೇಟಿಯಾಗಲು ಒಪ್ಪದ್ದಕ್ಕೆ ಮನನೊಂದ ನಾರಾಯಣ್ ತಾನು ಕೆಲಸ ಮಾಡುತ್ತಿದ್ದ ಆಫೀಸ್‍ನಲ್ಲಿ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಘಟನೆ ಕುರಿತು ಟೈಗ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಂಬಿಯನ್ನು ನೋಡಲು ಹೆಚ್ಚು ಮನೆಗೆ ಹೋಗುತ್ತಿದ್ರು ಸ್ಟಾರ್ ನಟ

    ಅಂಬಿಯನ್ನು ನೋಡಲು ಹೆಚ್ಚು ಮನೆಗೆ ಹೋಗುತ್ತಿದ್ರು ಸ್ಟಾರ್ ನಟ

    ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಅವರನ್ನು ನೋಡಲು ಚಾಲೆಂಜಿಗ್ ಸ್ಟಾರ್ ದರ್ಶನ್ ಹೆಚ್ಚು ಅವರ ಮನೆಗೆ ಹೋಗುತ್ತಿದ್ದರು.

    ಅಂಬರೀಶ್ ಅವರ ಮನೆಗೆ ತಾರೆಯರು ಆಗಾಗ ಹೋಗುತ್ತಿರುತ್ತಾರೆ. ಆದರೆ ಪ್ರಮುಖವಾಗಿ ದರ್ಶನ್ ಅವರು ಅತಿ ಹೆಚ್ಚು ಬಾರಿ ಅಂಬರೀಶ್ ಅವರ ಮನೆಗೆ ಹೋಗಿದ್ದಾರೆ. ಅವರನ್ನು ಹೊರತುಪಡಿಸಿ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಹೋಗುತ್ತಿದ್ದರು. ಅಲ್ಲದೇ ಮೋಹನ್ ಬಾಬು, ರಜನಿಕಾಂತ್, ಚಿರಂಜೀವಿ ಬೆಂಗಳೂರಿಗೆ ಬಂದಾಗ ಅವರ ಮನೆಗೆ ಭೇಟಿ ನೀಡುತ್ತಿದ್ದರು. ಆದರೆ ದರ್ಶನ್ ಅವರು ಬಿಡುವು ಇದ್ದಾಗಲೆಲ್ಲಾ ಅಂಬಿ ಮನೆಗೆ ಹೋಗುತ್ತಿದ್ದರು ಎಂದು ಅಂಬರೀಶ್ ಅವರ ಆಪ್ತರಾದ ಸೀನಣ್ಣ ಜೇಳಿದ್ದಾರೆ.

    ದರ್ಶನ್ ಅಂಬಿ ಮನೆಯಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದರು. ದರ್ಶನ್ ಅಂಬಿಯ ಮತ್ತೊಂದು ಮಗನಂತೆ ಇದ್ದರು. ಅಂಬಿ, ದರ್ಶನ್‍ಗೆ ಲೇ ಹುಷಾರಾಗಿರು. ಕೆಟ್ಟ ಕೆಲಸ ಮಾಡಬೇಡ ಹಾಗೂ ಕೆಟ್ಟವರ ಜೊತೆ ಸೇರಬೇಡ ಎಂದು ಹೇಳುತ್ತಿದ್ದರು. ಅಣ್ಣ ಅವರ ಮಗ ಅಭಿಷೇಕ್‍ಗೂ ಇದೇ ಮಾತು ಹೇಳುತ್ತಿದ್ದರು. ದರ್ಶನ್ ಅವರು ಕೂಡ ಅಣ್ಣನ ಯಾವುದೇ ಮಾತು ಇಲ್ಲ ಎಂದು ಹೇಳುತ್ತಿರಲಿಲ್ಲ. ಅದು ಸಿನಿಮಾಗೆ ಸಂಬಂಧಿಸಬಹುದು ಅಥವಾ ಅವರ ಖಾಸಗಿ ವಿಷಯಕ್ಕೆ ಸಂಬಂಧಿಸಬಹುದು. ದರ್ಶನ್ ಅವರ ಮಾತನ್ನು ಪಾಲಿಸುತ್ತಿದ್ದರು.

