Tag: ಭೈರತಿ ರಣಗಲ್

  • ಶಿವಣ್ಣಗೆ ನಾಯಕಿಯಾಗುವ ಲಕ್ಕಿ ಚಾನ್ಸ್ ಗಿಟ್ಟಿಸಿಕೊಂಡ ರುಕ್ಮಿಣಿ ವಸಂತ್

    ಶಿವಣ್ಣಗೆ ನಾಯಕಿಯಾಗುವ ಲಕ್ಕಿ ಚಾನ್ಸ್ ಗಿಟ್ಟಿಸಿಕೊಂಡ ರುಕ್ಮಿಣಿ ವಸಂತ್

    ಸ್ಯಾಂಡಲ್‌ವುಡ್‌ಗೆ (Sandalwood) ಭರವಸೆಯ ನಟಿ ಸಿಕ್ಕಿದ್ದಾರೆ. ರಿಲೀಸ್ ಆಗಿದ್ದು ಒಂದೇ ಸಿನಿಮಾ ಆಗಿದ್ರೂ ಕೂಡ ಸಾಲು ಸಾಲು ಸಿನಿಮಾ ಅವಕಾಶ ಬಾಚಿಕೊಳ್ತಿದ್ದಾರೆ. ಅವರೇ ‘ಸಪ್ತಸಾಗರದಾಚೆ ಎಲ್ಲೋ’ ಚಿತ್ರದ ನಾಯಕಿ ರುಕ್ಮಿಣಿ ವಸಂತ್. ಸದ್ಯ ಶಿವರಾಜ್‌ಕುಮಾರ್ ನಟನೆಯ ‘ಭೈರತಿ ರಣಗಲ್‌’ಗೆ (Bhairathi Rangal) ನಾಯಕಿಯಾಗುವ ಮೂಲಕ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ.

    5 ವರ್ಷಗಳ ಹಿಂದೆ ಬಂದಿದ್ದ ‘ಮಫ್ತಿ’ (Mufti) ಸಿನಿಮಾ ಬ್ಲಾಕ್‌ಬಸ್ಟರ್ ಹಿಟ್ ಆಗಿತ್ತು. ಆ ಸಮಯದಲ್ಲೇ ಶಿವಣ್ಣ ಸೀಕ್ವೆಲ್ ಮಾಡುವ ಬಗ್ಗೆ ಮಾತನಾಡಿದ್ದರು. ನಂತರ ಅದು ಸೀಕ್ವೆಲ್ ಅಲ್ಲ ಪ್ರೀಕ್ವೆಲ್ ಅನ್ನೋದ ಖಚಿತವಾಗಿತ್ತು. ಚಿತ್ರದಲ್ಲಿ ಸೆಂಚುರಿ ಸ್ಟಾರ್ ಮಾಫಿಯಾ ಡಾನ್ ‘ಭೈರತಿ ರಣಗಲ್’ ಪಾತ್ರದಲ್ಲಿ ಅಬ್ಬರಿಸಿದ್ದರು. ರಾಕ್ಷಸನಂತಹ ಪಾತ್ರದಲ್ಲಿ ಶಿವಣ್ಣ ಹೆಚ್ಚು ಡೈಲಾಗ್‌ಗಳಿಲ್ಲದೇ ಕಣ್ಣಿನಲ್ಲೇ ನಟಿಸಿ ಕಮಾಲ್ ಮಾಡಿದ್ದರು. ಆ ಪಾತ್ರ ಪ್ರೇಕ್ಷಕರನ್ನು ಆವರಿಸಿಕೊಂಡಿತ್ತು. ಇದೀಗ ‘ಭೈರತಿ ರಣಗಲ್’ ಯಾರು? ಆತನ ಹಿನ್ನೆಲೆ ಏನು ಎನ್ನುವುದನ್ನು ತೆರೆ ತರಲಾಗುತ್ತಿದೆ. ಇದೀಗ ಶಿವಣ್ಣಗೆ ಜೋಡಿಯಾಗುವ ನಾಯಕಿಯ ಅನಾವರಣವಾಗಿದೆ.

    ಗೀತಾ ಶಿವರಾಜ್‌ಕುಮಾರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ‘ಭೈರತಿ ರಣಗಲ್’ ಚಿತ್ರಕ್ಕೆ ಯುವನಟಿ ರುಕ್ಮಿಣಿ ವಸಂತ್ ನಾಯಕಿ ಎಂದು ಚಿತ್ರತಂಡ ಅನೌನ್ಸ್ ಮಾಡಿದ್ದಾರೆ. ಇತ್ತೀಚಿಗೆ ನಡೆದ ಚಿತ್ರದ ಮುಹೂರ್ತ ಸಮಾರಂಭದಲ್ಲಿ ನಾಯಕಿ ಬಗ್ಗೆ ಕೇಳಲಾದ ಪ್ರಶ್ನೆಗೆ ನಿರ್ದೇಶಕ ನರ್ತನ್ ಪ್ರತಿಕ್ರಿಯೆ ನೀಡಿದ್ದರು. ನಾಯಕಿಯ ಪಾತ್ರಕ್ಕೆ ಬಹಳ ಪ್ರಾಮುಖ್ಯತೆಯಿದೆ. ಹಾಗಾಗಿ ಆ ಪಾತ್ರಕ್ಕೆ ಯಾರು ಸೂಕ್ತ ಎಂದು ಎನಿಸುತ್ತಾರೋ ಅವರನ್ನೇ ಆಯ್ಕೆ ಮಾಡುತ್ತೀವಿ ಎಂದಿದ್ದರು. ಈಗ ನಟಿ ರುಕ್ಮಿಣಿ ಅವರ ಆಯ್ಕೆಯಾಗಿದೆ. ಇದನ್ನೂ ಓದಿ:ಆ ಸಂಬಂಧ ಅರ್ಧಕ್ಕೆ ನಿಂತು ಹೋಯಿತು, ಆದ್ರೆ ನನಗೆ ಮದುವೆ ಬಗ್ಗೆ ನಂಬಿಕೆಯಿದೆ- ನಟಿ ವೈಷ್ಣವಿ

    ಮೊದಲ ಬಾರಿಗೆ ಶಿವರಾಜ್‌ಕುಮಾರ್‌ಗೆ ನಾಯಕಿಯಾಗಿ ತೆರೆಹಂಚಿಕೊಳ್ಳಲು ನಟಿ ರುಕ್ಮಿಣಿ ರೆಡಿಯಾಗಿದ್ದಾರೆ. ಎಂದೂ ಮಾಡಿರದ ಪಾತ್ರದಲ್ಲಿ ನಟಿ ಜೀವತುಂಬಲಿದ್ದಾರೆ. ಜೂನ್ 10ರಿಂದ ಶೂಟಿಂಗ್ ನಡೆಯಲಿದೆ ಎಂದು ಚಿತ್ರತಂಡ ತಿಳಿಸಿದೆ. ಸದ್ಯ ರುಕ್ಮಿಣಿ, ವಿಜಯ್ ಸೇತುಪತಿ ಜೊತೆ ಮಲೇಷಿಯಾದಲ್ಲಿ ತಮಿಳು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

    ‘ಘೋಸ್ಟ್’ ಶ್ರೀನಿ ನಿರ್ದೇಶನದ ‘ಬೀರ್‌ಬಲ್’ ಚಿತ್ರಕ್ಕೆ ನಾಯಕಿ ನಟಿಯಾಗಿ ಬೆಂಗಳೂರು ಬ್ಯೂಟಿ ರುಕ್ಮಿಣಿ ಎಂಟ್ರಿ ಕೊಟ್ಟರು. ಮೊದಲ ಸಿನಿಮಾದಲ್ಲೇ ನಟಿ ಗಮನ ಸೆಳೆದರು. ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ‘ಬಾನದಾರಿಯಲಿ’, ರಕ್ಷಿತ್ ಶೆಟ್ಟಿ ಜೊತೆ ‘ಸಪ್ತಸಾಗರದಾಚೆ ಎಲ್ಲೋ’, ಶ್ರೀಮುರಳಿ ಜೊತೆ ‘ಬಘೀರ’ ಸಿನಿಮಾ ತೆರೆಗೆ ಬರೋದ್ದಕ್ಕೆ ರೆಡಿಯಾಗಿದೆ. ತಮಿಳಿನ ನಟ ವಿಜಯ್ ಸೇತುಪತಿ (Vijay Seethupathi) ಜೊತೆ ರುಕ್ಮಿಣಿ ನಟಿಸುತ್ತಿದ್ದಾರೆ. ಈ ಬೆನ್ನಲ್ಲೇ ಶಿವಣ್ಣ ಜೊತೆ ನಟಿಸುವ ಬಂಪರ್ ಆಫರ್ ಕನ್ನಡದ ಯುವನಟಿಗೆ ಸಿಕ್ಕಿದೆ.

  • Bhairathi Ranagal: ಶಿವಣ್ಣನ ಸಿನಿಮಾದಲ್ಲಿ ಬಾಲಿವುಡ್ ನಟ ರಾಹುಲ್ ಬೋಸ್

    Bhairathi Ranagal: ಶಿವಣ್ಣನ ಸಿನಿಮಾದಲ್ಲಿ ಬಾಲಿವುಡ್ ನಟ ರಾಹುಲ್ ಬೋಸ್

    ‘ಮಫ್ತಿ’ ನೋಡಿ ಮೆಚ್ಚಿಕೊಂಡ ಅಭಿಮಾನಿಗಳಿಗೆ ಶಿವರಾಜ್‌ಕುಮಾರ್ ಅವರು ‘ಭೈರತಿ ರಣಗಲ್’ (Bhairathi Ranagal) ಸಿನಿಮಾ ಅಪ್‌ಡೇಟ್ ಕೊಡುವ ಮೂಲಕ ಸಿಹಿಸುದ್ದಿ ನೀಡಿದ್ದಾರೆ. ಚಿತ್ರದಲ್ಲಿ ಶಿವಣ್ಣ ಎದುರಾಳಿಯಾಗಿ ಬಾಲಿವುಡ್ ನಟ ರಾಹುಲ್ ಬೋಸ್ (Rahul Bose) ನಟಿಸಲಿದ್ದಾರೆ.

    ನರ್ತನ್ ನಿರ್ದೇಶನ, ಗೀತಾ ಪಿಕ್ಚರ್ ನಿರ್ಮಾಣದಲ್ಲಿ ‘ಭೈರತಿ ರಣಗಲ್’ ಪ್ರೀಕ್ವೆಲ್ ಮೂಡಿ ಬರುತ್ತಿದೆ. ಇದು ‘ಮಫ್ತಿ’ (Mufti) ಸಿನಿಮಾ ಹಿನ್ನೆಲೆ ಚಿತ್ರವಾಗಿ ಮೂಡಿ ಬರಲಿದೆ. ಈಗಾಗಲೇ ಕಥೆ ಸಿದ್ಧವಾಗಿದ್ದು, ಜೂನ್ 10ರಿಂದ ಶೂಟಿಂಗ್ ಶುರುವಾಗಲಿದೆ.

    ಹ್ಯಾಟ್ರಿಕ್ ಹೀರೋ ಶಿವಣ್ಣ (Shivanna) ಮುಂದೆ ಘರ್ಜಿಸಲು ಬಹುಭಾಷಾ ನಟ ರಾಹುಲ್ ಬೋಸ್ (Rahul Bose) ಬರುತ್ತಿದ್ದಾರೆ. ಚಿತ್ರದಲ್ಲಿ ಶಿವಣ್ಣಗೆ ವಿಲನ್ ಆಗಿ ಕಾಣಿಸಿಕೊಳ್ತಿದ್ದಾರೆ. ರಾಹುಲ್ ಭಾಗದ ಕಥೆ ಕೇಳಿ ಥ್ರಿಲ್ ಆಗಿ, ಈ ಚಿತ್ರದ ಭಾಗವಾಗಲು ರಾಹುಲ್ ಓಕೆ ಎಂದಿದ್ದಾರಂತೆ. ಇದನ್ನೂ ಓದಿ:ಜೂನ್‌ನಲ್ಲಿ ಅಂಬಿ ಪುತ್ರನ ಅದ್ದೂರಿ ಮದುವೆ- ಆಮಂತ್ರಣ ಪತ್ರಿಕೆ ಇಲ್ಲಿದೆ

    8 ವರ್ಷಗಳ ಹಿಂದೆ ‘ನಿರುತ್ತರ’ ಎಂಬ ಸಿನಿಮಾದಲ್ಲಿ ರಾಹುಲ್ ಬೋಸ್ ನಟಿಸಿದ್ದರು. 8 ವರ್ಷಗಳ ಬಳಿಕ ‘ಭೈರತಿ ರಣಗಲ್’ ಮೂಲಕ ರಾಹುಲ್ ಬೋಸ್ ಕನ್ನಡಕ್ಕೆ ಕಮ್ ಬ್ಯಾಕ್ ಆಗುತ್ತಿದ್ದಾರೆ.

  • ಭೈರತಿ ರಣಗಲ್ ಶಿವಣ್ಣಗೆ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಜೋಡಿ?

    ಭೈರತಿ ರಣಗಲ್ ಶಿವಣ್ಣಗೆ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಜೋಡಿ?

    ಶಿವರಾಜ್ ಕುಮಾರ್ (Shivraj Kumar) ನಟನೆಯ ಬಹುನಿರೀಕ್ಷಿತ ಸಿನಿಮಾ ಭೈರತಿ ರಣಗಲ್ (Bhairati Rangal) ಸಿನಿಮಾಗೆ ಮೇ 26ರಂದು ಚಾಲನೆ ನೀಡಲಾಗಿದೆ. ಸಿನಿಮಾ ಶೂಟಿಂಗ್ ಸಿದ್ಧತೆಯ ಬೆನ್ನಲ್ಲೇ ಈ‌‌ ಚಿತ್ರಕ್ಕೆ ನಾಯಕಿ ಯಾರಿರಬಹುದು ಎನ್ನುವ ಕುತೂಹಲ ಮೂಡಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.

    ನರ್ತನ್ (Narthan) ನಿರ್ದೇಶನದ ಮಫ್ತಿ ಸಕ್ಸಸ್ ನಂತರ ಈ ಚಿತ್ರದ ಸೀಕ್ವೇಲ್ ಭೈರತಿ ರಣಗಲ್ ಗೆ ಭರ್ಜರಿ ತಯಾರಿ ನಡೆಯುತ್ತಿದೆ. ಶಿವಣ್ಣಗೆ ನಾಯಕಿಯಾಗುವ ಆ ಲಕ್ಕಿ ನಟಿ ಯಾರು ಎಂಬುದಕ್ಕೆ ಸುಳಿವು ಸಿಕ್ಕಿದ್ದು, ಶಿವಣ್ಣ ಜೊತೆ ತಮನ್ನಾ ಭಾಟಿಯಾ ಡ್ಯುಯೇಟ್ ಹಾಡೋದಕ್ಕೆ ರೆಡಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಭೈರತಿ ರಣಗಲ್ ಚಿತ್ರದಲ್ಲಿ ನಾಯಕಿ ಪಾತ್ರಕ್ಕೂ ಸಾಕಷ್ಟು ಪ್ರಾಮುಖ್ಯತೆ ಇದ್ದು, ಮಿಲ್ಕಿ ಬ್ಯೂಟಿ ತಮನ್ನಾರನ್ನ (Tamannaah Bhatia) ಚಿತ್ರತಂಡ ಫೈನಲ್ ಮಾಡಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಹೊಯ್ಸಳ’ ಬಲಿ- ಫ್ಯಾನ್ಸ್‌ಗೆ ಸಿಕ್ತು ಸಿಹಿಸುದ್ದಿ

    ನಿನ್ನೆ ಶುಕ್ರವಾರ (ಮೇ 26) ನಡೆದ ಚಿತ್ರದ ಪ್ರೆಸ್ ಮೀಟ್ ನಲ್ಲಿ, ನಾಯಕಿಯ ಆಯ್ಕೆ ಬಗ್ಗೆ ನಿರ್ದೇಶನ ನರ್ತನ್ ರಿಯಾಕ್ಟ್ ಮಾಡಿದ್ದರು. ನಮಗೆ ಶಿವಣ್ಣ ಅವರ ಡೇಟ್ ತುಂಬಾ ಮುಖ್ಯ. ಆ ಡೇಟು ಪ್ಲಸ್ ರೇಟು ಮ್ಯಾಚ್ ಆದರೆ ಯಾರಾದರೂ ಓಕೆ ಅಂತಾ ನಗುತ್ತಾ ನಿರ್ದೇಶಕ ನರ್ತನ್ ಪ್ರತಿಕ್ರಿಯೆ ನೀಡಿದ್ದರು. ಬಳಿಕ ಶಿವಣ್ಣ ಮಾತನಾಡಿ, ನಾಯಕಿಯ ಪಾತ್ರಕ್ಕೆ ಯಾರು ಸೂಟ್ ಆಗುತ್ತಾರೋ ಅವರೇ ಹಾಕಿಕೊಳ್ತೀವಿ. ಅದಕ್ಕೆ ಕನ್ನಡ ನಟಿ ಪರಭಾಷಾ ನಟಿ ಎಂಬುದು ಇಲ್ಲ. ಆ ಪಾತ್ರಕ್ಕೆ ಹೊಂದುವಂತಹ ನಟಿಯನ್ನ ಆಯ್ಕೆ ಮಾಡ್ತೀವಿ ಅಂತಾ ತಿಳಿಸಿದ್ದರು. ಕನ್ನಡದ ನಟಿಯನ್ನ ಹಾಕಬಾರದು ಅಂತಾ ಏನಿಲ್ಲ. ನಮ್ಮ ಭಾಷೆಯ ನಟಿ ಸೂಟ್ ಆಗುತ್ತಾರೆ ಅಂದರೆ ಚಿತ್ರಕ್ಕೆ ಹಾಕಿಕೊಳ್ಳಲು ಯಾವುದೇ ಬೇಸರವಿಲ್ಲ. ಆದರೆ ನಾಯಕಿಯ ಪಾತ್ರಕ್ಕೆ ಪ್ರಾಮುಖ್ಯತೆ ಇದೆ. ಅದೊಂದು ಪ್ರಬುದ್ಧ ಪಾತ್ರ ಎಂದು ಹೇಳಿದ್ದರು.

    ಈ ಬೆನ್ನಲ್ಲೇ ತಮನ್ನಾ ಅವರು ಶಿವಣ್ಣಗೆ ಜೋಡಿಯಾಗುತ್ತಾರೆ ಎಂದು ಹೇಳಲಾಗುತ್ತಿದೆ ಅಷ್ಟಕ್ಕೂ ಈ ವಿಚಾರ ನಿಜಾನಾ? ಅಥವಾ ಗಾಳಿಸುದ್ದಿ ನಾ? ಎಂಬುದನ್ನ ಚಿತ್ರತಂಡವೇ ಸ್ಪಷ್ಟಪಡಿಸಬೇಕಿದೆ. ಬಲ್ಲ ಮೂಲಗಳಿಂದ ಮಾಹಿತಿ ಸಿಕ್ಕಿರುವ ಪ್ರಕಾರ ಬಹುತೇಕ ತಮನ್ನಾ ಅವರೇ ಆಗಲಿದ್ದಾರೆ ಎನ್ನಲಾಗುತ್ತಿದೆ.

  • ಇದು ಭೈರತಿ ರಣಗಲ್ ಸಿನಿಮಾ ಟೀಮ್

    ಇದು ಭೈರತಿ ರಣಗಲ್ ಸಿನಿಮಾ ಟೀಮ್

    ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ (Geeta) ಶಿವರಾಜಕುಮಾರ್  ಅವರು ನಿರ್ಮಿಸುತ್ತಿರುವ, ನರ್ತನ್ (Narthan) ನಿರ್ದೇಶನದ, ಶಿವರಾಜಕುಮಾರ್ ((Shivaraj Kumar)) ನಾಯಕರಾಗಿ ನಟಿಸುತ್ತಿರುವ ‘ಭೈರತಿ ರಣಗಲ್’ (Bhairati Rangal) ಚಿತ್ರದ ಮುಹೂರ್ತ ಸಮಾರಂಭ ಗವಿಪುರದ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು.

    ಮಫ್ತಿ ಚಿತ್ರದ ಶಿವರಾಜಕುಮಾರ್ ಅವರ ಭೈರತಿ ರಣಗಲ್ ಪಾತ್ರ ಇನ್ನು ಎಲ್ಲರ ಮನದಲ್ಲಿದೆ. ಆ ಪಾತ್ರವನ್ನು ಕೇಂದ್ರವಾಗಿಟ್ಟುಕೊಂಡು ಈ ಚಿತ್ರದ ಕಥೆ ಮಾಡಲಾಗಿದೆ. ಇದು ಮಫ್ತಿ ಚಿತ್ರದ ಪ್ರೀಕ್ವೆಲ್. ಮಫ್ತಿ ಚಿತ್ರದಲ್ಲಿ ಮಧ್ಯಾಂತರದ ನಂತರ ಈ ಪಾತ್ರ ಬರುತ್ತದೆ. ಇಲ್ಲಿ ಭೈರತಿ ರಣಗಲ್ ಆಗಿದ್ದು ಹೇಗೆ ಎಂದು ತಿಳಿಯುತ್ತದೆ.  ಶಿವರಾಜಕುಮಾರ್ ಅವರು ಈ ಚಿತ್ರದ ನಾಯಕರಾಗಲು ಒಪ್ಪಿರುವುದು ಹಾಗೂ ಗೀತಾ ಶಿವರಾಜಕುಮಾರ್ ಅವರು ನಿರ್ಮಾಣ ಮಾಡುತ್ತಿರುವುದು ತುಂಬಾ ಸಂತೋಷವಾಗಿದೆ. ರವಿ‌ ಬಸ್ರೂರ್ ಸಂಗೀತ ನಿರ್ದೇಶನ, ನವೀನ್ ಕುಮಾರ್ ಅವರ ಛಾಯಾಗ್ರಹಣ ಹಾಗೂ ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಇಂದು ಮುಹೂರ್ತ ನೆರವೇರಿದೆ ಹೆಚ್ಚಿನ ವಿವರಗಳನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ನಿರ್ದೇಶಕ ನರ್ತನ್ ತಿಳಿಸಿದರು.

    ಮಫ್ತಿ ಚಿತ್ರದ ಭೈರತಿ ರಣಗಲ್ ನನಗೆ ಇಷ್ಟವಾದ ಪಾತ್ರ. ಈ ಚಿತ್ರವನ್ನು ನಮ್ಮ ಸಂಸ್ಥೆಯಿಂದ ನಿರ್ಮಾಣ ಮಾಡುತ್ತಿದ್ದೇವೆ.  ಚಿತ್ರದ ಪ್ರಾರಂಭಕ್ಕೆ ಸಮಯ ಈಗ ಕೂಡಿ ಬಂದಿದೆ. ಮಫ್ತಿ ಬಂದು ಆರು ವರ್ಷಗಳಾಗಿದೆ. ಈಗಲೂ ನಾನು ಹಾಗೆ ಇದ್ದೀನಿ. ಹಾಗಾಗಿ ಈ ಪಾತ್ರ ಮಾಡಲು ಅನುಕೂಲವಾಗುತ್ತದೆ. ಪ್ರೀಕ್ವೆಲ್ ಆಗಿರುವುದರಿಂದ ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತೇನೆ. ನರ್ತನ್ ಕಥೆ ಚಿನ್ನಾಗಿ ಮಾಡಿಕೊಂಡಿದ್ದಾರೆ ಎಂದರು ನಾಯಕ ಶಿವರಾಜಕುಮಾರ್. ಇದನ್ನೂ ಓದಿ:ಈ ಕಾರಣಕ್ಕಾಗಿ ಯಶ್ ಸಿನಿಮಾ ಕೈ ಬಿಟ್ಟರು: ನಿರ್ದೇಶಕ ನರ್ತನ್

    ಭೈರತಿ ರಣಗಲ್ ಚಿತ್ರವನ್ನು ನಮ್ಮ ಗೀತಾ ಪಿಕ್ಚರ್ಸ್ ಮೂಲಕ ನಿರ್ಮಾಣ ಮಾಡಬೇಕೆಂದು ಮೊದಲೆ ನಿರ್ಧಾರವಾಗಿತ್ತು. ಈಗ ಚಿತ್ರ ಆರಂಭವಾಗಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕಿ ಗೀತಾ ಶಿವರಾಜಕುಮಾರ್. ನಿವೇದಿತಾ ಶಿವರಾಜಕುಮಾರ್,  ಕೆ.ಪಿ.ಶ್ರೀಕಾಂತ್, ಛಾಯಾಗ್ರಹಕ ನವೀನ್ ಕುಮಾರ್ ಹಾಗೂ ಕಲಾ ನಿರ್ದೇಶಕ ಶಿವಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

  • ‘ಭೈರತಿ ರಣಗಲ್’ಗೆ ಡೇಟು ರೇಟಿನ ನಾಯಕಿ ಬೇಕಂತೆ

    ‘ಭೈರತಿ ರಣಗಲ್’ಗೆ ಡೇಟು ರೇಟಿನ ನಾಯಕಿ ಬೇಕಂತೆ

    ಸ್ಯಾಂಡಲ್‌ವುಡ್‌ನಲ್ಲಿ (Sandalwood) ಹವಾ ಕ್ರಿಯೇಟ್ ಮಾಡಿದ ಚಿತ್ರ ಅಂದರೆ ‘ಮಫ್ತಿ’ (Mufti) ಸಿನಿಮಾ. ಶಿವಣ್ಣ- ನರ್ತನ್ (Narthan) ಕಾಂಬೋದಲ್ಲಿ ಈ ಚಿತ್ರ ಕಮಾಲ್ ಮಾಡಿತ್ತು. ಇದೀಗ ಇದೇ ಸಿನಿಮಾದ ಪ್ರೀಕ್ವೆಲ್ ಜೊತೆ ಮಫ್ತಿ ಜೋಡಿ ‘ಭೈರತಿ ರಣಗಲ್’ ಸಿನಿಮಾ ಕಥೆ ಹೇಳೋದಕ್ಕೆ ರೆಡಿಯಾಗಿದ್ದಾರೆ. ಹಾಗಾದರೆ ಶಿವಣ್ಣಗೆ ಜೋಡಿಯಾಗೋ ಆ ನಾಯಕಿ ಯಾರು.? ಈ ಬಗ್ಗೆ ಸ್ವತಃ ಶಿವಣ್ಣ- ನಿರ್ದೇಶಕ ನರ್ತನ್ ಸ್ಪಷ್ಟನೆ ನೀಡಿದ್ದಾರೆ.

    ‘ಮಫ್ತಿ’ ಸಿನಿಮಾದಲ್ಲಿ ಶಿವರಾಜ್‌ಕುಮಾರ್ (Shivarajkumar) ಅಬ್ಬರಿಸಿದ್ದರು. ‘ಮಫ್ತಿ’ ಪಾರ್ಟ್ 2 ಆಗಿರೋ ‘ಭೈರತಿ ರಣಗಲ್’ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆಯಿದೆ. ಸದ್ಯ ‘ಭೈರತಿ ರಣಗಲ್’ (Bhairathi Rangal) ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಬಂಡೆಮಹಾಕಾಳಿ ದೇವಸ್ಥಾನದಲ್ಲಿ (Bande Mahakali) ಶಿವಣ್ಣ ಸಿನಿಮಾದ ಅದ್ದೂರಿ ಮುಹೂರ್ತ ಕೂಡ ಮಾಡಲಾಯ್ತು. ಶಿವಣ್ಣಗೆ ನಾಯಕಿಯಾಗೋ (Heroine) ಆ ನಟಿ ಯಾರು.? ಕನ್ನಡದ ಯುವನಟಿಗೆ ಚಾನ್ಸ್ ಸಿಗುತ್ತಾ.? ಅಥವಾ ಪರಭಾಷಾ ನಟಿ ಶಿವರಾಜ್‌ಕುಮಾರ್ ಜೋಡಿಯಾಗುತ್ತಾರಾ? ಈ ವಿಚಾರಕ್ಕೆ ಇದೀಗ ಉತ್ತರ ಸಿಕ್ಕಿದೆ.

    ನಮಗೆ ಶಿವಣ್ಣ ಅವರ ಡೇಟ್ ತುಂಬಾ ಮುಖ್ಯ. ಆ ಡೇಟು ಪ್ಲಸ್ ರೇಟು ಮ್ಯಾಚ್ ಆದರೆ ಯಾರಾದರೂ ಓಕೆ ಅಂತಾ ನಗುತ್ತಾ ನಿರ್ದೇಶಕ ನರ್ತನ್ ಪ್ರತಿಕ್ರಿಯೆ ನೀಡಿದ್ದಾರೆ. ಬಳಿಕ ಶಿವಣ್ಣ ಮಾತನಾಡಿ, ನಾಯಕಿಯ ಪಾತ್ರಕ್ಕೆ ಯಾರು ಸೂಟ್ ಆಗುತ್ತಾರೋ ಅವರೇ ಹಾಕಿಕೊಳ್ತೀವಿ. ಅದಕ್ಕೆ ಕನ್ನಡ ನಟಿ ಪರಭಾಷಾ ನಟಿ ಎಂಬುದು ಇಲ್ಲ. ಆ ಪಾತ್ರಕ್ಕೆ ಹೊಂದುವಂತಹ ನಟಿಯನ್ನ ಆಯ್ಕೆ ಮಾಡ್ತೀವಿ ಅಂತಾ ತಿಳಿಸಿದ್ದಾರೆ. 100% ಕನ್ನಡದ ನಟಿಯನ್ನ ಹಾಕಬಾರದು ಅಂತಾ ಏನಿಲ್ಲ. ನಮ್ಮ ಭಾಷೆಯ ನಟಿ ಸೂಟ್ ಆಗುತ್ತಾರೆ ಅಂದರೆ ಚಿತ್ರಕ್ಕೆ ಹಾಕಿಕೊಳ್ಳಲು ಯಾವುದೇ ಬೇಸರವಿಲ್ಲ. ಆದರೆ ನಾಯಕಿಯ ಪಾತ್ರಕ್ಕೆ ಪ್ರಾಮುಖ್ಯತೆ ಇದೆ. ಅದೊಂದು ಪ್ರಬುದ್ಧ ಪಾತ್ರ ಎಂದು ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ಈ ಕಾರಣಕ್ಕಾಗಿ ಯಶ್ ಸಿನಿಮಾ ಕೈ ಬಿಟ್ಟರು: ನಿರ್ದೇಶಕ ನರ್ತನ್

    ‘ಭೈರತಿ ರಣಗಲ್’ ಸಿನಿಮಾ ಜೂನ್ 10ರಿಂದ ಶೂಟಿಂಗ್ ಶುರುವಾಗಲಿದೆ. ಬಳ್ಳಾರಿ ಸುತ್ತಮುತ್ತ ಶೂಟಿಂಗ್ ಮಾಡಲಿದ್ದಾರೆ. ಗೀತಾ ಪಿಕ್ಚರ್ಸ್ ಅಡಿಯಲ್ಲಿ ‘ಭೈರತಿ ರಣಗಲ್’ ಚಿತ್ರ ನಿರ್ಮಾಣವಾಗಲಿದೆ.

  • ಈ ಕಾರಣಕ್ಕಾಗಿ ಯಶ್ ಸಿನಿಮಾ ಕೈ ಬಿಟ್ಟರು: ನಿರ್ದೇಶಕ ನರ್ತನ್

    ಈ ಕಾರಣಕ್ಕಾಗಿ ಯಶ್ ಸಿನಿಮಾ ಕೈ ಬಿಟ್ಟರು: ನಿರ್ದೇಶಕ ನರ್ತನ್

    ಅಂದುಕೊಂಡಂತೆ ನಡೆದಿದ್ದರೆ ನರ್ತನ್ ನಿರ್ದೇಶನದ ಸಿನಿಮಾದಲ್ಲಿ ಯಶ್ (Yash) ನಟಿಸಬೇಕಿತ್ತು. ಎಲ್ಲವೂ ಒಪ್ಪಿತವಾಗಿದ್ದರೆ ಚಿತ್ರೀಕರಣವೂ ನಡೆದಿರುತ್ತಿತ್ತು. ಆದರೆ, ಈ ಪ್ರಾಜೆಕ್ಟ್ ನಿಂತಿ ಹೋಯಿತು. ಒಂದೂವರೆ ವರ್ಷದಿಂದ ಈ ಚಿತ್ರಕ್ಕಾಗಿ ಕೆಲಸ ಮಾಡಿದ್ದ ನರ್ತನ್, ಯಾಕೆ ಈ ಸಿನಿಮಾ ಮಾಡಲಿಲ್ಲ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಈ ಕುರಿತು ಸ್ವತಃ ನರ್ತನ್ ಮಾತನಾಡಿದ್ದಾರೆ.

    ಇಂದು ನರ್ತನ್ ನಿರ್ದೇಶನದ ಭೈರತಿ ರಣಗಲ್ ಸಿನಿಮಾದ ಮುಹೂರ್ತ ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ನಾನು ಮಾಡಿದ್ದ ಕಥೆಯು ಬೇರೊಂದು ಸಿನಿಮಾದ ಕಥೆಯನ್ನು ಹೋಲುತ್ತಿತ್ತು. ಹಾಗಾಗಿ ಯಶ್ ಅವರು ಈ ಸಿನಿಮಾವನ್ನು ಮಾಡುವುದು ಬೇಡ ಎಂದರು. ಇದರ ಹೊರತಾಗಿ ಬೇರೆ ಯಾವುದೇ ಕಾರಣವಿಲ್ಲ’ ಎಂದಿದ್ದಾರೆ. ಇದನ್ನೂ ಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಹೊಯ್ಸಳ’ ಬಲಿ- ಫ್ಯಾನ್ಸ್‌ಗೆ ಸಿಕ್ತು ಸಿಹಿಸುದ್ದಿ

    ಸದ್ಯ ನರ್ತನ್ ನಿರ್ದೇಶನದ ಭೈರತಿ ರಣಗಲ್ ಸಿನಿಮಾ ಮುಹೂರ್ತವಾಗಿದೆ. ಗೀತಾ ಪಿಕ್ಚರ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ 2ನೇ ಸಿನಿಮಾವಿದು.  ಶಿವರಾಜ್ ಕುಮಾರ್ (Shivraj Kumar) ಮತ್ತು ನಿರ್ದೇಶಕ ನರ್ತನ್ (Narthan) ಈ ಸಿನಿಮಾದ ಮೂಲಕ ಮತ್ತೆ ಒಂದಾಗುತ್ತಿದ್ದಾರೆ. ಐದು ವರ್ಷಗಳ ನಂತರ ಮಫ್ತಿ (Mufti) ಸಿನಿಮಾದ ಭೈರತಿ ರಣಗಲ್ (Bhairati Rangal) ಪಾತ್ರದ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಬಿಚ್ಚಿಡಲಿದ್ದಾರೆ. ಹಾಗಾಗಿ ಇದು ಮಫ್ತಿ ಸಿನಿಮಾದ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್ ಸಿನಿಮಾ ಎನ್ನಲಾಗುತ್ತಿದೆ. ಭೈರತಿ ರಣಗಲ್ ನ ರೋಚಕ ಸಂಗತಿಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕರು.

    ಮಫ್ತಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದ್ದ ನಿರ್ದೇಶಕ ನರ್ತನ್, ಆ ನಂತರ ಯಶ್ ಗಾಗಿ ಅವರು ಸಿನಿಮಾ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಬರೋಬ್ಬರಿ ಎರಡ್ಮೂರು ವರ್ಷಗಳ ಕಾಲ ಯಶ್ ಹಿಂದೆ ಸುತ್ತಿದರು ನರ್ತನ್. ಒಂದು ವರ್ಷಕ್ಕೂ ಹೆಚ್ಚು ಕಾಲ ಕೂತು ಯಶ್ ಗಾಗಿ ಕಥೆ ಬರೆದರು. ಆನಂತರ ಆ ಸಿನಿಮಾ ಆಗಲಿಲ್ಲ. ನಾನಾ ಕಾರಣಗಳಿಂದಾಗಿ ಯಶ್ ಗಾಗಿ ನರ್ತನ್ ಸಿನಿಮಾ ಮಾಡುವುದಿಲ್ಲ ಎನ್ನುವ ವಿಷಯ ಹೊರಬಿತ್ತು.

    ಶಿವರಾಜ್ ಕುಮಾರ್ ವೃತ್ತಿ ಬದುಕಿನಲ್ಲಿ ಮಫ್ತಿ ಕೂಡ ಒಂದೊಳ್ಳೆ ಸಿನಿಮಾದ ಯಾದಿಯಲ್ಲಿದೆ. ಹಾಗಾಗಿ ತಮ್ಮದೇ ಬ್ಯಾನರ್ ಸಿನಿಮಾದಲ್ಲಿ ನರ್ತನ್ ಗೆ ಅವಕಾಶ ನೀಡಿದ್ದಾರೆ ಶಿವಣ್ಣ. ಈ ಸಿನಿಮಾಗೆ ‘ಭೈರತಿ ರಣಗಲ್’ ಎಂದು ಹೆಸರಿಟ್ಟಿದ್ದಾರೆ. ಮಫ್ತಿಯಲ್ಲಿ ಶಿವರಾಜ್ ಕುಮಾರ್ ಮಾಡಿದ್ದ ಪಾತ್ರದ ಹೆಸರು ಇದಾಗಿದೆ. ಈ ಸಿನಿಮಾ ಕುರಿತು ಗೀತಾ ಪಕ್ಚರ್ಸ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದೆ.

  • ‘ಭೈರತಿ ರಣಗಲ್’ ಚಿತ್ರಕ್ಕೆ ಮುಹೂರ್ತ : ಕಥೆ ರಹಸ್ಯ ಬಿಚ್ಚಿಟ್ಟ ಶಿವಣ್ಣ

    ‘ಭೈರತಿ ರಣಗಲ್’ ಚಿತ್ರಕ್ಕೆ ಮುಹೂರ್ತ : ಕಥೆ ರಹಸ್ಯ ಬಿಚ್ಚಿಟ್ಟ ಶಿವಣ್ಣ

    ವೇದ ಸಿನಿಮಾ ನಂತರ ಶಿವರಾಜ್ ಕುಮಾರ್ ಬ್ಯಾನರ್ ನಲ್ಲಿ ಮತ್ತೊಂದು ಸಿನಿಮಾ ಘೋಷಣೆಯಾಗಿತ್ತು. ‘ಭೈರತಿ ರಣಗಲ್’ ಹೆಸರಿನಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಇಂದು ಬೆಂಗಳೂರಿನಲ್ಲಿ ಚಾಲನೆ ಸಿಕ್ಕಿದೆ. ನಿರ್ದೇಶಕ ನರ್ತನ್, ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್, ನಿರ್ಮಾಪಕ ಶ್ರೀಕಾಂತ್ ಸೇರಿದಂತೆ ಹಲವರು ಮುಹೂರ್ತ (Muhurta) ಸಮಾರಂಭದಲ್ಲಿ ಭಾಗಿಯಾಗಿದ್ದರು.

    ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ‘ನರ್ತನ್ ನಿರ್ದೇಶನ ಅಂದರೆ, ಸೈಲೆನ್ಸ್ ಅಲ್ಲಿ ವೈಯಲೆನ್ಸ್ ಇರುತ್ತದೆ. ಇದು ಸಸ್ಪೆನ್ಸ್ ಅಂಶಗಳನ್ನು ಹೊಂದಿರುವಂತಹ ಸಿನಿಮಾ. ಶಿವಣ್ಣನಿಗೆ 61 ವರ್ಷ ವಯಸ್ಸಾದರೂ ಇನ್ನೂ ಯುದ್ಧಕ್ಕೆ ಕಳುಹಿಸ್ತಾನೆ ಇದ್ದಾರೆ. ಈ ಸಿನಿಮಾವನ್ನು ಗೀತಾ ಪಿಕ್ಚರ್ಸ್ ನಲ್ಲಿ ಮಾಡಬೇಕು ಎನ್ನುವುದು ಹಲವು ದಿನಗಳ ಹಿಂದಿನ ನಿರ್ಧಾರವಾಗಿತ್ತು. ಈಗ ಅದಕ್ಕೆ ಚಾಲನೆ ಸಿಕ್ಕಿದೆ’ ಎಂದರು. ಇದನ್ನೂ ಓದಿ:‘RRR’ ರೈಟರ್ ವಿಜೇಂದ್ರ ಪ್ರಸಾದ್‌ ಜೊತೆ ಕೇದರನಾಥ್‌ಗೆ ಕಂಗನಾ ಭೇಟಿ

    ಗೀತಾ ಪಿಕ್ಚರ್ಸ್ ಬ್ಯಾನರ್ ನಲ್ಲಿ (Geeta Pictures) ನಿರ್ಮಾಣವಾಗುತ್ತಿರುವ 2ನೇ ಸಿನಿಮಾವಿದು.  ಶಿವರಾಜ್ ಕುಮಾರ್ (Shivraj Kumar) ಮತ್ತು ನಿರ್ದೇಶಕ ನರ್ತನ್ (Narthan) ಈ ಸಿನಿಮಾದ ಮೂಲಕ ಮತ್ತೆ ಒಂದಾಗುತ್ತಿದ್ದಾರೆ. ಐದು ವರ್ಷಗಳ ನಂತರ ಮಫ್ತಿ (Mufti) ಸಿನಿಮಾದ ಭೈರತಿ ರಣಗಲ್ (Bhairati Rangal) ಪಾತ್ರದ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಬಿಚ್ಚಿಡಲಿದ್ದಾರೆ. ಹಾಗಾಗಿ ಇದು ಮಫ್ತಿ ಸಿನಿಮಾದ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್ ಸಿನಿಮಾ ಎನ್ನಲಾಗುತ್ತಿದೆ. ಭೈರತಿ ರಣಗಲ್ ನ ರೋಚಕ ಸಂಗತಿಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕರು.

    ಮಫ್ತಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದ್ದ ನಿರ್ದೇಶಕ ನರ್ತನ್, ಆ ನಂತರ ಯಶ್ ಗಾಗಿ ಅವರು ಸಿನಿಮಾ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಬರೋಬ್ಬರಿ ಎರಡ್ಮೂರು ವರ್ಷಗಳ ಕಾಲ ಯಶ್ ಹಿಂದೆ ಸುತ್ತಿದರು ನರ್ತನ್. ಒಂದು ವರ್ಷಕ್ಕೂ ಹೆಚ್ಚು ಕಾಲ ಕೂತು ಯಶ್ ಗಾಗಿ ಕಥೆ ಬರೆದರು. ಆನಂತರ ಆ ಸಿನಿಮಾ ಆಗಲಿಲ್ಲ. ನಾನಾ ಕಾರಣಗಳಿಂದಾಗಿ ಯಶ್ ಗಾಗಿ ನರ್ತನ್ ಸಿನಿಮಾ ಮಾಡುವುದಿಲ್ಲ ಎನ್ನುವ ವಿಷಯ ಹೊರಬಿತ್ತು.

    ಶಿವರಾಜ್ ಕುಮಾರ್ ವೃತ್ತಿ ಬದುಕಿನಲ್ಲಿ ಮಫ್ತಿ ಕೂಡ ಒಂದೊಳ್ಳೆ ಸಿನಿಮಾದ ಯಾದಿಯಲ್ಲಿದೆ. ಹಾಗಾಗಿ ತಮ್ಮದೇ ಬ್ಯಾನರ್ ಸಿನಿಮಾದಲ್ಲಿ ನರ್ತನ್ ಗೆ ಅವಕಾಶ ನೀಡಿದ್ದಾರೆ ಶಿವಣ್ಣ. ಈ ಸಿನಿಮಾಗೆ ‘ಭೈರತಿ ರಣಗಲ್’ ಎಂದು ಹೆಸರಿಟ್ಟಿದ್ದಾರೆ. ಮಫ್ತಿಯಲ್ಲಿ ಶಿವರಾಜ್ ಕುಮಾರ್ ಮಾಡಿದ್ದ ಪಾತ್ರದ ಹೆಸರು ಇದಾಗಿದೆ. ಈ ಸಿನಿಮಾ ಕುರಿತು ಗೀತಾ ಪಕ್ಚರ್ಸ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದೆ.

  • ಟಾಲಿವುಡ್ ಅಂಗಳಕ್ಕೆ ‘ಮಫ್ತಿ’ ಡೈರೆಕ್ಟರ್ ಕಾಲಿಡುವುದು ಪಕ್ಕಾ

    ಟಾಲಿವುಡ್ ಅಂಗಳಕ್ಕೆ ‘ಮಫ್ತಿ’ ಡೈರೆಕ್ಟರ್ ಕಾಲಿಡುವುದು ಪಕ್ಕಾ

    ಫ್ತಿ (Mufti) ಸಿನಿಮಾದ ನಂತರ ನರ್ತನ್ (Nartan) ಮೆಗಾ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡಲಿದ್ದಾರೆ ಎಂದು ಅನೇಕ ಬಾರಿ ಸುದ್ದಿ ಆಯಿತು. ಈ ಸಿನಿಮಾಗೆ ಯಶ್ ಹೀರೋ ಎಂದೂ ಹೇಳಲಾಯಿತು. ಈ ಚಿತ್ರಕ್ಕಾಗಿ ನರ್ತನ್ ಬರೋಬ್ಬರಿ ಎರಡೂವರೆ ವರ್ಷಗಳ ಕಾಲ ಕೆಲಸ ಮಾಡಿದ್ದಾರೆ ಎನ್ನುವ ಮಾತು ಕೇಳಿ ಬಂತು. ಆನಂತರ ಯಶ್ ಇವರ ಚಿತ್ರದಲ್ಲಿ ನಟಿಸುತ್ತಿಲ್ಲ ಎನ್ನುವ ಸುದ್ದಿ ಹೊರ ಬಿದ್ದಿತು.

    ಈ ನೋವಿನ ವಿಚಾರ ಆಚೆ ಬರುತ್ತಿದ್ದಂತೆಯೇ ನರ್ತನ್ ಮತ್ತೆ ಸದ್ದು ಮಾಡಿದರು. ಅದು ಮತ್ತೊಂದು ಮೆಗಾ ಸಿನಿಮಾದ ವಿಷಯಕ್ಕಾಗಿ. ತೆಲುಗಿನ ಖ್ಯಾತ ನಟ ರಾಮ್ ಚರಣ್ (Ram Charan) ಚಿತ್ರಕ್ಕೆ ನರ್ತನ್ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನುವ ವಿಷಯ ಗಾಂಧಿನಗರದ ಗಲ್ಲಿ ಗಲ್ಲಿಗಳಲ್ಲಿ ಕೇಳಿ ಬಂದಿತ್ತು. ಈ ವಿಷಯ ಕೂಡ ಸುಳ್ಳಾಗಲಿದೆ ಎನ್ನುವ ಆತಂಕ ಅವರ ಅಭಿಮಾನಿಗಳಲ್ಲಿತ್ತು. ಆದರೆ, ಅದು ನಿಜವಾಗಿದೆ. ಇದನ್ನೂ ಓದಿ: ಹಿಂದಿ ಚಿತ್ರರಂಗದಲ್ಲಿ ಸೌತ್‌ನಷ್ಟು ಶಿಸ್ತಿಲ್ಲ: ಕಾಜಲ್ ಅಗರ್‌ವಾಲ್

    ಹೌದು, ನರ್ತನ್ ಟಾಲಿವುಡ್ ಅಂಗಳಕ್ಕೆ ಕಾಲಿಡುತ್ತಿದ್ದಾರೆ. ಪ್ರಶಾಂತ್ ನೀಲ್, ಎ.ಹರ್ಷ ನಂತರ ಮತ್ತೋರ್ವ ನಿರ್ದೇಶಕ ಟಾಲಿವುಡ್ ಸ್ಟಾರ್ ನಟನಿಗೆ ಚಿತ್ರವೊಂದನ್ನು ಮಾಡುತ್ತಿದ್ದಾರೆ. ಇದು  ಪಕ್ಕಾ ಮಾಹಿತಿ ಎಂದು ಸ್ವತಃ ನರ್ತನ್ ಅವರೇ ಹಂಚಿಕೊಂಡಿದ್ದಾರೆ. ಆದರೆ, ಆ ಸಿನಿಮಾ ಯಾವಾಗ ಬರುತ್ತದೆ ಎಂದು ಮಾತ್ರ ಹೇಳಿಕೊಂಡಿಲ್ಲ.

    ಸದ್ಯ ಭೈರತಿ ರಣಗಲ್ (Bhairati Rangal) ಸಿನಿಮಾದ ಕೆಲಸದಲ್ಲಿ ನರ್ತನ್ ಬ್ಯುಸಿಯಾಗಿದ್ದಾರೆ. ಮೇ ತಿಂಗಳಲ್ಲಿ ಈ ಸಿನಿಮಾ ಸೆಟ್ಟೇರಲಿದೆ. ಶಿವರಾಜ್ ಕುಮಾರ್ (Shivraj Kumar) ಮತ್ತು ನರ್ತನ್ ಕಾಂಬಿನೇಷನ್ ನ ಎರಡನೇ ಸಿನಿಮಾ ಇದಾಗಲಿದೆ.  ಈ ಸಿನಿಮಾವನ್ನು ಸ್ವತಃ ಶಿವಣ್ಣ ಅವರೇ ತಮ್ಮ ಬ್ಯಾನರ್ ನಿಂದ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದ ನಂತರ ರಾಮ್ ಚರಣ್ ಸಿನಿಮಾವನ್ನು ಕೈಗೆತ್ತಿಕೊಳ್ಳಲಿದ್ದಾರಂತೆ ನರ್ತನ್.

  • ಭೈರತಿ ರಣಗಲ್‌ಗೆ `ಕೆಜಿಎಫ್ 2′ ರವಿ ಬಸ್ರೂರು ಸಂಗೀತ

    ಭೈರತಿ ರಣಗಲ್‌ಗೆ `ಕೆಜಿಎಫ್ 2′ ರವಿ ಬಸ್ರೂರು ಸಂಗೀತ

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivarajkumar) ಅವರು ತಮ್ಮ ಸಿನಿಮಾಗಳ ಮೂಲಕ ಹಿಟ್ ಮೇಲೆ ಹಿಟ್ ಕೊಡುತ್ತಿದ್ದಾರೆ. ಸಾಲು ಸಾಲು ಚಿತ್ರಗಳ ಮೂಲಕ ಶಿವಣ್ಣ ಸುದ್ದಿಯಲ್ಲಿದ್ದಾರೆ. ಇತ್ತೀಚಿಗೆ ಶಿವಣ್ಣ `ಭೈರತಿ ರಣಗಲ್’ ಚಿತ್ರದ ಪೋಸ್ಟರ್ ರಿವೀಲ್ ಮಾಡಿದ್ದರು. ಈ ಬೆನ್ನಲ್ಲೇ ಸಿನಿಮಾ ಬಗ್ಗೆ ಚಿತ್ರತಂಡ ಮತ್ತೊಂದು ಅಪ್‌ಡೇಟ್ ಹಂಚಿಕೊಂಡಿದೆ. ಇದನ್ನೂ ಓದಿ: ನಟಿ ಸ್ವರಾ ಭಾಸ್ಕರ್ ಆರತಕ್ಷತೆಯಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ

     

    View this post on Instagram

     

    A post shared by Geetha Pictures (@geethapictures)

    2017ರಲ್ಲಿ ‘ಮಫ್ತಿ’ (Mufti)ಸಿನಿಮಾದಲ್ಲಿ ಶಿವಣ್ಣನ ನಿರ್ವಹಿಸಿದ್ದ `ಭೈರತಿ ರಣಗಲ್’ ಪಾತ್ರ ಸೂಪರ್ ಹಿಟ್ ಆಗಿತ್ತು. ಆ ಸಿನಿಮಾಕ್ಕೆ ಗೆಲ್ಲುವ ಶಕ್ತಿ ತಂದುಕೊಟ್ಟಿದ್ದೇ ಶಿವಣ್ಣನ ಪಾತ್ರ. ಈಗ ಅದೇ ಪಾತ್ರವನ್ನು ಪ್ರಧಾನವಾಗಿರಿಸಿಕೊಂಡು ಸಿನಿಮಾ ತೆರೆಗೆ ಬರುತ್ತಿದ್ದು, ಪಾತ್ರದ ಹೆಸರಾದ `ಭೈರತಿ ರಣಗಲ್’ ಅನ್ನು ಸಿನಿಮಾಕ್ಕೂ ಇಡಲಾಗಿದೆ.

    `ಮಫ್ತಿ’ ಪ್ರೀಕ್ವೆಲ್ ಭೈರತಿ ರಣಗಲ್‌ಗೆ ನರ್ತನ್ ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರಕ್ಕೆ `ಕೆಜಿಎಫ್ 2′ (KGF 2) ಖ್ಯಾತಿಯ ರವಿ ಬಸ್ರೂರು (Ravi Basrur) ಸಂಗೀತ ನಿರ್ದೇಶನ ಮಾಡಲಿದ್ದಾರೆ ಎಂಬುದನ್ನು ಚಿತ್ರತಂಡ ಘೋಷಿಸಿದೆ. ಪೋಸ್ಟರ್ ಒಂದನ್ನು ಬಿಡುಗಡೆ ಮಾಡುವ ಮೂಲಕ ರವಿ ಬಸ್ರೂರು ಅವರನ್ನು ತಂಡಕ್ಕೆ ಸ್ವಾಗತಿಸಿದೆ. ಈ ಹಿಂದೆ ಇದೇ ತಂಡದ ಜೊತೆ ಕೈ ಜೋಡಿಸಿ `ಮಫ್ತಿ’ಗೂ ಸಂಗೀತ ನಿರ್ದೇಶನ ಮಾಡಿ ಗೆದ್ದಿದ್ದ ರವಿ ಬಸ್ರೂರು ಈಗ `ಭೈರತಿ ರಣಗಲ್’ ಸಿನಿಮಾಗೂ ಕೆಲಸ ನಿರ್ವಹಿಸಲಿದ್ದಾರೆ. ಈ ಮೂಲಕ ಹಿಟ್ ಕಾಂಬಿನೇಷನ್ ಒಂದ್ತಾಗಿದೆ.

     

    View this post on Instagram

     

    A post shared by Geetha Pictures (@geethapictures)

    ಶಿವರಾಜ್ ಕುಮಾರ್ ಅವರ ಹೋಂ ಬ್ಯಾನರ್ ಗೀತಾ ಪಿಕ್ಚರ್ಸ್‌ ಇದು ಎರಡನೇ ಸಿನಿಮಾ ಆಗಿದ್ದು, ಮೊದಲ ಸಿನಿಮಾ `ವೇದ’ ಮೂಲಕ ಹಿಟ್ ನೀಡಿರುವ ನಿರ್ಮಾಪಕಿ ಗೀತಾ `ಭೈರತಿ ರಣಗಲ್’ ಪ್ಯಾನ್ ಇಂಡಿಯಾ ಸಿನಿಮಾಗೂ ಸಾಥ್ ನೀಡುತ್ತಿದ್ದಾರೆ. ಸದ್ಯದಲ್ಲಿಯೇ ಈ ಸಿನಿಮಾದ ಚಿತ್ರೀಕರಣ ಆರಂಭ ಮಾಡಲಿದ್ದಾರೆ.