Tag: ಭೈರತಿ ಬಸವರಾಜ್

  • ನಾವು ಜಾರಕಿಹೊಳಿ ಜೊತೆಗೆ ಇದ್ದೇವೆ: ಭೈರತಿ ಬಸವರಾಜ್

    ನಾವು ಜಾರಕಿಹೊಳಿ ಜೊತೆಗೆ ಇದ್ದೇವೆ: ಭೈರತಿ ಬಸವರಾಜ್

    ತುಮಕೂರು: ನಾವೆಲ್ಲಾ ರಮೇಶ್ ಜಾರಕಿಹೊಳಿ ಜೊತೆಗೆ ಇದ್ದೇವೆ ಎಂದು ತಮಕೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.

    ನಗರಕ್ಕೆ ಭೇಟಿ ನೀಡಿ, ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆ ನಡೆಸಿದರು. ಸ್ಟೇಡಿಯಂ, ರಾಧಕೃಷ್ಣ ರಸ್ತೆ, ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದ ಕಾಮಗಾರಿ ಸೇರಿದಂತೆ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳ ವೀಕ್ಷಣೆ ನಡೆಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕೆಲ ವ್ಯತ್ಯಾಸ ಆಗಿದೆ. ಕೆಲವೇ ದಿನದಲ್ಲಿ ಸತ್ಯಾಂಶ ಹೊರಬರಲಿದ್ದು, ಅವರಿಗೆ ಕ್ಲೀನ್ ಚಿಟ್ ಸಿಗಲಿದೆ. ರಮೇಶ್ ಜಾರಕಿಹೊಳಿ ಅವರು ಸಹಜವಾಗಿ ಸಚಿವ ಸ್ಥಾನಕ್ಕೆ ಬರ್ತಾರೆ, ನಾವೆಲ್ಲ ಜಾರಕಿಹೊಳಿ ಜೊತೆ ಇದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ರವಿಶಂಕರ್ ಪ್ರಸಾದ್ ಟ್ವಿಟ್ಟರ್ ಖಾತೆ 1 ಗಂಟೆ ಲಾಕ್

     

    ರಾಜ್ಯದಲ್ಲಿ ಬಹುದಿನಗಳಿಂದ ಚರ್ಚೆಯಲ್ಲಿರುವ ಸಿಎಂ ಬದಲಾವಣೆ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಎಲ್ಲ ವಿವಾದಕ್ಕೂ ತೆರೆ ಎಳೆದಿದ್ದಾರೆ ಎಂದರು.

    ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಸುತ್ತೂರು ಮಠಕ್ಕೆ ಭೇಟಿ ಕೊಟ್ಟಿರೋದು ಅವರ ವೈಯಕ್ತಿಕ ಇರಬಹುದು ಎಂದರು. ನಂತರ ಪಾಲಿಕೆ ಸಭಾಗಂಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

  • ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ ವೀಕ್ಷಿಸಿದ ಸಚಿವ ಈಶ್ವರಪ್ಪ, ಬೈರತಿ ಬಸವರಾಜ್

    ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ ವೀಕ್ಷಿಸಿದ ಸಚಿವ ಈಶ್ವರಪ್ಪ, ಬೈರತಿ ಬಸವರಾಜ್

    ಶಿವಮೊಗ್ಗ: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಯನ್ನು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಪರಿಶೀಲನೆ ನಡೆಸಿದರು.

    ಬಳಿಕ ಮಾತನಾಡಿದ ಬೈರತಿ ಬಸವರಾಜ್, ಶಿವಮೊಗ್ಗ ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳು ಉತ್ತಮವಾಗಿ ನಡೆಯುತ್ತಿವೆ. ಶಿವಮೊಗ್ಗ ಮಲೆನಾಡು ಪ್ರದೇಶ ಆಗಿರುವುದರಿಂದ ಮಳೆ ಸಹ ಹೆಚ್ಚಿರುತ್ತದೆ. ಹೀಗಾಗಿಯೇ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೋವಿಡ್ ಸಂಕಷ್ಟ, ಲಾಕ್‍ಡೌನ್ ನಿಂದಾಗಿ ಕೂಲಿ ಕಾರ್ಮಿಕರ ಕೊರತೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಶೀಘ್ರವಾಗಿ ಕಾಮಗಾರಿ ಮುಗಿಸುತ್ತೇವೆ ಎಂದರು. ಇದನ್ನೂ ಓದಿ: ಒಂದೆರಡು ದಿನಗಳಲ್ಲಿ ಹೆಚ್ಚಿನ ಪ್ರಮಾಣದ ಕೋವಿಡ್ ಲಸಿಕೆ ಲಭ್ಯ: ಸಿಎಂ ಯಡಿಯೂರಪ್ಪ

    ಶಿವಮೊಗ್ಗದ ಗಾಂಧಿ ಪಾರ್ಕ್ ಮುಂಭಾಗದ ವೃತ್ತದಲ್ಲಿ ಬಸವೇಶ್ವರರ ಪುತ್ಥಳಿ ಅನಾವರಣ ಮಾಡಬೇಕು ಎಂಬುದು ಶಿವಮೊಗ್ಗದ ಬಹುಜನರ ಅಪೇಕ್ಷೆ ಆಗಿದೆ. ಈ ಬಗ್ಗೆ ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು. ಇನ್ನು ಒಂದು ತಿಂಗಳ ಒಳಗಡೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದಲೇ ಪುತ್ಥಳಿ ಅನಾವರಣ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.

  • 1 ಲಕ್ಷ ದಿನಸಿ ಕಿಟ್ ವಿತರಿಸಿದ ಭೈರತಿ ಬಸವರಾಜ್

    1 ಲಕ್ಷ ದಿನಸಿ ಕಿಟ್ ವಿತರಿಸಿದ ಭೈರತಿ ಬಸವರಾಜ್

    ಬೆಂಗಳೂರು: ಲಾಕ್‍ಡೌನ್ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಬಡವರು, ಶ್ರಮಿಕ ವರ್ಗದವರು, ಕೂಲಿ ಕಾರ್ಮಿಕರಿಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಮ್ಮ ಕ್ಷೇತ್ರದ ಒಂದು ಲಕ್ಷ ಕುಟುಂಬಗಳಿಗೆ ಆಹಾರ ಪದಾರ್ಥಗಳ ದಿನಸಿ ಕಿಟ್ ವಿವರಿಸಿದರು.

    ಕೆ.ಆರ್.ಪುರ ಕ್ಷೇತ್ರದ ಕೊತ್ತನೂರಿನ ನಂಜುಂಡೇಶ್ವರ ಕಲ್ಯಾಣ ಮಂಟಪದಲ್ಲಿ ದಿನಸಿ ಕಿಟ್ ವಿತರಿಸಿ ಮಾತನಾಡಿದ ಅವರು, ಅಗತ್ಯ ಬಿದ್ದಲ್ಲಿ ಬಡಜನರಿಗೆ ಇನ್ನೂ ಸಹಾಯ ಮಾಡುವುದಾಗಿ ಭರವಸೆ ನೀಡಿದರು. ಕ್ಷೇತ್ರದ ಎಲ್ಲರಿಗೂ ಕೊರೊನಾ ಲಸಿಕೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಹಂತ ಹಂತವಾಗಿ ನೀಡಲಾಗುತ್ತದೆ ಎಂದರು. ಇದನ್ನೂ ಓದಿ: ಇನ್ಮುಂದೆ ಯಾವುದೇ ದಾನ ಸ್ವೀಕರಿಸಲ್ಲ: ಉಪೇಂದ್ರ

    ಕೃಷ್ಣರಾಜಪುರ ಸಾರ್ವಜನಿಕ ಆಸ್ಪತ್ರೆಯನ್ನು 200 ಹಾಸಿಗೆಗಳ ಆಸ್ಪತ್ರೆಗೆ ಉನ್ನತಿಕರಿಸಲು 13 ಕೋಟಿ ರೂ. ವೆಚ್ಚವಾಗಲಿದೆ. ಐಟಿಐ ಆಸ್ಪತ್ರೆಯಲ್ಲಿ ಕೋವಿಡ್ ಆರೈಕೆ ಕೇಂದ್ರ ತೆರೆಯಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕೇಂದ್ರ ಸರ್ಕಾರ ಅದಕ್ಕೆ ಒಪ್ಪಿಗೆ ನೀಡಿದೆ ಎಂದು ಹೇಳಿದರು.

    ಬಳಿಕ ಮಾತನಾಡಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ, ಈ ವರ್ಷದ ಡಿಸೆಂಬರ್ ಅಂತ್ಯದ ವೇಳೆಗೆ ದೇಶದ 130 ಕೋಟಿ ಜನರಿಗೂ ಕೋವಿಡ್ ಲಸಿಕೆಯನ್ನು ನೀಡಲಾಗುವುದು. ಜೂನ್ ಅಂತ್ಯದ ವೇಳೆಗೆ ಕೇಂದ್ರದಿಂದ ರಾಜ್ಯಕ್ಕೆ 50 ಲಕ್ಷ ಡೋಸ್ ಲಸಿಕೆ ನೀಡಲಾಗುತ್ತದೆ. ರಾಜ್ಯ ಸರ್ಕಾರ ಸಹ 15 ಲಕ್ಷ ಡೋಸ್ ಲಸಿಕೆಯನ್ನು ಖರೀದಿಸಲು ಮುಂದಾಗಿದೆ. ಈ ತಿಂಗಳಲ್ಲಿ ಒಟ್ಟು 65 ಲಕ್ಷ ಡೋಸ್‍ನಷ್ಟು ಲಸಿಕೆ ರಾಜ್ಯಕ್ಕೆ ಲಭ್ಯವಾಗಲಿದೆ ಎಂದರು.

    ಕೊರೊನಾ ಲಾಕ್‍ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಕೆ.ಅರ್.ಪುರ ವಿಧಾನಸಭಾ ಕ್ಷೇತ್ರದ ಜನರಿಗೆ ಒಂದು ಲಕ್ಷ ದಿನಸಿ ಕಿಟ್ ನ್ನು ಭೈರತಿ ಬಸವರಾಜ್ ವಿತರಣೆ ಮಾಡುತ್ತಿರುವುದು ಪುಣ್ಯದ ಕೆಲಸ. ಕ್ಷೇತ್ರದ ಜನ ಮತ ಹಾಕುವ ಮೂಲಕ ಅವರಿಗೆ ಆಶೀರ್ವಾದ ಮಾಡಿದ್ದೀರಿ. ಅವರು ನಿಮಗೆ ಇಂತಹ ಸಂದರ್ಭದಲ್ಲಿ ಸಹಾಯಕ್ಕೆ ಬಂದಿದ್ದಾರೆ. ಸದಾ ಜನರ ನಡುವೆ ಇರುವ ಬಸವರಾಜ್ ಅಂತಹವರು ಸಮಾಜಕ್ಕೆ ಅವಶ್ಯಕತೆ ಇದೆ. ಅವರಿಗೆ ತಮ್ಮ ಬೆಂಬಲ ಸದಾ ಇರಲಿ ಎಂದರು.

    ಕೆ.ಆರ್.ಪುರ ವಿಧಾನ ಸಭಾ ಕ್ಷೇತ್ರ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನ ಸಭಾ ಕ್ಷೇತ್ರವಾಗಿದೆ. ಇದನ್ನು ಭೈರತಿ ಬಸವರಾಜ್ ಅವರು ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ. ಈ ಭಾಗದ ಲೋಕಸಭಾ ಸದಸ್ಯನಾಗಿ ಮತ್ತು ಕೇಂದ್ರ ಸಚಿವನಾಗಿ ನನ್ನ ಬೆಂಬಲ, ಸಹಕಾರ ಈ ಕ್ಷೇತ್ರಕ್ಕೆ ಯಾವಾಗಲೂ ಇರುತ್ತದೆ ಎಂದು ಹೇಳಿದರು.

    ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ನಿಯಂತ್ರಣ ಕುರಿತು ಸಭೆ ಕರೆದಾಗಲ್ಲೆಲ್ಲ ನಾನು ಕೆ.ಅರ್.ಪುರ ಕ್ಷೇತ್ರದ ಬಗ್ಗೆ ಮತ್ತು ಭೈರತಿ ಬಸವರಾಜ ಅವರು ಅಲ್ಲಿ ಕೈಗೊಂಡಿರುವ ಕೆಲಸಗಳ ಬಗ್ಗೆ ಮಾಹಿತಿ ನೀಡುತ್ತೇನೆ. ಹೀಗಾಗಿ ಬಸವರಾಜ್ ಅವರ ಕಾರ್ಯವೈಖರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ತಿಳಿದಿದೆ ಎಂದರು.

    ಕೂತ್ತನೂರಿನ ನಂಜುಂಡೇಶ್ವರ ಕಲ್ಯಾಣ ಮಂಟಪ, ವಿಜನಾಪುರದ ಸೈನಿಕ ಭವನ, ಕಲ್ಕರೆಯ ಎನ್.ಅರ್.ಐ ಲೇಔಟ್, ಟಿ.ಸಿ.ಪಾಳ್ಯದ ಸಂತ ಅಂತೋಣಿ ಶಾಲೆ, ಕುರುಡುಸೊಣ್ಣೆನಹಳ್ಳಿಯ ಲೇಕ್ ಮೌಂಟ್ ಶಾಲೆ, ಎಚ್.ಎ.ಎಲ್ ನ ವಿಭೂತಿಪುರ ಶಾಲೆ, ಉದಯ ನಗರದ ಜೈನ ಭವನ, ಎ.ನಾರಾಯಣಪುರದ ಎಮ್.ಇ.ಜಿ ಲೇಔಟ್, ದೇವಸಂದ್ರದ ಕೆಂಪೇಗೌಡ ಕ್ರೀಡಾಂಗಣಗಳಲ್ಲಿ ದಿನಸಿ ಕಿಟ್ ವಿತರಿಸಲಾಯಿತು.

    ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಕೆ.ಅರ್.ಪುರ ಬಿಜೆಪಿ ಅಧ್ಯಕ್ಷ ಶಿವರಾಜ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ, ಬಿಜೆಪಿ ಹಿರಿಯ ಮುಖಂಡ ಗಣೇಶ, ಬಿಬಿಎಂಪಿ ಮಾಜಿ ಸದಸ್ಯರಾದ ಶ್ರೀಕಾಂತ್, ಜಯಪ್ರಕಾಶ್, ನಾಗರಾಜ್, ಸುರೇಶ್, ರಮೇಶ್, ಅಂತೋಣಿ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

  • ಭರ್ಜರಿ ಗೆಲುವಿನ ಖುಷಿಯಲ್ಲಿ ನೂತನ ಶಾಸಕರಿಂದ ರೌಂಡ್ಸ್

    ಭರ್ಜರಿ ಗೆಲುವಿನ ಖುಷಿಯಲ್ಲಿ ನೂತನ ಶಾಸಕರಿಂದ ರೌಂಡ್ಸ್

    ಬೆಂಗಳೂರು: ಉಪಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಜಯಭೇರಿ ಭಾರಿಸಿದ ನೂತನ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಭೈರತಿ ಬಸವರಾಜ್ ವಿಜಯನಗರದ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ್ದಾರೆ.

    ಕೇವಲ ನೂತನ ಶಾಸಕರು ಮಾತ್ರವಲ್ಲ ಅವರೊಂದಿಗೆ ಕೆಲ ಬಿಜೆಪಿ ನಾಯಕರು ಕೂಡ ಮಠಕ್ಕೆ ಭೇಟಿಕೊಟ್ಟಿದ್ದಾರೆ. ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ ವೇಳೆ ನಿರ್ಮಲಾನಂದ ಸ್ವಾಮೀಜಿಗಳು ಇಬ್ಬರು ಶಾಸಕರು ಬೆಂಗಳೂರು ಅಭಿವೃದ್ಧಿಗೆ ಶ್ರಮಿಸಿ ಎಂದು ಆಶೀರ್ವದಿಸಿದರು. ಇದೇ ವೇಳೆ ಮಾಧ್ಯಮಗಳ ಕೊತೆ ಮಾತನಾಡಿ, ಬಿಜೆಪಿ ನೀಡಿರುವ ಮಾತಿನಂತೆ ಗೆದ್ದ ಶಾಸಕರಿಗೆ ಮಂತ್ರಿ ಮಾಡಲಿದೆ ಎಂಬ ವಿಶ್ವಾಸ ಇದೆ ಎಂದು ಸೋಮಶೇಖರ್ ಹಾಗೂ ಭೈರತಿ ಬಸವರಾಜ್ ತಿಳಿಸಿದರು.

    ಮಠದಿಂದ ಹೊರಟ ನಂತರ ಸಚಿವ ಸೋಮಣ್ಣ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿ ಶಾಸಕರು ಪರಸ್ಪರ ಮಾತುಕತೆ ನಡೆಸಿದರು. ಈ ವೇಳೆ ಸೋಮಣ್ಣ ಅವರು ಮಾಧ್ಯಮಗಳ ಜೊತೆ ಮಾತನಾಡಿ, ನಮ್ಮ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲಿದೆ. ಸೋತವರನ್ನ ಕೈ ಬಿಡದೆ ಸೂಕ್ತ ಸ್ಥಾನ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

    ಎಸ್.ಟಿ ಸೋಮಶೇಖರ್ ಅವರು 27,686 ಮತಗಳ ಅಂತರದಿಂದ ಗೆಲ್ಲುವ ಮೂಲಕ ಯಶವಂತಪುರದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಬಿಜೆಪಿ ಪರವಾಗಿ 1,44,676 ಮತಗಳು ಬಿದ್ದರೆ, ಜೆಡಿಎಸ್‍ನಿಂದ ಸ್ಪರ್ಧಿಸಿದ್ದ ಜವರಾಯಿಗೌಡ 1,16,990 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಕೇವಲ 15,707 ಮತಗಳನ್ನು ಪಡೆದಿದೆ. ಕಳೆದ ಚುನಾವಣೆಯಲ್ಲಿ ಸೋಮಶೇಖರ್ 10,711 ಮತಗಳಿಂದ ಗೆದ್ದಿದ್ದರು.

    ಬೆಂಗಳೂರಿನ ಕೆ.ಆರ್ ಪುರಂನಲ್ಲಿ ಭೈರತಿ ಬಸವರಾಜ್ 63,405 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಬಿಜೆಪಿ ಪರವಾಗಿ 1,39,833, ಕಾಂಗ್ರೆಸ್ ಪರವಾಗಿ 76,428 ಮತಗಳು ಚಲಾವಣೆಯಾದರೆ ಜೆಡಿಎಸ್‍ಗೆ 2,048 ಮತಗಳು ಬಿದ್ದಿದೆ. 2018ರ ಚುನಾವಣೆಯಲ್ಲಿ 32,729 ಮತಗಳಿಂದ ಭೈರತಿ ಬಸವರಾಜ್ ಜಯಗಳಿಸಿದ್ದರೆ ಬಿಜೆಪಿಯಿಂದ ಸ್ಪರ್ಧಿಸಿದ್ದ ನಂದೀಶ್ ರೆಡ್ಡಿ ಅವರಿಗೆ 1,02,675 ಮತಗಳು ಬಿದ್ದಿತ್ತು.

  • ಭೈರತಿ ಬಸವರಾಜ್ ಬೆಂಬಲಿಸಿದ 4 ಜನ ಕಾಂಗ್ರೆಸ್ ಕಾರ್ಪೊರೇಟರ್​ಗಳ ಉಚ್ಛಾಟನೆ

    ಭೈರತಿ ಬಸವರಾಜ್ ಬೆಂಬಲಿಸಿದ 4 ಜನ ಕಾಂಗ್ರೆಸ್ ಕಾರ್ಪೊರೇಟರ್​ಗಳ ಉಚ್ಛಾಟನೆ

    ಬೆಂಗಳೂರು: ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಅವರನ್ನು ಬೆಂಬಲಿಸಿದ 4 ಜನ ಕಾಂಗ್ರೆಸ್ ಕಾರ್ಪೊರೇಟರ್​ಗಳನ್ನು ಕೆಪಿಸಿಸಿ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದೆ.

    ಕೆ.ಆರ್.ಪುರಂ ಕ್ಷೇತ್ರ ವ್ಯಾಪ್ತಿಯ ಬಸವನಪುರ ವಾರ್ಡ್‍ನ ಜಯಪ್ರಕಾಶ್, ದೇವಸಂದ್ರ ವಾರ್ಡ್‍ನ ಶ್ರೀಕಾಂತ್, ಎ ನಾರಾಯಣಪುರದ ಸುರೇಶ್ ಹಾಗೂ ವಿಜ್ಞಾನನಗರ ವಾರ್ಡ್‍ನ ಹೆಚ್‍ಜಿ ನಾಗರಾಜ್ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡ ಕಾರ್ಪೊರೇಟರ್ ಗಳು. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ನಾಲ್ಕು ಜನ ಕಾಪೊರೇಟರ್ ಗಳನ್ನು ಉಚ್ಚಾಟನೆ ಮಾಡಿದ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಭೈರತಿಯಿಂದ ಗೌರಿ ಹಬ್ಬಕ್ಕೆ ಸೀರೆ ಗಿಫ್ಟ್

    ಅನರ್ಹ ಶಾಸಕ ಭೈರತಿ ಬಸವರಾಜ್ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅವರು ಭೈರತಿ ಬಸವರಾಜ್ ಸೇರಿದಂತೆ 17 ಜನ ಶಾಸಕರನ್ನು ಅನರ್ಹಗೊಳಿಸಿದ್ದರು. ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸಿಕ್ಕಿದೆ. ಹೀಗಾಗಿ ಅನರ್ಹ ಶಾಸಕ ಭೈರತಿ ಬಸವರಾಜ್ ಸ್ವಕ್ಷೇತ್ರ ಕೆ.ಆರ್.ಪೇಟೆಯಿಂದ ಸ್ಪರ್ಧೆಗೆ ಇಳಿದಿದ್ದಾರೆ.

    ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ತ್ರಿಕೋನ ಹಣಾಹಣಿ ಏರ್ಪಟ್ಟಿದ್ದು, ಬಿಜೆಪಿಯಿಂದ ಭೈರತಿ ಬಸವರಾಜ್, ಕಾಂಗ್ರೆಸ್‍ನಿಂದ ನಾರಾಯಣಸ್ವಾಮಿ ಹಾಗೂ ಜೆಡಿಎಸ್‍ನಿಂದ ಕೃಷ್ಣಮೂರ್ತಿ ಸ್ಪರ್ಧಿಸುತ್ತಿದ್ದಾರೆ. ಕೆ.ಆರ್.ಪುರಂಯಲ್ಲಿ ಗೆಲುವಿಗೆ ಭರ್ಜರಿ ಪ್ಲ್ಯಾನ್ ರೂಪಿಸಿರುವ ಬಿಜೆಪಿ ಕಂದಾಯ ಸಚಿವ ಆರ್.ಅಶೋಕ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಶಾಸಕ ಸತೀಶ್ ರೆಡ್ಡಿ ಅವರಿಗೆ ಉಸ್ತುವಾರಿ ನೀಡಿದೆ.

  • ಕೆ.ಆರ್.ಪುರಕ್ಕೆ ಭೈರತಿ, ನಂದೀಶ್ ರೆಡ್ಡಿ ಜೋಡೆತ್ತು- ಆರ್.ಅಶೋಕ್

    ಕೆ.ಆರ್.ಪುರಕ್ಕೆ ಭೈರತಿ, ನಂದೀಶ್ ರೆಡ್ಡಿ ಜೋಡೆತ್ತು- ಆರ್.ಅಶೋಕ್

    ಬೆಂಗಳೂರು: ಅನರ್ಹ ಶಾಸಕರ ಕ್ಷೇತ್ರಗಳಲ್ಲಿನ ಬಂಡಾಯವನ್ನು ಶಮನ ಮಾಡುವತ್ತ ಬಿಜೆಪಿ ನಾಯಕರು ಕಸರತ್ತು ನಡೆಸಿದ್ದು, ದಿನಕ್ಕೊಂದು ಕ್ಷೇತ್ರಕ್ಕೆ ಭೇಟಿ ನೀಡಿ ಸಂಧಾನ ಕಾರ್ಯ ಮಾಡುತ್ತಿದ್ದಾರೆ.

    ಇಂದು ಕಂದಾಯ ಸಚಿವ ಆರ್.ಅಶೋಕ್ ಕೆ.ಆರ್.ಪುರಕ್ಕೆ ಭೇಟಿ ನೀಡಿದ್ದು, ಭೈರತಿ ಬಸವರಾಜ್ ಹಾಗೂ ನಂದೀಶ್ ರೆಡ್ಡಿ ನಡುವಿನ ಅಸಮಾಧನವನ್ನು ತಿಳಿಸಿಗೊಳಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕೆ.ಆರ್.ಪುರಕ್ಕೆ ಭೈರತಿ- ನಂದೀಶ್ ರೆಡ್ಡಿ ಜೋಡೆತ್ತು. ಕೆ.ಆರ್.ಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಕಾರ್ಯಕರ್ತರೇ ಇಲ್ಲ. ಬಸವರಾಜ್ ಅವರನ್ನು ಕರೆದುಕೊಂಡು ಬಂದಿದ್ದು ನಾನೇ ಮುಂಬೈನಲ್ಲಿ ಅನರ್ಹರ ಕಾವಲಿಗಿದ್ದಿದ್ದು ಭೈರತಿ ಬಸವರಾಜ್ ಎಂದರು.

    ನಂದೀಶ್ ರೆಡ್ಡಿ ನನ್ನ ಶಿಷ್ಯ, ಅವರ ಮನೆಯಲ್ಲಿ ಚಾಯ್ ಪೇ ಚರ್ಚಾ ಮಾಡುತ್ತೇವೆ. ಭೈರತಿ ಬಸವರಾಜ್ ಸಚಿವರಾಗುತ್ತಾರೆ. ಹಿಂದೆ ನಡೆದ ಘಟನೆಯನ್ನು ಮರೆಯಿರಿ. ದೇಶ, ರಾಜ್ಯ, ಕ್ಷೇತ್ರದ ಅಭಿವೃದ್ಧಿಗಾಗಿ ಕಮಲ ಗೆಲ್ಲಿಸಿ. ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರಲ್ಲ. ಕಾರ್ಪೋರೇಟರ್ ಗಳಿಗೂ ಸಮನಾದ ಗೌರವ ಇರುತ್ತದೆ. ಬಸವ-ನಂದಿಯರನ್ನು ಹೊಲ ಬೆಳೆಯೋಕೆ ಬಿಡುತ್ತಿದ್ದೇವೆ ಎಂದು ಉಲ್ಲೇಖಿಸಿದರು.

    ಈ ಮೂಲಕ ಕೆ.ಆರ್.ಪುರ ವಿಧಾನಸಭೆ ಕ್ಷೇತ್ರದ ಬಂಡಾಯವು ಶಮನವಾದಂತಾಗಿದ್ದು, ನಂದೀಶ್ ರೆಡ್ಡಿ ನಿವಾಸದಲ್ಲಿ ಸಂಧಾನ ಸಭೆ ನಡೆಸಿ ಸಚಿವ ಆರ್.ಅಶೋಕ್ ಬಂಡಾಯ ಶಮನಗೊಳಿಸಿದ್ದಾರೆ. ಭೈರತಿ ಬಸವರಾಜ್, ನಂದೀಶ್ ರೆಡ್ಡಿಯನ್ನು ಒಟ್ಟಿಗೆ ಕೂರಿಸಿ ಆರ್.ಅಶೋಕ್ ಸಂಧಾನ ಮಾಡಿದ್ದಾರೆ. ಅಲ್ಲದೆ ಒಟ್ಟಿಗೆ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ. ಸಂಧಾನದ ನಂತರ ಭೈರತಿ ಬಸವರಾಜ್ ಪರ ಕೆಲಸ ಮಾಡಲು ನಂದೀಶ್ ರೆಡ್ಡಿ ಒಪ್ಪಿಕೊಂಡಿದ್ದಾರೆ. ಬಿಎಂಟಿಸಿ ನಿಗಮದ ಅಧ್ಯಕ್ಷ ಸ್ಥಾನ ಸಿಕ್ಕಿದ ಬಳಿಕವೂ ನಂದೀಶ್ ರೆಡ್ಡಿ ಮುನಿಸು ಮುಂದುವರಿಸಿದ್ದರು.

  • ಬಿಜೆಪಿಯವ್ರು ಟಿಕೆಟ್ ಕೊಡದಿದ್ರೆ ಮುಂದೆ ನೋಡೋಣ: ಭೈರತಿ ಬಸವರಾಜ್

    ಬಿಜೆಪಿಯವ್ರು ಟಿಕೆಟ್ ಕೊಡದಿದ್ರೆ ಮುಂದೆ ನೋಡೋಣ: ಭೈರತಿ ಬಸವರಾಜ್

    – ನಾಳೆ ಸಂಜೆ ಎಲ್ಲಾ ವಿವರ ಕೊಡ್ತೀವಿ ಎಂದ ಅನರ್ಹ ಶಾಸಕರು

    ಬೆಂಗಳೂರು: ಅನರ್ಹ ಶಾಸಕರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್, ಪ್ರತಾಪ್‍ಗೌಡ ಪಾಟೀಲ್, ರಮೇಶ್ ಜಾರಕಿಹೊಳಿ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

    ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರ ಬಂದ ಅನರ್ಹ ಶಾಸಕರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು. ಸ್ವಲ್ಪ ಸಮಯದ ಬಳಿಕ ಮಾತನಾಡಿದ ಅನರ್ಹ ಶಾಸಕ ಭೈರತಿ ಬಸವರಾಜ್, ನಾವು ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ. ನಾವೇನೂ ತಪ್ಪು ಮಾಡಿಲ್ಲ. ಸುಪ್ರೀಂಕೋರ್ಟ್ ತೀರ್ಪು ನಮ್ಮ ಪರವಾಗಿಯೇ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಉಪ ಚುನಾವಣೆ ಟಿಕೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಟಿಕೆಟ್ ಕೊಡುವುದಿಲ್ಲ ಅಂತ ಎಲ್ಲಿಯೂ ಹೇಳಿಕೊಂಡಿಲ್ಲ. ಅವರು ಟಿಕೆಟ್ ಕೊಡದಿದ್ದರೆ ಮುಂದೆ ನೋಡೋಣ ಎಂದು ಎಚ್ಚರಿಗೆ ಸಂದೇಶವೊಂದನ್ನು ರವಾನಿಸಿದರು.

    ಶಿವರಾಮ್ ಹೆಬ್ಬಾರ್ ಅವರು, ಇನ್ನೆರಡು ದಿನ ಕಾದು ನೋಡಿ ಎಲ್ಲವೂ ನಿಮಗೆ ಗೊತ್ತಾಗುತ್ತದೆ. ಈಗಲೇ ಎಲ್ಲವ್ನೂ ಹೇಳಲು ಸಾಧ್ಯವಿಲ್ಲ ಎಂದರು. ಇತ್ತ ಪ್ರತಾಪ್‍ಗೌಡ ಪಾಟೀಲ್ ಅವರು, ಉಪ ಚುನಾವಣೆಗೆ ಹೋಗುವುದೇ ನಮ್ಮ ನಡೆ ಅಷ್ಟೇ. ಇದನ್ನು ಬಿಟ್ಟು ಏನನ್ನೂ ಹೇಳಲ್ಲ ಎಂದು ಕಾರ್ ಹತ್ತಿ ಹೊರಟು ಹೋದರು.

  • ಚುನಾವಣೆಗೆ ಈಗಿನಿಂದಲೇ ತಯಾರಿ- ಭೈರತಿಯಿಂದ ಗೌರಿ ಹಬ್ಬಕ್ಕೆ ಸೀರೆ ಗಿಫ್ಟ್

    ಚುನಾವಣೆಗೆ ಈಗಿನಿಂದಲೇ ತಯಾರಿ- ಭೈರತಿಯಿಂದ ಗೌರಿ ಹಬ್ಬಕ್ಕೆ ಸೀರೆ ಗಿಫ್ಟ್

    ಬೆಂಗಳೂರು: ಉಪ ಚುನಾವಣೆಗೆ ಭರ್ಜರಿ ತಯಾರಿ ನಡೆದಿದ್ದು, ಕೆ.ಆರ್.ಪುರ ಅನರ್ಹ ಶಾಸಕ ಭೈರತಿ ಬಸವರಾಜ್ ಈಗಿನಿಂದಲೇ ಮತದಾರರನ್ನು ಮನವೊಲಿಸಲು ಯತ್ನಿಸುತ್ತಿದ್ದಾರೆ. ಇದರ ಭಾಗವಾಗಿ ಗೌರಿ ಹಬ್ಬಕ್ಕೆ ಸೀರೆ, ಅರಿಶಿನ, ಕುಂಕುಮ ಹಂಚುತ್ತಿದ್ದಾರೆ ಆರೋಪ ಕೇಳಿ ಬಂದಿದೆ.

    ಗೌರಿ ಗಣೇಶ ಹಬ್ಬದ ಗಿಫ್ಟ್ ನೀಡುವ ಮೂಲಕ ತದಾರರ ಮನವೊಲಿಸಲು ಭೈರತಿ ಮುಂದಾಗಿದ್ದಾರೆ. ಕೆ.ಆರ್.ಪುರ ಕ್ಷೇತ್ರದ ಬಸವನಪುರ ವಾರ್ಡ್‍ನಲ್ಲಿ ಅರಿಶಿನ ಕುಂಕುಮ ಬಳೆ ಸೀರೆ ಹಂಚುತ್ತಿರುವ ವಿಡಿಯೋ ವೈರಲ್ ಆಗಿದೆ. ಭೈರತಿ ಅವರು ತಮ್ಮ ಬೆಂಬಲಿಗರ ಮೂಲಕ ಈ ರೀತಿ ಮಾಡಿಸುತ್ತಿದ್ದಾರೆ. ಮುಂಬರುವ ಉಪ ಚುನಾವಣೆಗೆ ಈಗಲೇ ಸೀರೆ ಹಂಚುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಭೈರತಿ ಬಸವರಾಜ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸರ್ಕಾರ ಬೀಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅನರ್ಹ ಶಾಸಕರ ಅರ್ಜಿ ವಿಚಾರಣೆ ಸುಪ್ರೀಂನಲ್ಲಿದೆ. ಸುಪ್ರೀಂ ಕೋರ್ಟ್ ನೀಡಲಿರುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ.

  • ಕಾಂಗ್ರೆಸ್ಸಿನಿಂದ ಶಾಸಕ ಭೈರತಿ ಬಸವರಾಜ್ ಬಂಟ ನಾರಾಯಣ ಸ್ವಾಮಿ ಅಮಾನತು

    ಕಾಂಗ್ರೆಸ್ಸಿನಿಂದ ಶಾಸಕ ಭೈರತಿ ಬಸವರಾಜ್ ಬಂಟ ನಾರಾಯಣ ಸ್ವಾಮಿ ಅಮಾನತು

    ಬೆಂಗಳೂರು: ಕೆಆರ್ ಪುರಂ ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಬಂಟ ಬೆಂಗಳೂರು ಜಲಮಂಡಳಿ ಸದಸ್ಯನಾಗಿರುವ ನಾರಾಯಣಸ್ವಾಮಿಯನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.

    ಈ ಕುರಿತು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ನಾರಾಯಣ ಸ್ವಾಮಿಯನ್ನು ಪಕ್ಷದಿಂದ ಅಮಾನತುಗೊಳಿಸಿದ್ದೇವೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.

    ಘಟನೆ ಕುರಿತು ಮಾಧ್ಯಮಕ್ಕೆ ಸ್ಪಷ್ಟನೆ ನೀಡಿರುವ ನಾರಾಯಣಸ್ವಾಮಿ, ತಮ್ಮ ಕೃತ್ಯವನ್ನು ಸಮರ್ಥನೆ ಮಾಡಿಕೊಂಡಿದ್ದ. ಅಲ್ಲದೇ ಘಟನೆ ಕುರಿತ ವಿಡಿಯೋವನ್ನು ಮಾಧ್ಯಮಗಳು ಪ್ರಸಾರ ಮಾಡಿದರೆ ತನಗೆ ಯಾವುದೇ ನಷ್ಟವಿಲ್ಲ ಎಂದು ತಿಳಿಸಿದ್ದ.

    ರಾಜ್ಯ ವಿಧಾನಸಭಾ ಚುನಾವಣೆ ಕೇವಲ ಕೆಲ ತಿಂಗಳು ಇರುವ ಕಾರಣ ವೇಳೆ ನಾರಾಯಣಸ್ವಾಮಿ ಅವರ ಘಟನೆ ಪಕ್ಷ ಘನತೆಗೆ ದಕ್ಕೆ ತರುವ ಸಾಧ್ಯತೆ ಇರುವುದರಿಂದ ಪಕ್ಷದ ನಾಯಕರು ಈ ಕ್ರಮ ಕೈಗೊಂಡಿದ್ದಾರೆ.

    ಏನಿದು ಘಟನೆ?: ನಾರಾಯಣಸ್ವಾಮಿ ಎನ್‍ಆರ್‍ಐ ಬಡಾವಣೆಯ ಜಮೀನು ವಿಚಾರದಲ್ಲಿ ಅಕ್ರಮವಾಗಿ ಖಾತೆ ಮಾಡಿಕೊಡುವಂತೆ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಚೆಂಗಲ್ ರಾಯಪ್ಪಗೆ ಒತ್ತಡ ಹಾಕಿದ್ದ. ಜಮೀನು ವ್ಯಾಜ್ಯ ಕೋರ್ಟ್‍ನಲ್ಲಿದೆ, ಅಕ್ರಮವಾಗಿ ಖಾತೆ ಮಾಡಿಕೊಡಲ್ಲ ಎಂದು ಚೆಂಗಲ್ ರಾಯಪ್ಪ ಹೇಳಿದ್ದರು. ಹೀಗಾಗಿ ಕಳೆದ ಫೆಬ್ರವರಿ 16ರಂದು ಬೆಳಗ್ಗೆ 11 ಗಂಟೆ ವೇಳೆಯಲ್ಲಿ ಹೊರಮಾವು ನಲ್ಲಿರುವ ಬಿಬಿಎಂಪಿ ಕಚೇರಿಗೆ ನುಗ್ಗಿದ ನಾರಾಯಣಸ್ವಾಮಿ, ಎಆರ್‍ಒ ಚೆಂಗಲ್ ರಾಯಪ್ಪ ಮುಂದೆಯೇ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದಾನೆ. ಖಾತೆ ಮಾಡಿಕೊಡದಿದ್ದರೆ ಕಚೇರಿಯಲ್ಲಿರುವ ದಾಖಲೆಗಳನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ – ಸುದ್ದಿ ಪ್ರಸಾರ ಮಾಡಿ: ತನ್ನ ಕೃತ್ಯವನ್ನು ಸಮರ್ಥಿಸಿಕೊಂಡ ನಾರಾಯಣ ಸ್ವಾಮಿ

    ಚೆಂಗಲ್ ರಾಯಪ್ಪ ಖಡಕ್ ಅಧಿಕಾರಿ ಅಂತ ಗುರುತಿಸಿಕೊಂಡಿದ್ದ ವ್ಯಕ್ತಿಯಾಗಿದ್ದು, ಪೆಟ್ರೋಲ್ ಹಾಕೋದಾಗಿ ಬೆದರಿಸಿದ್ರೂ ಅವರು ಹೆದರಲಿಲ್ಲ. ಎರಡು ದಿನಗಳ ಹಿಂದೆ ಚೆಂಗಲ್ ರಾಯಪ್ಪ ಅವರನ್ನ ವರ್ಗಾವಣೆ ಮಾಡಲಾಗಿದೆ. ಸಿಎಂ ಮತ್ತು ಭೈರತಿ ಬಸವರಾಜ್ ಪ್ರಭಾವ ಬಳಸಿ ಚೆಂಗಲ್ ರಾಯಪ್ಪರನ್ನ ನಾರಾಯಣಸ್ವಾಮಿ ವರ್ಗಾವಣೆ ಮಾಡಿಸಿದ್ದಾನೆ ಎನ್ನಲಾಗಿದೆ.  ಇದನ್ನೂ ಓದಿ: ಶಾಸಕ ಭೈರತಿ ಬಸವರಾಜ್ ಬಂಟನ ಗೂಂಡಾಗಿರಿ- ಸರ್ಕಾರಿ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ತೀನೆಂದು ಬೆದರಿಕೆ

  • ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ – ಸುದ್ದಿ ಪ್ರಸಾರ ಮಾಡಿ: ತನ್ನ ಕೃತ್ಯವನ್ನು ಸಮರ್ಥಿಸಿಕೊಂಡ ನಾರಾಯಣ ಸ್ವಾಮಿ

    ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ – ಸುದ್ದಿ ಪ್ರಸಾರ ಮಾಡಿ: ತನ್ನ ಕೃತ್ಯವನ್ನು ಸಮರ್ಥಿಸಿಕೊಂಡ ನಾರಾಯಣ ಸ್ವಾಮಿ

    ಬೆಂಗಳೂರು: ಕೆಆರ್ ಪುರಂ ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚಲು ಯತ್ನಿಸಿದ್ದ ಘಟನೆಯನ್ನು ಬೆಂಗಳೂರು ಜಲಮಂಡಳಿ ಸದಸ್ಯನಾಗಿರುವ ನಾರಾಯಣಸ್ವಾಮಿ ಸಮರ್ಥಿಸಿಕೊಂಡಿದ್ದಾನೆ.

    ಈ ಕುರಿತು ಮಾಧ್ಯಮಕ್ಕೆ ಸ್ಪಷ್ಟನೆ ನೀಡಿರುವ ನಾರಾಯಣಸ್ವಾಮಿ, ಖಾತೆ ಮಾಡಿಕೊಡದೇ ವಿನಾಃ ಕಾರಣ ತಡಮಾಡುತ್ತಿದ್ದ ಕಾರಣಕ್ಕೆ ಅಧಿಕಾರಿಯ ಮುಂದೇ ನನ್ನ ಬೇಸರವನ್ನು ವ್ಯಕ್ತಪಡಿಸಿದೆ. ಇದು ಕೇವಲ ನನ್ನ ಒಬ್ಬನ ಸಮಸ್ಯೆಯಲ್ಲ 750 ಜನರ ಸಮಸ್ಯೆ ಎಂದು ಹೇಳಿದ್ದಾನೆ.

    ಪಶ್ಚಾತ್ತಾಪ ಇಲ್ಲ: ಈ ಕುರಿತು ಯಾವುದೇ ಕ್ಷಮೆ ಕೇಳುವ ಪ್ರಶ್ನೆ ಇಲ್ಲ. ನಾನು ಯಾವುದೇ ಕ್ಷಮೆ ಕೇಳುವಂತಹ, ಉದ್ದೇಶ ಪೂರ್ವಕ ತಪ್ಪು ಮಾಡಿಲ್ಲ. ಈ ಕುರಿತು ನಾನು ಯಾರನ್ನು ಕ್ಷಮೆ ಕೇಳುವುದಿಲ್ಲ. ಅಧಿಕಾರಿಗಳು ಜನಸಾಮಾನ್ಯರಿಗೆ ನೀಡುವ ಚಿತ್ರಹಿಂಸೆಯನ್ನು ಎದುರಿದ್ದೇನೆ ಅಷ್ಟೇ. ಕ್ಷೇತ್ರದ ಜನರಿಗೆ ಘಟನೆ ಕುರಿತು ಸಂಪೂರ್ಣ ಮಾಹಿತಿ ಇದೆ. ಈ ಕುರಿತು ಮಾತನಾಡಲು ಇದು ಸಮಯವಲ್ಲ. ಸೂಕ್ತ ವೇದಿಕೆಯಲ್ಲಿ ನಾನು ಉತ್ತರ ನೀಡುತ್ತೇನೆ. ಇಂತಹ ದೃಶ್ಯಗಳನ್ನು ಮಾಧ್ಯಮದಲ್ಲಿ ಪ್ರಸಾರ ಮಾಡಿದರೆ ನನಗೆ ಏನು ನಷ್ಟವಿಲ್ಲ, ಪ್ರಸಾರ ಮಾಡಿ ಎಂದಿದ್ದಾನೆ.

    ಪೆಟ್ರೋಲ್ ಎರಚಿಲ್ಲ: ನನ್ನ ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರು ಸೂಚಿಸಿದ ಕೆಲವು ಪೌಡರ್ ನೀರಿನಲ್ಲಿ ಕಲಸಿ ಕುಡಿಯುತ್ತೇನೆ. ಆ ವೇಳೆ ನನ್ನ ಕೈನಲ್ಲಿದ್ದ ಆ ಬಾಟಲ್ ನೀರನ್ನು ಬೇಸರದಿಂದ ಎರಚಿದ್ದೇನೆ. ಶಾಸಕರಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಆದರೆ ಜನರ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲು ಮಾತ್ರ ಅವರಿಗೆ ಹೇಳಿದ್ದೆ ಎಂದಿದ್ದಾನೆ.

    ನಾನು ಕೇವಲ ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತ ಅಷ್ಟೇ. ಇದರಲ್ಲಿ ಸಿಎಂ, ಶಾಸಕರ ಪ್ರಭಾವ ಬಳಸಿಲ್ಲ. ಅಧಿಕಾರಿ ಕ್ರಮದಿಂದ ಬೇಸತ್ತು ಈ ರೀತಿ ನಡೆದಿದೆ. ಆದರೆ ಸಮಾಜದಲ್ಲಿ ಯಾವುದೇ ತಪ್ಪು ಕಾರ್ಯ ಮಾಡಿಲ್ಲ. ಘಟನೆ ನಡೆದು ಒಂದು ವಾರ ಆಗಿದೆ. ಈ ಕುರಿತು ಯಾವುದೇ ಪಶ್ಚಾತ್ತಾಪ ಪಡುವುದು ಇಲ್ಲ. ಅನಿವಾರ್ಯವಾಗಿ ಸಾರ್ವಜನಿಕ ಜೀವನ ಪ್ರವೇಶ ಮಾಡಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾನೆ.

    ಅಧಿಕಾರಿ ವರ್ಗಾವಣೆ: ಕಳೆದ 20 ದಿನಗಳ ಹಿಂದೆಯೇ ಘಟನೆ ಕಾರಣರಾದ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ. ಅಧಿಕಾರಿಯ ವರ್ಗಾವಣೆಗೆ ನಾನು ಯಾರ ಮೇಲು ಒತ್ತಡ ಹಾಕಿಲ್ಲ. ಅದಕ್ಕೂ ನನಗೂ ಸಂಬಂಧವಿಲ್ಲ. ಕೆಆರ್ ಪುರಂ ಬ್ಲಾಕ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೆ. ಪ್ರಸ್ತುತ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಇಷ್ಟ ಪಟ್ಟು ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾನೆ.

    ಏನಿದು ಘಟನೆ?: ನಾರಾಯಣಸ್ವಾಮಿ ಎನ್‍ಆರ್‍ಐ ಬಡಾವಣೆಯ ಜಮೀನು ವಿಚಾರದಲ್ಲಿ ಅಕ್ರಮವಾಗಿ ಖಾತೆ ಮಾಡಿಕೊಡುವಂತೆ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಚೆಂಗಲ್ ರಾಯಪ್ಪಗೆ ಒತ್ತಡ ಹಾಕಿದ್ದ. ಜಮೀನು ವ್ಯಾಜ್ಯ ಕೋರ್ಟ್‍ನಲ್ಲಿದೆ, ಅಕ್ರಮವಾಗಿ ಖಾತೆ ಮಾಡಿಕೊಡಲ್ಲ ಎಂದು ಚೆಂಗಲ್ ರಾಯಪ್ಪ ಹೇಳಿದ್ದರು. ಹೀಗಾಗಿ ಕಳೆದ ಫೆಬ್ರವರಿ 16ರಂದು ಬೆಳಗ್ಗೆ 11 ಗಂಟೆ ವೇಳೆಯಲ್ಲಿ ಹೊರಮಾವು ನಲ್ಲಿರುವ ಬಿಬಿಎಂಪಿ ಕಚೇರಿಗೆ ನುಗ್ಗಿದ ನಾರಾಯಣಸ್ವಾಮಿ, ಎಆರ್‍ಒ ಚೆಂಗಲ್ ರಾಯಪ್ಪ ಮುಂದೆಯೇ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದಾನೆ. ಖಾತೆ ಮಾಡಿಕೊಡದಿದ್ದರೆ ಕಚೇರಿಯಲ್ಲಿರುವ ದಾಖಲೆಗಳನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ.

    ಚೆಂಗಲ್ ರಾಯಪ್ಪ ಖಡಕ್ ಅಧಿಕಾರಿ ಅಂತ ಗುರುತಿಸಿಕೊಂಡಿದ್ದ ವ್ಯಕ್ತಿಯಾಗಿದ್ದು, ಪೆಟ್ರೋಲ್ ಹಾಕೋದಾಗಿ ಬೆದರಿಸಿದ್ರೂ ಅವರು ಹೆದರಲಿಲ್ಲ. ಎರಡು ದಿನಗಳ ಹಿಂದೆ ಚೆಂಗಲ್ ರಾಯಪ್ಪ ಅವರನ್ನ ವರ್ಗಾವಣೆ ಮಾಡಲಾಗಿದೆ. ಸಿಎಂ ಮತ್ತು ಭೈರತಿ ಬಸವರಾಜ್ ಪ್ರಭಾವ ಬಳಸಿ ಚೆಂಗಲ್ ರಾಯಪ್ಪರನ್ನ ನಾರಾಯಣಸ್ವಾಮಿ ವರ್ಗಾವಣೆ ಮಾಡಿಸಿದ್ದಾನೆ ಎನ್ನಲಾಗಿದೆ.

    https://www.youtube.com/watch?v=1hoUCWe-r14