    ದರ್ಶನ್ ಶೂಟಿಂಗ್‍ನಲ್ಲಿ ಬ್ಯುಸಿಯಾಗಿ ಮನೆಗೆ ಬರಲು ಆಗದೇ ಇದ್ದಾಗ ಫೋನ್ ಮಾಡುತ್ತಿದ್ದನು. ಕೆಲವೊಮ್ಮೆ ನಾನು ಫೋನ್ ರಿಸೀವ್ ಮಾಡುತ್ತಿದ್ದೆ. ಆಗ ಅವರು ಮೊದಲು ಅಣ್ಣನಿಗೆ ಫೋನ್ ಕೊಡಿ ಎಂದು ಹೇಳಿ ಹೇಗಿದ್ದೀಯಾ ಅಣ್ಣ ಎಂದು ಕೇಳುತ್ತಿದ್ದರು. ಆಗ ಅವರು ‘ನಾನು ಚೆನ್ನಾಗೇ ಇದ್ದೀನಿ. ನನಗೆ ಏನಾಗಿದೆ. ನೀನ್ ಹೇಗೆ ಇದ್ದೀಯಾ. ಎಲ್ಲಿಇದ್ದಿಯಾ ಎಂದು ಕೇಳಿತ್ತಿದ್ದರು. ಹೀಗೆ ಅವರಿಬ್ಬರ ಮಾತು ಶುರುವಾಗುತ್ತಿತ್ತು ಎಂದು ಸೀನಣ್ಣ ತಿಳಿಸಿದ್ದಾರೆ.

    ಸದ್ಯ ಅಂಬಿ ನಿಧನರಾಗಿದ್ದಾಗ ದರ್ಶನ್ ಸ್ವೀಡನ್‍ನಲ್ಲಿ ಯಜಮಾನ ಚಿತ್ರದ ಶೂಟಿಂಗ್‍ನಲ್ಲಿದ್ದರು. ನಂತರ ಅಂಬಿ ಅವರ ನಿಧನ ಸುದ್ದಿ ಕೇಳಿ ದರ್ಶನ್ ವಿದೇಶದಲ್ಲಿ ಶೂಟಿಂಗ್ ತಮ್ಮ ಚಿತ್ರದ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಲ್ಯಾಂಡ್ ಆಗಿದರು. ಎಚ್‍ಎಎಲ್ ವಿಮಾನ ನಿಲ್ದಾಣದಿಂದ ಕಂಠೀರವ ಸ್ಟೇಡಿಯಂಗೆ ಅಂಬುಲೆನ್ಸ್ ಮೂಲಕ ಮೃತ ಶರೀರ ಬಂದ ಬಳಿಕ ದರ್ಶನ್ ಅಂಬಿ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಅಂಬಿ ಮೃತದೇಹಕ್ಕೆ ದರ್ಶನ್ ಹೆಗಲು ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೋದಿ ಭೇಟಿ ಮಾಡಿ ಕುತೂಹಲ ಮೂಡಿಸಿದ ಜಡೇಜಾ ದಂಪತಿ

    ಮೋದಿ ಭೇಟಿ ಮಾಡಿ ಕುತೂಹಲ ಮೂಡಿಸಿದ ಜಡೇಜಾ ದಂಪತಿ

    ನವದೆಹಲಿ: ಟೀಂ ಇಂಡಿಯಾ ಆಲ್‍ರೌಂಡರ್ ರವೀಂದ್ರ ಜಡೇಜಾ ಪತ್ನಿ ಸಮೇತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

    ಆಸೀಸ್ ಟೂರ್ನಿಯ ಪ್ರವಾಸದ ಸಿದ್ಧತೆಯಲ್ಲಿರುವ ಜಡೇಜಾ ಮಂಗಳವಾರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಕೂಡ ಟ್ವೀಟ್ ಮಾಡಿ ಜಡೇಜಾ ಹಾಗೂ ರಿವಾಬಾ ಸೋಲಂಕಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

    ಮೋದಿ ಅವರ ಭೇಟಿಯ ಫೋಟೋವನ್ನು ರವೀಂದ್ರ ಜಡೇಜಾ ಕೂಡ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು ಹೆಮ್ಮೆಯ ವಿಚಾರವಾಗಿದೆ ಎಂದು ತಿಳಿಸಿದ್ದಾರೆ. ಈ ವೇಳೆ ಪುಷ್ಪಗುಚ್ಛ ನೀಡಿ ಶುಭಾಶಯ ತಿಳಿಸಿದ್ದಾರೆ.

    ಏಷ್ಯಾಕಪ್ ಟೂರ್ನಿಯಲ್ಲಿ ತಂಡಕ್ಕೆ ಕಮ್‍ಬ್ಯಾಕ್ ಮಾಡಿದ್ದ ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ನೀಡಿದ್ದರು. ಆದರೆ ಆಸೀಸ್ ವಿರುದ್ಧದ ಸಿಮೀತ ಓವರ್‍ಗಳ ಪಂದ್ಯಗಳ ಟೂರ್ನಿಗೆ ಆಯ್ಕೆಯಾಗಲು ವಿಫಲರಾಗಿದ್ದರು. ಸದ್ಯ ಟೆಸ್ಟ್ ತಂಡದಲ್ಲಿ ಮಾತ್ರ ಸ್ಥಾನ ಪಡೆದಿರುವ ರವೀಂದ್ರ ಜಡೇಜಾ ಸದ್ಯದಲ್ಲೇ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇತ್ತ ಲೋಕಸಭಾ ಚುನಾವಣೆ ವೇಳೆಯೇ ಜಡೇಜಾ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕುಮಾರಸ್ವಾಮಿ ಕಂಡ್ರೆ ಭಯವಂತೆ- ಅವಕಾಶವಿದ್ರೂ ದೇಗುಲಕ್ಕೆ ಹೋಗಲ್ಲ ಮಹಿಳೆಯರು

    ಕುಮಾರಸ್ವಾಮಿ ಕಂಡ್ರೆ ಭಯವಂತೆ- ಅವಕಾಶವಿದ್ರೂ ದೇಗುಲಕ್ಕೆ ಹೋಗಲ್ಲ ಮಹಿಳೆಯರು

    ಬಳ್ಳಾರಿ: ಶಬರಿಮಲೆ ಅಯ್ಯಪ್ಪಸ್ವಾಮಿಯ ದರ್ಶನ ಮಾಡುವ ವಿಚಾರ ಇದೀಗ ದೇಶದೆಲ್ಲೆಡೆ ಚರ್ಚೆಗೆ ಕಾರಣವಾಗಿದ್ದರೆ, ಅಯ್ಯಪ್ಪಸ್ವಾಮಿಯಷ್ಟೇ ಪವರ್ ಪುಲ್ ಆಗಿರುವ ಕುಮಾರಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶವಿದ್ದರೂ ದರ್ಶನ ಮಾಡಲು ಭಯಪಡುತ್ತಿದ್ದಾರೆ.

    ಬಳ್ಳಾರಿಯ ಸಂಡೂರು ಪಟ್ಟಣದಿಂದ 12 ಕಿ.ಮೀ ದೂರದಲ್ಲಿರುವ ಕುಮಾರಸ್ವಾಮಿ ದೇವಾಲಯ ಇದಾಗಿದ್ದು, ಈ ದೇವಾಲಯವನ್ನು ಕಾರ್ತಿಕೇಯ ಸ್ವಾಮಿ, ಸುಬ್ರಮಣ್ಯಸ್ವಾಮಿ, ಷಣ್ಮುಖಸ್ವಾಮಿ, ನವಿಲು ಸ್ವಾಮಿ ದೇವಸ್ಥಾನ ಎಂದು ಕರೆಯುತ್ತಾರೆ. ಇಲ್ಲಿ ತಾರಕಾಸುರ ವಧೆ ಮಾಡಲು ಕುಮಾರಸ್ವಾಮಿ ಬಂದು ನೆಲೆಸಿದ ಬೀಡು ಎಂಬ ಪ್ರತೀತಿ ಇದೆ. ಚಾಲುಕ್ಯರು 8ನೇ ಶತಮಾನದಲ್ಲಿ ಈ ದೇವಸ್ಥಾನ ನಿರ್ಮಿಸಿದ್ದಾರೆ. ದೇವಾಲಯದಲ್ಲಿ ಕುಮಾರಸ್ವಾಮಿಯ ದರ್ಶನಕ್ಕೆ ಮಹಿಳೆಯರಿಗೂ ಮುಕ್ತ ಅವಕಾಶವಿದ್ದು, ಆದರೆ ಮಹಿಳೆಯರು ದರ್ಶನ ಮಾಡಲು ಭಯಪಡುತ್ತಾರೆ.

    ಮಹಿಳೆಯರು ದೇವರ ದರ್ಶನಕ್ಕೆ ಹಿಂದೇಟು ಹಾಕಲು ಒಂದು ಐತಿಹಾಸಿಕ ಕಾರಣವೂ ಇದೆ. ಹಿಂದೆ ಕುಮಾರಸ್ವಾಮಿ ತಾಯಿ ಪಾರ್ವತಿ ಮಗನಿಗೆ ವಿವಾಹ ಮಾಡಲು ಕನ್ಯಾಕುಮಾರಿಯಲ್ಲಿ ವಧು ನೋಡಿ ಬಂದಿರುತ್ತಾರೆ. ಆಗ ಕಾರ್ತಿಕೇಯ ಹುಡುಗಿ ಯಾರ ಥರಾ ಇದ್ದಾಳೆಂದು ಕೇಳಿದಾಗ ನನ್ನ ಹಾಗೆ ಇದ್ದಾಳೆ ಅಂತಾ ತಾಯಿ ಪಾರ್ವತಿ ಹೇಳ್ತಾರೆ. ಆಗ ಕುಮಾರಸ್ವಾಮಿ ನಾನು ಅವಳನ್ನ ಮದುವೆಯಾಗಲ್ಲ. ನಿನ್ನ ಸ್ವರೂಪದಂತೆ ಇದ್ದರೆ ಅವಳು ನನಗೆ ಮಾತೃ ಸಮಾನಳು, ನಾನು ಬ್ರಹ್ಮಚಾರಿಯಾಗಿಯೇ ಉಳಿಯುತ್ತೇನೆ ಎಂದು ಹೇಳಿದ್ದರಂತೆ. ಹೀಗಾಗಿ ಮಹಿಳೆಯರು ಕುಮಾರಸ್ವಾಮಿ ದರ್ಶನಕ್ಕೆ ಹಿಂಜರಿಯುತ್ತಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

    ಇತ್ತ ಶಬರಿಮಲೆ ದರ್ಶನಕ್ಕೆ ಸುಪ್ರೀಂ ಕೋರ್ಟ್ ಮಹಿಳೆಯರಿಗೆ ಅವಕಾಶ ಕೊಟ್ಟಿದ್ದು, ನೂರಾರು ಮಹಿಳೆಯರು ಅಯ್ಯಪ್ಪಸ್ವಾಮಿಯ ದರ್ಶನ ಮಾಡಲು ಮುಂದಾಗುತ್ತಿದ್ದಾರೆ. ಆದರೆ ಇದಕ್ಕೆ ಅಷ್ಟೇ ವಿರೋಧ ವ್ಯಕ್ತವಾಗುತ್ತಿದೆ. ಆದರೆ ಬಳ್ಳಾರಿಯ ಕುಮಾರಸ್ವಾಮಿ ದೇವರ ದರ್ಶನಕ್ಕೆ ಮಹಿಳೆಯರು ಮುಕ್ತ ಅವಕಾಶವಿದ್ದರು ಜನರ ನಂಬಿಕೆ ಇಂದ ದೇವರ ದರ್ಶನಕ್ಕೆ ಮಹಿಳೆಯರು ಭಯಪಡುತ್ತಿರುವುದು ಅಚ್ಚರಿಯ ಸಂಗತಿಯಾಗಿದೆ.

    https://www.youtube.com/watch?v=_if1rv2FprI

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಇಂದು ಎಚ್‍ಡಿಡಿ ಭೇಟಿಗಾಗಿ ರಾಜ್ಯಕ್ಕೆ ಸಿಎಂ ಚಂದ್ರಬಾಬು ನಾಯ್ಡು ಆಗಮನ

    ಇಂದು ಎಚ್‍ಡಿಡಿ ಭೇಟಿಗಾಗಿ ರಾಜ್ಯಕ್ಕೆ ಸಿಎಂ ಚಂದ್ರಬಾಬು ನಾಯ್ಡು ಆಗಮನ

    ಬೆಂಗಳೂರು: ಕಾಂಗ್ರೆಸ್ ಜೊತೆ ಮೈತ್ರಿಗೆ ಮುಂದಾಗಿರುವ ಆಂಧ್ರಪ್ರದೇಶದ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

    ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಮಾತುಕತೆ ನಡೆಸಲು ಚಂದ್ರಬಾಬು ನಾಯ್ಡು ಆಗಮಿಸುತ್ತಿದ್ದು, ಇಬ್ಬರ ನಾಯಕರ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಈಗಾಗಲೇ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಜೆಡಿಎಎಸ್ ವರಿಷ್ಠರಿಂದ ಸಲಹೆ ಪಡೆಯಲು ಚಂದ್ರಬಾಬು ನಾಯ್ಡು ಆಗಮಿಸುತ್ತಿದ್ದಾರೆ ಎನ್ನಲಾಗಿದೆ.

    ಇದೇ ವೇಳೆ ಜನಾರ್ದನ ರೆಡ್ದಿಗಾಗಿ ಸಿಸಿಬಿ ಪೊಲಿಸರು ಶೋಧ ನಡೆಸುತ್ತಿರುವುದರಿಂದ ಕರ್ನಾಟಕ ಸಿಎಂ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ಉಳಿದಂತೆ ಕರ್ನಾಟಕ ಪಂಚಕ್ಷೇತ್ರಗಳ ಉಪಚುನಾವಣೆಯ ಬಳಿಕ ಮೈತ್ರಿ ಪಕ್ಷಗಳ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ ವೇಳೆಯೂ ಚಂದ್ರಬಾಬು ನಾಯ್ಡು ಮಾಜಿ ಪ್ರಧಾನಿ ದೇವೇಗೌಡ ಶುಭಾಶಾಯ ತಿಳಿಸಿದ್ದರು.  ಇದನ್ನು ಓದಿ: ದೇಶ ಉಳಿಸಲು ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದೇವೆ: ಚಂದ್ರಬಾಬು ನಾಯ್ಡು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಟಾಲಿವುಡ್ ದಿಗ್ಗಜರನ್ನು ಭೇಟಿ ಮಾಡಿದ ಕಿಚ್ಚ!

    ಟಾಲಿವುಡ್ ದಿಗ್ಗಜರನ್ನು ಭೇಟಿ ಮಾಡಿದ ಕಿಚ್ಚ!

    ಬೆಂಗಳೂರು: ಅಭಿನಯ ಚರ್ಕವರ್ತಿ ಸುದೀಪ್ ಅವರು ಟಾಲಿವುಡ್ ದಿಗ್ಗಜರಾದ ಪುರಿ ಜಗನ್ನಾಥ್ ಸುಕುಮಾರ್, ನಟಿ ಚಾರ್ಮಿ, ಮತ್ತು ನಟ ಶ್ರೀಕಾಂತ್ ಅವರನ್ನು ಭೇಟಿ ಮಾಡಿದ್ದಾರೆ.

    ಕಿಚ್ಚ ಸುದೀಪ್ ಹೈದರಾಬಾದ್‍ನಲ್ಲಿ ಪೈಲ್ವಾನ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಬಹುಭಾಷಾ ನಟರಾಗಿರುವ ಸುದೀಪ್ ಎಲ್ಲ ಚಿತ್ರರಂಗದಲ್ಲಿ ಸ್ನೇಹಿತರನ್ನು ಹೊಂದಿದ್ದಾರೆ. ಹೀಗಾಗಿ ಶೂಟಿಂಗ್‍ನ ಬಿಡುವಿನ ಸಮಯದಲ್ಲಿ ಹೈದರಾಬಾದ್‍ನಲ್ಲಿ ಇದ್ದ ಸ್ನೇಹಿತರನ್ನು ಭೇಟಿ ಮಾಡಿ ಅವರೊಂದಿಗೆ ಸುಂದರ ಕ್ಷಣಗಳನ್ನು ಕಳೆದಿದ್ದಾರೆ.

    ಅಷ್ಟೇ ಅಲ್ಲದೇ ಚಿತ್ರೀಕರಣ ನಡೆಯುತ್ತಿರುವ ಕಾರಣ ಹೈದರಾಬಾದ್‍ನಲ್ಲಿ ಇದುದ್ದರಿಂದ ಚಿತ್ರತಂಡದವರೆಲ್ಲ ಸೇರಿ ಸೆಟ್‍ನಲ್ಲೇ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು. ಸುದೀಪ್ ಅವರು ಬರೀಗಾಲಿನಿಂದ ಬಂದು ಬಾವುಟ ಹಾರಿಸಿ ಕನ್ನಡಾಂಬೆಗೆ ನಮನವನ್ನು ಸಲ್ಲಿಸಿದ್ದರು.

    ಸದ್ಯಕ್ಕೆ ಸುದೀಪ್ ಅವರು ಪೈಲ್ವಾನ್, ಕೋಟಿಗೊಬ್ಬ 3 ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದು, ಕನ್ನಡದಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಜನ್ 6 ನಲ್ಲಿಯೂ ಕೆಲಸ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವರದಿ ಪ್ರಸಾರವಾಗುತ್ತಿದ್ದಂತೆ ಜಿಲ್ಲೆಗೆ ಸಚಿವ ಪುಟ್ಟರಂಗಶೆಟ್ಟಿ ಭೇಟಿ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವರದಿ ಪ್ರಸಾರವಾಗುತ್ತಿದ್ದಂತೆ ಜಿಲ್ಲೆಗೆ ಸಚಿವ ಪುಟ್ಟರಂಗಶೆಟ್ಟಿ ಭೇಟಿ

    ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಹಾಗೂ ಮಗುವನ್ನು ನೆಲದ ಮೇಲೆ ಮಲಗಿಸಿದ್ದ ಪ್ರಕರಣದ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಬಾಣಂತಿ ಹಾಗೂ ನವಜಾತ ಶಿಶುವನ್ನು ನೆಲದ ಮೇಲೆ ಮಲಗಿಸಿದ್ದ ಬಗ್ಗೆ ಇಂದು ಬೆಳಗ್ಗೆ ನಿಮ್ಮ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ವರದಿ ಪ್ರಸಾರವಾದ ಎರಡು ಗಂಟೆಯೊಳಗೆ ಸಚಿವ ಸಿ.ಪುಟ್ಟರಂಗಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿ ಬಾಣಂತಿಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಈ ವೇಳೆ ಮಾತನಾಡಿದ ಅವರು ಇತ್ತೀಚೆಗೆ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಬೆಡ್ ಗಳ ಕೊರೆತೆ ಎದುರಾಗಿದೆ. ಆಸ್ಪತ್ರೆ ಮೇಲ್ಭಾಗದಲ್ಲಿ ನಾಲ್ಕುವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಹೆಚ್ಚುವರಿ ವಾರ್ಡ್ ಗಳ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗಿದೆ. ಅಲ್ಲದೆ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಈಗಾಗಲೇ ಶಂಕುಸ್ಥಾಪನೆ ಮಾಡಲಾಗಿದ್ದು, ಈ ಆಸ್ಪತ್ರೆ ನಿರ್ಮಾಣ ನಂತರ ಸಮಸ್ಯೆ ಬಗೆಹರಿಯಲಿದೆ ಎಂದರು.

    ಬೆಳಗ್ಗೆ ಚಾಮರಾಜನಗರ ಜಿಲ್ಲೆಯ ಚಿಕ್ಕಹೊಳೆಯ ಜಯಲಕ್ಷ್ಮಿ ಅವರಿಗೆ ಹೆರಿಗೆ ಆಗಿ ಕೆಲ ನಿಮಿಷಗಳಲ್ಲಿ ಆಸ್ಪತ್ರೆಯಲ್ಲಿ ಹಾಸಿಗೆ ಇಲ್ಲ ಎಂಬ ಕಾರಣಕ್ಕೆ ತಾಯಿ ಹಾಗೂ ಮಗುವನ್ನು ಆಸ್ಪತ್ರೆಯ ಸಿಬ್ಬಂದಿ ನೆಲದ ಮೇಲೆ ಮಲಗಿಸಿದ್ದರು. ನೆಲದ ಮೇಲೆ ಚಾಪೆ ಹಾಸಿ ಬಾಣಂತಿ ಹಾಗೂ ಎಳೆ ಕಂದಮ್ಮನನ್ನು ಮಲಗಿಸಲಾಗಿತ್ತು. ಈ ವೇಳೆ ಬಾಣಂತಿಯ ಪೋಷಕರು ತಮ್ಮ ಮನೆಯಿಂದ ತಂದಿದ್ದ ಬೆಟ್ ಶೀಟನ್ನು ತಾಯಿ-ಮಗುವಿಗೆ ಹೊದಿಕೆಯ ರೂಪದಲ್ಲಿ ಹಾಕಿದ್ದರು.

    ಆಸ್ಪತ್ರೆಯ ಸಿಬ್ಬಂದಿ ಬಾಣಂತಿ ಹಾಗೂ ಮಗುವಿನ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಚಾಪೆಯ ಮೇಲೆ ಹಾಸಿಗೆ ಹಾಸಿಕೊಡುವ ಸೌಜನ್ಯಕ್ಕೂ ಮುಂದಾಗಿಲ್ಲ. ಹೀಗಾಗಿ ಬಾಣಂತಿ ಹಾಗೂ ಮಗು ಚಳಿಯಲ್ಲಿ ನಡುಗುತ್ತಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ

    ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ

    ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆಗೆಯುವ ಹಾಸನದ ಹಾಸನಾಂಬೆ ದೇವಿಯ ದರ್ಶನ ಇಂದಿನಿಂದ ಆರಂಭವಾಗಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದೇವಾಲಯಕ್ಕೆ ಭೇಟಿ ನೀಡಿ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ.

    ಆಶ್ವೀಜ ಮಾಸದ ಮೊದಲ ಗುರುವಾರ ಅಂದರೆ ಇಂದು ಮಧ್ಯಾಹ್ನ 12.30 ರ ನಂತರ ದೇವಾಲಯದ ಗರ್ಭಗುಡಿ ಬಾಗಿಲು ತೆರೆದಿತ್ತು. ಹೀಗಾಗಿ ಸಾರ್ವಜನಿಕ ದರ್ಶನ ಆರಂಭದ ಹಿನ್ನೆಲೆಯಲ್ಲಿ ತಡರಾತ್ರಿಯಿಂದಲೇ ದೇವಿಯ ದರ್ಶನ ಪಡೆಯಲು ಭಕ್ತರು ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಸಿಎಂ ಕುಮಾರಸ್ವಾಮಿ ಅವರು ಕೂಡ ತಾಯಿ ದರ್ಶನ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ನಾನೂ ಕೂಡ ಇವತ್ತು ದೇವರ ದರ್ಶನಕ್ಕೆ ಬಂದಿದ್ದೇನೆ. ದೇವಾಲಯಕ್ಕೆ ಭಕ್ತರ ಸಂಖ್ಯೆಯ ಹೆಚ್ಚಳಕ್ಕೆ ಮಾಧ್ಯಮದ ಪಾತ್ರ ಮುಖ್ಯವಾಗಿದೆ ಎಂದರು.

    ಹಾಸನಾಂಬೆ ಅಪನಂಬಿಕೆ ಬಗ್ಗೆ ಪ್ರತಿಕ್ರಿಯಿಸಿ ಪವಾಡಗಳಲ್ಲಿ ನಂಬಿಕೆ ನಿನ್ನೆಮೊನ್ನೆಯಿಂದ ಆರಂಭವಾದದ್ದಲ್ಲ. ಹಲವಾರು ತಲೆಮಾರುಗಳಿಂದ ಈ ನಂಬಿಕೆ ಇದೆ. ನನ್ನ ಸಾರ್ವಜನಿಕ ಬದುಕಿಗೆ ಈ ದೇವರುಗಳ ನಂಬಿಕೆಯೇ ಕಾರಣ. ಹಾಸನಾಂಬೆ ತಾಯಿಯ ಬಗ್ಗೆ ಸಂಶಯ ಮಾಡುವುದರಿಂದ ನಿಮಗೆ ಏನು ಸಿಗುತ್ತದೆ. ನಂಬಿಕೆಗಳಿಗೆ ಅಪಚಾರ ತರುವುದು ಸೂಕ್ತ ಅಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಹಲವಾರು ಮಂದಿ ಭಕ್ತರ ನಂಬಿಕೆಗೆ ಧಕ್ಕೆ ತರುವುದು ತರವಲ್ಲ. ಪ್ರಕೃತಿ ವಿಕೋಪಗಳೆಲ್ಲ ಆಗುವುದು ಸಹ ಯಾವುದೋ ಒಂದು ಶಕ್ತಿಯಿಂದ ಹಾಸನಾಂಬೆ ದರ್ಶನಕ್ಕೆ ಕುರಿತು ಯಾವುದೇ ಗೊಂದಲ ಇಲ್ಲ. ಭಕ್ತರು ಪ್ರತಿವರ್ಷದಂತೆ ದರ್ಶನ ಪಡೆಯುತ್ತಿದ್ದಾರೆ ಎಂದು ಹೇಳಿದರು.

    ನಮ್ಮ ಜೀವನದ ಏರುಪೇರುಗಳನ್ನು ಸರಿಮಾಡಿಕೊಳ್ಳುವುದಕ್ಕೆ ಇದರ ಉಪಯೋಗ ಪಡೆದುಕೊಳ್ಳಬೇಕು. ಕಾಣದ ಶಕ್ತಿ ಎನ್ನುವುದು ನಮ್ಮ ನಂಬಿಕೆ ಆಗಿದೆ. ರಾಜ್ಯದ ಎಲ್ಲ ಕುಟುಂಬಗಳಿಗೆ ಸುಭೀಕ್ಷೆ ಮತ್ತು ನೆಮ್ಮದಿ ಜೀವನ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ. ರಾಜ್ಯದ ಸಮಸ್ಯೆಗಳನ್ನು ಪರಿಹರಿಸುವ ಶಕ್ತಿ ನನಗೆ ನೀಡಲಿ ಎಂದು ದೇವರ ಬಳಿ ಪ್ರಾರ್ಥನೆ ಮಾಡಿದ್ದೇನೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv