Tag: ಭೋವಿ ನಿಗಮ ಹಗರಣ

  • ಕಾಂಗ್ರೆಸ್ ಯಾವಾಗಲು ಬೇರೆ ಧರ್ಮದ ಪರವಾಗಿ ಇದ್ದೇವೆ ಅಂತ ತೋರಿಸುತ್ತದೆ: ನಿಖಿಲ್ ಕುಮಾರಸ್ವಾಮಿ

    ಕಾಂಗ್ರೆಸ್ ಯಾವಾಗಲು ಬೇರೆ ಧರ್ಮದ ಪರವಾಗಿ ಇದ್ದೇವೆ ಅಂತ ತೋರಿಸುತ್ತದೆ: ನಿಖಿಲ್ ಕುಮಾರಸ್ವಾಮಿ

    – ಧರ್ಮಸ್ಥಳ ಕೇಸ್‌ನಲ್ಲಿ ಸತ್ಯ ಹೊರಗೆ ಬರಬೇಕಾದ್ರೆ ಎನ್‌ಐಎ ತನಿಖೆ ಆಗಲೇಬೇಕು
    – ಭೋವಿ ನಿಗಮದ ಅಕ್ರಮದ ಬಗ್ಗೆ ರಾಹುಲ್‌, ಸಿಎಂ ಮಾತನಾಡಬೇಕು

    ಬೆಂಗಳೂರು: ಕಾಂಗ್ರೆಸ್ (Congress) ಯಾವಾಗಲು ಬೇರೆ ಧರ್ಮದ ಪರವಾಗಿ ಇದ್ದೇವೆ ಅಂತ ಅನೇಕ ಸಮಯದಲ್ಲಿ ತೋರಿಸಿದೆ ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಕಿಡಿಕಾರಿದ್ದಾರೆ.

    ಸೆಪ್ಟೆಂಬರ್ 5 ರಂದು ಬೆಂಗಳೂರಿನಲ್ಲಿ ಮುಸ್ಲಿಂ ಧರ್ಮದ ಕಾರ್ಯಕ್ರಮ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಅವರು ಬೇರೆ ಧರ್ಮದ ಪರವಾಗಿ ಇದ್ದೇವೆ ಎಂದು ಅನೇಕ ಸಮಯದಲ್ಲಿ ಸಾಬೀತು ಮಾಡೋಕೆ ಹೊರಟಿದ್ದಾರೆ. ದಸರಾ (Mysuru Dasra) ಉದ್ಘಾಟನೆ ಬಾನು ಮುಷ್ತಾಕ್ ಅವರಿಂದ ಮಾಡೋ ಅವಶ್ಯಕತೆ ಇರಲಿಲ್ಲ. ಬಹಳ ಜನ ಸಾಧಕರು ಸಮಯದಲ್ಲಿ ಇದ್ದರು. ಬೇರೆಯವರನ್ನ ಕರೆದು ಮಾಡಬಹುದಿತ್ತು. ಆದರೆ ಈ ಸರ್ಕಾರದ ಹಿಂದಿನ ಉದ್ದೇಶಗಳೇನು ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಅಂಜನಾದ್ರಿ ಬೆಟ್ಟ ಸೇರಿ ರಾಜ್ಯದ 11 ಪ್ರವಾಸಿತಾಣಗಳ ರೋಪ್ ವೇಗೆ ಸರ್ಕಾರ ಅನುಮೋದನೆ

    ಸಮಾಜಕ್ಕೆ ಯಾವ ಸಂದೇಶ ರವಾನೆ ಮಾಡುವ ಕೆಲಸ ರಾಜ್ಯದ ಸಿಎಂ ಹಾದಿಯಾಗಿ ಎಲ್ಲರು ಮಾಡ್ತಿದ್ದಾರೆ ಎಂಬುದನ್ನ ಆಲೋಚನೆ ಮಾಡಬೇಕು. ಧರ್ಮ ಧರ್ಮದ ಬಗ್ಗೆ ಕಿಚ್ಚು ಹಬ್ಬಿಸಿ, ಒಬ್ಬರಿಗೊಬ್ಬರ ಮಧ್ಯೆ ದ್ವೇಷ ಕ್ರಿಯೇಟ್ ಮಾಡಿ ಇದರ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳೋ ಕೆಲಸ ಆಗಬಾರದು. ಇದು ನಿಜಕ್ಕೂ ಖಂಡನೀಯ. ಅವರ ಧರ್ಮಕ್ಕೂ ನಾವು ಗೌರವ ಕೊಡೋಣ. ನಮ್ಮ ಧರ್ಮವನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕಾಗುತ್ತದೆ. ಇವತ್ತು ಧರ್ಮಸ್ಥಳ ಆಯ್ತು, ನಾಳೆ ಚಾಮುಂಡಿ ಬೆಟ್ಟ (Chamundi Hills) ಆಗುತ್ತದೆ. ಹೀಗೆ ಧಾರ್ಮಿಕ ಸ್ಥಳಗಳನ್ನ ಟಾರ್ಗೆಟ್ ಮಾಡಿಕೊಂಡು ಹೊರಟರೇ ಹಿಂದುಗಳಾಗಿ ನಾವು ಕೈಕಟ್ಟಿ ಕೂರೋಕೆ ಆಗಲ್ಲ. ಸರ್ಕಾರದ ಪೊಲಿಟಿಕಲ್ ಅಜೆಂಡಾ ನೂರಾರು ಇರಬಹುದು. ಇದರಿಂದ ಸಮಾಜದ ಮೇಲೆ ಆಗೋ ಡ್ಯಾಮೇಜ್ ಏನು ಎಂಬುದರ ಬಗ್ಗೆ ಆಲೋಚನೆ ಮಾಡಬೇಕು. ಸಿಎಂ ಅವರು ಇದರ ಬಗ್ಗೆ ಯೋಚನೆ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನಾವು ಸಿದ್ದರಾಮಯ್ಯ ಶಿಷ್ಯರೇ, ಬ್ರೈನ್ ಮ್ಯಾಪಿಂಗ್‌ಗೆ ನಾನು ರೆಡಿ – ರಾಜಣ್ಣ ವಿರುದ್ಧ ಮತ್ತೆ ಕಿಡಿಕಾರಿದ ಮಾಗಡಿ ಬಾಲಕೃಷ್ಣ

    ಧರ್ಮಸ್ಥಳ ಕೇಸ್‌ನಲ್ಲಿ (Dharmasthala Case) ಪ್ರತಿಭಟನೆ ಮಾಡೋಕೆ ಬಿಜೆಪಿ-ಜೆಡಿಎಸ್‌ಗೆ ಎಲ್ಲಿಂದ ಹಣ ಬಂತು ಈ ಬಗ್ಗೆ ತನಿಖೆ ಆಗಬೇಕು ಎಂಬ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಕೇಸ್‌ನಲ್ಲಿ ಸತ್ಯ ಹೊರಗೆ ಬರಬೇಕಾದರೆ ಎನ್‌ಐಎ (NIA) ತನಿಖೆ ಆಗಲೇಬೇಕು. ಸಿಎಂ ಹೇಳಿದ ಹಾಗೆ ತನಿಖೆ ಆಗಲೇಬೇಕು. ನಾವು ಹೇಳ್ತಿರೋದು ಎನ್‌ಐಎಯಿಂದ ತನಿಖೆ ಆಗಲಿ. ಯಾಕೆ ಎನ್‌ಐಎ ಅಂದರೆ ಕೆಲವು ಯೂಟ್ಯೂಬರ್‌ಗಳು, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಸುದ್ದಿ ಬಂತು. ಇವರಿಗೆ ಫಂಡ್ ಮಾಡಿದ್ದು ಯಾರು, ಬೇರೆ ರಾಜ್ಯದಿಂದ, ಬೇರೆ ದೇಶದಿಂದ ಫಂಡ್ ಮಾಡಿದ್ದಾರಾ ಎಂಬುದು ಗೊತ್ತಾಗಬೇಕು. ಎಸ್‌ಐಟಿ ಮೂಲಕ ಸತ್ಯ ಹೊರಬರುತ್ತೆ ಅಂತ ನಂಬಿಕೆ ಜನರಿಗೆ ಇಲ್ಲ. ಹೀಗಾಗಿ ಎನ್‌ಐಎ ತನಖೆಗೆ ಕೊಡಿ ಅಂತಿರೋದು ಎಂದು ತಿಳಿಸಿದರು. ಇದನ್ನೂ ಓದಿ: ಮುಂದಿನ ಮೂರ್ನಾಲ್ಕು ದಿನ ಬೆಂಗ್ಳೂರಿಗೆ ಮಳೆ ಅಲರ್ಟ್‌

    ಎಡಪಂಥೀಯ ಸಂಘಟನೆ ಇದರಲ್ಲಿ ಇವೆ ಎಂದು ಚರ್ಚೆ ಆಗುತ್ತಿದೆ. ಅದಕ್ಕಾಗಿ ಎನ್‌ಐಎ ತನಿಖೆ ಆಗಬೇಕು. ಈ ವಿಷಯದಲ್ಲಿ ನಾವು ರಾಜಕೀಯ ಬೆರೆಸೋ ಪ್ರಶ್ನೆ ಇಲ್ಲ. ರಾಜಕೀಯ ಮಾಡೋಕೆ ಬೇರೆ ವಿಷಯ ಇವೆ. ಸರ್ಕಾರ ನಮಗೆ ಸಾಕಷ್ಟು ವಿಷಯ ಕೊಡುತ್ತಿದೆ. ಧಾರ್ಮಿಕ ವಿಷಯದಲ್ಲಿ ರಾಜಕೀಯ ಮಾಡೋ ಅವಶ್ಯಕತೆ ಜೆಡಿಎಸ್‌ಗೆ ಇಲ್ಲ. ಎನ್‌ಐಎ ತನಿಖೆ ಆಗಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ – ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ

    ಭೋವಿ ನಿಗಮದಲ್ಲಿ ಅಕ್ರಮ (Bhovi Scam) ವಿಚಾರವಾಗಿ ಮಾತನಾಡಿದ ಅವರು, ಭೋವಿ ನಿಗಮದ ಅಕ್ರಮದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ಮಾತಾಡಬೇಕು. ಹಿಂದೆ ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಯ್ತು. ಈಗ ಭೋವಿ ನಿಗಮದಲ್ಲಿ ಅಕ್ರಮ. ಈ ಸರ್ಕಾರ ಎಸ್‌ಸಿಎಸ್‌ಪಿ ಟಿಎಸ್‌ಪಿ ಹಣವನ್ನು ಗ್ಯಾರಂಟಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ದುರ್ಬಳಕೆ ಆಗುತ್ತಿದೆ. ಭೋವಿ ನಿಗಮದ ಅಧ್ಯಕ್ಷರು ಹಣಕ್ಕೆ ಡಿಮ್ಯಾಂಡ್ ಇಡುತ್ತಾರೆ. ಆ ಅಧ್ಯಕ್ಷ ಕಾಂಗ್ರೆಸ್ ಸದಸ್ಯ. ಸಿಎಂ ಅವರು ನಾವು ಹಿಂದುಳಿದವರ ಪರ, ಎಸ್‌ಸಿ-ಎಸ್ಟಿ ಜನರ ಪರ ಅಂತಾರೆ. ಆದರೆ ಎಸ್‌ಸಿ-ಎಸ್ಟಿ ಜನರಿಗೆ ಇವರು ನ್ಯಾಯ ಕೊಡೋಕೆ ಆಗಿದೆಯಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಅಲೆಮಾರಿ ಸಮುದಾಯಕ್ಕೆ 1% ಮೀಸಲಾತಿ ಮಾಡಿಸಿ ಕೊಡ್ತೀನಿ – ರಾಯರೆಡ್ಡಿ ಭರವಸೆ

    ವಾಲ್ಮೀಕಿ ಹಗರಣದ ಹಣ ಎಲ್ಲಿಗೆ ಹೋಯಿತು? ಇಡಿ ಕೂಡಾ ಎಂಟ್ರಿ ಆಯಿತು. ಸದನದಲ್ಲಿ ಸಿಎಂ ಅವರೇ ಅಕ್ರಮ ಒಪ್ಪಿಕೊಂಡಿದ್ದರು. ವಾಲ್ಮೀಕಿ ಆಯ್ತು, ಈಗ ಭೋವಿ ನಿಗಮ. ಸಮುದಾಯದ ಸಬಲೀಕರಣಕ್ಕೆ ಇರೋ ಹಣ ಹೀಗೆ ಅಕ್ರಮ ಆಗುತ್ತಿರೋದು ಸರಿಯಲ್ಲ. ಇವರು ಕಮೀಷನ್ ಏಜೆಂಟ್ ರೀತಿ ವರ್ತನೆ ಮಾಡುತ್ತಿದ್ದಾರೆ. ಇಷ್ಟು ದಿನ ಬೇಕಾ ಸಿಎಂ ಕ್ರಮ ತೆಗೆದುಕೊಳ್ಳೋಕೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಛತ್ತೀಸ್‌ಗಢ | ಬಲರಾಂಪುರದಲ್ಲಿ ಅಣೆಕಟ್ಟು ಕುಸಿದು ಪ್ರವಾಹ – ನಾಲ್ವರು ಸಾವು, ಮೂವರು ನಾಪತ್ತೆ

    ರಾಹುಲ್ ಗಾಂಧಿ ವಿರುದ್ಧ ಮಾತನಾಡಿದ್ರು ಅಂತ ಪ್ರಭಾವಿ ನಾಯಕ ರಾಜಣ್ಣರನ್ನ ವಜಾ ಮಾಡಿದ್ರು. ವಾಲ್ಮೀಕಿ ಪ್ರಭಾವಿ ನಾಯಕನನ್ನ ಕಾಂಗ್ರೆಸ್ ವಜಾ ಮಾಡಿದರು. ವಾಸ್ತವ ಮಾತಾಡಿದ್ರೆ ವಜಾ ಮಾಡುತ್ತಾರೆ. ಕಾಂಗ್ರೆಸ್‌ನಲ್ಲಿ ಆಂತರಿಕ ಪ್ರಜಾಪ್ರಭುತ್ವವೇ ಇಲ್ಲ. ರಾಹುಲ್ ಗಾಂಧಿ ಮಾತೆತ್ತಿದರೆ ಅಂಬೇಡ್ಕರ್ ಅವರ ಸಂವಿಧಾನ ಪುಸ್ತಕ ಇಟ್ಟುಕೊಂಡು ಓಡಾಡುತ್ತಾರೆ. ಅದರ ಒಳಗೆ ಏನಿದೆ ಅಂತ ತಿಳಿದುಕೊಂಡಿದ್ದಾರಾ? ರಾಹುಲ್ ಗಾಂಧಿ, ಸಿಎಂ ಇದ್ದಕ್ಕೆ ಉತ್ತರ ಕೊಡಬೇಕು ಎಂದರು. ಇದನ್ನೂ ಓದಿ: ವಿದೇಶಿ ಪ್ರಜೆಗಳಿಗೆ ಬಾಡಿಗೆ ನೀಡುವ ಮನೆ ಮಾಲೀಕರಿಗೆ ಗೈಡ್‌ಲೈನ್ಸ್‌ ಜಾರಿ – ಮಾರ್ಗಸೂಚಿ ಏನು?

    ಅಧಿವೇಶನದಲ್ಲಿ ಜೆಡಿಎಸ್ ಮುಂದೆ ಭವಿಷ್ಯ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರು ಬೆಳೆದು ಬಂದ ಹಾದಿ ಮರೆತಿದ್ದಾರೆ. ಯಾರಿಂದ ಬೆಳೆದ್ರು, ಯಾರ ಜೊತೆ ಇದ್ದರು ಅವೆಲ್ಲವನ್ನು ಮರೆತಿದ್ದಾರೆ. ಸಿದ್ದರಾಮಯ್ಯ ಅವರಿಂದ ಯಾರು ಬಜೆಟ್ ಮಂಡನೆ ಮಾಡಿಸಿದ್ದು ಅಂತ ಜನರಿಗೆ ಗೊತ್ತಿದೆ. ಅವರ ಪರ ದೇವೇಗೌಡರು ನಿಂತಿದ್ದರು. ಸಿದ್ದರಾಮಯ್ಯ ಅವರನ್ನ ಡಿಸಿಎಂ ಮಾಡಿದ್ದೇ ಜೆಡಿಎಸ್, ದೇವೇಗೌಡರು ಎಂದು ತಿರುಗೇಟು ಕೊಟ್ಟರು. ಇದನ್ನೂ ಓದಿ: 2024ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕ್‌, ಅಫ್ಘಾನ್‌, ಬಾಂಗ್ಲಾದಿಂದ ಬಂದ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಉಳಿಯಲು ಅವಕಾಶ

    ಸಿದ್ದರಾಮಯ್ಯ ಅವರು ಅವರಪ್ಪನಾ ಆಣೆ ಸಿಎಂ ಆಗಲ್ಲ ಅಂತ ಕುಮಾಕುಮಾರಸ್ವಾಮಿಗೆ ಅಂದರು. ಆಗ ಕುಮಾರಸ್ವಾಮಿ ಸಿಎಂ ಆದರು. ಸಿದ್ದರಾಮಯ್ಯ ಅವರು ಉದ್ಧಟತನ ಮಾತು ಆಡೋ ಅವಶ್ಯಕತೆ ಇಲ್ಲ. ನಮ್ಮ ಬಗ್ಗೆ ಮಾತಾಡೋದು ಬಿಟ್ಟು ರಾಜ್ಯದ ಜನತೆ ಪರ ಕೆಲಸ ಮಾಡಲಿ. ಜೆಡಿಎಸ್ ಭವಿಷ್ಯದ ಬಗ್ಗೆ ಸಿಎಂ, ಡಿಸಿಎಂ ಚಿಂತನೆ ಮಾಡಿ ಸಮಯ ವೇಸ್ಟ್ ಮಾಡೋದು ಬೇಡ ಎಂದು ಹರಿಹಾಯ್ದರು. ಇದನ್ನೂ ಓದಿ: ತೆಲಂಗಾಣ | ಅಮಾನತು ಬೆನ್ನಲ್ಲೇ BRS ಪಕ್ಷ ತೊರೆದ ಕೆಸಿಆರ್‌ ಪುತ್ರಿ ಕವಿತಾ – MLC ಸ್ಥಾನಕ್ಕೂ ರಾಜೀನಾಮೆ

  • Bhovi Corporation Scam – ಜನರಲ್ ಮ್ಯಾನೇಜರ್ ನಾಗರಾಜಪ್ಪ 14 ದಿನ ಇಡಿ ಕಸ್ಟಡಿಗೆ

    Bhovi Corporation Scam – ಜನರಲ್ ಮ್ಯಾನೇಜರ್ ನಾಗರಾಜಪ್ಪ 14 ದಿನ ಇಡಿ ಕಸ್ಟಡಿಗೆ

    ಬೆಂಗಳೂರು: ಭೋವಿ ನಿಗಮ ಹಗರಣ ಪ್ರಕರಣದಲ್ಲಿ ಇಡಿ ಅಧಿಕಾರಿಗಳು (Enforcement Directorate) ನಿಗಮದ ಜನರಲ್ ಮ್ಯಾನೇಜರ್ ನಾಗರಾಜಪ್ಪ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಲಯ ಅವರನ್ನು 14 ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿದೆ.

    ಪ್ರಕರಣ ಸಂಬಂಧ ಏ.4 ರಂದು ಇಡಿ ಅಧಿಕಾರಿಗಳು ಭೋವಿ ನಿಗಮ ಸೇರಿದಂತೆ 10 ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ ದಾಖಲೆಗಳು ಹಾಗೂ, ಆಸ್ತಿಗಳ ಡಿಜಿಟಲ್ ದಾಖಲೆಗಳನ್ನು ಜಪ್ತಿ ಮಾಡಿದ್ದರು. ಅಲ್ಲದೇ ನಿಗಮದ ಜನರಲ್ ಮ್ಯಾನೇಜರ್ ನಾಗರಾಜಪ್ಪ ಅವರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: Bhovi Corporation Scam – ಜನರಲ್ ಮ್ಯಾನೇಜರ್ ನಾಗರಾಜಪ್ಪ 14 ದಿನ ಇಡಿ ಕಸ್ಟಡಿಗೆ

    ಭೋವಿ ನಿಗಮದಲ್ಲಿ (Bhovi Corporation Scam) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಶರಣಾದ ಜೀವಾ ಅವರ ಪಾತ್ರ ಇತ್ತಾ ಎಂಬ ಅನುಮಾನ ಇದೆ. ಇದರ ಬಗ್ಗೆ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಜೀವಾ ಅವರ ಅನ್ನಿಕಾ ಎಂಟರ್ ಪ್ರೈಸಸ್‌ಗೆ ಕೋಟಿ ಕೋಟಿ ಹಣ ವರ್ಗಾವಣೆ ಆಗಿದೆ.

    ಅನ್ನಿಕಾ ಎಂಟರ್ ಪ್ರೈಸಸ್‌ಗೆ 7.16 ಕೋಟಿ ರೂ., ಸೋದರಿ ಹೆಸರಿನಲ್ಲಿರುವ ಹರ್ನಿತಾ ಕ್ರಿಯೇಷನ್ಸ್‌ಗೆ ಒಟ್ಟು 10.9 ಕೋಟಿ ರೂ. ವರ್ಗವಾಗಿದೆ. ಇನ್ನುಳಿದ ಮೂರು ಕಂಪನಿಗಳಲ್ಲಿ ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ ಬಿ.ಕೆ.ನಾಗರಾಜಪ್ಪರವರ ಆಪ್ತರ ಪಾಲುದಾರಿಕೆ ಇದೆ.

    ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕಿ ಲೀಲಾವತಿ ಅವರ ಸೋದರಿ ಮಂಗಳ ರಾಮು ಅವರಿಗೆ ಹಂತ ಹಂತವಾಗಿ ಕಳ್ಳ ಹಾದಿಯಲ್ಲಿ 1.48 ಕೋಟಿ ರೂ. ಹಣ ವರ್ಗವಾಗಿದೆ. ಇಷ್ಟೆಲ್ಲಾ ಹಣ ವರ್ಗಾವಣೆ ಆಗಿರೋದು ತನಿಖೆ ವೇಳೆ ಬಯಲಾಗಿತ್ತು. ಇದನ್ನೂ ಓದಿ: ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್ ಸಿಬಿಐಗೆ ವಹಿಸುವ ಅಗತ್ಯ ಇಲ್ಲ: ಪರಮೇಶ್ವರ್

  • ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ – ಎಸ್‌ಐಟಿ ರಚಿಸಿ ಹೈಕೋರ್ಟ್‌ ಆದೇಶ

    ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ – ಎಸ್‌ಐಟಿ ರಚಿಸಿ ಹೈಕೋರ್ಟ್‌ ಆದೇಶ

    – ಮೂರು ತಿಂಗಳಲ್ಲಿ ವರದಿ ನೀಡುವಂತೆ ಸೂಚನೆ

    ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ (Bhovi Corporation Scam) ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ (SIT) ರಚಿಸಿ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಆದೇಶಿಸಿದೆ.

    ಅಲ್ಲದೇ ಮೂರು ತಿಂಗಳಲ್ಲಿ ವಿಚಾರಣೆ ಮುಗಿಸಿ ವರದಿ ನೀಡುವಂತೆ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಸೂಚನೆ ನೀಡಿದೆ. ಒಟ್ಟಾರೆ ಮೂವರು ಐಪಿಎಸ್ ಅಧಿಕಾರಿಗಳನ್ನು (ಸಿಬಿಐ ಎಸ್ಪಿ ವಿನಾಯಕ್ ವರ್ಮ, ಐಪಿಎಸ್ ಅಕ್ಷಯ್ ಮಜ್ಲಿ, ಎಸ್ಪಿ ನಿಶಾ ಜೇಮ್ಸ್) ಎಸ್‌ಐಟಿ ಹೊಂದಿರಲಿದೆ. ಈ ಪೈಕಿ ಇಬ್ಬರು ಎಸ್ಪಿಗಳಿದ್ದಾರೆ. ಇದನ್ನೂ ಓದಿ: ಸಚಿವರ ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ರಿಪೋರ್ಟ್ ಕೇಳಿದೆ: ಡಾ. ಎಂ.ಸಿ.ಸುಧಾಕರ್

    ಉದ್ಯಮಿ ಹಾಗೂ ವಕೀಲೆ ಜೀವಾ ಆತ್ಮಹತ್ಯೆ ಪ್ರಕಣದ ತನಿಖೆಯನ್ನು ಸಿಬಿಐಗೆ (CBI) ವಹಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಅರ್ಜಿ ಸಲ್ಲಿಸಿತ್ತು. ಸಿಬಿಐ ತನಿಖೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ ಎಸ್‌ಐಟಿ ರಚಿಸಿ ಆದೇಶ ಹೊರಡಿಸಿತು. ಇದನ್ನೂ ಓದಿ: ವಿಜಯೇಂದ್ರ ಕೆಳಗಿಳಿಸಲು ಆಗಲ್ಲ, ಒಂದು ಸಾರಿ ಅಧ್ಯಕ್ಷರಾದ್ರೆ ಎಲ್ರೂ ಒಪ್ಪಿಕೊಳ್ಳಲೇಬೇಕು: ಯತ್ನಾಳ್‌ಗೆ ಶ್ರೀರಾಮುಲು ಟಾಂಗ್

    ಏನಿದು ಪ್ರಕರಣ?
    ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್‌ಪ್ರೆಸಸ್‌ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್‌ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿತ್ತು.

    ಸಿಐಡಿ ಅಧಿಕಾರಿಗಳ ವಿರುದ್ಧ ಪ್ರಕರಣ:
    ಜೀವಾ ಅವರ ಕಿರಿಯ ಸಹೋದರಿ ಸಂಗೀತಾ ಅವರು ನೀಡಿದ ದೂರಿನಲ್ಲಿ ವಿಚಾರಣೆ ನೆಪದಲ್ಲಿ ಸಿಐಡಿ ಅಧಿಕಾರಿಗಳು ತನ್ನ ಅಕ್ಕ ಜೀವಾಗೆ ಅವಮಾನ ಮಾಡಿದ್ದಾರೆ. ಅಂತೆಯೇ ಹಣಕ್ಕೆ ಬೇಡಿಕೆ ಇರಿಸಿದ್ದಾರೆ ಎಂದು ಆರೋಪಿಸಿದ್ದರು. ಈ ದೂರಿನಮೇರೆಗೆ ಬನಶಂಕರಿ ಠಾಣೆ ಪೊಲೀಸರು ಸಿಐಡಿ ಅಧಿಕಾರಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು. ಇದನ್ನೂ ಓದಿ: ಮೋಹಕ ತಾರೆ ಫ್ಯಾನ್ಸ್‌ಗೆ ಗುಡ್‌ ನ್ಯೂಸ್-‌ ಉಪೇಂದ್ರ ಜೊತೆ ‘ರಕ್ತ ಕಾಶ್ಮೀರ’ದ ಕಥೆ ಹೇಳಲು ಸಜ್ಜಾದ ರಮ್ಯಾ

    11 ಪುಟಗಳ ಡೆತ್ ನೋಟ್?:
    ಆತ್ಮಹತ್ಯೆಗೂ ಮುನ್ನ ಮಹಿಳಾ ಉದ್ಯಮಿ ಜೀವಾ 11 ಪುಟಗಳ ಮರಣಪತ್ರ ಬರೆದಿದ್ದಾರೆ. ಅದರಲ್ಲಿ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳ ವಿಚಾರಣೆ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಐಡಿ ವಿಚಾರಣೆಯಿಂದ ನನಗೆ ಅವಮಾನವಾಗಿದ್ದು, ಮಾನಸಿಕವಾಗಿ ನೊಂದಿದ್ದೇನೆ. ಎಂದು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೆ ನನಗೆ ಅವಿವಾಹಿತ ತಂಗಿ ಇರುವುದರಿಂದ ನನ್ನ ಆತ್ಮಹತ್ಯೆ ಸುದ್ದಿಗೆ ಹೆಚ್ಚು ಪ್ರಚಾರ ನೀಡದಂತೆಯೂ ಜೀವಾ ಮರಣಪತ್ರದಲ್ಲಿ ಮನವಿ ಮಾಡಿದ್ದಾರೆ ಎಂದು ಅಧಿಕಾರಿ ಮೂಲಗಳಿಂದ ತಿಳಿದುಬಂದಿತ್ತು.

  • ಉದ್ಯಮಿ ಜೀವಾ ಆತ್ಮಹತ್ಯೆ ಕೇಸ್‌ – ಡೆತ್‌ನೋಟ್‌ FSLಗೆ ಕಳುಹಿಸಲು ಸಿಸಿಬಿ ತಯಾರಿ

    ಉದ್ಯಮಿ ಜೀವಾ ಆತ್ಮಹತ್ಯೆ ಕೇಸ್‌ – ಡೆತ್‌ನೋಟ್‌ FSLಗೆ ಕಳುಹಿಸಲು ಸಿಸಿಬಿ ತಯಾರಿ

    – ಕೋರ್ಟ್‌ ಚಾಟಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು

    ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ (Bhovi Corporation Scam) ತನಿಖೆ ಎದುರಿಸಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ (High Court) ಚಾಟಿ ಬೀಸಿದ ಬೆನ್ನಲ್ಲೇ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಘಟನೆ ಸಂಬಂಧ ಸಾಕ್ಷಿಗಳನ್ನು ಕಲೆಹಾಕಲು ಸಿಸಿಬಿ ವಿಶೇಷ ತನಿಖಾಧಿಕಾರಿಗಳ ತಂಡ ಮುಂದಾಗಿದೆ. ಜೀವಾ ತನಿಖೆ ಕರೆಯಲು ಕಾರಣ ಏನು? ಜೀವಾಗೆ ಸಂಬಂಧಿಸಿದ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಆಗಿದ್ಯಾ? ಎಷ್ಟು ಬಾರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಎದುರಿಸಿದ್ದಾರೆ? ಎಂಬ ಆಯಾಮಗಳಲ್ಲಿ ತನಿಖೆ ನಡೆಸಲು, ಅಲ್ಲದೇ ಜೀವಾ ಅವರು ಬರೆದಿದ್ದ ಡೆತ್‌ನೋಟನ್ನ (Death Note) ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಸಿಸಿಬಿ ಡಿವೈಎಸ್ಪಿ ಕನಕಲಕ್ಷ್ಮಿ ಅವರಿಗೆ ನೋಟಿಸ್‌ ನೀಡಿ ವಿಚಾರಣೆಗೆ ಕರೆಸಲು‌ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

    ಸರ್ಕಾರಕ್ಕೆ ಕೋರ್ಟ್‌ ಚಾಟಿ:
    ಭೋವಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಿಸಿಬಿ ಡಿವೈಎಸ್ಪಿ ಕನಕಲಕ್ಷ್ಮಿ (DySP Kanaka Lakshmi) ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್‌ನೋಟ್ (Death Note) ಬರೆದಿಟ್ಟು ವಕೀಲೆ, ಉದ್ಯಮಿ ಜೀವಾ ಆತ್ಮಹತ್ಯೆ (Jeeva Suicide Case) ಮಾಡಿಕೊಂಡಿರುವ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾಕೆ ಆರೋಪಿಯನ್ನು ಬಂಧಿಸಿಲ್ಲ ಎಂದು ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿತ್ತು. ಇದನ್ನೂ ಓದಿ: ಭೋವಿ ನಿಗಮದಿಂದ 34 ಕೋಟಿ ಹಣ ಅಕ್ರಮ ವರ್ಗಾವಣೆ – ಯಾರ‍್ಯಾರಿಗೆ ಎಷ್ಟು ಹಣ?

    ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ವಹಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿತು. ಮೃತರು 13 ಪುಟಗಳ ಡೆತ್‌ನೋಟ್ ಬರೆದಿದ್ದಾರೆ. ಇಲ್ಲಿಯವರೆಗೆ ಆರೋಪಿಯನ್ನು ವಿಚಾರಣೆ ಮಾಡಿಲ್ಲ, ಅರೆಸ್ಟ್ ಮಾಡಿಲ್ಲ. ಡಿವೈಎಸ್‌ಪಿ ಎಂಬ ಕಾರಣಕ್ಕೆ ವಿಚಾರಣೆ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿ ಕ್ಲಾಸ್ ತೆಗೆದುಕೊಂಡಿತ್ತು. ಇದನ್ನೂ ಓದಿ: ಭೋವಿ ನಿಗಮ ಹಗರಣ: ಡಿವೈಎಸ್ಪಿ ಹೆಸರು ಬರೆದಿಟ್ಟರೂ ಬಂಧನ ಮಾಡಿಲ್ಲ ಯಾಕೆ – ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

    ರಾಜ್ಯ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದೇ ಇದ್ದರೆ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುತ್ತೇನೆ ಎಂದು ಹೇಳಿ ಗರಂ ಆಗಿದೆ. ಇದಕ್ಕೆ ಎಲ್ಲಾ ಪ್ರಕರಣದಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡುವುದಿಲ್ಲ. ಈ ಪ್ರಕರಣವನ್ನು ಸಿಸಿಬಿಗೆ ನೀಡಲಾಗಿದೆ ಎಂದು ಸರ್ಕಾರದ ಪರ ವಕೀಲ ಜಗದೀಶ್ ಉತ್ತರಿಸಿದರು. ಡಿವೈಎಸ್‌ಪಿ ಕನಕಲಕ್ಷ್ಮಿ ಪರ ವಾದ ಮಂಡಿಸಿದ ವಕೀಲರು, ನಮ್ಮ ಕಕ್ಷಿದಾರರು ಯಾವುದೇ ಕಿರುಕುಳ ನೀಡಿಲ್ಲ. ತನಿಖೆ ನಡೆದು ಸತ್ಯಾಸತ್ಯತೆ ಬರಲಿ. ಕನಕಲಕ್ಷ್ಮಿ ಲಾಟರಿ ಹಗರಣದಲ್ಲಿದ್ದರು ಎಂದು ಇವರು ಆರೋಪ ಮಾಡುವುದು ಸರಿಯಲ್ಲ ಎಂದು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಆದೇಶವನ್ನು ನವೆಂಬರ್ 29ಕ್ಕೆ ಕಾಯ್ದಿರಿಸಿದೆ.

    ಏನಿದು ಪ್ರಕರಣ?
    ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್‌ಪ್ರೆಸಸ್‌ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್‌ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿದೆ. ಇದನ್ನೂ ಓದಿ: ಲಿವ್ ಇನ್ ಗೆಳತಿಯ ಮೇಲೆ ರೇಪ್; 40-50 ತುಂಡುಗಳಾಗಿ ಕತ್ತರಿಸಿ ಬಿಸಾಡಿದ ಕಿರಾತಕ

  • ಭೋವಿ ನಿಗಮ ಹಗರಣ: ಡಿವೈಎಸ್ಪಿ ಹೆಸರು ಬರೆದಿಟ್ಟರೂ ಬಂಧನ ಮಾಡಿಲ್ಲ ಯಾಕೆ – ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

    ಭೋವಿ ನಿಗಮ ಹಗರಣ: ಡಿವೈಎಸ್ಪಿ ಹೆಸರು ಬರೆದಿಟ್ಟರೂ ಬಂಧನ ಮಾಡಿಲ್ಲ ಯಾಕೆ – ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

    ಬೆಂಗಳೂರು: ಭೋವಿ ನಿಗಮದ ಅಕ್ರಮ ಪ್ರಕರಣದಲ್ಲಿ (Bhovi Nigama Scam) ಸಿಸಿಬಿ ಡಿವೈಎಸ್ಪಿ ಕನಕಲಕ್ಷ್ಮಿ (DySP Kanaka Lakshmi) ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್‌ನೋಟ್ (Death Note) ಬರೆದಿಟ್ಟು ವಕೀಲೆ, ಉದ್ಯಮಿ ಜೀವಾ ಆತ್ಮಹತ್ಯೆ (Jeeva Suicide Case) ಮಾಡಿಕೊಂಡಿರುವ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾಕೆ ಆರೋಪಿಯನ್ನು ಬಂಧಿಸಿಲ್ಲ ಎಂದು ಸರ್ಕಾರಕ್ಕೆ ಹೈಕೋರ್ಟ್ (High Court) ಚಾಟಿ ಬೀಸಿದೆ.

    ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ವಹಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿತು.

    ಮೃತರು 13 ಪುಟಗಳ ಡೆತ್‌ನೋಟ್ ಬರೆದಿದ್ದಾರೆ. ಇಲ್ಲಿಯವರೆಗೆ ಆರೋಪಿಯನ್ನು ವಿಚಾರಣೆ ಮಾಡಿಲ್ಲ, ಅರೆಸ್ಟ್ ಮಾಡಿಲ್ಲ. ಡಿವೈಎಸ್‌ಪಿ ಎಂಬ ಕಾರಣಕ್ಕೆ ವಿಚಾರಣೆ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿ ಕ್ಲಾಸ್ ತೆಗೆದುಕೊಂಡಿದೆ. ಇದನ್ನೂ ಓದಿ: ದಿಢೀರ್‌ ದೆಹಲಿಗೆ ಸಿಎಂ – ಸಿದ್ದರಾಮಯ್ಯ ಸಂಪುಟಕ್ಕೆ ಶೀಘ್ರವೇ ಸರ್ಜರಿ?

    ರಾಜ್ಯಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದೇ ಇದ್ದರೆ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುತ್ತೇನೆ ಎಂದು ಹೇಳಿ ಗರಂ ಆಗಿದೆ. ಇದಕ್ಕೆ ಎಲ್ಲಾ ಪ್ರಕರಣದಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡುವುದಿಲ್ಲ. ಈ ಪ್ರಕರಣವನ್ನು ಸಿಸಿಬಿಗೆ ನೀಡಲಾಗಿದೆ ಎಂದು ಸರ್ಕಾರದ ಪರ ವಕೀಲ ಜಗದೀಶ್ ಉತ್ತರಿಸಿದರು.

    ಡಿವೈಎಸ್‌ಪಿ ಕನಕಲಕ್ಷ್ಮಿ ಪರ ವಾದ ಮಂಡಿಸಿದ ವಕೀಲರು, ನಮ್ಮ ಕಕ್ಷಿದಾರರು ಯಾವುದೇ ಕಿರುಕುಳ ನೀಡಿಲ್ಲ. ತನಿಖೆ ನಡೆದು ಸತ್ಯಾಸತ್ಯತೆ ಬರಲಿ. ಕನಕಲಕ್ಷ್ಮಿ ಲಾಟರಿ ಹಗರಣದಲ್ಲಿದ್ದರು ಎಂದು ಇವರು ಆರೋಪ ಮಾಡುವುದು ಸರಿಯಲ್ಲ ಎಂದು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಆದೇಶವನ್ನು ನವೆಂಬರ್ 29ಕ್ಕೆ ಕಾಯ್ದಿರಿಸಿದೆ.

    ಏನಿದು ಪ್ರಕರಣ?
    ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್‌ಪ್ರೆಸಸ್‌ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್‌ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿದೆ.